Tag: ಪ್ರೀತಿ ಜಿಂಟಾ

  • ಕಿಂಗ್ಸ್ ಇಲೆವೆನ್ ಹ್ಯಾಟ್ರಿಕ್- ಗೇಲ್, ರಾಹುಲ್‍ಗೆ ಪ್ರೀತಿ ಜಿಂಟಾ ಸ್ಪೆಷಲ್ ಗಿಫ್ಟ್

    ಕಿಂಗ್ಸ್ ಇಲೆವೆನ್ ಹ್ಯಾಟ್ರಿಕ್- ಗೇಲ್, ರಾಹುಲ್‍ಗೆ ಪ್ರೀತಿ ಜಿಂಟಾ ಸ್ಪೆಷಲ್ ಗಿಫ್ಟ್

    ದುಬೈ: ವೆಸ್ಟ್ ಇಂಡೀಸ್ ದಿಗ್ಗಜ ಆಟಗಾರ ಕ್ರಿಸ್ ಗೇಲ್ ಪಂಜಾಬ್ ತಂಡಕ್ಕೆ ಎಂಟ್ರಿ ಕೊಟ್ಟ ವಿಶೇಷ ಎಂಬಂತೆ 2020ರ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಹ್ಯಾಟ್ರಿಕ್ ಗೆಲುವು ಪಡೆದಿದೆ. ಇದರೊಂದಿಗೆ ಟೂರ್ನಿಯ ಪ್ಲೇ ಆಫ್ ರೇಸ್‍ಗೂ ಎಂಟ್ರಿ ಕೊಟ್ಟಿದ್ದು, 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನ ಪಡೆದುಕೊಂಡಿದೆ.

    ಸತತ ಗೆಲುವು ಪಡೆದಿರುವುದರೊಂದಿಗೆ ಸಂತಸದಲ್ಲಿರುವ ಪಂಜಾಬ್ ತಂಡದ ಪ್ರೀತಿ ಜಿಂಟಾ, ಆಟಗಾರರಿಗೆ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ. ನಾಯಕ ಕೆಎಲ್ ರಾಹುಲ್, ಗೇಲ್, ಶೆಲ್ಡನ್ ಕಾಟ್ರೆಲ್, ಶಮಿ, ಮ್ಯಾಕ್ಸ್ ವೇಲ್ ಸೇರಿದಂತೆ ಕೆಲ ಆಟಗಾರರಿಗೆ ಗಿಫ್ಟ್ ಪಡೆದುಕೊಂಡಿದ್ದಾರೆ. ಈ ವಿಡಿಯೋವನ್ನು ಪಂಜಾಬ್ ತಂಡ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದೆ. ಈ ವೇಳೆ ಗೇಲ್ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದು, ಯುವ ಆಟಗಾರರು ಭಾಂಗ್ರಾ ಡ್ಯಾನ್ಸ್ ಮಾಡಿ ಸಂಭ್ರಮಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.

    ಪಂಜಾಬ್ ಪ್ಲೇ ಆಫ್ ತಲುಪಲು ಉಳಿದಿರುವ 4 ಪಂದ್ಯಗಳಲ್ಲಿ ಗೆಲುವು ಪಡೆಯಬೇಕಿದೆ. ಪ್ಲೇ ಆಫ್ ತಲುಪುವುದು ಕಷ್ಟ ಸಾಧ್ಯ ಎಂಬ ಸಂದರ್ಭದಲ್ಲಿ ಅಚ್ಚರಿ ಎಂಬಂತೆ ಸತತ ಮೂರು ಪಂದ್ಯಗಳಲ್ಲಿ ಗೆದ್ದು ಪಂಜಾಬ್ ತಂಡ ಹ್ಯಾಟ್ರಿಕ್ ಸಾಧಿಸಿದೆ. ಮುಂಬೈ, ಡೆಲ್ಲಿ, ಬೆಂಗಳೂರು ತಂಡಗಳ ವಿರುದ್ಧ ಗೆಲುವು ಪಡೆದ ಪ್ಲೇ ಆಫ್ ರೇಸ್‍ಗೆ ಎಂಟ್ರಿ ಕೊಟ್ಟಿದೆ. ಮುಂಬೈ ವಿರುದ್ಧ ಗೆಲುವು ಪಡೆದ ಪಂಜಾಬ್, ಡೆಲ್ಲಿ ತಂಡವನು ಆತ್ಮವಿಶ್ವಾಸದಿಂದ ಎದುರಿಸಿತ್ತು. ಡೆಲ್ಲಿ ವಿರುದ್ಧ ಗೆಲುವಿನ ಬಳಿಕ ಪಂಜಾಬ್ ತಂಡದ ಆಟಗಾರರು, ತರಬೇತಿ ಸಿಬ್ಬಂದಿ, ಮ್ಯಾನೇಜ್‍ಮೆಂಟ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮವನ್ನು ಮಾಡಿಕೊಂಡಿದ್ದರು.

    ಸದ್ಯ ಪಂಜಾಬ್ ತಂಡ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದು, ಉಳಿದ ನಾಲ್ಕು ಪಂದ್ಯಗಳಲ್ಲಿ ಗೆಲುವು ಪಡೆಯುವುದು ಅನಿವಾರ್ಯವಾಗಿದೆ. ಒಂದೊಮ್ಮೆ ಒಂದು ಪಂದ್ಯದಲ್ಲಿ ಸೋಲುಂಡರೆ ಉಳಿದ ತಂಡಗಳ ನೆಟ್ ರನ್‍ರೇಟ್ ಅನ್ವಯ ಪ್ಲೇ ಆಫ್ ತಲುಪುವ ಅವಕಾಶವಿದೆ. ಡೆಲ್ಲಿ ಹಾಗೂ ಮುಂಬೈ, ಬೆಂಗಳೂರು ತಂಡಗಳು ಫ್ಲೇ ಆಫ್ ಪ್ರವೇಶ ಮಾಡುವುದು ಬಹುತೇಕ ಖಚಿತವಾಗಿದ್ದು, ಕೋಲ್ಕತ್ತಾ, ರಾಜಸ್ಥಾನ, ಹೈದರಾಬಾದ್ ತಂಡಗಳು ಪ್ಲೇ ಆಫ್ ರೇಸ್‍ನಲ್ಲಿದೆ.

  • ಡೆಲ್ಲಿ ತಂಡಕ್ಕೆ ನೆರವಾಯ್ತು ಅಂಪೈರ್ ಎಡವಟ್ಟು ತೀರ್ಪು- ಶ್ರೀನಾಥ್‍ಗೆ ದೂರು ಕೊಟ್ಟ ಪಂಜಾಬ್

    ಡೆಲ್ಲಿ ತಂಡಕ್ಕೆ ನೆರವಾಯ್ತು ಅಂಪೈರ್ ಎಡವಟ್ಟು ತೀರ್ಪು- ಶ್ರೀನಾಥ್‍ಗೆ ದೂರು ಕೊಟ್ಟ ಪಂಜಾಬ್

    ಅಬುಧಾಬಿ: ಕಿಂಗ್ಸ್ ಇಲೆವೆನ್ ತಂಡ ಫೀಲ್ಡ್ ಅಂಪೈರ್ ನಿತಿನ್ ಮೆನನ್ ಅವರ ವಿವಾದಾತ್ಮಕ ಶಾರ್ಟ್ ರನ್ ವಿರುದ್ಧ ಪಂಜಾಬ್ ತಂಡ ಮನವಿ ಮಾಡಿದ್ದು, ಉತ್ತಮ ಫಲಿತಾಂಶಕ್ಕಾಗಿ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಲು ಆಟಗಾರರು ಮನವಿ ಮಾಡಿದ್ದಾರೆ.

    ಈ ಕುರಿತು ಮಾಹಿತಿ ನೀಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಿಇಒ ಸತೀಶ್ ಮೆನನ್, ಪಂದ್ಯದ ರೆಫರಿ ಜಾವಗಲ್ ಶ್ರೀನಾಥ್ ಬಳಿ ಮನವಿ ಮಾಡಿದ್ದೇವೆ. ಮಾನವ ತಪ್ಪು ಸಹಜವಾಗಿ ನಡೆಯುತ್ತದೆ. ಆದರೆ ಅಂತಾರಾಷ್ಟ್ರೀಯ ಮಟ್ಟದ ಟೂರ್ನಿಯಲ್ಲಿ, ತಂತ್ರಜ್ಞಾನ ಲಭ್ಯವಿದ್ದರೂ ಇಂತಹ ಪ್ರಮಾದ ನಡೆಯುವುದು ಸರಿಯಲ್ಲ. ಈ ಒಂದು ರನ್ ನಮ್ಮ ಪ್ಲೇ ಆಫ್ ಪ್ರವೇಶಿಸಲು ದುಬಾರಿಯಾಗಬಹುದು. ಸೋಲು ಅಂತಿಮವಾಗಿ ಸೋಲು ಅಷ್ಟೇ. ಆದ್ದರಿಂದ ನಿಯಮಗಳಲ್ಲಿ ಬದಲಾವಣೆ ತರುವ ವಿಶ್ವಾಸವಿದೆ ಎಂದು ತಿಳಿಸಿದರು.

    ಇತ್ತ ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ಆಸ್ಟ್ರೇಲಿಯಾ ಮಾಜಿ ಆಟಗಾರ ಟಾಮ್ ಮೂಡಿ, ತಂತ್ರಜ್ಞಾನ ಆಟಕ್ಕೆ ಸಹಾಯ ಮಾಡಬೇಕಾದರೆ ನಿಯಮಗಳ ಬದಲಾವಣೆ ಅಗತ್ಯವಿದೆ. ಆದರೆ ಯಾವುದೋ ಒಂದು ತಪ್ಪು ನಡೆಯುವವರೆಗೂ ಅಂತಹ ವಿಷಯಗಳನ್ನು ನಾವು ಯೋಚಿಸಲಾಗುವುದಿಲ್ಲ. ಘಟನೆಯಲ್ಲಿ ಮೂರನೇ ಅಂಪೈರ್ ತೀರ್ಪು ನೀಡಬೇಕಾಗಿತ್ತು. ಯಾವುದೇ ನಿಯಮಗಳನ್ನು ಬದಲಿಸಿದರೂ ಟೂರ್ನಿಯ ಆರಂಭದಲ್ಲೇ ಅದನ್ನು ಘೋಷಿಸಬೇಕಿದೆ ಎಂದು ಹೇಳಿದ್ದಾರೆ.

    ಪಂಜಾಬ್ ಮತ್ತು ಡೆಲ್ಲಿ ವಿರುದ್ಧ ಪಂದ್ಯ ಸೂಪರ್ ಓವರ್ ಮುನ್ನ ಕಗಿಸೊ ರಬಡಾ ಬೌಲ್ ಮಾಡಿದ ಓವರಿನಲ್ಲಿ ನಾನ್‍ಸ್ಟ್ರೇಕ್ ನಲ್ಲಿದ್ದ ಕ್ರಿಸ್ ಜೋರ್ಡನ್ ರನ್ ಪೂರ್ಣಗೊಂಡಿರುವುದು ರಿಪ್ಲೇನಲ್ಲಿ ಸ್ಪಷ್ಟವಾಗಿತ್ತು. ತಾಂತ್ರಿಕವಾಗಿ ಸಾಕ್ಷಿ ಇದ್ದರೂ ಅಂಪೈರ್ ಮೆನನ್ ತಮ್ಮ ತೀರ್ಪನ್ನು ಮರುಪರಿಶೀಲನೆ ಮಾಡಲಿಲ್ಲ. ಪರಿಣಾಮ ಕಿಂಗ್ಸ್ ಇಲೆವೆನ್ ಖಾತೆಗೆ ಕೇವಲ 1 ರನ್ ಲಭಿಸಿತ್ತು.

    ಅಂತಿಮ ಓವರಿನಲ್ಲಿ ಪಂಜಾಬ್ 13 ರನ್ ಗಳಿಸಬೇಕಿತ್ತು. ಮಯಾಂಕ್ 12 ರನ್ ಸಿಡಿಸಲು ಯಶಸ್ವಿಯಾಗಿದ್ದರು. ಒಂದೊಮ್ಮೆ ಶಾರ್ಟ್ ರನ್ ಅವರ ಖಾತೆಗೆ ಜಮೆಯಾಗಿದ್ದರೆ ಮೂರು ಎಸೆತ ಬಾಕಿ ಇರುವಂತೆಯೇ ಪಂದ್ಯದಲ್ಲಿ ಪಂಜಾಬ್ ತಂಡ ಗೆಲುವು ಪಡೆಯುತ್ತಿತ್ತು. ಆದರೆ ಬಳಿಕ ನಡೆದ ಎರಡು ಎಸೆತಗಳಲ್ಲಿ, ಎರಡು ವಿಕೆಟ್ ಉರುಳಿದ ಕಾರಣ ಪಂದ್ಯದ ಫಲಿತಾಂಶ ತೀರ್ಮಾನ ಸೂಪರ್ ಓವರ್‍ನಲ್ಲೇ ಮಾಡಬೇಕಾಯ್ತು.

    ಇತ್ತ ಶಾರ್ಟ್ ರನ್ ಕುರಿತಂತೆ ಟ್ವೀಟ್ ಮಾಡಿ ತಮ್ಮ ಅಸಮಾಧಾನ ಹೊರ ಹಾಕಿರುವ ಪಂಜಾಬ್ ತಂಡದ ಒಡತಿ ಪ್ರೀತಿ ಜಿಂಟಾ, ಕೊರೊನಾ ಸಂದರ್ಭದಲ್ಲಿ ಐಪಿಎಲ್‍ಗಾಗಿ ಉತ್ಸಾಹದಿಂದ ಪ್ರಯಾಣಿಸಿದೆ. 6 ದಿನಗಳ ಕ್ವಾರಂಟೈನ್ ಹಾಗೂ 5 ಕೋವಿಡ್ ಟೆಸ್ಟ್‍ಗಳನ್ನ ನಗುವಿನ ಮೂಲಕವೇ ಎದುರಿಸಿದ್ದೆ. ಆದರೆ ಒಂದು ಶಾರ್ಟ್ ರನ್ ನನಗೆ ತೀವ್ರ ಹೊಡೆತ ನೀಡಿದೆ. ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಲು ಆಗದಿದ್ದರೆ ಅದರ ಅರ್ಥವೇನು? ಬಿಸಿಸಿಐಗೆ ಇದು ಹೊಸ ನಿಯಮಗಳನ್ನು ಪರಿಚಯಿಸಲು ಸೂಕ್ತ ಸಮಯ. ಇದು ಪ್ರತಿ ವರ್ಷ ಸಂಭವಿಸುವುದಿಲ್ಲ ಎಂದು ಹೇಳಿದ್ದಾರೆ.

    ಇತ್ತ ಕಿವೀಸ್ ಮಾಜಿ ಆಟಗಾರ ಸ್ಕಾಟ್ ಸ್ಟೈರಿಸ್ ಪ್ರತಿಕ್ರಿಯೆ ನೀಡಿ, ಶಾರ್ಟ್ ರನ್ ಇಂದಿನ ಐಪಿಎಲ್ ಪಂದ್ಯದಲ್ಲಿ ಸಣ್ಣ ನಿರ್ಧಾರ. ಆದರೆ ನಿಮಗೆ ಕೊನೆಯ 2 ಎಸೆತಗಳಲ್ಲಿ 1 ರನ್ ಬೇಕಾಗಿದ್ದು, ಗೆಲುವು ಪಡೆಯಲು ಸಾಧ್ಯವಾಗದಿದ್ದರೆ ನಿಮ್ಮನ್ನು ನೀವೇ ದೂಷಿಸಿಕೊಳ್ಳಬೇಕು ಎಂದಿದ್ದಾರೆ.

  • ಕ್ವಾರಂಟೈನ್‍ನಲ್ಲಿದ್ದರೂ ತಂಡಕ್ಕಾಗಿ ‘ಪ್ರೀತಿ’ಯ ಸಂದೇಶ

    ಕ್ವಾರಂಟೈನ್‍ನಲ್ಲಿದ್ದರೂ ತಂಡಕ್ಕಾಗಿ ‘ಪ್ರೀತಿ’ಯ ಸಂದೇಶ

    – ಪಂಜಾಬ್ ತಂಡದಲ್ಲಿ ಕನ್ನಡಿಗರದ್ದೇ ಪಾರುಪತ್ಯ

    ಅಬುಧಾಬಿ: ಕ್ವಾರಂಟೈನ್‍ನಲ್ಲಿದ್ದರೂ ಕೂಡ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಒಡತಿ ಪ್ರೀತಿ ಜಿಂಟಾ ತಮ್ಮ ತಂಡಕ್ಕಾಗಿ ವಿಡಿಯೋ ಸಂದೇಶ ಕಳುಹಿಸಿದ್ದಾರೆ.

    ಐಪಿಎಲ್ ಹಬ್ಬ ಶುರುವಾಗಲು ಇನ್ನು ಕೇವಲ ಮೂರು ದಿನ ಬಾಕಿ ಇದೆ. ಈಗಾಗಲೇ ಸಿದ್ಧತೆಯಲ್ಲಿ ತೊಡಗಿರುವ ಎಲ್ಲ ತಂಡಗಳು ಕೂಡ ಟ್ರೋಫಿ ಮೇಲೆ ಕಣ್ಣಿಟ್ಟಿವೆ. ನೂತನ ಸಾರಥಿ ಮತ್ತು ಹೊಸ ಉತ್ಸಹದೊಂದಿಗೆ ಕಿಂಗ್ಸ್ ಇಲೆವೆನ್ ತಂಡ ತನ್ನ ಚೊಚ್ಚಲ ಟ್ರೋಫಿ ಗೆಲ್ಲಲು ತುದಿಗಾಲಲ್ಲಿ ನಿಂತಿದೆ. ಆಟಗಾರರನ್ನು ಹುರಿದುಂಬಿಸಲು ಗುಳಿಕನ್ನೆ ಮಾಲಕಿ ಪ್ರೀತಿ ಜಿಂಟಾ ಕೂಡ ಬಂದಿದ್ದಾರೆ.

    https://www.instagram.com/p/CFKYDbGpe8F/

    ಈಗ ತಮ್ಮ ತಂಡಕ್ಕಾಗಿ ವಿಡಿಯೋ ಸಂದೇಶವೊಂದನ್ನು ಕಳುಹಿಸಿರುವ ಜಿಂಟಾ, ನೀವು ಕಠಿಣವಾಗಿ ಅಭ್ಯಾಸ ಮಾಡುತ್ತಿರುವುದನ್ನು ನಾನು ಸಾಮಾಜಿಕ ಜಾಲತಾಣದ ಮೂಲಕ ನೋಡಿದ್ದೇನೆ. ನೀವು ಚೆನ್ನಾಗಿ ಅಭ್ಯಾಸ ಮಾಡುತ್ತಿದ್ದೀರಾ, ನಾನು ಈ ಕ್ವಾರಂಟೈನ್ ಅವಧಿ ಮುಗಿಸಿ ನಿಮ್ಮನ್ನು ಸೇರಲು ಬಹಳ ಉತ್ಸುಕತೆಯಿಂದ ಕಾಯುತ್ತಿದ್ದೇನೆ. ನಿಮ್ಮನ್ನು ಬಹುಬೇಗ ಸೇರಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಸದ್ಯ ಐಪಿಎಲ್‍ಗಾಗಿ ಯುಇಎಗೆ ಹೋಗಿರುವ ಜಿಂಟಾ ಅಲ್ಲಿ ಕ್ವಾಂರಟೈನ್ ಆಗಿದ್ದಾರೆ.

    ಎಲ್ಲ ವಿಭಾಗದಲ್ಲೂ ಬಲಿಷ್ಠವಾಗಿ ಕಾಣುವ ಪಂಜಾಬ್ ತಂಡ ಮೊದಲ ಬಾರಿಗೆ ಟ್ರೋಫಿ ಗೆಲ್ಲಲು ಸಿದ್ಧತೆ ನಡೆಸಿದೆ. ಪಂಜಾಬ್ ತಂಡದಲ್ಲಿ ಈ ಬಾರಿ ಅತೀ ಹೆಚ್ಚು ಕನ್ನಡಿಗರೇ ಇದ್ದಾರೆ. ಅಶ್ವಿನ್ ಡೆಲ್ಲಿ ಕ್ಯಾಪಿಟಲ್ ತಂಡ ಸೇರಿದ ನಂತರ ತಂಡದ ನಾಯಕನ ಪಟ್ಟವನ್ನು ಕನ್ನಡಿಗ ಕೆ.ಎಲ್ ರಾಹುಲ್ ವಹಿಸಿಕೊಂಡಿದ್ದಾರೆ. ಜೊತೆಗೆ ಪಂಜಾಬ್ ತಂಡದ ಮುಖ್ಯ ಕೋಚ್ ಆಗಿ ಅನಿಲ್ ಕುಂಬ್ಳೆ ಇದ್ದಾರೆ. ಉಳಿದಂತೆ ಕರ್ನಾಟಕದ ಮಯಾಂಕ್ ಅಗರ್ವಾಲ್, ಕರುಣ್ ನಾಯರ್, ಬೌಲರ್ ಸುಚಿತ್ ಸಹ ತಂಡದಲ್ಲಿ ಇದ್ದಾರೆ. ಇದನ್ನು ಓದಿ: ಐಪಿಎಲ್‍ನಲ್ಲಿ ಹೆಚ್ಚು ಇಂಡಿಯನ್ ಕೋಚ್‍ಗಳನ್ನು ನೋಡ ಬಯಸುತ್ತೇನೆ: ಅನಿಲ್ ಕುಂಬ್ಳೆ

    ಕನ್ನಡಿಗರ ಜೊತೆ ವಿದೇಶಿ ಆಟಗಾರರಾಗಿ ಬ್ಯಾಂಟಿಂಗ್ ದೈತ್ಯ ಕ್ರಿಸ್ ಗೇಲ್, ವೆಸ್ಟ್ ಇಂಡೀಸ್‍ನ ನಿಕೋಲಸ್ ಪೂರನ್ ಮತ್ತು ಆಸ್ಟ್ರೇಲಿಯಾದ ಸ್ಫೋಟಕ ಆಲ್‍ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಅವರು ಇರಲಿದ್ದಾರೆ. ಇವರ ಜೊತೆಗೆ ಬೌಲಿಂಗ್ ನಲ್ಲಿ ಬಲ ತುಂಬಲು ಭಾರತದ ಅನುಭವಿ ವೇಗಿ ಮೊಹಮ್ಮದ್ ಶಮಿ, ವೆಸ್ಟ್ ಇಂಡೀಸ್‍ನ ಶೆಲ್ಡನ್ ಕಾಟ್ರೆಲ್ ಮತ್ತು ಮುಜೀಬ್-ಉರ್-ರೆಹ್ಮಾನ್ ಇದ್ದಾರೆ. ಪಂಜಾಬ್ ಸೆ. 20ರಂದು ದೆಹಲಿ ತಂಡದ ವಿರುದ್ಧ ಮೊದಲ ಪಂದ್ಯ ಆಡಲಿದೆ.

    ಈ ಹಿಂದೆ ತಮ್ಮ ತಂಡದ ಬಗ್ಗೆ ಮಾತನಾಡಿದ ಮುಖ್ಯ ಕೋಚ್ ಅನಿಲ್ ಕುಂಬ್ಳೆಯವರು, ನಮ್ಮ ತಂಡ ಎಲ್ಲ ವಿಭಾಗದಲ್ಲೂ ಬಹಳ ಬಲಿಷ್ಠವಾಗಿದೆ. ಯುವ ಆಟಗಾರರು ಇದ್ದಾರೆ. ಪ್ರತಿಭಾನ್ವಿತ ವಿದೇಶಿ ಆಟಗಾರರು ಇದ್ದಾರೆ ಎಂದು ಹೇಳಿದ್ದರು. ಜೊತೆಗೆ 40 ವರ್ಷದ ಗೇಲ್ ಅವರು ತಂಡದಲ್ಲಿ ಆಡಲಿದ್ದು, ಅವರು ಓರ್ವ ಆಟಗಾರನ ಜೊತಗೆ ಹಿರಿಯ ಮಾರ್ಗದರ್ಶಕರಾಗಿಯೂ ಪ್ರಮುಖ ಪಾತ್ರವಹಿಸಲಿದ್ದಾರೆ ಎಂದು ತಿಳಿಸಿದ್ದರು. ಇದನ್ನು ಓದಿ: ಕ್ಯಾಪ್ಟನ್ ತ್ರಯರಿಂದ ಸಾಕಷ್ಟು ಕಲ್ತಿದ್ದೇನೆ: ಕೆಎಲ್ ರಾಹುಲ್

    ಪಂಜಾಬ್ ತಂಡದ ನಾಯಕತ್ವ ವಹಿಸಿಕೊಂಡಿರುವ ಬಗ್ಗೆ ಮಾತನಾಡಿದ್ದ ಕೆಎಲ್ ರಾಹುಲ್, ಧೋನಿ, ಕೊಹ್ಲಿ ರೋಹಿತ್ ಅವರೊಂದಿಗೆ ಕಳೆದ 10 ವರ್ಷಗಳಿಂದ ಆಡುತ್ತಿದ್ದು, ಅವರ ನಾಯಕತ್ವದಲ್ಲಿ ಆಡಲು ನನಗೆ ಅವಕಾಶ ಲಭಿಸಿದೆ. ಕೊಹ್ಲಿ, ಧೋನಿ ವ್ಯಕ್ತಿಗತವಾಗಿ ಭಿನ್ನವಾಗಿದ್ದರೂ, ತಂಡವನ್ನು ಮುನ್ನಡೆಸುವ ವಿಚಾರದಲ್ಲಿ ಒಂದೇ. ಆದರೆ ಆ ಪದ್ಧತಿಗಳು ಮಾತ್ರ ಬೇರೆ. ಅವರಿಂದ ಸಾಕಷ್ಟು ಕಲಿತಿದ್ದೇನೆ. ಇತ್ತ ಸಾಕಷ್ಟು ಅನುಭವವನ್ನು ಹೊಂದಿರುವ ಟೀಂ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ತಂಡದ ಕೋಚ್ ಆಗಿ ತಮ್ಮ ಪಕ್ಕದಲ್ಲೇ ಇರುವುದು ಸಾಕಷ್ಟು ಸಂತಸ ತಂದಿದೆ ಎಂದಿದ್ದರು.

  • ಕೊರೊನಾ ವೈರಸ್ ತಪ್ಪಿಸಲು ಸರಳ ಹೆಜ್ಜೆ- ಭಜ್ಜಿ ಪೋಸ್ಟ್

    ಕೊರೊನಾ ವೈರಸ್ ತಪ್ಪಿಸಲು ಸರಳ ಹೆಜ್ಜೆ- ಭಜ್ಜಿ ಪೋಸ್ಟ್

    ನವದೆಹಲಿ: ಕೊರೊನಾ ವೈರಸ್‍ನಿಂದಾಗಿ ಜನರು ಮನೆಯಿಂದ ಹೋರಗೆ ಬರಲು ಭಯಪಡುವಂತಾಗಿದೆ. ಅಷ್ಟೇ ಅಲ್ಲದೆ ಆತ್ಮೀಯರೊಂದಿಗೆ ಕೈಕುಲುಕಿ ಮಾತನಾಡಲು ದೂರ ಸರಿಯುತ್ತಿದ್ದಾರೆ. ಏಕೆಂದರೆ ಚೀನಾದ ವುಹಾನ್ ನಗರದಿಂದ ಹುಟ್ಟಿದ ಈ ಸಾಂಕ್ರಾಮಿಕ ರೋಗವು ಸ್ಪರ್ಶಿಸುವ ಮೂಲಕವೂ ಹರಡುತ್ತಿದೆ. ಇದೇ ಕಾರಣಕ್ಕಾಗಿ ಆರೋಗ್ಯ ಕೇಂದ್ರಗಳು ಕಾಲಕಾಲಕ್ಕೆ ಕೈ ತೊಳೆಯಬೇಕು ಮತ್ತು ಯಾರೊಂದಿಗೂ ಕೈಕುಲುಕಬಾರದು ಎಂದು ಜನರಿಗೆ ಸಲಹೆ ನೀಡುತ್ತಿದೆ. ಅಂತಹ ಒಂದು ಸಲಹೆಯನ್ನು ಭಾರತೀಯ ತಂಡದ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಕೂಡ ನೀಡಿದ್ದಾರೆ.

    ಕೊರೊನಾ ವೈರಸ್ ತಪ್ಪಿಸಲು ಸರಳ ತಂತ್ರವನ್ನು ಹರ್ಭಜನ್ ಸಿಂಗ್ ವಿವರಿಸಿದ್ದು, ಇದರಿಂದ ಜನರು ಸೋಂಕಿಗೆ ಒಳಗಾಗುವುದಿಲ್ಲ ಎಂದು ತಿಳಿಸಿದ್ದಾರೆ. ವಾಸ್ತವವಾಗಿ ಭಜ್ಜಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ, ಕೊಲಾಜ್ ಮಾಡಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಒಂದು ಫೋಟೋದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಒಡತಿ ಪ್ರೀತಿ ಜಿಂಟಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್.ಧೋನಿ ಇದ್ದರೆ, ಎರಡನೇ ಫೋಟೋದಲ್ಲಿ ಪ್ರೀತಿ ಜಿಂಟಾ ಮತ್ತು ಹರ್ಭಜನ್ ಸಿಂಗ್ ಕಾಣಿಸಿಕೊಂಡಿದ್ದಾರೆ.

    ವಿಶೇಷವೆಂದರೆ ಧೋನಿ ಪ್ರೀತಿ ಜಿಂಟಾ ಅವರೊಂದಿಗೆ ಕೈಕುಲುಕಿದ್ದಾರೆ. ಆದರೆ ಹರ್ಭಜನ್ ಸಿಂಗ್ ಪ್ರೀತಿ ಜಿಂಟಾ ಅವರ ಕೈಕುಲುಕದೆ ಕೈ ಮುಗಿಯುತ್ತಾರೆ. ಈ ಮೂಲಕ ಭಜ್ಜಿ ತಮ್ಮ ಪೋಸ್ಟ್ ನಲ್ಲಿ, ‘ಕೊರೊನಾ ವೈರಸ್ ತಪ್ಪಿಸಲು ಕೇವಲ ಒಂದು ಸರಳ ಹೆಜ್ಜೆ’ ಎಂದು ಬರೆದುಕೊಂಡಿದ್ದಾರೆ.

    ಚೆನ್ನೈ ಸೂಪರ್ ಕಿಂಗ್ಸ್ ಸ್ಪಿನ್ನರ್ ಹರ್ಭಜನ್ ಸಿಂಗ್ ಇದನ್ನು ತಮಾಷೆಯ ಸ್ವರದಲ್ಲಿ ಹೇಳಿದ್ದಾರೆ. ಸದ್ಯದ ಪರಿಸ್ಥಿಯಲ್ಲಿ ಯಾವುದೇ ವ್ಯಕ್ತಿಯೊಂದಿಗೆ ಕೈ ಕುಲುಕಿ ಮಾತನಾಡುವುದನ್ನು ತಪ್ಪಿಸುವುದು ಅಗತ್ಯವಾಗಿದೆ. ಆರೋಗ್ಯ ಸಂಸ್ಥೆಗಳು ಇದನ್ನೇ ಹೇಳುತ್ತಿವೆ.

    ಕೊರೊನಾ ವೈರಸ್‍ನಿಂದಾಗಿ ಬಿಸಿಸಿಐ ಎಲ್ಲಾ ಪಂದ್ಯಾವಳಿಗಳನ್ನು ಮುಂದೂಡಿದೆ. ಮಾರ್ಚ್ 29ರಿಂದ ಪ್ರಾರಂಭವಾಗುವ ಐಪಿಎಲ್ ಅನ್ನು ಕೂಡ ಏಪ್ರಿಲ್ 15ರವರೆಗೆ ಮುಂದೂಡಲ್ಪಟ್ಟಿದೆ. ಈಗಿನ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ಆಟಗಾರನು ತಮ್ಮ ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಜೊತೆಗೆ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಅವರು ಕೂಡ ಕೈ ತೊಳೆಯುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

  • ಹಸು ಟ್ರಾಫಿಕ್ ರೂಲ್ಸ್ ಪಾಲಿಸುತ್ತಿರುವ ವಿಡಿಯೋ ಹಂಚಿಕೊಂಡ ನಟಿ ಪ್ರೀತಿ

    ಹಸು ಟ್ರಾಫಿಕ್ ರೂಲ್ಸ್ ಪಾಲಿಸುತ್ತಿರುವ ವಿಡಿಯೋ ಹಂಚಿಕೊಂಡ ನಟಿ ಪ್ರೀತಿ

    ಮುಂಬೈ: ಬಾಲಿವುಡ್ ನಟಿ ಪ್ರೀತಿ ಜಿಂಟಾ ಅವರು ಹಸು ಟ್ರಾಫಿಕ್ ರೂಲ್ಸ್ ಪಾಲಿಸುತ್ತಿರುದ ವಿಡಿಯೋವೊಂದನ್ನು ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ.

    ಪ್ರೀತಿ ತಮ್ಮ ಟ್ವಿಟ್ಟರಿನಲ್ಲಿ 9 ಸೆಕೆಂಡ್‍ ಇರುವ ವಿಡಿಯೋವನ್ನು ಹಂಚಿಕೊಂಡಿದ್ದು, ಅದರಲ್ಲಿ ಹಸು ಟ್ರಾಫಿಕ್ ಸಿಗ್ನಲ್‍ನಲ್ಲಿ ಬೇರೆ ವಾಹನಗಳ ಜೊತೆ ಅದು ಕೂಡ ನಿಂತಿದೆ. “ಜನರ ಬಗ್ಗೆ ಮರೆತು ಬಿಡಿ. ನಮ್ಮ ಪ್ರಾಣಿಗಳು ಸಹ ಟ್ರಾಫಿಕ್ ನಿಯಮವನ್ನು ಪಾಲಿಸುತ್ತದೆ. ನನ್ನ ಮಾತಲ್ಲಿ ನಂಬಿಕೆ ಇಲ್ಲದಿದ್ದರೆ, ಈ ವಿಡಿಯೋ ನೋಡಿ” ಎಂದು ಟ್ವೀಟ್ ಮಾಡಿದ್ದಾರೆ.

    ಈ ವಿಡಿಯೋವನ್ನು ಟ್ವೀಟ್ ಮಾಡುತ್ತಿದ್ದಂತೆ ಸಾಕಷ್ಟು ವೈರಲ್ ಆಗುತ್ತಿದ್ದು, ಇದುವರೆಗೂ 56 ಸಾವಿರಕ್ಕೂ ಹೆಚ್ಚು ವ್ಯೂ ಹಾಗೂ 6 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ಪ್ರೀತಿ ಅಭಿಮಾನಿಗಳು ಸೇರಿದಂತೆ ನೆಟ್ಟಿಗರು ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ.

    ಈ ವಿಡಿಯೋ ನೋಡಿ ಹಲವು ಮಂದಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು, ಅಲ್ಲಿರುವ ಕೆಲವು ಜನರಿಗಿಂತ ಈ ಹಸು ಟ್ರಾಫಿಕ್ ನಿಯಮಗಳನ್ನು ಚೆನ್ನಾಗಿ ತಿಳಿದುಕೊಂಡಿದೆ ಎಂದು ನನಗೆ ಎನಿಸುತ್ತಿದೆ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೆ ಕಲವರು, ಇದಕ್ಕೆ ಹೇಳುವುದು ಮನುಷ್ಯರಿಗಿಂತ ಪ್ರಾಣಿಗಳೇ ಉತ್ತಮ ಎಂದು ಕಮೆಂಟ್ ಮಾಡಿದ್ದಾರೆ.

    ಪ್ರೀತಿ ತಮ್ಮ ಟ್ವಿಟ್ಟಿರಿನಲ್ಲಿ ವೈಯಕ್ತಿಕ ಹಾಗೂ ಕೆಲಸಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಟ್ವೀಟ್ ಮಾಡುತ್ತಿರುತ್ತಾರೆ. ಸದ್ಯ ಅವರು ಟ್ವೀಟ್ ಮಾಡಿರುವ ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ಪ್ರೀತಿ ಜಿಂಟಾ ಹಲವಾರು ಚಿತ್ರಗಳಲ್ಲಿ ನಟಿಸಿದ್ದು, ಕೊನೆಯದಾಗಿ ಸೂಪರ್ ಹಿಟ್ ‘ಭಯಾಜಿ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

  • ಎಂ.ಎಸ್ ಧೋನಿಗೆ ಬೆದರಿಕೆ ಹಾಕಿದ ನಟಿ ಪ್ರೀತಿ ಜಿಂಟಾ!

    ಎಂ.ಎಸ್ ಧೋನಿಗೆ ಬೆದರಿಕೆ ಹಾಕಿದ ನಟಿ ಪ್ರೀತಿ ಜಿಂಟಾ!

    ಚಂಡೀಗಢ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್ ಧೋನಿ ಅವರಿಗೆ ನಟಿ ಪ್ರೀತಿ ಜಿಂಟಾ ಬೆದರಿಕೆ ಹಾಕಿದ್ದಾರೆ.

    ಪ್ರೀತಿ ಜಿಂಟಾ ತನ್ನ ಟ್ವಿಟ್ಟರಿನಲ್ಲಿ ಧೋನಿಗೆ ಶೇಕ್ ಹ್ಯಾಂಡ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಶೇಕ್ ಹ್ಯಾಂಡ್ ಮಾಡುತ್ತಾ ಧೋನಿ ಬಳಿ ನಾನು ಏನು ಹೇಳಿದ್ದೇನೆ ಎನ್ನುವುದನ್ನು ಕೂಡ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    “ನಾನು ಸೇರಿದಂತೆ ಕ್ಯಾಪ್ಟನ್ ಕೂಲ್‍ಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಈಗ ನಾನು ಅವರ ಮುದ್ದಾದ ಮಗಳ ಅಭಿಮಾನಿ ಆಗುತ್ತಿದ್ದೇನೆ. ನಿಮ್ಮ ಮಗಳನ್ನು ಹುಷಾರಾಗಿ ನೋಡಿಕೊಳ್ಳಿ. ಇಲ್ಲದಿದ್ದರೆ ನಾನು ನಿಮ್ಮ ಮಗಳನ್ನು ಕಿಡ್ನಾಪ್ ಮಾಡುತ್ತೇನೆ ಎಂದು ಧೋನಿಗೆ ಹೇಳಿದ್ದೇನೆ” ಎಂದು ಬರೆದು ಈ ಫೋಟೋಗೆ ಶೀರ್ಷಿಕೆ ನೀಡಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.

    ಐಪಿಎಲ್ 2019ನೇ ಆವೃತ್ತಿಯಲ್ಲಿ ಪ್ರೀತಿ ಜಿಂಟಾ ತಮ್ಮ ತಂಡವನ್ನು ಬೆಂಬಲಿಸಿ ಪ್ರೋತ್ಸಾಹಿಸಿದ್ದಾರೆ. ಪಂಜಾಬ್ ತಂಡ ಕೂಡ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಆದರೆ ಪ್ಲೇ ಆಫ್‍ಗೆ ತಲುಪಲು ಸಾಧ್ಯವಾಗಲಿಲ್ಲ. ಪಂಜಾಬ್ ತಂಡ ಐಪಿಎಲ್‍ನಲ್ಲಿ ಒಟ್ಟು 14 ಪಂದ್ಯದಲ್ಲಿ 6ರಲ್ಲಿ ಗೆದ್ದು 8ರಲ್ಲಿ ಸೋತು 12 ಅಂಕ ಗಳಿಸಿ 6ನೇ ಸ್ಥಾನ ಪಡೆದಿದೆ.

  • ರಾಹುಲ್‍ಗೆ ಮಹಿಳೆಯರೆಂದರೆ ಅಪಾರ ಗೌರವವಿದೆ: ಪ್ರೀತಿ ಜಿಂಟಾ

    ರಾಹುಲ್‍ಗೆ ಮಹಿಳೆಯರೆಂದರೆ ಅಪಾರ ಗೌರವವಿದೆ: ಪ್ರೀತಿ ಜಿಂಟಾ

    ನವದೆಹಲಿ: ಕೆಎಲ್ ರಾಹುಲ್ ಮಹಿಳೆಯರ ಬಗ್ಗೆ ಅಪಾರವಾದ ಗೌರವವನ್ನು ಹೊಂದಿದ್ದಾರೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಒಡತಿ, ನಟಿ ಪ್ರೀತಿ ಜಿಂಟಾ ಹೇಳಿದ್ದಾರೆ.

    ಕಾಫಿ ವಿಥ್ ಕರಣ್ ಕಾರ್ಯಕ್ರಮದಲ್ಲಿ ಕೆಎಲ್ ರಾಹುಲ್ ಹಾಗೂ ಪಾಂಡ್ಯ ಹಾಡಿದ ವಿವಾದಾತ್ಮಾಕ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಉತ್ತಮ ವ್ಯಕ್ತಿತ್ವವನ್ನು ಹೊಂದಿರುವ ಆಟಗಾರ. ಆದರೆ ಟಿವಿ ಶೋ ವಿವಾದ ಎಂಬುವುದು ಮುಗಿದ ಭಾಗವಾಗಿದೆ. ಆದರೆ ಇಂತಹ ಘಟನೆಗಳು ಜೀವನದಲ್ಲಿ ಸಾಕಷ್ಟು ಸಂಗತಿಗಳನ್ನು ಕಲಿಸುತ್ತವೆ ಎಂದಿದ್ದಾರೆ.

    ಇದೇ ವೇಳೆ ತಂಡದ ಒಡತಿಯಾಗಿ ಆರ್ಥಿಕತೆ ಕುರಿತು ಉತ್ತರಿಸಿದ ಜಿಂಟಾ, ಈಗಾಗಲೇ ನಾವು ಹೂಡಿಕೆ ಮಾಡಿರುವ ಹಣ ವಾಪಸ್ ಆಗಿದ್ದು, ಟೈಟಲ್ ಗೆಲುವು ಪಡೆಯುವುದು ಮಾತ್ರ ನಮ್ಮ ಗುರಿಯಾಗಿದೆ. ಟೂರ್ನಿಯಲ್ಲಿ ರಾಹುಲ್ ಫಾರ್ಮ್ ಗೆ ಮರಳಿರುವುದು ನಮಗೆ ಮತ್ತಷ್ಟು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

    ಟೂರ್ನಿಯಲ್ಲಿ ಆರ್ ಅಶ್ವಿನ್ ನಾಯಕತ್ವದಲ್ಲಿ ಕಣಕ್ಕೆ ಇಳಿದಿರುವ ಪಂಜಾಬ್ ಕ್ರಿಕೆಟ್ ತಂಡ ಇದುವರೆಗೂ ಆಡಿರುವ 4 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ. ಇಷ್ಟೇ ಪಂದ್ಯಗಳಲ್ಲಿ ಗೆಲುವು ಪಡೆದಿರುವ ಹೈದರಾಬಾದ್ ಹಾಗೂ ಕೆಕೆಆರ್ ತಂಡದ ಮೊದಲ ಎರಡು ಸ್ಥಾನಗಳಲ್ಲಿವೆ.

  • ಪತಿ ನೀಡಿದ ಅಮೆರಿಕಾ ಬಿಕಿನಿ ಧರಿಸಿದ ಪ್ರೀತಿ ಜಿಂಟಾ

    ಪತಿ ನೀಡಿದ ಅಮೆರಿಕಾ ಬಿಕಿನಿ ಧರಿಸಿದ ಪ್ರೀತಿ ಜಿಂಟಾ

    ಮುಂಬೈ: ಪ್ರೀತಿ ಜಿಂಟಾ ಬಾಲಿವುಡ್ ಪ್ರತಿಭಾನ್ವಿತ ನಟಿ. ಹಲವು ಸೂಪರ್ ಹಿಟ್ ಸಿನಿಮಾ ನೀಡಿರುವ ಪ್ರೀತಿ ಜಿಂಟಾ ಮದುವೆ ಬಳಿಕ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದಾರೆ. ಐಪಿಎಲ್ ಪಂದ್ಯಾವಳಿಗಳಲ್ಲಿ ಕಾಣಿಸಿಕೊಳ್ಳುವ ಪ್ರೀತಿ ಖಾಸಗಿ ಕಾರ್ಯಕ್ರಮಗಳಿಂದ ದೂರವಿದ್ದಾರೆ. ಆದರೆ ಅಭಿಮಾನಿಗಳ ಜೊತೆಗೆ ಯಾವಗಲೂ ಸಂಪರ್ಕದಲ್ಲಿ ಇರುತ್ತಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಆ್ಯಕ್ಟೀವ್ ಆಗಿರುವ ಪ್ರೀತಿ ಜಿಂಟಾ ಪ್ರತಿದಿನವೂ ಹೊಸ ಫೋಟೋಗಳನ್ನು ಅಪ್ಲೋಡ್ ಮಾಡಿಕೊಳ್ಳುತ್ತಾರೆ. ಜುಲೈ 4ರಂದು ಪ್ರೀತಿ ಜಿಂಟಾ ತಮ್ಮ ಟ್ವಿಟ್ಟರ್ ನಲ್ಲಿ ಫೋಟೋ ಹಾಕಿಕೊಂಡು, ಎಲ್ಲರಿಗೂ ಜುಲೈ 4ರ ಶುಭಾಶಯಗಳು. ಪ್ರತಿಯೊಬ್ಬರು ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಣೆ ಮಾಡುತ್ತಾರೆ. ಇಂದು ನನ್ನ ಪತಿ ನನಗಾಗಿ ಅಮೆರಿಕಾದ ಬಿಕಿನಿ ಡ್ರೆಸ್ ಗಿಫ್ಟ್ ನೀಡಿದ್ದಾರೆ. ಈ ಡ್ರೆಸ್ ಜುಲೈ 4ರಂದು ತೊಡಲು ಸೂಕ್ತವಾದ ದಿನ ಅಂತಾ ಬರೆದುಕೊಂಡಿದ್ದಾರೆ.

    ಜುಲೈ 4 ಅಮೆರಿಕಗೆ ಸ್ವತಂತ್ರ ಸಿಕ್ಕ ದಿನ. ಪ್ರೀತಿ ಜಿಂಟಾಗೆ ಪತಿ ಜೀನ್ ಗುಡ್‍ಇನಫ್ ನೀಡಿದ ಸ್ಕರ್ಟ್ ಮೇಲೆ ಬಿಕಿನಿ ಮಾದರಿಯ ಅಮೆರಿಕಾ ಧ್ವಜದ ಚಿತ್ರದ ಬಣ್ಣದಲ್ಲಿದೆ. ಇನ್ನು ಪ್ರೀತಿ ಫೋಟೋ ನೋಡಿದ ಅಭಿಮಾನಿಗಳು ಈ ಡ್ರೆಸ್‍ನಲ್ಲಿ ತುಂಬಾ ಸೆಕ್ಸಿಯಾಗಿ ಕಾಣುತ್ತೀರಿ ಅಂತಾ ಬರೆದ್ರೆ, ನೀವು ತೊಟ್ಟಿರುವ ಡ್ರೆಸ್ ತುಂಬಾ ಫನ್ನಿ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

  • ಒಂದೇ ಪದದಲ್ಲಿ ಕೊಹ್ಲಿಯನ್ನು ವ್ಯಾಖ್ಯಾನಿಸಿದ ಪ್ರೀತಿ ಜಿಂಟಾ

    ಒಂದೇ ಪದದಲ್ಲಿ ಕೊಹ್ಲಿಯನ್ನು ವ್ಯಾಖ್ಯಾನಿಸಿದ ಪ್ರೀತಿ ಜಿಂಟಾ

    ಬೆಂಗಳೂರು: ಕೊಹ್ಲಿ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಪಂಜಾಬ್ ತಂಡದ ಕೋ-ಒನರ್ ಪ್ರೀತಿ ಜಿಂಟಾ ಕೊಹ್ಲಿ ಅದ್ಭುತ ವ್ಯಕ್ತಿ ಎಂದು ಹೇಳಿದ್ದಾರೆ.

    ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಅಭಿಮಾನಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಾಲಿವುಡ್ ನಟಿ ಪ್ರೀತಿ ಜಿಂಟಾ ಕೊಹ್ಲಿ ಕುರಿತು ತಮ್ಮ ಅಭಿಪ್ರಾಯವನ್ನು ಟ್ವೀಟ್ ಮಾಡಿದ್ದಾರೆ.

    ಪಂಜಾಬ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸಲು ವಿಫಲವಾಗಿತ್ತು. ಇದೇ ವೇಳೆ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಪ್ರವೇಶ ಪಡೆಯದ ಕುರಿತ ಪ್ರೀತಿ ಜಿಂಟಾರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಈ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದ ಜಿಂಟಾ, ಮುಂಬೈ ಪ್ಲೇ ಆಫ್ ಪ್ರವೇಶಿಸದಿದ್ದರೆ ಪಂಜಾಬ್‍ಗೆ ಪ್ಲೇ ಆಫ್‍ಗೆ ಪ್ರವೇಶ ಪಡೆಯುವ ಅವಕಾಶವಿತ್ತು. ಈ ಕುರಿತು ತಾನು ಆ ಮಾತು ಹೇಳಿದ್ದು. ಆದರೆ ರಾಜಸ್ಥಾನ ಗೆಲುವು ಪಡೆಯಿತು ಮತ್ತು ಚೆನ್ನೈ ವಿರುದ್ಧ ನಮ್ಮ ಸೋಲು ಪ್ಲೇ ಆಫ್ ನಿಂದ ದೂರ ಉಳಿಯುವಂತೆ ಮಾಡಿತು. ಯಾವುದೇ ತಂಡ ಕೇವಲ ಗೆಲುವುಗಳನ್ನು ಮಾತ್ರ ಕಾಣಲು ಸಾಧ್ಯವಿಲ್ಲ, ಸೋಲು ಸಮನಾಗಿರುತ್ತದೆ ಎಂದು ಹೇಳಿದ್ದಾರೆ.

    ಟೂರ್ನಿಯ ಆರಂಭದಲ್ಲಿ 6 ಪಂದ್ಯಗಳಿಂದ 5 ಪಂದ್ಯಗಳನ್ನು ಗೆದ್ದ ಪಂಜಾಬ್ ಈಗ ಟೂರ್ನಿಯಿಂದ ಹೊರನಡೆದಿದೆ. ಈ ಕುರಿತು ತಮ್ಮ ತಂಡದ ಅಭಿಮಾನಿಗಳಲ್ಲಿ ಕ್ಷಮೆ ಕೇಳುತ್ತೇನೆ. ಮುಂದಿನ ವರ್ಷ ನಾವು ನಿಮ್ಮನ್ನು ನಿರಾಸೆ ಮಾಡುವುದಿಲ್ಲ ಎಂದು ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

  • ಪಂಜಾಬ್ ಪ್ಲೇ ಆಫ್ ಪ್ರವೇಶಿಸದಿದ್ದರೂ ಪ್ರೀತಿ ಜಿಂಟಾ ಖುಷಿಯಾಗಿದ್ದು ಏಕೆ ಗೊತ್ತಾ? ವೈರಲ್ ವಿಡಿಯೋ

    ಪಂಜಾಬ್ ಪ್ಲೇ ಆಫ್ ಪ್ರವೇಶಿಸದಿದ್ದರೂ ಪ್ರೀತಿ ಜಿಂಟಾ ಖುಷಿಯಾಗಿದ್ದು ಏಕೆ ಗೊತ್ತಾ? ವೈರಲ್ ವಿಡಿಯೋ

    ಪುಣೆ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಸೋತು ಟೂರ್ನಿಯಿಂದ ಹೊರಬಿದ್ದರೂ, ತಂಡದ ಸಹ ಮಾಲೀಕರಾಗಿರುವ ಪ್ರೀತಿ ಜಿಂಟಾ ಮಾತ್ರ ಸಂತಸ ವ್ಯಕ್ತಪಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಬಾಲಿವುಡ್ ನಟಿ ಪ್ರೀತಿ ಜಿಂಟಾ ತಂಡದ ಸಿಬ್ಬಂದಿಯೊಬ್ಬರ ಜೊತೆ ಮಾತುಕತೆ ನಡೆಸುತ್ತಿರುವ ದೃಶ್ಯಗಳು ಸೆರೆಯಾಗಿದೆ. ಆದರೆ ಈ ವಿಡಿಯೋದಲ್ಲಿ ಧ್ವನಿ ದಾಖಲಾಗದೇ ಇದ್ದರೂ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಗೆ ಪ್ರವೇಶಿಸದೇ ಹೊರಬಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಸಂತಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

    ಚೆನ್ನೈ ವಿರುದ್ಧದ ಪಂದ್ಯದ ಬಳಿಕ ಪ್ರೀತಿ ಜಿಂಟಾ ಟ್ವಿಟ್ಟರ್ ನಲ್ಲಿ ಪ್ಲೇ ಆಫ್ ಪ್ರವೇಶಿಸಿದ ನಾಲ್ಕು ತಂಡಗಳಿಗೆ ಶುಭಕೋರಿದ್ದಾರೆ. ಅಲ್ಲದೇ ಮುಂದಿನ ವರ್ಷ ತಾವು ಕಮ್ ಬ್ಯಾಕ್ ಮಾಡುವುದಾಗಿ ಬರೆದು ಕೊಂಡಿದ್ದಾರೆ.

    ಆರ್ ಅಶ್ವಿನ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಅಂಕಪಟ್ಟಿಯಲ್ಲಿ 7ನೇ ಸ್ಥಾನ ಪಡೆದು ಟೂರ್ನಿಯಿಂದ ಹೊರಬಿದ್ದಿದೆ. ಸತತ ಗೆಲುವುಗಳ ಮೂಲಕ ಟೂರ್ನಿ ಆರಂಭಿಸಿದ ಪಂಜಾಬ್ ತಂಡ ಮೊದಲ 5 ಪಂದ್ಯಗಳಲ್ಲಿ 4 ರಲ್ಲಿ ಜಯಗಳಿಸಿತ್ತು. ಬಳಿಕ ನಡೆದ 9 ಪಂದ್ಯದಲ್ಲಿ ಸತತವಾಗಿ ಸೋಲು ಕಾಣುವ ಮೂಲಕ ಟೂರ್ನಿಯಲ್ಲಿ ನೀರಸ ಪ್ರದರ್ಶನ ನೀಡಿದೆ. ಒಟ್ಟಾರೆ ಟೂರ್ನಿಯಲ್ಲಿ ಪಂಜಾಬ್ ತಂಡ 14 ಪಂದ್ಯಗಳಲ್ಲಿ 6 ರಲ್ಲಿ ಮಾತ್ರ ಗೆಲುವು ಪಡೆದಿದೆ.

    ಇನ್ನು ಟೂರ್ನಿಯಲ್ಲಿ ರೋಹಿತ್ ನೇತೃತ್ವದ ಮುಂಬೈ ಇಂಡಿಯನ್ಸ್ ಸಹ ನೀರಸ ಪ್ರದರ್ಶನವನ್ನು ನೀಡಿ ಪ್ಲೇ ಆಫ್ ಪ್ರವೇಶಿಸದೇ ಹೊರ ನಡೆದಿದೆ. 14 ಪಂದ್ಯಗಳಲ್ಲಿ 6 ರಲ್ಲಿ ಜಯ ಗಳಿಸಿರುವ ಮುಂಬೈ 12 ಅಂಕಗಳೊಂದಿಗೆ 5ನೇ ಸ್ಥಾನ ಪಡೆದಿದೆ.