Tag: ಪ್ರಾಣಿ ಸಂಗ್ರಹಾಲಯ

  • ಗೋಹತ್ಯೆ ನಿಷೇಧ ಕಾಯ್ದೆಯಿಂದ ಪ್ರಾಣಿ ಸಂಗ್ರಹಾಲಯದಲ್ಲಿ ಆಹಾರದ ಕೊರತೆ ಇಲ್ಲ: ಪ್ರಭು ಚವ್ಹಾಣ್

    ಗೋಹತ್ಯೆ ನಿಷೇಧ ಕಾಯ್ದೆಯಿಂದ ಪ್ರಾಣಿ ಸಂಗ್ರಹಾಲಯದಲ್ಲಿ ಆಹಾರದ ಕೊರತೆ ಇಲ್ಲ: ಪ್ರಭು ಚವ್ಹಾಣ್

    – ಪ್ರತಿ ಜಿಲ್ಲೆಗೆ ಒಂದೊಂದು ಗೋ ಶಾಲೆ ಪ್ರಾರಂಭ

    ವಿಜಯನಗರ: ರಾಜ್ಯ ಸರ್ಕಾರ ನಾಡಿನ ಜನರ ಒತ್ತಾಸೆಗೆ ಸ್ಪಂದಿಸಿ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯಿಂದ ಪ್ರಾಣಿ ಸಂಗ್ರಹಾಲಯದಲ್ಲಿ ಆಹಾರದ ಕೊರತೆಯಾಗಿಲ್ಲ ಎಂದು ಸಚುವ ಪ್ರಭು ಚವ್ಹಾಣ್ ಹೇಳಿದ್ದಾರೆ.

    ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಧಿಕಾರಿಗಳು ಸಭೆ ನಡೆಸಿ ಮಾತನಾಡಿದ ಅವರು, ಪಶುಸಂಗೋಪನಾ ಇಲಾಖೆಯಲ್ಲಿ ಜಾರಿಯಲ್ಲಿರುವ ವಿವಿಧ ಸೇವಾ ಸೌಲಭ್ಯಗಳ ಕುರಿತು ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಗ್ರಾಮಸಭೆಗಳ ಮೂಲಕ ರೈತರಿಗೆ ಅರಿವು ಮೂಡಿಸುವಂತೆ ಸಚಿವ ಪ್ರಭು ಚವ್ಹಾಣ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಇದನ್ನೂ ಓದಿ: ಪಾಲಿಕೆಯಲ್ಲಿ ಸ್ವಂತ ಶಕ್ತಿಯಿಂದ ಜೆಡಿಎಸ್ ಅಧಿಕಾರಕ್ಕೆ ಬರುತ್ತೆ: ಹೆಚ್.ಡಿ.ಕುಮಾರಸ್ವಾಮಿ 

    ಮಾಜಿ ಸಿಎಂ ಯಡಿಯೂರಪ್ಪ ಅವರು ನನಗೆ ಈ ಖಾತೆ ಜವಾಬ್ದಾರಿ ಕೊಟ್ಟಿದ್ದರು. ಗೋವುಗಳ ರಕ್ಷಣೆ ಆಗಬೇಕು, ಗೋಹತ್ಯೆ ಕಾನೂನು ಜಾರಿ ಆಗಬೇಕು ಎನ್ನುವ ಡಿಮ್ಯಾಂಡ್ ಇತ್ತು. ಹೀಗಾಗಿ ನಾನು ಯುಪಿ, ಗುಜರಾತ್ ಹೋಗಿ ಅಧ್ಯಯನ ಮಾಡಿ ಬಂದು ಗೋವುಗಳು ಕಸಾಯಿ ಖಾನೆಗೆ ಹೋಗಬಾರದು ಅಂತ ಈ ಕಾಯ್ದೆ ಜಾರಿ ಮಾಡಲಾಗಿದೆ ಎಂದಿದ್ದಾರೆ.

    ಗೋಹತ್ಯೆ ಕಾಯ್ದೆ ಜಾರಿಯಾದ ಬಳಿಕ 7ಸಾವಿರ ಗೋವುಗಳ ರಕ್ಷಣೆ ಮಾಡಿದ್ದೇವೆ. ಪ್ರತಿ ಜಿಲ್ಲೆಗೆ ಒಂದೊಂದು ಗೋ ಶಾಲೆ ಪ್ರಾರಂಭ ಮಾಡಲು ಸರ್ಕಾರ ಮುಂದಾಗಿದೆ. ಪ್ರತಿ ಜಿಲ್ಲೆಗೆ 50 ಲಕ್ಷ ಮಂಜೂರು ಮಾಡಿ ಅಂತ ಸಿಎಂ ಬಳಿ ಮನವಿ ಮಾಡಿದ್ದೆವೆ. ಪ್ರಾಣಿ ಸಹಾಯವಾಣಿ ಕೇಂದ್ರ, ದೇಶದಲ್ಲಿ ಮೊದಲ ಬಾರಿಗೆ ನಾವು ಪ್ರಾರಂಭ ಮಾಡಿದ್ದೇವೆ ಪ್ರಾಣಿಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಿದ ನಂತರ ಝೂಗಳಲ್ಲಿ ಪ್ರಾಣಿಗಳಿಗೆ ಆಹಾರ ಸಮಸ್ಯೆಯಾಗಿಲ್ಲ, ಆ ರೀತಿಯ ದೂರುಗಳು ಬಂದಿಲ್ಲ. ಒಂದು ವೇಳೆ ಹಾಗೆ ದೂರು ಬಂದರೆ ಅದನ್ನು ಪರಿಶೀಲನೆ ಮಾಡಲಾಗುವುದು ಎಂದಿದ್ದಾರೆ.

  • ದಾಸನ ಮನವಿಗೆ ಸ್ಪಂದನೆ- ಪ್ರಾಣಿಗಳನ್ನು ದತ್ತು ಪಡೆದ ಅಭಿಮಾನಿಗಳು

    ದಾಸನ ಮನವಿಗೆ ಸ್ಪಂದನೆ- ಪ್ರಾಣಿಗಳನ್ನು ದತ್ತು ಪಡೆದ ಅಭಿಮಾನಿಗಳು

    ಬೆಂಗಳೂರು: ಕೊರೊನಾ ಸಂಕಷ್ಟ ಸಮಯದಲ್ಲಿ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಮೃಗಾಲಯದಿಂದ ಪ್ರಾಣಿಗಳನ್ನು ದತ್ತು ಸ್ವೀಕರಿಸಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದರು. ಅವರ ಮಾತಿನಂತೆ ಅಭಿಮಾನಿಗಳು ಪ್ರಾಣಿಗಳನ್ನು ದತ್ತು ಪಡೆಯುತ್ತಿದ್ದಾರೆ ಎಂದು ದಾಸ ತನ್ನ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    ನಿರ್ಮಾಪಕಿ ಶೈಲಜಾ ನಾಗ್ ಮತ್ತು ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಒಂದು ಸಿಂಹವನ್ನು ದತ್ತು ಪಡೆದುಕೊಂಡಿದ್ದಾರೆ. ಹಾಗೂ ದರ್ಶನ್ ಮಾತಿಗೆ ಹಾಗೂ ಪ್ರಾಣಿಗಳ ಮೇಲಿರುವ ಪ್ರೀತಿಗೆ ಹಲವು ಅಭಿಮಾನಿಗಳು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ ಈ ಕುರಿತಾಗಿ ದರ್ಶನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿಯನ್ನು ಹಂಚಿಕೊಂಡು ಧನ್ಯವಾದವನ್ನು ಹೇಳಿದ್ದಾರೆ. ಇದನ್ನೂ ಓದಿ: ಚಿರುವಿನ ಕೊನೆಯ ದಿನ ನಡೆದಿದ್ದು ಏನು? – ಬಹಿರಂಗ ಪಡಿಸಿದ ಮೇಘನಾ

    ಲಾಕ್‍ಡೌನ್ ಇದರಿಂದಾಗಿ ಜನರು ಮಾತ್ರವಲ್ಲ, ಪ್ರಾಣಿಗಳು ಕೂಡ ಸಂಕಷ್ಟವನ್ನು ಎದುರಿಸುತ್ತಿವೆ. ರಾಜ್ಯದಲ್ಲಿರುವ 9 ಪ್ರಾಣಿ ಸಂಗ್ರಹಾಲಯಗಳು ಕೂಡ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಇದರಿಂದ ಆಹಾರಕ್ಕೂ ಸಮಸ್ಯೆಯಾಗಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆ ನಟ ದರ್ಶನ್ ನೆರವಿಗೆ ಧಾವಿಸಿದ್ದಾರೆ.

    ಪರಿಸರ ದಿನಾಚರಣೆಯಂದು ವೀಡಿಯೋ ಮೂಲಕ ಅಭಿಮಾನಿ ಮತ್ತು ಆಪ್ತರ ಬಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡು ಸಹಕರಿಸಿ ಎಂದು ಮನವಿ ಮಾಡಿದ್ದರು. ಪ್ರಾಣಿ ಸಂಗ್ರಹಾಲಯದಲ್ಲಿರುವ ಇಷ್ಟವಾದ ಪ್ರಾಣಿಗಳನ್ನು ದತ್ತು ಪಡೆಯಬಹುದೆಂದು ಹೇಳಿದ್ದರು. ದರ್ಶನ್ ಅವರ ಮನವಿಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾತ್ರವಲ್ಲದೆ ಅನೇಕರಿಗೆ ಅದು ತಲುಪಿದೆ. ಇದನ್ನು ಗಮನಿಸಿದ ಅವರ ಅಭಿಮಾನಿಗಳು ಪ್ರಾಣಿಗಳನ್ನು ದತ್ತು ಸ್ವೀಕರಿಸುತ್ತಿದ್ದಾರೆ.

    ದರ್ಶನ್ ಹೇಳಿದ್ದೇ ತಡ ಅಭಿಮಾನಿಗಳು, ನಾ ಮುಂದು ತಾ ಮುಂದು ಎಂದು ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆಯುತ್ತಿದ್ದಾರೆ. ಈ ರೀತಿ ದತ್ತು ಪಡೆದುಕೊಂಡವರಿಗೆ ಮೃಗಾಲಯದ ವತಿಯಿಂದ ಪ್ರಮಾಣ ಪತ್ರಗಳನ್ನು ನೀಡಲಾಗುತ್ತದೆ. ಆ ಪ್ರಮಾಣ ಪತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ದರ್ಶನ್, ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

  • ಮೃಗಾಲಯದಲ್ಲಿ ಧಮ್ ಎಳೆದ ಚಿಂಪಾಂಜಿ- ವಿಡಿಯೋ ಫುಲ್ ವೈರಲ್

    ಮೃಗಾಲಯದಲ್ಲಿ ಧಮ್ ಎಳೆದ ಚಿಂಪಾಂಜಿ- ವಿಡಿಯೋ ಫುಲ್ ವೈರಲ್

    ನವದೆಹಲಿ: ಇಂಡೋನೇಶಿಯಾ ಪ್ರಾಣಿ ಸಂಗ್ರಹಾಲಯದಲ್ಲಿ ಚಿಂಪಾಂಜಿಯೊಂದು ಮನುಷ್ಯರಂತೆ ಸಿಗರೇಟ್ ಸೇದಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.

    22 ವರ್ಷದ ಅಪೆ ಎಂಬ ಹೆಸರಿನ ಜಿಂಪಾಂಜಿಯೊಂದು ಸಿಗರೇಟ್ ಸೇದಿದೆ. ಭಾನುವಾರ ರಜಾ ದಿನವಾದ್ದರಿಂದ ಸಾಮಾನ್ಯವಾಗಿ ಮೃಗಾಲಯಕ್ಕೆ ಬರುವವರ ಸಂಖ್ಯೆ ಜಾಸ್ತಿ. ಹೀಗೆ ಬಂದ ವ್ಯಕ್ತಿಯೊಬ್ಬ ಸಿಗರೇಟನ್ನು ಅರ್ಧ ಸೇದಿ ಚಿಂಪಾಜಿ ಪಕ್ಕ ಬಿಸಾಕಿದ್ದ. ಇದನ್ನು ಗಮನಿಸಿದ ಚಿಂಪಾಂಜಿ ನೇರವಾಗಿ ಸಿಗರೇಟ್ ಇದ್ದ ಸ್ಥಳಕ್ಕೆ ಬಂದು ಅದನ್ನು ತನ್ನ ಕೈಯಲ್ಲಿ ಎತ್ತಿಕೊಂಡಿದೆ. ಅಲ್ಲದೇ ಅಲ್ಲೇ ಪಕ್ಕಕ್ಕೆ ಹೋಗಿ ಮನುಷ್ಯರಂತೆ ತಾನೂ ಕೂತು ಸಿಗರೇಟ್ ಸೇದಿದೆ. ಇದನ್ನು ಮರಿಸನ್ ಗುಸಿಯಾನೊ ಎಂಬವರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದು, ಇದೀಗ ವೈರಲ್ ಆಗಿದೆ.

    ಘಟನೆ ಕುರಿತು ಬ್ಯಾಂಡಂಗ್ ಮೃಗಾಲಯದ ವಕ್ತಾರ ಸುಲ್ಹಾನ್ ಪ್ರತಿಕ್ರಿಯಿಸಿದ್ದು, ಮೃಗಾಲಯದೊಳಗೆ ಇಂತಹ ಘಟನೆ ನಡೆದಿರುವುದು ವಿಷಾದವೇ ಸರಿ. ಇದಕ್ಕೆ ಅಲ್ಲಿನ ಸಿಬ್ಬಂದಿಗಳೇ ನೇರ ಹೊಣೆ ಅಂತ ಹೇಳಿದ್ದಾರೆ.

    ಯಾಕಂದ್ರೆ ಸಾಮಾನ್ಯವಾಗಿ ಮೃಗಾಲಯದೊಳಗೆ ಪ್ರಾಣಿಗಳಿಗೆ ಆಹಾರ ನೀಡಲು ಅವಕಾಶ ಇರುವುದಿಲ್ಲ. ಅಂತದ್ದರಲ್ಲಿ ಈ ವ್ಯಕ್ತಿಯೊಬ್ಬ ಸಿಗರೇಟ್ ನೀಡಿದ್ದಾನೆಂದರೆ ಈ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಅಂತ ಅವರು ತಿಳಿಸಿದ್ದಾರೆ. ಪ್ರಾಣಿ ದಯಾ ಸಂಘದವರು ಕೂಡ ಪ್ರವಾಸಿಗರ ಈ ವರ್ತನೆಯನ್ನು ಖಂಡಿಸಿದ್ದಾರೆ.

    https://www.facebook.com/marison.guciano/videos/10213499306150627/?lst=100003550156104%3A1640542585%3A1520584975