Tag: ಪ್ರವೀಣ್

  • ಪ್ರವೀಣ್ ಹತ್ಯೆ ಪ್ರಕರಣ – ತನಿಖೆಗೆ 6 ತಂಡ ರಚನೆ, 15 ಜನ ವಶಕ್ಕೆ: ಎಡಿಜಿಪಿ

    ಪ್ರವೀಣ್ ಹತ್ಯೆ ಪ್ರಕರಣ – ತನಿಖೆಗೆ 6 ತಂಡ ರಚನೆ, 15 ಜನ ವಶಕ್ಕೆ: ಎಡಿಜಿಪಿ

    ಮಂಗಳೂರು: ಮಂಗಳವಾರ ರಾತ್ರಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದು, ಈ ಹಿನ್ನೆಲೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

    ಪ್ರವೀಣ್ ಹತ್ಯೆ ಹಿನ್ನೆಲೆ ಸುಳ್ಯದ ಬೆಳ್ಳಾರೆಯಲ್ಲಿ ಮಾಹಿತಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಯುತ್ತಿದೆ. ಮಂಗಳೂರು ಕಮಿಷನರ್ ಉಡುಪಿ ಪೊಲೀಸರ ಸಹಾಯ ಪಡೆದು 6 ತಂಡಗಳನ್ನು ರಚನೆ ಮಾಡಿದ್ದೇವೆ. ಈಗಾಗಲೇ 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

    ಘಟನೆಯ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರು ನಿನ್ನೆಯಿಂದ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಮತ್ತು ಇಂದು ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಪತಿಯ ಕಾರ್ಯ ಮುಗಿಯುವುದರೊಳಗೆ ಆರೋಪಿಗಳಿಗೆ ಶಿಕ್ಷೆ ಆಗ್ಬೇಕು: ಪ್ರವೀಣ್ ಪತ್ನಿ ನೂತನಾ

    ಇಂದು ಪ್ರವೀಣ್ ಅಂತಿಮ ದರ್ಶನಕ್ಕೆ ಸಂಸದರು ಹಾಗೂ ಸಚಿವರು ಸ್ಥಳಕ್ಕೆ ಬಂದಿದ್ದಾಗ ಜನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನ ಮಾಡಿದ್ದಾರೆ. ನಾವು ಪರಿಸ್ಥಿತಿಯನ್ನು ಹತೋಟಿಗೆ ತರಲು ಲಘು ಲಾಠಿ ಪ್ರಹಾರ ಮಾಡಬೇಕಾಯಿತು. ಇದೀಗ ಜಿಲ್ಲಾಧಿಕಾರಿಗಳು ಸೆಕ್ಷನ್ 144 ಜಾರಿ ಮಾಡಿದ್ದು, ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಮಾಹಿತಿ ನೀಡಿದರು.

     

    ಘಟನೆಯ ಆರೋಪಿಗಳ ಪತ್ತೆಗೆ ಪೊಲೀಸ್ ಅಧಿಕಾರಿಗಳಿಗೆ ಜನರು ಅವಕಾಶ ಮಾಡಿ ಕೊಡಬೇಕು. ಹತ್ಯೆಗೆ 2-3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿವೆ. ವಶಕ್ಕೆ ಪಡೆದವರಲ್ಲಿ ಕೊಲೆಗಡುಕರು ಇದ್ದಾರೆಯೇ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆಯೇ ಹತ್ಯೆಗೆ ಕಾರಣವನ್ನು ತಿಳಿಸಬಹುದು. ಘಟನಾ ಪ್ರದೇಶದಲ್ಲಿ ಜರ‍್ಯಾರೂ ಗುಂಪು ಕಟ್ಟಿ ಓಡಾಡಬಾರದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹತ್ಯೆಯ ದಿನವೇ ಮುಸ್ಲಿಂ ಸ್ನೇಹಿತನ ಗೃಹಪ್ರವೇಶಕ್ಕೆ ಹೋಗಿದ್ದ ಪ್ರವೀಣ್ ನೆಟ್ಟಾರ್!

    Live Tv
    [brid partner=56869869 player=32851 video=960834 autoplay=true]

  • ಪತಿಯ ಕಾರ್ಯ ಮುಗಿಯುವುದರೊಳಗೆ ಆರೋಪಿಗಳಿಗೆ ಶಿಕ್ಷೆ ಆಗ್ಬೇಕು: ಪ್ರವೀಣ್ ಪತ್ನಿ ನೂತನಾ

    ಪತಿಯ ಕಾರ್ಯ ಮುಗಿಯುವುದರೊಳಗೆ ಆರೋಪಿಗಳಿಗೆ ಶಿಕ್ಷೆ ಆಗ್ಬೇಕು: ಪ್ರವೀಣ್ ಪತ್ನಿ ನೂತನಾ

    ಮಂಗಳೂರು: ನನ್ನ ಪತಿಯ ಕಾರ್ಯ ಮುಗಿಯುವ ಮುಂಚೆಯೇ ಹತ್ಯೆ ಮಾಡಿದ ಆರೋಪಿಗಳಿಗೆ ಶಿಕ್ಷೆ ಆಗಬೇಕು ಎಂದು ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಒತ್ತಾಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪತಿ ತುಂಬಾ ಒಳ್ಳೆಯವರು. ಸಣ್ಣಪುಟ್ಟ ಕೋಪ ತಾಪಗಳಿತ್ತು. ಆದರೆ ಅವರಿಗೆ ಯಾರ ಮೇಲೂ ದ್ವೇಷವಿರಲಿಲ್ಲ. ಆದರೂ ಅವರನ್ನು ಹತ್ಯೆ ಮಾಡಲಾಗಿದೆ. ಅವರಿಗೆ ಆದ ರೀತಿ ಮತ್ಯಾರಿಗೂ ಆಗಬಾರದು. ಅದಕ್ಕೆ ಬೇಕಾದ ಶಿಕ್ಷೆಯನ್ನು ಕಾನೂನಿನ ಮೂಲಕ ಆಗಬೇಕು. ನನ್ನ ಪತಿಯ ಕಾರ್ಯ ಮುಗಿಯುವುದರೊಳಗೆ ಘಟನೆಗೆ ಸಂಬಂಧಿಸಿ ಕಾನೂನಿನಲ್ಲಿ ಯಾವ ಶಿಕ್ಷೆ ಇದೆಯೋ ಅದು ಆಗಬೇಕು ಎಂದರು.

    ನನ್ನ ಗಂಡ ಯಾರಿಗೂ ಕೇಡು ಬಯಸುವವರಲ್ಲ. ಎಲ್ಲಾ ವರ್ಗದ ಜನರ ಸಮಸ್ಯೆಗೆ ಸ್ಪಂದಿಸುತ್ತಿದ್ದರು. ಯಾರಾದರೂ ಸಮಸ್ಯೆಯಿದೆ ಎಂದರೆ ರಾತ್ರಿಯಾದರೂ ಹೋಗುತ್ತಿದ್ದರು. ನನ್ನ ಗಂಡ ಕೊಲೆ ಮಾಡುವಷ್ಟು ಯಾವ ತಪ್ಪು ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಪಂಚಭೂತಗಳಲ್ಲಿ ಲೀನ

    ನನ್ನ ಮದುವೆಗೂ ಮುಂಚೆಯೂ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಪಕ್ಷದಲ್ಲಿಯೂ ಅವರು ಅನ್ಯೋನ್ಯತೆಯಿಂದ ಇದ್ದರು. ಕೊಲೆ ಮಾಡುವಷ್ಟು ಪಕ್ಷದಲ್ಲಿ ಯಾರೊಂದಿಗೂ ಜಗಳ ಮಾಡಿಕೊಂಡಿಲ್ಲ. ಮೊನ್ನೆ ನಡೆದ ಮುಸ್ಲಿಂ ಹತ್ಯೆಗೂ ಇವರಿಗೂ ಯಾವುದೇ ಸಂಬಂಧವಿಲ್ಲ. ಅವರು ಪರಿಚಯನೂ ಇಲ್ಲ. ಅವರಿಗೆ ಇವರಿಗೆ ಯಾವುದೇ ಒಡನಾಟವೂ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ರೆ ರಾಜೀನಾಮೆ: ರೇಣುಕಾಚಾರ್ಯ

    Live Tv
    [brid partner=56869869 player=32851 video=960834 autoplay=true]

  • ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಷಡ್ಯಂತ್ರ – ತನಿಖೆ ನಡೆಸಿ ಉಗ್ರ ಶಿಕ್ಷೆಯಾಗಬೇಕು: ಶೋಭಾ ಕರಂದ್ಲಾಜೆ

    ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಷಡ್ಯಂತ್ರ – ತನಿಖೆ ನಡೆಸಿ ಉಗ್ರ ಶಿಕ್ಷೆಯಾಗಬೇಕು: ಶೋಭಾ ಕರಂದ್ಲಾಜೆ

    – ಪೂರ್ವ ನಿಯೋಜಿತ ಕೃತ್ಯ
    – ಪ್ರವೀಣ್ ಕೊಲೆ ಹಿಂದೆ ಭಾರಿ ಷಡ್ಯಂತ್ರ

    ನವದೆಹಲಿ: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿಂದೂ ಮತ್ತು ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಉದ್ದೇಶವಾಗಿದೆ. ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ. ಈ ಬಗ್ಗೆ ತನಿಖೆ ಆಗಬೇಕು, ಉಗ್ರ ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

    ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರದ ಪ್ರಮಾಣಿಕ ಕಾರ್ಯಕರ್ತ. ಕೋಳಿ ಅಂಗಡಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದ ಪ್ರವೀಣ್‍ನನ್ನು ಕೊಲೆ ಮಾಡಿದ್ದಾರೆ. ಮಸೂದ್ ಹತ್ಯೆಗೆ ಹೊಂದಾಣಿಕೆ ಮಾಡುತ್ತಿದ್ದಾರೆ. ಮಸೂದ್, ಪ್ರವೀಣ್‍ಗೆ ಗೊತ್ತಿರಲಿಲ್ಲ. ಮಸೂದ್ ಹತ್ಯೆ ಮಾಡಿದವರು ವೈಯಕ್ತಿಕ ಜಗಳ ಮಾಡಿಕೊಂಡಿದ್ದರು. ಪಾನಮತ್ತರಾಗಿದ್ದರು. ಹಾಗಾಗಿ ಹತ್ಯೆ ನಡೆದಿತ್ತು. ಆದರೆ ಪ್ರವೀಣ್ ಪ್ರಕರಣ ಭಿನ್ನವಾಗಿದೆ. ಬೈಕ್ ಮೇಲೆ ಬಂದು ಅವರ ಮೇಲೆ ದಾಳಿ ಮಾಡಿದ್ದಾರೆ. ತಲವಾರ್‌ನಿಂದ ಕುತ್ತಿಗೆ ಮತ್ತು ತಲೆಗೆ ಹೊಡೆಯಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮೋದಿ, ಯೋಗಿ ಮಾದರಿಯಲ್ಲಿ ಇವರಿಗೆ ಗಟ್ಸ್ ಇಲ್ಲ: ಪ್ರವೀಣ್ ಹತ್ಯೆಗೆ ಮುತಾಲಿಕ್ ಕಿಡಿ

    ಕೊಲೆ ನಡೆದ ಪ್ರದೇಶ ಕೇರಳ ಗಡಿ ಭಾಗ. ಗ್ರಾಮೀಣ ಪ್ರದೇಶ ಆಗಿರುವುದರಿಂದ ಸಿಸಿಟಿವಿ ಇರಲ್ಲ. ಅದಾಗ್ಯೂ ಇದರ ಹಿಂದೆ ಇರುವ ಎಲ್ಲರನ್ನು ಬಂಧಿಸಬೇಕು. ಸ್ಥಳೀಯರ ಕುಮ್ಮಕ್ಕು ಇರುವ ಸಾಧ್ಯತೆಗಳಿದೆ. ಯಾವ ಸಂಘಟನೆ ಕೆಲಸ ಮಾಡಿದೆ ಎಂಬುದನ್ನು ಪತ್ತೆ ಹಚ್ಚಬೇಕು. ಇಂದು ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ. ಎನ್‍ಐಎ ತನಿಖೆ ವಹಿಸಲು ಮನವಿ ಮಾಡುತ್ತೇನೆ. ರಾಷ್ಟ್ರೀಯ ಭದ್ರತೆಗೆ ಸವಾಲಾಗಿರುವವರನ್ನು ಪತ್ತೆ ಹಚ್ಚಬೇಕು ಈ ಬಗ್ಗೆ ಕ್ರಮ ವಹಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಊರಿನ ಯಾರ ಮನೆಯಲ್ಲಿ ಸಮಸ್ಯೆ ಇದ್ರೂ ಸ್ಪಂದಿಸ್ತಿದ್ದ: ಪ್ರವೀಣ್ ಮಾವ ಕಣ್ಣೀರು

    ಬೇರೆ ಯಾವುದೇ ಪ್ರಶ್ನೆಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ನಾವು ಅಪರಾಧಿಗಳನ್ನು ಪತ್ತೆ ಹಚ್ಚಬೇಕು. ಅಮಾಯಕರನ್ನು ಹತ್ಯೆ ಮಾಡಲಾಗಿದೆ. ಸಂಘಟನೆಯ ಹುಡುಗ, ಕಳೆದ ಬಾರಿ ಸುಳ್ಯಕ್ಕೆ ಭೇಟಿ ನೀಡಿದಾದ ಭೇಟಿಯಾಗಿದ್ದ. ಕಳೆದ ರಕ್ಷ ಬಂಧನದ ವೇಳೆ ಭೇಟಿ ಮಾಡಿದ್ದ. ವೈಯಕ್ತಿಕವಾಗಿ ತುಂಬಾ ಗೊತ್ತಿರುವ ವ್ಯಕ್ತಿ. ವಿವಾದಗಳಲ್ಲಿ ಸಿಲುಕಿಕೊಳ್ಳದೆ ಇದ್ದಾತ. ಯಾವುದೇ ಗಲಭೆಗಳಲ್ಲಿ ಭಾಗಿಯಾಗುತ್ತಿರಲ್ಲ. ಚುನಾವಣೆ ಸಂದರ್ಭದಲ್ಲಿ ಪಕ್ಷ ಕೊಟ್ಟ ಕೆಲಸ ಮಾಡುತ್ತಿದ್ದ ಎಂದು ಪ್ರವೀಣ್ ಕುರಿತಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರದ ಮತ್ತೊಂದು ಹಾಡು ರಿಲೀಸ್

    ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರದ ಮತ್ತೊಂದು ಹಾಡು ರಿಲೀಸ್

    ನಿರ್ದೇಶಕ ಶಶಾಂಕ್ ನಿರ್ದೇನದಲ್ಲಿ ಮೂಡಿಬಂದಿದ್ದ “ಮೊಗ್ಗಿನ ಮನಸ್ಸು” ಚಿತ್ರ‌ ಬಿಡುಗಡೆಯಾಗಿ ಹದಿನಾಲ್ಕು ವರ್ಷಗಳಾಗಿದೆ. ಈ ಸುಂದರ ನೆನಪಿನೊಂದಿಗೆ ಪ್ರಸ್ತುತ ಅವರು ನಿರ್ದೇಶಿಸಿರುವ  “ಲವ್ 360” ಚಿತ್ರದ “ಭೋರ್ಗರೆದು” ಎಂಬ ಹಾಡು ಬಿಡುಗಡೆಯಾಗಿದೆ. ಶಶಾಂಕ್ ಅವರೆ ಬರೆದಿರುವ ಈ ಹಾಡನ್ನು ಕೀರ್ತನ್ ಹೊಳ್ಳ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

    ನಾನು “ಲವ್ 360” ಸಿನಿಮಾದ ಈ  ಹಾಡನ್ನು ಇಂದು ಬಿಡುಗಡೆ ಮಾಡಲು ಪ್ರಮುಖ ಕಾರಣವಿದೆ. ಅದೇನೆಂದರೆ, ನನ್ನ ನಿರ್ದೇಶನದ “ಮೊಗ್ಗಿನ ಮನಸ್ಸು” ಚಿತ್ರ ತೆರೆಕಂಡು ಇಂದಿಗೆ(ಜಲೈ 18)ಹದಿನಾಲ್ಕು ವರ್ಷಗಳಾಗಿದೆ. ಹಾಗಾಗಿ ಇಂದು ಆ ಚಿತ್ರದ ನೆನಪುಗಳೊಂದಿಗೆ “ಲವ್ 360” ಚಿತ್ರದ ಮೂರನೇ ಹಾಡನ್ನು ಬಿಡುಗಡೆ ಮಾಡಿದ್ದೇವೆ. “ಮೊಗ್ಗಿನ ಮನಸ್ಸು” ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದ ಗಂಗಾಧರ್ ಅವರಿಂದ  ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಆ ಚಿತ್ರದ ನಿರ್ಮಾಪಕ ಇ.ಕೃಷ್ಣಪ್ಪ ಅವರನ್ನು ಆಹ್ವಾನಿಸಿದ್ದೆ. ಕಾರ್ಯದೊತ್ತಡದಿಂದ ಅವರಿಗೆ ಬರಲಾಗಲಿಲ್ಲ . ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್, ಶುಭಾ ಪುಂಜಾ ಮುಂತಾದವರು ಅಭಿನಯಿಸಿದ್ದ ಸಿನಿಮಾವದು. ಚಿತ್ರ ಹಾಗೂ ಹಾಡುಗಳು ಈಗಲೂ ಜನಪ್ರಿಯ. ಮುಂದೊಂದು ದಿನ “ಮೊಗ್ಗಿನ ಮನಸ್ಸು ಭಾಗ 2”  ಮಾಡುವ ಆಸೆಯಿದೆ. ಆ ಚಿತ್ರವನ್ನೂ ಹೊಸ ಕಲಾವಿದರೊಂದಿಗೆ ಮಾಡುತ್ತೇನೆ. ಇನ್ನು ಇಂದು ಬಿಡುಗಡೆಯಾಗಿರುವ “ಲವ್ 360”   ಚಿತ್ರದ “ಭೋರ್ಗರೆದು” ಹಾಡನ್ನು ನಾನೇ ಬರೆದಿದ್ದೇನೆ. ಕೀರ್ತನ್ ಹೊಳ್ಳ ಹಾಡಿದ್ದಾರೆ. ಇನ್ನೊಂದು ಹಾಡಿದೆ. ಅದನ್ನು ಸದ್ಯದಲ್ಲೇ ಬಿಡುಗಡೆ ಮಾಡುತ್ತೇವೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇವೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಜನಪ್ರಿಯವಾಗಿದೆ. ಅದರಲ್ಲೂ ಸಿದ್ ಶ್ರೀರಾಮ್ ಹಾಡಿರುವ “ಜಗವೇ ನೀನು ಗೆಳತಿಯೆ” ಹಾಡಂತೂ ನಾವು ಅಂದುಕೊಂಡದಕ್ಕಿಂತ ದೊಡ್ಡ ಯಶಸ್ಸು ಕಂಡಿದೆ. ರೀಲ್ಸ್ ನಲ್ಲೂ ಈ ಹಾಡಿಗೆ ಹೆಜ್ಜೆ ಹಾಕುತ್ತಿರುವವರು ಹೆಚ್ಚಾಗಿದ್ದಾರೆ ಎಂದು ನಿರ್ದೇಶಕ ಶಶಾಂಕ್ ಮಾಹಿತಿ ನೀಡಿದರು.

    ನಮ್ಮ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದೇನೆ.  “ಜಗವೇ ನೀನು” ಹಾಡಿನಿಂದ ಈಗಾಗಲೇ ಜನ ನನ್ನನ್ನು ಹೋದ ಕಡೆ ಎಲ್ಲಾ ಗುರುತಿಸುತ್ತಿದ್ದಾರೆ. ಚಿತ್ರದ ಗೆಲುವಿನ ಖುಷಿಯನ್ನು ಈ ಹಾಡು ನನಗೆ ಈಗಾಗಲೇ ನೀಡಿದೆ. ಇಂತಹ ಅದ್ಭುತ ಹಾಡು ಕೊಟ್ಟಿರುವ ನಿರ್ದೇಶಕರಿಗೆ ಹಾಗೂ ಮೆಚ್ಚಿಕೊಂಡಿರುವ ಕಲಾರಸಿಕರಿಗೆ ಧನ್ಯವಾದ. ಇಂದು ಬಿಡುಗಡೆಯಾಗಿರುವ ಹಾಡು ಕೂಡ ಜನರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು ನಾಯಕ ಪ್ರವೀಣ್. ಇದನ್ನೂ ಓದಿ:ಕೆ.ಎಲ್ ರಾಹುಲ್ -ಅಥಿಯಾ ಶೆಟ್ಟಿ ಮದುವೆ ಡೇಟ್ ಫೈನಲ್

    ಬಿಡುಗಡೆಯಾಗಿರುವ ಎರಡು ಹಾಡುಗಳು ಗೆದ್ದಿದೆ. ಹಿರಿಯರು, ಕಿರಿಯರು ಎಲ್ಲಾ ವಯಸ್ಸಿನವರಿಗೂ “ಜಗವೇ ನೀನು ಗೆಳತಿಯೆ” ಹಾಡು ಇಷ್ಟವಾಗಿದೆ. ಚಿತ್ರ ಕೂಡ ಎಲ್ಲರ ಮನ ಗೆಲ್ಲುತ್ತದೆ ಎಂದರು ನಾಯಕಿ ರಚನಾ ಇಂದರ್.

    Live Tv
    [brid partner=56869869 player=32851 video=960834 autoplay=true]

  • ಶಶಾಂಕ್ ನಿರ್ದೇಶನದ ಚಿತ್ರಕ್ಕೆ ಡಾಕ್ಟರ್ ಹೀರೋ

    ಶಶಾಂಕ್ ನಿರ್ದೇಶನದ ಚಿತ್ರಕ್ಕೆ ಡಾಕ್ಟರ್ ಹೀರೋ

    “ಮೊಗ್ಗಿನ ಮನಸ್ಸು”, ” ಕೃಷ್ಣನ್ ಲವ್ ಸ್ಟೋರಿ ” ಯಂತಹ ಅದ್ಭುತ ಲವ್ ಸ್ಟೋರಿ ಚಿತ್ರಗಳ ನಿರ್ದೇಶಕ ಶಶಾಂಕ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ “ಲವ್ 360”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಾಕಷ್ಟು ಮೆಚ್ಚುಗೆ ದೊರಕಿದೆ. ಈ ಸಂತಸ ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

    ಬಹಳ ದಿನಗಳ ನಂತರ ನಿಮ್ಮನೆಲ್ಲಾ ನೋಡುತ್ತಿರುವುದು ಖುಷಿಯಾಗಿದೆ. ಮೂರುವರ್ಷಗಳ ನಂತರ “ತಾಯಿಗೆ ತಕ್ಕ ಮಗ” ಚಿತ್ರದ ನಂತರ ನಾನು ನಿರ್ದೇಶಿಸಿರುವ ಚಿತ್ರವಿದು. ಲಾಕ್ ಡೌನ್ ಸಮಯದಲ್ಲಿ ಸಿದ್ದವಾದ ಕಥೆಯಿದು. ನಾನು ಉಪೇಂದ್ರ ಅವರ ಚಿತ್ರ ನಿರ್ದೇಶಿಸಬೇಕಿತ್ತು.‌ ಅದು ದೊಡ್ಡಮಟ್ಟದ ಚಿತ್ರ. ಚಿತ್ರೀಕರಣಕ್ಕೆ ಕೊರೋನ ನಿಯಮಾವಳಿಗಳು ಸಹಕಾರಿಯಾಗುವಂತೆ ಕಾಣಲಿಲ್ಲ. ಹಾಗಾಗಿ ಆ ಚಿತ್ರ ಮುಂದೂಡಿ, ಈ ಚಿತ್ರ ಆರಂಭ ಮಾಡಿದೆ. ಅದರಲ್ಲೂ ಹೊಸಬರೊಂದಿಗೆ ನಾನು ಕೆಲಸ ಮಾಡಿ ಸುಮಾರು ವರ್ಷಗಳೇ ಆಗಿತ್ತು. ಈ ಚಿತ್ರದ ಮೂಲಕ ಪ್ರವೀಣ್ ಎಂಬ ನೂತನ ಪ್ರತಿಭೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ. ಪ್ರವೀಣ್ ಸೇರಿದಂತೆ ಅವರ ಕುಟುಂಬದರೆಲ್ಲಾ ವೈದ್ಯರು. ಹೊಸಪೇಟೆ ಬಳಿಯ ಮಾರಮ್ಮನಹಳ್ಳಿಯಲ್ಲಿ ಇವರ ಆಸ್ಪತ್ರೆ ಇದೆ. ಸಾವಿರಾರು ಜನಕ್ಕೆ ಉಚಿತ ಚಿಕಿತ್ಸೆ ನೀಡಿ‌ ಪ್ರವೀಣ್ ತಂದೆ ಆ ಊರಿನ ಸುತ್ತ ಹೆಸರುವಾಸಿಯಾಗಿದ್ದರು. ಎಂ.ಬಿ.ಬಿ.ಎಸ್ ಓದಿರುವ ಪ್ರವೀಣ್  ಗೆ ನಟನೆಯಲ್ಲಿ ಆಸಕ್ತಿ. ಈ ಕುರಿತು ಅವರ ತಾಯಿ ನನ್ನ ಬಳಿ ಹೇಳಿದರು. ನಿರ್ಮಾಣವನ್ನೂ ಮಾಡುವುದಾಗಿ ಹೇಳಿದ್ದರು. ಆದರೆ ಅವರ ಬಳಿ ಈ ಚಿತ್ರಕ್ಕೆ ಬೇಕಾದಷ್ಟು ಹಣವಿಲ್ಲದ ಕಾರಣ,  ನಮ್ಮ ಶಶಾಂಕ್ ಸಿನಿಮಾಸ್ ಸಂಸ್ಥೆ

    ಸಹ ನಿರ್ಮಾಣಕ್ಕೆ ಕೈ ಜೋಡಿಸಿತ್ತು. ಪ್ರವೀಣ್ ಗೆ ನಟನೆಗೆ ಬೇಕಾದ ಎಲ್ಲಾ ತಯಾರಿ ನೀಡಿ, ಚಿತ್ರ ಆರಂಭಿಸಲಾಯಿತು. ರಚನಾ ಇಂದರ್ ಈ ಚಿತ್ರದ ನಾಯಕಿ. ಗೋಪಾಲ್ ದೇಶಪಾಂಡೆ, ಡ್ಯಾನಿ ಕುಟ್ಟಪ್ಪ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಭಿಷೇಕ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸಿದ್ ಶ್ರೀರಾಮ್ ಹಾಗೂ ಸಂಚಿತ್ ಹೆಗಡೆ ಹಾಡಿರುವ ಹಾಡುಗಳು ಕೇಳುಗರ ಮನ ಗೆದ್ದಿದೆ‌. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದ್ದು, ಸೆನ್ಸಾರ್ ಮಂಡಳಿ ವೀಕ್ಷಿಸಿದ ನಂತರ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ನಿರ್ದೇಶಕ ಶಶಾಂಕ್ ತಿಳಿಸಿದರು. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50

    ನಾನು ಎಂ.ಬಿ.ಬಿ.ಎಸ್ ವಿದ್ಯಾರ್ಥಿಯಾಗಿದಾಗಿನಿಂದಲೂ ನಟನೆಯಲ್ಲಿ ಆಸಕ್ತಿ. ತಿಂಗಳಲ್ಲಿ ಮೂರು ದಿನ ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ಗೆ ಬಂದು ಅಭಿನಯ ಕಲಿಯುತ್ತಿದೆ. ಅಪ್ಪನಿಗೆ ವಿಷಯ ತಿಳಿದು ಬಯ್ಯುತ್ತಿದ್ದರು. ಈಗ ಅಪ್ಪ ಇಲ್ಲ. ಅಮ್ಮನ ಮುಂದೆ ನನ್ನ ಆಸೆ ಹೇಳಿಕೊಂಡೆ. ಅಮ್ಮ ನನ್ನ‌ ಆಸೆಗೆ ಆಸರೆಯಾದರು. ಆನಂತರ ಶಶಾಂಕ್ ಸರ್ ಪರಿಚಯವಾಯಿತು. ಶಶಾಂಕ್ ಅವರು ಸಾಕಷ್ಟು ವರ್ಕ್ ಶಾಪ್ ನಡೆಸಿ ನನಗೆ ಅಭಿನಯ ಕಲಿಸಿದರು. ಸಾಕಷ್ಟು ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಬಂದಿದ್ದೀನಿ. ಈ ಚಿತ್ರದಲ್ಲಿ ಬೋಟ್ ಮ್ಯಕಾನಿಕ್ ಪಾತ್ರ ಮಾಡಿದ್ದೀನಿ. ಡಾಕ್ಟರ್ ಆಗಬೇಕಿತ್ತು. ಈಗ ಆಕ್ಟರ್ ಆಗಿದ್ದೀನಿ ಅಂದರು ಪ್ರವೀಣ್. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ

    ನಾನು “ಲವ್ ಮಾಕ್ಟೇಲ್” ಚಿತ್ರದಲ್ಲಿ ಅಭಿನಯಿಸಿದ್ದೆ. ಆದರೆ ಪೂರ್ಣಪ್ರಮಾಣದ ನಾಯಕಿಯಾಗಿ ಅಭಿನಯಿಸಿರುವ ಮೊದಲ ಚಿತ್ರವಿದು. ಈ ಚಿತ್ರದ ಆಡಿಷನ್ ಇದಾಗ ಅಮ್ಮ ಜಡೆ ಹಾಕಿ, ಜುಮಕಿ ಹಾಕಿಸಿಕೊಂಡು ಕರೆದುಕೊಂಡು ಹೋಗಿದ್ದರು. ನಾನು ಬೇಡ ಅಂದೆ. ಅಮ್ಮ ಇರಲಿ ಅಂದರು. ಶಶಾಂಕ್ ಅವರಿಗೆ ನಾನು ಹೋಗಿದ್ದ ರೀತಿ ಇಷ್ಟವಾಯಿತಂತೆ. ಆನಂತರ ನಾನು ಸೆಲೆಕ್ಟ್ ಆದೆ. ನಂತರ ನಿರ್ದೇಶಕರು ವರ್ಕ್ ಶಾಪ್ ಮೂಲಕ ಅಭಿನಯ ಹೇಳಿಕೊಟ್ಟರು. ಪಾತ್ರ ತುಂಬಾ ಚೆನ್ನಾಗಿದೆ ಅಂದರು ರಚನಾ ಇಂದರ್.

  • ಊರಲ್ಲಿ ಒಳ್ಳೆಯವ್ರು ಎಷ್ಟೇ ಜನರಿದ್ರೂ, ಕೆಟ್ಟವನು ಮಾತ್ರ ಒಬ್ಬನಿರಬೇಕು-ಗಂಧದಗುಡಿಯ ಮತ್ತೊಂದು ಕಥೆ

    ಊರಲ್ಲಿ ಒಳ್ಳೆಯವ್ರು ಎಷ್ಟೇ ಜನರಿದ್ರೂ, ಕೆಟ್ಟವನು ಮಾತ್ರ ಒಬ್ಬನಿರಬೇಕು-ಗಂಧದಗುಡಿಯ ಮತ್ತೊಂದು ಕಥೆ

    ಬೆಂಗಳೂರು: ಚಂದನವನದಲ್ಲಿ ಮತ್ತೊಮ್ಮೆ ಗಂಧದ ಗುಡಿಯ ಕಥೆಯನ್ನು ತೆಗೆದುಕೊಂಡು ವಿಭಿನ್ನ ಸಿನಿಮಾ ತೆರೆಮೇಲೆ ಅಬ್ಬರಿಸಲು ರೆಡಿಯಾಗುತ್ತಿದೆ. ಈಗಾಗಲೇ ಗಂಧದ ಗುಡಿಯ ಎರಡು ಸಿನಿಮಾಗಳು ಅಚ್ಚಳಿಯದೇ ಉಳಿದುಕೊಂಡಿವೆ. ಅದೇ ರೀತಿಯ ಕಥೆಯನ್ನು ಹೋಲುವ ‘ಚೂರಿ ಕಟ್ಟೆ’ ಚಿತ್ರದ ಟ್ರೇಲರ್, ಹಾಡುಗಳು ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿವೆ.

    ಸಿನಿಮಾದಲ್ಲಿ ಗುಂಡುಗಳ ಸದ್ದು ಸಿಕ್ಕಾಪಟ್ಟೆ ಕೇಳಿಬಂದಿದ್ದು, ಖಡಕ್ ಡೈಲಾಗ್ ಗಳನ್ನು ಹೊಂದಿದೆ. ಊರಲ್ಲಿ ಒಳ್ಳೆಯವ್ರು ಎಷ್ಟೇ ಜನರಿದ್ರೂ, ಕೆಟ್ಟವನು ಮಾತ್ರ ಒಬ್ಬನಿರಬೇಕು ಎಂಬ ಡೈಲಾಗ್ ಚಿತ್ರದ ರೋಚಕತೆಯನ್ನು ಹೇಳುತ್ತದೆ. ಚೌಕಾಬಾರ ಎಂಬ ವಿಭಿನ್ನ ಕಿರುಚಿತ್ರವನ್ನು ನಿರ್ದೇಶನ ಮಾಡಿದ್ದ ನಿರ್ದೇಶಕ ರಘು ಶಿವಮೊಗ್ಗ ‘ಚೂರಿಕಟ್ಟೆ’ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತದ ಬಳಿಯ ಚೂರಿಕಟ್ಟೆ ಎಂಬ ಅರಣ್ಯ ವಲಯದಲ್ಲಿ ಚಿತ್ರೀಕರಣ ನಡೆದಿದೆ. ಚೂರಿಕಟ್ಟೆ ಟಿಂಬರ್ ಮಾಫಿಯಾ (ಬೆಲೆ ಬಾಳುವ ಮರಗಳ ಕಳ್ಳ ಸಾಗಾಣಿಕೆ) ಕಥೆಯನ್ನು ಹೊಂದಿದ್ದು, ನೋಡುಗರನ್ನು ಮಾಫಿಯಾದ ಕಗ್ಗತ್ತಲಿನಲ್ಲಿ ಭಯಬೀಳಸಲಿದೆ. ಅರಣ್ಯ ಪ್ರದೇಶದಲ್ಲಿಯ ಬೆಲೆ ಬಾಳುವ ಮರಗಳನ್ನು ಕಡಿದು ಅಕ್ರಮ ಸಾಗಾಟಕ್ಕೆ ಸಂಬಂಧಿಸಿದ ವಿಭಿನ್ನ, ರೋಚಕ ಕಥೆಯನ್ನು ಟ್ರೇಲರ್ ಹೇಳುತ್ತದೆ.

    ಈಗಾಗಲೇ ಚೂರಿಕಟ್ಟೆ ತನ್ನ ಟೀಸರ್, ಟ್ರೇಲರ್ ಮತ್ತು ಲಿರಿಕಲ್ ವಿಡಿಯೋ ಹಾಡುಗಳಿಂದ ಚಂದನವನದಲ್ಲಿ ಭರವಸೆಯನ್ನು ಮೂಡಿಸಿದೆ. ರಘು ಶಿವಮೊಗ್ಗ ನಿರ್ದೇಶಕರಾದ ಬಿ.ಸುರೇಶ್ ಮತ್ತು ಪ್ರಕಾಶ್ ಬೆಳವಾಡಿ ಅವರ ಗರಡಿಯಲ್ಲಿ ಪಳಗಿದವರು. `ಸಿಂಪಲ್ ಆಗಿ ಇನ್ನೊಂದು ಲವ್ ಸ್ಟೋರಿ’ ಖ್ಯಾತಿಯ ಪ್ರವೀಣ್ ಚೂರಿಕಟ್ಟೆಯ ಕಥಾ ನಾಯಕ. ಪ್ರವೀಣ್‍ಗೆ ನಾಯಕಿಯಾಗಿ ಪ್ರೇರಣಾ ಎಂಬ ಹೊಸ ನಟಿ ಸ್ಯಾಂಡಲ್‍ವುಡ್ ಗೆ ಪಾದಾರ್ಪಣೆ ಮಾಡಿದ್ದಾರೆ.

    ಚೂರಿಕಟ್ಟೆ ಮಾರ್ನಿಂಗ್ ಸ್ಟಾರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು, ಎಸ್ ನಾಯಜ್ ಮತ್ತು ಎಂ.ತುಳಸೀರಾಮುಡು ಬಂಡವಾಳ ಹೂಡಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಬಾಲಾಜಿ ಮನೋಹರ್, ಮಂಜುನಾಥ್ ಹೆಗಡೆ, ಪ್ರಮೋದ್ ಶೆಟ್ಟಿ ಸೇರಿದಂತೆ ದೊಡ್ಡ ತಾರಾಬಳಗವನ್ನು ಸಿನಿಮಾ ಹೊಂದಿದೆ. ವಾಸುಕಿ ವೈಭವ್ ಚೂರಿಕಟ್ಟೆಗೆ ಸಂಗೀತ ನೀಡಿದ್ದು, ಈಗಾಗಲೇ ಹಾಡುಗಳು ಪ್ರೇಕ್ಷಕರ ಸೆಳೆಯುವಲ್ಲಿ ಯಶಸ್ವಿಯಾಗಿವೆ.