Tag: ಪ್ರಿಯಾಮಣಿ

  • ಕೋಟಿ ಕೊಟ್ರೂ ಸಿನಿಮಾದಲ್ಲಿ ಕಿಸ್‌ ಮಾಡಲ್ಲ- ಪ್ರಿಯಾಮಣಿ ಖಡಕ್‌ ಉತ್ತರ

    ಕೋಟಿ ಕೊಟ್ರೂ ಸಿನಿಮಾದಲ್ಲಿ ಕಿಸ್‌ ಮಾಡಲ್ಲ- ಪ್ರಿಯಾಮಣಿ ಖಡಕ್‌ ಉತ್ತರ

    ಬೆಂಗಳೂರಿನ ಬ್ಯೂಟಿ, ಕನ್ನಡತಿ ಪ್ರಿಯಾಮಣಿ (Priyamani) ಅವರು ಭಾರತೀಯ ಸಿನಿಮಾರಂಗದಲ್ಲಿ ಟಾಪ್ ನಟಿಯರಲ್ಲಿ ಒಬ್ಬರಾಗಿ ಗಮನ ಸೆಳೆಯುತ್ತಿದ್ದಾರೆ. ಬಹುಭಾಷೆಗಳಲ್ಲಿ ನಟಿಸುವ ಮೂಲಕ ಪ್ರಿಯಾಮಣಿ ಚಾರ್ಮ್ ಉಳಿಸಿಕೊಂಡಿದ್ದಾರೆ. ಸದ್ಯ ಬಣ್ಣದ ಬದುಕಿಗೆ ಎಂಟ್ರಿ ಕೊಟ್ಟು 20 ವರ್ಷಗಳಾಗಿದೆ. ಇದುವೆರೆಗೂ ಕಿಸ್ಸಿಂಗ್ ಸೀನ್‌ಗೆ ನಟಿ ನೋ ಎನ್ನುತ್ತಾರೆ. ಯಾಕೆ? ಈ ಬಗ್ಗೆ ಪ್ರಿಯಾಮಣಿ ಅವರ ಅಭಿಪ್ರಾಯವೇನು ಎಂದು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

    ಕನ್ನಡದ ರಾಮ್, ಅಣ್ಣಾ ಬಾಂಡ್, ಕೋ ಕೋ, ವಿಷ್ಣುವರ್ಧನ, ಲಕ್ಷ್ಮಿ ಚಿತ್ರ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಿಂದಿಯಲ್ಲಿ ‘ದಿ ಫ್ಯಾಮಿಲಿ ಮ್ಯಾನ್’ (The Family Man ) ವೆಬ್ ಸಿರೀಸ್‌ನಲ್ಲಿ ಪ್ರಿಯಾ ನಟಿಸಿದ್ದಾರೆ. ‌’ಚೆನ್ನೈ ಎಕ್ಸ್‌ಪ್ರೆಸ್’ ಸಿನಿಮಾದಲ್ಲಿನ ಹಾಡಿಗೆ ಶಾರುಖ್ ಖಾನ್ ಜೊತೆ ಪ್ರಿಯಾಮಣಿ ಹೆಜ್ಜೆ ಹಾಕಿದ್ದಾರೆ. 20 ವರ್ಷಗಳಲ್ಲಿ ಭಿನ್ನ ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರೋ ಪ್ರಿಯಾಮಣಿ, ಕೋಟಿ ಸಂಭಾವನೆ ಕೊಟ್ರು ಹಾಟ್ ದೃಶ್ಯ, ಲಿಪ್ ಲಾಕ್ ಸೀನ್‌ಗಳಲ್ಲಿ ನಟಿಸೋದಿಲ್ಲವಂತೆ. ಇದನ್ನೂ ಓದಿ:RRR ಹೀರೋ ಮಗಳಿಗೆ KKK ಹೆಸರು ನಾಮಕರಣ: ಲಲಿತ ಸಹಸ್ರನಾಮದಿಂದ ಹೆಸರು ಆಯ್ಕೆ

    ಸಿನಿಮಾದಲ್ಲಿ ನಟಿಸುವಾಗ ಅದು ಕೇವಲ ಒಂದು ಪಾತ್ರ ಆಗಿರುತ್ತದೆ. ಈ ಕಾರಣಕ್ಕೆ ಕೆಲವರು ಎಂತಹುದೇ ದೃಶ್ಯ ಇದ್ದರೂ ನಟಿಸುತ್ತಾರೆ. ಆದರೆ, ಕೆಲವರು ಮಡಿವಂತಿಕೆ ಕಾಪಾಡಿಕೊಂಡಿದ್ದಾರೆ. ಕಿಸ್ ದೃಶ್ಯಗಳಲ್ಲಿ, ಹಸಿಬಿಸಿ ದೃಶ್ಯಗಳಲ್ಲಿ ನಟಿಸೋಕೆ ನೋ ಎನ್ನುತ್ತಾರೆ. ಪ್ರಿಯಾಮಣಿ ಅವರು ಎರಡನೇ ಸಾಲಿಗೆ ಸೇರುತ್ತಾರೆ. ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ತೆರೆಮೇಲೆ ನಾನು ಕಿಸ್ ಮಾಡಲ್ಲ. ಅದಕ್ಕೆ ನಾನು ಯಾವಾಗಲೂ ನೋ ಎನ್ನುತ್ತೇನೆ. ನನಗೆ ಗೊತ್ತು ಅದು ಕೇವಲ ಪಾತ್ರ ಮತ್ತು ಅದು ನನ್ನ ಕೆಲಸ. ಆದರೆ, ಬೇರೆ ಪುರುಷನೊಂದಿಗೆ ತೆರೆಮೇಲೆ ಕಿಸ್ ಮಾಡಲು ನನಗೆ ಇರಿಸುಮುರುಸು ಉಂಟಾಗುತ್ತದೆ. ನಾನು ಉತ್ತರ ಕೊಡಬೇಕಾಗಿರುವುದು ನನ್ನ ಗಂಡನಿಗೆ ಮಾತ್ರ ಎಂದಿದ್ದಾರೆ.

    2017ರಲ್ಲಿ ಮುಸ್ತಫಾ ರಾಜ್ ಅವರನ್ನು ಪ್ರಿಯಾಮಣಿ ಮದುವೆ ಆದರು. ಮದುವೆ ನಂತರ ಪಾತ್ರಗಳನ್ನು ಮಾಡುತ್ತಿಲ್ಲ. ಆ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಳ್ಳದೇ ಇರೋದು ನನ್ನ ಜವಾಬ್ದಾರಿ ಎನಿಸುತ್ತದೆ. ಇತ್ತೀಚೆಗೆ ನಿರ್ದೇಶಕರೊಬ್ಬರು ಬಂದು ಸಿನಿಮಾ ಕಥೆ ಹೇಳಿದರು. ಅದರಲ್ಲಿ ಕಿಸ್ ದೃಶ್ಯ ಇತ್ತು. ನಾನು ಮಾಡಲ್ಲ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ನಟಿ ಮಾತನಾಡಿದ್ದಾರೆ.

    ಅನ್ಯ ಧರ್ಮೀಯರನ್ನು ಇಷ್ಟಪಟ್ಟು ಮದುವೆ ಆಗುವುದೇ ತಪ್ಪು ಎನ್ನುವ ಅರ್ಥದಲ್ಲಿ ಮಾತನಾಡುತ್ತಿದ್ದಾರೆ. ನಾನು ಯಾರನ್ನು ಇಷ್ಟಪಟ್ಟೆನೋ ಅವರನ್ನು ಮದುವೆಯಾಗಿದ್ದೇನೆ. ಪ್ರೀತಿಯಲ್ಲಿ ಜಾತಿ, ಧರ್ಮಗಳು ಇರುವುದಿಲ್ಲ. ಬೇರೆ ಧರ್ಮ ಅಥವಾ ಜಾತಿಯವರನ್ನು ಮದುವೆಯಾದರೆ ಏನು ತಪ್ಪು? ಎಂದು ಪ್ರಶ್ನೆ ಮಾಡಿದ್ದಾರೆ ಪ್ರಿಯಾಮಣಿ.

    ನನ್ನ ಮದುವೆಯನ್ನು ಹಲವರು ವಿರೋಧಿಸಿದರು. ಕೆಲವರು ಒಪ್ಪಿದರು. ನಾನು ನನ್ನ ಹುಡುಗನನ್ನು ಮತ್ತು ಮದುವೆಯನ್ನು ಒಪ್ಪಿಕೊಳ್ಳಿ ಎಂದು ಯಾವತ್ತೂ ಹೇಳಿಲ್ಲ. ಒಪ್ಪುವುದು ಮತ್ತು ಬಿಡುವುದು ಅವರಿಗೆ ಬಿಟ್ಟ ವಿಚಾರ. ಆದರೆ, ಮುಸ್ಲಿಂ ವ್ಯಕ್ತಿಯನ್ನು ಮದುವೆ ಆಗಿದ್ದೇನೆ ಎನ್ನುವ ಕಾರಣಕ್ಕಾಗಿ ಹಿಂಸೆ ನೀಡುವುದು ಸರಿಯಲ್ಲ. ನಾನು ಆಧುನಿಕ ಭಾರತದಲ್ಲಿ ಬದುಕುತ್ತಿದ್ದೇವೆ. ಭಾರತ ಜಾತ್ಯತೀತ ರಾಷ್ಟ್ರ ಎಂದಿದ್ದಾರೆ. ಈ ಮೂಲಕ ಮಸ್ಲಿಂರೆಲ್ಲಾ ಐಸಿಸ್ ಆಗಲ್ಲ, ಮುಸ್ಲಿಂ ವ್ಯಕ್ತಿಯನ್ನು ಮದುವೆ ಆಗಿದ್ದೇ ತಪ್ಪಾ ಎಂದು ಇತ್ತೀಚಿಗೆ ನಟಿ ಮಾತನಾಡಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಸ್ಲಿಮರೆಲ್ಲ ಐಸಿಸ್‍ ಆಗಲ್ಲ, ಮುಸ್ಲಿಂ ಮದುವೆ ಆಗಿದ್ದೇ ತಪ್ಪಾ?: ಪ್ರಿಯಾಮಣಿ ಮನದಾಳ

    ಮುಸ್ಲಿಮರೆಲ್ಲ ಐಸಿಸ್‍ ಆಗಲ್ಲ, ಮುಸ್ಲಿಂ ಮದುವೆ ಆಗಿದ್ದೇ ತಪ್ಪಾ?: ಪ್ರಿಯಾಮಣಿ ಮನದಾಳ

    ಕ್ಷಿಣ ಭಾರತದ ಖ್ಯಾತ ನಟಿ, ಕನ್ನಡದವರೇ ಆಗಿರುವ ಪ್ರಿಯಾಮಣಿ (Priyamani) ತಮ್ಮ ಮದುವೆ ಬಗ್ಗೆ ಈಹೊತ್ತಿನವರೆಗೂ ಮನಬಿಚ್ಚಿ ಮಾತನಾಡಿರಲಿಲ್ಲ. ಅವರು ಮುಸ್ಲಿಂ (Muslim) ಹುಡುಗನನ್ನು ಮದುವೆಯಾದರು (Marriage) ಎನ್ನುವ ಕಾರಣಕ್ಕಾಗಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದಾರೆ. ಟ್ರೋಲ್ ಗೆ ಗುರಿಯಾಗಿದ್ದಾರೆ. ಲವ್ ಜಿಹಾದ್ ಮಾತುಗಳನ್ನೂ ಎದುರಿಸಿದ್ದಾರೆ. ಇದೇ ಮೊದಲ ಬಾರಿಗೆ ಅವರು ಪರಭಾಷಾ ಮಾಧ್ಯಮವೊಂದರಲ್ಲಿ ಈ ಕುರಿತು ಮಾತನಾಡಿದ್ದಾರೆ.

    ಬೆಂಗಳೂರಿನಲ್ಲೇ ನೆಲೆಸಿರುವ ಪ್ರಿಯಾಮಣಿ, 2017ರಲ್ಲಿ ತಾವು ಮೆಚ್ಚಿದ್ದ ಮುಸ್ತಫಾ (Mustafa) ಎನ್ನುವವರ ಜೊತೆ ಬೆಂಗಳೂರಿನಲ್ಲಿ ರೆಜಿಸ್ಟರ್ ಮದುವೆಯಾದರು. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಮುಸ್ತಫಾ ಮತ್ತು ಪ್ರಿಯಾಮಣಿ ಹೊಸ ಜೀವನಕ್ಕೆ ಕಾಲಿಡುತ್ತಿರುವ ಹೊತ್ತಿನಲ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ಮುಸ್ತಫಾ ಅವರಿಗೆ ಇದು ಎರಡನೇ ಮದುವೆ ಆಗಿದ್ದರಿಂದ ಮತ್ತಷ್ಟು ನೋವುಗಳನ್ನು ಅನುಭವಿಸಬೇಕಾದ ಪ್ರಸಂಗವೂ ಪ್ರಿಯಾಮಣಿ ಮುಂದಿತ್ತು. ಎಲ್ಲವನ್ನೂ ಎದುರಿಸಿಕೊಂಡೆ ಅವರೇ ಸಿನಿಮಾ ರಂಗದಲ್ಲಿ ಮುಂದುವರೆದರು.

    ಇದೇ ಮೊದಲ ಬಾರಿಗೆ ಮಾಧ್ಯಮವೊಂದರ ಜೊತೆ ಮಾತನಾಡಿರುವ ಪ್ರಿಯಾಮಣಿ, ‘ಭಾರತ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದನ್ನು ನೆನಪಿಸಿದ್ದಾರೆ. ಮುಸ್ಲಿಂ ಎಲ್ಲರನ್ನೂ ಉಗ್ರರು ಎನ್ನುವಂತೆ ನೋಡಲಾಗುತ್ತಿದೆ. ಅವರಿಗೆ ಹುಟ್ಟುವ ಮಕ್ಕಳು ಜಿಹಾದಿಗಳು ಆಗಿರಲ್ಲ. ಮುಸ್ಲಿಂ ಎಲ್ಲರೂ ಲವ್ ಜಿಹಾದ್ (Love Jihad) ಮಾಡಲ್ಲ’ ಎನ್ನುವುದನ್ನು ನೆನಪಿಸಿದ್ದಾರೆ. ಇದನ್ನೂ ಓದಿ:ಹೊಸ ಸಿನಿಮಾ ಮುನ್ನ ಫ್ಯಾಮಿಲಿ ಜೊತೆ ರಾಜಮೌಳಿ ಟ್ರಿಪ್

    ಅನ್ಯ ಧರ್ಮೀಯರನ್ನು ಇಷ್ಟಪಟ್ಟು ಮದುವೆ ಆಗುವುದೇ ತಪ್ಪು ಎನ್ನುವ ಅರ್ಥದಲ್ಲಿ ಮಾತನಾಡುತ್ತಿದ್ದಾರೆ. ನಾನು ಯಾರನ್ನು ಇಷ್ಟಪಟ್ಟೆನೋ ಅವರನ್ನು ಮದುವೆಯಾಗಿದ್ದೇನೆ. ಪ್ರೀತಿಯಲ್ಲಿ ಜಾತಿ, ಧರ್ಮಗಳು ಇರುವುದಿಲ್ಲ. ಬೇರೆ ಧರ್ಮ ಅಥವಾ ಜಾತಿಯವರನ್ನು ಮದುವೆಯಾದರೆ ಏನು ತಪ್ಪು?’ ಎಂದು ಪ್ರಶ್ನೆ ಮಾಡಿದ್ದಾರೆ ಪ್ರಿಯಾಮಣಿ.

    ನನ್ನ ಮದುವೆಯನ್ನು ಹಲವರು ವಿರೋಧಿಸಿದರು. ಕೆಲವರು ಒಪ್ಪಿದರು. ನಾನು ನನ್ನ ಹುಡುಗನನ್ನು ಮತ್ತು ಮದುವೆಯನ್ನು ಒಪ್ಪಿಕೊಳ್ಳಿ ಎಂದು ಯಾವತ್ತೂ ಹೇಳಿಲ್ಲ. ಒಪ್ಪುವುದು ಮತ್ತು ಬಿಡುವುದು ಅವರಿಗೆ ಬಿಟ್ಟ ವಿಚಾರ. ಆದರೆ, ಮುಸ್ಲಿಂ ವ್ಯಕ್ತಿಯನ್ನು ಮದುವೆ ಆಗಿದ್ದೇನೆ ಎನ್ನುವ ಕಾರಣಕ್ಕಾಗಿ ಹಿಂಸೆ ನೀಡುವುದು ಸರಿಯಲ್ಲ. ನಾನು ಆಧುನಿಕ ಭಾರತದಲ್ಲಿ ಬದುಕುತ್ತಿದ್ದೇವೆ. ಭಾರತ ಜಾತ್ಯತೀತ ರಾಷ್ಟ್ರ ಎಂದಿದ್ದಾರೆ ಪ್ರಿಯಾಮಣಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫಸ್ಟ್ ಲವ್ ಬಗ್ಗೆ ಬಾಯ್ಬಿಟ್ಟ ನಟಿ ಪ್ರಿಯಾಮಣಿ

    ಫಸ್ಟ್ ಲವ್ ಬಗ್ಗೆ ಬಾಯ್ಬಿಟ್ಟ ನಟಿ ಪ್ರಿಯಾಮಣಿ

    ಹುಭಾಷಾ ನಟಿ ಪ್ರಿಯಾಮಣಿ (Actress Priyamani) ಸಿನಿಮಾ ಮತ್ತು ವೈಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ತಮ್ಮ ಮೊದಲ ಪ್ರೀತಿಯ ಬಗ್ಗೆ ಸಂದರ್ಶನವೊಂದರಲ್ಲಿ ಅಚ್ಚರಿಯ ಮಾಹಿತಿಯೊಂದನ್ನ ಪ್ರಿಯಾಮಣಿ ನೀಡಿದ್ದಾರೆ.

    ಕನ್ನಡ,ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಮಿಂಚ್ತಿರುವ ನಟಿ ಪ್ರಿಯಾಮಣಿ ಸದ್ಯ ಮುಸ್ತಫಾ ರಾಜ್ ಜೊತೆ ವೈವಾಹಿಕ ಬದುಕಿನಲ್ಲಿ ಖುಷಿಯಾಗಿದ್ದಾರೆ. 2017ರಲ್ಲಿ ಉದ್ಯಮಿ ಮುಸ್ತಫಾ ರಾಜ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಹೀಗಿರುವಾಗ ಸಂದರ್ಶನವೊಂದರಲ್ಲಿ ಇದೀಗ ತಮ್ಮ ಮೊದಲ ಲವ್ ಲೈಫ್ ಬಗ್ಗೆ ನಟಿ ಮಾತನಾಡಿದ್ದಾರೆ.

     

    View this post on Instagram

     

    A post shared by Priya Mani Raj (@pillumani)

    ಟಾಲಿವುಡ್ (Tollywood) `ಆಟಗಾಡು’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಪ್ರಿಯಾಮಣಿ ಬಳಿಕ ಬಹುಭಾಷೆಗಳಲ್ಲಿ ಮಿಂಚಿದ್ದರು. 2005ರಲ್ಲಿ `ನವ ವಸಂತಂ’ (Navavasantham)ಎಂಬ ಚಿತ್ರದಲ್ಲಿ ತರುಣ್ ಕುಮಾರ್‌ಗೆ (Tarun Kumar) ಪ್ರಿಯಾಮಣಿ ನಾಯಕಿಯಾಗಿ ಮಿಂಚಿದ್ದರು. ಬಳಿಕ ಸಾಕಷ್ಟು ಸಿನಿಮಾದಲ್ಲಿ ಜೋಡಿಯಾಗಿ ಕಾಣಿಸಿಕೊಂಡಿದ್ದರು. ಆ ಸಮಯದಲ್ಲಿ ಇಬ್ಬರ ಬಗ್ಗೆ ಡೇಟಿಂಗ್ ಸುದ್ದಿ ಹಬ್ಬಿತ್ತು. ತರುಣ್-ಪ್ರಿಯಾಮಣಿ ಮದುವೆಯಾಗಲಿದ್ದಾರೆ ಎಂದೇ ಸುದ್ದಿಯಾಗಿತ್ತು. ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

    ಆದರೆ ಇದೀಗ ಪ್ರೇಮಿಗಳ ದಿನದ ಈ ಸಂದರ್ಭದಲ್ಲಿ ತಮ್ಮ ಮೊದಲ ಲವ್ ಎಂದೇ ಬಿಂಬಿತವಾಗಿದ್ದ ಸಹನಟ ತರುಣ್ ಕುಮಾರ್ ಕುರಿತು ಪ್ರಿಯಾಮಣಿ ಮಾತನಾಡಿದ್ದಾರೆ. `ನವ ವಸಂತಂ’ ಸಿನಿಮಾದ ಚಿತ್ರೀಕರಣದ ವೇಳೆ ನಾನು ಮತ್ತು ತರುಣ್ ಪ್ರೀತಿಸುತ್ತಿದ್ದೇವೆ. ಮದುವೆಯಾಗುತ್ತಿದ್ದೇವೆ ಎಂಬ ಮಾತುಗಳು ಕೇಳಿ ಬಂದಿದ್ದವು. ತರುಣ್ ಅವರ ತಾಯಿ ರೋಜಾ ರಮಣಿ ಶೂಟಿಂಗ್ ಸ್ಥಳಕ್ಕೆ ಬಂದು ಭೇಟಿಯಾದರು. ನೀವಿಬ್ಬರೂ ಒಬ್ಬರನ್ನೊಬ್ಬರು ನಿಜವಾಗಿಯೂ ಪ್ರೀತಿಸುತ್ತೀರಾ ಎಂದು ಅವರು ಹೇಳಿದರು. ಇದು ನಿಜವಾಗಿದ್ದರೆ ನಿಮ್ಮ ಮದುವೆಗೆ ನನ್ನ ಅಭ್ಯಂತರವಿಲ್ಲ. ಏನಾದರೂ ಇದ್ದರೆ, ನನಗೆ ಧೈರ್ಯದಿಂದ ಹೇಳಿ ಎಂದಿದ್ದರು. ಆದರೆ ಇವೆಲ್ಲವೂ ಗಾಳಿ ಸುದ್ದಿ. ಪ್ರೀತಿ ಮಾಡುತ್ತಿದ್ದುದು ನಿಜವೇ ಆಗಿದ್ದರೆ ಹೌದು ಎಂದಿದ್ದರೆ ಸಾಕಿತ್ತು. ಮದುವೆ ಆಗುತ್ತಿತ್ತು. ಒಂದೇ ನಾಯಕನ ಜೊತೆ ಸತತ ಕೆಲ ಚಿತ್ರಗಳನ್ನು ಮಾಡಿದರೆ ಹೀಗೆ ಸುದ್ದಿಯಾಗುತ್ತದೆ. ಇವೆಲ್ಲವೂ ಸುಳ್ಳು. ನಾನು ಈಗ ಪತಿ ಮುಸ್ತಾಫ್ ರಾಜ್ ಜೊತೆ ನೆಮ್ಮದಿಯಿಂದ ಇದ್ದೇನೆ ಎಂದು ನಟಿ ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಿಯಾಮಣಿ ನಟನೆಯ ’56′ ಸಿನಿಮಾದ  ಟ್ರೈಲರ್ ಬಿಡುಗಡೆ

    ಪ್ರಿಯಾಮಣಿ ನಟನೆಯ ’56′ ಸಿನಿಮಾದ ಟ್ರೈಲರ್ ಬಿಡುಗಡೆ

    ಮೆಡಿಕಲ್ ಮಾಫಿಯಾ ಸುತ್ತ ನಡೆಯುವ ಕಥಾಹಂದರ ಹೊಂದಿರುವ ” 56″ ಚಿತ್ರದ ಟ್ರೈಲರ್ ಹಾಡು ಹಾಗೂ ಟ್ರೈಲರ್ ಬಿಡುಗಡೆ ಸಮಾರಂಭ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಚಲನಚಿತ್ರ ವಾಣಿಜ್ಯ‌ ಮಂಡಳಿ ಅಧ್ಯಕ್ಷ ಭಾ.ಮ ಹರೀಶ್ ಮಾತನಾಡಿ ಟ್ರೈಲರ್ ಕುತೂಹಲ ಮೂಡಿಸುವಂತಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದರು. ಚತುರ್ಭಾಷಾ ಕಲಾವಿದೆ ಪ್ರಿಯಾಮಣಿ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರವೀಣ್ ರೆಡ್ಡಿ  ಈ ಚಿತ್ರದ ನಾಯಕ ಹಾಗೂ ನಿರ್ಮಾಪಕ. ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂ‌ ಸೇರಿ ೪/ಭಾಷೆಯಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದೆ.

    ಚಿತ್ರದ ಟ್ರೈಲರ್ ಬಿಡುಗಡೆ‌ ಮಾಡಿದ ಹಿರಿಯ ಸಿನಿಮಾ ಪ್ರಚಾರಕರ್ತ ನಾಗೇಂದ್ರ ಅವರು ಮಾತನಾಡುತ್ತ,  ಚಿತ್ರ‌ ಚೆನ್ನಾಗಿ ಮೂಡಿ ಬಂದಿದೆ. ಒಳ್ಳೆಯ ಪ್ರಯತ್ನ ಮಾಡಿದ್ದಾರೆ, ಈ ಚಿತ್ರ ಖಂಡಿತ ಶತದಿನೋತ್ಸವ ಆಚರಿಸಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು. ನಿರ್ದೇಶಕ ರಾಜೇಶ್ ಆನಂದ್ ಲೀಲಾ ಮಾತನಾಡಿ,  ನಿರ್ಮಾಪಕ ಪ್ರವೀಣ್ ರೆಡ್ಡಿ ಅವರೇ  ಕಥೆ,  ಚಿತ್ರಕಥೆ  ಬರೆದಿದ್ದಾರೆ. ಚಿತ್ರಕ್ಕೆ ನಟಿ ಪ್ರಿಯಾಮಣಿ ಅವರು  ಚಿನ್ನದ ಕಳಸವಿದ್ದಂತೆ,  ಮೆಡಿಕಲ್ ಮಾಫಿಯಾದ ಸುತ್ತ ಸಾಗುವ  ಸೈನ್ಸ್  ಫಿಕ್ಷನ್ ಕತೆ, ಈವರೆಗೂ ಇದನ್ನು ಯಾರೂ ತೆರೆಮೇಲೆ ತರುವ ಪ್ರಯತ್ನ ಮಾಡಿಲ್ಲ, ವೀಕ್ಷಕರಿಗೂ ಆಶ್ಚರ್ಯವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: EXCLUSIVE:ಆಗಿದ್ದು ಎಂಗೇಜ್‌ಮೆಂಟ್ ಅಲ್ಲ, ನಾನಿನ್ನೂ ಒಪ್ಪಿಲ್ಲ: ವೈಷ್ಣವಿ

    ನಟಿ ಪ್ರಿಯಾಮಣಿ ಮಾತನಾಡಿ, ನಾನು ಮೊದಲು ಕಥೆ ಕೇಳಿದಾಗ, ನೀವು ಹೇಳಿದ ಹಾಗೆ ಸಿನಿಮಾ ಮಾಡಿದರೆ  ಹಿಟ್ ಆಗಲಿದೆ ಎಂದು ಹೇಳಿದ್ದೆ‌.  ಚಿತ್ರದ ಮೂಲಕ ಒಂದೊಳ್ಳೆ ಸಂದೇಶ ಹೇಳಲಾಗಿದೆ. ಕಥೆಯೇ ಪವರ್ ಹೌಸ್ ಹೊರತು ನಾನಲ್ಲ ಎಂದು ಹೇಳಿದರು. ನಟ, ನಿರ್ಮಾಪಕ ಪ್ರವೀಣ್ ರೆಡ್ಡಿ ಮಾತನಾಡಿ,  ಡಿಆರ್ 56 ಕಥೆ  ರೆಡಿ ಮಾಡಿಕಡು, ಸಿನಿಮಾ ಮಾಡಲು ಮುಂದಾದೆವು. ಪ್ರಿಯಾಮಣಿ ಅವರು ಕಥೆ ಕೇಳಿ ಸುಮ್ಮನೆ ಇದ್ದರು. ಅವರು ಒಪ್ಪಿಕೊಳ್ಳುತ್ತಾರೋ ಇಲ್ಲವೇ ಅನ್ನಿಸಿತ್ತು. ನಂತರ ಒಪ್ಪಿದರು. ಅವರಿಲ್ಲದಿದ್ದರೆ, ಸಿನಿಮಾನ ಎಲ್ಲಾ ಕಡೆ ತಲುಪಿಸಲು ಆಗುತ್ತಿರಲಿಲ್ಲ ಎಂದು ಹೇಳಿದರು.

    ನಟ ರೂಪೇಶ್ ಕುಮಾರ್ ಮಾತನಾಡಿ,  ಚಿತ್ರದಲ್ಲಿ ಡಾಕ್ಟರ್ ಪಾತ್ರ ಮಾಡಿದ್ದೇನೆ. ಚಿತ್ರದ ಬಿಡುಗಡೆಗೆ ಕುತೂಹಲದಿಂದ ಕಾಯುತ್ತಿದ್ದೇನೆ ಎಂದರು. ಸಂಚಿತ್ ಫಿಲಂಸ್ ವೆಂಕಟ್ ಗೌಡ ಚಿತ್ರದ ವಿತರಣೆಯ ಜವಾಬ್ದಾರಿ ಹೊತ್ತಿದ್ದು 150 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗೆಯಾಗಲಿದೆ ಎನ್ನುವ ಮಾಹಿತಿ ನೀಡಿದರು. ಛಾಯಾಗ್ರಾಹಕ ರಾಕೇಶ್ ಸಿ ತಿಲಕ್,  ಸಂಕಲನಕಾರ ವಿಶ್ವ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

    Live Tv
    [brid partner=56869869 player=32851 video=960834 autoplay=true]

  • ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿದ್ದಾರಾ ಪ್ರಿಯಾಮಣಿ: ವದಂತಿಗೆ ಸ್ಪಷ್ಟನೆ ನೀಡಿದ ನಟಿ

    ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿದ್ದಾರಾ ಪ್ರಿಯಾಮಣಿ: ವದಂತಿಗೆ ಸ್ಪಷ್ಟನೆ ನೀಡಿದ ನಟಿ

    ಹುಭಾಷಾ ನಟಿ ಪ್ರಿಯಾಮಣಿ ಇದೀಗ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಸಿನಿಮಾ, ರಿಯಾಲಿಟಿ ಶೋ, ನಡುವೆ ಬ್ಯುಸಿಯಿರುವ ನಟಿಯ ಬಗ್ಗೆ ಈ ನಡುವೆ ಡಿವೋರ್ಸ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಪತಿ ಮುಸ್ತಾಫ್‌ರಿಂದ ಡಿವೋರ್ಸ್ ವದಂತಿಗೆ ಪ್ರಿಯಾಮಣಿ ಸ್ಪಷ್ಟನೆ ನೀಡಿದ್ದಾರೆ.

    ಪುನೀತ್‌ಗೆ ನಾಯಕಿಯಾಗಿ `ರಾಮ್’ ಚಿತ್ರದ ಮೂಲಕ ಚಂದನವನಕ್ಕೆ ಲಗ್ಗೆಯಿಟ್ಟ ನಟಿ ನಂತರ ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಬಹುಭಾಷಾ ನಾಯಕಿಯಾಗಿ ಗುರುತಿಸಿಕೊಂಡರು. ಬೇಡಿಕೆ ಇರುವಾಗಲೇ ಉದ್ಯಮಿ ಮುಸ್ತಾಫ್ ಜತೆ 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಮದುವೆ ಆಗಿ ಇಷ್ಟು ವರ್ಷಗಳಾದರು ಮಕ್ಕಳಾಗಿಲ್ಲ, ಮಕ್ಕಳನ್ನ ದತ್ತು ಪಡೆಯುತ್ತಿದ್ದಾರೆ ಎಂಬೆಲ್ಲಾ ವದಂತಿಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಹಾಗಾಗಿ ಪ್ರಿಯಾಮಣಿ ಡಿವೋಸ್‌ ಪಡೆಯುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಬೆನ್ನಲ್ಲೇ ನಟಿ ಕೂಡ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು

    ಎಲ್ಲೆಡೆ ಹರಿದಾಡುತ್ತಿರುವ ಸುದ್ದಿ ಸುಳ್ಳು, ನಾವು ಡಿವೋರ್ಸ್ ಪಡೆಯುತ್ತಿಲ್ಲ. ನಮ್ಮ ದಾಂಪತ್ಯ ಚೆನ್ನಾಗಿದೆ. ನಾವು ಖುಷಿಯಿಂದ ಬಾಳುತ್ತೀದ್ದೇವೆ ಎಂದು ಪ್ರಿಯಾಮಣಿ ಮಾತನಾಡಿದ್ದಾರೆ. ಈ ಮೂಲಕ ಡಿವೋರ್ಸ್ ವಿಚಾರದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಲ್ಲು ಅರ್ಜುನ್ ನಟನೆಯ `ಪುಷ್ಪ 2′ ಚಿತ್ರದಲ್ಲಿ ಪ್ರಿಯಾಮಣಿ

    ಅಲ್ಲು ಅರ್ಜುನ್ ನಟನೆಯ `ಪುಷ್ಪ 2′ ಚಿತ್ರದಲ್ಲಿ ಪ್ರಿಯಾಮಣಿ

    ನ್ನಡತಿ ಪ್ರಿಯಾಮಣಿ ಸ್ಯಾಂಡಲ್‌ವುಡ್ ಮಾತ್ರವಲ್ಲದೇ ಪರಭಾಷೆ ಸಿನಿಮಾಗಳಲ್ಲೂ ಛಾಪೂ ಮೂಡಿಸುತ್ತಿರುವ ನಟಿ ಸದ್ಯ ಬಹುನಿರೀಕ್ಷಿತ ಚಿತ್ರ `ಪುಷ್ಪ 2′ ಚಿತ್ರತಂಡ ಸೇರಿಕೊಂಡಿದ್ದಾರೆ. ಅಲ್ಲು ಅರ್ಜುನ್ ನಟನೆಯ ಈ ಸಿನಿಮಾದಲ್ಲಿ ಪ್ರಿಯಾಮಣಿ ಕಾಣಿಸಿಕೊಳ್ತಿದ್ದಾರೆ.

    `ಪುಷ್ಪ’ ಸಿನಿಮಾ ಯಾರು ಊಹಿಸಿರದ ಮಟ್ಟಿಗೆ ಸಕ್ಸಸ್ ಕಂಡಿರುವ ಚಿತ್ರ. ಇಡೀ ದೇಶವೇ ಪುಷ್ಪ 2ಗಾಗಿ ಕಾಯ್ತಿದ್ದಾರೆ. ಹೀಗಿರುವಾಗ ಆಗಸ್ಟ್ನಲ್ಲಿ ಶೂಟಿಂಗ್ `ಪುಷ್ಪ 2′ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಐಕಾನ್ ಸ್ಟಾರ್ ಸಿನಿಮಾಗೆ ಸೂಪರ್ ಸ್ಟಾರ್‌ಗಳ ಎಂಟ್ರಿ ಆಗುತ್ತಿದೆ. ಇತ್ತೀಚೆಗಷ್ಟೇ ವಿಜಯ್ ಸೇತುಪತಿ ಈ ಚಿತ್ರತಂಡ ಸೇರಿಕೊಂಡಿದ್ದರು. ಈಗ ಬಹುಭಾಷಾ ನಟಿ ಪ್ರಿಯಾಮಣಿ ಈ ಚಿತ್ರಕ್ಕೆ ಸಾಥ್ ನೀಡಲಿದ್ದಾರೆ. ಇದನ್ನೂ ಓದಿ:ಶ್ರದ್ಧಾ ಹೆಸರಿನ ಮುಂದಿರುವ ಈ ರಮಾ ಯಾರು?

    ಕನ್ನಡ ಸೇರಿದಂತೆ ಬಹುಭಾಷಾ ಚಿತ್ರಗಳಲ್ಲಿ ಬ್ಯುಸಿಯಿರುವ ಬ್ಯೂಟಿ ಕ್ವೀನ್ ಪ್ರಿಯಾಮಣಿ ಸದ್ಯ `ಪುಷ್ಪ 2′ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಚಿತ್ರದಲ್ಲಿ ಪವರ್‌ಫುಲ್ ಪಾತ್ರದಲ್ಲಿ ನಟಿ ಕಾಣಿಸಿಕೊಳ್ತಿದ್ದಾರೆ. ವಿಜಯ್ ಸೇತುಪತಿ ಅವರ ಪತ್ನಿಯ ಪಾತ್ರದಲ್ಲಿ ಪ್ರಿಯಾಮಣಿ ಬಣ್ಣ ಹಚ್ಚಲಿದ್ದಾರೆ. ವಿಜಯ್ ಈ ಚಿತ್ರದಲ್ಲಿ ಫಾರೆಸ್ಟ್ ಆಫೀಸರ್ ಪಾತ್ರದಲ್ಲಿ ನಟಿಸಲಿದ್ದಾರೆ. ಪುಷ್ಪ ಪಾರ್ಟ್ 2 ಚಿತ್ರದಲ್ಲಿ ದಿನದಿಂದ ದಿನಕ್ಕೆ ಕಲಾವಿದರ ದಂಡೇ ಸೇರ್ಪಡೆಯಾಗುತ್ತಿದೆ. ಈ ಸುದ್ದಿ ಕೇಳಿ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವೈಟ್ ಡ್ರೆಸ್‌ನಲ್ಲಿ ಮಿಂಚಿದ ಬಹುಭಾಷಾ ನಟಿ ಪ್ರಿಯಾಮಣಿ

    ವೈಟ್ ಡ್ರೆಸ್‌ನಲ್ಲಿ ಮಿಂಚಿದ ಬಹುಭಾಷಾ ನಟಿ ಪ್ರಿಯಾಮಣಿ

    ಹುಭಾಷಾ ನಟಿ ಪ್ರಿಯಾಮಣಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪ್ರಿಯಾಮಣಿ ವೈಟ್ ಡ್ರೆಸ್‌ನಲ್ಲಿ ಹಾಟ್ ಲುಕ್‌ನಿಂದ ಗಂಡ್ ಹೈಕ್ಳ ನಿದ್ದೆಗೆಡಿಸಿದ್ದಾರೆ. ನಯ ಅವತಾರದ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದ್ದಾರೆ.

    ಪುನೀತ್ ನಟನೆಯ `ರಾಮ್’ ಚಿತ್ರದ ಮೂಲಕ ನಾಯಕಿಯಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ನಟಿ, ನಂತರ ಸಾಲು ಸಾಲು ಕನ್ನಡ ಚಿತ್ರದ ಮೂಲಕ ಮೋಡಿ ಮಾಡಿದ್ದರು. ಟಾಲಿವುಡ್ ಮತ್ತು ಬಾಲಿವುಡ್‌ನಲ್ಲೂ ಬಹುಬೇಡಿಕೆಯ ನಟಿಯಾಗಿ ಮಿಂಚ್ತಿದ್ದಾರೆ. ಈಗ ಸಿನಿಮಾಗಳ ಮಧ್ಯೆ ಕೊಂಚ ಫೋಟೋಶೂಟ್‌ಗೆ ಟೈಮ್ ಕೊಟ್ಟು, ಕ್ಯಾಮೆರಾ ಎದುರು ಮಿರ ಮಿರ ಅಂತಾ ಮಿಂಚಿದ್ದಾರೆ. ಇದನ್ನೂ ಓದಿ:‘ಆಸ್ಕರ್’ ಕಮಿಟಿಯಲ್ಲಿ ಭಾರತದ ಮೂವರಿಗೆ ಸ್ಥಾನ : ತಮಿಳು ನಟ ಸೂರ್ಯಗೂ ಚಾನ್ಸ್

     

    View this post on Instagram

     

    A post shared by Priya Mani Raj (@pillumani)

    ಕಣ್ಣಿಗೆ ಚೆಂದದ ಸ್ಟೈಲೀಶ್‌ ಗ್ಲ್ಯಾಸ್ ಹಾಕಿ, ವೈಟ್ ಡ್ರೆಸ್‌ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿಯ ನಯಾ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಇನ್ನು ಕನ್ನಡ, ತಮಿಳು, ತೆಲುಗು ಸೇರಿದಂತೆ ಸಾಲು ಸಾಲು ಚಿತ್ರಗಳು ಪ್ರಿಯಾಮಣಿ ಕೈಯಲ್ಲಿದೆ.

    Live Tv

  • ಬಾಲಿವುಡ್‍ನಲ್ಲಿ ದಕ್ಷಿಣ ಭಾರತೀಯರು ಹಿಂದಿಯನ್ನು ಅಸಾಧಾರಣವಾಗಿ ಮಾತಾಡ್ತಿದ್ದಾರೆ: ಪ್ರಿಯಾಮಣಿ

    ಬಾಲಿವುಡ್‍ನಲ್ಲಿ ದಕ್ಷಿಣ ಭಾರತೀಯರು ಹಿಂದಿಯನ್ನು ಅಸಾಧಾರಣವಾಗಿ ಮಾತಾಡ್ತಿದ್ದಾರೆ: ಪ್ರಿಯಾಮಣಿ

    ಮುಂಬೈ: ಬಾಲಿವುಡ್ ಸಿನಿಮಾಗಳಲ್ಲಿ ದಕ್ಷಿಣ ಭಾರತದ ಕಲಾವಿದರೂ ಹಿಂದಿಯನ್ನು ಅಸಾಧಾರಣವಾಗಿ ಮಾತನಾಡುತ್ತಿರುವುದಾಗಿ ಬಿಗ್ ಸ್ಕ್ರೀನ್ ಮೇಲೆ ತೋರಿಸಲಾಗುತ್ತಿದೆ ಎಂದು ನಟಿ ಪ್ರಿಯಾಮಣಿ ಹೇಳಿದ್ದಾರೆ.

    ನಟಿ ಶ್ರೀದೇವಿ, ರೇಖಾ ಮತ್ತು ಹೇಮಾ ಮಾಲಿನಿಯಂತಹ ಕಲಾವಿದರ ಬಳಿಕ ಹಿಂದಿ ಸಿನಿಮಾದಲ್ಲಿ ದಕ್ಷಿಣ ಭಾರತೀಯರಿಗೆ ಪ್ರಾತಿನಿಧ್ಯದ ಕೊರತೆ ಇತ್ತು. ಆದರೆ ಈಗ ಎಲ್ಲ ಬದಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ತಮ್ಮ ಜೊತೆ ಸಮಯ ಕಳೆಯುವಂತೆ ನಿರ್ದೇಶಕರೊಬ್ಬರು ಹೇಳಿದ್ದರು- ಕಾಸ್ಟಿಂಗ್ ಕೌಚ್ ಬಗ್ಗೆ ದಿವ್ಯಾಂಕ ಮಾತು

    ಇತ್ತೀಚೆಗಷ್ಟೇ ಸಂದರ್ಶವೊಂದರಲ್ಲಿ ಮಾತನಾಡಿದ ಅವರು, ಕೊನೆಗೂ ದಕ್ಷಿಣ ಭಾರತದ ಕಲಾವಿದರ ಪ್ರತಿಭೆಗೆ ಮನ್ನಣೆ ಸಿಗುತ್ತಿದೆ. ಈ ಹಿಂದಿ ಶ್ರೀದೇವಿ, ರೇಖಾ, ಹೇಮಾ ಮಾಲಿನಿ, ವೈಜಯಂತಿಮಾಲಾ ಮುಂತಾದವರು ಬಾಲಿವುಡ್ ಆಳಿದ ಕಾಲವಿತ್ತು. ನಂತರ ಬಾಲಿವುಡ್‍ನಲ್ಲಿ ಹಿಂದಿ ಮಾತನಾಡುವ ಕಲಾವಿದರೂ ಮಾತ್ರ ಇದ್ದರು. ಆದರೆ ಇದೀಗ ದಕ್ಷಿಣ ಭಾರತದ ಕಲಾವಿದರಾದ ಚೆನ್ನೈನವರಾಗಿರಬಹುದು, ಕೇರಳದವರಾಗಿರಬಹುದು ಬಾಲಿವುಡ್‍ನಲ್ಲಿ ಮಿಂಚುತ್ತಿದ್ದಾರೆ. ಅವರು ಹಿಂದಿ ಬರದಿದ್ದರೂ ಮಾತನಾಡುತ್ತಾರೆ. ಇದು ನೋಡಲು ನನಗೆ ಬಹಳ ತಮಾಷೆಯಾಗಿ ಕಾಣಿಸುತ್ತದೆ ಎಂದು ಹೇಳಿದ್ದಾರೆ.

    ನಾನು ಸಾಕಷ್ಟು ಸಿನಿಮಾಗಳನ್ನು ನೋಡಿದ್ದೇನೆ ಮತ್ತು ದಕ್ಷಿಣ ಭಾರತೀಯರು ಹಿಂದಿಯನ್ನು ಮಾತನಾಡುವ ವರ್ಷನ್ ಬೇರೆಯಾಗಿರುತ್ತದೆ ಅಷ್ಟೇ. ಕೆಲವರು ಮಾತ್ರ ಸ್ಪಷ್ಟವಾಗಿ ಉಚ್ಛರಿಸುತ್ತಾರೆ. ಆದರೆ ಒಂದು ಹಂತದ ಬಳಿಕ ಇದು ಬಾಲಿವುಡ್ ತಂತ್ರಜ್ಞಾನರನ್ನು ಸೆಳೆಯಲು ಪ್ರಾರಂಭಿಸಿತು. ಇದೀಗ ಸಾಕಷ್ಟು ದಕ್ಷಿಣ ಭಾರತದ ತಂತ್ರಜ್ಞರು ಬಾಲಿವುಡ್‍ಗೆ ಬಂದು ತಮ್ಮ ಛಾಪು ಮೂಡಿಸುತ್ತಿರುವುದನ್ನು ನೋಡಬಹುದಾಗಿದೆ. ಕೊನೆಗೂ ದಕ್ಷಿಣ ಭಾರತದ ಪ್ರತಿಭೆಗಳು ಬಾಲಿವುಡ್ ಮಿಂಚುತ್ತಿದ್ದಾರೆ ಮತ್ತು ದಕ್ಷಿಣದ ಸ್ಟಾರ್ ನಟರು ಬಾಲಿವುಡ್‍ನಲ್ಲಿ ಅವಕಾಶ ಪಡೆಯುತ್ತಿರುವುದು ನನಗೆ ಬಹಳ ಸಂತೋಷವಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಯಾತ್ರಾರ್ಥಿಗಳಿಗಾಗಿ ಪಾಕಿಸ್ತಾನದ ಪ್ರಸ್ತಾವನೆ ಬಗ್ಗೆ ಚರ್ಚೆ ನಡೆಸಲು ಭಾರತ ಸಿದ್ಧ

    ಪ್ರಿಯಾಮಣಿ ಅವರು ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 2013 ರಲ್ಲಿ ತೆರೆಕಂಡ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಚೆನ್ನೈ ಎಕ್ಸ್‍ಪ್ರೆಸ್ ಸಿನಿಮಾದಲ್ಲಿ ವಿಶೇಷ ಹಾಡೊಂದರಲ್ಲಿ ಹೆಜ್ಜೆಹಾಕಿದ್ದರು. ಇತ್ತೀಚೆಗಷ್ಟೆ ದಿ ಫ್ಯಾಮಿಲಿ ಮ್ಯಾನ್-2 ಸೀಸನ್‍ನಲ್ಲಿ ಮನೋಜ್ ಬಾಜ್‍ಪೇಯಿ ಅವರ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅಮೆಜಾನ್ ಪ್ರೈಮ್‍ನಲ್ಲಿ ಈ ವೆಬ್ ಸೀರಿಸ್ ಬಿಡುಗಡೆಗೊಂಡು ಸಾಕಷ್ಟು ಹಿಟ್ ಪಡೆದುಕೊಂಡಿತ್ತು.

  • ಮೊದಲ ಪತ್ನಿಗೆ ವಿಚ್ಛೇದನ ನೀಡದೇ ಪ್ರಿಯಾಮಣಿ ಜೊತೆ ಮದ್ವೆಯಾದ್ರಾ ಮುಸ್ತಾಫಾ?

    ಮೊದಲ ಪತ್ನಿಗೆ ವಿಚ್ಛೇದನ ನೀಡದೇ ಪ್ರಿಯಾಮಣಿ ಜೊತೆ ಮದ್ವೆಯಾದ್ರಾ ಮುಸ್ತಾಫಾ?

    – ಇಬ್ಬರ ಮದುವೆ ಅಸಿಂಧು ಅಂದ್ರು ಮುಸ್ತಾಫಾ ಮೊದಲ ಮಡದಿ

    ಬೆಂಗಳೂರು: ಬಹುಭಾಷಾ ನಟಿ ಪ್ರಿಯಾಮಣಿ ಮತ್ತು ಮುಸ್ತಾಫಾ ರಾಜ್ ಮದುವೆ ಅಸಿಂಧು ಎಂದು ಮೊದಲ ಮಡದಿ ಆಯೇಷಾ ಹೇಳಿದ್ದು, ತಾನಿನ್ನೂ ಮುಸ್ತಾಫಾ ಪತ್ನಿ ಎಂದು ಹೇಳಿಕೊಂಡಿದ್ದಾರೆ. ಪತಿ ಮುಸ್ತಾಫಾ ತಮಗೆ ವಿಚ್ಛೇದನ ನೀಡದೇ ಪ್ರಿಯಾಮಣಿಯನ್ನು ಮದುವೆ ಆಗಿದ್ದಾರೆಂದು ಆಯೇಷಾ ಗಂಭೀರ ಆರೋಪ ಮಾಡಿದ್ದಾರೆ.

    2013ರಲ್ಲಿ ಮುಸ್ತಾಫಾ ಮತ್ತು ಆಯೇಷಾ ಪ್ರತ್ಯೇಕವಾಗಿದ್ದರು. ದಂಪತಿ ಎರಡು ಮಕ್ಕಳಿದ್ದು, ಪತ್ನಿಯಿಂದ ದೂರವಾದ್ರೂ ಮುಸ್ತಾಫಾ ಆರ್ಥಿಕ ಸಹಾಯ ನೀಡುತ್ತಿದ್ದಾರೆ ಎಂದು ಹೇಳಲಾಗ್ತಿದೆ. ಮೊದಲ ಪತ್ನಿಯಿಂದ ದೂರವಾದ ಬಳಿಕ 2017ರಲ್ಲಿ ಪ್ರಿಯಾಮಣಿಯನ್ನ ಮುಸ್ತಾಫಾ ಮದುವೆಯಾಗಿದ್ದರು. ಸರಳವಾಗಿ ನೋಂದಣಿ ಕಚೇರಿಯಲ್ಲಿ ಮದುವೆಯಾಗಿದ್ದ ಜೋಡಿ, ಆನಂತರ ಅದ್ಧೂರಿ ಆರತಕ್ಷತೆ ಆಯೋಜಿಸಿದ್ದರು. ಆದ್ರೆ ಪ್ರಿಯಾಮಣಿಯನ್ನ ಮದುವೆಯಾಗುವ ವೇಳೆ ಮುಸ್ತಾಫಾ ತಾವಿನ್ನೂ ಸಿಂಗಲ್ ಎಂದು ದಾಖಲಿಸಿದ್ದಾರೆ ಎನ್ನಲಾಗಿದೆ.

    ಆಯೇಷಾ ಹೇಳಿದ್ದೇನು?:
    ನಾನಿನ್ನೂ ಮುಸ್ತಾಫಾ ರಾಜ್ ಪತ್ನಿಯಾಗಿದ್ದು, ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಹ ಸಲ್ಲಿಸಿಲ್ಲ. 2017ರಲ್ಲಿ ಪ್ರಿಯಾಮಣಿ ಅವರನ್ನ ಮದುವೆಯಾಗುವಾಗ ಮುಸ್ತಾಫಾ ನ್ಯಾಯಾಲಯಕ್ಕೆ ತಾವು ಬ್ಯಾಚೂಲರ್ ಅಂತ ಹೇಳಿಕೊಂಡಿದ್ದಾರೆ. ಹಾಗಾಗಿ ಇಬ್ಬರ ಮದುವೆ ಕಾನೂನಿನ ಪ್ರಕಾರ ಅಸಿಂಧು. ಸರಿಯಾದ ದಾರಿಯಲ್ಲಿ ಸಮಸ್ಯೆಯನ್ನ ಬಗೆಹರಿಸಿಕೊಳ್ಳಲು ಪ್ರಯತ್ನಿಸಿದೆ. ಆದ್ರೆ ಅದು ಫಲಪ್ರದವಾಗಲಿಲ್ಲ. ಹಾಗಾಗಿ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಆಯೇಷಾ ಹೇಳಿದ್ದಾರೆ. ಇದನ್ನೂ ಓದಿ: ಶಾರೂಖ್ ಬಳಿ 300 ರೂ. ಪಡೆದಿದ್ದ ಪ್ರಿಯಾಮಣಿ

    ಆಯೇಷಾ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಮುಸ್ತಾಫಾ ರಾಜ್, ಮಕ್ಕಳಿಗಾಗಿ ಪತ್ನಿಗೆ ಹಣ ನೀಡುತ್ತಿದ್ದೇನೆ. 2017ರಲ್ಲಿ ಮದುವೆಯಾದ್ರೂ ಕೌಟುಂಬಿಕ ಹಿಂಸಾಚಾರ ಸೇರಿದಂತೆ ನನ್ನ ವಿರುದ್ಧ ಈಗ ಆರೋಪಗಳನ್ನು ಮಾಡುತ್ತಿರೋದೇಕೆ? ಎಂದು ಪ್ರಶ್ನೆ ಮಾಡಿದ್ದಾರೆ. ಇದು ನನ್ನಿಂದ ಹೆಚ್ಚು ಹಣ ಪಡೆದುಕೊಳ್ಳುವ ಹುನ್ನಾರ ಎಂದು ಮರು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸಾರಿ ಮಚ್ಚಾ, ನನ್ನ ಬಳಿ ನಮ್ಮಿಬರ ಜೊತೆಗಿನ ಫೋಟೋ ಇಲ್ಲ: ಪ್ರಿಯಾಮಣಿ

  • ಪಿಂಕ್ ಸೀರೆ ತೊಟ್ಟು ಫೋಟೋಗೆ ಪ್ರಿಯಾಮಣಿ ಪೋಸ್

    ಪಿಂಕ್ ಸೀರೆ ತೊಟ್ಟು ಫೋಟೋಗೆ ಪ್ರಿಯಾಮಣಿ ಪೋಸ್

    ಮುಂಬೈ: ಬಹುಭಾಷಾ ನಟಿ ಪ್ರಿಯಾಮಣಿ ಕಸ್ಟಮ್ ಸೀರೆ ತೊಟ್ಟು ಫೋಟೋಗೆ ಪೋಸ್ ನೀಡಿದ್ದಾರೆ.

    ಹೂವಿನ ಮುದ್ರಣದ ಜೊತೆಗೆ ತಮ್ಮ ಹೆಸರನ್ನು ಕೂಡ ಮುದ್ರಿಸಬಹುದಾಗಿರುವ ಪಿಂಕ್ ಕಲರ್‍ನ ಈ ಸೀರೆ ಸದ್ಯ ಹೊಸ ಟ್ರೇಡ್ ಸೃಷ್ಟಿಸಿದೆ. ಹಲವಾರು ನಟಿಯರು ಈ ಸೀರೆಗೆ ಫಿದಾ ಆಗಿದ್ದು, ಖರೀದಿಸುತ್ತಿದ್ದಾರೆ. ಇದೀಗ ನಟಿ ಪ್ರಿಯಾಮಣಿ ಕೂಡ ಈ ಸಾಲಿಗೆ ಸೇರಿಕೊಂಡಿದ್ದಾರೆ.

    ಪ್ರಿಯಾಮಣಿಯವರು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋದಲ್ಲಿ ಬೇಬಿ ಪಿಂಕ್ ಕಲರ್‍ನ ತೆಳುವಾದ ಸೀರೆ ತೊಟ್ಟು, ಸೀರೆಗೆ ಮ್ಯಾಚ್ ಆಗುವಂತೆ ದೊಡ್ಡ ಇಯರ್‍ರಿಂಗ್ ಧರಸಿ, ಸಿಂಪಲ್ ಆಗಿ ಮೇಕಪ್ ಮಾಡಿಕೊಂಡು ಪ್ರಿಯಾಮಣಿ ಗ್ಲಾಮರ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ.

     

    View this post on Instagram

     

    A post shared by Priya Mani Raj (@pillumani)

    ಇತ್ತೀಚೆಗೆ ನಟಿ ಸಮಂತಾ ಅಕ್ಕಿನೇನಿ, ಕರೀನಾ ಕಪೂರ್ ಸೇರಿದಂತೆ ಅನೇಕ ನಟಿಯರು ಈ ಸೀರೆಯನ್ನು ಖರೀದಿಸಿ ಫೋಟೋ ಶೂಟ್ ಮಾಡಿಸಿದ್ದರು. ಇನ್ನೂ ಲಾಕ್‍ಡೌನ್ ವೇಳೆ ಬಿಡುಗಡೆಗೊಂಡಿದ್ದ ಫ್ಯಾಮಿಲಿ ಮ್ಯಾನ್-2 ವೆಬ್ ಸಿರೀಸ್‍ನಲ್ಲಿ ಮಿಂಚಿದ್ದ ಪ್ರಿಯಾಮಣಿ ಸದ್ಯ ತಮಿಳು, ತೆಲುಗು, ಕನ್ನಡ ಚಿತ್ರರಂಗದಲ್ಲಿ ಬ್ಯೂಸಿಯಾಗಿದ್ದಾರೆ.