Tag: ಪ್ರೀತಂಗೌಡ

  • ಮೈತ್ರಿಗೆ ಬಿಗ್ ಶಾಕ್ – ಪ್ರೀತಂಗೌಡ ಆಪ್ತರಿಂದ `ಕೈ’ ಅಭ್ಯರ್ಥಿಗೆ ಬೆಂಬಲ

    ಮೈತ್ರಿಗೆ ಬಿಗ್ ಶಾಕ್ – ಪ್ರೀತಂಗೌಡ ಆಪ್ತರಿಂದ `ಕೈ’ ಅಭ್ಯರ್ಥಿಗೆ ಬೆಂಬಲ

    ಹಾಸನ: ಲೋಕಸಭಾ ಚುನಾವಣೆ (Lok Sabha Election 2024) ಹೊಸ್ತಿಲಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಪ್ರೀತಂಗೌಡ ಬೆಂಬಲಿಗರು ಬಿಗ್ ಶಾಕ್ ಕೊಟ್ಟಿದ್ದಾರೆ.

    ಪ್ರೀತಂಗೌಡ ಬಲಗೈ ಬಂಟ ಉದ್ದೂರು ಪುರುಷೋತ್ತಮ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಭೇಟಿ ಮಾಡಿದ್ದಾರೆ. ಪ್ರೀತಂಗೌಡ ಯಾವುದೇ ಸೂಚನೆ ನೀಡದ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯನ್ನು ಭೇಟಿಯಾಗಿದ್ದಾರೆ. ಈ ಮೂಲಕ ಪ್ರೀತಂಗೌಡ ಆಪ್ತರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಕೊಟ್ಟಿದ್ದು, ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಒಳಪೆಟ್ಟು ಬೀಳುವ ಆತಂಕ ಎದುರಾಗಿದೆ.

    ಪ್ರೀತಂಗೌಡ (Preetham Gowda) ಹಾಗೂ ಅವರ ಬೆಂಬಲಿಗರು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ತಿರುಗಿಬಿದ್ದಿದ್ದು, ಬಹಿರಂಗವಾಗಿಯೇ ಶ್ರೇಯಸ್ ಪಟೇಲ್ ಪರ ಪ್ರಚಾರಕ್ಕಿಳಿದಿದ್ದಾರೆ. ಇದೀಗ ಹಾಸನ ಕ್ಷೇತ್ರದಲ್ಲಿ (Hassan Lok Sabha constituency) ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳಿಗೂ ಪ್ರೀತಂಗೌಡ ಹಾಗೂ ಅವರ ಬೆಂಬಲಿಗರ ನಡೆ ತಲೆನೋವಾಗಿ ಪರಿಣಮಿಸಿದೆ. ಇದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಲಾಭವಾಗುವ ಸಾಧ್ಯತೆ ಹೆಚ್ಚಾಗಿದೆ.

    ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಮೈತ್ರಿ ಆದಾಗಿನಿಂದ ಪ್ರೀತಂಗೌಡ ಹಾಗೂ ಅವರ ಬೆಂಬಲಿಗರು ಅಸಮಾಧಾನ ಹೊರಹಾಕಿದ್ದರು. ಇಬ್ಬರ ನಡುವಿನ ಅಸಮಾಧಾನ ಶಮನಗೊಳಿಸಲು ಎರಡೂ ಪಕ್ಷಗಳ ಮುಖಂಡರು ಪ್ರಯತ್ನಿಸಿದ್ದರು. ಅಸಮಾಧಾನ ಬಗೆಹರಿಯದ ಹಿನ್ನೆಲೆ ಪ್ರೀತಂಗೌಡ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ಬಹಿರಂಗವಾಗಿ ಪ್ರಚಾರಕ್ಕೆ ಮುಂದಾಗಿದ್ದಾರೆ.

  • ಹಾಸನದಲ್ಲಿ ಮುಗಿಯದ ವೈಮನಸ್ಸು- ಪ್ರಚಾರದ ವಿಚಾರದಲ್ಲೂ ಅಡ್ಡಗೋಡೆ ಮೇಲೆ ದೀಪವಿಟ್ಟ ಪ್ರೀತಂ

    ಹಾಸನದಲ್ಲಿ ಮುಗಿಯದ ವೈಮನಸ್ಸು- ಪ್ರಚಾರದ ವಿಚಾರದಲ್ಲೂ ಅಡ್ಡಗೋಡೆ ಮೇಲೆ ದೀಪವಿಟ್ಟ ಪ್ರೀತಂ

    – ಎನ್‌ಡಿಎ ಅಭ್ಯರ್ಥಿ ಯಾರೇ ಇದ್ರೂ ಬೆಂಬಲಿಸೋದು ನನ್ನ ಕರ್ತವ್ಯ

    ಮೈಸೂರು: ಹಾಸನ (Hassan) ಲೋಕಸಭಾ ಚುನಾವಣೆ ವಿಚಾರದಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಹಾಗೂ ಪ್ರೀತಂಗೌಡ (Preetham Gowda) ನಡುವೆ ವೈಮನಸ್ಸು ಮುಂದುವರಿದಿದೆ. ಇನ್ನೂ ಪ್ರಜ್ವಲ್ ಪರ ಪ್ರಚಾರದ ಕುರಿತು ಮಾತನಾಡುವಾಗಲೂ ಪ್ರೀತಂ ಎಲ್ಲಿಯೂ ಪ್ರಜ್ವಲ್ ರೇವಣ್ಣ ಹೆಸರು ಹೇಳದೆ ಕೇವಲ ಎನ್‌ಡಿಎ ಅಭ್ಯರ್ಥಿ ಎಂದು ಉಲ್ಲೇಖಿಸಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

    ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರೀತಂ, ನನ್ನನ್ನು ಕಾಶ್ಮೀರಕ್ಕೆ ಹೋಗು ಅಂದ್ರೆ ಹೋಗುತ್ತೇನೆ. ಕನ್ಯಾಕುಮಾರಿಗೆ ಹೋಗು ಅಂದ್ರೂ ಹೋಗುತ್ತೇನೆ. ಪಕ್ಷ ಹೇಳಿದ ಕಡೆ ಹೋಗುತ್ತೇನೆ. ನಾನು ಪಕ್ಷದ ಪ್ರಧಾನ ಕಾರ್ಯದರ್ಶಿ. ಅದಕ್ಕಾಗಿ ಮೈಸೂರಿಗೆ ಬಂದಿದ್ದೇನೆ. ಇಂದು ಮೈಸೂರು ಚಾಮರಾಜನಗರ ಕಾರ್ಯಕರ್ತರ ಸಭೆ ಮಾಡುತ್ತೇನೆ. ಸದಾನಂದ ಗೌಡರು ಹಾಸನಕ್ಕೆ ಹೋಗಿದ್ದರು. ಯಾಕೆ ಹಾಸನಕ್ಕೆ ಹೋಗಿದ್ರಿ ಅಂತ ಕೇಳೋಕೆ ಆಗುತ್ತಾ? ನಾನು ಪಕ್ಷ ಹೇಳಿದ ಕಡೆ ಹೋಗುತ್ತೇನೆ ಎಂದರು. ಇದನ್ನೂ ಓದಿ: ಇಬ್ಬರಲ್ಲಿ ಕಾಲರಾ ದೃಢವಾಗ್ತಿದ್ದಂತೆ ಹಾಸ್ಟೆಲ್ ಖಾಲಿ ಮಾಡಿ ಹೊರಟ ಸ್ಟೂಡೆಂಟ್ಸ್!

    ಪ್ರಜ್ವಲ್ ರೇವಣ್ಣ ಭೇಟಿ ವಿಚಾರ ಗೊತ್ತಿಲ್ಲ, ನನಗೆ ಮಾಹಿತಿ ಇಲ್ಲ. ಎನ್‌ಡಿಎ ಅಭ್ಯರ್ಥಿ ಗೆಲ್ಲಬೇಕು. ಪ್ರೀತಂಗೌಡ ಮುಖ ನೋಡಿ ಜನ ವೋಟ್ ಹಾಕಲ್ಲ. ನಮ್ಮ ಮನೆಯಲ್ಲೂ ಮೋದಿ ಮುಖ ನೋಡಿ ಮತ ಹಾಕುತ್ತಾರೆ. ಇದು ಪಂಚಾಯಿತಿ ಚುನಾವಣೆಯಲ್ಲ, ದೇಶದ ಚುನಾವಣೆ. ಪಕ್ಷ ಸೂಚನೆ ಕೊಟ್ಟಂತೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: RSS ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ: ಪ್ರಜ್ವಲ್ ರೇವಣ್ಣ ಕ್ಷಮೆ

    ಮಾಧ್ಯಮದವರು ಎಷ್ಟೇ ಪ್ರಶ್ನೆ ಮಾಡಿದರೂ ಪ್ರೀತಂಗೌಡ ಒಮ್ಮೆಯೂ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ಹೆಸರು ಹೇಳಿಲ್ಲ. ಪ್ರತಿ ಪ್ರಶ್ನೆಗಳಿಗೆ ನಾನು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಎನ್‌ಡಿಎ ಅಭ್ಯರ್ಥಿ ಗೆಲ್ಲುತ್ತಾರೆ ಎಂದಷ್ಟೇ ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪ್ರಣಾಳಿಕೆ ಪಾಕ್ ಚುನಾವಣೆಗೆ ಹೆಚ್ಚು ಸೂಕ್ತವಾಗಿದೆ: ಹಿಮಂತ್ ಶರ್ಮಾ

  • ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಫುಲ್ ಆಕ್ಟೀವ್- ದಿಶಾ ಸಭೆಯಲ್ಲಿ ಸಂಸದ ಕ್ಷಮೆ

    ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಫುಲ್ ಆಕ್ಟೀವ್- ದಿಶಾ ಸಭೆಯಲ್ಲಿ ಸಂಸದ ಕ್ಷಮೆ

    – ಪ್ರಜ್ವಲ್‍ಗೆ ಟಿಕೆಟ್ ಕೊಡದಂತೆ ಪ್ರೀತಂಗೌಡ ಪರೋಕ್ಷ ವಿರೋಧ

    ಹಾಸನ: ಲೋಕಸಭಾ ಚುನಾವಣೆ (Loksabh Election) ಸಮೀಪಿಸುತ್ತಿದ್ದು ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಆದರೆ ಇನ್ನೂ ಯಾವ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಆದರೆ ಹಾಲಿ ಸಂಸದರು ಹಾಗೂ ಟಿಕೆಟ್ ಆಕಾಂಕ್ಷಿಗಳು ಕಸರತ್ತು ಆರಂಭಿಸಿದ್ದಾರೆ. ಅತ್ತ ಹಾಸನದಲ್ಲಿ ಇನ್ನೂ ಯಾರು ಅಭ್ಯರ್ಥಿ ಎಂಬುದೇ ಘೋಷಣೆ ಆಗಿಲ್ಲ. ಸ್ಥಳೀಯ ಬಿಜೆಪಿ ನಾಯಕರ ವಿರೋಧದ ನಡುವೆಯೂ ಜೆಡಿಎಸ್‍ನ ಏಕೈಕ ಸಂಸದ ಪ್ರಜ್ವಲ್ ರೇವಣ್ಣ ಫುಲ್ ಆಕ್ಟೀವ್ ಆಗಿದ್ದಾರೆ.

    ಹಾಸನ ಹಾಗೂ ಮಂಡ್ಯ (Hassan- Mandya) ಎರಡೂ ಲೋಕಸಭಾ ಕ್ಷೇತ್ರಗಳು ಬಿಜೆಪಿಗೆ ಬೇಕೇಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ (Preetham Gowda) ಪದೇಪದೇ ಒತ್ತಾಯಿಸುವ ಮೂಲಕ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಟಿಕೆಟ್ ನೀಡದಂತೆ ಪರೋಕ್ಷವಾಗಿ ವಿರೋಧಿಸುತ್ತಿದ್ದಾರೆ. ಇದಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು (HD Devegowda) ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರೇ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿ ಒಂದು ಸುತ್ತಿನ ಪ್ರಚಾರ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಇಂದಿರಾ ಗಾಂಧಿ 3ನೇ ಮಗ ಶಾಕ್? – ಪುತ್ರನ ಜೊತೆ ಕಮಲ್‌ನಾಥ್ ಬಿಜೆಪಿ ಸೇರ್ಪಡೆ?

    ಇದಲ್ಲದೇ ಕಳೆದ ಮೂರು ದಿನಗಳಿಂದ ಕಡೆಯ ದಿಶಾ ಸಭೆ ನಡೆಸಿದ ಪ್ರಜ್ವಲ್, ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ನಡೆಯುತ್ತಿರುವ ಕಾಮಗಾರಿಗಳ ವೇಗ ಹೆಚ್ಚಿಸುವಂತೆ ಸೂಚನೆ ನೀಡಿದರು. ಎಲ್ಲಾ ತರದಲ್ಲೂ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದೀರಾ, ಐದು ವರ್ಷಗಳ ಕಾಲ ಅಧಿಕಾರಿಗಳು ಸಹಕರಿಸಿದ್ದೀರಾ ನಾನು ಸಣ್ಣಪುಟ್ಟ ತಪ್ಪುಗಳನ್ನು ಮಾಡಿದ್ದರೆ, ದಿಶಾ ಸಭೆಯಲ್ಲಿ ಸರಿಯಾದ ನಡವಳಿಕೆ ನಡೆದುಕೊಂಡಿಲ್ಲ ಎಂದರೆ ಹೃದಯಪೂರ್ವಕವಾಗಿ ಕ್ಷಮೆ ಕೇಳುತ್ತೇನೆ ಎಂದರು.

    ಒಟ್ಟಿನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆಯ ಕಡೆ ಮುಖ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ, ಪ್ರೀತಂಗೌಡ ಪ್ರಜ್ವಲ್‍ರೇವಣ್ಣ ಪರ ನಿಲ್ಲುತ್ತಾರಾ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

  • ಬಿಹಾರ್‌ನಂತಹ ರಾಜಕಾರಣ ನಾವು ಮಾಡುವುದಿಲ್ಲ: ಭವಾನಿ ರೇವಣ್ಣ

    ಬಿಹಾರ್‌ನಂತಹ ರಾಜಕಾರಣ ನಾವು ಮಾಡುವುದಿಲ್ಲ: ಭವಾನಿ ರೇವಣ್ಣ

    ಹಾಸನ: ವಿಶ್ವಾಸ ಬೆಳೆಸಿ, ವಿಶ್ವಾಸದಿಂದ ನಿಮ್ಮ ಮನಸ್ಸು ಗೆದ್ದು ನಿಮ್ಮನ್ನು ಮತ ಕೇಳುತ್ತೇವೆಯೇ ಹೊರತು ಬಿಹಾರ್ ಅಂತಹ ರಾಜಕಾರಣ ನಾವು ಮಾಡುವುದಿಲ್ಲ ಎಂದು ಪ್ರೀತಂಗೌಡ (Preetam Gowda) ವಿರುದ್ಧ ಪರೋಕ್ಷವಾಗಿ ಭವಾನಿ ರೇವಣ್ಣ (Bhavani Revanna) ಗುಡುಗಿದರು.

    ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಘೋಷಣೆ ಹಾಗೂ ದೇಣಿಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಧಮ್ಕಿಗೆ ನೀವ್ಯಾರು ಹೆದರಬಾರದು, ನಿಮ್ಮ ಎಲ್ಲಾ ಸಮಯದಲ್ಲೂ ನಾವು ಜೊತೆಗೆ ಇರುತ್ತೇವೆ. ನಾವು ಯಾವಾಗ್ಲೂ ಗೂಂಡಾಗಿರಿ ರಾಜಕಾರಣ ಮಾಡಿದವರಲ್ಲ, ವಿಶ್ವಾಸ ಬೆಳೆಸಿ, ವಿಶ್ವಾಸದಿಂದ ನಿಮ್ಮ ಮನಸ್ಸು ಗೆದ್ದು ನಿಮ್ಮನ್ನು ಮತ ಕೇಳುತ್ತೇವೆ ಎಂದರು.

    ನೀವೆಲ್ಲಾ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಕೊಡುತ್ತೇನೆ ಎಂದು ಹೇಳಿದ್ದೀರಾ. ಒಬ್ಬೊಬ್ಬರು ನೂರು ವೋಟು ಹಾಕಿಸುವ ಶಕ್ತಿ ಇದೆ ಎಂದುಕೊಳ್ಳುತ್ತೇನೆ. ಜೆಡಿಎಸ್‌ಗೆ ಬೆಂಬಲ ನೀಡಿದ್ದಕ್ಕೆ ನಾವೆಲ್ಲರೂ ಹಾಗೂ ಜೆಡಿಎಸ್ ಪಕ್ಷದವರೆಲ್ಲ ನಿಮಗೆ ಚಿರ‌ಋಣಿ ಆಗಿರುತ್ತೇವೆ. ಅದರ ಜೊತೆ ನಮ್ಮ ಕುಟುಂಬ, ಪ್ರಕಾಶಣ್ಣನ ಕುಟುಂಬ ನಿಮ್ಮ ಜೊತೆಗೆ ಇರುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಭಯೋತ್ಪಾದನೆಗೆ ಉತ್ತೇಜನ ಕೊಟ್ರೆ, PFI, ಭಜರಂಗದಳ ಆದ್ರೂ ಬ್ಯಾನ್ ಮಾಡಲಾಗುತ್ತೆ: ಬಿ.ಕೆ‌ ಹರಿಪ್ರಸಾದ್

    ಸ್ವರೂಪ್‌ಗೆ ದೇಣಿಗೆ ಕೂಡ ಕೊಟ್ರಿ, ನನಗೆ ಸಂತೋಷ ಆಯ್ತು, ಇಂತಹ ಸಮಯದಲ್ಲಿ ಯಾವುದೇ ರಾಜಕಾರಣಿಯ ಬಳಿಯೂ ಎಷ್ಟು ಇದ್ರೂ ಸಾಲಲ್ಲ. ರಾಜಕೀಯ ಜೀವನದಲ್ಲಿ ಏನೇ ಇದ್ದರು ಮಾಡಬೇಕಾಗುತ್ತದೆ. ರಾಮ ಸೇತುವೆ ಕಟ್ಟುವಾಗ ಅಳಿಲು ಕೂಡ ಸಹಾಯ ಮಾಡಿತ್ತು. ಅದರಿಂದ ಅಳಿಲು ಸೇವೆ ಅಂತ ಹೆಸರು ಬಂತು ಅಂತ ಮಾತನಾಡುತ್ತಾರೆ. ಸ್ವರೂಪ್‌ಗೆ ಸಹಾಯ‌ ಮಾಡಿದ್ದೀರಾ ಮುಂದಿನ ದಿನಗಳಲ್ಲಿ ನೀವು ನಮ್ಮ ಜೊತೆ ಇರ್ತಿರಾ, ನಿಮ್ಮ ಜೊತೆ ನಾವು ಇರ್ತಿವಿ ಎಂದು ಹೇಳಿದರು. ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ ಕೇಸ್‌ – ರಾಹುಲ್‌ ಗಾಂಧಿಗಿಲ್ಲ ರಿಲೀಫ್‌

  • ಸ್ವರೂಪ್ ನನ್ನ ಮಗನಿದ್ದಂತೆ, ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡಿದ್ದೇನೆ – ಭವಾನಿ ರೇವಣ್ಣ

    ಸ್ವರೂಪ್ ನನ್ನ ಮಗನಿದ್ದಂತೆ, ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡಿದ್ದೇನೆ – ಭವಾನಿ ರೇವಣ್ಣ

    – ಹಾಸನದಲ್ಲಿ ಅಬ್ಬರದ ಭಾಷಣ; ರೇವಣ್ಣ ಕುಟುಂಬ ಒಗ್ಗಟ್ಟು ಪ್ರದರ್ಶನ

    ಹಾಸನ: ಸ್ವರೂಪ್ (Swaroop) ನನ್ನ ಮಗನಿದ್ದಂತೆ, ನಾನು ಸ್ವರೂಪ್‌ನನ್ನ ಮಗನಾಗಿಯೇ ನೋಡಿದ್ದೇನೆ. ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡಿದ್ದೇನೆ, ಈ ಕ್ಷೇತ್ರದಲ್ಲಿ ಸ್ವರೂಪ್‌ ಗೆದ್ದೇ ಗೆಲ್ತಾನೆ ಎಂದು ಭವಾನಿ ರೇವಣ್ಣ (Bhavani Revanna) ಭವಿಷ್ಯ ನುಡಿದಿದ್ದಾರೆ.

    ಹಾಸನ ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ನಡೆದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕುಟುಂಬ ಭಾಗಿಯಾಗಿ, ಸ್ವರೂಪ್ ಗೆಲ್ಲಿಸುವಂತೆ ಮನವಿ ಮಾಡಿದರು. ಈ ವೇಳೆ ಸ್ವರೂಪ್ ಅವರು, ರೇವಣ್ಣ ಹಾಗೂ ಭವಾನಿ ರೇವಣ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಇದನ್ನೂ ಓದಿ: ದೇಶಕ್ಕೆ ದೇವೇಗೌಡರು, ರಾಜ್ಯಕ್ಕೆ ಕುಮಾರಣ್ಣ, ಹಾಸನಕ್ಕೆ ರೇವಣ್ಣ : ಎ.ಮಂಜು – ಭವಾನಿ ಜುಗಲ್ ಬಂದಿ

    ಸಭೆಯಲ್ಲಿ ಮಾತನಾಡಿದ ಭವಾನಿ ಅವರು, ಯಾರಿಗೆ ಟಿಕೆಟ್ ನೀಡಬೇಕು ಅನ್ನುವ ಚರ್ಚೆ ನಡೆಯುತ್ತಿದ್ದಾಗ ಕುಮಾರಣ್ಣ ಸ್ವರೂಪ್‌ಗೆ ಟಿಕೆಟ್‌ ಕೊಟ್ಟಿದ್ದಾರೆ. ನಾವೂ ಮೂರು ಬಾರಿ ಫೋನ್ ಮಾಡಿ ಸ್ವರೂಪ್‌ಗೇ ಟಿಕೆಟ್ ಕೊಡಿ ಅಂತಾ ಕುಮಾರಣ್ಣಗೆ ಹೇಳಿದ್ವಿ ಎಂದು ಹೇಳಿದರು.

    ನನಗೆ ದೇವೇಗೌಡರ ಆರೋಗ್ಯ ಮುಖ್ಯವಾಗಿತ್ತು. ದೇವೇಗೌಡರಿಗಿಂತ ನಾನೇ ದೊಡ್ಡವಳಾ ಅಂತಾ ಅನ್ನಿಸಿಬಿಡ್ತು. ಹಾಗಾಗಿ ನಾನೇ ತೀರ್ಮಾನಿಸಿ ಸ್ವರೂಪ್ ಹೆಸರು ಅನೌನ್ಸ್ ಮಾಡಿಸಿದೆ. ಶುಕ್ರವಾರ ಒಳ್ಳೆಯ ದಿನ ಅನೌನ್ಸ್ ಮಾಡಿ ಅಂತಾ ಕುಮಾರಣ್ಣಗೆ ಹೇಳಿದೆ. ನನಗೆ ಟಿಕೆಟ್ ಸಿಕ್ಕಿಲ್ಲ ಅಂತಾ ಹಾಸನ ಕಡೆಗಣಿಸಲ್ಲ. ಒಟ್ಟಿನಲ್ಲಿ ಬಿಜೆಪಿ ಸೋಲಿಸಬೇಕು ಅಷ್ಟೇ ಎಂದು ಕರೆ ನೀಡಿದರು. ಇದನ್ನೂ ಓದಿ: ರೇವಣ್ಣ ಕುಟುಂಬದವ್ರು ನನ್ನ ಪರ ಪ್ರಚಾರಕ್ಕೆ ಬರುತ್ತಾರೆ: ಹಾಸನ ಜೆಡಿಎಸ್ ಅಭ್ಯರ್ಥಿ

    ಹಾಸನದಲ್ಲಿ ಬಿಜೆಪಿಯನ್ನ ಸಂಪೂರ್ಣವಾಗಿ ತೆಗೆದುಹಾಕಬೇಕು. ಅದಕ್ಕಾಗಿ ನಿದ್ರೆ ಬಿಟ್ಟು ಕೆಲಸ ಮಾಡಿ, ಸ್ವರೂಪ್ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ ಅವರು, ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡುತ್ತಿದ್ದೇನೆ, ಈ ಕ್ಷೇತ್ರದಲ್ಲಿ ಗೆದ್ದೇ ಗೆಲ್ತಾನೆ ಎಂದು ನುಡಿದರು.

  • ಪ್ರೀತಂಗೌಡ ನಮಗೆ ಅಣ್ಣನ ಸಮಾನ – ವೀಡಿಯೋವನ್ನು ತಿರುಚಿ ವೈರಲ್ ಮಾಡಿದ್ದಾರೆ: ಸ್ಥಳೀಯರ ಆಕ್ರೋಶ

    ಪ್ರೀತಂಗೌಡ ನಮಗೆ ಅಣ್ಣನ ಸಮಾನ – ವೀಡಿಯೋವನ್ನು ತಿರುಚಿ ವೈರಲ್ ಮಾಡಿದ್ದಾರೆ: ಸ್ಥಳೀಯರ ಆಕ್ರೋಶ

    ಹಾಸನ: ಶ್ರೀನಗರ ಬಡಾವಣೆಯಲ್ಲಿ ಶಾಸಕ ಪ್ರೀತಂಗೌಡ (Preetham Gowda) ತಮಗೆ ಮತ (Vote) ಹಾಕುವಂತೆ ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಡಾವಣೆ ನಿವಾಸಿಗಳು ಶಾಸಕರ ಪರವಾಗಿ ನಿಂತಿದ್ದಾರೆ. ಶಾಸಕರು ನಮ್ಮನ್ನು ಸಹೋದರಿಯರು ಎಂದುಕೊಂಡಿದ್ದಾರೆ. ಅವರು ನಮಗೆ ಅಣ್ಣನ ಸಮಾನ. ಯಾರೋ ಕೆಲವರು ಶಾಸಕರ ವೀಡಿಯೋ ಮಾಡಿ ತಿರುಚಿ ಅದನ್ನು ವೈರಲ್ ಮಾಡಿದ್ದಾರೆ ಎಂದು ಸ್ಥಳೀಯ ನಿವಾಸಿಗಳ ಕಿಡಿಕಾರಿದ್ದಾರೆ.

    ನಮ್ಮ ಬಡಾವಣೆಯಲ್ಲಿ ಹಿಂದೂ, ಮುಸ್ಲಿಂ ಎನ್ನುವ ಭೇದಭಾವ ಇಲ್ಲ. ಎಲ್ಲರೂ ಒಂದಾಗಿ ಇದ್ದೇವೆ, ಇರ್ತೇವೆ. ಶಾಸಕರು ನಮ್ಮನ್ನು ಸಹೋದರಿಯರು ಎಂದುಕೊಂಡಿದ್ದಾರೆ. ಅವರು ನಮಗೆ ಅಣ್ಣನ ಸಮಾನ, ಆದರೆ ಇಂತಹವರಿಗೆ ವೋಟ್ ಹಾಕಿ ಎಂದು ನಮಗೆ ಯಾರ ಹೇಳುವಂತಿಲ್ಲ. ಅವರು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. 28 ವರ್ಷಗಳಿಂದ ನಮಗೆ ಯಾರು ಹಕ್ಕು ಪತ್ರ ನೀಡುವುದಾಗಿ ಬಂದಿಲ್ಲ. ಅಷ್ಟು ವರ್ಷಗಳಿಂದಲೂ ಇದೇ ಕೊಳಚೆ, ವಾಸನೆ, ಗಲೀಜು ನಡುವೆ ನಾವು ಬದುಕಿದ್ದೇವೆ. ಇದುವರೆಗೆ ಬಂದವರೆಲ್ಲಾ ಕೇವಲ ಭರವಸೆ ಕೊಟ್ಟು ವೋಟ್ ಹಾಕಿಸಿಕೊಂಡು ಹೋಗಿದ್ದಾರೆ ಅಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ವೋಟ್ ಹಾಕದಿದ್ರೆ ಯುಜಿಡಿ ಕಾಮಗಾರಿ ಮಾಡಲ್ಲ: ಶಾಸಕ ಪ್ರೀತಂಗೌಡ

    ಶಾಸಕ ಪ್ರೀತಂಗೌಡ ಅವರು ನಮ್ಮ ಕೆಲಸ ಮಾಡ್ತೀವಿ ಎಂದು ಬಂದಿದ್ದಾರೆ. ಅವರು ಮತ ನೀಡಿ ಎಂದು ಯಾವುದೇ ಬೆದರಿಕೆ ಹಾಕಿಲ್ಲ. ಯಾರೋ ಕೆಲವರು ಶಾಸಕರ ವೀಡಿಯೋ ಮಾಡಿ ತಿರುಚಿ ಅದನ್ನು ವೈರಲ್ ಮಾಡಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅಧಿಕಾರಿಗೆ ಹಲ್ಲೆ ನಡೆಸಲು ಮಚ್ಚು ಹಿಡಿದು ಬಂದ ಮಹಿಳೆ

    Live Tv
    [brid partner=56869869 player=32851 video=960834 autoplay=true]

  • ವೋಟ್ ಹಾಕದಿದ್ರೆ ಯುಜಿಡಿ ಕಾಮಗಾರಿ ಮಾಡಲ್ಲ: ಶಾಸಕ ಪ್ರೀತಂಗೌಡ

    ವೋಟ್ ಹಾಕದಿದ್ರೆ ಯುಜಿಡಿ ಕಾಮಗಾರಿ ಮಾಡಲ್ಲ: ಶಾಸಕ ಪ್ರೀತಂಗೌಡ

    ಹಾಸನ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನಗೆ ವೋಟ್ ಹಾಕದಿದ್ರೆ ಯುಜಿಡಿ ಕಾಮಗಾರಿ ಮಾಡಲ್ಲ ಎಂದು ಮತದಾರರಿಗೆ ನೇರವಾಗಿಯೇ ಶಾಸಕ ಪ್ರೀತಂಗೌಡ (Preetham Gowda) ಹೇಳಿದ್ದಾರೆ.

    ಮುಸ್ಲಿಂ ಸಮುದಾಯದ ಮತದಾರರು ಹೆಚ್ಚಿರುವ ಹಾಸನದ (Hassan) ಶ್ರೀನಗರ ಬಡಾವಣೆಗೆ ಕಳೆದ ರಾತ್ರಿ ಭೇಟಿ ನೀಡಿದ ಅವರು, ವಿದ್ಯುತ್ ಇಲ್ಲದಿದ್ದರೂ ಕತ್ತಲಲ್ಲೇ ಸ್ಥಳೀಯರನ್ನು ಉದ್ದೇಶಿಸಿ ಮಾತನಾಡಿದರು. ಯಾರು ಕೆಲಸ ಮಾಡುತ್ತಾರೆ ಅವರಿಗೆ ವೋಟು ಹಾಕಬೇಕು. ಕೆಲಸವಾಗುವವರೆಗೂ ನಮ್ಮ ಜೊತೆಯಲ್ಲೇ ಇದ್ದು, ಕೊನೆಗೆ ನಾವು ಬಿಜೆಪಿಗೆ (BJP) ವೋಟ್ ಹಾಕಲ್ಲ ಎಂದು ಹೇಳಿದರೆ ಕೆಲಸ ಮಾಡಿದವರಿಗೂ ಕೋಪ ಬರುತ್ತದೆ ಎಂದು ಹೇಳಿದರು.

    ನೀವು ಬೆಳಗ್ಗೆಯಿಂದಲೂ ಕೂಲಿಗೆ ಹೋಗೋರು ಅಂತೀರಾ, ಸಂಜೆ ಕೂಲಿ ಕೊಡದೇ ಹೋದ್ರೆ ಬಿಡ್ತೀರಾ? ಅದೇ ರೀತಿಯೇ ನಾನು ಇಲ್ಲಿ ಕೆಲಸ ಮಾಡಿರುತ್ತೇನೆ. ಅದಕ್ಕೆ ವೋಟ್‍ನ್ನು ಕೇಳುತ್ತೇವೆ, ಆಗ ನೀವು ನನಗೆ ವೋಟ್ ಹಾಕದೇ ನಾನು ಕಾಂಗ್ರೆಸ್ (Congress), ನಿಮಗೆ ವೋಟ್ ಹಾಕುವುದಿಲ್ಲ ಎಂದರೆ ಆಗ ನಾನು ಸುಮ್ಮನಿರುವುದಿಲ್ಲ ಎಂದು ವಾರ್ನಿಂಗ್ ನೀಡಿದರು.

    ಮುಸಲ್ಮಾನರನ್ನು ನಮ್ಮ ಸಹೋದರರ ರೀತಿಯಲ್ಲೇ ನೋಡುತ್ತೇನೆ. ಮುಂದೆಯೂ ಇದೇ ಭಾವನೆ ಇರುತ್ತದೆ. ಆದರೆ ನಾನು ಕೆಲಸ ಮಾಡಿದ ಸಂದರ್ಭದಲ್ಲಿ ನೀವು ನನಗೆ ಸಹಾಯ ಮಾಡಿಲ್ಲ ಎಂದರೆ ನಿಮ್ಮ ಕಡೆಯೂ ತಿರುಗಿ ನೋಡಲ್ಲ. ಈ ರೀತಿ ತೀರ್ಮಾನ ತೆಗೆದುಕೊಳ್ಳದ ರೀತಿ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದು ಎಂದರು.

    ಈಗಾಲೇ ಮೂರು ಸಾರಿ ಕೈಕೊಟ್ಟಿದ್ದೀರಾ. ಹಿಂದಿನ ವಿಧಾನ ಸಭಾ ಚುನಾವಣೆ ನಡೆದಾಗಲೂ ವೋಟ್ ಹಾಕಿರಲಿಲ್ಲ. ಅದಾದ ಬಳಿಕ ಕೌನ್ಸಿಲರ್ ಹಾಗೂ ಸಂಸದರ ಚುನಾವಣೆಯಲ್ಲೂ ವೋಟ್ ಹಾಕಿರಲಿಲ್ಲ. ಇದೀಗ ವಿಧಾನಸಭಾ ಚುನಾವಣೆ ಬರುತ್ತಿದೆ. ಆ ಸಂದರ್ಭದಲ್ಲಿ ನೀವೇನಾದ್ರು ಕೈಕೊಟ್ರೆ ನಾನು ಕೈ, ಕಾಲು ಕೊಡ್ತೀನಿ. ನನ್ನ ಮನೆಗೆ ಬಂದರೆ ಕಾಫಿ ಕುಡಿಸಿ ಕಳುಹಿಸುತ್ತೇನೆ. ಯಾವ ಕೆಲಸವನ್ನು ಮಾಡಿಕೊಡುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಲಾರಿ, ಕಾರು ನಡುವೆ ಭೀಕರ ಅಪಘಾತ- ಮೂವರು ಸಾವು

    ಅವರಿಗೆ ವೋಟ್ ಹಾಕಬೇಡಿ, ನಾನು ನಿಮ್ಮ ಕೆಲಸವನ್ನೆಲ್ಲಾ ಮಾಡಿಕೊಡುತ್ತೇನೆ ಎಂದು ಹೇಳುತ್ತಾರೆ. ಆ ರೀತಿ ಹೇಳುವವರ ಮನೆಯಲ್ಲಿ ಮೂರು ಸಾರಿ ಮುಖ್ಯಮಂತ್ರಿ ಆಗಿದ್ದರು. ದೊಡ್ಡಗೌಡರು ಒಂದು ಸಾರಿ, ಕುಮಾರಣ್ಣ ಎರಡು ಸಾರಿ ಮುಖ್ಯಮಂತ್ರಿ ಆಗಿದ್ದರು. ರೇವಣ್ಣ ಅವರು ನಾಲ್ಕು ಸಾರಿ ಮಂತ್ರಿಯಾಗಿದ್ದರು. ಆದರೆ ಯಾವತ್ತೂ ಶ್ರೀನಗರಕ್ಕೆ ಬಂದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಜೆರ್ಸಿ ದ್ವೀಪದಲ್ಲಿ ಭೀಕರ ಸ್ಫೋಟ – ಮೂವರು ಸಾವು, 12 ಮಂದಿ ನಾಪತ್ತೆ

    Live Tv
    [brid partner=56869869 player=32851 video=960834 autoplay=true]

  • ಶಾಸಕ ಪ್ರೀತಂಗೌಡ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಭವಾನಿ ರೇವಣ್ಣ

    ಶಾಸಕ ಪ್ರೀತಂಗೌಡ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಭವಾನಿ ರೇವಣ್ಣ

    ಹಾಸನ: ಹಳ್ಳಿ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್, ಹೆಂಡ್ತಿ, ಮಕ್ಕಳು ಸಾಕಲು ಆಗದೆ ರೇವಣ್ಣ ಅವರ ಬಳಿ ಬಂದು ದಮ್ಮಯ್ಯ ಅಂದು ಬಿಬಿಎಂಪಿಗೆ ಹಾಕಿಸಿಕೊಂಡು ಕೆಲಸ ಮಾಡಿದ್ದರು. ಆದರೆ ಅವರ ಮಗ ಇವತ್ತು ಶಾಸಕನಾಗಿ ಏಳನೇ ಕ್ಲಾಸ್ ಓದಿದವರು ಎಂದು ರೇವಣ್ಣನ (Revanna) ಬಗ್ಗೆ ಮಾತನಾಡ್ತಾನೆ ಎಂದು ಶಾಸಕ ಪ್ರೀತಂಗೌಡ (Preetham gowda) ವಿರುದ್ಧ ಭವಾನಿ ರೇವಣ್ಣ (Bhavani Revanna) ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

    ಹಾಸನ (Hassan) ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಬ್ಬ ಶಾಸಕರು ಕೆಲವು ವಿಷಯಗಳಲ್ಲಿ ರೇವಣ್ಣ ಅವರನ್ನು ತಳ್ಳಿ ಹಾಕುತ್ತಾರೆ. ಎಲ್ಲವನ್ನೂ ನಾನೇ ಕಟ್ಟಿದೆ, ಎಲ್ಲವನ್ನೂ ನಾನೇ ಮಾಡ್ದೆ, ನನ್ನಿಂದಲೇ ಈ ಕೆಲಸ ಆಗಿದ್ದು ಎಂದು ಕೊಚ್ಚಿಕೊಳ್ಳುತ್ತಾರೆ. ಆ ಮಾತು ಅವರಿಗೆ ಎಷ್ಟು ಸರಿ ಅಂತ ಗೊತ್ತಿಲ್ಲ, ಅವರು ವಿದ್ಯಾವಂತರೋ, ಅವಿದ್ಯಾವಂತರೋ ಗೊತ್ತಿಲ್ಲ ಎಂದು ಪ್ರೀತಂಗೌಡ ವಿರುದ್ಧ ಕಿಡಿಕಾರಿದರು.

    ಹಾಸನ ಜಿಲ್ಲೆ ಇಷ್ಟೊಂದು ಕೆಲಸ ಆಗಿದ್ದರೇ ರಸ್ತೆಯಲ್ಲಿ ಹೋಗುವ ಎಂತಹ ಅವಿದ್ಯಾವಂತನು ಕೂಡ ಇದು ರೇವಣ್ಣ ಅವರು ಮಾಡಿರುವ ಕೆಲಸ ಎಂದು ತೋರಿಸುತ್ತಾನೆ. ಆ ರೋಡ್‍ನಲ್ಲಿ ಓಡಾಡುವಂತಹ ಶಾಸಕರಿಗೆ ಈ ಬಿಲ್ಡಿಂಗ್ ಯಾರು ಕಟ್ಟಿಸಿದ್ದು ಅಂತ ಗೊತ್ತಾಗುವುದಿಲ್ಲವಾ ಎಂದು ಕುಟುಕಿದರು. ಇದನ್ನೂ ಓದಿ: ಕಾಂತಾರ ಎಫೆಕ್ಟ್ : ರಿಯಲ್ ಕಾಂತಾರಗೆ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    7ನೇ ಕ್ಲಾಸ್ ಓದಿದವರು ಎಂದು ರೇವಣ್ಣ ಅವರನ್ನು ಖಂಡಿಸುತ್ತಾರೆ. ರೇವಣ್ಣ ಅವರ ವಿದ್ಯಾಭ್ಯಾಸನ ಜನರಿಗೆ ತೋರಿಸಿಕೊಂಡು ಕೆಲಸ ಮಾಡಬೇಕಾ? 8ನೇ ತರಗತಿ ಪಾಸ್ ಆಗಿರುವವರ ಹತ್ರನೇ ಅವರ ಅಪ್ಪ ಇಂಜಿನಿಯರ್ ಆಗಿದ್ದರೂ, ಬಂದು ದಮ್ಮಯ್ಯ ಅಂತ ಕೈಮುಗುದ್ರು ಬಿಬಿಎಂಪಿಗೆ ವರ್ಗಾವಣೆ ಮಾಡಿಸಿಕೊಂಡರು ಎಂದು ಹರಿಹಾಯ್ದರು.

    ಇದೇ ವೇಳೆ ಪತಿ ರೇವಣ್ಣ ಅವರನ್ನು ಭವಾನಿ ಹಾಡಿ ಹೊಗಳಿದರು. ರೇವಣ್ಣ ಅವರು 365 ದಿನಗಳಲ್ಲಿ 50ದಿನ ಮೀಟಿಂಗ್‍ಗಾಗಿ ಬೆಂಗಳೂರಿನಲ್ಲಿ ಉಳಿತಾರೆ, ಮೀಟಿಂಗ್ ಇಲ್ಲ ಅಂದರೆ ಬೆಂಗಳೂರಿಗೆ ಹೋಗ್ತಾನೆ ಇರಲಿಲ್ಲ. ಉಳಿದ ದಿನಗಳಲ್ಲಿ ಸಮಯ ವ್ಯರ್ಥ ಮಾಡದೆ ಹಳ್ಳಿ ಹಳ್ಳಿಗೆ ಹೋಗಿ ಅಭಿವೃದ್ಧಿ ಕೆಲಸ ಮಾಡುತ್ತಾರೆ. ಹೊಳೆನರಸೀಪುರ ತಾಲೂಕಿನ 24 ಹಾಸ್ಟೆಲ್‍ಗಳ ಉಸ್ತುವಾರಿ ನಾನೇ ನೋಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಗಡಿಜಿಲ್ಲೆಯಲ್ಲಿ ಮಧ್ಯರಾತ್ರಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

    Live Tv
    [brid partner=56869869 player=32851 video=960834 autoplay=true]

  • ಹಾಸನದಲ್ಲಿ Pay MLA ಅಭಿಯಾನ- BJP ಕಾರ್ಯಕರ್ತರಿಂದ ಪೊಲೀಸರಿಗೆ ದೂರು

    ಹಾಸನದಲ್ಲಿ Pay MLA ಅಭಿಯಾನ- BJP ಕಾರ್ಯಕರ್ತರಿಂದ ಪೊಲೀಸರಿಗೆ ದೂರು

    ಹಾಸನ: ಕಾಂಗ್ರೆಸ್‌ನಿಂದ (Congress) ರಾಜ್ಯದಲ್ಲಿ ಪೇ ಸಿಎಂ ಅಭಿಯಾನ ಆರಂಭಿಸಿದ್ದು, ಹಾಸನದಲ್ಲಿ (Hassan) ಬಿಜೆಪಿ (BJP) ಶಾಸಕರ ವಿರುದ್ಧ ಪೇ ಎಂಎಲ್‌ಎ (Pay MLA) ಅಭಿಯಾನ ಶುರುವಾಗಿದೆ.

    ಸಾಮಾಜಿಕ ಜಾಲತಾಣಗಳಲ್ಲಿ ಪೇ ಎಂಎಲ್‌ಎ ಎಂಬ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡಲಾಗಿದೆ. ಶಾಸಕ ಪ್ರೀತಂಗೌಡ (Preetam Gowda) ವಿರುದ್ಧ 50% ಕಮೀಷನ್ ಪೇ ಎಂಎಲ್‌ಎ ಎಂಬ ಪೋಸ್ಟ್‌ನ್ನು ಡಾ. ಸೂರಜ್ ರೇವಣ್ಣ ದೊಡ್ಮನೆ ಹುಡುಗ ಎಂಬ ಫೇಸ್‌ಬುಕ್ ಪೇಜ್‌ನಿಂದ ಅಪ್‌ಲೋಡ್ ಮಾಡಲಾಗಿದೆ. ಪೇ ಎಂಎಲ್‌ಎ 50% ಪೋಸ್ಟ್‌ಗೆ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಡಿವೈಎಸ್‌ಪಿ ಉದಯ್‌ಭಾಸ್ಕರ್‌ಗೆ ಮನವಿ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು, ಶಾಸಕರು ವಿರುದ್ಧ ಪೇ ಎಂಎಲ್‌ಎ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಳೆದ ಇಪ್ಪತ್ತು ವರ್ಷದಿಂದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಆಗದ ಅಭಿವೃದ್ಧಿ ಕೆಲಸಗಳನ್ನು ಶಾಸಕ ಪ್ರೀತಂಗೌಡ ಮಾಡಿದ್ದಾರೆ. ಇದನ್ನು ಸಹಿಸದ ಕೆಲವರು ಪೇ ಎಂಎಲ್‌ಎ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ ಎಂದರು.

    ಇನ್ನೊಂದೆಡೆ ಪೇ ಎಂಎಲ್‌ಎ ಪೋಸ್ಟ್ ವಿರುದ್ಧ Proud MLA 100% Again MLA ಅಭಿಯಾನ ಆರಂಭಿಸಿದ್ದಾರೆ. ಹಾಸನ ಜನಮನ ಗೆದ್ದ ಫರ್‌ಫೆಕ್ಟ್ ಎಂಎಲ್‌ಎ, ಹಾಸನ ಕಂಡ ಅಭಿವೃದ್ಧಿ ಹರಿಕಾರ ಎಂಬ ಪೋಸ್ಟ್‌ನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಟ್ರಕ್ ಟರ್ಮಿನಲ್ ನಿರ್ಮಾಣ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಗ್ರಾಮಸ್ಥರು

    ಟ್ರಕ್ ಟರ್ಮಿನಲ್ ನಿರ್ಮಾಣ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಗ್ರಾಮಸ್ಥರು

    ಹಾಸನ: ಹೇಮ ಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಎದುರು ಮೂರು ಎಕರೆ, 24 ಗುಂಟೆ ಜಾಗದಲ್ಲಿ ನಿರ್ಮಾಣ ಮಾಡಲು ಹೊರಟಿರುವ ಟ್ರಕ್ ಟರ್ಮಿನಲ್ ವಿವಾದ ಶಾಸಕರಾದ ಪ್ರೀತಂಗೌಡ ಹಾಗೂ ಹೆಚ್.ಡಿ.ರೇವಣ್ಣ ನಡುವೆ ಪ್ರತಿಷ್ಠೆಯ ಸಮರವಾಗಿದೆ. ಈ ನಡುವೆ ಇದೇ ವಿಚಾರವಾಗಿ ಡಿಸಿಗೆ ಕಂದಾಯ ಇಲಾಖೆಯ ಉಪ ಕಾರ್ಯದರ್ಶಿಯಿಂದ ಪತ್ರ ಬಂದಿದೆ. ಟ್ರಕ್ ಟರ್ಮಿನಲ್ ವಿರುದ್ಧ ಗ್ರಾಮಸ್ಥರು, ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

    Preetam Gowda, Hassan, JDS, BJP, Revanna,

    ಹಾಸನದ ಕೆಂಚಟ್ಟಹಳ್ಳಿ ಬಳಿ ಇರುವ ಹೇಮಗಂಗೋತ್ರಿ ಟ್ರಕ್ ಟರ್ಮಿನಲ್ ನಿರ್ಮಾಣ ವಿವಾದ ತಾರಕಕ್ಕೇರಿತ್ತು. ಇದು ಸರ್ಕಾರಿ ಗೋಮಾಳ ಜಾಗವಾಗಿ ಉಳಿಯಲಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಕಾಲೇಜಿನ ಮುಂಭಾಗ ಹಾಗೂ ಮಹಿಳಾ ಹಾಸ್ಟೆಲ್ ಪಕ್ಕದಲ್ಲಿದ್ದು, ಇಂತಹ ಜಾಗದಲ್ಲಿ ನಿರ್ಮಾಣ ಮಾಡಬಾರದು ಎಂದು ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ಯಪಡಿಸಿದ್ದರು. ಇದನ್ನೂ ಓದಿ: ಬುರ್ಖಾ ಹಾಕಿ ಅಸಭ್ಯವಾಗಿ ವರ್ತಿಸಿದರೆ ಧರ್ಮದೇಟು – ಮಂಗಳೂರಿನಲ್ಲಿ ತಾಲಿಬಾನ್ ಸಂಸ್ಕೃತಿ ಹೇರಿಕೆಗೆ ಯತ್ನ 

    ಇದು ತೀವ್ರ ಸ್ವರೂಪ ಪಡೆದು ಮಾಜಿಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ಬಲ್ ರೇವಣ್ಣ, ಎಂಎಲ್‍ಸಿ ಸೂರಜ್ ರೇವಣ್ಣ ಗ್ರಾಮಸ್ಥರೊಂದಿಗೆ ಧರಣಿ ನಡೆಸಿದ್ದರು. ಇನ್ನೊಂದೆಡೆ ಶಾಸಕ ಪ್ರೀತಂಗೌಡ ಬೆಂಬಲಿಗರು ಮುಂದೆ ನಿಂತು ಕಾಮಗಾರಿ ಆರಂಭಿಸಿದ್ದು, ಇದು ವಿಕೋಪಕ್ಕೆ ತಿರುತ್ತಿದ್ದಂತೆ 144 ಸೆಕ್ಷನ್ ಜಾರಿ ಮಾಡಲಾಗಿತ್ತು.

    Preetam Gowda, Hassan, JDS, BJP, Revanna, (2)

    ಇದೀಗ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಡಬಲ್ ಬೆಂಚ್‍ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಹೈಕೋರ್ಟ್‍ನಲ್ಲಿ ನಮಗೆ ನ್ಯಾಯ ದೊರಕಲಿದೆ ಎಂದು ಗ್ರಾಮಸ್ಥರು ವಿಶ್ವಾಸ ವ್ಯಕ್ಯಪಡಿಸಿದ್ದಾರೆ. ಇದರ ಮಧ್ಯೆ ಜಿಲ್ಲಾಧಿಕಾರಿಯವರು ಸರ್ಕಾರದ ಆದೇಶದಂತೆ ಸದರಿ ಜಮೀನನ್ನು ಕಂದಾಯ ವ್ಯಾಪ್ತಿಯ ಸುಪರ್ದಿಯಲ್ಲೇ ಇರಿಸಿಕೊಳ್ಳತಕ್ಕದ್ದು ಎಂದು ಸರ್ಕಾರದ ಉಪ ಕಾರ್ಯದರ್ಶಿ ಕವಿತರಾಣಿ ಮಂಗಳವಾರ ಆದೇಶ ಹೊರಡಿಸಿದ್ದರು.

    ಗ್ರಾಮಸ್ಥರು ಹೇಳಿದ್ದೇನು?
    ಟ್ರಕ್ ಟರ್ಮಿನಲ್ ಮಾಡಲು ಈಗಾಗಲೇ ನಮಗೆ ಜಾಗ ನೀಡಿದ್ದಾರೆ. ನಾವು ಟ್ರಕ್ ಟರ್ಮಿನಲ್ ನಿರ್ಮಿಸಲು ಈಗಾಗಲೇ ಲಕ್ಷಾಂತರ ರೂ. ಹಣ ಖರ್ಚು ಮಾಡಿದ್ದೇವೆ. ಈಗ ನಮಗೆ ಬೇರೆ ಕಡೆ ಜಾಗ ನೀಡುತ್ತಾರೆ ಎಂದರೆ ಒಪ್ಪಲು ಸಾಧ್ಯವಿಲ್ಲ. ಸರ್ಕಾರ ಆ ಜಾಗವನ್ನು ಟ್ರಕ್‍ಟರ್ಮಿನಲ್‍ಗೆ ಈಗಾಗಲೇ ಮೀಸಲಿಟ್ಟಿದೆ ಎಂದು ಹೇಳುತ್ತಿರುವುದು ಸಂತಸ ತಂದಿದೆ. ನಮಗೆ ಯಾವ ರಾಜಕೀಯ ನಾಯಕರು, ರಾಜಕೀಯ ಮುಖ್ಯವಲ್ಲ. ಆದರೆ ನಮಗೆ ಅದೇ ಜಾಗದಲ್ಲಿ ಟ್ರಕ್‍ಟರ್ಮಿನಲ್ ನಿರ್ಮಾಣ ಆಗಬೇಕು ಎಂದು ಲಾರಿ ಚಾಲಕರು ಮತ್ತು ಮಾಲೀಕರು ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ:  ನೀಚರು, ನಿರ್ಲಜ್ಯರಿಂದ ಪಾಕಿಸ್ತಾನ ಪರ ಘೋಷಣೆ: ಮುತಾಲಿಕ್ 

    ಒಟ್ಟಿನಲ್ಲಿ ಟ್ರಕ್ ಟರ್ಮಿನಲ್ ವಿವಾದ ಶಾಸಕರುಗಳಾದ ಎಚ್.ಡಿ.ರೇವಣ್ಣ ಹಾಗೂ ಪ್ರೀತಂಗೌಡ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಇದೀಗ ಈ ವಿವಾದ ಹೈಕೋರ್ಟ್ ಅಂಗಳದಲ್ಲಿದ್ದು, ತೀರ್ಪು ಯಾರ ಪರ ಬರಲಿದೆ ಎಂಬುದನ್ನು ಕಾದುನೋಡಬೇಕಿದೆ.