Tag: ಪ್ಲಾಸ್ಟಿಕ್ ಬಾಟಲ್

  • ಸರ್ಕಾರಿ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಸಂಪೂರ್ಣ ನಿಷೇಧ

    ಸರ್ಕಾರಿ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಸಂಪೂರ್ಣ ನಿಷೇಧ

    ಬೆಂಗಳೂರು: ರಾಜ್ಯ ಸರ್ಕಾರ ಅಧಿಕೃತ ಸಭೆ, ಸಮಾರಂಭಗಳು ಹಾಗೂ ಸರಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್‍ಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಿದೆ.

    ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ತಕ್ಷಣದಿಂದ ಜಾರಿಗೆ ಬರುವಂತೆ ಸೆ.5 ರಂದು ಆದೇಶವನ್ನು ಪ್ರಕಟಿಸಿದೆ. ರಾಜ್ಯಾದ್ಯಂತ ಸರಕಾರಿ ಸ್ವಾಮ್ಯದ ನಿಗಮ, ಮಂಡಳಿ, ವಿಶ್ವವಿದ್ಯಾಲಯ ಹಾಗೂ ಸರಕಾರಿ ಅನುದಾನದ ಯಾವುದೇ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆಯನ್ನು ನಿಷೇಧಿಸಲಾಗಿದೆ.

    ಪ್ಲಾಸ್ಟಿಕ್ ಬಾಟಲ್ ಬದಲಿಗೆ 20 ಲೀಟರ್ ಕ್ಯಾನ್ ಅಥವಾ ಹೆಚ್ಚಿನ ಸಾಮರ್ಥ್ಯದ ಕ್ಯಾನ್‍ಗಳಲ್ಲಿ ಶುದ್ಧೀಕರಿಸಿದ ಕುಡಿಯುವ ನೀರಿನ ವಿತರಣಾ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.

    ಕಚೇರಿಗಳು, ಸಭೆಗಳು ನಡೆಯುವ ಜಾಗಗಳಲ್ಲಿ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ ಗಾಜಿನ ಲೋಟ, ಸ್ಟೀಲ್ ಲೋಟ ಅಥವಾ ಪೇಪರ್ ಲೋಟದಲ್ಲಿ ನೀರು ಕುಡಿಯಲು ವ್ಯವಸ್ಥೆ ಮಾಡಬೇಕು. ಇದರಿಂದಾಗಿ ನೀರಿನ ಬಾಟಲಿ ಖರೀದಿಗೆ ಮಾಡುತ್ತಿರುವ ಖರ್ಚು ಕೂಡ ಉಳಿತಾಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ಲಾಸ್ಟಿಕ್ ನಿಷೇಧಕ್ಕೆ ಸರ್ಕಾರದ ಮತ್ತೊಂದು ಮಹತ್ವದ ಹೆಜ್ಜೆ

    ಪ್ಲಾಸ್ಟಿಕ್ ನಿಷೇಧಕ್ಕೆ ಸರ್ಕಾರದ ಮತ್ತೊಂದು ಮಹತ್ವದ ಹೆಜ್ಜೆ

    ಬೆಂಗಳೂರು: ಪ್ಲಾಸ್ಟಿಕ್ ಬ್ಯಾಗ್, ಲೋಟ ಬ್ಯಾನ್ ಆಗಿದೆ. ಈ ಎಲ್ಲ ಬೆಳವಣಿಗೆ ನಡುವೆ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಸರ್ಕಾರದ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಾಟರ್ ಬಳಕೆ ಮಾಡುವಂತಿಲ್ಲ ಎಂಬ ಕಟ್ಟುನಿಟ್ಟಿನ ಆದೇಶವನ್ನ ಹೊರಡಿಸಿದೆ.

    ಏನದು ಆದೇಶ?:
    1. ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು, ಸರ್ಕಾರದಿಂದ ಅನುದಾನ ಪಡೆಯುವಂತಹ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ-ಸಮಾರಂಭ, ಕಾರ್ಯಾಗಾರ ಸೇರಿದಂತೆ ಇತರೆ ಕಾರ್ಯಕ್ರಮಗಳಲ್ಲಿ 20 ಲೀಟರ್ ಅಥವಾ ಅದಕ್ಕೂ ಹೆಚ್ಚಿನ ಸಾಮಥ್ರ್ಯದ ಕ್ಯಾನ್‍ಗಳಲ್ಲಿ ಶುದ್ಧೀಕರಿಸಿದ ಕುಡಿಯುವ ನೀರಿನ ವಿತರಣಾ ವ್ಯವಸ್ಥೆ ಏರ್ಪಡಿಸತಕ್ಕದ್ದು.

    2. ಸರ್ಕಾರದ ಅಂಗೀಕರಿಸಲ್ಪಟ್ಟ ಸಂಸ್ಥೆಗಳಿಂದ ಖರೀದಿಸಿದ ಆರ್‍ಓ ಮತ್ತು ನೀರು ಶುದ್ಧೀಕರಣ ಘಟಕಗಳನ್ನು ಅನುಸ್ಥಾಪಿಸಿ, ಗಾಜಿನ ಲೋಟ ಅಥವಾ ಸ್ಟೀಲ್ ಲೋಟ ಅಥವಾ ಪೇಪರ್ ಲೋಟ ಅಥವಾ ಇತರೆ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ನೀರು ಕುಡಿಯುವ ವ್ಯವಸ್ಥೆ ಮಾಡುವುದು.

    3. ಎಲ್ಲ ಸರ್ಕಾರಿ ಹಾಗು ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಸೇರಿದಂತೆ ಸರ್ಕಾರದಿಂದ ಅನುದಾನ ಪಡೆಯುವಂತಹ ಸಂಸ್ಥೆಗಳ ಕಚೇರಿಗಳಲ್ಲಿ ಸಾರ್ವಜನಿಕರಿಗಾಗಿ ಶುದ್ಧ ಕುಡಿಯುವ ನೀರಿಗಾಗಿ ಕೇಂದ್ರ ಸರ್ಕಾರದ ಜಾಲತಾಣ https://gem.gov.in/ ರಲ್ಲಿ ಅನುಮೋದಿಸಲ್ಪಟ್ಟಿರುವ ಸಂಸ್ಥೆಗಳಿಂದ ಖರೀದಿಸಿದ ಅಥವಾ ಯಾವುದಾದರೂ ಉತ್ತಮ ಆರ್‍ಓ ಶುದ್ಧ ನೀರಿನ ಘಟಕಗಳನ್ನು ವ್ಯವಸ್ಥಾನಗೊಳಿಸುವುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿಯಿಂದ ಪ್ಲಾಸ್ಟಿಕ್ ಬಾಟಲಿ, ದುಂದುವೆಚ್ಚಕ್ಕೆ ಕಡಿವಾಣ!

    ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿಯಿಂದ ಪ್ಲಾಸ್ಟಿಕ್ ಬಾಟಲಿ, ದುಂದುವೆಚ್ಚಕ್ಕೆ ಕಡಿವಾಣ!

    ಚಿಕ್ಕಬಳ್ಳಾಪುರ: ಪ್ಲಾಸ್ಟಿಕ್ ಹಾಗೂ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿ ಇದೇ ಮೊದಲ ಬಾರಿಗೆ ಕೆಡಿಪಿ ಸಭೆಯಲ್ಲಿ ಮಿನರಲ್ ವಾಟರ್ ಪ್ಲಾಸ್ಟಿಕ್ ಬಾಟಲಿ ನೀಡುವ ಬದಲು ಪೇಪರ್ ಲೋಟಾ ಮೂಲಕ ನೀರು ವಿತರಣೆಗೆ ಮುಂದಾಗಿದೆ.

    ಕಳೆದ ಸಭೆಗಳಲ್ಲಿ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಭೆಯಲ್ಲಿ ಭಾಗಿಯಾಗುತ್ತಿದ್ದ ಎಲ್ಲರಿಗೂ 500 ಎಂಎಲ್ ನ ಪ್ಲಾಸ್ಟಿಕ್ ಮಿನರಲ್ ವಾಟರ್ ಬಾಟಲಿ ನೀಡಲಾಗುತ್ತಿತ್ತು.

    ಆದರೆ ಈ ಸಭೆಯಲ್ಲಿ ಜನಪ್ರತಿನಿಧಿಗಳು, ಡಿಸಿ, ಎಡಿಸಿ, ಎಸ್ಪಿ, ಹಾಗೂ ಸಿಇಓಗೆ ಗಾಜಿನ ಲೋಟದ ಮೂಲಕ ನೀರು ನೀಡಲಾಗಿದ್ದು, ಉಳಿದವರೆಲ್ಲರಿಗೂ ಪೇಪರ್ ಲೋಟದ ಮೂಲಕ ನೀರು ವಿತರಣೆ ಮಾಡಲಾಯಿತು. ಆಸಲಿಗೆ ಈ ಹಿಂದೆ ಸಭೆಯಲ್ಲೆಲ್ಲಾ ಬರೀ ಪ್ಲಾಸ್ಟಿಕ್ ಬಾಟಲಿಗಳೇ ತುಂಬಿ ಹೋಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಾಗಾಂಭಿಕಾದೇವಿ ಪ್ಲಾಸ್ಟಿಕ್ ಬಾಟಲಿಗೆ ಬ್ರೇಕ್ ಹಾಕುವಂತೆ ಆದೇಶ ಹೊರಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews