Tag: ಪ್ರೊಫೆಸರ್

  • ಮನೆಗೆ ಊಟಕ್ಕೆ ಅಂತ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರೊಫೆಸರ್ ಅರೆಸ್ಟ್

    ಮನೆಗೆ ಊಟಕ್ಕೆ ಅಂತ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರೊಫೆಸರ್ ಅರೆಸ್ಟ್

    – ಪರೀಕ್ಷೆಯಲ್ಲಿ ಮಾರ್ಕ್ಸ್ ಕೊಡ್ತೀನಿ, ಅಟೆಂಡೆನ್ಸ್‌ ಕೊಡ್ತೀನಿ ಅಂತ ಮೈಕೈ ಮುಟ್ಟಿ ಕಿರುಕುಳ ನೀಡಿದ್ದ ಕಾಮುಕ

    ಬೆಂಗಳೂರು: ಮನೆಗೆ ಊಟಕ್ಕೆ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಖಾಸಗಿ ಕಾಲೇಜಿನ ಪ್ರೊಫೆಸರ್‌ನನ್ನು ತಿಲಕ್ ನಗರ ಪೊಲೀಸರು (Tilak Nagar Police) ಬಂಧಿಸಿದ್ದಾರೆ.

    ಪಶ್ಚಿಮ ಬಂಗಾಳ (West Bengal) ಮೂಲದ ಸಂಜೀವ್ ಕುಮಾರ್ ಮಂಡಲ್ ಬಂಧಿತ ಪ್ರೊಫೆಸರ್. ನಗರದ ಪ್ರತಿಷ್ಟಿತ ಕಾಲೇಜಿನಲ್ಲಿ ಹೆಚ್‌ಓಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯು ಅದೇ ಕಾಲೇಜಿನಲ್ಲಿ ಬಿಸಿಎ ಎರಡನೇ ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಆಕೆಯು ಪಶ್ಚಿಮ ಬಂಗಾಳ ಮೂಲದವಳಾಗಿದ್ದಳು. ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 6 ಮಂದಿ ಸಜೀವ ದಹನ

    ಕಾಲೇಜಿನಲ್ಲಿ ಆಕೆಗೆ ಉಪನ್ಯಾಸಕನಾಗಿದ್ದರಿಂದ ಅ.2 ರಂದು ವಿದ್ಯಾರ್ಥಿನಿಯನ್ನು ಪ್ರೊಫೆಸರ್ ಮನೆಗೆ ಊಟಕ್ಕೆ ಕರೆದಿದ್ದ. ಹೀಗಾಗಿ ವಿದ್ಯಾರ್ಥಿನಿ ಪ್ರೊಫೆಸರ್ ಮನೆಗೆ ಊಟಕ್ಕೆ ಹೋಗಿದ್ದಳು. ಮನೆಯಲ್ಲಿ ಪ್ರೊಫೆಸರ್ ಒಬ್ಬನೇ ಇದ್ದುದ್ದರಿಂದ ವಿದ್ಯಾರ್ಥಿನಿಯು ಗಾಬರಿಗೊಂಡಿದ್ದಳು. ಈ ವೇಳೆ ಆಕೆಗೆ ಕುಡಿಯಲು ನೀರು ಕೊಟ್ಟು, ಆಕೆಯ ಪಕ್ಕದಲ್ಲೇ ಪ್ರೊಫೆಸರ್ ಕುಳಿತುಕೊಂಡಿದ್ದ. ಇದನ್ನೂ ಓದಿ: ದಾವಣಗೆರೆ | ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ

    ಬಳಿಕ ನಿನಗೆ ಹಾಜರಾತಿ ಕಡಿಮೆ ಇದೆ, ಹಾಜರಾತಿ ಹಾಕಿ ಕೊಡುತ್ತೇನೆ. ಪರೀಕ್ಷೆಯಲ್ಲಿ ಮಾರ್ಕ್ಸ್ ಕೊಡೋದಾಗಿ ಹೇಳಿ ವಿದ್ಯಾರ್ಥಿನಿ ಮೈ, ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ಗಾಬರಿಗೊಂಡ ವಿದ್ಯಾರ್ಥಿನಿ ಅಲ್ಲಿಂದ ಎದ್ದು ಬಂದಿದ್ದಳು ಎನ್ನಲಾಗಿದೆ.

    ಬಳಿಕ ವಿದ್ಯಾರ್ಥಿನಿಯು ಮನೆಯವರ ಸಲಹೆ ಮೇರೆಗೆ ಸಂಜೀವ್ ಕುಮಾರ್ ಮಂಡಲ್ ವಿರುದ್ಧ ತಿಲಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರೊಫೆಸರ್‌ನನ್ನು ಬಂಧಿಸಿದ್ದಾರೆ.

  • ಪಂಜಾಬ್‌ನಲ್ಲಿ ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್ – ಪ್ರೊಫೆಸರ್ ಅರೆಸ್ಟ್

    ಪಂಜಾಬ್‌ನಲ್ಲಿ ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್ – ಪ್ರೊಫೆಸರ್ ಅರೆಸ್ಟ್

    ಮಂಗಳೂರು: ಪಂಜಾಬ್‌ನಲ್ಲಿ ಧರ್ಮಸ್ಥಳ(Dharmasthala) ಮೂಲದ ಏರೋಸ್ಪೇಸ್ ಎಂಜಿನಿಯರ್(Aerospace Engineer) ಆಕಾಂಕ್ಷ ಸಾವು ಪ್ರಕರಣದಲ್ಲಿ ಪ್ರೊಫೆಸರ್(Professor) ಒಬ್ಬನನ್ನು ಜಲಂಧರ್ ಪೊಲೀಸರು ಬಂಧಿಸಿದ್ದಾರೆ.

    ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಪ್ರೊಫೆಸರ್ ಬಿಜಿಲ್ ಮ್ಯಾಥ್ಯೂ(45) ಬಂಧಿತ ಆರೋಪಿ. ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಉದ್ಧಟತನ – ಒಂದು ಪಂದ್ಯಕ್ಕೆ ದಿಗ್ವೇಶ್ ಅಮಾನತು, ಭಾರೀ ದಂಡ

    ಆಕಾಂಕ್ಷ ಸಾವಿಗೆ ಯೂನಿವರ್ಸಿಟಿಯ ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ(Bijil Mathew) ಕಾರಣ ಎಂದು ಜಲಂಧರ್ ಪೊಲೀಸ್ ಠಾಣೆಗೆ ಆಕಾಂಕ್ಷ ಹೆತ್ತವರು ದೂರು ನೀಡಿದ್ದರು. ಆಕಾಂಕ್ಷ ಮೊಬೈಲ್ ಪಡೆದು ತನಿಖೆ ನಡೆಸಿರುವ ಪೊಲೀಸರಿಗೆ ಸಾವಿಗೂ ಮುನ್ನ ಆಕಾಂಕ್ಷ, ಬಿಜಿಲ್ ಮಾಥ್ಯೂಗೆ ತಾನು ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಮೆಸೇಜ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ; ಕುಮಟಾ-ಸಿದ್ದಾಪುರ ರಸ್ತೆ ಜಲಾವೃತ

    ಅಲ್ಲದೇ ಆಕಾಂಕ್ಷ ಆತ್ಮಹತ್ಯೆಯ ಬಳಿಕ ಬಿಜಿಲ್ ಮಾಥ್ಯೂ ತಲೆಮರಿಸಿಕೊಂಡಿದ್ದ. ಇದೀಗ ಜಲಂಧರ್ ಪೊಲೀಸರು ಬಿಜಲ್ ಮ್ಯಾಥ್ಯೂನನ್ನು ಬಂಧಿಸಿದ್ದಾರೆ. ಕಾಲೇಜಿನಿಂದ ಕೂಡ ಮ್ಯಾಥ್ಯೂನನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ

    ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್‌ ಜೆಟ್ ಏರೋಸ್ಪೇಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಹೆಚ್ಚಿನ ತರಬೇತಿಗೆ ಜರ್ಮನಿಗೆ ತೆರಳಲು ತಯಾರಿ ನಡೆಡಸಿದ್ದ ಆಕಾಂಕ್ಷ ಕೆಲವು ಶೈಕ್ಷಣಿಕ ದಾಖಲೆಗಳನ್ನು ಶುಕ್ರವಾರ ಪಂಜಾಬ್‌ನ(Panjab) ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದಳು. ಬಳಿಕ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಇದನ್ನೂ ಓದಿ: 1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್

    ಆಕಾಂಕ್ಷಗೆ ತಾನು ಓದುತ್ತಿದ್ದ ಯೂನಿವರ್ಸಿಟಿಯ ಪ್ರೊಫೆಸರ್ ಕೇರಳದ ಕೊಟ್ಟಾಯಂ ನಿವಾಸಿ ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂ ಜೊತೆ ಪ್ರೇಮಾಂಕುರವಾಗಿತ್ತು. ಅಲ್ಲದೇ ಮ್ಯಾಥ್ಯೂ ಜೊತೆ ಆತನ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಆಕಾಂಕ್ಷ ಜಗಳ ಮಾಡಿದ್ದಳು. ಬಳಿಕ ಕಾಲೇಜಿನಲ್ಲೂ ಜಗಳ ಮಾಡಿ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.

  • ಮಹಾರಾಣಿ ಕಾಲೇಜು ಆವರಣದಲ್ಲಿ ಅಪಘಾತ – ವಿದ್ಯಾರ್ಥಿಗಳಿಗೆ ಪ್ರೊಫೆಸರ್ ಕಾರು ಡಿಕ್ಕಿ

    ಮಹಾರಾಣಿ ಕಾಲೇಜು ಆವರಣದಲ್ಲಿ ಅಪಘಾತ – ವಿದ್ಯಾರ್ಥಿಗಳಿಗೆ ಪ್ರೊಫೆಸರ್ ಕಾರು ಡಿಕ್ಕಿ

    ಬೆಂಗಳೂರು: ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿಗಳಿಗೆ (Students) ಪ್ರೊಫೆಸರ್ (Professor) ಒಬ್ಬರ ಕಾರು (Car) ಡಿಕ್ಕಿ ಹೊಡೆದಿರುವ ಘಟನೆ ಮಹಾರಾಣಿ ಕ್ಲಸ್ಟರ್ ಯೂನಿವರ್ಸಿಟಿಯಲ್ಲಿ (Maharani College)  ನಡೆದಿದೆ.

    ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ವೇಗವಾಗಿ ಬಂದ ಇಂಗ್ಲಿಷ್ ಪ್ರೊಫೆಸರ್ ನಾಗರಾಜ್ ಅವರ ಕಾರು ಒಬ್ಬರು ಶಿಕ್ಷಕಿ ಸೇರಿದಂತೆ ಕೆಲ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ನಟ ನಾಗಭೂಷಣ್ ಕಾರು ಅಪಘಾತ: ಪೊಲೀಸರ ಕೈ ಸೇರಿದ ಮತ್ತೊಂದು ವರದಿ

    ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಅಶ್ವಿನಿ, ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ನಂದು ಪ್ರಿಯಾ ಹಾಗೂ ಮ್ಯೂಸಿಕ್ ಟೀಚರ್ ಜ್ಯೋತಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರಾಣಿ ಕಡಿತಕ್ಕೆ ಒಳಗಾದವರಿಗೆ ಉಚಿತ ಚಿಕಿತ್ಸೆ ನೀಡಿ: ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಗ್ರ ಸಂಘಟನೆಗೆ ಬೆಂಬಲ ಆರೋಪ – ಪ್ರೊಫೆಸರ್ ಮನೆ ಮೇಲೆ NIA ದಾಳಿ

    ಉಗ್ರ ಸಂಘಟನೆಗೆ ಬೆಂಬಲ ಆರೋಪ – ಪ್ರೊಫೆಸರ್ ಮನೆ ಮೇಲೆ NIA ದಾಳಿ

    ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳಿಗೆ ನಿಧಿ (Terror Funding) ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ತಂಡ ಮಂಗಳವಾರ ಬೆಳ್ಳಂಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir)ದಾಳಿ ನಡೆಸಿದೆ.

    ಬೆಳಗ್ಗೆಯೇ ಕಾರ್ಯಾಚರಣೆ ಶುರು ಮಾಡಿರುವ ಎನ್‌ಐಎ (NIA) ಪೂಂಚ್, ರಜೌರಿ, ಪುಲ್ವಾಮಾ, ಶೋಪಿಯಾನ್, ಶ್ರೀನಗರ, ಬುದ್ಗಾಮ್ ಮತ್ತು ಬಂಡಿಪೋರಾ ಜಿಲ್ಲೆಗಳಲ್ಲಿ ಪೊಲೀಸರು (Police) ಮತ್ತು ಅರೆಸೈನಿಕ ಸಿಬ್ಬಂದಿಯ ನೆರವಿನೊಂದಿಗೆ ದಾಳಿ ನಡೆಸಿದೆ. ಇದನ್ನೂ ಓದಿ: 856 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಉಜ್ಜಯಿನಿ ದೇಗುಲ ಇಂದು ಲೋಕಾರ್ಪಣೆ

    ಇದೇ ವೇಳೆ ಧಾರ್ಮಿಕ ಮುಖಂಡರಾದ (Religious Leader) ದಾರುಲ್ ಉಲೂಮ್ ರಹೀಮಿಯಾ ಬಂಡಿಪೋರಾ, ಮೌಲಾನಾ ರೆಹಮತ್ ಉಲ್ಲಾ ಖಾಸ್ಮಿ ಹಾಗೂ ಎನ್‌ಐಟಿ ಶ್ರೀನಗರದ ಪ್ರೊಫೆಸರ್ (Professor) ಸಮಮ್ ಅಹ್ಮದ್ ಲೋನ್ ಅವರ ಮನೆಗಳ ಮೇಲೆ ನಡೆಸಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಇದನ್ನೂ ಓದಿ: ಪುಟಿನ್ ಕನಸಿನ ಸೇತುವೆ ಧ್ವಂಸಗೊಳಿಸಿದ್ದಕ್ಕೆ ಕೆರಳಿದ ರಷ್ಯಾ – ಉಕ್ರೇನ್ ಮೇಲೆ ಮತ್ತಷ್ಟು ತೀವ್ರ ದಾಳಿ

    ಇತ್ತೀಚೆಗೆ ದೇಶದ 15 ರಾಜ್ಯಗಳಲ್ಲಿ 93 ಕಡೆ ದಾಳಿ ನಡೆಸಿ ನೂರಾರು ಪಿಎಫ್‌ಐ ಕಾರ್ಯಕರ್ತರು, ಮುಖ್ಯಸ್ಥರನ್ನು ಬಂಧಿಸಿದ್ದ ಎನ್‌ಐಎ ತಂಡ ಇದೀಗ ಮತ್ತೆ ತನ್ನ ಅಬ್ಬರ ಶುರು ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನಲ್ಲಿ ಮಹಿಳಾ ಪ್ರೊಫೆಸರ್ ಆತ್ಮಹತ್ಯೆ

    ಬೆಂಗಳೂರಿನಲ್ಲಿ ಮಹಿಳಾ ಪ್ರೊಫೆಸರ್ ಆತ್ಮಹತ್ಯೆ

    ಬೆಂಗಳೂರು: ಮಹಿಳಾ ಪ್ರೊಫೆಸರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜ್ಞಾನಜ್ಯೋತಿ ನಗರದ ಕದಂಬ ಲೇಔಟ್‍ನಲ್ಲಿ ನಡೆದಿದೆ.

    ಮೃತರನ್ನು ಚೈತ್ರಾ ಎಂದು ಗುರುತಿಸಲಾಗಿದೆ. ಇವರು ಖಾಸಗಿ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಚೈತ್ರಾ ಡೆತ್ ನೋಟ್ ಬರೆದಿದ್ದು, ಇದೀಗ ಇದನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ. ನಾನು ಕಾಯಿಲೆಯಿಂದ ಬಳಲುತ್ತಿದ್ದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರು ಡೆತ್ ನೋಟ್‍ನಲ್ಲಿ ಉಲ್ಲೇಖಿಸಿದ್ದಾರೆ.

    CRIME

    ಚೈತ್ರಾ ಅವರು 23 ವರ್ಷದ ಹಿಂದೆ ಗುರುಪ್ರಸಾದ್ ಅವರನ್ನು ವರಿಸಿದ್ದಾರೆ. ಚೈತ್ರಾ ಪತಿ ಸಿ.ಟಿ ಗುರುಪ್ರಸಾದ್ ಅವರು ಶಿಗ್ಗಾವಿಯಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದಲ್ಲಿ ರಿಜಿಸ್ಟಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತಿ ಹಾವೇರಿಯಲ್ಲಿರಬೇಕಾದರೆ ಚೈತ್ರಾ ಅವರು ಕದಂಬ ಲೇಔಟ್‍ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಗೊಟಬಯ ರಾಜಪಕ್ಸೆಗೆ ಶಾಕ್ ಕೊಟ್ಟ ಸಿಂಗಾಪುರ – ದೇಶ ಬಿಟ್ಟು ಹೊರಡಿ ಎಂದು ಖಡಕ್ ಸೂಚನೆ

    ಇತ್ತ ಪತಿ ಎಂದಿನಂತೆ ಕರೆ ಮಾಡಿದಾಗ ಚೈತ್ರಾ ಕಾಲ್ ಸ್ವೀಕರಿಸಲಿಲ್ಲ. ಕೂಡಲೇ ಗುರುಪ್ರಸಾದ್ ಅವರು ಚೈತ್ರಾ ಸಹೋದರನಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮನೆಗೆ ಬಂದ ಚೈತಾ ಸಹೋದರ ಬಾಗಿಲು ಮುರಿದು ನೋಡಿದಾಗ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಚೈತ್ರಾ ಶವ ಪತ್ತೆಯಾಗಿದೆ.

    ಘಟನೆ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ವೀರ ಮದಕರಿ ನಾಯಕ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ – ಪ್ರೊಫೆಸರ್ ಕ್ಷಮೆಯಾಚನೆ

    ವೀರ ಮದಕರಿ ನಾಯಕ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ – ಪ್ರೊಫೆಸರ್ ಕ್ಷಮೆಯಾಚನೆ

    ಬೆಳಗಾವಿ: ಸೋಶಿಯಲ್ ಮೀಡಿಯಾದಲ್ಲಿ ವೀರ ಮದಕರಿ ನಾಯಕನ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚನೆ ಮಾಡಿದ್ದಾರೆ.

    ಬೆಳಗಾವಿ ನಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜು ಪ್ರೊಫೆಸರ್ ಅಭಿಜಿತ್ ಬೈಕೇರಿಕರ್ ಕ್ಷಮಾಪಣೆ ಕೇಳಿದ್ದಾರೆ. ಪ್ರಕರಣದ ಹಿನ್ನೆಲೆ ನೋಡೋದಾದ್ರೆ ಬೆಳಗಾವಿ ನಗರದ ಆರ್‌ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕರ ಹೆಸರಿಡುವಂತೆ ಕೆಲ ಸಂಘಟನೆಗಳು ಸರ್ಕಾರಕ್ಕೆ ಆಗ್ರಹಿಸಿದ್ದವು.

    ನಡೆದಿದ್ದೇನು?
    ಈ ಸಂದರ್ಭದಲ್ಲಿ ಪ್ರೊಫೆಸರ್ ಅಭಿಜಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬೆಳಗಾವಿಗೂ ವೀರಮದಕರಿ ನಾಯಕರಿಗೂ ಸಂಬಂಧ ಏನು? ಅಂತಾ ಪ್ರಶ್ನೆ ಮಾಡಿದ್ದರು. ಪ್ರೊಫೆಸರ್ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶಕ್ಕೆ ಗುರಿಯಾಗಿತ್ತು. ‘Remove_Abhijeet’ ಹ್ಯಾಷ್‍ಟ್ಯಾಗ್‍ನಲ್ಲಿ ನೆಟ್ಟಿಗರು ಅಭಿಯಾನ ಆರಂಭಿಸಿದ್ದರು. ಇದನ್ನೂ ಓದಿ: ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಹತ್ತಕ್ಕೂ ಹೆಚ್ಚು ಜನರಿಗೆ ಗಾಯ 

    ಅಭಿಜಿತ್ ಅವರ ವಿರುದ್ಧ ಕ್ರಮಕ್ಕೆ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟ ಆಗ್ರಹ ಮಾಡಿತ್ತು. ಈ ಸಂಬಂಧ ಕಾಲೇಜು ಪ್ರಾಂಶುಪಾಲರನ್ನು ಭೇಟಿಯಾಗಿ ಸಂಘಟನೆ ಸದಸ್ಯರು ಮನವಿ ಮಾಡಿಕೊಂಡಿದ್ದರು. ಇತ್ತ ಸಂಘಟನೆ ಒತ್ತಾಯದ ಬೆನ್ನಲ್ಲೇ ಅಭಿಜಿತ್ ಬೈಕೇರಿಕರ್ ಕ್ಷಮೆಯಾಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರೊಫೆಸರ್ ನಾಗರಾಜ್ ಮನೆಗೆ ಆಗಾಗ್ಗೆ ಹೋಗ್ತಿದ್ದೆ – ಪ್ರಶ್ನೆ ಪತ್ರಿಕೆ ಲೀಕ್ ಒಪ್ಕೊಂಡ ಸೌಮ್ಯಾ

    ಪ್ರೊಫೆಸರ್ ನಾಗರಾಜ್ ಮನೆಗೆ ಆಗಾಗ್ಗೆ ಹೋಗ್ತಿದ್ದೆ – ಪ್ರಶ್ನೆ ಪತ್ರಿಕೆ ಲೀಕ್ ಒಪ್ಕೊಂಡ ಸೌಮ್ಯಾ

    ಬೆಂಗಳೂರು: ಅಸಿಸ್ಟೆಂಟ್ ಫ್ರೊಫೆಸರ್ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣ ಸಂಬಂಧ ತನ್ನ ತಪ್ಪನ್ನು ಆರೋಪಿ ಸೌಮ್ಯಾ ಒಪ್ಪಿಕೊಂಡಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಭೂಗೋಳ ಶಾಸ್ತ್ರ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ ತಂಡದಲ್ಲಿದ್ದ ನಾಗರಾಜ್ ಮನೆಗೆ ಆಗಾಗ ಹೋಗುತ್ತಿದ್ದಾಗಿ ಆರೋಪಿ ಸೌಮ್ಯ ವಿಚಾರಣೆಯ ವೇಳೆ ಒಪ್ಪಿಕೊಂಡಿದ್ದಾಳೆ. ನಾಗರಾಜ್ ಬಳಿ ಇದ್ದ ಬುಕ್ಸ್ ಗಳನ್ನ ಓದುವುದು ಮಾಡ್ತಿದ್ದೆ. ಅವರು ಪ್ರಶ್ನೆ ಪೇಪರ್ ತಯಾರು ಮಾಡುವ ಕಮಿಟಿಯಲ್ಲಿರೋದು ಗೊತ್ತಿತ್ತು ಎಂದಿದ್ದಾಳೆ.

    ನಾಗರಾಜ್ ಟೇಬಲ್ ಮೇಲೆ ಕ್ವೆಶ್ಚೆನ್ ಪೇಪರ್ ನ ಎನ್ವಲಪ್ ಇತ್ತು. ನಾನು ಯಾರಿಗೂ ಗೊತ್ತಾಗದ ಹಾಗೆ ಫೋಟೋ ತೆಗೆದುಕೊಂಡು ಬಂದಿದ್ದೆ. ಮರುದಿನ ಕಾಲೇಜಿನ ಬಳಿ ಫ್ರೊಫೆಸರ್ ತಂಗಿ ಮಗಳು ಕುಸುಮಾಗೆ ಪ್ರಶ್ನೆ ಪತ್ರಿಕೆ ಫೋಟೋ ಕಾಪಿ ಕಳಿಸುವಂತೆ ಹೇಳಿದ್ದೆ. ಆಕೆ ಕೂಡ ಕೆಲವೊಂದು ಪ್ರಶ್ನೆಗಳ ಫೋಟೋ ಕಳುಹಿಸಿದ್ದಳು. ಹೀಗೆ ಕ್ವೆಶ್ಚೆನ್ ಪೇಪರ್ ಲೀಕ್ ಹಿಂದಿನ ಇಂಚಿಂಚು ಮಾಹಿತಿಯನ್ನ ಎಳೆ ಎಳೆಯಾಗಿ ಪೊಲೀಸರ ಮುಂದೆ ಸೌಮ್ಯ ಬಿಚ್ಚಿಟ್ಟಿದ್ದಾಳೆ. ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣ- ಪ್ರೊಫೆಸರ್ ನಾಗರಾಜ್ ಅರೆಸ್ಟ್

    ಸದ್ಯ ಸೌಮ್ಯ ಹೇಳಿಕೆ ಹಾಗೂ ಪ್ರೊಫೆಸರ್ ಹೇಳಿಕೆಯನ್ನ ಹೋಲಿಕೆ ಮಾಡಿ ನೋಡಿರುವ ಪೊಲೀಸರು ಸೌಮ್ಯಳೇ ಕೆಲ ಕ್ವೆಶ್ಚೆನ್ಸ್ ಗಳನ್ನ ಪ್ರೊಫೆಸರ್ ಗೆ ಕಳಿಸಿರುವ ಬಗ್ಗೆ ಸಹ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಅಕ್ರಮ – ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಎತ್ತಂಗಡಿ

  • ನನ್ನ ಹೆಸರಿಟ್ಟಿದ್ದಕ್ಕೇ ಒಂದೊಂದು ಕಥೆ ಕಟ್ಟಿದ್ದರು ಅಪ್ಪ, ಅಮ್ಮ: ರಾಹುಲ್

    ನನ್ನ ಹೆಸರಿಟ್ಟಿದ್ದಕ್ಕೇ ಒಂದೊಂದು ಕಥೆ ಕಟ್ಟಿದ್ದರು ಅಪ್ಪ, ಅಮ್ಮ: ರಾಹುಲ್

    ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಉಪನಾಯಕನಾಗಿರುವ ಕನ್ನಡಿಗ ಕೆ.ಎಲ್.ರಾಹುಲ್ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ನೂತನವಾಗಿ ಸೇರ್ಪಡೆಗೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದಾರೆ. ಅಲ್ಲದೇ, ಸುಮಾರು ಮೂರು ವರ್ಷ ಕಿಂಗ್ಸ್ ಪಂಜಾಬ್ ತಂಡದ ನಾಯಕನಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಸದಾ ಬ್ಯೂಸಿ ಶೆಡ್ಯೂಲ್‌ನಲ್ಲಿರುವ ಕೆ.ಎಲ್.ರಾಹುಲ್ ಬ್ರೇಕ್‌ಫಾಸ್ಟ್ ವಿಥ್ ಚಾಂಪಿಯನ್ಸ್ ಎಂಬ ಟಾಕ್ ಶೋ ನಲ್ಲಿ ತಮ್ಮ ಜೀವನದ ಸಿಹಿ-ಕಹಿ ಅನುಭವಗಳನ್ನು ಹಂಚಿಕೊAಡಿದ್ದಾರೆ. ಕ್ರಿಕೆಟ್ ಜೀವನಕ್ಕೆ ಕಾಲಿಟ್ಟ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಜೀನವದಲ್ಲಿ ನಡೆದ ಇಂಟರೆಸ್ಟಿಂಗ್ ಸಂಗತಿಗಳನ್ನು ಮಾಧ್ಯಮದಲ್ಲಿ ಹೇಳಿಕೊಂಡಿದ್ದಾರೆ.

    KLR

    ಮಾತನಾಡುತ್ತಾ, ಒಂದೊಮ್ಮೆ ನಾನು ನನ್ನ ಅಮ್ಮನನ್ನು ಕೇಳಿದೆ ನನಗೇಕೆ ರಾಹುಲ್ ಎಂದು ಹೆಸರಿಟ್ಟಿದ್ದು? ಅಂತ, ಅದಕ್ಕೆ ನನ್ನಮ್ಮ ಒಂದು ಕಥೆಯನ್ನೇ ಹೇಳಿಬಿಟ್ಟರು. ಅವರು ಶಾರುಖ್ ಖಾನ್‌ಗೆ ದೊಡ್ಡ ಅಭಿಮಾನಿಯಾಗಿದ್ದರಂತೆ, 90ರ ದಶಕದಲ್ಲಿ ಶಾರುಖ್ ಅವರು ನಟಿಸುವ ಸಿನಿಮಾದ ಪಾತ್ರಗಳಿಗೆಲ್ಲ ರಾಹುಲ್ ಹೆಸರೇ ಬಹುತೇಕವಾಗಿ ಇರುತ್ತಿತ್ತಂತೆ. ಹಾಗಾಗಿ ನನಗೂ ಅದೇ ಹೆಸರು ಇಟ್ಟೆವು ಎಂದು ಹೇಳಿದ್ದರು. ನಾನು ಇದು ವಾಸ್ತವವೇ ಇರಬೇಕೆಂದು ನಂಬಿಕೊಂಡಿದ್ದೆ. ಈ ನಡುವೆ ನನ್ನ ಗೆಳೆಯನೊಬ್ಬ ನನ್ನ ಹೆಸರಿನ ಬಗ್ಗೆ ಕೇಳಿದಾಗ ನಾನೂ ಹೀಗೆ ಹೇಳಿದ್ದೆ. ಅವನು ಸ್ವಲ್ಪ ಶಾರುಖ್ ಖಾನ್ ಸಿನಿಮಾಗಳನ್ನೆಲ್ಲ ನೋಡಿಕೊಂಡಿದ್ದಂತೆ ಕಾಣುತ್ತದೆ. ಇದನ್ನೂ ಓದಿ: ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು

    ತಕ್ಷಣ ರಾಹುಲ್ ಹೆಸರಿನಲ್ಲಿ ಶಾರೂಖ್ ಪಾತ್ರ ಮಾಡಿದ್ದು 1994ರಲ್ಲಿ, ನೀನು ಹುಟ್ಟಿದ್ದು 1992ರಲ್ಲಿ. ಹೀಗಿದ್ದ ಮೇಲೆ ರಾಹುಲ್ ಹೆಸರನ್ನು ನಿನಗೆ ಇಡಲು ಹೇಗೆ ಸಾಧ್ಯವಾಯಿತು? ಎಂದು ಕೇಳಿದ. ನನಗೂ ಅದು ಹೌದೆಂದು ಖಾತ್ರಿಯಾಯಿತು. ಮತ್ತೆ ಅಮ್ಮನಿಗೊಮ್ಮೆ ಕೇಳಿದೆ. ಅದಕ್ಕವರು ಏನೋ ಇರಬಹುದು, ಅದಕ್ಕೆಲ್ಲ ಈಗ ಯಾರು ತಲೆಕೆಡಿಸಿಕೊಳ್ಳುತ್ತಾರೆ? ಎಂದುಬಿಟ್ಟರು. ಇನ್ನು ನಮ್ಮಪ್ಪನಿಗೆ ಕೇಳಿದ್ದಕ್ಕೆ ಅವರು ಇನ್ನೊಂದು ಬ್ರಹ್ಮಾಂಡ ಕಥೆಯನ್ನೇ ಹೇಳಿದರು. ಅವರು ಸುನಿಲ್ ಗಾವಸ್ಕರ್ ಅಭಿಮಾನಿಯಾಗಿದ್ದರಂತೆ. ಗಾವಸ್ಕರ್ ತಮ್ಮ ಪುತ್ರನಿಗೆ ರೋಹನ್ ಎಂದು ಹೆಸರಿಟ್ಟಿದ್ದರು. ಆದ್ದರಿಂದ ನನಗೂ ಅದೇ ಹೆಸರನ್ನಿಡಲು ಅಪ್ಪ ಬಯಸಿದ್ದರಂತೆ. ಆದರೆ ಅವರು ರೋಹನ್ ಹೆಸರನ್ನು ರಾಹುಲ್ ಎಂದು ತಪ್ಪುತಿಳಿದು ಹಾಗೆಯೇ ಇಟ್ಟುಬಿಟ್ಟರಂತೆ ಎಂದು ಮುಗುಳ್ನಕ್ಕರು.

    KL RAhul

    ವಿಜ್ಞಾನ ತೆಗೆದುಕೊಂಡರೆ ಕ್ರಿಕೆಟ್ ಆಡಲು ಕಷ್ಟ
    ನನ್ನ ತಂದೆ-ತಾಯಿ ವೃತ್ತಿಯಲ್ಲಿ ಪ್ರೊಫೆಸರ್. ಸಾಲದ್ದಕ್ಕೆ ಕುಟುಂಬದಲ್ಲಿ ಯಾರನ್ನೇ ನೋಡಿದರೂ ಒಂದು ವೈದ್ಯರು, ಇಲ್ಲವೇ ಎಂಜಿನಿಯರ್‌ಗಳಾಗಿದ್ದರು ಅಥವಾ ದೊಡ್ಡದೊಡ್ಡ ಉದ್ಯೋಗದಲ್ಲಿದ್ದರು. ನಾನು ಸಹ 10ನೇ ತರಗತಿಯವರೆಗೆ ಉತ್ತಮ ವಿದ್ಯಾರ್ಥಿಯೇ ಆಗಿದ್ದೆ. ಅದು ಮುಗಿದ ಕೂಡಲೇ ಮುಂದಿನ ಶಿಕ್ಷಣಕ್ಕೆ ವಿಜ್ಞಾನವೋ, ವಾಣಿಜ್ಯವೋ ಎಂಬ ಗೊಂದಲ ಶುರುವಾಗಿತ್ತು. ನನ್ನ ಕುಟುಂಬದಲ್ಲಿ ಯಾರೂ, ಎಂದೂ ವಾಣಿಜ್ಯಶಾಸ್ತ್ರ  ತೆಗೆದು ಕೊಂಡಿರಲಿಲ್ಲ. ಆ ವಿಷಯ ತೆಗೆದುಕೊಂಡರೆ ಅವಮಾನವೆಂಬಂತೆ ಅವರು ಭಾವಿಸಿದ್ದರು. ಆದರೆ ನಾನು ಮಾತ್ರ ವಿಜ್ಞಾನ ತೆಗೆದುಕೊಂಡು ಜೊತೆಜೊತೆಗೇ ಕ್ರಿಕೆಟ್ ಆಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ. ಅವರು ಅದನ್ನು ಅರ್ಥ ಮಾಡಿಕೊಂಡರು ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: IPL ಮೊದಲ ಪಂದ್ಯದಲ್ಲೇ ವಿಲಿಯಮ್ಸನ್‌ಗೆ 12 ಲಕ್ಷ ದಂಡ: ಕಾರಣ ಇಷ್ಟೇ… 

    rahul

    ಅಮ್ಮ ಈಗಲೂ ಬೈಯುತ್ತಾರೆ
    ನನ್ನಮ್ಮ ಈಗಲೂ ನೀನು ಪದವಿ ಪೂರೈಸಿಲ್ಲ ಎಂದು ಬೈಯ್ಯುತ್ತಾರೆ. ಲಾಕ್‌ಡೌನ್ ಆಗಿದ್ದಾಗಲೂ ನಿನೇಕೆ ಪಟ್ಟು ಹಿಡಿದು ಓದಬಾರದು? 30 ವಿಷಯ ಓದು ಮುಗಿಸಲು ಏನು ಕಷ್ಟ? ಎಂದು ಗರಿದ್ದರು. ಅದಕ್ಕೆ ನಾನು, ಅಮ್ಮ ನಾನು ಕ್ರಿಕೆಟ್ ಆಡುತ್ತಿದ್ದೇನೆ, ಪ್ರದರ್ಶನ ಚೆನ್ನಾಗಿಯೇ ಇದೆ. ಈಗ ನಾನು 30 ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಬರೀಬೇಕಾ? ವಿದ್ಯೆ ನನಗೆ ಅತ್ತುತ್ತಿಲ್ಲ ಏನು ಮಾಡಲಿ ಹೇಳು? ಎಂದು ಪ್ರಶ್ನಿಸಿದ್ದೆ. ಸಹಜವಾಗಿಯೇ ಹೌದೆಂದುಬಿಟ್ಟರು ಅಮ್ಮ. ನಾನು ಭಾರತ ಕ್ರಿಕೆಟ್ ತಂಡಕ್ಕೆ ಸೇರಿದಾಗಲೂ ಅಮ್ಮನಿಗೆ ಹೆಚ್ಚೆನು ಖುಷಿಯಿರಲಿಲ್ಲ. ಅದಾದ 4 ವರ್ಷ ನಾನು ಕ್ರಿಕೆಟ್ ಆಡಿ ಹೆಸರು ಮಾಡಿದ್ದೆ. ಆಮೇಲೆ ನನಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ (RBI) ಕೆಲಸ ಸಿಕ್ಕಿತು. ನನಗೆ ಕೇಂದ್ರ ಸರ್ಕಾರದ ನೌಕರಿ ಸಿಕ್ಕಿದ್ದಾಗ ಅವರು ಬಹಳ ಖುಷಿಪಟ್ಟಿದ್ದರು. ಪರ್ವಾಗಿಲ್ಲ ಇನ್ನು ನಿನಗೆ ಒಳ್ಳೆಯ ಸಂಬಳ ಸಿಗುತ್ತದೆ, ಜೀವನದಲ್ಲಿ ಒಂದು ನೆಲೆ ಕಂಡುಕೊಂಡೆ ಎಂಬಂತಿತ್ತು ಅವರ ಭಾವ ಎಂದು ಭಾವುಕರಾದರು.

     

  • ಬೆಂಗಳೂರು ಯೂನಿವರ್ಸಿಟಿ ನಿವೃತ್ತ ಪ್ರೊಫೆಸರ್ ನೇಣಿಗೆ ಶರಣು

    ಬೆಂಗಳೂರು ಯೂನಿವರ್ಸಿಟಿ ನಿವೃತ್ತ ಪ್ರೊಫೆಸರ್ ನೇಣಿಗೆ ಶರಣು

    ಬೆಂಗಳೂರು: ನಿವೃತ್ತ ಪ್ರೊಫೆಸರೊಬ್ಬರು ನೇಣಿಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಮೈಕೋ ಲೇಔಟ್ ನಲ್ಲಿ ನಡೆದಿದೆ.

    ಅಶೋಕ್ ಕುಮಾರ್ ನೇಣಿಗೆ ಶರಣಾದ ರಿಟೈರ್ಡ್ ಪ್ರೊಫೆಸರ್. ಮೈಕೋ ಲೇಔಟ್ ನ ಕೆಎಎಸ್ ಕಾಲೋನಿಯಲ್ಲಿ ವಾಸವಾಗಿದ್ದ ಇವರು ಬೆಂಗಳೂರು ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡಿದ್ದರು. ಇಂದು ಮೈಕೋಲೇಔಟ್ ಠಾಣಾ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

    ಮೂಲತಃ ಶಿವಮೊಗ್ಗದವರಾಗಿರುವ ಅಶೋಕ್, ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ನಂತರ ಬೆಂಗಳೂರಿನ ಯ್ಯೂನಿರ್ವಸಿಟಿಯಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಅಶೋಕ್, ರಾತ್ರಿ ಹನ್ನೆರಡು ಗಂಟೆವರೆಗೂ ಪತ್ನಿ ಜೊತೆಗೆ ಮಾತಾಡುತ್ತಿದ್ದರು. ಆದರೆ ಬೆಳಗ್ಗಿನ ಜಾವ 7 ಗಂಟೆ ಸುಮಾರಿಗೆ ರೂಮ್ ಬಾಗಿಲು ತೆರೆದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ.

    ಮೈಕೋಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಅಶೋಕ್. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಂಜೆ ವೇಳೆ ಬೆಂಗಳೂರಿನಲ್ಲೇ ಅಂತ್ಯಕ್ರಿಯೆ ಮಾಡಲು ತಿರ್ಮಾನ ಮಾಡಲಾಗಿದೆ.

    ಅಶೋಕ್ ಅವರಿಗೆ ಅನಾರೋಗ್ಯ, ಹಣಕಾಸಿನ ಯಾವುದೇ ಸಮಸ್ಯೆ ಇರಲಿಲ್ಲ. ಹೀಗಾಗಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಈ ಸಂಬಂಧ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಗಿದೆ.

  • ಪ್ರೊಫೆಸರ್ ಕೆಲಸ ಬಿಟ್ಟು ಫಿಶ್ ಫ್ರೈ ಮಾರಾಟ- ತಿಂಗಳಿಗೆ 1 ಲಕ್ಷ ರೂ. ಸಂಪಾದನೆ

    ಪ್ರೊಫೆಸರ್ ಕೆಲಸ ಬಿಟ್ಟು ಫಿಶ್ ಫ್ರೈ ಮಾರಾಟ- ತಿಂಗಳಿಗೆ 1 ಲಕ್ಷ ರೂ. ಸಂಪಾದನೆ

    – ಮೆಕ್ಯಾನಿಕಲ್ ಎಂಜಿನಿಯರಿಂಗ್‍ನಲ್ಲಿ ಪದವಿ

    ಚೆನ್ನೈ: ತಮಿಳುನಾಡಿನಲ್ಲಿ ವ್ಯಕ್ತಿಯೊಬ್ಬರು ಪ್ರೊಫೆಸರ್ ಕೆಲಸ ಬಿಟ್ಟು ಫಿಶ್ ಫ್ರೈ ಮಾರಾಟ ಮಾಡಿ ತಿಂಗಳಿಗೆ ಒಂದು ಲಕ್ಷ ರೂ. ಸಂಪಾದಿಸುತ್ತಿದ್ದಾರೆ.

    27 ವರ್ಷದ ಮೋಹನ್ ಕುಮಾರ್ ತಮಿಳುನಾಡಿನ ಕರೂರ್ ನಿವಾಸಿಯಾಗಿದ್ದು, ಅವರ ಕುಟುಂಬಸ್ಥರು ಮೀನಿನ ವ್ಯವಹಾರ ನಡೆಸುತ್ತಿದ್ದು, ಅದಕ್ಕಾಗಿ ಮೋಹನ್ ತಮ್ಮ ಪ್ರೊಫೆಸರ್ ಕೆಲಸವನ್ನು ಬಿಟ್ಟಿದ್ದಾರೆ. ಮೋಹನ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದು, ಕರೂರ್ ಖಾಸಗಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು.

    ಪಲಾನಿವೇಲ್ ಹಾಗೂ ಸೆಲ್ವಿ ರಾಣಿ, ಮೋಹನ್ ಅವರ ತಂದೆ-ತಾಯಿ ಆಗಿದ್ದು, ಗಾಂಧಿಗ್ರಾಮದಲ್ಲಿ ಫಿಶ್ ಫ್ರೈ ಅಂಗಡಿ ಇಟ್ಟುಕೊಂಡಿದ್ದಾರೆ. ಮೋಹನ್ ಅವರಿಗೆ ಪ್ರೊಫೆಸರ್ ಕೆಲಸ ಬದಲು ಮೀನು ಫೈ ಮಾಡಿ ಮಾರಾಟ ಮಾಡುವುದರಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು.

    ಈ ಬಗ್ಗೆ ಮೋಹನ್ ಮಾತನಾಡಿ, ಕಾಲೇಜು ಮುಗಿದ ನಂತರ ನಾನು ನನ್ನ ಪೋಷಕರಿಗೆ ಸಹಾಯ ಮಾಡುತ್ತಿದ್ದೆ. ಆದರೆ ನನ್ನ ಪೋಷಕರಿಗೆ ಅದು ಇಷ್ಟವಿರಲ್ಲ. ಅವರಿಗೆ ನಾನು ಮೀನು ಮಾರಾಟ ಮಾಡುವುದು ಇಷ್ಟವಿಲ್ಲ. ನಾನು ಜೀವನದಲ್ಲಿ ಏನಾದರೂ ಸಾಧಿಸಬೇಕು ಎಂದು ತುಂಬಾ ಆಸೆ ಇಟ್ಟುಕೊಂಡಿದ್ದರು. ಅಲ್ಲದೆ ಎಂಜಿನಿಯರಿಂಗ್ ನಂತರ ನಾನು ಮೀನು ಮಾರಾಟ ಮಾಡುವುದನ್ನು ನೋಡಿ ಹಲವರು ನನಗೆ ಹುಚ್ಚ ಎಂದು ಹೇಳಿದ್ದರು. ಆದರೆ ನಾನು ನನ್ನ ಪ್ರೊಫೆಸರ್ ವೃತ್ತಿಗಿಂತ ಈ ಕೆಲಸವನ್ನು ತುಂಬಾ ಇಷ್ಟಪಡುತ್ತೇನೆ ಎಂದರು.

    ನನ್ನ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾಗ ಈ ಅಂಗಡಿಯನ್ನು ಮುಚ್ಚಬೇಕಾಯಿತು. ಆಗ ಈ ವ್ಯವಹಾರದಲ್ಲಿ ಬಂದ ಲಭ ಅದನ್ನು ನಿವಾರಿಸಲು ಸಹಾಯ ಮಾಡಿತು. ನಾನು ಈ ಕೆಲಸದಲ್ಲಿ ತುಂಬಾನೇ ಕಷ್ಟಪಟ್ಟಿದ್ದೇನೆ. ನನ್ನ ಕುಟುಂಬಸ್ಥರು ಕೂಡ ನನಗೆ ಸಹಾಯ ಮಾಡಿಲ್ಲ. ನಾನು ಮೀನುಗಳನ್ನು ಕರೂರ್‍ನ ಹಲವು ಹೋಟೆಲ್‍ಗಳಿಗೆ ಹಾಗೂ ಸಣ್ಣ ಅಂಗಡಿಗಳಿಗೆ ಎರಡು ಮೂರು ಟನ್ ಮೀನು ಹಾಗೂ ಮಾಂಸವನ್ನು ಒದಗಿಸಿ ತಿಂಗಳಿಗೆ ಸುಮಾರು 1 ಲಕ್ಷ ರೂ. ಸಂಪಾದಿಸುತ್ತೇನೆ ಎಂದು ಮೋಹನ್ ತಿಳಿಸಿದರು.