Tag: ಫಿಕ್ಸಿಂಗ್

  • ಐಪಿಎಲ್‌ನಲ್ಲಿ ಫಿಕ್ಸಿಂಗ್‌ ಕರಿನೆರಳು | ಹೈದರಾಬಾದ್‌ ಉದ್ಯಮಿ ಸಂರ್ಪಕಿಸಿದ್ರೆ ಕೂಡ್ಲೇ ತಿಳಿಸಿ – ಆಟಗಾರರಿಗೆ ವಾರ್ನಿಂಗ್‌

    ಐಪಿಎಲ್‌ನಲ್ಲಿ ಫಿಕ್ಸಿಂಗ್‌ ಕರಿನೆರಳು | ಹೈದರಾಬಾದ್‌ ಉದ್ಯಮಿ ಸಂರ್ಪಕಿಸಿದ್ರೆ ಕೂಡ್ಲೇ ತಿಳಿಸಿ – ಆಟಗಾರರಿಗೆ ವಾರ್ನಿಂಗ್‌

    ಮುಂಬೈ: ಐಪಿಎಲ್‌ನಲ್ಲಿ (IPL) ಮತ್ತೆ ಫಿಕ್ಸಿಂಗ್‌ (Fixing) ಭೂತ ಆವರಿಸಿದೆ. ಹೈದರಾಬಾದ್‌ (Hyderabad) ಮೂಲದ ಉದ್ಯಮಿ ಫಿಕ್ಸಿಂಗ್‌ ಮಾಡಲು ಮುಂದಾಗುತ್ತಿದ್ದಾನೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಈ ವರದಿ ಪ್ರಕಟವಾದ ಬೆನ್ನಲ್ಲೇ ಬಿಸಿಸಿಐನ (BCCI) ಭ್ರಷ್ಟಾಚಾರ ನಿಗ್ರಹ ಮತ್ತು ಭದ್ರತಾ ಘಟಕ (ACSU) ಲೀಗ್‌ನ ಎಲ್ಲಾ 10 ತಂಡಗಳಿಗೆ ಎಚ್ಚರಿಕೆ ನೀಡಿದೆ. ಆ ಉದ್ಯಮಿ ಯಾವುದೇ ರೀತಿಯಲ್ಲಿ ಸಂಪರ್ಕಿಸಲು ಪ್ರಯತ್ನಿಸಿದರೆ ಕೂಡಲೇ ತಿಳಿಸಿ ಎಂದು ತಂಡಗಳಿಗೆ ಸೂಚಿಸಿದೆ.  ಇದನ್ನೂ ಓದಿ: ಲಕ್ನೋ ಸೂಪರ್‌ ಜೈಂಟ್ಸ್‌ಗೆ ಬಿಗ್‌ ಬೂಸ್ಟ್‌ – ರಾಕೆಟ್‌ ವೇಗಿ ಮಯಾಂಕ್‌ ಯಾದವ್‌ ಕಂಬ್ಯಾಕ್‌

    ಉದ್ಯಮಿ ಯಾರು ಎನ್ನುವುದು ಬಹಿರಂಗವಾಗಿಲ್ಲ. ಆದರೆ ಈ ಉದ್ಯಮಿ ಬುಕ್ಕಿಗಳೊಂದಿಗೆ ನೇರ ಸಂಪರ್ಕ ಹೊಂದಿದ್ದಾನೆ. ಈ ಹಿಂದೆಯೂ ಬುಕ್ಕಿಗಳ ಜೊತೆ ಆ ಉದ್ಯಮಿಗೆ ಸಂಪರ್ಕ ಇತ್ತು ಎಂದು ವರದಿಯಾಗಿದೆ.

     

    ಅಭಿಮಾನಿಯಂತೆ ನಟಿಸುವ ಮೂಲಕ ಮತ್ತು ದುಬಾರಿ ಆಭರಣಗಳಂತಹ ಉಡುಗೊರೆಗಳನ್ನು ನೀಡುವ ಮೂಲಕ ಆಟಗಾರರು, ತರಬೇತುದಾರರು, ತಂಡದ ಮಾಲೀಕರು ಮತ್ತು ಸಹಾಯಕ ಸಿಬ್ಬಂದಿಯೊಂದಿಗೆ ಸ್ನೇಹ ಬೆಳೆಸಲು ಪ್ರಯತ್ನಿಸಲಾಗುತ್ತದೆ. ಇದು ವ್ಯಕ್ತಿಗಳನ್ನು ಭ್ರಷ್ಟಾಚಾರದ ಸೆಳೆಯುವ ಸಂಭಾವ್ಯ ಪ್ರಯತ್ನವೆಂದು ಪರಿಗಣಿಸಲಾಗಿದೆ. ಹೀಗಾಗಿ ತಂಡಗಳು ಜಾಗರೂಕವಾಗಿರಬೇಕು ಎಂದು ಸೂಚಿಸಿದೆ.

    ತಂಡ ಉಳಿಯುವ ಹೋಟೆಲ್ ಮತ್ತು ಪಂದ್ಯಗಳ ವೇಳೆಯೂ ಉದ್ಯಮಿ ಕಾಣಿಸಿಕೊಂಡಿದ್ದಾನೆ.ಆಟಗಾರರನ್ನು ಅಥವಾ ಆಟಗಾರರಿಗೆ ಆಪ್ತರಾಗಿರುವವರನ್ನು ತನ್ನ ಖಾಸಗಿ ಪಾರ್ಟಿಗಳಿಗೆ ಆಹ್ವಾನಿಸುತ್ತಿದ್ದಾನೆ. ತಂಡದ ಸದಸ್ಯರಿಗೆ ಮಾತ್ರವಲ್ಲದೆ ಅವರ ಕುಟುಂಬಗಳಿಗೂ ಉಡುಗೊರೆಗಳನ್ನು ನೀಡುವ ಮೂಲಕ ಅವರನ್ನು ಸೆಳೆಯುತ್ತಿದ್ದಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮುಂಬೈ ಬಳಿ 9.85 ಕೋಟಿಗೆ ಭೂಮಿ ಖರೀದಿಸಿದ ಅಳಿಯ ಕೆಎಲ್‌ ರಾಹುಲ್‌, ಮಾವ ಸುನೀಲ್‌ ಶೆಟ್ಟಿ

    ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ​​ಈಗಾಗಲೇ ಭಾರತದ ಅತ್ಯಂತ ಭ್ರಷ್ಟ ಕ್ರಿಕೆಟ್ ಮಂಡಳಿ ಎಂಬ ಆರೋಪಗಳನ್ನು ಎದುರಿಸುತ್ತಿದೆ. ಈ ಆರೋಪದ ಮಧ್ಯೆ ಹೈದರಾಬಾದ್ ಉದ್ಯಮಿಯ ವಿರುದ್ಧದ ಬಂದಿರುವ ಆರೋಪಗಳು ಮತ್ತಷ್ಟು ಚರ್ಚೆಗಳಿಗೆ ಕಾರಣವಾಗುತ್ತಿವೆ.

    ಈ ಹಿಂದೆ 2013ರ ಸ್ಪಾಟ್‌ ಫಿಕ್ಸಿಂಗ್‌ ಮತ್ತು ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ 2016 ಮತ್ತು 2017 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSSSK) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳನ್ನು ಐಪಿಎಲ್​ನಿಂದಲೇ ಬ್ಯಾನ್ (Ban) ಮಾಡಲಾಗಿತ್ತು.

     

  • ಐಪಿಎಲ್‍ನಲ್ಲಿ ಫಿಕ್ಸಿಂಗ್? – ಭಾರೀ ಚರ್ಚೆಗೆ ಗ್ರಾಸವಾಗಿದೆ ಮುಂಬೈ ಇಂಡಿಯನ್ಸ್ ಟ್ವೀಟ್

    ಐಪಿಎಲ್‍ನಲ್ಲಿ ಫಿಕ್ಸಿಂಗ್? – ಭಾರೀ ಚರ್ಚೆಗೆ ಗ್ರಾಸವಾಗಿದೆ ಮುಂಬೈ ಇಂಡಿಯನ್ಸ್ ಟ್ವೀಟ್

    ಮುಂಬೈ: ಐಪಿಎಲ್ 2020ರ ಆವೃತ್ತಿಯಲ್ಲಿ ಫಿಕ್ಸಿಂಗ್ ನಡೆಯುತ್ತಿದ್ದೆಯೇ ಎಂಬ ಅನುಮಾನವನ್ನು ಕ್ರಿಕೆಟ್ ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ. ಈ ಆರೋಪಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ನಡುವೆ ಭಾನುವಾರ ನಡೆದ ಪಂದ್ಯಕ್ಕೂ ಮುನ್ನ ಮುಂಬೈ ಫ್ರಾಂಚೈಸಿ ಮಾಡಿದ ವಿವಾದಾತ್ಮಕ ಟ್ವೀಟ್ ಕಾರಣವಾಗಿದೆ.

    ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಟೂರ್ನಿಯ ಎಲ್ಲಾ ಫ್ರಾಂಚೈಸಿಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದು, ತಮ್ಮ ತಂಡದ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಲು ಸೋಶಿಯಲ್ ಮೀಡಿಯಾ ವೇದಿಕೆಗಳನ್ನು ಉತ್ತಮವಾಗಿ ಬಳಸಿಕೊಳ್ಳುತ್ತಿವೆ.

    2020ರ ಆವೃತ್ತಿಯ 27ನೇ ಪಂದ್ಯದಲ್ಲಿ ಭಾನುವಾರ ದುಬೈ ಕ್ರೀಡಾಂಗಣದಲ್ಲಿ ಡೆಲ್ಲಿ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್‍ಗಳ ಗೆಲುವನ್ನು ಪಡೆದುಕೊಂಡಿತ್ತು. ಆದರೆ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಅಧಿಕೃತ ಖಾತೆಯಿಂದ ಮಾಡಿರುವ ಟ್ವೀಟ್ ಸದ್ಯ ವಿವಾದಕ್ಕೆ ಕಾರಣವಾಗಿದ್ದು, ಅಭಿಮಾನಿಗಳು ಟ್ರೋಲ್ ಮಾಡಿ ಫಿಕ್ಸಿಂಗ್ ಆರೋಪ ಮಾಡುತ್ತಿದ್ದಾರೆ.

    ಟ್ವೀಟ್‍ನಲ್ಲಿ ಏನಿತ್ತು?
    ಡೆಲ್ಲಿ ವಿರುದ್ಧದ ಪಂದ್ಯ ಆರಂಭವಾಗುವುದಕ್ಕೂ ಮುನ್ನ ರಾತ್ರಿ 7:38ಕ್ಕೆ ಮುಂಬೈ ಇಂಡಿಯನ್ಸ್ ತಂಡದ ಖಾತೆಯಲ್ಲಿ ಡೆಲ್ಲಿ ಮೊದಲ ಇನ್ನಿಂಗ್ಸ್ ಅಂತ್ಯಕ್ಕೆ ಗಳಿಸುವ ಮೊತ್ತದ ಎಷ್ಟು ಎಂದು ಟ್ವೀಟ್ ಮಾಡಿತ್ತು. ಆದರೆ ಕೆಲ ಕ್ಷಣಗಳು ಬಳಿಕ ಆ ಟ್ವೀಟ್ ಡಿಲೀಟ್ ಆಗಿತ್ತು. ಟ್ವೀಟ್‍ನಲ್ಲಿ ಡೆಲ್ಲಿ ತಂಡ ಇನ್ನಿಂಗ್ಸ್ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿದೆ ಎಂದು ಬರೆಯಲಾಗಿತ್ತು. ವಿಶೇಷ ಎಂಬಂತೆ ಡೆಲ್ಲಿ ತಂಡ ಇನ್ನಿಂಗ್ಸ್ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತ್ತು. ಈ ಎರಡು ಮೊತ್ತಗಳು ಸಮೀಪವಿರುವುದರಿಂದ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದ್ದಾರೆ.

    ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಿಯಲ್ಲಿ ಫ್ರಾಂಚೈಸಿ ತಂಡವೊಂದು ಅನುಮಾನಾಸ್ಪದವಾಗಿ ಟ್ವೀಟ್ ಮಾಡಿರುವ ಕಾರಣ ಇದಕ್ಕೆ ಬಿಸಿಸಿಐ ಅಥವಾ ಐಪಿಎಲ್ ಆಡಳಿತ ಮಂಡಳಿ ಉತ್ತರಬೇಕಾಗುವ ಸಾಧ್ಯತೆ ಇದೆ. ಉಳಿದಂತೆ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಕಳೆದ ಪಂದ್ಯದಲ್ಲಿ ರಿಷಬ್ ಪಂತ್ ಗಾಯಗೊಂಡಿದ್ದ ಕಾರಣ ರಹಾನೆ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದರು. ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತ್ತು. ಶಿಖರ್ ಧವನ್ ಗಳಿಸಿದ ಅರ್ಧ ಶತಕ ಡೆಲ್ಲಿ ತಂಡದ ಸ್ಪರ್ಧಾತ್ಮಕ ಮೊತ್ತ ಪೇರಿಸಲು ಕಾರಣವಾಗಿತ್ತು. ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ ಡಿ ಕಾಕ್, ಸೂರ್ಯ ಕುಮಾರ್ ಯಾದವ್ ಅವರ ಅರ್ಧ ಶತಕದ ನೆರವಿನಿಂದ 2 ಎಸೆತ ಬಾಕಿ ಇರುವಂತೆಯೇ 166 ರನ್ ಸಿಡಿಸಿ ಪಂದ್ಯದಲ್ಲಿ ಗೆಲುವು ಪಡೆದಿತ್ತು.

  • ಕೆಪಿಎಲ್ ಫಿಕ್ಸಿಂಗ್: ಅಂತಾರಾಷ್ಟ್ರೀಯ ಬುಕ್ಕಿ ಸಿಸಿಬಿ ಬಲೆಗೆ

    ಕೆಪಿಎಲ್ ಫಿಕ್ಸಿಂಗ್: ಅಂತಾರಾಷ್ಟ್ರೀಯ ಬುಕ್ಕಿ ಸಿಸಿಬಿ ಬಲೆಗೆ

    ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಟೂರ್ನಿಯ ಕೆಲ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಲು ಯತ್ನಿಸಿದ್ದ ಅಂತಾರಾಷ್ಟ್ರೀಯ ಬುಕ್ಕಿಯನ್ನು ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

    ಹರ್ಯಾಣ ಮೂಲದ ಪಿ ಸಯ್ಯಮ್ ಬಂಧಿತ ಆರೋಪಿಯಾಗಿದ್ದು, ಬವೇಶ್ ಬಪ್ನಾ ನೆರವಿನಿಂದ ಸಯ್ಯಮ್ ಮ್ಯಾಚ್ ಫಿಕ್ಸಿಂಗ್ ಮಾಡಲು ಯತ್ನಿಸಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದ್ದು, ಆತನ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿ ವೆಸ್ಟ್ ಇಂಡೀಸ್‍ನಲ್ಲಿ ಬಂಧನ ಮಾಡಿದ್ದಾರೆ.

    ಇತ್ತೀಚೆಗಷ್ಟೇ ಕೆಪಿಎಲ್ ಟೂರ್ನಿಯ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಆಟಗಾರ ಅಬ್ರಾರ್ ಖಾಜಿರನ್ನು ಪೊಲೀಸರು ಬಂಧಿಸಿದ್ದರು. 2019ರ ಕೆಪಿಎಲ್ ಆವೃತ್ತಿಯ ಫೈನಲ್ ಪಂದ್ಯದ ಬ್ಯಾಟಿಂಗ್ ಸಂದರ್ಭದಲ್ಲಿ ಗೌತಮ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿದ್ದರು. ಇದಕ್ಕೆ 20 ಲಕ್ಷ ರೂ. ಹಣ ಪಡೆದಿದ್ದರು ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದರು. ಸದ್ಯ ಇವರೊಂದಿಗೆ ಸಂಪರ್ಕದಲ್ಲಿದ್ದ ಬುಕ್ಕಿಯನ್ನು ಬಂಧನ ಮಾಡಿರುವ ಪೊಲೀಸರು ಪ್ರಕರಣದ ವಿಚಾರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

    ಫಿಕ್ಸಿಂಗ್ ವಿಚಾರದಲ್ಲಿ ಸಿಸಿಬಿ ಪೊಲೀಸರಿಗೆ ಹಲವು ಆಟಗಾರರ ಮೇಲೆ ಅನುಮಾನ ಮೂಡಿದ್ದು, ಈ ಕುರಿತ ಆಧಾರಗಳನ್ನು ಕಲೆ ಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಆಟಗಾರರ ಈ ಕಳ್ಳಾಟ ಬಯಲಾದ ಪರಿಣಾಮ ಕೆಎಸ್‍ಸಿಎ ಹಾಗೂ ಬಿಸಿಸಿಐ ಕಳಂಕವನ್ನು ಎದುರಿಸಿದೆ. ಈಗಾಗಲೇ ಬಂಧನವಾಗಿರುವ ಆಟಗಾಟರರನ್ನು ಸಮಿತಿ ಎಲ್ಲಾ ಮಾದರಿ ಕ್ರಿಕೆಟಿನಿಂದ ಅಮಾನತು ಮಾಡಿದೆ.

    ಬಳ್ಳಾರಿ ತಂಡದ ನಾಯಕರಾಗಿದ್ದ ಸಿಎಂ ಗೌತಮ್ ಭಾರತ ಪರ ‘ಎ’ ತಂಡವನ್ನು ಪ್ರತಿನಿಧಿಸಿದ್ದರು. ಅಲ್ಲದೇ ಕರ್ನಾಟಕ ಹಾಗೂ ಗೋವಾ ತಂಡಗಳ ಪರ ಆಡಿದ್ದರು. ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿ, ಮುಂಬೈ ಇಂಡಿಯನ್ಸ್, ಡೆಲ್ಲಿ ತಂಡಗಳ ಪರ ಆಡಿದ್ದರು. 2019ರ ಕೆಪಿಎಲ್ ಟೂರ್ನಿಯಲ್ಲಿ ಕ್ರಿಕೆಟಿಗ ನಿಶಾಂತ್ ಸಿಂಗ್ ಶೇಖಾವತ್‍ರನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ದೊರೆತ ಮಾಹಿತಿ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಲಾಗಿತ್ತು.