Tag: ಫಿಲ್ಮ್

  • Karnataka Budget 2023: ಸ್ಥಗಿತಗೊಂಡಿದ್ದ ಸಿನಿಮಾ ಸಬ್ಸಿಡಿಗೆ ಮತ್ತೆ ಮರುಜೀವ

    Karnataka Budget 2023: ಸ್ಥಗಿತಗೊಂಡಿದ್ದ ಸಿನಿಮಾ ಸಬ್ಸಿಡಿಗೆ ಮತ್ತೆ ಮರುಜೀವ

    ರ್ನಾಟಕ ಸರಕಾರ ಕನ್ನಡದ (Sandalwood) ಸಿನಿಮಾಗಳಿಗೆ ನೀಡುತ್ತಿದ್ದ ಸಹಾಯಧನವನ್ನು (Subsidy) ಕಳೆದ ಮೂರು ವರ್ಷಗಳಿಂದ ನೀಡಿರಲಿಲ್ಲ. ನಾನಾ ರೀತಿಯ ಕಾರಣಗಳನ್ನು ಕೊಡುತ್ತಲೇ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತೆ ಸಹಾಯಧನವನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ಬಜೆಟ್ ನಲ್ಲಿ (Karnataka Budget 2023)  ತಿಳಿಸಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.

    ‘ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ (Film) ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿತ್ತು. ಈ ಬಾರಿ ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಬಜೆಟ್ ಘೋಷಣೆ ಮಾಡಿದ್ದಾರೆ ಮುಖ್ಯಮಂತ್ರಿಗಳು. ಈ ಮೂಲಕ ಗುಣಾತ್ಮಕ ಕನ್ನಡ ಚಿತ್ರಗಳ ನಿರ್ಮಾಪಕರ ಸಹಾಯಕ್ಕೆ ನಿಂತಿದ್ದಾರೆ. ಇದನ್ನೂ ಓದಿ:ನೀಲಿ ತಾರೆ ಮಿಯಾ ತೆಲುಗಿನ ಡೈರೆಕ್ಟರ್ ಆರ್‌ಜಿವಿ

     

    ಮೊನ್ನೆಯಷ್ಟೇ ಸಿನಿಮಾ ಸಬ್ಸಡಿ ಮತ್ತು ಸಿನಿಮಾ ಪ್ರಶಸ್ತಿಗೆ ಸಂಬಂಧಿಸಿದಂತೆ ನಿಯೋಗವೊಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತ್ತು. 2018 ರಿಂದ ಸಿನಿಮಾ ಪ್ರಶಸ್ತಿಯನ್ನು ನೀಡಿಲ್ಲ ಮತ್ತು ಸಬ್ಸಿಡಿ ಕೂಡ ಸ್ಥಗಿತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಗಿತ್ತು. ಮನವಿಗೆ ಸ್ಪಂದಿಸಿರುವ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್ ನಲ್ಲಿ ಸಬ್ಸಿಡಿ ಕುರಿತಾಗಿ ಉಲ್ಲೇಖಿಸಿದ್ದಾರೆ. ಪ್ರಶಸ್ತಿಯ ಮನವಿಯನ್ನು ಪುರಸ್ಕರಿಸಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Breaking-ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕೋಲ್ಡ್ ವಾರ್: ಶಿವಣ್ಣ, ರವಿಚಂದ್ರನ್ ಸನ್ಮಾನ, ಅನುಮಾನ?

    Breaking-ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕೋಲ್ಡ್ ವಾರ್: ಶಿವಣ್ಣ, ರವಿಚಂದ್ರನ್ ಸನ್ಮಾನ, ಅನುಮಾನ?

    ರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಎರಡು ಬಣಗಳ ನಡುವೆ ಜಿದ್ದಾಜಿದ್ದಿ ಶುರುವಾಯಿತು. ಸಾ.ರಾ.ಗೋವಿಂದು ಬಣದ ಮೇಲೆ ಭಾ.ಮಾ ಹರೀಶ್ ಬಣದ ಆರೋಪ, ಇವರ ಬಣದ ಮೇಲೆ ಅವರು ಪ್ರತ್ಯಾರೋಪ. ಚುನಾವಣೆ ಮುಗಿದು, ಫಲಿತಾಂಶ ಬಂದು ಭಾ.ಮಾ ಹರೀಶ್ ಅವರು ಅಧ್ಯಕ್ಷ ಖುರ್ಚಿ ಮೇಲೆ ಕೂತರು ಈ ತಿಕ್ಕಾಟ ಇನ್ನೂ ಮುಗಿದಿಲ್ಲ. ಈಗಿನ ಚುನಾಯಿತ ಪ್ರತಿನಿಧಿಗಳು ಯಾವುದೇ ಕಾರಣಕ್ಕೂ ಹಣಕಾಸಿನ ವ್ಯವಹಾರವನ್ನು ಮಾಡುವಂತಿಲ್ಲ ಎಂದು ಕೋರ್ಟಿನಿಂದ ನಿರ್ದೇಶನ ಕೊಡಿಸುವಲ್ಲಿ ಯಶಸ್ವಿಯಾಗಿದೆ ಸಾ.ರಾ.ಗೋವಿಂದು ಬಣ.

    ಎರಡು ದಿನಗಳ ಹಿಂದೆಯಷ್ಟೇ ಪತ್ರಿಕಾಗೋಷ್ಠಿ ನಡೆಸಿರುವ ಸಾ.ರಾ. ಗೋವಿಂದು ಮತ್ತು ತಂಡ ಚುನಾವಣಾ ಅಧಿಕಾರಿಗಳ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದಾರೆ. ಕಳ್ಳದಾರಿಯ ಮೂಲಕ ಭಾ.ಮಾ ಹರೀಶ್ ಮತ್ತು ತಂಡ ಅಧಿಕಾರಿದ ಚುಕ್ಕಾನೆ ಹಿಡಿದಿದೆ ಎಂದು ಆರೋಪ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಅಧ್ಯಕ್ಷ ಎಂದು ನಾವು ಒಪ್ಪಿಕೊಳ್ಳಲಾರೆವು ಎಂದಿದ್ದಾರೆ. ಆದರೆ,  ಈ ಎಲ್ಲ ಆರೋಪಗಳ ಹಿಂದೆ ಬೇರೆಯದ್ದೇ ಕಾರಣವಿದೆ ಎನ್ನಲಾಗುತ್ತಿದೆ. ಶಿವರಾಜ್ ಕುಮಾರ್ ಮತ್ತು ರವಿಚಂದ್ರನ್ ಅವರಿಗೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಿ, ಅವರನ್ನು ಗೌರವಿಸಲು ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ನಡೆದಿತ್ತು. ಇಂಥದ್ದೊಂದು ದೊಡ್ಡ ಕಾರ್ಯಕ್ರಮ ಆಗಬಾರದು ಎಂದು ಈ ರೀತಿ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಮತ್ತೆ ಟಾಪ್‌ಲೆಸ್ ಅವತಾರದಲ್ಲಿ ಬಂದ ಉರ್ಫಿ ಜಾವೇದ್: ನೆಟ್ಟಿಗರಿಂದ ನಟಿಗೆ ಕ್ಲಾಸ್

    ಈ ಕಾರ್ಯಕ್ರಮದ ಬಗ್ಗೆ ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಭಾ,ಮಾ. ಹರೀಶ್ “ಇನ್ನೂ ನಾವು ಶಿವರಾಜ್ ಕುಮಾರ್ ಮತ್ತು ರವಿಚಂದ್ರನ್ ಅವರನ್ನು ಕೇಳಿಲ್ಲ. ಅವರ ಗಮನಕ್ಕೆ ತಂದು, ದೊಡ್ಡಮಟ್ಟದಲ್ಲೇ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುವುದು. ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಕಾರ್ಯಕ್ರಮದ ಕುರಿತು ಅಧಿಕೃತವಾಗಿ ಕಮೀಟಿ ಮುಂದೆ ಚರ್ಚೆ ಆಗಿಲ್ಲ. ಅದು ಆಗಬೇಕು. ಈ ಕಾರ್ಯಕ್ರಮವನ್ನು ತಡೆಯುವಂತಹ ಹುನ್ನಾರ ನಡೆದಿರುವುದು ನಿಜ. ಈ ಹಿಂದೆ ಅಂಬರೀಶ್ ಅವರಿಗೆ 60 ಆದಾಗ ಎಲ್ಲರೂ ಸೇರಿ ಸಂಭ್ರಮಿಸಿದ್ದೇವೆ. ಇದನ್ನೂ ಹಾಗೆಯೇ ಮಾಡಬೇಕು ಎಂದುಕೊಂಡಿದ್ದೇವೆ’ ಎನ್ನುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ಸಿನಿಮಾ ರಂಗ ತೊರೆದು, ಕ್ಲಿನಿಕ್ ಮಾಡ್ತಾರಂತೆ ಖ್ಯಾತ ನಟಿ ಸಾಯಿ ಪಲ್ಲವಿ

    ಸಿನಿಮಾ ರಂಗ ತೊರೆದು, ಕ್ಲಿನಿಕ್ ಮಾಡ್ತಾರಂತೆ ಖ್ಯಾತ ನಟಿ ಸಾಯಿ ಪಲ್ಲವಿ

    ಕ್ಷಿಣದ ಖ್ಯಾತ ನಟಿ ಸಾಯಿ ಪಲ್ಲವಿ ಬಗ್ಗೆ ಮತ್ತೊಂದು ಗಾಸಿಪ್ ಹರಡಿದೆ. ಇವರ ಮುಖ್ಯ ಭೂಮಿಕೆಯ ಗಾರ್ಗಿ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಅಷ್ಟೇನೂ ಸದ್ದು ಮಾಡಲಿಲ್ಲ. ಅಲ್ಲದೇ, ಸಾಯಿ ಪಲ್ಲವಿ ಅವರು ಕಾಶ್ಮೀರ ಹತ್ಯೆಯನ್ನು, ಗೋ ಹತ್ಯೆ ಮಾಡುವವರಿಗೆ ಹೋಲಿಸಿದರು ಎನ್ನುವ ಕಾರಣಕ್ಕಾಗಿ ಅವರ ಮೇಲೆ ದೂರನ್ನು ಕೂಡ ನೀಡಲಾಯಿತು. ಇದರಿಂದ ಬೇಸತ್ತು, ಅವರು ಸಿನಿಮಾ ರಂಗವನ್ನೇ ತೊರೆಯಲಿದ್ದಾರೆ ಎನ್ನುವ ಸುದ್ದಿ ಹರಡಿದೆ.

    ಸಿನಿಮಾ ರಂಗದಲ್ಲಿ ಗಾಸಿಪ್ ಕಾಮನ್. ಸಾಯಿ ಪಲ್ಲವಿ ಸಿನಿಮಾ ರಂಗದಿಂದ ದೂರವಾಗುತ್ತಾರಾ ಎನ್ನುವುದು ಕೂಡ ಗಾಸಿಪ್ ಇರಬಹುದು ಎಂದೇ ನಂಬಲಾಗಿತ್ತು. ಆದರೆ, ಅವರು ಕ್ಲಿನಿಕ್ ತೆರೆಯುವ ಕುರಿತು ಮನೆಯಲ್ಲಿ ಚರ್ಚೆ ಮಾಡಿದ್ದರಿಂದ ಇದು, ಇಂದಲ್ಲ ನಾಳೆ ನಿಜವೂ ಆಗಬಹುದು ಎನ್ನಲಾಗುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಸಾಯಿ ಪಲ್ಲವಿ ಕೂಡ ತುಂಬಾ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಇದನ್ನೂ ಓದಿ:ಪೊರಕೆ ಹಿಡಿದ ಮತ್ತೋರ್ವ ಕನ್ನಡದ ನಟ : ‘ಆಮ್ ಆದ್ಮಿ ಪಾರ್ಟಿ’ಗೆ ಸೇರ್ಪಡೆಯಾದ ಟೆನ್ನಿಸ್ ಕೃಷ್ಣ

    ಸಾಯಿ ಪಲ್ಲವಿ ಉತ್ತಮ ನಟಿ. ದಕ್ಷಿಣದ ಸ್ಟಾರ್ ನಟಿಯರಿಗೆ ನಿದ್ದೆ ಕೆಡಿಸಿದಾಕೆ. ಅತೀ ಕಡಿಮೆ ಸಮಯದಲ್ಲೇ ಅತ್ಯುತ್ತಮ ಸಿನಿಮಾಗಳನ್ನು ಪಡೆದವರು. ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡವರು. ಪ್ರತಿಷ್ಠಿತ ಪ್ರಶಸ್ತಿಗಳು ಕೂಡ ಅವರನ್ನು ಹುಡುಕಿಕೊಂಡು ಬಂದವು. ಆದರೂ, ಒಂದಿಲ್ಲೊಂದು ರೀತಿಯಲ್ಲಿ ಅವರಿಗೆ ಕಿರುಕುಳ ನಡೆಯುತ್ತಲೇ ಬಂದಿವೆ. ಹೀಗಾಗಿ ಮೂಲತಃ ವೈದ್ಯಯೂ ಆಗಿರುವ ಸಾಯಿ ಪಲ್ಲವಿ ಹೊಸದೊಂದು ಕ್ಲಿನಿಕ್ ಶುರು ಮಾಡಿ, ವೈದ್ಯ ವೃತ್ತಿಯಲ್ಲಿ ಮುಂದುವರೆಯಲಿದ್ದಾರೆ ಎನ್ನಲಾಗುತ್ತಿದೆ. ಹಾಗೊಂದು ವೇಳೆ ಅವರು ಸಿನಿಮಾ ರಂಗವನ್ನು ತೊರೆಯುವುದಾದರೆ, ಅಭಿಮಾನಿಗಳಿಗೆ ನಿಜಕ್ಕೂ ಶಾಕ್ ಆಗುವುದರಲ್ಲಿ ಎರಡು ಮಾತಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಕಾನ್ ಫೆಸ್ಟಿವೆಲ್ : ದೀಪಿಕಾ ಪಡುಕೋಣೆ ತೀರ್ಪುಗಾರರಾಗಿ ಆಯ್ಕೆ

    ಕಾನ್ ಫೆಸ್ಟಿವೆಲ್ : ದೀಪಿಕಾ ಪಡುಕೋಣೆ ತೀರ್ಪುಗಾರರಾಗಿ ಆಯ್ಕೆ

    ಹಿಂದೆ ಜಿಯೋ ಮಾಮಿ ಮುಂಬೈ ಫಿಲ್ಮ್ ಫೆಸ್ಟಿವಲ್ ನ್ಲಿ ಎರಡು ವರ್ಷಗಳ ಕಾಲ ಅಧ್ಯಕ್ಷರಾಗಿ ಕೆಲಸ ಮಾಡಿರುವ ಗುಳಿಕೆನ್ನೆ ಚೆಲುವು, ಕನ್ನಡತಿ ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆಗೆ ಪ್ರತಿಷ್ಠಿತ ಕ್ಯಾನ್ ಫೆಸ್ಟಿವೆಲ್ ನಲ್ಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸುವಂತಹ ಅವಕಾಶ ಸಿಕ್ಕಿದೆ. ಇಂತಹ ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಈ ರೀತಿಯ ಗೌರವ ಸಿಗುವುದು ಅಪರೂಪ. ಹಾಗಾಗಿ ದೀಪಿಕಾ ಪಡುಕೋಣೆ ಇಂಥದ್ದೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. ಇದನ್ನೂ ಓದಿ : ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬ

    ಮೇ 17 ರಿಂದ 28ರವರೆಗೆ 2022ರ ಕಾನ್ ಫಿಲ್ಮ್ ಫೆಸ್ಟಿವೆಲ್ ನಡೆಯಲಿದ್ದು, 75ನೇ ಕಾನ್ ಚಲನಚಿತ್ರೋತ್ಸವ ಜ್ಯೂರಿಯಾಗಿ ದೀಪಿಕಾ ಪಡುಕೋಣೆ ಆಯ್ಕೆಯಾಗಿದ್ದಾರೆ ಎಂದು ಅಧಿಕೃತ ಕಾನ್ ಪೇಜ್ ನಲ್ಲೇ ಘೋಷಿಸಲಾಗಿದೆ. ಅಲ್ಲದೇ ಇವರೊಂದಿಗೆ ಫ್ರೆಂಚ್ ನಟ ವಿನ್ಸೆಂಟ್ ಲಿಂಡನ್ ಕೂಡ ಮುಖ್ಯ ತೀರ್ಪುಗಾರರಾಗಿ ಕೆಲಸ ಮಾಡಲಿದ್ದಾರೆ. ಇದನ್ನೂ ಓದಿ : ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ

    ಒಟ್ಟು 21 ಸಿನಿಮಾಗಳು ಆಯ್ಕೆಯ ಸುತ್ತಿನಲ್ಲಿದ್ದು, ಎಂಟು ತೀರ್ಪುಗಾರರ ತಂಡವು ಪ್ರಶಸ್ತಿಗಾಗಿ ಸಿನಿಮಾಗಳನ್ನು ಆರಿಸಲಿದೆ. ಮೇ.28 ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಆಯ್ಕೆಯಾದ ವಿಜೇತ ಚಿತ್ರಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

  • 7 ತಿಂಗಳ ಬಳಿಕ ಥಿಯೇಟರ್ ಓಪನ್‌ – ಮಾರ್ಗಸೂಚಿಯಲ್ಲಿ ಏನಿದೆ?

    7 ತಿಂಗಳ ಬಳಿಕ ಥಿಯೇಟರ್ ಓಪನ್‌ – ಮಾರ್ಗಸೂಚಿಯಲ್ಲಿ ಏನಿದೆ?

    ನವದೆಹಲಿ: ಬರೋಬ್ಬರಿ 7 ತಿಂಗಳ ಬಳಿಕ ಥಿಯೇಟರ್, ಮಲ್ಟಿಪ್ಲೆಕ್ಸ್‌ ಓಪನ್ ಆಗುತ್ತಿದೆ. ಅಕ್ಟೋಬರ್ 15ರಿಂದ ಚಿತ್ರಪ್ರೇಮಿಗಳು ಚಿತ್ರಮಂದಿರಕ್ಕೆ ಹೋಗಿ ಫಿಲಂ ವೀಕ್ಷಣೆ ಮಾಡಬಹುದು. ಆದರೆ, ಈ ಮೊದಲಿನಂತೆ ಥಿಯೇಟರ್‌ನಲ್ಲಿ ಜೊತೆಯಾಗಿ ಹಿತವಾಗಿ ಪತಿ, ಪತ್ನಿಯರು, ಪ್ರೇಮಿಗಳು ಅಕ್ಕ ಪಕ್ಕ ಕುಳಿತು ಒಟ್ಟಿಗೆ ಕುಳಿತು ಸಿನಿಮಾ ನೋಡಲು ಸಾಧ್ಯವಿಲ್ಲ.

    ಕೇಂದ್ರ ಸರ್ಕಾರ ಥಿಯೇಟರ್ ಓಪನ್ ಸಂಬಂಧ ಇಂದು ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಸಾಕಷ್ಟು ಟಫ್ ರೂಲ್ಸ್ ಇವೆ. ಇದನ್ನು ನೋಡಿ, ಚಿತ್ರರಂಗದ ಮಂದಿ ಸಿನಿಮಾ ರಿಲೀಸ್ ಮಾಡೋದು ಹೇಗಪ್ಪಾ ಎಂದು ಚಿಂತಾಕ್ರಾಂತರಾಗಿದ್ದಾರೆ.

    ಮಾರ್ಗಸೂಚಿಯಲ್ಲಿ ಏನಿದೆ?
    * ಥಿಯೇಟರ್‌ನಲ್ಲಿ ಶೇ.50ರಷ್ಟು ಸೀಟ್ ಮಾತ್ರ ಭರ್ತಿಗೆ ಅವಕಾಶ
    * ಪ್ರೇಕ್ಷಕರು ಕುಳಿತುಕೊಳ್ಳದ ರೀತಿಯಲ್ಲಿ ಸೀಟ್ ಮಾರ್ಕ್ ಮಾಡಬೇಕು
    * ಪ್ರೇಕ್ಷಕರು ಕುಳಿತುಕೊಳ್ಳುವ ಸೀಟ್‍ಗಳ ನಡುವೆ 6 ಅಡಿ ಅಂತರ ಇರಬೇಕು
    * ಥಿಯೇಟರ್‌ಗೆ ಹೋಗುವವರು ಆರೋಗ್ಯ ಸೇತು ಆ್ಯಪ್ ಹೊಂದಿರಬೇಕು
    * ಥಿಯೇಟರ್‌ಗೆ ಬರುವ ಪ್ರೇಕ್ಷಕರ ಮೊಬೈಲ್ ಸಂಖ್ಯೆ ಸಂಗ್ರಹ ಕಡ್ಡಾಯ
    * ಹ್ಯಾಂಡ್ ವಾಶ್, ಸ್ಯಾನಿಟೈಸರ್ ಇರಿಸುವುದು ಕಡ್ಡಾಯ ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ – ಯಾರಿಗೆ ಕೊರೊನಾ ಟೆಸ್ಟ್‌ ಕಡ್ಡಾಯ?

    * ಮಧ್ಯಂತರ ವಿರಾಮದಲ್ಲಿ ಪ್ರೇಕ್ಷಕರ ಅನಗತ್ಯ ಓಡಾಟಕ್ಕೆ ನಿರ್ಬಂಧ
    * ಅನಾರೋಗ್ಯ ಇದ್ದವರು ಥಿಯೇಟರ್‌ನಿಂದ ದೂರ ಉಳಿಯಬೇಕು
    * ಅಡ್ವಾನ್ಸ್ ಬುಕಿಂಗ್, ಡಿಜಿಟಲ್ ಪೇಮೆಂಟ್‍ಗೆ ಒತ್ತು ಕೊಡಬೇಕು
    * ಥಿಯೇಟರ್‌ನಲ್ಲಿರುವ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಡ್ಡಾಯ
    * ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗಷ್ಟೇ ಅವಕಾಶ ನೀಡಬೇಕು
    * ಸಿನಿಮಾ ಹಾಲ್‍ನಲ್ಲಿ ಆಹಾರ ಪದಾರ್ಥ ಪೂರೈಸುವಂತಿಲ್ಲ
    * ಉಸಿರಾಟಕ್ಕೆ ಸಂಬಂಧಿಸಿದ ಶಿಷ್ಟಾಚಾರಗಳ ಪಾಲನೆ ಕಡ್ಡಾಯ
    * ಏರ್ ಕಂಡೀಷನ್ ಮಟ್ಟ 24 ರಿಂದ 30 ಡಿಗ್ರಿ ನಡುವೆ ಇರಬೇಕು

  • ತೆರೆ ಮೇಲೆ ಬರಲಿದೆ ಮಿಥಾಲಿರಾಜ್‍ರ ಜೀವನಾಧಾರಿತ ಚಿತ್ರ

    ತೆರೆ ಮೇಲೆ ಬರಲಿದೆ ಮಿಥಾಲಿರಾಜ್‍ರ ಜೀವನಾಧಾರಿತ ಚಿತ್ರ

    ಮುಂಬೈ: ಇತ್ತಿಚೆಗೆ ಬಾಲಿವುಡ್‍ನಲ್ಲಿ ಜೀವನಾಧಾರಿತ ಚಿತ್ರಗಳು ಹೆಚ್ಚಾಗಿ ಬರುತ್ತಿದ್ದು ಕ್ರೀಡೆಯಲ್ಲಿ ಹೆಚ್ಚು ಸಾಧನೆ ಮಾಡಿದವರನ್ನು ತೆರೆ ಮೆಲೆ ತರುತ್ತಿರುವುದು ಹೆಚ್ಚಾಗಿದೆ. ಈ ಸಾಲಿಗೆ ಈಗ ಮಹಿಳಾ ಕ್ರಿಕೆಟ್ ತಂಡ ನಾಯಕಿ ಮಿಥಾಲಿ ರಾಜ್ ಸೆರಿಕೊಳ್ಳಲಿದ್ದಾರೆ ಎಂದು ವೈಕಾಮ್ 18 ಮೋಷನ್ ಚಿತ್ರ ನಿರ್ಮಾಣ ಸಂಸ್ಥೆ ಹೇಳಿಕೊಂಡಿದೆ.

    ಮುಂಬೈನಲ್ಲಿ ಖಾಸಗಿ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈಕಾಮ್ 18 ಮೋಷನ್ ಚಿತ್ರ ನಿರ್ಮಾಣ ಸಂಸ್ಥೆ ಈ ಬಗ್ಗೆ ಹೇಳಿಕೊಂಡಿದ್ದು, ಧೋನಿ, ಮೇರಿಕೋಂ, ಸಚಿನ್, ಮಿಲ್ಕಾ ಸಿಂಗ್‍ರಂತಹ ಕ್ರೀಡೆಯಲ್ಲಿ ಹೆಚ್ಚು ಸಾಧನೆ ಮಾಡಿದವರು ಈಗಾಗಲೇ ತೆರೆ ಮೇಲೆ ಬಂದು ಹೋಗಿದ್ದಾರೆ. ಈ ಪಟ್ಟಿಯಲ್ಲಿ ಮಿಥಾಲಿ ರಾಜ್‍ರನ್ನು ಸೇರಿಸಲು ವೈಕಾಮ್ ಮೋಷನ್ ಚಿತ್ರ ಸಂಸ್ಥೆ ಮುಂದೆ ಬಂದಿದೆ ಎಂದು ಸಂಸ್ಥೆಯ ಸಿಒಒ ಅಜಿತ್ ಅಂಧರೆ ಹೇಳಿದ್ದಾರೆ.

    ಈ ಬಗ್ಗೆ ಮಿಥಾಲಿ ರಾಜ್ ಮಾತನಾಡಿ, ನನ್ನ ಜೀವನವನ್ನು ತೆರೆ ಮೇಲೆ ನೋಡಲು ನಾನು ಕಾತುರಳಾಗಿದ್ದೇನೆ. ನನಗೆ ತುಂಬಾ ಖುಷಿಯಾಗುತ್ತಿದೆ. ನಿಜಕ್ಕೂ ಈ ಚಿತ್ರ ಯುವತಿಯರ ಮೇಲೆ ಉತ್ತಮ ಪರಿಣಾಮ ಬೀರಲಿದೆ. ದೇಶದಲ್ಲಿ ಅನೇಕ ಯುವತಿಯರಲ್ಲಿ ಪ್ರತಿಭೆ ಇದ್ದರೂ ಸಹ ಹೊರ ಹಾಕಲು ಸಾಧ್ಯವಾಗುತ್ತಿಲ್ಲ. ಈ ಸಿನಿಮಾವನ್ನು ನೋಡಿದ ಪೋಷಕರು ಯುವತಿಯರಿಗೆ ಬೆಂಬಲ ನೀಡಬಹುದು ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದರು.

    ಈ ಹಿಂದೆ ಬಾಲಿವುಡ್‍ನಲ್ಲಿ ಭಾಗ್ ಮಿಲ್ಕಾ ಭಾಗ್, ಕ್ವೀನ್, ದ ಮೌಂಟೆನ್ ಮ್ಯಾನ್, ದೃಶ್ಯಂ, ಮೇರಿ ಕೋಮ್, ಟಾಯ್ಲೆಟ್ ಎಕ್ ಪ್ರೇಮ್ ಕಥಾ ಚಿತ್ರದಂತಹ ಹಲವು ಸಿನಿಮಾಗಳನ್ನ ನಿರ್ಮಾಣ ಮಾಡಿದೆ. ನಮ್ಮ ಸಂಸ್ಥೆ ಯಾವಾಗಲೂ ಸಾಧನೆ ಮಾಡಿದ ಮಹಿಳೆಯರನ್ನ ಉದಾಹರಣೆಯಾಗಿರಿಸಿ ದೇಶದ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಚಿತ್ರಗಳನ್ನು ಮಾಡುತ್ತೇವೆ. ಉದಾಹರಣೆಗೆ ಕಹಾನಿ, ಕ್ವೀನ್ ಚಿತ್ರಗಳೇ ಇದಕ್ಕೆ ಸಾಕ್ಷಿ ಎಂದರು.

    ದೇಶದಲ್ಲಿ ಅನೇಕ ಮಹಿಳೆಯರಿಗೆ ಮಿಥಾಲಿ ರಾಜ್ ಸ್ಪೂರ್ತಿಯಾಗಿದ್ದಾರೆ. ಇವರ ಜೀವನ ಆಧಾರಿತ ಚಿತ್ರ ತೆರೆ ಮೇಲೆ ಬರುತ್ತಿರುವುದರಿಂದ ಅವರ ಕಷ್ಟ ನೋವುಗಳೆನು? ಅವರ ಸಾಧನೆ ಏನು ಎನ್ನುವುದು ತಿಳಿಯುತ್ತದೆ ಎಂದು ನಿರ್ದೇಶಕ ವರುಣ್ ಚೋಪ್ರಾ ಹೇಳಿದ್ದಾರೆ.

    ಮಿಥಾಲಿ ರಾಜ್ ಅಂತಾರಾಷ್ಟ್ರೀಯಾ ಮಹಿಳಾ ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರ್ತಿಯಾಗಿದ್ದಾರೆ. 6000 ರನ್ ಹೊಡೆದಿರುವ ಮಿಥಾಲಿ 2005 ಮತ್ತು 2017 ವಿಶ್ವಕಪ್‍ನಲ್ಲಿ ಫೈನಲ್‍ಗೆ ಟೀಂ ಇಂಡಿಯಾವನ್ನು ಮುನ್ನಡೆಸಿದ್ದರು. ಅಲ್ಲದೇ ಮಿಥಾಲಿಗೆ ಅರ್ಜುನ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.