Tag: ಪ್ರಾಂಶುಪಾಲರು

  • ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಪ್ರಾಂಶುಪಾಲರು, ಶಿಕ್ಷಕರು ಸೇರಿ ಐವರು ಅರೆಸ್ಟ್

    ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಪ್ರಾಂಶುಪಾಲರು, ಶಿಕ್ಷಕರು ಸೇರಿ ಐವರು ಅರೆಸ್ಟ್

    ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಸೇರಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಲ್ಲಕುರಿಚಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿಯೊಬ್ಬಳು ತನ್ನ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದಕ್ಕೆ ಶಿಕ್ಷಕರ ಚಿತ್ರಹಿಂಸೆಯೇ ಕಾರಣ ಎಂದು ಆರೋಪಿಸಿದ ಡೆತ್‌ನೋಟ್ ಪತ್ತೆಯಾಗಿತ್ತು. ಮರೋಣತ್ತರ ಪರೀಕ್ಷೆಯಲ್ಲೂ ಹಲವು ಗಾಯದ ಗುರುತುಗಳು, ರಕ್ತಸ್ರಾವ ಆಗಿರುವುದು ಕಂಡುಬಂದಿತ್ತು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಸದ ಗಾಡಿಯಲ್ಲಿ ಮೋದಿ, ಯೋಗಿ ಆದಿತ್ಯನಾಥ್ ಫೋಟೋ – ಕೆಲಸದಿಂದ ಪೌರಕಾರ್ಮಿಕ ವಜಾ

    ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಾಲೆಯ ರಸಾಯನಶಾಸ್ತ್ರ ಶಿಕ್ಷಕಿ ಹರಿಪ್ರಿಯಾ ಹಾಗೂ ಗಣಿತ ಶಿಕ್ಷಕಿ ಕೃತಿಕಾ ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ಶಾಲಾ ಪ್ರಾಂಶುಪಾಲರು, ಕಾರ್ಯದರ್ಶಿ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸೆ.3ರಂದು ವಿಶ್ವದ ಮೊದಲ ರಣಹದ್ದು ಸಂರಕ್ಷಣೆ ಕೇಂದ್ರ ಉದ್ಘಾಟಿಸಲಿರುವ ಯೋಗಿ

    ಘಟನೆ ಏನು?
    ಚಿನ್ನ ಸೇಲಂ ಸಮೀಪದ ಕಣಿಯಮೂರ್‌ನಲ್ಲಿರುವ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಬುಧವಾರ, 12ನೇ ತರಗತಿ ಶವವಾಗಿ ಪತ್ತೆಯಾಗಿದ್ದಳು. ಶಾಲೆಯ ಆಡಳಿತಾಧಿಕಾರಿಗಳು ಸಾವಿನ ಕುರಿತು ಮಾಹಿತಿ ನೀಡಿದ ಬಳಿಕ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಲ್ಲಕುರಿಚಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದರು. ಶಾಲೆಯ ಶಿಕ್ಷಕರು ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಉಲ್ಲೇಖಿಸಿರುವ ಸೂಸೈಡ್ ನೋಟ್ ಸಹ ಪತ್ತೆಯಾಗಿತ್ತು. ಇದನ್ನೂ ಓದಿ: ಭಿನ್ನಮತಕ್ಕೆ ಬ್ರೇಕ್ ಹಾಕಲು ಉದ್ಧವ್ ಠಾಕ್ರೆ – ಶಿಂಧೆ ಸಭೆ, ಬಿಜೆಪಿ ನಾಯಕರೇ ಮಧ್ಯಸ್ಥಿಕೆ: ದೀಪಾಲಿ ಸೈಯದ್

    ವರದಿಗಳ ಪ್ರಕಾರ ಘಟನೆ ನಡೆದಿರುವ ಶಾಲೆ ಹಾಗೂ ವಸತಿ ನಿಲಯದ ಬಳಿ 2,000ಕ್ಕೂ ಹೆಚ್ಚಿನ ಪ್ರತಿಭಟನಾಕಾರರು ಜಮಾಯಿಸಿದ್ದರು. ನಿನ್ನೆ ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಪ್ರಾರಂಭವಾದ ಪ್ರತಿಭಟನೆ ಕೆಲವೇ ನಿಮಿಷಗಳಲ್ಲಿ ಹಿಂಸಾಚಾರಕ್ಕೆ ತಿರುಗಿತು. ಪ್ರತಿಭಟನಾಕಾರರು ಶಾಲಾ ಕಟ್ಟಡ, ತರಗತಿ ಕೊಠಡಿಗಳು ಹಾಗೂ ಪ್ರಾಂಶುಪಾಲರ ಕ್ಯಾಬಿನ್ ಅನ್ನು ಧ್ವಂಸಗೊಳಿಸಿದರು. ಶಾಲಾ ಕ್ಯಾಂಪಸ್‌ನಲ್ಲಿದ್ದ ಬಸ್‌ಗಳಿಗೆ ಬೆಂಕಿ ಹಚ್ಚಿದರು. ಟ್ರ‍್ಯಾಕ್ಟರ್‌ಗಳ ಮೂಲಕ ಶಾಲಾ ಬಸ್‌ಗಳಿಗೆ ಗುದ್ದಿಸಿ, ಆಯುಧಗಳಿಂದ ವಾಹನಗಳ ಗಾಜನ್ನು ಒಡೆದು ಹಾಕಿದರು. ಮಾತ್ರವಲ್ಲದೇ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಶಾಲೆಯ ಪ್ರಾಂಶುಪಾಲರು ಸೇರಿ ಮೂವರನ್ನು ಬಂಧಿಸಿದ್ದರು. ಇಂದು ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ – ಪ್ರಿನ್ಸಿಪಾಲ್ ಅರೆಸ್ಟ್

    ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ – ಪ್ರಿನ್ಸಿಪಾಲ್ ಅರೆಸ್ಟ್

    ರಾಂಚಿ: ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಶಾಲೆಯೊಂದರ ಪ್ರಾಂಶುಪಾಲರನ್ನು ಜಾರ್ಖಂಡ್ ಪೊಲೀಸರು ಶನಿವಾರ ಬಂಧಿಸಿದ್ದಾರೆ.

    POLICE JEEP

    ಶಾಲೆಯ ಹಾಸ್ಟೆಲ್‍ನಲ್ಲಿ ಉಳಿದುಕೊಂಡಿದ್ದ ಏಳು ವಿದ್ಯಾರ್ಥಿನಿಯರು ಪ್ರಾಂಶುಪಾಲರ ವಿರುದ್ಧ ಚೈಬಾಸಾ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಸಂತ್ರಸ್ತರ ದೂರಿನ ಮೇರೆಗೆ ಚೈಬಾಸಾ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಪ್ರಾಂಶುಪಾಲರನ್ನು ಬಂಧಿಸಿದ್ದಾರೆ. ಇದನ್ನೂ ಓದಿ:  `ಅಗ್ನಿಪಥ್’ ಪ್ರತಿಭಟನೆ – ಸಿಕಂದರಾಬಾದ್ ಹಿಂಸಾಚಾರದ ಮಾಸ್ಟರ್ ಮೈಂಡ್ ಅರೆಸ್ಟ್

    ಈ ಕುರಿತಂತೆ ಪ್ರತಿಕ್ರಿಯಿಸಿದ ಚೈಬಾಸಾ ಪೊಲೀಸರು, ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಲಾಗಿದೆ. ಆತನ ಮೇಲೆ ಏಳು ವಿದ್ಯಾರ್ಥಿಗಳು ದೂರು ನೀಡಿದ್ದಾರೆ ಮತ್ತು ಎಲ್ಲಾ ಸಂತ್ರಸ್ತೆಯರು ಶಾಲೆಯ ಹಾಸ್ಟೆಲ್‍ನಲ್ಲಿ ಉಳಿದುಕೊಂಡಿದ್ದರು. ಇದೀಗ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ದೇಶದಲ್ಲಿ ಅಗ್ನಿಪಥ್ ಪ್ರತಿಭಟನೆಯ ಕಾವು- ಉತ್ತರದ ಬಳಿಕ ದಕ್ಷಿಣದಲ್ಲಿ ಹಿಂಸಾತ್ಮಕ ಪ್ರೊಟೆಸ್ಟ್

    Live Tv

  • ಭಗವಂತ್ ಮಾನ್ ಭೇಟಿಯಾದ ನಂತರ ಊಟದ ತಟ್ಟೆಗೆ ಕಿತ್ತಾಡಿದ ಶಿಕ್ಷಕರು, ಪ್ರಾಂಶುಪಾಲರು

    ಭಗವಂತ್ ಮಾನ್ ಭೇಟಿಯಾದ ನಂತರ ಊಟದ ತಟ್ಟೆಗೆ ಕಿತ್ತಾಡಿದ ಶಿಕ್ಷಕರು, ಪ್ರಾಂಶುಪಾಲರು

    ಚಂಡೀಗಢ: ಮನುಷ್ಯ ಜೀವನ ನಡೆಸಲು ಶಿಸ್ತು ತುಂಬಾ ಮುಖ್ಯ. ಶಿಸ್ತಿನ ಪಾಠ ಮಾಡಬೇಕಾದವರು ಶಿಕ್ಷಕರು. ಆದರೆ ಶಿಕ್ಷಕರೇ ಶಿಸ್ತು ಮೀರಿ ನಡೆದುಕೊಳ್ಳುತ್ತಿರುವ ದೃಶ್ಯ ಪಂಜಾಬ್‍ನಲ್ಲಿ ನಡೆದಿದೆ.

    ಆಮ್ ಆದ್ಮಿ ಪಕ್ಷದ(ಎಎಪಿ) ಪಂಜಾಬ್ ಸಿಎಂ ಭಗವಂತ್ ಮಾನ್ ಅವರ ಅಧ್ಯಕ್ಷತೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯಸ್ಥರು ಮತ್ತು ಶಿಕ್ಷಕರೊಂದಿಗೆ ಸಭೆ ನಡೆಸಲಾಯಿತು. ಈ ಸಭೆಯನ್ನು ಲೂಧಿಯಾನದ ಐಷಾರಾಮಿ ರೆಸಾರ್ಟ್‍ನಲ್ಲಿ ಮಾಡಲಾಯಿತು. ಸಭೆ ಮುಗಿದ ನಂತರ ಎಲ್ಲ ಶಿಕ್ಷಕರು ಮತ್ತು ಪ್ರಾಂಶುಪಾಲರಿಗೆ ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಹಿನ್ನೆಲೆ ಶಿಕ್ಷಕರು ಸರದಿ ಸಾಲಿನಲ್ಲಿ ನಿಂತುಕೊಳ್ಳದೆ ಊಟಕ್ಕಾಗಿ ಕಿತ್ತಾಡಿದ್ದಾರೆ ಇದನ್ನೂ ಓದಿ:  ಎಮ್ಮೆಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಬಸ್ ಪಲ್ಟಿ

    ಶಿಕ್ಷಣ ಇಲಾಖೆಯು ಶಿಕ್ಷಣದ ಗುಣಮಟ್ಟದ ಕುರಿತು ಚರ್ಚಿಸಲು ರಾಜ್ಯದಾದ್ಯಂತ 2,600 ಕ್ಕೂ ಹೆಚ್ಚು ಶಾಲಾ ಮುಖ್ಯಸ್ಥರು ಮತ್ತು ಜಿಲ್ಲಾ ಶಿಕ್ಷಣಾಧಿಕಾರಿಗಳ ಸಭೆಯನ್ನು ಕರೆದಿದೆ. ಈ ಸಭೆಯಲ್ಲಿ ಶೈಕ್ಷಣಿಕ ಸುಧಾರಣೆಗಳ ಬಗ್ಗೆ ಸಲಹೆಗಳನ್ನು ಚರ್ಚೆ ನಡೆಸಲಾಯಿತು. ನಂತರ ಮಧ್ಯಾಹ್ನದ ಊಟಕ್ಕೆಂದು ಶಿಕ್ಷಕರು ಹೋದಾಗ ತಟ್ಟೆಗಾಗಿ ಗಲಾಟೆ ನಡೆದಿದ್ದು, ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಈ ವೀಡಿಯೋವನ್ನು ಟ್ವಿಟ್ಟರ್‍ನಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ಪಂಜಾಬ್‍ನ ಲುಧಿಯಾನಾದಲ್ಲಿ ಸಿಎಂ ಭಗವಂತ್ ಮಾನ್ ಮತ್ತು ಶಿಕ್ಷಣ ಸಚಿವರನ್ನು ಭೇಟಿ ಮಾಡಿದ ನಂತರ ಪ್ರಾಂಶುಪಾಲರು ಮತ್ತು ಶಿಕ್ಷಕರ ಊಟದ ದೃಶ್ಯ. ಅವರು ಅನೇಕ ದಿನಗಳಿಂದ ಹಸಿವಿನಿಂದ ಬಳಲುತ್ತಿರುವಂತೆ ತೋರುತ್ತಿದೆ. ಅಥವಾ ಅವರಿಗೆ ಉಚಿತ ಊಟವನ್ನು ಕಳೆದುಕೊಳ್ಳಲು ಇಷ್ಟವಿಲ್ಲ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆ ಕತ್ತು ಹಿಸುಕಿ ಸಮಾಧಿ ಮಾಡಲು ಹೋಗಿ ತಾನೇ ಸತ್ತ 

    ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದ್ದು, ತಮಾಷೆ ಜೊತೆಗೆ ಶಿಕ್ಷಣ ವ್ಯವಸ್ಥೆಯನ್ನು ನೆಟ್ಟಿಗರು ಟೀಕಿಸುತ್ತಿದ್ದಾರೆ.

  • 5 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ – ಪ್ರಾಂಶುಪಾಲ ಅರೆಸ್ಟ್!

    5 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ – ಪ್ರಾಂಶುಪಾಲ ಅರೆಸ್ಟ್!

    ಭುವನೇಶ್ವರ: 5 ಕೋಟಿ ರೂ. ಅಕ್ರಮ ಆಸ್ತಿ ಆರೋಪದ ಮೇಲೆ ನಿವೃತ್ತ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

    ವಿಜಿಲೆನ್ಸ್ ನಿರ್ದೇಶನಾಲಯವು ನಿವೃತ್ತ ಪ್ರಾಂಶುಪಾಲ ರಮೇಶ್ ಚಂದ್ರ ಸಾಹೂ ಅವರ ಮನೆ ಮೇಲೆ ದಾಳಿ ಮಾಡಿದ್ದು, ಈ ವೇಳೆ ರಮೇಶ್ ತಮ್ಮ ಆದಾಯದ ಮೂಲಗಳಿಗಿಂತ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ ಎಂದು ಪತ್ತೆ ಮಾಡಿದೆ. ಈ ಹಿನ್ನೆಲೆ ರಮೇಶ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ: 40 ಸಾವಿರ ಮೌಲ್ಯದ ಸರ್ಕಾರಿ ಶಾಲೆಯ ಪ್ರೊಜೆಕ್ಟರ್ ಕದ್ದರು! 

    ಏನಿದು ಪ್ರಕರಣ?
    ಒಡಿಶಾದ ಕಲಹಂಡಿ ಜಿಲ್ಲೆ ನಿವಾಸಿ ರಮೇಶ್ ಅವರು ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಅಧಿಕೃತ ಮಾಹಿತಿ ಮೇರೆಗೆ ವಿಜಿಲೆನ್ಸ್ ನಿರ್ದೇಶನಾಲಯ ದಾಳಿ ಮಾಡಿದೆ. ದಾಳಿ ವೇಳೆ ರಮೇಶ್ ಅವರಿಗೆ ಸಂಬಂಧಪಟ್ಟ ಐದು ಸ್ಥಳಗಳಲ್ಲಿ ಆಸ್ತಿಗಾಗಿ ಶೋಧ ಕಾರ್ಯವನ್ನು ಅಧಿಕಾರಿಗಳು ಮಾಡಿದ್ದಾರೆ. ಈ ವೇಳೆ ರಮೇಶ್ ಅವರ ಬಳಿ ಅಕ್ರಮ ಆಸ್ತಿ ಇರುವುದು ಸಾಬೀತಾಗಿದೆ.

    ರಮೇಶ್ ಅವರು ಈ ಹಿಂದೆ ಬಿಸ್ವನಾಥಪುರದ ಹಿರಾ ನಿಲಾ ಕಾಲೇಜಿನ ಮಾಜಿ ಪ್ರಾಂಶುಪಾಲರಾಗಿದ್ದರು ಎಂದು ವಿಜಿಲೆನ್ಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಒಂದೇ ಅಂತಸ್ತಿನ ಕಟ್ಟಡ, ಭುವನೇಶ್ವರದಲ್ಲಿ ಮನೆ, ಫ್ಲಾಟ್ ಮತ್ತು 1.94 ಲಕ್ಷ ನಗದು ಸೇರಿದಂತೆ 5 ಕೋಟಿಗೂ ಹೆಚ್ಚು ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳು ಪತ್ತೆಯಾಗಿವೆ. ಆಸ್ತಿ ಪತ್ರಗಳಿಲ್ಲದೆ ಇನ್ನು ಹೆಚ್ಚು ಹೊಂದಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

    ರಮೇಶ್ ಅವರ ವಿರುದ್ಧ ಭ್ರಷ್ಟಾಚಾರ ತಡೆ(ತಿದ್ದುಪಡಿ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ವಿಜಿಲೆನ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕೋಡಿ ಯೋಧನಿಂದ ನಾಲ್ಕು ಯೋಧರಿಗೆ ಗುಂಡು – ಹತ್ಯೆಯ ಹಿಂದಿನ ಕಾರಣ ರಿವೀಲ್

  • ಇವರನ್ನು ಅರೆಸ್ಟ್ ಮಾಡ್ರಿ – ವಿದ್ಯಾರ್ಥಿನಿಯರ ವಿರುದ್ಧ ಮಡಿಕೇರಿ ಪ್ರಿನ್ಸಿ ಕೆಂಡಾಮಂಡಲ

    ಇವರನ್ನು ಅರೆಸ್ಟ್ ಮಾಡ್ರಿ – ವಿದ್ಯಾರ್ಥಿನಿಯರ ವಿರುದ್ಧ ಮಡಿಕೇರಿ ಪ್ರಿನ್ಸಿ ಕೆಂಡಾಮಂಡಲ

    ಮಡಿಕೇರಿ: ಹಿಜಬ್ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಕಾಲೇಜಿನಿಂದ ಹೊರಗೆ ಕಳುಹಿಸಿದ್ದು, ಈ ವೇಳೆ ವಿದ್ಯಾರ್ಥಿಗಳು ಹಾಗೂ ಪ್ರಾಂಶುಪಾಲರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

    ಹಿಜಬ್ ಧರಿಸಿ ಕಾಲೇಜಿನ ಆವರಣಕ್ಕೆ ಬಂದ ವಿದ್ಯಾರ್ಥಿನಿಯರು ತರಗತಿಗೆ ಹೋಗಲು ಅವಕಾಶ ನೀಡುವಂತೆ ಪ್ರಾಂಶುಪಾಲರಾದ ವಿಜಯ್ ಅವರಿಗೆ ಒತ್ತಾಯಿಸಿದ್ದಾರೆ. ಈ ವೇಳೆ ಪ್ರಾಂಶುಪಾಲರು ವಿದ್ಯಾರ್ಥಿನಿಯರಿಗೆ ಕಾಲೇಜಿನಲ್ಲಿ ಹಿಜಬ್ ತೆಗೆದಿಡಲು ವ್ಯವಸ್ಥೆ ಮಾಡಿರುವ ವಿಶೇಷ ಕೊಠಡಿಗೆ ಕಳುಹಿಸಿದ್ದಾರೆ. ಆದರೆ ಕೊಠಡಿಯಲ್ಲಿ ಹಿಜಬ್ ತೆಗೆಯದೇ ತರಗತಿಗೆ ಹೋಗಲು ವಿದ್ಯಾರ್ಥಿನಿಯರು ಹಟ ಹಿಡಿದಿದ್ದಾರೆ. ಇದನ್ನೂ ಓದಿ: ತಂದೆ, ಚಿಕ್ಕಪ್ಪನೊಂದಿಗೆ ಅಖಿಲೇಶ್ ಯಾದವ್ ಭರ್ಜರಿ ಚುನಾವಣಾ ಪ್ರಚಾರ

    ಪ್ರಾಂಶುಪಾಲರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದ್ದಾರೆ. ಆದರೂ ಹೊರಗೆ ಹೋಗದ ಕೆಲವು ವಿದ್ಯಾರ್ಥಿನಿಯರನ್ನು ಅರೆಸ್ಟ್ ಮಾಡುವಂತೆ ಪೊಲೀಸರಿಗೆ ತಿಳಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯರು ಮತ್ತು ಪ್ರಾಂಶುಪಾಲರ ನಡುವೆ ಮಾತಿನ ಚಕಮಕಿ ನಡೆದಿದ್ದು, ಹಿಜಬ್ ನಮ್ಮ ಹಕ್ಕು. ನಾವು ಮೊದಲಿನಿಂದಲೂ ಹಾಕುತ್ತಿದ್ದೇವೆ. ಹೈಕೋರ್ಟ್ ಹೇಳಿದಂತೆ ನಮಗೆ ಮಾಡಲು ಆಗುವುದಿಲ್ಲ ಎಂದು ವಿದ್ಯಾರ್ಥಿನಿಯರು ವಾದ ಮಾಡಿದ್ದಾರೆ.

    ಈ ವೇಳೆ ಪ್ರಾಂಶುಪಾಲರು ಬೋರ್ಡ್‍ನಲ್ಲಿ ಯೂನಿಫಾರ್ಮ್ ಹಾಕಿಕೊಂಡು ಬರಬೇಕು. ಹಿಜಬ್ ಧರಿಸಬಾರದು ಎಂದು ಬರೆದಿಲ್ವಾ? ಯಾರದ್ದೋ ಮಾತು ಕೇಳಿ, ಬೇರೆ ಮಕ್ಕಳಿಗೆ ತೊಂದರೆ ಕೊಡಬೇಡಿ. ಹೈಕೋರ್ಟ್‍ನಿಂದ ಆದೇಶವಿದ್ದು ಅದನ್ನು ಇಲ್ಲಿ ಪಾಲನೆ ಮಾಡುತ್ತೇವೆ. ಹಿಜಬ್ ತೆಗೆದಿಟ್ಟು ತರಗತಿಗೆ ಬನ್ನಿ ಇಲ್ಲ ಬರಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 290 ಗ್ರಾಂ ತೂಕದ ಸ್ಟ್ರಾಬೆರಿ ಬೆಳೆದು ವಿಶ್ವ ದಾಖಲೆ

    ಈ ವೇಳೆ ವಿದ್ಯಾರ್ಥಿನಿಯರು ಹಾಗಾದರೆ ನಮಗೆ ಶಾಲಾ ಹಾಜರಾತಿ ಕೊಡಿ ಹೋಗುತ್ತೇವೆ. ಇಷ್ಟು ದಿನದಿಂದ ನಾವು ಹಿಜಬ್ ಹಾಕಿಕೊಂಡೇ ಬರುತ್ತಿದ್ದೇವು. ಮುಂದೆ ನಮ್ಮ ಪರವಾಗಿ ಆದೇಶ ಬರಬಹುದು ಎಂದಿದ್ದಾರೆ. ಇದಕ್ಕೆ ಪ್ರಾಂಶುಪಾಲರು ಹಾಜರಾತಿಯನ್ನು ನೀಡಲು ಆಗುವುದಿಲ್ಲ. ಇಷ್ಟು ದಿನ ಕೋರ್ಟ್ ಆದೇಶ ಇರಲಿಲ್ಲ. ನಾವು ಮಕ್ಕಳನ್ನು ಕೂರಿಸಿ ಪಾಠ ಮಾಡಿದ್ದೇವೆ. ಹಿಜಬ್ ಧರಿಸುವುದಿಲ್ಲ ಎಂದರೆ ಕಾಲೇಜಿಗೆ ಬರುವುದು ಬೇಡ. ಹಿಜಬ್ ತೆಗೆಯುವುದಿಲ್ಲ ಎಂದರೆ ವಾಪಸ್ ಹೋಗಿ. ಹೈಕೋರ್ಟ್ ಮುಂದಿನ ಆದೇಶ ಬಂದ ನಂತರವೇ ಬನ್ನಿ ಎಂದು ಕಿಡಿಕಾರಿದ್ದಾರೆ.

    ವಿದ್ಯಾರ್ಥಿನಿಯರು ನಾವು ಹೋಗುವುದಿಲ್ಲ. ಇಲ್ಲೇ ಪ್ರತಿಭಟನೆ ಮಾಡುತ್ತೇವೆ ಎಂದಾಗ ಗರಂ ಆದ ಪ್ರಾಂಶುಪಾಲರು ಇವರನ್ನು ಅರೆಸ್ಟ್ ಮಾಡಿ ನಾನು ಎಫ್‍ಐಆರ್ ಮಾಡ್ತೀನಿ ಎಂದು ಪೊಲೀಸರಿಗೆ ಹೇಳಿದಾಗ ವಿದ್ಯಾರ್ಥಿಗಳು ಕಾಲೇಜಿನಿಂದ ಮನೆ ಕಡೆ ತೆರಳಿದರು. ಇದನ್ನೂ ಓದಿ: ಡೆಲ್ಲಿ To ಲಂಡನ್ ಬಸ್ ಟೂರ್ – 70 ದಿನಗಳಲ್ಲಿ 18 ದೇಶ ಸುತ್ತುವ ಅವಕಾಶ

  • ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕರು!

    ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕರು!

    ಭೋಪಾಲ್: ಪ್ರಾಧ್ಯಾಪಕರು ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಕಾಲೇಜಿನ ಕಚೇರಿಯಲ್ಲಿ ನಡೆದಿದೆ.

    ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಎಂಪಿ ಕಾಲೇಜಿನ ಕಚೇರಿಯೊಳಗೆ ಪ್ರಾಧ್ಯಾಪಕ ಮತ್ತು ಕಾಲೇಜು ಪ್ರಾಂಶುಪಾಲರ ನಡುವೆ ವಾಗ್ವಾದ ಪ್ರಾರಂಭವಾಗಿದೆ. ಮಾತಿಗೆ ಮಾತು ಬೆಳೆದು ಪ್ರಾಧ್ಯಾಪಕರ ಕೋಪ ತೀವ್ರವಾಗಿ ಹೋಗಿದ್ದು, ಪ್ರಾಂಶುಪಾಲರನ್ನು ಥಳಿಸಿದ್ದಾರೆ. ಈ ದೃಶ್ಯಾವಳಿ ಕಛೇರಿಯಲ್ಲಿದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಇದನ್ನೂ ಓದಿ: ಅಕ್ರಮವಾಗಿ ಒತ್ತುವರಿಯಾಗಿದ್ದ ಜಾಗ ಶಾಲೆಗೆ ವಾಪಸ್ – ತಹಶೀಲ್ದಾರ್‌ಗೆ ಗ್ರಾಮಸ್ಥರಿಂದ ಅಭಿನಂದನೆ

    Professor thrashes Principal inside his office, video goes viral [Watch] | Catch News

    ಈ ದೃಶ್ಯದಲ್ಲಿ ಪ್ರಾಧ್ಯಾಪಕರು ಮತ್ತು ಪ್ರಾಂಶುಪಾಲರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪ್ರಾಧ್ಯಾಪಕನ ಕೋಪ ಹೆಚ್ಚಾಗಿ ತನ್ನ ಕೈಯಲ್ಲಿದ್ದ ಪುಸ್ತಕವನ್ನು ಎಸೆದಿದ್ದಾರೆ. ನಂತರ ಪ್ರಾಂಶುಪಾಲರ ಮೇಲೆ ಹಲ್ಲೆ ಮಾಡಲು ಹೋಗಿದ್ದಾರೆ. ಈ ವೇಳೆ ಪ್ರಾಂಶುಪಾಲರ ಕಪಾಳಕ್ಕೆ ಹೊಡೆದಿದ್ದಾರೆ.

    POLICE JEEP

    ಪ್ರಸ್ತುತ ಪ್ರಾಂಶುಪಾಲರು ಪ್ರಾಧ್ಯಾಪಕರ ವಿರುದ್ಧ ಪೊಲೀಸರಿಗೆ ದೂರನ್ನು ನೀಡಿದ್ದಾರೆ.

  • ವ್ಯಾಲೆಂಟೈನ್ಸ್ ಡೇ ಹುಡಗಿಯರ ಕಾಟ, 5 ದಿನ ರಜೆ ಕೊಡಿ- ಪ್ರಿನ್ಸಿಪಾಲ್‍ಗೆ ವಿದ್ಯಾರ್ಥಿ ಪತ್ರ

    ವ್ಯಾಲೆಂಟೈನ್ಸ್ ಡೇ ಹುಡಗಿಯರ ಕಾಟ, 5 ದಿನ ರಜೆ ಕೊಡಿ- ಪ್ರಿನ್ಸಿಪಾಲ್‍ಗೆ ವಿದ್ಯಾರ್ಥಿ ಪತ್ರ

    ಚಾಮರಾಜನಗರ: ಯುವಕನಿಗೆ ವ್ಯಾಲೆಂಟೈನ್ಸ್ ಡೇ ದಿನ ಹುಡುಗಿಯರ ಕಾಟವಂತೆ. ಅವರ ಕಾಟ ತಪ್ಪಿಸಿಕೊಳ್ಳಲು ಐದು ದಿನ ರಜೆ ಕೊಡಿ ಎಂದು ಕಾಲೇಜಿನ ಪ್ರಾಂಶುಪಾಲರಿಗೆ ಬರೆದ ರಜೆ ಅರ್ಜಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ದ್ವಿತೀಯ ಬಿ.ಕಾಂ. ಯುವಕ ಪತ್ರ ಬರೆದಿದ್ದಾನೆ. ಹುಡುಗಿಯರ ಕಾಟ ತಾಳಲಾರದೆ ಫೆಬ್ರುವರಿ 14 ರವರೆಗೆ ಐದು ದಿನಗಳ ಕಾಲ ರಜೆ ಬೇಕೆಂದು ಈ ವಿದ್ಯಾರ್ಥಿ ಕೇಳಿರುವ ರಜಾ ಅರ್ಜಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನೊಂದು ವಿಶೇಷ ಎಂದರೆ ಈ ರಜಾ ಅರ್ಜಿ ಮೇಲೆ ಪ್ರಾಂಶುಪಾಲರ ಸೀಲ್ ಹಾಗೂ ಸಹಿಯೂ ಇದ್ದು, ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ.

    ಪತ್ರದಲ್ಲಿ ಏನಿದೆ?
    ವ್ಯಾಲೆಂಟೈನ್ ಡೇ ಪ್ರಯುಕ್ತ 5 ದಿನಗಳ ಕಾಲ ರಜೆಯನ್ನು ಕೋರಿ ಎಂದು ವಿಷಯ ನಮೂದಿಸಲಾಗಿದ್ದು, ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಆಚರಿಸುತ್ತಿರುವ ವ್ಯಾಲೆಂಟೈನ್ ಡೇ ಸಂದರ್ಭದಲ್ಲಿ ಹುಡುಗಿಯರ ಕಾಟವನ್ನು ತಡೆಯಲಾರೆ. 5 ದಿನಗಳ ವರೆಗೆ ರಜೆ ಕೊಡಬೇಕೆಂದು ಪ್ರಾಂಶುಪಾಲರಲ್ಲಿ ಕೇಳುತ್ತಿದ್ದೇನೆ ಎಂದು ಬರೆಯಲಾಗಿದೆ.

    ಈ ರಜಾ ಅರ್ಜಿಯನ್ನು ಫೆಬ್ರುವರಿ 9 ರಂದು ಬರೆಯಲಾಗಿದೆ. ಅರ್ಜಿಯ ಕೆಳಗಡೆ ಇನ್ಸಿಟ್ಯೂಟ್ ಹೆಡ್ ಸಹಿ ಎಂಬಲ್ಲಿ ಪ್ರಾಂಶುಪಾಲರ ಸೀಲ್ ಹಾಕಿ ಹಸಿರು ಶಾಯಿಯಲ್ಲಿ ಸಹಿ ಮಾಡಲಾಗಿದೆ. ಆದರೆ ಈ ಪತ್ರಕ್ಕೂ ತನಗೂ ಯಾವುದೇ ಸಂಬಂಧ ಇಲ್ಲ ಎಂದು ವಿದ್ಯಾರ್ಥಿ ಸ್ಪಷ್ಟಪಡಿಸಿದ್ದಾನೆ. ಯಾರೋ ನನ್ನನ್ನ ಹೀಯಾಳಿಸಲು, ಹಾಸ್ಯ ಮಾಡಲು ಈ ರೀತಿ ಪತ್ರ ಸೃಷ್ಟಿ ಮಾಡಿದ್ದಾರೆ. ಈ ಪತ್ರ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ನನಗೆ ಮಾನಸಿಕವಾಗಿ ನೋವಾಗಿದೆ. ನಮ್ಮ ಕಾಲೇಜಿನ ಪ್ರಾಂಶುಪಾಲರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಈ ವಿದ್ಯಾರ್ಥಿ ಆಗ್ರಹಿಸಿದ್ದಾನೆ.

    ರಜೆ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸೀಗನಾಯಕ, ವಿದ್ಯಾರ್ಥಿ ಈ ರೀತಿ ಪತ್ರ ಬರೆದಿಲ್ಲ ಎನ್ನುತ್ತಿದ್ದಾನೆ. ಇಂದೇ ಸಭೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಅಧ್ಯಾಪಕರ ಜೊತೆ ಚರ್ಚೆ ನಡೆಸಿ ಕಾಲೇಜು ಶಿಸ್ತು ಸಮಿತಿ ಮುಂದಿಡುತ್ತೇವೆ. ವಿದ್ಯಾರ್ಥಿಯ ಹಿತ ದೃಷ್ಟಿಯಿಂದ ಸತ್ಯಾಂಶ ತಿಳಿದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

  • ಚುಡಾಯಿಸಿ, ಲೈಂಗಿಕ ದೌರ್ಜನ್ಯವೆಸೆಗಿದ ಕಾಮುಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು

    ಚುಡಾಯಿಸಿ, ಲೈಂಗಿಕ ದೌರ್ಜನ್ಯವೆಸೆಗಿದ ಕಾಮುಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು

    ಮಂಗಳೂರು: ಕಾಲೇಜ್ ವಿದ್ಯಾರ್ಥಿನಿಯರನ್ನು ಚುಡಾಯಿಸಿ, ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ವ್ಯಕ್ತಿಯನ್ನು ಹಿಡಿದು ವಿದ್ಯಾರ್ಥಿನಿಯರೇ ಸಖತ್ ಕ್ಲಾಸ್ ತೆಗೆದುಕೊಂಡು ಗ್ರಹಚಾರ ಬಿಡಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

    ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಕಾಮುಕ ರೋಹಿತ್‍ಗೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಾಲೇಜಿನಲ್ಲಿ ಕಾಂಟ್ರಾಕ್ಟ್ ಕೆಲಸ ಮಾಡುತ್ತಿದ್ದ ಆರೋಪಿ ರೋಹಿತ್ ಮ್ಯಾನೇಜ್ಮೆಂಟ್ ಕಡೆಯವನು ಎಂದು ಬೇಕಾಬಿಟ್ಟಿ ವರ್ತಿಸುತ್ತಿದ್ದನು. ಕ್ಲಾಸ್‍ಗೆ ಬಂದು ವಿದ್ಯಾರ್ಥಿನಿಯರ ಕೈ ಹಿಡಿದು ಎಳೆಯುತ್ತಿದ್ದನು. ರೋಹಿತ್‍ನ ಈ ಕಿರುಕುಳದ ಬಗ್ಗೆ ಪ್ರಾಂಶುಪಾಲರಿಗೆ ಈ ಹಿಂದೆಯೇ ಕಂಪ್ಲೆಂಟ್ ಮಾಡಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

    ಇತ್ತ ರೋಹಿತ್ ಕಾಟಕ್ಕೆ ಬೇಸತ್ತ ವಿದ್ಯಾರ್ಥಿನಿಯರು ಆತನನ್ನ ಹಿಡಿದು ಪ್ರಾಂಶುಪಾಲರ ಮುಂದೆಯೇ ಗ್ರಹಚಾರ ಬಿಡಿಸಿದ್ದಾರೆ. ವಿದ್ಯಾರ್ಥಿನಿಯರು ಕಾಮುಕನನ್ನು ತರಾಟೆಗೆ ತೆಗೆದುಕೊಂಡ ದೃಶ್ಯವನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

    ತರಾಟೆಗೆ ತೆಗೆದುಕೊಂಡ ಬಳಿಕ ಆರೋಪಿ ವಿರುದ್ಧ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿಯರು ದೂರು ಕೂಡಾ ನೀಡಿದ್ದಾರೆ. ಸದ್ಯ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಲೈಂಗಿಕ ದೌರ್ಜನ್ಯ ಆರೋಪದಡಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

  • ಮೊಬೈಲನ್ನು ಸುತ್ತಿಗೆಯಿಂದ ಹೊಡೆದು ವಿದ್ಯಾರ್ಥಿಗಳಿಗೆ ಬಿಸಿ ಮುಟ್ಟಿಸಿದ ಪ್ರಾಂಶುಪಾಲರು

    ಮೊಬೈಲನ್ನು ಸುತ್ತಿಗೆಯಿಂದ ಹೊಡೆದು ವಿದ್ಯಾರ್ಥಿಗಳಿಗೆ ಬಿಸಿ ಮುಟ್ಟಿಸಿದ ಪ್ರಾಂಶುಪಾಲರು

    ಕಾರವಾರ: ಕಾಲೇಜಿನಲ್ಲಿ ಮೊಬೈಲ್ ತಂದು ಪಾಠ ಕೇಳುವ ಬದಲು ವಿದ್ಯಾರ್ಥಿಗಳು ಚಾಟ್ ಮಾಡುವುದೇ ಹೆಚ್ಚಾಗಿದೆ. ಇವುಗಳಿಗೆ ಬ್ರೇಕ್ ಹಾಕಲು ಪ್ರಾಂಶುಪಾಲರು ವಿದ್ಯಾರ್ಥಿಗಳ ಮೊಬೈಲ್‍ನನ್ನು ಸುತ್ತಿಗೆಯಿಂದ ಹೊಡೆದು ಹಾಕಿರುವ ಘಟನೆ ಉತ್ತರ ಕನ್ನಡದ ಶಿರಸಿ ನಡೆದಿದೆ.

    ಶಿರಸಿ ಎಂಇಎಸ್ ಚೈತನ್ಯ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ವಶಪಡಿಸಿಕೊಂಡ ಮೊಬೈಲ್ ಅನ್ನು ಅವರ ಸಮ್ಮುಖದಲ್ಲೇ ಸುತ್ತಿಗೆಯಿಂದ ಪ್ರಾಂಶುಪಾಲರು ಹೊಡೆದು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಜೊತೆ ಮೊಬೈಲ್ ನಿಂದ ಆಗುವ ಪರಿಣಾಮ ಕುರಿತು ವಿವರಿಸಿದ್ದಾರೆ.

    ಮೊಬೈಲ್ ತಂದರೆ ಪಠ್ಯದ ಕಡೆ ಗಮನ ಕೊಡುವುದಕ್ಕಿಂತ ಮೊಬೈಲ್ ನಲ್ಲಿ ಬ್ಯುಸಿ ಇರುತ್ತಾರೆ. ಹಲವಾರು ಬಾರಿ ವಿದ್ಯಾರ್ಥಿಗಳು ಮೊಬೈಲ್ ತಂದು ಅಧ್ಯಾಪಕರ ಕೈಗೆ ಸಿಕ್ಕಿ ಬಿದ್ದು ಬೈಸಿಕೊಂಡಿದ್ದರು. ಮೊಬೈಲ್ ತರುವುದಕ್ಕೆ ನಿಷೇಧ ಹೇರಿದ್ದರೂ ವಿದ್ಯಾರ್ಥಿಗಳು ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ಇನ್ನು ಮುಂದೆ ಕಾಲೇಜಿಗೆ ಮೊಬೈಲ್ ತರುವ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡುವ ಸಂಬಂಧ ಅವರ ಮುಂದೆ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

  • ಆಹಾರ ಪದಾರ್ಥ ಅಕ್ರಮ ಸಾಗಾಟ- ಪ್ರಾಂಶುಪಾಲ ಸೇರಿ ಮೂವರು ಪೊಲೀಸರ ವಶಕ್ಕೆ

    ಆಹಾರ ಪದಾರ್ಥ ಅಕ್ರಮ ಸಾಗಾಟ- ಪ್ರಾಂಶುಪಾಲ ಸೇರಿ ಮೂವರು ಪೊಲೀಸರ ವಶಕ್ಕೆ

    ಕೋಲಾರ: ವಸತಿ ಶಾಲೆಯಲ್ಲಿದ್ದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಾಂಶುಪಾಲರು ಗ್ರಾಮಸ್ಥರಿಗೆ ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ರಾಜೇನಹಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಡರಾತ್ರಿ ನಡೆದಿದೆ.

    ವಸತಿ ಶಾಲೆಯ ಪ್ರಾಂಶುಪಾಲರು ಅಕ್ರಮವಾಗಿ ಆಹಾರ ಪದಾರ್ಥಗಳನ್ನು ಸಾಗಿಸುತ್ತಿದ್ದರು. ಪದಾರ್ಥಗಳನ್ನು ಟೆಂಪೊಗೆ ಲೋಡ್ ಮಾಡಿ ಕಳಿಸುವ ವೇಳೆ ಪ್ರಾಂಶುಪಾಲ ಮಂಜುನಾಥ್ ಸೇರಿದಂತೆ ಇಬ್ಬರು ಗ್ರಾಮಸ್ಥರ ಕೈಗೆ ಸಾಕ್ಷಿ ಸಮೇತ ಸಿಕ್ಕಿ ಬಿದ್ದಿದ್ದಾರೆ. ಪ್ರಾಂಶುಪಾಲರು ಸೇರಿ ಮೂವರನ್ನು ಗ್ರಾಮಸ್ಥರು ಹಿಡಿದು ಕೂಡಿ ಹಾಕಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    ಹಲವು ದಿನಗಳಿಂದ ವಿದ್ಯಾರ್ಥಿಗಳಿಗೆ ಬರುತ್ತಿದ್ದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬರುತ್ತಿತ್ತು. ಆದ್ರೆ ಶುಕ್ರವಾರ ತಡರಾತ್ರಿ ಖಚಿತ ಮಾಹಿತಿ ಮೇರೆಗೆ ವಸತಿ ಶಾಲೆ ಮೇಲೆ ಗ್ರಾಮಸ್ಥರು ದಾಳಿ ಮಾಡಿದಾಗ ಅಕ್ರಮ ಬೆಳಕಿಗೆ ಬಂದಿದೆ. ಸದ್ಯ ಆರೋಪಿಗಳನ್ನು ಮಾಸ್ತಿ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

    ಕೆಲ ದಿನಗಳ ಹಿಂದಷ್ಟೇ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಈ ಸಂಬಂಧ ಪ್ರಾಂಶುಪಾಲರು ಸೇರಿದಂತೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv