ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವಮೋರ್ಚಾ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್(33)ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಆರೊಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.
ಏನಿದು ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ಪರುವಾಜೆ ಕ್ರಾಸ್ ಬಳಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೋಳಿ ಮಾಂಸದಂಗಡಿ ಹೊಂದಿದ್ದ ಪ್ರವಿಣ್ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ನಿಂದ ಪ್ರವೀಣ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಗಟ್ಟಿಯಾಯ್ತು ಡಿಕೆ, ಸಿದ್ದು ಜೋಡಿ- ಪರಸ್ಪರ ಟೋಪಿ ಹಾಕಿಕೊಂಡ ನಾಯಕರು
ಪ್ರವಿಣ್ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಕುತ್ತಿಗೆಯ ಭಾಗಕ್ಕೆ ತೀವ್ರವಾಗಿ ಏಟು ಬಿದ್ದಿದ್ದರಿಂದ ಅವರು ಮೃತಪಟ್ಟಿದ್ದರು. ಈ ಘಟನೆ ನಡೆದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ವಿರುದ್ಧ ತಿರುಗಿ ಬಿದ್ದರು. ಈ ಬೆನ್ನಲ್ಲೇ ಸರ್ಕಾರ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಿತ್ತು. ಸದ್ಯ ಈವರೆಗೆ 7 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಯಾರೂ ಯಾಕೆ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ- ನೋವನ್ನು ಅಕ್ಷರ ರೂಪಕ್ಕಿಳಿಸಿದ ಚಂದನಾ ಹೇಳಿದ್ದೇನು..?
Live Tv
[brid partner=56869869 player=32851 video=960834 autoplay=true]
ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಸಾಕಷ್ಟು ವಿಶೇಷತೆಗಳಿಂದ ಗಮನಸೆಳೆಯುತ್ತಿದೆ. ತಾರಾಗಣ, ಕಂಟೆಂಟು, ಕ್ವಾಲಿಟಿ , ಟೀಸರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾದಿಂದ ಬದುಕಿ ಸುಮ್ಮನೆ ಎಂಬ ಮೆಲೋಡಿ ಹಾಡು ಬಿಡುಗಡೆಯಾಗಿದೆ. ರಾಮೇನಹಳ್ಳಿ ಜಗನ್ನಾಥ್ ಅರ್ಥಪೂರ್ಣ ಪದಪುಂಜಗಳನ್ನು ಪೊಣಿಸಿ ರಚಿಸಿರುವ ಹಾಡಿಗೆ ಜೋ ಕೋಸ್ಟ ಅದ್ಭುತ ಸಂಗೀತ ನೀಡುವುದರ ಜೊತೆಗೆ ಹಾಡಿಗೆ ಧ್ವನಿಯಾಗಿದ್ದಾರೆ.
ಗುಳ್ಟು ಖ್ಯಾತಿಯ ನವೀನ್ ಹಾಗೂ ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಅಮ್ಮನಾಗಿ ನಟಿಸಿದ್ದ ಅರ್ಚನಾ ಜೋಯಿಸ್ ಕೆ. ಜಿ. ಎಫ್ ನಂತರ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪರಿಸ್ಥಿತಿಗಳನ್ನು ಹೊಂದಿಕೊಂಡು ಸಾಗುವ ಬದುಕಿನ ಪಯಣದ ಹೊಂದಿಸಿ ಬರೆಯಿರಿ ಸಿನಿಮಾದಲ್ಲಿ ಏಳು ಯುವಕ-ಯುವತಿಯರ ಒಂದೊಂದು ಕಥೆ, ಪ್ರೀತಿ ತುಂಬಿದೆ. ಈಗಾಗಲೇ ಹೊಂದಿಸಿ ಬರೆಯಿರಿ ಸಿನಿಮಾದ ಶೂಟಿಂಗ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಗುಳ್ಟು’ ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ. ಇದನ್ನೂ ಓದಿ:ಕರೀನಾ ಬರೆದ ಪ್ರೆಗ್ನೆನ್ಸಿ ಬೈಬಲ್ ಪುಸ್ತಕ ಕೇಸು: ಸರ್ಕಾರದ ಮೂಲಕ ದೂರು ದಾಖಲಿಸಿ ಎಂದ ಹೈಕೋರ್ಟ್
ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ದೊಡ್ಡ ತಾರಾಬಳಗವೇ ನಟಿಸಿರುವ ಹೊಂದಿಸಿ ಬರೆಯಿರಿ ಸಿನಿಮಾವನ್ನು “ಸಂಡೇ ಸಿನಿಮಾಸ್ “ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದು, ಚೂರಿಕಟ್ಟೆ ಖ್ಯಾತಿಯ ಪ್ರವೀಣ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಗಜಾನನ ಅಂಡ್ ಗ್ಯಾಂಗ್ ಖ್ಯಾತಿಯ ಶ್ರೀಮಹಾದೇವ್, ಗಾಳಿಪಟ ಚಿತ್ರ ಖ್ಯಾತಿಯ ಭಾವನಾರಾವ್ ಹೀಗೆ ಹಲವು ಪ್ರತಿಭೆಗಳು ಸಿನಿಮಾದಲ್ಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ರಾಯಚೂರು: ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ಸರ್ಕಾರ ಯಾವುದೇ ತಾರತಮ್ಯ ಮಾಡಬಾರದು. ಎಲ್ಲರೂ ಜೀವಿಗಳು, ಪ್ರಾಣ ಕಳೆದುಕೊಂಡವರೆಲ್ಲ ಸಮಾನರು. ಎಲ್ಲರಿಗೂ ಸೂಕ್ತ ರೀತಿಯ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಕೋರುತ್ತೇನೆ ಎಂದು ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದ್ದಾರೆ.
ಮಂತ್ರಾಲಯದಲ್ಲಿ ಮಾತನಾಡಿದ ಶ್ರೀಗಳು ಮಂಗಳೂರಿನಲ್ಲಿ ಹತ್ಯೆಯಾದ ಹಿಂದೂ, ಮುಸ್ಲಿಂ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ನೀಡುವ ವಿಷಯದಲ್ಲಿ ಸರ್ಕಾರದಿಂದ ತಾರತಮ್ಯ ಆರೋಪದ ಬಗ್ಗೆ ಮಾತನಾಡಿ, ಹತ್ಯೆಯಾದ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಂತಿಮ ಪರ್ಯಾಯವಲ್ಲ. ಹಣಕ್ಕೆ ಮತ್ತು ಜೀವಕ್ಕೆ ತುಲನೆ ಮಾಡಲು ಬರುವುದಿಲ್ಲ. ಆದರೆ ಕುಟುಂಬದವರಿಗೆ ತೊಂದರೆಯಾಗಬಾರದು ಎಂದು ಪರಿಹಾರ ನೀಡುತ್ತಾರೆ. ಆಯಾ ರಾಜ್ಯ ಸರ್ಕಾರಗಳು ಪ್ರಾಣ ಕಳೆದುಕೊಂಡ ಎಲ್ಲರಿಗೂ ಪರಿಹಾರ ನೀಡಬೇಕು. ಪರಿಹಾರ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡಬಾರದು ಎಂದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ – ಡಿ.ಕೆ ಶಿವಕುಮಾರ್ಗೆ ಬಿಗ್ ರಿಲೀಫ್
ದೇಶ ನೆಮ್ಮದಿ, ಪ್ರಗತಿ ಹೊಂದಬೇಕು ಎಂದರೆ ಶಾಂತಿ ಸೌಹಾರ್ದತೆಯಿರಬೇಕು. ಯಾವುದೇ ಸಮುದಾಯದವರು ಇತರ ಸಮುದಾಯದ ಮೇಲೆ ಆಕ್ರಮಣ, ಬೆದರಿಕೆ, ದಬ್ಬಾಳಿಕೆ ಮಾಡಬಾರದು. ಯಾವುದೇ ಸಮುದಾಯದವರು ಮಾಡಿದರೂ ಶಾಂತಿಯುತವಾಗಿ ತೀವ್ರವಾಗಿ ವಿರೋಧಿಸುತ್ತೇವೆ. ಭದ್ರತೆ, ಶಾಂತಿ, ನೆಮ್ಮದಿ ದೇಶದ ಉದ್ದೇಶ. ಯಾವುದೇ ಸಮುದಾಯದವರ ಮೇಲೂ ದಬ್ಬಾಳಿಕೆಯಾಗಬಾರದು. ಯಾರ ಮೇಲೂ ದಬ್ಬಾಳಿಕೆಯಾಗದಂತೆ ಸರ್ಕಾರ ಗಮನಿಸಬೇಕು ಎಂದು ಮಂತ್ರಾಲಯ ಶ್ರೀಗಳು ಹೇಳಿದರು. ಇದನ್ನೂ ಓದಿ: ಆ.10 ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಪ್ರವೀಣ್ ಬೆಳ್ಳಾರೆ ಹತ್ಯೆ ಕೇಸ್ನ ಹಂತಕರು ಯಾರು ಅಂತ ಗೊತ್ತಾಗಿದೆ. ಶೀಘ್ರದಲ್ಲಿಯೇ ಅವರ ಬಂಧನ ಆಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಇಬ್ಬರನ್ನು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಲಾಗಿದೆ. ಇವರು ಕೃತ್ಯಕ್ಕೆ ಸಹಾಯ ಮಾಡಿದವರು. ಇದಲ್ಲದೇ ಮತ್ತೆ ಅನೇಕರನ್ನು ವಶಕ್ಕೆ ಪಡೆದು ವಿಚಾರ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಪ್ರಕರಣದಲ್ಲಿ ಅಮಾಯಕರನ್ನು ಬಂಧನ ಮಾಡಿಲ್ಲ. ಕೃತ್ಯಕ್ಕೆ ಸಹಾಯ ಮಾಡಿದವರ ಬಂಧನ ಈಗ ಆಗಿದೆ. ಹತ್ಯೆ ಮಾಡಿರುವುದು ಯಾರು ಅಂತ ಗೊತ್ತಾಗಿದೆ. ಅವರು ಒಂದೇ ಕಡೆ ಇಲ್ಲದೆ ಓಡಾಡುತ್ತಿದ್ದಾರೆ. ಅವರನ್ನು ಶೀಘ್ರವೇ ಬಂಧನ ಮಾಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಶಿವಮೊಗ್ಗ: ಹರ್ಷ ಮತ್ತು ಪ್ರವೀಣ್ ಕೊಲೆಯಾಗಿರುವುದು ಎಲ್ಲರಿಗೂ ನೋವಾಗಿದೆ. ಆದರೆ ನೋವಿಗೆ ರಾಜೀನಾಮೆಯೇ ಪರಿಹಾರವಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ನಾಯಕರು ಬೇಕಾದಷ್ಟು ಜನರು ಬರುತ್ತಾರೆ, ಕಾರ್ಯಕರ್ತರು ಬರುವುದಿಲ್ಲ ಎಂಬ ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಕ್ರವರ್ತಿ ಸೂಲಿಬೆಲೆ ಹೇಳಿರುವುದು ಸರಿ ಇದೆ. ನಾನು ಒಬ್ಬ ಕಾರ್ಯಕರ್ತ. ಹಿಂದೂ ಕಾರ್ಯಕರ್ತರಾದ ಹರ್ಷ ಮತ್ತು ಪ್ರವೀಣ್ ಕೊಲೆಯಾಗಿರುವ ಸಂದರ್ಭದಲ್ಲಿ ಎಲ್ಲರಿಗೂ ನೋವಿದೆ. ರಾಜ್ಯದಲ್ಲಿರುವ ಎಲ್ಲಾ ಕಾರ್ಯಕರ್ತರಿಗೆ ನೋವಿದೆ. ಸಿಟ್ಟಿನಲ್ಲಿ ರಾಜೀನಾಮೆ ನೀಡುವುದೊಂದೇ ಪರಿಹಾರವಲ್ಲ. ನೋವಿಗೆ ರಾಜೀನಾಮೆ ಉತ್ತರವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಬೀದಿಗಿಳಿದ ಹಿಂದೂ ಕಾರ್ಯಕರ್ತರು, ಅನ್ನದಾತರು!
ನೋವನ್ನು ಪಕ್ಷ ಮತ್ತು ಹಿಂದುತ್ವದ ಮೇಲೆ ತೀರಿಸಿಕೊಳ್ಳುವುದು ಪರಿಹಾರವಲ್ಲ. ಮುಂದೆ ನಮ್ಮ ಕಾರ್ಯಕರ್ತರು ಯಾರು ರಾಜೀನಾಮೆ ನೀಡಬಾರದೆಂಬ ಕಾಳಜಿಯಿಂದಾಗಿ ಈ ರೀತಿ ಹೇಳಿಕೆ ನೀಡಿದ್ದೇನೆ. ಆಕ್ರೋಶಕ್ಕೆ ನಮ್ಮ ಬುದ್ಧಿ ನೀಡಿದರೆ, ನಮ್ಮ ಸಂಘಟನೆಗೆ ಪೆಟ್ಟಾಗುತ್ತದೆ. ರಾಜೀನಾಮೆ ನೀಡಿರುವ ನಮ್ಮ ಕಾರ್ಯಕರ್ತರು ಬೇರೆ ಯಾವ ಪಕ್ಷಕ್ಕೂ ಹೋಗುವುದಿಲ್ಲ. ಅಲ್ಲೊಂದು, ಇಲ್ಲೊಂದು ಜಿಲ್ಲೆಯಲ್ಲಿ ಒಟ್ಟು 13 ಜನ ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆಂದು ನಮ್ಮ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಹವಾಮಾನ ಇಲಾಖೆ ನೀಡುವ ಮಳೆಯ ಲೆಕ್ಕವಾದರೂ ತಪ್ಪಬಹುದು ಜೆಡಿಎಸ್ ನಾಯಕರ ಕಣ್ಣೀರಿನ ಮಳೆ ತಪ್ಪದು: ಬಿಜೆಪಿ
ಅವರೆಲ್ಲರ ಮನವೊಲಿಸಿ ರಾಜೀನಾಮೆ ವಾಪಾಸ್ ತೆಗೆದುಕೊಂಡಿದ್ದಾರೆ. ಆಕ್ರೋಶಕ್ಕೆ, ಸಿಟ್ಟಿಗೆ ನಮ್ಮ ಬುದ್ದಿ ನೀಡಿದರೆ, ಸಂಘಟನೆಗೆ ಪೆಟ್ಟಾಗುತ್ತದೆ ಎಂದು ನಾನು ಹೇಳಿಕೆ ನೀಡಿದ್ದೇನೆ. ಯಾವುದೇ ಕಾರ್ಯಕರ್ತನಿಗೆ ನೋವಾಗುವಂತೆ ನಾನು ಹೇಳಿಕೆ ನೀಡಿಲ್ಲ. ಈ ರೀತಿ ರಾಜೀನಾಮೆ ನೀಡಿದರೆ, ಬೇರೆಯವರಿಗೆ ನಿಮ್ಮ ಸ್ಥಾನ ನೀಡಬೇಕಾಗುತ್ತದೆ ಎಂಬ ನಿಟ್ಟಿನಲ್ಲಿ ನಮ್ಮ ರಾಜ್ಯಾಧ್ಯಕ್ಷರ ಅನುಮತಿ ಪಡೆದೇ ಮಾತನಾಡಿದ್ದೇನೆ. ನಾನೊಬ್ಬ ಹಿರಿಯನಾಗಿ ಹೇಳಿದ್ದ ಮಾತಿಗೆ ನೋವಾಗಿದೆ. ಚಕ್ರವರ್ತಿ ಸೂಲಿಬೆಲೆ ಮಾಡುತ್ತಿರುವುದು ಕೂಡ ಹಿಂದುತ್ವದ ಕೆಲಸ, ನಾನು ಕೂಡ ಹಿಂದುತ್ವಕ್ಕೆ ಕೆಲಸ ಮಾಡುತ್ತಿದ್ದೇನೆ. ಯಾರು ರಾಜೀನಾಮೆ ನೀಡಬಾರದೆಂಬ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದೇನೆ ಅಷ್ಟೆ. ಚಕ್ರವರ್ತಿ ಸೂಲಿಬೆಲೆ ಇದರಲ್ಲಿ ತಲೆ ಹಾಕಿಲ್ಲ. ಯುವಕರು ದಾರಿ ತಪ್ಪಬಾರದೆಂಬ ಉದ್ದೇಶದಿಂದ ಅವರು ಈ ರೀತಿ ಹೇಳಿದ್ದಾರೆ ಅಂತ ವಿವರಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸೋಮವಾರ ಬಂಧನವಾಗಿರುವ ಇಬ್ಬರು ಆರೋಪಿಗಳು ಹಲವು ವರ್ಷಗಳಿಂದ ಬೆಂಗಳೂರಿನ ಬೇಕರಿಯಲ್ಲಿಯೇ ಕೆಲಸ ಮಾಡಿಕೊಂಡಿದ್ದರು ಎಂಬುದು ತಿಳಿದುಬಂದಿದೆ.
ಮಾನ್ಯತಾ ಟೆಕ್ಪಾರ್ಕ್ ಬಳಿಯ ಬೇಕರಿಯಲ್ಲಿ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಅಲ್ತಾಫ್ ಹಾಗೂ ಇರ್ಫಾನ್ ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ನಡೆಸಿ, ತಲೆಮರೆಸಿಕೊಳ್ಳಲು ವಾಪಸ್ ಬೆಂಗಳೂರಿಗೆ ಬಂದಿದ್ದರು. ಬಳಿಕ ಏನೂ ಗೊತ್ತಿಲ್ಲದವರಂತೆ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ
ಮೂಲತಃ ಸುಳ್ಯ ಮೂಲದ ಅಲ್ತಾಫ್ ಹಾಗೂ ಇರ್ಪಾನ್ ಸಾಕಷ್ಟು ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಪ್ರವೀಣ್ ಹತ್ಯೆ ದಿನ ಆರೋಪಿಗಳು ಬೆಳ್ಳಾರೆಯಲ್ಲಿಯೇ ಇದ್ದು, ಬಳಿಕ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದರು. ಬೆಳ್ಳಾರೆಯಲ್ಲಿ ಬಂಧನವಾಗಿದ್ದ ಆರೋಪಿಗಳಾದ ಶಫೀಕ್ ಹಾಗೂ ಝಾಕೀರ್ ಮಾಹಿತಿ ಮೇರೆಗೆ ಇವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸರಣಿ ಹತ್ಯೆ ಪ್ರಕರಣ- ದಕ್ಷಿಣ ಕನ್ನಡಕ್ಕೆ DGP ಪ್ರವೀಣ್ ಸೂದ್ ಭೇಟಿ
Live Tv
[brid partner=56869869 player=32851 video=960834 autoplay=true]
ರಾಜೀವ್ ಚಂದ್ರಕಾಂತ್ ಈ ಹಿಂದೆ ನಾಗಾಭರಣ ಅವರಲ್ಲಿ ಕೆಲಸ ಕಲಿತುಕೊಂಡು, ನಂತರ 75ಕ್ಕೂ ಹೆಚ್ಚು ಚಿತ್ರಗಳಿಗೆ ಪೋಸ್ಟರ್ ಡಿಸೈನ್ ಮಾಡಿದ ಅನುಭವ ಇದೆ. ಇದರಿಂದಲೇ ಸಿನಿಮಾಕ್ಕೆ ರಚನೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಎಲ್ಲರೂ ನಾಯಕನಿಗೆ ಕಥೆ ಬರೆದರೆ, ಇವರು ಖಳನಾಯಕನ ಮೇಲೆ ಕಥೆಯನ್ನು ಬರೆದಿರುವುದು ವಿಶೇಷ. ’ಸಲಗ’ದಲ್ಲಿ ಸೂರಿಯಣ್ಣ ಪಾತ್ರ ನಿರ್ವಹಿಸಿ ಗುರುತಿಸಿಕೊಂಡಿದ್ದ ದಿನೇಶ್ಕುಮಾರ್.ಡಿ ಖತರ್ನಾಕ್ ಖಳನಾಯಕನಾಗಿ ಹುಲಿಯಾ ಹೆಸರಿನಲ್ಲಿ ಕಾಣಿಸಿಕೊಳ್ಳುವ ಜತೆಗೆ ಡಿಜೆ ಪ್ರಕಾಶ್ ಸಿನಿ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.
ಒಂದು ವಿಶೇಷ ಸನ್ನಿವೇಶದಲ್ಲಿ ಬರುವ ’ಸಂಜೇಲಿ ಹೊಯ್ದಾವೋ ಮಂಜಿನ ಚಿತ್ತಾರ, ಗಾಟಿಯ ಏರಿಳಿದು ಹೋಯ್ತಾವೋ ನೇಸಾರ’ ಸಾಲಿನ ಗೀತೆಗೆ ನಟಿ, ಪದ್ಮಶ್ರೀ ಬಿ.ಜಯಶ್ರೀ ಹಾಡುವ ಗೀತೆಯನ್ನು ನಾದಬ್ರಹ್ಮ ಹಂಸಲೇಖಾ ಸ್ಟುಡಿಯೋದಲ್ಲಿ ಧ್ವನಿಮುದ್ರಣ ಕಾರ್ಯ ನಡೆಸಲಾಯಿತು. ಸಂಗೀತ ಕೆ.ಎಂ.ಇಂದ್ರ ಅವರದಾಗಿದೆ. ರಾಮಾಪುರ ಎಂಬ ಊರು, ಮಜ್ಜೇನಹಳ್ಳಿ ಎನ್ನುವ ಪಟ್ಟಣದಲ್ಲಿ 1990ರಂದು ನಡೆಯುವ ಕಾಲ್ಪನಿಕ ಘಟನೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಎಂಟು ಗಡ್ಡಧಾರಿಗಳ ಸುತ್ತ ಸಾಗುವ ಪಯಣದಲ್ಲಿ ಏರುಪೇರು ಉಂಟಾಗುತ್ತದೆ. ಅದು ಏನೆಂಬುದನ್ನು ಕುತೂಹಲದ ಮೂಲಕ ತೋರಿಸಲಾಗುವುದು. ಇದನ್ನೂ ಓದಿ:ಕಿಚ್ಚ ಸುದೀಪ್- ರಕ್ಷಿತ್ ಶೆಟ್ಟಿ ನಡುವೆ ಏನಿದು ಕೋಲ್ಡ್ ವಾರ್!
ತಾರಗಣದಲ್ಲಿ ಪ್ರವೀಣ್, ನಮ್ರತಾ, ಗಣೇಶ್ರಾವ್, ಅವಿನಾಶ್, ರಮೇಶ್ಭಟ್, ಬೆನಕನಂಜಪ್ಪ, ಪ್ರಶಾಂತ್ಸಿದ್ದಿ,ನಂಜುಂಡ ಮುಂತಾದವರು ನಟಿಸಿದ್ದಾರೆ. ಛಾಯಾಗ್ರಹಣ ವೀರೇಶ್, ಸಾಹಸ ಪಳನಿ-ಜಾಗ್ವಾರ್ಸಣ್ಣಪ್ಪ ಅವರದಾಗಿದೆ. ಕೆ.ಜಿ.ಎಫ್, ಕೋಲಾರ ಕಡೆಗಳಲ್ಲಿ 45 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣ ನಡೆದಿದೆ.
Live Tv
[brid partner=56869869 player=32851 video=960834 autoplay=true]
ಹಾವೇರಿ: ಕರಾವಳಿ ಭಾಗದಲ್ಲಿ ನಡೆದ ಘಟನೆ ಬಹಳ ನೋವು ತಂದಿದೆ. ಇಂತಹ ಕೃತ್ಯ ಮಾಡಿದವರಿಗೆ ಶಿಕ್ಷೆ ಆಗಿರುವುದು ಇವತ್ತಿನವರೆಗೂ ಗೊತ್ತಾಗಿಲ್ಲ. ಶಿಕ್ಷೆ ಆದರೆ ಮಾತ್ರ ಇಂತಹ ಘಟನೆಗಳು ಕಡಿಮೆ ಆಗುತ್ತವೆ. ಅದಕ್ಕೆ ನಮ್ಮಲ್ಲಿ ಆ ರಿಪೋರ್ಟ್, ಈ ರಿಪೋರ್ಟ್ ಎಂಬ 20 ಕಾನೂನುಗಳು ಇವೆ. 10-15 ವರ್ಷ ಆಗುವುದರಲ್ಲಿ ಜನರು ಅದನ್ನು ಮರೆತು ಬಿಡುತ್ತಾರೆ. ನಾನು ಸಹ ಇಸ್ರೇಲ್ಗೆ ಹೋಗಿದ್ದೆ. ಅಲ್ಲಿ ಬೆಳಗ್ಗೆ ಇಂತಹ ಘಟನೆಯಾದರೆ ಸಂಜೆ ಗಲ್ಲಿಗೆ ಹಾಕುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿಕೆ ನೀಡಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ಇಂತಹ ಘಟನೆಗಳು ಆಗಬಾರದು. ಇಂತಹ ಸಮಯದಲ್ಲಿ ಇಂಟೆಲಿಜೆನ್ಸಿಯವರು ಪೊಲೀಸರಿಗಿಂತ ಹೆಚ್ಚಿನ ಕೆಲಸ ಮಾಡಿ ಸರ್ಕಾರಕ್ಕೆ ಮಾಹಿತಿ ಕೊಡಬೇಕು. ಇವೆಲ್ಲಾ ನಡೆಯಬಾರದಾದರೂ ನಡಿಯುತ್ತಿವೆ. ಯಾವುದೇ ಜಾತಿ ಇರಲಿ, ಏನೇ ಇರಲಿ. ತಪ್ಪಿತಸ್ಥರ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಹೊರಟ್ಟಿ ಹೇಳಿದರು.
ನಮ್ಮಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯಬಾರದು. ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು. ಶಿಕ್ಷೆ ಆಗಿದ್ದನ್ನು ಜನರಿಗೆ ಗೊತ್ತು ಮಾಡಿಕೊಡಬೇಕು. ಹಾಗಾದರೆ ಮಾತ್ರ ಇದನ್ನು ತಡೆಯಬಹುದು. ಇಲ್ಲದಿದ್ದರೆ ಇಂತಹ ಘಟನೆಗಳು ಮತ್ತಷ್ಟು ಆಗುತ್ತವೆ. ಇಂತಹ ಸಮಯದಲ್ಲಿ ಎಲ್ಲಾ ಪಕ್ಷಗಳು ಒಂದಾಗಿ ಶಾಂತಿ ಕಾಪಾಡಬೇಕು. ನಾ ಹಾಗೆ ಮಾಡಿದೆ, ನೀ ಹೀಗೆ ಮಾಡಿದೆ ಎಂದು ಒಬ್ಬರನ್ನೊಬ್ಬರು ಎತ್ತಿ ಕಟ್ಟುವ ಪರಿಸ್ಥಿತಿ ಆಗಬಾರದು. ವಿರೋಧ ಪಕ್ಷ ಬರೀ ಟೀಕೆ ಮಾಡುತ್ತಾ ಕುಳಿತರೆ ಸರಿಯಲ್ಲ. ಸಿಎಂ ಎಲ್ಲಾ ರಾಜಕೀಯ ಪಕ್ಷಗಳ ಸಭೆ ಕರೆದು ಮುಂದೆ ಇಂತಹ ಘಟನೆಗಳು ಆಗದಂತೆ ಕ್ರಮ ಕೈಗೊಳ್ಳಬೇಕು ಎಂದರು. ಇದನ್ನೂ ಓದಿ: ಹಿಂದೂಗಳ ನರಮೇಧಕ್ಕೆ ಕಾರಣವೇ ಸಿದ್ದರಾಮಯ್ಯ – ಬಿಜೆಪಿ ಕಾರ್ಯಕರ್ತ ಚಂದ್ರಹಾಸ್
ನಾನು ಯೋಗಿಯಂತೆ ಮತ್ತೊಬ್ಬರನ್ನು ನೋಡಿಲ್ಲ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ಕೊಡಬೇಕು. ಅದನ್ನು ಮಾಧ್ಯಮದವರ ಮೂಲಕ ಜನರಿಗೆ ಗೊತ್ತು ಮಾಡಬೇಕು. ಹಾಗಾದಾಗ ಇಂತಹ ಘಟನೆಗಳು ನಡೆಯುವುದಿಲ್ಲ. ಯಾವುದೇ ಪಕ್ಷ, ಸಂಘದಲ್ಲಿದ್ದವರನ್ನು ಕೊಲೆ ಮಾಡುವುದು ಸರಿಯಲ್ಲ. ಬಹಳ ನೋವಿನ ಸಂಗತಿಯಿದು. ಕೋಳಿ, ಕುರಿಯಂತೆ ಮನುಷ್ಯನ ಜೀವನ ಹೋಗುತ್ತಿದೆ. ಸರ್ಕಾರ ಗಟ್ಟಿಯಾದ ನಿರ್ಧಾರ ತೆಗೆದುಕೊಂಡು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹೈದರಾಬಾದ್ನಲ್ಲಿ ನಮ್ಮ ಸಜ್ಜನ ಶೂಟೌಟ್ ಮಾಡಲಿಲ್ಲವೇನು? ಇಂತಹ ಸಮಯದಲ್ಲಿ ಪೊಲೀಸರು ಸಣ್ಣ ತಪ್ಪು ಮಾಡಿದರೆ, ಇಂತಹ ಘಟನೆಗಳು ಆಗುವುದು ನಿಂತರೆ ನಾನೇನು ಅದನ್ನು ತಪ್ಪು ಎನ್ನುವುದಿಲ್ಲ ಎಂದು ಬಸವರಾಜ್ ಹೊರಟ್ಟಿ ಹೇಳಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ರಾಜಕೀಯಕ್ಕಾಗಿ ಕೊಲೆ ನಡೆದಿವೆ: ಮಾಧುಸ್ವಾಮಿ
Live Tv
[brid partner=56869869 player=32851 video=960834 autoplay=true]
ಮಂಗಳೂರು: ಹಿಂದೂಗಳ ನರಮೇಧಕ್ಕೆ ಮುಖ್ಯ ಕಾರಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರಿಗೆ ಪ್ರವೀಣ್ ಹೆಸರು ಎತ್ತುವ ಯೋಗ್ಯತೆ ಇಲ್ಲ ಎಂದು ಬಿಜೆಪಿ ಕಾರ್ಯಕರ್ತ ಚಂದ್ರಹಾಸ್ ಆಕ್ರೋಶ ವ್ಯಕ್ತಪಡಿಸಿದರು.
ಸುಳ್ಳಿಗೆ ಇನ್ನೊಂದು ಹೆಸರೇ ಸಿದ್ದರಾಮಯ್ಯ. ಇಷ್ಟೆಲ್ಲಾ ಹಿಂದೂಗಳ ನರಮೇಧಕ್ಕೆ ಅವರೇ ಕಾರಣ. ನಾವು ಅವರ ಪ್ರಾಯಕ್ಕೆ ಗೌರವ ಕೊಡುತ್ತೇವೆ ಹೊರತು ಅವರ ಚಿಂತನೆಗೆ ಅಲ್ಲ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ಜೊತೆಗಿದ್ದರು ನಿಜ. ಅವರು ಚಾಲಕ ವೃತ್ತಿ ಮಾಡುತ್ತಿದ್ದುದೂ ನಿಜ. ಆದರೆ ಅಪರೂಪಕ್ಕೊಮ್ಮೆ ಕಟೀಲ್ ಅವರ ಚಾಲಕರಾಗಿ ಕೆಲಸ ಮಾಡಿದ್ದರು. ಕಟೀಲ್ ಅವರ ಡ್ರೈವರ್ಗೆ ರಜೆ ಬೇಕಿದ್ದ ಸಂದರ್ಭ ಪ್ರವೀಣ್ ಹೋಗುತ್ತಿದ್ದರು. ಅವರು ಪರ್ಮನೆಂಟ್ ಡ್ರೈವರ್ ಆಗಿರಲಿಲ್ಲ. ಆದರೆ ಸಿದ್ದರಾಮಯ್ಯ ಇದನ್ನೇ ನೆಪವಾಗಿಟ್ಟುಕೊಂಡು ಪ್ರವೀಣ್ ಅವರು ನಳಿನ್ ಕುಮಾರ್ ಅವರ ಚಾಲಕ ಕೆಲಸ ಬಿಟ್ಟು ಬಂದಿದ್ದರು ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ರಾಜಕೀಯಕ್ಕಾಗಿ ಕೊಲೆ ನಡೆದಿವೆ: ಮಾಧುಸ್ವಾಮಿ
ನಾವು ಪಕ್ಷದ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದೇವೆ, ನಾವು ಸಿದ್ದರಾಮಯ್ಯರಂತೆ ಪೇಮೆಂಟ್ ಕಾರ್ಯಕರ್ತರಲ್ಲ. ನಾವು ಬಿಜೆಪಿಯ ಪರ್ಮನೆಂಟ್ ಕಾರ್ಯಕರ್ತರು. ನಮ್ಮ ನಾಯಕರಿಗೆ ಬಿಸಿ ಮುಟ್ಟಿಸುವ ಸಲುವಾಗಿ ರಾಜೀನಾಮೆ ಕೊಟ್ಟಿದ್ದೇವೆಯೇ ಹೊರತು ಬಿಜೆಪಿಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ಹಾಗೂ ಪ್ರವೀಣ್ ಒಟ್ಟಿಗೆ ಇದ್ದವರು. ನನಗೂ ಕೆಲವೊಮ್ಮೆ ಜೀವ ಬೆದರಿಕೆಗಳು ಬಂದಿದ್ದವು. ಆ ಸಂದರ್ಭ ಅವರೇ ನನಗೆ ಧೈರ್ಯ ತುಂಬುತ್ತಿದ್ದರು. ಆದರೆ ಇಂದು ಅವರಿಗೆ ಈ ಗತಿ ಬಂದಿದೆ. ಸರ್ಕಾರದಿಂದ ಹೀಗೆಲ್ಲಾ ಆಯ್ತಲ್ಲಾ ಎಂಬ ನೋವು ಎಲ್ಲಾ ಕಾರ್ಯಕರ್ತರಿಗೂ ಇದೆ. ಈ ಕಾರಣ ರಾಜೀನಾಮೆ ಕೊಟ್ಟಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ: ರೇಣುಕಾಚಾರ್ಯ
ನಮಗೆ ಕಳೆದ 6 ತಿಂಗಳಿನಿಂದಲೂ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನಾವು ಆವಾಗಿಂದಲೇ ನೀಡುತ್ತಿದ್ದೆವು. ಆದರೆ ಅವರು ಸರಿಯಾದ ಕ್ರಮವನ್ನು ತೆಗೆದುಕೊಂಡಿಲ್ಲ. ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೂ ಕರೆ ಮಾಡಿ ಈ ಬಗ್ಗೆ ಹೇಳಲು ಪ್ರಯತ್ನ ಪಟ್ಟಿದ್ದೆವು. ಆದರೆ ಅವರು ನಮ್ಮ ಕರೆಯನ್ನು ಸ್ವೀಕರಿಸುತ್ತಿರಲಿಲ್ಲ ಎಂದರು.
Live Tv
[brid partner=56869869 player=32851 video=960834 autoplay=true]
ದಾವಣಗೆರೆ: ಮಂಗಳೂರಿನಲ್ಲಿ ನಡೆದಂತಹ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆಗಳಾಗಿವೆ. ಇದನ್ನು ಕೂಡಲೇ ಹತೋಟಿಗೆ ತೆಗೆದುಕೊಳ್ಳಬೇಕು ಎಂದು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಒತ್ತಾಯಿಸಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೋಸ್ಕರ ಕೊಲೆ ಮಾಡುತ್ತಿರುವುದು ತಪ್ಪು, ಅದು ದುರ್ದೈವ. ಮಂಗಳೂರಿನಲ್ಲಿ ನಡೆದಂತ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆಗಳಾಗಿವೆ. ಅದನ್ನು ಕೂಡಲೇ ಹತೋಟಿಗೆ ತೆಗೆದುಕೊಳ್ಳಬೇಕು. ಇದನ್ನು ಉಲ್ಬಣ ಆಗಲು ಬಿಡಬಾರದು ಎಂದರು.
ಮಂಗಳೂರಿನಲ್ಲಿ ನಡೆದ ಘಟನೆ ಸರ್ಕಾರ ಸಹಿಸುವುದಿಲ್ಲ. ಪರಿಸ್ಥಿತಿ ತಿಳಿ ಮಾಡಲಿಲ್ಲ ಅಂದರೆ ತಪಾತ್ರೆಯ ಕಟ್ಟಿಟ್ಟ ಬುತ್ತಿ, ಹತ್ಯೆ ಮಾಡುವ ಹಂತಕ್ಕೆ ಯಾರು ಹೋಗಬಾರದು. ಆದರೆ ಪ್ರವೀಣ್ ಹತ್ಯೆ ಮಾಡಿದವರು, ಅವರ ಅಂಗಡಿಯಲ್ಲೇ ಕೆಲಸ ಮಾಡುವವರೆಂದು ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಿಎಫ್ಐ ಸಂಘಟನೆ ನಿಷೇಧ: ಮಂಗಳೂರಿನಲ್ಲಿ ನಡೆದ ಹತ್ಯೆ ಬಗ್ಗೆ ಪಿಎಫ್ಐ ಕೈವಾಡ ಇದೆ ಎನ್ನುವುದರ ಬಗ್ಗೆ ಆಧಾರ ಇಲ್ಲದೆ ಮಾತನಾಡಲು ಬರುವುದಿಲ್ಲ. ಅವರು ಈ ಹತ್ಯೆಗಳ ಹಿಂದಿದ್ದರೆ ಅನುಭವಿಸುತ್ತಾರೆ. ಪಿಎಫ್ಐ ಅವರ ಬಗ್ಗೆ ಬಿಜೆಪಿ, ಕಾಂಗ್ರೆಸ್ನವರ ಬಳಿ ದಾಕ್ಷಿಣ್ಯ ಇಲ್ಲ. ಪಿಎಫ್ಐ ವಿರುದ್ಧ ತನಿಖೆ ಮಾಡಲು ಆಧಾರ ಸಾಕ್ಷಿಗಳು ಬೇಕಾಗುತ್ತದೆ ಎಂದು ಹೇಳಿದರು.
ಏಕಾಏಕಿ ಮತ್ತೊಬ್ಬರ ಕಡೆ ಬೊಟ್ಟು ಮಾಡಿ ತೋರಿಸಲು ಬರುವುದಿಲ್ಲ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಒಂದು ಹಂತಕ್ಕೆ ತಂದೇ ತರುತ್ತೇವೆ. ಯಾರು ಹುಡುಗಾಟ ಆಡಲು ಬರುವುದಿಲ್ಲ, ಮಂಗಳೂರಲ್ಲಿ ನಡೆದಿರುವ ಹತ್ಯೆಗಳು ನಿರೀಕ್ಷೆ ಮಾಡಿದ್ದಲ್ಲ. ಸರ್ಕಾರದ ವಿರುದ್ಧ ಕಾರ್ಯಕರ್ತರು ಮುನಿಸುಕೊಳ್ಳಬಾರದು. ಇದಕ್ಕೆ ಕಾರಣೀಕರ್ತರನ್ನು ಹುಡುಕಿ ತಾಕೀತು ಮಾಡಿ ಶಿಕ್ಷೆಗೊಳಪಡಿಸುತ್ತೇವೆ ಎಂದು ಮನವಿ ಮಾಡಿದರು.
ಪ್ರವೀಣ್, ಫಾಝಿಲ್ ಹತ್ಯೆ ವಿಚಾರ: ಪ್ರವೀಣ್ ನೆಟ್ಟಾರು ಹಾಗು ಫಾಝಿಲ್ ಹತ್ಯೆಗೆ ಲಿಂಕ್ ಆಗಿರುವುದು ತಪ್ಪು. ಕೆಲವರು ಮಾತನಾಡುತ್ತಿರುವುದು ಕೂಡ ತಪ್ಪು. ವಿರೋಧ ಪಕ್ಷದವರು ಪ್ರವೀಣ್ ಹಾಗೂ ಫಾಝಿಲ್ ಕೊಲೆಗೆ ಲಿಂಕ್ ಮಾಡ್ತಿದ್ದಾರೆ. ಇದು ಸತ್ಯಕ್ಕೆ ದೂರವಾಗಿರುವ ವಿಚಾರ ಎಂದರು. ಇದನ್ನೂ ಓದಿ: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ – ಆರೋಗ್ಯ ಇಲಾಖೆಗೆ ಪತ್ರ ಬರೆದ ಡಿಹೆಚ್ಒ
ಇನ್ನು ಫಾಝಿಲ್ ಹತ್ಯೆಯಾದಾಗ ಸಿಎಂ ಆಗಲಿ ಸಚಿವರಾಗಲಿ ಮನೆಯ ಹತ್ತಿರ ಹೋಗದೆ ಇರಲು ಕಾರಣ ಇದೆ. ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ ಬಳಿಕ ಸಿಎಂ ಬೊಮ್ಮಾಯಿ ಅವರು ಫಾಝಿಲ್ ಕೊಲೆಯಾದಾಗ ಅವರು ಏರ್ ಕ್ರಾಪ್ಟ್ನಲ್ಲಿದ್ದರು. ಅಲ್ಲಿಂದ ಅವರು ಬೆಂಗಳೂರು ಕಡೆಗೆ ತಮ್ಮ ಪ್ರಯಾಣ ಬೆಳೆಸಿದ್ದರು. ಆದ್ದರಿಂದ ಅವರು ಫಾಝಿಲ್ ಮನೆಗೆ ಹೋಗಲು ಆಗಲಿಲ್ಲ ಎಂದು ಸಮರ್ಥಿಕೊಂಡರು.
ಉತ್ತರ ಪ್ರದೇಶ ಮಾದರಿ ಅಳವಡಿಸಲು ಚಿಂತನೆ ಇಲ್ಲ: ರಾಜ್ಯದಲ್ಲಿ ಯುಪಿ ಮಾದರಿ ತರಲು ಮಾಧ್ಯಮದವರು ಒತ್ತಾಯಿಸಿದ್ದಕ್ಕಾಗಿ ಸಿಎಂ ಬೊಮ್ಮಾಯಿರವರು ಯುಪಿನೇ ಬೇರೆ, ಕರ್ನಾಟಕ ರಾಜ್ಯನೇ ಬೇರೆ. ಅಲ್ಲಿನ ಸಮಸ್ಯೆಗೂ ಇಲ್ಲಿ ಸಮಸ್ಯೆಗೂ ವ್ಯತ್ಯಾಸ ಇದೆ ಎಂದು ಈಗಾಗಲೇ ತಿಳಿಸಿದ್ದಾರೆ. ಆದರೆ ಮಾಧ್ಯಮದವರು ಕೆಲ ದಿನಗಳ ಹಿಂದೆ ಒತ್ತಿ ಒತ್ತಿ ಕೇಳಿದಕ್ಕಾಗಿ ಸಿಎಂ ಬೊಮ್ಮಾಯಿರವರು ಕರ್ನಾಟಕದಲ್ಲೂ ಯುಪಿ ಮಾದರಿ ಆಗಬಹುದು ಎಂದಿದ್ದರು, ಆದರೆ ಅದು ಸತ್ಯಕ್ಕೆ ದೂರವಾದ ವಿಚಾರ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ: ರೇಣುಕಾಚಾರ್ಯ
ಯಡಿಯೂರಪ್ಪನವರೇ ನಮ್ಮ ಲೀಡರ್: ಯಡಿಯೂರಪ್ಪನವರೇ ನಮ್ಮ ಲೀಡರ್. ಅದರಲ್ಲಿ ಎರಡು ಮಾತಿಲ್ಲ, ಅವರನ್ನು ಮೂಲೆ ಗುಂಪು ಮಾಡಬೇಕೆಂಬುದು ಇಡೀ ಬಿಜೆಪಿಯಲ್ಲಿ ಯಾರೊಬ್ಬರ ತಲೆಯಲ್ಲಿಲ್ಲ, ಒಂದು ಪಕ್ಷ ಅಂದರೆ ಕಾರ್ಯಕರ್ತರು ಸಂಘಟನೆ ಮಾಡಿಕೊಂಡು ಪ್ರವಾಸ ಮಾಡಬೇಕಾಗುತ್ತದೆ. ಯಡಿಯೂರಪ್ಪನವರು ಒಬ್ಬರೇ ಮಾಡಲು ಆಗುತ್ತಾ ಆಗಲ್ಲ, ಇನ್ನು ಬೇರೆ ಬೇರೆ ಘಟನೆ ಜರುಗಿದ್ದರಿಂದ ವಿಜಯೋತ್ಸವವನ್ನು ರದ್ದು ಮಾಡಿದ್ದೇವೆ. ಆದರೆ ಯಡಿಯೂರಪ್ಪನವರನ್ನು ಸಂಘಟನೆ ಮಾಡುವ ವಿಚಾರದಲ್ಲಿ ಯಾರು ತಡಿಯಲ್ಲ, ಯಾರು ತಡಿಯಲು ಆಗುವುದಿಲ್ಲ ಎಂದು ತಿಳಿಸಿದರು.
ರನ್ನಿಂಗ್ ರೇಸ್ನಲ್ಲಿ ಗೆಲಲ್ಲುತ್ತೇವೆ ಎಂದು ಓಡ್ತಾರೆ, ಓಡ್ಲಿ ಬಿಡಿ ಜನ ಅಲ್ವಾ ತೀರ್ಮಾನ ಮಾಡೋದು ಎಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ವ್ಯಂಗ್ಯ ಮಾಡಿದರು. ಇನ್ನು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಮಾಡಿದ್ರೇ ರಾಜ್ಯದಲ್ಲಿ ಗೆದ್ದು ಬಿಡ್ತಾರ ಎಂದು ಪ್ರಶ್ನಿಸಿದರು.
Live Tv
[brid partner=56869869 player=32851 video=960834 autoplay=true]