Tag: ಪ್ರಿಯಾ ಹಾಸನ್

  • ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌

    ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌

    ಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದಾಗಿದೆ. ಇದರ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಪರ ವಿರೋಧ ಚರ್ಚೆಗಳು ಶುರುವಾಗಿವೆ. ನಟ ದರ್ಶನ್ (Darshan) ಬಗ್ಗೆ ಹಾಗೂ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸಿನಿಮಾ ಇಂಡಸ್ಟ್ರಿ ತನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ನಟಿ ಹಾಗೂ ನಿರ್ಮಾಪಕಿಯಾಗಿರುವ ಪ್ರಿಯಾ ಹಾಸನ್ (Priya Hassan) ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು. ಸುಪ್ರೀಂನಿಂದ (Supreme Court) ಬಂದ ಆದೇಶ ಇಡೀ ಸಮಾಜಕ್ಕೆ ಒಳ್ಳೆ ಮೆಸೇಜ್ ಸಿಕ್ಕಿದೆ. ಯಾರೇ ಆದರೂ ಕಾನೂನಿನ ಮುಂದೆ ಸಮಾನರು ಎನ್ನುವುದು ಮತ್ತೆ ಸಾಬೀತಾಗಿದೆ. ಪವಿತ್ರಾಗೌಡಗೆ ಮೆಸೇಜ್ ಬಂತು ನಿಜ ಒಪ್ಪಿಕೊಳ್ಳೋಣ. ಆದರೆ ಕಾನೂನು ರೀತಿಯಲ್ಲಿ ನಟ ದರ್ಶನ್ ಆಗಲಿ ಪವಿತ್ರಾ ಗೌಡ (Pavithra Gowda) ಕ್ರಮ ತೆಗೆದುಕೊಳ್ಳಬೇಕಿತ್ತು. ಅದಕ್ಕಂತಲೇ ಪೊಲೀಸ್ ಹಾಗೂ ಕಾನೂನಿತ್ತು. ಏಕಾಏಕಿ ಕಾನೂನು ಕೈಗೆ ತೆಗೆದುಕೊಂಡಿದ್ದು ತಪ್ಪು ಎಂದು ಹೇಳಿದ್ದಾರೆ.

     

    ರೇಣುಕಾಸ್ವಾಮಿ ಕುಟುಂಬಕ್ಕೆ ಭರವಸೆ ಸಿಕ್ಕಂತಾಗಿದೆ. ಆದರೆ ರೇಣುಕಾಸ್ವಾಮಿ ಮಾಡಿದ ತಪ್ಪನ್ನು ದರ್ಶನ್ ಅವರ ಅಭಿಮಾನಿಗಳು ಮಾಡುತ್ತಿದ್ದಾರೆ. ಹೆಣ್ಣುಮಕ್ಕಳಿಗೆ ಕೆಟ್ಟದಾಗಿ ಕಮೆಂಟ್ಸ್ ಮಾಡುತ್ತಿದ್ದಾರೆ ಎಂದು ದರ್ಶನ್ ಅಭಿಮಾನಿಗಳಿಗೆ ಖಡಕ್ ರಿಯಾಕ್ಷನ್ ಕೊಟ್ಟಿದ್ದಾರೆ. ನಿಮ್ ಫ್ಯಾಮಿಲಿ ಇದೆ ಅದನ್ನ ಚೆನ್ನಾಗಿ ನೋಡಿಕೊಳ್ಳಿ. ಕೆಟ್ಟದಾಗಿ ಮೆಸೇಜ್ ಮಾಡಬೇಡಿ. ನಿಮ್ಮ ಮನೆಯಲ್ಲೂ ಹೆಣ್ಣುಮಕ್ಕಳು ಇದ್ದಾರೆ. ರಮ್ಯಾ ಅವರಿಗೆ ಕೆಟ್ಟದಾಗಿ ಮೇಸೇಜ್ ಮಾಡಿದ್ದು ತಪ್ಪು, ರಮ್ಯಾ ಅವರ ಡೇರಿಂಗ್ ಮೆಚ್ಚಬೇಕು ಎಂದು ಹೇಳಿದ್ದಾರೆ.

    ತಪ್ಪು ಮಾಡಿದವರು ಶಿಕ್ಷೆ ಅನುಭವಸಿಸಬೇಕು.. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದಿದ್ದಾರೆ. ತಪ್ಪು ಮಾಡಿದ ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ ಶಿಕ್ಷೆ ಅನುಭವಿಸಲೇಬೇಕೆಂದು ಹೇಳಿದ್ದಾರೆ.

  • ಸೆ.23ಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಗರಿಗೆದರಿದ ಚಟುವಟಿಕೆ

    ಸೆ.23ಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಗರಿಗೆದರಿದ ಚಟುವಟಿಕೆ

    ರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chember) ಚುನಾವಣೆ ಕೊನೆಗೂ ಘೋಷಣೆಯಾಗಿದೆ. ಇದೇ ಸೆಪ್ಟೆಂಬರ್ 23ರಂದು ಚುನಾವಣೆ (Election) ನಡೆಯುತ್ತಿದ್ದು, ಅಧ್ಯಕ್ಷ ಸ್ಥಾನಕ್ಕೆ ಎಂ.ಎನ್.ಸುರೇಶ್ ಸೇರಿದಂತೆ ಹಲವರು ಸ್ಪರ್ಧಿಸಿದ್ದಾರೆ. ನಿರ್ಮಾಪಕರ ವಲಯದಿಂದ ಅಧ್ಯಕ್ಷ ಸ್ಥಾನಕ್ಕಾಗಿ ಎ.ಗಣೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಪ್ರಮೀಳಾ ಜೋಷಾಯ್ (Pramila Joshai) ಹಾಗೂ ನಿರ್ಮಾಪಕರ ವಲಯ ಸಮಿತಿಗೆ ಪ್ರಿಯಾ ಹಾಸನ್ (Priya Hassan) ಸ್ಪರ್ಧಿಸುತ್ತಿದ್ದಾರೆ.

    ಮೊನ್ನೆಯಷ್ಟೇ ಸಾ.ರಾ.ಗೋವಿಂದು ನೇತೃತ್ವದಲ್ಲಿ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ಎಂ.ಎನ್. ಸುರೇಶ್ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮುನ್ನ ವಾಣಿಜ್ಯ ಮಂಡಳಿಯ ಮುಂದಿರುವ ಡಾ.ರಾಜಕುಮಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಮನ ಸಲ್ಲಿಸಿದರು. ನಂತರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಇದನ್ನೂ ಓದಿ:ಪ್ಯಾರಿಸ್‌ನಲ್ಲಿ ಸ್ನೇಹಿತರ ಮದುವೆಯಲ್ಲಿ ಮಿಂಚಿದ ರಾಮ್ ಚರಣ್ ದಂಪತಿ

    ಜಂಭದ ಹುಡುಗಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಟಿಯಾಗಿ ಪಾದಾರ್ಪಣೆ ಮಾಡಿದ ನಟಿ ಪ್ರಿಯಾ ಹಾಸನ್, ನಂತರದ ದಿನಗಳಲ್ಲಿ ನಿರ್ಮಾಪಕಿ ಹಾಗೂ ನಿರ್ದೇಶಕಿ ಸಹ ಆದರು. ಈಗ ಪ್ರಿಯಾ ಹಾಸನ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಸದ್ಯದಲ್ಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಯಲಿದ್ದು, ನಿರ್ಮಾಪಕಕರ ವಲಯ ಸಮಿತಿಗೆ ಪ್ರಿಯಾ ಹಾಸನ್ ಸ್ಪರ್ಧಿಸುತ್ತಿದ್ದಾರೆ.

    ಈಗಾಗಲೇ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಪ್ರಿಯಾ ಹಾಸನ್ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣೆಗೂ ಮುನ್ನ ಪ್ರಿಯಾ ಹಾಸನ್, ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್ ಮುಂತಾದ ಗಣ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ರಣಹದ್ದು’ ಫಸ್ಟ್ ಲುಕ್ ರಿಲೀಸ್ ಮಾಡಿದ ಜಂಭದ ಹುಡುಗಿ

    ‘ರಣಹದ್ದು’ ಫಸ್ಟ್ ಲುಕ್ ರಿಲೀಸ್ ಮಾಡಿದ ಜಂಭದ ಹುಡುಗಿ

    ಣಹದ್ದು (Ranahaddu) ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ಸಜ್ಜಾಗಿರುವ ಮತ್ತೊಂದು ಹೊಸಬರ ಸಿನಿಮಾ. ತಮಿಳು ನಿರ್ದೇಶಕ ಮಾಣಿಕ್ಯ ಜೈ (Manikya Jai) ಸಾರಥ್ಯದಲ್ಲಿ ಮೂಡಿಬಂದ ಸಿನಿಮಾ ಇದಾಗಿದ್ದು ಹೊಸಬರೆ ನಟಿಸಿದ್ದಾರೆ. ಮಾಣಿಕ್ಯ ನಿರ್ದೇಶನದ ಜೊತೆಗೆ ರಣಹದ್ದು ಸಿನಿಮಾದಲ್ಲಿ ನಟಿಸಿದ್ದಾರೆ.

    ಮಾಣಿಕ್ಯ ಜೈ ಈಗಾಗಲೇ ತಮಿಳಿನಲ್ಲಿ 2 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಣಹದ್ದು ಕನ್ನಡದ ಮೊದಲ ಸಿನಿಮಾವಾಗಿದೆ. ಇದೀಗ ರಣಹದ್ದು ಚಿತ್ರದ ಫಸ್ಟ್ ಲುಕ್ (First Look) ಮೂಲಕ ಕನ್ನಡ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಅಂದಹಾಗೆ ಹೊಸಬರ ಈ ಚಿತ್ರದ ಫಸ್ಟ್ ಲುಕ್ ಅನ್ನು ಸ್ಯಾಂಡಲ್ ವುಡ್ ನಟಿ ಜಂಭದ ಹುಡುಗಿ ಖ್ಯಾತಿಯ ಪ್ರಿಯಾ ಹಾಸನ್ (Priya Haasan) ಹಾಗೂ ನಿರ್ಮಾಪಕ ಟೇಶಿವೆಂಕಟೇಶ್ ರಿಲೀಸ್ ಮಾಡಿದ್ದಾರೆ. ಇಬ್ಬರೂ ರಣಹದ್ದು ಚಿತ್ರಕ್ಕೆ ಸಾಥ್ ನೀಡುವ ಮೂಲಕ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

    ರಣಹದ್ದು ಮೊಬೈಲ್ ಫೋನ್ ನಿಂದ ಆಗುವ ಮೋಸ, ವಂಚನೆ ಬಗ್ಗೆ ಇರುವ ಸಿನಿಮಾ. ನೈಜ ಘಟನೆಗಳನ್ನು ಆಧಾರಿಸಿ ಈ ಸಿನಿಮಾ ಮಾಡಲಾಗಿದೆ. ಪಕ್ಕಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು ಫಸ್ಟ್ ಲುಕ್ ಮೂಲಕ ಗಮ ಸೆಳೆಯುತ್ತಿದೆ.  ಇನ್ನೂ ಈ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ಮಾಣಿಕ್ಯ ಜೈ ಜೊತೆಗೆ ರಂಜಿತ್, ಯತೀಶ್ ಮತ್ತು ನಾಯಕಿಯಾಗಿ ಸೌಮ್ಯ ನಟಿಸಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಸದ್ಯದಲ್ಲೆ ಚಿತ್ರೀಕರಣ ಪೂರ್ಣಗೊಳಿಸಿ ನವೆಂಬರ್ ತಿಂಗಳಲ್ಲಿ  ಬಿಡುಗಡೆ ಮಾಡಲು ಚಿತ್ರತಂಡ  ನಿರ್ಧರಿಸಿದೆ.

     

    ಸರಸ್ವತಿ ಹಾಗೂ ಜೈ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದು ತಾಜ್ ಸಿನಿಮಾಗೆ ಸಂಗೀತ ನೀಡಿದ್ದು ಜೀವನ್ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸದ್ಯ ಫಸ್ಟ್ ಲುಕ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ರಣಹದ್ದು ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಹೆಚ್ಚಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]