Tag: ಪ್ರೇಯಸಿ

  • ಗರ್ಲ್‍ಫ್ರೆಂಡ್‍ಗೆ ಗಿಫ್ಟ್ ಕೊಡಲು ಹೆಂಡತಿ ಚಿನ್ನಾಭರಣ ಕದ್ದ ಭೂಪ

    ಗರ್ಲ್‍ಫ್ರೆಂಡ್‍ಗೆ ಗಿಫ್ಟ್ ಕೊಡಲು ಹೆಂಡತಿ ಚಿನ್ನಾಭರಣ ಕದ್ದ ಭೂಪ

    ಚೆನ್ನೈ: 22 ವರ್ಷದ ಗರ್ಲ್ ಫ್ರೆಂಡ್‍ಗೆ ಗಿಫ್ಟ್ ನೀಡಲು 40 ವರ್ಷದ ವ್ಯಕ್ತಿಯೋರ್ವ ತನ್ನ ಹೆಂಡತಿಯ ಆಭರಣವನ್ನೇ ಕದ್ದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

    ಆರೋಪಿಯನ್ನು ಶೇಖರ್ ಎಂದು ಗುರುತಿಸಲಾಗಿದ್ದು, ಈತ ತನ್ನ ಸಹೋದರ ರಾಜೇಶ್ ಕುಟುಂಬ ಮತ್ತು ತಾಯಿಯೊಂದಿಗೆ ಚೆನ್ನೈನ ಪೂನಮಲ್ಲಿ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದನು. ಎರಡು ವರ್ಷದ ಹಿಂದೆ ಕೌಟುಂಬಿಕ ಕಲಹ ಹಿನ್ನೆಲೆ ಶೇಖರ್‌ನನ್ನು ಪತ್ನಿ ತೊರೆದಿದ್ದರು. ಇದನ್ನೂ ಓದಿ: ಶ್ರೀಲಂಕಾದೊಂದಿಗೆ ತನ್ನ ವಿನಿಮಯಕ್ಕೆ ತೊಂದರೆ ಮಾಡುವುದನ್ನು ನಿಲ್ಲಿಸಿ – ಭಾರತಕ್ಕೆ ಚೀನಾ ಮನವಿ

    ಇತ್ತೀಚೆಗಷ್ಟೇ ಚಿನ್ನಾಭರಣ ವಾಪಸ್ ಪಡೆಯಲು ಮನೆಗೆ ಬಂದಿದ್ದ ವೇಳೆ ಚಿನ್ನಾಭರಣ ಕಾಣೆಯಾಗಿದ್ದನ್ನು ಕಂಡು ಶೇಖರ್ ಪತ್ನಿ ಶಾಕ್ ಆಗಿದ್ದಾರೆ. ನಂತರ ಈ ಕುರಿತಂತೆ ಆಕೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸಿದಾಗ ಶೇಖರ್ ತನ್ನ ಪತ್ನಿಯ 300 ಸಾವರಿನ್ ಚಿನ್ನಾಭರಣ, ತಾಯಿಗೆ ಸೇರಿದ 200 ಸಾವರಿನ್ ಚಿನ್ನಾಭರಣ ಮತ್ತು 50 ಸಾವರಿನ್ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿರುವುದು ಪತ್ತೆಯಾಗಿದೆ.

    ಈ ಎಲ್ಲಾ ಚಿನ್ನಾಭರಣವನ್ನು 22 ವರ್ಷದ ಸ್ವಾತಿ ಎಂಬ ಯುವತಿಗೆ ಶೇಖರ್ ಉಡುಗೊರೆಯಾಗಿ ನೀಡಿದ್ದು, ಆಕೆಯೊಂದಿಗೆ ಸಂಬಂಧ ಇಟ್ಟುಕೊಂಡಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ಶೇಖರ್ ಪ್ರೇಯಸಿಗೆ ಕಾರನ್ನು ಖರೀದಿಸಿ ಕೂಡ ನೀಡಿದ್ದಾರೆ. ಇದೀಗ ಪೊಲೀಸರು ಅದನ್ನು ವಶಪಡಿಸಿಕೊಂಡು, ವ್ಯಕ್ತಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಅವರ ತಿರಂಗಾ ಡಿಪಿ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ – ಬಿಜೆಪಿ ಕಾಲೆಳೆದ ಕಾಂಗ್ರೆಸ್‌

    Live Tv
    [brid partner=56869869 player=32851 video=960834 autoplay=true]

    Live Tv
    [brid partner=56869869 player=32851 video=960834 autoplay=true]

  • ಪ್ರೇಯಸಿ ಕತ್ತು ಹಿಸುಕಿ ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡ ಭಗ್ನ ಪ್ರೇಮಿ

    ಪ್ರೇಯಸಿ ಕತ್ತು ಹಿಸುಕಿ ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡ ಭಗ್ನ ಪ್ರೇಮಿ

    ಬೆಳಗಾವಿ: ಪ್ರೇಯಸಿಯ ಕತ್ತು ಹಿಸುಕಿ ಕೊಂದು ತಾನು ನೇಣುಬಿಗಿದುಕೊಂಡು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡರುವ ಘಟನೆ ಬಸವ ಕಾಲೋನಿಯಲ್ಲಿ ನಡೆದಿದೆ.

    ರಾಮಚಂದ್ರ ತೆಣಗಿ(29) ಮೃತ ಯುವಕನಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮದ್ಲೂರು ಗ್ರಾಮದ ಪ್ರೇಯಸಿ ರೇಣುಕಾ ಅವರನ್ನು ರಾಮಚಂದ್ರ ತೆಣಗಿ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಆಗಸ್ಟ್ 13 ರಿಂದ 15ರವರೆಗೆ ನಿಮ್ಮ ಮನೆಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಿ: ಮೋದಿ ಕರೆ

    ರೇಣುಕಾ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇತ್ತ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ರಾಮಚಂದ್ರ ತೆಣಗಿ ರಾಜ್ಯಶಾಸ್ತ್ರ ಸ್ನಾತಕೋತ್ತರ ಪದವಿಯನ್ನು ಓದುತ್ತಿದ್ದನು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ ಆಂಬುಲೆನ್ಸ್‌ ದರ್ಬಾರ್ – ಪಬ್ಲಿಕ್ ಟಿವಿ ರಹಸ್ಯ ಕಾರ್ಯಾಚರಣೆಯಲ್ಲಿ ಬಯಲು

    ಬಾಡಿಗೆ ಮನೆಯೊಂದರಲ್ಲಿ ರೇಣುಕಾ ಏಕಾಂಗಿಯಾಗಿ ವಾಸವಾಗಿದ್ದರು. ತಡರಾತ್ರಿ ಮನೆಗೆ ಬಂದಿದ್ದ ರಾಮಚಂದ್ರ, ರೇಣುಕಾ ವರನ್ನು ಸ್ಕಿಪ್ಪಿಂಗ್ ಮಾಡುವ ವಯರ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಅದೇ ವಯರ್ ಅನ್ನು ಫ್ಯಾನ್‍ಗೆ ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಲ್ಲದೇ ಗುರುವಾರ ತಮ್ಮ ಸಂಬಂಧಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಸಂದೇಶ ರಾಮಚಂದ್ರ ಕಳುಹಿಸಿದ್ದ.

    ಪ್ರೇಯಸಿ ಮೋಸ ಮಾಡಿದ್ದರಿಂದ ಕೊಲೆ ಮಾಡಿರುವುದಾಗಿ ರಾಮಚಂದ್ರ ಡೆತ್ ನೋಟ್ ಬರೆದಿದ್ದು, ಸದ್ಯ ಘಟನಾ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮಾಜಿ ಪ್ರೇಯಸಿಯ ರುಂಡ ಕಡಿದು, ಪೊಲೀಸ್ ಠಾಣೆಗೆ ತಂದ ಪಾಗಲ್ ಪ್ರೇಮಿ

    ಮಾಜಿ ಪ್ರೇಯಸಿಯ ರುಂಡ ಕಡಿದು, ಪೊಲೀಸ್ ಠಾಣೆಗೆ ತಂದ ಪಾಗಲ್ ಪ್ರೇಮಿ

    ಬಳ್ಳಾರಿ: ಪಾಗಲ್ ಪ್ರೇಮಿಯೊಬ್ಬ ಮಾಜಿ ಪ್ರೇಯಸಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಗೈದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ನಡೆದಿದೆ.

    ನಿರ್ಮಲಾ(23) ಕೊಲೆಯಾದ ಯುವತಿಯಾಗಿದ್ದಾರೆ. ಆರೋಪಿಯನ್ನು ಬೋಜರಾಜ ಎಂದು ಗುರುತಿಸಲಾಗಿದೆ. ಬಿಎಸ್‍ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ ಪರೀಕ್ಷೆ ಇದ್ದ ಹಿನ್ನೆಲೆ ಓದಲು ಊರಿಗೆ ಬಂದಿದ್ದರು. ಮೊದಲಿನಿಂದಲೂ ನಿರ್ಮಲಾಳನ್ನು ತನಗೆ ಮದುವೆ ಮಾಡಿಕೊಂಡುವಂತೆ ಬೋಜರಾಜ ಪೀಡಿಸುತ್ತಿದ್ದನು. ಆದರೆ ಇದಕ್ಕೆ ಮನೆಯವರು ನಿರಾಕರಿಸಿದ್ದರು. ಹೀಗಾಗಿ 2 ತಿಂಗಳ ಹಿಂದೆ ಬೇರೆ ಯುವತಿಯನ್ನು ಬೋಜರಾಜ ಮದುವೆಯಾಗಿದ್ದನು. ಇದನ್ನೂ ಓದಿ: ಆರತಕ್ಷತೆ ವೇಳೆ ಎದೆನೋವು – ಮದುವೆ ದಿನವೇ ಮೃತಪಟ್ಟ ವರ

    ಇದೀಗ ಊರಿಗೆ ನಿರ್ಮಲಾ ಬಂದಿರುವ ವಿಚಾರ ತಿಳಿದ ಆರೋಪಿ ಮಚ್ಚಿನಿಂದ ಪ್ರೇಯಸಿಯ ತಲೆ ಕಡಿದು ಬರ್ಬರವಾಗಿ ಹತ್ಯೆಗೈದಿದ್ದಾನೆ. ನಂತರ ರುಂಡವನ್ನು ತೆಗೆದುಕೊಂಡು ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿಯ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಸದ್ಯ ಈ ಸಂಬಂಧ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಭ್ರಷ್ಟಾಚಾರದ ಹೆಮ್ಮರವೊಂದಕ್ಕೆ ಕೊಡಲಿ ಪೆಟ್ಟು ಬಿದ್ದಿದಕ್ಕೆ ಬೀದಿಗಿಳಿದಿದ್ದಾರೆ: ಬಿಜೆಪಿ

    Live Tv
    [brid partner=56869869 player=32851 video=960834 autoplay=true]

  • ಮಗಳನ್ನು ಪ್ರೀತಿಸಿದ್ದಕ್ಕೆ ಯುವಕನ ಹತ್ಯೆಗೈದ ತಂದೆ

    ಮಗಳನ್ನು ಪ್ರೀತಿಸಿದ್ದಕ್ಕೆ ಯುವಕನ ಹತ್ಯೆಗೈದ ತಂದೆ

    ಪಾಟ್ನಾ: ಯುವಕನೋರ್ವನನ್ನು ಪ್ರೇಯಸಿಯ ತಂದೆ ಹಾಗೂ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ಬಿಹಾರದ ಪುರ್ನಿಯಾದಲ್ಲಿ ನಡೆದಿದೆ.

    ಮೃತ ದುರ್ದೈವಿಯನ್ನು ಖುಷ್ಕಿಬಾಗ್ ಬಾಗೇಶ್ವರ ಕಾಲೋನಿ ನಿವಾಸಿ ಕುನಾಲ್ ಎಂದು ಗುರುತಿಸಲಾಗಿದೆ. ಯುವಕ ತನ್ನ ಮನೆಗೆ ಬೈಕ್‍ನಲ್ಲಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆಗೆ ಹೋಗುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಆತನ ತೊಡೆಗೆ ಗುಂಡು ಹಾರಿಸಿದ್ದಾರೆ. ಈ ವೇಳೆ ಯುವಕ ನೆಲಕ್ಕೆ ಕುಸಿದು ಬಿದ್ದಿದ್ದಾನೆ. ಗುಂಡಿನ ಶಬ್ಧ ಕೇಳಿ ಸ್ಥಳಕ್ಕಾಗಮಿಸಿದ ಸ್ಥಳೀಯರು ಕುನಾಲ್ ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: 8 ವರ್ಷಗಳಿಂದ ಲಿವಿಂಗ್ ರಿಲೇಷನ್, 14 ಬಾರಿ ಗರ್ಭಪಾತ – ಮಹಿಳೆ ಆತ್ಮಹತ್ಯೆ, ಟೆಕ್ಕಿ ವಿರುದ್ಧ FIR

    ನಂತರ ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸರು ಯುವಕನ ಹೇಳಿಕೆ ಪಡೆದುಕೊಂಡಿದ್ದಾರೆ. ಈ ವೇಳೆ ಆರೋಪಿಗಳಲ್ಲಿ ಒಬ್ಬರು ತನ್ನ ಗೆಳತಿಯ ತಂದೆ ಮುನ್ನಾ ಪಾಸ್ವಾನ್ ಆಗಿದ್ದು, ಬೈಕ್‍ನಲ್ಲಿದ್ದ ಇನ್ನೊಬ್ಬ ವ್ಯಕ್ತಿಯನ್ನು ಗುರುತಿಸಲಾಗಲಿಲ್ಲ. 2021ರ ಜನವರಿಯಲ್ಲಿ ನನ್ನ ವಿರುದ್ಧ ಮುನ್ನಾ ಪಾಸ್ವಾನ್ ಅವರು ತಮ್ಮ ಮಗಳನ್ನು ಅಪಹರಿಸಿದ್ದಾನೆ ಎಂದು ದೂರು ದಾಖಲಿಸಿ, ಜೈಲಿಗೆ ಕಳುಹಿಸಿದ್ದರು. ಆದರೆ 20 ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರಬಂದೆ. ಅಂದಿನಿಂದಲೂ ಯುವತಿಯ ತಂದೆ ನನಗೆ ಪದೇ, ಪದೇ ಜೀವ ಬೆದರಿಕೆಯೊಡ್ಡುತ್ತಿದ್ದರು ಎಂದು ಕುನಾಲ್ ತಿಳಿಸಿದ್ದಾರೆ.

    ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಗುಜರಾತಿನ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – ಮೋದಿ ತವರಲ್ಲಿ ಮಳೆಯ ಸಂಕಷ್ಟಕ್ಕೆ ಸಿಲುಕಿದ ಜನ

    Live Tv
    [brid partner=56869869 player=32851 video=960834 autoplay=true]

  • ಮಿಸ್‍ಕಾಲ್ ಪ್ರೇಯಸಿಯಿಂದ ಪ್ರಿಯಕರನ ಬರ್ಬರ ಹತ್ಯೆ

    ಮಿಸ್‍ಕಾಲ್ ಪ್ರೇಯಸಿಯಿಂದ ಪ್ರಿಯಕರನ ಬರ್ಬರ ಹತ್ಯೆ

    ಕಲಬುರಗಿ: ಮಿಸ್‍ಕಾಲ್ ಪ್ರೇಯಸಿಯಿಂದ ಪ್ರಿಯಕರನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿಯ ವಾಜಪೇಯಿ ಬಡಾವಣೆಯಲ್ಲಿ ನಡೆದಿದೆ.

    ದಯಾನಂದ್ ಕೊಲೆಯಾದವನಾಗಿದ್ದು, ಈತ ಮೇ 24ರಂದು ಆಳಂದ ತಾಲೂಕಿನ ಸುಕ್ರವಾಡಿ ಗ್ರಾಮದ ನಿವಾಸಿ. ಈತನನ್ನು ಪ್ರೇಯಸಿ ಅಂಬಿಕಾ ಆಂಡ್ ಗ್ಯಾಂಗ್ ನಿಂದ ಮೂರು ಲಕ್ಷಕ್ಕೆ ಸುಪಾರಿ ಪಡೆದು ಕೊಲೆ ಮಾಡಲಾಗಿದೆ.

    ದಯಾನಂದ್ ನನ್ನ ಬರ್ಬರವಾಗಿ ಕೊಲೆ ಮಾಡುವ ವೀಡಿಯೋವನ್ನು ಸ್ವತಃ ಅಂಬಿಕಾಳೇ ಮಾಡಿದ್ದಾಳೆ. ಅಲ್ಲದೆ ಕೊಲೆಯ ವೀಡಿಯೋವನ್ನು ತನ್ನ ಇನ್ನೊಬ್ಬ ಪ್ರಿಯಕರ ಮಿಲಿಟರಿಯಲ್ಲಿರುವ ಸುನೀಲ್ ಗೆ ಕಳುಹಿಸಿದ್ದಾಳೆ. ಇದನ್ನೂ ಓದಿ: ಕೂಡಲೇ ವಿಚಾರಣೆಗೆ ಹಾಜರಾಗಿ – ಬಂಗಾಳ ಪೊಲೀಸರಿಂದ ನೂಪುರ್‌ಗೆ ಕೊನೆಯ ಎಚ್ಚರಿಕೆ

    ಕೊಲೆಯ ಲೈವ್ ವೀಡಿಯೋ ಮಾಡಿ ತಾನು ಬಚಾವ್ ಆಗೋದಕ್ಕೆ ಪ್ಲ್ಯಾನ್ ಮಾಡಿದ್ದಳು. ಆದರೆ ಇದೀಗ ತಾನೇ ತೋಡಿದ್ದ ಅಂಬಿಕಾ ಖೆಡ್ಡಾಗೆ ತಾನೇ ಬಿದ್ದಿದ್ದಾಳೆ. ಘಟನೆ ಸಂಬಂಧ ವಿಶ್ವವಿದ್ಯಾಲಯ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬೇಲ್‌ನಿಂದ ಹೊರಬಂದು ಮದುವೆಯಾಗು ಎಂದ – ರೌಡಿ ಅಂತ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರೇಯಸಿಯನ್ನೇ ಕೊಂದ

    ಬೇಲ್‌ನಿಂದ ಹೊರಬಂದು ಮದುವೆಯಾಗು ಎಂದ – ರೌಡಿ ಅಂತ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರೇಯಸಿಯನ್ನೇ ಕೊಂದ

    ಚಂಡೀಗಢ: ಕ್ರಿಮಿನಲ್‌ ಹಿನ್ನೆಲೆ ಇರುವ ನಿನ್ನನ್ನು ಮದುವೆಯಾಗಲ್ಲ ಎಂದು ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನೇ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಸೈನ್‌ಪುರ ಗ್ರಾಮದಲ್ಲಿ ನಡೆದಿದೆ.

    ಸೆಕ್ಷನ್ 307 ರ ಅಡಿಯಲ್ಲಿ ಬಂಧಿತನಾಗಿದ್ದ ಯುವಕ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದ. ಅಪರಾಧ ಹಿನ್ನೆಲೆಯುಳ್ಳವನಾಗಿದ್ದರಿಂದ ಆತನನ್ನು ಮದುವೆಯಾಗಲು ಗೆಳತಿ ನಿರಾಕರಿಸಿದ್ದಾಳೆ. ನಿರಾಕರಣೆ ಸಹಿಸಲಾಗದೆ ಆತ ಮತ್ತು ಆತನ ಸ್ನೇಹಿತರು ಯುವತಿ ಮನೆಗೆ ನುಗ್ಗಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ನಾಳೆ ನೀವು ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ: ತಾಜ್ ಮಹಲ್ ಕುರಿತ ಅರ್ಜಿ ತಿರಸ್ಕರಿಸಿದ ಕೋರ್ಟ್

    ನನ್ನ ಸಹೋದರಿ ಪೂಜಾಳನ್ನು ಹತ್ಯೆ ಮಾಡಿರುವ ರಾಹುಲ್‌ ನಮಗೆ ಸೋದರ ಮಾವ. ಈತನಿಗೆ ಕ್ರಿಮಿನಲ್‌ ಹಿನ್ನೆಲೆಯಿತ್ತು. ಹೀಗಾಗಿ ಆತನನ್ನು ಮದುವೆಯಾಗಲು ಪೂಜಾ ನಿರಾಕರಿಸಿದ್ದಳು. ಆರೋಪಿಗಳ ವಿರುದ್ಧ ಪೊಲೀಸ್‌ ಆಡಳಿತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೃತ ಪೂಜಾ ಸಹೋದರಿ ರಜನಿ ಬಾಲಾ ಒತ್ತಾಯಿಸಿದ್ದಾರೆ.

    ದೀನಾನಗರ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಕಪಿಲ್ ಕೌಶಲ್, ಸಾಯಿನ್‌ಪುರ ಗ್ರಾಮದಲ್ಲಿ ಯುವತಿಯನ್ನು ಕೊಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಪ್ರಕರಣದಲ್ಲಿ ಮೃತಳ ಸಹೋದರಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವರ್ಷದೊಳಗೆ ಮೊಮ್ಮಗು ನೀಡಿ, ಇಲ್ಲ 5 ಕೋಟಿ ಪರಿಹಾರ ಕೊಡಿ – ಮಗ, ಸೊಸೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಅತ್ತೆ

  • ಪ್ರೇಯಸಿಯ ಸಹೋದರನನ್ನು ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ

    ಪ್ರೇಯಸಿಯ ಸಹೋದರನನ್ನು ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ

    ಲಕ್ನೋ: ಪ್ರೇಯಸಿ ಮನೆಗೆ ನುಗ್ಗಿ ಆಕೆಯ ಸಹೋದರನನ್ನು ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಉತ್ತರಪ್ರದೇಶದ ಪಿಲಿಭಿತ್‍ನಲ್ಲಿ ಶನಿವಾರ 19 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿ ಮನೆಗೆ ನುಗಿದ್ದು, ಆಕೆ ಮತ್ತು ಆಕೆಯ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಆತನನ್ನು ತಡೆಯಲು ಬಂದ ಪ್ರೇಯಸಿಯ ಸಹೋದರನನ್ನು ಗುಂಡಿಕ್ಕಿ ಕೊಂದಿದ್ದು, ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಸ್ತುತ ಈ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ನಾಯಕತ್ವ ಬದಲಾವಣೆ ಬಗ್ಗೆ ಸಂತೋಷ್ ಯಾಕೆ ಹೇಳಿದ್ದಾರೆ ನನಗೆ ಗೊತ್ತಿಲ್ಲ: ಉಮೇಶ್ ಕತ್ತಿ

    crime

    ನಡೆದಿದ್ದೇನು?
    ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಪ್ರಭು ಈ ಕುರಿತು ಮಾಹಿತಿ ಕೊಟ್ಟಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಇದೊಂದು ಪ್ರೇಮ ಸಂಬಂಧ ವಿಫಲವಾದ ಹಿನ್ನೆಲೆ ಆರೋಪಿ ರಿಂಕು ಗಂಗ್ವಾರ್ ಈ ಕೃತ್ಯ ಮಾಡಿದ್ದಾನೆ ಎಂಬುದು ತಿಳಿದುಬರುತ್ತದೆ. ಆರೋಪಿ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನಿವಾಸಿಯಾಗಿದ್ದು, ರಚನಾ ಗಂಗ್ವಾರ್ (22)ನನ್ನು ಪ್ರೀತಿಸುತ್ತಿದ್ದ. ಆದರೆ ಆಕೆಯ ಪೋಷಕರು ಬೇರೊಬ್ಬನ ಜೊತೆ ವಿವಾಹವನ್ನು ನಿಶ್ಚಯಿಸಿದ್ದರು.

    ಸುದ್ದಿ ಕೇಳಿ ಕೋಪಕೊಂಡ ರಿಂಕು, ಸಿರ್ಸಾ ಗ್ರಾಮದ ರಚನಾ ಅವರ ಮನೆಗೆ ಬೆಳಗ್ಗೆ ನುಗ್ಗಿ ಆಕೆ ಹಾಗೂ ಆಕೆಯ ತಾಯಿ ಮಾಯಾದೇವಿ(50) ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾನೆ. ರಚನಾ ಅವರ ಸಹೋದರ ರವೀಂದ್ರಪಾಲ್(28) ಮಧ್ಯಪ್ರವೇಶಿಸಿದಾಗ, ರಿಂಕು ಅವನನ್ನು ಗುಂಡಿಕ್ಕಿ ಕೊಂದಿದ್ದಾನೆ. ನಂತರ ಅವನು ಅಲ್ಲಿಂದ ಓಡಿಹೋಗಿ ಸುಮಾರು 20 ಮೀಟರ್ ದೂರದಲ್ಲಿ ತನ್ನ ಮೇಲೆ ಗುಂಡು ಹಾರಿಸಿಕೊಂಡಿದ್ದಾನೆ. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ಯಾನ್ ಇಂಡಿಯಾ’ – ಸಿನಿಮಾಗಳಿಗೆ ಅಗೌರವ ತೋರುವ ಪದ, ಇದನ್ನು ತೆಗೆದುಹಾಕಬೇಕು: ಸಿದ್ಧಾರ್ಥ್ 

    ಪ್ರಸ್ತುತ ರಚನಾ ಮತ್ತು ಮಾಯಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.

  • ಗಿಫ್ಟ್ ಕೊಟ್ಟಿದ್ದ ಮೊಬೈಲ್ ವಾಪಸ್ ಕೊಡದ ಪ್ರೇಯಸಿಯ ಕತ್ತು ಸೀಳಿ ಕೊಲೆ

    ಗಿಫ್ಟ್ ಕೊಟ್ಟಿದ್ದ ಮೊಬೈಲ್ ವಾಪಸ್ ಕೊಡದ ಪ್ರೇಯಸಿಯ ಕತ್ತು ಸೀಳಿ ಕೊಲೆ

    ರಾಂಚಿ: ಗಿಫ್ಟ್ ಕೊಡಿಸಿದ್ದ ಮೊಬೈಲ್ ವಾಪಸ್ ಕೊಡದ ಪ್ರೇಯಸಿಯ ಕತ್ತು ಸೀಳಿ ಕೊಂದಿರುವ ಘಟನೆ ಜಾರ್ಖಂಡ್‌ನ ಪಾಕುರ್‌ನಲ್ಲಿ ನಡೆದಿದೆ.

    ಮೃತ ಯುವತಿ ಮಹೇಶ್‍ಪುರ ಪೊಲೀಸ್ ಠಾಣೆಯ ವ್ಯಾಪ್ತಿಯ ನಿವಾಸಿಯಾಗಿದ್ದಾಳೆ. ಈ ಜೋಡಿಗಳ ಮಧ್ಯೆ ಮೊಬೈಲ್ ವಿಚಾರವಾಗಿ ನಡೆದ ಗಲಾಟೆ ಸಾವಿನಲ್ಲಿ ಅಂತ್ಯವಾಗಿದೆ. ಇದನ್ನೂ ಓದಿ : ಪಾವನಾ ನಾಯಕಿಯಾಗಿ ನಟಿಸಿದ ‘ಇನ್’ ಚಿತ್ರದ ಟೀಸರ್ ರಿಲೀಸ್ ಮಾಡಿದ ಕಿಚ್ಚ

    ನಡೆದಿದ್ದೇನು?: ಉಪವಿಭಾಗದ ಪೊಲೀಸ್ ಅಧಿಕಾರಿ ಹೇಳುವ ಪ್ರಕಾರ, ಆರೋಪಿಯು ಆಕೆಯೊಂದಿಗೆ ಕಳೆದ ಎರಡು ವರ್ಷಗಳಿಂದ ಸಂಬಂಧ ಹೊಂದಿದ್ದ ಎಂದು ಯುವತಿಯ ಚಿಕ್ಕಪ್ಪ ತಿಳಿಸಿದ್ದಾರೆ. ಅವನು ಆಗಾಗ ಯುವತಿಯ ಮನೆಗೆ ಬರುತ್ತಿದ್ದನು. ಅವಳ ಮನೆಯಲ್ಲೇ ಕೆಲವು ರಾತ್ರಿಗಳನ್ನು ಕಳೆದಿದ್ದ. ಆದರೆ ಆರೋಪಿಯ ಮದುವೆಯನ್ನು ಆತನ ಮನೆಯವರು ಬೇರೊಬ್ಬರೊಂದಿಗೆ ನಿಶ್ಚಯಿಸಿದ್ದರು. ಹೀಗಾಗಿ ಆತ ತಾನು ತನ್ನ ಹಳೇ ಪ್ರೇಯಸಿಗೆ ಉಡುಗೊರೆಯಾಗಿ ನೀಡಿದ್ದ ಸ್ಮಾರ್ಟ್‍ಫೋನ್ ವಾಪಸ್ ಪಡೆಯಲು ಬಯಸಿದ್ದ. ಆದರೆ ಆಕೆ ಅದನ್ನು ವಾಪಸ್ ಕೊಡಲು  ಒಪ್ಪಿರಲಿಲ್ಲ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಧ್ಯೆ ವಿದ್ಯುತ್ ಶಾಕ್ – ಯೂನಿಟ್‍ಗೆ 35 ಪೈಸೆ ಹೆಚ್ಚಳ

    ಈ ವಿಚಾರವಾಗಿ ಜಗಳವಾಡಿ ನಂತರ ಅವರಿಬ್ಬರೂ ಫುಟ್ಬಾಲ್ ಪಂದ್ಯ ವೀಕ್ಷಿಸಲು ತೆರಳಿದ್ದರು. ಮಫಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕರಬೋನಾದಿಂದ ಬಂಧಿತ ಆರೋಪಿ, ಪಂದ್ಯ ಮುಗಿಸಿ ಹಿಂತಿರುಗುವಾಗ ಆಕೆ ಮೊಬೈಲ್ ಹಿಂದಿರುಗಿಸಲು ನಿರಾಕರಿಸಿದ್ದಾಳೆ. ಚೂಪಾದ ವಸ್ತುವಿನಿಂದ ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

    ಆಕೆಯನ್ನು ಕೊಲೆ ಮಾಡಿದ ನಂತರ ಆತ ಮೊಬೈಲ್ ಫೋನ್‍ನೊಂದಿಗೆ ಆ ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಪತ್ನಿ ಬಿಟ್ಟು ಪ್ರೇಯಸಿಯನ್ನು ಮದುವೆಯಾಗಲು ಹೊರಟಿದ್ದ ಭೂಪ – ಕುಟುಂಬಸ್ಥರಿಂದಲೇ ಬಿತ್ತು ಗೂಸಾ

    ಪತ್ನಿ ಬಿಟ್ಟು ಪ್ರೇಯಸಿಯನ್ನು ಮದುವೆಯಾಗಲು ಹೊರಟಿದ್ದ ಭೂಪ – ಕುಟುಂಬಸ್ಥರಿಂದಲೇ ಬಿತ್ತು ಗೂಸಾ

    ಪಾಟ್ನಾ: ಮತ್ತೋರ್ವ ಮಹಿಳೆಯನ್ನು ಮದುವೆಯಾಗಲು ಹೊರಟಿದ್ದ ವ್ಯಕ್ತಿಯನ್ನು ಲೈಟ್ ಕಂಬಕ್ಕೆ ಕಟ್ಟಿ ಅತ್ತಿಗೆ ಥಳಿಸಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಕತಿಹಾರ್ ಜಿಲ್ಲೆಯ ಅಜಮ್‍ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಿಕ್‍ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೊಹಮ್ಮದ್ ಅಬಿದ್ ಮಹಿಳೆಯೊಬ್ಬರನ್ನು ಪ್ರೀತಿಸುತ್ತಿದ್ದನು ಮತ್ತು ಆಕೆಯನ್ನು ಮದುವೆಯಾಗಲು ನ್ಯಾಯಾಲಯಕ್ಕೆ ಹೋಗುತ್ತಿರುವುದನ್ನು ತಿಳಿದ ಪತ್ನಿ ಸನಾ ಖಾತೂನ್ ಆತನನ್ನು ತಡೆಯಲು ವಿಫಲವಾದಾಗ ಕುಟುಂಬಸ್ಥರಿಗೆ ತಿಳಿಸಿದ್ದಾಳೆ.

    ಮುಂಬೈನಲ್ಲಿ ವಾಸಿಸುತ್ತಿದ್ದ ಅಬಿದ್ ಪಕ್ಕದ ಹಳ್ಳಿಯ ನಿವಾಸಿಯಾಗಿದ್ದ ಮಹಿಳೆಯನ್ನು ಪ್ರೀತಿಸುತ್ತಿದ್ದರಿಂದ ತನಗೆ ಹಣ ಕಳುಹಿಸುವುದನ್ನು ನಿಲ್ಲಿಸಿದ್ದ ಎಂದು ಪತ್ನಿ ಸನಾ ಖಾತೂನ್ ಆರೋಪಿಸಿದ್ದಾರೆ. ಇದನ್ನೂ ಓದಿ: ಭವಿಷ್ಯದ ದಿನಗಳಲ್ಲಿ ವಾಹನ ಚಾಲನೆ ಮಾಡುವಾಗ ಫೋನ್‍ನಲ್ಲಿ ಮಾತಾಡಿದ್ರೆ ಅದು ಅಪರಾಧವಲ್ಲ: ನಿತಿನ್ ಗಡ್ಕರಿ

    ಅಬಿದ್ ತನ್ನ ಗೆಳತಿಯನ್ನು ಮದುವೆಯಾಗುವಂತೆ ಮನವೊಲಿಸಿ, ಶನಿವಾರ ಆಕೆಯನ್ನು ಮದುವೆಯಾಗಲು ನ್ಯಾಯಾಲಯಕ್ಕೆ ಹೋಗುತ್ತಿದ್ದನು. ಅಬಿದ್ ನ್ಯಾಯಾಲಯಕ್ಕೆ ತೆರಳುತ್ತಿದ್ದಾಗ ಆತನ ಪತ್ನಿ ಸನಾ ಆತನನ್ನು ತಡೆಯಲು ಪ್ರಯತ್ನಿಸಿದ್ದಾಳೆ. ಆದರೆ ಸಾಧ್ಯವಾಗದ ಕಾರಣ ಕೊನೆಗೆ ಅಬಿದ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ನಂತರ ಕೂಡಲೇ ಕುಟುಂಬಸ್ಥರು ಅಬಿದ್ ಹಿಡಿದು ಕಂಬಕ್ಕೆ ಕಟ್ಟಿ ಹಿಗ್ಗಾ ಮುಗ್ಗ ಥಳಿಸಿದ್ದಾರೆ.

    ಅಬಿದ್ ಒಪ್ಪಿಗೆ ಮೇರೆಗೆ ಆತನಿಗೆ ಮದುವೆ ಮಾಡಲಾಗಿತ್ತು. ಆದರೀಗ ಪತ್ನಿಯನ್ನು ಬಿಟ್ಟು ಬೇರೆ ಮದುವೆಯಾಗಲು ಮುಂದಾಗಿದ್ದಾನೆ. ಪತ್ನಿಗೆ ದ್ರೋಹ ಬಗೆದಿದ್ದಕ್ಕೆ ತಕ್ಕ ಪಾಠ ಕಲಿಸಬೇಕೆಂದು ಥಳಿಸಿಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಆಧುನಿಕ ಜಿನ್ನಾ : ಹಿಮಂತ ಬಿಸ್ವಾ ಶರ್ಮಾ

  • ಶವಕ್ಕಾಗಿ ಪತ್ನಿ, ಪ್ರೇಯಸಿಯ ನಡುವೆ ಕಿತ್ತಾಟ – ಇಕ್ಕಟ್ಟಿಗೆ ಸಿಲುಕಿದ ಪೊಲೀಸರು

    ಶವಕ್ಕಾಗಿ ಪತ್ನಿ, ಪ್ರೇಯಸಿಯ ನಡುವೆ ಕಿತ್ತಾಟ – ಇಕ್ಕಟ್ಟಿಗೆ ಸಿಲುಕಿದ ಪೊಲೀಸರು

    ಚಾಮರಾಜನಗರ: ಮೃತ ವ್ಯಕ್ತಿಯ ಶವಕ್ಕಾಗಿ ಪತ್ನಿ ಹಾಗೂ ಪ್ರೇಯಸಿ ಇಬ್ಬರೂ ಕಿತ್ತಾಟ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.

    ಅನಾರೋಗ್ಯದಿಂದ ಮೃತಪಟ್ಟಿದ್ದ ದೊಡ್ಡತುಪ್ಪೂರು ಗ್ರಾಮದ ವಕೀಲ ಪಾಪಣ್ಣಶೆಟ್ಟಿ ಪತ್ನಿ ನಿಮಿತಾಳಿಂದ ದೂರವಿದ್ದು, ಪ್ರೇಯಸಿ ಮಹದೇವಮ್ಮನೊಂದಿಗೆ ವಾಸವಿದ್ದ. ಪತಿ ಪಾಪಣ್ಣ ಶೆಟ್ಟಿ, ತನ್ನ ತಂದೆಯಿಂದ ಆಸ್ತಿ ಬರೆದುಕೊಂಡು ಮೋಸ ಮಾಡಿದ್ದಾನೆ ಎಂದು ನಿಮಿತಾ ನ್ಯಾಯಾಲಯದ ಮೆಟ್ಟಿಲೇರಿದ್ದಳು. ಈ ನಡುವೆ ಪಾಪಣ್ಣಶೆಟ್ಟಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇದನ್ನೂ ಓದಿ: ನರ್ಸ್ ಎಡವಟ್ಟು – ತಪ್ಪಾದ ಚುಚ್ಚು ಮದ್ದು ನೀಡಿದ್ದರಿಂದ ರೋಗಿ ಸಾವು

    ಪಾಪಣ್ಣಶೆಟ್ಟಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ನಿಮಿತಾ, ಇದು ಅಸ್ವಾಭಾವಿಕ ಸಾವು ಎಂದು ದೂರು ನೀಡಿದ್ದಾರೆ. ಆಕೆಯ ದೂರಿನ ಮೇರೆಗೆ ಶವಪರೀಕ್ಷೆ ನಡೆಸಲಾಗಿತ್ತು. ಶವಪರೀಕ್ಷೆಯ ಬಳಿಕ ನಿಮಿತಾ ಗಂಡನ ಶವವನ್ನು ತನಗೆ ನೀಡುವಂತೆ ಒತ್ತಾಯಿಸಿದ್ದು, ಇದಕ್ಕೆ ಮಹದೇವಮ್ಮ ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: Well done, #TeamCongress! – ಕರ್ನಾಟಕ ಕಾಂಗ್ರೆಸ್‌ ಬೆನ್ನು ತಟ್ಟಿದ ರಾಹುಲ್‌ ಗಾಂಧಿ, ಸುರ್ಜೇವಾಲಾ

    ಇವರಿಬ್ಬರ ಕಿತ್ತಾಟದಿಂದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಇಬ್ಬರಿಗೂ ನ್ಯಾಯಾಲಯದ ಮೊರೆ ಹೋಗುವಂತೆ ಪೊಲೀಸರು ಸೂಚಿಸಿದ್ದಾರೆ. ನಂತರ ಪಾಪಣ್ಣಶೆಟ್ಟಿ ಶವವನ್ನು ಶವಾಗಾರಕ್ಕೆ ರವಾನಿಸಿದ್ದಾರೆ.