Tag: ಪ್ಲಾಸ್ಮಾ

  • ಕೆಲವು ಜೀವಗಳನ್ನು ಉಳಿಸಲು ಸಹಾಯವಾಗುತ್ತದೆ, ರಕ್ತದಾನ ಮಾಡಿ: ರಾಗಿಣಿ

    ಕೆಲವು ಜೀವಗಳನ್ನು ಉಳಿಸಲು ಸಹಾಯವಾಗುತ್ತದೆ, ರಕ್ತದಾನ ಮಾಡಿ: ರಾಗಿಣಿ

    ಬೆಂಗಳೂರು: ಕೋವಿಡ್ ಸಂಕಷ್ಟದಿಂದಾಗಿ ಕಷ್ಟದಲ್ಲಿರುವ ಕುಟುಂಬಗಳಿಗೆ ದಿನಸಿ ಕಿಟ್ ಹಾಗೂ ಆಹಾರ ಪೆÇಟ್ಟಣ್ಣ ನೀಡುವ ಮೂಲಕ ರಾಗಿಣಿ ದ್ವಿವೇದಿ ನೆರವಾಗುತ್ತಿದ್ದಾರೆ. ಲಸಿಕೆ ಹಾಕಿಸಿಕೊಳ್ಳುವ ಮುನ್ನ ರಕ್ತದಾನ ಮಾಡಿ ಎಂದು ಜಾಗೃತಿ ಮೂಡಿಸುತ್ತಿದ್ದಾರೆ.

    ನಟಿ ರಾಗಿಣಿ ದ್ವಿವೇದಿ ಇಂದು ರಕ್ತದಾನ ಮಾಡಿದ್ದಾರೆ. ಇಂದು ವಿಶೇಷ ದಿನವಾಗಿದೆ. ರಕ್ತ ಮತ್ತು ಪ್ಲಾಸ್ಮಾಕ್ಕೆ ತುಂಬಾ ಅಗತ್ಯವಿರುವುದರಿಂದ ನಾನು ರಕ್ತದಾನವನ್ನು ಮಾಡಿದ್ದೇನೆ. ಕೆಲವು ಜೀವಗಳನ್ನು ಉಳಿಸಲು ಸಹಾಯವಾಗುತ್ತದೆ. ರಕ್ತದಾನವನ್ನು ಮಾಡಿ ಎಂದು ಮನವಿ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Ragini dwivedi (@rraginidwivedi)

    ರಾಗಿಣಿ ರಕ್ತ ದಾನ ಮಾಡಿ ಅಭಿಮಾನಿಗಳಿಗೂ ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಸದ್ಯ ಎಲ್ಲೆಡೆ ಕೊರೊನಾ ಭೀತಿಯಿಂದಾಗಿ ಜನರು ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಒಮ್ಮೆ ಯಾವುದೇ ಲಸಿಕೆ ಹಾಕಿಸಿಕೊಂಡರೆ 28 ದಿನಗಳ ಕಾಲ ರಕ್ತದಾನ ಮಾಡುವಂತಿಲ್ಲ. ಬೇರೆ ರೋಗಿಗಳಿಗೆ, ಅಪಘಾತಕ್ಕೊಳಗಾದವರು ಸೇರಿದಂತೆ ಹಲವರಿಗೆ ರಕ್ತದ ಅಭಾವ ಎದುರಾಗಲಿದೆ ಎಂದು ಸಾಕಷ್ಟು ಮಂದಿ ಸೆಲೆಬ್ರಿಟಿಗಳು ರಕ್ತದಾನ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಅಂತೆಯೇ ರಾಗಿಣಿ ಸಹ ಇಂದು ರಕ್ತದಾನ ಮಾಡುವ ಮೂಲಕ ಮನವಿ ಮಾಡಿದ್ದಾರೆ.

     

    View this post on Instagram

     

    A post shared by Ragini dwivedi (@rraginidwivedi)

    ರಾಗಿಣಿ ಕೊರೊನಾದಿಂದಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುವ ಮೂಲಕ ನೆರವಾಗಿದ್ದಾರೆ. ನಿತ್ಯ ಆಹಾರ ಪೆÇಟ್ಟಣ್ಣಗಳನ್ನು ಅಗತ್ಯವಿರುವವರಿಗೆ ವಿತರಿಸುವ ಕೆಲಸ ಮಾಡುತ್ತಿದ್ದಾರೆ. ಸೆಲೆಬ್ರೆಟಿ ಸ್ಟಾರ್‍ಗಳು ಹಲವರು ಸಹಾಯವನ್ನು ಮಾಡುತ್ತಿದ್ದಾರೆ.

  • ಪ್ಲಾಸ್ಮಾ ದಾನ ಮಾಡಿ ಮಾದರಿಯಾದ ಶಾಸಕ ಡಾ.ಭರತ್ ಶೆಟ್ಟಿ

    ಪ್ಲಾಸ್ಮಾ ದಾನ ಮಾಡಿ ಮಾದರಿಯಾದ ಶಾಸಕ ಡಾ.ಭರತ್ ಶೆಟ್ಟಿ

    – ಇತ್ತೀಚೆಗಷ್ಟೇ ಕೊರೊನಾದಿಂದ ಗುಣಮುಖರಾಗಿದ್ದ ಶಾಸಕರು

    ಮಂಗಳೂರು: ಎಷ್ಟೇ ಜಾಗೃತಿ ಮೂಡಿಸಿದರೂ ಬಹುತೇಕರು ಕೊರೊನಾದಿಂದ ಗುಣಮುಖರಾದ ಬಳಿಕ ಪ್ಲಾಸ್ಮಾ ದಾನ ಮಾಡಲು ಬಯಸುವುದಿಲ್ಲ. ಆದರೆ ಕೊರೊನಾ ಸೋಂಕು ತಗುಲಿದ್ದ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಇಂದು ಪ್ಲಾಸ್ಮಾ ದಾನ ಮಾಡಿದ್ದಾರೆ. ಈ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

    ನಗರದ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಮಾಡುವ ಮೂಲಕ ಶಾಸಕ ಭರತ್ ಶೆಟ್ಟಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಕಳೆದ ಜುಲೈ 2ರಂದು ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಶಾಸಕರು ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ಕ್ವಾರಂಟೈನ್ ನಲ್ಲಿದ್ದರು. ಒಂದು ವಾರದ ಹಿಂದೆ ಸಂಪೂರ್ಣ ಗುಣಮುಖರಾದ ಶಾಸಕ ಭರತ್ ಶೆಟ್ಟಿ , ಕೊರೊನಾ ಪಾಸಿಟಿವ್ ಆಗಿರುವ ವ್ಯಕ್ತಿಯೋಬ್ಬರಿಗೆ ಇಂದು ಪ್ಲಾಸ್ಮಾ ದಾನ ಮಾಡಿದ್ದಾರೆ.

    ಕೊರೊನಾದಿಂದ ಸಂಪೂರ್ಣ ಗುಣಮುಖರಾದ ಬಳಿಕ ಶಾಸಕರು ಕ್ಷೇತ್ರದ ಕೆಲಸ, ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಇದೀಗ ಪ್ಲಾಸ್ಮಾ ದಾನ ಮಾಡುವ ಮೂಲಕ ಇತರರಿಗೆ ಮಾದರಿ ಜೊತೆ ಧೈರ್ಯ ತುಂಬುವ ಕೆಲಸ ಮಾಟಿದ್ದಾರೆ. ಈ ಹಿಂದೆ ಕುಣಿಗಲ್ ಶಾಸಕ ಡಾ.ರಂಗನಾಥ್ ಪ್ಲಾಸ್ಮಾ ದಾನ ಮಾಡಿರದ್ದರು.

  • ಸೋಂಕಿತರ ಚಿಕಿತ್ಸೆಗೆ ಪ್ಲಾಸ್ಮಾ ದಾನ ಮಾಡಿ: ಸಿದ್ದರಾಮಯ್ಯ ಮನವಿ

    ಸೋಂಕಿತರ ಚಿಕಿತ್ಸೆಗೆ ಪ್ಲಾಸ್ಮಾ ದಾನ ಮಾಡಿ: ಸಿದ್ದರಾಮಯ್ಯ ಮನವಿ

    ಬೆಂಗಳೂರು: ಕೊರೊನಾ ವೈರಸ್ ನಿಂದ ಗುಣಮುಖರಾದವರು ಸೋಂಕಿತರಿಗೆ ಪ್ಲಾಸ್ಮಾ ದಾನ ಮಾಡುವ ಮೂಲಕ ಸಹಾಯ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾ ಸೋಂಕಿನಿಂದ ಗುಣಮುಖರಾದವರು ತಮ್ಮ ರಕ್ತದಲ್ಲಿನ ಪ್ಲಾಸ್ಮಾವನ್ನು ಬೇರೆ ಸೋಂಕಿತರ ಚಿಕಿತ್ಸೆಗಾಗಿ ದಾನ ಮಾಡಬೇಕೆಂದು ಕೋರುತ್ತಿದ್ದೇನೆ. ನಿಮ್ಮ ಆರೋಗ್ಯ ರಕ್ಷಣೆಗಾಗಿ ನೂರಾರು ಮಂದಿ ಶ್ರಮಿಸಿದ್ದಾರೆ. ಈಗ ನೀವು ಅವರೆಲ್ಲರ ಋಣ ತೀರಿಸುವ ಕರ್ತವ್ಯವನ್ನು ನಿಭಾಯಿಸಬೇಕಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

    ಇದಕ್ಕೂ ಮೊದಲು ಟ್ವೀಟ್ ಮಾಡಿರುವ ಅವರು, ವೈದ್ಯರಲ್ಲಿ ದೇವರನ್ನು ಕಾಣುವ ಪರಂಪರೆ ನಮ್ಮದು. ಕೊರೊನಾಮಯ ದುರಿತ ಕಾಲದಲ್ಲಿಯೂ ಈ ವೈದ್ಯರು ಪ್ರಾಣ ಭಯ ಇಲ್ಲದೆ ನಿಸ್ವಾರ್ಥವಾಗಿ ನಮ್ಮ ಸೇವೆ ಮಾಡುತ್ತಿದ್ದಾರೆ. ಈ ವೈದ್ಯರು ಮತ್ತೆಲ್ಲ ಆರೋಗ್ಯಸೇವಾ ಕಾರ್ಯಕರ್ತರ ಆರೋಗ್ಯಕ್ಕಾಗಿ ಪ್ರಾರ್ಥಿಸೋಣ. ವೈದ್ಯ ಮಿತ್ರರಿಗೆ ವೈದ್ಯರ ದಿನಾಚರಣೆಯ ಶುಭಾಶಯಗಳು ಎಂದು ತಿಳಿಸಿದ್ದಾರೆ.

    ಪ್ಲಾಸ್ಮಾ ಥೆರಪಿ ಎಂದರೇನು?
    ಕೊರೊನಾದಿಂದ ಚೇತರಿಸಿಕೊಂಡ ವ್ಯಕ್ತಿಯ ರಕ್ತದಲ್ಲಿ ಆಂಟಿಬಾಡಿಗಳು ಇರುತ್ತವೆ. ಅವು ರೋಗ ನಿರೋಧಕ ಶಕ್ತಿ ಹೊಂದಿರುತ್ತವೆ. ಆ ಪ್ಲಾಸ್ಮಾವನ್ನು ತೆಗೆದು ಸೋಂಕಿತ ಅಥವಾ ಸೋಂಕು ಶಂಕೆ ಹೊಂದಿರುವ ವ್ಯಕ್ತಿಗೆ ನೀಡುವುದನ್ನೇ ಪ್ಲಾಸ್ಮಾ ಥೆರಪಿ ಎನ್ನಲಾಗುತ್ತದೆ. ಪ್ಲಾಸ್ಮಾ ಥೆರಪಿಗೆ ಒಳಗಾದ ವ್ಯಕ್ತಿಗಳು ಬೇಗನೆ ಕೊರೊನಾದಿಂದ ಗುಣಮುಖರಾಗುವುದು ವಿದೇಶಗಳಲ್ಲಿ ಸಾಬೀತಾಗಿದೆ.

    ಸೋಂಕು ಮುಕ್ತವಾದ ವ್ಯಕ್ತಿ ಚೇತರಿಸಿಕೊಂಡ 28 ದಿನಗಳ ಬಳಿಕ ಪ್ಲಾಸ್ಮಾವನ್ನು ದಾನ ಮಾಡಬಹುದು. ಮೊದಲ ಪರೀಕ್ಷೆಯಲ್ಲಿ ಪಾಸಿಟಿವ್ ಬಂದು, 2ನೇ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರು ಕೂಡ ದಾನ ಮಾಡಬಹುದಾಗಿದೆ. ದಾನಿಯೊಬ್ಬನ ಪ್ಲಾಸ್ಮಾವನ್ನು ಅದೇ ರಕ್ತದ ಗುಂಪಿನ ರೋಗಿಗಳಿಗೆ ಮಾತ್ರ ನೀಡಬಹುದು ಎಂದು ತಜ್ಞರು ಹೇಳಿದ್ದಾರೆ.

  • ದೆಹಲಿಯಲ್ಲಿ ದೇಶದ ಮೊದಲ ಪ್ಲಾಸ್ಮಾ ಬ್ಯಾಂಕ್- ಸಾವಿನ ಪ್ರಮಾಣ ನಿಯಂತ್ರಿಸಲು ಸರ್ಕಾರದಿಂದ ಮಹತ್ವದ ಕ್ರಮ

    ದೆಹಲಿಯಲ್ಲಿ ದೇಶದ ಮೊದಲ ಪ್ಲಾಸ್ಮಾ ಬ್ಯಾಂಕ್- ಸಾವಿನ ಪ್ರಮಾಣ ನಿಯಂತ್ರಿಸಲು ಸರ್ಕಾರದಿಂದ ಮಹತ್ವದ ಕ್ರಮ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಂಕಿನ ಪ್ರಮಾಣ ಗಣನೀಯ ಏರಿಕೆ ಹಿನ್ನೆಲೆಯಲ್ಲಿ ಸಾವಿನ ಪ್ರಮಾಣ ನಿಯಂತ್ರಿಸಲು ಪ್ಲಾಸ್ಮಾ ಬ್ಯಾಂಕ್ ಪ್ರಾರಂಭಿಸುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

    ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುವ, ಮುಂದಿನ ಎರಡು ದಿನಗಳಲ್ಲಿ ದೇಶದ ಮೊದಲ ಪ್ಲಾಸ್ಮಾ ಬ್ಯಾಂಕ್ ದೆಹಲಿಯಲ್ಲಿ ಕಾರ್ಯರಂಭ ಮಾಡಲಿದೆ. ದಕ್ಷಿಣ ದೆಹಲಿಯ ವಸಂತ್ ಕುಂಜ್ ನ ಇನ್ಸ್ ಸ್ಟಿಟ್ಯೂಟ್ ಆಫ್ ಲಿವರ್ ಆ್ಯಂಡ್ ಬಿಲಿಯರಿ ಸೈನ್ಸಸ್ ನಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಲಾಗುತ್ತಿದ್ದು, ಕೊರೊನಾದಿಂದ ವಾಸಿಯಾಗಿರುವ ಜನರು ಪ್ಲಾಸ್ಮಾ ದಾನ ಮಾಡುವಂತೆ ಮನವಿ ಮಾಡಿದ್ದಾರೆ.

    ದೆಹಲಿಯಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಸೇರಿ ಈವರೆಗೂ 29 ರೋಗಿಗಳ ಮೇಲೆ ಪ್ಲಾಸ್ಮಾ ಥೆರಪಿ ಪ್ರಯೋಗ ಮಾಡಿದ್ದು ಎಲ್ಲ ಪ್ರಕರಣಗಳ ಫಲಿತಾಂಶ ಉತ್ತಮವಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ಲಾಸ್ಮಾ ಥೆರಪಿಗೆ ಹೆಚ್ಚು ಮನ್ನಣೆ ನೀಡಲಾಗುತ್ತಿದೆ ಮತ್ತು ಜೀವ ಉಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಕೇಜ್ರಿವಾಲ್ ಹೇಳಿದರು.

    ಜೀವ ಉಳಿಸುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ ಪ್ಲಾಸ್ಮಾ ದಾನ ಮಾಡುವ ಮೂಲಕ ಜೀವ ಉಳಿಸಬೇಕು. ಇನ್ನೆರಡು ದಿನದಲ್ಲಿ ಹೆಲ್ಪ್‍ಲೈನ್ ನಂಬರ್ ನೀಡಲಿದ್ದು ಆಸಕ್ತಿ ಇದ್ದವರು ನೋಂದಣಿ ಮಾಡಿಕೊಂಡು ಪ್ಲಾಸ್ಮಾ ದಾನಾ ಮಾಡಬಹುದಾಗಿದೆ. ಪ್ಲಾಸ್ಮಾ ಬ್ಯಾಂಕ್ ಕೇಂದ್ರಕ್ಕೆ ಬಂದರೆ ಕೊರೊನಾ ಬರುತ್ತೆ ಎನ್ನುವ ಆತಂಕ ಬೇಡ. ಸರ್ಕಾರ ಸೂಕ್ತ ವ್ಯವಸ್ಥೆ ಮಾಡಲಿದೆ. ಅಲ್ಲದೇ ಪ್ಲಾಸ್ಮಾ ದಾನ ಮಾಡುವ ವ್ಯಕ್ತಿಯು ಆಸ್ಪತ್ರೆಗೆ ಬರುವ ಖರ್ಚು-ವೆಚ್ಚಗಳನ್ನು ಸರ್ಕಾರ ಪಾವತಿಸಲಿದೆ ಎಂದರು.

    ದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ 2889 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು 83077 ಮಂದಿ ಕೊರೊನಾಗೆ ತುತ್ತಾಗಿದ್ದಾರೆ. ಈವರೆಗೂ 2600 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

  • ಪ್ಲಾಸ್ಮಾ ನೀಡಿ ಜೀವ ಉಳಿಸಲು ಮುಂದಾದ ಗಾಯಕಿ

    ಪ್ಲಾಸ್ಮಾ ನೀಡಿ ಜೀವ ಉಳಿಸಲು ಮುಂದಾದ ಗಾಯಕಿ

    ನವದೆಹಲಿ: ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಕೊರೊನಾ ಸೋಂಕು ತಗುಲಿದ ನಂತರ ಸ್ವಯಂ ದಿಗ್ಬಂಧನ ವಿಧಿಸಿಕೊಳ್ಳದೆ, ಹಲವು ಗಣ್ಯರು ಭಾಗವಹಿಸಿದ್ದ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಇದೀಗ ಜನರೇ ಕೊಂಡಾಡುವ ಕೆಲಸ ಮಾಡುತ್ತಿದ್ದು, ಜೀವ ಉಳಿಸುವ ನಿರ್ಧಾರ ಕೈಗೊಂಡಿದ್ದಾರೆ.

    ಹೌದು, ರಾಜಕಾರಣಿಗಳೂ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಿದ್ದ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಕನಿಕಾ ಕಪೂರ್ ವಿಪರೀತ ಟೀಕೆಗೆ ಗುರಿಯಾಗಿದ್ದರು. ಅಲ್ಲದೆ ನಂತರ ಈ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆಯನ್ನೂ ನೀಡಿದ್ದರು. ಆದರೂ ನೆಟ್ಟಿಗರು ಇದನ್ನು ಒಪ್ಪಿರಲಿಲ್ಲ. ಇದೀಗ ಎಲ್ಲರೂ ತಿರುಗಿ ನೋಡುವಂತೆ ಅವರು ಮಾಡಿದ್ದು, ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.

    ಕೊರೊನಾ ಸೋಂಕಿತ ವ್ಯಕ್ತಿ ಬಹುಬೇಗ ಗುಣಮುಖರಾಗಲು ಅತ್ಯುತ್ತಮ ಮಾರ್ಗ ಪ್ಲಾಸ್ಮಾ ಥೆರಪಿ ಮಾಡುವುದು. ಇದರಿಂದಾಗಿ ಕೊರೊನಾ ಸೋಂಕಿತ ವ್ಯಕ್ತಿ ಬೇಗನೇ ಗುಣಮುಖರಾಗುತ್ತಾರೆ ಎಂಬುದು ಈಗಾಗಲೇ ದೆಹಲಿಯಲ್ಲಿ ನಡೆದ ಪರೀಕ್ಷೆಯಲ್ಲಿ ಬಹುತೇಕ ಸಾಬೀತಾಗಿದೆ. ಹೀಗಾಗಿ ಇತರ ರಾಜ್ಯಗಳೂ ಈ ನಿಯಮ ಪಾಲಿಸುತ್ತಿದ್ದು, ಪ್ಲಾಸ್ಮಾ ಥೆರಪಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಕೊರೊನಾ ಸೋಂಕಿತ ರೋಗಿಯನ್ನು ಬೇಗ ಗುಣಪಡಿಸಲು ಪ್ಲಾಸ್ಮಾ ಥೆರಪಿ ಅಗತ್ಯ ಎಂದಿದ್ದಾರೆ. ಅಲ್ಲದೆ ಕೊರೊನಾದಿಂದ ಗುಣಮುಖರಾದ ಎಲ್ಲರೂ ಪ್ಲಾಸ್ಮಾ ದಾನ ಮಾಡುವ ಮೂಲಕ ಇತರ ಸೋಂಕಿತರು ಗುಣಮುಖರಾಗಲು ಸಹಾಯ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

    ಈ ಎಲ್ಲ ಬೆಳವಣಿಗೆ ನಡುವೆ ಗಾಯಕಿ ಕನಿಕಾ ಕಪೂರ್ ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದು, ಅಗತ್ಯವಿರುವವರಿಗೆ ಪ್ಲಾಸ್ಮಾ ನೀಡಲು ಸಿದ್ಧ. ಕೊರೊನಾದಿಂದ ಗುಣಮುಖರಾಗಿರುವ ಮೂವರು ಈಗಾಗಲೇ ಪ್ಲಾಸ್ಮಾ ದಾನ ನೀಡಿದ್ದು, ಹೀಗಾಗಿ ನಾನೂ ಪ್ಲಾಸ್ಮಾ ನೀಡಲು ನಿರ್ಧಾರ ಮಾಡಿದ್ದೇನೆ. ಈಗಾಗಲೇ ರಕ್ತ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ಎಲ್ಲವೂ ಸರಿಯಾಗಿದ್ದರೆ ಪ್ಲಾಸ್ಮಾ ದಾನ ಮಾಡುವುದಾಗಿ ತಿಳಿಸಿದ್ದಾರೆ.

    ಕನಿನಾ ಕಪೂರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಮಾರ್ಚ್ 20ರಂದು ದೃಢಪಟ್ಟಿತ್ತು. ಇದಾದ ಬಳಿಕ ಕೊರೊನಾ ವೈರಸ್ ಕುರಿತು ಕನಿಕಾ ನಿರ್ಲಕ್ಷ್ಯ ವಹಿಸಿದ್ದಾರೆ. ಇಂಗ್ಲೆಂಡ್‍ನಿಂದ ಮರಳಿದ ಮೇಲೆ ಸ್ವಯಂ ದಿಗ್ಬಂಧನ ವಿಧಿಸಿಕೊಂಡಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದಾದ ಬಳಿಕ ಗಾಯಕಿ ಸ್ಪಷ್ಟನೆ ನೀಡಿದ್ದರು.

  • ಗುಣಮುಖರಾದವರು ಧರ್ಮ ಮರೆತು ಪ್ಲಾಸ್ಮಾ ದಾನ ಮಾಡಿ ಜೀವ ಉಳಿಸಿ: ಕೇಜ್ರಿವಾಲ್

    ಗುಣಮುಖರಾದವರು ಧರ್ಮ ಮರೆತು ಪ್ಲಾಸ್ಮಾ ದಾನ ಮಾಡಿ ಜೀವ ಉಳಿಸಿ: ಕೇಜ್ರಿವಾಲ್

    ನವದೆಹಲಿ: ಕೊರೊನಾ ವೈರಸ್‍ನಿಂದ ಚೇತರಿಸಿಕೊಂಡ ವ್ಯಕ್ತಿಗಳು, ಸೋಂಕಿತ ರೋಗಿಗಳಿಗೆ ಧರ್ಮ ಮೀರಿ ಪ್ಲಾಸ್ಮಾ ದಾನ ಮಾಡಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

    ದೆಹಲಿಯಲ್ಲಿ ಮಾತನಾಡಿರುವ ಅವರು, ಕೊರೊನಾ ವಿರುದ್ಧ ಹೋರಾಟಕ್ಕೆ ಪ್ಲಾಸ್ಮಾ ಥೆರಪಿ ಹೊಸ ಆಯುಧ, ರಕ್ತಕ್ಕೆ ಯಾವುದೇ ಧರ್ಮ ಬೇಧವಿಲ್ಲ, ಹಿಂದೂ ರಕ್ತ ಮುಸ್ಲಿಂರನ್ನು, ಮುಸ್ಲಿಂ ರಕ್ತ ಹಿಂದೂಗಳನ್ನು ಉಳಿಸವುದು, ಪೂರ್ವಾಗ್ರಹ ಪೀಡಿತರಾಗದೆ ಪ್ಲಾಸ್ಮಾ ದಾನ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

    ನಾವೇಲ್ಲರೂ ಕೊರೊನಾ ಸಂಕಷ್ಟದಿಂದ ಹೊರ ಬಂದು ಬದುಕಲು ಪ್ರಯತ್ನಿಸುತ್ತೇವೆ. ಗುಣಮುಖರಾದ ವ್ಯಕ್ತಿಗಳು ಪ್ಲಾಸ್ಮಾ ದಾನ ಮಾಡಬೇಕು. ನೀವು ನೀಡುವ ಪ್ಲಾಸ್ಮಾ ಹಿಂದೂ, ಮುಸ್ಲಿಂ ಯಾರ ಜೀವ ಉಳಿಸಬಹುದು ಎಂದು ಯಾರೂ ಊಹಿಸಲು ಸಾಧ್ಯವಿಲ್ಲ, ನಾವು ಜೀವ ಉಳಿಸುವ ಕೆಲಸ ಮಾಡಬೇಕು ಎಂದರು.

    ಕೊರೊನಾ ಸೋಂಕಿತ ವ್ಯಕ್ತಿಗಳಲ್ಲಿ ಪ್ಲಾಸ್ಮಾ ಥೆರಪಿ ಬಳಿಕ ಚೇತರಿಕೆ ಕಂಡು ಬಂದಿದ್ದು, ದೆಹಲಿಯಲ್ಲಿ ಹಲವು ರೋಗಿಗಳು ಗುಣ ಮುಖರಾಗಿದ್ದಾರೆ. ಈ ಹಿನ್ನಲೆ ಕೊರೊನಾದಿಂದ ಗುಣಮುಖರಾದ ಜನರಿಗೆ ಪ್ಲಾಸ್ಮಾ ದಾನ ಮಾಡಲು ಕೋರಿದ್ದಾರೆ.

    ಪ್ಲಾಸ್ಮಾ ಥೆರಪಿ ಎಂದರೇನು?
    ಕೊರೊನಾದಿಂದ ಚೇತರಿಸಿಕೊಂಡ ವ್ಯಕ್ತಿಯ ರಕ್ತದಲ್ಲಿ ಆ್ಯಂಟಿಬಾಡಿಗಳು ಇರುತ್ತವೆ. ಅವು ರೋಗ ನಿರೋಧಕ ಶಕ್ತಿ ಹೊಂದಿರುತ್ತವೆ. ಆ ಪ್ಲಾಸ್ಮಾವನ್ನು ತೆಗೆದು ಸೋಂಕಿತ ಅಥವಾ ಸೋಂಕು ಶಂಕೆ ಹೊಂದಿರುವ ವ್ಯಕ್ತಿಗೆ ನೀಡುವುದನ್ನೇ ಪ್ಲಾಸ್ಮಾ ಥೆರಪಿ ಎನ್ನಲಾಗುತ್ತದೆ. ಪ್ಲಾಸ್ಮಾ ಥೆರಪಿಗೆ ಒಳಗಾದ ವ್ಯಕ್ತಿಗಳು ಬೇಗನೆ ಕೊರೊನಾದಿಂದ ಗುಣಮುಖರಾಗುವುದು ವಿದೇಶಗಳಲ್ಲಿ ಸಾಬೀತಾಗಿದೆ.

    ಸೋಂಕ ಮುಕ್ತವಾದ ವ್ಯಕ್ತಿ ಚೇತರಿಸಿಕೊಂಡ 28 ದಿನಗಳ ಬಳಿಕ ಪ್ಲಾಸ್ಮಾವನ್ನು ದಾನ ಮಾಡಬಹುದು, ಮೊದಲ ಪರೀಕ್ಷೆಯಲ್ಲಿ ಪಾಸಿಟಿವ್ ಬಂದು, 2ನೇ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರು ಕೂಡಾ ದಾನ ಮಾಡಬಹುದಾಗಿದೆ. ದಾನಿಯೊಬ್ಬನ ಪ್ಲಾಸ್ಮಾವನ್ನು ಅದೇ ರಕ್ತದ ಗುಂಪಿನ ರೋಗಿಗಳಿಗೆ ಮಾತ್ರ ನೀಡಬಹುದು ಎಂದು ತಜ್ಞರು ಹೇಳಿದ್ದಾರೆ.