Tag: ಫಿನಾಲೆ

  • Bigg Boss Hindi: ಕನ್ನಡದ ಹುಡುಗನಿಗೆ ಗೆಲುವಾಗುತ್ತಾ?

    Bigg Boss Hindi: ಕನ್ನಡದ ಹುಡುಗನಿಗೆ ಗೆಲುವಾಗುತ್ತಾ?

    ವತ್ತು ಹಿಂದಿ ಮತ್ತು ಕನ್ನಡ ಬಿಗ್ ಬಾಸ್ (Bigg Boss Hindi) ಫಿನಾಲೆ ಹಂತವನ್ನು ಪೂರೈಸುತ್ತಿದೆ. ನಿನ್ನೆಯಿಂದಲೇ ಫಿನಾಲೆ ಕಾರ್ಯಕ್ರಮಗಳು ಚಿತ್ರೀಕರಣಗೊಳ್ಳುತ್ತಿವೆ ಮತ್ತು ಪ್ರಸಾರವಾಗುತ್ತಿವೆ. ಅಂತಿಮವಾಗಿ ಟ್ರೋಫಿ ಎತ್ತುವವರು ಯಾರು ಎನ್ನುವ ಕುತೂಹಲಕ್ಕೆ ಇಂದು ರಾತ್ರಿ ತೆರೆ ಬೀಳಲಿದೆ.

    ಹೆಮ್ಮೆ ಪಡಬೇಕಾದ ಸಂಗತಿ ಏನೆಂದರೆ ಹಿಂದಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ನಲ್ಲಿ ಕನ್ನಡದ ಹುಡುಗ ಅರುಣ್ ಮಾಶೆಟ್ಟಿ (Arun Mashetti) ಕೂಡ ಭಾಗಿಯಾಗಿದ್ದು, ಅಂತಿಮ ಐದರ ಸ್ಥಾನವನ್ನೂ ಅವರು ಪಡೆದುಕೊಂಡಿದ್ದಾರೆ. ಹಾಗಾಗಿ ತಮ್ಮೂರಿನ ಹುಡುಗ ಬಿಗ್ ಬಾಸ್ ಗೆದ್ದು ಬರಲಿ ಎಂದು ಊರಿನ ಜನತೆ ಶುಭ ಹಾರೈಸಿದ್ದಾರೆ.

    ಅರುಣ್ ಮಾಶೆಟ್ಟಿ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ರಾಷಪ್ಪ ಗೌಡಗಾಂವ ಗ್ರಾಮದವರು. ಯೂಟ್ಯೂಬರ್ ಆಗಿರುವ ಇವರು ಬೀದರ್ ಭಾಷೆಯಲ್ಲಿ ವಿಡಿಯೋಗಳನ್ನು ಮಾಡಿಕೊಂಡು ಹೆಸರಾದವರು. ಬಿಗ್ ಬಾಸ್ ನಲ್ಲೂ ಆಗಾಗ್ಗೆ ಕನ್ನಡವನ್ನು ಮಾತನಾಡಿದ್ದೂ ಇದೆ.

     

    ಮೂಲತಃ ಕರುನಾಡಿವರಾದರು, ನೆಲೆಯೂರಿದ್ದು ಹೈದರಾಬಾದ್ ನಲ್ಲಿ. ಆದರೂ, ಕನ್ನಡವನ್ನು ಅವರು ಮರೆತಿಲ್ಲ. ಸಲ್ಮಾನ್ ಖಾನ್ (Salman Khan) ಎದುರಲ್ಲೇ ಕನ್ನಡವನ್ನು ಮಾತನಾಡಿ ಅಭಿಮಾನ ಮರೆದವರು.

  • Bigg Boss Kannada ಫಿನಾಲೆ: ಸುದೀಪ್ ಲುಕ್ ರಿವೀಲ್

    Bigg Boss Kannada ಫಿನಾಲೆ: ಸುದೀಪ್ ಲುಕ್ ರಿವೀಲ್

    ಬಿಗ್ ಬಾಸ್ (Bigg Boss Kannada) ಫಿನಾಲೆಗೆ (Finale) ಸುದೀಪ್ (Sudeep) ಅವರು ಹೇಗೆ ಕಾಣಲಿದ್ದಾರೆ, ಯಾವ ರೀತಿಯ ಕಾಸ್ಟ್ಯೂಮ್ ಧರಿಸಲಿದ್ದಾರೆ ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿ ಇದ್ದೇ ಇತ್ತು. ಕೊನೆಗೂ ಅದು ರಿವೀಲ್ ಆಗಿದೆ. ಬಿಳಿ ಮಿಶ್ರಿತ ಕಾಸ್ಟ್ಯೂಮ್ ಅನ್ನು ಕಿಚ್ಚ ಧರಿಸಿದ್ದು, ಆ ಶರ್ಟ್ ಮೇಲೆ ಬಾದ್ ಶಹಾ ಎಂದು ಬರೆಯಲಾಗಿದೆ. ಕಿಚ್ಚ ಲುಕ್ ಕಂಡ ಅಭಿಮಾನಿಗಳು ಖಂಡಿತಾ ಖುಷಿ ಪಟ್ಟಿರುತ್ತಾರೆ.

    ಬಿಗ್ ಬಾಸ್ ಫಿನಾಲೆ ವೇದಿಕೆ ರಂಗು ರಂಗಾಗಿದೆ. ನೂರು ಚಿಲ್ರೆ ದಿನಗಳನ್ನು ಪೂರೈಸಿ ಕೊನೆಗೂ ಬಿಗ್ ಬಾಸ್ ಫಿನಾಲೆಗೆ ಬಂದು ತಲುಪಿದೆ. ಇಂದು ಸಂಜೆಯಿಂದ ಫಿನಾಲೆ ಸಂಚಿಕೆಯನ್ನು ಪ್ರಸಾರ ಮಾಡಲು ವಾಹಿನಿಯು ಸಿದ್ಧ ಮಾಡಿಕೊಂಡಿದೆ. ಸಂಜೆ 7.30ರಿಂದ ಫಿನಾಲೆ ಸಂಚಿಕೆಯನ್ನು ವೀಕ್ಷಿಸಬಹುದಾಗಿದೆ. ಫಿನಾಲೆ ಕಾರಣದಿಂದಾಗಿ ತಮ್ಮದೇ ಆದ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ ಬಿಗ್ ಬಾಸ್ ಟೀಮ್. ಈಗಾಗಲೇ ನಾಮಿನೇಟ್ ಆಗಿರುವ ಸ್ಪರ್ಧಿಗಳನ್ನು ವೇದಿಕೆಗೆ ಕರೆಯಿಸಿಕೊಂಡು ಭರ್ಜರಿ ಸ್ಟೆಪ್ ಹಾಕಿಸಿದೆ.

    ಶೂಟಿಂಗ್ ಸ್ಥಳದಲ್ಲಿ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. ಚಿತ್ರೀಕರಣದ ಯಾವುದೇ ವಿಷಯಗಳು ಬಹಿರಂಗವಾಗ ಬಾರದು ಎನ್ನುವ ಕಾರಣಕ್ಕಾಗಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾಮಾನ್ಯ ಪ್ರೇಕ್ಷಕರಿಗೆ ಇಂದು ಪ್ರವೇಶವಿಲ್ಲ. ಅವರೇ ಆಯ್ಕೆ ಮಾಡಿರುವ ಕೆಲವೇ ಕೆಲವೇ ಪ್ರೇಕ್ಷಕರು ಇಂದು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಅದರಲ್ಲೂ ಮೊಬೈಲ್ ನಿಷೇಧ ಮಾಡಲಾಗಿದೆ.

    ಈಗಾಗಲೇ ನಾಮಿನೇಟ್ ಆಗಿರುವ ಸ್ಪರ್ಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಮೈಕಲ್, ತನಿಷಾ ಕುಪ್ಪಂಡ ಸೇರಿದಂತೆ ಬಹುತೇಕರು ಹಿಟ್ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ನಿನ್ನೆಯಿಂದಲೇ ಚಿತ್ರೀಕರಣದ ಕೆಲಸವನ್ನೂ ಮುಗಿಸಿದ್ದಾರೆ. ಇವತ್ತು ಮತ್ತು ನಾಳೆ ಎರಡು ದಿನಗಳ ಕಾಲ ಫಿನಾಲೆ ಶೂಟಿಂಗ್ ನಡೆಯಲಿದ್ದು. ಜೊತೆಗೆ ಇವತ್ತು ಇಬ್ಬರು ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ ಎನ್ನುವ ಸುದ್ದಿಯೂ ಹರಿದಾಡುತ್ತಿದೆ.

    ಡ್ರೋನ್ ಪ್ರತಾಪ್, ಸಂಗೀತಾ ಶೃಂಗೇರಿ, ಕಾರ್ತಿಕ್, ತುಕಾಲಿ ಸಂತು, ವರ್ತೂರು ಸಂತು ಹಾಗೂ ವಿನಯ್ ಸದ್ಯ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಸಂಗೀತಾ, ವಿನಯ್ ಹಾಗೂ ಡ್ರೋನ್ ಪ್ರತಾಪ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಬಿಗ್ ಬಾಸ್ ಗೆಲುವಿಗಾಗಿ ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ಶ್ರಮ ವಹಿಸುತ್ತಿದ್ದಾರೆ. ಅಂತಿಮವಾಗಿ ಬಿಗ್ ಬಾಸ್ ಪಟ್ಟ ಯಾರ ಪಾಲಾಗಲಿದೆ ಎನ್ನುವುದು ನಾಳೆ ಗೊತ್ತಾಗಲಿದೆ.

  • Bigg Boss Kannada : ಇವತ್ತು ಎಲಿಮಿನೇಷನ್ ಆಗೋದು ಎಷ್ಟು ಜನ?

    Bigg Boss Kannada : ಇವತ್ತು ಎಲಿಮಿನೇಷನ್ ಆಗೋದು ಎಷ್ಟು ಜನ?

    ಬಿಗ್‌ಬಾಸ್‌ ಕನ್ನಡ (Bigg Boss Kannada) ಹತ್ತನೇ ಸೀಸನ್‌ ಆರಂಭವಾಗಿದ್ದು ನಿನ್ನೆ ಮೊನ್ನೆ ಎನ್ನುವ ಹಾಗೆ ನೆನಪಿದೆ. ವಾರ ವಾರಕ್ಕೂ, ದಿನದಿನಕ್ಕೂ ತನ್ನ ರಂಗು, ರಂಜನೆಗಳನ್ನು ಹೆಚ್ಚಿಸಿಕೊಳ್ಳುತ್ತಲೇ ಬಂದ ಬಿಗ್‌ಬಾಸ್ ಕನ್ನಡದ ಗ್ರ್ಯಾಂಡ್ ಫಿನಾಲೆ ನೋಡನೋಡುತ್ತಿದ್ದಂತೆಯೇ ಬಂದೇ ಬಿಟ್ಟಿದೆ. ಇನ್ನೊಂದು ವಾರ, ಇನ್ನೆರಡು ದಿನ ಎಂದೆಲ್ಲ ಕೌಂಟ್‌ಡೌನ್‌ಗಳು ಮುಗಿದು ಕೊನೆಗೂ ಬಿಗ್‌ಬಾಸ್ ಗ್ರ್ಯಾಂಡ್ ಫಿನಾಲೆ (Finale) ‘ಇಂದು’ ಎಂದು ಹೇಳುವ ಗಳಿಗೆ ಬಂದೇ ಬಿಟ್ಟಿದೆ.

    ಹತ್ತೊಂಬತ್ತು ಸ್ಪರ್ಧಿಗಳ ಎಂಟ್ರಿಯ ಜೊತೆಗೆ ಶುರುವಾಗಿದ್ದ ಬಿಗ್‌ಬಾಸ್‌ ಕನ್ನಡ ಸೀಸನ್‌ 10 ಹದಿನಾರು ವಾರಗಳನ್ನು ದಾಟಿದೆ. ಫಿನಾಲೆ ವಾರದಲ್ಲಿ ಆರು ಸ್ಪರ್ಧಿಗಳಷ್ಟೇ ಮನೆಯೊಳಗೆ ಇದ್ದಾರೆ. ತಮ್ಮದೇ ಜರ್ನಿಯ ಸಿಹಿ-ಕಹಿ ನೆನಪುಗಳ ಮಳೆಯಲ್ಲಿ ತೋಯುತ್ತಿದ್ದಾರೆ. ಸೀಸನ್‌ ಉದ್ದಕ್ಕೂ ಅವರ ಪ್ರಯಾಣದಲ್ಲಿ ಮಾನಸಿಕವಾಗಿ ಜೊತೆಯಾಗಿದ್ದ ಪ್ರೇಕ್ಷಕರಿಗೂ ಇದು ಭಾವುಕ ಗಳಿಗೆ. ಎಲ್ಲ ಸ್ಪರ್ಧಿಗಳು ಎದುರಿಸಿದ ದಿನದಿನದ ಕ್ಷಣಕ್ಷಣದ ಅಗ್ನಿಪರೀಕ್ಷೆಯ ಪರಿಣಾಮವಾಗಿ ‘ಬಿಗ್‌ಬಾಸ್‌ ಕನ್ನಡ’ ರಿಯಾಲಿಟಿ ಷೋ ಮತ್ತೊಮ್ಮೆ ಅದ್ಭುತ ಗೆಲುವನ್ನು ಕಂಡಿದೆ. ಹಿಂದೆಂದೂ ಕಂಡಿರದ ಸ್ಪಂದನವನ್ನು ಕಂಡಿದೆ. ಯಶಸ್ಸಿನ ಸವಿಯನ್ನು ಮತ್ತೊಮ್ಮೆ ಉಂಡಿದೆ.

    ಬಿಗ್‌ಬಾಸ್ ಕನ್ನಡ ಮತ್ತು ಪ್ರೇಕ್ಷಕರ ನಡುವಿನ ಈ ಸುಧೀರ್ಘ ಪ್ರಯಾಣಕ್ಕೆ ಇಂದು ಮತ್ತು ನಾಳೆ ನಡೆಯಲಿರುವ ಗ್ರ್ಯಾಂಡ್ ಫಿನಾಲೆಯೊಟ್ಟಿಗೆ ಅಲ್ಪವಿರಾಮ ಬೀಳಲಿದೆ. ಇಷ್ಟು ದೊಡ್ಡ ಷೋದ, ಇಷ್ಟು ದೊಡ್ಡ ಯಶಸ್ಸಿನ ಅಂತಿಮ ಘಟ್ಟವೂ ಅದ್ದೂರಿಯಾಗಿ ಇರಲೇಬೇಕಲ್ಲವೇ? ಅನುಮಾನವೇ ಬೇಡ, ಬಿಗ್‌ಬಾಸ್‌ ರಿಯಾಲಿಟಿ ಷೋದ ಈ ಸೀಸನ್‌ನ ಫಿನಾಲೆ ಕೂಡ ಸಖತ್ ಸ್ಪೆಷಲ್ ಆಗಿಯೇ ಇರಲಿದೆ.

     

    ಈ ನಡುವೆ ಎಲಿಮಿನೇಷನ್ (Elimination) ಕೂಡ ನಡೆಯಲಿದ್ದು, ಆರು ಜನರಲ್ಲಿ ಇಬ್ಬರನ್ನು ಇಂದು ಮನೆಗೆ ಕಳುಹಿಸಲಾಗುತ್ತಿದೆ ಎನ್ನುವ ಮಾಹಿತಿ ಇದೆ. ಡ್ರೋನ್ ಪ್ರತಾಪ್, ವರ್ತೂರು ಸಂತೋಷ್, ಸಂಗೀತಾ, ತುಕಾಲಿ ಸಂತು, ಕಾರ್ತಿಕ್ ಮತ್ತು ವಿನಯ್ ಇವರಲ್ಲಿ ಯಾರು ಮನೆಯಿಂದ ಆಚೆ ಬರ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

  • Bigg Boss Kannada: ಫಿನಾಲೆ ವೇದಿಕೆ ಮೇಲೆ ಕುಣಿದ ಕಂಟೆಸ್ಟೆಂಟ್ಸ್

    Bigg Boss Kannada: ಫಿನಾಲೆ ವೇದಿಕೆ ಮೇಲೆ ಕುಣಿದ ಕಂಟೆಸ್ಟೆಂಟ್ಸ್

    ಬಿಗ್ ಬಾಸ್ (Bigg Boss Kannada) ಫಿನಾಲೆ ವೇದಿಕೆ ರಂಗು ರಂಗಾಗಿದೆ. ನೂರು ಚಿಲ್ರೆ ದಿನಗಳನ್ನು ಪೂರೈಸಿ ಕೊನೆಗೂ ಬಿಗ್ ಬಾಸ್ ಫಿನಾಲೆಗೆ ಬಂದು ತಲುಪಿದೆ. ಇಂದು ಸಂಜೆಯಿಂದ ಫಿನಾಲೆ (Finale) ಸಂಚಿಕೆಯನ್ನು ಪ್ರಸಾರ ಮಾಡಲು ವಾಹಿನಿಯು ಸಿದ್ಧ ಮಾಡಿಕೊಂಡಿದೆ. ಸಂಜೆ 7.30ರಿಂದ ಫಿನಾಲೆ ಸಂಚಿಕೆಯನ್ನು ವೀಕ್ಷಿಸಬಹುದಾಗಿದೆ. ಫಿನಾಲೆ ಕಾರಣದಿಂದಾಗಿ ತಮ್ಮದೇ ಆದ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ ಬಿಗ್ ಬಾಸ್ ಟೀಮ್. ಈಗಾಗಲೇ ನಾಮಿನೇಟ್ ಆಗಿರುವ ಸ್ಪರ್ಧಿಗಳನ್ನು ವೇದಿಕೆಗೆ ಕರೆಯಿಸಿಕೊಂಡು ಭರ್ಜರಿ ಸ್ಟೆಪ್ (Dance) ಹಾಕಿಸಿದೆ.

    ಶೂಟಿಂಗ್ ಸ್ಥಳದಲ್ಲಿ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. ಚಿತ್ರೀಕರಣದ ಯಾವುದೇ ವಿಷಯಗಳು ಬಹಿರಂಗವಾಗ ಬಾರದು ಎನ್ನುವ ಕಾರಣಕ್ಕಾಗಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾಮಾನ್ಯ ಪ್ರೇಕ್ಷಕರಿಗೆ ಇಂದು ಪ್ರವೇಶವಿಲ್ಲ. ಅವರೇ ಆಯ್ಕೆ ಮಾಡಿರುವ ಕೆಲವೇ ಕೆಲವೇ ಪ್ರೇಕ್ಷಕರು ಇಂದು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಅದರಲ್ಲೂ ಮೊಬೈಲ್ ನಿಷೇಧ ಮಾಡಲಾಗಿದೆ.

    ಈಗಾಗಲೇ ನಾಮಿನೇಟ್ ಆಗಿರುವ ಸ್ಪರ್ಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಮೈಕಲ್, ತನಿಷಾ ಕುಪ್ಪಂಡ ಸೇರಿದಂತೆ ಬಹುತೇಕರು ಹಿಟ್ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ನಿನ್ನೆಯಿಂದಲೇ ಚಿತ್ರೀಕರಣದ ಕೆಲಸವನ್ನೂ ಮುಗಿಸಿದ್ದಾರೆ. ಇವತ್ತು ಮತ್ತು ನಾಳೆ ಎರಡು ದಿನಗಳ ಕಾಲ ಫಿನಾಲೆ ಶೂಟಿಂಗ್ ನಡೆಯಲಿದ್ದು. ಜೊತೆಗೆ ಇವತ್ತು ಇಬ್ಬರು ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ ಎನ್ನುವ ಸುದ್ದಿಯೂ ಹರಿದಾಡುತ್ತಿದೆ.

    ಡ್ರೋನ್ ಪ್ರತಾಪ್, ಸಂಗೀತಾ ಶೃಂಗೇರಿ, ಕಾರ್ತಿಕ್, ತುಕಾಲಿ ಸಂತು, ವರ್ತೂರು ಸಂತು ಹಾಗೂ ವಿನಯ್ ಸದ್ಯ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಸಂಗೀತಾ, ವಿನಯ್ ಹಾಗೂ ಡ್ರೋನ್ ಪ್ರತಾಪ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಬಿಗ್ ಬಾಸ್ ಗೆಲುವಿಗಾಗಿ ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ಶ್ರಮ ವಹಿಸುತ್ತಿದ್ದಾರೆ. ಅಂತಿಮವಾಗಿ ಬಿಗ್ ಬಾಸ್ ಪಟ್ಟ ಯಾರ ಪಾಲಾಗಲಿದೆ ಎನ್ನುವುದು ನಾಳೆ ಗೊತ್ತಾಗಲಿದೆ.

  • ಬಿಗ್ ಬಾಸ್ ಫಿನಾಲೆಗೆ ಇಂದು ಮುಹೂರ್ತ: ಸುದೀಪ್ ಅಕ್ಕಪಕ್ಕ ನಿಲ್ಲೋರು ಯಾರು?

    ಬಿಗ್ ಬಾಸ್ ಫಿನಾಲೆಗೆ ಇಂದು ಮುಹೂರ್ತ: ಸುದೀಪ್ ಅಕ್ಕಪಕ್ಕ ನಿಲ್ಲೋರು ಯಾರು?

    ನೂರು ಚಿಲ್ರೆ ದಿನಗಳನ್ನು ಪೂರೈಸಿ ಕೊನೆಗೂ ಬಿಗ್ ಬಾಸ್ (Bigg Boss Kannada) ಫಿನಾಲೆಗೆ ಬಂದು ತಲುಪಿದೆ. ಇಂದು ಸಂಜೆಯಿಂದ ಫಿನಾಲೆ ಸಂಚಿಕೆಯನ್ನು ಪ್ರಸಾರ ಮಾಡಲು ವಾಹಿನಿಯು ಸಿದ್ಧ ಮಾಡಿಕೊಂಡಿದೆ. ಸಂಜೆ 7.30ರಿಂದ ಫಿನಾಲೆ ಸಂಚಿಕೆಯನ್ನು ವೀಕ್ಷಿಸಬಹುದಾಗಿದೆ. ಫಿನಾಲೆ (Finale) ಕಾರಣದಿಂದಾಗಿ ತಮ್ಮದೇ ಆದ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ ಬಿಗ್ ಬಾಸ್ ಟೀಮ್.

    ಶೂಟಿಂಗ್ ನಲ್ಲಿ ನಡೆಯುವ ವಿಷಯಗಳು ಬಹಿರಂಗವಾಗ ಬಾರದು ಎನ್ನುವ ಕಾರಣಕ್ಕಾಗಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆಯಂತೆ. ಸಾಮಾನ್ಯ ಪ್ರೇಕ್ಷಕರಿಗೆ ಇಂದು ಪ್ರವೇಶವಿಲ್ಲ. ಅವರೇ ಆಯ್ಕೆ ಮಾಡಿರುವ ಕೆಲವೇ ಕೆಲವೇ ಪ್ರೇಕ್ಷಕರು ಇಂದು ಇರಲಿದ್ದಾರೆ.

    ಈಗಾಗಲೇ ನಾಮಿನೇಟ್ ಆಗಿರುವ ಸ್ಪರ್ಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ನಿನ್ನೆಯಿಂದಲೇ ಒಂದಷ್ಟು ಚಿತ್ರೀಕರಣದ ಕೆಲಸವನ್ನೂ ಮುಗಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಇವತ್ತು ಮತ್ತು ನಾಳೆ ಎರಡು ದಿನಗಳ ಕಾಲ ಫಿನಾಲೆ ಶೂಟಿಂಗ್ ನಡೆಯಲಿದೆ. ಜೊತೆಗೆ ಇವತ್ತು ಇಬ್ಬರು ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರಂತೆ.

    ಡ್ರೋನ್ ಪ್ರತಾಪ್, ಸಂಗೀತಾ ಶೃಂಗೇರಿ, ಕಾರ್ತಿಕ್, ತುಕಾಲಿ ಸಂತು, ವರ್ತೂರು ಸಂತು ಹಾಗೂ ವಿನಯ್ ಸದ್ಯ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಸಂಗೀತಾ, ವಿನಯ್ ಹಾಗೂ ಡ್ರೋನ್ ಪ್ರತಾಪ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಅಂತಿಮವಾಗಿ ಬಿಗ್ ಬಾಸ್ ಪಟ್ಟ ಯಾರ ಪಾಲಾಗಲಿದೆ ಎನ್ನುವುದು ನಾಳೆ ಗೊತ್ತಾಗಲಿದೆ.

  • ‘ಬಿಗ್ ಬಾಸ್’ನಲ್ಲಿ ಭಾರೀ ಟ್ವಿಸ್ಟ್: ಫಿನಾಲೆಗೆ ಟಿಕೆಟ್ ಪಡೆದ ಸಂಗೀತ

    ‘ಬಿಗ್ ಬಾಸ್’ನಲ್ಲಿ ಭಾರೀ ಟ್ವಿಸ್ಟ್: ಫಿನಾಲೆಗೆ ಟಿಕೆಟ್ ಪಡೆದ ಸಂಗೀತ

    ವರೆಗೂ ಡೈರೆಕ್ಟ್ ಆಗಿ ಫಿನಾಲೆ (Finale) ಹೋಗುವಂತಹ ಅವಕಾಶವನ್ನು ಬಿಗ್ ಬಾಸ್ (Big Boss) ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಬಿಗ್ ಬಾಸ್ ಇನ್ನೂ ಎರಡು ವಾರಗಳ ಕಾಲ ಇರುವಾಗಲೇ ನೇರವಾಗಿ ಫಿನಾಲೆ ವೇದಿಕೆಗೆ ಒಬ್ಬ ಕಂಟೆಸ್ಟೆಂಟ್ ಹೋಗುವಂತಹ ಅವಕಾಶವನ್ನು ನೀಡಿದ್ದಾರೆ. ಅದಕ್ಕಾಗಿಯೇ ಟಿಕೆಟ್ ಟು ಫಿನಾಲೆ ಟಾಸ್ಕ್ ನೀಡಿದ್ದಾರೆ. ಈ ಟಾಸ್ಕ್ ನಲ್ಲಿ ಬಹುತೇಕರು ವೈಯಕ್ತಿಕವಾಗಿ ಆಡಬೇಕಾಗಿದ್ದರಿಂದ ಪ್ರತಿ ಟಾಸ್ಕ್ ಕೂಡ ರೋಚಕವಾಗಿದ್ದವು.

    ವಾರ ಪೂರ್ತಿ ನಡೆದ ಟಿಕೆಟ್ ಟು ಟಾಸ್ಕ್‌ನಲ್ಲಿ ಪ್ರತಿ ನಾಲ್ವರು ಆಡಬೇಕಿತ್ತು. ಸರದಿ ಬಂದಾಗ ಪ್ರತಿ ಆಟಗಾರ ಕೂಡ ತನ್ನೊಂದಿಗೆ ಆಡಲು ಮೂವರು ಎದುರಾಳಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಿತ್ತು. ಹೀಗೆ ಎಂಟು ರೌಂಡ್ಸ್‌ನಲ್ಲಿ ಆಟ ನಡೆದಿತ್ತು. ಎಂಟು ಸ್ಪರ್ಧಿಗಳಿಗೂ ಅಂಕಗಳನ್ನು ನೀಡಲಾಗಿತ್ತು. ಹೆಚ್ಚು ಯಾರು ಅಂಕ ಪಡೆಯುತ್ತಾರೋ ಅವರೇ ಫಿನಾಲೆಯ ಟಿಕೆಟ್ ಪಡೆಯುತ್ತಾರೆ ಎನ್ನುವುದು ಬಿಗ್ ಬಾಸ್ ನಿಯಮವಾಗಿತ್ತು.

    ಇಂದು ಬೆಳಗ್ಗೆ ವಾಹಿನಿಯು ಪ್ರೋಮೋವೊಂದನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಪ್ರತಾಪ್ ಅವರೇ ಟಾಪ್ ಎಂದು ತೋರಿಸಲಾಗಿದೆ. ಜೊತೆಗೆ ಆಟದಿಂದ ಸಂಗೀತಾ (Sangeetha) ಅವರನ್ನು ಪ್ರತಾಪ್ ಹೊರಗಿಟ್ಟ ಕಾರಣದಿಂದಾಗಿ ಸಂಗೀತಾ ಫಿನಾಲೆಗೆ ಬರುವುದಿಲ್ಲ ಎನ್ನುವಂತೆ ಬಿಂಬಿಸಲಾಗಿದೆ. ಆದರೆ, ಸಿಕ್ಕಿರುವ ಮಾಹಿತಿಯ ಪ್ರಕಾರ ಫಿನಾಲೆಗೆ ಹೋಗುವ ಟಿಕೆಟ್ ಅನ್ನು ಸಂಗೀತಾ ಪಡೆದಿದ್ದಾರೆ. ಪ್ರತಾಪ್ 280 ಅಂಕ ಪಡೆದಿರುವ ಮತ್ತು ಸಂಗೀತಾ 260 ಪಾಯಿಂಟ್ ಇರುವ ಬೋರ್ಡ್ ಅನ್ನು ತೋರಿಸಲಾಗಿದ್ದರೂ, ಕೊನೆಗೊಂದು ಟ್ವಿಸ್ಟ್ ನೀಡಲಾಗಿತ್ತಂತೆ.

    ಈ ವಾರ ಕ್ಯಾಪ್ಟನ್ಸಿಗಾಗಿ ಟಾಸ್ಕ್ ವೊಂದನ್ನು ಬಿಗ್ ಬಾಸ್ ನೀಡಿದ್ದರು. ಕ್ಯಾಪ್ಟನ್ಸಿ ಟಾಸ್ಕ್ ಜೊತೆ ಫಿನಾಲೆ ಟಿಕೆಟ್ ಟಾಸ್ಕ್ ಕೂಡ ಜೋಡಿಸಿದ್ದಾರೆ. ಈ ವೇಳೆಯಲ್ಲಿ ಅತೀ ಹೆಚ್ಚು ಅಂಕ ಪಡೆಯುವ ಮೂಲಕ ಸಂಗೀತಾ ಫಿನಾಲೆ ಟಿಕೆಟ್ ಪಡೆದಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಇದು ನಿಜವಾ? ಅಥವಾ ಸುಳ್ಳಾ? ಎಂದು ಖಾತರಿ ಆಗಲಿ ಇಂದು ರಾತ್ರಿವರೆಗೂ ಕಾಯಬೇಕಿದೆ.

  • ‘ಬಿಗ್ ಬಾಸ್’ ಫಿನಾಲೆ ವೇದಿಕೆಯ ಮೇಲೆ ಸೂಪರ್ ಸ್ಟಾರ್

    ‘ಬಿಗ್ ಬಾಸ್’ ಫಿನಾಲೆ ವೇದಿಕೆಯ ಮೇಲೆ ಸೂಪರ್ ಸ್ಟಾರ್

    ಬಾರಿ ಬಿಗ್ ಬಾಸ್ (Bigg Boss) ಫಿನಾಲೆ (Finale) ವೇದಿಕೆಯ ಮೇಲೆ ಸೂಪರ್ ಸ್ಟಾರ್ ಇರಲಿದ್ದಾರೆ ಎನ್ನುವ ಸುದ್ದಿ ಟಾಲಿವುಟ್ ಅಂಗಳಲ್ಲಿ ಹರಿದಾಡುತ್ತಿದೆ. ತೆಲುಗಿನ ಬಿಗ್ ಬಾಸ್ ಫಿನಾಲೆಗೆ ಮುಖ್ಯ ಅತಿಥಿಯಾಗಿ ಮಹೇಶ್ ಬಾಬು ಇರಲಿದ್ದಾರಂತೆ. ಈಗಾಗಲೇ ಮಹೇಶ್ ಬಾಬು ಬರಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಮಹೇಶ್ ಬಾಬು (Mahesh Babu) ಸದ್ಯ ಗುಂಟೂರು ಖಾರ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಯಲಿದೆಯಂತೆ. ಈ ಸಿನಿಮಾದ ಪ್ರಚಾರಕ್ಕಾಗಿ ಫಿನಾಲಿ ವೇದಿಕೆ ಏರಲಿದ್ದಾರೆ ಎಂದು ಅಲ್ಲಿ ಮಾಧ್ಯಮಗಳು ಸುದ್ದಿ ಮಾಡಿವೆ.

    ತೆಲುಗಿನ ಬಿಗ್ ಬಾಸ್ ಕೂಡ ಕೊನೆಯ ಹಂತಕ್ಕೆ ಬಂದು ತಲುಪಿದೆ. ಈ ಬಾರಿ ಕನ್ನಡತಿ ಶೋಭಾ ಶೆಟ್ಟಿ ಅವರು ಫಿನಾಲೆಯಲ್ಲಿ ಇರಲಿದ್ದಾರೆ ಎಂದು ನಂಬಲಾಗಿತ್ತು. ಆದರೆ, ಮೊನ್ನೆಯಷ್ಟೇ ಅವರು ಎಲಿಮಿನೇಟ್ ಆಗಿ ಮನೆಯಿಂದ ಹೊರ ಬಂದಿದ್ದಾರೆ. ಹಾಗಾಗಿ ಸಹಜವಾಗಿಯೇ ಕನ್ನಡಿಗರಿಗೆ ನಿರಾಸೆಯಾಗಿದೆ.

  • ರೂಪೇಶ್ ಗೆ ಬಿಗ್ ಬಾಸ್ ಕೊಟ್ಟಿದ್ದು 60 ಲಕ್ಷ: ನಿಜವಾಗಿಯೂ ಅವರ ಕೈಗೆ ಬರೋದೆಷ್ಟು?

    ರೂಪೇಶ್ ಗೆ ಬಿಗ್ ಬಾಸ್ ಕೊಟ್ಟಿದ್ದು 60 ಲಕ್ಷ: ನಿಜವಾಗಿಯೂ ಅವರ ಕೈಗೆ ಬರೋದೆಷ್ಟು?

    ಬಿಗ್ ಬಾಸ್ ಸೀಸನ್ 9ರ ಟೈಟಲ್ ಗೆದ್ದಿರುವ ರೂಪೇಶ್ ಶೆಟ್ಟಿಗೆ ವಾಹಿನಿಯಿಂದ ಬಂದ ಬಹುಮಾನ ಮೊತ್ತ ಬರೋಬ್ಬರಿ 60 ಲಕ್ಷ. ಇಷ್ಟೊಂದು ಮೊತ್ತದ ಹಣವು ರೂಪೇಶ್ ಪಾಲಾಗಿದ್ದಕ್ಕೆ ಹಲವರು ಅಚ್ಚರಿ ವ್ಯಕ್ತ ಪಡಿಸಿದ್ದಾರೆ. ಈ ಪ್ರಮಾಣದ ಹಣವನ್ನು ಅವರು ಏನು ಮಾಡುತ್ತಾರೆ ಎಂದೂ ಪ್ರಶ್ನಿಸಿದ್ದಾರೆ. ಬಿಗ್ ಬಾಸ್ ವೇದಿಕೆಯ ಮೇಲೆ ಕಿಚ್ಚ ಸುದೀಪ್ 60 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ. ಆದರೆ, ಅಸಲಿಯಾಗಿ ರೂಪೇಶ್ ಕೈಗೆ ಅಷ್ಟೊಂದು ಮೊತ್ತ ಬರುವುದಿಲ್ಲ.

    ಹೌದು, ಆ ಪ್ರಮಾಣದ ಹಣವನ್ನು ಘೋಷಣೆ ಮಾಡಿದ್ದರೂ, ಅಂದಾಜು ಶೇ.30ರಷ್ಟು ತೆರಿಗೆ ಕಡಿತವಾಗಲಿದ್ದು, ಆ ನಂತರ ಅವರ ಕೈಗೆ ಅಂದಾಜು 42 ಲಕ್ಷ ರೂಪಾಯಿಯಷ್ಟು ಬರಬಹುದು. ಈ ಹಣದಲ್ಲಿ ಅವರು ಹಲವು ಯೋಜನೆಗಳನ್ನು ಹಾಕಿಕೊಂಡಿದ್ದಾರಂತೆ. ಅಲ್ಲದೇ, ಸಾಲ ಇರುವುದರಿಂದ ಸ್ವಲ್ಪ ಮೊತ್ತವನ್ನು ಸಾಲಕ್ಕಾಗಿ ಮೀಸಲಿಡಲಿದ್ದಾರೆ. ಸಿನಿಮಾ, ಸಾಲ, ದೇವರ ಹರಕೆ ಮತ್ತು ಒಂದಷ್ಟು ಸಮಾಜಸೇವೆಗೂ ಅದರಲ್ಲಿ ಮೀಸಲಾಗಿಡುವುದಾಗಿ ಅವರು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡುತ್ತಾ ಹೇಳಿದ್ದಾರೆ. ಇದನ್ನೂ ಓದಿ:ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ರೂಪೇಶ್ ಶೆಟ್ಟಿ ಅವರಿಗೆ 60 ಲಕ್ಷ ರೂಪಾಯಿಗಳ ಬಹುಮಾನ ನೀಡಿದ್ದರೆ, ರನ್ನರ್ ಅಪ್ ಆಗಿರುವ ರಾಕೇಶ್ ಅಡಿಗಗೆ ವಾಹಿನಿಯಿಂದ ಏಳು ಲಕ್ಷ ರೂಪಾಯಿ ಹಾಗೂ ಪ್ರಾಯೋಜಕರ ಅತ್ಯುತ್ತಮ ನಾಯಕ ಬಹುಮಾನವಾಗಿ ಐದು ಲಕ್ಷ ರೂಪಾಯಿ ಒಟ್ಟು 12 ಲಕ್ಷ ರೂಪಾಯಿಯನ್ನು ಬಹುಮಾನವಾಗಿ ರಾಕೇಶ್ ಅಡಿಗ ಪಡೆದುಕೊಂಡಿದ್ದಾರೆ.

    ಈ ಸೀಸನ್ ನಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡವರು ದೀಪಿಕಾ ದಾಸ್. ಅವರಿಗೂ ಕೂಡ ಐದು ಲಕ್ಷ ರೂಪಾಯಿಗಳನ್ನು ಬಹುಮಾನವಾಗಿ ನೀಡಲಾಗಿದೆ. ನಾಲ್ಕನೇ ಸ್ಥಾನದಲ್ಲಿದ್ದ ರೂಪೇಶ್ ರಾಜಣ್ಣ ಅವರಿಗೆ ಮೂರು ಲಕ್ಷ ರೂಪಾಯಿಗಳು ಬಹುಮಾನ ಬಂದಿದೆ. ಹೀಗೆ ಫಿನಾಲೆ ವೇದಿಕೆಯ ಮೇಲಿದ್ದ ದಿವ್ಯಾ ಉರುಡುಗ ಹೊರತುಪಡಿಸಿ ಬಹುತೇಕರಿಗೆ ಲಕ್ಷ ಲಕ್ಷ ರೂಪಾಯಿ ಬಹುಮಾನ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಬಿಗ್ ಬಾಸ್ ಫಿನಾಲೆಗೆ ಬಂದವರಿಗೆ ಯಾರಿಗೆ ಎಷ್ಟು ಲಕ್ಷ ಮೊತ್ತದ ಬಹುಮಾನ?

    ಬಿಗ್ ಬಾಸ್ ಫಿನಾಲೆಗೆ ಬಂದವರಿಗೆ ಯಾರಿಗೆ ಎಷ್ಟು ಲಕ್ಷ ಮೊತ್ತದ ಬಹುಮಾನ?

    ಕನ್ನಡ ಬಿಗ್ ಬಾಸ್ (Bigg Boss) ಸೀಸನ್ 9 ನಿನ್ನೆಯಷ್ಟೇ ಫಿನಾಲೆ ಮುಗಿದಿದೆ. ಈ ಬಾರಿ ಫಿನಾಲೆ ವೇದಿಕೆಯನ್ನು ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದಿವ್ಯಾ ಉರುಡುಗ, ರೂಪೇಶ್ ರಾಜಣ್ಣ ಮತ್ತು ದೀಪಿಕಾ ದಾಸ್  ಇದ್ದರು. ಈ ಐವರಲ್ಲಿ ಯಾರ ಕೈಯಲ್ಲಿ ಬಿಗ್ ಬಾಸ್ ಟ್ರೋಫಿ ಇರಲಿದೆ ಎನ್ನುವ ಕುತೂಹಲವಂತೂ ಇತ್ತು. ಕೊನೆಗೂ ರೂಪೇಶ್ ಶೆಟ್ಟಿ ಕೈಗೆ ಬಿಗ್ ಬಾಸ್ ಸೀಸನ್ 9ರ ಟ್ರೋಫಿ ಬಂದಿದೆ. ರನ್ನರ್ ಅಪ್ ಸ್ಥಾನವು ರಾಕೇಶ್ ಅಡಿಗ ಪಾಲಾಗಿದೆ. ಉಳಿದ ಸ್ಥಾನಗಳನ್ನು ದೀಪಿಕಾ ದಾಸ್ ಮತ್ತು ರೂಪೇಶ್ ರಾಜಣ್ಣ ಪಡೆದಿದ್ದಾರೆ. ಹಾಗಾದರೆ, ಯಾರಿಗೆ ಎಷ್ಟು ಮೊತ್ತದ ಬಹುಮಾನ ಬಂದಿದೆ ಎನ್ನುವ ಕುತೂಹಲ ಎಲ್ಲರದ್ದು.

    ಸೀಸನ್ 9ರ ಟ್ರೋಫಿ ಎತ್ತಿರುವ ರೂಪೇಶ್ ಶೆಟ್ಟಿ (Rupesh Shetty) ಅವರಿಗೆ ಬರೋಬ್ಬರಿ 60 ಲಕ್ಷ ರೂಪಾಯಿಗಳ ಬಹುಮಾನ (Prize) ವನ್ನು ನೀಡಲಾಗಿದೆ. ರನ್ನರ್ ಅಪ್ ಆಗಿರುವ ರಾಕೇಶ್ ಅಡಿಗಗೆ (Rakesh Adiga) ವಾಹಿನಿಯಿಂದ ಏಳು ಲಕ್ಷ ರೂಪಾಯಿ ಹಾಗೂ ಪ್ರಾಯೋಜಕರ ಅತ್ಯುತ್ತಮ ನಾಯಕ ಬಹುಮಾನವಾಗಿ ಐದು ಲಕ್ಷ ರೂಪಾಯಿ ಒಟ್ಟು 12 ಲಕ್ಷ ರೂಪಾಯಿಯನ್ನು ಬಹುಮಾನವಾಗಿ ರಾಕೇಶ್ ಅಡಿಗ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಅದೃಷ್ಟದಿಂದಲೇ ಇಷ್ಟು ದಿನ ಬಿಗ್ ಬಾಸ್‌ನಲ್ಲಿದ್ದರು: ದಿವ್ಯಾಗೆ ಸಂಬರ್ಗಿ ಟಾಂಗ್

    ಈ ಸೀಸನ್ ನಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡವರು ದೀಪಿಕಾ ದಾಸ್ (Deepika Das). ಅವರಿಗೂ ಕೂಡ ಐದು ಲಕ್ಷ ರೂಪಾಯಿಗಳನ್ನು ಬಹುಮಾನವಾಗಿ ನೀಡಲಾಗಿದೆ. ನಾಲ್ಕನೇ ಸ್ಥಾನದಲ್ಲಿದ್ದ ರೂಪೇಶ್ ರಾಜಣ್ಣ ಅವರಿಗೆ ಮೂರು ಲಕ್ಷ ರೂಪಾಯಿಗಳು ಬಹುಮಾನ ಬಂದಿದೆ. ಹೀಗೆ ಫಿನಾಲೆ ವೇದಿಕೆಯ ಮೇಲಿದ್ದ ದಿವ್ಯಾ ಉರುಡುಗ ಹೊರತುಪಡಿಸಿ ಬಹುತೇಕರಿಗೆ ಲಕ್ಷ ಲಕ್ಷ ರೂಪಾಯಿ ಬಹುಮಾನ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ‘ಬಿಗ್ ಬಾಸ್’ ಫಿನಾಲೆ ವೇದಿಕೆಯ ಮೇಲೆ ಕಣ್ಣೀರಿಟ್ಟಿ ಸುದೀಪ್

    ‘ಬಿಗ್ ಬಾಸ್’ ಫಿನಾಲೆ ವೇದಿಕೆಯ ಮೇಲೆ ಕಣ್ಣೀರಿಟ್ಟಿ ಸುದೀಪ್

    ನಿನ್ನೆಯಷ್ಟೇ ಬಿಗ್ ಬಾಸ್ (Bigg Boss) ಸೀಸನ್ 9ರ ಗ್ರ್ಯಾಂಡ್ ಫಿನಾಲೆ ಮುಕ್ತಾಯವಾಗಿದೆ. ಸೋಲು ಗೆಲುವು ಏನೇ ಇರಲಿ, ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿದ್ದ ಅಷ್ಟೂ ಸ್ಪರ್ಧಿಗಳು ತಮ್ಮ ಸಾಮರ್ಥ್ಯವನ್ನು ಮೀರಿ ಮನರಂಜಿಸಲು ಪ್ರಯತ್ನಪಟ್ಟಿದ್ದಾರೆ. ತಮ್ಮದಲ್ಲದ ವ್ಯಕ್ತಿತ್ವವನ್ನು ತೋರಿಸಿದ್ದಾರೆ. ಕೆಲವರು ಒಂದೇ ವಾರಕ್ಕೆ ಮನೆಯಿಂದ ಆಚೆ ಬಂದರೆ, ಇನ್ನೂ ಕೆಲವರು ಫಿನಾಲೆ ವೇದಿಕೆ ಹತ್ತಿದ್ದಾರೆ. ಹಾಗಾಗಿ ಫಿನಾಲೆ ವೇದಿಕೆ ಒಂದು ರೀತಿಯಲ್ಲಿ ಭಾವುಕ ಪ್ರಪಂಚವನ್ನೇ ಸೃಷ್ಟಿ ಮಾಡಿತ್ತು.

    ಅದರಲ್ಲೂ ವೀಕೆಂಡ್ ನಲ್ಲಿ ಬಂದು ಸ್ಪರ್ಧಿಗಳ ಜೊತೆ ಮುಖಾಮುಖಿ ಆಗುವ, ಪ್ರತಿ ಸ್ಪರ್ಧಿಯ ಗುಣ ಅವಗುಣಗಳನ್ನು ತಿಳಿಸುವ, ಕೆಲವೊಂದು ಬಾರಿ ಕೋಪಗೊಳ್ಳುವ ಸುದೀಪ್ (Sudeep), ಫಿನಾಲೆ ವೇದಿಕೆಯ ಮೇಲೆ ಭಾವುಕರಾಗಿ ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು. ಸುದೀಪ್ ಅವರ ಬಿಗ್ ಬಾಸ್ ಜರ್ನಿಯ ತುಣುಕುಗಳನ್ನು ತೋರಿಸಲಾಯಿತು. ಅದನ್ನು ನೋಡುತ್ತಿದ್ದ ಸುದೀಪ್, ಅಕ್ಷರಶಃ ಕಣ್ಣೀರಿಟ್ಟರು. ಇದನ್ನೂ ಓದಿ: ದಿವ್ಯಾ ಉರುಡುಗ ಮೇಲೆ ಹಲವು ಅನುಮಾನ ವ್ಯಕ್ತ ಪಡಿಸಿದ ಆರ್ಯವರ್ಧನ್ ಗುರೂಜಿ

    ಬಿಗ್ ಬಾಸ್ ಜೊತೆಗಿನ ಬಾಂಧವ್ಯವನ್ನು ಹಂಚಿಕೊಂಡ ಸುದೀಪ್, ‘ಇದು ನನ್ನ ನೈಜ ಜೀವನ. ಬಣ್ಣ ಹಚ್ಚದೇ ಮಾತನಾಡುವ ಜೀವನ. ನಾನು ನಾನಾಗಿಯೇ ಕಾಣಿಸಿಕೊಳ್ಳುವ ವೇದಿಕೆ. ಈ ಪ್ರೀತಿಗೆ ನಾನು ಋಣಿಯಾಗಿದ್ದೇನೆ. ನಾನು ಯಾವತ್ತಿಗೂ ನಿಮ್ಮ ಪ್ರೀತಿ ಬಯಸಿಯೇ ಕಾಯುತ್ತೇನೆ’ ಎಂದು ಮಾತನಾಡಿದರು. ಕೆಲವೊತ್ತು ಮಾತುಗಳನ್ನೇ ನಿಲ್ಲಿಸಿ, ಕಣ್ಣೀರು ಒರೆಯಿಸಿಕೊಂಡರು.

    ಬಿಗ್ ಬಾಸ್ ಸೀಸನ್ 9ರ ತೊಂಬತ್ತೊಂಬತ್ತು ದಿನಗಳ ಆಟಕ್ಕೆ ನಿನ್ನೆ ಮುಕ್ತಾಯ ಹಾಡಲಾಗಿದೆ. ಈ ಬಾರಿ ರೂಪೇಶ್ ಶೆಟ್ಟಿ (Rupesh Shetty) ಬಿಗ್ ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದರೆ, ರಾಕೇಶ್ ಅಡಿಗ (Rakesh Adiga)ರನ್ನರ್ ಆಗಿದ್ದಾರೆ. ಬಿಗ್ ಬಾಸ್ ಟೈಟಲ್ ಗೆದ್ದ ರೂಪೇಶ್ ಶೆಟ್ಟಿ ಬಿಗ್ ಬಾಸ್ ಟ್ರೋಫಿ ಮತ್ತು 60 ಲಕ್ಷ ರೂಪಾಯಿಗಳ ಬಹುಮಾನ ಪಡೆದಿದ್ದಾರೆ. ತಮ್ಮ ಜರ್ನಿ ಯಾವತ್ತಿಗೂ ಮರೆಯಲಾರದ್ದು ಎಂದು ಪ್ರತಿಕ್ರಿಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]