Tag: ಪ್ರಿಯಾಂಕಾ ಚೋಪ್ರಾ

  • ಬೀಚ್‌ನಲ್ಲಿ ಡೀಪ್‌ ಕಿಸ್‌ – ಪತಿ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಿಯಾಂಕಾ

    ಬೀಚ್‌ನಲ್ಲಿ ಡೀಪ್‌ ಕಿಸ್‌ – ಪತಿ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಿಯಾಂಕಾ

    ಬಾಲಿವುಡ್ ನ ಹೆಸರಾಂತ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಇಂದು ತಮ್ಮ 43ನೇ ಹುಟ್ಟುಹಬ್ಬವನ್ನ ವಿದೇಶದಲ್ಲಿ ಆಚರಿಸಿಕೊಂಡಿದ್ದಾರೆ. ಹುಟ್ಟು ಹಬ್ಬವನ್ನು (Priyanka Chopra Birthday) ಆಚರಿಸಿಕೊಳ್ಳುವುದಕ್ಕಾಗಿಯೇ ಅವರು ಪತಿ ಮತ್ತು ಮಗಳ ಜೊತೆ ವಿದೇಶ ಪ್ರಯಾಣ ಬೆಳೆಸಿದ್ದರು. ಸಮುದ್ರ ತೀರದಲ್ಲಿ ಬಿಂದಾಸ್ ಆಗಿ ಕಳೆದಿದ್ದಾರೆ.

    ಪತಿ ಜೊತೆ ಬಿಂದಾಸ್ ಆಗಿ ಕಳೆದಿರುವ ಕ್ಷಣಗಳನ್ನು ಅವರು ವಿಡಿಯೋ ರೂಪದಲ್ಲಿ ಪ್ರಕಟಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ (Social Media) ಪೋಸ್ಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಓಡಿ ಬಂದು ಪತಿಯನ್ನು ಅಪ್ಪಿಕೊಳ್ಳುವುದು, ತುಟಿ ತುಟಿ ಸೇರಿಸಿ ಚುಂಬಿಸುವುದು, ಮಗಳ ಜೊತೆ ಸಮಯ ಕಳೆಯುವುದು ಮತ್ತು ಸಮುದ್ರದಲ್ಲಿ ಡ್ರೈವ್ ಮಾಡಿರುವ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪಾರ್ವತಮ್ಮ ರಾಜ್‌ಕುಮಾರ್ ಕನಸಿನ ಕೂಸಿಗೆ 50 ವರ್ಷ

    ಪ್ರತಿ ವರ್ಷವೂ ಅವರು ತಮ್ಮ ಹುಟ್ಟು ಹಬ್ಬದ ವೇಳೆ ಬೇರೆ ಬೇರೆ ದೇಶಗಳನ್ನು ಸುತ್ತುತ್ತಾ ಇರುತ್ತಾರೆ. ಈ ಬಾರಿಯೂ ಅದನ್ನೇ ಮುಂದುವರೆಸಿದ್ದಾರೆ. ಆ ಕ್ಷಣಗಳನ್ನು ಒಟ್ಟು ಮಾಡಿ, ಫ್ಯಾನ್ಸ್ ಮುಂದೆ ಇಟ್ಟಿದ್ದಾರೆ. ಅಭಿಮಾನಿಗಳು ನೆಚ್ಚಿನ ನಟಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಸಂಜಯ್‌ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಸಫಾರಿಗೆ ಪ್ಲ್ಯಾನ್‌ – ಪ್ರವಾಸಿಗರಿಗೆ ಸಿಗಲಿದೆ ಥ್ರಿಲ್ಲಿಂಗ್‌ ಅನುಭವ

  • ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಬಾಲಿವುಡ್ ಸ್ಟಾರ್ಸ್‌

    ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಬಾಲಿವುಡ್ ಸ್ಟಾರ್ಸ್‌

    ಹಲ್ಗಾಮ್‌ನಲ್ಲಿ (Pahalgam Terrorist Attack) ನಡೆದಿರುವ ವಿಶ್ವಾಸಘಾತುಕ ಕೃತ್ಯ ಮತ್ತು ಅಮಾನವೀಯ ಹಿಂಸಾಚಾರದ ಬಗ್ಗೆ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ಪದಗಳು ಸಾಲದು ಎಂದು ಶಾರುಖ್ ಖಾನ್ ಖಂಡಿಸಿದ್ದಾರೆ. ಉಗ್ರರ ಅಟ್ಟಹಾಸದ ಕುರಿತು ಶಾರುಖ್, ಸಲ್ಮಾನ್ ಖಾನ್ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಹಲ್ಗಾಮ್‌ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ಪದಗಳಿಲ್ಲ. ದುಃಖದಲ್ಲಿರುವ ಕುಟುಂಬಗಳಿಗೆ ದೇವರಲ್ಲಿ ಪ್ರಾರ್ಥಿಸೋಣ. ಈ ಹೇಯ ಕೃತ್ಯದ ವಿರುದ್ಧ ನಾವು ಒಗ್ಗಟ್ಟಾಗಿ, ಬಲವಾಗಿ ನಿಂತು ಈ ಕೃತ್ಯ ಮಾಡಿದವರಿಗೆ ತಕ್ಕ ಶಾಸ್ತಿಯಾಗಲಿ ಎಂದು ಹಾರೈಸೋಣ ಎಂದು ಶಾರುಖ್ ಖಾನ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

    ಭೂಮಿಯ ಮೇಲಿನ ಸ್ವರ್ಗವಾದ ಕಾಶ್ಮೀರ ನರಕವಾಗಿ ಬದಲಾಗುತ್ತಿದೆ. ಅಮಾಯಕ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ. ನನ್ನ ಹೃದಯ ಅವರ ಕುಟುಂಬಗಳಿಗಾಗಿ ಮಿಡಿಯುತ್ತದೆ. ಒಬ್ಬ ಅಮಾಯಕ ವ್ಯಕ್ತಿಯನ್ನು ಕೊಲ್ಲುವುದು ಇಡೀ ರಾಷ್ಟ್ರವನ್ನೇ ಕೊಂದಂತೆ ಎಂದು ಸಲ್ಮಾನ್‌ ಖಾನ್‌ (Salman Khan) ಬರೆದಿದ್ದಾರೆ.

    ಕಂಗನಾ ರಣಾವತ್ (Kangana Ranaut) ಹಂಚಿಕೊಂಡಿರುವ ಸ್ಟೋರಿಯಲ್ಲಿ, ಆ ದುರುಳರು ಅಮಾಯಕರ ಮೇಲೆ ದಾಳಿ ಮಾಡಿದ್ದಾರೆ. ಅಮಾಯಕರ ಮೇಲೆ ದಾಳಿ ಮಾಡಿ ನಪುಂಸಕತನ ಮೆರೆದಿದ್ದಾರೆ. ಇತಿಹಾಸದಲ್ಲಿ ಪ್ರತಿ ಯುದ್ಧವೂ ಸಹ ಯುದ್ಧಭೂಮಿಯಲ್ಲೇ ನಡೆದಿದೆ. ಆದರೆ ಈ ನಪುಂಸಕರು ಅಮಾಯಕರ ಮೇಲೆ ನಿರಸ್ತ್ರರಾಗಿರುವವರ ಮೇಲೆ ದಾಳಿ ಮಾಡಿದ್ದಾರೆ. ಯುದ್ಧಭೂಮಿಯ ಹೊರಗೆ ಕಾದಾಟ ಮಾಡುತ್ತಿರುವ ಈ ನಪುಂಸಕರ ಮೇಲೆ ಯುದ್ಧವಾದರೂ ಮಾಡುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಭಯೋತ್ಪಾದಕರಿಗೆ ಧರ್ಮ ಇದೆ, ಸಂತ್ರಸ್ತರಿಗೂ ಧರ್ಮ ಇದೆ ಎಂದಿದ್ದಾರೆ. ಭಯೋತ್ಪಾದಕರ ಧರ್ಮದ ಬಗ್ಗೆ ಬಹಿರಂಗವಾಗಿ ಹೇಳದೆ, ಮುಸ್ಲಿಂ ಭಯೋತ್ಪಾದಕರಿಂದ ಹಿಂದುಗಳು ದಶಕಗಳಿಂದಲೂ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ.

     

    View this post on Instagram

     

    A post shared by Priyanka (@priyankachopra)

    ಪ್ರಿಯಾಂಕಾ ಚೋಪ್ರಾ (Priyanka Chopra) ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಪಹಲ್ಗಾಮ್ ದಾಳಿಯ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಇದೊಂದು ಅತ್ಯಂತ ಹೇಯ ಕೃತ್ಯ ಎಂದು ಬರೆದುಕೊಂಡಿದ್ದಾರೆ. ಭಯೋತ್ಪಾದನೆಯ ಈ ಅಮಾನವೀಯ ಕೃತ್ಯವನ್ನು ಅವರು ಖಂಡಿಸಿದ್ದಾರೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರ ಕುಟುಂಬದೊಂದಿಗೆ ಇವೆ. ಗಾಯಗೊಂಡಿರುವ ದಂಪತಿಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

     

    View this post on Instagram

     

    A post shared by Anupam Kher (@anupampkher)

    ಈ ಬಗ್ಗೆ ಅನುಪಮ್ ಖೇರ್‌ (Anupam Kher) ಮಾತನಾಡಿ, ಇಂದು ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ. 27 ಹಿಂದೂಗಳನ್ನು ಹುಡುಕಿ ಹುಡುಕಿ ಕೊಲ್ಲಲಾಗಿದೆ. ದುಃಖದ ಜೊತೆ ಕ್ರೋಧ, ಸಿಟ್ಟು ಬರುತ್ತದೆ. ನಾನು ಇದನ್ನು ಜೀವನದಲ್ಲಿ ಬಹಳಷ್ಟು ನೋಡಿದ್ದೇನೆ. ಕಾಶ್ಮೀರದಲ್ಲಿ ಹಿಂದೂಗಳ ಜನರೊಂದಿಗೆ ಜೊತೆ ಹೀಗೆ ಆಗ್ತಾನೇ ಇದೆ. ‘ಕಾಶ್ಮೀರ್ ಫೈಲ್ಸ್’ ಅವರ ಕಥೆಯಾಗಿದ್ದು, ಇದನ್ನು ಸಿನಿಮಾ ಮಾಡಿದಾಗ ಪ್ರೊಪಗಾಂಡ ಎಂದು ಕರೆದ್ರಿ. ದೇಶದ ವಿವಿಧ ಭಾಗಗಳಿಂದ ಜನರು ತಮ್ಮ ರಜಾದಿನಗಳನ್ನು ಕಳೆಯಲು ಕುಟುಂಬದ ಜೊತೆ ಕಾಶ್ಮೀರಕ್ಕೆ ಬಂದರು. ಈ ವೇಳೆ, ಅವರ ಧರ್ಮವನ್ನು ತಿಳಿದು ಕೊಲ್ಲಲಾಗಿದೆ ಎಂದು ಕೃತ್ಯವನ್ನು ಖಂಡಿಸಿದ್ದಾರೆ.

    ಇದರ ಬಗ್ಗೆ ಮಾತನಾಡೋಕೆ ಶಬ್ದವೇ ಸಿಗೋದಿಲ್ಲ. ಪತಿಯ ಮೃತ ದೇಹದ ಜೊತೆಗಿದ್ದ ಮಹಿಳೆಯನ್ನು ನಾನು ಮರೆಯಲು ಸಾಧ್ಯವಿಲ್ಲ. ನಾನು ಪಲ್ಲವಿ ಜಿ ಅವರ ಸಂದರ್ಶನ ನೋಡಿದೆ. ಪತಿಯನ್ನ ಕಣ್ಣೆದುರೇ ಸಾಯಿಸಿದಾಗ ನನ್ನನ್ನು ನನ್ನ ಮಗನನ್ನು ಸಾಯಿಸಿ ಅಂದಾಗ, ನಿಮ್ಮನ್ನು ಸಾಯಿಸಲ್ಲ ಮೋದಿಗೆ ಹೋಗಿ ಹೇಳಿ ಅಂದ್ರಲ್ಲ. ಬಹುಶಃ ಅವನು ಒಂದು ಸಂದೇಶವನ್ನು ನೀಡಲು ಬಯಸಿದ್ದಿರಬಹುದು ಎಂದಿದ್ದಾರೆ. ಮೋದಿಯವರು ಹಾಗೂ ಅಮಿತ್ ಶಾ ಅವರ ಬಳಿ ನಾನು ಕೇಳಿಕೊಳ್ಳುವುದೇನಂದರೆ ಉಗ್ರರಿಗೆ ನಾವು ಎಂಥಹ ಪಾಠ ಕಲಿಸಬೇಕು ಅಂದರೆ ಇನ್ನೂ ಏಳು ಜನ್ಮ ಎತ್ತಿ ಬಂದ್ರೂ ಇಂಥಹ ದುಷ್ಟ ಕೆಲಸ ಮಾಡುವ ಯೋಚನೆನೇ ಅವರಿಗೆ ಬರಬಾರದು ಎಂದಿದ್ದಾರೆ.

  • ಮತ್ತೆ ಹೃತಿಕ್ ರೋಷನ್‌ಗೆ ಜೊತೆಯಾದ ಪ್ರಿಯಾಂಕಾ ಚೋಪ್ರಾ

    ಮತ್ತೆ ಹೃತಿಕ್ ರೋಷನ್‌ಗೆ ಜೊತೆಯಾದ ಪ್ರಿಯಾಂಕಾ ಚೋಪ್ರಾ

    ಬಾಲಿವುಡ್ ನಟ ಹೃತಿಕ್ ರೋಷನ್ ‘ಕ್ರಿಶ್ 4’ (Krrish 4) ಸಿನಿಮಾ ಮೂಲಕ ಮೊದಲ ಬಾರಿಗೆ ನಿರ್ದೇಶನಕ್ಕಿಳಿದಿದ್ದಾರೆ. ಈ ಚಿತ್ರಕ್ಕಾಗಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಇದರ ನಡುವೆ ಚಿತ್ರದ ಬಗ್ಗೆ ಕ್ರೇಜಿ ಅಪ್‌ಡೇಟ್‌ವೊಂದು ಸಿಕ್ಕಿದೆ. ಹೃತಿಕ್ ರೋಷನ್‌ಗೆ ನಾಯಕಿಯಾಗಿ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ (Priyanka Chopra) ಕಾಣಿಸಿಕೊಳ್ಳಲಿದ್ದಾರೆ.

    ಹಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಿದ್ದ ನಟಿ ಬಾಲಿವುಡ್ ಸಿನಿಮಾದಲ್ಲಿ ಯಾವಾಗ ನಟಿಸ್ತಾರೆ ಎಂಬುದನ್ನು ಎದುರು ನೋಡುತ್ತಿದ್ದ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ‘ಕ್ರಿಶ್ 4’ನಲ್ಲಿ ಮುಖ್ಯ ಪಾತ್ರದಲ್ಲಿ ಹೃತಿಕ್ (Hrithik Roshan) ಜೊತೆ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಳ್ಳಲಿದ್ದಾರೆ. ಸೂಪರ್ ಹೀರೋ ಕಾನ್ಸೆಪ್ಟ್‌ನ ಈ ಸಿನಿಮಾ ಈಗಾಗಲೇ 3 ಸಿರೀಸ್‌ನಲ್ಲಿ ಸಕ್ಸಸ್ ಕಂಡಿದೆ. ‘ಕ್ರಿಶ್ 4’ ಸಿನಿಮಾ ಹೇಗಿರಲಿದೆ ಅನ್ನೋ ಕ್ಯೂರಿಯಾಸಿಟಿ ಫ್ಯಾನ್ಸ್‌ಗೆ ಜಾಸ್ತಿಯಾಗಿದೆ. ಇದನ್ನೂ ಓದಿ: ‘ಅಯ್ಯನ ಮನೆ’ ಕಥೆ ಹೇಳಲು ಬಂದ ‘ದಿಯಾ’ ನಟಿ- ರಮೇಶ್ ಇಂದಿರಾ ಆ್ಯಕ್ಷನ್ ಕಟ್

    ಈ ಹಿಂದೆ ‘ಕ್ರಿಶ್’ ಹಾಗೂ ‘ಕ್ರಿಶ್ 3’ ಸರಣಿಯಲ್ಲಿ ಹೃತಿಕ್‌ಗೆ ಜೊತೆಯಾಗಿ ಪ್ರಿಯಾಂಕಾ ನಟಿಸಿದ್ದರು. ಈಗ ಹಲವು ವರ್ಷಗಳ ಬಳಿಕ ಮತ್ತೆ ‘ಕ್ರಿಶ್ 4’ಗೆ ನಟಿ ಸಾಥ್ ನೀಡುತ್ತಿದ್ದಾರೆ. ಇದನ್ನೂ ಓದಿ:ಚಂದನ್ ಶೆಟ್ಟಿ ಜೊತೆಗಿನ ‘ಮುದ್ದು ರಾಕ್ಷಸಿ’ ಶೂಟಿಂಗ್ ಮುಗಿಸಿದ ನಿವೇದಿತಾ ಗೌಡ

    ಸದ್ಯ ರಾಜಮೌಳಿ ನಿರ್ದೇಶನದ ಹಾಗೂ ಮಹೇಶ್ ಬಾಬು ನಟನೆಯ ಹೊಸ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗಾಗಿ ಅವರು 30 ಕೋಟಿ ರೂ. ಸಂಭಾವನೆ ಚಾರ್ಜ್ ಮಾಡಿದ್ದಾರೆ.

  • ಮಹೇಶ್ ಬಾಬು ಜೊತೆ ನಟಿಸಲು ಪ್ರಿಯಾಂಕಾ ಚೋಪ್ರಾಗೆ 30 ಕೋಟಿ ಸಂಭಾವನೆ

    ಮಹೇಶ್ ಬಾಬು ಜೊತೆ ನಟಿಸಲು ಪ್ರಿಯಾಂಕಾ ಚೋಪ್ರಾಗೆ 30 ಕೋಟಿ ಸಂಭಾವನೆ

    ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಸ್ಟಾರ್ ನಟಿಯರಾದ ಆಲಿಯಾ ಭಟ್, ಕರೀನಾ ಕಪೂರ್, ದೀಪಿಕಾ ಪಡುಕೋಣೆ, ನಯನತಾರಾರನ್ನೇ ಹಿಂದಿಕ್ಕಿದ್ದಾರೆ. ಮಹೇಶ್ ಬಾಬು ನಟನೆಯ ಹೊಸ ಸಿನಿಮಾದಲ್ಲಿ ನಟಿಸಲು ಪ್ರಿಯಾಂಕಾ ಚೋಪ್ರಾ 30 ಕೋಟಿ ರೂ. ಸಂಭಾವನೆಗೆ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಸ್ಟಾರ್ ನಟಿಯರಿಗೆ ಪ್ರಿಯಾಂಕಾ ಸೆಡ್ಡು ಹೊಡೆದಿದ್ದಾರೆ.

    ಕಿಯಾರಾ, ಆಲಿಯಾ, ದೀಪಿಕಾ ಪಡುಕೋಣೆ ಸೇರಿದಂತೆ ಕೆಲ ಟಾಪ್ ನಟಿಯರು ಒಂದು ಸಿನಿಮಾಗೆ 5ರಿಂದ 15 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. ಹೀಗಿರುವಾಗ 30 ಕೋಟಿ ರೂ. ಸಂಭಾವನೆಯನ್ನು ಪ್ರಿಯಾಂಕಾ ಪಡೆಯುವ ಮೂಲಕ ಎಲ್ಲರ ಹುಬ್ಬೆರಿಸಿದ್ದಾರೆ. ಒಂದು ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಭಾರತದ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

    ಕಳೆದ ಕೆಲವು ವರ್ಷಗಳಿಂದ ದೇಸಿ ಗರ್ಲ್ ಹಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ಇದೀಗ ಮಹೇಶ್ ಬಾಬು (Mahesh Babu) ನಟನೆಯ 29ನೇ ಚಿತ್ರಕ್ಕೆ (SSMB29) ಅವರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದಷ್ಟೇ ಅಲ್ಲ, ಒಡಿಶಾ, ವಿಶಾಖಪಟ್ಟಣಂ, ಹೈದರಾಬಾದ್‌ನಲ್ಲಿ ಈಗಾಗಲೇ ಶೂಟಿಂಗ್ ನಡೆಯುತ್ತಿದ್ದು, ನಟಿ ಕೂಡ ಭಾಗಿಯಾಗಿದ್ದಾರೆ. ಈ ಸಿನಿಮಾವನ್ನು ರಾಜಮೌಳಿ (Rajamouli) ನಿರ್ದೇಶನ ಮಾಡುತ್ತಿದ್ದಾರೆ. ಇದನ್ನೂ ಓದಿ:‘ಡ್ರ್ಯಾಗನ್’ ಚಿತ್ರದ ಬಳಿಕ ಹೆಚ್ಚಿದ ಬೇಡಿಕೆ- ‘ಮುಗಿಲ್‌ಪೇಟೆ’ ನಟಿಗೆ ಬಂಪರ್ ಆಫರ್

    ಈ ಹಿಂದೆ ರಾಮ್ ಚರಣ್, ದಳಪತಿ ವಿಜಯ್ ಜೊತೆ ತೆಲುಗು ಸಿನಿಮಾಗಳಲ್ಲಿ ಪ್ರಿಯಾಂಕಾ ನಟಿಸಿದ್ದಾರೆ. ಈಗ ಮಹೇಶ್ ಬಾಬುಗೆ ನಾಯಕಿಯಾಗಿ ಬರೋಬ್ಬರಿ 20 ವರ್ಷಗಳ ಬಳಿಕ ಸೌತ್ ಸಿನಿಮಾರಂಗಕ್ಕೆ ನಟಿ ಕಮ್ ಬ್ಯಾಕ್ ಆಗ್ತಿದ್ದಾರೆ.

  • ಹೊಕ್ಕಳಿಗೆ 2.7 ಕೋಟಿ ಮೌಲ್ಯದ ಡೈಮಂಡ್ ರಿಂಗ್ ಧರಿಸಿದ ಪ್ರಿಯಾಂಕಾ ಚೋಪ್ರಾ- ಬೆಲೆ ಕೇಳಿ ಫ್ಯಾನ್ಸ್‌ ಶಾಕ್

    ಹೊಕ್ಕಳಿಗೆ 2.7 ಕೋಟಿ ಮೌಲ್ಯದ ಡೈಮಂಡ್ ರಿಂಗ್ ಧರಿಸಿದ ಪ್ರಿಯಾಂಕಾ ಚೋಪ್ರಾ- ಬೆಲೆ ಕೇಳಿ ಫ್ಯಾನ್ಸ್‌ ಶಾಕ್

    ಬಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಮಹೇಶ್ ಬಾಬು ನಟನೆಯ ಸಿನಿಮಾಗಾಗಿ ಭಾರತಕ್ಕೆ ಬಂದಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಹೊಕ್ಕಳಿಗೆ ಧರಿಸಿದ 2.7 ಕೋಟಿ ರೂ. ಮೌಲ್ಯದ ಡೈಮಂಡ್ ರಿಂಗ್ ವಿಚಾರವಾಗಿ ಚರ್ಚೆಗೆ ಗ್ರಾಸವಾಗಿದ್ದಾರೆ. ಇದನ್ನೂ ಓದಿ:ಶಿವಣ್ಣ ನಿವಾಸಕ್ಕೆ ಯಶ್‌ ದಂಪತಿ ಭೇಟಿ

    ಮುಂಬೈ ಏರ್‌ಪೋರ್ಟ್‌ನಿಂದ ಹೊರಬರುವಾಗ ಪ್ರಿಯಾಂಕಾ ಚೋಪ್ರಾ ಬ್ಲ್ಯಾಕ್ ಕೋ-ಆರ್ಡ್ ಸೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲೀಶ್ ಲುಕ್ ಫ್ಯಾನ್ಸ್ ಗಮನ ಸೆಳೆದಿದೆ. ಅದರಲ್ಲೂ ಪ್ರಿಯಾಂಕಾ ಹೊಕ್ಕಳಿಗೆ ಧರಿಸಿದ ಬೆಲ್ಲಿ ಬಟನ್ ಡೈಮಂಡ್ ಪಿನ್ ಇದರ ಬೆಲೆ ಕೇಳಿ ಗಾಬರಿಯಾಗಿದ್ದಾರೆ. ಇದರ ಬೆಲೆ ಬರೋಬ್ಬರಿ 2.7 ಕೋಟಿ ರೂ. ಮೌಲ್ಯದಾಗಿದೆ ಎಂದು ಕೇಳಿಯೇ ಅಭಿಮಾನಿಗಳು ದಂಗಾಗಿದ್ದಾರೆ.

     

    View this post on Instagram

     

    A post shared by Manav Manglani (@manav.manglani)

    ಇನ್ನೂ ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ಸಿನಿಮಾದಲ್ಲಿ ಲೀಡ್ ಹೀರೋಯಿನ್ ಆಗಿ ನಟಿಸುತ್ತಿದ್ದಾರೆ. ಎಂದೂ ನಟಿಸಿರದ ವಿಭಿನ್ನ ಪಾತ್ರದಲ್ಲಿ ಪ್ರಿಯಾಂಕಾ ಕಾಣಿಸಿಕೊಳ್ತಿದ್ದಾರೆ.

    ಈಗಾಗಲೇ ಹೈದರಾಬಾದ್, ಒಡಿಶಾ, ವಿಶಾಖಪಟ್ಟಣಂ ಸೇರಿದಂತೆ ಹಲವೆಡೆ ಚಿತ್ರೀಕರಣದಲ್ಲಿ ನಟಿ ಭಾಗಿಯಾಗಿದ್ದಾರೆ. ಚಿತ್ರೀಕರಣ ಭರದಿಂದ ನಡೆಯುತ್ತಿದೆ.‌ ಸಿನಿಮಾದ ಹೆಚ್ಚಿನ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.

  • ಭಾರತದ ಕನಸು ಭಗ್ನ: ಪ್ರಿಯಾಂಕಾ ಚೋಪ್ರಾ ‘ಅನುಜಾ’ ಚಿತ್ರಕ್ಕೆ ಸಿಗಲಿಲ್ಲ ಆಸ್ಕರ್ ಪ್ರಶಸ್ತಿ

    ಭಾರತದ ಕನಸು ಭಗ್ನ: ಪ್ರಿಯಾಂಕಾ ಚೋಪ್ರಾ ‘ಅನುಜಾ’ ಚಿತ್ರಕ್ಕೆ ಸಿಗಲಿಲ್ಲ ಆಸ್ಕರ್ ಪ್ರಶಸ್ತಿ

    ಲಾಸ್ ಏಂಜಲೀಸ್‌ನ ಡಾಲ್ಬಿ ಚಿತ್ರಮಂದಿರದಲ್ಲಿ ಚಿತ್ರಮಂದಿರದಲ್ಲಿ ನಡೆದ ಆಸ್ಕರ್ ಪ್ರಶಸ್ತಿ ಪ್ರದಾನ (Oscars Award 2025) ಸಮಾರಂಭದಲ್ಲಿ ಹಲವಾರು ವಿಭಾಗಗಳಲ್ಲಿ ನಾಮನಿರ್ದೇಶನಗೊಂಡ ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇನ್ನೂ ಭಾರತದ ಯಾವುದೇ ಸಿನಿಮಾಗಳು ಈ ಬಾರಿ ಆಸ್ಕರ್ ಅವಾರ್ಡ್ ಗೆದ್ದಿಲ್ಲ. ಪ್ರಿಯಾಂಕಾ ಚೋಪ್ರಾ (Priyanka Chopra) ನಿರ್ಮಾಣದ ‘ಅನುಜಾ’ (Anuja) ಚಿತ್ರಕ್ಕೆ ಪ್ರಶಸ್ತಿ ಸಿಕ್ಕಿಲ್ಲ ಅನ್ನೋದು ಬೇಸರದ ಸಂಗತಿ.

    ಪ್ರಿಯಾಂಕಾ ಚೋಪ್ರಾ ನಿರ್ಮಾಣದ ‘ಅನುಜಾ’ ಶಾರ್ಟ್ ಫಿಲ್ಮ್ ಬೆಸ್ಟ್ ಲೈವ್ ಆ್ಯಕ್ಷನ್ ಶಾರ್ಟ್ ಫಿಲ್ಮ್ ವಿಭಾಗದಲ್ಲಿ ನಾಮಿನೇಟ್ ಆಗಿತ್ತು. ‘ಅನುಜಾ’ ವಿಶೇಷವಾದ ಚಿತ್ರವೇ ಆಗಿದೆ. ಈ ಚಿತ್ರದಲ್ಲಿ ಅನುಜಾ ಅನ್ನೋ 9 ವರ್ಷದ ಹುಡುಗಿಯ ಕಥೆ ಇದೆ. ಈ ಕಥೆಯಲ್ಲಿ ದೆಹಲಿ ಗಾರ್ಮೆಂಟ್ ಫ್ಯಾಕ್ಟರಿಯ ಚಿತ್ರವೂ ಇದೆ. ಅನುಜಾಳ ಬದುಕಿನ ಸತ್ಯವೂ ಇದೆ. ಕುಟುಂಬದ ಜವಾಬ್ದಾರಿ ಹೊತ್ತ ಒಬ್ಬ ಹೆಣ್ಣುಮಗಳ ಜೀವನ ಎಷ್ಟು ಕಠಿಣ, ಸವಾಲಿನ ಹಾದಿ ಆಗಿರುತ್ತದೆ ಎಂಬುದನ್ನು ಅನುಜಾ ಮೂಲಕ ಪ್ರೇಕ್ಷಕರಿಗೆ ಕಟ್ಟಿಕೊಡಲಾಗಿದೆ. ಆದರೆ ‘ಅನುಜಾ’ ಆಸ್ಕರ್ ಗೆಲ್ಲೋ ಕನಸು ಭಗ್ನವಾಗಿದೆ. ಇದನ್ನೂ ಓದಿ:ಡಿಕೆಶಿ ಪರ ಬ್ಯಾಟ್ ಬೀಸಿದ ರಮ್ಯಾ

    ‘ಅನುಜಾ’ (Anuja) ಲೈವ್ ಆ್ಯಕ್ಷನ್ ಶಾರ್ಟ್ ಫಿಲ್ಮ್ಂ ಆಗಿದೆ. ಇದನ್ನು ಆಡಮ್ ಜೆ. ಗ್ರೇವ್ಸ್ ಡೈರೆಕ್ಷನ್ ಮಾಡಿದ್ದಾರೆ. ಈ ಕಿರುಚಿತ್ರವನ್ನು ಬಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ ನಿರ್ಮಿಸಿದ್ದಾರೆ.

  • ದೇಸಿ ಗರ್ಲ್ ಈಗ ದುಬಾರಿ- ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ

    ದೇಸಿ ಗರ್ಲ್ ಈಗ ದುಬಾರಿ- ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ

    ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಹಿಂದಿ ಸಿನಿಮಾದಲ್ಲಿ ನಟಿಸದೇ ಹಲವು ವರ್ಷಗಳೇ ಕಳೆದಿದೆ. ಹಾಲಿವುಡ್ ಸಿನಿಮಾಗಳಲ್ಲಿ ಆ್ಯಕ್ಟೀವ್ ಆಗಿರುವ ನಟಿ ಈಗ ಮತ್ತೆ ಸೌತ್ ಸಿನಿಮಾಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ರಾಜಮೌಳಿ (Rajamouli) ನಿರ್ದೇಶನದಲ್ಲಿ ಮಹೇಶ್ ಬಾಬು (Mahesh Babu) ಜೊತೆ ನಟಿಸಲು 30 ಕೋಟಿ ರೂ. ಸಂಭಾವನೆಯನ್ನು ನಟಿ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಪ್ರಿಯಾಂಕಾಗೆ 42 ವರ್ಷವಾದ್ರೂ ನಟಿಯ ಚಾರ್ಮ್ ಇನ್ನೂ ಕಮ್ಮಿಯಾಗಿಲ್ಲ. ಅವರಿಗೆ ಇನ್ನೂ ಬೇಡಿಕೆಯಿದೆ. ಹಾಲಿವುಡ್‌ನಲ್ಲಿ ಆ್ಯಕ್ಷನ್ ಕ್ವೀನ್ ಆಗಿ ಮಿಂಚುತ್ತಿದ್ದಾರೆ. ಹೀಗಿರುವಾಗ ಬಹುನಿರೀಕ್ಷಿತ ಸಿನಿಮಾ ರಾಜಮೌಳಿ ಮತ್ತು ಮಹೇಶ್ ಬಾಬು ಸಿನಿಮಾದಲ್ಲಿ ನಟಿಸಲು ಪ್ರಿಯಾಂಕಾ 30 ಕೋಟಿ ರೂ. ಕೇಳಿದ್ದಾರೆ. ಅದಕ್ಕೆ ಚಿತ್ರತಂಡ ಕೂಡ ಸಮ್ಮತಿ ಸೂಚಿಸಿದೆ ಎನ್ನಲಾದ ವಿಚಾರವೊಂದು ಚರ್ಚೆಗೆ ಗ್ರಾಸವಾಗಿದೆ.

    ಇನ್ನೂ ಭಾರತದ ಯಾವುದೇ ನಟಿ ಇಷ್ಟು ಸಂಭಾವನೆ ಪಡೆದಿಲ್ಲ. ಹಾಗಾಗಿ ಪ್ರಿಯಾಂಕಾ ಭಾರತದ ಅತ್ಯಂತ ದುಬಾರಿ ನಟಿ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ:‘ಅನಿಮಲ್’ ನಿರ್ದೇಶಕನ ಜೊತೆ ಪ್ರಭಾಸ್ ಸಿನಿಮಾ ಶುರುವಾಗೋದು ಯಾವಾಗ?- ಸಿಕ್ತು ಅಪ್‌ಡೇಟ್

    ಮಹೇಶ್ ಬಾಬು ಈ ಸಿನಿಮಾಗೆ ಕಳೆದ 2 ವರ್ಷಗಳಿಂದ ತಯಾರಿ ನಡೆಯುತ್ತಿದೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ನೆರವೇರಿದೆ. ಸಿನಿಮಾದ ಶೂಟಿಂಗ್ ಕೂಡ ಶುರುವಾಗಿದೆ.

  • ಚಿಲ್ಕೂರ್ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಚೋಪ್ರಾ

    ಚಿಲ್ಕೂರ್ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಚೋಪ್ರಾ

    ಹಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ತೆಲಂಗಾಣದ ಚಿಲ್ಕೂರ್ ಬಾಲಾಜಿ ದೇವಸ್ಥಾನಕ್ಕೆ (Chilkur Balaji Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಸುದೀಪ್ ಇಲ್ಲದೇ ಬಿಗ್ ಬಾಸ್ ಊಹಿಸಿಕೊಳ್ಳೋಕೆ ಸಾಧ್ಯವಿಲ್ಲ: ಧನರಾಜ್ ಆಚಾರ್

    ಇಂದು (ಜ.21) ಚಿಲ್ಕೂರ್ ಬಾಲಾಜಿ ದೇವಸ್ಥಾನಕ್ಕೆ ಪ್ರಿಯಾಂಕಾ ಚೋಪ್ರಾ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಕೆಲ ಕಾಲ ದೇವಸ್ಥಾನದಲ್ಲಿ ನಟಿ ಸಮಯ ಕಳೆದಿದ್ದಾರೆ. ದೇವಸ್ಥಾನಕ್ಕೆ ಭೇಟಿ ಕೊಟ್ಟ ಫೋಟೋ ಶೇರ್ ಮಾಡಿ, ಶ್ರೀ ಬಾಲಾಜಿ ಆಶೀರ್ವಾದದಿಂದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Priyanka (@priyankachopra)

    ನಮ್ಮ ಸುತ್ತಲೂ ಶಾಂತಿ ಮತ್ತು ಸಮೃದ್ಧಿಯನ್ನು ಕಂಡುಕೊಳ್ಳೋಣ. ಎಲ್ಲಾ ಅನುಗ್ರಹ ಎಂದು ನಟಿ ಬರೆದುಕೊಂಡಿದ್ದಾರೆ. ಜೊತೆಗೆ ರಾಮ್ ಚರಣ್ ಪತ್ನಿಗೆ ಉಪಾಸನಾಗೆ ಪ್ರಿಯಾಂಕಾ ಥ್ಯಾಂಕ್ಯೂ ಎಂದಿದ್ದಾರೆ.

    ಇನ್ನೂ ರಾಜಮೌಳಿ ಮತ್ತು ಮಹೇಶ್ ಬಾಬು (Mahesh Babu) ನಟನೆಯ ಹೊಸ ಸಿನಿಮಾದಲ್ಲಿ ಪ್ರಿಯಾಂಕಾ ನಟಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದರ ನಡುವೆ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಹೊಸ ಅಧ್ಯಾಯ ಆರಂಭ ಎಂದು ನಟಿ ಬರೆದುಕೊಂಡಿರೋದು ನೋಡಿ ಊಹಾಪೋಹಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಂತೆ ಆಗಿದೆ. ಮಹೇಶ್ ಬಾಬು ಜೊತೆಗಿನ ಸಿನಿಮಾ ಕುರಿತು ಸದ್ಯದಲ್ಲೇ ಅನೌನ್ಸ್ ಮಾಡ್ತಾರಾ? ಎಂದು ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.

  • ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು: ಮನೆಯ ಬಾಲ್ಕನಿಯಿಂದ ಶೂಟ್ ಮಾಡಿದ ವಿಡಿಯೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು: ಮನೆಯ ಬಾಲ್ಕನಿಯಿಂದ ಶೂಟ್ ಮಾಡಿದ ವಿಡಿಯೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    ಲಾಸ್ ಏಂಜಲೀಸ್‌ನಲ್ಲಿ (Los Angles Wildfire)) ಧರೆಯೇ ಹೊತ್ತಿ ಉರಿಯುವಂತಹ ವಾತಾವರಣ ನಿರ್ಮಾಣವಾಗಿದೆ. ನೋರಾ ಫತೇಹಿ ಅವಘಡದಿಂದ ಪಾರಾಗಿದ್ರೆ, ಪ್ರಿಯಾಂಕಾ ಚೋಪ್ರಾ (Priyanka Chopra) ಬೆಚ್ಚಿಬಿದ್ದಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿರುವ ಅಗ್ನಿಶಾಮಕ ದಳವು ಹೇಗೆ ಕಾರ್ಯ ನಿರ್ವಹಿಸುತ್ತಿದೆ ಎಂಬುದನ್ನು ನಟಿ ವಿವರಿಸಿದ್ದಾರೆ.

    ಪ್ರಿಯಾಂಕಾ ಕೂಡ ಲಾಸ್ ಏಂಜಲೀಸ್‌ನಲ್ಲಿ ನೆಲೆಸಿದ್ದಾರೆ. ತಮ್ಮ ನಿವಾಸದಿಂದ ಸ್ವಲ್ಪ ದೂರದಲ್ಲಿರುವ ಸ್ಥಳದಲ್ಲಿ ಈ ಅವಘಡ ನಡೆದಿದೆ. ಮನೆಯ ಬಾಲ್ಕನಿಯಿಂದ ಶೂಟ್ ಮಾಡಿದ ವಿಡಿಯೋ ಶೇರ್ ಮಾಡಿ, ಈ ಅನಾಹುತದಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಸಂತಾಪಗಳು. ನಾವೆಲ್ಲರೂ ಈ ರಾತ್ರಿ ಸೇಫ್ ಆಗಿರ್ತೀವೆಂದು ಭಾವಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ನಟಿ ಶೇರ್ ಮಾಡಿದ ಮತ್ತೊಂದು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ, ಲಾಸ್ ಏಂಜಲೀಸ್ ಕಾಡ್ಗಿಚ್ಚಿನ ಸಂದಿಗ್ಧ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ ನಮ್ಮ ರಕ್ಷಕರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕ

    ಅಂದಹಾಗೆ, ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹೊತ್ತಿಕೊಂಡಿರುವ ಭೀಕರ ಕಾಡ್ಗಿಚ್ಚು ಅಪಾರ ಹಾನಿಯುಂಟುಮಾಡಿದೆ. ಮುಗಿಲೆತ್ತರಕ್ಕೆ ಚಿಮ್ಮುತ್ತಿರುವ ಜ್ವಾಲೆ ನೆರೆಯ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಸುತ್ತಲಿನ ಹಾಲಿವುಡ್ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ರಕ್ಷಣಾ ಸಿಬ್ಬಂದಿ ಚಾಲನೆ ನೀಡಿದ್ದಾರೆ.

    ದುರ್ಘಟನೆಯಲ್ಲಿ ಈವರೆಗೆ ಐವರು ಸಜೀವ ದಹನವಾಗಿದ್ದಾರೆ. ಈ ನಡುವೆ 1,00,000 ಜನರ ಸ್ಥಳಾಂತರಕ್ಕೆ ಆದೇಶಿಸಲಾಗಿದೆ. ಸುಮಾರು 1,500 ಮನೆಗಳು ಸುಟ್ಟು ಭಸ್ಮವಾಗಿವೆ ಎಂದು ವರದಿಗಳು ತಿಳಿಸಿವೆ.

    ಲಾಸ್ ಏಂಜಲೀಸ್‌ನಾದ್ಯಂತ ನಿಯಂತ್ರಣ ಮೀರಿದ ಕಾಡ್ಗಿಚ್ಚು ಉಲ್ಬಣಗೊಳ್ಳುತ್ತಿರುವುದರಿಂದ, ಸನ್‌ಸೆಟ್ ಫೈರ್ ಎಂದು ಕರೆಯಲ್ಪಡುವ ಹೊಸ ಜ್ವಾಲೆಯು ಹಾಲಿವುಡ್ ಹಿಲ್ಸ್‌ನಲ್ಲಿ ಕಾಣಿಸಿಕೊಂಡಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 112 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿರುವ ಸಾಂಟಾ ಅನಾ ಚಂಡಮಾರುತದಿಂದ ಪರಿಸ್ಥಿತಿ ಹದಗೆಡುತ್ತಲೇ ಇದೆ. ರನ್ಯಾನ್ ಕ್ಯಾನ್ಯನ್ ಮತ್ತು ವಾಟಲ್ಸ್ ಪಾರ್ಕ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.

  • ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ

    ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ

    ಬಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ (Priyanka Chopra) ಸದ್ಯ ಹಾಲಿವುಡ್ (Hollywood) ಸಿನಿಮಾಗಳಲ್ಲಿ ಮಿಂಚುತ್ತಿದ್ದಾರೆ. ಇದೀಗ ಕೆಲಸದ ನಡುವೆ ಹುಟ್ಟೂರು ಮುಂಬೈಗೆ ಬಂದಿರುವ ನಟಿ ಹೊಸ ಫೋಟೋಶೂಟ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇದನ್ನೂ ಓದಿ:ಅಕ್ಷಯ್ ಕುಮಾರ್ ನಟನೆಯ ಹೊಸ ಚಿತ್ರಕ್ಕೆ ಆರ್.ಮಾಧವನ್, ಅನನ್ಯಾ ಪಾಂಡೆ ಸಾಥ್

    ಲೈಟ್ ಬಣ್ಣದ ಶಾರ್ಟ್ ಡ್ರೆಸ್‌ನಲ್ಲಿ ದೇಸಿ ಗರ್ಲ್ ಪ್ರಿಯಾಂಕಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ವಿವಿಧ ಭಂಗಿಯಲ್ಲಿ ಪೋಸ್ ನೀಡಿದ್ದಾರೆ. ನಟಿಯ ನಯಾ ಪೋಸ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಇದನ್ನೂ ಓದಿ:ಸುಮ್ಮನಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಿದ ಅಮೂಲ್ಯ ಅಣ್ಣ ದೀಪಕ್ ಅಂತ್ಯಕ್ರಿಯೆ

    ಹಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪ್ರಿಯಾಂಕಾ ಇದೀಗ ‘ಪಾನಿ’ (Paani) ಎಂಬ ಮರಾಠಿ ಚಿತ್ರದ ಮೂಲಕ ನಿರ್ಮಾಪಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರ ಇಂದು (ಅ.18) ರಿಲೀಸ್ ಆಗಿದೆ.

    ಪ್ರಿಯಾಂಕಾ ಅವರ ಬಾಲಿವುಡ್ ಚಿತ್ರಕ್ಕಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ. ಇತ್ತೀಚೆಗೆ ಸಮಂತಾ (Samantha), ವರುಣ್ (Varun Dhawan) ನಟಿಸಿರುವ ‘ಸಿಟಾಡೆಲ್ ಹನಿ ಬನಿ’ (Citadel Honey Bunny) ವೆಬ್ ಸಿರೀಸ್ ಪ್ರಚಾರಕ್ಕೂ ಪ್ರಿಯಾಂಕಾ ಕೈಜೋಡಿಸಿದ್ದರು. ಪ್ರಿಯಾಂಕಾ ನಟಿಸಿದ್ದ ಸಿಟಾಡೆಲ್ ಪಾತ್ರವನ್ನೇ ಹಿಂದಿಯಲ್ಲಿ ಸಮಂತಾ ನಟಿಸಿದ್ದಾರೆ.

    ಅಂದಹಾಗೆ, ಅಮೆರಿಕನ್ ಸಿಂಗರ್ ನಿಕ್ ಜೋನಸ್ (Nick Jonas) ಜೊತೆ ಪ್ರಿಯಾಂಕಾ 2018ರಲ್ಲಿ ಮದುವೆಯಾದರು. ಪತಿ ಜೊತೆ ವಿದೇಶದಲ್ಲಿ ಸೆಟಲ್ ಆಗಿದ್ದಾರೆ. 2022ರಲ್ಲಿ ಬಾಡಿಗೆ ತಾಯ್ತನದ ಮೂಲಕ ಮುದ್ದಾದ ಹೆಣ್ಣು ಮಗುವನ್ನು ಈ ಜೋಡಿ ಬರಮಾಡಿಕೊಂಡರು.