Tag: ಪ್ರಹ್ಲಾದ್ ಜೋಶಿ

  • ಮಹಾರಾಷ್ಟ್ರ ಮತಪಟ್ಟಿ ವಿಚಾರದಲ್ಲಿ ಕಾಂಗ್ರೆಸ್ ಡ್ರಾಮಾ: ಜೋಶಿ ತಿರುಗೇಟು

    ಮಹಾರಾಷ್ಟ್ರ ಮತಪಟ್ಟಿ ವಿಚಾರದಲ್ಲಿ ಕಾಂಗ್ರೆಸ್ ಡ್ರಾಮಾ: ಜೋಶಿ ತಿರುಗೇಟು

    ನವದೆಹಲಿ: ಮಹಾರಾಷ್ಟ್ರದಲ್ಲಿ (Maharashtra) ಹೊಸ ಮತದಾರರ ಸೇರ್ಪಡೆ ಪರಾದರ್ಶಕವಾಗಿಯೇ ಇದೆ. ಈ ವಿಚಾರದಲ್ಲಿ ಕಾಂಗ್ರೆಸ್ (Congress) ಡ್ರಾಮಾ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿರುಗೇಟು ನೀಡಿದ್ದಾರೆ.

    ಎಐಸಿಸಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ.

    ಖರ್ಗೆಜಿಯವರ ಆರೋಪಗಳು ಆಧಾರರಹಿತವಾಗಿದ್ದು, ಕಾಂಗ್ರೆಸ್ ಪಕ್ಷದ ಅನಗತ್ಯ ದ್ರಣವನ್ನು ಪ್ರಚೋದಿಸುವ ಪ್ರಯತ್ನ ಮಾಡುತ್ತಿದ್ದಾರೆ ಅಷ್ಟೇ ಎಂದು ಸಚಿವ ಜೋಶಿ ತಿರುಗೇಟು ನೀಡಿದ್ದಾರೆ.

    ಯಾವುದೂ ಆಕ್ರಮವಾಗಿಲ್ಲ: ಮಹಾರಾಷ್ಟ್ರದಲ್ಲಿ 26.46 ಲಕ್ಷ ಯುವ ಮತದಾರರು ಸೇರಿದಂತೆ 40.81 ಲಕ್ಷ ಮತದಾರರನ್ನು ಚುನಾವಣಾ ಆಯೋಗವು ಪಾರದರ್ಶಕವಾಗಿಯೇ ಸೇರಿಸಿದೆ. ಇದರಲ್ಲಿ ಯಾವುದೇ ರೀತಿಯ ಅಸಹಜ, ಅಕ್ರಮ ಪ್ರಕ್ರಿಯೆ ನಡೆದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ನೋಡನೋಡುತ್ತಿದ್ದಂತೆ ಮುಳುಗಿದ ಬೋಟ್ – 6 ಮೀನುಗಾರರ ರಕ್ಷಣೆ

    ಕೇಳಿದ್ದನ್ನೇ ಕೇಳುತ್ತಿದೆ ಕಾಂಗ್ರೆಸ್: ಚುನಾವಣಾ ಪ್ರಕ್ರಿಯೆಯ ಭಾಗವಾಗಿ ಚುನಾವಣಾ ಆಯೋಗ ಚುನಾವಣೆಗೆ ಮುನ್ನವೇ ಡೇಟಾವನ್ನು ಒದಗಿಸಿದೆ. ಆದರೆ, ಕಾಂಗ್ರೆಸ್ಸಿಗರು ಈಗ ವಿನಾಕಾರಣ ಸಮಸ್ಯೆ ಸೃಷ್ಟಿಸಲು ಮತ್ತೆ ಮತ್ತೆ ಕೇಳಿದ್ದನ್ನೇ ಕೇಳುತ್ತಿದ್ದಾರೆ ಎಂದು ಸಚಿವ ಜೋಶಿ ಅವರು ತಮ್ಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

     

  • ರಾಜ್ಯಕ್ಕೆ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚು ತೆರಿಗೆ ಹಂಚಿಕೆ: ಜೋಶಿ

    ರಾಜ್ಯಕ್ಕೆ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚು ತೆರಿಗೆ ಹಂಚಿಕೆ: ಜೋಶಿ

    – 51,876 ಕೋಟಿ ತೆರಿಗೆ ಹಂಚಿದ ಕೇಂದ್ರ

    ನವದೆಹಲಿ: ಕೇಂದ್ರ ಸರ್ಕಾರ (Union Government) ಕರ್ನಾಟಕಕ್ಕೆ (Karnataka) ಕಳೆದ ವರ್ಷಕ್ಕಿಂತ 10%ರಷ್ಟು ಹೆಚ್ಚಿಗೆ ತೆರಿಗೆ ಹಂಚಿಕೆ ಮಾಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

    ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಅಗತ್ಯ ಮಾಹಿತಿ ಹಂಚಿಕೊಂಡಿರುವ ಸಚಿವರು, 2025-26ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕಕ್ಕೆ 51,876 ಕೋಟಿ ರೂ. ತೆರಿಗೆ ಹಂಚಿಕೆ ಮಾಡಿದೆ ಎಂದಿದ್ದಾರೆ.

    2014-15ರಲ್ಲಿ 24,789.78 ಕೋಟಿ ರೂ. ತೆರಿಗೆ ಹಂಚಿಕೆ ಆಗಿದ್ದರೆ, 2025-2 6ರ ಆರ್ಥಿಕ ವರ್ಷ ಇದಕ್ಕಿಂತ 108% ರಷ್ಟು (5,1876 ಕೋಟಿ ರೂ.)ಅಧಿಕ ತೆರಿಗೆ ಹಂಚಿಕೆ ಮೊತ್ತವನ್ನು ಕರ್ನಾಟಕಕ್ಕೆ ಭರಿಸಲಾಗಿದೆ ಎಂದು ತಿಳಿಸಿದ್ದಾರೆ.

    ಪ್ರಧಾನಮಂತ್ರಿ ನರೇಂದ್ರ ‌ಮೋದಿ (PM Narendra Modi) ಅವರ ನಾಯಕತ್ವದಲ್ಲಿ ಕರ್ನಾಟಕ ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿದೆ. ರಾಜ್ಯಕ್ಕೆ ಅತ್ಯಧಿಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಡವರ ಮನೆಯಲ್ಲಿ ಫೋಟೋಶೂಟ್‌ ಮಾಡಿಸಿ ಮನರಂಜನೆ ತೆಗೆದುಕೊಳ್ತಾರೆ: ರಾಹುಲ್‌ಗೆ ಮೋದಿ ಕುಟುಕು

    15ನೇ ಹಣಕಾಸು ಆಯೋಗದಿಂದ ಕರ್ನಾಟಕದ ತೆರಿಗೆ ಪಾಲು 3.647% ರಷ್ಟು ಎಂದು ನಿಗದಿಪಡಿಸಲಾಗಿದೆ. 2004-2014ರ ದಶಕದ ಅವಧಿಯಲ್ಲಿ ರಾಜ್ಯಕ್ಕೆ ಕೇವಲ 81,795 ಕೋಟಿ ರೂ. ನೀಡಲಾಗಿತ್ತು. 2014-2024ರ‌‌ ದಶಕದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಬರೋಬ್ಬರಿ 2,85,452 ಕೋಟಿ ರೂ. ತೆರಿಗೆ ಹಂಚಿಕೆ ಮಾಡಿದೆ ಎಂದು ಅಂಕಿ ಅಂಶ ಸಹಿತ ವಿವರಣೆ ನೀಡಿದ್ದಾರೆ.

    15 ರೈಲ್ವೆ ಯೋಜನೆ: ಕೇಂದ್ರ ಸರ್ಕಾರ ರಾಜ್ಯಕ್ಕೆ ಬರೊಬ್ಬರಿ 7,564 ಕೋಟಿ ರೂ. ವೆಚ್ಚದಲ್ಲಿ 15 ನಿರ್ಣಾಯಕ ರೈಲ್ವೆ ಯೋಜನೆಗಳನ್ನು ನೀಡಿದೆ. ಇದು ರಾಜ್ಯಕ್ಕೆ ಅತ್ಯಧಿಕ ರೈಲ್ವೆ ಯೋಜನೆಗಳ ಕೊಡುಗೆಯಾಗಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

    ಸ್ಟಾರ್ಟ್ ಅಪ್ ಗೆ ತೆರಿಗೆ ವಿನಾಯಿತಿ: ಸ್ಟಾರ್ಟ್‌ ಅಪ್‌ಗಳಿಗೆ 10 ವರ್ಷಗಳ ಸಂಪೂರ್ಣ ತೆರಿಗೆ ವಿನಾಯಿತಿ ನೀಡಿದ್ದು, (ಏಪ್ರಿಲ್ 2030 ರವರೆಗೆ ಅನ್ವಯಿಸಲಿದೆ) ಜತೆಗೆ 10,000 ಕೋಟಿ ರೂ. ಅನುದಾನ ಸಹ ನೀಡಲಾಗಿದೆ ಎಂದಿದ್ದಾರೆ.

    ಕರ್ನಾಟಕದ ಬೆಳವಣಿಗೆಗೆ ಈ ಬಲಿಷ್ಠ ಸುಧಾರಣೆ ಕ್ರಮಗಳು ಮತ್ತು ದೊಡ್ಡ ಅವಕಾಶಗಳು‌ ಉಜ್ವಲ ಭವಿಷ್ಯ ರೂಪಿಸಲಿವೆ. ಇದರೊಂದಿಗೆ ಕರ್ನಾಟಕ ನಾವೀನ್ಯತೆಯ ಶಕ್ತಿ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಜೋಶಿ ಆಶಿಸಿದ್ದಾರೆ.

  • 3ನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಸ್ಫೂರ್ತಿದಾಯಕ ಬಜೆಟ್ – ಪ್ರಹ್ಲಾದ್ ಜೋಶಿ

    3ನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಸ್ಫೂರ್ತಿದಾಯಕ ಬಜೆಟ್ – ಪ್ರಹ್ಲಾದ್ ಜೋಶಿ

    – ಬಡ ಮತ್ತು ಮಧ್ಯಮ ವರ್ಗದವರ ಪ್ರಗತಿಗೆ ಪೂರಕ
    – ಕಿಸಾನ್ ಕ್ರೆಡಿಟ್ ಸಾಲ ಹೆಚ್ಚಿಸಿ ಅನ್ನದಾತರಿಗೆ ಆಶಾದಾಯಕ
    – ಮಾರಣಾಂತಿಕ ಕ್ಯಾನ್ಸರ್ ರೋಗಿಗಳ ಪಾಲಿಗೆ ಸಂಜೀವಿನಿ

    ನವದೆಹಲಿ: ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟವಾಗುವ ಧ್ಯೇಯಕ್ಕೆ ಅತ್ಯಂತ ಸ್ಫೂರ್ತಿದಾಯಕ ಬಜೆಟ್ ಇದಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಹೇಳಿದರು.

    ರಾಷ್ಟ್ರ ರಾಜಧಾನಿಯಲ್ಲಿ ಪ್ರಸಕ್ತ ಬಜೆಟ್ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ, ದೇಶದ ಆರ್ಥಿಕ ಪ್ರಗತಿಯ ಮುನ್ನೋಟಕ್ಕೆ ಆಶಾದಾಯಕ ಬಜೆಟ್ ಆಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಬಡ ಮತ್ತು ಮಧ್ಯಮ ವರ್ಗಗದವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಪೂರಕವಾಗಿ ಪ್ರಸಕ್ತ ಸಾಲಿನ ಮುಂಗಡ ಪತ್ರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ ಎಂದು ತಿಳಿಸಿದರು.

    ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸಮರ್ಥ ಆಡಳಿತ, ನಾಯಕತ್ವ ಮತ್ತು ದೂರದೃಷ್ಟಿಯಿಂದಾಗಿ ಭಾರತ ಆರ್ಥಿಕವಾಗಿ ಬಹು ವೇಗದಲ್ಲಿ ಪ್ರಗತಿ ಸಾಧಿಸುತ್ತಿದೆ. ಎನ್‌ಡಿಎ ಸರ್ಕಾರ, ತನ್ನ ಮೂರನೇ ಅವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗಗಳವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿರಿಸಿ ಅಭೂತಪೂರ್ವ ಬಜೆಟ್ ಅನ್ನು ಪ್ರಸ್ತುತಪಡಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.ಇದನ್ನೂ ಓದಿ: ಗುಂಡೇಟಿನ ಗಾಯಕ್ಕೆ ಬ್ಯಾಂಡೇಜ್ ನೆರವು – ಕೇಂದ್ರಕ್ಕೆ ಐಡಿಯಾನೇ ಇಲ್ಲ: ರಾಗಾ ಗುದ್ದು

    ಕೇಂದ್ರದ ಈ ಬಜೆಟ್ ಸಮೃದ್ಧ, ಸ್ವಾವಲಂಬಿ ಮತ್ತು ಜಾಗತಿಕವಾಗಿ ಮುನ್ನಡೆ ಸಾಧಿಸುತ್ತಿರುವ ಭಾರತಕ್ಕೆ ಮತ್ತಷ್ಟು ಸುಭದ್ರ ಅಡಿಪಾಯ ಹಾಕಿದೆ. ಆರ್ಥಿಕತೆ ಮತ್ತು ಹೂಡಿಕೆಯಲ್ಲಿ ಗಣನೀಯ ಪ್ರಗತಿಗೆ ದಿಕ್ಸೂಚಿಯಂತಿದೆ ಎಂದರು.

    ಜನರ ನಿರೀಕ್ಷೆ ಮೀರಿದ ಆಶಾದಾಯಕ ಬಜೆಟ್:
    2024-25ನೇ ಆರ್ಥಿಕ ವರ್ಷದ ಪ್ರಸಕ್ತ ಬಜೆಟ್‌ನಲ್ಲಿ ಮಧ್ಯಮ ವರ್ಗ, ಉದ್ಯಮ, ಕೃಷಿ, ಮೆಡಿಕಲ್ ಹೀಗೆ ಸರ್ವ ಕ್ಷೇತ್ರಕ್ಕೂ ಬಂಪರ್ ಕೊಡುಗೆ ನೀಡಲಾಗಿದೆ. ಇದೊಂದು ಜನರ ನಿರೀಕ್ಷೆಯನ್ನೂ ಮೀರಿದ ಅಭೂತಪೂರ್ವ ಬಜೆಟ್ ಆಗಿದೆ. ಪ್ರಮುಖವಾಗಿ 12 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿ ಕಲ್ಪಿಸುವ ಮೂಲಕ ಮಧ್ಯಮ ವರ್ಗಕ್ಕೆ ಬಿಗ್ ಗಿಫ್ಟ್ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಿರುವುದು ರೈತ ವರ್ಗಕ್ಕೆ ಆಶಾದಾಯಕವಾಗಿದೆ.

    ಇನ್ನು, ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ತೆರೆಯಲು ನಿರ್ಧರಿಸಿ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಬಡ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದೆ. ಐಐಟಿ, ಮೆಡಿಕಲ್, ಆರೋಗ್ಯ, ಸಣ್ಣ ಉದ್ಯಮ ಹೀಗೆ ಸರ್ವ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಸ್ಫೂರ್ತಿದಾಯಕ ಬಜೆಟ್ ಆಗಿದೆ.

    ನವೀಕರಿಸಬಹುದಾದ ಇಂಧನಕ್ಕೆ ಉತ್ತೇಜನ:
    ಹೊಸ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಗಮನಾರ್ಹ ಉತ್ತೇಜನ ನೀಡಿದೆ. ಕೇಂದ್ರದಲ್ಲಿ ಯುಪಿಎ ಸರ್ಕಾರದ ಅವಧಿಯ ಬಜೆಟ್‌ನಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಶಕ್ತಿಯ ಉತ್ಪಾದನೆಗೆ ಸಾಧಾರಣ ಸಂಪನ್ಮೂಲಗಳನ್ನು ಮೀಸಲಿಡಲಾಗುತ್ತಿತ್ತು. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ತನ್ನ ನಿಧಿಯನ್ನು ಗಮನಾರ್ಹವಾಗಿ ವಿಸ್ತರಿಸಿದೆ ಎಂದರು.

    ಒಟ್ಟಾರೆ ದೇಶದ ಸುಸ್ಥಿರತೆ, ಬೆಳವಣಿಗೆ ಮತ್ತು ಸಮೃದ್ಧಿಯೆಡೆಗೆ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸಿದೆ ಎಂದು ಪ್ರತಿಪಾದಿಸಿದರು.ಇದನ್ನೂ ಓದಿ: ಫೆ.16ರಂದು ಹಸೆಮಣೆ ಏರಲು ಸಜ್ಜಾದ ‘ಪಾರು’ ನಟಿ ಮಾನಸಿ ಜೋಶಿ

  • ರಾಜ್ಯಕ್ಕೆ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧ – ಜೋಶಿ

    ರಾಜ್ಯಕ್ಕೆ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧ – ಜೋಶಿ

    – ಸಿದ್ದರಾಮಯ್ಯಗೆ ಬಡವರ ಬಗ್ಗೆ ಕಾಳಜಿ ಇದ್ರೆ ಅಕ್ಕಿ ಖರೀದಿಸಲಿ ಎಂದ ಸಚಿವ

    ಹುಬ್ಬಳ್ಳಿ: 10 ಕೆಜಿ ಅಕ್ಕಿ (Rice) ರಾಜ್ಯ ಸರ್ಕಾರ‌‌ ನೀಡುತ್ತಿಲ್ಲ. ದರ ಕಡಿಮೆ ಮಾಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದ್ರೆ ರಾಜ್ಯ ಸರ್ಕಾರದಿಂದ ಯಾವುದೇ ಆರ್ಡರ್ ಬಂದಿಲ್ಲ. ಎಫ್‌ಸಿಐದಲ್ಲಿ ಅಕ್ಕಿ ಲಭ್ಯವಿದೆ, ರಾಜ್ಯ ಸರ್ಕಾರ ಬೇಕಾದ್ರೆ ಕಡಿಮೆ ದರದಲ್ಲಿ ಅಕ್ಕಿ ಕೊಂಡುಕೊಳ್ಳಬಹದು ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಅಕ್ಕಿ ನೀಡಿದ್ರೆ ರಾಜ್ಯ ಸರ್ಕಾರಕ್ಕೆ ನೂರಾರು ಕೋಟಿ ಹಣ ಉಳಿಯುತ್ತದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಬಡವರ ಬಗ್ಗೆ ಕಾಳಜಿ ಇದ್ರೆ ನಮ್ಮಿಂದ ಕಡಿಮೆ ದರದಲ್ಲಿ ಅಕ್ಕಿ ತೆಗೆದುಕೊಳ್ಳಬಹದು. ಈ ಹಿಂದೆ ರಾಜ್ಯ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಎರಡು ಬಾರಿ ಅಕ್ಕಿಗಾಗಿ ಕೇಂದ್ರ ಬಳಿ ಮನವಿ ಮಾಡಿದ್ದಾರೆ. ಹೀಗಾಗಿ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಮುಂದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ – 18 ಟೆಂಟ್‌ಗಳು ಭಸ್ಮ, ಪರಿಸ್ಥಿತಿ ಅವಲೋಕಿಸಿದ ಮೋದಿ

    ಇನ್ನೂ ಸ್ವಾಮಿತ್ವ ಯೋಜನೆ ಕುರಿತು ಮಾತನಾಡಿದ ಸಚಿವರು, ಇದು 100% ಭಾರತ ಸರ್ಕಾರದ ಯೋಜನೆ. ಆದರೆ ಈ ಯೋಜನೆಗೆ ರಾಜ್ಯ ಸರ್ಕಾರದ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ಕೊಟ್ಟಿದ್ದಾರೆ. ಇದು ಪ್ರಧಾನಿಗಳ ಬಹು ಆಕಾಂಕ್ಷೆಯ ಯೋಜನೆ. ಆರಂಭದಲ್ಲಿ ರಾಜ್ಯದಲ್ಲಿ 30,715 ಹಳ್ಳಿಗಳ ಸರ್ವೆ ಕಾರ್ಯ ಈ ಯೋಜನೆಯಡಿ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕುಮಾರಸ್ವಾಮಿ ರಾಜ್ಯದ ಹಿತ ನೋಡಿ‌ ಮಾತನಾಡಲಿ – ಸಚಿವ ಎಂ.ಬಿ ಪಾಟೀಲ್

    ಕೇಂದ್ರ ಸರ್ಕಾರದಿಂದ 560 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ದೇಶದಲ್ಲಿ 3 ಲಕ್ಷ ಹಳ್ಳಿಗಳ ಸರ್ವೆ ಕಾರ್ಯ ನಡೆದಿದೆ. ಗ್ರಾಮೀಣ ಭಾಗದಲ್ಲಿ ವ್ಯಾಜ್ಯ, ಗಡಿ ಸಮಸ್ಯೆ, ಕಡಿಮೆ ಆಗಿದೆ. ಆದರೆ ನಿನ್ನೆ ಉದ್ಘಾಟನೆ ಮಾಡಿದ ಆಹ್ವಾನ ಪತ್ರದಲ್ಲಿ ಪ್ರಧಾನಿ ಮಂತ್ರಿ ಫೋಟೋ ಇಲ್ಲ. ಇದು ಕರ್ನಾಟಕ ಸರ್ಕಾರದ ಚಿಲ್ಲರೆತನ. ಈ ಚಿಲ್ಲರೆ ರಾಜಕೀಯ ಬಿಡಬೇಕು. ಈ ಯೋಜನೆಗೆ ಡ್ರೋನ್ ಸರ್ವೆ ಮಾಡಿಸಿತ್ತಿರೋದು ಕೇಂದ್ರ ಸರ್ಕಾರ, ಹಣ ನೀಡುತ್ತಿರುವುದು ಕೇಂದ್ರ ಸರ್ಕಾರ, ಇದನ್ನ ಮರೆಮಾಚಿ ರಾಜ್ಯ ಸರ್ಕಾರ ಚಿಲ್ಲರೆ ತನ ತೋರಿಸಿದೆ ಅಂತ ಜೋಶಿ ವಾಗ್ದಾಳಿ ನಡೆಸಿದರು.

  • ಮನಮೋಹನ್‌ ಸಿಂಗ್‌ ವಿಧಿವಶ – ಸಿದ್ದರಾಮಯ್ಯ, ಡಿಕೆಶಿ, ಹೆಚ್‌ಡಿಕೆ, ಜೋಶಿ ಸೇರಿ ಗಣ್ಯರ ಸಂತಾಪ

    ಮನಮೋಹನ್‌ ಸಿಂಗ್‌ ವಿಧಿವಶ – ಸಿದ್ದರಾಮಯ್ಯ, ಡಿಕೆಶಿ, ಹೆಚ್‌ಡಿಕೆ, ಜೋಶಿ ಸೇರಿ ಗಣ್ಯರ ಸಂತಾಪ

    ನವದೆಹಲಿ: ವಿಶ್ವಶ್ರೇಷ್ಠ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ (Manmohan Singh) ಅವರು ಅನಾರೋಗ್ಯದ ಹಿನ್ನೆಲೆ ಗುರುವಾರ ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಹಾಗೂ ವಿಪಕ್ಷ ನಾಯಕರು ಸೇರಿದಂತೆ ರಾಜ್ಯದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಸಿದ್ದರಾಮಯ್ಯ
    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ. ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

    ಡಿ.ಕೆ ಶಿವಕುಮಾರ್‌
    ರಾಜನೀತಿ, ಸಮಗ್ರತೆ ಮತ್ತು ಶಾಂತ ಶಕ್ತಿಯಿಂದ ವ್ಯಾಖ್ಯಾನಿಸಲಾದ ಯುಗವು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರ ನಿಧನದೊಂದಿಗೆ ಕೊನೆಗೊಳ್ಳುತ್ತದೆ. ಪ್ರಧಾನ ಮಂತ್ರಿಯಾಗಿ ಮತ್ತು ಆರ್ಥಿಕ ವಾಸ್ತುಶಿಲ್ಪಿಯಾಗಿ ರಾಷ್ಟ್ರದ ಬಗ್ಗೆ ಅವರ ದೃಷ್ಟಿಕೋನವು ಅದರ ಅತ್ಯಂತ ನಿರ್ಣಾಯಕ. ಅವರ ಅಗಲಿಕೆಯು ನನಗೆ ವೈಯಕ್ತಿಕ ನಷ್ಟವಾದಂತೆ ಭಾಸವಾಗುತ್ತಿದೆ. ನಿಜವಾದ ಮಣ್ಣಿನ ಮಗನಿಗೆ ವಿದಾಯ ಹೇಳುವ ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಹಾಗೂ ಆತ್ಮೀಯರಿಗೆ ದುಃಖ ಬರಿಸುವ ಶಕ್ತಿ ಕೊಡಲೆಂದು ನಾನು ಭಾವಿಸುತ್ತೇನೆ.

    ಹೆಚ್‌.ಡಿ ಕುಮಾರಸ್ವಾಮಿ
    ಭಾರತದ ಮಾಜಿ ಪ್ರಧಾನಮಂತ್ರಿಗಳು, ಪ್ರಖ್ಯಾತ ವಿತ್ತತಜ್ಞರು, ಆರ್ಥಿಕ ಸುಧಾರಣೆಗಳ ಹರಿಕಾರರೂ ಆಗಿದ್ದ ಡಾ.ಮನಮೋಹನ್ ಸಿಂಗ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ದೂರದೃಷ್ಟಿ, ಸಂಯಮ ಮತ್ತು ತಮ್ಮ ಆರ್ಥಿಕ ಮೇದಸ್ಸಿನಿಂದ ರಾಷ್ಟ್ರವನ್ನು ದುರಿತ ಕಾಲದಲ್ಲಿ ಸಶಕ್ತವಾಗಿ ಮುನ್ನಡೆಸಿದ್ದ ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅಪಾರ. ಆರ್ಥಿಕ ಸುಧಾರಣೆಗಳ ಮೂಲಕ ಭಾರತಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟವರು ಅವರು. ಅವರ ಕೊಡುಗೆಗಳು ಚಿರಸ್ಮರಣೀಯ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

    ಪ್ರಹ್ಲಾದ್‌ ಜೋಶಿ
    ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞರು, ಹಣಕಾಸು ಸಚಿವರಾಗಿದ್ದ ಶ್ರೀಮನಮೋಹನ್ ಸಿಂಗ್ ರವರು ದೈವಾಧೀನರಾದ ವಿಷಯ ಅತೀವ ನೋವನ್ನು ತಂದಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ. ಡಾ. ಮನಮೋಹನ್ ಸಿಂಗ್ ಅವರ ಸಾವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಈ ಸಮಯಲ್ಲಿ ಅವರ ಕುಟುಂಬಕ್ಕೆ ಧೈರ್ಯ ಸಿಗಲೆಂದು ನಾನು‌ ದೇವರಲ್ಲಿ‌ ಪ್ರಾರ್ಥಿಸುತ್ತೇನೆ.

    ಹೆಚ್‌.ಡಿ ದೇವೇಗೌಡ
    ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿದು ತುಂಬಾ ದುಃಖವಾಗಿದೆ. ಅವರು ಒಳ್ಳೆಯ ಮತ್ತು ತಾಳ್ಮೆಯ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ. ನಾನು ಗೌರವಿಸುವ ಮತ್ತು ಮೌಲ್ಯಯುತ ವ್ಯಕ್ತಿತ್ವವುಳ್ಳ ಸಹೋದ್ಯೋಗಿ, ಭಾರತದ ಆರ್ಥಿಕತೆಯ ಭವಿಷ್ಯ ಬದಲಿಸಿದ ವ್ಯಕ್ತಿ ಮನಮೋಹನ್‌ ಸಿಂಗ್‌. ಅವರನ್ನ ಇತಿಹಾಸದಲ್ಲಿ ನೆನಪಿಸಿಕೊಳ್ಳುತ್ತಾರೆ… ಆರ್‌ಐಪಿ.

    ಆರ್‌. ಅಶೋಕ್‌
    ಭಾರತದ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರು ವಿಧಿವಶರಾದ ಸುದ್ದಿ ತೀವ್ರ ನೋವುಂಟು ಮಾಡಿದೆ. ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಸುಮಾರು ಐದು ದಶಕಗಳ ಕಾಲ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ‌ ಪ್ರಾರ್ಥಿಸುತ್ತೇನೆ.

    ಬಿ.ವೈ ವಿಜಯೇಂದ್ರ
    ದೇಶದ ಅರ್ಥ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸಿ, ಆರ್ಥಿಕ ಉದಾರೀಕರಣದ ರೂವಾರಿಯಾಗಿ ಭಾರತದ ಬೆಳವಣಿಗೆಗೆ ಅಮೋಘ ಕೊಡುಗೆ ನೀಡಿದ್ದ ವಿಶ್ವ ಕಂಡ ಶ್ರೇಷ್ಠ ಆರ್ಥಿಕ ತಜ್ಞರೂ ಆದ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುವೆ. ಅವರ ಸರಳತೆ, ಸಜ್ಜನಿಕೆಯಿಂದಾಗಿ ಅಪರೂಪದ ವಿನಯವಂತ ಪಾಂಡಿತ್ಯ ಮೂರ್ತಿಯನ್ನು ಅವರಲ್ಲಿ ಕಾಣುವಂತಾಗಿತ್ತು. ಪಕ್ಷಾತೀತವಾಗಿ ಎಲ್ಲರ ಹೃದಯದಲ್ಲೂ ಸ್ನೇಹದ ಬಾಂಧವ್ಯ ಬೆಸೆದಿದ್ದ ಅವರು ಅಕ್ಷರಶಃ ಅಜಾತಶತ್ರುವಾಗಿದ್ದರು. ಎಂದೂ ಯಾರೊಂದಿಗೂ ವಿರಸ ಕಟ್ಟಿಕೊಳ್ಳದೇ ಒಬ್ಬ ಶಿಸ್ತು ಬದ್ಧ ಆರ್ಥಿಕ ‌ಸಲಹೆಗಾರರಾಗಿ, ಸರಳತೆಯ ರಾಜಕಾರಣಿಯಾಗಿ, ಭಾರತದ ಪ್ರಧಾನಿಗಳಾಗಿ ಅವರ ಹತ್ತು ವರ್ಷಗಳ ಸುದೀರ್ಘ ಸೇವೆ ಮಹತ್ವದ ಮೈಲಿಗಲ್ಲು. ಭಾರತೀಯ ರಿಸರ್ವ್ ಬ್ಯಾಂಕ್’ನ ಗವರ್ನರ್ ಆಗಿ, ದೇಶದ ವಿತ್ತ ಸಚಿವರಾಗಿ ಅವರು ಇಟ್ಟ ಹೆಜ್ಜೆಗಳು ಆರ್ಥಿಕ ಸುಧಾರಣೆಯ ಮಹತ್ವದ ತಿರುವುಗಳು. ಮನಮೋಹನ್ ಸಿಂಗ್ ಅವರ ಅಗಲಿಕೆಯಿಂದ ಒಬ್ಬ ಸಜ್ಜನಿಕೆಯ ಆಡಳಿತಗಾರರನ್ನಷ್ಟೇ ದೇಶ ಕಳೆದುಕೊಂಡಿಲ್ಲ, ಮೃದು ಭಾಷೆಯ ಒಬ್ಬ ಮಹಾನ್ ಶ್ರೇಷ್ಠ ಆರ್ಥಿಕ ತಜ್ಞನನ್ನು ಕಳೆದುಕೊಂಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ ಭಾರತದ ಇತಿಹಾಸದಲ್ಲಿ ಮನಮೋಹನ್ ಸಿಂಗ್ ಅವರ ವ್ಯಕ್ತಿತ್ವ, ಕೊಡುಗೆ ಹಾಗೂ ಸಾಧನೆಗಳು ಭಾರತದ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ. ಅಗಲಿದ ಮಹಾನ್ ಚೇತನಕ್ಕೆ ಗೌರವಪೂರ್ವಕ ನಮನಗಳು.

  • ಸಿ.ಟಿ ರವಿ ಪ್ರಕರಣ ಸಿಐಡಿಗೆ ಒಪ್ಪಿಸಲಾಗಿದೆ: ಪರಮೇಶ್ವರ್

    ಸಿ.ಟಿ ರವಿ ಪ್ರಕರಣ ಸಿಐಡಿಗೆ ಒಪ್ಪಿಸಲಾಗಿದೆ: ಪರಮೇಶ್ವರ್

    – ಜೋಶಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ ಎಂದ ಗೃಹ ಸಚಿವ

    ಹುಬ್ಬಳ್ಳಿ: ಸಿಟಿ ರವಿ (CT Ravi) ಆ ರೀತಿ ಹೇಳಿಲ್ಲ ಎನ್ನುತ್ತಾರೆ. ಹೆಬ್ಬಾಳ್ಕರ್ (Lakshmi Hebbalkar) ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಎಂದು ಹೇಳುತ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಪ್ರಕರಣವನ್ನು ಸಿಐಡಿಗೆ (CID) ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwar)  ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು. ಸಿ.ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಸ್ಪೀಕರ್ ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನು ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ. ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 6 ಗಂಟೆಗಳ ಕಾಲ ಸರ್ಕಾರಿ ಅಧಿಕಾರಿ ಡಿಜಿಟಲ್ ಅರೆಸ್ಟ್‌ – 19 ಲಕ್ಷ ರೂ. ವಂಚನೆ

    ಸಿಟಿ ರವಿ ಹಲ್ಲೆ ಮಾಡಿದವರ ಮೇಲೆ ಪ್ರಕರಣ ವಿಳಂಬ ವಿಚಾರವಾಗಿ ಮಾತನಾಡಿದ ಅವರು, ಕೆಲವೊಂದು ಕಾರಣಕ್ಕೆ ವಿಳಂಬವಾಗಿರಬಹುದು. ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದರೂ ಅದನ್ನು ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡುತ್ತಾರೆ ಎಂದು ನಾವು ಇಲಾಖೆ ನಡೆಸಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಬಿಗ್‌ ಅಪ್ಡೇಟ್‌ – ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ಸದ್ದಿಲ್ಲದೇ ತನಿಖೆ ಮುಗಿಸಿದ ಸರ್ಕಾರ

    ಜಿ.ಪರಮೇಶ್ವರ್ ಅಸಮರ್ಥ ಗೃಹ ಸಚಿವ ಎಂಬ ಜೋಶಿ ಲೇವಡಿ ವಿಚರ‍್ವಾಗಿ ಪ್ರತಿಕ್ರಿಯಿಸಿದ ಅವರು, ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಗುಲಾಬ್ ಜಾಮೂನ್ ಅಂತ ನಂಬರ್ ಸೇವ್ ಮಾಡಿಕೊಂಡಿದ್ದ ಶ್ವೇತಾ – ವರ್ತೂರ್‌ ಪ್ರಕಾಶ್‌ಗೆ ಬಂಧನ ಭೀತಿ?

  • ಸಿ.ಟಿ ರವಿ ಫೇಕ್‌ ಎನ್‌ಕೌಂಟರ್‌ ಮಾಡಬೇಕೆಂಬ ವಿಚಾರ ಅಲ್ಲಿನ ಪೊಲೀಸ್‌ ತಂಡಕ್ಕೆ ಇತ್ತು ಅನಿಸುತ್ತೆ: ಜೋಶಿ ಬಾಂಬ್‌

    ಸಿ.ಟಿ ರವಿ ಫೇಕ್‌ ಎನ್‌ಕೌಂಟರ್‌ ಮಾಡಬೇಕೆಂಬ ವಿಚಾರ ಅಲ್ಲಿನ ಪೊಲೀಸ್‌ ತಂಡಕ್ಕೆ ಇತ್ತು ಅನಿಸುತ್ತೆ: ಜೋಶಿ ಬಾಂಬ್‌

    ಬಾಗಲಕೋಟೆ: ಮಾಧ್ಯಮದವರು ಇಲ್ಲದೇ ಇದ್ದಿದ್ರೆ, ಸಿ.ಟಿ ರವಿ (CT Ravi) ಅವರನ್ನ ಫೇಕ್‌ ಎನ್‌ಕೌಂಟರ್‌ ಮಾಡುವಂತಹ ವಿಚಾರ ಅಲ್ಲಿನ ಪೊಲೀಸ್‌ ತಂಡಕ್ಕೆ ಇತ್ತು ಅನ್ನಿಸುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಬಾಂಬ್‌ ಸಿಡಿಸಿದ್ದಾರೆ.

    ಸಿ.ಟಿ ರವಿ ಅವರನ್ನು ಬಂಧಿಸಿದ್ದ ವಿಚಾರ ಕುರಿತು ಬಾಗಲಕೋಟೆಯಲ್ಲಿ (Bagalkote) ಮಾತನಾಡಿದ ಅವರು, ಅವಕಾಶ ಸಿಕ್ಕಿದ್ರೆ ಸಿ.ಟಿ ರವಿ ಅವರನ್ನು ಮುಗಿಸಬೇಕು ಅಂತಾ ಯೋಚನೆ ಮಾಡಿದ್ದರು ಅನ್ನಿಸುತ್ತೆ. ಆದ್ರೆ ಅವರಿಗೆ ಸರಿಯಾದ ಅವಕಾಶ ಸಿಕ್ಕಿಲ್ಲ. ಏಕೆಂದರೆ ಆಗ ನಮ್ಮ ಮತ್ತೊಬ್ಬರು ಎಂಎಲ್‌ಸಿ ಕೇಶವ್‌ ಪ್ರಸಾದ್‌ ಜೊತೆಯಲ್ಲಿದ್ದರು. ಮಾಧ್ಯಮದವರಿಂದ ನಮಗೆ ಲೈವ್‌ ಲೊಕೇಶನ್‌ ಸಿಗ್ತಾ ಇತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು – ಮುಖ್ಯಶಿಕ್ಷಕ ಸೇರಿ 6 ಶಿಕ್ಷಕರು ಅಮಾನತು

    ನಿಜವಾಗ್ಲೂ ನಾವು ಮಾಧ್ಯಮದವರಿಗೆ ಧನ್ಯವಾದ ಹೇಳಬೇಕು. ಅಷ್ಟು ರಾತ್ರಿಯಲ್ಲೂ ಪೊಲೀಸರ ಬೆನ್ನತ್ತಿ, ವಿಡಿಯೋ ಮಾಡಿ, ಲೈವ್‌ ಲೊಕೇಶನ್‌ ಹಾಕ್ತಾ ಇದ್ರು. ಹಾಗಾಗಿ ಸಿ.ಟಿ ರವಿ ಅವರನ್ನ ಮುಗಿಸಲು ಅವಕಾಶ ಸಿಕ್ಕಿಲ್ಲ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಇದು ಸಂಪೂರ್ಣವಾಗಿ ಗೃಹ ಇಲಾಖೆಯ ವೈಫಲ್ಯ, ಹೀಗಾಗಿ ನಾವಿದನ್ನ ಇಲ್ಲಿಗೆ ಬಿಡಲ್ಲ. ಈಗಾಗಲೇ ನಾನು, ಸಿ.ಟಿ ರವಿ ಅವರಿಗೆ ಸೂಕ್ತ ಕಾನೂನು ಸಲಹೆ ಪಡೆಯುವಂತೆ ಹೇಳಿದ್ದೇನೆ. ಈ ಕುತಂತ್ರದ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಲು ನಾವು ಕೋರ್ಟ್‌ಗೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಪ್ ಕಾರ್ನ್‌ ಮೇಲೆ 3 ರೀತಿಯ ಜಿಎಸ್‌ಟಿ – ಕೌನ್ಸಿಲ್‌ ಸಭೆಯಲ್ಲಿ ಒಪ್ಪಿಗೆ; ಯಾವುದು ದುಬಾರಿ?

    ಇನ್ನೂ ಸಿ.ಟಿ ರವಿ ಅವಹೇಳನಕಾರಿ ಶದ್ಧ ಬಳಸಿದಕ್ಕೆ ಎನ್ಕೌಂಟರ್ ಮಾಡ್ತಿದ್ರಾ? ಎಂಬ ಮಾಧ್ಯಮದವ್ರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಅದೊಂದೇ ಕಾರಣ ಅಂತ ನಾನು ಹೇಳೋದಿಲ್ಲ. ಈ ರೀತಿ ಒಬ್ಬರನ್ನ ಎನ್‌ಕೌಂಟರ್‌ ಮಾಡಿಬಿಟ್ರೆ, ಬಿಜೆಪಿಯವ್ರು ಮುಂದೆ ಯಾವುದೇ ಚಟುವಟಿಕೆ ಮಾಡಲ್ಲ, ಹೆದರಿಕೊಂಡು ಮೂಲೆ ಸೇರುತ್ತಾರೆ ಅಂತ ಭಯ ಸೃಷ್ಟಿ ಮಾಡುವ ಪ್ರಯತ್ನ ಎಂದು ಅಭಿಪ್ರಾಯಪಟ್ಟಿದ್ದಾರೆ.

    ನಾನು ವಿಶೇಷವಾಗಿ ಪೊಲೀಸರಿಗೆ ಹೇಳೋದು, ನೀವು ಈ ರೀತಿ ರಾಜಕೀಯ ಕೈಗೊಂಬೆಗಳಾಗಿ ವರ್ತಿಸಬಾರದು. ಏಕೆಂದರೆ ನಾಳೆ ಸರ್ಕಾರ ಬದಲಾಗುತ್ತೆ. ಸರ್ಕಾರದಲ್ಲಿ ಅಧಿಕಾರಕ್ಕೆ ಬರುವವರೂ ಚೇಂಜ್ ಆಗ್ತಾ ಇರ್ತಾರೆ, ಇದನ್ನ ನೆನಪಿಟ್ಟುಕೊಳ್ಳಬೇಕು ಎಂದು ಪೊಲೀಸರಿಗೆ ಖಡಕ್ ಎಚ್ವರಿಕೆ‌ನೀಡಿದ್ದಾರೆ. ಇದನ್ನೂ ಓದಿ: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವ್ರಿಗೆ ಲಿಂಗಾಯತ ವಿರೋಧಿ ಕಾಂಗ್ರೆಸ್‌ ಸರ್ಕಾರದಿಂದ 10,000 ಬಹುಮಾನ: ಯತ್ನಾಳ್‌ ಕಿಡಿ

  • ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಿಂದ ಕನ್ನಡಿಗರಿಗೆ ದ್ರೋಹ: ರಾಜ್ಯಸಭೆ ಸಂಸದ ಜಿ.ಸಿ ಚಂದ್ರಶೇಖರ್ ಆಕ್ರೋಶ

    ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಿಂದ ಕನ್ನಡಿಗರಿಗೆ ದ್ರೋಹ: ರಾಜ್ಯಸಭೆ ಸಂಸದ ಜಿ.ಸಿ ಚಂದ್ರಶೇಖರ್ ಆಕ್ರೋಶ

    ನವದೆಹಲಿ: ರಾಜ್ಯದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಪ್ರಹ್ಲಾದ್ ಜೋಶಿ (Pralhad Joshi) ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ. ದೆಹಲಿಯಲ್ಲಿ ನರೇಂದ್ರ ಮೋದಿ, ಅಮಿತ್ ಶಾ ಅವರ ಓಲೈಸುವ ರಾಜಕೀಯ ಮಾಡುತ್ತಿದ್ದು, ರಾಜ್ಯಕ್ಕೆ ಅವರ ಕೊಡುಗೆ ಶೂನ್ಯ ಎಂದು ರಾಜ್ಯಸಭೆ ಸಂಸದ ಜಿ.ಸಿ ಚಂದ್ರಶೇಖರ್ (G.C.Chandrashekhar) ವಾಗ್ದಾಳಿ ನಡೆಸಿದ್ದಾರೆ.

    ದೆಹಲಿಯಲ್ಲಿ ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆಡಳಿತ ಪಕ್ಷಕ್ಕಿಂತ ಕಲಾಪ ವಿರೋಧ ಪಕ್ಷಕ್ಕೆ ಮುಖ್ಯ. ಜನಪರ ಧ್ವನಿ ಎತ್ತಲು ಕಲಾಪ ನಮಗೆ ವೇದಿಕೆ. ಆದರೆ, ನಮಗೆ ಇಲ್ಲಿ ಅವಕಾಶ ಸಿಗುತ್ತಿಲ್ಲ. ಧನ್ಕರ್ ಅವರ ಅವಧಿಯಲ್ಲಿ ಹೆಚ್ಚು ಕಾಲ ಕಲಾಪ ಮುಂದೂಡಿಕೆಯಾಗಿದೆ. ಇದನ್ನೂ ಓದಿ: ಸಂಸತ್‌ ಭವನ ಮೇಲಿನ ದಾಳಿಗೆ 23 ವರ್ಷ – ಹುತಾತ್ಮಕರಿಗೆ ಮೋದಿ ಸೇರಿ ಗಣ್ಯರಿಂದ ನಮನ

    ವೆಂಕಯ್ಯನಾಯ್ಡು ಅವರು ಹೀಗೆ ತಾರತಮ್ಯ ಮಾಡಿರಲಿಲ್ಲ. ಅವರು ನ್ಯಾಯಾಧೀಶರ ರೀತಿ ವರ್ತಿಸಬೇಕು. ಆದರೆ, ಅವರು ಆಡಳಿತ ಪಕ್ಷಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರಿಗೆ ಮೈಕ್ ಆನ್ ಮಾಡಲ್ಲ, ಕ್ಯಾಮೆರಾದಲ್ಲಿ ತೋರಿಸಲ್ಲ. ಎಲ್ಲ ಸದಸ್ಯರಿಗೂ ತಮ್ಮದೇ ಆದ ಗೌರವ ಇರುತ್ತೆ. ಎಲ್ಲರಿಗೂ ಇಲ್ಲಿ ಗೌರವ ಕೊಡಬೇಕು. ನಮ್ಮದು ಬಹುಮತ ಇಲ್ಲ ಅಂತಾ ಅವಿಶ್ವಾಸ ಮಂಡನೆ ಮಾಡಬಾರದು ಅಂತಲ್ಲ. ಜನ ವಿರೋಧಿ ನೀತಿಗಳನ್ನು ಖಂಡಿಸಲು ನಾನು ನಮ್ಮ ಜವಾಬ್ದಾರಿ ನಿಭಾಯಿಸಬೇಕು. ಸಭಾಪತಿ ಅವರಿಗೆ ಎಚ್ಚರಿಕೆ ನೀಡಲು ನಾವು ಇದನ್ನು ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಕಲಾಪಗಳು ಮುಂದೂಡಿಕೆ ಬಗ್ಗೆ ನಮಗೂ ಬೇಸರ ಇದೆ. ಬಜೆಟ್ ತಯಾರಾಗುವ ಸಮಯ ಇದು. ಈ ಸಮಯದಲ್ಲಿ ಕರ್ನಾಟಕದ ಬಗ್ಗೆ ಗಮನ ಸೆಳೆಯಬೇಕು. ಆದರೆ, ರಾಜ್ಯದ ಕೇಂದ್ರ ಸಚಿವರು, ಬಿಜೆಪಿ ಸಂಸದರು ಮಾತನಾಡುತ್ತಿಲ್ಲ. ನೀರಾವರಿ ಯೋಜನೆ ಸೇರಿ ಪ್ರಮುಖ ಯೋಜನೆ ಬಗ್ಗೆ ಮಾತನಾಡುತ್ತಿಲ್ಲ. ಪಕ್ಷಪಾತ ಬಿಟ್ಟು ರಾಜ್ಯಕ್ಕೆ ಆಗುವ ಅನ್ಯಾಯ ಖಂಡಿಸಬೇಕಿದೆ. ನಮಗೆ ಮಾತನಾಡಲು ಬಿಡುತ್ತಿಲ್ಲ. ಆಡಳಿತದಲ್ಲಿರುವ ಬಿಜೆಪಿ ನಾಯಕರಾದರೂ ರಾಜ್ಯದ ಬಗ್ಗೆ ಮಾತನಾಡಬೇಕು ಅವರು ಮಾತನಾಡುತ್ತಿಲ್ಲ. ಇದನ್ನೂ ಓದಿ: ರಾಜ್ಯದಲ್ಲಿ 3 ಸಾವಿರ ಹೊಸ ಅಂಗನವಾಡಿ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ- ಲಕ್ಷ್ಮಿ ಹೆಬ್ಬಾಳ್ಕರ್

    ಪ್ರಹ್ಲಾದ್ ಜೋಶಿ ಹಿರಿಯ ಸಚಿವರಾಗಿದ್ದಾರೆ. ಆದರೆ ಅವರು ಮೋದಿ, ಅಮಿತ್ ಶಾ ಖುಷಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಮಹದಾಯಿಯಿಂದ ಎಷ್ಟು ಜನಕ್ಕೆ ಅನುಕೂಲ, ಅದನ್ನು ಮಾಡುವ ಪ್ರಯತ್ನ ಮಾಡುತ್ತಿಲ್ಲ. ಕೇವಲ ಅಲ್ಲಿಂದ ಇಲ್ಲಿಗೆ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಓಲೈಕೆ ರಾಜಕೀಯ ಮಾಡುತ್ತಿದ್ದಾರೆ. ಹಿರಿಯ ಸಚಿವರಾಗಿ ಪ್ರಹ್ಲಾದ್‌ ಜೋಶಿ ಕೊಡುಗೆ ಶೂನ್ಯ. ಅವರಿಂದ ಕನ್ನಡಿಗರಿಗೆ ದ್ರೋಹವಾಗುತ್ತಿದೆ ಎಂದು ಹೇಳಿದ್ದಾರೆ.

    ಒಂದು ದೇಶ, ಒಂದು ಚುನಾವಣೆ ಬಗ್ಗೆ ಮಾತನಾಡಿ, ಇದು ಸರಿಯಾದ ಚಿಂತನೆಯಲ್ಲ ಎಂದರು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಅಧಿಕಾರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಸಂವಿಧಾನ ರಾಜ್ಯಕ್ಕೆ ನೀಡಿದ ಸ್ವಾತಂತ್ರ್ಯ ಕಿತ್ತುಕೊಳ್ತಿದೆ. ರಾಜ್ಯಗಳನ್ನು ತನ್ನ ಗುಲಾಮಗಿರಿ ವ್ಯಾಪ್ತಿಗೆ ತರುವ ಪ್ರಯತ್ನ ಮಾಡುತ್ತಿದೆ. ದೇಶದಲ್ಲಿ ಇದನ್ನು ಮಾಡುವುದು ಸುಲಭ ಅಲ್ಲ. ಪ್ರತಿ ರಾಜ್ಯಕ್ಕೂ ತನ್ನದೇ ಆದ ವೈವಿಧ್ಯತೆ ಇದೆ. ಅದಕ್ಕೆ ತಕ್ಕಂತೆ ಚುನಾವಣೆ ಮಾಡಬೇಕು.

    ಮೊದಲು ಇದನ್ನು ಸಾರ್ವಜನಿಕ ಚರ್ಚೆಗೆ ಬಿಡಬೇಕು. ಜನರು, ವಿರೋಧ ಪಕ್ಷಗಳು ಒಮ್ಮತಕ್ಕೆ ಬರಬೇಕು. ಬಳಿಕ ಕಮಿಟಿ ಮಾಡಿ, ವರದಿ ಮಾಡಿ ಅಮೇಲೆ‌ ಮಂಡಿಸಬೇಕು. ಹಣಕಾಸು ಉಳಿಬಹುದು ಎನ್ನುವುದು ನಾನು ಒಪ್ಪುವೆ. ಆದರೆ ಇಂದು ಚುನಾವಣೆಗೆ ಎಷ್ಟು ವ್ಯಯವಾಗುತ್ತಿದೆ ಅದನ್ನು ನಿಲ್ಲಿಸಲು ಯಾಕೆ ಕ್ರಮ ತೆಗೆದುಕೊಳ್ಳಬಾರದು? ಅಭ್ಯರ್ಥಿ ಬದಲು ಸರ್ಕಾರ ಹಣ ವ್ಯಯ ಮಾಡಲಿ. ಪ್ರಧಾನಿಯೂ ಎಷ್ಟು ಖರ್ಚು ಮಾಡುತ್ತಾರೆ ಎಂದು ಎಲ್ಲ ಜನರಿಗೆ ಗೊತ್ತಿದೆ. ಈ ಚುನಾವಣಾ ವ್ಯವಸ್ಥೆಯಲ್ಲಿ ಹಣಕಾಸು ಬಳಕೆ ನಿರ್ಬಂಧಿಸಿ. ಆ ಮೇಲೆ ಮುಂದಿನ ಹಂತಕ್ಕೆ ಬರಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆ ಅನುಮೋದನೆಗೆ ಮನವಿ

  • ಎಸ್.ಎಂ.ಕೃಷ್ಣ ನಿಧನ: ಪ್ರಧಾನಿ ಮೋದಿ ಶೋಕ ಸಂದೇಶ

    ಎಸ್.ಎಂ.ಕೃಷ್ಣ ನಿಧನ: ಪ್ರಧಾನಿ ಮೋದಿ ಶೋಕ ಸಂದೇಶ

    – ಕೇಂದ್ರ ಸಚಿವ ಜೋಶಿ ಅವರಿಂದ ಪ್ರೇಮಾ ಕೃಷ್ಣ ಅವರಿಗೆ ಪ್ರಧಾನಿ ಶೋಕ ಸಂದೇಶ ಹಸ್ತಾಂತರ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್‌.ಎಂ ಕೃಷ್ಣ (SM Krishna) ಅವರ ನಿಧನಕ್ಕೆ ಸಂತಾಪ ಸೂಚಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ರಾತ್ರಿ ಶೋಕ ಸಂದೇಶ ಕಳಿಸಿದ್ದಾರೆ.

    ಕೇಂದ್ರ ಸರ್ಕಾರದ ಪರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರ ಮೂಲಕ ಪ್ರಧಾನಿ ಮೋದಿ ಅವರು ಶೋಕ ಸಂದೇಶವುಳ್ಳ ಪತ್ರ ಕಳಿಸಿದ್ದು, ಸಚಿವ ಜೋಶಿ ಮತ್ತು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಜೊತೆಗೂಡಿ ಪ್ರಧಾನಿಯವರ ಸಂತಾಪ ಸೂಚಕ ಪತ್ರವನ್ನು ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ ಅವರಿಗೆ ಹಸ್ತಾಂತರಿಸಿದರು. ಇದನ್ನೂ ಓದಿ: ಇಂದು ಸಂಜೆ ಹುಟ್ಟೂರಿನಲ್ಲಿ ಎಸ್‌ಎಂಕೆ ಅಂತ್ಯಕ್ರಿಯೆ – ಏನೇನು ಸಿದ್ಧತೆ ನಡೆದಿದೆ?

    ಸಚಿವ ಪ್ರಹ್ಲಾದ್‌ ಜೋಶಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿ ಎಸ್.ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪ ಹಾರ ಅರ್ಪಿಸಿ ನಮನ ಸಲ್ಲಿಸಿದರು. ಇದನ್ನೂ ಓದಿ: ತಿಮ್ಮಪ್ಪನ ಹುಂಡಿಗೆ ವಾಚ್ ಹಾಕಿ ಬಂದ ಮೇಲೆ ಕೇಂದ್ರಮಂತ್ರಿಯಾಗಿದ್ದ ಎಸ್‌ಎಂಕೆ!

  • ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ʻಸೂರ್ಯ ಘರ್‌ʼ ಯೋಜನೆ ಬಗ್ಗೆ ಭಾರಿ ನಿರ್ಲಕ್ಷ್ಯ – ಸಚಿವ ಜೋಶಿ

    ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ʻಸೂರ್ಯ ಘರ್‌ʼ ಯೋಜನೆ ಬಗ್ಗೆ ಭಾರಿ ನಿರ್ಲಕ್ಷ್ಯ – ಸಚಿವ ಜೋಶಿ

    ಹುಬ್ಬಳ್ಳಿ: ಮಹತ್ವಾಕಾಂಕ್ಷೆಯ ʻಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆʼ (PM Surya Ghar Muft Bijli Yojan) ಬಗ್ಗೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಸರಿಯಾದ ರೀತಿಯಲ್ಲಿ ಪ್ರಚಾರ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅಸಮಾಧಾನ ಹೊರಹಾಕಿದರು.

    ಜೈಪುರದಲ್ಲಿ ʻಸುಸ್ಥಿರ ಇಂಧನ ಆರ್ಥಿಕತೆಯತ್ತ ಪರಿವರ್ತನೆʼ ಶೃಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ (Congress) ಉಚಿತ ವಿದ್ಯುತ್ ಭರವಸೆ ನೀಡಿದೆ. ಇದರಿಂದ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ವಿದ್ಯುತ್ ಕೊರತೆ ಎದುರಾಗುತ್ತಿದ್ದು, ಆಗಾಗ್ಗೆ ಕಡಿತಗೊಳಿಸಲಾಗುತ್ತಿದೆ. 200 ಯೂನಿಟ್‌ ಉಚಿತ ವಿದ್ಯುತ್ ಜನರ ಕಣ್ಣಿಗೆ ಮಣ್ಣೆರೆಚ್ಚುವ ಒಂದು ತಂತ್ರಗಾರಿಕೆ ಅಷ್ಟೇ ಎಂದು ಟೀಕಿಸಿದರು. ಇದನ್ನೂ ಓದಿ: ಇದೇ ಮೊದಲ ಬಾರಿಗೆ ರಾಜ್ಯಸಭೆ ಸಭಾಪತಿ ವಿರುದ್ಧ ಅವಿಶ್ವಾಸ ಮಂಡನೆ!

    200 ಯೂನಿಟ್‌ ಉಚಿತ ಎನ್ನುತ್ತಾರೆ. ಆದ್ರೆ, ವಾಸ್ತವದಲ್ಲಿ ಅಷ್ಟು ಕೊಡುವುದೇ ಇಲ್ಲ. ಇದರೊಂದಿಗೆ ಉಳಿದವರಿಗೆ ವಿದ್ಯುತ್ ಶುಲ್ಕ ಏರಿಸಿದ್ದಾರೆ. 10 ರೂ., 11 ರೂ., 12 ರೂ. ಹೀಗೆ ಮನಸೋ ಇಚ್ಛೆ ದರ ಹೆಚ್ಚಳ ಮಾಡಿದ್ದಾರೆ. ಕೈಗಾರಿಕೆ, ವಾಣಿಜ್ಯ ಬಳಕೆದಾರರಿಗೂ ವಿದ್ಯುತ್ ದರ ಏರಿಕೆಯ ಬರೆ ಎಳೆದಿದ್ದಾರೆ. ವಿದ್ಯುತ್ ದರ ಏರಿಕೆ ಮತ್ತು ವಿದ್ಯುತ್ ಕಡಿತದಿಂದ ಬೇಸತ್ತ ಉದ್ಯಮಿಯೊಬ್ಬರು 5,000 ಚದರಡಿಯ ತಮ್ಮ ಮೂರು ಶೆಡ್‌ಗಳಿಗೆ ʻಸೂರ್ಯ ಘರ್ʼ ಅಳವಡಿಸಿಕೊಡುವಂತೆ ತನ್ನನ್ನು ಕೋರಿದರು. ಉಚಿತ ವಿದ್ಯುತ್‌ ರಾಜ್ಯಗಳಲ್ಲಿ ಅಂತಹ ಪರಿಸ್ಥಿತಿ ತಲೆದೋರಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಜಯ ಮೃತ್ಯುಂಜಯ ಸ್ವಾಮೀಜಿ

    ನಿಜವಾಗಿ ಉಚಿತ ವಿದ್ಯುತ್ ಅಂದ್ರೆ ಸೂರ್ಯ ಘರ್:
    ನಿಜವಾಗಿ ಉಚಿತ ವಿದ್ಯುತ್ ಪೂರೈಸುವ ಯೋಜನೆ ಎಂದರೆ ಅದು ʻಸೂರ್ಯ ಘರ್ʼಎಂದು ಪ್ರತಿಪಾದಿಸಿದ ಸಚಿವರು, 3 ಕೆವಿ ವಿದ್ಯುತ್ ಉತ್ಪಾದನೆ ಘಟಕಕ್ಕೆ ಕೇಂದ್ರ ಸರ್ಕಾರ 78,000 ರೂ.ವರೆಗೆ ಸಹಾಯಧನ ನೀಡಲಿದೆ. ಅಲ್ಲದೇ, ಬಳಸಿ ಉಳಿದ ವಿದ್ಯುತ್ ಮಾರಾಟದ ಮೂಲಕ ಆದಾಯಕ್ಕೂ ಅವಕಾಶ ಕಲ್ಪಿಸಿದೆ. ಸೋಲಾರ್ ಪ್ಲ್ಯಾಂಟ್ ಅಳವಡಿಕೆಗೆ ಬ್ಯಾಂಕ್ ಸಾಲ ಸೌಲಭ್ಯಕ್ಕೂ ಅನುವು ಮಾಡಿಕೊಟ್ಟಿದೆ ಎಂದು ಸಚಿವ ಜೋಶಿ ವಿವರಿಸಿದರು. ಇದನ್ನೂ ಓದಿ: Ramanagara | ಹಣದ ಆಸೆಗೆ ಸ್ವಂತ ಮಗುವನ್ನೇ ಮಾರಿದ ತಾಯಿ – ನಾಲ್ವರು ಅರೆಸ್ಟ್

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದ ʻಸೂರ್ಯ ಘರ್ ಮುಫ್ತ್ ಬಿಜ್ಲಿʼ ಮಹತ್ವಾಕಾಂಕ್ಷೆಯ ಯೋಜನೆ ಆಗಿದ್ದರೂ ಕಾಂಗ್ರೆಸ್ ಆಡಳಿತದ ರಾಜ್ಯಗಳು ಸರಿಯಾಗಿ ಪ್ರಮೋಟ್ ಮಾಡುತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಎಸ್‌ಎಂಕೆ ಅಂತಿಮ ದರ್ಶನ ಪಡೆದ ಸಿಎಂ