Tag: ಪ್ರಾಥಮಿಕ ಆರೋಗ್ಯ ಕೇಂದ್ರ

  • 8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ

    8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ

    ಕಲಬುರಗಿ: 8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್‌ಗಳಿಗೆ ಅಧಿಕಾರಿಗಳು ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಫರಹತಾಬಾದ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

    ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಎನ್ನುವ ಗಾದೆ ಮಾತು ಅಕ್ಷರಶಃ ನಿಜವಾಗ್ತಿದೆ. ಪಿರಿಯಡ್ಸ್ ಸಮಯದಲ್ಲಿ ಮಹಿಳೆಯರಿಗೆ ಸಮಸ್ಯೆ ಆಗಬಾರದು ಎಂದು ಸರ್ಕಾರ ಆರೋಗ್ಯ ಇಲಾಖೆ ಮೂಲಕ ಉಚಿತ ಸ್ಯಾನಿಟರಿ ಪ್ಯಾಡ್ ನೀಡುತ್ತದೆ. ಆದರೆ ಕಲಬುರಗಿಯ ಫರಹತಾಬಾದ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 1 ಲಕ್ಷಕ್ಕೂ ಅಧಿಕ ಶುಚಿ ಪ್ಯಾಡ್‌ಗಳನ್ನು ಸುಟ್ಟು ಹಾಕಲಾಗಿದೆ.ಇದನ್ನೂ ಓದಿ: ಕೆಲವರಿಗೆ ಸಿಎಂ ಆಗ್ಬೇಕು ಅಂತಿರುತ್ತೆ, ಅಂಥವರೇ ಬದಲಾವಣೆಯ ಊಹಾಪೋಹಗಳನ್ನು ಹಬ್ಬಿಸ್ತಿದ್ದಾರೆ: ಯತೀಂದ್ರ

    ಫರಹತಾಬಾದ್ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ 15 ಹಳ್ಳಿಯ ಜನರಿಗೆ ಶುಚಿ ಪ್ಯಾಡ್ ಹಂಚಬೇಕಾಗಿತ್ತು. 2017ರಲ್ಲಿಯೇ ಎಲ್ಲಾ ಶುಚಿ ಪ್ಯಾಡ್‌ಗಳು ತಯಾರಾಗಿದ್ದು, 2021ರವರೆಗೆ ವ್ಯಾಲಿಡಿಟಿ ಇದ್ದು, 8 ವರ್ಷಗಳಿಂದ ಮಹಿಳೆಯರಿಗೆ ವಿತರಿಸದೇ ಹಾಗೇ ಬಿಟ್ಟಿದ್ದಾರೆ.

    ಆರೋಗ್ಯ ಕೇಂದ್ರ ಉನ್ನತೀಕರಣಗೊಂಡ ಹಿನ್ನೆಲೆ ಹಳೆಯ ಕಟ್ಟಡವನ್ನು ತೆರವು ಮಾಡಿ, ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದರು. ಹಳೆಯ ಕಟ್ಟಡ ತೆರವಿನ ವೇಳೆ ಕಟ್ಟಡದ ತುಂಬೆಲ್ಲಾ ವಿತರಣೆಯಾಗದ 100ಕ್ಕೂ ಹೆಚ್ಚು ಬಾಕ್ಸ್ಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಪ್ಯಾಡ್‌ಗಳು ಪತ್ತೆಯಾಗಿವೆ. ಇದನ್ನು ಕಂಡ ಪಿಎಚ್‌ಸಿಯ ಕೆಲ ಸಿಬ್ಬಂದಿಗಳು ಕೂಡಲೇ ಪ್ಯಾಡ್‌ಗಳಿಗೆ ಬೆಂಕಿ ಹಚ್ಚಿ, ತಮ್ಮ ತಪ್ಪು ಮುಚ್ಚಿಕೊಳ್ಳಲು ಮುಂದಾಗಿದ್ದಾರೆ. ಶನಿವಾರ ಬೆಳಿಗ್ಗೆ ಎಲ್ಲ ಪ್ಯಾಡ್‌ಗಳಿಗೆ ಬೆಂಕಿ ಹಚ್ಚಿದ್ದು, ಇದೇ ವೇಳೆ ಸ್ಥಳೀಯರು ಹೋಗಿ ಪರಿಶೀಲನೆ ನಡೆಸಿದಾಗ, ವಿಷಯ ಬಯಲಿಗೆ ಬಂದಿದೆ. ಸ್ಥಳೀಯರು ಕಿಡಿಕಾರಿದಾಗ ಪಿಎಚ್‌ಸಿ ಸಿಬ್ಬಂದಿ ಕಾಲ್ಕಿತ್ತಿದ್ದಾರೆ.ಇದನ್ನೂ ಓದಿ:ಸಿದ್ದರಾಮಯ್ಯಗೆ ಶ್ರೀ ಕೃಷ್ಣ ಮಠದಿಂದ ಆಹ್ವಾನ – 2 ದಶಕಗಳ ಬಳಿಕ ಮಠಕ್ಕೆ ಭೇಟಿ ಕೊಡ್ತಾರಾ ಸಿಎಂ?

  • ಬಾಣಂತಿಯರ ಸಾವು ಪ್ರಕರಣ – ಪ್ರಾಥಮಿಕ ಆರೋಗ್ಯ ಕೇಂದ್ರದ ಪರಿಶೀಲನೆಗೆ ಮುಂದಾದ ಇಲಾಖೆ

    ಬಾಣಂತಿಯರ ಸಾವು ಪ್ರಕರಣ – ಪ್ರಾಥಮಿಕ ಆರೋಗ್ಯ ಕೇಂದ್ರದ ಪರಿಶೀಲನೆಗೆ ಮುಂದಾದ ಇಲಾಖೆ

    ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇದರಿಂದ ಎಚ್ಚೆತ್ತ ಜಿಲ್ಲಾ ಆರೋಗ್ಯ ಇಲಾಖೆ (District Health Department)  ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪರಿಶೀಲನೆಗೆ ಮುಂದಾಗಿದೆ.

    ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 10 ಬಾಣಂತಿಯರನ್ನು ಸಾವನ್ನಪ್ಪಿದ್ದು, ಇದೀಗ ಜಿಲ್ಲಾ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪರಿಶೀಲನೆಗೆ ಮುಂದಾಗಿದ್ದು, ರಾಯಚೂರಿನ (Raichuru) ಕಲ್ಮಲಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (Primary Health Centre) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.ಇದನ್ನೂ ಓದಿ: ಲೋಕ್ ಅದಾಲತ್‌ನಲ್ಲಿ 73,628 ಪ್ರಕರಣ ಇತ್ಯರ್ಥ – ನ್ಯಾ.ಪ್ರಕಾಶ ಬನಸೋಡೆ

    ಬಾಣಂತಿಯರ ಆರೋಗ್ಯವನ್ನು ವಿಚಾರಿಸಿದ ಅಧಿಕಾರಿಗಳು ಆಸ್ಪತ್ರೆಯ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದರು. ಬಾಣಂತಿಯರು ಹೆರಿಗೆಯಾದ ನಂತರ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಚಳಿಗಾಲ ಇರುವ ಕಾರಣ ಸಣ್ಣಮಕ್ಕಳನ್ನು ಸಹ ಬೆಚ್ಚಗೆ ಇರುವಂತೆ ನೋಡಿಕೊಳ್ಳಬೇಕು. ಏನಾದರೂ ತೊಂದರೆ ಉಂಟಾದಲ್ಲಿ ಕೂಡಲೇ ವೈದ್ಯರನ್ನು ಭೇಟಿಯಾಗಬೇಕು ಎಂದು ಸಲಹೆ ನೀಡಿದರು.

    ಇನ್ನೂ ಆಸ್ಪತ್ರೆಗೆ ಬರುವ ಸಾರ್ವಜನಿಕರು, ಗರ್ಭಿಣಿ, ಬಾಣಂತಿ ಮತ್ತು ನವಜಾತ ಶಿಶುಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಈ ಮೂಲಕ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಇದನ್ನೂ ಓದಿ: Mumbai Boat Accident | ಪ್ರಯಾಣಿಕ ಹಡಗಿಗೆ ನೌಕಾಪಡೆಯ ಬೋಟ್‌ ಡಿಕ್ಕಿ; 13 ಮಂದಿ ದಾರುಣ ಸಾವು

  • ಪ್ರೀತಿಸಿ ಮದ್ವೆಯಾದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ!

    ಪ್ರೀತಿಸಿ ಮದ್ವೆಯಾದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ!

    ವಿಜಯನಗರ: ಪ್ರೀತಿಸಿ ಮದ್ವೆಯಾದ (Love Marriage) ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಪತಿ ಕೊನೆಗೆ ತಾನೇ ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿರುವ ಘಟನೆ ವಿಜಯನಗರ (Vijayanagara) ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ನಡೆದಿದೆ.

    ಮೂಲತಃ ಮೈಸೂರು ಜಿಲ್ಲೆ ಹೆಚ್‌.ಡಿ ಕೋಟೆ ತಾಲೂಕಿನ ಮಾದಾಪುರ ಗ್ರಾಮದ ಡಿಂಪಲ್‌ (36) ಕೊಲೆಯಾದ ಮಹಿಳೆ. ನೆಲ್ಲುಕುದುರಿ ಗ್ರಾಮದ ಪ್ರಾಥಮಿಕ ಆರೋಗ್ಯಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ (Health Officer) ಶ್ರೀಕಾಂತ ಕೊಲೆ ಆರೋಪಿ.

    ಡಿಂಪಲ್‌ ಹಗರಿಬೊಮ್ಮನಹಳ್ಳಿ ತಾಲೂಕಿನ ಉಲವತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯಾಧಿಕಾರಿಯಾಗಿದ್ದರು.‌ ಕಳೆದ ವರ್ಷ ಹಗರಿಬೊಮ್ಮನಹಳ್ಳಿ ತಾಲೂಕಿನ ಕೋಗಳಿ ತಾಂಡಾದ ನಿವಾಸಿ ಹಾಗೂ ನೆಲ್ಲುಕುದುರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (Primary Health Centre) ಸಮುದಾಯ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಕಾಂತನನ್ನ ಪ್ರೀತಿಸಿ ಮದುವೆಯಾಗಿದ್ದರು. ಇದನ್ನೂ ಓದಿ: ಮುಂದುವರಿದ ರೆಡ್ಡಿ ಸಹೋದರರ ಮುನಿಸು – ಸಹೋದರನ ಪುತ್ರನ ಮದುವೆಗೆ ಜನಾರ್ದನ ರೆಡ್ಡಿ ಗೈರು

    ಡಿಂಪಲ್‌ಗೆ ಇದು 3ನೇ ಮದುವೆ, ಶ್ರೀಕಾಂತ್‌ಗೆ 2ನೇ ಮದುವೆ. ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ವಾಸವಾಗಿದ್ದ ದಂಪತಿ ಪರಸ್ಪರ ಅನ್ನೋನ್ಯವಾಗಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಶುಕ್ರವಾರ (ನ.25) ರಾತ್ರಿ ಏಕಾಏಕಿಯಾಗಿ ಇಬ್ಬರ ನಡುವೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೆಂಡತಿಯನ್ನ ಕೊಲೆ ಮಾಡಿದ ನಂತರ ಶ್ರೀಕಾಂತ ಗ್ರಾಮದ ಪೊಲೀಸ್ ಠಾಣೆಗೆ ತೆರಳಿ ತಾನೇ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

    ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಇಟ್ಟಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Bengaluru HAL – ತೇಜಸ್‌ ಫೈಟರ್‌ಜೆಟ್‌ನಲ್ಲಿ ಹಾರಾಟ ನಡೆಸಿ ಗಮನ ಸೆಳೆದ ಮೋದಿ

  • ವೈದ್ಯರ ನಿರ್ಲಕ್ಷ್ಯ, ಹೊಟ್ಟೆಯಲ್ಲೇ ಮಗು ಸಾವು – ಗ್ರಾಮಸ್ಥರಿಂದ ವೈದ್ಯರ ತರಾಟೆ

    ವೈದ್ಯರ ನಿರ್ಲಕ್ಷ್ಯ, ಹೊಟ್ಟೆಯಲ್ಲೇ ಮಗು ಸಾವು – ಗ್ರಾಮಸ್ಥರಿಂದ ವೈದ್ಯರ ತರಾಟೆ

    ಯಾದಗಿರಿ: ಯಾದಗಿರಿ (Yadgiri) ತಾಲೂಕಿನ ಹೊನಗೇರಾದಲ್ಲಿನ ಪ್ರಾಥಮಿಕ ಆಸ್ಪತ್ರೆಗೆ ಹೆರಿಗೆಗೆಂದು ತೆರಳಿದ್ದ ಗರ್ಭಿಣಿಗೆ (Pregnant) ಸೂಕ್ತ ಚಿಕಿತ್ಸೆ ದೊರೆಯದ ಹಿನ್ನೆಲೆ ಹೊಟ್ಟೆಯಲ್ಲಿಯೇ ಶಿಶು (Infant) ಮೃತಪಟ್ಟಿರುವ ಘಟನೆ ನಡೆದಿದೆ.

    ಆಶನಾಳ ಗ್ರಾಮದ ಗರ್ಭಿಣಿ ಲಕ್ಷ್ಮಿ ಎಂಬುವವರಿಗೆ ಸರಿಯಾದ ಚಿಕಿತ್ಸೆ ಸಿಗಲಿಲ್ಲ. ವೈದ್ಯರ (Doctor) ನಿರ್ಲಕ್ಷ್ಯದಿಂದಲೇ ಹೀಗೆ ಆಗಿದೆ ಎಂದು ಆರೋಪ ಮಾಡಲಾಗಿದೆ. ಮೊದಲಿಗೆ ಆಶಾ ಕಾರ್ಯಕರ್ತೆಯು ಇವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (Primary Health Centre) ಕರೆದೊಯ್ದಿದ್ದರು. ಅಲ್ಲಿ ವೈದ್ಯರು ಇರದ ಹಿನ್ನೆಲೆಯಲ್ಲಿ ಯಾದಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಸೋಮವಾರ ರಾತ್ರಿ ಗರ್ಭಿಣಿ ಲಕ್ಷ್ಮಿಯ ಸ್ಕ್ಯಾನಿಂಗ್ (Scanning) ಮಾಡಿಸಿದಾಗ ಹೊಟ್ಟೆಯಲ್ಲಿ ಶಿಶು ಮೃತಪಟ್ಟಿದ್ದ ಬಗ್ಗೆ ತಿಳಿದುಬಂದಿದೆ. ಕೊನೆಗೆ ಮೃತ ಶಿಶುವನ್ನು ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಹೊರ ತೆಗೆದಿದ್ದಾರೆ. ಬಳಿಕ ಬಾಣಂತಿ ಲಕ್ಷ್ಮಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ: ಸ್ಲೀಪರ್ ಕೋಚ್ ಬಸ್‍ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು- ಯುವತಿ ಸಾವು

    ವೈದ್ಯರ ನಿರ್ಲಕ್ಷ್ಯತನದಿಂದ ಶಿಶು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರು ಬಾರದೆ ನಿರ್ಲಕ್ಷ್ಯ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಆರೋಗ್ಯ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಕುಟುಂಬಸ್ಥರು, ಸೂಕ್ತ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ತಪ್ಪಿತಸ್ಥ ವೈದ್ಯರ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು (Villagers) ಯಾದಗಿರಿ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ (Protest) ನಡೆಸಿ, ಸೂಕ್ತ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರಿಯಕರನಿಂದ ಪ್ರಿಯತಮೆ ಮರ್ಡರ್!

    ವಿಷಯ ತಿಳಿದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು (Channareddy Patil Tunnur) ಆಸ್ಪತ್ರೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದಾರೆ. ಈ ವೇಳೆ ಶಾಸಕರ ಮುಂದೆ ಗ್ರಾಮಸ್ಥರು ನೋವು ತೋಡಿಕೊಂಡಿದ್ದಾರೆ. ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿ ಗ್ರಾಮಸ್ಥರನ್ನು ಸಮಾಧಾನ ಪಡಿಸಿದ್ದಾರೆ. ಇದನ್ನೂ ಓದಿ: ಮೈ-ಬೆಂ. ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ಇಬ್ಬರು ಗಂಭೀರ

  • ಆಶಾ ಕಾರ್ಯಕರ್ತೆಯ ಕಾರ್ಯಕ್ಕೆ ರಾಷ್ಟ್ರೀಯ ಆರೋಗ್ಯ ಮಿಷನ್‍ನಿಂದ ಪ್ರಶಂಸೆ

    ಆಶಾ ಕಾರ್ಯಕರ್ತೆಯ ಕಾರ್ಯಕ್ಕೆ ರಾಷ್ಟ್ರೀಯ ಆರೋಗ್ಯ ಮಿಷನ್‍ನಿಂದ ಪ್ರಶಂಸೆ

    ಶಿವಮೊಗ್ಗ: ಕೊರೊನಾ ಸೋಂಕಿನಿಂದ ಸ್ನೇಹಿತರು, ಆಪ್ತರು ಹಾಗೂ ಸಂಬಂಧಿಕರೇ ದೂರ ಸರಿಯುತ್ತಿರುವ ಸಮಯದಲ್ಲಿ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ರಾಜ್ಯದ ದಿಟ್ಟ ಮಹಿಳೆಯೊಬ್ಬರಿಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಅತ್ಯುತ್ತಮ ಆಶಾ ಕಾರ್ಯಕರ್ತೆ ಎಂದು ಪ್ರಶಂಸೆ ವ್ಯಕ್ತಪಡಿಸಿದೆ.

    ಶಿವಮೊಗ್ಗದ ತುಂಗಾನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಮೂರು ವರ್ಷದಿಂದ ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಅನ್ನಪೂರ್ಣ ಅವರ ಸೇವೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಪ್ರಶಂಸೆ ವ್ಯಕ್ತಪಡಿಸಿದೆ. ಕೊರೊನಾ ಸಮಯದಲ್ಲಿ ಕಂಟೈನ್ಮೆಂಟ್ ಝೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದು ಸವಾಲಿನ ಕೆಲಸವಾಗಿರುತ್ತದೆ. ಕೆಲವೊಮ್ಮೆ ತಮ್ಮ ಪ್ರದೇಶಗಳನ್ನು ಸೀಲ್‍ಡೌನ್ ಮಾಡಿದ ಕಾರಣಕ್ಕೆ ಸ್ಥಳೀಯರು ಪ್ರತಿಭಟನೆ ಮಾಡುತ್ತಾರೆ. ಆದರೆ ಇಂತಹ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆ ಅನ್ನಪೂರ್ಣ ಅವರು ಸ್ಥಳೀಯರನ್ನು ಮನವೊಲಿಸಿ ಕೊರೊನಾ ಬಗ್ಗೆ ತಿಳಿ ಹೇಳಿದ್ದಾರೆ.

    ಬಡಾವಣೆಗೆ ಹೊರಗಿನಿಂದ ಯಾರಾದರೂ ಬಂದರೆ ಕ್ವಾರಂಟೈನ್ ಮಾಡಲು ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಇವರ ಕಾರ್ಯವನ್ನು ಗುರುತಿಸಿದ ರಾಷ್ಟ್ರೀಯ ಆರೋಗ್ಯ ಮಿಷನ್ ಆಶಾ ಕಾರ್ಯಕರ್ತೆ ಅನ್ನಪೂರ್ಣ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದೆ. ಕೊಳಚೆ ಪ್ರದೇಶದಲ್ಲಿ 3,000 ಜನರು ವಾಸವಿದ್ದು, ಇಲ್ಲಿ 10 ಕಂಟೈನ್ಮೆಂಟ್ ಝೋನ್‍ಗಳಿವೆ. ಕೊರೊನಾ ಟಾಸ್ಕನ್ನು ಅನ್ನಪೂರ್ಣ ಅವರು ಅತ್ಯುತ್ತಮವಾಗಿ ನಿಭಾಯಿಸಿದ್ದಾರೆ. ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಯಾರೇ ಬಂದರೂ ಕೂಡಲೇ ಅಲ್ಲಿಗೆ ತೆರಳುವ ಅನ್ನಪೂರ್ಣ ಮಾಹಿತಿ ಕಲೆ ಹಾಕುತ್ತಾರೆ. ಲಕ್ಷಣಗಳ ಕುರಿತು ಪರಿಶೀಲನೆ ನಡೆಸಿ ಕ್ವಾರಂಟೈನ್‍ಗೆ ಕಳುಹಿಸುವ ಕಾರ್ಯ ಮಾಡುತ್ತಾರೆ.

    ಇದರೊಂದಿಗೆ ಅನ್ನಪೂರ್ಣ ಅವರು ಕಾರ್ಯ ನಿರ್ವಹಿಸುವ ವೇಳೆ ಬಾಲ್ಯ ವಿವಾಹವೊಂದನ್ನೂ ಕೂಡ ತಡೆದಿದ್ದರು. ಬಾಲಕಿಯೊಬ್ಬಳಿಗೆ ವಿವಾಹ ಮಾಡಲಾಗುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ಅನ್ನಪೂರ್ಣ ಅವರು ಎರಡೂ ಕುಟುಂಬಗಳ ಮನವೊಲಿಸಿ ವಿವಾಹ ನಿಲ್ಲಿಸಿದ್ದರು. ಕೊರೊನಾ ವೈರಸ್ ರಾಜ್ಯಕ್ಕೆ ಕಾಲಿಡುವುದಕ್ಕೂ ಮುನ್ನವೂ ಅನ್ನಪೂರ್ಣ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನುತ್ತಾರೆ ಆರೋಗ್ಯ ಸಿಬ್ಬಂದಿ.

    ಒಬ್ಬ ಆಶಾ ಕಾರ್ಯಕರ್ತೆಯ ಸೇವೆಯನ್ನು ಇದೇ ಮೊದಲ ಬಾರಿಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಗುರುತಿಸಿರುವುದಕ್ಕೆ ಇತರೆ ಆಶಾ ಕಾರ್ಯಕರ್ತೆಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಶಾ ಕಾರ್ಯಕರ್ತೆ ಅನ್ನಪೂರ್ಣ ಅವರ ಸೇವೆಯಿಂದ ನಾವು ಕೆಲಸ ನಿರ್ವಹಿಸಲು ಸ್ಫೂರ್ತಿ ಬಂದಂತಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ಲಸಿಕೆ ಹಾಕಿಸಿಕೊಂಡ ಬಳಿಕ ಮಕ್ಕಳು ಅಸ್ವಸ್ಥ- 1 ಮಗು ಸಾವು, 26 ಮಕ್ಕಳು ಆಸ್ಪತ್ರೆಗೆ ದಾಖಲು

    ಲಸಿಕೆ ಹಾಕಿಸಿಕೊಂಡ ಬಳಿಕ ಮಕ್ಕಳು ಅಸ್ವಸ್ಥ- 1 ಮಗು ಸಾವು, 26 ಮಕ್ಕಳು ಆಸ್ಪತ್ರೆಗೆ ದಾಖಲು

    ಹೈದರಾಬಾದ್: ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆದ ಬಳಿಕ ಒಂದು ಮಗು ಸಾವನ್ನಪ್ಪಿದ್ದು, ಸುಮಾರು 26 ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಆಂಧ್ರ ಪ್ರದೇಶದ ನಾಮ್‍ಪಲ್ಲಿಯಲ್ಲಿ ನಡೆದಿದೆ.

    ಗುರುವಾರ ನಾಮ್‍ಪಲ್ಲಿಯಲ್ಲಿರುವ ಸಾರ್ವಜನಿಕರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳು ಲಸಿಕೆ ಹಾಕಿಸಿಕೊಂಡ ಬಳಿಕ ಅಸ್ವಸ್ಥರಾಗಿದ್ದಾರೆ. ಲಸಿಕೆ ಪಡೆದ ಮಕ್ಕಳಲ್ಲಿ 26 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಒಂದು ಗಂಡು ಮಗು ಮೃತಪಟ್ಟಿದೆ ಹಾಗೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಮಕ್ಕಳಿಗೆ ನೀಲೋಫರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಕ್ಕಳ ವಯಸ್ಸು ಹಾಗೂ ಇತರೇ ವಿವರಗಳನ್ನು ಮಾಧ್ಯಮಗಳಿಗೆ ನೀಡಲು ವೈದ್ಯರು ನಿರಾಕರಿಸಿದ್ದಾರೆ.

    ಆರೋಗ್ಯ ಕೇಂದ್ರದಲ್ಲಿ ಲಸಿಕೆ ಹಾಕಿಸಿದ ಬಳಿಕ ಮಕ್ಕಳು ಅಸ್ವಸ್ಥರಾಗಿದ್ದಾರೆ. ಇದಕ್ಕೇ ಲಸಿಕೆ ನೀಡಿದ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ. ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಅಲ್ಲದೆ ನಾಮ್‍ಪಲ್ಲಿ ಆರೋಗ್ಯ ಕೇಂದ್ರದಲ್ಲಿ ಯಾವೆಲ್ಲ ಮಕ್ಕಳಿಗೆ ಲಸಿಕೆ ಹಾಕಲಾಗಿತ್ತೋ, ಎಲ್ಲಾ ಮಕ್ಕಳ ಪೋಷಕರಿಗೆ ಅವರನ್ನು ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆಂದು ಕರೆತರಲು ಸೂಚಿಸಲಾಗಿದೆ. ಅಲ್ಲದೆ ಘಟನೆ ನಡೆದ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಹಾಗೂ ಇದಕ್ಕೆ ಸಂಬಂಧ ಪಟ್ಟವರ ಮೇಲೂ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಹುಟ್ಟುಹಬ್ಬದಂದು ಹುಟ್ಟಿದ ಮಗುವಿಗೆ ಸಿಕ್ತು ಗಿಫ್ಟ್!

    ಪ್ರಧಾನಿ ಹುಟ್ಟುಹಬ್ಬದಂದು ಹುಟ್ಟಿದ ಮಗುವಿಗೆ ಸಿಕ್ತು ಗಿಫ್ಟ್!

    ಚೆನ್ನೈ: ಪ್ರಧಾನಿ ನರೇಂದ್ರ ಮೋದಿಯವರ 68ನೇ ಹುಟ್ಟುಹಬ್ಬದಂದು ಹುಟ್ಟಿದ ಮಗುವಿಗೆ ಬಿಜೆಪಿ ಚಿನ್ನದ ಉಂಗುರವನ್ನು ಗಿಫ್ಟ್ ಮಾಡಿದೆ.

    ತಮಿಳುನಾಡಿನ ಪ್ರಾಥಮಿಕ ಆರೋಗ್ಯ ಕೇಂದ್ರವೊಂದರಲ್ಲಿ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥೆ ತಮಿಳಿಸಾಯಿ ಸೌಂದರರಾಜನರ್ ಅವರು ಮಗುವಿಗೆ ಉಂಗುರ ನೀಡಿದ್ದಾರೆ. ಈ ಮೂಲಕ ಬಿಜೆಪಿ ಪ್ರಧಾನಿಯವರನ್ನು ಹುಟ್ಟುಹಬ್ಬವನ್ನು ವಿನೂತನವಾಗಿ ಆಚರಿಸಿದ್ದಾರೆ.

    ಸೌಂದರರಾಜನ್ ಅವರು ಆರೋಗ್ಯ ಕೇಂದ್ರದಲ್ಲಿ ಹುಟ್ಟಿದ ಉಳಿದ ಮಕ್ಕಳಿಗೂ ಬಹುಮಾನವನ್ನು ನೀಡಿದ್ದಾರೆ. ಮುಂದಿನ ಸೋಮವಾರ(ಮೋದಿ ಹುಟ್ಟುಹಬ್ಬ)ದಂದು ಹುಟ್ಟಿದ ಮಕ್ಕಳಿಗೆ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡುವುದಾಗಿ ರಾಜ್ಯ ಬಿಜೆಪಿ ಘಟಕ ಮೊದಲೇ ಘೋಷಣೆ ಮಾಡಿತ್ತು. ಆದ್ರೆ ಸೋಮವಾರ ಒಂದು ಮಗು ಮಾತ್ರ ಹುಟ್ಟಿತ್ತು. ಹೀಗಾಗಿ ಆ ಮಗುವಿಗೆ ಚಿನ್ನದ ಉಂಗುರವನ್ನು ಗಿಫ್ಟ್ ಮಾಡಿದೆ.

    ಬಳಿಕ ಮಾಧ್ಯಮಕ್ಕೆ ಪತ್ರಿಕ್ರಿಯಿಸಿದ ಅವರು, ಸೋಮವಾರ ಹುಟ್ಟಿದ ಮಗುವಿಗೆ ನಾನು ಚಿನ್ನದ ಉಂಗುರವನ್ನು ಈಗಾಗಲೇ ಉಡುಗೊರೆಯಾಗಿ ನೀಡಿದ್ದೇನೆ. ಅಲ್ಲದೇ ಇದರ ಜೊತೆ 17-18 ದಿನಗಳ ಹಿಂದೆ ಹುಟ್ಟಿದ ಮಕ್ಕಳಿಗೂ ಗಿಫ್ಟ್ ಪ್ಯಾಕ್ ಕೊಟ್ಟಿದ್ದೇವೆ ಅಂತ ಹೇಳಿದ್ರು.

    ಅಸ್ಸಾಂನಲ್ಲೂ ಮೋದಿ ಜೀ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಗಿದ್ದು, ಬಿಜೆಪಿ ವಕ್ತಾರ ಪ್ರಮೋದ್ ಸ್ವಾಮಿ ಅವರು ಗುವಾಹಟಿಯ ಹೈಸ್ಕೂಲ್ ನಲ್ಲಿ 8ನೇ ತರಗತಿಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಸನ್ಮಾನ ಮಾಡುವ ಮೂಲಕ ಆಚರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಸ್ತಿಯಲ್ಲಿ ತುಂಬು ಗರ್ಭಿಣಿ ಸಾವು- ವೈದ್ಯರ ವಿರುದ್ಧ ಸಂಬಂಧಿಕರು ಪ್ರತಿಭಟನೆ

    ಮಾಸ್ತಿಯಲ್ಲಿ ತುಂಬು ಗರ್ಭಿಣಿ ಸಾವು- ವೈದ್ಯರ ವಿರುದ್ಧ ಸಂಬಂಧಿಕರು ಪ್ರತಿಭಟನೆ

    ಕೋಲಾರ: ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

    ಮಾಲೂರು ತಾಲೂಕಿನ ರಾಯಸಂದ್ರ ನಿವಾಸಿ ಅನುಸೂಯಮ್ಮ 22 ಮೃತ ಗರ್ಭಿಣಿ. ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಅವರನ್ನು ದಾಖಲು ಮಾಡಲಾಗಿತ್ತು.

    ಆದರೆ ಬುಧವಾರ ಬೆಳಗ್ಗೆ ವೈದ್ಯರಿಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗೆ ಮಾಲೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ವೇಳೆ ಮಾರ್ಗ ಮಧ್ಯೆ ಅನುಸೂಯಮ್ಮ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಮೃತಪಟ್ಟಿದ್ದಾರೆಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅರೋಗ್ಯ ಕೇಂದ್ರದ ಎದುರು ಮೃತಳ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

  • ವಿದ್ಯುತ್ ಸಮಸ್ಯೆಗೆ ಗುಡ್‍ಬೈ: ರಾಯಚೂರಿನಲ್ಲಿ ತಲೆಎತ್ತಿದೆ ಸೋಲಾರ್ ಆಸ್ಪತ್ರೆ

    ವಿದ್ಯುತ್ ಸಮಸ್ಯೆಗೆ ಗುಡ್‍ಬೈ: ರಾಯಚೂರಿನಲ್ಲಿ ತಲೆಎತ್ತಿದೆ ಸೋಲಾರ್ ಆಸ್ಪತ್ರೆ

    – ಇಡಪನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಲಾರ್ ವ್ಯವಸ್ಥೆ
    – ಸಂಪೂರ್ಣ ಸೋಲಾರ್ ವ್ಯವಸ್ಥೆ ಅಳವಡಿಸಿಕೊಂಡ ರಾಜ್ಯದ ಮೊದಲ ಆಸ್ಪತ್ರೆ

    ರಾಯಚೂರು: ರಾಜ್ಯದ ಎಲ್ಲೆಡೆ ಬೇಸಿಗೆ ಹಾಗೂ ಬರಗಾಲ ಹಿನ್ನೆಲೆಯಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಉಂಟಾಗಿ ಜನ ಬೆವರುತ್ತಿದ್ದಾರೆ. ಆದ್ರೆ ಬಿರು ಬಿಸಿಲನಾಡು ರಾಯಚೂರಿನ ಈ ಆಸ್ಪತ್ರೆ ಮಾತ್ರ ತುಂಬಾನೆ ಕೂಲಾಗಿದೆ. ದಿನದ 24 ಗಂಟೆ ಸೇವೆಯ ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 24 ಗಂಟೆಯೂ ವಿದ್ಯುತ್ ಇರುತ್ತೆ. ಇದೆಲ್ಲಾ ಬೇಸಿಗೆ ಸೂರ್ಯನ ಮಹಿಮೆ.

    ರಾಯಚೂರು ತಾಲೂಕಿನ ಇಡಪನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪೂರ್ಣ ಸೋಲಾರ್ ವ್ಯವಸ್ಥೆಯ ಸರ್ಕಾರಿ ಆಸ್ಪತ್ರೆಯಾಗಿ ರೂಪಗೊಂಡಿದೆ. ದಿನದ 24 ಗಂಟೆಯೂ ಇಲ್ಲಿ ವಿದ್ಯುತ್ ಇರುತ್ತೆ. ಈ ಮೊದಲು ಗರ್ಭಿಣಿಯರ ಸ್ಕ್ಯಾನಿಂಗ್, ನವಜಾತ ಶಿಶುಗಳ ಫೋಟೋಥೆರಪಿ, ಬೇಬಿ ವಾರ್ಮಿಂಗ್ ಹಾಗೂ ಪ್ರಯೋಗಾಲಯದ ಪರೀಕ್ಷೆಗಳಿಗೆ ಲೋಡ್ ಶೆಡ್ಡಿಂಗ್ ದೊಡ್ಡ ಶತ್ರುವಾಗಿತ್ತು. ಹತ್ತು ಗ್ರಾಮಗಳ ಕೇಂದ್ರವಾಗಿರುವ ಈ ಆಸ್ಪತ್ರೆಗೆ ಬರುವ ರೋಗಿಗಳು ವಿದ್ಯುತ್ ಇಲ್ಲದೆ ಸುಮಾರು 30 ಕಿ.ಮೀ ದೂರದ ರಾಯಚೂರು ನಗರಕ್ಕೆ ಬರಬೇಕಾಗಿತ್ತು. ಆದ್ರೆ ಜಿಲ್ಲಾ ಪಂಚಾಯ್ತಿ ಸಹಯೋಗದೊಂದಿಗೆ ಸೆಲ್ಕೋ ಸೋಲಾರ್ ಲೈಟ್ ಪವರ್ ಲಿಮಿಟೆಡ್ ಕಂಪನಿ ಈ ಆಸ್ಪತ್ರೆಗೆ ಸೌರ ವ್ಯವಸ್ಥೆ ಅಳವಡಿಸಿದ ಮೇಲೆ ವಿದ್ಯುತ್ ಸಮಸ್ಯೆ ಅನ್ನೋದನ್ನೇ ರೋಗಿಗಳು ಮರೆತಿದ್ದಾರೆ.

    ಒಟ್ಟು 3 ಲಕ್ಷ 60 ಸಾವಿರ ರೂಪಾಯಿ ಯೋಜನೆಯಲ್ಲಿ ಜಿಲ್ಲಾ ಪಂಚಾಯ್ತಿ 95 ಸಾವಿರ ರೂಪಾಯಿ ನೀಡಿದ್ದು, ಉಳಿದ 2 ಲಕ್ಷ 65 ಸಾವಿರ ರೂಪಾಯಿಯನ್ನ ಸೆಲ್ಕೋ ಸೋಲಾರ್ ಕಂಪನಿ ಭರಿಸಿದೆ. 2500 ವ್ಯಾಸ್ ಪೀಕ್‍ನ ಸೋಲಾರ್ ಪ್ಯಾನಲ್, 960 ಎಎಚ್ ಬ್ಯಾಟರಿ, 3 ಕೆ.ವಿ ಇನ್‍ವರ್ಟರ್ ಅಳವಡಿಸಿರುವುದರಿಂದ ಸದಾ ವಿದ್ಯುತ್ ಇರುತ್ತದೆ. ಆಸ್ಪತ್ರೆಯ 10 ಫ್ಯಾನ್, 10 ಟ್ಯೂಬ್ ಲೈಟ್, ಓಟಿ ಲೈಟ್, ರೆಫ್ರಿಜೆಟರ್ ಸೇರಿ ಪ್ರತಿಯೊಂದು ಉಪಕರಣಗಳು ಸದಾ ಕೆಲಸ ಮಾಡುತ್ತಿವೆ. ಇದರಿಂದ ರೋಗಿಗಳಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯುತ್ತಿದೆ ಅಂತ ಸೆಲ್ಕೋ ಸೋಲಾರ್ ಕಂಪನಿ ಪ್ರಾಜೆಕ್ಟ್ ಮ್ಯಾನೇಜರ್ ಸುಬ್ರಾಯ್ ಹೆಗ್ಡೆ ತಿಳಿಸಿದ್ದಾರೆ.

    ಇಡಪನೂರು ಆಸ್ಪತ್ರೆಯಲ್ಲಿ ಸೋಲಾರ ವ್ಯವಸ್ಥೆ ಯಶಸ್ವಿಯಾಗಿರುವುದರಿಂದ ಜಿಲ್ಲೆಯ ಇನ್ನೂ 9 ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆ ಅಳವಡಿಸಲು ಜಿಲ್ಲಾ ಪಂಚಾಯ್ತಿ ಹಾಗೂ ಸೆಲ್ಕೋ ಸೋಲಾರ್ ಕಂಪನಿ ಮುಂದಾಗಿವೆ. ಈಗಲಾದ್ರೂ ಗ್ರಾಮೀಣ ಭಾಗದಲ್ಲಿ ಸೋಲಾರ್ ವ್ಯವಸ್ಥೆಯಿಂದ ಉತ್ತಮ ಆರೋಗ್ಯ ಸೌಲಭ್ಯ ಸಿಗುತ್ತಿದೆ ಅನ್ನೋದು ನಿಜಕ್ಕೂ ಖುಷಿಯ ಸಂಗತಿ.