Tag: ಪ್ರೇಕ್ಷಕರು

  • ಪುಟ್ಟಗೌರಿ ಧಾರಾವಾಹಿ ಮುಗಿಯ್ತಿದೆ ಎಂದು ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್

    ಪುಟ್ಟಗೌರಿ ಧಾರಾವಾಹಿ ಮುಗಿಯ್ತಿದೆ ಎಂದು ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪುಟ್ಟಗೌರಿ ಮದುವೆ’ ಮುಗಿಯುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದ್ರೆ ಧಾರಾವಾಹಿ ಮುಗಿಯುತ್ತಿದೆ ಎಂದು ಖುಷಿಯಲ್ಲಿದ್ದವರಿಗೆ ಈಗ ಶಾಕಿಂಗ್ ನ್ಯೂಸ್ ಸಿಕ್ಕಿದೆ.

    ಪುಟ್ಟಗೌರಿ ಮದುವೆ ಧಾರಾವಾಹಿಯಿಂದ ನಟಿ ಗೌರಿ ಪಾತ್ರಧಾರಿಯ ರಂಜಿನಿ ರಾಘವನ್ ಸೀರಿಯಲ್‍ನಿಂದ ಹೊರಬಂದಿದ್ದಾರೆ. ರಂಜಿನಿ ಧಾರಾವಾಹಿಯಿಂದ ಹೊರಬಂದಿದ್ದಕ್ಕೆ ಪುಟ್ಟಗೌರಿ ಮದುವೆ ಮುಗಿಸುತ್ತಿದ್ದಾರೆ ಎನ್ನುವ ವದಂತಿಗೆ ಈಗ ಫುಲ್‍ಸ್ಟಾಪ್ ಬಿದ್ದಿದೆ. ಧಾರಾವಾಹಿ ಈಗಲೇ ಮುಗಿಯುವುದಿಲ್ಲ ಎಂದು ನಿರ್ದೇಶಕ ರಾಮ್. ಜಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕನ್ನಡ ಪ್ರೇಕ್ಷಕರಿಗೆ ಪುಟ್ಟಗೌರಿ ಕಡೆಯಿಂದ ಗುಡ್ ನ್ಯೂಸ್

    ಪುಟ್ಟಗೌರಿ ಧಾರಾವಾಹಿ ಸದ್ಯಕ್ಕೆ ಮುಗಿಯಲ್ಲ. ಈ ಧಾರಾವಾಹಿ ಇನ್ನೂ ಮುಂದುವರಿಯಲಿದೆ. ಪುಟ್ಟಗೌರಿ ಮದುವೆ ಮುಗಿಯುತ್ತದೆ ಎನ್ನುವುದು ಕೇವಲ ಗಾಸಿಪ್ ಮಾತ್ರವಾಗಿದೆ. ರಂಜಿನಿ ಸಿನಿಮಾಗಳಲ್ಲಿ ಬ್ಯುಸಿಯಾಗಿರುವುದರಿಂದ ಅವರು ಈ ಧಾರಾವಾಹಿಯಿಂದ ಹೊರ ಹೋಗಿದ್ದಾರೆ. ಅವರು ಧಾರಾವಾಹಿಯಿಂದ ಹೊರಹೋಗಿದ್ದಾರೆ ಎನ್ನುವ ಮಾತ್ರಕ್ಕೆ ನಾವು ಈ ಸೀರಿಯಲ್ ನನ್ನು ಮುಗಿಸುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಿರುತೆರೆ ವೀಕ್ಷಕರಿಗೆ ಬಿಗ್ ಶಾಕಿಂಗ್ ನ್ಯೂಸ್

    ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಒಂದು ಹೊಸ ಪಾತ್ರದ ಪರಿಚಯವಾಗಲಿದೆ. ಪುಟ್ಟಗೌರಿಯಲ್ಲಿ ಮಂಗಳ ಗೌರಿಯನ್ನು ಪ್ರೇಕ್ಷಕರಿಗೆ ಪರಿಚಯಿಸಲಿದ್ದಾರೆ. ಪುಟ್ಟಗೌರಿ ಪಾತ್ರಕ್ಕೆ ಇರುವ ಪ್ರಾಮುಖ್ಯತೆಯನ್ನು ಮಂಗಳಗೌರಿಗೂ ನೀಡಲಿದ್ದೇವೆ. ಮಂಗಳಗೌರಿ ಪಾತ್ರದಿಂದ ಈ ಧಾರಾವಾಹಿಗೆ ಒಂದು ಟ್ವಿಸ್ಟ್ ಸಿಗಲಿದೆ ಎಂದು ರಾಮ್. ಜಿ ತಿಳಿಸಿದ್ದಾರೆ.

    ಪುಟ್ಟಗೌರಿ ಮದುವೆಯಿಂದ ಹೊರಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ರಂಜಿನಿ, ಸಿನಿಮಾದತ್ತ ಗಮನ ಹರಿಸುವ ಸಲುವಾಗಿ ಧಾರಾವಾಹಿಯಿಂದ ಹೊರಬಂದಿದ್ದೇನೆ ಎಂದು ಹೇಳಿದ್ದಾರೆ. ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂಬಂಧಿ ಮನೋಜ್ ನಟನೆಯ `ಟಕ್ಕರ್’ ಚಿತ್ರದಲ್ಲಿ ರಂಜಿನಿ ನಾಯಕಿಯಾಗಿ ನಟಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಗ್‍ಬಾಸ್ ಶೋದಲ್ಲಿ ಟೆಕ್ಕಿಗಳಿಗೆ ಅವಕಾಶ ನೀಡಿ: ಅಭಿಮಾನಿಗಳ ಬೇಡಿಕೆ ಏನು?

    ಬಿಗ್‍ಬಾಸ್ ಶೋದಲ್ಲಿ ಟೆಕ್ಕಿಗಳಿಗೆ ಅವಕಾಶ ನೀಡಿ: ಅಭಿಮಾನಿಗಳ ಬೇಡಿಕೆ ಏನು?

    ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್’ ಕನ್ನಡ ಆರನೇ ಆವೃತ್ತಿಯ ಆರಂಭಕ್ಕೆ ದಿನಾಂಕ ನಿಗದಿಯಾಗಿದ್ದು, ಇದೇ ತಿಂಗಳು 21ಕ್ಕೆ ಗ್ರ್ಯಾಂಡ್ ಓಪನಿಂಗ್ ಆಗಲಿದೆ. ಆದರೆ ರಿಯಾಲಿಟಿ ಶೋ ಆರಂಭಕ್ಕೂ ಮುನ್ನಾ ಪ್ರೇಕ್ಷಕರು ಬಿಗ್‍ಬಾಸ್ ಗೆ ಬೇಡಿಕೆಯಿಟ್ಟಿದ್ದಾರೆ.

    ಖಾಸಗಿ ವಾಹಿಯೂ ಇತ್ತೀಚೆಗೆ ಬಿಗ್‍ಬಾಸ್ ನ ಪ್ರೋಮೋ ಒಂದನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದೆ. ಈ ಪ್ರೋಮೋದಲ್ಲಿ ನಟ ಸುದೀಪ್ ಮಾತನಾಡಿದ್ದು, ಈ ಪ್ರೋಮೋ ನೋಡಿ ಪ್ರೇಕ್ಷಕರು ಕಮೆಂಟ್ ಗಳ ಮೂಲಕ ತಮ್ಮ ಅನಿಸಿಕೆ ಮತ್ತು ಬೇಡಿಕೆಗಳನ್ನು ತಿಳಿಸಿದ್ದಾರೆ.

    ಬಿಗ್‍ಬಾಸ್ ಶೋ ನಲ್ಲಿ ಮೊದಲ ಆವೃತ್ತಿಯಿಂದಲೂ ಐಟಿ ಉದ್ಯೋಗಿಗಳು ಸ್ಪರ್ಧಿಗಳಾಗಿ ಕಾಣಿಸಿಕೊಂಡಿಲ್ಲ. ಆದ್ದರಿಂದ ಈ ಬಾರಿಯಾದರೂ ಐಟಿ ಉದ್ಯೋಗಿಗೆ ಅವಕಾಶ ಕೊಡಿ ಎಂದು ಬಿಗ್‍ಬಾಸ್ ಬಳಿ ಟೆಕ್ಕಿಗಳು ಮನವಿ ಮಾಡಿಕೊಂಡಿದ್ದಾರೆ. ಅದರಲ್ಲೂ ಕನ್ನಡಿಗರಿಗೆ ಅವಕಾಶ ಕೊಡಿ ಎಂದು ಹೇಳಿದ್ದಾರೆ.

     

    ಸಾಮಾಜಿಕ ಜಾಲತಾಣಗಳಲ್ಲಿ ಹಾಡಿನ ಮೂಲಕ ಗುರುತಿಸಿಕೊಂಡಿರುವ ತುಳಸಿ ಪ್ರಸಾದ್ ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ದಯವಿಟ್ಟು ತುಳಸಿ ಪ್ರಸಾದ್ ಆಯ್ಕೆ ಮಾಡಬೇಡಿ. ಒಂದು ವೇಳೆ ಆಯ್ಕೆ ಮಾಡಿದರೆ `ಬಿಗ್‍ಬಾಸ್ ಬ್ಯಾನ್’ ಎಂದು ಒಂದು ಆಂದೋಲನ ಶುರುವಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಕೆಲವರು ಬಿಗ್ ಬಾಸ್ ಮನೆಯಲ್ಲಿ ಒಂದಲ್ಲ ಒಂದು ಲವ್ ಸ್ಟೋರಿ ಆಗುತ್ತಿದೆ. ಈ ಬಾರಿ ನಮಗೆ ಫೇಕ್ ಲವ್ ಸ್ಟೋರಿ ಬೇಡ. ಅದನ್ನು ನೋಡಲು ನಮಗೆ ಇಷ್ಟ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಈ ಸಲದ ಕನ್ನಡ ಬಿಗ್ ಬಾಸ್ ಮನೆಗೆ ಜನಸಾಮಾನ್ಯರ ಸಂಖ್ಯೆ ಎಷ್ಟು? ಸೆಲೆಬ್ರಿಟಿಗಳ ಸಂಖ್ಯೆ ಎಷ್ಟು? ಅದರಲ್ಲಿ ಹೆಣ್ಣು ಮಕ್ಕಳು ಎಷ್ಟು? ಗಂಡು ಮಕ್ಕಳು ಎಷ್ಟು? ಎಂದು ಪ್ರಶ್ನೆ ಕೇಳಿದ್ದಾರೆ.

    ತುಂಬಾ ಜನರು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗಲು ಇಷ್ಟಪಟ್ಟಿದ್ದು, ನಮ್ಮನ್ನು ಆಯ್ಕೆ ಮಾಡಿ ಬಿಗ್‍ಬಾಸ್ ಎಂದು ಕೇಳಿಕೊಂಡಿದ್ದಾರೆ. ಆಯ್ಕೆಯಾಗದಿರುವವರು ಅವರ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ಎಂಬ ಶೀರ್ಷಿಕೆಯನ್ನು ಕನ್ನಡದಲ್ಲಿ ಬಳಸಿದ್ದಕ್ಕೆ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳನ್ನ ತಿಳಿಸಿದ್ದಾರೆ. ತುಂಬಾ ಜನರು ಸುದೀಪ್ ಅವರ ಅಭಿನಯವನ್ನು ಮೆಚ್ಚಿಕೊಂಡು ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ನಾವು ಬಿಗ್‍ಬಾಸ್ ಶೋಗೆ ಕಾತುರದಿಂದ ಕಾಯುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv