Tag: ಪ್ರಾರ್ಥನಾ ಮಂದಿರ

  • Kerala Bomb Blast: ಬಾಂಬ್ ಇಟ್ಟಿದ್ದು ನಾನೇ ಅಂತಾ ಪೊಲೀಸರಿಗೆ ವ್ಯಕ್ತಿ ಶರಣು!

    Kerala Bomb Blast: ಬಾಂಬ್ ಇಟ್ಟಿದ್ದು ನಾನೇ ಅಂತಾ ಪೊಲೀಸರಿಗೆ ವ್ಯಕ್ತಿ ಶರಣು!

    ತಿರುವನಂತಪುರಂ: ಕೇರಳದ ಕಳಮಶ್ಶೇರಿ (Kalamassery Kerala) ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ವ್ಯಕ್ತಿ ಸ್ವತಃ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

    ತ್ರಿಶ್ಶೂರ್ ಜಿಲ್ಲೆಯ ಕೊಡಕ್ಕರ ಠಾಣೆಯ ಪೊಲೀಸರ ಮುಂದೆ ಕೊಚ್ಚಿ ನಿವಾಸಿ ಶರಣಾಗಿದ್ದಾನೆ. ಬ್ಲಾಸ್ಟ್ ಬಳಿಕ ಇಂದು (ಭಾನುವಾರ) ಮಧ್ಯಾಹ್ನ 1.30ರ ವೇಳೆಗೆ ಪೊಲೀಸ್ ಠಾಣೆಗೆ ಬಂದಿದ್ದ ವ್ಯಕ್ತಿ, ಬಾಂಬ್ ಇಟ್ಟಿದ್ದು ನಾನೇ ಎಂದು ಬಾಯ್ಬಿಟ್ಟಿದ್ದಾನೆ. ಸದ್ಯ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆತ ನೀಡಿರುವ ಹೇಳಿಕೆಯನ್ನು ಆಧರಿಸಿ ಅಜ್ಞಾತ ಸ್ಥಳದಲ್ಲಿಟ್ಟು ತನಿಖೆ ನಡೆಸುತ್ತಿದ್ದಾರೆ.

    ಇಂದು ಬೆಳಗ್ಗೆ ಪ್ರಾರ್ಥನಾ ಮಂದಿರದಲ್ಲಿ (Jehovah’s Witnesses convention)  ಸುಮಾರು 2,500 ಮಂದಿ ಜಮಾಯಿಸಿದ್ದರು. ಈ ವೇಳೆ ಭಾರೀ ಸ್ಫೋಟವಾಗಿದೆ. ಈ ಸ್ಫೋಟಕ್ಕೂ ಮುನ್ನ ನೀಲಿ ಬಣ್ಣದ ಕಾರೊಂದು ಹೊರಟಿರುವುದು ಸಿಸಿಟಿವಿ ಪರಿಶೀಲನೆಯ ವೇಳೆ ಬಯಲಾಗಿದೆ. ಕನ್ವೆನ್ಷನ್ ಸೆಂಟರ್ ನಿಂದ ವೇಗವಾಗಿ ಕಾರು ಹೊರಟಿತ್ತು. ಸದ್ಯ ಕಾರು ಸಾಗುತ್ತಿರುವ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿದ ಪೊಲೀಸರು, ಕಾರು ಪತ್ತೆಹಚ್ಚಲು ಮುಂದಾಗಿದ್ದಾರೆ. ಇದನ್ನೂ ಓದಿ: ಪ್ರಾರ್ಥನಾ ಮಂದಿರದಲ್ಲಿ ನಡೆದಿರೋದು IED ಬ್ಲಾಸ್ಟ್: ದೃಢಪಡಿಸಿದ ಪೊಲೀಸರು

    ಪ್ರಕರಣ ಸಂಬಂಧ ಇದೀಗ ಕೇರಳದ 14 ಜಿಲ್ಲೆಗಳಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಂತೆಯೇ ಕಣ್ಣೂರು ರೈಲ್ವೇ ನಿಲ್ದಾಣದಲ್ಲಿ ಪರಿಶೋಧನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಗುಜರಾತಿ ಭಾಷೆ ಮಾತನಾಡುತ್ತಿದ್ದ ಈತನ ಬ್ಯಾಗ್ ನಲ್ಲಿ ಕೆಲವು ಪ್ರಮುಖ ಸ್ಥಳಗಳ ಫೋಟೋ ಇತ್ತು. ಈ ಚಿತ್ರಗಳ ಬಗ್ಗೆ ಕೇಳಿದಾಗ ಸೂಕ್ತ ಉತ್ತರ ನೀಡಲಿಲ್ಲ. ಈ ಹಿನ್ನೆಯಲ್ಲಿ ಆತನನ್ನು ಕೂಡ ಕೇರಳ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

    ನಡೆದಿದ್ದೇನು..?; ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‍ನಲ್ಲಿ ಸರಣಿ ಸ್ಫೋಟ ಸಂಭವಿಸಿದೆ. ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆ ನಡೆಯುತ್ತಿರುವ ಹೊತ್ತಲ್ಲೇ ಈ ಸ್ಫೋಟ ನಡೆದಿದ್ದು ಇಬ್ಬರು ಸಾವನ್ನಪ್ಪಿದ್ದು, 10 ಮಂದಿ ಗಂಭೀರ ಗಾಯಗೊಂಡಿದ್ದು, 30 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸುಧಾರಿತ ಸ್ಫೋಟಕ ಸಾಧನ ಐಇಡಿ ಬಳಸಿ ಕೃತ್ಯ ನಡೆಸಿರುವುದು ಗೊತ್ತಾಗಿದೆ. ಕೆಲವೊಂದು ಅವಶೇಷಗಳು ದೊರಕಿದ್ದು, ಪರಿಶೀಲನೆ ನಡೆಸುತ್ತಿದ್ದೇವೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಡಿಜಿಪಿ ಡಾ.ಶೇಖ್ ದರ್ವೇಶ್ ಸಾಹೇಬ್ ಹೇಳಿದ್ದಾರೆ.

    ಈ ಘಟನೆ ಗಂಭೀರವಾದುದು. ಹಾಗಾಗಿ ಎಲ್ಲ ಆಯಮಾಗಳಲ್ಲೂ ತನಿಖೆ ನಡೆಸಲಿದ್ದೇವೆ. ತನಿಖೆಗೆ ಹೊಸ ತಂಡವೊಂದನ್ನು ರಚಿಸಲಾಗಿದೆ. ಇದೇ ವೇಳೆ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ, ದ್ವೇಷದ ಸಂದೇಶಗಳನ್ನು ಪೋಸ್ಟ್ ಮಾಡಿದ್ದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾರು ಕೂಡ ಯಾವುದೇ ವದಂತಿಗಳನ್ನು ನಂಬಬೇಡಿ. ಜನರು ಶಾಂತಿ-ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಮುಖ್ಯಸ್ಥರು ಎಚ್ಚರಿಕೆ ನೀಡಿದ್ದಾರೆ.

    ಬಾಂಬ್ ನಿಷ್ಕ್ರಿಯ ದಳ, ವಿಶೇಷ ತನಿಖಾ ತಂಡ ಹಾಗೂ ಎನ್‍ಐಎ ಅಧಿಕಾರಿಗಳ ತಂಡ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ ಎಂದು ವರದಿಯಾಗಿದೆ. ಸ್ಫೋಟದ ಹಿನ್ನೆಲೆಯಲ್ಲಿ ಸರ್ಕಾರಿ ಆರೋಗ್ಯ ಸೇವಾ ವೃತ್ತಿಪರರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕೇರಳ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೂಚಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಾರ್ಥನಾ ಮಂದಿರದಲ್ಲಿ ನಡೆದಿರೋದು IED ಬ್ಲಾಸ್ಟ್: ದೃಢಪಡಿಸಿದ ಪೊಲೀಸರು

    ಪ್ರಾರ್ಥನಾ ಮಂದಿರದಲ್ಲಿ ನಡೆದಿರೋದು IED ಬ್ಲಾಸ್ಟ್: ದೃಢಪಡಿಸಿದ ಪೊಲೀಸರು

    ತಿರುವನಂತಪುರಂ: ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ (Kalamassery)  ನಡೆದಿರುವುದು ಐಇಡಿ ಬ್ಲಾಸ್ಟ್ (IED Blast) ಎಂದು ಪೊಲೀಸರು ದೃಢಪಡಿಸಿದ್ದಾರೆ. ಸದ್ಯ ಈ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

    ಘಟನೆಯ ಬಳಿಕ ತನಿಖೆಯ ನೇತೃತ್ವ ವಹಿಸಲು ಒಟ್ಟು 8 ವಿಶೇಷ ತಂಡಗಳನ್ನು ನೇಮಿಸಲಾಗಿದೆ. ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇರುವ ಶಂಕೆ ದಟ್ಟವಾಗಿದೆ. ಕೇರಳ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಲು ಕಲಮಶ್ಶೇರಿಗೆ ತೆರಳಿದ್ದಾರೆ. ಎಲ್ಲಾ ಆಯಾಮಗಳಿಂದಲೂ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತದೆ ಎಂದು ಎಡಿಜಿಪಿ ತಿಳಿಸಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ.

    ಶಂಕಿತರ ಸಾಮಾಜಿಕ ಜಾಲತಾಣಗಳ ಚಟುವಟಿಕೆ ಆಧರಿಸಿ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಜೊತೆಗೆ ಈ ಸ್ಫೋಟ ಪೂರ್ವ ನಿಯೋಜಿತ ಕೃತ್ಯವೇ ಎಂಬುದನ್ನು ಖಚಿತಪಡಿಸಲು ರಾಜ್ಯ ಅಥವಾ ಕೇಂದ್ರ ಸಂಸ್ಥೆಗಳಿಗೆ ಯಾವುದೇ ವರದಿಗಳು ಬಂದಿಲ್ಲ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಬ್ಲಾಸ್ಟ್- ಕೇರಳ ಸಿಎಂಗೆ ಅಮಿತ್ ಶಾ ಕರೆ

    ಇತ್ತ ಗಾಯಾಳುಗಳ ಆರೋಗ್ಯ ವಿಚಾರಿದ ಬಳಿಕ ಜಿಲ್ಲಾಧಿಕಾರಿ ಎನ್‍ಎಸ್‍ಕೆ ಉಮೇಶ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, 10 ಜನರನ್ನು ಕಲಮಶ್ಶೇರಿ ವೈದ್ಯಕೀಯ ಕಾಲೇಜಿನ ಸುಟ್ಟಗಾಯಗಳ ಘಟಕಕ್ಕೆ ದಾಖಲಿಸಲಾಗಿದೆ. ಅವರಲ್ಲಿ 50 ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಇಬ್ಬರನ್ನು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನು 8 ಜನರನ್ನು ವೈದ್ಯಕೀಯ ಕಾಲೇಜಿನ ಸಾಮಾನ್ಯ ವಾರ್ಡ್‍ನಲ್ಲಿ ದಾಖಲಿಸಲಾಗಿದ್ದು, ಉಳಿದ 18 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

    ಘಟನೆಯಲ್ಲಿ ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ಉಮೇಶ್ ಇದೇ ವೇಳೆ ತಿಳಿಸಿದರು.

     Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಬ್ಲಾಸ್ಟ್- ಕೇರಳ ಸಿಎಂಗೆ ಅಮಿತ್ ಶಾ ಕರೆ

    ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಬ್ಲಾಸ್ಟ್- ಕೇರಳ ಸಿಎಂಗೆ ಅಮಿತ್ ಶಾ ಕರೆ

    ತಿರುವನಂತಪುರಂ: ಕೇರಳದ ಕಲಮಶ್ಯೇರಿಯಲ್ಲಿ (Kalamassery, Kerala) ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

    ಈ ವೇಳೆ ಅಮಿತ್ ಶಾ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೇ ಸಮಾವೇಶ ಕೇಂದ್ರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿದರು. ರಾಷ್ಟ್ರೀಯ ತನಿಖಾ ದಳ (NIA) ಮತ್ತು ರಾಷ್ಟ್ರೀಯ ಭದ್ರತಾ ಪಡೆ (NSG) ಸ್ಥಳಕ್ಕಾಗಮಿಸಿ ಘಟನೆಯ ಕುರಿತು ತನಿಖೆ ಆರಂಭಿಸುವಂತೆ ಸೂಚನೆ ನೀಡಿದರು.

    ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ ಯೆಹೋವನ ಸಾಕ್ಷಿಗಳ ಸಮಾವೇಶವಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 2,500 ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಪ್ರೇಯರ್ ಹಾಲ್ ನಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಈಗಾಗಲೇ 36 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 10 ಮಂದಿಗೆ ಸುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಸ್ಪೋಟ- ಓರ್ವ ದುರ್ಮರಣ

    ಘಟನೆ ನಡೆಯುತ್ತಿದ್ದಂತೆಯೇ ಬೆದರಿ ಜನ ದಿಕ್ಕಾಪಾಲಾಗಿ ಓಡಿ ಹೋದರು. ಸದ್ಯ 4 ಸದಸ್ಯರ ಎನ್‍ಐಎ ತಂಡವು ಸ್ಥಳೀಯ ಪೊಲೀಸರೊಂದಿಗೆ ಸ್ಥಳದಲ್ಲಿ ಬೀಡುಬಿಟ್ಟಿದೆ. ಪ್ರಾಥಮಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಎನ್‍ಐಎ, ಬಾಂಬ್ ಬ್ಲಾಸ್ಟ್ ಹಿಂದಿನ ಸೂತ್ರಧಾರಿಗಳು ಯಾರು ಅನ್ನೋದರ ಬಗ್ಗೆ ತನಿಖೆ ಆರಂಭಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]