Tag: ಫಾಫ್ ಡು ಪ್ಲೆಸಿಸ್

  • ಕೊಹ್ಲಿಗೆ ಕ್ಯಾಪ್ಟೆನ್ಸಿ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ -‌ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು

    ಕೊಹ್ಲಿಗೆ ಕ್ಯಾಪ್ಟೆನ್ಸಿ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ -‌ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು

    ಬೆಂಗಳೂರು: 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಮೆಗಾ ಹರಾಜಿಗೂ ಮುನ್ನವೇ ವಿರಾಟ್‌ ಕೊಹ್ಲಿ (Virat Kohli) ಆರ್‌ಸಿಬಿ ತಂಡದ ಕ್ಯಾಪ್ಟನ್‌ ಆಗಿ ರೀ ಎಂಟ್ರಿ ಕೊಡಲಿದ್ದಾರೆ ಎಂಬ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು ಎರಚಿದೆ.

    ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಅವರು 2022 ರಿಂದ 2024ರ ವರೆಗೆ ಆರ್‌ಸಿಬಿ ತಂಡವನ್ನು ಮುನ್ನಡೆಸಿದರು. ಎರಡು ಬಾರಿ ಪ್ಲೇ ಆಫ್‌ ಹಂತ ತಲುಪಿಸಿದ್ದರೂ, ಟ್ರೋಫಿ ಗೆಲ್ಲುವಲ್ಲಿ ವಿಫಲವಾಯಿತು. ಈ ಬಾರಿ ಆರ್‌ಸಿಬಿ ರಿಟೇನ್‌ ಆಟಗಾರರ ಪಟ್ಟಿಯಿಂದ ಡುಪ್ಲೆಸಿ ಅವರನ್ನು ಹೊರಗಿಟ್ಟ ಬಳಿಕ ಕೊಹ್ಲಿ ನಾಯಕತ್ವ ವಹಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ತಂಡದ ಮ್ಯಾನೇಜ್‌ಮೆಂಟ್ ನಾಯಕತ್ವದ ಬದಲಾವಣೆಯ ಬಗ್ಗೆ ಈಗಾಗಲೇ ಚರ್ಚಿಸಿದೆ. ನಾಯಕತ್ವದ ಸ್ಥಾನ ಅಲಂಕರಿಸಲು ಕೊಹ್ಲಿ ಉತ್ಸುಕರಾಗಿದ್ದಾರೆ ಎಂಬ ವದಂತಿ ಹರಿದಾಡಿತ್ತು. ಆದ್ರೆ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು ಎರಚಿದೆ.

    ವದಂತಿಗಳ ಕುರಿತು ಪ್ರತಿಕ್ರಿಯೆ ನೀಡಿರುವ ಆರ್‌ಸಿಬಿಯ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್, ಈ ವಿಷಯದಲ್ಲಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: IPL Retention | ಡುಪ್ಲೆಸಿ ಔಟ್‌, ಆರ್‌ಸಿಬಿಯಲ್ಲಿ ತ್ರಿಬಲ್‌ ಸ್ಟಾರ್‌; ಕೊಹ್ಲಿ ಸಂಭಾವನೆಯಲ್ಲಿ ದಿಢೀರ್‌ 6 ಕೋಟಿ ಏರಿಕೆ

    ಕೊಹ್ಲಿ ಈ ಹಿಂದೆ 2013 ರಿಂದ 2021 ರವರೆಗೆ ಆರ್‌ಸಿಬಿ ನಾಯಕತ್ವ ವಹಿಸಿದ್ದರು. ತಂಡವನ್ನು ನಾಲ್ಕು ಬಾರಿ ಪ್ಲೇ ಆಫ್‌ಗೆ ತಲುಪಿಸುವಲ್ಲಿ ಶ್ರಮಿಸಿದ್ದರು. ಇದೀಗ 18ನೇ ಆವೃತ್ತಿಗೂ ಕೊಹ್ಲಿ ಆರ್‌ಸಿಬಿ ತಂಡವನ್ನೇ ಪ್ರತಿನಿಧಿಸಿದ್ದಾರೆ. ಮುಂದಿನ ಐಪಿಎಲ್‌ಗೆ ಕೊಹ್ಲಿಯನ್ನು ಫ್ರಾಂಚೈಸಿ 21 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಇದನ್ನೂ ಓದಿ: IPL 2025: ಆರ್‌ಸಿಬಿ ಕ್ಯಾಪ್ಟನ್‌ ಆಗಿ ವಿರಾಟ್‌ ಕೊಹ್ಲಿ ರೀ ಎಂಟ್ರಿ?

    ರಿಟೇನ್‌ ಆಟಗಾರರು ಯಾರು – ಎಷ್ಟು ಸಂಭಾವನೆ?
    ವಿರಾಟ್‌ ಕೊಹ್ಲಿ – 21 ಕೋಟಿ ರೂ.
    ರಜತ್‌ ಪಾಟೀದಾರ್‌ – 11 ಕೋಟಿ ರೂ.
    ಯಶ್‌ ದಯಾಳ್‌ – 5 ಕೋಟಿ ರೂ.

  • ಚಿನ್ನಸ್ವಾಮಿ ಅಂಗಳದಲ್ಲಿಂದು ಆರ್‌ಸಿಬಿಗೆ ಟೈಟಾನ್ಸ್‌ ಸವಾಲು – ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿ ಆತಂಕ!

    ಚಿನ್ನಸ್ವಾಮಿ ಅಂಗಳದಲ್ಲಿಂದು ಆರ್‌ಸಿಬಿಗೆ ಟೈಟಾನ್ಸ್‌ ಸವಾಲು – ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿ ಆತಂಕ!

    ಬೆಂಗಳೂರು: ಐಪಿಎಲ್‌ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿರುವ ಆರ್‌ಸಿಬಿ (IPL 2024) ಮುಂದಿನ ತನ್ನೆಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಇಂದು (ಏ.4) ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟಾನ್ಸ್‌ (Gujarat Taitans) ಎದುರು ಸೆಣಸಲು ಸಜ್ಜಾಗಿದ್ದು, ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.

    2024ರ ಐಪಿಎಲ್‌ ಟೂರ್ನಿಯಲ್ಲಿ ಅಸ್ಥಿರ ಪ್ರದರ್ಶನ ನೀಡಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಕಳೆದ 2 ಪಂದ್ಯಗಳಲ್ಲಿ ಭರ್ಜರಿ ಜಯ ದಾಖಲಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಅದರಲ್ಲೂ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟಾನ್ಸ್‌ ಎದುರು 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಇದೀಗ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಅಂಥದ್ದೇ ಪ್ರದರ್ಶನ ನೀಡಿ ನಾಕ್‌ಔಟ್‌ ಹಂತಕ್ಕೆ ಮತ್ತಷ್ಟು ಹತ್ತಿರವಾಗಲು ಆರ್‌ಸಿಬಿ ಎದುರು ನೋಡುತ್ತಿದೆ. ಇದನ್ನೂ ಓದಿ: ಟಿ20 ವಿಶ್ವಕಪ್‌ ತಂಡದಿಂದ ರಾಹುಲ್‌ ಬಿಟ್ಟಿದ್ದೇಕೆ? ಕೊಹ್ಲಿ ಸ್ಟ್ರೈಕ್‌ರೇಟ್‌ ಬಗ್ಗೆ ರೋಹಿತ್‌ ಹೇಳಿದ್ದೇನು?

    ಅತ್ತ ಹೊಸ ನಾಯಕ ಶುಭಮನ್ ಗಿಲ್‌ ಸಾರಥ್ಯದಲ್ಲಿ ಆರಂಭಿಕ ಪಂದ್ಯಗಳನ್ನು ಗೆದ್ದು ಉತ್ತಮ ಪ್ರದರ್ಶನ ನೀಡಿದ್ದ ಗುಜರಾತ್‌ ಟೈಟಾನ್ಸ್‌ ತಂಡ ಬಳಿಕ ಸತತ ವೈಫಲ್ಯಗಳೊಂದಿಗೆ ನಿರಾಸೆ ಅನುಭವಿಸಿದೆ. ಕಳೆದ 5 ಪಂದ್ಯಗಳಲ್ಲಿ ಟೈಟಾನ್ಸ್‌ 3 ಸೋಲು ಕಂಡಿದೆ. ಈವರೆಗೆ ಆಡಿರುವ 10 ಪಂದ್ಯಗಳಲ್ಲಿ 4 ಜಯ ಮತ್ತು 6 ಸೋಲಿನೊಂದಿಗೆ 8 ಅಂಕಗಳನ್ನು ಕಲೆಹಾಕಿದ್ದು 8ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಉಳಿದ 4 ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದು ಸುಲಭವಾಗಿ ಪ್ಲೇ-ಆಫ್ಸ್‌ ತಲುಪಲು ಗಿಲ್‌ ಪಡೆ ಎದುರು ನೋಡುತ್ತಿದೆ. ಇತ್ತಂಡಗಳು ಒಟ್ಟು 4 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಉಭಯ ತಂಡಗಳು ತಲಾ ಎರಡರಲ್ಲಿ ಗೆಲುವು ಸಾಧಿಸಿದೆ.

    ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್-11
    ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್‌ ಗ್ರೀನ್‌, ದಿನೇಶ್ ಕಾರ್ತಿಕ್, ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್. ಇದನ್ನೂ ಓದಿ: ಮುಂಬೈ ವಿರುದ್ಧ 24 ರನ್‌ಗಳ ಜಯ – ಎರಡನೇ ಸ್ಥಾನಕ್ಕೆ ಜಿಗಿದ ಕೋಲ್ಕತ್ತಾ

    ಮಳೆ ಅಡ್ಡಿಯಾಗುತ್ತಾ?
    ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರವೂ ಬೆಂಗಳೂರಿನ ಕೆಲವೆಡೆ ಮಳೆಯಾಗಿದ್ದು, ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

  • ಮತ್ತೆ ಕಳಪೆ ಸ್ಟ್ರೈಕ್‌ರೇಟ್‌ ಮುಂದುವರಿಸಿದ ಕೊಹ್ಲಿ – ಹಿರಿಯ ಕ್ರಿಕೆಟಿಗರಿಂದ ವ್ಯಾಪಕ ಟೀಕೆ

    ಮತ್ತೆ ಕಳಪೆ ಸ್ಟ್ರೈಕ್‌ರೇಟ್‌ ಮುಂದುವರಿಸಿದ ಕೊಹ್ಲಿ – ಹಿರಿಯ ಕ್ರಿಕೆಟಿಗರಿಂದ ವ್ಯಾಪಕ ಟೀಕೆ

    – ವಿರಾಟ್‌ ಪರ ಬ್ಯಾಟ್‌ ಬೀಸಿದ ಫಾಫ್‌ ಡು ಪ್ಲೆಸಿಸ್‌

    ಹೈದರಾಬಾದ್‌: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ (Virat kohli) ಐಪಿಎಲ್‌ನಲ್ಲಿ ಮತ್ತೆ ಕಳಪೆ ಸ್ಟ್ರೈಕ್‌ರೇಟ್‌ ಮುಂದುವರಿಸಿದ್ದಾರೆ. ಇದರಿಂದ ಹಿರಿಯ ಕ್ರಿಕೆಟಿಗರೂ ವಿರಾಟ್‌ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಕೊಹ್ಲಿಯನ್ನು ಟಿ20 ವಿಶ್ವಕಪ್‌ನಿಂದ ಕೈಬಿಡುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.

    ಹೌದು. ಇತ್ತೀಚೆಗೆ ರಾಜಸ್ಥಾನ್‌ ರಾಯಲ್ಸ್‌ (RR) ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 67 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಐಪಿಎಲ್‌ ಇತಿಹಾಸದಲ್ಲೇ ಅತ್ಯಂತ ನಿಧಾನಗತಿಯ ಶತಕವಾಗಿತ್ತು. ಗುರುವಾರ ಹೈದರಾಬಾದ್‌ (SRH) ವಿರುದ್ಧ ನಡೆದ ಪಂದ್ಯದಲ್ಲೂ 118.60 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಕೊಹ್ಲಿ 43 ಎಸೆತಗಳಲ್ಲಿ ಕೇವಲ 51 ರನ್‌ ಸಿಡಿಸಿದ್ದಾರೆ. ಇದರಲ್ಲಿ 4 ಬೌಂಡರಿ, ಒಂದೇ ಒಂದು ಸಿಕ್ಸರ್‌ ದಾಖಲಾಗಿದೆ. ಇದು ಕೆಲ ಅಭಿಮಾನಿಗಳ ಅಸಮಾಧಾನಕ್ಕೂ ಕಾರಣವಾಗಿದೆ.

    ಹೈದರಾಬಾದ್‌ ವಿರುದ್ಧ ಕೊಹ್ಲಿಯೊಂದಿಗೆ ಕಣಕ್ಕಿಳಿದಿದ್ದ ರಜತ್‌ ಪಾಟಿದಾರ್‌ ಕೇವಲ 20 ಎಸೆತಗಳಲ್ಲಿ ಸ್ಫೋಟಕ ಫಿಫ್ಟಿ ಸಿಡಿಸಿದ್ದರು. ನಂತರ ಬಂದ ಕ್ಯಾಮರೂನ್‌ ಗ್ರೀನ್‌ 185 ಸ್ಟ್ರೈಕ್‌ರೇಟ್‌ನಲ್ಲಿ 37 ರನ್‌ ಚಚ್ಚಿದ್ದರು. ಆದ್ರೆ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 51 ರನ್‌ ಗಳಿಸಲು 43 ಎಸೆತಗಳನ್ನು ತೆಗೆದುಕೊಂಡರು. ಹಾಗಾಗಿ ಕೊಹ್ಲಿ ಕಳಪೆ ಸ್ಟ್ರೈಕ್‌ರೇಟ್‌ ವಿರುದ್ಧ ಸುನೀಲ್‌ ಗವಾಸ್ಕರ್‌, ಇರ್ಫಾನ್‌ ಪಠಾಣ್‌ ಅಸಮಾಧಾನ ಹೊರಹಾಕಿದ್ದಾರೆ.

    ಕೊಹ್ಲಿ ಬೆನ್ನಿಗೆ ನಿಂತ ಕ್ಯಾಪ್ಟನ್‌:
    ವಿರಾಟ್‌ ಕೊಹ್ಲಿ ಸದ್ಯ ಅಗ್ರ ಸ್ಕೋರರ್‌ ಆಗಿದ್ದಾರೆ. ಇತರ ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್‌ ಪರೇಡ್‌ ನಡೆಸುತ್ತಿದ್ದರೂ ಕೊಹ್ಲಿ ರನ್‌ ಕಲೆಹಾಕುತ್ತಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ನಮ್ಮ ಹೋರಾಟ ಉತ್ತಮವಾಗಿತ್ತು. ಕೆಕೆಆರ್‌ ವಿರುದ್ಧ ತೀವ್ರ ಪೈಪೋಟಿ ನೀಡಿದ ಹೊರತಾಗಿಯೂ 1 ರನ್‌ನಿಂದ ಸೋಲಬೇಕಾಯಿತು. ಆರಂಭಿಕ ಪಂದ್ಯಗಳಲ್ಲಿ ಕೊಹ್ಲಿ ಮಾತ್ರ ರನ್‌ ಗಳಿಸುತ್ತಿದ್ದರು. ಈಗ ಇತರ ಆಟಗಾರರು ರನ್‌ ಗಳಿಸುತ್ತಿದ್ದಾರೆ. ಕ್ಯಾಮರೂನ್‌ ಗ್ರೀನ್‌ ಸಹ ಫಾರ್ಮ್‌ಗೆ ಮರಳಿದ್ದಾರೆ ಎಂದು ಶ್ಲಾಘಿಸಿದ್ದಾರೆ.

    ತವರಿನಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್‌ 287 ರನ್‌ ಗಳಿಸಿದ್ದಾಗ ನಮ್ಮ ತಂಡ 262 ರನ್‌ ಗಳಿಸಿತ್ತು. ಇದು ಸಹ ಉತ್ತಮ ಪೈಪೋಟಿ ಆಗಿತ್ತು. ಏಕೆಂದರೆ ಆ ಸಮಯದಲ್ಲಿ ಪ್ರಮುಖ ವಿಕೆಟ್‌ ಕಳೆದುಕೊಂಡಿದ್ದ ಕಾರಣ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಹೇಳಿಕೊಂಡಿದ್ದಾರೆ.

    ಹೈದರಾಬಾದ್‌ನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 206 ರನ್‌ ಬಾರಿಸಿತ್ತು. 207 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಸನ್‌ ರೈಸರ್ಸ್‌ ಹೈದರಾಬಾದ್‌ 8 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

  • IPL 2024: ತವರಿನಲ್ಲೇ ಸನ್‌ ರೈಸರ್ಸ್‌ಗೆ ಚೊಂಬು – ಅಬ್ಬರಿಸಿ ಬೊಬ್ಬರಿದ ಆರ್‌ಸಿಬಿಗೆ 35 ರನ್‌ಗಳ ಭರ್ಜರಿ ಜಯ

    IPL 2024: ತವರಿನಲ್ಲೇ ಸನ್‌ ರೈಸರ್ಸ್‌ಗೆ ಚೊಂಬು – ಅಬ್ಬರಿಸಿ ಬೊಬ್ಬರಿದ ಆರ್‌ಸಿಬಿಗೆ 35 ರನ್‌ಗಳ ಭರ್ಜರಿ ಜಯ

    ಹೈದರಾಬಾದ್‌: ಕೊನೆಗೂ ತವರಿನಲ್ಲಿ ಅನುಭವಿಸಿದ ವಿರೋಚಿತ ಸೋಲಿಗೆ ಆರ್‌ಸಿಬಿ, ಸನ್‌ ರೈಸರ್ಸ್‌ ಹೈದರಾಬಾದ್‌ (SRH) ವಿರುದ್ಧ ಸೇಡು ತೀರಿಸಿಕೊಂಡಿದೆ. ಇಲ್ಲಿನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಹೈದರಾಬಾದ್‌ ವಿರುದ್ಧ 35 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 206 ರನ್‌ ಬಾರಿಸಿತ್ತು. 207 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಸನ್‌ ರೈಸರ್ಸ್‌ ಹೈದರಾಬಾದ್‌ 8 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

    ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ್ದ ಸನ್‌ ರೈಸರ್ಸ್‌ ತಂಡ ಆರಂಭದಿಂದಲೇ ಪ್ರಮುಖ ವಿಕೆಟ್‌ಗಳನ್ನ ಕಳೆದುಕೊಂಡಿತು. ಆರ್‌ಸಿಬಿ ತವರು ಕ್ರೀಡಾಂಗಣದಲ್ಲಿ ಅಬ್ಬರಿಸಿ ಬೊಬ್ಬರಿದಿದ್ದ ಸನ್‌ ರೈಸರ್ಸ್‌ ಬ್ಯಾಟರ್‌ಗಳು ಪೆವಿಲಿಯನ್‌ ಪರೇಡ್‌ ನಡೆಸಿದರು. 5 ಓವರ್‌ಗಳಲ್ಲಿ 56 ರನ್‌ಗಳಿಗೆ ಹೈದರಾಬಾದ್‌ ತಂಡ ಪ್ರಮುಖ ನಾಲ್ಕು ವಿಕೆಟ್‌ ಕಳೆದುಕೊಂಡಿತ್ತು. ನಂತರ ಕ್ರೀಸ್‌ಗಿಳಿದ ಬ್ಯಾಟರ್ಸ್‌ಗಳು ಆರ್‌ಸಿಬಿ ಎದುರು ನೆಲಕಚ್ಚಿದ್ದರಿಂದ ಸನ್‌ರೈಸರ್ಸ್‌ ತಂಡ ಸೋಲು ಎದುರಿಸಬೇಕಾಯಿತು.

    ಹೈದರಾಬಾದ್‌ ಪರ ಅಭಿಷೇಕ್‌ ಶರ್ಮಾ (Abhishek Sharma) 31 ರನ್‌, ನಾಯಕ ಪ್ಯಾಟ್‌ ಕಮ್ಮಿನ್ಸ್‌ (Pat Cummins) 31 ರನ್‌, ನಿತೀಶ್‌ ಕುಮಾರ್‌ ರೆಡ್ಡಿ 13 ರನ್‌, ಟ್ರಾವಿಸ್‌ ಹೆಡ್‌ 1 ರನ್‌, ಹೆನ್ರಿಕ್‌ ಕ್ಲಾಸೆನ್‌, ಏಡನ್‌ ಮಾರ್ಕ್ರಮ್‌ ತಲಾ 7 ರನ್‌, ಅಬ್ದುಲ್‌ ಸಮದ್‌ 10 ರನ್‌, ಭುವನೇಶ್ವರ್‌ ಕುಮಾರ್‌ 13 ರನ್‌, ಶಹಬಾಜ್‌ ಅಹ್ಮದ್‌ 40 ರನ್‌, ಜಯದೇವ್‌ ಉನಡ್ಕಟ್‌ 8 ರನ್‌ ಗಳಿಸಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಆರ್‌ಸಿಬಿ ಪರ ನಾಯಕ ಫಾಫ್‌ ಡು ಪ್ಲೆಸಿಸ್‌ ಹಾಗೂ ವಿರಾಟ್‌ ಕೊಹ್ಲಿ (Virat Kohli) ಸ್ಪೋಟಕ ಆರಂಭ ತಂದುಕೊಟ್ಟಿದ್ದರು. ಮೊದಲ ವಿಕೆಟ್‌ಗೆ ಈ ಜೋಡಿ 3.5 ಓವರ್‌ಗಳಲ್ಲೇ ಬರೋಬ್ಬರಿ 48 ರನ್‌ಗಳ ಜೊತೆಯಾಟ ನೀಡಿತ್ತು. ಡುಪ್ಲೆಸಿಸ್‌ (Faf du Plessis) 12 ಎಸೆತಗಳಲ್ಲಿ 25 ರನ್‌ ಚಚ್ಚಿ ಔಟಾದರು. ಈ ಬೆನ್ನಲ್ಲೇ ವಿಲ್‌ ಜಾಕ್ಸ್‌ ಕೇವಲ 6 ರನ್‌ ಗಳಿಸಿ ಪೆವಿಲಿಯನ್‌ ಸೇರಿಕೊಂಡರು. ನಂತರ ಕ್ರೀಸ್‌ಗೆ ಬಂದ ರಜತ್‌ ಪಾಟೀದಾರ್‌ ಆರೆಂಜ್‌ ಆರ್ಮಿ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಬೆಂಡೆತ್ತಿದರು. ಬ್ಯಾಕ್‌ ಟು ಬ್ಯಾಕ್‌ ಸಿಕ್ಸಸ್‌ ಸಿಡಿಸುವ ಮೂಲಕ ಕೇವಲ 20 ಎಸೆತಗಳಲ್ಲೇ ಅರ್ಧಶತಕ ಪೂರೈಸಿದರು. ಇದರೊಂದಿಗೆ ಪವರ್‌ ಪ್ಲೇನಲ್ಲಿ ಸ್ಫೋಟಕ ಇನ್ನಿಂಗ್ಸ್‌ ಕಟ್ಟಿದ್ದ ಕೊಹ್ಲಿ ನಿಧಾಗತಿಯ ಅರ್ಧಶತಕ ಪೂರೈಸಿದರು. ಕೊನೆಯಲ್ಲಿ ಗ್ರೀನ್‌ ಮತ್ತಿತರ ಬ್ಯಾಟರ್‌ಗಳ ಸಂಘಟಿತ ಪ್ರದರ್ಶನದಿಂದ ಆರ್‌ಸಿಬಿ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಆರ್‌ಸಿಬಿ ಪರ ರಜತ್‌ ಪಾಟೀದಾರ್‌ 20 ಎಸೆತಗಳಲ್ಲಿ 50 ರನ್‌ (5 ಸಿಕ್ಸರ್‌, 2 ಬೌಂಡರಿ), ವಿರಾಟ್‌ ಕೊಹ್ಲಿ 51 ರನ್‌ (43 ಎಸೆತ, 4 ಬೌಂಡರಿ, 1 ಸಿಕ್ಸರ್‌), ಡುಪ್ಲೆಸಿಸ್‌ 25 ರನ್‌, ಕ್ಯಾಮರೂನ್‌ ಗ್ರೀನ್‌ 37 ರನ್‌, ಮಹಿಪಾಲ್‌ ಲೋಮ್ರೋರ್‌ 7ರನ್‌, ದಿನೇಶ್‌ ಕಾರ್ತಿಕ್‌ 11 ರನ್‌, ಸ್ವಪ್ನಿಲ್ ಸಿಂಗ್‌ 12 ರನ್‌ ಗಳಿಸಿದರು.

  • ಆ 2 ರನ್‌ ಗೆಲುವು ತಂದುಕೊಡ್ತಿತ್ತು; ಆರ್‌ಸಿಬಿ ವಿರೋಚಿತ ಸೋಲಿಗೆ ಇದೇ ಕಾರಣ ಅಂದ್ರು ಫ್ಯಾನ್ಸ್‌!

    ಆ 2 ರನ್‌ ಗೆಲುವು ತಂದುಕೊಡ್ತಿತ್ತು; ಆರ್‌ಸಿಬಿ ವಿರೋಚಿತ ಸೋಲಿಗೆ ಇದೇ ಕಾರಣ ಅಂದ್ರು ಫ್ಯಾನ್ಸ್‌!

    – ನಿಯಮದ ಪ್ರಕಾರ ಕೊಹ್ಲಿ ಔಟ್ – ಅಂಪೈರ್‌ ಪರ ಬ್ಯಾಟ್‌ ಬೀಸಿದ ಡುಪ್ಲೆಸಿಸ್‌
    – ಅಂಪೈರ್‌ ವಿರುದ್ಧ ಫ್ಯಾನ್ಸ್‌ ಫುಲ್‌ ಗರಂ

    ಕೋಲ್ಕತ್ತಾ: ಈಡನ್‌ ಗಾರ್ಡನ್‌ ಮೈದಾನದಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಆರ್‌ಸಿಬಿ (RCB) ಕಂಡ ವಿರೋಚಿತ ಸೋಲು ಅಭಿಮಾನಿಗಳ (RCB Fans) ವಲಯದಲ್ಲಿ ಇನ್ನೂ ಬಿಸಿ-ಬಿಸಿ ಚರ್ಚೆಯಾಗುತ್ತಲೇ ಇದೆ. ಆ 2 ರನ್‌ ಇದ್ದಿದ್ದರೇ ಆರ್‌ಸಿಬಿ, ಗೆದ್ದೇ ಗೆಲ್ಲುತ್ತಿತ್ತು, ಪ್ಲೇ ಆಫ್‌ ಕನಸು ಜೀವಂತವಾಗಿರುತ್ತಿತ್ತು ಎಂದು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ವೀಡಿಯೋ ಸಾಕ್ಷಿಯೊಂದನ್ನೂ ಅಭಿಮಾನಿಗಳು ಹಂಚಿಕೊಂಡಿದ್ದಾರೆ.

    223 ರನ್‌ಗಳ ಬೃಹತ್‌ ಮೊತ್ತ ಚೇಸಿಂಗ್‌ ಆರಂಭಿಸಿದ್ದ ಆರ್‌ಸಿಬಿ ಗೆಲುವಿನ ಹಾದಿಯಲ್ಲಿ ನಡೆಯುತ್ತಿತ್ತು. ಆದ್ರೆ 17ನೇ ಓವರ್‌ನ 5ನೇ ಎಸೆತದಲ್ಲಿ ವರುಣ್‌ ಚಕ್ರವರ್ತಿ ಅವರ ಬೌಲಿಂಗ್‌ಗೆ ಸುಯೇಶ್‌ ಪ್ರಭುದೇಸಾಯಿ (Suyash Prabhudesai) ಸಿಕ್ಸರ್‌ ಬಾರಿಸಿದರು. ಆದ್ರೆ ಆನ್‌ಫೀಲ್ಡ್‌ ಅಂಪೈರ್‌ (umpires) ಯಾವುದೇ ನಿರ್ಧಾರ ಪ್ರಕಟಿಸದೇ 3ನೇ ಅಂಪೈರ್‌ ಮೊರೆ ಹೋದರು. ವೀಡಿಯೋನಲ್ಲಿ ಬಾಲ್‌ ಗ್ರೌಂಡ್‌ಗೆ ತಾಕುವ ಮುನ್ನ ಬೌಂಡರಿ ಲೈನ್‌ಗೆ ಬಡಿದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಆದಾಗ್ಯೂ ಟಿವಿ ಅಂಪೈರ್‌ ಸಿಕ್ಸರ್‌ ಅನ್ನು ಬೌಂಡರಿ ಎಂದು ತೀರ್ಪು ನೀಡಿದರು. ಈ ವೀಡಿಯೋ ಹಂಚಿಕೊಂಡಿರುವ ಆರ್‌ಸಿಬಿ ಅಭಿಮಾನಿಗಳು, 2 ರನ್‌ ಹೆಚ್ಚುವರಿ ಸೇರಿದ್ದರೆ ಆರ್‌ಸಿಬಿ ಗೆದ್ದೇ ಗೆಲ್ಲುತ್ತಿತ್ತು ಎಂದು ಹೇಳಿಕೊಂಡಿದ್ದಾರೆ.

    ರೂಲ್ಸ್‌ ಪ್ರಕಾರ ಕೊಹ್ಲಿ ಔಟ್:
    ವೇಗದ ಬೌಲರ್‌ ಹರ್ಷಿತ್‌ ರಾಣಾ ಎಸೆದ ಸ್ಲೋ ಫುಲ್‌ ಟಾಸ್‌ ಎಸೆತವನ್ನು ರಕ್ಷಣಾತ್ಮಕ ಆಟವಾಡುವ ಪ್ರಯತ್ನದಲ್ಲಿ ಕೊಹ್ಲಿ ವಿಫಲರಾದರು. ಅಷ್ಟೇ ಅಲ್ಲದೇ ಆನ್‌ಫೀಲ್ಡ್‌ ಅಂಪೈರ್‌ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿಆರ್‌ಎಸ್‌ (DRS) ತೆಗೆದುಕೊಂಡರು. ಕೊಹ್ಲಿ ಕ್ರೀಸ್‌ ಒಳಗೆ ನಿಂತು ಚೆಂಡನ್ನು ಎದುರಿಸಿದ್ದರೆ, ಆಗ ಅದು ಸೊಂಟದ ಮೇಲ್ಭಾಗಕ್ಕೆ ಬಿದ್ದ ಫುಲ್‌ ಟಾಸ್‌ ನೋಬಾಲ್‌ ಆಗಿರುತ್ತಿತ್ತು. ಆದರೆ ಕೊಹ್ಲಿ ಕ್ರೀಸ್‌ನಿಂದ ಮುಂದಿದ್ದರು. ಇದನ್ನೂ ಓದಿ: ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ರೋಹಿತ್‌ ವಿರೋಧ; ಬಿಸಿಸಿಐ ಹೇಳಿದ್ದೇನು? – ಏನಿದು ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌?

    ಅಲ್ಲದೇ ಹಾಕ್‌ ಐನಲ್ಲಿ (ಚೆಂಡು ಬೀಳುವ ಕ್ರಮವನ್ನು ಸ್ಕ್ರೀನ್‌ನಲ್ಲಿ ಅಂದಾಜಿಸುವ ಚಿತ್ರಣ) ಚೆಂಡು ವಿಕೆಟ್‌ ನೇರವಾಗಿ ಇರುವು ಕಂಡುಬಂದಿತು. ಆದ್ದರಿಂದ ಕೊಹ್ಲಿ ಅವರ ಕ್ಯಾಚ್‌ ಅನ್ನು ಔಟ್‌ ಎಂದು ತೀರ್ಪು ನೀಡಲಾಯಿತು. ಬಳಿಕ ಅಂಪೈರ್‌ ತೀರ್ಪಿನ ವಿರುದ್ಧವೂ ಆನ್‌ಫೀಲ್ಡ್‌ನಲ್ಲೇ ಅಸಮಾಧಾನ ಹೊರಹಾಕಿದ ಕೊಹ್ಲಿ, ಅಂಪೈರ್‌ಗಳ ಬಳಿ ತೆರಳಿ ವಾದಕ್ಕೆ ಇಳಿದಿದ್ದರು. ಬಳಿಕ ಡ್ರೆಸಿಂಗ್‌ ರೂಮ್‌ನಲ್ಲೂ ಸಹ ಆಟಗಾರರ ಜೊತೆಗೆ ತಮ್ಮ ವಾದ ಮುಂದುವರಿಸಿದರು.

    ನಾಯಕ ಡುಪ್ಲೆಸಿಸ್‌ ಹೇಳಿದ್ದೇನು?
    ಈ ಬಗ್ಗೆ ಪಂದ್ಯದ ಬಳಿಕ ಮಾತನಾಡಿದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್‌, ಆನ್‌ಫೀಲ್ಡ್‌ ಅಂಪೈರ್‌ಗಳ ಪರ ಬ್ಯಾಟ್‌ ಬೀಸಿದರು. ನಿಯಮಗಳ ಪ್ರಕಾರ ವಿರಾಟ್‌ ಕೊಹ್ಲಿ ಔಟ್‌ ಆಗಿದ್ದಾರೆ. ಅಂಪೈರ್‌ಗಳು ತೆಗೆದುಕೊಂಡ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ. ಶತಾಯ ಗತಾಯ ನಾವು ಪಂದ್ಯ ಗೆಲ್ಲಲೇ ಬೇಕಿತ್ತು. ಟೂರ್ನಿಯಲ್ಲಿ ಪ್ಲೇ ಆಫ್‌ ರೇಸ್‌ನಲ್ಲಿ ಉಳಿಯಲು ಈ ಗೆಲುವು ಅಗತ್ಯವಿತ್ತು. ಆದ್ರೆ ನಾವು ನಮ್ಮ ಅಭಿಮಾನಿಗಳಿಗೂ ನಿರಾಸೆ ಮೂಡಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?

    ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 222 ರನ್ ಬಾರಿಸಿತ್ತು. 223 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್‌ ಗಳಿಸಿ ವಿರೋಚಿತ ಸೋಲನುಭವಿಸಿತು. ಇದನ್ನೂ ಓದಿ: ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

  • IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?

    IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?

    – ಸೋಲಿನ ಬಳಿಕ ನಾಯಕ ಫಾಫ್‌ ಡು ಪ್ಲೆಸಿಸ್‌ ಹೇಳಿದ್ದೇನು?

    ಕೋಲ್ಕತ್ತಾ: ಇಲ್ಲಿನ ಈಡನ್‌ ಗಾರ್ಡನ್‌ನಲ್ಲಿ ಕೆಕೆಆರ್‌ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 1 ರನ್‌ ವಿರೋಚಿತ ಸೋಲಿಗೆ ತುತ್ತಾಯಿತು. ಆದ್ರೆ ಈ ಪಂದ್ಯದಲ್ಲಿ ಆರ್‌ಸಿಬಿ ತಂಡ 20 ರನ್‌ ಹೆಚ್ಚುವರಿಯಾಗಿ ಬಿಟ್ಟುಕೊಟ್ಟಿದ್ದೇ ಸೋಲಿಗೆ ಕಾರಣವಾಯ್ತಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಅಲ್ಲದೇ ಇಂದಿನ ಸೋಲಿಗೆ ಕಾರಣಗಳೇನು ಎಂಬುದನ್ನು ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

    ಕೆಕೆಆರ್‌ಗೆ 20 ರನ್‌ ಎಕ್ಸ್‌ಟ್ರಾ ಲಾಭವಾಯ್ತಾ?
    ಹೌದು. ಆರಂಭದಲ್ಲಿ ರನ್‌ ಚಚ್ಚಿಸಿಕೊಂಡರೂ ಬಳಿಕ ಬಿಗಿ ಹಿಡಿತ ಸಾಧಿಸಲು ಮುಂದಾಗಿದ್ದ ಆರ್‌ಸಿಬಿ ಬೌಲರ್‌ಗಳು ಬಳಿಕ ವೈಡ್‌, ನೋಬಾಲ್‌, ಲೆಗ್‌ ಬೈಸ್‌ಗಳ ಮೂಲಕ ರನ್‌ ಬಿಟ್ಟುಕೊಟ್ಟರು. ಬೈಸ್‌, ಲೆಗ್‌ಬೈಸ್‌, ನೋಬಾಲ್‌ ಹಾಗೂ ವೈಡ್‌ ಮೂಲಕ ಕ್ರಮವಾಗಿ 4,7,2,7 ರನ್‌ಗಳನ್ನು ಬಿಟ್ಟುಕೊಟ್ಟರು. ಪರಿಣಾಮ ಕೆಕೆಆರ್‌ 220 ರನ್‌ಗಳ ಗಡಿ ದಾಟಲು ಸಾಧ್ಯವಾಯಿತು. ಇದನ್ನೂ ಓದಿ: ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ರೋಹಿತ್‌ ವಿರೋಧ; ಬಿಸಿಸಿಐ ಹೇಳಿದ್ದೇನು? – ಏನಿದು ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌?

    2 ಓವರ್‌ನಲ್ಲಿ 38 ರನ್‌ ಕೊಟ್ಟ ಯಶ್‌ ದಯಾಳ್‌:
    200 ರನ್‌ಗಳ ಒಳಗೆ ಕೆಕೆಆರ್‌ ತಂಡವನ್ನು ಕಟ್ಟಿಹಾಕುವ ಪ್ರಯತ್ನದಲ್ಲಿದ್ದ ಆರ್‌ಸಿಬಿಗೆ ಯಶ್‌ ದಯಾಳ್‌ ದುಬಾರಿಯಾದರು. 16 ಓವರ್‌ ಮುಕ್ತಾಯಕ್ಕೆ ಕೆಕೆಆರ್‌‌ 5 ವಿಕೆಟ್‌ಗೆ 155 ರನ್‌ ಗಳಿಸಿತ್ತು. ಆದ್ರೆ 17ನೇ ಓವರ್‌ನಲ್ಲೇ ಯಶ್‌ ದಯಾಳ್‌, 2 ವೈಡ್‌, ನೋಬಾಲ್‌, ಬೈಸ್‌ ಮಾತ್ರವಲ್ಲದೇ ಸಿಕ್ಸರ್-ಬೌಂಡರಿ ಚಚ್ಚಿಸಿಕೊಂಡು 22 ರನ್‌ ಬಿಟ್ಟುಕೊಟ್ಟರು. ಅಲ್ಲದೇ 19ನೇ ಓವರ್‌ನಲ್ಲಿ ಮೊಹಮ್ಮದ್‌ ಸಿರಾಜ್‌ ಸಿಕ್ಸರ್‌-ಬೌಂಡರಿ, ವೈಡ್‌ ಮೂಲಕ 20 ರನ್‌ ಬಿಟ್ಟುಕೊಟ್ಟರು. ಬಳಿಕ ಕೊನೇ ಓವರ್‌ನಲ್ಲೇ ಯಶ್‌ ದಯಾಳ್‌ ಮತ್ತೆ 16 ರನ್‌ ಚಚ್ಚಿಸಿಕೊಂಡರು. ಇದು ಆರ್‌ಸಿಬಿ ತಂಡಕ್ಕೆ ದುಬಾರಿಯಾಯಿತು. ಇದನ್ನೂ ಓದಿ: ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

    2023ರ ಐಪಿಎಲ್‌ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದಲ್ಲಿದ್ದ ಯಶ್‌ ದಯಾಳ್‌ ಇದೇ ರೀತಿ ತಂಡದ ಸೋಲಿಗೆ ಕಾರಣವಾಗಿದ್ದರು. ಕೊನೇ ಓವರ್‌ನಲ್ಲಿ 29 ರನ್‌ ಬೇಕಿದ್ದಾಗ ರಿಂಕು ಸಿಂಗ್‌ ಅವರಿಂದ ಸತತ 5 ಸಿಕ್ಸರ್‌ ಚಚ್ಚಿಸಿಕೊಂಡಿದ್ದರು. ಇದನ್ನೂ ಓದಿ: ಕೊನೇ ಓವರ್‌ನಲ್ಲಿ 6,6,6; ಹೋರಾಡಿ ಸೋತ ಆರ್‌ಸಿಬಿ – ಕೆಕೆಆರ್‌ಗೆ 1 ರನ್‌ ರೋಚಕ ಜಯ

    ಅಬ್ಬರಿಸದ ಡಿಕೆ, ಕೈಕೊಟ್ಟ ಗ್ರೀನ್:‌
    ಹಿಂದಿನ ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 35 ಎಸೆತಗಳಲ್ಲಿ ಸ್ಫೋಟಕ 85 ರನ್‌ ಚಚ್ಚಿದ್ದ ದಿನೇಶ್‌ ಕಾರ್ತಿಕ್‌ ಕೆಕೆಆರ್‌ ಪರ ಅಬ್ಬರಿಸುವಲ್ಲಿ ವಿಫಲರಾದರು. 18 ಎಸೆತಗಳಲ್ಲಿ 25 ರನ್‌ ಗಳಿಸಿ ಔಟಾದರು. ಅಲ್ಲದೇ ದುಬಾರಿ ಬೆಲೆಗೆ ಆರ್‌ಸಿಬಿ ತಂಡಕ್ಕೆ ಬಿಕರಿಯಾದ ಕ್ಯಾಮರೂನ್‌ ಗ್ರೀನ್‌ ಕೇವಲ 6 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಇದು ತಂಡದ ಸೋಲಿಗೆ ಕಾರಣವಾಯಿತು.

    ಪಂದ್ಯದ ಸೋಲಿನ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ನಾಯಕ ಫಾಫ್ ಡು ಪ್ಲೆಸಿಸ್, ನಾವು ಗೆಲುವಿನ ಹಾದಿಗೆ ಮರಳಲು ಹತಾಶರಾಗಿದ್ದೇವೆ. ನಮಗೆ ನಂಬಲಸಾಧ್ಯವಾದ ಅಭಿಮಾನಿ ಬಳಗವಿದೆ. ಪ್ರತಿ ಪಂದ್ಯದಲ್ಲೂ ಗೆದ್ದರೂ ಸೋತರೂ ‌ʻಆರ್‌ಸಿಬಿ, ಆರ್‌ಸಿಬಿ ಘೋಷಣೆ ಮೊಳಗುತ್ತಲೇ ಇರುತ್ತದೆ. ಆದರೀಗ ನಮ್ಮ ಅಭಿಮಾನಿಗಳು ಹೆಮ್ಮೆಪಡುವಂತೆ ಮಾಡುದರಲ್ಲೂ ನಾವು ವಿಫಲರಾಗಿದ್ದೇವೆ ಎಂದು ಬೇಸರ ಹೊರಹಾಕಿದ್ದಾರೆ.

    ಟಾಸ್ ಸೋತು ಮೊದಲು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 222 ರನ್ ಬಾರಿಸಿತ್ತು. 223 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್‌ ಗಳಿಸಿ ವಿರೋಚಿತ ಸೋಲನುಭವಿಸಿತು.

    ಕೊನೇ ಓವರ್‌ ಥ್ರಿಲ್ಲರ್‌:
    223 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ಗೆಲುವಿಗೆ ಕೊನೇ ಓವರ್‌ನಲ್ಲಿ 21 ರನ್‌ ಅಗತ್ಯವಿತ್ತು. ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ನಲ್ಲಿದ್ದರು. ಈ ವೇಳೆ ಕ್ರೀಸ್‌ನಲ್ಲಿದ್ದ ಕರ್ಣ್‌ ಶರ್ಮಾ (Karn Sharma) ಮೊದಲ ಎಸೆತದಲ್ಲೇ ಸಿಕ್ಸರ್‌ ಬಾರಿಸಿದ್ರು. 2ನೇ ಎಸೆತದಲ್ಲಿ ರನ್‌ ಗಳಿಸುವಲ್ಲಿ ವಿಫಲರಾದರೂ 3-4ನೇ ಎಸೆತಗಳನ್ನು ಸತತವಾಗಿ ಸಿಕ್ಸರ್‌ಗೆ ಅಟ್ಟಿದರು. ಈ ವೇಳೆ ಪಂದ್ಯ ರೋಚಕ ಹಂತಕ್ಕೆ ತಿರುಗಿತ್ತು. ಡಗೌಟ್‌ನಲ್ಲಿದ್ದ ಆಟಗಾರರು ಮಾತ್ರವಲ್ಲದೇ ಅಭಿಮಾನಿಗಳಲ್ಲೂ ಹೃದಯ ಬಡಿತ ಹೆಚ್ಚಾಗಿತ್ತು. ಮೈ ರೋಮಾಂಚನಗೊಳಿಸುವಂತಿತ್ತು. ಆದ್ರೆ ಕೊನೇ 2 ಎಸೆತಗಳಲ್ಲಿ ಮೂರು ರನ್‌ಗಳ ಬೇಕಿದ್ದಾಗಲೇ ಕರ್ಣ್‌ ಶರ್ಮಾ 1 ರನ್‌ ಕದಿಯಲು ಯತ್ನಿಸಿ ಸ್ಟಾರ್ಕ್‌ಗೆ (Mitchell Starc) ಕ್ಯಾಚ್‌ ನೀಡಿ ಔಟಾದರು. ಕೊನೇ ಎಸೆತದಲ್ಲಿ ಸ್ಟ್ರೈಕ್‌ ಮಾಡಿದ ಲಾಕಿ ಫರ್ಗೂಸನ್‌ 2 ರನ್‌ ಕದಿಯಲು ಯತ್ನಿಸಿ ರನೌಟ್‌ಗೆ ತುತ್ತಾದರು. ಇದರಿಂದ ಆರ್‌ಸಿಬಿ 1 ರನ್‌ನಿಂದ ವಿರೋಚಿತ ಸೋಲಿಗೆ ತುತ್ತಾಯಿತು.

  • ಕೊನೇ ಓವರ್‌ನಲ್ಲಿ 6,6,6; ಹೋರಾಡಿ ಸೋತ ಆರ್‌ಸಿಬಿ – ಕೆಕೆಆರ್‌ಗೆ 1 ರನ್‌ ರೋಚಕ ಜಯ

    ಕೊನೇ ಓವರ್‌ನಲ್ಲಿ 6,6,6; ಹೋರಾಡಿ ಸೋತ ಆರ್‌ಸಿಬಿ – ಕೆಕೆಆರ್‌ಗೆ 1 ರನ್‌ ರೋಚಕ ಜಯ

    – ಬೆಂಗಳೂರಿಗೆ ಸತತ 6ನೇ ಸೋಲು

    ಕೋಲ್ಕತ್ತಾ: ಕೊನೇ ಓವರ್‌ನಲ್ಲಿ ಮೂರು ಸಿಕ್ಸರ್‌ ಸಿಡಿಸಿದ ಹೊರತಾಗಿಯೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಕೆಕೆಆರ್‌ (KKR) ವಿರುದ್ಧ 1 ರನ್‌ಗಳ ವಿರೋಚಿತ ಸೋಲಿಗೆ ತುತ್ತಾಯಿತು.

    ಕೊನೇ ಓವರ್‌ ಥ್ರಿಲ್ಲರ್‌:
    223 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ಗೆಲುವಿಗೆ ಕೊನೇ ಓವರ್‌ನಲ್ಲಿ 21 ರನ್‌ ಅಗತ್ಯವಿತ್ತು. ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ನಲ್ಲಿದ್ದರು. ಈ ವೇಳೆ ಕ್ರೀಸ್‌ನಲ್ಲಿದ್ದ ಕರ್ಣ್‌ ಶರ್ಮಾ (Karn Sharma) ಮೊದಲ ಎಸೆತದಲ್ಲೇ ಸಿಕ್ಸರ್‌ ಬಾರಿಸಿದ್ರು. 2ನೇ ಎಸೆತದಲ್ಲಿ ರನ್‌ ಗಳಿಸುವಲ್ಲಿ ವಿಫಲರಾದರೂ 3-4ನೇ ಎಸೆತಗಳನ್ನು ಸತತವಾಗಿ ಸಿಕ್ಸರ್‌ಗೆ ಅಟ್ಟಿದರು. ಈ ವೇಳೆ ಪಂದ್ಯ ರೋಚಕ ಹಂತಕ್ಕೆ ತಿರುಗಿತ್ತು. ಡಗೌಟ್‌ನಲ್ಲಿದ್ದ ಆಟಗಾರರು ಮಾತ್ರವಲ್ಲದೇ ಅಭಿಮಾನಿಗಳಲ್ಲೂ ಹೃದಯ ಬಡಿತ ಹೆಚ್ಚಾಗಿತ್ತು. ಮೈ ರೋಮಾಂಚನಗೊಳಿಸುವಂತಿತ್ತು. ಆದ್ರೆ ಕೊನೇ 2 ಎಸೆತಗಳಲ್ಲಿ ಮೂರು ರನ್‌ಗಳ ಬೇಕಿದ್ದಾಗಲೇ ಕರ್ಣ್‌ ಶರ್ಮಾ 1 ರನ್‌ ಕದಿಯಲು ಯತ್ನಿಸಿ ಸ್ಟಾರ್ಕ್‌ಗೆ  (Mitchell Starc) ಕ್ಯಾಚ್‌ ನೀಡಿ ಔಟಾದರು. ಕೊನೇ ಎಸೆತದಲ್ಲಿ ಸ್ಟ್ರೈಕ್‌ ಮಾಡಿದ ಲಾಕಿ ಫರ್ಗೂಸನ್‌ 2 ರನ್‌ ಕದಿಯಲು ಯತ್ನಿಸಿ ರನೌಟ್‌ಗೆ ತುತ್ತಾದರು. ಇದರಿಂದ ಆರ್‌ಸಿಬಿ 1 ರನ್‌ನಿಂದ ವಿರೋಚಿತ ಸೋಲಿಗೆ ತುತ್ತಾಯಿತು.

    ಟಾಸ್ ಸೋತು ಮೊದಲು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 222 ರನ್ ಬಾರಿಸಿತ್ತು. 223 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್‌ ಗಳಿಸಿ ವಿರೋಚಿತ ಸೋಲನುಭವಿಸಿತು.

    ಚೇಸಿಂಗ್ ವೇಳೆ ಸ್ಫೋಟಕ ಆರಂಭ ಪಡೆಯಲು ಮುಂದಾಗಿದ್ದ ಆರ್‌ಸಿಬಿ 2.1 ಓವರ್‌ಗಳಿದ್ದಾಗ 27 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. 7 ಎಸೆತಗಳಲ್ಲಿ 18 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಔಟಾಗುತ್ತಿದ್ದಂತೆ, ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಸಹ ಸುಲಭ ಕ್ಯಾಚ್‌ಗೆ ತುತ್ತಾದರು. ಇದು ಆರ್‌ಸಿಬಿಗೆ ಭಾರೀ ಆಘಾತವುಂಟುಮಾಡಿತ್ತು.

    ವಿಲ್-ಪಾಟಿದಾರ್ ಶತಕದ ಜೊತೆಯಾಟ:
    3.1 ಓವರ್‌ಗಳಲ್ಲಿ 35 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದ ಆರ್‌ಸಿಬಿಗೆ ವಿಲ್ ಜಾಕ್ಸ್ (Will Jacks) ಹಾಗೂ ರಜತ್‌ ಪಾಟೀದಾರ್ (Rajat Patidar) ಬಲ ತುಂಬಿದರು. 3ನೇ ವಿಕೆಟ್‌ಗೆ ಈ ಜೋಡಿ 48 ಎಸೆತಗಳಲ್ಲಿ ಭರ್ಜರಿ 102 ರನ್‌ಗಳ ಜೊತೆಯಾಟ ನೀಡಿತ್ತು. ಇದರಿಂದ ತಂಡದಲ್ಲಿ ಗೆಲುವಿನ ಆಸೆ ಚಿಗುರಿತ್ತು. ಆದ್ರೆ ಮಧ್ಯಮ ಕ್ರಮಾಂಕದ ಬ್ಯಾಟರ್ಸ್‌ಗಳು ಕೈಕೊಟ್ಟ ಪರಿಣಾಮ ಆರ್‌ಸಿಬಿ ಸೋಲಿಗೆ ತುತ್ತಾಯಿತು.

    ಆರ್‌ಸಿಬಿ ಪರ ವಿಲ್ ಜಾಕ್ಸ್ 55 ರನ್ (32 ರನ್, 5 ಸಿಕ್ಸರ್, 4 ಬೌಂಡರಿ), ರಜತ್ ಪಾಟೀದಾರ್ 52 ರನ್ (23 ಎಸೆತ, 5 ಸಿಕ್ಸರ್, 3 ಬೌಂಡರಿ), ವಿರಾಟ್ ಕೊಹ್ಲಿ 18 ರನ್, ಫಾಫ್ ಡು ಪ್ಲೆಸಿಸ್ 7 ರನ್, ಕ್ಯಾಮರೂನ್ ಗ್ರೀನ್ 6 ರನ್, ಮಹಿಪಾಲ್ ಲೋಮ್ರೋರ್ 4 ರನ್, ಸುಯೇಶ್‌ ಪ್ರಭುದೇಸಾಯಿ 24 ರನ್‌, ದಿನೇಶ್‌ ಕಾರ್ತಿಕ್‌ 25 ರನ್‌, ಕರ್ಣ್‌ ಶರ್ಮಾ ಸ್ಫೋಟಕ 20 ರನ್‌ (7 ಎಸೆ, 3 ಸಿಕ್ಸರ್‌), ಲಾಕಿ ಫರ್ಗೂಸನ್‌ 1 ರನ್‌ ಗಳಿಸಿದರು.

    ಕೆಕೆಆರ್‌ ಪರ ಆಲ್‌ರೌಂಡರ್‌ ಪ್ರದರ್ಶನ ನೀಡಿದ ಆಂಡ್ರೆ ರಸೆಲ್‌ 3 ಓವರ್‌ಗಳಲ್ಲಿ 3 ವಿಕೆಟ್‌ ಕಿತ್ತರೆ, ಹರ್ಷಿತ್‌ ರಾಣಾ ಮತ್ತು ಸುನೀಲ್‌ ನರೇನ್‌ ತಲಾ 2 ವಿಕೆಟ್‌ ಹಾಗೂ ಮಿಚೆಲ್‌ ಸ್ಟಾರ್ಕ್‌ ಮತ್ತು ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ ಆರಂಭದಿಂದ ಅಬ್ಬರಿಸಲು ಶುರು ಮಾಡಿತು. ಆರಂಭಿಕರಾದ ಸುನೀಲ್ ನರೇನ್ ಮತ್ತು ಪಿಲ್ ಸಾಲ್ಟ್ ಜೋಡಿ ಮೊದಲ ವಿಕೆಟ್‌ಗೆ 26 ಎಸೆತಗಳಲ್ಲಿ ಸ್ಫೋಟೊ 56 ರನ್‌ಗಳ ಜೊತೆಯಾಟ ನೀಡಿತ್ತು. ಬಳಿಕ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ಕೆಕೆಆರ್ ತಂಡ ಮತ್ತೊಂದೆಡೆ ರನ್ ಕಲೆಹಾಕುತ್ತಾ ಸಾಗಿತು.

    ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಮತ್ತು ರಿಂಕು ಸಿಂಗ್ ಜೋಡಿ 40 ರನ್, ರಸ್ಸೆಲ್ ಮತ್ತು ಅಯ್ಯರ್ 42 ರನ್ ಹಾಗೂ ರಸ್ಸೆಲ್ ಮತ್ತು ರಮಣದೀಪ್ ಸಿಂಗ್ ಜೋಡಿ ನೀಡಿದ 43 ರನ್‌ಗಳ ಜೊತೆಯಾಟದಿಂದ ಕೆಕೆಆರ್ ತಂಡ 222 ರನ್‌ಗಳ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು.

    ಶ್ರೇಯಸ್ ಅಯ್ಯರ್ 50 ರನ್ (36 ಎಸೆತ, 1 ಸಿಕ್ಸರ್, 7 ಬೌಂಡರಿ), ಪಿಲ್ ಸಾಲ್ಟ್ (Phil Salt) ಸ್ಫೋಟಕ 48 ರನ್ (14 ಎಸೆತ, 3 ಸಿಕ್ಸರ್, 7 ಬೌಂಡರಿ), ಸುನೀಲ್ ನರೇನ್ 10 ರನ್, ರಘುವಂಶಿ 3 ರನ್, ವೆಂಕಟೇಶ್ ಅಯ್ಯರ್ 16 ರನ್, ರಿಂಕು ಸಿಂಗ್ 24 ರನ್, ಆಂಡ್ರೆ ರಸ್ಸೆಲ್ 27 ರನ್, ರಮಣದೀಪ್ ಸಿಂಗ್ 24 ರನ್ ಬಾರಿಸಿದ್ರೆ ವೈಡ್, ನೋಬಾಲ್ ಬೈಸ್‌ನಿಂದಲೇ ಹೆಚ್ಚುವರಿ 20 ರನ್ ತಂಡಕ್ಕೆ ಸೇರ್ಪಡೆಯಾಯಿತು.

    ಆರ್‌ಸಿಬಿ ಪರ ಯಶ್ ದಯಾಳ್ 4 ಓವರ್‌ಗಳಲ್ಲಿ 56 ರನ್ ಬಿಟ್ಟುಕೊಟ್ಟು ಮತ್ತು ಕ್ಯಾಮರೂನ್ ಗ್ರೀನ್ 4 ಓವರ್‌ಗಳಲ್ಲಿ 35 ರನ್ ಬಿಟ್ಟುಕೊಟ್ಟು ತಲಾ 2 ವಿಕೆಟ್ ಕಿತ್ತರೆ, ಮೊಹಮ್ಮದ್ ಸಿರಾಜ್ ಹಾಗೂ ಕರ್ಣ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.

  • ಕೊಹ್ಲಿ, ಡುಪ್ಲೆಸಿಸ್‌ ಹೊಡೆತಕ್ಕೆ ರೈಸ್‌ ಆಗದ ಸನ್‌ – ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಜಯ; 4ನೇ ಸ್ಥಾನಕ್ಕೆ ಜಿಗಿದ RCB

    ಕೊಹ್ಲಿ, ಡುಪ್ಲೆಸಿಸ್‌ ಹೊಡೆತಕ್ಕೆ ರೈಸ್‌ ಆಗದ ಸನ್‌ – ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಜಯ; 4ನೇ ಸ್ಥಾನಕ್ಕೆ ಜಿಗಿದ RCB

    ಹೈದರಾಬಾದ್‌: ಕೊಹ್ಲಿ (Virat Kohli) ಭರ್ಜರಿ ಶತಕ ಹಾಗೂ ಫಾಫ್‌ ಡು ಪ್ಲೆಸಿಸ್‌ (Faf du Plessis) ಸ್ಫೋಟಕ ಅರ್ಧ ಶತಕದ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ (RCB) ತಂಡವು ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಹೈದರಾಬಾದ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ 14 ಅಂಕ ಪಡೆದು +0.180 ರನ್‌ ರೇಟ್‌ನೊಂದಿಗೆ 4ನೇ ಸ್ಥಾನಕ್ಕೆ ಜಿಗಿದಿದೆ. ಇದರಿಂದ ಪ್ಲೇ ಆಫ್‌ ಹಾದಿ ಮತ್ತಷ್ಟು ಸುಗಮವಾಗಿಸಿಕೊಂಡಿದೆ. ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ಉತ್ತಮ ರನ್‌ರೇಟ್‌ನೊಂದಿಗೆ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದು, 4ನೇ ಸ್ಥಾನಕ್ಕಾಗಿ ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್‌ ನಡುವೆ ಪೈಪೋಟಿ ನಡೆದಿದೆ. ಇತ್ತಂಡಗಳಿಗೂ ತಲಾ ಒಂದೊಂದು ಪಂದ್ಯ ಬಾಕಿಯಿದೆ. 13 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿರುವ ಮುಂಬೈ ಇಂಡಿಯನ್ಸ್‌ 14 ಅಂಕ ಪಡೆದು -0.128 ರನ್‌ರೇಟ್‌ನೊಂದಿಗೆ 5ನೇ ಸ್ಥಾನದಲ್ಲಿದೆ. ಒಂದು ವೇಳೆ ಮುಂದಿನ ಪಂದ್ಯದಲ್ಲಿ ಆರ್‌ಸಿಬಿ ಸೋತು ಮುಂಬೈ ಗೆದ್ದರೆ, ಆರ್‌ಸಿಬಿ ಪ್ಲೇ ಆಫ್‌ನಿಂದ ಹೊರಬೀಳಲಿದೆ. ಗೆದ್ದರಷ್ಟೇ ಪ್ಲೇ ಆಫ್‌ ತಲುಪಲಿದೆ.

    ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ ಹೆನ್ರಿಚ್‌ ಕ್ಲಾಸೆನ್‌ (Heinrich Klaasen) ಭರ್ಜರಿ ಶತಕದೊಂದಿಗೆ 20 ಓವರ್‌ಗಳಲ್ಲಿ 186 ರನ್‌ ಗಳಿಸಿತ್ತು. 187 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಆರ್‌ಸಿಬಿ 19.2 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿ ಗೆದ್ದು ಬೀಗಿತು.

    ಚೇಸಿಂಗ್‌ ಆರಂಭಿಸಿದ ಆರ್‌ಸಿಬಿ (RCB) ಪರ ನಾಯಕ ಫಾಫ್‌ ಡು ಪ್ಲೆಸಿಸ್‌ ಹಾಗೂ ವಿರಾಟ್‌ ಕೊಹ್ಲಿ ಹೈದರಾಬಾದ್‌ ಬೌಲರ್‌ಗಳನ್ನು ಚೆಂಡಾಡಿದರು. ಇವರಿಬ್ಬರ ಹೊಡೆತಕ್ಕೆ ಹೈದರಾಬಾದ್‌ ತಂಡ ಮಕಾಡೆ ಮಲಗಿತು.

    ಭರ್ಜರಿ ಸಿಕ್ಸರ್‌, ಬೌಂಡರಿ ಚಚ್ಚಿದ ವಿರಾಟ್‌, ಡುಪ್ಲೆಸಿಸ್‌ 108 ಎಸೆತಗಳಲ್ಲಿ 172 ರನ್‌ಗಳ ಜೊತೆಯಾಟವಾಡಿದರು. ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿದ ಕಿಂಗ್‌ ಕೊಹ್ಲಿ 63 ಎಸೆತಗಳಲ್ಲಿ 100 ರನ್‌ (12 ಬೌಂಡರಿ, 4 ಸಿಕ್ಸರ್‌) ಚಚ್ಚಿದರೆ, ಫಾಫ್‌ ಡು ಪ್ಲೆಸಿಸ್‌ 47 ಎಸೆತಗಳಲ್ಲಿ ಸ್ಫೋಟಕ 71 ರನ್‌ (7 ಬೌಂಡರಿ, 2 ಸಿಕ್ಸರ್‌) ಬಾರಿಸಿ ಮಿಂಚಿದರು. ಕೊನೆಯಲ್ಲಿ ಗ್ಲೇನ್‌ ಮ್ಯಾಕ್ಸ್‌ವೆಲ್‌ 5 ರನ್‌ ಹಾಗೂ ಮೈಕಲ್‌ ಬ್ರೇಸ್‌ವೆಲ್‌ 4 ರನ್‌ ಗಳಿಸಿ ಅಜೇಯರಾಗುಳಿದರು.

    2016ರ ಐಪಿಎಲ್‌ ಆವೃತ್ತಿಯಲ್ಲಿ 4 ಶತಕಗಳನ್ನು ಸಿಡಿಸಿದ್ದ ಚೇಸ್‌ ಮಾಸ್ಟರ್‌ ಕೊಹ್ಲಿ ‌ಒಂದೇ ಸೀಸನ್‌ನಲ್ಲಿ 973 ರನ್‌ ಗಳಿಸಿ ಯಾರೂ ಮುರಿಯದ ದಾಖಲೆ ಮಾಡಿದ್ದಾರೆ. ಆ ಬಳಿಕ 2019ರ ಐಪಿಎಲ್‌ನಲ್ಲಿ ಒಂದು ಶತಕ ಗಳಿಸಿದ್ದರು. 2023ರ ಐಪಿಎಲ್‌ ಆವೃತ್ತಿಯಲ್ಲಿ ಮತ್ತೊಮ್ಮೆ ಶತಕ ಸಿಡಿಸಿ ಮಿಂಚಿದರು.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ ಒಂದೆಡೆ ವಿಕೆಟ್‌ ಕಳೆದುಕೊಂಡರೆ, ಮತ್ತೊಂದೆಡೆ ರನ್‌ ಕಲೆಹಾಕುತ್ತಾ ಸಾಗಿತು. ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್‌ ಶರ್ಮಾ 11 ರನ್‌, ರಾಹುಲ್‌ ತ್ರಿಪಾಠಿ 15 ರನ್‌, ಏಡನ್‌ ಮಾರ್ಕ್ರಮ್‌ 18 ರನ್‌ ಗಳಿಸಿ ಕೈಕೊಟ್ಟರು.‌ ಬಳಿಕ ಕಣಕ್ಕಿಳಿದ ಹೆನ್ರಿಚ್‌ ಕ್ಲಾಸೆನ್‌ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದರು.

    ಕ್ಲಾಸೆನ್‌ 51 ಎಸೆತಗಳಲ್ಲಿ 104 ರನ್‌ (6 ಸಿಕ್ಸರ್‌, 8 ಬೌಂಡರಿ) ಚಚ್ಚಿದರು. ಕೊನೆಯಲ್ಲಿ ಗ್ಲೇನ್‌ ಫಿಲಿಪ್ಸ್‌ 5 ರನ್‌ ಗಳಿಸಿ ಔಟಾದರೆ, ಹ್ಯಾರಿ ಬ್ರೂಕ್‌ 27 ರನ್‌ ಗಳಿಸಿ ಅಜೇಯರಾಗುಳಿದರು.

    ಆರ್‌ಸಿಬಿ ಪರ ಮೈಕೆಲ್‌ ಬ್ಲೇಸ್‌ವೆಲ್‌ 2 ಓವರ್‌ಗಳಲ್ಲಿ 13 ರನ್‌ ನೀಡಿ 2 ವಿಕೆಟ್‌ ಕಿತ್ತರೆ, ಶಹಬಾಜ್‌ ಅಹ್ಮದ್‌, ಹರ್ಷಲ್‌ ಪಟೇಲ್‌, ಮೊಹಮ್ಮದ್‌ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • 59 ರನ್‌ಗಳಿಗೆ ರಾಜಸ್ಥಾನ್‌ ಆಲೌಟ್‌ – RCBಗೆ 112 ರನ್‌ಗಳ ಭರ್ಜರಿ ಜಯ – ಪ್ಲೆ ಆಫ್‌ ಕನಸು ಜೀವಂತ

    59 ರನ್‌ಗಳಿಗೆ ರಾಜಸ್ಥಾನ್‌ ಆಲೌಟ್‌ – RCBಗೆ 112 ರನ್‌ಗಳ ಭರ್ಜರಿ ಜಯ – ಪ್ಲೆ ಆಫ್‌ ಕನಸು ಜೀವಂತ

    ಜೈಪುರ: ಗ್ಲೇನ್‌ ಮ್ಯಾಕ್ಸ್‌ವೆಲ್‌ (Glenn Maxwell), ಫಾಫ್‌ ಡು ಪ್ಲೆಸಿಸ್‌ (Faf du Plessis) ಭರ್ಜರಿ ಅರ್ಧಶತಕ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB), ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 112 ರನ್‌ಗಳ ಜಯ ಸಾಧಿಸಿದೆ. ಈ ಮೂಲಕ ಪ್ಲೆ ಆಫ್‌ ಕನಸು ಜೀವಂತವಾಗಿಸಿಕೊಂಡಿದೆ.

    ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಿತ್ತು. ಗೆಲುವಿಗೆ 172 ರನ್‌ ಗುರಿ ಪಡೆದ ರಾಜಸ್ಥಾನ್‌ (Rajasthan Royals) 10.3 ಓವರ್‌ನಲ್ಲೇ 59 ರನ್‌ ಗಳಿಗೆ ಸರ್ವಪತನ ಕಂಡು ತವರಿನಲ್ಲೇ ಹೀನಾಯ ಸೋಲನುಭವಿಸಿತು.

    ರಾಜಸ್ಥಾನ್‌ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ 2 ಸ್ಥಾನ ಮೇಲಕ್ಕೆ ಜಿಗಿದಿರುವ ಆರ್‌ಸಿಬಿ ಪ್ಲೆ ಆಫ್‌ ಕನಸು ಜೀವಂತವಾಗಿಸಿಕೊಂಡಿದೆ. 11 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ 10 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿತ್ತು. ಇದೀಗ 12ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ್ದು, +0.166 ರನ್‌ರೇಟ್‌ನೊಂದಿಗೆ 12 ಅಂಕ ಗಳಿಸಿ 5ನೇ ಸ್ಥಾನಕ್ಕೆ ಜಿಗಿದಿದೆ. 5ನೇ ಸ್ಥಾನದಲ್ಲಿದ್ದ ರಾಜಸ್ಥಾನ್‌ ರಾಯಲ್ಸ್‌ +0.140 ರನ್‌ರೇಟ್‌ನೊಂದಿಗೆ 12 ಅಂಕ ಪಡೆದು 6ನೇ ಸ್ಥಾನಕ್ಕೆ ಕುಸಿದಿದೆ. ಒಂದು ವೇಳೆ ಲಕ್ನೋ ಸೋತು ಇನ್ನೆರಡು ಪಂದ್ಯಗಳಲ್ಲಿ ಆರ್‌ಸಿಬಿ ಸತತ ಗೆಲುವು ಸಾಧಿಸಿದರೆ ಪ್ಲೆ ಆಫ್‌ ಪ್ರವೇಶಿಸುವ ಸಾಧ್ಯತೆಗಳಿವೆ.

    ಚೇಸಿಂಗ್‌ ಆರಂಭಿಸಿದ ರಾಜಸ್ಥಾನ್‌ ರಾಯಲ್ಸ್‌ ಮೊದಲ ಓವರ್‌ನಿಂದಲೇ ಆರ್‌ಸಿಬಿ ಬೌಲರ್‌ಗಳ ದಾಳಿಗೆ ತತ್ತರಿಸಿತು. ಪವರ್‌ ಪ್ಲೇನಲ್ಲೇ 5 ವಿಕೆಟ್‌ ಕಳೆದುಕೊಂಡು ಕೇವಲ 28 ರನ್‌ ಕಲೆಹಾಕಿತ್ತು. ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಶಿಮ್ರಾನ್‌ ಹೆಟ್ಮೇಯರ್‌ ಸ್ಫೋಟಕ ಬ್ಯಾಟಿಂಗ್‌ ನಡೆಸಿದ್ದಾದರೂ ಆರ್‌ಸಿಬಿ ಬೌಲರ್‌ಗಳ ಎದುರು ತಲೆಬಾಗಬೇಕಾಯಿತು. ರಾಜಸ್ಥಾನ್‌ ಪರ ಹೆಟ್ಮೇಯರ್‌ 35 ರನ್‌ (19 ಎಸೆತ, 4 ಸಿಕ್ಸರ್‌, 1 ಬೌಂಡರಿ), ಜೋ ರೂಟ್‌ 10 ರನ್‌, ಸಂಜು ಸ್ಯಾಮ್ಸನ್‌ 4 ರನ್‌, ಧ್ರುವ್‌ ಜುರೆಲ್‌ 1 ರನ್‌, ಆಡಂ ಜಂಪಾ 2 ರನ್‌ ಗಳಿಸಿದರೆ, ಉಳಿದವರೆಲ್ಲರೂ ಶೂನ್ಯಕ್ಕೆ ಔಟಾಗಿ ಪೆವಿಲಿಯನ್‌ ಸೇರಿದರು.

    ಆರ್‌ಸಿಬಿ ಪರ ವೇಯ್ನ್ ಪಾರ್ನೆಲ್ 3 ವಿಕೆಟ್‌ ಪಡೆದು ಮಿಂಚಿದರೆ, ಮೈಕೆಲ್‌ ಬ್ರೇಸ್‌ವೆಲ್‌, ಕರನ್‌ ಶರ್ಮಾ ತಲಾ 2 ವಿಕೆಟ್‌ ಹಾಗೂ ಗ್ಲೇನ್‌ ಮ್ಯಾಕ್ಸ್‌ವೆಲ್‌, ಮೊಹಮ್ಮದ್‌ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಟಾಸ್‌‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಪರ ಫಾಫ್‌ ಡು ಪ್ಲೆಸಿಸ್‌ 55 ರನ್‌ (44 ಎಸೆತ, 3 ಬೌಂಡರಿ, 2 ಸಿಕ್ಸರ್‌), ಗ್ಲೇನ್‌ ಮ್ಯಾಕ್ಸ್‌ವೆಲ್‌ 33 ಎಸೆತಗಳಲ್ಲಿ 54 ರನ್‌ (3 ಸಿಕ್ಸರ್‌, 5 ಬೌಂಡರಿ) ಚಚ್ಚಿದರು. ವಿರಾಟ್‌ ಕೊಹ್ಲಿ, 18 ರನ್‌‌ ಗಳಿದರೆ, ಮೈಕೆಲ್‌ ಬ್ರೇಸ್‌ವೆಲ್‌ 9 ರನ್‌ ಹಾಗೂ ಸ್ಫೋಟಕ ಬ್ಯಾಟಿಂಗ್‌ ಮಾಡಿದ ಅನುಜ್‌ ರಾವತ್‌ 11 ಎಸೆತಗಳಲ್ಲಿ 29 ರನ್‌ (3 ಬೌಂಡರಿ, 2 ಸಿಕ್ಸರ್‌) ಚಚ್ಚಿ ಅಜೇಯರಾಗಿ ಉಳಿದರು.

    ರಾಜಸ್ಥಾನ್‌ ಪರ ಆಡಂ ಜಂಪಾ ಹಾಗೂ ಕೆ.ಎಂ ಆಸಿಫ್‌ ತಲಾ 2 ವಿಕೆಟ್‌ ಕಿತ್ತರೆ, ಸಂದೀಪ್‌ ಶರ್ಮಾ 1 ವಿಕೆಟ್‌ ಪಡೆದು ಮಿಂಚಿದರು.

  • RCBvsMI ಹೈವೋಲ್ಟೇಜ್‌ ಕದನ – ಇಂದು ಸೋತರೆ RCB ಪ್ಲೇ ಆಫ್‌ ತಲುಪೋದು ಕಷ್ಟ

    RCBvsMI ಹೈವೋಲ್ಟೇಜ್‌ ಕದನ – ಇಂದು ಸೋತರೆ RCB ಪ್ಲೇ ಆಫ್‌ ತಲುಪೋದು ಕಷ್ಟ

    ಮುಂಬೈ: ಈ ಬಾರಿ ಐಪಿಎಲ್‌ನಲ್ಲಿ (IPL 2023) ಹಿಂದೆಂದಿಗಿಂತಲೂ ಪೈಪೋಟಿ ಹೆಚ್ಚಾಗಿದೆ. ಕನಿಷ್ಠ ಪ್ಲೇ ಆಫ್‌ ತಲುಪಲೇಬೇಕೆಂದು ಎಲ್ಲ ತಂಡಗಳೂ ಹಣಾಹಣಿ ನಡೆಸುತ್ತಿವೆ.

    ಪ್ರತಿಬಾರಿಯೂ `ಈ ಸಲ ಕಪ್‌ ನಮ್ದೆ’ ಎಂದು ಹೇಳುತ್ತಿರುವ ಆರ್‌ಸಿಬಿ (RCB) ಈ ಬಾರಿ ಚೊಚ್ಚಲ ಕಪ್‌ ಮುಡಿಗೇರಿಸಿಕೊಳ್ಳುವ ತವಕದಲ್ಲಿದೆ. ಪ್ಲೆ ಆಫ್‌ ಹಾದಿ ಸುಗಮವಾಗಿಸಿಕೊಳ್ಳಲು ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ಸೆಣಸಲಿದೆ. ಇದನ್ನೂ ಓದಿ: ಬಣ್ಣದ ಜಗತ್ತಿಗೆ ಎಂಟ್ರಿ ಕೊಟ್ಟ ಕ್ರಿಕೆಟಿಗ ಶುಭಮನ್‌ ಗಿಲ್

    ಈ ಬಾರಿ ಐಪಿಎಲ್‌ನಲ್ಲಿ ತಲಾ 10 ಪಂದ್ಯಗಳನ್ನಾಡಿರುವ ಇತ್ತಂಡಗಳು ತಲಾ 10 ಅಂಕಗಳನ್ನು ಪಡೆದಿವೆ. ಆರ್‌ಸಿಬಿ 6ನೇ ಸ್ಥಾನದಲ್ಲಿದ್ದರೆ, ಮುಂಬೈ 8ನೇ ಸ್ಥಾನದಲ್ಲಿದೆ. ಪಂಜಾಬ್‌ ಕಿಂಗ್ಸ್‌ 11 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದ್ದರೂ ಅಧಿಕ ನೆಟ್‌ರನ್‌ರೇಟ್‌ನಿಂದಾಗಿ 7ನೇ ಸ್ಥಾನ ಪಡೆದುಕೊಂಡಿದೆ.

    16ನೇ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತವರು ಬೆಂಗಳೂರು ಚಿನ್ನಸ್ವಾಮಿ ಅಂಗಳದಲ್ಲಿ ಮುಂಬೈ ವಿರುದ್ಧ ಗೆದ್ದು ಸೀಜನ್‌ ಆರಂಭಿಸಿತು. ಈವರೆಗೆ ಮುಂಬೈ ಮತ್ತು ಆರ್‌ಸಿಬಿ 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಮುಂಬೈ 17ರಲ್ಲಿ ಹಾಗೂ ಆರ್‌ಸಿಬಿ 14ರಲ್ಲಿ ಗೆಲುವು ಸಾಧಿಸಿದೆ. ಇಂದಿನ ಪಂದ್ಯ ಇತ್ತಂಡಗಳಿಗೂ ನಿರ್ಣಾಯಕವಾಗಿದ್ದು, ಗೆದ್ದ ತಂಡಕ್ಕೆ ಪ್ಲೆ ಆಫ್‌ ಹಾದಿ ಸುಗಮವಾಗಲಿದೆ.

    ಪಿಚ್‌ ರಿಪೋರ್ಟ್‌ ಹೇಗಿದೆ?
    ಬ್ಯಾಟಿಂಗ್‌ ಸ್ನೇಹಿಯಾಗಿರುವ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ದೊಡ್ಡ ಮೊತ್ತ ದಾಖಲಾಗುವ ಸಾಧ್ಯತೆ ಇದೆ. ಕಳೆದ ಎರಡೂ ಪಂದ್ಯಗಳ 4 ಇನ್ನಿಂಗ್ಸ್‌ನಲ್ಲೂ 200ರನ್‌ಗಳ ಬೃಹತ್‌ ಮೊತ್ತ ದಾಖಲಾಗಿದ್ದು, ಚೇಸಿಂಗ್‌ಗೆ ಹೆಚ್ಚು ಅನುಕೂಲವಾಗಿದೆ. ಇದನ್ನೂ ಓದಿ: ರಸೆಲ್‌ 3 ಸಿಕ್ಸ್‌, ಕೊನೆಯ ಎಸೆತವನ್ನು ಬೌಂಡರಿಗಟ್ಟಿದ ರಿಂಕು – ಕೋಲ್ಕತ್ತಾಗೆ 5 ವಿಕೆಟ್‌ಗಳ ರೋಚಕ ಜಯ

    ತವರಿನಲ್ಲಿ ಮುಂಬೈ ಸ್ಟ್ರಾಂಗ್‌:
    ತವರಿನ ಸ್ಟೇಡಿಯಂಗಳಲ್ಲಿ ಮುಂಬೈ ಸ್ಟ್ರಾಂಗ್‌ ಆಗಿದೆ. ಅಲ್ಲದೇ ಆರಂಭದಲ್ಲಿ ಕಳಪೆ ಬ್ಯಾಟಿಂಗ್‌ ಪ್ರದರ್ಶಿಸಿದ್ದ ಸೂರ್ಯಕುಮಾರ್‌ ಯಾದವ್‌ ಕಳೆದ ಮೂರ್ನಾಲ್ಕು ಪಂದ್ಯಗಳಲ್ಲಿ ಅಬ್ಬರಿಸಿದ್ದಾರೆ. ಆದ್ರೆ ಆರ್‌ಸಿಬಿಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಬಲದ ಅಗತ್ಯವಿದೆ. ಕೆಜಿಎಫ್‌ (ಕೊಹ್ಲಿ, ಗ್ಲೇನ್‌ ಮ್ಯಾಕ್ಸ್‌ವೆಲ್‌, ಫಾಫ್‌ ಡು ಪ್ಲೆಸಿಸ್‌) ಬಿಟ್ಟರೆ, ಉಳಿದ ಆಟಗಾರರಿಂದ ಕಳಪೆ ಪ್ರದರ್ಶನ ಕಂಡಿದೆ. ಕಳೆದ ಪಂದ್ಯದಲ್ಲಿ ಮಾತ್ರ ಮಹಿಪಾಲ್‌ ಲೊಮ್ರೋರ್‌ ಭರ್ಜರಿ ಅರ್ಧಶತಕ ಸಿಡಿಸಿ ಮಿಂಚಿದ್ದರು.