Tag: ಪ್ರೀಮಿಯರ್ ಪದ್ಮಿನಿ

  • ಐದು ಜನರ ಹಿಂದೆ ಜಗ್ಗಾಡಬೇಡಿ ಅಂದ್ರು ಜಗ್ಗಣ್ಣ!

    ಐದು ಜನರ ಹಿಂದೆ ಜಗ್ಗಾಡಬೇಡಿ ಅಂದ್ರು ಜಗ್ಗಣ್ಣ!

    ಬೆಂಗಳೂರು: ‘ಕನ್ನಡ ಚಿತ್ರರಂಗದಲ್ಲಿ ಇರುವುದು ಬರೀ ಐದು ಜನ ಹೀರೋಗಳಷ್ಟೇನಾ? ಯಾರೇ ಉತ್ತಮ ಸಿನಿಮಾ ಮಾಡಿದರೂ ಪ್ರೇಕ್ಷಕರು ಅವರ ಕೈಹಿಡಿಯಬೇಕು. ಚೆಂದಗೆ ಸಿನಿಮಾ ಮಾಡಿದವರಿಗೆ ಬೆನ್ನು ತಟ್ಟಬೇಕು. ನನಗಿದ್ದ ಕ್ವಾಲಿಟಿಗೆ ನನ್ನನ್ನು ಯಾರು ತಾನೆ ಹೀರೋ ಮಾಡಲು ಬರುವಂತಿತ್ತು? ನಾನು ಧೈರ್ಯ ಮಾಡಿ ನನ್ನ ಭಾವನ ಜೊತೆ ಸೇರಿ ಭಂಡ ನನ್ನ ಗಂಡ ಸಿನಿಮಾ ಮಾಡಿದೆ. ಸಿನಿಮಾವನ್ನು ಜನ ಕೈ ಹಿಡಿದರು. ಇವತ್ತು ನಾನು ಮುಂದಿನ ಪೀಳಿಗೆಗೆ ಒಂದಿಷ್ಟು ಸಲಹೆ ನೀಡಲಿಕ್ಕಾದರೂ ಕೂರುವಂತಾಗಿದೆ. ನಮ್ಮ ನೆಲದಲ್ಲಿ ಅದ್ಭುತ ಪ್ರತಿಭೆಗಳಿವೆ. ಹೊಸಬರ ಕೈ ಹಿಡಿದರೆ ಅವರೂ ಮುಂದೊಂದು ದಿನ ತಮ್ಮ ಮುಂದಿನ ಪೀಳಿಗೆಗೆ ಒಂದಿಷ್ಟು ಮಾರ್ಗದರ್ಶನ ನೀಡಲು ಸಾಧ್ಯವಾಗುತ್ತದೆ. ಆಂಧ್ರದಲ್ಲಿ ನೋಡಿದರೆ ನಾಲ್ಕು ಜನ, ತಮಿಳುನಾಡಿನಲ್ಲೂ ನಾಲ್ಕೇ ಜನ, ಕೇರಳಕ್ಕೆ ಹೋದರೆ ಅಲ್ಲಿ ಮೂರು ಮತ್ತೊಂದು ಜನರೇ ಚಿತ್ರರಂಗದಲ್ಲಿ ಆಳ್ವಿಕೆ ನಡೆಸುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲೂ ಕೂಡಾ ಐದು ಜನ ಹೀರೋಗಳನ್ನೇ ಹಿಡಿದುಕೊಂಡು ಜಗ್ಗಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮುಂದೆ ಬೇರೆಯವರನ್ನೂ ಪ್ರೋತ್ಸಾಹಿಸಿ…’ ಇದು ನವರಸ ನಾಯಕ ಜಗ್ಗೇಶ್ ನುಡಿಗಳು.

    ಪ್ರೀಮಿಯರ್ ಪದ್ಮಿನಿ ಸಿನಿಮಾದಲ್ಲಿ ಜಗ್ಗೇಶ್ ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಜಗ್ಗೇಶ್ ಅವರನ್ನು ಹೊರತುಪಡಿಸಿದರೆ ಮಿಕ್ಕವರೆಲ್ಲರೂ ಬಹುತೇಕ ನವ ಪ್ರತಿಭೆಗಳು. ಈ ಚಿತ್ರದಲ್ಲಿ ಹೊಸ ಕಲಾವಿದರ ಜೊತೆಗೆ ಅಭಿನಯಿಸಿದ್ದು ಜಗ್ಗೇಶ್ ಅವರಿಗೆ ಮತ್ತಷ್ಟು ಹುರುಪು ತುಂಬಿದೆಯಂತೆ. ಶೃತಿ ನಾಯ್ಡು ನಿರ್ಮಾಣದ, ರಮೇಶ್ ಇಂದಿರಾ ನಿರ್ದೇಶನದ ‘ಪ್ರೀಮಿಯರ್ ಪದ್ಮಿನಿ’ ಇದೇ ತಿಂಗಳು ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿಯರಾದ ಮಧುಬಾಲಾ ಮತ್ತು ಸುಧಾರಾಣಿ ಕೂಡಾ ನಟಿಸಿದ್ದಾರೆ.

    https://twitter.com/premierpadmini/status/1100342311660093440

  • ಜಗ್ಗಣ್ಣನಿಗೆ ಜೊತೆಯಾದರು ಮಧುಬಾಲಾ!

    ಜಗ್ಗಣ್ಣನಿಗೆ ಜೊತೆಯಾದರು ಮಧುಬಾಲಾ!

    ನವರಸ ನಾಯಕ ಜಗ್ಗೇಶ್ ಅವರು ಬಹುಕಾಲದಿಂದ ಚಿತ್ರಗಳಲ್ಲಿ ನಟಿಸಿರಲಿಲ್ಲ. ಕಿರುತೆರೆ ಕಾರ್ಯಕ್ರಮದ ಮೂಲಕ ಬ್ಯುಸಿಯಾಗಿದ್ದ ಅವರು ಲಾಂಗ್ ಗ್ಯಾಪಿನ ನಂತರ ಮತ್ತೆ ನಟಿಸುತ್ತಿರುವ ಚಿತ್ರ ಪ್ರೀಮಿಯರ್ ಪದ್ಮಿನಿ. ಕಿರುತೆರೆ ನಿರ್ದೇಶಕ ರಮೇಶ್ ಇಂದಿರಾ ನಿರ್ದೇಶನದ ಈ ಚಿತ್ರಕ್ಕೀಗ ದಕ್ಷಿಣ ಭಾರತದ ಖ್ಯಾತ ನಟಿ ಮಧುಬಾಲಾ ಎಂಟ್ರಿ ಕೊಟ್ಟಿದ್ದಾರೆ!

    ಪ್ರೀಮಿಯರ್ ಪದ್ಮಿನಿ ಚಿತ್ರ ಫೋಟೋ ಶೂಟ್ ಹಂತದಿಂದಲೂ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಜಗ್ಗೇಶ್ ಈವರೆಗಿನ ಎಲ್ಲ ಚಿತ್ರಗಳಿಗಿಂತಲೂ ಭಿನ್ನವಾದ ಪಾತ್ರವನ್ನು ನಿರ್ವಹಿಸಲಿದ್ದಾರಂತೆ. ಈ ಚಿತ್ರದ ಮುಖ್ಯ ಪಾತ್ರದಲ್ಲಿ ಸುಧಾರಾಣಿ ನಟಿಸುತ್ತಿದ್ದಾರೆ. ಇದೀಗ ಇನ್ನೊಂದು ಪ್ರಧಾನವಾದ ಪಾತ್ರಕ್ಕೆ ಮಧುಬಾಲಾ ಎಂಟ್ರಿ ಕೊಟ್ಟಿದ್ದಾರೆ.

    ಮಧುಬಾಲಾ ಕನ್ನಡ ಪ್ರೇಕ್ಷಕರಿಗೆ ಚಿರಪರಿಚಿತರು. ರವಿಚಂದ್ರನ್ ಅಭಿನಯದ ಅಣ್ಣಯ್ಯ, ಸುದೀಪ್ ಅಭಿನಯದ ರನ್ನ, ನಾನು ಮತ್ತು ವರಲಕ್ಷ್ಮಿ ಮುಂತಾದ ಚಿತ್ರಗಳಲ್ಲಿಯೂ ಮಧುಬಾಲಾ ನಟಿಸಿದ್ದಾರೆ. ನಿಖಿಲ್ ಗೌಡ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದಲ್ಲಿಯೂ ನಟಿಸಿರುವ ಮಧುಬಾಲಾ ಈಗ ಜಗ್ಗೇಶ್ ಅವರಿಗೆ ಜೊತೆಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಿರುತೆರೆಯಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ಶೃತಿ ನಾಯ್ಡು ಸ್ಯಾಂಡಲ್ ವುಡ್‍ಗೆ ಎಂಟ್ರಿ!

    ಕಿರುತೆರೆಯಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ಶೃತಿ ನಾಯ್ಡು ಸ್ಯಾಂಡಲ್ ವುಡ್‍ಗೆ ಎಂಟ್ರಿ!

    ಬೆಂಗಳೂರು: ಕಿರುತೆರೆಯಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ನಿರ್ಮಾಪಕಿ ಶೃತಿ ನಾಯ್ಡು ಇದೀಗ ಸ್ಯಾಂಡಲ್ ವುಡ್ ನಿರ್ಮಾಪಕಿಯಾಗಿದ್ದಾರೆ.

    ಪತಿ ರಮೇಶ್ ಆ್ಯಕ್ಷನ್ ಕಟ್ ಹೇಳುತ್ತಿರೋ ಚಿತ್ರಕ್ಕೆ ಶೃತಿ ನಾಯ್ಡು ಹಣ ಹೂಡುತ್ತಿದ್ದಾರೆ. ಶೃತಿ ನಾಯ್ಡು ಪತಿ ರಮೇಶ್ ಗಗನ ಇಂದ್ರ ನಿರ್ದೇಶನದಲ್ಲಿ ‘ಪ್ರೀಮಿಯರ್ ಪದ್ಮಿನಿ’ ಚಿತ್ರ ಮೂಡಿ ಬರಲಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನವರಸ ನಾಯಕ ಜಗ್ಗೇಶ್ ಹಾಗೂ ಮಧುಬಾಲಾ ಅಭಿನಯಿಸುತ್ತಿದ್ದಾರೆ.

    ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಪ್ರೀಮಿಯರ್ ಕಾರ್ ಜೊತೆಗೆ ಫೋಟೋಶೂಟ್ ಮಾಡಲಾಗಿದ್ದು, ಮಹೇಂದ್ರ ಸಿಂಹ ಫೋಟೋಗ್ರಫಿಯಲ್ಲಿ ಜಗ್ಗೇಶ್ ಹಾಗೂ ಕಿರುತೆರೆ ನಟ ಪ್ರಮೋದ್ ಸಖತ್ ಪೋಸ್ ನೀಡಿದ್ದಾರೆ. ಸದ್ಯ ಏ. 18 ಕ್ಕೆ ಚಿತ್ರಕ್ಕೆ ಮೂಹೂರ್ತ ಫಿಕ್ಸ್ ಮಾಡಲಾಗಿದೆ.