Tag: ಪ್ಲಾಸ್ಮಾ ದಾನ

  • ಪ್ಲಾಸ್ಮಾ ದಾನ ಮಾಡಿ ಜೀವ ಉಳಿಸಿ: ಕೃಷ್ಣ ಬಾಜಪೇಯಿ ಕರೆ

    ಪ್ಲಾಸ್ಮಾ ದಾನ ಮಾಡಿ ಜೀವ ಉಳಿಸಿ: ಕೃಷ್ಣ ಬಾಜಪೇಯಿ ಕರೆ

    ಹುಬ್ಬಳ್ಳಿ: ನಗರ ಸಾರಿಗೆ ವಿಭಾಗದ ಬಿ.ಆರ್.ಟಿ.ಎಸ್ ಹುಬ್ಬಳ್ಳಿ ಘಟಕದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಸಂಸ್ಥೆಯ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್, ಹಾಗೂ ಸೋಪ್ ವಿತರಣಾ ಕಾರ್ಯಕ್ರಮವನ್ನು ಇಂಡಿಯನ್ ರೆಡ್ ಕ್ರಾಸ್ ಸಹಯೋಗದಲ್ಲಿಂದು ಹಮ್ಮಿಕೊಳ್ಳಲಾಯಿತು.

    ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ, ಕೊರೊನಾ ಸಂಕಷ್ಟದ ಸಮಯದಲ್ಲಿ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿಗಳು ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವುದನ್ನು ಅಭಿನಂದಿಸಿದರು.

    ಪ್ರಯಾಣಿಕರೊಂದಿಗೆ ಪ್ರತಿನಿತ್ಯ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಿ ಸುರಕ್ಷತಾ ನಿಯಮಗಳನ್ನು ಪಾಲಿಸಿ ಸುರಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಸಂಸ್ಥೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿ ಗುಣಮುಖರಾದವರು ಇತರೆ ಕೊರೊನಾ ಪಿಡಿತ ಸಂಧಿಗ್ದ ಪರಿಸ್ಥಿತಿಯಲ್ಲಿರುವಂತಹ ರೋಗಿಗಳಿಗೆ ಪ್ಲಾಸ್ಮಾ ದಾನವನ್ನು ಮಾಡಿ ಜೀವವನ್ನು ಉಳಿಸಲು ಸಹಾಯ ಮಾಡಲು ತಿಳಿಸಿದರು.

  • 2 ಬಾರಿ ಸ್ವಯಂಪ್ರೇರಿತವಾಗಿ ಪ್ಲಾಸ್ಮಾ ದಾನ ಮಾಡಿದ ಅನಂತ್ ಕುಮಾರ್

    2 ಬಾರಿ ಸ್ವಯಂಪ್ರೇರಿತವಾಗಿ ಪ್ಲಾಸ್ಮಾ ದಾನ ಮಾಡಿದ ಅನಂತ್ ಕುಮಾರ್

    ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧ ಜಯಗಳಿಸಿದ ವ್ಯಕ್ತಿಯೊಬ್ಬರು ಎರಡು ಬಾರಿ ಪ್ಲಾಸ್ಮಾ ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

    ಹೌದು ಅನಂತ್ ಕುಮಾರ್ ಬ್ಯಾಡಗಿ ಎಂಬುವವರಿಗೆ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಕೊರೊನಾ ಸೋಂಕು ದೃಢಪಟ್ಟಿತ್ತು. ಆಗ ಯಾವುದಕ್ಕೂ ಧೃತಿಗೆಡದೆ ಕೊರೊನಾ ವೈರಸ್ ನಿಂದ ಗುಣಮುಖರಾಗಿರುವ ಅನಂತ್ ಕುಮಾರ್ ಅವರು ಸುಮಾರು ಎರಡು ಬಾರಿ ಪ್ಲಾಸ್ಮಾ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಆಗಸ್ಟ್ 6ರಂದು ಹುಬ್ಬಳ್ಳಿಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಮಾಡಿದ್ದ ಅವರು, ಇಂದು ಹುಬ್ಬಳ್ಳಿಯ ಆರ್.ಬಿ.ಪಾಟೀಲ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಮಾಡಿರುವುದು ವಿಶೇಷವಾಗಿದೆ. ಮೂಲತಃ ಗುತ್ತಿಗೆದಾರರಾದ ಅನಂತ್ ಕುಮಾರ್ ಅವರು ಕೊರೊನಾ ವೈರಸ್ ನಿಯಂತ್ರಣಕ್ಕೆ ಸ್ವಯಂಪ್ರೇರಿತರಾಗಿ ಪ್ಲಾಸ್ಮಾ ದಾನಕ್ಕೆ ಮುಂದಾಗಿರುವುದು ಪ್ರಶಂಸೆಗೆ ಪಾತ್ರರಾಗಿದೆ.

    ವೈದ್ಯರ ಸೇವೆಯಿಂದ ನಾನು ಗುಣಮುಖನಾಗಿದ್ದೇನೆ. ಆದ್ದರಿಂದ ಸೋಂಕಿತರಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡುವ ಮೂಲಕ ಕೊರೊನಾ ನಿಯಂತ್ರಣಕ್ಕಾಗಿ ಪ್ಲಾಸ್ಮಾ ದಾನ ಮಾಡಲು ಮುಂದಾಗಿರುವುದಾಗಿ ಹೇಳಿದ್ದಾರೆ.

  • ಪ್ಲಾಸ್ಮಾ ದಾನ ಮಾಡಿದವರಿಗೆ 5 ಸಾವಿರ ರೂ. ಭತ್ಯೆ: ಸಚಿವ ಸುಧಾಕರ್

    ಪ್ಲಾಸ್ಮಾ ದಾನ ಮಾಡಿದವರಿಗೆ 5 ಸಾವಿರ ರೂ. ಭತ್ಯೆ: ಸಚಿವ ಸುಧಾಕರ್

    ಬೆಂಗಳೂರು: ಕೊರೊನಾದಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡಿದರೇ ಅವರಿಗೆ 5 ಸಾವಿರ ರೂ. ಭತ್ಯೆ ನೀಡುವುದಾಗಿ ಸರ್ಕಾರ ಘೋಷಿಸಿದೆ. ಗುಣಮುಖರಾದವರು 14-28 ದಿನಗಳ ಒಳಗೆ ಒಬ್ಬ ವ್ಯಕ್ತಿ ಒಂದು ಬಾರಿಯಷ್ಟೇ ದಾನ ಮಾಡಲು ಅವಕಾಶವಿದೆ. ಈಗಾಗಲೇ ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲಾಗಿದ್ದು, ಕೊರೊನಾದಿಂದ ಗುಣಮುಖರಾದವರು ಪ್ಲಾಸ್ಮಾ ದಾನವಾಗಿ ನೀಡುತ್ತಿದ್ದಾರೆ.

    ರಾಜ್ಯದಲ್ಲಿ ಕೊರೊನಾ ಮಹಾಮಾರಿ ಇನ್ನಷ್ಟು ವ್ಯಾಪಿಸೋ ಬಗ್ಗೆ ಎಚ್ಚರಿಕೆ ಬೆನ್ನಲ್ಲೇ ಸರ್ಕಾರ ಹೊಸ ಹೊಸ ಕ್ರಮಕ್ಕೆ ಮುಂದಾಗಿದೆ. ವಾರದ ಲಾಕ್‍ಡೌನ್ ಅವಧಿಯಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಪಣತೊಟ್ಟಂತಿದೆ. ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ವ್ಯಾಪಕವಾಗಿ ಹರಡುತ್ತಿರೋ ಬೆನ್ನಲ್ಲೇ ತ್ವರಿತವಾಗಿ ರಿಪೋರ್ಟ್ ನೀಡಲು ಸರ್ಕಾರ ಆದೇಶಿಸಿದೆ. ಇನ್ನೆರಡು ತಿಂಗಳಲ್ಲಿ ಸೋಂಕಿನ ಪ್ರಮಾಣ ಶೇಕಡಾ 100ರಷ್ಟು ಹೆಚ್ಚಾಗೋ ಸಾಧ್ಯತೆ ಇದೆ. ಮೊನ್ನೆಯ ಟಾಸ್ಕ್ ಫೋರ್ಸ್ ಸಭೆಯಲ್ಲಿ ಸಿಎಂ ಕ್ಲಾಸ್ ತೆಗೆದುಕೊಂಡ ಬೆನ್ನಲ್ಲೇ ಸಚಿವರು, ಅಧಿಕಾರಿಗಳು ಎಚ್ಚೆತ್ತಿದ್ದಾರೆ. ಮುಂಬೈನ ಧಾರಾವಿ ಸ್ಲಂನಲ್ಲಿ ಸೋಂಕು ನಿಯಂತ್ರಣಕ್ಕೆ ಬಳಸಿದ ಕ್ರಮಗಳನ್ನು ಅನುಸರಿಸಲು ತೀರ್ಮಾನಿಸಿದ್ದಾರೆ.

    ಬೂತ್ ಮಟ್ಟದ ಕಾರ್ಯಪಡೆ ರಚನೆ ಮಾಡಿ. ಅವರಿಗೆ ತರಬೇತಿ ನೀಡಿ, ಮನೆ ಮನೆ ಸಮೀಕ್ಷೆ ನಡೆಸಲು ಪ್ಲಾನ್ ಮಾಡಿದ್ದಾರೆ. ಲಾಕ್‍ಡೌನ್ ಅವಧಿ ಮುಕ್ತಾಯಗೊಳ್ಳುವ ಮುನ್ನನೇ ಬೂತ್ ಮಟ್ಟದ ಸಮಿತಿಗಳು ಪೂರ್ಣ ಪ್ರಮಾಣದಲ್ಲಿ ಸಮೀಕ್ಷೆ ಕೈಗೊಂಡಿರಬೇಕು ಎಂದು ವೈದ್ಯಶಿಕ್ಷಣ ಮಂತ್ರಿಗಳು, 8 ವಲಯಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಸಮೀಕ್ಷೆಗಾಗಿ ಬೂತ್ ಮಟ್ಟದ ಸಮಿತಿಗಳಿಗೆ ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಯಂತ್ರಗಳನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ. ಹಿರಿಯ ಅಧಿಕಾರಿ ಶಾಲಿನಿ ರಜನೀಶ್‍ಗೆ ಸಮನ್ವಯದ ಉಸ್ತುವಾರಿ ವಹಿಸಲಾಗಿದೆ ಎಂದು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.