Tag: ಫಿಫಾ

  • ಜರ್ಮನಿಗೆ 8.5 ಲಕ್ಷ ರೂ. ದಂಡ ವಿಧಿಸಿದ ಫಿಫಾ

    ಜರ್ಮನಿಗೆ 8.5 ಲಕ್ಷ ರೂ. ದಂಡ ವಿಧಿಸಿದ ಫಿಫಾ

    ಕತಾರ್‌: ಜರ್ಮನಿ ತಂಡಕ್ಕೆ ವಿಶ್ವ ಫುಟ್‌ಬಾಲ್‌ ಸಂಸ್ಥೆ ಫಿಫಾ(FIFA) 10 ಸಾವಿರ ಸ್ವಿಸ್‌ ಫ್ರಾಂಕ್‌(ಅಂದಾಜು 8.5 ಲಕ್ಷ ರೂ.) ದಂಡವನ್ನು ವಿಧಿಸಿದೆ.

    ಸ್ಪೇನ್‌(Spain) ಜೊತೆಗಿನ ಪಂದ್ಯ ನಡೆಯುವುದಕ್ಕೂ ಮೊದಲು ಸುದ್ದಿಗೋಷ್ಠಿಗೆ ಆಟಗಾರನನ್ನು ಜರ್ಮನಿ(Germany) ಕಳುಹಿಸಬೇಕಿತ್ತು. ಆದರೆ ಆಟಗಾರನನ್ನು ಕಳುಹಿಸದ ಹಿನ್ನೆಲೆಯಲ್ಲಿ ಫಿಫಾ ಜರ್ಮನಿ ತಂಡಕ್ಕೆ ದಂಡವನ್ನು ವಿಧಿಸಿದೆ. ಇದನ್ನೂ ಓದಿ: ಮೊರೊಕ್ಕೊ ವಿರುದ್ಧ ಪಂದ್ಯ ಸೋತ ಬೆಲ್ಜಿಯಂ – ಅಭಿಮಾನಿಗಳಿಂದ ಹಿಂಸಾಚಾರ

    ತಂಡದ ಕೋಚ್‌ ಹನ್ಸಿ ಫ್ಲಿಕ್‌ ಸೂಚನೆಯಂತೆ ಯಾವೊಬ್ಬ ಆಟಗಾರ ಪ್ರೆಸ್‌ ಮೀಟ್‌ಗೆ ಹಾಜರಾಗಿರಲಿಲ್ಲ. ಪಂದ್ಯದ ಮೇಲೆ ಗಮನ ನೀಡಲು ಆಟಗಾರನನ್ನು ಕೋಚ್‌ ಕಳುಹಿಸಿರಲಿಲ್ಲ. ಜರ್ಮನಿ ಮತ್ತು ಸ್ಪೇನ್‌ ನಡುವಿನ ಪಂದ್ಯ 1-1 ಡ್ರಾದಲ್ಲಿ ಅಂತ್ಯಗೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಭಾರತದ ಮೇಲೆ ಫಿಫಾ ಹೇರಿದ ಅಮಾನತು ತೆರವು

    ಭಾರತದ ಮೇಲೆ ಫಿಫಾ ಹೇರಿದ ಅಮಾನತು ತೆರವು

    ನವದೆಹಲಿ: ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್(ಎಐಎಫ್‌ಎಫ್) ಮೇಲಿನ ಅಮಾನತನ್ನು ವಿಶ್ವ ಫುಟ್‌ಬಾಲ್ ಆಡಳಿತ ಮಂಡಳಿ ಫಿಫಾ ಶುಕ್ರವಾರ ತೆರವುಗೊಳಿಸಿದೆ. ಈ ಕ್ರಮದಿಂದ 17 ವರ್ಷದೊಳಗಿನ ಮಹಿಳಾ ವಿಶ್ವಕಪ್ 2022ರ ಪಂದ್ಯದಲ್ಲಿ ಭಾರತ ಭಾಗವಹಿಸಲು ಸಾಧ್ಯವಾಗಲಿದೆ.

    ಫಿಫಾ ಕೌನ್ಸಿಲ್‌ನ ಬ್ಯೂರೋ ಅನಗತ್ಯ ಮೂರನೇ ವ್ಯಕ್ತಿಯ ಪ್ರಭಾವದಿಂದಾಗಿ ಎಐಎಫ್‌ಎಫ್ ಅನ್ನು ಅಮಾನತುಗೊಳಿಸಿತ್ತು. ಇದೀಗ ಎಐಎಫ್‌ಎಫ್ ಮೇಲೆ ವಿಧಿಸಲಾಗಿದ್ದ ಅಮಾನತನ್ನು ತೆಗೆದುಹಾಕಲು ನಿರ್ಧರಿಸಿರುವುದಾಗಿ ಫಿಫಾ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಫಿಫಾ ಭಾರತವನ್ನು ಅಮಾನುತು ಮಾಡಿದ್ದು ಯಾಕೆ? ಇಲ್ಲಿ ಪೂರ್ಣ ಮಾಹಿತಿ

    ತಾನು ಮಿಸಿದ್ದ ಆಡಳಿತಾಧಿಕಾರಿಗಳ ಸಮಿತಿಯನ್ನು ಸುಪ್ರೀಂ ಕೋರ್ಟ್‌  ರದ್ದುಗೊಳಿಸಿತ್ತು. ಐಎಫ್‌ಎಫ್‌ನ ದೈನಂದಿನ ವ್ಯವಹಾರಗಳು ಸದ್ಯಕ್ಕೆ 36 ರಾಜ್ಯ ಸಂಘಗಳು ಈಗಾಗಲೇ ಆಯ್ಕೆ ಮಾಡಿರುವ ಎಐಎಫ್‌ಎಫ್‌ನ ಪ್ರಧಾನ ಕಾರ್ಯದರ್ಶಿಯಿಂದ ನಿರ್ವಹಣೆಯಾಗಬೇಕು ಎಂದು ಎಂದು ಸುಪ್ರೀಂ ಸೂಚಿಸಿತ್ತು. ಸುಪ್ರೀಂ ಆದೇಶ ಪ್ರಕಟವಾದ ಬೆನ್ನಲ್ಲೇ  ಎಐಎಫ್‌ಎಫ್ ತನ್ನ ಮೇಲೆ ವಿಧಿಸಲಾಗಿರುವ ಅಮಾನತನ್ನು ತೆರವುಗೊಳಿಸಬೇಕೆಂದು ಫಿಫಾ ಬಳಿ ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಫಿಫಾ ಈಗ ಅಮಾನತನ್ನು ತೆರವುಗೊಳಿಸಿದೆ. ಇದನ್ನೂ ಓದಿ: ಅಂದುಕೊಂಡಂತೆ ನಡೆದರೆ ಮುಂದಿನ ಮೂರು ಭಾನುವಾರ ಇಂಡೋ-ಪಾಕ್ ಫೈಟ್ ಗ್ಯಾರಂಟಿ

    Live Tv
    [brid partner=56869869 player=32851 video=960834 autoplay=true]

  • ಭಾರತದ ಮೇಲಿನ ಅಮಾನತು ತೆರವಿಗೆ ಆಡಳಿತಾಧಿಕಾರಿಗಳ ಸಮಿತಿಯನ್ನೇ ರದ್ದುಗೊಳಿಸಿದ ಸುಪ್ರೀಂ

    ಭಾರತದ ಮೇಲಿನ ಅಮಾನತು ತೆರವಿಗೆ ಆಡಳಿತಾಧಿಕಾರಿಗಳ ಸಮಿತಿಯನ್ನೇ ರದ್ದುಗೊಳಿಸಿದ ಸುಪ್ರೀಂ

    ನವದೆಹಲಿ: ಭಾರತದ ಮೇಲೆ ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿ ​​(ಫಿಫಾ) ಹೇರಿರುವ ಅಮಾನತನ್ನು ತೆರವುಗೊಳಿಸಲು ತಾನು ನೇಮಿಸಿದ್ದ ಆಡಳಿತಾಧಿಕಾರಿಗಳ ಸಮಿತಿಯನ್ನು ಸುಪ್ರೀಂ ಕೋರ್ಟ್‌  ರದ್ದುಗೊಳಿಸಿದೆ.

    ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಕಾರ್ಯಕಾರಿ ಸಮಿತಿಯ ಆಯ್ಕೆ ಸಂಬಂಧ ಚುನಾವಣೆಯನ್ನು ಮುಂದೂಡುವಂತೆ ಕೇಂದ್ರ ಸರ್ಕಾರ ಮಾಡಿದ ಮನವಿಗೆ ಸುಪ್ರೀಂ ಸೋಮವಾರ ಒಪ್ಪಿಗೆ ನೀಡಿದೆ.

    ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಎಐಎಫ್‌ಎಫ್‌ನ ದೈನಂದಿನ ವ್ಯವಹಾರಗಳು ಸದ್ಯಕ್ಕೆ 36 ರಾಜ್ಯ ಸಂಘಗಳು ಈಗಾಗಲೇ ಆಯ್ಕೆ ಮಾಡಿರುವ ಎಐಎಫ್‌ಎಫ್‌ನ ಪ್ರಧಾನ ಕಾರ್ಯದರ್ಶಿಯಿಂದ ನಿರ್ವಹಣೆಯಾಗಬೇಕು ಎಂದು ಎಂದು ಆದೇಶಿಸಿದೆ.

    SUPREME COURT

    ಪ್ರಸ್ತುತ ಎಐಎಫ್‌ಎಫ್ ಅನ್ನು ನಡೆಸುತ್ತಿರುವ ಆಡಳಿತಾಧಿಕಾರಿಗಳ ಸಮಿತಿ (CoA) ಇನ್ನು ಮುಂದೆ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಫಿಫಾ ಭಾರತವನ್ನು ಅಮಾನುತು ಮಾಡಿದ್ದು ಯಾಕೆ? ಇಲ್ಲಿ ಪೂರ್ಣ ಮಾಹಿತಿ

    ಫಿಫಾ ಎಐಎಫ್‌ಎಫ್ ಮೇಲೆ ಹೇರಿದ ಅಮಾನತನ್ನು ತೆರವುಗೊಳಿಸಲು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದಿರುವ ಸುಪ್ರೀಂ ಭಾರತದಲ್ಲಿ 17 ವರ್ಷದೊಳಗಿನವರ ಮಹಿಳೆಯರ ವಿಶ್ವಕಪ್ ಆಯೋಜನೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

    ಫಿಫಾ ನ್ಯಾಯಾಲಯ ನೇಮಿಸಿದ ಸಮಿತಿಯ ಜೊತೆ ವ್ಯವಹಾರ ನಡೆಸುವುದಿಲ್ಲ. ಹೀಗಾಗಿ ಆಡಳಿತಾಧಿಕಾರಿಗಳ ಸಮಿತಿಯಯನ್ನು ಕೂಡಲೇ ರದ್ದುಗೊಳಿಸಬೇಕು. ಐಎಫ್‌ಎಫ್‌ನ ಪ್ರಧಾನ ಕಾರ್ಯದರ್ಶಿಯಿಂದ ವ್ಯವಹಾರ ನಡೆಸುವಂತೆ ನಿರ್ದೇಶನ ನೀಡಬೇಕು ಮತ್ತು ಈ ಕೂಡಲೇ ಚುನಾವಣಾ ಪ್ರಕ್ರಿಯೆ ನಡೆಸುವಂತೆ ಆದೇಶಿಸಬೇಕೆಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಮುಂದೆ ಮನವಿ ಮಾಡಿತ್ತು.

    ಮೇ 18 ರಂದು ಸುಪ್ರೀಂ ಕೋರ್ಟ್ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ವಿಸರ್ಜಿಸಿತು ಮತ್ತು ದೇಶದಲ್ಲಿ ಫುಟ್‌ಬಾಲ್‌ ಕ್ರೀಡೆಯನ್ನು ನಿಯಂತ್ರಿಸಲು ಮೂರು ಸದಸ್ಯರ ಆಡಳಿತಾಧಿಕಾರಿಗಳ ಸಮಿತಿ(CoA) ನೇಮಿಸಿತು. ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾ. ಎಆರ್ ದವೆ, ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್ ವೈ ಖುರೇಷಿ ಮತ್ತು ಭಾರತೀಯ ಪುರುಷರ ಫುಟ್ಬಾಲ್ ತಂಡದ ಮಾಜಿ ನಾಯಕ ಭಾಸ್ಕರ್ ಗಂಗೂಲಿ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಫಿಫಾ ಜೊತೆ 2 ಬಾರಿ ಸಭೆ ಮಾಡಲಾಗಿದೆ: ಸುಪ್ರೀಂಗೆ ಕೇಂದ್ರ

    ಫಿಫಾ ಜೊತೆ 2 ಬಾರಿ ಸಭೆ ಮಾಡಲಾಗಿದೆ: ಸುಪ್ರೀಂಗೆ ಕೇಂದ್ರ

    ನವದೆಹಲಿ: ಫಿಫಾ ಎಐಎಫ್‌ಎಫ್‌ ಮೇಲೆ ಹೇರಿರುವ ಅಮಾನತು ನಿರ್ಧಾರವನ್ನು ತೆಗೆದು ಭಾರತದಲ್ಲೇ 17 ವರ್ಷದ ಒಳಗಿನ ಮಹಿಳೆಯರ ವಿಶ್ವಕಪ್‌ ಆಯೋಜಿಸುವಂತೆ ಕ್ರಮ ವಹಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

    ವಿಶ್ವ ಫುಟ್‌ಬಾಲ್‌ ಆಡಳಿತ ಮಂಡಳಿ (ಫಿಫಾ) ಭಾರತೀಯ ಫುಟ್ಬಾಲ್ ಫೆಡರೇಶನ್ ಸಂಸ್ಥೆಯನ್ನು(ಎಐಎಫ್‌ಎಫ್‌) ಅಮಾನುತು ಮಾಡಿದ ಹಿನ್ನೆಲೆಯಲ್ಲಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು.

    ಫಿಫಾ ಅಮಾನತು ಮಾಡಿದ ನಿರ್ಧಾರವನ್ನು ಮಂಗಳವಾರ  ಕೋರ್ಟ್‌ ಗಮನಕ್ಕೆ ಸಾಲಿಸಿಟರ್‌ ಜನರಲ್‌ ತಂದಿದ್ದರು. ಇಂದು ನ್ಯಾ. ಡಿವೈ ಚಂದ್ರಚೂಡ್‌, ಎಎಸ್‌ ಬೋಪಣ್ಣ ಮತ್ತು ಜೆಬಿ ಪಾರ್ದಿವಾಲಾ ನೇತೃತ್ವದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು.

    ಈ ಸಂದರ್ಭದಲ್ಲಿ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಕೇಂದ್ರ ಸರ್ಕಾರ ಅಮಾನತು ನಿರ್ಧಾರ ತೆಗೆಯುವ ಸಂಬಂಧ ಫಿಫಾ ಜೊತೆ ಮಾತುಕತೆ ನಡೆಯುತ್ತಿದೆ. ಈಗಾಗಲೇ 2 ಬಾರಿ ಸಭೆ ನಡೆಸಿದೆ. ಮಾತುಕತೆ ಫಲಪ್ರದವಾಗುವ ಸಾಧ್ಯತೆಯಿದೆ. ಸಭೆಯ ಫಲಿತಾಂಶ ಬರುವವರೆಗೂ ಮುಂದಿನ ಸೋಮವಾರದವರೆಗೆ ವಿಚಾರಣೆ ನಡೆಸಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಫಿಫಾ ಭಾರತವನ್ನು ಅಮಾನುತು ಮಾಡಿದ್ದು ಯಾಕೆ? – ನಡೆಯುತ್ತಾ ಮಹಿಳಾ ವಿಶ್ವಕಪ್‌?

    ಅಷ್ಟೇ ಅಲ್ಲದೇ ಸುಪ್ರೀಂ ನೇಮಿಸಿದ ಮೂರು ಸದಸ್ಯರ ಆಡಳಿತಾಧಿಕಾರಿಗಳ ಸಮಿತಿ(CoA) ಸಮಸ್ಯೆ ಬಗೆಹರಿಸಲು ಫಿಫಾ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸಾಲಿಸಿಟರ್‌ ಜನರಲ್‌ ಕೋರ್ಟ್‌ ಗಮನಕ್ಕೆ ತಂದರು.

    ಎಐಎಫ್‌ಎಫ್‌ನಲ್ಲಿ ಚುನಾವಣೆ ನಡೆಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ರಾಹುಲ್‌ ಮೆಹ್ತಾ, ಮಾಜಿ ಎಐಎಫ್‌ಎಫ್‌ ಅಧ್ಯಕ್ಷ ಪ್ರಫುಲ್‌ ಪಟೇಲ್‌ ಅವರಿಂದಲೇ ಈ ಎಲ್ಲ ಘಟನೆಗಳು ಆಗುತ್ತಿದೆ ಎಂದು ವಾದಿಸಿದರು.

    ಈ ಪ್ರಕರಣ ಬಗೆ ಹರಿಸುವ ಸಂಬಂಧ ಕೇಂದ್ರ ಸರ್ಕಾರದ ನಡೆಗೆ ಮೆಚ್ಚುಗೆ ಇದೆ ಎಂದ ಕೋರ್ಟ್‌ ಫಿಫಾ ಜೊತೆ ಮಾತುಕತೆ ನಡೆಸಿ ಅಮಾನತು ನಿರ್ಧಾರ ತೆಗೆಯಬೇಕು ಮತ್ತು ಭಾರತದಲ್ಲೇ ವಿಶ್ವಕಪ್‌ ಫುಟ್‌ಬಾಲ್‌ ಆಯೋಜನೆಯಾಗಬೇಕು ಎಂದು ಸೂಚಿಸಿತು.

    ಸಾಲಿಸಿಟರ್‌ ಜನರಲ್‌ ಮನವಿಯ ಮೇರೆಗೆ ಕೋರ್ಟ್‌ ಮುಂದಿನ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿತು.

    Live Tv
    [brid partner=56869869 player=32851 video=960834 autoplay=true]

  • ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಅಮಾನತುಗೊಳಿಸಿದ ಫಿಫಾ

    ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಅಮಾನತುಗೊಳಿಸಿದ ಫಿಫಾ

    ಪ್ಯಾರಿಸ್: ಜಾಗತಿಕ ಫುಟ್‌ಬಾಲ್ ಆಡಳಿತ ಮಂಡಳಿ ಫಿಫಾ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್(ಎಐಎಫ್‌ಎಫ್) ಅನ್ನು ಸೋಮವಾರ ಅಮಾನತುಗೊಳಿಸಿದೆ. ಫೆಡರೇಶನ್ ಹಿಂದೆ ಮೂರನೇ ವ್ಯಕ್ತಿಗಳ ಪ್ರಭಾವ ಇದೆ ಎನ್ನಲಾಗಿದ್ದು, ಇದು ಕಾನೂನುಗಳ ಗಂಭೀರ ಉಲ್ಲಂಘನೆ ಎಂದು ಫಿಫಾ ಆರೋಪಿಸಿದೆ.

    ಎಐಎಫ್‌ಎಫ್‌ನ ಅಮಾನತಿನಿಂದಾಗಿ ಈ ಬಾರಿ ಅಕ್ಟೋಬರ್‌ನಲ್ಲಿ ಭಾರತದಲ್ಲಿ ನಡೆಯಬೇಕಿದ್ದ 17 ವರ್ಷದ ಒಳಗಿನ ಮಹಿಳಾ ವಿಶ್ವಕಪ್ ಟೂರ್ನಿಯನ್ನು ಮೊದಲೇ ನಿರ್ಧರಿಸಿದಂತೆ  ನಡೆಸಲು ಸಾಧ್ಯವಿಲ್ಲ ಎಂದು ಫಿಫಾ ಹೇಳಿದೆ. ಇದನ್ನೂ ಓದಿ: ಸ್ವಾತಂತ್ರ್ಯ ದಿನದಂದೇ ಶ್ರೀನಗರದಲ್ಲಿ 2 ಬಾರಿ ಗ್ರೆನೇಡ್ ದಾಳಿ

    ಎಐಎಫ್‌ಎಫ್‌ನ ಮಾಜಿ ಮುಖ್ಯಸ್ಥ, ಎನ್‌ಸಿಪಿ ನಾಯಕ ಪ್ರಫುಲ್‌ ಪಟೇಲ್ ತಮ್ಮ ಅಧಿಕಾರಾವಧಿಯನ್ನು ಮೀರಿ ಅಧಿಕಾರದಲ್ಲಿಯೇ ಉಳಿದುಕೊಂಡಿದ್ದರು. ಬಳಿಕ ಅವರನ್ನು ಅಧ್ಯಕ್ಷ ಸ್ಥಾನದಿಂದ ಇಳಿಸಿ ಆಡಳಿತಾಧಿಕಾರಿಗಳನ್ನು ಸುಪ್ರೀಂ ಕೋರ್ಟ್ ನೇಮಕ ಮಾಡಿತ್ತು. ಇದನ್ನೂ ಓದಿ: 10 ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ತೆರೆ- ಅಪ್ಪು ಜಾತ್ರೆ ವೀಕ್ಷಣೆಗೆ ಹರಿದು ಬಂತು ಜನಸಾಗರ

    2020ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಪಂದ್ಯಾವಳಿಯನ್ನು ಕೋವಿಡ್ ಹಿನ್ನೆಲೆ ರದ್ದುಗೊಳಿಸಲಾಗಿತ್ತು. ಈ ಬಾರಿ ಅಕ್ಟೋಬರ್ 11 ರಿಂದ 30ರ ವರೆಗೆ ಭಾರತದಲ್ಲಿ 17 ವರ್ಷದ ಒಳಗಿನ ಮಹಿಳಾ ವಿಶ್ವಕಪ್ ಪಂದ್ಯಾವಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಫಿಫಾ ಎಐಎಫ್‌ಎಫ್ ಅನ್ನು ಅಮಾನತುಗೊಳಿಸಿದೆ.

    ಎಐಎಫ್‌ಎಫ್‌ನಲ್ಲಿ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಲು ಫಿಫಾ ಮತ್ತು ಎಎಫ್‌ಸಿ ಜೂನ್‌ನಲ್ಲಿ ಗಡುವು ನೀಡಿತ್ತು. ‘ಎಐಎಫ್‌ಎಫ್‌ಗೆ ಹೊಸದಾಗಿ ನಿಯಮಾವಳಿ ರೂಪಿಸಿ, ಜುಲೈ 31ರ ಒಳಗೆ ಅನುಮೋದನೆ ನೀಡಬೇಕು. ಸೆ.15ರ ಒಳಗಾಗಿ ಚುನಾವಣೆ ನಡೆಸಿ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರಬೇಕು ಎಂದು ಫಿಫಾ ಸೂಚಿಸಿತ್ತು.

    Live Tv
    [brid partner=56869869 player=32851 video=960834 autoplay=true]