Tag: ಪ್ರಾರಂಭ

  • ರವಿಚಂದ್ರನ್ ಪುತ್ರನಿಂದ ಲಿಪ್ ಲಾಕ್

    ರವಿಚಂದ್ರನ್ ಪುತ್ರನಿಂದ ಲಿಪ್ ಲಾಕ್

    ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ ‘ಪ್ರಾರಂಭ’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಮನೋರಂಜನ್ ರವಿಚಂದ್ರನ್ ಲಿಪ್ ಲಾಕ್ ದೃಶ್ಯದಲ್ಲಿ ನಟಿಸಿದ್ದಾರೆ.

    ‘ಪ್ರಾರಂಭ’ ಚಿತ್ರದಲ್ಲಿ ನಟ ಮನೋರಂಜನ್ ಹಾಗೂ ನಟಿ ಕೀರ್ತಿ ಕಲಕೇರಿ ನಡುವೆ ಕಿಸ್ಸಿಂಗ್ ದೃಶ್ಯಗಳಿದ್ದು, ಮೊದಲು ಇಂತಹ ದೃಶ್ಯಗಳಲ್ಲಿ ನಟಿಸಲು ಯೋಚನೆ ಮಾಡಿದ್ದ ಮನೋರಂಜನ್ ಬಳಿಕ ಸಿನಿಮಾಗೆ ಅಗತ್ಯವಿರುವುದರಿಂದ ಈ ದೃಶ್ಯದಲ್ಲಿ ನಟಿಸಿದ್ದಾರೆ. ಚಿತ್ರದ ಟೀಸರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧ್ವನಿ ನೀಡಿದ್ದು, ಟೀಸರ್ ನಲ್ಲಿ ಮನೋರಂಜನ್ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

    ಮನು ಕಲ್ಯಾಡಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಪ್ರಾರಂಭ ಸಿನಿಮಾದ ಚಿತ್ರೀಕರಣ ಹಾಗೂ ಚಿತ್ರೀಕರಣ ನಂತರದ ಚಟುವಟಿಕೆಗಳು ಮುಕ್ತಾಯವಾಗಿದೆ. ಬೆಂಗಳೂರು, ಬಳ್ಳಾರಿ, ಚಿಕ್ಕಮಗಳೂರು, ಗೋವಾ, ಮೂಡಿಗೆರೆ, ಮೈಸೂರು ಮುಂತಾದ ಕಡೆ ಚಿತ್ರಕ್ಕೆ 50ದಿನಗಳ ಚಿತ್ರೀಕರಣ ನಡೆದಿದೆ. ಮನು ಕಲ್ಯಾಡಿ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಜಗದೀಶ್ ಕಲ್ಯಾಡಿ ಅವರು ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸುತ್ತಿದ್ದಾರೆ.

    ಚಿತ್ರದಲ್ಲಿ 5 ಹಾಡುಗಳಿದ್ದು, ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. 2 ಸಾಹಸ ಸನ್ನಿವೇಶಗಳಿದ್ದು, ಥ್ರಿಲ್ಲರ್ ಮಂಜು ಹಾಗೂ ವಿಕ್ರಂ ಮೋರ್ ಸಾಹಸ ನಿರ್ದೇಶನ ಮಾಡಿದ್ದಾರೆ. ಸುರೇಶ್‍ಬಾಬು ಛಾಯಾಗ್ರಹಣ, ವಿಜಯ್ ಕುಮಾರ್ ಸಂಕಲನ, ಸಂತು, ಗೀತಾ ನೃತ್ಯ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

    ಈ ಚಿತ್ರದಲ್ಲಿ ಮನೋರಂಜನ್ ಅವರಿಗೆ ನಾಯಕಿಯಾಗಿ ಕೀರ್ತಿ ಅಭಿನಯಿಸಿದ್ದಾರೆ. ಉಳಿದಂತೆ ಕಡ್ಡಿಪುಡ್ಡಿ ಚಂದ್ರು, ಹನುಮಂತೇಗೌಡ, ರಾಘು ಶ್ರೀವಾಸ್ತವ್, ಶಾಂಭವಿ, ಸೂರಜ್ (ಕಾಮಿಡಿ ಕಿಲಾಡಿಗಳು) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈ ಹಿಂದೆ ಉಪ್ಪು ಹುಳಿ ಖಾರ ಚಿತ್ರಕ್ಕೆ ಸಂಗೀತ ನೀಡಿದ್ದ, ಪ್ರಜ್ವಲ್ ಪೈ ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

  • ‘ಪ್ರಾರಂಭ’ ಚಿತ್ರದ ಚಿತ್ರೀಕರಣ ಮುಕ್ತಾಯ

    ‘ಪ್ರಾರಂಭ’ ಚಿತ್ರದ ಚಿತ್ರೀಕರಣ ಮುಕ್ತಾಯ

    ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ `ಪ್ರಾರಂಭ` ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಬಳ್ಳಾರಿ, ಚಿಕ್ಕಮಗಳೂರು, ಗೋವಾ, ಮೂಡಿಗೆರೆ, ಮೈಸೂರು ಮುಂತಾದ ಕಡೆ ಚಿತ್ರಕ್ಕೆ 50ದಿನಗಳ ಚಿತ್ರೀಕರಣ ನಡೆದಿದೆ. ಮನು ಕಲ್ಯಾಡಿ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಜಗದೀಶ್ ಕಲ್ಯಾಡಿ ಅವರು ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸುತ್ತಿದ್ದಾರೆ.

    ‘ಪ್ರಾರಂಭ’ ಒಂದು ಅದ್ಭುತ ಕಥಾಹಂದರವಿರುವ ಚಿತ್ರ ಕಥೆಯಲ್ಲಿ ಈ ಸಮಾಜಕ್ಕೆ ಪ್ರತ್ಯೇಕವಾಗಿ ಯುವಕ-ಯುವತಿಯರಿಗೆ ಒಂದು ಒಳ್ಳೆಯ ಸಂದೇಶ ಸಾರುವ ಸಿನಿಮಾ. ನಾಯಕ ಮನೋರಂಜನ್ ರವಿಚಂದ್ರನ್ ಅವರು ಮೂರು ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕ ಮನು ಕಲ್ಯಾಡಿ ತಿಳಿಸಿದ್ದಾರೆ.
    5 ಹಾಡುಗಳಿರುವ ಈ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ.

    2 ಸಾಹಸ ಸನ್ನಿವೇಶಗಳಿದ್ದು, ಥ್ರಿಲ್ಲರ್ ಮಂಜು ಹಾಗೂ ವಿಕ್ರಂ ಮೋರ್ ಸಾಹಸ ನಿರ್ದೇಶನ ಮಾಡಿದ್ದಾರೆ. ಸುರೇಶ್‍ಬಾಬು ಛಾಯಾಗ್ರಹಣ, ವಿಜಿ.ಎನ್.ಕುಮಾರ್ ಸಂಕಲನ, ಸಂತು, ಗೀತಾ ನೃತ್ಯ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

    ಮನೋರಂಜನ್ ರವಿಚಂದ್ರನ್, ಕೀರ್ತಿ ಕಲಕೇರಿ, ಕಡ್ಡಿಪುಡಿ ಚಂದ್ರು, ಹನುಮಂತೇ ಗೌಡ, ಸೂರಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.