Tag: ಫಾನಿ ಚಂಡಮಾರುತ

  • ಫನಿ ಚಂಡಮಾರುತ ಎಫೆಕ್ಟ್ – ರಾಜ್ಯದಲ್ಲಿ ಹಲವೆಡೆ ಮಳೆ, ಸುಳಿಗಾಳಿಯ ಚೆಲ್ಲಾಟ

    ಫನಿ ಚಂಡಮಾರುತ ಎಫೆಕ್ಟ್ – ರಾಜ್ಯದಲ್ಲಿ ಹಲವೆಡೆ ಮಳೆ, ಸುಳಿಗಾಳಿಯ ಚೆಲ್ಲಾಟ

    ಬೆಂಗಳೂರು: ಫನಿ ಚಂಡಮಾರುತ ರಾಜ್ಯಕ್ಕೆ ಅಪ್ಪಳಿಸುವ ಭೀತಿ ಹೆಚ್ಚಿದ್ದು, ಉತ್ತರ ಕರ್ನಾಟಕ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಸುಳಿಗಾಳಿಯ ಸೃಷ್ಟಿಯಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಫನಿ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ಕೂಡ ತಟ್ಟಲಿದೆ. ಫನಿ ಚಂಡಮಾರುತ ದುರ್ಬಲವಾದರೆ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಮಂಡ್ಯ, ಮೈಸೂರು ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಸುಳಿಗಾಳಿಯಿಂದ ಮಳೆರಾಯನ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಶಿವಮೊಗ್ಗ, ಚಿತ್ರದುರ್ಗ, ಬಳ್ಳಾರಿಯಲ್ಲಿ ಹೈ ಅಲರ್ಟ್ ಫೋಷಿಸಲಾಗಿದ್ದು ಈ ಪ್ರದೇಶಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಫನಿ ಎಫೆಕ್ಟ್ ರಾಜ್ಯದ ಬಹುತೇಕ ಭಾಗದಲ್ಲಿ ಮೇ 4ರ ತನಕ ಇರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.

    ಫನಿ ಚಂಡಮಾರುತ ದೊಡ್ಡ ಮಟ್ಟದಲ್ಲಿ ರಾಜ್ಯದ ಮೇಲೆ ಪ್ರಭಾವ ಬೀರದೇ ಇದ್ದರೂ ಸಣ್ಣ ಪ್ರಮಾಣದಲ್ಲಿ ಮಳೆರಾಯ ಆರ್ಭಟಿಸಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

  • ಫಾನಿ ಚಂಡಮಾರುತ- ಜನತೆಗೆ ಕೋಲಾರ ಜಿಲ್ಲಾಡಳಿತ ಎಚ್ಚರಿಕೆ ಸಂದೇಶ

    ಫಾನಿ ಚಂಡಮಾರುತ- ಜನತೆಗೆ ಕೋಲಾರ ಜಿಲ್ಲಾಡಳಿತ ಎಚ್ಚರಿಕೆ ಸಂದೇಶ

    ಕೋಲಾರ: ಇನ್ನೆರಡು ದಿನಗಳ ಕಾಲ ರಾಜ್ಯದಲ್ಲಿ ಫಾನಿ ಚಂಡಮಾರುತ ತನ್ನ ರುದ್ರಾವತಾರ ತೋರಿಸುವ ಮಾಹಿತಿ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

    ಕೋಲಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಫಾನಿ ಚಂಡಮಾರುತದ ಬಗ್ಗೆ ಎಚ್ಚರ ವಹಿಸುವಂತೆ ಜಿಲ್ಲೆಯ ಜನರಿಗೆ ಸೂಚನೆ ನೀಡಿದ್ದಾರೆ. ಭಾರತದ ಹವಾಮಾನ ಇಲಾಖೆ ರವಾನಿಸಿರುವ ಸಂದೇಶದಂತೆ ಫಾನಿ ಚಂಡಮಾರುತ 100 ಕೀ.ಮೀ ವೇಗ ಪಡೆಯಲಿರುವ ಸಾಧ್ಯತೆಯಿದ್ದು, ಹವಾಮಾನ ವೈಪರೀತ್ಯ ಉಂಟಾಗಲಿದೆ. ಆದ್ದರಿಂದ ಜಿಲ್ಲೆಯ ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ತಿಳಿಸಿದೆ.

    ಇಂದು ಜಿಲ್ಲೆಯಲ್ಲಿ ಉಷ್ಣಾಂಶ ಹೆಚ್ಚಾಗಿ, ಬಿಸಿ ಗಾಳಿ ಬೀಸಲಿದ್ದು, ಸೋಮವಾರ ಹಾಗೂ ಮಂಗಳವಾರ ಅಂದ್ರೆ ಏಪ್ರಿಲ್ 29 ಹಾಗೂ 30 ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹೆಚ್ಚು ಓಡಾಟ ಮಾಡಬೇಡಿ, ಆದಷ್ಟು ಸುರಕ್ಷಿತವಾಗಿ ಮನೆಗಳಲ್ಲಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಲ್ಲದೆ ಮಿಂಚು ಸಿಡಿಲು ಸಂಭವಿಸಿದ ವೇಳೆ ಎಚ್ಚರದಿಂದಿರುವಂತೆ ಪ್ರಕಟಣೆ ಹೊರಡಿಸುವ ಮೂಲಕ ಕೋಲಾರ ಜಿಲ್ಲಾಡಳಿತ ಜಿಲ್ಲೆಯ ಜನರ ಹಿತ ಕಾಯಲು ಮುಂದಾಗಿದೆ.