Tag: ಪ್ರಹ್ಲಾದ್ ಜೋಶಿ

  • ಸಂಸದ, ಶಾಸಕ ತಲ್ವಾರ್ ಹಿಡಿದ ಫೋಟೋ ಫೇಸ್‍ಬುಕ್‍ಗೆ ಅಪ್ಲೋಡ್..!

    ಸಂಸದ, ಶಾಸಕ ತಲ್ವಾರ್ ಹಿಡಿದ ಫೋಟೋ ಫೇಸ್‍ಬುಕ್‍ಗೆ ಅಪ್ಲೋಡ್..!

    – ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಕಾರ್ಯಕರ್ತರು

    ಧಾರವಾಡ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಇದ್ದಾಗಲೇ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಅರವಿಂದ್ ಬೆಲ್ಲದ ಅವರು ತಲ್ವಾರ್ ಹಿಡಿದ ಫೋಟೋವನ್ನು ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ನೀತಿ ಸಂಹಿತೆ ನಿಯಮವನ್ನು ಉಲ್ಲಂಘಿಸಿದ್ದಾರೆ.

    ಪ್ರಹ್ಲಾದ್ ಜೋಶಿ ಮತ್ತು ಅರವಿಂದ ಬೆಲ್ಲದ ಕೈಯಲ್ಲಿ ತಲ್ವಾರ್ ಹಿಡಿದ ಫೋಟೋವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರೊಬ್ಬರು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

    ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಯಾವುದೇ ಆಯುಧ ಪ್ರದರ್ಶಿಸಬಾರದು. ಆಯುಧ ಹಿಡಿದ ಫೋಟೋ ಕೂಡ ಸಾರ್ವಜನಿಕವಾಗಿ ಹಂಚಿಕೊಳ್ಳೋದು ಕೂಡ ತಪ್ಪು. ಆದ್ರೆ ಬಿಜೆಪಿ ಕಾರ್ಯಕರ್ತ, ಜೋಶಿ ಹಾಗೂ ಬೆಲ್ಲದ ತಲ್ವಾರ್ ಹಿಡಿದ ಫೋಟೋ ಹಾಕಿ ಮತ್ತೊಮ್ಮೆ ನಾವೇ ಗೆಲ್ಲೋದು ಎಂದು ಪೋಸ್ಟ್ ಮಾಡಿದ್ದಾರೆ.

    ಶಕ್ತಿ ಧಾರವಾಡ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಎರಡು ದಿನಗಳ ಹಿಂದೆ ಧಾರವಾಡದ ಅಶೋಕ ಹೊಟೇಲ್‍ಗೆ ಬಂದಾಗ ಜನಪ್ರತಿನಿಧಿಗಳು ತಲ್ವಾರ್ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದರು. ಅದೇ ಫೋಟೋವನ್ನು ನೀತಿ ಸಂಹಿತೆ ಜಾರಿಯಾದ ಬಳಿಕ ಕಾರ್ಯಕರ್ತ ಪೋಸ್ಟ್ ಮಾಡಿ ಚುನಾವಣಾ ಆಯೋಗದ ನಿಯಮವನ್ನು ಉಲ್ಲಂಘಿಸಿದ್ದಾರೆ.

    https://www.facebook.com/shakti.hiremath/posts/2113167555464960

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿಯವರಿಗೆ ಚೋರ್ ಎನ್ನುವ ರಾಹುಲ್ ಗಾಂಧಿಯೇ ಜಾಮೀನಿನ ಮೇಲೆ ಹೊರಗಿದ್ದಾರೆ: ಜೋಶಿ ಟಾಂಗ್

    ಮೋದಿಯವರಿಗೆ ಚೋರ್ ಎನ್ನುವ ರಾಹುಲ್ ಗಾಂಧಿಯೇ ಜಾಮೀನಿನ ಮೇಲೆ ಹೊರಗಿದ್ದಾರೆ: ಜೋಶಿ ಟಾಂಗ್

    ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಚೋರ್ ಪದ ಬಳಸಿ ರಾಹುಲ್ ಗಾಂಧಿ ಅಸಂವಿಧಾನಿಕವಾಗಿ ಮಾತನಾಡಿದ್ದಾರೆ. ಮೋದಿಯವರಿಗೆ ಚೋರ್ ಎನ್ನುವ ರಾಹುಲ್ ಗಾಂಧಿಯೇ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಸಂಸದ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

    ಹಾವೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾಷಣದಲ್ಲಿ ಪ್ರಧಾನಿಗೆ ಚೋರ್ ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ ಅವರು, ತಮಗೆ ಯಾರೋ ಬರೆದು ಕೊಟ್ಟಿದನ್ನು ರಾಹುಲ್ ಓದಿದ್ದಾರೆ. ಮೋದಿಯವರನ್ನು ಚೋರ್ ಎನ್ನುವ ಅವರೇ ಜಾಮೀನಿನ ಮೇಲೆ ಹೊರಗಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಜಾಮೀನು ಪಡೆದು ಹೊರಬಂದವರು. ಮೋದಿಯವರನ್ನು ದೇಶದ ಚೌಕಿದಾರ ಅಂತ ಜನರೇ ಒಪ್ಪಿದ್ದಾರೆ. ಚೋರ್ ಎನ್ನಲು ಇವರು ಯಾರು ಎಂದು ಪ್ರಶ್ನಿಸಿ ಹರಿಹಾಯ್ದಿದ್ದಾರೆ.

    ಸರ್ಕಾರಿ ವ್ಯವಸ್ಥೆಯೋಳಗೆ ಗಾಂಧಿ ಕುಟುಂಬ ಬದುಕು ನಡೆಸುತ್ತಿದೆ. ಮನೆ, ವಾಹನ ಎಲ್ಲ ಸರ್ಕಾರದ್ದೆ, ಅವರು ಮಾಡುವ ಊಟ ಕೂಡ ಸರ್ಕಾರದ್ದೆ. ಈಗಾಗಲೇ ರಫೇಲ್ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.

    ಅಂಬರೀಷ್ ಸಾವಿನ ಕುರಿತು ಸಚಿವ ರೇವಣ್ಣ ಹಾಗೂ ಅವರ ವಿರುದ್ಧ ಬಿಜೆಪಿ ನಾಯಕ ಈಶ್ವರಪ್ಪ ಮಾತನಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೇ ಅಗಲಿ ಈ ರೀತಿ ಮಾತನಾಡುವುದು ಸರಿಯಲ್ಲ. ವೈಯಕ್ತಿಕವಾಗಿ ಯಾರ ಬಗ್ಗೆಯೂ ಟೀಕೆ ಮಾಡಬಾರದು ಎಂದರು.

    ತಿಲಕ ಇಟ್ಟುಕೊಳ್ಳುವವರ ಬಗ್ಗೆ ಹೆದರಿಕೆ ಬರುತ್ತೆ ಎನ್ನುವ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಮಾತನಾಡಿ, ಬಹಳಷ್ಟು ಜನ ಉಗ್ರರು ಬೇರೆ ಬೇರೆ ರೀತಿಯ ವೇಷಭೂಷಣ ಹಾಕಿರುತ್ತಾರೆ. ಟೋಪಿಗಳನ್ನು ಹಾಕಿರುತ್ತಾರೆ ಅವರ ಬಗ್ಗೆ ಯಾಕೆ ಸಿದ್ದರಾಮಯ್ಯ ಮಾತಾಡೋದಿಲ್ಲ? ನಾನು ಎಲ್ಲಾ ಮುಸ್ಲಿಮರು ಉಗ್ರರು ಅಂತ ಹೇಳೋದಿಲ್ಲ. ಆದರೆ ಆ ಬಗ್ಗೆ ಯಾಕೆ ಸಿದ್ದರಾಮಯ್ಯ ಮಾತನಾಡುವುದಿಲ್ಲ. ಹಿಂದೂ ಸಮಾಜದ ಬಗ್ಗೆ ಮಾತ್ರ ಮಾತನಾಡಲು ಹೊರಟಿದ್ದೀರಲ್ಲ, ಹಿಂದೂ ಸಮಾಜ ಬಿಟ್ಟಿ ಬಿದ್ದಿದಿಯಾ ನಿಮಗೆ? ಇದನ್ನು ಹಿಂದು ಸಮಾಜ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬುದ್ಧಿಮಾಂದ್ಯರಿಗೆ ಮೋದಿ ಅವಮಾನ ಮಾಡಿಲ್ಲ- ಸಂಸದ ಪ್ರಹ್ಲಾದ್ ಜೋಶಿ

    ಬುದ್ಧಿಮಾಂದ್ಯರಿಗೆ ಮೋದಿ ಅವಮಾನ ಮಾಡಿಲ್ಲ- ಸಂಸದ ಪ್ರಹ್ಲಾದ್ ಜೋಶಿ

    ಧಾರವಾಡ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬುದ್ಧಿ ಮತ್ತೆ ಯಾವ ರೀತಿ ಇದೆ ಅನ್ನೋದರ ಬಗ್ಗೆ ಮೋದಿ ಹೇಳಿದ್ದಾರೆ. ಆದ್ರೆ ಬುದ್ಧಿಮಾಂದ್ಯರಿಗೆ ಅವರು ಅವಮಾನ ಮಾಡುವ ವಿಚಾರ ಹೇಳಿಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ಸಮಜಾಯಿಷಿ ನೀಡಿದ್ದಾರೆ.

    ರಾಹುಲ್ ಗಾಂಧಿಯನ್ನು ಟೀಕಿಸುವ ಭರದಲ್ಲಿ ಪ್ರಧಾನಿ ಮೋದಿ ಬುದ್ಧಿಮಾಂದ್ಯರಿಗೆ ಅವಹೇಳನ ಮಾಡಿರುವ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಸಮುದಾಯದ ಬಗ್ಗೆ ಟೀಕೆ ಮಾಡಿಲ್ಲ. ಯಾವ ರೀತಿ ಬುದ್ಧಿ ಮತ್ತೆ ಇರುತ್ತೆ ಎಂದು ಪ್ರಧಾನಿ ಹೇಳಿದ್ದಾರೆ ಅಷ್ಟೆ ಅಂದ್ರು.

    ಬರ ಪರಿಹಾರಕ್ಕೆ ಕೇಂದ್ರದಿಂದ ಕಡಿಮೆ ಹಣ ಮಂಜೂರು ಮಾಡಿದ ವಿಚಾರವಾಗಿ ಮಾತನಾಡಿ, ಐದು ವರ್ಷದಲ್ಲಿ ಕೇಂದ್ರ 12 ಸಾವಿರ ಕೋಟಿ ಕೊಟ್ಟಿದೆ. ಉಮೇಶ್ ಜಾಧವ್ ರಾಜೀನಾಮೆ ಕೊಟ್ಟಿದ್ದಾರೆ. ಈಗ ಅವರ ಬಗ್ಗೆ ಕಾಂಗ್ರೆಸ್ ಕೈಗೆಟುಕದ ದ್ರಾಕ್ಷಿ, ಹುಳಿ ಅನ್ನುವಂತೆ ಮಾಡುತ್ತಿದೆ ಎಂದ ಜೋಶಿ, ಕಾಂಗ್ರೆಸ್ ತನ್ನ ಮನೆ ಮೊದಲು ಚೆನ್ನಾಗಿ ಇಟ್ಟುಕೊಳ್ಳಲಿ. ಕಾಂಗ್ರೆಸ್ ಬೌದ್ಧಿಕವಾಗಿ ದಿವಾಳಿಯಾಗಿದೆ ಎಂದು ಟಿಕಿಸಿದರು.

    ವಾಯುದಾಳಿ ಬಗ್ಗೆ ಸಾಕ್ಷಿ ಕೇಳೋದಾದ್ರೆ ಪಾಕಿಸ್ತಾನಕ್ಕೆ ಹೋಗಿ ನೋಡಕೊಂಡು ಬರಲಿ ಎಂದ ಅವರು, ಕುಟುಂಬ ರಾಜಕಾರಣ ವಿಚಾರವಾಗಿ ಶೆಟ್ಟರ್ ಮತ್ತು ಯಡಿಯೂರಪ್ಪ ಮಕ್ಕಳು ದಶಕಗಳ ನಂತರ ತಾವು ತಾವಾಗಿಯೇ ರಾಜಕೀಯಕ್ಕೆ ಬಂದಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಹಾಗೆ ಮಾಡುತ್ತಿಲ್ಲ ಹೀಗಾಗಿ ಅವರ ಕುಟುಂಬ ರಾಜಕಾರಣಕ್ಕೂ ನಮಗೂ ಹೋಲಿಕೆ ಸರಿಯಲ್ಲ ಎಂದು ಹೇಳಿದರು.

    ಇದೇ ವೇಳೆ ಎಲ್ಲದರಲ್ಲಿ ರಾಜಕಾರಣ ಮಾಡಲ್ಲ ಎಂದ ಜೋಶಿಗೆ ಯಡಿಯೂರಪ್ಪ ಸೈನಿಕರ ದಾಳಿಯ ನಂತರ ಬಿಜೆಪಿಗೆ ಚುನಾವಣಾ ಲಾಭ ಆಗುವ ಪ್ರಶ್ನೆಗೆ ಕೇಳಿದ್ದಕ್ಕೆ, ಬಿಎಸ್‍ವೈ ಹೇಳಿಕೆಗೆ ಈಗಾಗಲೇ ವಿವರಣೆ ನೀಡಲಾಗಿದೆ ಎಂದು ಹೇಳಿ ಹೊರಟು ಹೋದರು.

    https://www.youtube.com/watch?v=DElJEJanlxc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೊಲ್ಲೂರು ದೇವಸ್ಥಾನಕ್ಕೆ ಮೋದಿ ಸಹೋದರ ಭೇಟಿ

    ಕೊಲ್ಲೂರು ದೇವಸ್ಥಾನಕ್ಕೆ ಮೋದಿ ಸಹೋದರ ಭೇಟಿ

    ಉಡುಪಿ: ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಭೇಟಿ ನೀಡಿದ್ದಾರೆ.

    ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪೂಜೆ ಪುನಸ್ಕಾರ ನೆರವೇರಿಸಿದ್ದಾರೆ. ಅಲ್ಲದೆ ಇಂದು ಮುಂಜಾನೆ ಚಂಡಿಕಾ ಹೋಮದಲ್ಲಿ ಪಾಲ್ಗೊಂಡಿದ್ದಾರೆ.

    ಪ್ರಹ್ಲಾದ್ ಮೋದಿ ಅವರು ಬಹುಕಾಲದಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಬೇಕು ಎಂದುಕೊಂಡಿದ್ದರು. ಆದರೆ ಇಂದು ಅವರು ದೇವಸ್ಥಾನಕ್ಕೆ ಆಗಮಿಸಿ ಚಂಡಿಕಾ ಹೋಮವನ್ನು ನಡೆಸಿದ್ದಾರೆ. ಈ ವೇಳೆ ದೇವಾಲಯದ ಇಓ ಕೃಷ್ಣಮೂರ್ತಿ ಅವರು ಪ್ರಹ್ಲಾದ್ ಮೋದಿಯನ್ನು ಗೌರವಿಸಿದ್ದಾರೆ.

    ಪೂಜೆ ವೇಳೆ ಪ್ರಹ್ಲಾದ್ ಮೋದಿ ಅವರು ಸಾಂಪ್ರದಾಯಿಕ ಉಡುಗೆ (ಬಿಳಿ ಪಂಜೆ ಹಾಗೂ ಶಲ್ಯೆ) ಧರಿಸಿ ಪೂಜೆ ಹಾಗೂ ಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನೈತಿಕತೆ ಎನ್ನೋದು ಕಾಂಗ್ರೆಸ್‍ನವರಿಗೆ ಗೊತ್ತೇ ಇಲ್ಲ; ಪ್ರಹ್ಲಾದ್ ಜೋಶಿ ಕಿಡಿ

    ನೈತಿಕತೆ ಎನ್ನೋದು ಕಾಂಗ್ರೆಸ್‍ನವರಿಗೆ ಗೊತ್ತೇ ಇಲ್ಲ; ಪ್ರಹ್ಲಾದ್ ಜೋಶಿ ಕಿಡಿ

    – ಶಾಸಕರ ರೆಸಾರ್ಟ್ ಗಲಾಟೆ ಪಾರ್ಟಿ ಡ್ರಾಮಾ

    ಹುಬ್ಬಳ್ಳಿ: ರಾಜ್ಯ ಸರ್ಕಾರ ರಜೆ ಹಾಗೂ ಶೋಕಾಚರಣೆ ಘೋಷಣೆ ಮಾಡಿದ್ದರೂ ಕಾರ್ಯಕ್ರಮ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ, ನೈತಿಕತೆ ಎನ್ನುವುದು ಕಾಂಗ್ರೆಸ್‍ನವರಿಗೆ ಗೊತ್ತೇ ಇಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎನ್ನೋದು ಅಪ್ರಸ್ತುತ. ಕೂಡಲೇ ಕಾಂಗ್ರೆಸ್ ಅಧ್ಯಕ್ಷರು ಈ ಘಟನೆ ಬಗ್ಗೆ ಕ್ಷಮೆ ಕೇಳಬೇಕು. ಅಲ್ಲದೇ ಸಿಎಂ, ಡಿಸಿಎಂ ಉತ್ತರ ಕೊಡಬೇಕು. ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದರೆಂದು ಸರ್ಕಾರಿ ರಜೆ ಘೋಷಿಸಿದ್ದರೂ ಕಾರ್ಯಕ್ರಮವನ್ನು ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ನೈತಿಕತೆ ಇಲ್ಲ. ದೇಶ ವಿರೋಧಿ ಹೇಳಿಕೆ ಕೊಟ್ಟ ಕನ್ನಯ್ಯ ಕುಮಾರ್‍ನನ್ನು ಕರೆದುಕೊಂಡು ಬಂದು ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ಕ್ಲಾಸ್!

    ರೆಸಾರ್ಟಿನಲ್ಲಿ ಶಾಸಕರ ಗಲಾಟೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಇದು ಕಾಂಗ್ರೆಸ್ ಪಾರ್ಟಿಯ ಡ್ರಾಮಾ. ಎಲ್ಲರನ್ನ ಅಲ್ಲಿಗೆ ಕರೆದುಕೊಂಡು ಹೋಗಿದ್ದು ಏಕೆ? ಎಲ್ಲಾ ಡ್ರಾಮಾ ಮುಗಿದ ಮೇಲೆ ಕೇಸ್ ಹಾಕಿದ್ದಾರೆ. ಹೀಗಾಗಿ ಕೂಡಲೇ ಸೂಕ್ತ ತನಿಖೆ ನಡೆಸಿ ಎಲ್ಲರ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದರು. ಇದನ್ನೂ ಓದಿ: ಈಗಲ್ಟನ್ ರೆಸಾರ್ಟಿನಲ್ಲಿ ಸಣ್ಣ ಅಚಾತುರ್ಯವಾಗಿರೋದು ನಿಜ: ಸಿಎಂ ಎಚ್‍ಡಿಕೆ

    ಈ ವಿಷಯವಾಗಿ ಹುಬ್ಬಳ್ಳಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯಿಸಿ, ರಕ್ಷಣೆ ಕೊಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಶಾಸಕರನ್ನ ರೆಸಾರ್ಟಿಗೆ ಕರೆದುಕೊಂಡು ಹೋಗಿದ್ದರು. ಆದರೆ ಅವರ ಶಾಸಕರಿಗೆ ರಕ್ಷಣೆ ನೀಡಲು ಆಗಿಲ್ಲ. ಜನರಿಗೆ ರಕ್ಷಣೆ ಎಲ್ಲಿಂದ ಕೊಡುತ್ತಾರೆ ಎಂದು ಟೀಕಿಸಿದ್ದಾರೆ. ಅಷ್ಟೇ ಅಲ್ಲದೆ ನಿನ್ನೆ ಸರ್ಕಾರಿ ರಜೆ ಘೋಷಣೆ ಮಾಡಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮ ಮಾಡಿದ್ದಾರೆ. ನೈತಿಕ ಹೊಣೆ ಹೊತ್ತು ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಎಂ ಕುಮಾರಸ್ವಾಮಿ ಸ್ಥಿಮಿತ ಕಳೆದುಕೊಂಡಿದ್ದಾರೆ- ಸಂಸದ ಪ್ರಹ್ಲಾದ್ ಜೋಶಿ

    ಸಿಎಂ ಕುಮಾರಸ್ವಾಮಿ ಸ್ಥಿಮಿತ ಕಳೆದುಕೊಂಡಿದ್ದಾರೆ- ಸಂಸದ ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ತಮ್ಮ ಸ್ಥಿಮಿತವನ್ನು ಕಳೆದುಕೊಂಡಿದ್ದು, ಹೀಗಾಗಿ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲವೆಂದು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ನೂತನ ಸಂಪುಟ ವಿಸ್ತರಣೆಯಿಂದಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಅಲ್ಲದೇ ರಾಜ್ಯದಲ್ಲಿಯೂ ಅಸ್ಥಿರತೆ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಗಳು ಸಹ ತಮ್ಮ ಸ್ಥಿಮಿತಿಯನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಮಂಡ್ಯದ ಜೆಡಿಎಸ್ ಮುಖಂಡನ ಕೊಲೆ ವಿಷಯಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಶೂಟ್ ಮಾಡಿ ಎಂದು ಹೇಳಿದ್ದಾರೆ. ಅವರಿಂದ ಸರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಹೇಳಿದ್ದಾರೆ.

    ಸಿಎಂ ಕುಮಾರಸ್ವಾಮಿಯವರಿಗೆ ಆಡಳಿತ ಮಾಡಲು ಆಗುತ್ತಿಲ್ಲ. ಅಲ್ಲದೇ ಮೈತ್ರಿ ಸರ್ಕಾರದಲ್ಲಿಯೂ ಒಗ್ಗಟ್ಟಿಲ್ಲ. ಇದನ್ನು ದೇವೇಗೌಡರೂ ಸಹ ಒಪ್ಪಿಕೊಂಡಿದ್ದಾರೆ. ಮೈತ್ರಿ ಸರ್ಕಾರ ಒಗ್ಗಟ್ಟು ನೋಡಿಕೊಳ್ಳುವುದು ಕುಮಾರಸ್ವಾಮಿ ಜವಾಬ್ದಾರಿ, ಅವರು ಅದನ್ನ ಮಾಡುತ್ತಿಲ್ಲ. ಮೈತ್ರಿ ಸರ್ಕಾರ ಅದಾಗಿಯೇ ಬೀಳುತ್ತದೆ ಹೊರತು, ನಾವು ಬೀಳಿಸುವುದಿಲ್ಲ. ಈ ಸರ್ಕಾರ ಬೀಳುವುದರಿಂದ ರಾಜ್ಯದ ಜನತೆಗೆ ಒಳ್ಳೆಯದಾಗಲಿದೆ ಎಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಂಸದ ಜೋಶಿ ವಿರುದ್ಧ ಬಿಜೆಪಿ ಮಾಜಿ ಶಾಸಕನ ಮಗಳ ಫೇಸ್‍ಬುಕ್ ವಾರ್!

    ಸಂಸದ ಜೋಶಿ ವಿರುದ್ಧ ಬಿಜೆಪಿ ಮಾಜಿ ಶಾಸಕನ ಮಗಳ ಫೇಸ್‍ಬುಕ್ ವಾರ್!

    ಹುಬ್ಬಳ್ಳಿ: ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ಕುಂದಗೋಳ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಎಸ್.ಐ ಚಿಕ್ಕನಗೌಡರ ಪುತ್ರಿ ಫೇಸ್‍ಬುಕ್ ನಲ್ಲಿ ವಾರ್ ಆರಂಭಿಸಿದ್ದಾರೆ.

    ನನ್ನ ತಂದೆಯ ಸೋಲಿಗೆ ಕಾರಣರಾದ ಮಹೇಶ್ ಗೌಡ ಜೊತೆಗೆ ನೀವು ಹೊಂದಾಣಿಕೆ ಮಾಡಿದ್ದು ಎಷ್ಟು ಸರಿ? ಆ ದ್ರೋಹಿಗಳನ್ನು ಪಕ್ಷದಿಂದ ಕಿತ್ತೊಗೆಯೋವರೆಗೂ ನಮಗೆ ಸಮಾಧಾನ ಇಲ್ಲ ಎಂದು ಫೇಸ್‍ಬುಕ್ ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿಕೊಂಡಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?
    ಮಾನ್ಯ ಸಂಸದರೇ ಏನಿದು? ನಿಮ್ಮ ಪಕ್ಷವಾದ ಬಿಜೆಪಿಗೆ ಮೋಸ ಮಾಡಿ ಪಕ್ಷಕ್ಕೆ ದ್ರೋಹ ಮಾಡಿದವರನ್ನು ಮುಂದೆ ನಿಲ್ಲಿಸಿಕೊಂಡು ಕಾರ್ಯಕ್ರಮ ಮಾಡ್ತೀರಿ. ನಾವು ಪ್ರೂಫ್ ಸಮೇತ ಕೆಲವು ಮುಖಂಡರು ಕಾಂಗ್ರೆಸ್‍ಗೆ ಬೆಂಬಲಿಸುವಂತೆ ಪ್ರಚಾರ ಮಾಡಿದ್ದನ್ನು ಸಿಡಿಯಲ್ಲಿ ಹಾಗೂ ಲಿಖಿತದ ಮೂಲಕ ಅವರೆಲ್ಲರನ್ನು ಪಕ್ಷದಿಂದ ವಜಾ ಮಾಡುವಂತೆ ಕೇಳಿಕೊಂಡಿದ್ದೇವು. ಆದರೆ ಅದನ್ನು ಮಾಡುವುದು ಬಿಟ್ಟು ನೀವು ಅದೇ ಮೋಸಗಾರರ ಗ್ಯಾಂಗ್ ಕಟ್ಟಿಕೊಂಡು ಕಾರ್ಯಕ್ರಮಗಳನ್ನ ಮಾಡಿದ್ದೀರಿ.

     

    ಇಂತಹ ಜನರ ವಿರುದ್ಧ ನೀವು ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ನನ್ನ ಪ್ರಶ್ನೆಗೆ ಉತ್ತರಿಸಿ. ಹಾಗೆಯೇ ಬಿಜೆಪಿಯ ನಿಜವಾದ ಕಾರ್ಯಕರ್ತರು ಹಾಗೂ ಮತದಾರರಿಗೆ ಬೆಲೆ ಇಲ್ಲವೇ? ನಿಮ್ಮ ಮೇಲೆ ನನಗೆ ತುಂಬಾ ಗೌರವವಿದೆ. ಚಿಕ್ಕ ವಯಸ್ಸಿನಿಂದ ನಿಮ್ಮನ್ನು ನೋಡುತ್ತಿದ್ದೇನೆ. ಆದರೆ ಯಾವುದೋ ಗುಂಪಿನ ಹಿತಾಸಕ್ತಿಗೆ ಕುಂದಗೋಳದಲ್ಲಿ ಬಿಜೆಪಿ ಸೋಲುವ ಹಾಗೆ ಮಾಡಿದ್ದು ವಿಪರ್ಯಾಸ. ಅದೇನೆ ಆಗಲಿ, ಪಕ್ಷ ಎಂದ ಮೇಲೆ ನಾವೆಲ್ಲ ಒಂದೇ ಎನ್ನಬೇಕಲ್ಲವೇ? ಅಧಿಕಾರ ಶಾಶ್ವತವಲ್ಲ. ಆದರೆ ನಿಮಗೂ ಅದೇ ರೀತಿ ಆದರೆ ಹೇಗೆ ಇರುತ್ತಾ ಯೋಚನೆ ಮಾಡಿ. ಆ ದ್ರೋಹಿಗಳನ್ನು ಪಕ್ಷದಿಂದ ಕಿತ್ತೊಗೆಯೋವರೆಗೂ ನಮಗೆ ಸಮಾಧಾನ ಇಲ್ಲ. ಆದಷ್ಟು ಬೇಗ ಕ್ರಮ ಕೈಗೊಳ್ಳಿ ಎಂದು ವಿನಂತಿಸಿಕೊಳ್ಳುತ್ತೇನೆ.

    ನಂದಾ ಅವರ ಪೋಸ್ಟ್‍ಗೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನಂದಾ ಅವರು, ನಾನು ಯಾರಿಗೂ ವಾರ್ನಿಂಗ್ ಕೊಟ್ಟಿಲ್ಲ. ಕೊಡುವಷ್ಟು ದೊಡ್ಡವಳು ಅಲ್ಲ. ಅನ್ಯಾಯವನ್ನು ಪ್ರಶ್ನಿಸಿದ್ದೇನೆ ಅಷ್ಟೇ. ಜೈ ಬಿಜೆಪಿ, ಜೈ ಮೋದಿಜಿ ಎಂದು ಹೇಳಿಕೊಂಡಿದ್ದಾರೆ

    https://www.facebook.com/nanda.chikkanagoudar/posts/2324053347605526

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 124 ಸೀಟ್‍ನಲ್ಲಿ ನೀವು ಗೆದ್ದಿರುವುದು ಕೇವಲ 37, ಸಿಎಂ ಸ್ಥಾನ ಏಕೆ ಒಪ್ಪಿಕೊಂಡಿದ್ದೀರಿ – ಬಿಎಸ್‍ವೈ

    124 ಸೀಟ್‍ನಲ್ಲಿ ನೀವು ಗೆದ್ದಿರುವುದು ಕೇವಲ 37, ಸಿಎಂ ಸ್ಥಾನ ಏಕೆ ಒಪ್ಪಿಕೊಂಡಿದ್ದೀರಿ – ಬಿಎಸ್‍ವೈ

    ಬೆಂಗಳೂರು: ಕಬ್ಬು ಹೋರಾಟಗಾರರ ಪರವಾಗಿ ಕೀಳಾಗಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದ ಪ್ರಹ್ಲಾದ ಜೋಶಿ ಕಿಡಿಕಾರಿದ್ದಾರೆ.

    ರೈತರ ಸಮಸ್ಯೆಗೆ ಬಗ್ಗೆ ಮಾತನಾಡಿದ ಬಿಎಸ್‍ವೈ ಅವರು, “ಮಾತು ಎತ್ತಿದ್ದರೆ ಅವರಿಗೆ ವೋಟ್ ನೀಡಿ. ನನಗೆ ಏಕೆ ಕೇಳುತ್ತೀರಾ ಎಂದು ಹೇಳುತ್ತೀರಿ. ನಿಮಗೆ ವೋಟ್ ಕೊಟ್ಟಿಲ್ಲ ತಾನೇ. 124 ಸೀಟ್‍ನಲ್ಲಿ ನೀವು ಗೆದ್ದಿರುವುದು ಕೇವಲ 37 ಸೀಟ್. ಹಾಗಾದ್ರೆ ಮುಖ್ಯಮಂತ್ರಿ ಸ್ಥಾನ ಏಕೆ ಒಪ್ಪಿಕೊಂಡಿದ್ದೀರಿ” ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದ್ದಾರೆ.

    ನಿಮಗೆ ಸಿಎಂ ಕುರ್ಚಿ ಬೇಕು. ಆದರೆ ರೈತರ ಸಮಸ್ಯೆ ಬಗ್ಗೆಹರಿಸಲು ನೀವು ಸಿದ್ಧರಿಲ್ಲ. ಇಂದು ಬೆಳಗಾವಿಯಲ್ಲಿರುವಂತಹ ರೈತರಿಗೆ ಬೆಂಬಲ ಬೆಲೆ ಬೇಕು ಎಂದು ಅನೇಕ ಹೋರಾಟಗಾರರಿಗೆ ನಾನೇ ಬೆಳಗಾವಿಗೆ ಬಂದು ರೈತರ ಸಮಸ್ಯೆಯನ್ನು ಬಗೆ ಹರಿಸುತ್ತೇನೆ ಎಂದು ಹೇಳಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

    ಮುಖ್ಯಮಂತ್ರಿಯಾಗಿ ಪ್ರತಿ ತಿಂಗಳು ರೈತರ ಸಭೆ ನಡೆಸುತ್ತೇನೆ ಎಂದು ಹೇಳಿದ್ದೀರಿ. ಆದರೆ ಇದೂವರೆಗೂ ನೀವು ಸಭೆ ಮಾಡಲಿಲ್ಲ. ರೈತರ ಉತ್ಪನ್ನಗಳನ್ನು ಖರೀದಿಸಲು ನಿಮಗೆ ಯೋಗ್ಯತೆಯಿಲ್ಲ. ರೈತರಿಗೆ ಕಬ್ಬಿನ ಬೆಲೆ ಬಗ್ಗೆ ಕೇಂದ್ರ ಸರ್ಕಾರ ಕಬ್ಬಿನ ಕಾರ್ಖಾನೆಗೆ ಅನೇಕ ಸಹಕಾರ ನೀಡಿದರೂ ಸಹ ಸರಿಯಾದ ಬೆಂಬಲ ಬೆಲೆ ನಿರ್ಧಾರ ಮಾಡಿ ಬಾಕಿ ಹಣ ಪಾವತಿಸುವ ಕೆಲಸಕ್ಕೆ ನೀವು ಸಿದ್ಧರಿಲ್ಲ ಬಿಎಸ್‍ವೈ ಆಕ್ರೋಶ ವ್ಯಕ್ತಪಡಿಸಿದರು.

    ಸಂಸದ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿ, ನಿಮ್ಮ ಗುಪ್ತಚರ ಇಲಾಖೆಯಲ್ಲಿ ನಿಮಗೆ ಸಾಕ್ಷಿ ಆಧಾರವಿದ್ದರೆ ಕೈವಾಡ ಮಾಡಿದ್ದವರನ್ನು ಅರೆಸ್ಟ್ ಮಾಡಿ. ಸಾಮಾನ್ಯ ರೈತರನ್ನು ಯಾಕೆ ಬಂಧಿಸುತ್ತಿದ್ದೀರಿ. ನೀವು ಸಾಲಮನ್ನಾ ಮಾಡುತ್ತೇವೆ ಎಂದು ಹೇಳುತ್ತಿದ್ದೀರಿ. ಆದರೆ ಟಿಪ್ಪು ಜಯಂತಿಗೆ ತೋರಿಸಿದ ಆಸಕ್ತಿಯನ್ನು ನೀವು ಯಾಕೆ ರೈತರ ಸಾಲಮನ್ನಾ ಬಗ್ಗೆ ಏಕೆ ತೋರಿಸುತ್ತಿಲ್ಲ. ಇದುವರೆಗೂ ರೈತರಿಗೆ ನೋಟಿಸ್ ನೀಡುವವರಿಗೆ ಏಕೆ ನೋಟಿಸ್ ನೀಡಿಲ್ಲ. ಸುಳ್ಳು ಹೇಳುವುದು ಅವರ ರಕ್ತದಲ್ಲೇ ಬಂದಿದೆ. ರಾಜಕೀಯ ವಿರೋಧಿಗಳನ್ನು ಸಿಸಿಬಿ ಮೂಲಕ ಹೆದರಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಭಗವಾನ್, ಪ್ರಕಾಶ್‍ರೈರನ್ನು ಸೊಮೋಟೊ ಕೇಸ್ ಹಾಕಿ ಒದ್ದು ಒಳಗೆ ಹಾಕ್ಬೇಕು: ಪ್ರಹ್ಲಾದ್ ಜೋಶಿ

    ಭಗವಾನ್, ಪ್ರಕಾಶ್‍ರೈರನ್ನು ಸೊಮೋಟೊ ಕೇಸ್ ಹಾಕಿ ಒದ್ದು ಒಳಗೆ ಹಾಕ್ಬೇಕು: ಪ್ರಹ್ಲಾದ್ ಜೋಶಿ

    ಧಾರವಾಡ: ಪೊಲೀಸರು ಚಿಂತಕ ಭಗವಾನ್ ಹಾಗೂ ನಟ, ಪ್ರಕಾಶ್‍ರೈ ಅವರ ಮೇಲೆ ಸೊಮೋಟೊ ಕೇಸ್ ಹಾಕಿ ಒದ್ದು ಒಳಗೆ ಹಾಕಬೇಕು ಎಂದು ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಭಗವಾನ್ ಅನಗತ್ಯವಾಗಿ ರಿಯಾಕ್ಷನ್ ಕೊಡ್ತಾ ಇದ್ದಾರೆ. ಭಗವಾನ್ ಮತ್ತು ಪ್ರಕಾಶ್ ರೈ ಹುಚ್ಚುಚ್ಚರಾಗಿ ಮಾತಾಡ್ತಾ ಇದ್ದಾರೆ. ಅವರಿಗೆ ಯಾವುದೇ ಸಾಮಾಜಿಕ ಕಾಳಜಿ ಇಲ್ಲ. ಅವರಿಗೆ ನಂಬಿಕೆಗಳು ಇಲ್ಲವಾದರೆ ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳಬೇಕು. ಮತ್ತೊಬ್ಬರ ವಿಚಾರದ ಕುರಿತು ನಂಬಿಕೆ ಇಲ್ಲದ ಬಗ್ಗೆ ಯಾಕೆ ಮಾತನಾಡುತ್ತಾರೆ. ಅವರಿಬ್ಬರು ಪ್ರಚಾರದ ತೆವಲಿನಿಂದ ಮಾತನಾಡುತ್ತಿದ್ದಾರೆ. ಅವರಿಗೆ ಧೈರ್ಯ ಇದ್ದರೇ ಬೇರೆ ಧರ್ಮವಾದ ಖುರಾನ್ ಮತ್ತು ಬೈಬಲ್ ಬಗ್ಗೆ ಮಾತಾಡಲಿ ಎಂದು ಅವರ ವಿರುದ್ಧ ಆಕ್ರೋಶ ಹೊರಹಾಕಿದರು.

    ರಾಹುಲ್ ಗಾಂಧಿ ದೇವಸ್ಥಾನಕ್ಕೆ ಭೇಟಿ ಕುರಿತು ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ ಅವರಿಗೆ ಬುದ್ಧಿಮಟ್ಟ ಜಾಸ್ತಿಯಾಗಲಿ. ದೇವಸ್ಥಾನಕ್ಕೆ ಹೋಗಲಿ ಅವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದು ಹಾರೈಸುತ್ತೇನೆ. ಸೋಲು ಆರಂಭಗೊಂಡ ಬಳಿಕ ರಾಹುಲ್ ದೇವಸ್ಥಾನ ಸುತ್ತೋಕೆ ಶುರು ಮಾಡಿದ್ದಾರೆ. ಈ ಮೊದಲು ಯಾವ ದೇವಸ್ಥಾನಕ್ಕೂ ಅವರು ಹೋಗಿಲ್ಲ. ಅವರು ಯಾರು ಅನ್ನೋದೇ ಅವರೇ ಗೊಂದಲದಲ್ಲಿದ್ದರು. ದೇವಸ್ಥಾನಗಳನ್ನು ಸುತ್ತುತ್ತಿರುವ ರಾಹುಲ್ ಅವರು ರಾಮ ಮಂದಿರ ಬಗೆಗಿನ ಕಾಂಗ್ರೆಸ್ ನಿಲುವು ಏನು ಅನ್ನೋದನ್ನು ಬಹಿರಂಗಪಡಿಸಲಿ ಎಂದು ಪ್ರಶ್ನಿಸಿದರು.

    ಧಾರವಾಡದಿಂದ ನೀರಾವರಿ ನಿಗಮ ಸ್ಥಳಾಂತರ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಸರ್ಕಾರ ಅವರ ಸರ್ಕಾರ ಅನ್ನೋದು ಇಲ್ಲ. ಕೇಂದ್ರ ಆಗಿರಲಿ, ರಾಜ್ಯ ಆಗಿರಲಿ ಕೆಲವು ನಿಯಮಗಳು ಇರುತ್ತವೆ. ಕುಮಾರಸ್ವಾಮಿ ಹಾಗೂ ರೇವಣ್ಣ ಕಂಪೆನಿ ನೈರುತ್ಯ ರೇಲ್ವೆ ಬರುವಾಗ ಕೂಡಾ ಅಡ್ಡಗಾಲು ಹಾಕಿದ್ದರು. ಈಗಲೂ ಅದನ್ನೇ ಮುಂದುವರೆಸಿದ್ದಾರೆ, ನೀರಾವರಿ ನಿಗಮ ಹೊಸಪೇಟೆಗೆ ಸ್ಥಳಾಂತರ ಮಾಡಿ ಧಾರವಾಡ-ಬಳ್ಳಾರಿಗೆ ಜಗಳ ಹಚ್ಚುವ ಕೆಲಸ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಬರಪರಿಹಾರಕ್ಕಾಗಿ 2 ವರ್ಷದಿಂದ ಕೊಟ್ಟಂತಹ ಹಣ ಅನೇಕ ರೈತರಿಗೆ ತಲುಪಿಲ್ಲ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲೋಕಸಭೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ವಿಚಾರ ಪ್ರಸ್ತಾಪ

    ಲೋಕಸಭೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ವಿಚಾರ ಪ್ರಸ್ತಾಪ

    ನವದೆಹಲಿ: ಲೋಕಸಭೆ ಕಲಾಪದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರು, ಗಾಲಿ ಜನಾರ್ದನ ರೆಡ್ಡಿ ಭ್ರಷ್ಟಾಚಾರದ ಬಳಿಕ ಮಂಗಳವಾರ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ವಿಷಯವೂ ಪ್ರಸ್ತಾಪವಾಯಿತು.

    ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಭಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳಿಗೆ 350 ಕ್ಕೂ ಹೆಚ್ಚು ದೂರುಗಳನ್ನು ನೀಡಿದ್ದೇನೆ. ಆದರೆ ಕರ್ನಾಟಕದ ಎಸಿಬಿ ಮುಖ್ಯಸ್ಥರು ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮಕೈಗೊಳ್ಳಲಿಲ್ಲ. ಕಾರಣ ಅವರು ಸಿದ್ದರಾಮಯ್ಯ ಅಧೀನದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಆರೋಪಿಸಿದರು. ಇದಕ್ಕೆ ಕಾಂಗ್ರೆಸ್ ಸಂಸದರು ಭಾರೀ ಆಕ್ಷೇಪ ವ್ಯಕ್ತಪಡಿದರು.

    ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಐಟಿ ದಾಳಿ ವಿಷಯವನ್ನು ಪ್ರಸ್ತಾಪಿಸಿದ ಆಂಧ್ರಪ್ರದೇಶದ ಟಿಡಿಪಿ ಸಂಸದ ಕೃಷ್ಟಪ್ಪ ನಿಮ್ಮಲ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು. ಇನ್ನು ರಾಜಸ್ಥಾನ ಆಳ್ವಾರ್ ಜಿಲ್ಲೆಯಲ್ಲಿ ಗೋವು ಕಳ್ಳನೆಂದು ಭಾವಿಸಿ ಅಕ್ಬರ್ ಎಂಬಾತನ ಮೇಲೆ ಸಾಮೂಹಿಕ ಹಲ್ಲೆ ನಡೆಸಿದ್ದ ಪ್ರಕರಣ ಸಂಸತ್ತಿನ ಉಭಯ ಸದನಗಳಲ್ಲೂ ಪ್ರಸ್ತಾಪವಾಯಿತು.

    ಗೃಹಸಚಿವ ರಾಜನಾಥ್ ಸಿಂಗ್, ಸಾಮೂಹಿಕ ಹಲ್ಲೆ ಪ್ರಕರಣಗಳ ತನಿಖೆಗಾಗಿ ಉನ್ನತ ಮಟ್ಟದ ತಂಡ ರಚಿಸಲಾಗಿದೆ. ಅಗತ್ಯವಿದ್ದಲ್ಲಿ ಕಾನೂನು ಜಾರಿಗೆ ಗಮನ ಹರಿಸಲಾಗುವುದು ಎಂದರು. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ಈ ಮಧ್ಯೆ, ಸಂಸತ್ ಆವರಣದಲ್ಲಿ ಕೋತಿಗಳ ಕಾಟ ಹೆಚ್ಚಾಗಿದೆ ಅಂತಲೂ ಚರ್ಚೆ ನಡೆಯಿತು.