Tag: ಪ್ಲಂಬರ್

  • ಪೊಲಿಟಿಕಲ್‌ ಸೈನ್ಸ್‌ ಪದವಿಯ ಅಗತ್ಯವಿಲ್ಲ, ಇಂದು ಎಲೆಕ್ಟ್ರಿಷಿಯನ್‌ಗಳು, ಪ್ಲಂಬರ್‌ಗಳು ಅಗತ್ಯ ತುಂಬಾ ಇದೆ: ಮಸ್ಕ್‌ ವಾದಕ್ಕೆ Zoho ಸಿಇಒ ಒಪ್ಪಿಗೆ

    ಪೊಲಿಟಿಕಲ್‌ ಸೈನ್ಸ್‌ ಪದವಿಯ ಅಗತ್ಯವಿಲ್ಲ, ಇಂದು ಎಲೆಕ್ಟ್ರಿಷಿಯನ್‌ಗಳು, ಪ್ಲಂಬರ್‌ಗಳು ಅಗತ್ಯ ತುಂಬಾ ಇದೆ: ಮಸ್ಕ್‌ ವಾದಕ್ಕೆ Zoho ಸಿಇಒ ಒಪ್ಪಿಗೆ

    ನವದೆಹಲಿ: ರಾಜಕೀಯ ವಿಜ್ಞಾನಕ್ಕಿಂತ (Political Science) ಇಂದು ಎಲೆಕ್ಟ್ರಿಷಿಯನ್‌ಗಳು ಮತ್ತು ಪ್ಲಂಬರ್‌ಗಳು ಅಗತ್ಯ ಹೆಚ್ಚಿದೆ ಎಂಬ ಟೆಸ್ಲಾ ಮುಖ್ಯಸ್ಥ ಎಲೋನ್‌ ಮಸ್ಕ್‌ (Elon Musk) ಅವರ ಅಭಿಪ್ರಾಯಕ್ಕೆ ಭಾರತ ಮೂಲದ ಟೆಕ್‌ ಕಂಪನಿ ಜೋಹೊ ಸಿಇಒ ಶ್ರೀಧರ್ ವೆಂಬು (Zoho CEO Sridhar Vembu ) ಸಹಮತ ವ್ಯಕ್ತಪಡಿಸಿದ್ದಾರೆ.

    ಎಲೋನ್‌ ಮಸ್ಕ್‌ ಅವರು ಹೆಚ್ಚುತ್ತಿರುವ ರಾಜಕೀಯ ವಿಜ್ಞಾನ ವಿಷಯಗಳಿಗಿಂತ ಎಲೆಕ್ಟ್ರಿಷಿಯನ್‌ಗಳು (Electricians) ಮತ್ತು ಪ್ಲಂಬರ್‌ಗಳು (Plumbers) ಬಹಳ ಮುಖ್ಯ. ತಮ್ಮ ಕೈಯಿಂದ ಕೆಲಸ ಮಾಡುವ ಈ ಜನರ ಬಗ್ಗೆ ನನಗೆ ತುಂಬಾ ಗೌರವವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.


    ಮಸ್ಕ್‌ ಅವರ ಈ ವಿಡಿಯೋಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜೋಹೊ ಸಿಇಒ ಶ್ರೀಧರ್ ವೆಂಬು, ಎಲೆಕ್ಟ್ರಿಷಿಯನ್‌ಗಳು, ಪ್ಲಂಬರ್‌ಗಳು, ವೆಲ್ಡರ್‌ಗಳು ಮತ್ತು ನರ್ಸ್‌ಗಳು ಸೇರಿದಂತೆ ಕೈಯಲ್ಲಿ ಕೆಲಸ ಮಾಡುವ ಜನರನ್ನು ಭಾರತ ಗೌರವಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಗಮನಿಸಿ, ಭಾನುವಾರ ಪಿಡಿಒ ಪರೀಕ್ಷೆ – ಬೆಳಗ್ಗೆ 5:30 ರಿಂದ ಮೆಟ್ರೋ ಸಂಚಾರ ಆರಂಭ

    ನಮಗೆ ಹೆಚ್ಚು ಅರ್ಥಶಾಸ್ತ್ರ ಅಥವಾ ರಾಜಕೀಯ ವಿಜ್ಞಾನ ಅಥವಾ ಇತಿಹಾಸದ ಮೇಜರ್‌ಗಳ ಅಗತ್ಯವಿಲ್ಲ. ನಾನು ಇತಿಹಾಸ, ತತ್ವಶಾಸ್ತ್ರ ಮತ್ತು ಅರ್ಥಶಾಸ್ತ್ರವನ್ನು ಅಧ್ಯಯನ ಮಾಡುತ್ತೇನೆ. ಆದರೆ ಅವುಗಳಲ್ಲಿ ಯಾವುದಾದರೂ ಪದವಿ ಪಡೆಯಲು ನಾನು ಎಂದಿಗೂ ಬಯಸುವುದಿಲ್ಲ. ಹೆಚ್ಚು ಹೆಚ್ಚು ಪದವಿ ಕಾಲೇಜುಗಳನ್ನು ತೆರೆಯುವುದರಿಂದ ಕೌಶಲ್ಯ ಸಿಗುವುದಿಲ್ಲ ಮತ್ತು ಅದು ಜೀವನೋಪಾಯವನ್ನು ನೀಡುವುದಿಲ್ಲ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

  • ಬೀದಿ ನಾಯಿಗೆ ಊಟ ನೀಡಲು ಬಂದವನಿಗೆ ನರಕದ ಹಾದಿ ತೋರಿಸಿದ

    ಬೀದಿ ನಾಯಿಗೆ ಊಟ ನೀಡಲು ಬಂದವನಿಗೆ ನರಕದ ಹಾದಿ ತೋರಿಸಿದ

    ಲಕ್ನೋ: ಬೀದಿನಾಯಿಗಳು ಹಸಿವಿನಿಂದ ಬೊಗಳುತ್ತಿರುವುದನ್ನು ಕಂಡ ಪ್ಲಂಬರ್, ಅವುಗಳಿಗೆ ಆಹಾರ ನೀಡಲು ಹೋದಾಗ ತೋಟಗಾರನೊಬ್ಬ ವಿರೋಧ ವ್ಯಕ್ತಪಡಿಸಿ ಕತ್ತರಿಯಿಂದ ಇರಿದು ಕೊಂದಿರುವ ಘಟನೆ ನಡೆದಿದೆ.

    ಮುಸ್ತಾಕಿಮ್ (27) ಮೃತನಾಗಿದ್ದಾನೆ. ಈತ ಬಿಹಾರದ ಮೂಲದವನಾಗಿದ್ದಾನೆ. ಚತರ್‍ಪಾಲ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಈತ ವಿಕ್ಟೋರಿಯಾ ಪಾರ್ಕ್‍ನಲ್ಲಿ ತೋಟಗಾರನಾಗಿದ್ದ. ಬೀದಿ ನಾಯಿಗೆ ಆಹಾರ ನೀಡುತ್ತಿದ್ದಾನೆ ಎಂದು ಪ್ಲಂಬರ್ ಮುಸ್ತಾಕಿಮ್‍ಗೆ ಚಾಕುವಿನಿಂದ ಇರಿದಿದ್ದಾನೆ.


    ಪ್ಲಂಬರ್ ಮುಸ್ತಾಕಿಮ್ ಗಾಜಿಯಾಬಾದ್‍ನ ಇಂದಿರಾಪುರಂನಲ್ಲಿರುವ ಬೀದಿ ನಾಯಿಗೆ ಆಹಾರ ನೀಡಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ತೋಟದ ಮಾಲೀಕ ಅವುಗಳಿಗೆ ಆಹಾರ ನೀಡಬೇಡಿ ಎಂದು ಖ್ಯಾತೆ ತೆಗೆದಿದ್ದಾನೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಕೋಪಗೊಂಡ ತೋಟಗಾರ ಗಾರ್ಡನ್ ಕತ್ತರಿಸುವ ಕತ್ತರಿಯಿಂದ ಪ್ಲಂಬರ್ ಎದೆಗೆ ಇರಿದು ಕೊಂದಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಮ್ರಾನ್ ಖಾನ್ ಬಳಿಕ ಪಾಕ್ ಪ್ರಧಾನಿ ಆಗ್ತಾರಾ ಶೆಹಬಾಜ್ ಷರೀಫ್?

    ಗಾಯಗೊಂಡಿದ್ದ ಮುಸ್ತಾಕಿಮ್‍ನನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮುಸ್ತಾಕಿಮ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಚತರ್‍ಪಾಲ್‍ನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.