Tag: ಪ್ರಾಣ

  • ಐವರ ಪ್ರಾಣ ಉಳಿಸಿದೆ ಅಂಗಾಂಗ ದಾನ – ಮಗನ ಸಾವಿನಲ್ಲಿ ಸಾರ್ಥಕತೆ ಕಂಡ ಕುಟುಂಬ

    ಐವರ ಪ್ರಾಣ ಉಳಿಸಿದೆ ಅಂಗಾಂಗ ದಾನ – ಮಗನ ಸಾವಿನಲ್ಲಿ ಸಾರ್ಥಕತೆ ಕಂಡ ಕುಟುಂಬ

    ಚಾಮರಾಜನಗರ: ತಮ್ಮ ಮಗನ ಸಾವಿನ ನೋವಿನಲ್ಲೂ ಚಾಮರಾಜನಗರ ಜಿಲ್ಲೆಯ ಕುಟುಂಬವೊಂದು ಸಾರ್ಥಕತೆ ಮೆರೆದಿದೆ.

    ಮೃತನ ಹೆಸರು ರಾಘವಾ(34). ಈತ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಚಿಲಕವಾಡಿ ಗ್ರಾಮದವರು. ಇವರು ತಂದೆ, ತಾಯಿ, ಪತ್ನಿ ಮತ್ತು 2 ವರ್ಷದ ಮಗಳ ಜೊತೆ ಸುಖ ಸಂಸಾರ ನಡೆಸುತ್ತಿದ್ದರು. ಆದರೆ ರಾಘವಾ ಕಳೆದ ಜುಲೈ 29 ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ರು. ಇದನ್ನೂ ಓದಿ: ಸುಖವಾಗಿರಬಹುದೆಂದು ಪತಿ ಜೊತೆಗೆ ವಿದೇಶಕ್ಕೆ ಹೋದ್ಲು – ಕಿರುಕುಳ ತಡೆಯದೆ ಮಸಣ ಸೇರಿದ್ಲು 

    ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ರಾಘವ ಬದುಕುವುದು ಅಸಾಧ್ಯ ಎಂದು ವೈದ್ಯರು ತಿಳಿಸಿದ್ರು. ಇದರಿಂದ ಅಘಾತಗೊಂಡ ರಾಘವನ ಕುಟುಂಬದವರು ಅವರ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ರು. ಈ ನಿರ್ಧಾರದಿಂದ ಐವರಿಗೆ ಪುನರ್ಜನ್ಮ ದೊರೆತಿದೆ.

    ರಾಘವಾನ ಅಂಗಾಂಗ ದಾನ ಮಾಡಲು ಅವರ ಕುಟುಂಬದವರು ಮೈಸೂರಿನ ಸ್ವಯಂ ಸೇವಾಸಂಸ್ಥೆಯನ್ನು ಸಂಪರ್ಕಿಸಿ ತಮ್ಮ ನಿರ್ಧಾರ ತಿಳಿಸಿದ್ರು. ನಂತರ ಕುಟುಂಬ ಸದಸ್ಯರ ಒಪ್ಪಿಗೆ ಪಡೆದು ರಾಘವಾ ಅವರ ಎರಡು ಮೂತ್ರಪಿಂಡ, ಒಂದು ಯಕೃತ್ತು, ಹೃದಯ ಕವಾಟುಗಳು ಮತ್ತು ಕಾರ್ನಿಯಾವನ್ನು ಬೇರ್ಪಡಿಸಲಾಯಿತು. ಅವರ ಅಂಗಾಂಗಗಳನ್ನು ಮೈಸೂರು ಮತ್ತು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಅಗತ್ಯ ಇರುವ ಐವರಿಗೆ ಅಂಗಾಂಗಳನ್ನು ಕಸಿ ಮಾಡಲಾಗಿದೆ. ಇದನ್ನೂ ಓದಿ:  3 ಆ್ಯಪ್‍ಗಳನ್ನು ರಚಿಸಿ ಗಿನ್ನಿಸ್ ದಾಖಲೆ ಮಾಡಿದ 12 ವರ್ಷದ ಪೋರ

    ರಾಘವಾ ಅವರ ಎರಡು ವರ್ಷದ ಏನೂ ಅರಿಯದ ಮಗು ನೋಡಿದರೆ ಎಂತಹವರಿಗು ಕರುಳು ಚುರುಕ್ ಎನ್ನುತ್ತದೆ. ಒಟ್ಟಾರೆ ಈ ಕುಟುಂಬ ಮಗನ ಸಾವಿನ ದುಃಖದ ನಡುವೆಯು ಆತನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದು ಇತರರಿಗೆ ಮಾದರಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನೆರೆಮನೆ ಮಗುವಿನ ಪ್ರಾಣ ಉಳಿಸಿ ಪ್ರಾಣ ಬಿಟ್ಟ ಯುವತಿ

    ನೆರೆಮನೆ ಮಗುವಿನ ಪ್ರಾಣ ಉಳಿಸಿ ಪ್ರಾಣ ಬಿಟ್ಟ ಯುವತಿ

    ತಿರುವನಂತಪುರಂ: ನೆರೆಮನೆ ಮಗುವಿನ ಪ್ರಾಣವನ್ನು ಕಾಪಾಡಲು ಹೋಗಿ ತನ್ನ ಪ್ರಾಣವನ್ನು ಯುವತಿ ಕಳೆದುಕೊಂಡಿರುವ ಘಟನೆ ಕೇರಳದ ಮಟ್ಟನೂರ್ ನಲ್ಲಿ ನಡೆದಿದೆ.

    ಅಮೃತಾ(25) ಮೃತಳಾಗಿದ್ದಾಳೆ. ನಿನ್ನೆ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ನೆರೆಮನೆಯ ಮಗುವಿನ ಪ್ರಾಣ ಉಳಿಸಲು ಹೋಗಿ ಅಮೃತಾ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾಳೆ.

    ನದಿಗೆ ನೆರೆಮನೆಯ ಮಗು ಬಿದ್ದಿದೆ. ಇದನ್ನು ಕಂಡ ಅಮೃತಾ ನೀರಿಗೆ ಹಾರಿದ್ದಾಳೆ. ಆದರೆ ಸುಳಿಗೆ ಸಿಲುಕಿ ಪ್ರಾಣವನ್ನು ಬಿಟ್ಟಿದ್ದಾಳೆ. ಅದೃಷ್ಟವಶಾತ್ ಮಗು ಪ್ರಾಣಾಪಯಾದಿಂದ ಪಾರಾಗಿದೆ. ಅಮೃತಾ ಮುಂಡೇರಿ ಪ್ರೌಢಶಾಲೆಯ ಲ್ಯಾಬ್ ಸಹಾಯಕ ಸಿ ಬಾಲಕೃಷ್ಣನ್ ಅವರ ಪುತ್ರಿಯಾಗಿದ್ದಾಳೆ. ಮಗಳನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

  • ಜ್ಯೋತಿಷಿ ಮಾತು ಕೇಳಿ ಪಕ್ಷಿಗಳ ಮಾರಣಹೋಮ

    ಜ್ಯೋತಿಷಿ ಮಾತು ಕೇಳಿ ಪಕ್ಷಿಗಳ ಮಾರಣಹೋಮ

    ಬೆಂಗಳೂರು: ಪಾರ್ಕ್ ಗಳಲ್ಲಿ ಕಾಳು ತಿನ್ನುತ್ತಿದ್ದ ಹಕ್ಕಿಗಳ ಪ್ರಾಣಕ್ಕೆ ಕುತ್ತು ತಂದಿದೆ. ಮಕ್ಕಳು ಹಾಗೂ ಕೆಲಸ ಇಲ್ಲದವರು ಜ್ಯೋತಿಷಿ ಮಾತು ಕೇಳಿ ಖಾರ ಬೂಂದಿ, ಹುರಿಗಡಲೆ ತಂದು ಪಕ್ಷಿಗಳಿಗೆ ಹಾಕುತ್ತಿದ್ದಾರೆ.

    ಜ್ಯೋತಿಷಿಗಳು ಮೂಕ ಪ್ರಾಣಿಗಳ ಪ್ರಾಣಕ್ಕೆ ಸಂಚಕಾರ ಹೂಡಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗುವುದಕ್ಕೆ, ಮಕ್ಕಳು ಆಗುವುದಕ್ಕೆ ಹೀಗೆ ಹಲವು ಹರಕೆಗಳು ಈಡೇರಬೇಕಂದರೆ ಹಕ್ಕಿಗಳಿಗೆ ಕಾಳು, ಖಾರ ಬೂಂದಿ ಹಾಕುವುದಕ್ಕೆ ಜ್ಯೋತಿಷಿಯೊಬ್ಬನು ಹೇಳಿದ್ದಾನೆ. ಹೀಗಾಗಿ ಪಾರ್ಕ್ ಗೆ ಬರುವ ವಾಕರ್ಸ್ ಪಕ್ಷಿಗಳಿಗೆ ಕಾಳುಗಳನ್ನು ಹಾಕುವ ಮೂಲಕ ಅವುಗಳ ಸಾವಿಗೆ ಕಾರಣರಾಗುತ್ತಿದ್ದಾರೆ.

    ಪ್ರಮುಖವಾಗಿ ಹುರಿಗಡಲೆ ಹಾಗೂ ಬೇಕರಿಯಲ್ಲಿ ಸಿಗುವ ಮಿಕ್ಚರ್, ಖಾರ ಬೂಂದಿ ಹಾಗೂ ಮನೆಯಲ್ಲಿ ಉಳಿದ ಎಣ್ಣೆ ಪದಾರ್ಥಗಳನ್ನು ಹಾಕುತ್ತಿದ್ದಾರೆ. ಇದನ್ನು ತಿಂದರೆ ಪಕ್ಷಿಗಳಿಗೆ ಜೀರ್ಣವಾಗುವುದಿಲ್ಲ. ಸರಿಯಾಗಿ ನೀರು ಕೂಡ ಸಿಗುವುದಿಲ್ಲ. ಇದರಿಂದ ಪಕ್ಷಿಗಳಿಗೆ ದಾಹ ಇನ್ನು ಹೆಚ್ಚಾಗುತ್ತೆ. ನೀರಿಲ್ಲದೆ ಪಕ್ಷಿಗಳು ಸಾವನ್ನಪ್ಪುತ್ತೆ ಎಂದು ಪಕ್ಷಿ ಪ್ರಿಯರು ಕಳವಳ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿರುವ ಕೆರೆಗಳನ್ನು ಭೂಗಳ್ಳರು ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಮೂಕ ಪ್ರಾಣಿಗಳು ಸಾವಿನ ಅಂಚಿಗೆ ಸೇರುತ್ತಿವೆ. ಮಾರ್ಚ್ ಹಾಗೂ ಏಪ್ರಿಲ್ ನಲ್ಲಿ ಪಕ್ಷಿಗಳಿಗೆ ಸನ್ ಸ್ಟ್ರೋಕ್ ಹಾಗೂ ಚಿಕನ್ ಪಾಕ್ಸ್ ಆಗುವ ಸಾಧ್ಯತೆಗಳೇ ಹೆಚ್ಚು. ಅದರಲ್ಲೂ ಪರಿವಾಳಗಳಿಗೆ ಪ್ಯಾರಲಿಸಿಸ್ ಬರುವ ಸಾಧ್ಯತೆಗಳಿರುತ್ತವೆ.

    ಅಂತಹದರಲ್ಲಿ ಸಿಲಿಕಾನ್ ಸಿಟಿಯ ಜನ ಪಾರ್ಕಿನಲ್ಲಿ ವಾಕ್ ಮಾಡುವುದಕ್ಕೆಂದು ಪಕ್ಷಿಗಳ ಮಾರಣಹೋಮಕ್ಕೆ ಕಾರಣರಾಗುತ್ತಿದ್ದಾರೆ. ಜನ ಯಾವುದೋ ಸ್ವಾಮೀಜಿ ಹೇಳಿದ್ರು, ಜ್ಯೋತಿಷ್ಯದವರು ಹೇಳಿದ್ದಾರೆ ಎಂದು ಈ ಮೂಕ ಪಕ್ಷಿಗಳಿಗೆ ಏನ್ ಏನೋ ತಂದು ಹಾಕಿ ಅವುಗಳು ಪ್ರಾಣ ತೆಗೆಯುತ್ತಿದ್ದಾರೆ. ಸ್ವಾಮೀಜಿ, ಜ್ಯೋತಿಷಿಗಳ ಮಾತು ನಂಬದೇ ನಿಮ್ಮ ಮನೆ ಮೇಲೆ ಒಂದ್ ಬೌಲ್ ನೀರಿಡಿ. ಅವುಗಳ ನೀರಿನ ದಾಹವನ್ನು ನೀಗಿಸಿ ಎಂದು ಪಕ್ಷಿ ಪ್ರಿಯರು ಮನವಿ ಮಾಡಿಕೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕನ್ನಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ನಿತ್ಯಾ ಮೆನನ್

    ಕನ್ನಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ನಿತ್ಯಾ ಮೆನನ್

    ಬೆಂಗಳೂರು: ತನ್ನ ವಿಭಿನ್ನ ಪಾತ್ರಗಳ ಮೂಲಕವೇ ಹೆಸರು ಮಾಡಿದ್ದ ನಟಿ ನಿತ್ಯಾ ಮೆನನ್ ಮತ್ತೊಂದು ವಿಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ.

    ಹೌದು, ನಟಿ ನಿತ್ಯಾ ಮೆನನ್ ಅಭಿನಯಿಸುವ ಚಿತ್ರಗಳು ಒಂದಿಲ್ಲೊಂದು ವಿಶೇಷತೆಗಳಿಂದಲೇ ಕೂಡಿರುತ್ತವೆ. ಅಲ್ಲದೇ ಅವರ ಸಿನಿಮಾಗಳು ವಿಭಿನ್ನ ಶೈಲಿಯಲ್ಲಿರುವುದು ಮಾಮೂಲಿ. ಈ ಮೊದಲು ಅವರು ಕಿಚ್ಚ ಸುದೀಪ್ ಅಭಿನಯದ `ಕೋಟಿಗೊಬ್ಬ-2′ ಸಿನಿಮಾದ ಮೂಲಕ ಕನ್ನಡದ ಅಭಿಮಾನಿಗಳಲ್ಲಿ ಹುಚ್ಚು ಹಬ್ಬಿಸಿದ್ದರು. ಸಿನಿಮಾದ `ಸಾಲುತಿಲ್ಲವೇ, ಸಾಲುತಿಲ್ಲವೇ’ ಹಾಡಿನಲ್ಲಿ ನಟ ಸುದೀಪ್ ರೊಂದಿಗೆ ವಿಭಿನ್ನವಾಗಿ ಕಾಣಿಸಿಕೊಂಡಿದ್ದು ಹಾಡು ಸಾಕಷ್ಟು ಸದ್ದು ಮಾಡಿತ್ತು. ಮತ್ತೆ ಪುನಃ ನಟಿ ನಿತ್ಯಾ ಮೆನನ್ ಕನ್ನಡಕ್ಕೆ ಕಾಲಿಡುತ್ತಿದ್ದಾರೆ.

    `ಪ್ರಾಣ’ ಎಂಬ ಹೊಸ ಸಿನಿಮಾದಲ್ಲಿ ನಿತ್ಯಾ ಮೆನನ್ ನಟಿಸಿದ್ದಾರೆ. ಥ್ರಿಲ್ಲರ್ ಚಿತ್ರವಾಗಿರುವ ಪ್ರಾಣದ ಸಂಪೂರ್ಣ ಚಿತ್ರೀಕರಣ ಮುಗಿದಿದ್ದು, ಚಿತ್ರವು ಅಂತಿಮ ಘಟಕ್ಕೆ ಬಂದು ತಲುಪಿದೆ. ಈಗಾಗಲೇ ಸಿನಿಮಾದ ಮೊದಲನೇ ಪೋಸ್ಟರ್ ಸಾಕಷ್ಟು ಸದ್ದು ಮಾಡಿದ್ದು, ಈಗ ಮತ್ತೊಂದು ಪೋಸ್ಟರ್ ರಿಲೀಸ್ ಆಗಿದೆ. ಪೋಸ್ಟರ್ ಸಖತ್ ವಿಶೇಷವಾಗಿದ್ದು, ಅಭಿಮಾನಿಗಳಿಗೆ `ಪ್ರಾಣ’ ಚಿತ್ರದ ಬಗ್ಗೆ ಭಾರೀ ಕುತೂಹಲ ಮೂಡಿಸಿದೆ. ಪೋಸ್ಟರ್ ನಲ್ಲೆ ವಿಭಿನ್ನ ರೀತಿಯಲ್ಲಿ ನಿತ್ಯಾ ಕಾಣಿಸಿಕೊಂಡಿರುವುದರಿಂದ ಚಿತ್ರ ಭಾರೀ ನಿರೀಕ್ಷೆ ಹುಟ್ಟುಹಾಕಿದೆ.

     

    ಪ್ರಾಣ ಚಿತ್ರವು ಕನ್ನಡ, ತಮಿಳು, ತೆಲುಗು, ಮಲೆಯಾಳಂ ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಸಂಪೂರ್ಣ ಚಿತ್ರವು ಸಿಂಕ್ ಸೌಂಡ್ ನಲ್ಲಿ ಚಿತ್ರೀಕರಿಸಲಾಗುತ್ತಿದೆ. ಚಿತ್ರಕ್ಕೆ ವಿ.ಕೆ.ಪ್ರಕಾಶ್ ಆಕ್ಷನ್ ಕಟ್ ಹೇಳಿದ್ದಾರೆ. ಅಲ್ಲದೇ ಆಸ್ಕರ್ ಪ್ರಶಸ್ತಿ ವಿಜೇತ ರೆಸುಲ್ ಪುಕುಟ್ಟಿ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಡಗಿನ ಭಾರೀ ಮಳೆ, ಭೂ ಕುಸಿತದಲ್ಲಿ ಸಾವನ್ನೇ ಗೆದ್ದ ವೃದ್ಧ ಸಹೋದರಿಯರು

    ಕೊಡಗಿನ ಭಾರೀ ಮಳೆ, ಭೂ ಕುಸಿತದಲ್ಲಿ ಸಾವನ್ನೇ ಗೆದ್ದ ವೃದ್ಧ ಸಹೋದರಿಯರು

    ಮಡಿಕೇರಿ: ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆ ಹಾಗೂ ಭೂ ಕುಸಿತಕ್ಕೆ ಕೊಡಗಿನ ಜನ ಬೆದರಿ ಪ್ರಾಣ ಉಳಿಸಿಕೊಳ್ಳೋಕೆ ಪರದಾಡಿದರು. ತಾವು ಸಂಪಾದಿಸಿದ್ದು ಏನೂ ಬೇಡ ಸದ್ಯ ಪ್ರಾಣ ಉಳಿದರೆ ಸಾಕು ಅಂತ ಎಲ್ಲವನ್ನೂ ಬಿಟ್ಟು ಊರನ್ನೇ ತೊರೆದು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಆಗಿದ್ದರು.

    ಆದರೆ ಮಡಿಕೇರಿ ಸಮೀಪದ ಕೊಯನಾಡಿನ ಈ ವೃದ್ಧ ಸಹೋದರಿಯರು ಮಾತ್ರ ಪ್ರಾಣಕ್ಕೆ ಸಂಕಟ ಬಂದರೂ ಮನೆ ಬಿಟ್ಟು ಸುರಕ್ಷಿತ ಸ್ಥಳಕ್ಕೆ ಹೋಗಲಿಲ್ಲ. ಅದಕ್ಕೆ ಕಾರಣ ಇವರು ಪ್ರೀತಿಯಿಂದ ಸಾಕಿದ್ದ ಜಾನುವಾರುಗಳು. ಆಗಸ್ಟ್ 15ರ ನಂತರ ಸುರಿದ ಭಾರೀ ಮಳೆಗೆ ಪಯಸ್ವಿನಿ ನದಿ ಉಕ್ಕಿ ಆಯಿಶಾ ಹಾಗೂ ಸೈನಬಾ ಇರುವ ಮನೆಯ ಮೆಟ್ಟಿಲಿನವರೆಗೆ ನೀರು ಹರಿದು ಆತಂಕ ಸೃಷ್ಟಿಸಿತ್ತು.

    ನದಿಯ ಅಬ್ಬರ ಸ್ವಲ್ಪ ಹೆಚ್ಚಾದರೂ ಇಡೀ ಮನೆಯೇ ಕೊಚ್ಚಿ ಹೋಗುವ ಭೀತಿ ಕಾಡಿತ್ತು. 80 ವರ್ಷ ಆಸುಪಾಸಿನ ಆಯಿಶಾ ತಂಗಿ ಸೈನಬಾ ಹುಟ್ಟುತ್ತಲೇ ಅಂಗವಿಕಲರು, ತಮ್ಮನ್ನೇ ನಂಬಿರುವ ಜಾನುವಾರುಗಳು ಜೊತೆಗಿದೆ. ಹೇಗೆ ಮನೆ ಬಿಟ್ಟು ಅವರನ್ನೆಲ್ಲಾ ಕರೆದುಕೊಂಡು ಬರೋದು ಎಂದು ನಿರಾಶ್ರಿತ ಕೇಂದ್ರಕ್ಕೆ ಬನ್ನಿ ಅಂತ ಕರೆದರೂ ಈ ಇಬ್ಬರು ಮಾತ್ರ ಮನೆ ಬಿಟ್ಟು ಕದಲಲಿಲ್ಲ.

    ನಾವು ಸಾಕಿದ ಜಾನುವಾರುಗಳನ್ನು ಬಿಟ್ಟು ಬರುವುದಿಲ್ಲ, ಜಾನುವಾರುಗಳ ಜೊತೆಗೆ ಇರುತ್ತೀವಿ. ಸತ್ತರೆ ಇಲ್ಲೇ ಸಾಯುತ್ತೇವೆ ಎಂದು ಹಠ ಹಿಡಿದು ಮನೆಯ ಸುತ್ತಲೂ ಆವರಿಸಿದ್ದ ನೀರು ಹಾಗೂ ಭೋರ್ಗರೆಯುತ್ತಿದ್ದ ಪಯಸ್ವಿನಿ ನದಿಯ ತಟದಲ್ಲೇ ಇದ್ದರು. ಇದೀಗ ಮಳೆಯ ಅಬ್ಬರ ಕಡಿಮೆಯಾಗಿ ಸಹೋದರಿಯರು ಸಾವನ್ನೇ ಗೆದ್ದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೆಲ್ಫಿ ಫೋಟೋಗಾಗಿ ಪ್ರಾಣವನ್ನೇ ಪಣಕ್ಕಿಟ್ಟು ಹುಚ್ಚು ಸಾಹಸ

    ಸೆಲ್ಫಿ ಫೋಟೋಗಾಗಿ ಪ್ರಾಣವನ್ನೇ ಪಣಕ್ಕಿಟ್ಟು ಹುಚ್ಚು ಸಾಹಸ

    ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮ, ಆಹ್ಲಾದಕರ ವಾತಾವರಣ, ಹಸಿರು ಸಿರಿಯ ನಡುವೆ ಅರುಣೋದಯ, ಸೂರ್ಯಾಸ್ತಮದ ದೃಶ್ಯ ಕಣ್ತುಂಬಿಕೊಳ್ಳೋದೇ ಒಂದು ಸೊಗಸು. ಆದರೆ ಈ ಅದ್ಭುತದ ಜೊತೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳಬೇಕೆಂದು ಎಲ್ಲರ ಆಸೆ. ಆ ಒಂದು ಫೋಟೋಗಾಗಿ ಪ್ರವಾಸಿಗರು ಪ್ರಾಣವನ್ನೇ ಪಣಕ್ಕಿಟ್ಟು ಹುಚ್ಚು ಸಾಹಸ ಮಾಡುತ್ತಿದ್ದಾರೆ.

    ಒಂದೆಡೆ ಮಂಟಪ ಹತ್ತುವುದಕ್ಕೆ ಸರ್ಕಸ್, ಮತ್ತೊಂದೆಡೆ ಹತ್ತೋದು ಹತ್ತಿದ್ದಾಯ್ತು ಇಳಿಯೋದು ಹೆಂಗೆ ಎಂದು ಯುವಕ-ಯುವತಿಯರು ಚಿಂತೆ ಪಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ನಂದಿಗಿರಿಧಾಮದಲ್ಲಿ ಸೆಲ್ಫಿಗಾಗಿ ಇಲ್ಲಿಗೆ ಬರೋ ಸಾವಿರಾರು ಪ್ರವಾಸಿಗರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸರ್ಕಸ್ ಮಾಡುತ್ತಿದ್ದಾರೆ. ಮನಮೋಹಕ ದೃಶ್ಯದ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

    ಈಗಾಗಲೇ ಈ ಮಂಟಪಗಳು ಶಿಥಿಲಾವಸ್ಥೆಗೆ ತಲುಪಿದ್ದು, ಯಾವಾಗ ಬೇಕಾದರೂ ಕುಸಿಯಬಹುದು. ಇದರ ಮೇಲೆ ಹತ್ತುವುದು ಅಪಾಯ ಅಂತ ಬೋರ್ಡ್ ಹಾಕಿದರೂ ಅದನ್ನೇ ಅಡಿಪಾಯ ಮಾಡಿಕೊಂಡು ಪ್ರವಾಸಿಗರು ಮಂಟಪ ಏರುತ್ತಿದ್ದಾರೆ. ಇವರಿಗೆ ತಮ್ಮ ಜೀವದ ಬಗ್ಗೆ ಭಯವೇ ಇಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

    ಒಂದು ದಿನದ ಎಂಜಾಯ್ ಮೆಂಟ್‍ಗೆ ಅಂತ ಸಾವಿರಾರು ಪ್ರವಾಸಿಗರು ನಂದಿ ಹಿಲ್ಸ್ ಗೆ ಬರುತ್ತಾರೆ. ಆದರೆ ಮೋಜಿನ ನಡುವೆ ಯಾರಾದರೂ ಬಿದ್ದು ಕೈ, ಕಾಲು ಕಳೆದುಕೊಂಡರೆ, ಪ್ರಾಣ ಹಾನಿಯಾದರೆ ಯಾರು ಹೊಣೆ. ಇನ್ನಾದರೂ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿ ಭದ್ರತೆ ಒದಗಿಸಬೇಕಿದೆ ಅಂತ ಸ್ಥಳೀಯರು ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಾಲಾ ಮಕ್ಕಳನ್ನು ರಕ್ಷಿಸಿ ಪ್ರಾಣ ಕಳೆದುಕೊಂಡ ವ್ಯಾನ್ ಡ್ರೈವರ್!

    ಶಾಲಾ ಮಕ್ಕಳನ್ನು ರಕ್ಷಿಸಿ ಪ್ರಾಣ ಕಳೆದುಕೊಂಡ ವ್ಯಾನ್ ಡ್ರೈವರ್!

    ಮುಂಬೈ: ಮಕ್ಕಳ ಜೀವವನ್ನು ಉಳಿಸಿ ಶಾಲಾ ವ್ಯಾನ್ ಚಾಲಕ ಮೃತಪಟ್ಟಿರುವ ದಾರುಣ ಘಟನೆ ಮಹಾರಾಷ್ಟ್ರದ ವಿರಾರ ನಗರದಲ್ಲಿ ನಡೆದಿದೆ.

    ಖಾಸಗಿ ಶಾಲೆಯ ಪ್ರಕಾಶ್ ಪಾಟೀಲ್ (44) ಮಕ್ಕಳಿಗಾಗಿ ಪ್ರಾಣಾ ತ್ಯಾಗ ಮಾಡಿದ ಶಾಲಾ ವ್ಯಾನ್ ಚಾಲಕ.

    ಘಟನೆ ವಿವರ:
    ಪ್ರಕಾಶ್ ಪಾಟೀಲ್ ಸೋಮವಾರ ಮಧ್ಯಾಹ್ನ ಶಾಲೆಯಿಂದ ಮಕ್ಕಳನ್ನು ತಮ್ಮ ವಾಹನದಲ್ಲಿ ಕರೆದುಕೊಂಡು ವಾಟರ್-ಲಾಗ್ಡ್ ಪಾಕೆಟ್ಸ್ ಮೂಲಕ ವಾಸೈಗೆ ಹೋಗುತ್ತಿದ್ದರು. ವಿರಾರದಲ್ಲಿರುವ ನೇರಿಂಗಿ ಗ್ರಾಮದ ಮೂಲಕ ವ್ಯಾನ್ ಚಲಿಸುತ್ತಿತ್ತು. ವ್ಯಾನ್ ಸಂಚರಿಸುತ್ತಿದ್ದ ಪಕ್ಕದಲ್ಲೇ ತೊರೆ ಹರಿಯುತ್ತಿದೆ ಅಂತ ಪೊಲೀಸರು ತಿಳಿಸಿದ್ದಾರೆ.

    ಅದಾಗಲೇ ವ್ಯಾನ್ ನಲ್ಲಿ ನಾಲ್ಕು ಮಕ್ಕಳು ಇದ್ದರು. ಕಹ್ರೋಡಿ ಜಂಕ್ಷನ್ ಹತ್ತಿರ ಬರುತ್ತಿದ್ದಂತೆಯೇ ಭಾರೀ ಮಳೆ ಆರಂಭವಾಗಿದೆ. ಹೀಗಾಗಿ ಚಾಲಕನಿಗೆ ರಸ್ತೆ ಕಾಣುತ್ತಿರಲಿಲ್ಲ. ಅಲ್ಲದೇ ಸುಮಾರು ಮೂರು ಅಡಿಯಷ್ಟು ನೀರು ರಸ್ತೆಯಲ್ಲೇ ಹರಿಯುತ್ತಿದ್ದರಿಂದ ಚಾಲಕನಿಗೆ ತೊರೆ, ರಸ್ತೆ ಕಾಣದೇ ಮುಂದೆ ಚಲಿಸಲು ಸಾಧ್ಯವಾಗಿಲ್ಲ. ಒಟ್ಟಿನಲ್ಲಿ ಭಾರೀ ಮಳೆಯಿಂದ ನೀರು ತುಂಬಿ ಹರಿಯುತ್ತಿದ್ದರಿಂದ ಅನಾಹುತ ಕಟ್ಟಿಟ್ಟಬುತ್ತಿ ಅಂತ ತಿಳಿದುಕೊಂಡು ಆತಂಕಗೊಂಡ ಚಾಲಕ ವ್ಯಾನ ನಿಲ್ಲಿಸಿದ್ದಾನೆ.

    ಬಳಿಕ ಮಕ್ಕಳನ್ನು ವ್ಯಾನಿನಿಂದ ಇಳಿಯುವಂತೆ ಹೇಳಿದ್ದಾರೆ. ಅಲ್ಲದೇ ಮಕ್ಕಳನ್ನು ತಾವೇ ಸ್ವತಃ ವ್ಯಾನಿನಿಂದ ಇಳಿಸಿದ್ದಾರೆ. ಈ ವೇಳೆ ರಭಸವಾಗಿ ಹರಿಯುತ್ತಿರುವ ನೀರಿಗೆ ಸಿಲುಕಿ ಇಬ್ಬರು ಮಕ್ಕಳು ತೊರೆಗೆ ಬಿದ್ದಿದ್ದಾರೆ. ಕೂಡಲೇ ಚಾಲಕ ತೊರೆಗೆ ಹಾರಿ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಆದ್ರೆ ಚಾಲಕ ತೊರೆಯ ಅಂಚಿನಲ್ಲಿದ್ದರಿಂದ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಆಗ ಮಕ್ಕಳು ಸಹಾಯಕ್ಕಾಗಿ ಕಿರುಚಿದ್ದಾರೆ. ಮಕ್ಕಳ ಕಿರುಚಾಟ ಕೇಳಿ ಸ್ಥಳೀಯರು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಮಾಹಿತಿ ತಿಳಿದು ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಚಾಲಕನಿಗಾಗಿ ಶೋಧಕಾರ್ಯ ಮಾಡಿದ್ದಾರೆ. ಈ ವೇಳೆ ಕೇವಲ 20 ನಿಮಿಷಗಳಲ್ಲಿ ಪಾಟೀಲ್ ದೇಹ ಸುಮಾರು 1.5 ಕಿ.ಮೀ. ದೂರ ಹೋಗಿದ್ದು, ಸದ್ಯ ಅವರ ಮೃತ ದೇಹ ಪತ್ತೆಯಾಗಿದೆ. ಬಳಿಕ ಮೃತದೇಹವನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಅಂತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಪಾಟೀಲ್ ವಸೈದ ಪಾರೋಲ್ ಗ್ರಾಮದ ನಿವಾಸಿಯಾಗಿದ್ದು, ಎರಡು ವರ್ಷಗಳಿಂದ ವ್ಯಾನ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಈ ಕುರಿತು ತನಿಖೆ ಪೂರ್ಣಗೊಂಡ ನಂತರ, ಪಾಟೀಲ್ ಕುಟುಂಬಕ್ಕೆ ಪರಿಹಾರವನ್ನು ಶಿಫಾರಸ್ಸು ಮಾಡುತ್ತೇವೆ. ಈ ಘಟನೆ ಸಂಭವಿಸಿದ ನಂತರ ಪಾಟೀಲ್ ಅವರನ್ನು ಧೈರ್ಯಶಾಲಿ ಎಂದು ಗ್ರಾಮಸ್ಥರು ಪ್ರಶಂಸಿದ್ದಾರೆ ಎಂದು ವಿರಾರ್ ವಿಭಾಗದ ಉಪ ಸೂಪರಿಟೆಂಡೆಂಟ್ ಜಯಂತ್ ಬಾಜ್ಬೆಲೆ ಹೇಳಿದ್ದಾರೆ.

    ನನ್ನ ಸಹೋದರ ಸಹಾಯ ಮನೋಭಾವವನ್ನು ಹೊಂದಿದ್ದರು. ಆತ ಮಕ್ಕಳನ್ನು ಹೆಚ್ಚು ಪ್ರೀತಿಸುತ್ತಿದ್ದರು. ಯಾರೊಂದಿಗೂ ಗಲಾಟೆ ಮಾಡಿಕೊಳ್ಳುತ್ತಿರಲಿಲ್ಲ. ಅಗತ್ಯವಿರುವರಿಗೆ ಕೈಲಾದ ಸಹಾಯ ಮಾಡುತ್ತಿದ್ದರು. ಆತ ತನ್ನ ಜೀವನದ ಬಗ್ಗೆ ಯೋಚಿಸಲಿಲ್ಲ ಎಂದು ಪಾಟೀಲ್ ಸಹೋದರ ಹೇಳಿದ್ದಾರೆ.