Tag: ಪ್ಲಾಸ್ಟಿಕ್ ಬ್ಯಾನ್

  • ಚಿಕ್ಕಬಳ್ಳಾಪುರ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಪಣ: ಪ್ರದೀಪ್ ಈಶ್ವರ್

    ಚಿಕ್ಕಬಳ್ಳಾಪುರ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಪಣ: ಪ್ರದೀಪ್ ಈಶ್ವರ್

    ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ಪಣ ತೊಡಲಾಗಿದೆ. ಕಾನೂನು ಮೀರಿ ಯಾರೇ ನಡೆದುಕೊಂಡರೂ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಚಿಕ್ಕಬಳ್ಳಾಪುರ (Chikkaballapura) ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಪ್ರದೀಪ್ ಈಶ್ವರ್ (Pradeep‌ Eshwar) ಎಚ್ಚರಿಕೆ ನೀಡಿದ್ದಾರೆ.

    ಚಿಕ್ಕಬಳ್ಳಾಪುರ ನಗರದ ತಾಲೂಕು ಕಚೇರಿಯಲ್ಲಿ ನೂತನ ಶಾಸಕರ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಪ್ರತಿದಿನ ಬೆಳಗ್ಗೆ 6ರಿಂದ 9 ಗಂಟೆಯವರೆಗೆ ನಮಸ್ತೆ ಚಿಕ್ಕಾಬಳ್ಳಾಪುರ ಕಾರ್ಯಕ್ರಮ ಮಾಡುತ್ತಿದ್ದೇನೆ. ಇನ್ನೂ ಜನರಿಗೆ ಹತ್ತಿರವಾಗುವ ಸಲುವಾಗಿ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಶಾಸಕರ ಕಚೇರಿಯಲ್ಲಿ ಸಹ ಜನರ ಸಮಸ್ಯೆ ಆಲಿಸುತ್ತೇನೆ ಎಂದರು. ಇದನ್ನೂ ಓದಿ: ಕಾವೇರಿ ನಿವಾಸವನ್ನು ತೊರೆದ ಯಡಿಯೂರಪ್ಪ- ಸಿಎಂಗಳಿಗೆ ಇದು ಅದೃಷ್ಟದ ಮನೆ ಯಾಕೆ?

    ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಹಳ್ಳಿಗಳಲ್ಲಿ ಮನೆ ಮನೆಗೆ ಹೋಗುತ್ತೇನೆ. ಅಲ್ಲದೇ ವಾರಕ್ಕೆ ಒಂದು ಅಥವಾ ಎರಡು ದಿನ ಪಂಚಾಯಿತಿ ಕಟ್ಟೆಯಲ್ಲಿ ಜನತಾ ದರ್ಶನ ಇಡುತ್ತೇನೆ. ನಾನು ಎಲ್ಲರನ್ನೂ ಕಾಪಾಡಿಕೊಳ್ಳುತ್ತೇನೆ. ನಗರದಲ್ಲಿ ನನ್ನದು ಸೇರಿದಂತೆ ಯಾವುದೇ ಫ್ಲೆಕ್ಸ್ಗಳು ಇರಬಾರದು. ಸರ್ಕಾರಿ ಶಾಲಾ ಕಾಲೇಜುಗಳನ್ನು ಉತ್ತಮ ರಕ್ಷಣೆಯೊಂದಿಗೆ ನಡೆಸುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಪೊಲೀಸ್ ಇಲಾಖೆಯಲ್ಲಿ ಸೆಲ್ಯೂಟ್, ಒದೆನೂ ಸಿಗುತ್ತೆ, ಗುಂಡು ಹಾರಿಸೋದು ಇರುತ್ತೆ: ಜಿ ಪರಮೇಶ್ವರ್

    ಪ್ಲಾಸ್ಟಿಕ್ (Plastic) ಅನ್ನು ಮೊದಲು ಬ್ಯಾನ್ ಮಾಡಿರುವುದು ಕರ್ನಾಟಕ. ಆದರೆ ಅದನ್ನು ಸರಿಯಾಗಿ ಜಾರಿಗೊಳಿಸಿಲ್ಲ. ರಾಜಾರೋಷವಾಗಿ ಪ್ಲಾಸ್ಟಿಕ್ ಅನ್ನು ಬಳಸುತ್ತಿದ್ದಾರೆ. ದಯವಿಟ್ಟು ಯಾರೂ ಪ್ಲಾಸ್ಟಿಕ್ ಬಳಕೆ ಮಾಡಬೇಡಿ. ಯಾರೋ 10% ವರ್ತಕರು ಮಾಡುವ ಕೆಲಸಕ್ಕೆ ಉಳಿದ 90% ವರ್ತಕರಿಗೆ ಕೆಟ್ಟ ಹೆಸರು ಬರುತ್ತಿದೆ. ಒಂದು ಸಲ ಎಚ್ಚರಿಕೆ ಕೊಡುತ್ತೇವೆ. ಪದೇ ಪದೇ ಅದೇ ತಪ್ಪನ್ನು ಮಾಡಿದರೆ ದೂರು ದಾಖಲಿಸಿ ಶಿಕ್ಷೆ ನೀಡಲಾಗುತ್ತದೆ ಎಂದು ಖಡಕ್ ವಾರ್ನಿಂಗ್ ನೀಡಿದರು. ಇದನ್ನೂ ಓದಿ: ಮಹಿಳೆಯರ ಉಚಿತ ಬಸ್ ಪ್ರಯಾಣ- ಪುರುಷರಿಗೆ ಟೆನ್ಶನ್ ಶುರು!

  • ಏಕ ಬಳಕೆಯ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಿಸಲು ಒಂದು ವರ್ಷ ಅವಕಾಶ ಕೊಡಿ: ವರ್ತಕರ ಸಂಘ ಮನವಿ

    ನವದೆಹಲಿ: ದೇಶದಲ್ಲಿ ಜುಲೈ 1 ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಈ ಕುರಿತಾಗಿ ಸಂಪೂರ್ಣ ನಿಷೇಧಕ್ಕೂ ಮೊದಲು ನಮಗೆ ಒಂದು ವರ್ಷಗಳ ಕಾಲ ಅವಕಾಶ ಕೊಡಿ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್‍ಗೆ ಮನವಿ ಸಲ್ಲಿಸಿದ್ದಾರೆ.

    ಇಂದು ಭೂಪೇಂದರ್ ಯಾದವ್ ಅವರಿಗೆ ಮನವಿ ಸಲ್ಲಿಸಿದ ವರ್ತಕರ ಸಂಘ ಜುಲೈ 1 ರಿಂದ ಜಾರಿಗೆ ಬಂದ ಏಕ-ಬಳಕೆಯ ಪ್ಲಾಸ್ಟಿಕ್ ನಿಷೇಧವನ್ನು ಅನುಸರಿಸಲು ಒಂದು ವರ್ಷದ ಅವಧಿಯನ್ನು ಕೇಳಿದೆ. ಉದ್ಯಮದಾರರನ್ನು ಮತ್ತು ಉದ್ಯೋಗಿಗಳಿಗೆ ಪೂರಕವಾಗಿ ಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಜುಲೈ 1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಬ್ಯಾನ್ – ಮಾರಾಟ ಮಾಡಿದ್ರೆ ದುಬಾರಿ ದಂಡ

    ವರ್ತಕರ ಸಂಘದ ಪ್ರಕಾರ ಈಗಾಗಲೇ ಕೆಲ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಉದ್ಯಮವಾಗಿಸಿಕೊಂಡು ಹಲವಾರು ಕಂಪನಿಗಳು ಇವೆ. ಹಲವು ಕಂಪನಿಗಳು ಈಗಾಗಲೇ ಸ್ಟಾಕ್ ಇಟ್ಟಿರುವ ಪ್ಲಾಸ್ಟಿಕ್ ಸಾಮಾಗ್ರಿಗಳನ್ನು ಬಳಕೆಗೆ ಅವಕಾಶ ಮಾಡಿಕೊಡಬೇಕು. ಹಲವು ಕಂಪನಿಗಳು ಬ್ಯಾಂಕ್‍ಗಳಲ್ಲಿ ಸಾಲ ಮಾಡಿ ಉದ್ಯಮಗಳನ್ನು ಆರಂಭಿಸಿದೆ. ಇದೀಗ ಏಕಾಏಕಿ ಸರ್ಕಾರ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದರೆ ಹೊಡೆತ ಬೀಳುತ್ತದೆ. ಸಾವಿರಾರೂ ಉದ್ಯೋಗಿಗಳು ಬೀದಿ ಪಾಲಾಗುತ್ತಾರೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು. ವರ್ಷಕ್ಕೆ 60,000 ಕೋಟಿ ರೂ.ಗಳ ವ್ಯವಹಾರ ಪ್ಲಾಸ್ಟಿಕ್ ಮೂಲಕ ನಡೆಯುತ್ತದೆ. ಹಾಗಾಗಿ ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಮುಂದಿನ ಕ್ರಮ ವಹಿಸಬೇಕಾಗಿ ಮನವಿ ಮಾಡಿಕೊಂಡಿದೆ.

    PLASTIC

    ಜುಲೈ 1 ರಿಂದ ಪ್ಲಾಸ್ಟಿಕ್ ಕಡ್ಡಿ ಹೊಂದಿರುವ ಇಯರ್ ಬಡ್ಸ್, ಬಲೂನ್‍ನ ಪ್ಲಾಸ್ಟಿಕ್ ಕಡ್ಡಿ, ಐಸ್‍ಕ್ರೀಂ-ಕ್ಯಾಂಡಿ ಸ್ಟಿಕ್, ಪ್ಲಾಸ್ಟಿಕ್ ಪ್ಲೇಟ್ಸ್, ಕಪ್ಸ್, ಗ್ಲಾಸ್, ಸ್ಪೂನ್, ಪ್ಲಾಸ್ಟಿಕ್ ಚಾಕು ಸೇರಿದಂತೆ ಇನ್ನಿತರ ಕೆಲ ಏಕಬಳಕೆಯ ಪ್ಲಾಸ್ಟಿಕ್‍ಗಳನ್ನು ಬ್ಯಾನ್ ಮಾಡಲಾಗಿದೆ. ಇದನ್ನೂ ಓದಿ: ದೇಶಕ್ಕೆ ಮಾತಾಡುವ ರಾಷ್ಟ್ರಪತಿ ಬೇಕು; ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡ್ತೀನಿ – ಯಶವಂತ್‌ ಸಿನ್ಹಾ

    2016ರ ನಂತರ ನಿಷೇಧ ಜಾರಿಯಾದ ಬಳಿಕ ಹಲವು ಉತ್ಪಾದನಾ ಘಟಕಗಳ ಮೇಲೆ ದಾಳಿ ನಡೆಸಿ ಮುಚ್ಚಲಾಗಿದೆ. ಅದಾಗ್ಯೂ ಪ್ಲಾಸ್ಟಿಕ್ ಬಳಕೆಯಾಗುತ್ತಲೇ ಇದ್ದು, ಇದು ಮಾರಾಟಗಾರರು, ತಿನಿಸುಗಳು, ಹಣ್ಣು ಮತ್ತು ತರಕಾರಿ ಮಾರಾಟಗಾರರು ಮತ್ತು ಅಂಗಡಿಗಳಲ್ಲಿ ಕಂಡುಬರುತ್ತದೆ. ಆದ್ದರಿಂದ ಹಂತಹಂತವಾಗಿ ಜಾಗೃತಿ ಅಭಿಯಾನಗಳನ್ನು ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

    Live Tv

  • ವಿವಿಐಪಿಗಳಿಗೆ ಹೋಗಿಲ್ಲ ಪ್ಲಾಸ್ಟಿಕ್ ಮೇಲಿನ ವ್ಯಾಮೋಹ

    ವಿವಿಐಪಿಗಳಿಗೆ ಹೋಗಿಲ್ಲ ಪ್ಲಾಸ್ಟಿಕ್ ಮೇಲಿನ ವ್ಯಾಮೋಹ

    ಬೆಂಗಳೂರು: ಪರಿಸರ ಮಾಲಿನ್ಯದ ಕಾರಣಕ್ಕೆ ಪ್ಲಾಸ್ಟಿಕ್ ಬಳಸಬಾರದು,ಬ್ಯಾನ್ ಆಗಿದೆ. ಹೀಗಾಗಿಯೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸುಧಾಕರ್ ಮಾಲ್‍ಗಳಿಗೆ ಹೋಗಿ ದಾಳಿ ಮಾಡಿದ್ದರು. ಇತ್ತ ಮೇಯರ್ ಗಂಗಾಂಬಿಕೆ ಅವರು ಪ್ಲಾಸ್ಟಿಕ್ ಬಳಸಿದೆ ಎಂದು ಫೈನ್ ಕೂಡ ಕಟ್ಟಿದ್ದರು. ಇದೀಗ ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ ಚೆಕ್ ನಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳು ಪ್ಲಾಸ್ಟಿಕ್ ಬಳಕೆ ಮಾಡಿರುವುದು ಬಯಲಾಗಿದೆ.

    ರಿಯಾಲಿಟಿ ಚೆಕ್ 1
    ಸ್ಥಳ- ಶಕ್ತಿ ಸೌಧ
    ವಿಧಾನಸೌಧದಲ್ಲಿ ಪ್ಲಾಸ್ಟಿಕ್ ಕಾರುಬಾರು ಜೋರಾಗಿದೆ. ಇಲ್ಲಿ ಸಿಬ್ಬಂದಿ, ವಿಧಾನಸೌಧ ವಿಸಿಟರ್ಸ್‍ಗಳು ಪ್ಲಾಸ್ಟಿಕ್ ಹಿಡಿದು ನಿರಾಯಾಸವಾಗಿ ಹೋಗಿ ಬರುತ್ತಾರೆ. ಹೀಗಾಗಿ ಶಕ್ತಿ ಶೌಧಕ್ಕೆ ಪ್ಲಾಸ್ಟಿಕ್ ಬ್ಯಾನ್ ನಿಯಮ ಅನ್ವಯಿಸುವುದಿಲ್ವಾ ಅನ್ನೋ ಪ್ರಶ್ನೆ ಎದ್ದಿದೆ.

    ಸ್ಥಳ – ಶಾಸಕರ ಭವನ
    ಶಾಸಕರ ಭವನಕ್ಕೆ ಬಂದು ಹೋಗುವವರು ತ್ಯಾಜ್ಯ ಹಾಕಲು ಬಕೆಟ್ ಇದೆ. ಆದರೂ ಪ್ಲಾಸ್ಟಿಕ್ ದರ್ಬಾರ್ ಜೋರಾಗಿದೆ. ಭವನಕ್ಕೆ ಬಂದು ಹೋಗುವವರಂತೂ ಪ್ಲಾಸ್ಟಿಕ್ ತಂದು ಹಾಕಿ ಹೋಗುತ್ತಾರೆ.

    ಸ್ಥಳ: ಎಂಎಸ್ ಬಿಲ್ಡಿಂಗ್
    ಪ್ಲಾಸ್ಟಿಕ್ ನಿಷೇಧ ಜಾರಿಗೆ ತರುವುದು ಅಧಿಕಾರಿಗಳ ಕೈಯಲ್ಲೇ ಇರುತ್ತದೆ. ಹೀಗಿರುವಾಗ ಅಧಿಕಾರಿಗಳೇ ತುಂಬಿರುವ ಎಂ.ಎಸ್ ಬಿಲ್ಡಿಂಗ್ ಸಹ ಪ್ಲಾಸ್ಟಿಕ್ ನಿಂದ ಮುಕ್ತವಾಗಿಲ್ಲ.

    ಸ್ಥಳ: ಪಾಲಿಕೆ
    ಪ್ಲಾಸ್ಟಿಕ್ ವಿರುದ್ಧ ಸಮರ ಸಾರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಆವರಣದಲ್ಲಿಯೇ ಪ್ಲಾಸ್ಟಿಕ್ ಬಳಕೆಯಾಗುತ್ತಿರುವುದು ರಿಯಾಲಿಟ್ ಚೆಕ್ ವೇಳೆ ಬೆಳಕಿಗೆ ಬಂದಿದೆ. ಹೀಗಿರುವಾಗ ತಾವೇ ಪ್ಲಾಸ್ಟಿಕ್ ಬಳಕೆ ಮಾಡಿ ಇನ್ನೊಬ್ಬರಿಗೆ ಫೈನ್ ಹಾಕುವುದು ಎಷ್ಟು ಸರಿ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

    ಸ್ಥಳ – ಸಚಿವರ ಕಚೇರಿಗಳು
    ಅಧಿಕಾರಿಗಳಷ್ಟೇ ಅಲ್ಲ ಸಚಿವರು ಕೂಡ ಪ್ಲಾಸ್ಟಿಕ್ ಬಳಕೆ ಮಾಡಿರುವುದು ಕಂಡುಬಂದಿದೆ. ಜಗದೀಶ್ ಶೆಟ್ಟರ್, ಸಿ.ಟಿ ರವಿ, ಕೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಬಸವರಾಜ್ ಬೊಮ್ಮಾಯಿ ಕಚೇರಿಗಳು ಕೂಡ ಪ್ಲಾಸ್ಟಿಕ್ ಮಯವಾಗಿವೆ.

    ಬಿಜೆಪಿ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ನೂತನ ಸಚಿವರು ಕಚೇರಿಗಳ ಪೂಜೆ ಮಾಡಿದರು. ಈ ವೇಳೆ ಪ್ಲಾಸ್ಟಿಕ್ ಗಳನ್ನು ಬಳಕೆ ಮಾಡಲಾಗಿತ್ತು. ಮಾಜಿ ಸಿಎಂ, ಸಚಿವ ಜಗದೀಶ್ ಶೆಟ್ಟರ್ ತಮ್ಮ ಕಚೇರಿ ಪೂಜೆ ಮಾಡಿದ್ದರು. ಆಗ ಬರೀ ಪ್ಲಾಸ್ಟಿಕ್ ನದ್ದೇ ದರ್ಬಾರ್ ಕಾಣಿಸಿತ್ತು. ಗನ್ ಮ್ಯಾನ್, ಡ್ರೈವರ್, ಹಿಂಬಾಲಕರು ಅಲ್ಲದೆ ಕೆಲ ಅಧಿಕಾರಿಗಳು ಹೂಗುಚ್ಛ ನೀಡುವಾಗ ಬರೀ ಪ್ಲಾಸ್ಟಿಕ್ ತುಂಬಿಕೊಂಡಿತ್ತು. ಪ್ಲಾಸ್ಟಿಕ್ ಬೊಕ್ಕೆ ಪಡೆದ ಶೆಟ್ಟರ್‍ಗೆ ಫೈನ್ ಹಾಕ್ತಿರಾ ಅಥವಾ ಕೊಟ್ಟವರಿಗೆ ಫೈನ್ ಹಾಕ್ತಿರಾ ಅನ್ನೋ ಪ್ರಶ್ನೆ ಇದೀಗ ಎದ್ದಿದೆ.

    ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಕಚೇರಿ ಮತ್ತು ಬಸವರಾಜ್ ಬೊಮ್ಮಾಯಿ ಕಚೇರಿಗಳ ಮುಂದೆಯೇ ಹೂವಿನ ಬೊಕ್ಕೆ ರೂಪದಲ್ಲಿ ಪ್ಲಾಸ್ಟಿಕ್‍ಗಳು ರಾಶಿ ರಾಶಿ ಬಿದ್ದಿರುತ್ತವೆ. ಸಿಟಿ ರವಿ ಕಚೇರಿಯಲ್ಲೂ ಪ್ಲಾಸ್ಟಿಕ್ ಬಳಕೆಯಾಗಿದ್ದು, ಪ್ಲಾಸ್ಟಿಕ್ ಮುಕ್ತ ಮಾಡಬೇಕೆಂಬ ಪಾಲಿಕೆ ಕನಸು ಕನಸಾಗಿಯೇ ಇರುತ್ತಾ ಅನ್ನೋ ಅನುಮಾನ ಮೂಡಿದೆ.

  • ಜುಲೈ 15 ರಿಂದ ಉತ್ತರ ಪ್ರದೇಶದಲ್ಲಿ ಪ್ಲಾಸ್ಟಿಕ್ ಬ್ಯಾನ್ : ಯೋಗಿ ಆದಿತ್ಯನಾಥ್

    ಜುಲೈ 15 ರಿಂದ ಉತ್ತರ ಪ್ರದೇಶದಲ್ಲಿ ಪ್ಲಾಸ್ಟಿಕ್ ಬ್ಯಾನ್ : ಯೋಗಿ ಆದಿತ್ಯನಾಥ್

    ಲಕ್ನೋ: ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮಹಾರಾಷ್ಟ್ರ ಸರ್ಕಾರ ಪ್ಲಾಸ್ಟಿಕ್ ಮೇಲೆ ನಿಷೇಧ ವಿಧಿಸಿದ ಬೆನ್ನಲ್ಲೇ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಹ ರಾಜ್ಯದಲ್ಲಿ ಪ್ಲಾಸ್ಟಿಕ್ ಬ್ಯಾನ್ ಮಾಡುವುದಾಗಿ ತಿಳಿಸಿದ್ದಾರೆ.

    ಈ ಕುರಿತು ಶುಕ್ರವಾರ ಮಾಹಿತಿ ನೀಡಿದ ಸಿಎಂ ಯೋಗಿ ಆದಿತ್ಯನಾಥ್, ಪ್ಲಾಸ್ಟಿಕ್ ಬ್ಯಾನ್ ಮಾಡುವ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದ ಜನರಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಿರಲು ನಾನು ಮನವಿ ಮಾಡುತ್ತಿದ್ದು, ಕಪ್, ಗ್ಲಾಸ್, ಪಾಲಿಥಿನ್ ವಸ್ತುಗಳನ್ನು ಬಳಕೆ ಮಾಡುವುದರಿಂದ ದೂರ ಮಾಡಿ ಎಂದು ಮನವಿ ಮಾಡಿದ್ದಾರೆ. ಅಲ್ಲದೇ ಜೂನ್ 15 ರಿಂದ ಹೊಸ ನಿಯಮಗಳು ಜಾರಿಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಮಹಾರಾಷ್ಟ್ರ ಸರ್ಕಾರ ಜೂನ್ 23 ರಂದು ಪ್ಲಾಸ್ಟಿಕ್ ಬ್ಯಾನ್ ಮಾಡುವ ಐತಿಹಾಸಿಕ ನಿರ್ಣಯವನ್ನು ಘೋಷಿಸಿತ್ತು. ಆದರೆ ಬಳಿಕ ಉದ್ಯಮಿಗಳ ಒತ್ತಡಕ್ಕೆ ಮಣಿದ ಸರ್ಕಾರ ಇ-ಕಾಮರ್ಸ್ ಸಂಸ್ಥೆಗಳು ತಮ್ಮ ಪ್ಯಾಕಿಂಗ್ ನಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಲು 3 ತಿಂಗಳ ಅವಧಿಯನ್ನು ನೀಡಿತ್ತು.

    ಪ್ರಧಾನಿ ಮೋದಿ ಅವರು 2022 ರ ವೇಳೆ ದೇಶವನ್ನು ಒಮ್ಮೆ ಬಳಸಿ ಬೀಸಾಡುವ ಪ್ಲಾಸ್ಟಿಕ್ ಬಳಕೆ ಮುಕ್ತ ರಾಷ್ಟ್ರವಾಗಿ ಮಾಡುವ ಗುರಿಯನ್ನು ಹೊಂದಿದ್ದು, ಇದರ ಹಿನ್ನೆಲೆಯಲ್ಲಿ ಸಾಧ್ಯ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಲಾಗುತ್ತಿದೆ.