Tag: ಪ್ರಶಾಂತ್

  • ಪ್ರಶಾಂತ್ ಬಿಗ್‍ಬಾಸ್‍ನಲ್ಲಿ ಇಲ್ಲದಿದ್ರೆ ಒಗ್ಗರಣೆಯಲ್ಲಿ ಮೆಣಸಿನಕಾಯಿ ಇಲ್ಲದಂತೆ: ಅರವಿಂದ್

    ಪ್ರಶಾಂತ್ ಬಿಗ್‍ಬಾಸ್‍ನಲ್ಲಿ ಇಲ್ಲದಿದ್ರೆ ಒಗ್ಗರಣೆಯಲ್ಲಿ ಮೆಣಸಿನಕಾಯಿ ಇಲ್ಲದಂತೆ: ಅರವಿಂದ್

    ಬಿಗ್‍ಬಾಸ್ ಫಿನಾಲೆಗೆ ಇನ್ನೇನು 2-3 ದಿನವಷ್ಟೇ ಬಾಕಿ ಇದೆ. ಈ ವಾರ ಫಿನಾಲೆ ವೀಕ್ ಆಗಿರುವುದರಿಂದ ಬಿಗ್‍ಬಾಸ್ ಸೀಸನ್-8ರ ಟಾಪ್ 5 ಸ್ಪರ್ಧಿಗಳ ಜರ್ನಿಯನ್ನು ಫೋಟೋ ಫ್ರೇಮ್ ನಿರ್ಮಿಸುವ ಮೂಲಕ ಸವಿ ನೆನಪುಗಳನ್ನು ಮೆಲುಕು ಹಾಕಲಾಗುತ್ತಿದೆ. ಅರವಿಂದ್, ವೈಷ್ಣವಿ, ಮಂಜು ನಂತರ ಇದೀಗ ಪ್ರಶಾಂತ್ ಸಂಬರ್ಗಿ ಫೋಟೋವನ್ನು ಗಾರ್ಡನ್ ಏರಿಯಾದಲ್ಲಿ ವಾಲ್ ಆಫ್ ದಿ ಫ್ರೇಮ್ ಕ್ರಿಯೆಟ್ ಮಾಡಲಾಗಿತ್ತು. ಇದನ್ನು ಕಂಡು ಪ್ರಶಾಂತ್ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ.

    ಈ ಬಗ್ಗೆ ಮಾತನಾಡಿದ ಪ್ರಶಾಂತ್, 115 ದಿನದ ಜರ್ನಿ ಇನ್ನೂ 4 ದಿನದಲ್ಲಿ ಮುಗಿಯುತ್ತದೆ. ಈ ಮನೆಯಲ್ಲಿ ಫ್ರೆಂಡ್ಸ್, ಶತ್ರು ಆದ್ರು ಮತ್ತೆ ಫ್ರೆಂಡ್ಸ್ ಆದ್ರು, ಪ್ರೀತಿ, ಅಣ್ಣ, ತಂಗಿ, ಫ್ರೆಂಡ್ ಎಲ್ಲರೂ ಮನೆಯವರ ರೂಪದಲ್ಲಿ ಸಿಕ್ಕಿದ್ರು. ಮಂಜು ಕಾಮಿಡಿ ಸೆನ್ಸ್ ನನಗೆ ಅರ್ಥ ಆಗಲು ಸಮಯ ಬೇಕಾಯಿತು. ಅವನು ವೈಯಕ್ತಿವಾಗಿ ಯಾವುದೇ ಕೆಟ್ಟವನಲ್ಲ. ಆಟದಲ್ಲಿ ಜಗಳವಾಗುತ್ತಿತ್ತು. ಅದು ಬಿಟ್ಟರೆ ಬೇರೆ ಏನೂ ನಮ್ಮ ಮಧ್ಯೆ ಇಲ್ಲ. ಸದ್ಯ ಈಗ ಮಂಜು ನನಗೆ ಸಹೋದರನಾಗಿದ್ದಾರೆ. ಬಿಗ್‍ಬಾಸ್ ನನ್ನ ಲೈಫ್‍ನಲ್ಲಿ ಒಂದು ಮೈಲಿಗಲ್ಲು. ಬಿಗ್‍ಬಾಸ್ ಜರ್ನಿ ಬಹಳ ಸೂಪರ್, ಧನ್ಯವಾದಗಳು ಬಿಗ್‍ಬಾಸ್ ಎಂದಿದ್ದಾರೆ.

    ಬಳಿಕ ದಿವ್ಯಾ ಉರುಡುಗ, ನನಗೆ ಈ ಮನೆಗೆ ಬಂದ ತಕ್ಷಣ ಪ್ರಶಾಂತ್ ಜೊತೆ ಅಣ್ಣ – ತಂಗಿ ಬಾಂಧವ್ಯ ಬೆಳೆಯಿತು. ಪ್ರಶಾಂತ್ ಅವರಲ್ಲಿ ಒಂದು ರೀತಿಯ ಮಗುವನ್ನು ಕಾಣುತ್ತೇನೆ. ಅವರಲ್ಲಿ ಎರಡು ರೀತಿಯ ವ್ಯಕ್ತಿತ್ವ ಇದೆ. ಒಂದು ತುಂಬಾ ಮಗ್ಧತನ ಮತ್ತೊಂದು ಕ್ರೂರ ಹುಲಿ. ಅವರು ಖುಷಿಯಾಗಿದ್ದಾಗ ಅವರಂತ ಮನುಷ್ಯ ಇನ್ನೊಬ್ಬರಿಲ್ಲ. ಪ್ರಶಾಂತ್ ನನ್ನ ಜೀವನದ ಅಣ್ಣ. ನಿಮ್ಮ ಲೈಫ್‍ನಲ್ಲಿ ಎಲ್ಲಾ ಒಳ್ಳೆಯದಾಗಲಿ, ಯಾವತ್ತಿಗೂ ನಗುತ್ತೀರಿ ಎಂದಿದ್ದಾರೆ.

    ಪ್ರಶಾಂತ್ ರವರ ಬಗ್ಗೆ ತಿಳಿದುಕೊಳ್ಳಲು ನನಗೆ ಖುಷಿಯಾಗಿದೆ. ಟಿವಿಯಲ್ಲಿ ನೋಡುವುದಕ್ಕೂ, ನಿಜವಾಗಿಯೂ ನೋಡಲು ಪ್ರಶಾಂತ್‍ರವರು ತುಂಬಾ ಡಿಫರೆಂಟ್ ಆಗಿದ್ದಾರೆ. ನೀವು ಫಿನಾಲೆ ತನಕ ಬರಲು ನಿಮ್ಮಲ್ಲಿರುವ ಸಾಮಥ್ರ್ಯ ಕಾರಣ. ಒಂದು ಟಾಸ್ಕ್ ವೇಳೆ ನಾನು ಕೈ ಎತ್ತಿದ್ದು, ನನಗೆ ಈಗಲೂ ಬೇಸರವಾಗುತ್ತದೆ. ಇಂದಿಗೂ ನಾನು ಆ ಬಗ್ಗೆ ಪಶ್ಚಾತಾಪ ಪಡುತ್ತೇನೆ, ಕ್ಷಮಿಸಿ. ನೀವು ಅಂದರೆ ನನಗೆ ತುಂಬಾ ಇಷ್ಟ. ನಿಮಗೆ ಒಳ್ಳೆಯದಾಗಲಿ ಎಂದು ವೈಷ್ಣವಿ ಹೇಳಿದ್ದಾರೆ.

    ಬಳಿಕ ಮಂಜು, ಬಿಗ್‍ಬಾಸ್ ಮನೆಯಲ್ಲಿ ನನ್ನ ಹಾಗೂ ಪ್ರಶಾಂತ್‍ರವರದ್ದು ಹಾವು, ಮುಂಗುಸಿ ಸಂಬಂಧ. ಆದರೆ ಬಿಗ್‍ಬಾಸ್ ಮನೆಯಲ್ಲಿ ಪ್ರಶಾಂತ್ ಇಲ್ಲದಿದ್ದರೆ ಈ ಜರ್ನಿ ಬಹಳ ಬೋರಿಂಗ್ ಆಗಿರುತ್ತಿತ್ತು. ಸರಸ, ವಿರಸ ಎಲ್ಲಾ ಇದ್ದರೆನೇ ಮನೆ ಅನಿಸಿಕೊಳ್ಳುವುದು. ಜಗಳ ಆಡಿದರೂ ಅದನ್ನು ತಿದ್ದುಕೊಂಡು ಹೋಗುತ್ತಿದ್ದೇವೆ. ಒಳ್ಳೆಯದಾಗಲಿ ಎಂದಿದ್ದಾರೆ.

    ಇನ್ನೂ ಅರವಿಂದ್, ಪ್ರಶಾಂತ್ ಈ ಜರ್ನಿಯಲ್ಲಿ ಇರಲಿಲ್ಲ ಅಂದರೆ ಒಗ್ಗರಣೆಯಲ್ಲಿ ಮೆಣಸಿನ ಕಾಯಿ ಕಡಿಮೆಯಾದಂತೆ, ಯಾವಗಲೂ ಚಟ-ಪಟ ಅಂತ ಅಂದರೆನೇ ಅದು ಒಗ್ಗರಣೆಯಾಗುತ್ತದೆ. ನಿಮ್ಮಿಂದ ಏನು ಮಾಡಬೇಕು ಏನು ಮಾಡಬಾರದು ಎರಡನ್ನು ಕೂಡ ತಿಳಿದುಕೊಂಡಿದ್ದೇನೆ. ನನಗೆ ಒಳ್ಳೆಯ ಸ್ನೇಹಿತರಾಗಿದ್ದಕ್ಕೆ ಧನ್ಯವಾದ. ಮುಂದೆ ಕೂಡ ನಾವು ಹೀಗೆ ಫ್ರೆಂಡ್ಸ್ ಆಗಿ ಮುಂದುವರಿಯುತ್ತೇವೆ ಅಂದುಕೊಂಡಿದ್ದೇನೆ. ದೇವರು ನಿಮಗೆ ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ:ಕಿಚ್ಚನಿಂದಾಗಿ ವೈಷ್ಣವಿ ಹೆಸರು ಬದಲಾಯಿಸಲು ಪೋಷಕರು ತೀರ್ಮಾನ

  • ದೊಡ್ಮನೆಯಲ್ಲಿ ಸ್ಯಾಂಡ್‍ವಿಚ್ ಆಗಿ ಸಾಕಾಗಿದೆ: ಶಮಂತ್

    ದೊಡ್ಮನೆಯಲ್ಲಿ ಸ್ಯಾಂಡ್‍ವಿಚ್ ಆಗಿ ಸಾಕಾಗಿದೆ: ಶಮಂತ್

    ಬಿಗ್‍ಬಾಸ್ ಮನೆಗೆ ಎಂಟ್ರಿ ಕೊಟ್ಟ ಹಲವಾರು ಪ್ರತಿಭೆಗಳಲ್ಲಿ ಶಮಂತ್ ಕೂಡ ಒಬ್ಬರು. ಫಸ್ಟ್ ಇನ್ನಿಂಗ್ಸ್‍ನಲ್ಲಿ ಅಷ್ಟೇನೂ ಸದ್ದು ಮಾಡದೇ ಇದ್ದರೂ ಸೆಕೆಂಡ್ ಇನ್ನಿಂಗ್ಸ್‍ನಲ್ಲಿ ಅದರ ಎರಡರಷ್ಟು ಆ್ಯಕ್ಟಿವ್ ಆಗಿರುವುದರ ಜೊತೆಗೆ ಮನೆಯಲ್ಲಿ ತಮ್ಮ ಹಾಡಿನ ಮೂಲಕ ಮೈನ್ ಆಫ್ ದಿ ಆಟ್ರ್ಯಾಕ್ಷನ್ ಆಗುತ್ತಿದ್ದಾರೆ.

    ಕಳೆದ ವಾರ ಕಿಚ್ಚ ಸುದೀಪ್, ಪ್ರಶಾಂತ್ ಹಾಗೂ ಚಕ್ರವರ್ತಿ ಮಧ್ಯೆ ಸಿಲುಕಿಕೊಂಡಿರುವ ಶಮಂತ್‍ರವರ ಪರಿಸ್ಥಿತಿ ಯಾವ ರೀತಿ ಇದೆ ಎಂದು ಹಾಡನ್ನು ಬರೆದು ಮುಂದಿನ ವಾರ ಹೇಳಬೇಕೆಂದು ಸೂಚಿಸಿದ್ದರು. ಅದರಂತೆ ಶಮಂತ್ ವಾರದ ಕಥೆ ಕಿಚ್ಚ ಜೊತೆ ಸಂಚಿಕೆಯಲ್ಲಿ ತಾವು ಬರೆದಿರುವ ಹಾಡನ್ನು ಕಿಚ್ಚನ ಎದುರಿಗೆ ಹಾಡಿ ಮಿಂಚಿದ್ದಾರೆ.

    ಅಯ್ಯಯ್ಯೋ ನೋಡು ದೇವ್ರೆ, ಸಿಕ್ಕಾ ಪಟ್ಟೆ ಕಷ್ಟ ಮಾರ್ರೆ, ಇತ್ತ ಮಳ್ಳ, ಅತ್ತ ಸುಳ್ಳ, ಮಧ್ಯ ನಾನು ಕಳ್ಳ ಅಲ್ಲ. ಅಲ್ಲಿ ಮಳ್ಳಿ, ಇಲ್ಲಿ ಕುಳ್ಳಿ, ನಾನು ಈಗ ಎಲ್ಲಿ ಹೋಗ್ಲಿ, ನನ್ನ ಪಾಡಿಗೆ ನಾನು ಕೂತಿದ್ರು ನನ್ನ ಬುಡಕ್ಕೆ ಬರ್ತಾರೆ. ಇನ್ನೇನು ಕಿರಿಕ್ ಸ್ಟಾರ್ಟ್ ನಾನು ಓಡಬೇಕಿದೆ, ಅಲ್ಲಿದ್ದ ತಪ್ಪಿಗೆ ಸಾಕ್ಷಿ ಹೇಳಬೇಕಾಗಿದೆ. ಅಯ್ಯಪ್ಪ ಸ್ಯಾಂಡ್‍ವಿಚ್ ಬಾಳು ನಂದು ಆಗಿ ಹೋಗಿದೆ, ಸಾಕಾಗೋಗಿದೆ.. ಸಾಕಾಗೋಗಿದೆ.. ಎಂದು ಹಾಡು ಹೇಳಿದ್ದಾರೆ.

    ಹಾಡಿನ ನಂತರ ಲಿರಿಕ್‍ನಲ್ಲಿ ಮಳ್ಳ-ಸುಳ್ಳ ಎಂದು ಬಂತು ಅದು ಯಾರು ಎಂದು ಸುದೀಪ್ ಕೇಳಿದಾಗ, ಹಾಗೆ ಸುಮ್ಮನೆ ಬರೆದೆ ಎಂದು ಶಮಂತ್ ಹೇಳುತ್ತಾರೆ. ಆಗ ಸುದೀಪ್ ಹೋಗ್ಲಿ ಬಿಡಿ ಯಾಕೆ, ಆಮೇಲೆ ನಾನು ನಿಮ್ಮನ್ನು ಸ್ಯಾಂಡ್‍ವಿಚ್ ಮಾಡುವುದು ಎಂದು ರೇಗಿಸುತ್ತಾರೆ.

    ಒಟ್ಟಾರೆ ಶಮಂತ್ ಪ್ರತಿಭೆ ಕಂಡು ಮನೆಮಂದಿ ಜೊತೆ ಕಿಚ್ಚ ಕೂಡ ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ವೈಷ್ಣವಿ ಬಗ್ಗೆ ಸುದೀಪ್‍ಗಿದ್ದ ಅಭಿಪ್ರಾಯ ಚೇಂಜ್

  • ಮಂಜುಗೆ ಊಟ ಮಾಡಿಸಲು ವೈಷ್ಣವಿ, ಪ್ರಶಾಂತ್ ಸರ್ಕಸ್

    ಮಂಜುಗೆ ಊಟ ಮಾಡಿಸಲು ವೈಷ್ಣವಿ, ಪ್ರಶಾಂತ್ ಸರ್ಕಸ್

    ಬಿಗ್‍ಬಾಸ್ ಸೆಕೆಂಡ್ ಇನ್ನಿಂಗ್ಸ್‌ನಲ್ಲಿ ಈ ವಾರ ಸೋತ ತಂಡದ ಸದಸ್ಯರಿಗೆ ಬಿಗ್‍ಬಾಸ್ ಡಿಫರೆಂಟ್ ಶಿಕ್ಷೆಯನ್ನು ನೀಡುತ್ತಿದ್ದಾರೆ. ಸದ್ಯ ಏಳು ಬೀಳು ಟಾಸ್ಕ್‌ನಲ್ಲಿ ಸೋತ ವಿಜಯಯಾತ್ರೆ ತಂಡದ ಇಬ್ಬರು ಸದಸ್ಯರು ನಿಂಗೈತೆ ಇರು ತಂಡದ ಎಲ್ಲಾ ಸದಸ್ಯರಿಗೆ ಊಟ ಮಾಡಿಸಬೇಕು ಎಂದು ಬಿಗ್‍ಬಾಸ್ ಸೂಚಿಸಿದ್ದಾರೆ.

    ಅದರಂತೆ ವೈಷ್ಣವಿ ಹಾಗೂ ಪ್ರಶಾಂತ್ ಸಂಬರಗಿ ನಿಂಗೈತೆ ಇರು ತಂಡದ ಎಲ್ಲಾ ಸದಸ್ಯರಿಗೂ ಊಟಮಾಡಿಸಿದ್ದಾರೆ. ಆದರೆ ಈ ಎಲ್ಲಾ ಸದಸ್ಯರಲ್ಲಿ ಮಂಜುಗೆ ಊಟ ಮಾಡಿಸಲು ವೈಷ್ಣವಿ ಹಾಗೂ ಪ್ರಶಾಂತ್ ಸಿಕ್ಕಾಪಟ್ಟೆ ಸರ್ಕಸ್ ಮಾಡಿದ್ದಾರೆ.

    ತಮ್ಮ ಚೇಷ್ಟೆ, ತಮಾಷೆ ಹಾಗೂ ತುಂಟತನದಿಂದಲೇ ಬಿಗ್ ಮನೆಯ ಸ್ಪರ್ಧಿಗಳಿಗೆ ಮನರಂಜನೆ ನೀಡುವ ಮಂಜುಗೆ, ವೈಷ್ಣವಿ ಊಟ ಮಾಡಿಸುವ ವೇಳೆ ನನಗೆ ಇನ್ನು ಸ್ವಲ್ಪ ಉಪ್ಪು ಬೇಕಿತ್ತು ಎಂದು ಸತಾಯಿಸುತ್ತಾರೆ. ಆಗ ವೈಷ್ಣವಿ ಕೊಡುವುದಿಲ್ಲ ಎಂದು ಸ್ವಲ್ಪ, ಸ್ವಲ್ಪವೇ ಅನ್ನ ತಿನ್ನಿಸುತ್ತಾರೆ. ಆಗ ಮಂಜು ಬೆಳಗ್ಗೆ ತನಕ ನಿಧಾನವಾಗಿ ತಿನ್ನಿಸುತ್ತಾ ಎಂದು ಅಣುಕಿಸಿದ್ದಾರೆ. ನಂತರ ಮತ್ತೊಂದು ತುತ್ತು ಊಟ ತಿನ್ನಿಸಲು ಬಂದ ವೈಷ್ಣವಿಗೆ ಇರು ಇನ್ನೂ ಅಗೀತಾ ಇದ್ದೀನಿ, ಗ್ರೈಂಡ್ ಆಗಬೇಕು ಎಂದು ಕಾಯಿಸುತ್ತಾರೆ. ನನ್ನ ಜಾತಕದಲ್ಲಿತ್ತು ನೀನು ಒಂದು ದೊಡ್ಡ ಟಾಲ್ ಹೀರೋಯಿನ್ ಕೈನಲ್ಲಿ ಊಟ ಮಾಡಿಸಿಕೊಳ್ಳುತ್ತೀಯಾ ಎಂದು ಹೇಳಿದ್ದರು. ಮೊನ್ನೆ ಒಬ್ಬರಿಗೆ ಬಟ್ಟೆ ಬಿಚ್ಚಿಸಿ ಕುಣಿಸಿದ್ದೆ, ಇವತ್ತು ಅದೇ ವ್ಯಕ್ತಿ ನನಗೆ ಊಟ ಕೂಡ ಮಾಡಿಸುತ್ತಿದ್ದಾರೆ ಎಂದು ರೇಗಿಸಿದ್ದಾರೆ.

    ನಂತರ ಪ್ರಶಾಂತ್ ಮಂಜುಗೆ ಊಟ ಮಾಡಿಸಲು ಬಂದಾಗ, ಇಲ್ಲಿ ಕುರೋಣ್ವಾ ಅಥವಾ ಗಾರ್ಡನ್ ಏರಿಯಾದಲ್ಲಿ ಕುರೋಣ್ವಾ ಎಂದಾಗ ಪ್ರಶಾಂತ್ ನೀನು ಎಲ್ಲಿ ಹೇಳುತ್ತಿಯಾ ಅಲ್ಲಿ, ಮಗುಗೆ ಹೊಟ್ಟೆ ತುಂಬಬೇಕು ಅಷ್ಟೇ ಎಂದು ಊಟ ಮಾಡಿಸುತ್ತಾರೆ. ಈ ವೇಳೆ ಪ್ರಶಾಂತ್ ಒಂದು ಊರಿನಲ್ಲಿ ಮಂಜು ಎಂಬ ಹುಡುಗ ಇದ್ನಂತೆ. ಅವನು ತುಂಬಾ ತುಂಟ ಅಂತೆ, ಅವನ ತುಂಟತನಕ್ಕೆ ಮನೆ ಮಂದಿಯೆಲ್ಲಾ ಕಣ್ಣೀರು ಹಾಕುತ್ತಿದ್ರಂತೆ ಎಂದು ಕಥೆ ಹೇಳಲು ಆರಂಭಿಸುತ್ತಾರೆ. ಆಗ ಮಂಜು ನನಗೆ ನನ್ನ ದೊಡ್ಡಪ್ಪನೇ ನೆನಪಾಗುತ್ತಿದ್ದಾರೆ, ನನಗೆ ಸಾಕು ಎಂದು ರೇಗಿಸುತ್ತಾ, ವೈಷ್ಣವಿ ಹಾಗೂ ಪ್ರಶಾಂತ್‍ಗೆ ಮನೆಯೆಲ್ಲಾ ಓಡಾಡಿಸುತ್ತಾ, ಸೋಫಾ ಮೇಲೆ ಉರುಳಾಡುತ್ತಾ ಆಟ ಆಡಿಸಿದ್ದಾರೆ. ಇದನ್ನೂ ಓದಿ:ಎಲ್ಲರೆದುರು ಸಿಟ್ಟಿನಿಂದ ಬೈಯ್ಯೋದು ಎಷ್ಟು ಸರಿ – ಮಂಜು ವಿರುದ್ಧ ದಿವ್ಯಾ ಅಸಮಾಧಾನ

  • ನನ್ನ ಎದುರಾಕ್ಕೊಂಡವರು ಮಂಡಿ ಬಗ್ಗಿಸಿ ನಡೀಬೇಕು- ಶುಭಾ ವಿರುದ್ಧ ಮಂಜು ರಿವೇಂಜ್

    ನನ್ನ ಎದುರಾಕ್ಕೊಂಡವರು ಮಂಡಿ ಬಗ್ಗಿಸಿ ನಡೀಬೇಕು- ಶುಭಾ ವಿರುದ್ಧ ಮಂಜು ರಿವೇಂಜ್

    ಪ್ರತಿ ಬಾರಿಯಂತೆ ಈ ಸಲ ಕೂಡ ಮನೆಯ ಸ್ಪರ್ಧಿಗಳನ್ನು ವಿಜಯ ಯಾತ್ರೆ ಹಾಗೂ ನಿಂಗೈತೆ ಇರು ಎಂದು ಎರಡು ಗುಂಪುಗಳಾಗಿ ವಿಂಗಡಿಸಿ ಬಿಗ್‍ಬಾಸ್ ಡಿಫರೆಂಟ್ ಟಾಸ್ಕ್ ಅನ್ನು ನೀಡಿದ್ದರು. ಅದರಂತೆ ಮೊದಲ ಟಾಸ್ಕ್‌ನಲ್ಲಿ ಗೆದ್ದ ವಿಜಯಯಾತ್ರೆ ತಂಡದವರು ಓಡಾಡಬೇಕಾದರೆ, ನಿಂಗೈತೆ ತಂಡದ ಇಬ್ಬರು ಸದಸ್ಯರು ಬಾಗಿಲನ್ನು ತೆಗೆಯಬೇಕು ಎಂದು ಬಿಗ್‍ಬಾಸ್ ಸೂಚಿಸಿದ್ದರು.

    ಇದನ್ನೇ ಅಡ್ವಾಂಟೇಜ್ ಆಗಿ ತೆಗೆದುಕೊಂಡ ಶುಭಾ ಪೂಂಜಾ ಟಾಸ್ಕ್ ಗೆದ್ದ ಖುಷಿಯಲ್ಲಿ ಮಂಜುರನ್ನು ಸಿಕ್ಕಾಪಟ್ಟೆ ಸತಾಯಿಸಿದ್ದರು. ನಂತರ ‘ಹೀಗೂ ಅಂಟೆ’ ಟಾಸ್ಕ್‌ನಲ್ಲಿ ಗೆದ್ದ ಮಂಜು ಶುಭಾ ಪೂಂಜಾ ವಿರುದ್ಧ ರಿವೇಂಜ್ ತೆಗೆದುಕೊಂಡಿದ್ದಾರೆ.

    ಹೀಗೂ ಅಂಟೆ ಟಾಸ್ಕ್‌ನಲ್ಲಿ ಸೋತ ವಿಜಯಯಾತ್ರೆ ತಂಡದ ಇಬ್ಬರು ಸದಸ್ಯರು ಬಿಗ್‍ಬಾಸ್ ಮುಂದಿನ ಆದೇಶದವರೆಗೂ ಅಂಬೆ ಕಾಲಿನಲ್ಲಿ ಓಡಾಡಬೇಕು ಎಂದು ತಿಳಿಸಿದ್ದಾರೆ. ಇದನ್ನು ಕೇಳಿ ಮಂಜು, ನನಗೆ ಬಹಳ ಖುಷಿಯಾಗುತ್ತಿದೆ ಅಂತ ಹೇಳಿ, ತಂಡವರೆಲ್ಲರೂ ಶುಭಾ ಪೂಂಜಾ ಹಾಗೂ ಪ್ರಶಾಂತ್‍ರವರನ್ನು ಸೂಚಿಸುತ್ತಾರೆ.

    ಬಳಿಕ ಅಂಬೆ ಕಾಲಿನಲ್ಲಿ ಓಡಾಡಲು ಆರಂಭಿಸಿದ ಶುಭಾಗೆ, ಟೈಂ ಒಂದೇ ರೀತಿ ಇರುವುದಿಲ್ಲ, ಯಾವಾಗಲೂ ತಿರುಗುತ್ತಲೇ ಇರುತ್ತದೆ. ಬಿಗ್ ಬಾಸ್ ಈ ಶಿಕ್ಷೆಯನ್ನು ಎರಡು ದಿನ ತೆಗೆಯಲೇ ಬಿಡಿ, ಜಿಂಕೆ ತರ ಎಗರುತ್ತಿದ್ದೆ, ಯಾಕೆ ಕಪ್ಪೆ ತರ ಕುತಿದ್ಯಾ, ನನ್ನ ಎದುರು ಹಾಕ್ಕೊಂಡವರು ಮಂಡಿ ಬಗ್ಗಿಸಿಯೇ ನಡೆಯಬೇಕು ಎಂದು ಮಂಜು ಅಣುಕಿಸುತ್ತಾರೆ. ಈ ವೇಳೆ ನಾನು ಏನು ಮಾಡಿದೆ ನನಗೆ ಯಾಕೆ ಶಿಕ್ಷೆ ಎಂದು ಪ್ರಶಾಂತ್ ಕೇಳಿದಾಗ, ಚಕ್ರವರ್ತಿಯವರು ಬಾತ್ ರೂಂ ಬಾಗಿಲು ಕುಟ್ಟಿದ್ಯಾಲ್ಲೋ ಚಕ್ರಿ ಬಾಗಿಲು ತೆಗಿ ಅಂತ, ಅದಕ್ಕೆ ಈ ಶಿಕ್ಷೆ ಎಂದು ಚಕ್ರವರ್ತಿ ಪ್ರಶಾಂತ್‍ರವರಿಗೆ ರೇಗಿಸಿದ್ದಾರೆ.

    ಒಟ್ಟಾರೆ ಮನೆ ಪೂರ್ತಿ ಅಂಬೆ ಗಾಲಿನಲ್ಲಿ ಶುಭಾ ಪೂಂಜಾ ಓಡಾಡಲು ಪರದಾಡಿದರೆ, ಚಕ್ರವರ್ತಿಯವರು ಒಂದೇ ಚೇರ್ ಮೇಲೆ ಕುಳಿತು ಡ್ರೆಸ್ ಚೇಂಜ್ ಮಾಡಲು ಆಗದೇ ಕಿಚನ್ ಬಳಿಯೇ ಕುಳಿತುಕೊಂಡು ಟಿ-ಶರ್ಟ್ ಬಿಚ್ಚಿ ಮತ್ತೊಂದು ಟಿ-ಶರ್ಟ್ ಕಿಚನ್ ಬಳಿಯೇ ತಂದು ಕೊಡುವಂತೆ ಮನೆಮಂದಿಯನ್ನು ಬೇಡುತ್ತಾ ಒದ್ದಾಡಿದ್ದಾರೆ.

  • ಮಾತುಗಳಿಗೂ ಸ್ಯಾನಿಟೈಸರ್ ಬಳಸಿ – ಪ್ರಶಾಂತ್, ಚಕ್ರವರ್ತಿಗೆ ಕಿಚ್ಚ ವಾರ್ನ್

    ಮಾತುಗಳಿಗೂ ಸ್ಯಾನಿಟೈಸರ್ ಬಳಸಿ – ಪ್ರಶಾಂತ್, ಚಕ್ರವರ್ತಿಗೆ ಕಿಚ್ಚ ವಾರ್ನ್

    ಬಿಗ್‍ಬಾಸ್ ಮನೆಯಲ್ಲಿ ಕುಚುಕು ಗೆಳೆಯರಾಗಿದ್ದ ಪ್ರಶಾಂತ್ ಸಂಬರಗಿ ಹಾಗೂ ಚಕ್ರವರ್ತಿ ಮಧ್ಯೆ ಈ ವಾರ ಬೆಂಕಿಯಂತೆ ಕಾದಾಟ ನಡೆದಿದ್ದು, ಈ ಕುರಿತಂತೆ ಸುದೀಪ್‍ರವರು ಚಕ್ರವರ್ತಿ ಹಾಗೂ ಪ್ರಶಾಂತ್‍ರವರಿಗೆ ವಾರ್ನ್ ಮಾಡಿದ್ದಾರೆ.

    ಶನಿವಾರದ ಪಂಚಾಯತಿಕಟ್ಟೆಯಲ್ಲಿ ವೇದಿಕೆ ಮೇಲೆ ಮನೆಯ ಸ್ಪರ್ಧಿಗಳ ತಪ್ಪುಗಳನ್ನು ತಿಳಿಸಿ ಬುದ್ಧಿ ಹೇಳಿದ ಸುದೀಪ್, ಪ್ರಶಾಂತ್ ಹಾಗೂ ಚಕ್ರವರ್ತಿ ಇಬ್ಬರು ಕೋವಿಡ್ ಸಮಯದಲ್ಲಿ ಮಾತುಗಳಿಗೂ ಸ್ಯಾನಿಟೈಸರ್ ಬಳಸುವುದು ನನ್ನ ಅನಿಸಿಕೆ. ಮಾತನಾಡುವುದು, ಜಗಳ ಮಾಡುವುದು, ಧ್ವನಿ ಎತ್ತುವುದು ತಪ್ಪಲ್ಲ. ಅಭಿಪ್ರಾಯವನ್ನು ಯಾವ ರೀತಿ ವ್ಯಕ್ತಪಡಿಸುತ್ತೇವೆ ಅದು ಎಲ್ಲರ ವ್ಯಕ್ತಿತ್ವವನ್ನು ತಿಳಿಸುತ್ತದೆ. ನೀವು ಬಳಸುವ ಪದಗಳನ್ನು ಕಟ್ ಮಾಡಿ ಹಾಕಲು ಆಗುವುದಿಲ್ಲ. ಏನು ಬರುತ್ತದೆ ಅದನ್ನು ತೋರಿಸಬೇಕಾಗುತ್ತದೆ. ಆದರೆ ಬೀಪ್, ಬೀಪ್ ಎಂದು ಹಾಕಿದರೆ ಟಿವಿಯಲ್ಲಿ ಹೇಗೆ ಕಾಣಿಸಬಹುದು. ನಾವು ಬೀಪ್ ಯಾಕೆ ಹಾಕಿರಬಹುದು ಎಂದು ಯೋಚಿಸಿ ಎಂದು ತಿಳಿ ಹೇಳಿದ್ದಾರೆ.

    ಪ್ರಶಾಂತ್ ಹಾಗೂ ಕೆ.ಪಿ ಅರವಿಂದ್‍ರವರ ನಡುವೆ ಅಡುಗೆ ಮನೆಯಲ್ಲಿ ನಡೆದ ವಾದ-ವಿವಾದ ಬಗ್ಗೆ ಮಾತನಾಡಿದ ಸುದೀಪ್‍ರವರು, ನಿಮ್ಮಿಬ್ಬರ ನಡುವೆ ಕೋಪ-ತಾಪ ಇತ್ತು, ಅದನ್ನು ಒಪ್ಪಿಕೊಳ್ಳುತ್ತೇನೆ. ಆದರೆ ನನ್ನ ಪ್ರಕಾರ ನಿಮ್ಮಿಬ್ಬರ ನಡುವೆ ಜಗಳ ನಡೆಯುವ ಅವಶ್ಯಕತೆ ಇರಲಿಲ್ಲ. ಬಿಗ್‍ಬಾಸ್ ಮನೆಯಲ್ಲಿ ವೈಯಕ್ತಿಕ ವಿಚಾರಗಳು ಬೇಡ. ಪ್ರಶಾಂತ್ ಈ ವೇಳೆ ಕಿರುಚಾಡುವ ಅವಶ್ಯಕತೆ ಇತ್ತ? ನೀವು ನಡೆದುಕೊಂಡಿದ್ದು ನೋಡಿ ನಿಮಗೆ ಏನಾದರೂ ಹೆಚ್ಚು-ಕಡಿಮೆಯಾಗುತ್ತದೆಯೋ ಎಂದು ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳು ನೋಡಿ ಭಯಪಟ್ಟಿದ್ದರು. ನಿಮ್ಮನ್ನು ಈ ಮನೆಯಲ್ಲಿ ಹೀಗೆ ನೋಡುತ್ತಿರಲು ಕಾರಣವನ್ನು ಬಹಳ ಸರಳವಾಗಿ ಹೇಳುತ್ತೇನೆ. ಉದಾಹರಣೆ ತೋಳ ಬಂತು ತೋಳ ಎಂಬ ಕಥೆಯನ್ನು ನೆನಪಿಸಿದ್ದಾರೆ.  ಇದನ್ನೂ ಓದಿ: ಎಷ್ಟು ಸಲ ಬೀಪ್ ಮಾಡುವುದು?- ಚಕ್ರವರ್ತಿಗೆ ಕಿಚ್ಚ ಸುದೀಪ್ ಕ್ಲಾಸ್

  • ದಿವ್ಯಾ ಉರುಡುಗ ಮೋಸ ಮಾಡಿದ್ದಾಳೆ ಅಂತ ಕಿರುಚಾಡಿದ ಪ್ರಶಾಂತ್

    ದಿವ್ಯಾ ಉರುಡುಗ ಮೋಸ ಮಾಡಿದ್ದಾಳೆ ಅಂತ ಕಿರುಚಾಡಿದ ಪ್ರಶಾಂತ್

    ಬಿಗ್‍ಬಾಸ್ ನೀಡಿದ್ದ  ನೋಟು ಮುದ್ರಿಸುವ ಟಾಸ್ಕ್ ವೇಳೆ ಏಪ್ರನ್‍ಗಾಗಿ ಮಂಜು ಹಾಗೂ ಪ್ರಶಾಂತ್ ನಡುವೆ ಕಾದಾಟ ನಡೆದಿದೆ.

    ಇಬ್ಬರ ಜಗಳ ಮಧ್ಯೆ ಪ್ರವೇಶಿಸಿದ ಕ್ಯಾಪ್ಟನ್ ದಿವ್ಯಾ ಉರುಡುಗ ಮೊದಲು ಏಪ್ರನ್ ಕತ್ತಿಗೆ ಹಾಕಿಕೊಂಡಿದ್ದು ಮಂಜು ಆಗಿರುವುದರಿಂದ ಏಪ್ರನ್ ಮಂಜುಗೆ ಸೇರಬೇಕೆಂದು ಪ್ರಶಾಂತ್‍ರಿಂದ ಏಪ್ರನ್ ಹಿಂಪಡೆದು ಮಂಜುಗೆ ನೀಡುತ್ತಾರೆ. ಇದರಿಂದ ಬೇಸರಗೊಂಡ ಪ್ರಶಾಂತ್, ತಪ್ಪು ನಿರ್ಧಾರ ತೆಗೆದುಕೊಂಡು ನಮ್ಮ ಮಾರ್ಯದೆ ತೆಗಿತಿದ್ದಾಳೆ ಎಂದು ಬೈದು, ಬೆಡ್ ರೂಮ್‍ಗೆ ಹೋಗಿ ಅಳುತ್ತಾರೆ.

    ಬಳಿಕ ಟಾಸ್ಕ್ ನಡೆಯುತ್ತಿದ್ದ ವೇಳೆ ಕ್ಯಾಪ್ಟನ್ ನೀವು ಇಂದು ಮೋಸದ ಆಟ ಆಡಿದ್ದೀರಾ ಎಂದು ಪ್ರಶಾಂತ್ ಹೇಳುತ್ತಾರೆ. ಇದಕ್ಕೆ ದಿವ್ಯಾ ಉರುಡುಗ ನಾನು ಯಾವುದೇ ತಪ್ಪು ನಿರ್ಧಾರ ನೀಡಿಲ್ಲ ಎಂದಿದ್ದಾರೆ. ನಂತರ ಮಂಜುನೂ ಮೋಸ ಮಾಡಿದ್ದಾನೆ, ನೀನು ಕೂಡ ಮೋಸ ಮಾಡಿದ್ಯಾ ಎಂದು ಪದೇ ಪದೇ ಹೇಳುತ್ತಾರೆ. ಆಗ ದಿವ್ಯಾ ಉರುಡುಗ ಮೈಕ್ ಏನಾದರೂ ಬೇಕಾ ಎಂದು ಕೇಳುತ್ತಾರೆ. ಇದಕ್ಕೆ ಮೈಕ್‍ನನ್ನು ಮೇಲಕ್ಕೆ ಎತ್ತಿ ಹಿಡಿದುಕೊಂಡು, ಮಂಜುನೂ ಮೋಸ ಮಾಡಿದ್ದಾನೆ, ದಿವ್ಯಾ ಉರುಡುಗನೂ ಮೋಸ ಮಾಡಿದ್ದಾಳೆ ಎಂದು ಕಿರುಚುತ್ತಾರೆ. ಇದಕ್ಕೆ ದಿವ್ಯಾ ಉರುಡುಗ ಥ್ಯಾಂಕ್ಯು ಎಂದು ಅಣುಕಿಸುತ್ತಾರೆ.

    ನಂತರ ಅರವಿಂದ್ ಜೊತೆ ಇದೇ ವಿಚಾರವಾಗಿ ಚರ್ಚಿಸಿದ ದಿವ್ಯಾ ಉರುಡುಗ, ಟಾಸ್ಕ್ ಬುಕ್‍ನನ್ನು ಓದುತ್ತಾರೆ. ಕುತ್ತಿಗೆಗೆ ಮೊದಲು ಏಪ್ರಿನ್ ಧರಿಸುವ 5 ಮಂದಿ ಆ ಸುತ್ತಿನಲ್ಲಿ ನೋಟು ಮುದ್ರಿಸುವ ಅವಕಾಶವನ್ನು ಪಡೆಯುತ್ತಾರೆ ಎಂದು ಹೇಳುತ್ತಾರೆ. ಈ ವೇಳೆ ಪ್ರಶಾಂತ್‍ರವರು ನನ್ನ ಮಕ್ಕಳ ಮೇಲೆ ಆಣೆ ಮಾಡಿ ಹೇಳುತ್ತೇನೆ ಅವನು ಕುತ್ತಿಗೆಗೆ ಹಾಕಿಕೊಂಡಿಲ್ಲ. ನನ್ನ ಆತ್ಮಸಾಕ್ಷಿಯಾಗಿ ಹೇಳುತ್ತೇನೆ ಹಾಕಿಕೊಂಡಿರಲಿಲ್ಲ ಎಂದು ವಾದಿಸಿದ್ದಾರೆ. ಜೊತೆಗೆ ಇಂದು ನಿನ್ನಲ್ಲಿ ಬೇಧ-ಭಾವವಿದೆ ಎಂದು ಕಿಡಿಕಾರಿದ್ದಾರೆ.

    ಇದಕ್ಕೆ ನಿಮ್ಮ ಮಾತಿನ ಮೇಲೆ ಅಲ್ಲ, ನನ್ನ ಕಣ್ಣಿನ ಮೇಲೆ ನನಗೆ ನಂಬಿಕೆ ಇದೆ, ಅವನು ಕುತ್ತಿಗೆಗೆ ಏಪ್ರನ್ ಹಾಕಿಕೊಂಡಿದ್ದನ್ನು ನೋಡಿದ್ದೇನೆ. ಆಗ ನಿಮ್ಮ ಕೈನಲ್ಲಿ ಏಪ್ರನ್ ಇತ್ತು. ಅದರ ಆಧಾರ ಮೇಲೆ ನಾನು ಮಂಜುಗೆ ಏಪ್ರನ್ ಕೊಟ್ಟಿದ್ದೇನೆ. ನನಗೆ ಗೊತ್ತಿದೆ ನಾನು ಸರಿ ಮಾಡುತ್ತಿದ್ದೇನೋ, ತಪ್ಪು ಮಾಡುತ್ತಿದ್ದೇನೋ, ನನ್ನ ಪ್ರಕಾರ ನಾನು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೇನೆ. ನನಗೆ ಸರಿ, ತಪ್ಪು ಯಾವುದು ಎಂದು ನೀವು ಹೇಳಿಕೊಡಬೇಕಾಗಿಲ್ಲ ಎಂದು ಗುಡುಗಿದ್ದಾರೆ.

  • ಪ್ರಶಾಂತ್, ಚಕ್ರವರ್ತಿ ಜಗಳಕ್ಕೆ ದಿವ್ಯಾ ಸುರೇಶ್ ಕಾಮೆಂಟ್

    ಪ್ರಶಾಂತ್, ಚಕ್ರವರ್ತಿ ಜಗಳಕ್ಕೆ ದಿವ್ಯಾ ಸುರೇಶ್ ಕಾಮೆಂಟ್

    ಪ್ರಶಾಂತ್ ಸಂಬರ್ಗಿ ಹಾಗೂ ಚಕ್ರವರ್ತಿ ಚಂದ್ರಚೂಡ್‍ರವರು ವೈಷ್ಣವಿಯವರ ವಿಚಾರವಾಗಿ ದೊಡ್ಮನೆಯಲ್ಲಿ ಜಗಳವಾಡಿದ್ದಾರೆ.

    ಟಾಸ್ಕ್ ವಿಚಾರವಾಗಿ ಸಂಬರಗಿ ವೈಷ್ಣವಿಗೆ ಸಲಹೆ ನೀಡಿದ್ದರ ಬಗ್ಗೆ ಮಾತನಾಡಿದ್ದನ್ನು ಚಕ್ರವರ್ತಿ ಸಂಬರಗಿ ಬಳಿ ಹೇಳಿಕೊಂಡಿದ್ದಾರೆ. ಈ ವಿಚಾರವನ್ನು ಸಂಬರಗಿ ವೈಷ್ಣವಿ ಬಳಿ ಕೇಳಿದ್ದು, ನಾನು ಆ ರೀತಿ ಹೇಳಿಲ್ಲ ಎಂದು ವೈಷ್ಣವಿ ಖಡಕ್ ಆಗಿ ಉತ್ತರಿಸಿದ್ದಾರೆ. ಇದಕ್ಕೆ ಸಿಟ್ಟಿಗೆದ್ದ ಚಕ್ರವರ್ತಿ, ಇಂತಹ ಹೊಲಸು ಕೆಲಸ ಮಾಡಬೇಡ. ನಾನು ಕೇಳಬೇಡ ಅಂದ್ರೂ ವೈಷ್ಣವಿ ಬಳಿ ಯಾಕೆ ಕೇಳಿದೆ. ಇದು ಹೊಲಸು ಕೆಲಸ, ನಾಮಕರಮ್ ಎಂದೆಲ್ಲಾ ಪ್ರಶಾಂತ್‍ರವರಿಗೆ ಚಕ್ರವರ್ತಿ ಸಿಕ್ಕಾಪಟ್ಟೆ ಎಲ್ಲರ ಮುಂದೆ ಬೈದಿದ್ದಾರೆ.

    ಈ ಮಧ್ಯೆ ಗಾರ್ಡನ್ ಏರಿಯಾದಲ್ಲಿ ದಿವ್ಯಾ ಸುರೇಶ್, ಪ್ರಿಯಾಂಕ, ರಘು ಕುಳಿತುಕೊಂಡಿರುತ್ತಾರೆ. ಈ ವೇಳೆ ಇವರಿಬ್ಬರ ಜಗಳ ನೋಡುತ್ತಾ ದಿವ್ಯಾ ಸುರೇಶ್, ಇಲ್ಲಿ ಇಬ್ಬರು ಕುಳಿತುಕೊಂಡು ಹೇಗೆ ಎಂದು ಲೆಕ್ಕಾಚಾರ ಹಾಕಿಕೊಂಡು ಪ್ಲಾನ್ ಮಾಡಿಕೊಳ್ಳುತ್ತಾರೆ. ನಂತರ ಎಲ್ಲಾ ಒಂದೇ ಬಾರಿಗೆ ಈ ತರಹ ಬ್ಲಾಸ್ಟ್ ಆಗುತ್ತದೆ ಆಗ ಜಗಳವಾಡುತ್ತಾರೆ. ಬಳಿಕ ಎಲ್ಲಾ ಕಾವು ಕಡಿಮೆಯಾದ ಮೇಲೆ ಮತ್ತೆ ಇದೇ ಸೋಫಾ ಮೇಲೆ ಬಂದು ಕುಳಿತುಕೊಳ್ಳುತ್ತಾರೆ. ಹಾಗೇ ಮಾಡೋಣ, ಹೀಗೆ ಮಾಡೋಣ ಎಂದು ಮಾತನಾಡುತ್ತಾರೆ. ಮತ್ತೆ ಸಂಜೆ ಇನ್ನೊಂದು ಯಾವುದಾದರೂ ವಿಚಾರಕ್ಕೆ ಜಗಳ ಆಡುತ್ತಾರೆ. ಜನರಲ್ ಆಗಿ ಹೇಳುತ್ತೇನೆ, ಚಕ್ರವರ್ತಿಯವರು ಸುಳ್ಳು ಹೇಳಿದರೂ ಸತ್ಯ ತಲೆಯ ಮೇಲೆ ಹೊಡೆದಂತೆ ಹೇಳುತ್ತಾರೆ. ನಾನು ಹೇಳುತ್ತಿರುವುದೇ ಸರಿ ಎಂದು ವಾದಿಸುತ್ತಾರೆ ಎಂದು ದಿವ್ಯಾ ಸುರೇಶ್ ಕಾಮೆಂಟ್ ಮಾಡಿದ್ದಾರೆ.  ಇದನ್ನೂ ಓದಿ: ಮತ್ತೆ ಚಕ್ರವರ್ತಿ ಸಂಬರಗಿ ಮಧ್ಯೆ ಫೈಟ್

  • ಶಮಂತ್ ಮೇಲೆ ಚಪ್ಪಲಿ ಎಸೆದ ಪ್ರಶಾಂತ್ ಸಂಬರ್ಗಿ

    ಶಮಂತ್ ಮೇಲೆ ಚಪ್ಪಲಿ ಎಸೆದ ಪ್ರಶಾಂತ್ ಸಂಬರ್ಗಿ

    ಬಿಗ್ ಬಾಸ್ ನೀಡಿದ್ದ ಚಿನ್ನದ ಮೊಟ್ಟೆ ಟಾಸ್ಕ್ ವೇಳೆ ಪ್ರಿಯಾಂಕ ತಿಮ್ಮೇಶ್ ತಲೆಯ ಮೇಲೆ ದಿವ್ಯಾ ಸುರೇಶ್ ಮೊಟ್ಟೆ ಒಡೆದು ಗೆಲ್ಲುತ್ತಾರೆ. ಇದರಿಂದ ತಮ್ಮ ಬಳಿ ಇದ್ದ ಸಂಪೂರ್ಣ ಹಣ ಕಳೆದುಕೊಂಡ ಪ್ರಿಯಾಂಕ ತಿಮ್ಮೇಶ್, ಶಮಂತ್‍ರಿಂದಾಗಿ ದಿವ್ಯಾ ಸುರೇಶ್ ಗೆದ್ದರು ಎಂಬ ಕಾರಣಕ್ಕೆ ಶಮಂತ್ ಲಾಕರ್‌ನಲ್ಲಿದ್ದ ಹಣವನ್ನು ಕದಿಯಲು ಮುಂದಾಗುತ್ತಾರೆ.

    ಈ ವೇಳೆ ಲಾಕರ್‍ನಲ್ಲಿದ್ದ ಹಣವನ್ನು ಕಾಪಾಡಿಕೊಳ್ಳಲು ಶಮಂತ್, ಪ್ರಿಯಾಂಕ ತಿಮ್ಮೇಶ್ ಜೊತೆ ಡೀಲ್ ಮಾಡಿಕೊಳ್ಳುತ್ತಾರೆ. ನಾನು ಈಗ ನಿನಗೆ 14 ಸಾವಿರ ರೂ. ನೀಡುತ್ತೇನೆ. ಆದರೆ ಮುಂದಿನ ಟಾಸ್ಕ್‌ನಲ್ಲಿ ನೀನು ಎಷ್ಟೇ ಗೆದ್ದರೂ 25 ಸಾವಿರ ಮೇಲೆ ದಾಟುವುದಿಲ್ಲ. ಆಗ ನಿನ್ನ ಬಳಿ ಇರುವ ಹಣದಲ್ಲಿ ನನಗೆ ಪಾಲು ನೀಡುವುದಾಗಿ ಪ್ರಾಮಿಸ್ ಮಾಡಿದರೆ ಕೊಡುತ್ತೇನೆ ಎನ್ನುತ್ತಾರೆ. ಅದರಂತೆ ಡೀಲ್ ಓಕೆ ಮಾಡಿಕೊಂಡು ಪ್ರಿಯಾಂಕಗೆ ಶಮಂತ್ ಹಣ ನೀಡುತ್ತಾರೆ.

    ನಂತರ ರಾತ್ರಿ ಗಾರ್ಡನ್ ಏರಿಯಾದಲ್ಲಿ ಶಮಂತ್, ಪ್ರಶಾಂತ್, ಚಕ್ರವರ್ತಿ ಕುಳಿತು ಮಾತನಾಡುತ್ತಿರುತ್ತಾರೆ. ಈ ವೇಳೆ ಪ್ರಿಯಾಂಕ ಬಳಿ 14,800ರೂ ಇತ್ತು. ಸದ್ಯ ಅವರ ಲಾಕರ್‌ನಲ್ಲಿ 14,800 ರೂ ಇಟ್ಟಿದ್ದೇನೆ ಅದು ನನಗೆ ಆಮೇಲೆ ವಾಪಸ್ ಬರುತ್ತದೆ ಎಂದು ಹೇಳಿದ್ದಾರೆ. ಆಗ ಚಕ್ರವರ್ತಿಯವರು ನಿನ್ನ ಬಳಿ ಪ್ರಿಯಾಂಕ ಹಣವನ್ನು ಕಿತ್ತುಕೊಂಡು ಹೋಗಿದ್ದಾರಾ ಎಂದಾಗ, ಲಾಕರ್‌ನಲ್ಲಿದ್ದ ಎಲ್ಲವನ್ನು ಎತ್ತಿಕೊಂಡು ಹೋಗಿ ಬಿಟ್ಟಿದ್ದರು ಎಂದು ಶಮಂತ್ ಹೇಳುತ್ತಾರೆ. ಈ ವೇಳೆ ಚಕ್ರವರ್ತಿ ಚಂದ್ರಚೂಡ್ ಮೊಟ್ಟೆ ಒಡೆದಿರುವುದು ದಿವ್ಯಾ ಸುರೇಶ್, ಹಣ ಕೊಟ್ಟಿರುವುದು ಇವನು, ಇವನೆಷ್ಟು ಮುಟ್ಟಾಳ ಎಂದು ಪ್ರಶಾಂತ್ ಬಳಿ ಮಾತು ಒಪ್ಪಿಸುತ್ತಾ, ಹೊಸ ಚಾಪ್ಟರ್ ಎಂದು ಅಣುಕಿಸುತ್ತಾರೆ.

    ಈ ವೇಳೆ ಶಮಂತ್ ನಗುತ್ತಾ ನಿಮಗೇಕೆ, ನೋಡಿ ನಾನು ಒಂದು ಪ್ರಾಮಿಸ್ ಮೇಲಿನ ನಂಬಿಕೆಯಿಂದ ಹಣ ನೀಡಿದ್ದೇನೆ ಎನ್ನುತ್ತಾರೆ. ಅದಕ್ಕೆ ಚಕ್ರವರ್ತಿಯವರು ನಿನ್ನನ್ನು ನಾನು ಕರೆಸಿ, ನಿನ್ನ ತಲೆಯ ಮೇಲೆ ಮೊಟ್ಟೆ ಹೊಡೆಸಿ, ಇವನಿಗೆ ದುಡ್ಡು ಕೊಟ್ಟು, ಇಷ್ಟೇಲ್ಲಾ ನಾವು ಈ ಹುಡುಗನಿಗೋಸ್ಕರ ಮಾಡಿದರೆ, ಒಂದು ಹುಡುಗಿಗೆ ಹೆದರಿಕೊಂಡು ಹಣ ಕೊಟ್ಟಿದ್ದಾನೆ ಎಂದು ಚಕ್ರವರ್ತಿ ಪ್ರಶಾಂತ್‍ರವರಿಗೆ ಹೇಳುತ್ತಾರೆ.

    ಈ ಮಧ್ಯೆ ಹೆದರಿಕೊಂಡಿರುವ ಪದವನ್ನು ವಾಪಸ್ ತೆಗೆದುಕೊಳ್ಳಿ ಎಂದು ಶಮಂತ್ ಹೇಳುವ ವೇಳೆ ಪ್ರಶಾಂತ್, ಹಾಗದರೆ ಇವನು ಪ್ರಿಯಾಂಕಗೆ ದುಡ್ಡು ನೀಡಿದ್ದಾನಾ ಎಂದು ಚಕ್ರವರ್ತಿಯವರನ್ನು ಪ್ರಶ್ನಿಸುತ್ತಾರೆ. ಬಳಿಕ ಹಣ ಕೊಟ್ಟಿರುವ ವಿಚಾರ ತಿಳಿದು, ಸೋಫಾ ಮೇಲೆ ಮಲಗಿಕೊಂಡು ನಗುತ್ತಾ, ಬಳಿಕ ಎದ್ದು ತಮ್ಮ ಎರಡು ಚಪ್ಪಲಿಗಳನ್ನು ಪ್ರಶಾಂತ್, ಶಮಂತ್ ಮೇಲೆ ಎಸೆದಿದ್ದಾರೆ.

    ನಂತರ ಈಗ ನೀವು ನಗುತ್ತಿದ್ದೀರಾ ಅಲ್ವಾ, ನಾಳೆಯವರೆಗೂ ನನಗೆ ಟೈಮ್ ಕೊಡಿ ಎನ್ನುತ್ತಾರೆ. ಆಗ ಚಕ್ರವರ್ತಿಯವರು, ಮೊಟ್ಟೆ ಹೊಡೆದಿದ್ದು ಡಿಎಸ್, ಜಗಳ ಆಡಿದ್ದು ಡಿಎಸ್, ಇವನಿಗೋಸ್ಕರ ನೀನು ಅಷ್ಟೇಲ್ಲಾ ತ್ಯಾಗ ಮಾಡಿದೆ ಆದರೆ ಇವನು ಪ್ರಿಯಾಂಕಳನ್ನು ಸೇವ್ ಮಾಡುತ್ತಿದ್ದಾನೆ ಎಂದು ಪ್ರಶಾಂತ್‍ಗೆ ಹೇಳುತ್ತಾ ನಕ್ಕಿದ್ದಾರೆ. ಇದನ್ನೂ ಓದಿ:ದಿವ್ಯಾ ಸುರೇಶ್ ಮೇಲೆ ಕೈ ಮಾಡಿದ ಪ್ರಿಯಾಂಕ

  • ದೊಡ್ಮನೆ ಕುಚುಕು ಗೆಳೆಯರ ಮಧ್ಯೆ ಬಿಗ್ ಫೈಟ್

    ದೊಡ್ಮನೆ ಕುಚುಕು ಗೆಳೆಯರ ಮಧ್ಯೆ ಬಿಗ್ ಫೈಟ್

    ಬಿಗ್‍ಬಾಸ್ ಮನೆಯಲ್ಲಿ ಕುಚುಕ ಗೆಳೆಯರು ಅಂದರೆ ಅದು ಪ್ರಶಾಂತ್ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್. ದೊಡ್ಮನೆಯಲ್ಲಿ ಎಲ್ಲಿ ನೋಡಿದರೂ ಒಟ್ಟಿಗೆ ಜೊತೆ ಜೊತೆಯಾಗಿ ಕಾಣಿಸಿಕೊಳ್ಳುವ ಇವರಿಬ್ಬರ ಮಧ್ಯೆ ಟಾಸ್ಕ್ ವೇಳೆ ಜೋರಾದ ವಾಗ್ವಾದ ನಡೆದಿದೆ.

    ಹೌದು, ಬಿಗ್‍ಬಾಸ್ ಮನೆಯಲ್ಲಿ ಮೈಂಡ್ ಗೇಮ್ ಆಡುತ್ತಿರುವ ಪ್ರಶಾಂತ್ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್ ಇಬ್ಬರು ಸದಾ ಮನೆಯ ಎಲ್ಲಾ ಸ್ಪರ್ಧಿಗಳ ಕಮೆಂಟ್ ಪಾಸ್ ಮಾಡುತ್ತಾ, ಚುರುಕಾಗಿ ಆಟ ಆಡುತ್ತಿದ್ದಾರೆ. ಇಷ್ಟು ದಿನ ಮನೆಯ ಸ್ಪರ್ಧಿಗಳ ಬಗ್ಗೆ ಚರ್ಚೆ ನಡೆಸುತ್ತಿದ್ದ ಈ ಜೋಡಿ, ಇದಿಗ ನೀನಾ – ನಾನಾ ಎಂದು ಜಗಳಕ್ಕೆ ನಿಂತಿದ್ದಾರೆ.

    ಎರಡು ತಂಡಗಳು ತಲಾ ಮೂರು ಸ್ಟಾರ್ ಪಡೆದ ಹಿನ್ನೆಲೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್‍ಗಾಗಿ ಮನೆಯ ಸದಸ್ಯರಿಗೆ ಬಿಗ್ ಬಾಸ್ ಮತ್ತೊಂದು ಟಾಸ್ಕ್ ನೀಡಿದ್ದರು. ಡ್ರಮ್‍ನಲ್ಲಿ ತುಂಬಿಸಿದ್ದ ನೀರನ್ನು ಮಗ್‍ನಲ್ಲಿ ತುಂಬಿಸಿಕೊಂಡು ಹೋಗಿ ಕೊನೆಯಲ್ಲಿ ಇರಿಸಲಾಗಿರುವ ಜಾರ್‍ಗೆ ತುಂಬಿಸಬೇಕು ಎಂದು ಬಿಗ್‍ಬಾಸ್ ಟಾಸ್ಕ್‍ವೊಂದನ್ನು ನೀಡಿದ್ದರು. ಈ ವೇಳೆ ಶಮಂತ್ ಆಟ ಆಡುವಾಗ ಫೌಲ್ ಆಗುತ್ತಾರೆ. ಇದರಿಂದ ಕೋಪಗೊಂಡ ಚಕ್ರವರ್ತಿ ಚಂದ್ರಚೂಡ್, ಶಮಂತ್ ಫಾಲ್ ಮಾಡಬೇಡ್ವೋ, ಫೌಲ್ ಮಾಡ್ಬೇಡಿ ಎಂದು ಕಿರುಚಾಡುತ್ತಾರೆ. ಇದರಿಂದ ರೊಚ್ಚಿಗೆದ್ದ ಪ್ರಶಾಂತ್ ಸಂಬರಗಿ ಬಜರ್ ಆದ ನಂತರ ಯಾಕೆ ಬೈಯ್ಯಬೇಕು ಎಂದು ಕಿಡಿಕಾರಿದ್ದಾರೆ.

    ಈ ನಡುವೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಜಗಳ ಬಿಡಿಸಿ ಸಮಾಧಾನಗೊಳಿಸಲು ಮಧ್ಯೆ ಬಂದ ಅರವಿಂದ್‍ಗೆ ಕೇರ್ ಮಾಡದೇ ಚಕ್ರವರ್ತಿ ಚಂದ್ರಚೂಡ್ ಜಗಳ ಮುಂದುವರೆಸಿದ್ದಾರೆ. ಗೇಮ್ ಮುಗಿದ ನಂತರ ನನಗೆ ಬಂದು ಹೇಳಿದ್ದು ಇಷ್ಟ ಆಗಲಿಲ್ಲ ಎಂದು ಶಮಂತ್ ಹೇಳಿದ್ದಾರೆ.

    ನಂತರ ಗುರುವಾರ ಬಿಗ್‍ಬಾಸ್ ನೀಡಿದ್ದ ನೆನಪಿರಲಿ ಟಾಸ್ಕ್ ವೇಳೆ ನೀವು ಮಾಡಿದ ಯಡವಟ್ಟಿನಿಂದ ನಾವು ಸೋತ್ತಿದ್ವಿ. ಆದರೆ ಯಾರು ಕೂಡ ಏನು ಮಾತನಾಡಲಿಲ್ಲ ಎಂದು ದಿವ್ಯಾ ಉರುಡುಗ ಹರಿಹಾಯ್ದಿದ್ದಾರೆ. ಈ ವೇಳೆ ಬಜರ್ ಆದ ನಂತರ ನಾನು ಸರಿಯಾಗಿ ಆಡಿದ್ದೇನೆ ಎಂದು ತೋರಿಸಿಕೊಳ್ಳುವುದು ಎಂದು ಪ್ರಶಾಂತ್ ಸಂಬರಗಿ ಚಕ್ರವರ್ತಿ ಚಂದ್ರಚೂಡ್‍ಗೆ ಅಣುಕಿಸಿದ್ದಾರೆ.

    ಇದಕ್ಕೆ ರೊಚ್ಚಿಗೆದ್ದ ಚಕ್ರವರ್ತಿಯವರು ಬಜರ್ ಆದ ಮೆಲೆ ಅವನಿಗೆ ಹೇಳುತ್ತೇನೆ. ಏನು ಮಾಡುತ್ತಿಯಾ ತಿರುಗೇಟು ನೀಡಿದ್ದಾರೆ. ನಂತರ ಚಕ್ರವರ್ತಿಯವರನ್ನು ಸಮಾಧಾನಗೊಳಿಸಲು ಹೆಗಲ ಮೇಲೆ ಕೈ ಹಾಕಲು ಬಂದ ಪ್ರಶಾಂತ್ ಸಂಬರಗಿಯನ್ನು ಜೋರಾಗಿ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಡಿಯುಗೆ ಅರೆ..ಅರೆ.. ಮುದ್ದು ಗಿಳಿ ಎಂದ ಅರವಿಂದ್

  • ನಾ ನಿನ್ನ ಮರೆಯಲಾರೆ ರೀತಿ ತೆರೆಮೇಲೆ ಬರಲಿದ್ಯಾಂತೆ ಅರ್ವಿಯಾ ಸಿನಿಮಾ

    ನಾ ನಿನ್ನ ಮರೆಯಲಾರೆ ರೀತಿ ತೆರೆಮೇಲೆ ಬರಲಿದ್ಯಾಂತೆ ಅರ್ವಿಯಾ ಸಿನಿಮಾ

    ಬಿಗ್‍ಬಾಸ್ ಮನೆಯ ಕ್ಯೂಟ್ ಪೇರ್ ಅಂದರೆ ಅರವಿಂದ್, ದಿವ್ಯಾ ಉರುಡುಗ. ಕಳೆದ ಇನ್ನಿಂಗ್ಸ್ ವೇಳೆ ಈ ಮುದ್ದಾದ ಜೋಡಿ ನಡುವೆ ಇರುವ ಪ್ರೀತಿ, ಹೊಂದಾಣಿಕೆ ಹಾಗೂ ಕಾಳಜಿ ನೋಡಿ ಮನೆಮಂದಿಯೆಲ್ಲಾ ಇವರಿಬ್ಬರು ಒಂದಾದರೆ ಎಷ್ಟು ಚೆಂದ ಎಂದು ಮಾತನಾಡಿಕೊಂಡಿದ್ದರು.

    ಇದೀಗ ಚಕ್ರವರ್ತಿ ಚಂದ್ರಚೂಡ್‍ರವರು ಅರವಿಂದ್, ದಿವ್ಯಾ ಬಗ್ಗೆ ತಮಗಿರುವ ಆಸೆಯನ್ನು ಹೊರಹಾಕಿದ್ದಾರೆ. ಎರಡನೇ ಇನ್ನಿಂಗ್ಸ್ ನ 9ನೇ ದಿನ ಬೆಡ್ ರೂಮ್ ಏರಿಯಾದಲ್ಲಿ ಅರವಿಂದ್, ದಿವ್ಯಾ ಉರುಡುಗ, ಚಕ್ರವರ್ತಿ, ಪ್ರಶಾಂತ್ ಸಂಬರಗಿ ಹಾಗೂ ಶಮಂತ್ ಕುಳಿತುಕೊಂಡಿರುತ್ತಾರೆ. ಈ ವೇಳೆ ಚಕ್ರವರ್ತಿ ಚಂದ್ರಚೂಡ್‍ರವರು ಸಿನಿಮಾ ಕಥೆಯನ್ನು ಹೇಳಿದ್ದಾರೆ.

    ಅರವಿಂದ್, ದಿವ್ಯಾ ಉರುಡುಗ ಸಿನಿಮಾ ಮಾಡಬೇಕು. ಇವರಿಬ್ಬರಿಗೂ 10 ನಿಮಿಷದಲ್ಲಿ ಕಥೆ ಕೊಡುತ್ತೇನೆ. ಬೈಕ್ ಮೇಲೆಯೇ ಕಥೆ ಕೊಡುತ್ತೇನೆ. ನಾ ನಿನ್ನ ಮರೆಯಲಾರೆ ರೀತಿ ಇರಬೇಕು. ಎರಡು ತಿಂಗಳು ಇವರಿಬ್ಬರಿಗೂ ಟ್ರೈನಿಂಗ್ ನೀಡಿ ಮಾಡಿದರೆ ಸರಿಯಾಗಿ ಮಾಡಬಹುದು. ನಾನು ಸಿನಿಮಾವನ್ನು ನಿರ್ದೇಶಿಸುತ್ತೇನೆ. ಶಮಂತ್ ಸಂಗೀತಾ ನೀಡುತ್ತಾನೆ. ಪ್ರಶಾಂತ್ ನಿರ್ಮಾಣ ಮಾಡುತ್ತಾನೆ. ಇನ್ನೂ ಸಿನಿಮಾದ ಟೈಟಲ್ ‘ಅರ್ವಿಯಾ’ ಎಂದು ಹೇಳುತ್ತಾರೆ.

    ಈ ವೇಳೆ ಶಮಂತ್ ನಾನು ಹೀರೋಯಿನ್ ತಮ್ಮ ಎಂದು ಹೇಳುತ್ತಾರೆ. ಆಗ ಚಕ್ರವರ್ತಿ ಚಂದ್ರಚೂಡ್ ನಾನು ನಿನಗೆ ಕ್ಯಾರೆಕ್ಟರ್ ನೀಡುತ್ತೇನೆ ಸುಮ್ಮನೆ ಇರು ಬಾಯಿ ಮುಚ್ಚಿಸುತ್ತಾರೆ. ಆಗ ಪ್ರಶಾಂತ್ ನಾನು ಹೀರೋ ಅಣ್ಣಾನಾ ಎಂದು ಕೇಳುತ್ತಾರೆ. ಕ್ಯಾರೆಕ್ಟರ್ ಬೇಕೆಂದರೆ ಕಥೆ ಆದ ನಂತರ ನನ್ನ ಬಳಿ ರಿಕ್ವೆಸ್ಟ್ ಮಾಡಿಕೊಂಡರೆ ಕೊಡುತ್ತೇನೆ ಎಂದು ಹೇಳುತ್ತಾ ನಗುತ್ತಾರೆ.

    ಸಿನಿಮಾದಲ್ಲಿ ಬಿಗ್‍ಬಾಸ್ ಮನೆಯಲ್ಲಿ ರಿಂಗ್ ನೀಡಿ ಇಬ್ಬರು ಹೇಗೆ ಒಂದಾದರೋ ಅದೊಂದು ಎಪಿಸೋಡ್ ತೆಗೆದುಕೊಳ್ಳಬಹುದು. ನಾನು ಮಾಡೇ ಮಾಡುತ್ತೇನೆ. ಹೊರಗಡೆ ಹೋಗಿದ ತಕ್ಷಣ ನೀವು ಎರಡು ತಿಂಗಳಿನಲ್ಲಿ ರೆಡಿಯಾಗಬೇಕು. ಅರವಿಂದ್‍ಗೆ ಆ್ಯಕ್ಟಿಂಗ್ ಕ್ಲಾಸ್ ನಾನೇ ತೆಗೆದುಕೊಳ್ಳುತ್ತೇನೆ ಅಂತ ಚಕ್ರವರ್ತಿ ಚಂದ್ರಚೂಡ್ ಹೇಳಿದ್ದಾರೆ. ಇದನ್ನೂ ಓದಿ:  ನೀನು ನನಗೆ ಅಡ್ವೈಸ್ ಮಾಡಬೇಡ: ನಿಧಿಗೆ ಶುಭಾ ಟಾಂಗ್