Tag: ಪ್ರಹ್ಲಾದ್ ಜೋಶಿ

  • ಸಿದ್ದಲಿಂಗಯ್ಯರನ್ನು ರಾಷ್ಟ್ರಕವಿಯಾಗಿ ಘೋಷಣೆ ವಿಚಾರ ಸರ್ಕಾರದೊಂದಿಗೆ ಚರ್ಚಿಸುತ್ತೇನೆ: ಜೋಶಿ

    ಸಿದ್ದಲಿಂಗಯ್ಯರನ್ನು ರಾಷ್ಟ್ರಕವಿಯಾಗಿ ಘೋಷಣೆ ವಿಚಾರ ಸರ್ಕಾರದೊಂದಿಗೆ ಚರ್ಚಿಸುತ್ತೇನೆ: ಜೋಶಿ

    ಬೆಂಗಳೂರು: ಜೂನ್ 11 ರಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ಕವಿ ಸಿದ್ದಲಿಂಗಯ್ಯ ಅವರನ್ನು ರಾಷ್ಟ್ರಕವಿಯಾಗಿ ಘೋಷಣೆ ಮಾಡುವ ವಿಚಾರವಾಗಿ ನಾನು ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ಚರ್ಚಿಸುತ್ತೇನೆ ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ.

    ಆರ್.ಆರ್ ನಗರದ ಸಿದ್ದಲಿಂಗಯ್ಯರ ಬನವಾಸಿ ನಿವಾಸಕ್ಕೆ ಶಾಸಕ ಮುನಿರತ್ನ ಅವರೊಂದಿಗೆ ಭೇಟಿ ನೀಡಿದ ಪ್ರಹ್ಲಾದ್ ಜೋಶಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಕುಟುಂಬದ ಜೊತೆ ಕೆಲ ಹೊತ್ತು ಕುಶಲೋಪರಿ ವಿಚಾರಿಸಿದರು. ಇದೇ ವೇಳೆ ಸಿದ್ದಲಿಂಗಯ್ಯ ಅಭಿಮಾನಿಗಳಿಂದ ಸಿದ್ದಲಿಂಗಯ್ಯರನ್ನು ರಾಷ್ಟ್ರಕವಿ ಎಂದು ಘೋಷಣೆ ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದರು. ಇದನ್ನೂ ಓದಿ: ‘ಊರುಕೇರಿ’ ತೊರೆದು ಹೋದ ಸಿದ್ದಲಿಂಗಯ್ಯ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಶಿ, ಸಿದ್ದಲಿಂಗಯ್ಯನವರು ಬಹಳ ಸಂಕಷ್ಟದಿಂದ, ಬಡತನದ ಹಿನ್ನೆಲೆಯಿಂದ ಬಂದಿದ್ದರು ಸಹ ಸಮಾಜದ ಒಳಿತಿಗಾಗಿ ಶ್ರಮಿಸಿದ್ದರು. ಸಮಾಜದಲ್ಲಿ ತುಳಿತಕ್ಕೆ ಒಳಗಾದ ಸಮುದಾಯವನ್ನು ಮೇಲೆತ್ತಲು ಸಿದ್ದಲಿಂಗಯ್ಯನವರು ಕಾರಣರಾಗಿದ್ದರು. ಸಮಾಜದಲ್ಲಿ ಎಲ್ಲ ವರ್ಗದವರ ಅಭಿಮಾನಗಳಿಸಿದ್ದರು. ಅವರ ನೆನಪಿನಲ್ಲಿ ಒಂದಷ್ಟು ಒಳ್ಳೆಯ ಕೆಲಸ ಮಾಡಲು ನಿರ್ಧಾರಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೊಂದಿಗೂ ಚರ್ಚೆಯಾಗಿದೆ. ಅವರ ನೆನಪಿನಲ್ಲಿ ಅಧ್ಯಯನ ಕೇಂದ್ರ ಸ್ಥಾಪನೆಗೆ ಸರ್ಕಾರದಿಂದ ಸ್ಥಳ ಸಹ ಮೀಸಲಿಡಲು ಚರ್ಚೆಯಾಗಿದೆ. ಅಭಿಮಾನಿಗಳ ಇಚ್ಚೆಯಂತೆ ರಾಷ್ಟ್ರ ಕವಿ ಎಂದು ಘೋಷಣೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದರು.

  • ಕಾಂಗ್ರೆಸ್ ಹಣ, ಹೆಣದ ಮೇಲೆ ರಾಜಕೀಯ ಮಾಡುತ್ತೆ – ಪ್ರಹ್ಲಾದ್ ಜೋಶಿ

    ಕಾಂಗ್ರೆಸ್ ಹಣ, ಹೆಣದ ಮೇಲೆ ರಾಜಕೀಯ ಮಾಡುತ್ತೆ – ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಕೋವಿಡ್ ನಿರ್ವಹಣೆ ವಿಚಾರವಾಗಿ ಕಾಂಗ್ರೆಸ್ ಸುಳ್ಳು ಆರೋಪಗಳನ್ನ ಮಾಡುತ್ತಿದೆ. ಕಾಂಗ್ರೆಸ್ ನವರು ಹಣ ಮತ್ತು ಹೆಣದ ಮೇಲೆ ರಾಜಕೀಯ ಮಾಡುತ್ತಾರೆ. ನಮ್ಮ ದೇಶದಲ್ಲಿ ಹೊರತು ಬೇರೆ ಯಾವುದೇ ದೇಶದಲ್ಲಿ ಕೋವಿಡ್ ವಿಚಾರದಲ್ಲಿ ರಾಜಕಾರಣ ಮಾಡಿಲ್ಲವೆಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಹುಬ್ಬಳ್ಳಿಯಲ್ಲಿಂದು ಯಂಗ್ ಇಂಡಿಯಾ ಸಂಸ್ಥೆ ಅನುಷ್ಠಾನಕ್ಕೆ ತಂದ ಸ್ವಯಂಚಾಲಿತ ಮಾಸ್ಕ್ ಮಷೀನ್ ಉದ್ಘಾಟನೆ ಮಾಡಿ ಮಾತನಾಡಿದ ಜೋಶಿ ಅವರು, ಕಾಂಗ್ರೆಸ್ ಆಡಳಿತ ಇರುವ ರಾಜಸ್ಥಾನ ಮತ್ತು ಪಂಜಾಬ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್ ವೇಸ್ಟ್ ಆಗಿದೆ. ಆದರೂ ಕೋವಿಡ್ ನಿರ್ವಹಣೆ ವಿಚಾರವಾಗಿ ಕಾಂಗ್ರೆಸ್ ನಾಯಕರು ವ್ಯರ್ಥ ಆರೋಪಗಳನ್ನು ಮಾಡುತ್ತಿದ್ದಾರೆ. ನೂರಾರು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಪಕ್ಷಕ್ಕೆ ಎರಡು ವರ್ಷವಾದರೂ ತಮ್ಮ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ನವರು ಕೇವಲ ಬೇಜಾವಾಬ್ದಾರಿತನದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಒಬ್ಬ ಅಸಮರ್ಥ ನಾಯಕನಾಗಿದ್ದಾನೆ. ಹೀಗಾಗಿ ಆ ಪಕ್ಷ ಅವನತಿಯತ್ತ ಸಾಗಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ :ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು: ಜೋಶಿ

    ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ ಆಗಿದೆ. ಯೋಗಿ ಆದಿತ್ಯನಾಥ್ ಅವರು ಒಳ್ಳೆಯ ನಾಯಕ. ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಯೋಗಿ ಆದಿತ್ಯನಾಥ್‍ರನ್ನು ಸರ್ಮಥನೆ ಮಾಡಿಕೊಂಡರು. ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿ, ಈ ಬಗ್ಗೆ ನಮ್ಮ ಮಟ್ಟದಲ್ಲಿ ಚರ್ಚೆ ಆಗುವುದಿಲ್ಲ. ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಯಾವಾಗ ಅವಶ್ಯಕತೆ ಇದೆ ಅವಾಗ ಕೇಂದ್ರದ ನಾಯಕರು ವಿಸ್ತರಣೆ ಮಾಡುತ್ತಾರೆ ಎಂದರು.

  • ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು: ಜೋಶಿ

    ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು: ಜೋಶಿ

    – 13 ದಿನಗಳಲ್ಲಿ ನಿರ್ಮಾಣವಾದ ಸುಸಜ್ಜಿತ ಆಸ್ಪತ್ರೆ

    ಹುಬ್ಬಳ್ಳಿ: ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ವಹಿಸಿಕೊಂಡಿದೆ. ಇನ್ನು ಮುಂದೆ ಲಸಿಕೆ ಸಮಸ್ಯೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದರು.

    ನಗರದ ಕಿಮ್ಸ್ ಆವರಣದಲ್ಲಿ ವೇದಾಂತ ಆಸ್ಪತ್ರೆ ನಿರ್ಮಿಸಿರುವ 100 ಹಾಸಿಗೆಯ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೊದಲು ಲಸಿಕೆ ಹಾಕಲು ಕೇಂದ್ರ ಸರ್ಕಾರ ಸಿದ್ಧವಿತ್ತು. ಆದರೆ ಕೆಲ ರಾಜ್ಯಗಳು ತಾವೇ ಲಸಿಕೆ ನೀಡುವುದಾಗಿ ಹೇಳಿದ್ದವು. ಹೀಗಾಗಿ ರಾಜ್ಯಗಳಿಗೆ ಜವಾಬ್ದಾರಿ ನೀಡಲಾಗಿತ್ತು. ಇದೀಗ ಮತ್ತೆ ಲಸಿಕೆ ನೀಡಲು ಕೇಂದ್ರಕ್ಕೆ ಮನವಿ ಮಾಡಿವೆ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿಯನ್ನು ಕೇಂದ್ರವೇ ಹೊತ್ತುಕೊಂಡಿದೆ. ಜೂ.21ರಿಂದ ಲಸಿಕೆ ನೀಡಲು ಶುರುಮಾಡಲಾಗುವುದು. ನವೆಂಬರ್- ಡಿಸೆಂಬರ್ ನೊಳಗೆ ಎಲ್ಲರಿಗೂ ಲಸಿಕೆ ನೀಡುವುದನ್ನು ಪೂರ್ಣಗೊಳಿಸಲಾಗುವುದು ಎಂದರು.

    ಕೊರೊನಾ 3ನೇ ಅಲೆ ಬರುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಎದುರಿಸಲು ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. 2ನೇ ಅಲೆ ಬರುತ್ತದೆ ಎಂದು ತಜ್ಞರ ತಂಡ ತಿಳಿಸಿತ್ತು. ಆದರೆ ಇಷ್ಟೊಂದು ಗಂಭೀರವಾಗಿರುತ್ತದೆ. ಇಷ್ಟೊಂದು ಸಮಸ್ಯೆಯಾಗುತ್ತದೆ ಎಂದು ಯಾವ ತಜ್ಞರೂ ತಿಳಿಸಿರಲಿಲ್ಲ. ಹೀಗಾಗಿ ಪ್ರಾರಂಭದಲ್ಲಿ ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆಯಾಗಿತ್ತು. ಮೊದಲು ಇದ್ದ ಆಕ್ಸಿಜನ್ ಬೇಡಿಕೆಗೂ ಕೊರೊನಾ ತೀವ್ರವಾದಾಗ ಆಕ್ಸಿಜನ್ ಬೇಡಿಕೆ ಅಜಗಜಾಂತರವಾಗಿತ್ತು. ಬರೀ 8-10 ದಿನಗಳಲ್ಲಿ ಆಕ್ಸಿಜನ್ ಸಮಸ್ಯೆ ನಿರ್ವಹಿಸಿದೆವು. ವಿದೇಶಗಳಿಂದಲೂ ತರಿಸಿಕೊಂಡೆವು. ಇಲ್ಲೂ ಉತ್ಪಾದನೆ ಹೆಚ್ಚಿಸಿದೆವು. ಇದೀಗ ಆಕ್ಸಿಜನ್ ಸೇರಿದಂತೆ ಯಾವ ಸಮಸ್ಯೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಎಲ್ಲ ವಿಷಯವನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆಗಳಲ್ಲಿ ಗಾಳಿ ಮೂಲಕ ಆಕ್ಸಿಜನ್ ಉತ್ಪಾದನೆ ಮಾಡಲು ಘಟಕಗಳನ್ನು ನಿರ್ಮಿಸಿಕೊಂಡಿದ್ದೇವೆ. 42 ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್‍ಗಳನ್ನು ಮಾಡಲಾಗಿದೆ. ಮುಂದೆ ಯಾವುದೇ ಕಾರಣಕ್ಕೂ ಆಕ್ಸಿಜನ್ ಕೊರತೆಯಾಗದಂತೆ ನಿರ್ವಹಣೆ ಮಾಡುತ್ತೇವೆ. ವಿರೋಧ ಪಕ್ಷಗಳು ವಿನಾಕಾರಣ ಟೀಕಿಸುತ್ತಿವೆ. ಕೋವಿಡ್ ವಿಷಯದಲ್ಲಿ ರಾಜಕಾರಣ ಸಲ್ಲದು ಎಂದರು.

    ವೇದಾಂತ ಆಸ್ಪತ್ರೆ ಕುರಿತು ಮಾತನಾಡಿದ ಪ್ರಹ್ಲಾದ್ ಜೋಶಿ, ಸದ್ಯ 2ನೇ ಅಲೆ ನಿಯಂತ್ರಣದಲ್ಲಿದೆ. ಈ ವೇಳೆ ಆಸ್ಪತ್ರೆ ಅಗತ್ಯವಿತ್ತಾ ಎಂಬ ಪ್ರಶ್ನೆಯನ್ನೂ ಕೆಲವರು ಕೇಳಿದ್ದಾರೆ. ಆದರೆ ವೇದಾಂತ ಕಂಪನಿಯವರು ನಮ್ಮ ಮನವಿ ಮೇರೆಗೆ ಆಸ್ಪತ್ರೆ ನಿರ್ಮಿಸಿಕೊಟ್ಟಿದ್ದಾರೆ. ಮೊದಲೇ ನಿರ್ಮಿಸಿ ಕೊಡಲು ಸಿದ್ಧವಿದ್ದರು. ಆದರೆ ಎಲ್ಲಿ ನಿರ್ಮಿಸಬೇಕೆಂಬ ಗೊಂದಲದಿಂದಾಗಿ ಕೊಂಚ ತಡವಾಯಿತು. 2ನೇ ಅಲೆಯ ಕೋವಿಡ್ ಸೋಂಕಿತರು ಕಡಿಮೆಯಾಗುತ್ತಿದ್ದಾರೆ. ಅವರನ್ನು ಇಲ್ಲಿಗೆ ಸ್ಥಳಾಂತರಿಸಿ ಅನ್ಯ ರೋಗಿಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಬಹುದಾಗಿದೆ. ಅಲ್ಲದೆ 3ನೇ ಅಲೆ ಬರುತ್ತದೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಈ ಆಸ್ಪತ್ರೆಯನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದರು.

    ಮೇಕ್ ಶಿಪ್ಟ್ ನಡಿ ಬರೀ 13 ದಿನದಲ್ಲಿ ವೇದಾಂತ ಕಂಪನಿಯೂ ಈ ಆಸ್ಪತ್ರೆಯನ್ನು ನಿರ್ಮಿಸಿದ್ದು. ಇನ್ನೂ 15-20 ವರ್ಷ ಈ ಆಸ್ಪತ್ರೆ ಬಾಳಿಕೆಗೆ ಬರಲಿದೆ. ಅಲ್ಲಿವರೆಗೂ ಕಿಮ್ಸ್ ಆಡಳಿತ ಈ ಆಸ್ಪತ್ರೆಯನ್ನು ಬಳಸಿಕೊಳ್ಳಬೇಕು. ವೈದ್ಯರು ಸೇರಿದಂತೆ ಸಿಬ್ಬಂದಿ, ಔಷಧಿಯನ್ನು ಕಿಮ್ಸ್ ಕೊಡಲಿದೆ. ಉಳಿದ ನಿರ್ವಹಣೆಯನ್ನೂ ವೇದಾಂತ ಕಂಪನಿಯವರೇ ನಿರ್ವಹಿಸಲಿದ್ದಾರೆ ಎಂದು ಜೋಶಿ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ ನಮ್ಮ ಮನವಿಗೆ ಸ್ಪಂದಿಸಿ ಆಸ್ಪತ್ರೆ ನಿರ್ಮಿಸಿಕೊಟ್ಟಿದ್ದಕ್ಕೆ ವೇದಾಂತ ಕಂಪನಿಗೆ ಧನ್ಯವಾದ ಅರ್ಪಿಸಿದ್ದಾರೆ.

    ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಮೊದಲು ಇದ್ದ ಆಕ್ಸಿಜನ್ ಬೇಡಿಕೆ ಈಗಿಲ್ಲ. ಆಸ್ಪತ್ರೆಗೆ ಅಗತ್ಯವಿರುವಷ್ಟು ಬಳಸಿಕೊಂಡು ಉಳಿದ ಆಕ್ಸಿಜನ್‍ನ್ನು ಕೈಗಾರಿಕೆಗಳಿಗೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೋವಿಡ್ ವಿಷಯದಲ್ಲಿ ಸಾಕಷ್ಟು ನಿಯಂತ್ರಣ ಸಾಧಿಸಿದ್ದೇವೆ. ಪಾಸಿಟಿವಿಟಿ ದರ ಇಳಿಕೆಯಾಗಿದೆ. 14ರಿಂದ ಅನ್‍ಲಾಕ್ ಮಾಡಲಾಗುತ್ತಿದೆ, ಹಾಗಂತ ಜನತೆ ಮೈಮರೆಯಬಾರದು. ಇನ್ನು ಮುಂದೆಯೂ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮುಂದುವರಿಸಬೇಕು ಎಂದರು.

    ಬ್ಲ್ಯಾಕ್ ಫಂಗಸ್ ನಿಯಂತ್ರಣವಾಗುತ್ತಿದೆ. ಬ್ಲ್ಯಾಕ್ ಫಂಗಸ್ ರೋಗಿಗಳು ಗುಣಮುಖರಾಗುತ್ತಿದ್ದಾರೆ. ಅದಕ್ಕೆ ಬೇಕಾದ ವೈಯಲ್ಸ್ ಗಳು ಲಭ್ಯವಾಗುತ್ತಿವೆ. ಕೋವಿಡ್ ವಿಷಯದಲ್ಲಿ ಕಿಮ್ಸ್ ಕಾರ್ಯ ಶ್ಲಾಘನೀಯ ಎಂದರು.

    ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಕೋವಿಡ್ ವಿಷಯದಲ್ಲಿ ಯಾರೂ ರಾಜಕಾರಣ ಮಾಡಬಾರದು. ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಅದರೊಂದಿಗೆ ಕೈಜೋಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಶಾಸಕರಾದ ಪ್ರದೀಪ್ ಶೆಟ್ಟರ್, ಅಮೃತ್ ದೇಸಾಯಿ, ಪ್ರಸಾದ ಅಬ್ಬಯ್ಯ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೇರಿದಂತೆ ಇತರರು ಇದ್ದರು. ಲಂಡನ್‍ನಲ್ಲಿರುವ ವೇದಾಂತ ಕಂಪನಿಯ ಚೇರಮನ್ ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    ವೇದಾಂತ ಕಂಪನಿಯ ಚೇರಮನ್ ಅನಿಲ್ ಅಗ್ರವಾಲ್ ಮಾತನಾಡಿ, ಕೋವಿಡ್ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಉತ್ತಮ ಕೆಲಸ ಮಾಡಿದೆ. ಅದರಲ್ಲೂ ಧಾರವಾಡ ಜಿಲ್ಲೆಯಲ್ಲಿ ಯಾವೊಂದು ಸಮಸ್ಯೆಯಾಗದಂತೆ ಕೋವಿಡ್ ನಿರ್ವಹಿಸಿರುವುದು ಶ್ಲಾಘನೀಯ. ಇದಕ್ಕಾಗಿ ಅಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಅಭಿನಂದನೆ ತಿಳಿಸುವುದಾಗಿ ಹೇಳಿದರು.

    ರಾಜ್ಯದಲ್ಲಿ ಎರಡು ಆಸ್ಪತ್ರೆಗಳನ್ನು ನಿರ್ಮಿಸಿಕೊಟ್ಟಿದ್ದೇವೆ. ಕೋವಿಡ್ ಆಸ್ಪತ್ರೆ ನಿರ್ಮಿಸಿಕೊಡಲು ತಮ್ಮ ಕಂಪನಿಗೆ ಅವಕಾಶ ಕೊಟ್ಟಿದ್ದು ನಮಗೆ ಸಂತಸವನ್ನುಂಟು ಮಾಡಿದೆ. ಸಾಮಾಜಿಕ ಕಾರ್ಯದ ವಿಷಯದಲ್ಲಿ ಇನ್ನೂ ಏನಾದರೂ ನೆರವು ಬೇಕಾದರೆ ನಿಸ್ಸಂದೇಹವಾಗಿ ಮಾಡಿಕೊಡಲು ಸಿದ್ಧ ಎಂದರು.

    ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಅಮೃತ ದೇಸಾಯಿ, ಪ್ರಸಾದ ಅಬ್ಬಯ್ಯ, ಪ್ರದೀಪ ಶೆಟ್ಟರ್, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಸೇರಿದಂತೆ ಹಲವರಿದ್ದರು.

    13 ದಿನದಲ್ಲಿ ನಿರ್ಮಾಣವಾದ ಸುಸಜ್ಜಿತ ಆಸ್ಪತ್ರೆ
    ಚಿತ್ರದುರ್ಗದ ವೇದಾಂತ ಕಂಪನಿಯ ಅನಿಲ್ ಅಗರವಾಲ್ ಪೌಂಡೇಷನ್ ಕೋವಿಡ್ ನೆರವು ನೀಡುವುದಕ್ಕಾಗಿ ದೇಶದಲ್ಲಿ ಒಟ್ಟು ಹತ್ತು ಆಸ್ಪತ್ರೆಯನ್ನು ನಿರ್ಮಿಸಿಕೊಟ್ಟಿದೆ. ರಾಜ್ಯದ ಚಿತ್ರದುರ್ಗ ಹಾಗೂ ಹುಬ್ಬಳ್ಳಿ ಕಿಮ್ಸ್ ನಲ್ಲಿ ಸುಸಜ್ಜಿತವಾದ ಆಸ್ಪತ್ರೆ ನಿರ್ಮಿಸಿದೆ. ಕಿಮ್ಸ್ ನಲ್ಲಿನ ಆಸ್ಪತ್ರೆ 100 ಹಾಸಿಗೆಯ ಆಸ್ಪತ್ರೆ. ಇದರಲ್ಲಿ 80 ಆಕ್ಸಿಜನ್ ಬೆಡ್‍ಗಳಿದ್ದರೆ, 20 ಐಸಿಯು ಬೆಡ್‍ಗಳಿವೆ. 20 ಐಸಿಯು ಬೆಡ್‍ಗಳ ಪೈಕಿ 10 ವೆಂಟಿಲೇಟರ್ ಬೆಡ್ ಗಳನ್ನು ನಿರ್ಮಾಣ ಮಾಡಲಾಗಿದೆ.

  • ನಮ್ಮಲ್ಲಿ ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ: ಕೇಂದ್ರ ಸಚಿವ ಜೋಶಿ

    ನಮ್ಮಲ್ಲಿ ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ: ಕೇಂದ್ರ ಸಚಿವ ಜೋಶಿ

    ಧಾರವಾಡ: ನಮ್ಮಲ್ಲಿ ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ, ಸದ್ಯ ನಮ್ಮ ಆದ್ಯತೆ ಕೋವಿಡ್ ನಿಯಂತ್ರಣ ಮಾಡುವದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

    ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಈಗ ಯಾವುದೇ ಸಿಎಂ ಮತ್ತು ನಾಯಕತ್ವ ಬದಲಾವಣೆ ಇಲ್ಲ, ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ನಾಯಕರಲ್ಲಿ ಚರ್ಚೆಯೂ ನಡೆದಿಲ್ಲ. ನಾನು ಸಿಎಂ ಸ್ಥಾನದ ಆಕಾಂಕ್ಷಿ ಅನ್ನೋದು ವದಂತಿ ಮಾತ್ರ ಎಂದ ಅವರು, ಪ್ರಧಾನಿ ನರೇಂದ್ರ ಮೋದಿಯಂತಹ ಶ್ರೇಷ್ಠ ನಾಯಕರ ಅಡಿಯಲ್ಲಿ ಕೆಲಸ ಮಾಡುತ್ತಿರುವೆ, ಬಹಳ ಸಂತೋಷ ಮತ್ತು ಅಭಿಮಾನದಿಂದ ಕೆಲಸ ಮಾಡುತ್ತಿದ್ದೇನೆ ಎಂದರು.

    ಇಲ್ಲಿ ಯಡಿಯೂರಪ್ಪವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಇದೆಲ್ಲವೂ ಉಹಾಪೋಹಗಳು. ಸಿಎಂ ಹೇಳಿಕೆ ವಿಚಾರ ನಿನ್ನೆಯೇ ಮುಗಿದ ಅಧ್ಯಾಯ, ಪ್ರತಿ ವಾರದಂತೆ ಇವತ್ತು ನಾನು ದೆಹಲಿಗೆ ಹೊರಟಿರುವೆ. ನನ್ನ ಕೇಂದ್ರ ಸ್ಥಾನ ಇರುವ ಕಾರಣಕ್ಕೆ ದೆಹಲಿಗೆ ಹೊರಟಿರುವೆ. ಯಡಿಯೂರಪ್ಪ ಯಾವ ಹಿನ್ನೆಲೆಯಲ್ಲಿ ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದಾರೆ ಗೊತ್ತಿಲ್ಲ. ಆದರೂ ಅವರ ಹೇಳಿಕೆಯಲ್ಲಿ ಬೇರೆ ಅರ್ಥ ಏನಿಲ್ಲ ಎಂದು ಹೇಳಿದರು.

    ಸಿಎಂ ರೇಸ್‍ನಲ್ಲಿ ಬೆಲ್ಲದ್ ಹೆಸರು:
    ಸಿಎಂ ರೇಸ್‍ನಲ್ಲಿ ಅರವಿಂದ್ ಬೆಲ್ಲದ ಇದ್ದಾರೆ, ಸಹಿ ಸಂಗ್ರಹ ಮಾಡಿದ್ದಾರೆ ಎಂಬ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರೇಣುಕಾಚಾರ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲಾರೆ. ಅದರ ಬಗ್ಗೆ ನಾನು ಏನೂ ಹೇಳಲಾರೆ ಎಂದರು. ಯಾವುದೇ ಸಹಿ ಸಂಗ್ರಹವನ್ನು ಹೈಕಮಾಂಡ್ ಸಹಿಸುವುದಿಲ್ಲ. ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ ಸಂಗ್ರಹ ಆಗಿಯೇ ಇಲ್ಲ. ಒಂದೇ ಸಹಿ ಸಂಗ್ರಹ ನಡೆದಿತ್ತು. ಅದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದು ಮಾತ್ರ. ಸದನ ಸದನ ನಡೆದಾಗ ಸಹಿ ಮಾಡಿದ್ದೇವೆ. ಅದೊಂದೆ ಸಹಿ ಸಂಗ್ರಹ ನಡೆದಿದೆ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಸಿಎಂ ರಾಜೀನಾಮೆ ಮಾತುಗಳ ಹಿಂದಿನ ರಹಸ್ಯ ತಿಳಿಸಿದ ಶಾಸಕ ರಾಜೂಗೌಡ

    ನಮ್ಮದು ಶಿಸ್ತಿನ ಪಕ್ಷವಾಗಿದ್ದು, ಇಲ್ಲಿ ಸಹಿ ಸಂಗ್ರಹಕ್ಕೆ ಅವಕಾಶ ಇಲ್ಲ. ಹಾಗೆ ಮಾಡಿದವರ ಮೇಲೆ ಹೈಕಮಾಂಡ್ ಕ್ರಮ ಕೈಗೊಳ್ಳುತ್ತದೆ. ಪಕ್ಷದ ಶಾಸಕಾಂಗ ಸಭೆಯಲ್ಲೇ ಏನೇ ಇದ್ದರೂ ಚರ್ಚೆ ನಡೆಯುತ್ತದೆ. ಗ್ರಾಮೀಣದ ರಸ್ತೆ, ಗ್ರಾಮಿಣ ಭಾಗಕ್ಕೆ ಸಂಬಂಧಿಸಿದ ಶಾಸಕರ ಸಹಿ ಅದು. ನನ್ನ ಕ್ಷೇತ್ರದಲ್ಲಿ ಏನು ಮಾಡಬೇಕು ನಾನು ಮಾಡುತ್ತಿರುವೆ ಎಂದು ಉತ್ತರಿಸಿದರು. ಇದನ್ನೂ ಓದಿ: ಸಿಎಂ ರೇಸ್ ಬಗ್ಗೆ ನಾನು ಹೇಳಿಕೆ ನೀಡಲ್ಲ, 1 ಸಹಿ ಸಂಗ್ರಹ ನಡೆದಿತ್ತು: ಬೆಲ್ಲದ

    ಸಿಎಂ ಹೇಳಿದ್ದೇನು?: ನಾನು ಯಾರ ಬಗ್ಗೆಯೂ ಟೀಕೆ ಮಾಡಲು ಹೋಗುವುದಿಲ್ಲ. ಬಿಜೆಪಿಗೆ ಪರ್ಯಾಯದ ವ್ಯಕ್ತಿ ಇಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ. ರಾಜ್ಯದಲ್ಲಿ ದೇಶದಲ್ಲಿ ಪರ್ಯಾಯ ನಾಯಕರು ಇದ್ದಾರೆ. ಕರ್ನಾಟಕದಲ್ಲೂ ಪರ್ಯಾಯ ವ್ಯಕ್ತಿಗಳು ಇಲ್ಲ ಎನ್ನುವುದನ್ನು ನಾನು ಒಪ್ಪುವುದಿಲ್ಲ. ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ಎಲ್ಲಿಯವರೆಗೆ ಹೈಕಮಾಂಡ್ ವಿಶ್ವಾಸ ಇರುತ್ತೋ ಅಲ್ಲಿವರೆಗೂ ನಾನು ಸಿಎಂ ಆಗಿರುತ್ತೇನೆ ಎಂದು ಹೇಳಿದ್ದರು.

  • ರೇಲ್ವೆ ಮೇಲ್ಸೇತುವೆ ಕಳಪೆ ಕಾಮಗಾರಿ- ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಜೋಶಿ ಆದೇಶ

    ರೇಲ್ವೆ ಮೇಲ್ಸೇತುವೆ ಕಳಪೆ ಕಾಮಗಾರಿ- ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಜೋಶಿ ಆದೇಶ

    ಹುಬ್ಬಳ್ಳಿ: ಲಕ್ಷ್ಮೇಶ್ವರ-ಮುನವಳ್ಳಿ ರಾಜ್ಯ ಹೆದ್ದಾರಿಯಲ್ಲಿ ಕುಂದಗೋಳ ತಾಲೂಕಿನ ಶಿರೂರ ಗ್ರಾಮದ ಬಳಿ ನಿರ್ಮಿಸಿರುವ ರೇಲ್ವೇ ಮೇಲ್ಸೇತುವೆ, ಪೂರ್ಣಗೊಂಡು ಹಸ್ತಾಂತರವಾದ 6 ರಿಂದ 7 ತಿಂಗಳಲ್ಲಿ ಹಾನಿಯಾಗಿದ್ದು, ಕಳಪೆ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಕಾಮಗಾರಿ ಕೈಗೊಂಡ ಗುತ್ತಿಗೆದಾರರು, ನಿರ್ವಹಿಸಿದ ಅಂದಿನ ಕೆಆರ್‍ಡಿಸಿಎಲ್ ಅಧಿಕಾರಿಗಳನ್ನು ಹೊಣೆ ಮಾಡಬೇಕು. ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವ ಕುರಿತು ವಿವರವಾದ ವರದಿಯನ್ನು ಸರ್ಕಾರಕ್ಕೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

    ಶಿರೂರ ಬಳಿ ಹಾನಿಗೀಡಾಗಿರುವ ರೇಲ್ವೆ ಮೇಲ್ಸೇತುವೆ ಸ್ಥಳಕ್ಕೆ ಭೇಟಿ ನೀಡಿ, ವೀಕ್ಷಣೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೇತುವೆ ಒಂದೇ ದಿನದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಾನಿಗೀಡಾಗಲು ಸಾಧ್ಯವಿಲ್ಲ. ಕಾಮಗಾರಿ ಕಳಪೆಯಾಗಿದೆ, ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಸಚಿವರೊಂದಿಗೂ ಚರ್ಚಿಸಲಾಗಿದೆ. ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಹಾಗೂ ವೆಚ್ಚ ಮಾಡಿದ ಹಣ ಮರು ವಸೂಲಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ವಿವರವಾದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದಾರೆ ಎಂದರು.

    ಶಾಸಕಿ ಕುಸುಮಾವತಿ ಶಿವಳ್ಳಿ ಮಾತನಾಡಿ, ಕಾಮಗಾರಿ ಶೀಘ್ರ ಪ್ರಾರಂಭಿಸಬೇಕು ಪೂರ್ಣ ಪ್ರಮಾಣದಲ್ಲಿ ವಾಹನ ಸಂಚಾರ ಪ್ರಾರಂಭವಾದರೆ ತೊಂದರೆಯಾಗುತ್ತದೆ. ಪರ್ಯಾಯ ರಸ್ತೆ ಕಲ್ಪಿಸಬೇಕು ಎಂದರು.

    ರಾಜ್ಯ ಕೃಷಿ ಉತ್ಪನ್ನ ರಫ್ತು ನಿಗಮದ ಅಧ್ಯಕ್ಷ ಎಸ್.ಐ.ಚಿಕ್ಕನಗೌಡರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಬಿ.ಚೌಡಣ್ಣವರ ಮತ್ತಿತರರು ಉಪಸ್ಥಿತರಿದ್ದರು.

    ಕುಂದಗೋಳ ತಾಲೂಕಿನಲ್ಲಿ 1,400 ಡೋಸ್ ಲಸಿಕೆ ಲಭ್ಯ
    ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ 500 ಹಾಗೂ ತಾಲೂಕಿನ 9 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿ ಒಟ್ಟು ತಾಲೂಕಿನಲ್ಲಿ 1,400 ಡೋಸ್ ಕೋವಿಡ್ ಲಸಿಕೆ ಲಭ್ಯ ಇದೆ. ಗ್ರಾಮೀಣ ಜನರು ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಂಡು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು. ನಗರ ಪ್ರದೇಶಗಳಲ್ಲಿ ಲಸಿಕೆಗೆ ಜನ ಸಾಕಷ್ಟು ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಗ್ರಾಮೀಣ ಜನರು ಅನಗತ್ಯವಾಗಿ ಭಯಪಡಬಾರದು. ಅಪಪ್ರಚಾರಗಳಿಗೆ ಕಿವಿಗೊಡಬಾರದು, ಲಸಿಕೆಯಿಂದ ಜೀವರಕ್ಷಣೆಯಾಗಲಿದೆ. ಗ್ರಾಮೀಣ ಜನ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಪ್ರಹ್ಲಾದ್ ಜೋಶಿ ಮನವಿ ಮಾಡಿದರು.

  • ಕೆಜಿಎಫ್‍ನ 120 ವರ್ಷದ ಹಳೆಯ ಆಸ್ಪತ್ರೆ ಜೀರ್ಣೋದ್ಧಾರ, ಲೋಕಾರ್ಪಣೆ

    ಕೆಜಿಎಫ್‍ನ 120 ವರ್ಷದ ಹಳೆಯ ಆಸ್ಪತ್ರೆ ಜೀರ್ಣೋದ್ಧಾರ, ಲೋಕಾರ್ಪಣೆ

    ಬೆಂಗಳೂರು: ಕೆಜಿಎಫ್‍ನ 120 ವರ್ಷದ ಹಳೆಯ ಬಿಜಿಎಂಎಲ್ ಆಸ್ಪತ್ರೆಯನ್ನು ಜೀರ್ಣೋದ್ಧಾರ ಮಾಡಲಾಗಿದ್ದು, ಇಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

    ಬಿಜೆಪಿ ಮತ್ತು ಆರ್‍ಎಸ್‍ಎಸ್ ಕಾರ್ಯಕರ್ತರ ಪರಿಶ್ರಮದಿಂದ ಕೆಜಿಎಫ್‍ನಲ್ಲಿ 120 ವರ್ಷಗಳ ಹಳೆಯ ಬಿಜಿಎಂಎಲ್ ಆಸ್ಪತ್ರೆಯನ್ನು ಜೀರ್ಣೋದ್ಧಾರ ಮಾಡಲಾಗಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೋಕಾರ್ಪಣೆ ಮಾಡಿದರು. ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಲಸಿಕೆ ಅಗತ್ಯವಿದೆ
    ಕೇಂದ್ರ ಸರ್ಕಾರದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಕೊಡಿಸಬೇಕು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಮಾಡಿದರು.

    ಒಂದೆಡೆ ಕೋವಿಡ್ ಸೋಂಕಿತರನ್ನು ಪತ್ತೆ ಮಾಡುತ್ತ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ವ್ಯಾಕ್ಸಿನೇಷನ್ ಕೂಡ ಸಾಗುತ್ತಿದೆ. ಎರಡನೇ ಅಲೆ ತೀವ್ರವಾಗಿರುವ ಈ ಸಂದರ್ಭದಲ್ಲಿ ಲಸಿಕೆ ಬಹಳ ಅಗತ್ಯವಾಗಿದೆ. ಲಸಿಕೆಯು ಜನರನ್ನು ಉಳಿಸಲಿದೆ ಮಾತ್ರವಲ್ಲದೆ, ಅವರ ಮನೋಸ್ಥೈರ್ಯವನ್ನೂ ಹೆಚ್ಚಿಸುತ್ತಿದೆ ಎಂದರು. ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಕೂಡಲೇ ಈ ಬಗ್ಗೆ ಸಂಬಂಧಟ್ಟ ಸಚಿವರು, ಅಧಿಕಾರಿಗಳ ಜೊತೆ ಮಾತನಾಡುವುದಾಗಿ ಭರವಸೆ ನೀಡಿದರು.

    ಹೊಸದಾಗಿ 30 ಸಾವಿರ ಆಕ್ಸಿಜನ್ ಬೆಡ್
    ಎರಡನೇ ಅಲೆ ತೀವ್ರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸದಾಗಿ 30 ಸಾವಿರ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿದೆ. ಈಗ ರಾಜ್ಯಾದ್ಯಂತ ಒಟ್ಟು 60 ಸಾವಿರ ಆಕ್ಸಿಜನ್ ಬೆಡ್‍ಗಳಿವೆ. ಗ್ರಾಮೀಣ ಮಟ್ಟದಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ ಸೇರಿ ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿರುವ ಆರೋಗ್ಯ ವ್ಯವಸ್ಥೆಯನ್ನು ಅತ್ಯುತ್ತಮಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಾ.ಅಶ್ವಥ್ ನಾರಾಯಣ್ ತಿಳಿಸಿದರು.

    ಹಳ್ಳಿ ಪ್ರದೇಶದಲ್ಲಿ ಮೂಲಸೌಕರ್ಯ ಹೆಚ್ಚಿಸುವುದು ಹಾಗೂ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಇಡೀ ದೇಶದಲ್ಲೇ ಕರ್ನಾಟಕ ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವಂತೆ ಮಾಡುವ ಪ್ರಯತ್ನ ನಡೆದಿದೆ ಎಂದರು.

    ರೆಡ್ ಝೋನ್‍ನಲ್ಲಿ ಕೋಲಾರ
    ಕೋವಿಡ್ ವಿಷಯದಲ್ಲಿ ಕೋಲಾರ ಜಿಲ್ಲೆ ಈಗ ರೆಡ್ ಝೋನ್‍ನಲ್ಲಿದೆ. ಸೋಂಕು ತಡೆಗೆ ಇನ್ನೂ ಹೆಚ್ಚಿನ ಕ್ರಮ ವಹಿಸಬೇಕಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕಿದೆ. ಸ್ಥಳೀಯ ಮಟ್ಟದಲ್ಲೇ ಟಾಸ್ಕ್‍ಪೋರ್ಸ್‍ಗಳನ್ನು ರಚನೆ ಮಾಡಿ ಮನೆಮನೆಗೂ ಹೋಗಿ ಸೋಂಕಿತರನ್ನು ಪತ್ತೆ ಮಾಡಬೇಕು. ಟೆಲಿ ಟ್ರಾಯಾಜಿಂಗ್ ಹಾಗೂ ಭೌತಿಕ ಟ್ರಾಯಾಜಿಂಗ್ ಹೆಚ್ಚಿಸಬೇಕು. ಮನೆ ಮನೆಯನ್ನೂ ಸಮೀಕ್ಷೆ ಮಾಡಬೇಕು ಎಂದು ಸಭೆಯಲ್ಲಿ ಹಾಜರಿದ್ದ ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಸೂಚಿಸಿದರು.

    ಸೋಂಕಿತರ ಸಂಪರ್ಕಿತರನ್ನು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಪತ್ತೆ ಹಚ್ಚಲಾಗುತ್ತಿದೆ. ಆದರೆ ಕೋವಿಡ್ ಪರೀಕ್ಷೆ ರಿಸಲ್ಟ್ ಕೊಡಲು ಎರಡು ದಿನಕ್ಕೂ ಹೆಚ್ಚಿನ ಸಮಯ ಆಗುತ್ತಿದೆ. 24 ಗಂಟೆಯೊಳಗೆ ಅಥವಾ ಅದಕ್ಕೂ ಮುನ್ನವೇ ರಿಸಲ್ಟ್ ಕೊಡುವ ವ್ಯವಸ್ಥೆ ಮಾಡಿ. ಇನ್ನು ಮುಂದೆ ಗ್ರಾಮೀಣ ಪ್ರದೇಶದಲ್ಲಿ ಯಾರನ್ನೂ ಹೋಮ್ ಐಸೋಲೇಶನ್ ಮಾಡಬೇಡಿ. ಎಲ್ಲರನ್ನೂ ಕಡ್ಡಾಯವಾಗಿ ಕೋವಿಡ್ ಕೇರ್ ಗೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡಿ ಎಂದು ಜಿಲ್ಲಾಧಿಕಾರಿಗೆ ಡಿಸಿಎಂ ಸೂಚಿಸಿದರು.

    ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೋಲಾರ ಸಂಸದ ಎಸ್.ಮುನಿಸ್ವಾಮಿ, ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಸೇರಿದಂತೆ ಮುಂತಾದವರು ಭಾಗಿಯಾಗಿದ್ದರು.

  • ಮೋದಿ ಟೀಕಿಸುವ ಭರದಲ್ಲಿ ಭಾರತಕ್ಕೆ ಅಪಮಾನ- ಜೋಶಿ ಆಕ್ರೋಶ

    ಮೋದಿ ಟೀಕಿಸುವ ಭರದಲ್ಲಿ ಭಾರತಕ್ಕೆ ಅಪಮಾನ- ಜೋಶಿ ಆಕ್ರೋಶ

    ಹುಬ್ಬಳ್ಳಿ: ಕಾಂಗ್ರೆಸ್ ದೇಶದ ಜನತೆಯ ಆತ್ಮಬಲ ಕುಗ್ಗಿಸುವ ಹಾಗೂ ದೇಶಕ್ಕೆ ಅಪಮಾನ ಮಾಡುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

    ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಾಂಗ್ರೆಸ್ ಮಾಡಿರುವ ಟೂಲ್ ಕಿಟ್ ವಿಚಾರಕ್ಕೆ ನಗರದಲ್ಲಿಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಜೋಶಿ, ಕೊರೊನಾ ವೈರಸ್ ಹುಟ್ಟಿದ್ದೇ ಚೀನಾದಲ್ಲಿ. ಆದರೆ ಕಾಂಗ್ರೆಸ್ ನಾಯಕರಾಗಲಿ, ಕಮ್ಯುನಿಸ್ಟ್ ನವರಾಗಲಿ ಅದನ್ನು ಚೀನಾ ವೈರಸ್ ಎನ್ನಲಿಲ್ಲ. ಬದಲಿಗೆ ಮೋದಿ ವೈರಸ್ ಎಂದು ಬಿಂಬಿಸಲು ಹೊರಟಿದ್ದಾರೆ. ಪ್ರಧಾನಿ ಮೋದಿಯವರನ್ನು ತೇಜೋವಧೆ ಮಾಡುವ ಭರದಲ್ಲಿ ಕಾಂಗ್ರೆಸ್ ನಾಯಕರು ಭಾರತಕ್ಕೆ ಅಪಮಾನ ಮಾಡುತ್ತಿದ್ದಾರೆ. ಭಾರತದ ಮಾನ, ಮರ್ಯಾದೆ ಹೋದರೂ ಚಿಂತೆಯಿಲ್ಲ, ಮೋದಿ ಅವರಿಗೆ ಡ್ಯಾಮೇಜ್ ಆದರೆ ಸಾಕು ಅಂತಿದ್ದಾರೆ. ಕಾಂಗ್ರೆಸ್ ಈ ರೀತಿಯ ಕೀಳುಮಟ್ಟದ ರಾಜಕಾರಣ ಮಾಡಬಾರದು ಎಂದು ಕಿಡಿಕಾರಿದರು.

    ಕೊರೊನಾವನ್ನು ಮೋದಿ ವೈರಸ್ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ. ಇದು ಕಾಂಗ್ರೆಸ್ ನ ಕ್ಷುಲ್ಲಕ ಮನೋಭಾವ ತೋರಿಸುತ್ತೆ, ಕಾಂಗ್ರೆಸ್ ದೇಶದಲ್ಲಿ ಯಾವ ಸ್ಥಿತಿಯಲ್ಲಿದೆ ಅನ್ನೋದನ್ನು ತಿಳಿದುಕೊಳ್ಳಬೇಕು ಎಂದು ಹರಿಹಾಯ್ದರು.

    ಲೋಕಸಭೆ ಚಳಿಗಾಲದ ಅಧಿವೇಶನ ನಡೆದೇ ನಡೆಯುತ್ತೆ. ಇದನ್ನು ಸಂಸತ್ ನಲ್ಲಿಯೇ ಚರ್ಚಿಸಬಹುದಾಗಿತ್ತು. ಈಗ ಜನರ ಮನೋಬಲ ಕುಗ್ಗಿಸುವ ಕೆಲಸ ಮಾಡಬಾರದಾಗಿತ್ತು. ದೇಶಕ್ಕೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡಬಾರದು. ಪಿಎಂ ಕೇರ್ ನಿಂದ ಖರೀದಿಸಿದ ವೆಂಟಿಲೆಟರ್ ಕಳಪೆ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ ಎಂದು ಇದೇ ವೇಳೆ ಬೇಸರ ವ್ಯಕ್ತಪಡಿಸಿದರು.

  • ವಿವಿಧ ಖಾಸಗಿ ಕಂಪನಿಗಳಿಂದ ಕಿಮ್ಸ್ ಗೆ 570 ಬೆಡ್ ಕೊಡುಗೆ

    ವಿವಿಧ ಖಾಸಗಿ ಕಂಪನಿಗಳಿಂದ ಕಿಮ್ಸ್ ಗೆ 570 ಬೆಡ್ ಕೊಡುಗೆ

    ಹುಬ್ಬಳ್ಳಿ: ಹುಬ್ಬಳ್ಳಿಯ ಉದ್ಯಮಿ ವಿ.ಎಸ್.ವಿ ಪ್ರಸಾದ್ ಒಡೆತನದ ಸ್ವರ್ಣ ಗ್ರೂಪ್ ಆಫ್ ಕಂಪನಿಸ್, ಹಾಗೂ ದೇಶಪಾಂಡೆ ಫೌಂಡೇಶನ್, ಟಾಟಾ ಹಿಟಾಚಿ, ಟಾಟಾ ಮಾರ್ಕೊಪೊಲೊ ಕಂಪನಿಗಳ ಸಾರ್ವಜನಿಕ ಹೊಣೆಗಾರಿಕೆ ನಿಧಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಇಂದು 570 ಬೆಡ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.

    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, 100 ಆಕ್ಸಿಜನ್ ಬೆಡ್‍ಗಳ ಕೋವಿಡ್ ಆಸ್ಪತ್ರೆಯನ್ನು ವೇದಾಂತ ಸಂಸ್ಥೆ ಯವರು ಕಿಮ್ಸ್ ಆವರಣದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ವಿವಿಧ ಜಿಲ್ಲೆಗಳಿಂದ ಆಗಮಿಸುವ ಕೋವಿಡ್ ರೋಗಿಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಒದಗಿಸಲಾಗುವುದು. ವಾತಾವರಣದಲ್ಲಿನ ಗಾಳಿಯಿಂದ ಆಕ್ಸಿಜನ್ ಹೀರಿ ಬೇರ್ಪಡಿಸಿ ರೋಗಿಗಳಿಗೆ ನೀಡುವ ಯಂತ್ರೋಪಕರಣಗಳನ್ನು ಖರೀದಿಸಲಾಗುತ್ತಿದೆ. ದೇಶದಲ್ಲಿ ಲಾಕ್‍ಡೌನ್ ಹೇರುವ ಬಗ್ಗೆ ತಜ್ಞರು ಸಲಹೆ ನೀಡುತ್ತಿದ್ದಾರೆ. ಈ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಬಿಜೆಪಿ ಅಸ್ಸಾಂ ಮತ್ತು ಪಾಂಡಿಚೇರಿಯಲ್ಲಿ ಸರ್ಕಾರ ರಚಿಸುವುದು ಖಚಿತ. ಪಶ್ಚಿಮ ಬಂಗಾಳದಲ್ಲಿ ಉತ್ತಮ ಸ್ಪರ್ಧೆಯನ್ನು ತೋರಿದೆ ಎಂದರು.

    ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಕೋವಿಡ್ ರೋಗಿಗಳ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಖಾಸಗಿ ಆಸ್ಪತ್ರೆಯವರಿಗೆ ಸೂಚನೆ ನೀಡಲಾಗಿದೆ. ಬೇರೆ ಜಿಲ್ಲೆಯಿಂದ ಕಿಮ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ಕೋವಿಡ್ ರೋಗಿಗಳು ದಾಖಲಾಗುತ್ತಿದ್ದಾರೆ. ಇಂತಹವರ ಪ್ರಮಾಣ ಶೇ.30 ರಷ್ಟಿದೆ. ಮಾನವೀಯ ದೃಷ್ಟಿಯಿಂದ ಈ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಆಸ್ಪತ್ರೆಗಳನ್ನು ಸಶಕ್ತಗೊಳಿಸುವ ಕಾರ್ಯ ನಡೆಯುತ್ತಿದೆ. ಲಸಿಕೆ ಸಂಗ್ರಹ ಹಾಗೂ ವಿತರಣೆಯಲ್ಲಿ ತೊಂದರೆಯಾಗಿದೆ. ಇದನ್ನು ಅರಿಯಬೇಕು. ಮೇ1 ರಂದು ಲಸಿಕೆ ಏಕೆ ನೀಡಿಲ್ಲ ಎಂದು ರಾಜಕೀಯವಾಗಿ ಟೀಕೆ ಮಾಡಬಾರದು. ವಿರೋಧ ಪಕ್ಷದವರು ಹಿಂದೆ ಆಡಳಿತದಲ್ಲಿ ಇದ್ದವರೇ, ಅವರಿಗೆ ಪರಿಸ್ಥಿತಿಗಳ ಬಗ್ಗೆ ಅರಿವು ಇರುತ್ತದೆ. ಇದನ್ನು ಪರಾಮರ್ಶಿಸುವ ಬದಲು ಬೆಳಗಿನಿಂದ ಸಂಜೆವರೆಗೆ ಟೀಕೆ ಮಾಡುವಂತಾಗಬಾರದು ಎಂದರು.

    ಬಳಿಕ ಹುಬ್ಬಳ್ಳಿ ಎಪಿಎಂಸಿಗೆ ಭೇಟಿ ನೀಡಿದಾಗ ಸದಸ್ಯರು ಹಾಗೂ ವ್ಯಾಪಾರಿಗಳು ಸಂಜೆಯ ವರೆಗೆ ಮಾರಾಟ ಮಾಡುವುದಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದರು. ರೈತಾಪಿ ವರ್ಗ ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಸಹ ಸಮಯ ಸಾಲುತ್ತಿಲ್ಲ. ಅವುಗಳನ್ನು ಕೊಂಡೊಯ್ದು ಮಾರಾಟ ಮಾಡಲು ಸಮಯ ಸಾಲುತ್ತಿಲ್ಲ. ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಕೆಲವು ಸಡಿಲಿಕೆಗಳನ್ನು ನೀಡಬೇಕಿದೆ. ಜನರು ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯವಹರಿಸಿದರೆ ಕೊರೊನಾ ಎದುರಿಸಲು ಸಾಧ್ಯವಿದೆ ತಿಳಿಸಿದರು.

    ಸ್ವರ್ಣ ಗ್ರೂಪ್ ಆಪ್ ಕಂಪನಿಸ್ ವ್ಯವಸ್ಥಾಪಕ ನಿರ್ದೇಶಕ ಡಾ.ವಿ.ಎಸ್.ವಿ ಪ್ರಸಾದ್ ಮಾತನಾಡಿ, ಕಳೆದ ಬಾರಿಯು ಕಂಪನಿಯಿಂದ ಕಿಮ್ಸ್‍ಗೆ ಸಹಾಯ ಒದಗಿಸಲಾಗಿದೆ. ಈ ಬಾರಿಗೆ ನೆರವು ಒದಗಿಸಲು ಕೋರಿದಾಗ ಕೋವಿಡ್ ಆಸ್ಪತ್ರೆಗಳಿಗೆ ಮಂಚ ಹಾಗೂ ಬೆಡ್ ಹಾಸಿಗೆಗಳ ಅವಶ್ಯಕತೆ ಇದೆ ಎಂದು ತಿಳಿಸಿದ್ದರು. ಹಾಗಾಗಿ ಕಂಪನಿ ವತಿಯಿಂದ ನಿಂದ 100 ಮಂಚ, ಬೆಡ್, ಬೆಡಶೀಟ್, ತಲೆದಿಂಬು, 100 ಸ್ಟ್ಯಾಂಡ್ ಗಳನ್ನು ನೀಡಲಾಗಿದೆ. ಅವಶ್ಯವಿರುವ ಔಷಧ, ಡಿಸ್ಪೋಜಬಲ್ ಸಿರೆಂಜ್, ಗ್ಲೌಸ್, ಲ್ಯಾಬೋರೇಟರಿ ಅಲ್ಲಿ ಅವಶ್ಯಕವಾದ ಔಷಧೋಪರಣಗಳನ್ನು ಕೇಳಿದ್ದಾರೆ. ಇವುಗಳನ್ನು ಸಹ ವಾರದಲ್ಲಿ ಕೊಡುತ್ತವೆ. 5 ಲಕ್ಷ ವೆಚ್ಚದ 5 ಆಕ್ಸಿಜನ್ ಕಾನ್ಸಟ್ರೇಟರ್ಸ್ ಗಳನ್ನು ಸಹ ಇಂಡಸ್ಟ್ರಿ ಒಕ್ಕೂಟದಿಂದ ನೀಡುವುದಾಗಿ ಹೇಳಿದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಇತರರು ಉಪಸ್ಥಿತರಿದ್ದರು.

  • ರಾಜ್ಯದಲ್ಲಿನ ಮಿಲಿಟರಿ ಆಸ್ಪತ್ರೆಗಳು ಕೋವಿಡ್ ಆಸ್ಪತ್ರೆಗಳಾಗಿ ಮಾರ್ಪಾಡು – ಪ್ರಹ್ಲಾದ್ ಜೋಶಿ

    ರಾಜ್ಯದಲ್ಲಿನ ಮಿಲಿಟರಿ ಆಸ್ಪತ್ರೆಗಳು ಕೋವಿಡ್ ಆಸ್ಪತ್ರೆಗಳಾಗಿ ಮಾರ್ಪಾಡು – ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ರಾಜ್ಯದಲ್ಲಿನ ಮಿಲಿಟರಿ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಗಳನ್ನಾಗಿ ಮಾರ್ಪಡಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ ಶೀಘ್ರವಾಗಿ ನಿರ್ಮಿಸಲಾಗುತ್ತಿರುವ 66 ಬೆಡ್ ಗಳ ಕೋವಿಡ್ ಆಸ್ಪತ್ರೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಆರ್.ಡಿ.ಓ ಹಾಗೂ ಇತರೆ ರಕ್ಷಣಾ ಏಜನ್ಸಿಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮೇಕ್ ಶಿಫ್ಟ್ (ತ್ವರಿತವಾಗಿ ನಿರ್ಮಿಸು) ಕೋವಿಡ್ ಆಸ್ಪತ್ರೆಗಳನ್ನು ನಿರ್ಮಿಸುವಂತೆ ರಕ್ಷಣಾ ಸಚಿವರಿಗೆ ಪತ್ರ ಬರೆದಿದ್ದೇನೆ. ಈ ಕುರಿತು ರಕ್ಷಣಾ ಸಚಿವರು ನಿರ್ಣಯ ಕೈಗೊಳ್ಳುವರು ಎಂಬ ಆಶಾಭಾವವಿದೆ. ಯುದ್ದೋಪಾದಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ನಿರ್ವಹಣೆ ಮಾಡುತ್ತಿವೆ. ಮುಜಾಗೃತವಾಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಬೆಡ್ ಗಳನ್ನು ತಯಾರು ಮಾಡಲಾಗುವುದು. ಆದರೆ ಅವುಗಳನ್ನು ಬಳಸುವ ಪರಿಸ್ಥಿತಿ ಬಾರದಿರಲಿ ಎಂದು ಆಶಿಸುತ್ತೇನೆ ಎಂದರು.

    ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ವರದಿಗಳು ತಡವಾಗಿ ಬರುತ್ತಿರುವ ಕುರಿತು ಸಭೆಯಲ್ಲಿ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. ರಾಜ್ಯಮಟ್ಟದಲ್ಲಿ ಈ ಕುರಿತಂತೆ ಆರೋಗ್ಯ ಸಚಿವರು ಹಾಗೂ ಕಾರ್ಯದರ್ಶಿಗಳೊಂದಿಗೆ ಮಾತನಾಡುತ್ತೇನೆ ಕೋವಿಡ್ ಪಾಸಿಟಿವ್ ವರದಿ ಬೇಗ ಬಂದರೆ, ರೋಗಿಗಳಿಗೆ ತಡ ಮಾಡದೇ ಚಿಕಿತ್ಸೆ ನೀಡಬಹದು. ಈ ವರದಿಗಳನ್ನು ಶೀಘ್ರವಾಗಿ ನೀಡುವಂತೆ ಲ್ಯಾಬ್ ಟೆಕ್ನಿಷನ್ ಗಳಿಗೆ ಕೋರುತ್ತೇನೆ. ನೆಗೆಟಿವ್ ಇರುವ ವರದಿಗಳನ್ನು ಎರೆಡು ಮೂರು ದಿನಗಳು ತಡವಾಗಿ ನೀಡಬಹದು. ರಾಜ್ಯಕ್ಕೆ 1.22 ಲಕ್ಷ ರೆಮಿಡಿಸಿವರ್ ವೈಲ್ ಗಳನ್ನು ನೀಡಲಾಗಿದೆ. ಈ ಚುಚ್ಚುಮದ್ದನ್ನು ಯಾರಿಗೆ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸಲಿ. ಜನರು ಅನಗತ್ಯವಾಗಿ ಆತಂಕ್ಕೆ ಒಳಗಾಗುವುದು ಬೇಡ. ಇದರಲ್ಲಿ ಶೋಷಣೆ ಆಗುತ್ತಿರುವ ವರದಿಗಳು ಬಂದಿವೆ. ರೆಮಿಡಿಸಿವರ್ ಕೊವೀಡ್ ಗೆ ರಾಮ ಬಾಣವಲ್ಲ ಎಂದು ಅಭಿಪ್ರಯಾಪಟ್ಟರು.

    ದೇಶದಲ್ಲಿ ಇಂದು 2500 ಹೆಚ್ಚು ವೈರಲ್ ಲ್ಯಾಬರೋಟರಿಗಳಿವೆ. ಹುಬ್ಬಳ್ಳಿ ಕಿಮ್ಸ್, ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ಡಿಮಾನ್ಸ್ ನಲ್ಲಿ ಟೆಸ್ಟಿಂಗ್ ಲ್ಯಾಬ್ ಗಳಿವೆ. ಧಾರವಾಡ ಜಿಲ್ಲೆಯಲ್ಲಿ 17 ಸಂಚಾರಿ ಸ್ಯಾಬ್ ಸೆಂಟರ್ ಗಳಿವೆ. ಎಲ್ಲಿಯಾದರೂ ತೊಂದರೆಯಾಗಿದ್ದರೆ ಸರಿಪಡಿಸಲಾಗುವುದು. ಧಾರವಾಡ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಆಗಮಿಸಿದವರ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಳ್ಳಿಗಳಲ್ಲಿ ಕೂಡ ಡಂಗುರ ಸಾರಿಸಿ ಹೊರ ಜಿಲ್ಲೆಯಿಂದ ಬಂದವರನ್ನು ಪ್ರತ್ಯೇಕವಾಸದಲ್ಲಿ ಇಡಲಾಗುತ್ತಿದೆ.

    ಕೋವಿಡ್ ಆಸ್ಪತ್ರೆ ನಿರ್ಮಾಣ
    ಕಿಮ್ಸ್ ಆಸ್ಪತ್ರೆ ಆರಣದಲ್ಲಿ 66 ಬೆಡ್ ಗಳ ಕೋವಿಡ್ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಆಕ್ಸಿಜನ್ ಸೌಲಭ್ಯವನ್ನು ಸಹ ರೋಗಿಗಳಿಗೆ ನೀಡಲಾಗಿವುದು. ಜಿಲ್ಲಾಧಿಕಾರಿಗಳು ಈ ವಿಚಾರವಾಗಿ ಕಾರ್ಯಾದೇಶವನ್ನು ಸಹ ನೀಡಿದ್ದಾರೆ. ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಏ.28 ರಂದು ಬೆಂಗಳೂರನಲ್ಲಿ 20 ಸಾವಿರಕ್ಕೂ ಅಧಿಕ ಹಾಗೂ ಧಾರವಾಡ ಜಿಲ್ಲೆಯಲ್ಲಿ 600 ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿವೆ. ಎರಡನೇ ರೂಪಾಂತರ ವೈರಸ್ ರಾಜ್ಯ ಪ್ರವೇಶಿಸಿದರೆ ಬಹಳಷ್ಟು ತೊಂದರೆಯಾಗಲಿದೆ ಎಂಬ ಭಯ ಕಾಡುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಆರೋಗ್ಯ ಸೌಲಭ್ಯಗಳನ್ನು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 3000 ಕ್ಕೂ ಹೆಚ್ಚು ಬೆಡ್ ಗಳನ್ನು ತಯಾರು ಮಾಡಲಾಗುತ್ತಿದೆ ಎಂದರು.

    ನಿರ್ಮಿತಿ ಕೇಂದ್ರದಿಂದ 66 ಲಕ್ಷ ವೆಚ್ಚದಲ್ಲಿ ಕೋವಿಡ್ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಇಕೋ ಇನ್ ಬಾಕ್ಸ್ ಸ್ಪೇಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಒಟ್ಟು 1500 ಚದುರ ಮೀಟರ್ ವಿಸ್ತೀರ್ಣದ ಮೂರು ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ವಿದ್ಯುತ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಪ್ರತಿ ಕೇಂದ್ರ 22 ಹಾಸಿಗೆಗಳ ಸಾಮಾಥ್ರ್ಯ ಹೊಂದಿದೆ. ಇದರೊಟ್ಟಿಗೆ ಮಹಿಳೆಯರು ಹಾಗೂ ಪುರುಷರಿಗಾಗಿ ಪ್ರತ್ಯೇಕವಾಗಿ 250 ಚದುರ ಮೀಟರ್ ವಿಸ್ತೀರ್ಣದಲ್ಲಿ 6 ಬಾತ್ ರೂಮ್ ಹಾಗೂ 6 ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸ್ವಾಬ್ ಸಂಗ್ರಹಿಸಲಾಗುತ್ತಿದೆ. ಜಿಲ್ಲಾ ಆರೋಗ್ಯ ಅಧಿಕಾರಿ ಭೇಟಿ ನೀಡಿದ 4 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡದಿರುವುದು ಕಂಡುಬಂದಿದ್ದು, ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಏ.30 ರಂದು ಖಾಸಗಿ ಆಸ್ಪತ್ರೆ ಕುರಿತು ಸಭೆ ನಡೆಸಲಾಗುವುದು. ಕಿಮ್ಸ್‍ನಲ್ಲಿ ಪ್ರತಿದಿನ 2000 ಕೋವಿಡ್ ಪರೀಕ್ಷೆ ನೆಡೆಸಲಾಗುತ್ತಿದೆ. ಕಿಮ್ಸ್ ಹೆಚ್ಚುವರಿಯಾಗಿ ಇನ್ನೊಂದು ಸ್ವಾಬ್ ಸಂಗ್ರಹ ಸೆಂಟರ್ ನಿರ್ಮಿಸಲು ನಿರ್ದೇಶನ ನೀಡಲಾಗುವುದು. ಹೆಚ್ಚಿನ ಲ್ಯಾಬ್ ಟೆಕ್ನಿಷಿಯನ್ ನೇಮಿಸಲಾಗುವುದು. ಗ್ರಾಮಗಳಿಗೆ ಆಗಮಿಸಿದವರ ವಿವರ ದಾಖಲಿಸಲು ಜಿ.ಪಂ. ಸಿಇಓ ಆದೇಶಿಸಿದ್ದಾರೆ. ಹಳ್ಳಿಗಳಲ್ಲಿ ಸಂಚಾರಿ ಲ್ಯಾಬ್ ಗಳಿಂದ ಸ್ಯಾಬ್ ಸಂಗ್ರಹ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈಗ ದಿನವೊಂದಕ್ಕೆ 1.75 ಲಕ್ಷ ಕೋವಿಡ್ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲೆಗೆ ಲಸಿಕೆ ಬಂದ 24 ತಾಸುಗಳಲ್ಲಿ ಹಂಚಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ 17000 ಜನರಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಕೋವ್ಯಾಕ್ಸಿನ್ ಲಭ್ಯತೆ ಆಧರಿಸಿ ಮೊದಲಬಾರಿಗೆ ಪಡೆಯುವವರಿಗೆ ನೀಡುತ್ತಿಲ್ಲ. ಎರಡನೇ ಹಂತದಲ್ಲಿ ಪಡೆಯುವವರಿಗೆ ನೀಡಲಾಗುತ್ತಿದೆ. ಜಿಲ್ಲೆಗೆ 750 ರೆಮಿಡಿಸಿವರ್ ವೈಲ್ ಗಳು ಬಂದಿದ್ದು, ಪ್ರತಿದಿನ ಜಿಲ್ಲೆಗೆ ರೆಮಿಡಿಸಿವರ್ ಕೋಟಾ ನಿಗದಿ ಪಡಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ ಉಪಸ್ಥಿತರಿದ್ದರು.

  • ಕೊರೊನಾ 2ನೇ ಅಲೆ ಹೇಗೆ ಹರಡುತ್ತಿದೆ ಅನ್ನೋದೆ ಗೊತ್ತಾಗುತ್ತಿಲ್ಲ – ಜೋಶಿ

    ಕೊರೊನಾ 2ನೇ ಅಲೆ ಹೇಗೆ ಹರಡುತ್ತಿದೆ ಅನ್ನೋದೆ ಗೊತ್ತಾಗುತ್ತಿಲ್ಲ – ಜೋಶಿ

    ಧಾರವಾಡ: ಕೊರೊನಾ 2ನೇ ಅಲೆ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ, ಹೇಗೆ ಹರಡುತ್ತಿದೆ ಅನ್ನೋದೆ ಗೊತ್ತಾಗುತ್ತಿಲ್ಲ. ಇದು ಇಷ್ಟು ಪರಿಣಾಮ ಬೀರುತ್ತೆ ಎನ್ನುವ ಅಂದಾಜು ಇರಲಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯಪಟ್ಟಿದ್ದಾರೆ.

    ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯುದ್ಧೋಪಾದಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಕಾರ್ಯ ಮಾಡುತ್ತಿದೆ. ನಿನ್ನೆ 800 ಮಿಲಿಯನ ಟನ್ ಆಕ್ಸಿಜನ್ ಕರ್ನಾಟಕಕ್ಕೆ ಹಂಚಿಕೆಯಾಗಿದೆ, 1.25 ಲಕ್ಷ ರೆಮ್‍ಡಿಸಿವಿರ್ ವೈಲ್ ಬಂದಿದೆ. ರೆಮ್‍ಡಿಸಿವಿರ್ ಕೊರೊನಾಗೆ ಅಲ್ಟಿಮೆಟ್ ಡ್ರಗ್ ಅಲ್ಲ, ಆದರೂ ರೆಮ್‍ಡಿಸಿವಿರ್ ವಿಷಯದಲ್ಲಿ ಜನ ಪ್ಯಾನಿಕ್ ಆಗುತ್ತಿದ್ದಾರೆ, ಅದಕ್ಕಾಗಿ ಹೆಚ್ಚಿಗೆ ತರಿಸಿದ್ದೇವೆ ಎಂದು ಜೋಶಿ ಹೇಳಿದರು.

    ಧಾರವಾಡದ ಎಸ್‍ಡಿಎಂ ಆಸ್ಪತ್ರೆಯಲ್ಲಿ ಸರ್ಕಾರಿ ಕೋಟಾದಡಿ ಬೆಡ್ ಕೇಳಿದ್ದೇವೆ. ಇದರೊಂದಿಗೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಶೇ.60 ರಿಯಾಯ್ತಿ ಕೊಡುವಂತೆ ವೀರೇಂದ್ರ ಹೆಗ್ಗಡೆಯವರಲ್ಲಿ ಈ ಸಂಬಂಧ ಮಾತುಕತೆ ಆಗಿದೆ, ಆಯುಷ್ಮಾನ್ ಭಾರತ ಅಡಿ 500 ಬೆಡ್ ಕೊಡಲು ಒಪ್ಪಿದ್ದಾರೆ. ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ನೂರು ಬೆಡ್ ಹೊಸದಾಗಿ ಸಿದ್ಧ ಆಗುತ್ತಿದೆ, ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳುತ್ತೇವೆ, ಜನ ಮಾತ್ರ ಯಾವುದಕ್ಕೂ ಹೆದರಬಾರದು, ಕೋವಿಡ್ ಕೇರ್ ಕೇಂದ್ರಗಳನ್ನು ಹೆಚ್ಚಳ ಮಾಡುತ್ತೇವೆ, ದೇಶಕ್ಕೆ ಜರ್ಮನಿಂದ ಮೊಬೈಲ್ ಆಕ್ಸಿಜನ್ ಪ್ಲ್ಯಾಂಟ್ ಸಹ ಏರ್ಲಿಫ್ಟ್ ಆಗುತ್ತಿವೆ ಎಂದು ಮಾಹಿತಿ ನೀಡಿದರು.