Tag: ಪ್ರಾರ್ಥನೆ

  • ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆ ನೆರವೇರಿಸಿದ ಹಿಂದೂಗಳು

    ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆ ನೆರವೇರಿಸಿದ ಹಿಂದೂಗಳು

    – ಮಧ್ಯಾಹ್ನದವರೆಗೆ ಇತ್ತು ನಮಾಜ್‍ಗೆ ಅವಕಾಶ

    ಕಲಬುರಗಿ: ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ (Ladle Mashak Dargah Aland) ಮುಸ್ಲಿಮರ ಪ್ರಾರ್ಥನೆಯ ಬಳಿಕ ಇದೀಗ ಶಿವಲಿಂಗ ಪೂಜೆಯನ್ನು ನೆರವೇರಿಸಲಾಗಿದೆ.

    ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ನಿಮಿತ್ತ ಪೂಜೆಗೆ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನಲೆ ಇಂದು ಸಂಜೆ ಆಂದೋಲಾ ಶ್ರೀಗಳ ನೇತೃತ್ವದಲ್ಲಿ 15 ಮಂದಿ ಹಿಂದೂಗಳು ದರ್ಗಾದ ಆವರಣದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ರುದ್ರಾಭಿಷೇಕ, ಗಣೇಶ ಪೂಜೆ, ಗಂಗಾ ಪೂಜೆ, ಸಹಸ್ರ ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ ಹೀಗೆ ಸುಮಾರು 1 ಗಂಟೆಗಳ ಕಾಲ ಶಿವಲಿಂಗಕ್ಕೆ ಪೂಜೆ ನೆರವೇರಿದೆ.

    ಪೂಜೆ ಬಳಿಕ ಬಿಜೆಪಿ ಮುಖಂಡ ಹರ್ಷಾನಂದ ಗುತ್ತೇದಾರ್ ಪ್ರತಿಕ್ರಿಯಿಸಿ, ನಾವು ಸತತ ಮೂರು ವರ್ಷದಿಂದ ಸಹ ರಾಘವ ಚೈತನ್ಯ ಪೂಜೆ ಮಾಡಿದ್ದೇವೆ. ದುರಂತ ಅಂದ್ರೆ ನಮ್ಮ ಧರ್ಮದ ಶಿವಲಿಂಗ ಪೂಜೆಗೆ ನ್ಯಾಯಾಲಯಕ್ಕೆ ಹೋಗಬೇಕಾದ ಪರಿಸ್ಥಿತಿಯಿದೆ. ಹೀಗಾಗಿ ನ್ಯಾಯಾಲಯಕ್ಕೆ ನಾನು ಅಭಿನದಂನೆ ಸಲ್ಲಿಸುತ್ತೇನೆ. ನಮ್ಮ ಹೋರಾಟ ಈಗ ನಿರಂತರ ಆಗಿರುತ್ತದೆ. ಕೆಲ ಜಿಹಾದಿ ಮನಸ್ಥಿತಿ ಇರುವ ಹಿನ್ನೆಲೆ ಇಷ್ಟು ಬಂದೋಬಸ್ತ್ ಮಾಡಬೇಕಾಗುತ್ತದೆ. ರಾಘವ ಚೈತನ್ಯರ ಇತಿಹಾಸ ತೆಗೆದು ನ್ಯಾಯಾಲಯದಲ್ಲಿ ಸಲ್ಲಿಸಿ ದೇವಾಲಯ ನಿರ್ಮಾಣ ಮಾಡಲು ಅನುಮತಿಗೆ ಹೋರಾಟ ನಡೆಸುತ್ತೇವೆ ಎಂದರು. ಇದನ್ನೂ ಓದಿ: Congress 1st Lok Sabha List: ಮತ್ತೆ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗಿಳಿದ ರಾಗಾ!

    ಇತ್ತ ಮುಸ್ಲಿಮರಿಗೂ ಸಹ 12.30 ರಿಂದ 3.30ರವರೆಗೆ ಪ್ರಾರ್ಥನೆಗೆ ಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಅಹಿತಕರ ಘಟನೆ ನಡೆಯದಂತೆ ದರ್ಗಾದ ಸುತ್ತಲೂ 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ 12 ಮಂದಿ ಮುಸ್ಲಿಮರು ಲಾಡ್ಲೆ ಮಶಾಕ್ ದರ್ಗಾದಲ್ಲಿ ಪ್ರಾರ್ಥನೆ ಮುಗಿಸಿ ವಾಪಸ್ ಆಗಿದ್ದಾರೆ. ಪ್ರಾರ್ಥನೆ ಬಳಿಕ ದರ್ಗಾ ಕಮಿಟಿಯ ಅಧ್ಯಕ್ಷ ಮೋಯಿಜ್ ಅನ್ಸರಿ, ಮೊಹಮದ್ ಅಫಜಲ್ ಅನ್ಸಾರಿ ಪ್ರತಿಕ್ರಿಯಿಸಿ, ನಮಗೆ ಹಾಗೂ ಹಿಂದೂಗಳಿಗೆ 15 ಜನರಂತೆ ಪ್ರಾರ್ಥನೆ ಹಾಗೂ ಪೂಜೆ ಕೋರ್ಟ್ ಆದೇಶ ನೀಡಿತ್ತು. ಅದರಂತೆ ನಾವು ಇಂದು 12 ಮಂದಿ ಪ್ರಾರ್ಥನೆ ಮಾಡಿ ವಾಪಸ್ ಬಂದಿದ್ದೇವೆ. ನಾವು ಆಳಂದನಲ್ಲಿ ಹಿಂದೂ-ಮುಸ್ಲಿಮರು ಎಲ್ಲರೂ ಅಣ್ಣ-ತಮ್ಮರ ಹಾಗೆ ಇದ್ದೇವೆ. ಆದರೆ ಕೆಲವರ ರಾಜಕೀಯದಿಂದ ಗಲಾಟೆ ಆಗಿ ಇವಾಗ ಪೊಲೀಸ್ ಭದ್ರತೆ ನೀಡಬೇಕಾಗಿದೆ ಎಂದರು.

    ನಾವು ಎಲ್ಲರು ಒಂದಾಗೆ ಇದ್ದೇವೆ. ಮತ್ತೆ ಒಟ್ಟಿಗೆ ಇರುತ್ತೇವೆ. ಆದರೆ ಇವಾಗ ಚುನಾವಣೆ ಬರ್ತಿದೆ, ಹಾಗಾಗಿ ಇಲ್ಲದೊಂದು ಸಮಸ್ಯೆ ಕ್ರಿಯೇಟ್ ಮಾಡ್ತಾರೆ. ಆದರೆ ಆಳಂದನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

  • ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್‌ ಸ್ಫೋಟ- 28 ಮಂದಿ ಸಾವು, 150 ಮಂದಿಗೆ ಗಾಯ

    ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್‌ ಸ್ಫೋಟ- 28 ಮಂದಿ ಸಾವು, 150 ಮಂದಿಗೆ ಗಾಯ

    ಇಸ್ಲಾಮಾಬಾದ್: ಮಸೀದಿಯೊಂದರಲ್ಲಿ (Mosque) ನಡೆದ ಆತ್ಮಾಹುತಿ ದಾಳಿಯಿಂದಾಗಿ ಕನಿಷ್ಠ 28 ಜನ ಸಾವನ್ನಪ್ಪಿದ್ದು, 150 ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ (Pakistan) ಪೇಶಾವರದಲ್ಲಿ (Peshawar) ನಡೆದಿದೆ.

    ಜುಹರ್ ಪ್ರಾರ್ಥನೆಯ ನಂತರ ಅಫ್ಘಾನಿಸ್ತಾನದ ಗಡಿಗೆ ಸಮೀಪವಿರುವ ವಾಯುವ್ಯ ನಗರದಲ್ಲಿ ಪೇಶಾವರದ ಪೊಲೀಸ್ ಹೆಡ್ ಕ್ವಾಟ್ರಸ್ ಬಳಿ ಈ ಘಟನೆ ನಡೆದಿದೆ. ಸ್ಫೋಟದ ರಭಸಕ್ಕೆ ಮಸೀದಿಯ ಒಂದು ಬದಿ ಕುಸಿದಿದೆ.

    ವ್ಯಕ್ತಿಯೊಬ್ಬ ಪ್ರಾರ್ಥನೆಯ ಸಮಯದಲ್ಲಿ ಮಸೀದಿಯೊಳಗೆ ಆತ್ಮಾಹುತಿ ದಾಳಿ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆತ ಪ್ರಾರ್ಥನೆಯ ಸಮಯದಲ್ಲಿ ಮೊದಲ ಸಾಲಿನಲ್ಲಿ ಇದ್ದನು. ಅವನು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ ಎಂದು ಭದ್ರತಾ ಇಲಾಖೆ ತಿಳಿಸಿದೆ.

    ಘಟನೆ ವೇಳೆ ಗಾಯಗೊಂಡವರನ್ನು ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರೆಲ್ಲರೂ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಲ್ಲಿ ಕೆಲವು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ತುಮಕೂರು ನಗರದ ಮುಂದಿನ ಶಾಸಕ ನಾನೇ: ಪ್ರಚಾರ ಆರಂಭಿಸಿದ ಆಕಾಂಕ್ಷಿ

    ಸ್ಥಳದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಲಾಗಿದ್ದು, ಆ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದನ್ನೂ ಓದಿ: ಬಿಜೆಪಿಗೆ ಸಿದ್ದರಾಮಯ್ಯ, ಖರ್ಗೆ, ಡಿಕೆಶಿ ಮಕ್ಕಳು ಬರ್ತಾರೆ: ಕಟೀಲ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸರ್ಕಾರಿ ಶಾಲೆಯಲ್ಲಿ ಉರ್ದು ಪ್ರಾರ್ಥನೆ – ಪ್ರಾಂಶುಪಾಲ ಅಮಾನತು

    ಸರ್ಕಾರಿ ಶಾಲೆಯಲ್ಲಿ ಉರ್ದು ಪ್ರಾರ್ಥನೆ – ಪ್ರಾಂಶುಪಾಲ ಅಮಾನತು

    ಲಕ್ನೋ: ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳಿಂದ ಉರ್ದು ಪ್ರಾರ್ಥನೆಯನ್ನು (Urdu Prayer) ಹಾಡಿಸಿದ್ದಕ್ಕೆ ಶಿಕ್ಷಣ ಇಲಾಖೆ ಪ್ರಾಂಶುಪಾಲರನ್ನು (Principal) ಅಮಾನತುಗೊಳಿಸಿರುವ (Suspend) ಘಟನೆ ಉತ್ತರ ಪ್ರದೇಶದ (Uttar Pradesh) ಬರೇಲಿಯಲ್ಲಿ (Bareilly) ನಡೆದಿದೆ.

    ವರದಿಗಳ ಪ್ರಕಾರ ಶಾಲಾ ಮಕ್ಕಳಿಗೆ ಬೆಳಗ್ಗೆ ಪ್ರಾರ್ಥನೆ ವೇಳೆ ಜನಪ್ರಿಯ ಉರ್ದು ಭಾಷೆಯ ಗೀತೆ ‘ಲಬ್ ಪೆ ಆತಿ ಹೆ ದುವಾ ಬನ್‌ಕೆ ತಮನ್ನಾ ಮೇರಿ’ ಹಾಡನ್ನು ಹಾಡಿಸಲಾಗಿದೆ. ಇದರ ವೀಡಿಯೋ ವ್ಯಾಪಕವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಉರ್ದು ಗೀತೆಯನ್ನು ಹಾಡಿಸಿದ್ದಕ್ಕಾಗಿ ಬಲಪಂಥೀಯ ಗುಂಪುಗಳು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದೆ.

    ಪೊಲೀಸರು ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದರೂ ಯಾರನ್ನೂ ಬಂಧಿಸಿಲ್ಲ. ಆದರೆ ಶಿಕ್ಷಣ ಇಲಾಖೆ ಶಾಲೆಯ ಪ್ರಾಂಶುಪಾಲನನ್ನು ಅಮಾನತುಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮಕ್ಕಳಿಂದ ಹಾಡಿಸಲಾದ ಪ್ರಾರ್ಥನೆ ಸರ್ಕಾರಿ ಶಾಲೆಗಳ ದೈನಂದಿನ ಪ್ರಾರ್ಥನಾ ವೇಳಾಪಟ್ಟಿಯಲ್ಲಿ ಇಲ್ಲ. ಬದಲಿಗೆ ಅದು ಒಂದು ಧರ್ಮಕ್ಕೆ ಸಂಬಂಧಿಸಿರುವುದಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಮಾಸ್ಕ್‌ ಹಾಕಿದ್ರೆ ಮಾತ್ರ ಮೆಟ್ರೋ ಪ್ರವೇಶಕ್ಕೆ ಅನುಮತಿ

    ವಿವಾದ ಉಂಟು ಮಾಡಿರುವ ಉರ್ದು ಗೀತೆಯನ್ನು 1902ರಲ್ಲಿ ಉರ್ದು ಕವಿ ಮೊಹಮ್ಮದ್ ಇಕ್ಬಾಲ್ ಬರೆದಿದ್ದಾರೆ. ಅವರು ಪ್ರಸಿದ್ಧ ‘ಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ತಾನ್ ಹಮಾರಾ’ ಹಾಡನ್ನೂ ಬರೆದವರಾಗಿದ್ದಾರೆ.

    2019ರಲ್ಲೂ ಫಿಲಿಭಿತ್ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಂದ ಉರ್ದು ಹಾಡನ್ನು ಹಾಡಿಸಿದ್ದಕ್ಕಾಗಿ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಲಾಗಿತ್ತು. ವಿಶ್ವ ಹಿಂದೂ ಪರಿಷತ್ ಸ್ಥಳೀಯ ಘಟಕದ ದೂರಿನ ಮೇರೆಗೆ ಅದಿಕಾರಿಗಳು ಕ್ರಮ ಕೈಗೊಂಡಿದ್ದರು. ಇದನ್ನೂ ಓದಿ: ಚೀನಾದಲ್ಲಿ ಪ್ರತಿ ದಿನ 10 ಲಕ್ಷ ಕೇಸ್, 5000 ಸೋಂಕಿತರ ಸಾವು

    Live Tv
    [brid partner=56869869 player=32851 video=960834 autoplay=true]

  • ಶಾಲಾ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಬಾಲಕಿ ಸಾವು!

    ಶಾಲಾ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಬಾಲಕಿ ಸಾವು!

    ಭುವನೇಶ್ವರ: ಶಾಲಾ ಪ್ರಾರ್ಥನೆ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ನಡೆದಿದೆ.

    ಧಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ಸಾರ್‍ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಬೆಳಗಿನ ಪ್ರಾರ್ಥನೆ ವೇಳೆ ಆಕೆ ಹಠಾತ್ತನೆ ಕುಸಿದು ಬಿದ್ದು ಪ್ರಜ್ಞಾಹೀನಳಾಗಿದ್ದಳು ಎಂದು ಆಕೆಯ ಸಹಪಾಠಿಗಳು ಹೇಳಿದ್ದಾರೆ.  ಇದನ್ನೂ ಓದಿ: 5 ವರ್ಷದ ಬಳಿಕ ಮತ್ತೆ ದಾಖಲೆಯತ್ತ ಬೆಂಗಳೂರು ಮಹಾಮಳೆ!

    ಬಾಲಕಿಯನ್ನು ತಕ್ಷಣ ತರಗತಿಯೊಳಗೆ ಕರೆದೊಯ್ದು ಆಕೆಯನ್ನು ಎಚ್ಚರಗೊಳಿಸಲು ಶಿಕ್ಷಕರು ಸಾಕಷ್ಟು ಪ್ರಯತ್ನಿಸಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಹಾಗಾಗಿ ಮೊದಲಿಗೆ ಆಕೆಯನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು, ಬಳಿಕ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಆದರೆ ಅಷ್ಟೊತ್ತಿಗಾಗಲೇ ಆಕೆ ಮೃತಪಟ್ಟಿರುವುದಾಗಿ ಶಿಕ್ಷಕರೊಬ್ಬರು ತಿಳಿಸಿದ್ದಾರೆ.

    ಮರಣೋತ್ತರ ಪರೀಕ್ಷೆ ಬಳಿಕ ಬಾಲಕಿಯ ಸಾವಿಗೆ ಕಾರಣ ಏನು ಅಂತ ತಿಳಿಯಲಿದೆ ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯ ಸಂತೋಷ್ ಜೆನಾ ಹೇಳಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ, ಹಾಸನಾಂಬೆ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ಅಪಘಾತ – ಮಕ್ಕಳು ಸೇರಿ 9 ಮಂದಿ ದುರ್ಮರಣ

    Live Tv
    [brid partner=56869869 player=32851 video=960834 autoplay=true]

  • ಶ್ರೀಕೃಷ್ಣನ ಜನ್ಮಸ್ಥಳದಲ್ಲಿರೋ ಮಸೀದಿಯಲ್ಲಿ ಮುಸ್ಲಿಮರ ಪ್ರಾರ್ಥನೆಗೆ ನಿರ್ಬಂಧ ವಿಧಿಸಿ: ಕೋರ್ಟ್‌ಗೆ ಮನವಿ

    ಶ್ರೀಕೃಷ್ಣನ ಜನ್ಮಸ್ಥಳದಲ್ಲಿರೋ ಮಸೀದಿಯಲ್ಲಿ ಮುಸ್ಲಿಮರ ಪ್ರಾರ್ಥನೆಗೆ ನಿರ್ಬಂಧ ವಿಧಿಸಿ: ಕೋರ್ಟ್‌ಗೆ ಮನವಿ

    ಉತ್ತರಪ್ರದೇಶ: ದೇಶದಲ್ಲಿ ಧರ್ಮ ದಂಗಲ್‌ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಹಿಜಬ್‌, ಹಲಾಲ್‌ ವಿರೋಧಿ ಅಭಿಯಾನದಿಂದ ಶುರುವಾದ ಸಂಘರ್ಷ ಈಗ ಧಾರ್ಮಿಕ ಕಟ್ಟಡಗಳ ವ್ಯಾಪ್ತಿಗೆ ಬಂದು ನಿಂತಿದೆ. ಭಾರತದ ಐತಿಹಾಸಿಕ ದೇವಾಲಯಗಳನ್ನು ನಾಶಗೊಳಿಸಿ ಅದರ ಮೇಲೆ ಮಸೀದಿ ನಿರ್ಮಿಸಲಾಗಿದೆ ಎಂದು ಅನೇಕ ಕಡೆಗಳಲ್ಲಿ ಹಿಂದೂಪರ ಸಂಘಟನೆಗಳು ಕೋರ್ಟ್‌ ಮೆಟ್ಟಿಲೇರಿವೆ. ಈಗ ಅಂತಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಭಗವಾನ್ ಶ್ರೀಕೃಷ್ಣನ ಜನ್ಮಸ್ಥಳ ಎಂದು ನಂಬಲಾದ ಸ್ಥಳದಲ್ಲಿ ಇರುವ ಶಾಹಿ ಈದ್ಗಾ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿ ವಕೀಲರು ಮತ್ತು ಕಾನೂನು ವಿದ್ಯಾರ್ಥಿಗಳ ಗುಂಪು ಮಥುರಾದ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದೆ. ಇದನ್ನೂ ಓದಿ: ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ

    ಕತ್ರಾ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಆವರಣದಲ್ಲಿ ದೇವರ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಮುಸ್ಲಿಮರು ಪ್ರತಿಪಾದಿಸಿದ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ವಿವಿಧ ಹಿಂದೂ ಗುಂಪುಗಳು ಮಥುರಾ ನ್ಯಾಯಾಲಯಗಳಲ್ಲಿ ಈ ಹಿಂದೆ ಹತ್ತು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು.

    ಹಿಂದೂ ಸಮುದಾಯದ ಬಹುಪಾಲು ಜನರು ಮಸೀದಿ ಇರುವ ಸ್ಥಳದಲ್ಲಿ ಶ್ರೀಕೃಷ್ಣ ಜನಿಸಿದ್ದರೆಂದು ನಂಬುತ್ತಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಅರ್ಜಿದಾರರಲ್ಲಿ ಒಬ್ಬರಾದ ವಕೀಲ ಶೈಲೇಂದ್ರ ಸಿಂಗ್, ಒಂದು ಕಾಲದಲ್ಲಿ ದೇವಾಲಯವಿದ್ದ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್‌

    ಹಿಂದೂ ದೇವಾಲಯದ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ. ಇದರ ಸಂರಚನೆ ದೇವಾಲಯವನ್ನೇ ಹೋಲುತ್ತದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

    ಯಾವುದೇ ಧರ್ಮದ ಗುರುತು ಇಲ್ಲದ ವಿವಾದಾಸ್ಪದ ಭೂಮಿಯಲ್ಲಿ ಮಸೀದಿ ನಿರ್ಮಿಸಬೇಕು ಎಂದು ಹೇಳುವ ಕುರಾನ್‌ನ ಪೂರ್ವ ಷರತ್ತನ್ನು ಇಲ್ಲಿ ಅನುಸರಿಸಿಲ್ಲ ಎಂದು ವಕೀಲರು ಹೇಳಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಸಂಕಷ್ಟಕ್ಕೆ ಸಿಲುಕಿದ ರಾಮಾಯಣ ಖ್ಯಾತಿಯ ಹಿಂದೂ ದೇವಾಲಯ!

    ಅರ್ಜಿಯ ಮುಂದಿನ ವಿಚಾರಣೆ ಮೇ 25 ರಂದು ನಡೆಯಲಿದೆ ಎಂದು ಜಿಲ್ಲಾ ಸರ್ಕಾರಿ ವಕೀಲ (ಸಿವಿಲ್) ಸಂಜಯ್ ಗೌರ್ ತಿಳಿಸಿದ್ದಾರೆ.

  • ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿಷೇಧ – ಉಪವಿಭಾಗಾಧಿಕಾರಿ ಗೋಪಾಲಕೃಷ್ಣ

    ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿಷೇಧ – ಉಪವಿಭಾಗಾಧಿಕಾರಿ ಗೋಪಾಲಕೃಷ್ಣ

    ಹುಬ್ಬಳ್ಳಿ: ಕೋವಿಡ್ ಸೋಂಕು ಕಡಿಮೆಯಾದರು ಸಹ 3 ನೇ ಅಲೆ ತಡೆಗಟ್ಟುವ ದೃಷ್ಟಿಯಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕು ಹಾಗೂ ಈ ಬಾರಿ ಬಕ್ರಿದ್‍ಗೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿಷೇಧಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಹೇಳಿದ್ದಾರೆ.

    ಬಕ್ರಿದ್ ಹಬ್ಬದಂದು ಮಸೀದಿಗಳಲ್ಲಿ ಸ್ಯಾನಿಟೈಜಿಂಗ್ ಮಾಡಿ ಹಾಗೂ ಪ್ರಾರ್ಥಿಸುವಾಗ 6 ಅಡಿ ಅಂತರ ಕಾಪಾಡಿಕೊಂಡು ಸುಲಲಿತ ಮತ್ತು ಸುರಕ್ಷತೆಯಿಂದ ಆಚರಿಸಬೇಕು. ಹಬ್ಬದಂದು ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಒಂದು ಬಾರಿಗೆ 50 ಜನರಿಗೆ ಅವಕಾಶ ನೀಡಲಾಗಿದ್ದು, ನಂತರ ಮತ್ತೆ 50 ಜನರು ಪಾಳೆಯ ರೂಪದಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಆದರೆ ಈದ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಮಿನಿ ವಿಧಾನಸೌಧದ ತಹಶೀಲ್ದಾರ ಕಾರ್ಯಾಲಯದಲ್ಲಿ ಬಕ್ರೀದ್ ಹಬ್ಬದ ಕುರಿತು ಏರ್ಪಡಿಸಲಾಗಿದ್ದ, ಮುಸ್ಲಿಂ ಮುಖಂಡರ ಜೊತೆ ವೀಡಿಯೋ ಸಂವಾದದ ಮೂಲಕ ಅವರು ಮಾತದ ಅವರು, 60 ವಯಸ್ಸು ಮೇಲ್ಪಟ್ಟ ಹಾಗೂ 10 ವರ್ಷದ ಕೆಳಗಿನವರಿಗೆ ಮಸೀದಿಗಳಲ್ಲಿ ಪ್ರಾರ್ಥಿಸಲು ಅವಕಾಶವಿರುವುದಿಲ್ಲ. ಅವರು ಮನೆಯಲ್ಲಿಯೇ ಪ್ರಾರ್ಥಿಸಬೇಕು. ಮಸೀದಿಗೆ ಬರುವ ಮುನ್ನ ದೇಹದ ತಾಪಮಾನ ಪರೀಕ್ಷೆ ಮಾಡಿಸಿರಬೇಕು. ಹಸ್ತಲಾಘವ ಮತ್ತು ಆಲಿಂಗನ ಮಾಡುವುದು ನಿಷೇಧಿಸಲಾಗಿದೆ. ಆಸ್ಪತ್ರೆ, ಶಾಲಾ ಕಾಲೇಜು ಆವರಣ, ಆಟದ ಮೈದಾನ , ಪುಟ್‍ಪಾತ್ ಹಾಗೂ ಉದ್ಯಾನವನದ ಒಳಗಡೆ ಮತ್ತು ಹೊರಗಡೆ ಬಲಿದಾನ ಮಾಡುವುದನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.

    ಸಭೆಯಲ್ಲಿ ಕೋವಿಡ್ ನಿಯಮಗಳ ಪಾಲನೆ ಜೊತೆಗೆ ಈದ್ಗಾ ಮೈದಾನದಲ್ಲಿ 50 ಜನರಿಗೆ ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕು ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಉಪವಿಭಾಗಾಧಿಕಾರಿ ಸಾಮೂಹಿಕವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥಿಸುವುದನ್ನು ನಿಷೇಧಿಸಲಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸುತ್ತೇನೆ. ಸರ್ಕಾರ ಆದೇಶ ಪ್ರಕಾರ ರಾಜ್ಯದಾದ್ಯಂತ ಈದ್ಗಾ ಮೈದಾನದಲ್ಲಿ ಪಾರ್ಥನೆ ಸಲ್ಲಿಸಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.

    ಈ ಸಂದರ್ಭದಲ್ಲಿ ಶಹರ ತಹಶೀಲ್ದಾರ ಶಶಿಧರ ಮಾಡ್ಯಾಳ, ಅಂಜುಮನ್ ಸಂಸ್ಥೆ ಅಧ್ಯಕ್ಷ ಯೂಸಫ್ ಸವಣೂರು, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರು ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ನನ್ನ ಬಳಿಯಲ್ಲಿದ್ದ ಆಸ್ತಿ ದರ್ಶನ್ ಕೇಳಿದ್ದು ನಿಜ, ಕೊಡಲ್ಲ ಅಂದಿದ್ದೆ: ನಿರ್ಮಾಪಕ ಉಮಾಪತಿ

  • ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ – 12 ಮಂದಿ ಬಲಿ

    ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ – 12 ಮಂದಿ ಬಲಿ

    ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಹೊರವಲಯದಲ್ಲಿರುವ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಬಗ್ಗೆ ಮಾತನಾಡಿದ ಕಾಬೂಲ್ ಪೊಲೀಸರ ವಕ್ತಾರ ಫರ್ಡಾವ್ಸ್ ಫ್ರಮುರ್ಜ್, ಕಾಬೂಲ್ ಪ್ರಾಂತ್ಯದ ಶಕರ್ ದಾರಾ ಜಿಲ್ಲಿಯ ಮಸೀದಿಯೊಳಗೆ ಸ್ಫೋಟ ಸಂಭವಿಸಿದ್ದು, ಘಟನೆ ವೇಳೆ 15 ಮಂದಿ ಗಾಯಗೊಂಡಿದ್ದಾರೆ ಮತ್ತು ಮಸೀದಿಯ ಇಮಾಮ್ ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

    ಗುರುವಾರ ತಾಲಿಬಾನ್ ಉಗ್ರರು ಮತ್ತು ಸರ್ಕಾರಿ ಮಿಲಿಟರಿ ಸೈನಿಕರ ನಡುವೆ ಈದ್ ಅಲ್-ಫಿತರ್ ಹಿನ್ನೆಲೆಯಲ್ಲಿ ಶಾಂತಿ ಮಾತುಕತೆ ನಡೆದು ತಾತ್ಕಾಲಿಕ ಒಪ್ಪಂದ ನಡೆದಿತ್ತು. ಆದರೆ ಮಾತುಕತೆಯ ಮರು ದಿನವೇ ಸ್ಫೋಟ ಸಂಭವಿಸಿದೆ.

  • ವರ್ಷದ ಬಳಿಕ ಬಾಗಿಲು ತೆರೆದ ತಬ್ಲಿಘಿ ಜಮಾತ್ ಮರ್ಕಜ್ – ಭಾನುವಾರ 50 ಜನರಿಂದ ಪ್ರಾರ್ಥನೆ

    ವರ್ಷದ ಬಳಿಕ ಬಾಗಿಲು ತೆರೆದ ತಬ್ಲಿಘಿ ಜಮಾತ್ ಮರ್ಕಜ್ – ಭಾನುವಾರ 50 ಜನರಿಂದ ಪ್ರಾರ್ಥನೆ

    ನವದೆಹಲಿ: 2020ರಲ್ಲಿ ಕೊರೊನಾ ವಿಷಯವಾಗಿ ಸುದ್ದಿಯಾಗಿದ್ದ ತಬ್ಲಿಘಿ ಜಮಾತ್ ಮರ್ಕಜ್ ವರ್ಷದ ಬಳಿಕ ಬಾಗಿಲು ತೆರೆದಿದೆ. ದೆಹಲಿ ಹೈಕೋರ್ಟ್ ಆದೇಶದ ಬಳಿಕ ಮರ್ಕಜ್ ತೆರೆಯಲಾಗಿದ್ದು, ಶಬೆ ಬರಾತ್ ಹಿನ್ನೆಲೆ ಭಾನುವಾರ 50 ಜನರು ಪ್ರಾರ್ಥನೆ ಸಲ್ಲಿಸಿದ್ದಾರೆ.

    ಪ್ರಾರ್ಥನೆ ಸಲ್ಲಿಸುವ 50 ಜನರ ಹೆಸರು ಮತ್ತು ವಿಳಾಸವನ್ನ ಸ್ಥಳೀಯ ಪೊಲೀಸ್ ಠಾಣೆಗೆ ನೀಡಲಾಗಿತ್ತು. ಪ್ರಾರ್ಥನೆ ವೇಳೆ ಮರ್ಕಜ್ ಹೊರ ಭಾಗದಲ್ಲಿ ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಹೈಕೋರ್ಟ್ ಆದೇಶದ ಪ್ರಕಾರ ಸ್ಥಳೀಯ ಪೊಲೀಸರ ಅನುಮತಿ ಪಡೆದುಕೊಳ್ಳಲಾಗಿತ್ತು. ಪ್ರಾರ್ಥನೆ ವೇಳೆ ಕೊರೊನಾ ನಿಯಮಗಳನ್ನ ಪಾಲಿಸುವಂತೆ ಜಮಾತ್ ಗೆ ಸೂಚಿಸಲಾಗಿತ್ತು.

    ಶಬೆ ಬರಾತ್ ಮತ್ತು ರಂಜಾನ್ ಹಿನ್ನೆಲೆ ಮರ್ಕಜ್ ತೆರೆಯಲು ಅನುಮತಿ ನೀಡಬೇಕೆಂದು ದೆಹಲಿಯ ವಕ್ಫ್ ಬೋರ್ಡ್ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿತ್ತು. ಶಬೆ ಬಾರತ್ ದಿನದಂದು ವಿಶೇಷ ಪ್ರಾರ್ಥನೆ ಮತ್ತು ನಮಾಜ್ ಮಾಡಲಾಗುತ್ತದೆ. ಆದ್ದರಿಂದ ಪವಿತ್ರ ರಂಜಾನ್ ಆಚರಣೆಗೆ ಅವಕಾಶ ನೀಡಬೇಕೆಂದು ವಕ್ಫ್ ಬೋರ್ಡ್ ಮನವಿ ಮಾಡಿಕೊಂಡಿತ್ತು.

    ವಕ್ಫ್ ಬೋರ್ಡ್ ಮನವಿಗೆ ಸ್ಪಂದಿಸಿದ ನ್ಯಾಯಾಲಯ ಮರ್ಕಕ್ ತೆರೆಯಲು ಷರತ್ತು ಬದ್ಧ ಅನುಮತಿ ನೀಡಿತ್ತು. ಮರ್ಕಜ್ ತೆರೆಯೋದನ್ನ ಸ್ಥಳೀಯ ಪೊಲೀಸರ ಗಮನಕ್ಕೆ ತರಬೇಕು. ಮರ್ಕಜ್ ನಲ್ಲಿ ಸದ್ಯ ಕೇವಲ 50 ಜನರು ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 12ಕ್ಕೆ ನಡೆಯಲಿದೆ.

  • ಪಾರ್ಥನೆ ವೇಳೆ ಕದ್ದು ಮುಚ್ಚಿ ಲಾಲಿಪಾಪ್ ಸವಿದ ಬಾಲಕ – ನೆಟ್ಟಿಗರ ಮನಗೆದ್ದ ವೀಡಿಯೋ

    ಪಾರ್ಥನೆ ವೇಳೆ ಕದ್ದು ಮುಚ್ಚಿ ಲಾಲಿಪಾಪ್ ಸವಿದ ಬಾಲಕ – ನೆಟ್ಟಿಗರ ಮನಗೆದ್ದ ವೀಡಿಯೋ

    ಮುದ್ದಾದ ಪುಟ್ಟ ಬಾಲಕನೋರ್ವ ಪ್ರಾರ್ಥನೆ ವೇಳೆ ಲಾಲಿಪಾಪ್‍ನನ್ನು ಕದ್ದು ಚೀಪುವ ವೀಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ.

    ಸಾಮಾನ್ಯವಾಗಿ ಮಕ್ಕಳು ಮಾಡುವ ಚೇಷ್ಟೆ ಎಷ್ಟೋ ಜನರಿಗೆ ಕಿರಿಕಿರಿಯುಂಟು ಮಾಡುತ್ತದೆ. ಆದರೆ ವೀಡಿಯೋವೊಂದರಲ್ಲಿ ಬಾಲಕ ಮಾಡಿರುವ ತುಂಟ ಕೆಲಸ ಎಲ್ಲರ ಮನ ಗೆದ್ದಿದೆ. 30 ಸೆಕೆಂಡ್ ಇರುವ ಈ ವೀಡಿಯೋದಲ್ಲಿ ಬಾಲಕ ಶಾಲೆಯ ಆವರಣದಲ್ಲಿ ಇತರ ಮಕ್ಕಳೊಂದಿಗೆ ಕಣ್ಣು ಮುಚ್ಚಿ, ಎರಡು ಕೈಗಳನ್ನು ಜೋಡಿಸಿ ಪ್ರಾರ್ಥನೆ ಮಾಡಲು ನಿಂತಿರುತ್ತಾನೆ. ಬಾಲಕನನ್ನು ನೋಡಿದವರು ಪ್ರಾರ್ಥನಾ ಗೀತೆ ಹಾಡುತ್ತಾ ಪ್ರಾರ್ಥನೆ ಮಾಡುತ್ತಿದ್ದಾನೆ ಎಂದು ತಿಳಿದುಕೊಳ್ಳಬೇಕು ಹಾಗೇ ನಿಂತಿರುತ್ತಾನೆ.

    ಆದರೆ ಕ್ಯಾಮೆರಾದಲ್ಲಿ ಬಾಲಕ ಲಾಲಿಪಾಪ್ ತಿನ್ನುತ್ತಿರುವುದು ಸೆರೆಯಾಗಿದ್ದು, ಬಾಲಕ ತನ್ನ ಅಂಗೈಗಳ ನಡುವೆ ಲಾಲಿಪಾಪ್‍ನನ್ನು ಬಚ್ಚಿಟ್ಟುಕೊಂಡು ಕದ್ದುಮುಚ್ಚಿಕೊಂಡು ಚೀಪುತ್ತಿರುತ್ತಾನೆ. ಆದರೆ ನಿಜವಾಗಿಯೂ ಪ್ರಾರ್ಥನೆ ಮಾಡುತ್ತಿರುವಂತೆ ನಟಿಸುತ್ತಿರುತ್ತಾನೆ.

    ಸದ್ಯ ಈ ಕ್ಯೂಟ್ ವೀಡಿಯೋವನ್ನು ಎಎಸ್ ಅಧಿಕಾರಿ ಅವನಿಶ್ ಶರಣ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ನಿಮಗೂ ಸಂಬಂಧಿಸಿದೆಯೇ, ಇಲ್ಲವೇ? ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.

    ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ 29.5 ಸಾವಿರ ವೆವ್ಸ್ ಪಡೆದುಕೊಂಡಿದ್ದು, ಬಾಲಕನ ಮುಗ್ದತೆ ಕುರಿತಂತೆ ಕೆಲವರು ಕಮೆಂಟ್ ಮಾಡುತ್ತಿದ್ದರೆ ಮತ್ತೆ ಕೆಲವರು ತಮ್ಮ ಬಾಲ್ಯದ ದಿನಗಳನ್ನು ನೆನಪಾಗುತ್ತಿದೆ ಎಂದು ಕಮೆಂಟ್ ಮಾಡುತ್ತಿದ್ದಾರೆ.

  • ಶಾಸಕ ಬಾಲಕೃಷ್ಣ ಆರೋಗ್ಯಕ್ಕಾಗಿ ದೇವರ ಮೊರೆ ಹೋದ ಅಭಿಮಾನಿಗಳು

    ಶಾಸಕ ಬಾಲಕೃಷ್ಣ ಆರೋಗ್ಯಕ್ಕಾಗಿ ದೇವರ ಮೊರೆ ಹೋದ ಅಭಿಮಾನಿಗಳು

    ಹಾಸನ: ಶ್ರವಣಬೆಳಗೂಳ ಕ್ಷೇತ್ರದ ಶಾಸಕ ಬಾಲಕೃಷ್ಣ ಅನಾರೋಗ್ಯಕ್ಕೀಡಾಗಿದ್ದು, ಅವರ ಆರೋಗ್ಯ ವೃದ್ಧಿಗಾಗಿ ಶ್ರವಣಬೆಳಗೊಳದ ಬನ್ನಿಮರದ ಆಂಜನೇಯ ಸ್ವಾಮಿಯವರ ಸನ್ನಿಧಿಯಲ್ಲಿ ಅಭಿಮಾನಿಗಳು, ಬೆಂಬಲಿಗರು ಪೂಜೆ ಸಲ್ಲಿಸಿದ್ದಾರೆ.

    ಕಳೆದ 8 ದಿನದ ಹಿಂದೆ ವಿಪರೀತ ಕೆಮ್ಮಿನಿಂದ ಶಾಸಕ ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಗ್ಯ ಚೇತರಿಕೆ ಆಗಲೆಂದು ಶ್ರವಣಬೆಳಗೊಳ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜೆಡಿಎಸ್ ಕಾರ್ಯಕರ್ತರು ಶಾಸಕರ ಹೆಸರಿನಲ್ಲಿ ಪೂಜೆ ಮಾಡಿಸಿದರು. ಶಾಸಕರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

    ಈ ವೇಳೆ ತಾಲೂಕು ಜೆಡಿಎಸ್ ಅಧ್ಯಕ್ಷರಾದ ಪರಮ ದೇವರಾಜೇಗೌಡರು, ಹೊಸಹಳ್ಳಿ ರಾಮೇಗೌಡರು, ಪರಮ ಕೃಷ್ಣೇಗೌಡರು, ಸಿ. ಎನ್ ಬಾಲಕೃಷ್ಣ ಬ್ರಿಗೇಡ್ ಅಧ್ಯಕ್ಷರು ರೀತೇಶ್ ಸಾಗರ ಜೆಡಿಎಸ್ ಮುಖಂಡರು ಮತ್ತು ಜೆಡಿಎಸ್ ಕಾರ್ಯಕರ್ತರು ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಈ ಹಿಂದೆ ಟ್ವೀಟ್ ಮಾಡಿದ್ದ ಬಾಲಣ್ಣ, ನಾನು ಅನಾರೋಗ್ಯಕ್ಕೆ ತುತ್ತಾದ ಕಾರಣ ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕ್ಷೇತ್ರದ ಜನರಿಗೆ ಯಾವುದೇ ರೀತಿಯ ತೊಂದರೆಯಾದರೆ ಅದಕ್ಕೆ ಸ್ಪಂದಿಸಲು ಅಧಿಕಾರಿಗಳಿಗೆ ಮತ್ತು ನನ್ನ ಆಪ್ತ ಸಹಾಯಕರಿಗೆ ಸೂಚಿಸಿದ್ದೇನೆ. ಈ ವರ್ಷ ದೀಪಾವಳಿ ಹಬ್ಬವನ್ನು ಕೂಡ ನಿಮ್ಮ ಜೊತೆ ಆಚರಣೆ ಮಾಡಲು ಆಗುತ್ತಿಲ್ಲ. ಈ ವಿಚಾರಕ್ಕೆ ಬೇಸರವಿದೆ ಎಂದಿದ್ದರು.