Tag: ಪ್ರಾಧ್ಯಾಪಕ

  • 8 ವಿದ್ಯಾರ್ಥಿನಿಯರ ಮೇಲೆ ರೇಪ್‌ ಆರೋಪ – ಬಂಧಿತ ಪ್ರಾಧ್ಯಾಪಕನ ಕಂಪ್ಯೂಟರ್‌ನಲ್ಲಿತ್ತು 65 ಸೆಕ್ಸ್‌ ವಿಡಿಯೋ

    8 ವಿದ್ಯಾರ್ಥಿನಿಯರ ಮೇಲೆ ರೇಪ್‌ ಆರೋಪ – ಬಂಧಿತ ಪ್ರಾಧ್ಯಾಪಕನ ಕಂಪ್ಯೂಟರ್‌ನಲ್ಲಿತ್ತು 65 ಸೆಕ್ಸ್‌ ವಿಡಿಯೋ

    ಲಕ್ನೋ: ತನ್ನ ವಿದ್ಯಾರ್ಥಿನಿಯರ ಮೇಲೆ‌ ಅತ್ಯಾಚಾರ ಎಸಗಿ, ಕೃತ್ಯವನ್ನು ಚಿತ್ರೀಕರಣ ಮಾಡುತ್ತಿದ್ದ ಆರೋಪದ ಮೇಲೆ ಸರ್ಕಾರಿ ಅನುದಾನಿತ ಕಾಲೇಜಿನ ಭೂಗೋಳ ಶಾಸ್ತ್ರ ಪ್ರಾಧ್ಯಾಪಕನನ್ನು ಪ್ರಯಾಗ್‌ರಾಜ್‌ನ ಪೊಲೀಸರು (Prayagraj Police) ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಹತ್ರಾಸ್‌ನ ಸೇಠ್ ಫೂಲ್ ಚಂದ್ ಬಾಗ್ಲಾ ಪಿಜಿ ಕಾಲೇಜಿನ ಪ್ರಾಧ್ಯಾಪಕ ರಜನೀಶ್ ಕುಮಾರ್ (54) ಬಂಧಿತ ಆರೋಪಿ. ಇದೇ ಮಾರ್ಚ್‌ 15ರಂದು ವಿದ್ಯಾರ್ಥಿನಿಯೊಬ್ಬಳು (Student) ಪೊಲೀಸರಿಗೆ ಅನಾಮಧೇಯ ದೂರು ನೀಡಿದ ಬಳಿಕ ಆರೋಪಿ ಪ್ರಾಧ್ಯಾಪಕನ ವಿರುದ್ಧ ಅತ್ಯಾಚಾರ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಎಸ್ಕೇಪ್‌ ಆಗಿದ್ದ ಪ್ರಾಧ್ಯಾಪಕ 72 ಗಂಟೆಗಳ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ಟೀಂ ಇಂಡಿಯಾಗೆ 58 ಕೋಟಿ ನಗದು ಬಹುಮಾನ ಘೋಷಿಸಿದ ಬಿಸಿಸಿಐ

    ಬಳಿಕ ನಡೆದ ವಿಚಾರಣೆಯಲ್ಲಿ 8 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿದ್ಯಾರ್ಥಿಯರೊಂದಿಗಿನ ಲೈಂಗಿಕ ಸಂಬಂಧದ ಕ್ಷಣಗಳನ್ನು ವಿಡಿಯೋ ರೆಕಾರ್ಡ್‌ ಮಾಡಿಕೊಂಡು ಪದೇ ಪದೇ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ಎಂದು ಹತ್ರಾಸ್‌ನ ಪೊಲೀಸ್ ವರಿಷ್ಠಾಧಿಕಾರಿ ಚಿರಂಜೀವ್ ನಾಥ್ ಸಿನ್ಹಾ ತಿಳಿಸಿದ್ದಾರೆ. ಇದನ್ನೂ ಓದಿ: ಗೂಗಲ್ ಪೇ, ಫೋನ್‌ಪೇ & ಪೇಟಿಎಂ ಬಳಕೆದಾರರಿಗೆ ಸೂಚನೆ – ಏ.1ರಿಂದ ಕೆಲವು ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ ಪಾವತಿ ಸಮಸ್ಯೆ

    ವೆಬ್‌ಕ್ಯಾಮ್‌ನಲ್ಲಿ ವಿಡಿಯೋ ರೆಕಾರ್ಡ್‌
    ಯುಪಿ ಪ್ರೊಫೆಸರ್‌ 2009ರಲ್ಲಿ ವಿದ್ಯಾರ್ಥಿನಿಯೊಂದಿಗೆ ಓರ್ವ ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಸಂಬಂಧದಲ್ಲಿದ್ದ. ಒಮ್ಮೆ ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವಾಗ ತನ್ನ ಕೊಠಡಿಯಲ್ಲಿದ್ದ ಕಂಪ್ಯೂಟರ್‌ನ ವೆಬ್‌ಕ್ಯಾಮ್‌ನಲ್ಲಿ ವಿಡಿಯೋ ರೆಕಾರ್ಡ್‌ ಮಾಡಿದ್ದ. ಇದೇ ರೀತಿ ಅನೇಕ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿ ಪದೇ ಪದೇ ಅವರನ್ನು ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ, ಲೈಂಗಿಕ ಕ್ರಿಯೆಗಾಗಿ ಒತ್ತಾಯಿಸುತ್ತಿದ್ದ. ಇದೇ ರೀತಿ ಒಟ್ಟು 65 ವಿಡಿಯೋಗಳನ್ನ ರೆಕಾರ್ಡ್‌ ಮಾಡಿಕೊಂಡಿದ್ದು, ಕೆಲವು ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಸಹ ಮಾಡಿದ್ದಾನೆ ಎಂದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ದೇಶದ ಶ್ರೀಮಂತ ಶಾಸಕರ ಪೈಕಿ ಡಿಕೆಶಿ ಟಾಪ್ 2 – ಮೊದಲ 10 ಸ್ಥಾನಗಳಲ್ಲಿ ಕರ್ನಾಟಕದ ನಾಲ್ವರು

    ಸದ್ಯ ಪ್ರಾಧ್ಯಾಪಕನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬಂಗಾಳದ ಬಾರ್‌ಗಳಲ್ಲಿ ಮಹಿಳೆಯರಿಗೆ ಕೆಲಸಕ್ಕೆ ಅವಕಾಶ – ಹೊಸ ಮಸೂದೆ ಅಂಗೀಕಾರ

  • ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಾಧ್ಯಾಪಕ ಅಮಾನತು

    ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಾಧ್ಯಾಪಕ ಅಮಾನತು

    ಮುಂಬೈ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಾಧ್ಯಾಪಕನೊಬ್ಬನನ್ನು ಅಮಾನತುಗೊಳಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಖಾಸಗಿ ಕಾಲೇಜವೊಂದರಲ್ಲಿ ನಡೆದಿದೆ.

    ದಾದಾ ರಾಮ್‍ಚಂದ್ ಬಖ್ರು ಸಿಂಧು ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೋಫೆಸರ್ ರಾಕೇಶ್ ಗೆಡಮ್ ಅಮಾನತುಗೊಂಡಿರುವ ಪ್ರಾಧ್ಯಾಪಕ. ತನ್ನ ವಿಭಾಗದ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದ. ಅದಕ್ಕೆ ವಿರೋಧ ವ್ಯಕ್ತಪಡಿಸಿದರೆ ಫೇಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಅಲ್ಲದೇ ಕೆಲ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಆ್ಯಸಿಡ್ ಎರಚಿದ ಕಿರಾತಕನಿಗೆ ಲುಕ್‍ಔಟ್ ನೊಟೀಸ್ ಜಾರಿ

    ಶಿವಸೇನೆಯ ಯುವ ಘಟಕ ಯುವಸೇನೆಯ ಪದಾಧಿಕಾರಿಗಳು ಕಾಲೇಜು ಅಧಿಕಾರಿಗಳ ಮುಂದೆ ವಿಷಯ ಪ್ರಸ್ತಾಪಿಸಿದ್ದ ಬೆನ್ನಲ್ಲೇ ಹಲವಾರು ವಿದ್ಯಾರ್ಥಿನಿಯರು, ರಾಕೇಶ್ ವಿರುದ್ಧ ದೂರು ನೀಡಲು ಮುಂದಾದರು. ವಿದ್ಯಾರ್ಥಿನಿಯರು ಪ್ರೋಫೆಸರ್ ವಿರುದ್ಧ ನಾಗಪುರದ ಪಚ್‍ಪೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಾಗ ವಿಷಯ ಬೆಳಕಿಗೆ ಬಂದಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

    ವಿಶ್ವವಿದ್ಯಾಲಯದ ಆಡಳಿತವು ಪ್ರೋಫೆಸರ್ ರಾಕೇಶ್ ವಿರುದ್ಧದ ಆರೋಪಗಳ ಹಿನ್ನೆಲೆಯಲ್ಲಿ ಅಮಾನತುಗೊಳಿಸಿದೆ. ಆತ ತಲೆಮರೆಸಿಕೊಂಡಿದ್ದಾನೆ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ದಾಳಿಗೆ ತುತ್ತಾದ ಯುವತಿಯ ಚಿಕಿತ್ಸೆಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ ಮುರುಗೇಶ್ ನಿರಾಣಿ

    ಪಚ್‍ಪೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸಂಜಯ್ ಮೆಂಧೆ ಅವರು ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ಪ್ರಾದ್ಯಾಪಕನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮೂವರು ವಿದ್ಯಾರ್ಥಿನಿಯರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಇತರ ಸಂತ್ರಸ್ತರೂ ದೂರು ನೀಡಲು ಮುಂದೆ ಬರುವಂತೆ ಪೊಲೀಸರು ಮನವಿ ಮಾಡಿದ್ದಾರೆ.

  • ತರಗತಿಯಲ್ಲಿ ಹಿಂದೂ ಪುರಾಣಗಳಲ್ಲಿನ ʼಅತ್ಯಾಚಾರʼ ಉಲ್ಲೇಖಿಸಿ ಪಾಠ- ಮುಸ್ಲಿಂ ವಿವಿಯಿಂದ ಪ್ರಾಧ್ಯಾಪಕ ಸಸ್ಪೆಂಡ್‌

    ತರಗತಿಯಲ್ಲಿ ಹಿಂದೂ ಪುರಾಣಗಳಲ್ಲಿನ ʼಅತ್ಯಾಚಾರʼ ಉಲ್ಲೇಖಿಸಿ ಪಾಠ- ಮುಸ್ಲಿಂ ವಿವಿಯಿಂದ ಪ್ರಾಧ್ಯಾಪಕ ಸಸ್ಪೆಂಡ್‌

    ನವದೆಹಲಿ: ವಿಧಿ ವಿಜ್ಞಾನ ತರಗತಿಯಲ್ಲಿ ಹಿಂದೂ ಪುರಾಣಗಳಲ್ಲಿನ ಅತ್ಯಾಚಾರವನ್ನು ಉದಾಹರಣೆಯಾಗಿ ಉಲ್ಲೇಖಿಸಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪದಡಿ ಪ್ರಾಧ್ಯಾಪಕನನ್ನು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ ಅಮಾನತುಗೊಳಿಸಿದೆ.

    ಎಎಮ್‌ಯುನ ಜವಾಹರಲಾಲ್ ನೆಹರೂ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಿತೇಂದ್ರ ಕುಮಾರ್ ಅವರು ವೈದ್ಯಕೀಯ ನ್ಯಾಯಶಾಸ್ತ್ರದ ಕುರಿತು ತರಗತಿ ನಡೆಸುವಾಗ ಪುರಾಣದಲ್ಲಿನ ʻಅತ್ಯಾಚಾರʼ ಉಲ್ಲೇಖಗಳನ್ನು ಮಾಡಿದ್ದಾರೆ. ಇದನ್ನೂ ಓದಿ: ತಿಲಕವಿಟ್ಟು ಶಾಲೆಗೆ ತೆರಳಿದ ವಿದ್ಯಾರ್ಥಿನಿಗೆ ಥಳಿಸಿದ ಮುಸ್ಲಿಂ ಶಿಕ್ಷಕ – ಕ್ರಮಕ್ಕೆ ಮುಂದಾದ ಡೆಪ್ಯೂಟಿ ಕಮಿಷನರ್

    ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಂಬಂಧ ವಿಚಾರಣೆಗಾಗಿ ವಿಶ್ವವಿದ್ಯಾನಿಲಯ ಇಬ್ಬರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದೆ. ಈ ಸಂಬಂಧ ನೋಟಿಸ್‌ ನೀಡಿದ್ದಲ್ಲದೇ ಈಗಾಗಲೇ ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ.

    ನೋಟಿಸ್‌ ಬಂದ ಬಳಿಕ ಪ್ರಾಧ್ಯಾಪಕ ಕ್ಷಮೆಯಾಚಿಸಿದ್ದಾರೆ. ಯಾವುದೇ ನಿರ್ದಿಷ್ಟ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶವಲ್ಲ. ಅತ್ಯಾಚಾರವು ನಮ್ಮ ಸಮಾಜದ ಒಂದು ಭಾಗವಾಗಿದೆ ಎಂಬುದನ್ನು ಹೇಳುವುದಕ್ಕಾಗಿ ಈ ವಿಷಯ ತಿಳಿಸಲಾಯಿತು ಎಂದು ಪ್ರಾಧ್ಯಾಪಕ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವೀರ್ಯ ದಾನ ಮಾಡಿ ಹಣ ಸಂಪಾದಿಸುತ್ತಿದ್ದ ಪತಿ- ವಿಚ್ಛೇದನಕ್ಕೆ ಮುಂದಾದ ಪತ್ನಿ

    ಉಪನ್ಯಾಸದ ವಿಡಿಯೋ ತುಣುಕನ್ನು ಯಾರೋ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ವಿವಾದ ಭುಗಿಲೆದ್ದಿದೆ.

    ನೀವು ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರ್ವಕವಾಗಿ ತರಗತಿಯಲ್ಲಿ ಅತ್ಯಾಚಾರ ಎಂಬ ಶೀರ್ಷಿಕೆಯಡಿ ವಿಷಯ ಮಂಡಿಸಿದ್ದೀರಿ. ಇದರಿಂದಾಗಿ ನಿರ್ದಿಷ್ಟ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಎಎಮ್‌ಯು ಕುಲಸಚಿವ ಅಬ್ದುಲ್ ಹಮೀದ್ ಎಚ್ಚರಿಸಿದ್ದಾರೆ.

  • ಪ್ರಿನ್ಸಿಪಾಲ್ ಮೇಲೆ ಆ್ಯಸಿಡ್ ಎರಚಲು ಮುಂದಾದ ಪ್ರಾಧ್ಯಾಪಕ

    ಪ್ರಿನ್ಸಿಪಾಲ್ ಮೇಲೆ ಆ್ಯಸಿಡ್ ಎರಚಲು ಮುಂದಾದ ಪ್ರಾಧ್ಯಾಪಕ

    ಕಲಬುರಗಿ: ಸಹಾಯಕ ಪ್ರಾಧ್ಯಾಪಕನೋರ್ವ ಕಾಲೇಜಿನ ಪ್ರಿನ್ಸಿಪಾಲ್ ಮೇಲೆ ಆ್ಯಸಿಡ್ ಎರಚಿ ಹಲ್ಲೆ ಮಾಡಲು ಯತ್ನಿಸಿರುವ ಘಟನೆಯೊಂದು ನಗರದಲ್ಲಿ ಬೆಳಕಿಗೆ ಬಂದಿದೆ.

    ಹೆಚ್‍ಕೆಇ ಸೊಸೈಟಿಯ ಫಾರ್ಮಸಿ ಕಾಲೇಜ್‍ನ ಪ್ರಿನ್ಸಿಪಾಲ್ ಡಾ.ಅರುಣ್ ಕುಮಾರ್ ಬೆನಕಳ ಮೇಲೆ ಇದೇ ಫಾರ್ಮಸಿ ಕಾಲೇಜ್‍ನ ಸಹಾಯಕ ಪ್ರಾಧ್ಯಾಪಕನಾಗಿರುವ ಶಾಂತವೀರ ಸಲಗಾರ ಆ್ಯಸಿಡ್ ಎರಚಿ ಹಲ್ಲೆಗೆ ಯತ್ನ ನಡೆಸಿದ್ದಾರೆ. ಈ ಘಟನೆ ಮಾರ್ಚ್ 21ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಶಾಂತವೀರ ಪರೀವಿಕ್ಷಣಾ ಇನ್ಸ್‌ಪೆಕ್ಟರ್ ಆಗಿ ನೇಮಕವಾಗಬೇಕಾಗಿತ್ತು. ಆದರೆ ಪ್ರಿನ್ಸಿಪಾಲ್ ಅರುಣ್ ಕುಮಾರ್ ತಮ್ಮ ಕೈವಾಡದಿಂದ ಹುದ್ದೆ ತಪ್ಪಿಸಿದ್ದಾರೆ ಎಂದು ಗ್ರಹಿಸಿಕೊಂಡು ಶಾಂತವೀರ ಆ್ಯಸಿಡ್ ದಾಳಿ ನಡೆಸಲು ಮುಂದಾಗಿದ್ದಾರೆ. ಎಚ್‍ಕೆಇ ಫಾರ್ಮಸಿ ಕಾಲೇಜ್ ಆವರಣದಲ್ಲಿಯೇ ಆ್ಯಸಿಡ್ ಎರಚಲು ಮುಂದಾಗಿದ್ದ ಶಾಂತವೀರ, ಅವಾಚ್ಯ ಶಬ್ದಗಳಿಂದ ಪ್ರಿನ್ಸಿಪಾಲ್‍ರನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ ತನ್ನ ಕಾರಿನಿಂದ ಡಿಕ್ಕಿ ಹೊಡೆದು ಅಪಘಾತಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಕೆಲ ಪ್ರಾಧ್ಯಾಪಕರು ಪ್ರಿನ್ಸಿಪಾಲ್‍ರನ್ನು ರಕ್ಷಣೆ ಮಾಡಿ ಮನೆಗೆ ಸುರಕ್ಷಿತವಾಗಿ ತಲುಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯೇತರ ಪ್ರತಿಪಕ್ಷಗಳ ಆಧಾರ ಸ್ತಂಭ ಮಮತಾ ಬ್ಯಾನರ್ಜಿ: ಕಾಂಗ್ರೆಸ್‌ ಸಂಸದ ಬಣ್ಣನೆ

    POLICE JEEP

    ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಶಾಂತವೀರ ಸಲಗಾರ ಆ್ಯಸಿಡ್ ಎರಚಲು ಪ್ರಯತ್ನ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಈ ಕುರಿತು ಬ್ರಹ್ಮಪೂರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಮಾದರಿ ಆಗಬೇಕಿದ್ದ ಪ್ರಾಧ್ಯಾಪಕ ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ

  • ಕೋವಿಡ್ ಬಂದರೂ ಕಾಲೇಜಿಗೆ ಹಾಜರಾದ ಪ್ರಾಧ್ಯಾಪಕ – 13 ಮಂದಿ ವಿದ್ಯಾರ್ಥಿಗಳಿಗೆ ಸೋಂಕು

    ಕೋವಿಡ್ ಬಂದರೂ ಕಾಲೇಜಿಗೆ ಹಾಜರಾದ ಪ್ರಾಧ್ಯಾಪಕ – 13 ಮಂದಿ ವಿದ್ಯಾರ್ಥಿಗಳಿಗೆ ಸೋಂಕು

    ಕಾರವಾರ: ಕೋವಿಡ್ ಪಾಸಿಟಿವ್ ಇದ್ದರೂ ಅದನ್ನು ಮುಚ್ಚಿಟ್ಟು ಪದವಿ ಕಾಲೇಜಿನಲ್ಲಿ ಪಾಠ ಮಾಡಿದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕನಿಂದಾಗಿ 13 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಗೋಖುಲೆ ಸೆಂಟಿನರಿ ಪದವಿ ಕಾಲೇಜಿನಲ್ಲಿ ನಡೆದಿದೆ.

    ಕೆಲವು ದಿನದ ಹಿಂದೆ ಖಾಸಗಿ ಕಾರ್ಯಕ್ರಮಕ್ಕಾಗಿ ಮಹಾರಾಷ್ಟ್ರಕ್ಕೆ ತೆರಳಿದ್ದ ಪ್ರಾಧ್ಯಾಪಕನಿಗೆ ಕೋವಿಡ್ ಪಾಸಿಟಿವ್ ವರದಿಯಾಗಿತ್ತು. ಪಾಸಿಟಿವ್ ಬಂದಿದ್ದರಿಂದ ಹೋಮ್ ಐಸೋಲೇಷನ್‍ಗೆ ಸೂಚಿಸಲಾಗಿತ್ತು. ಆದರೆ ರಜೆ ಹಾಕಿದರೆ ಗಳಿಕೆ ರಜೆ ವ್ಯರ್ಥವಾಗುತ್ತದೆ ಎನ್ನುವ ಕಾರಣದಿಂದ ರಜೆ ಹಾಕದೆ ಉಪನ್ಯಾಸಕ ಕಾಲೇಜಿಗೆ ಹಾಜರಾಗಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ಇದರಿಂದ 13 ವಿದ್ಯಾರ್ಥಿಗಳಿಗೆ ಪಾಸಿಟಿವ್ ವರದಿಯಾಗಿದೆ.

    ಸದ್ಯ ಕಾಲೇಜಿನಲ್ಲಿ ಕೋವಿಡ್ ಸೋಂಕಿತ ಪ್ರಾಧ್ಯಾಪಕ ಹಾಗೂ ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದ 320 ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆ ಇಂದು ಕೊವಿಡ್ ತಪಾಸಣೆ ನಡೆಸಿದೆ.

    ಕಾಲೇಜಿಗೆ ಗೈರಾದ ವಿದ್ಯಾರ್ಥಿಗಳು: ಗೋಖುಲೆ ಸೆಂಟಿನರಿ ಪದವಿ ಕಾಲೇಜಿನಲ್ಲಿ ಹಾಗೂ ಕೆಲವು ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ವರದಿ ಬರುತ್ತಿದ್ದಂತೆ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಇದರಿಂದ ವಿದ್ಯಾರ್ಥಿಗಳು ಕಾಲೇಜುಗಳಿಗೆ ಗೈರಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಜ.31ರ ವರೆಗೆ ಟಫ್ ರೂಲ್ಸ್ ಜಾರಿ

    ವಿದ್ಯಾರ್ಥಿಗಳಲ್ಲಿ ಶೀತ, ಜ್ವರ: ಅಂಕೋಲಾದ ಕಾಲೇಜುಗಳಲ್ಲಿ ಹಲವು ಮಕ್ಕಳಲ್ಲಿ ಶೀತ, ಜ್ವರ ಕಾಣಿಸಿಕೊಂಡಿದೆ. ಆದರೆ ಹಲವು ಮಕ್ಕಳು ಕೋವಿಡ್ ತಪಾಸಣೆಗೆ ಹಿಂಜರಿಯುತ್ತಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತಿದ್ದಾರೆ. ಇನ್ನು ಹಲವು ವಿದ್ಯಾರ್ಥಿಗಳು ಕೋವಿಡ್ ಲಕ್ಷಣವಿದ್ದರೂ, ತರಗತಿಗೆ ಹಾಜುರಾಗುತ್ತಿದ್ದಾರೆ. ಇದರಿಂದಾಗಿ ಮತ್ತಷ್ಟು ಸೋಂಕು ಹೆಚ್ಚಾಗುವ ಭೀತಿ ಆವರಿಸಿದೆ. ಇದನ್ನೂ ಓದಿ: ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಯ್ತು ಅಪರೂಪದ ಕಪ್ಪು ವಜ್ರ

  • ಪ್ರಿಯಕರನ ಜೊತೆ ಸೇರಿ ಮಾಜಿ ಪ್ರೇಮಿಯನ್ನ ಕೊಂದ ಪಿಎಚ್‍ಡಿ ವಿದ್ಯಾರ್ಥಿನಿ

    ಪ್ರಿಯಕರನ ಜೊತೆ ಸೇರಿ ಮಾಜಿ ಪ್ರೇಮಿಯನ್ನ ಕೊಂದ ಪಿಎಚ್‍ಡಿ ವಿದ್ಯಾರ್ಥಿನಿ

    ಚೆನ್ನೈ: ಪ್ರಿಯಕರನ ಜೊತೆ ಸೇರಿ ಮಾಜಿ ಪ್ರೇಮಿಯನ್ನು ಪ್ರೇಯಸಿ ಕಾಲೇಜಿನ ಹೊರಗಡೆ ಕೊಂದಿದ್ದು, ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಪಿಎಚ್‍ಡಿ ಮಾಡುತ್ತಿದ್ದ 26 ವರ್ಷದ ವಿದ್ಯಾರ್ಥಿನಿ ತನ್ನ ಬಾಯ್‍ಫ್ರೆಂಡ್ ಜೊತೆ ಸೇರಿ ಕೆಲಂಬಾಕ್ಕಂನ ಖಾಸಗಿ ಕಾಲೇಜಿನ ಹೊರಗೆ ತನ್ನ ಮಾಜಿ ಪ್ರಿಯಕರನನ್ನು ಇರಿದು ಕೊಲ್ಲಿಸಿದ್ದಾಳೆ. ಇದನ್ನೂ ಓದಿ: ಮಾಜಿ ಸೈನಿಕರನ್ನು ಹತ್ಯೆಗೈದ ತಾಲಿಬಾನಿಗಳ ವಿರುದ್ಧ ಅಫ್ಘಾನ್ ಮಹಿಳೆಯರ ಪ್ರತಿಭಟನೆ

    POLICE JEEP

    ಪೊಲೀಸರ ವಿಚಾರಣೆ ವೇಳೆ ಈತ ನನಗೆ ಮಾಜಿ ಪ್ರೇಮಿಯಾಗಿದ್ದು, ನನ್ನನ್ನು ಮದುವೆಯಾಗುವಂತೆ ಕಿರುಕುಳ ನೀಡುತ್ತಿದ್ದನು. ಅದು ಅಲ್ಲದೇ ನನ್ನ ಫೋಟೋಗಳನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಕ್ಕೆ ಕೊಲೆ ಮಾಡಲಾಗಿದೆ ಎಂದು ತಪ್ಪನ್ನು ಒಪ್ಪಿಕೊಂಡಿದ್ದಾಳೆ.

    ಏನಿದು ಘಟನೆ?
    26 ವರ್ಷದ ಜೆ.ದೇಸಪ್ರಿಯಾ ಒಎಂಆರ್‍ನಲ್ಲಿ ಕಳವಕ್ಕಂನ ಖಾಸಗಿ ಕಾಲೇಜಿನಲ್ಲಿ ಭೌತಶಾಸ್ತ್ರದ ವಿಷಯದಲ್ಲಿ ಪಿಎಚ್‍ಡಿ ಮಾಡುತ್ತಿದ್ದಳು. ಈಕೆ ಉಲುಂದೂರುಪೇಟೆಯ 27 ವರ್ಷದ ಎಸ್ ಅರುಣ್ ಪಾಂಡಿಯನ್‍ನ್ನು ಪ್ರೀತಿಸುತ್ತಿದ್ದಳು.

    ಈತನೂ ಸಹ ಕಟ್ಟಂಕುಳತ್ತೂರಿನ ವಿಶ್ವವಿದ್ಯಾಲಯವೊಂದರಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದನು. ಮೃತನಾದ ಪೆರಂಬಲೂರಿನ ಕೆ.ಸೆಂಥಿಲ್(43) ನಗರದ ಜನಪ್ರಿಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭೌತಶಾಸ್ತ್ರದ ಪ್ರಾಧ್ಯಾಪಕನಾಗಿದ್ದ.

    ದೇಸಪ್ರಿಯಾ ಕಟ್ಟಂಕುಳತ್ತೂರಿನ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿದ್ದಾಗ ಸೆಂಥಿಲ್‍ನೊಂದಿಗೆ ಸಂಬಂಧ ಹೊಂದಿದ್ದಳು. ಆದರೆ ಲಾಕ್‍ಡೌನ್ ಸಮಯದಲ್ಲಿ ಇಬ್ಬರ ನಡುವೆ ಭಿನ್ನಭಿಪ್ರಾಯ ಬಂದು ಅವರ ಸಂಬಂಧ ಮುರಿದು ಬಿದ್ದಿತ್ತು. ನಂತರ ದೇಸಪ್ರಿಯಾ ಅರುಣ್ ಪಾಂಡಿಯನ್ ನನ್ನು ಪ್ರೀತಿ ಮಾಡಿದ್ದಾಳೆ. ವಿಷಯ ತಿಳಿದ ಮಾಜಿ ಪ್ರೇಮಿ ಕೆ.ಸೆಂಥಿಲ್ ದೇಸಪ್ರಿಯಾಳಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದ. ನನ್ನನ್ನು ಮದುವೆಯಾಗಿಲ್ಲ ಎಂದರೆ ನಿನ್ನ ಎಲ್ಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್‍ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ.

    ಗುರುವಾರ ಮಧ್ಯಾಹ್ನ 1:30 ಸುಮಾರಿಗೆ ದೇಸಪ್ರಿಯಾ ಸೆಂಥಿಲ್‍ನನ್ನು ತನ್ನ ಕಾಲೇಜಿಗೆ ಮಾತನಾಡುವುದಾಗಿ ಕರೆಸಿಕೊಂಡಿದ್ದಾಳೆ. ಆಗ ಅರುಣ್ ಪಾಂಡಿಯನ್ ಸಹ ಸೇರಿಕೊಂಡಿದ್ದಾನೆ. ನಂತರ ದೇಸಪ್ರಿಯಾ ಮತ್ತು ಅರುಣ್ ಪಾಂಡಿಯನ್ ಕತ್ತು ಸೀಳಿ ಸೆಂಥಿಲ್‍ಗೆ ಹಲವಾರು ಬಾರಿ ಚಾಕುವಿನಿಂದ ಇರಿದಿದ್ದಾರೆ. ಇಬ್ಬರೂ ಪರಾರಿಯಾಗಲು ಯತ್ನಿಸಿದ್ದು, ಸ್ಥಳದಲ್ಲಿದ್ದವರು ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಪೊಲೀಸರು ಇಬ್ಬರನ್ನು ವಿಚಾರಣೆಯನ್ನು ಮಾಡಿದ್ದು, ಇಬ್ಬರು ತಪ್ಪನ್ನು ಒಪ್ಪಿಕೊಂಡಿದ್ದಾರೆ. ಈ ವೇಳೆ ದೇವಪ್ರಿಯಾ, ಸೆಂಥಿಲ್‍ಗೆ ಈಗಾಗಲೇ ಮದುವೆಯಾಗಿದೆ. ಈಗ ಆತನ ಪತ್ನಿ ತವರು ಮನೆಯಲ್ಲಿದ್ದಾಳೆ. ಮದುವೆಯಾಗಿ ಏಳು ವರ್ಷಗಳಾದರೂ ಈ ದಂಪತಿಗೆ ಮಕ್ಕಳಾಗದ ಕಾರಣ ಪತ್ನಿಯನ್ನು ಒಪ್ಪಿಸಿ ಮದುವೆಯಾಗುವುದಾಗಿ ನನಗೆ ಹೇಳಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಇದನ್ನೂ ಓದಿ: ಅನುಮತಿ ಇಲ್ಲದೇ ಯಾರೋ ಮನೆಯೊಳಗೆ ಬಂದರೆಂದು ತಪ್ಪಾಗಿ ಭಾವಿಸಿ ಮಗಳನ್ನೇ ಕೊಂದ ತಂದೆ!

    ಈ ಇಬ್ಬರೂ ಅವನನ್ನು ಬೇರೆಡೆಗೆ ಕರೆದೊಯ್ದು ಕೊಲೆ ಮಾಡಲು ಯೋಚಿಸಿದ್ದೆವು. ಆದರೆ ಆತನನ್ನು ನೋಡಿ ಸಿಟ್ಟಾಗಿ ಸ್ಥಳದಲ್ಲೇ ಕೊಲೆ ಮಾಡಿದ್ದೇವೆ ಎಂದು ಆರೋಪಿಗಳು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದರು.

    ಪ್ರಸ್ತುತ ಈ ಪ್ರಕರಣ ಕೆಲಂಬಾಕ್ಕಂ ಪೊಲೀಸರು ದಾಖಲಿಸಿಕೊಂಡಿದ್ದಾರೆ.

  • ಪಿಎಚ್‍ಡಿ ವಿದ್ಯಾರ್ಥಿನಿಗೆ ಕಿರುಕುಳ – ಪ್ರಾಧ್ಯಾಪಕ ಬಂಧನ

    ಪಿಎಚ್‍ಡಿ ವಿದ್ಯಾರ್ಥಿನಿಗೆ ಕಿರುಕುಳ – ಪ್ರಾಧ್ಯಾಪಕ ಬಂಧನ

    ಮಂಗಳೂರು: ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿಎಚ್‍ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಡಿ ಪ್ರಾಧ್ಯಾಪಕನೋರ್ವನನ್ನು ಮಂಗಳೂರು ಪೊಲೀಸರು ಆಂಧ್ರ ಪ್ರದೇಶದಲ್ಲಿ ಬಂಧಿಸಿದ್ದಾರೆ. ಇದನ್ನೂ ಓದಿ: ಮಮತಾಗೆ ಭರ್ಜರಿ ಜಯ – 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ಎಂದ ಟಿಎಂಸಿ

    ಆಂಧ್ರಪ್ರದೇಶದ ಪ್ರತಿಷ್ಠಿತ ವಿವಿಯ ಪ್ರಾಧ್ಯಾಪಕ ಡಾ.ಕೊಂಡೂರು ಸುಧೀರ್ ಕುಮಾರ್ ಬಂಧಿತ ಆರೋಪಿ. ಮಂಗಳೂರಿನ ವಿದ್ಯಾರ್ಥಿನಿ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಎಚ್‍ಡಿ ಮಾಡುತ್ತಿದ್ದರು, ಈ ಮಧ್ಯೆ ಪರಿಚಯವಾದ ಸುಧೀರ್ ತನ್ನನ್ನು ಮಾರ್ಗದರ್ಶಕನಾಗಿ ನೇಮಿಸುವಂತೆ ಒತ್ತಾಯಿಸಿದ್ದ. ಆದರೆ ವಿ.ವಿಯ ಅನುಮತಿ ಕೇಳಿದಾಗ ಆತನಿಗೆ ಅರ್ಹತೆಯಿಲ್ಲ ಎಂದು ನಿರಾಕರಿಸಲಾಗಿತ್ತು. ಬಳಿಕ ವಿದ್ಯಾರ್ಥಿನಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಇದನ್ನೂ ಓದಿ: ಹೈ ಪ್ರೊಫೈಲ್ ಡ್ರಗ್ಸ್ ಕೇಸ್- ಶಾರುಖ್ ಖಾನ್ ಪುತ್ರನಿಗೆ ಬಂಧನ ಭೀತಿ

    ಸುಧೀರ್ ವಿದ್ಯಾರ್ಥಿನಿ ಮತ್ತು ಮನೆಯವರಿಗೆ ಕಿರುಕುಳ ನೀಡುವುದನ್ನು ಸಹಿಸಲಾಗದೆ ಪೊಲೀಸರಿಗೆ ದೂರು ನೀಡಿದ್ದರು. ವಿದ್ಯಾರ್ಥಿನಿಯ ಫೋಟೋ ಎಡಿಟ್ ಮಾಡಿ ಸಾಮಾಜಿಕ ತಾಣಗಳಲ್ಲಿ ವೈರಲ್ ಮಾಡಿದ್ದರಿಂದ ವಿದ್ಯಾರ್ಥಿನಿಯ ಮನೆಯವರ ದೂರಿನ ಹಿನ್ನೆಲೆ ಆರೋಪಿಯನ್ನು ಮಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಾಧ್ಯತೆ: ಸುಧಾಕರ್

  • ಮೈಸೂರು ವಿವಿ ಪ್ರಾಧ್ಯಾಪಕನಿಂದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

    ಮೈಸೂರು ವಿವಿ ಪ್ರಾಧ್ಯಾಪಕನಿಂದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

    ಮೈಸೂರು: ಪ್ರಾಧ್ಯಾಪಕನೇ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಕಾಮುಕ ಪ್ರಾಧ್ಯಾಪಕ ಪತ್ನಿ ಎದುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

    ಈ ಮೂಲಕ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮತ್ತೊಂದು ಕಾಮಕಾಂಡ ಬಯಲಾಗಿದ್ದು, ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೋ.ರಾಮಚಂದ್ರ ವಿರುದ್ಧ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ಜಯಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಇದನ್ನೂ ಓದಿ: ಫೋನ್‍ನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆ – ವರ್ಷ ಆಗುವುದರೊಳಗೆ ಯುವತಿ ಆತ್ಮಹತ್ಯೆ!

    ಸಂತ್ರಸ್ತೆ ರಾಮಚಂದ್ರ ಬಳಿ ಪಿಎಚ್ ಡಿ ಮಾರ್ಗದರ್ಶನ ಪಡೆಯುತ್ತಿದ್ದಳು. ಹೀಗಾಗಿ ರಾಮಚಂದ್ರ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡಿದ್ದ, ಈ ವೇಳೆ ಸಂತ್ರಸ್ತೆ ಕೂಗಾಟ, ಚೀರಾಟ ನಡೆಸಿದ್ದಾಳೆ. ಇದೇ ಸಂದರ್ಭದಲ್ಲಿ ಪ್ರಾಧ್ಯಾಪಕ ರಾಮಚಂದ್ರ ಪತ್ನಿ ಲೋಲಾಕ್ಷಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಸಂತ್ರಸ್ತ ಯುವತಿ ಹಾಗೂ ಪತಿಯನ್ನು ಠಾಣೆಗೆ ಕರೆತಂದಿದ್ದಾರೆ.

    ರಾಮಚಂದ್ರ ಪತ್ನಿ ಲೋಲಾಕ್ಷಿ ಕೂಡ ವಿವಿಯಲ್ಲಿ ಪ್ರಾಧ್ಯಾಪಕಿಯಾಗಿದ್ದು, ಇದೀಗ ಪೊಲೀಸರು ಆರೋಪಿ ರಾಮಚಂದ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

  • ಬಟ್ಟೆಯಂತೆ ಧರಿಸಿರುವ ವಿಶ್ವದ ಮೊದಲ ಉದ್ಯಾನ- ಇದರಲ್ಲಿದೆ 22 ಬಗೆಯ ತರಕಾರಿ ಬೆಳೆ

    ಬಟ್ಟೆಯಂತೆ ಧರಿಸಿರುವ ವಿಶ್ವದ ಮೊದಲ ಉದ್ಯಾನ- ಇದರಲ್ಲಿದೆ 22 ಬಗೆಯ ತರಕಾರಿ ಬೆಳೆ

    ಕ್ಯಾಲಿಫೋರ್ನಿಯಾ: ಬಟ್ಟೆಯಂತೆ ಧರಿಸಿರುವ ವಿಶ್ವದ ಮೊದಲ ಉದ್ಯಾನವನ್ನು ಪರಿಚಯಿಸಲಾಗಿದ್ದು, ಇದರಲ್ಲಿದೆ 22 ಬಗೆಯ ತರಕಾರಿ ಬೆಳೆಯಲಾಗಿದೆ.

    ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅರುಸಿಯಕ್ ಗೇಬ್ರಿಯಲ್ ಅವರು ಉದ್ಯಾನವನ್ನು ವಿನ್ಯಾಸಗೊಳಿಸಿದ್ದು, ಅದನ್ನು ಬಟ್ಟೆಯಂತೆ ಧರಿಸಬಹುದಾಗಿದೆ. ಇದನ್ನು ವಿಶ್ವದ ಮೊದಲ ಬಟ್ಟೆಯಂತೆ ಧರಿಸುವ ಮೊದಲ ಉದ್ಯಾನ ಎಂದು ಕರೆಯಲಾಗುತ್ತಿದೆ.

    ನಿಮ್ಮ ಆಹಾರವನ್ನು ನೀವೇ ಬೆಳೆಸಿಕೊಳ್ಳಿ ಎಂದು ಪ್ರಾಧ್ಯಾಪಕ, ಉದ್ಯಾನದ ವಿನ್ಯಾಸಕಾರ ಗೇಬ್ರಿಯಲ್ ಹೇಳುತ್ತಾರೆ. ಈ ಉದ್ಯಾನದಲ್ಲಿ ಗೇಬ್ರಿಯಲ್ ಅವರು ಎಲೆಕೋಸು, ಕ್ಯಾರೆಟ್, ಸ್ಟ್ರಾಬೆರಿ, ಕಡಲೆಕಾಯಿ ಸೇರಿದಂತೆ 22ಕ್ಕೂ ಹೆಚ್ಚು ಬಗೆಯ ತರಕಾರಿಗಳನ್ನು ಬೆಳೆದಿದ್ದು, ಅದನ್ನು ಬಟ್ಟೆಯಾಗಿ ಧರಿಸುತ್ತಾರೆ. ಈ ಎಲ್ಲ ಸಸಿಗಳು ಒಟ್ಟಿಗೆ ಬೆಳೆದಾಗ, ಅವು ಬಟ್ಟೆಯನ್ನು ವರ್ಣಮಯವಾಗಿಸುತ್ತವೆ. ಮತ್ತೊಂದು ವಿಶೇಷವೆಂದರೆ ಗೇಬ್ರಿಯಲ್ ಅವರು ಈ ಸಸ್ಯಗಳನ್ನು ತಮ್ಮ ಮೂತ್ರದಿಂದ ನೀರಾವರಿ ಮಾಡಿಕೊಂಡಿದ್ದಾರೆ. ಹೀಗಾಗಿ ಇದಕ್ಕೆ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ.

    ಗೇಬ್ರಿಯಲ್ ಅವರ ಈ ಯೋಜನೆಯು ಫ್ರೆಂಚ್ ಸಸ್ಯವಿಜ್ಞಾನಿ ಪ್ಯಾಟ್ರಿಕ್ ಬ್ಲಾಂಕ್ ಅವರ ಸಸ್ಯೋದ್ಯಾನಗಳಿಂದ ಬಲವಾಗಿ ಪ್ರಭಾವಿತವಾಗಿದೆ ಎಂದು ಹೇಳಲಾಗುತ್ತಿದೆ. ಬ್ಲಾಂಕ್ ಅವರು ಸ್ಥಳಾವಕಾಶದ ಕೊರತೆಯಿಂದ ಲಂಬ ಉದ್ಯಾನವನ್ನು ಬೆಳೆಸಿದ್ದರು.

    ಹೇಗಿದೆ ಉದ್ಯಾನ?:
    ಗೇಬ್ರಿಯಲ್ ಅವರು ಬಟ್ಟೆಯ ಪದರವನ್ನು ತಯಾರಿಸಿ, ಅದರ ಮೇಲೆ ಸಸ್ಯಗಳ ಬೀಜಗಳು ಅಂಟಿಸಿದ್ದಾರೆ. ಒದ್ದೆಯಾದ ಬಟ್ಟೆಯ ಪದರದಲ್ಲಿರುವ ಬೀಜಗಳು ಎರಡು ವಾರಗಳ ಬಳಿಕ ಮೊಳಕೆಯೊಡೆಯುತ್ತವೆ. ನಂತರ ಬೆಳೆಯಲು ಆರಂಭಿಸುತ್ತದೆ. ಜೊತೆಗೆ ಮೂತ್ರದಿಂದ ಉಂಟಾಗುವ ತೇವಾಂಶವು ಸಸ್ಯಗಳ ಬೆಳೆವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಬೆಳೆದು ಒಂದು ಹಂತಕ್ಕೆ ಬಂದ ಸಸ್ಯಗಳು ಹಣ್ಣು, ತರಕಾರಿ ಕೊಡುತ್ತವೆ.

  • ಲೈಬ್ರರಿ, ಲ್ಯಾಬ್‍ಗಳಲ್ಲಿ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ!

    ಲೈಬ್ರರಿ, ಲ್ಯಾಬ್‍ಗಳಲ್ಲಿ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ!

    ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮತ್ತೊಂದು ಕರ್ಮಕಾಂಡ ಬೆಳಕಿಗೆ ಬಂದಿದೆ. ವಿವಿಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಉಮೇಶ್ ನಾಯ್ಕ್ ವಿದ್ಯಾರ್ಥಿಗಳಿಗೆ ಲೈಂಗಿಕ ಮತ್ತು ಮಾನಸಿಕ ದೌರ್ಜನ್ಯ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಲೆಕ್ಚರರ್ ಬಗ್ಗೆ ವಿದ್ಯಾರ್ಥಿನಿಯರು ವಿಶ್ವವಿದ್ಯಾನಿಲಯದ ಉಪಕುಲಪತಿ, ರಿಜಿಸ್ಟ್ರಾರ್ ಮತ್ತು ಸ್ಪರ್ಶ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಾಕಷ್ಟು ಬಾರಿ ದೂರು ನೀಡಿದ್ದರೂ ವಿದ್ಯಾರ್ಥಿಗಳಿಗೆ ಆಡಳಿತ ತನಿಖೆ ನಡೆಸಲಿಲ್ಲ. ಈಗ ಕಾಮುಕ ಪ್ರಾಧ್ಯಾಪಕನ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

    ಕ್ಲಾಸ್ ನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ್ದೇನೆಂದು ಪಾಧ್ಯಾಪಕ ಬೆದರಿಸುತ್ತಿದ್ದು, ದೂರು ನೀಡಿದರೆ ದಲಿತ ದೌರ್ಜನ್ಯ ಕೇಸ್ ದಾಖಲಿಸುತ್ತೇನೆಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

    ಲೈಬ್ರರಿ ಮತ್ತು ಲ್ಯಾಬ್ ಗಳಲ್ಲಿ ಉಮೇಶ್ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ನೀಡಿದ್ದು, ವಿಶ್ವ ವಿದ್ಯಾಲಯ ಮಾತ್ರ ಜಾಣ ಮೌನ ವಹಿಸಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ದೂರು ಕೊಡಲು ಮುಂದಾದ ವಿದ್ಯಾರ್ಥಿನಿಯರಿಗೆ ಡಾ. ಉಮೇಶ್ ಕಾಲ್ ಮಾಡಿ ಬೆದರಿಕೆ ಹಾಕಿದ್ದು, ಬೆದರಿಕೆಯ ಆಡಿಯೋಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.