Tag: ಪ್ರೀತಿ ಗೆಹ್ಲೋಟ್

  • ಭಾರೀ ಮಳೆಗೆ ಬಿಬಿಎಂಪಿ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣ ಭರ್ತಿ: ಪ್ರೀತಿ ಗೆಹ್ಲೋಟ್

    ಭಾರೀ ಮಳೆಗೆ ಬಿಬಿಎಂಪಿ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣ ಭರ್ತಿ: ಪ್ರೀತಿ ಗೆಹ್ಲೋಟ್

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ವ್ಯಾಪ್ತಿಯಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದೆ. ಇದರಲ್ಲಿ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್(Preeti Gehlot) ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ(Lakes) ಒಟ್ಟು ಸಂಗ್ರಹಣಾ ಸಾಮರ್ಥ್ಯವು 32,514 ದಶಲಕ್ಷ ಲೀಟರ್‌ಗಳಾಗಿದೆ. 2025ರ ಏಪ್ರಿಲ್‌ನಲ್ಲಿ ಕೆರೆಗಳ ಒಟ್ಟು ನೀರಿನ ಸಂಗ್ರಹಣೆಯ ಪ್ರಮಾಣವು 10,595 ದಶಲಕ್ಷ ಲೀಟರ್‌ಗಳಿಗೆ ಕುಸಿದು ಕೇವಲ 3 ಕೆರೆಗಳಲ್ಲಿ ಮಾತ್ರ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿತ್ತು. ಸುಮಾರು 63 ಕೆರೆಗಳಲ್ಲಿ ನೀರಿಲ್ಲದೆ ಒಣಗುವ ಹಂತದಲ್ಲಿತ್ತು ಎಂದಿದ್ದಾರೆ. ಇದನ್ನೂ ಓದಿ: ಇಡಿ ತನಿಖೆಗೆ ಸಂಪೂರ್ಣ ಸಹಕಾರ – ದಾಳಿ ಉದ್ದೇಶ ಗೊತ್ತಿಲ್ಲ, ನಾನೇನೂ ಮುಚ್ಚಿಟ್ಟಿಲ್ಲ ಅಂದ ಪರಂ

    ಇದೀಗ ನಗರದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಒಟ್ಟು 26,056 ದಶಲಕ್ಷ ಲೀಟರ್‌ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದ್ದು, ಕಳೆದ ಏಪ್ರಿಲ್‌ಗೆ ಹೋಲಿಸಿದರೆ ನೀರಿನ ಪ್ರಮಾಣ ಸಾಕಷ್ಟು ಹೆಚ್ಚಾಗಿದೆ. ಇದೀಗ ಪಾಲಿಕೆ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿರುತ್ತವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪರಮೇಶ್ವರ್‌ ಬೆನ್ನಿಗೆ ನಿಂತ ಸಿಎಂ, ಸಚಿವರು – ನಾವಿದ್ದೇವೆ ಎಂದ ಹೈಕಮಾಂಡ್

    ತುಂಬಿರುವ ಎಲ್ಲಾ ಕೆರೆಗಳ ತೂಬುಗಳ ಬಳಿ ಹಾಗೂ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ. ಕೆರೆಗಳು ನೀರು ಹೋಗುವ ಕಾಲುವೆಗಳಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರೆ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಯನ್ನ ನಿಯೋಜಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

  • ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯದಿಂದ ಪ್ರೀತಿ ಗೆಹ್ಲೋಟ್ ವರ್ಗಾವಣೆಗೆ ತಡೆ

    ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯದಿಂದ ಪ್ರೀತಿ ಗೆಹ್ಲೋಟ್ ವರ್ಗಾವಣೆಗೆ ತಡೆ

    ಬಳ್ಳಾರಿ: ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರನ್ನು ಬಂದ ಹತ್ತು ದಿನದಲ್ಲೇ ವರ್ಗಾವಣೆ ಮಾಡಲಾಗಿತ್ತು. ಆದರೆ ಅವಧಿ ಪೂರ್ವ ವರ್ಗಾವಣೆ ಮಾಡಿದ್ದರಿಂದ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯದಿಂದ ತಮ್ಮ ವರ್ಗಾವಣೆಗೆ ತಡೆಯಾಜ್ಞೆ ತಂದು ಮುಂದುವರೆದಿದ್ದಾರೆ.

    ಐಎಎಸ್ ಅಧಿಕಾರಿಯಾಗಿರುವ ಗೆಹ್ಲೋಟ್ ಅವರ ಬಿಗಿ ಆಡಳಿತದಿಂದ ಪಾಲಿಕೆಯಲ್ಲಿ ತಮ್ಮ ಕೈ ಚಳಕ ನಡೆಯದ ವ್ಯಕ್ತಿಗಳು ಇವರ ವರ್ಗಾವಣೆಗೆ ಪ್ರಯತ್ನ ಮಾಡಿರಬಹುದು. ಜೊತೆಗೆ ಈ ಹುದ್ದೆಗೆ ಬರಲು ಪ್ರಯತ್ನಿಸಿದವರು ಲಂಚ ನೀಡಿ ಗೆಹ್ಲೋಟ್ ಅವರನ್ನು ವರ್ಗಾವಣೆ ಮಾಡಿಸಲು ಮುಂದಾಗಿರಬೇಕು ಎಂಬ ಮಾತುಗಳು ಕೇಳಿ ಬರುತ್ತಿವೆ.

    ಈ ಹಿಂದೆ ಇದ್ದಂತಹ ಪಾಲಿಕೆ ಆಯುಕ್ತೆ ತುಷಾರಮಣಿ ಅವರು ಸಹ ಆರಂಭದಲ್ಲಿ ತುಂಬಾ ಕಟ್ಟುನಿಟ್ಟಾದ ಕಾರಣ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಅವರೂ ಸಹ ಆಡಳಿತಾತ್ಮಕ ನ್ಯಾಯಾಲಯದ ಮೊರೆ ಹೋಗಿ ತಮ್ಮ ವರ್ಗಾವಣೆಗೆ ತಡೆಯಾಜ್ಞೆ ತಂದಿದ್ದರು. ಆದರೆ ಅವರು ನಂತರದ ದಿನಗಳಲ್ಲಿ ತಮ್ಮ ಕಾರ್ಯಶೈಲಿಯಲ್ಲಿ ಬದಲಾಣವಣೆ ಮಾಡಿಕೊಂಡು ಕೆಲ ದುಷ್ಟ ಶಕ್ತಿಗಳ ಜೊತೆ ಕೈಜೋಡಿಸಿ ಭ್ರಷ್ಟಾಚಾರದ ಕೂಪಕ್ಕೆ ಬಿದ್ದರು ಎಂದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಯಾಗಿತ್ತು.