ವಿನೋದ್ ಪ್ರಭಾಕರ್ ಅವರ ಅಭಿನಯದ “ಮಾದೇವ” ಚಿತ್ರ ಭರ್ಜರಿ ಯಶಸ್ಸು ಕಂಡಿದೆ. ಆ ಚಿತ್ರದ ನಂತರ ವಿನೋದ್ ಪ್ರಭಾಕರ್ (Vinod Prabhakar ಅವರು ನಾಯಕರಾಗಿ ನಟಿಸುತ್ತಿರುವ “ಬಲರಾಮನ ದಿನಗಳು” (Balaramana Dinagalu) ಚಿತ್ರ ಸಹ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತುತ ಬಹು ನಿರೀಕ್ಷಿತ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಸಕಲೇಶಪುರ ಮುಂತಾದ ಕಡೆ 80 ದಿನಗಳ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಲಿದೆ.

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರ ಚೊಚ್ಚಲ ನಿರ್ಮಾಣದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರವನ್ನು “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶಿಸುತ್ತಿದ್ದಾರೆ. ಟೈಗರ್ ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪ್ರಿಯಾ ಆನಂದ್ (Priya Anand) ಅಭಿನಯಿಸುತ್ತಿದ್ದಾರೆ. ಹೆಸರಾಂತ ಕಲಾವಿದರಾದ ಅತುಲ್ ಕುಲಕರ್ಣಿ, ಆಶಿಶ್ ವಿದ್ಯಾರ್ಥಿ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. “ಬಿಗ್ ಬಾಸ್” ಖ್ಯಾತಿಯ ವಿನಯ್ ಗೌಡ ಸಹ ಈ ಚಿತ್ರದಲ್ಲ ನಟಿಸಿದ್ದಾರೆ. ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಅಭಿನಯಿಸಿರುವ ಖ್ಯಾತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಈ ಕುರಿತು ವಿವರ ನೀಡಲಿದೆ. ಇದನ್ನೂ ಓದಿ: ಹಾಲಿವುಡ್ನಲ್ಲಿ ಫ್ಯಾಮಿಲಿ ಜೊತೆ ಐಕಾನ್ಸ್ಟಾರ್ ಜಾಲಿ ಜಾಲಿ..!

1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ. ಇದು ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿರುವ ಮೊದಲ ಕನ್ನಡ ಚಿತ್ರವಾಗಿದೆ. ವೇಣು “ಬಲರಾಮನ ದಿನಗಳು” ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ಇದನ್ನೂ ಓದಿ: ಹಾಲಿವುಡ್ನಲ್ಲಿ ಫ್ಯಾಮಿಲಿ ಜೊತೆ ಐಕಾನ್ಸ್ಟಾರ್ ಜಾಲಿ ಜಾಲಿ..!
.





ಇತ್ತೀಚೆಗಷ್ಟೇ ಶಿವಣ್ಣ ಮತ್ತು ಪ್ರಭುದೇವ ಕಾಂಬಿನೇಷನ್ನಲ್ಲಿ ನಿರ್ದೇಶನ ಮಾಡುವುದಾಗಿ ಭಟ್ರು ಅಧಿಕೃತವಾಗಿ ಹೇಳಿದ್ದರು. ಇದೀಗ ಈ ಸಿನಿಮಾಗಾಗಿ ತೆರೆಮರೆಯಲ್ಲಿ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ. ಶಿವರಾಜ್ಕುಮಾರ್ ಮತ್ತು ಪ್ರಭುದೇವ ಚಿತ್ರಕ್ಕೆ ಚಂದನವನದ ಪ್ರತಿಭಾವಂತ ನಾಯಕಿಯರನ್ನೇ ಭಟ್ರು ಹುಡುಕಿದ್ದಾರೆ.
`ಕುಲದಲ್ಲಿ ಕೀಳ್ಯಾವುದೋ’ ತಾತ್ಕಲಿಕ ಟೈಟಲ್ನ ಈ ಚಿತ್ರದಲ್ಲಿ ನಾಯಕಿಯರಾಗಿ ರಾಜಕುಮಾರ ಮತ್ತು ಜೇಮ್ಸ್ ಚಿತ್ರದ ನಾಯಕಿ ಪ್ರಿಯಾ ಆನಂದ್ ಶಿವಣ್ಣಗೆ ಜೋಡಿಯಾಗಿ ಕಾಣಿಸಿಕೊಂಡ್ರೆ, ಇತ್ತ ಪ್ರಭುದೇವಗೆ ನಾಯಕಿಯಾಗಿ ಸಖತ್ ಬ್ಯೂಟಿ ನಿಶ್ವಿಕಾ ನಾಯ್ಡು ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:
ಬಿಗ್ ಸ್ಟಾರ್ಗಳಿರುವ ಈ ಪ್ರಾಜೆಕ್ಟ್ ಮೇಲೆ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳಿಗೆ ನಿರೀಕ್ಷೆಯಿದೆ. ಇದೇ ಆಗಸ್ಟ್ 20ಕ್ಕೆ ಸಿನಿಮಾ ಕೂಡ ಸೆಟ್ಟೇರಲಿದೆ. ಮುಂದಿನ ದಿನಗಳಲ್ಲಿ ಈ ಚಿತ್ರ ಹೇಗೆ ಕಮಾಲ್ ಮಾಡಬಹುದು ಅಂತಾ ಕಾದುನೋಡಬೇಕಿದೆ.
ನಾನು ಈ ಹೇಳಿಕೆ ನೀಡಿ ಒಂದು ವಾರ ಕಳೆದಿದೆ. ಆದರೆ, ನಾನು ಹೇಳಿಕೆ ನೀಡಿರುವುದು ಕೇವಲ ತಮಾಷೆಗಾಗಿ ಅಷ್ಟೇ ನಿತ್ಯಾನಂದ ಬಗ್ಗೆ ಮಾಡೋ ಟ್ರೋಲ್ಸ್, ಮಿಮ್ಸ್, ವಿಡಿಯೋಗಳು ನನಗೆ ತುಂಬಾ ಇಷ್ಟ. ನಾನು ಮದುವೆ ಆಗುತ್ತೀನಿ ಎಂದಿದ್ದು ಜಸ್ಟ್ ಕಾಮಿಡಿ ಎಂದು ಪ್ರಿಯಾ ಆನಂದ್ ಸ್ಪಷ್ಟನೆ ನೀಡಿದ್ದಾರೆ. ಇದನ್ನು ದೊಡ್ಡದು ಮಾಡೋ ಅಗತ್ಯವಿಲ್ಲ ಎಂದು ಮಾತನಾಡಿದ್ದಾರೆ.















