Tag: ಫಿಲ್ಮ್ ಚೇಂಬರ್

  • ಭರ್ಜರಿ ಬ್ಯಾಚುಲರ‍್ಸ್ ರಮೋಲಾ ವಿರುದ್ಧ ದೂರು

    ಭರ್ಜರಿ ಬ್ಯಾಚುಲರ‍್ಸ್ ರಮೋಲಾ ವಿರುದ್ಧ ದೂರು

    ಕಿರುತೆರೆ ಧಾರಾವಾಹಿ ಹಾಗೂ ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ರಮೋಲಾ (Ramola) ವಿರುದ್ಧ ಫಿಲ್ಮ್ ಚೇಂಬರ್‌ಗೆ (Film Chamber) ದೂರು ನೀಡಿದೆ ಚಿತ್ರತಂಡ. ಭರ್ಜರಿ ಬ್ಯಾಚುಲರ್ಸ್‌ (Bharjari Bachelors) ರಿಯಾಲಿಟಿ ಶೋನಲ್ಲಿ ರಕ್ಷಕ್‌ಗೆ ಜೋಡಿಯಾಗಿದ್ದ ರಮೋಲಾ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿದೆ ರಿಚ್ಚಿ ಚಿತ್ರತಂಡ.

    ನಟಿ ರಮೋಲಾ ಅವರು `ರಿಚ್ಚಿ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಈಗ ಚಿತ್ರದ ನಾಯಕ, ನಿರ್ದೇಶಕ ಹಾಗೂ ನಿರ್ಮಾಪಕ ರಿಚ್ಚಿ ಅವರು ಈ ಬಗ್ಗೆ ಫಿಲ್ಮ್ ಚೇಂಬರ್‌ಗೆ ದೂರು ನೀಡಿದ್ದಾರೆ. ಸಿನಿಮಾದ ಪ್ರಮೋಷನ್‌ಗೆ ರಮೋಲಾ ಬರುತ್ತಿಲ್ಲ, ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ?

     

    ಅಂದಹಾಗೆ ರಿಚ್ಚಿ ಸಿನಿಮಾದಲ್ಲಿ ರಮೋಲಾ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಪ್ರಮೋಷನ್ಸ್ ಬನ್ನಿ ಎಂದರೆ ಬರುತ್ತಿಲ್ಲ ಎಂದು ನಿರ್ಮಾಪಕ ಹೇಮಂತ್ ರಿಚ್ಚಿ ಫಿಲ್ಮ್ ಚೇಂಬರ್‌ಗೆ ದೂರು ಕೊಟ್ಟಿದ್ದಾರೆ. ಕನ್ನಡತಿ ಧಾರಾವಾಹಿಯ ಪಾತ್ರದಿಂದ ಜನಪ್ರಿಯತೆ ಗಳಿಸಿರುವ ರಮೋಲಾ ರಿಚ್ಚಿ ಸಿನಿಮಾ ಶೂಟಿಂಗ್ ಬಳಿಕ ರಿಯಾಲಿಟಿ ಶೋನಲ್ಲಿ ಬ್ಯುಸಿಯಾಗಿದ್ದಾರೆ. ಈಗ ಸಿನಿಮಾ ತಂಡ ಪ್ರಮೋಷನ್‌ಗೆ ಕರೆಯುತ್ತಿದೆ. ಆದರೆ  ಕರೆ ಸ್ವೀಕರಿಸದೇ ಚಿತ್ರತಂಡಕ್ಕೆ ಸಹಕಾರ ನೀಡ್ತಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಫಿಲ್ಮ್ ಚೇಂಬರ್‌ಗೆ ಇಡೀ ಚಿತ್ರತಂಡ ದೂರು ನೀಡಿದೆ.

  • Thug Life | ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

    Thug Life | ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

    ನವದೆಹಲಿ: ನಟ, ರಾಜಕಾರಣಿ ಕಮಲ್ ಹಾಸನ್ (Kamal Hassan) ಅವರ `ಥಗ್ ಲೈಫ್’ (Thag Life) ಚಿತ್ರ ಬಿಡುಗಡೆಯ ಸಂದರ್ಭದಲ್ಲಿ ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳದ ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚಲನಚಿತ್ರ ಮಂಡಳಿಯನ್ನು ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ.

    ಚಿತ್ರದ ಮೇಲೆ ಯಾವುದೇ ನಿರ್ಬಂಧ ಹೇರಿಲ್ಲ. ನಿರ್ಮಾಪಕರು ಸಿನಿಮಾ ಬಿಡುಗಡೆ ಮಾಡಲು ಮನಸ್ಸು ಮಾಡಿದರೆ ಸಂಪೂರ್ಣ ಭದ್ರತೆಯನ್ನು ಒದಗಿಸುವುದಾಗಿ ರಾಜ್ಯ ಸರ್ಕಾರ ಸಲ್ಲಿಸಿದ ಅಫಿಡವಿಟ್ ಅನ್ನು ದಾಖಲಿಸಿಕೊಂಡ ನ್ಯಾಯಾಲಯ, ಬೆದರಿಕೆ ಹಾಕಿದವರ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿತು. ಇದನ್ನೂ ಓದಿ: ಆರ್‌ಸಿಬಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್

    ದ್ವೇಷ ಭಾಷಣ ಮತ್ತು ಹಿಂಸಾಚಾರದ ಬೆದರಿಕೆಗಳ ಕುರಿತು ಮಾರ್ಗಸೂಚಿಗಳನ್ನು ಕೋರಿ ನಿರ್ಮಾಪಕ ಮತ್ತು ಮೂರನೇ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಪೀಠವು, ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ಎಂದು ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಗುತ್ತಿಗೆ ಆಯ್ತು, ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಹೆಚ್ಚಳ!

    ಸ್ಟ್ಯಾಂಡ್-ಅಪ್ ಕಾಮಿಕ್ಸ್ ಅನ್ನು ನಿಲ್ಲಿಸಬೇಕೇ? ಕವಿಗಳು ಕವಿತೆಗಳನ್ನು ಹೇಳಬಾರದೇ? ಎಂದು ನ್ಯಾಯಾಲಯವು ಪ್ರಶ್ನಿಸಿತು. ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಕೆಲವು ಗುಂಪುಗಳು ಏನು ಬಿಡುಗಡೆ ಮಾಡಬಹುದು ಅಥವಾ ಬಿಡುಗಡೆ ಮಾಡಬಾರದು ಎಂದು ನಿರ್ದೇಶಿಸಲು ಅನುಮತಿಸಬಾರದು ಎಂದು ಒತ್ತಿ ಹೇಳಿತು.

    ಬೆಂಕಿ ಹಚ್ಚುವವರಿಗೆ, ಬೆದರಿಕೆ ಹಾಕುವವರಿಗೆ `ರಾಜನಂತಹ ವಿನಾಯಿತಿ’ ನೀಡಲಾಗಿದೆ ಎಂದು ಅರ್ಜಿದಾರರು ವಾದಿಸಿದರು. ಚಲನಚಿತ್ರ ನಿರ್ಮಾಪಕರು ಮತ್ತು ಚಿತ್ರಮಂದಿರ ಮಾಲೀಕರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದರು. ಇತ್ತೀಚಿನ ಬೆಳವಣಿಗೆಯಿಂದ ನಿರ್ಮಾಪಕರು 30 ಕೋಟಿ ರೂ.ಗಳವರೆಗೆ ನಷ್ಟವಾಗಿದೆ ಇದನ್ನು ಭರಿಸಿಕೊಡಬೇಕು ಇಂತಹ ಸನ್ನಿವೇಶ ನಿಭಾಯಿಸಲು ಮಾರ್ಗಸೂಚಿ ನೀಡಬೇಕು ಎಂದರು. ಇದನ್ನೂ ಓದಿ: ಕರ್ನಾಟಕಕ್ಕೆ ಹೆಚ್‌ಡಿಕೆ, ಜೋಶಿ ಕೊಡುಗೆ ಏನು? ಚರ್ಚೆಗೆ ಬರಲಿ: ಪ್ರದೀಪ್ ಈಶ್ವರ್ ಪಂಥಾಹ್ವಾನ

    ವಾದ ಆಲಿಸಿದ ನ್ಯಾಯಲಯವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿತು. ಹೋರಾಟಗಾರರು ಸಂಸ್ಥೆಗೆ ಮುತ್ತಿಗೆ ಹಾಕಿದರೆ, ನೀವು ಪೊಲೀಸ್ ಭದ್ರತೆ ಪಡೆಯಬೇಕು. ನೀವು ಒತ್ತಡಕ್ಕೆ ಒಳಗಾಗುವುದು ಸರಿಯಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಮಂಡಳಿ ಪರ ವಕೀಲರು ನಾವು ನಟನಿಗೆ ಕ್ಷಮೆ ಕೇಳುವಂತೆ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದರು.

    ಈ ವೇಳೆ ನಿರ್ಮಾಪಕ ಮತ್ತು ಫಿಲ್ಮ್ ಚೇಂಬರ್ ನಡುವೆ ವಿವಾದ ಉದ್ಭವಿಸಿತು. ನಿರ್ಮಾಪಕರು ಸ್ವಯಂಪ್ರೇರಣೆಯಿಂದ ಚಿತ್ರ ಬಿಡುಗಡೆಯನ್ನು ತಡೆಹಿಡಿದಿದ್ದಾರೆ ಎಂದು ಕರ್ನಾಟಕ ಸರ್ಕಾರ ವಾದಿಸಿತು. ಚಿತ್ರ ಬಿಡುಗಡೆ ಮಾಡಿದರೆ ನಾವು ಅಗತ್ಯ ಭದ್ರತೆ ನೀಡಲು ಸಿದ್ಧವಿದ್ದೇವೆ. ಅಲ್ಲದೇ ರಾಜ್ಯವು ಈಗ ತನ್ನ ಅಫಿಡವಿಟ್‌ಗೆ ಬದ್ಧವಾಗಿದೆ ಎಂದು ಹೇಳಿತು. ಇದನ್ನೂ ಓದಿ: ‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ಡಾಲಿ, ಶಿವಣ್ಣ

    ರಾಜ್ಯ ಸರ್ಕಾರದ ಅಫಿಡವಿಟ್‌ನಿಂದ ತೃಪ್ತವಾದ ನ್ಯಾಯಲಯವು ನಾವು ಯಾವುದೇ ಪರಿಹಾರಕ್ಕೆ ಸೂಚಿಸುವುದಿಲ್ಲ ಅಥವಾ ಮಾರ್ಗಸೂಚಿ ನೀಡುವುದಿಲ್ಲ. ಸರ್ಕಾರ ಇಂತಹ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಬೇಕು ಮತ್ತು ಚಿತ್ರ ಬಿಡುಗಡೆಗೆ ಅವಕಾಶ ನೀಡಿ, ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕ್ರಿಮಿನಲ್ ಕಾನೂನು ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾ. ಉಜ್ಜಲ್ ಭುಯಾನ್ ನೇತೃತ್ವದ ದ್ವಿ ಸದಸ್ಯ ಪೀಠ ಆದೇಶಿಸಿತು.

  • ಅಡ್ವಾನ್ಸ್‌ ಹಣ ವಾಪಸ್‌ ಕೊಡದ ಆರೋಪ – ರಚಿತಾ ರಾಮ್‌ ವಿರುದ್ಧ ಮತ್ತೊಂದು ದೂರು

    ಅಡ್ವಾನ್ಸ್‌ ಹಣ ವಾಪಸ್‌ ಕೊಡದ ಆರೋಪ – ರಚಿತಾ ರಾಮ್‌ ವಿರುದ್ಧ ಮತ್ತೊಂದು ದೂರು

    ಡ್ವಾನ್ಸ್‌ ಹಣ ವಾಪಸ್‌ ಕೊಡದ ಆರೋಪದಲ್ಲಿ ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ನಲ್ಲಿ ಮತ್ತೊಂದು ದೂರು ದಾಖಲಾಗಿದೆ.

    ‘ಉಪ್ಪಿ ರುಪ್ಪಿ’ ಸಿನಿಮಾಗಾಗಿ ಗುಳಿಕೆನ್ನೆ ಚೆಲುವೆ ರಚಿತಾ ರಾಮ್‌ಗೆ ಅಡ್ವಾನ್ಸ್‌ ನೀಡಲಾಗಿತ್ತು. ಈಗ ಹಣ ವಾಪಸ್‌ ಕೊಡದೇ ನಿರ್ಮಾಪಕಿಯನ್ನು ಸತಾಯಿಸುತ್ತಿದ್ದಾರೆಂದು ದೂರಲಾಗಿದೆ.

    8 ವರ್ಷಗಳ ಹಿಂದೆ ಉಪ್ಪಿ ಮತ್ತು ರಚಿತಾ ನಟನೆಯಲ್ಲಿ ಸಿನಿಮಾ ಮೂಡಿಬರಬೇಕಿತ್ತು. ‘ಉಪ್ಪಿ ರುಪ್ಪಿ’ ಸಿನಿಮಾದಲ್ಲಿ ಉಪೇಂದ್ರ ಜೊತೆ ನಟಿಸಲು ನಟಿ ಒಪ್ಪಿಕೊಂಡಿದ್ದರು. ಈ ಸಿನಿಮಾವನ್ನು ವಿಜಯಲಕ್ಷ್ಮಿ ಅರಸ್ ನಿರ್ಮಾಣ ಮತ್ತು ಕೆ.ಮಾದೇಶ್ ನಿರ್ದೇಶನ ಮಾಡುವುದಿತ್ತು.

    23 ಲಕ್ಷ ಸಂಭಾವನೆಗೆ ನಟಿ ಕಮಿಟ್ ಆಗಿದ್ದರು. ಮುಂಗಡವಾಗಿ 13 ಲಕ್ಷ ಅಡ್ವಾನ್ಸ್ ರೂಪದಲ್ಲಿ ಹಣ ಪಡೆದಿದ್ದರು. 2017 ರಲ್ಲಿ ಬ್ಯಾಂಕಾಕ್‌ನಲ್ಲಿ ಶೂಟಿಂಗ್‌ಗೆ ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಬರುವುದಾಗಿ ಒಪ್ಪಿಕೊಂಡು ರಚಿತಾ ರಾಮ್‌ಗೆ ಟಿಕೆಟ್ ಬುಕ್ ಮಾಡಿದ್ದರು. ಆದರೆ, ಬಂದಿರಲಿಲ್ಲ. 15 ದಿನಗಳ ಕಾಲ ಈಗ ಬರ್ತೀನಿ, ಆಗ ಬರ್ತೀನಿ ಅಂತಾ ಸತಾಯಿಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

    ಸೂಟ್ ರೂಮ್ ಬುಕ್ ಮಾಡಿಕೊಂಡು 15 ದಿನ ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ಕಾದಿದ್ದರು. ಬಂದ ಜಾಗಕ್ಕೆ ಸುಂಕವಿಲ್ಲ ಎಂದು ಹೀರೊ ಪೋರ್ಷನ್ ಶೂಟ್ ಮಾಡಿಕೊಂಡು ಚಿತ್ರತಂಡ ವಾಪಸ್‌ ಆಗಿತ್ತು. ರಚಿತಾ ರಾಮ್‌ನಿಂದ ನಿರ್ಮಾಪಕಿ ಒಂದೂವರೆ ಕೋಟಿ ಕಳೆದುಕೊಂಡರು ಎನ್ನಲಾಗಿದೆ. ಒಂದು ದಿನ ಮಾತ್ರ ಮೈಸೂರಿನಲ್ಲಿ ನಡೆದ ಸಿನಿಮಾ ಶೂಟಿಂಗ್‌ನಲ್ಲಿ ನಟಿ ಭಾಗಿಯಾಗಿದ್ದರು. ನಟಿ ಕಾರಣದಿಂದ ಸಿನಿಮಾ ಅರ್ಧಕ್ಕೆ ನಿಂತು ಹೋಯಿತು.

    35 ಪರ್ಸೆಂಟ್ ಮಾತ್ರ ಕಂಪ್ಲೀಟ್ ಆಗಿ ಸಿನಿಮಾ ನಿಂತು ಹೋಯಿತು. ಹಣವೂ ಇಲ್ಲ ಸಿನಿಮಾನೂ ಕಂಪ್ಲೀಟ್ ಇಲ್ಲ ಎನ್ನುವಂತಾಯಿತು. ಅವತ್ತಿನಿಂದ ಸಂಪರ್ಕಕ್ಕೆ ಸಿಗದೇ ನಟಿ ಸತಾಯಿಸುತ್ತಿದ್ದರು. ಕೊನೆಯದಾಗಿ ಫಿಲ್ಮ್ ಚೇಂಬರ್‌ಗೆ ನಿರ್ಮಾಪಕಿ ದೂರು ಕೊಟ್ಟಿದ್ದಾರೆ.

  • ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು

    ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು

    – ಕ್ಷಮೇ ಕೇಳಿಸುವ ಪ್ರಯತ್ನ ಮಾಡ್ತೀವಿ ಎಂದ ಫಿಲ್ಮ್‌ ಚೇಂಬರ್‌ ಅಧ್ಯಕ್ಷ ನರಸಿಂಹಲು

    ಬೆಂಗಳೂರು: ನಟ ಕಮಲ್ ಹಾಸನ್ (Kamal Haasan) ಕೊಟ್ಟ ಉದ್ಧಟತನದ ಹೇಳಿಕೆ ಇಡೀ ರಾಜ್ಯದ ಜನರ ಆಕ್ರೋಶ ಕಟ್ಟೆಯೊಡೆಯುವಂತೆ ಮಾಡಿದೆ. ರಾಜ್ಯದಲ್ಲಿ ಕಮಲ್‌ ಸಿನಿಮಾಗಳನ್ನ ಬ್ಯಾನ್‌ ಮಾಡುವಂತೆ ಕನ್ನಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಈ ನಡುವೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber) ಸಭೆ ನಡೆಸಿದ್ದು, ಕ್ಷಮೆ ಕೇಳಿಸುವ ಪ್ರಯತ್ನ ಮಾಡುವುದಾಗಿ ಹೇಳಿದೆ.

    ಸಭೆಯಲ್ಲಿ ನಿರ್ಮಾಪಕ ಸಾರಾ ಗೋವಿಂದು ಮಾತನಾಡಿ, ಕಮಲ್ ಹಾಸನ್ ಬಗ್ಗೆ ನಮಗೆ ಯಾರಿಗೂ ಕನಿಕರ ಇಲ್ಲ. ಇವತ್ತು ಅಥವಾ ನಾಳೆ ಒಳಗೆ ಕಮಲ್ ಹಾಸನ್ ಕ್ಷಮೆ ಕೇಳದೇ ಇದ್ರೆ ಖಂಡನೆ ಮಾಡ್ತೀವಿ. ಕಮಲ್ ಹಾಸನ್ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ರೆ ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಮಾಡಿಕೊಡಲ್ಲ ಅಂತ ಎಚ್ಚೆರಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್

    ಇನ್ನೂ ಫಿಲ್ಮ್‌ ಚೇಂಬರ್‌ ಅಧ್ಯಕ್ಷ ನರಸಿಂಹಲು ಮಾತನಾಡಿ, ಕನ್ನಡ ರಕ್ಷಣಾ ವೇದಿಕೆಯವರು, ಹಲವಾರು ಸಂಘ ಸಂಸ್ಥೆಗಳು ಖಂಡಿಸಿದ್ದಾರೆ. ಸಿನಿಮಾ ಬ್ಯಾನ್ ಮಾಡ್ಬೇಕು ಅಂತಾ ಪಟ್ಟು ಹಿಡಿದಿದ್ದಾರೆ. ಕಮಲ್ ಹಾಸನ್ ಕ್ಷಮೆ ಕೇಳ್ಬೇಕು ಅಂತಾ ಒತ್ತಾಯಿಸಿದ್ದಾರೆ. ಕಮಲ್ ಹಾಸನ್ ಮಾಡಿರುವ ತಪ್ಪನ್ನ ಮನವರಿಕೆ ಮಾಡಿಸಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡ್ತೀವಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರಗಳನ್ನ ನಿರ್ಬಂಧಿಸಿ: ಶಿವರಾಜ್ ತಂಗಡಗಿ ಪತ್ರ

    ಫಿಲ್ಮ್‌ ಚೇಂಬರ್‌ ಮುತ್ತಿಗೆಗೆ ಯತ್ನ:
    ಕಮಲ್‌ ಹಾಸನ್‌ ಚಲನಚಿತ್ರಗಳನ್ನ ಬ್ಯಾನ್‌ಗೆ ಒತ್ತಾಯ ಹೆಚ್ಚಾದಂತೆ ಕರ್ನಾಟಕ ಸಿನಿಮಾ ವಿತರಕ ಕಮಲಾಕರ್ ಅವರ ನೇತೃತ್ವದಲ್ಲಿಂದು ಸಭೆ ನಡೆಸಲಾಯಿತು. ಸಭೆಯಲ್ಲಿ ಫಿಲ್ಮ್‌ ಚೇಂಬರ್‌ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದು, ಥಾಮಸ್ ಡಿಸೋಜಾ ಭಾಗಿ, ಪ್ರದರ್ಶಕ ವಲಯದ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿರ್ಮಾಪಕರು ಭಾಗಿಯಾಗಿದ್ದರು. ಸಭೆ ನಡೆಯುತ್ತಿದ್ದಾಗಲೇ ಕೆಲ ಕನ್ನಡಪರ ಹೋರಾಟಗಾರರು ಮುತ್ತಿಗೆಗೆ ಉತ್ನಿಸಿದ ಘಟನೆಯೂ ನಡೆಯಿತು. ಇದನ್ನೂ ಓದಿ: ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್

  • ಸೋನು ನಿಗಮ್‌ಗೆ ಫಿಲ್ಮ್ಂ ಚೇಂಬರ್ ಶಾಕ್ – ಸ್ಯಾಂಡಲ್‌ವುಡ್‌ನಿಂದ ಗಾಯಕನಿಗೆ ಅಸಹಕಾರ

    ಸೋನು ನಿಗಮ್‌ಗೆ ಫಿಲ್ಮ್ಂ ಚೇಂಬರ್ ಶಾಕ್ – ಸ್ಯಾಂಡಲ್‌ವುಡ್‌ನಿಂದ ಗಾಯಕನಿಗೆ ಅಸಹಕಾರ

    ಗಾಯಕ ಸೋನು ನಿಗಮ್‌ಗೆ (Sonu Nigam) ಸ್ಯಾಂಡಲ್‌ವುಡ್ ಶಾಕ್ ಕೊಟ್ಟಿದೆ. ಕನ್ನಡದ ಸಿನಿಮಾಗಳಲ್ಲಿ ಅವರನ್ನು ಹಾಡಿಸದಿರಲು ಫಿಲ್ಮ್ ಚೇಂಬರ್ ತೀರ್ಮಾನಿಸಿದೆ. ಇದನ್ನೂ ಓದಿ:ಪಾಕಿಸ್ತಾನದ ನಟನ ಸಿನಿಮಾ ಭಾರತದಲ್ಲಿ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ?- ಪ್ರಕಾಶ್ ರಾಜ್ ಕೆಂಡ

    ಸೋನು ನಿಗಮ್ ‘ಕನ್ನಡ’ ವಿವಾದದ ಕುರಿತು ಇಂದು ನಡೆದ ಫಿಲ್ಮ್ ಚೇಂಬರ್ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ನರಸಿಂಹಲು ಮಾತನಾಡಿ, ಸಿನಿಮಾರಂಗದಲ್ಲಿ ಕಲಾವಿದರನ್ನ ಬ್ಯಾನ್ ಮಾಡುವಂತಿಲ್ಲ. ಆದರೆ ಸ್ವಯಂ ಪ್ರೇರಣೆಯಿಂದ ನಿರ್ಮಾಪಕರು, ಸಂಗೀತ ನಿರ್ದೇಶನಕರು ಗಾಯಕರನ್ನು ದೂರ ಇಡಬಹುದು. ಕಲಾವಿದರಾಗಲಿ, ಗಾಯಕರಾಗಲಿ ಅಧಿಕೃತವಾಗಿ ಬ್ಯಾನ್ ಮಾಡುವ ಅಧಿಕಾರ ಫಿಲ್ಮ್ ಚೇಂಬರ್‌ಗೆ ಇರೋದಿಲ್ಲ. ಗಾಯಕನನ್ನು ಕೆಲ ವರ್ಷ ದೂರವಿಟ್ಟು ಯಾರೂ ಅವಕಾಶ ಕೊಡದೆ ಬುದ್ಧಿ ಕಲಿಸಬಹುದು ಎಂದಿದ್ದಾರೆ.

    ಯಾವುದೇ ಸಿನಿಮಾದಲ್ಲಿ ಹಾಡಿಸುವುದು, ಮ್ಯೂಸಿಕಲ್ ನೈಟ್ಸ್ ಆಗಲಿ ಎಲ್ಲಿಯೂ ಸೋನ್ ನಿಗಮ್ ಅವರನ್ನು ಹಾಡಿಸದಿರಲು ಎಂದು ಫಿಲ್ಮ್ ಚೇಂಬರ್ ನಿರ್ಧರಿಸಿದೆ. ಒಂದು ವೇಳೆ ಸೋನು ನಿಗಮ್ ಕ್ಷಮೆ ಕೇಳಿದರೂ ಅಸಹಕಾರ ಮುಂದುವರೆಸಲು ಕನ್ಮಡ ಫಿಲ್ಮ್ ಚೇಂಬರ್ ಹಾಗೂ ಅಂಗಸಂಸ್ಥೆಗಳು ತೀರ್ಮಾನ ಕೈಗೊಂಡಿವೆ. ಇದನ್ನೂ ಓದಿ:ಮತ್ತೆ ವಿಜಯ್ ದೇವರಕೊಂಡಗೆ ರಶ್ಮಿಕಾ ಮಂದಣ್ಣ ಜೋಡಿ?

    ಮೇ 2ರಂದು ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೇನೇ ಪಹಲ್ಗಾಮ್ ದಾಳಿ ನಡೆದಿದ್ದು ಎಂದ ಸೋನು ನಿಗಮ್ ಹೇಳಿಕೆ ನೀಡುವ ಮಊಲಕ ವಿವಾದ ಸೃಷ್ಟಿಸಿದ್ದರು.

  • ಗೋವಾದಲ್ಲಿ ಹರಿದ ಕನ್ನಡ ನಿರ್ಮಾಪಕರ ರಕ್ತ: ಇಂಚಿಂಚು ಮಾಹಿತಿ

    ಗೋವಾದಲ್ಲಿ ಹರಿದ ಕನ್ನಡ ನಿರ್ಮಾಪಕರ ರಕ್ತ: ಇಂಚಿಂಚು ಮಾಹಿತಿ

    ರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಕಾರ್ಯಕಾರಣಿ ಸಭೆ ಮಾಡಲು ಸರ್ವ ಸದಸ್ಯರು ಗೋವಾ (Goa) ಟ್ರಿಪ್ ಮಾಡಿದ್ದರು. ರಾತ್ರಿ ಹೋಟೆಲ್‍ ನಲ್ಲಿ ಮೋಜು ಮಸ್ತಿ ಮಾಡುವಾಗ ನಿರ್ಮಾಪಕರ ಮಧ್ಯ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ಇಬ್ಬರು ನಿರ್ಮಾಪಕರು ತೀವ್ರ ಗಾಯಗೊಂಡಿದ್ದಾರೆ. ಇವರು ಗೋವಾಗೆ ಹೋಗಿದ್ದು ಕನ್ನಡ ಚಿತ್ರೋದ್ಯಮದ ಉದ್ದಾರಕ್ಕೆ. ಸಿನಿ ರಂಗವನ್ನು ಮತ್ತಷ್ಟು ಬಲಿಷ್ಠವಾಗಿ ಬೆಳೆಸೋಕೆ. ಹೋದವರ‍್ಯಾರು ಕಾಂಜಿಪಿಂಜಿಗಳಲ್ಲ. ಪುಡಿರೌಡಿಗಳೂ ಅಲ್ಲವೇ ಅಲ್ಲ. ಕನ್ನಡ ಸಿನಿರಂಗಕ್ಕೆ ಅಪರೂಪದ ಸಿನಿಮಾ ಕೊಟ್ಟವರು. ಸ್ಯಾಂಡಲ್‌ವುಡ್ಡನ್ನು ಹುಲುಸಾಗಿ ಬೆಳೆಸಿದವರು. ಗಟ್ಟಿಯಾಗಿ ನಿಲ್ಲಿಸಿದವರು. ಆದ್ರೆ, ಈ ಗುಂಪಿನಲ್ಲಿದ್ದ ಕೆಲವರು ಮಾಡಿದ್ದೇನು? ಎಣ್ಣೆ ಏಟಲ್ಲಿ ಬಡಿದಾಡ್ಕೊಂಡಿದ್ದಾರೆ. ಕನ್ನಡ ಚಿತ್ರೋದ್ಯಮದ ಮಾನ ಮರ‍್ಯಾದೇನ ಮೂರುಕಾಸಿಗೆ ಹರಾಜಾಕಿದ್ದಾರೆ. ಬಡಿದಾಡ್ಕೊಂಡವ್ರ ಮುಖದಿಂದ ರಕ್ತ ಸೋರಿದೆ, ತಲೆಬುರುಡೆ ಒಡೆದಿದೆ. ಮಾರಣಾಂತಿಕ ಹಲ್ಲೆ ನಡೆದಿದೆ.

    ಕನ್ನಡ ಸಿನಿಮಾ ರಂಗಕ್ಕೀಗ ಬರೋಬ್ಬರಿ 90 ವರ್ಷ. ಈ ಹಾದಿ ಸುಗಮವಾದುದಲ್ಲ. ಮದ್ರಾಸ್‌ನಿಂದ ಬಿಡಿಸಿಕೊಂಡು ಕರ್ನಾಟಕದಲ್ಲೇ ಚಿತ್ರರಂಗ ಕಟ್ಟಿದ ಇತಿಹಾಸವಿದೆಯಲ್ಲ ಅದು ರೋಚಕ. `ಮದ್ರಾಸ್’ ಎಂಬ ನಮ್ಮದಲ್ಲದ ನೆಲದಲ್ಲಿ ನೆಲೆನಿಂತು, ಕಷ್ಟಪಟ್ಟು, ಅವರು ಕೊಟ್ಟ ಸಮಯಕ್ಕೆ ಚಿತ್ರೀಕರಣ ಮಾಡಿ, ಹಗಲು ರಾತ್ರಿ ಲೆಕ್ಕಿಸದೇ ಕಟ್ಟಿದ ಚಿತ್ರರಂಗ ನಮ್ಮದು. ನಾವೀಗ 90ರ ಸಂಭ್ರಮದಲ್ಲಿದ್ದೇವೆ. ಇಡೀ ರಾಷ್ಟ್ರವೇ ಕನ್ನಡ ಸಿನಿಮಾ ರಂಗದತ್ತ ನೋಡುವಂತಾಗಿದೆ. ಮೂಕಿ ಯುಗದಿಂದ ಇಲ್ಲೀತನಕ ಮಾಡಿದ ಪ್ರಯೋಗಗಳು ಇತರ ಚಿತ್ರರಂಗಕ್ಕೆ ಮಾದರಿ ಆಗಿವೆ. ಈ ಮಾದರಿ ಇವರಿಂದಾಗಿ ಮಣ್ಣುಪಾಲಾಗಿದೆ. 90ರ ಸಂಭ್ರಮವನ್ನು ಸೆಲೆಬ್ರೇಟ್ ಮಾಡೋದು ಹೇಗೆ? ಅಂತ ಪ್ಲ್ಯಾನ್ ಮಾಡೋಕೆ ಹೋದವರು ಮಾನ ಕಳೆದು ಬಂದಿದ್ದಾರೆ.

    ಚಿತ್ರರಂಗದ ಮಾತೃಸಂಸ್ಥೆ ಈ ಫಿಲ್ಮ್ ಚೇಂಬರ್. ಚಿತ್ರೋದ್ಯಮದ ಪುಣ್ಯಾತ್ಮರು ನಡೆದಾಡಿದ ಕರ್ಮಭೂಮಿ ಅದು. ಅದಕ್ಕೆ ಅದರದ್ದೇ ಆದ ಗೌರವವಿದೆ. ಈಗದು ತನ್ನ ಖದರ್ ಕಳೆದುಕೊಳ್ಳುತ್ತಿದ್ದರೂ, ಈಗಲೂ ಈ ಸಂಸ್ಥೆಯ ಮೇಲೆ ಅಪಾರ ವಿಶ್ವಾಸ, ನಂಬಿಕೆ ಚಿತ್ರಕರ್ಮಿಗಳದ್ದು. ಇಂಥದ್ದೊಂದು ಜವಾಬ್ದಾರಿಯ ಅರಿವು ಈಗಿರುವವರಿಗೆ ಇರಬೇಕಿತ್ತು ಅಲ್ಲವಾ?.. ಗೋವಾಗೆ ಹೋಗಿದ್ದು ಯಾಕೆ? ಅಲ್ಲಿಗೇ ಯಾಕೆ ಹೋಗಬೇಕಿತ್ತು? ಅಷ್ಟೂ ಜನರನ್ನು ಕರೆದುಕೊಂಡು ಹೋಗಿದ್ದು ಯಾರು? ಹಣ ಎಲ್ಲಿಂದ ಬಂತು? ಈ ಯಾವ ಪ್ರಶ್ನೆಯನ್ನೂ ಜನರು ಕೇಳ್ತಿಲ್ಲ.. ಗೋವಾಗೆ ಹೋಗಿದ್ದು ತಪ್ಪು ಅಂತಾನೂ ಹೇಳ್ತಿಲ್ಲ. ಮಾತೃಸಂಸ್ಥೆಯ ಹೆಸರಿನಲ್ಲಿ ಹೋದರು ಮರ್ಯಾದೆ ಕಳೆಯುವಂಥ ಕೆಲಸ ಮಾಡ್ಬೋದಾ ಅಂತಿದ್ದಾರೆ ಜನರು. ಗೋವಾಗೆ ಹೋದವರೇ ಹೇಳ್ತಿರೋ ಪ್ರಕಾರ.. ಇವರೆಲ್ಲ ಹೋಗಿದ್ದು ಜಾಲಿಟ್ರಿಪ್‌ಗೆ ಅಲ್ಲವಂತೆ. ಸಿನಿಮಾ ರಂಗಕ್ಕೆ 90 ವರ್ಷ ತುಂಬಿರೋ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗ್ತಿದೆ. ಈ ಕಾರ್ಯಕ್ರಮದ ರೂಪರೇಷೆ ಚರ್ಚೆ ಮಾಡೋಕೆ ಗೋವಾಗೆ ಹೋಗಿದ್ದರಂತೆ. ಇದರ ಜೊತೆಗೆ ಫಿಲ್ಮ್ ಚೇಂಬರ್‌ನ ಕಾರ್ಯಕಾರಿಣಿ ಸಭೆ ಕೂಡ ಪ್ಲ್ಯಾನ್ ಆಗಿತ್ತಂತೆ. ಇಷ್ಟೊಂದು ಮಹತ್ವದ ಕೆಲಸ ಇಟ್ಕೊಂಡು ಹೋದವರು ಬಡಿದಾಡಿಕೊಂಡಿದ್ದು ಯಾಕೆ?.. ಉಳಿದುಕೊಂಡ ಹೋಟೆಲ್‌ನಲ್ಲಿ ನೆತ್ತರು ಹರಿಸಿದ್ದು ಯಾಕೆ?.. ಅಷ್ಟಕ್ಕೂ ಇವರೇನು ಸಣ್ಣ ಮಕ್ಕಳಾ? ಫಿಲ್ಮ್ ಚೇಂಬರ್ ಸದಸ್ಯರಾಗಿದ್ದವರಿಗೆ ಕಾಮನ್‌ಸೆನ್ಸ್ ಬೇಡವಾ?.

    ಫಿಲ್ಮ್ ಚೇಂಬರ್‌ನಲ್ಲಿ ಈ ರೀತಿ ಗಲಾಟೆ ಆಗೋದು ಹೊಸದೇನೂ ಅಲ್ಲ. ಚುನಾವಣೆ ಟೈಮ್‌ನಲ್ಲಿ ಒಬ್ಬರಿಗೊಬ್ಬರು ತೊಡೆ ತಟ್ಟಿದ್ದಾರೆ.. ಕೂಗಾಡಿದ್ದಾರೆ.. ಕೈಕೈ ಮಿಲಾಯಿಸೋ ಹಂತಕ್ಕೂ ಹೋಗಿದ್ದಾರೆ. ಆದರೆ, ಈ ಪ್ರಮಾಣದಲ್ಲಿ ಯಾವತ್ತೂ ಜಗಳ ಆಗಿರಲಿಲ್ಲ. ಹಾಗಂತ ಈಗ ಯಾವ ಚುನಾವಣೆನೂ ನಡೆದಿಲ್ಲ. ಗೋವಾದಲ್ಲಿ ನಡೆದಿರೋ ಮಾರಣಾಂತಿಕ ಹಲ್ಲೇಲಿ ನಿರ್ಮಾಪಕ ಎ.ಗಣೇಶ್ ಹಣೆಯಿಂದ ರಕ್ತ ಚಿಮ್ಮಿದೆ. ದೇಹದ ತುಂಬಾ ಗಾಯಗಳಾಗಿವೆ. ಮತ್ತೋರ್ವ ನಿರ್ಮಾಪಕ ರಥಾವರ ಚಂದ್ರು ಕೂಡ ಗಂಭೀರ ಗಾಯದಿಂದ ನೆರಳ್ತಾ ಇದ್ದಾರೆ. ಇಬ್ಬರಿಗೂ ಚಿಕಿತ್ಸೆ ನೀಡಲಾಗಿದೆ. ಸೂಕ್ತ ಸಮಯದಲ್ಲಿ ಅಂಬುಲೆನ್ಸ್ ಬಾರದೇ ಇದ್ದರೆ, ಅನಾಹುತಾನೇ ಆಗಿರೋದು ಅಂತಿದ್ದಾರೆ ನಿರ್ಮಾಪಕ ಗಣೇಶ್.

     

    ಅಂಬುಲೆನ್ಸ್ ತಡವಾಗಿದ್ದರೆ ಅನಾಹುತನೇ ಆಗಿರೋದು ಅಂತಿದ್ದಾರೆ ಅಂದ್ಮೇಲೆ.. ಹಲ್ಲೆ ಯಾವ ಪ್ರಮಾಣದಲ್ಲಿ ಆಗಿರೋದು ಅಂತ ನೀವೇ ಅಂದಾಜಿಸಿಕೊಳ್ಳಿ.. ಅಷ್ಟಕ್ಕೂ ಈ ಗಲಾಟೆ ನಡೆದಿದ್ದು ಯಾಕೆ? ವೈಯಕ್ತಿಕ ಕಾರಣ ಏನಾದ್ರೂ ಇತ್ತಾ? ದ್ವೇಷ ತುಂಬಿಕೊಂಡೆ ಇವರು ಗೋವಾಗೆ ಹೋಗಿದ್ದಾರೆ? ದ್ವೇಷದಲ್ಲಿ ಹಲ್ಲು ಮಸೀತಾ ಇದ್ದೋರ್‌ನ ಗೋವಾಗೆ ಕರ‍್ಕೊಂಡು ಹೋಗಿದ್ದು ಯಾರು? ಸತೀಶ್ ಅನ್ನೋರು ಫೋರ್ಕ್ ಸ್ಪೂನ್‌ನಿಂದ ಹಲ್ಲೆ ಮಾಡಿದ್ದು ಯಾಕೆ? ಅಲ್ಲಿದ್ದವರಿಗೆ ಈ ಕಾಳಗವನ್ನು ತಪ್ಪಿಸೋಕೆ ಆಗ್‌ಲಿಲ್ಲವಾ? ಅಬ್ಬಬ್ಬಾ.. ಎಷ್ಟೊಂದು ಪ್ರಶ್ನೆಗಳು.. ಇದಕ್ಕೆ ಉತ್ತರಿಸೋರು ಯಾರು? ನಿರ್ಮಾಪಕ ಗಣೇಶ್ ಅವರೇ ಹೇಳಿದಂತೆ ಹಲ್ಲೆ ಮಾಡಿದ ವ್ಯಕ್ತಿ ಕಂಠಪೂರ್ತಿ ಕುಡಿದಿದ್ನಂತೆ.. ಅದು ಬರೀ ಕುಡಿತದ ಹಾರಾಟ ಮಾತ್ರ ಆಗಿರಲಿಲ್ಲವಂತೆ.. `ಬೇರೆ ಇನ್ನೇನಾದ್ರೂ ತಗೊಂಡಿದ್ನಾ?.’ ಅಂತ ಅನುಮಾನ ಹೊರ ಹಾಕಿದ್ದಾರೆ. `ಬೇರೆದು ಅಂದ್ರೇನು..?’ ಈ ಮಾತು ನಾನಾ ಅನುಮಾನಕ್ಕೆ ಕಾರಣವಾಗಿದೆ. `ಬೇರೆದು ಅಂದ್ರೇನು..?’ ಅಂತ ಗಣೇಶ್ ಅವರೇ ಬಿಡಿಸಿ ಹೇಳಬೇಕಿದೆ. ಒಟ್ನಲ್ಲಿ.. ಗೋವಾ ಟ್ರಿಪ್ ಸುಖಾಂತ್ಯ ಕಾಣದೆ.. ಹೊಡೆದಾಟದಲ್ಲಿ ಕೊನೆಗೊಂಡಿದೆ. ಹೋದ ಕೆಲ್ಸ ಆಯ್ತಾ ಅಂತ ಚೇಂಬರ್ ಅಧ್ಯಕ್ಷರೇ ಹೇಳ್ಬೇಕಿದೆ. ಅಂದಹಾಗೆ ಈ ಘಟನೆಯಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ ಸುರೇಶ್ ತುಟಿಗೂ ಗಾಯ ಆಗಿದೆ ಅನ್ನೋದು ವಿಪರ್ಯಾಸ.

  • ಗೋವಾದಲ್ಲಿ ಕನ್ನಡದ ನಿರ್ಮಾಪಕರ ಹೊಡೆದಾಟ: ನಿರ್ಮಾಪಕ ಗಣೇಶ್ ಪ್ರತಿಕ್ರಿಯೆ

    ಗೋವಾದಲ್ಲಿ ಕನ್ನಡದ ನಿರ್ಮಾಪಕರ ಹೊಡೆದಾಟ: ನಿರ್ಮಾಪಕ ಗಣೇಶ್ ಪ್ರತಿಕ್ರಿಯೆ

    ಸಿನಿಮಾ ರಂಗಕ್ಕೆ 90 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅದ್ಧೂರಿ ಕಾರ್ಯಕ್ರಮಕ್ಕೆ ಮುಂದಾಗಿದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ. ಪೂರ್ವಭಾವಿಯಾಗಿ ತಯಾರಿಯ ಕುರಿತಂತೆ ಚರ್ಚೆ ಮಾಡಲು ಮತ್ತು ಕಾರ್ಯಕಾರಿಣಿ ಸಭೆಯನ್ನು ನಡೆಸಲು ಫಿಲ್ಮ್ ಚೇಂಬರ್ (Film Chamber) ಸದಸ್ಯರು ಮತ್ತು ಅಧ್ಯಕ್ಷರು ಗೋವಾಗೆ (Goa) ಹಾರಿದ್ದರು. ಈ ಸಂದರ್ಭದಲ್ಲಿ ಮಾರಣಾಂತಿಕ ಹಲ್ಲೆ ನಡೆದಿದೆ.

    ನಿರ್ಮಾಪಕ ರಥಾವರ ಚಂದ್ರು ಮತ್ತು ಸತೀಶ್ ಆರ್ಯ (Satish Arya) ನಡುವೆಗೆ ಗಲಾಟೆ ಶುರುವಾಗಿ, ಗಲಾಟೆ ತಪ್ಪಿಸಲು ಹೋದ ನಿರ್ಮಾಪಕ ಎ.ಗಣೇಶ್ (Ganesh) ಅವರ ಹಣೆಗೆ ತೀವ್ರ ಗಾಯವಾಗಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ ಸುರೇಶ್ ಅವರ ತುಟಿಗೂ ಗಾಯವಾಗಿದೆ. ಈ ಕುರಿತಂತೆ ಪಬ್ಲಿಕ್ ಟಿವಿ ಜೊತೆ ಗಾಯಾಳು ಗಣೇಶ್ ಎಕ್ಸ್‍ ಕ್ಲ್ಯೂಸಿವ್ ಆಗಿ ಮಾತನಾಡಿದ್ದಾರೆ.

    ಸಿನಿ 90 ಕಾರ್ಯಕ್ರಮದ ಕುರಿತು ಚರ್ಚೆ ಮಾಡೋಕೆ ಪ್ರೋಗ್ರಾಂ ಹೇಗೆ ಮಾಡ್ಬೇಕು ಅನ್ನೋ ಬಗ್ಗೆ ಚರ್ಚೆ ಮಾಡೋಕೆ ಗೋವಾಗೆ ಹೋಗಿದ್ವಿ. ಸತೀಶ್ ಆರ್ಯ ಹಾಗೂ ರಥಾವರ ಮಂಜು ನಡುವೆ ಗಲಾಟೆ ಶುರುವಾಯ್ತು. ಅವ್ರನ್ನ ಬಿಡಿಸೋಕೆ ಅಂತ ನಾನು ಹೋಗಿದ್ದು ಸತೀಶ್ ನನ್ಗೆ ಫೋರ್ಕ್ ಸ್ಪೂನ್ ಯಿಂದ ಚುಚ್ಚಿದ್ರು.  ಎನ್ ಎಂ ಸುರೇಶ್ ತುಟಿಗೂ ಗಾಯ ಆಗಿದೆ.  ಸಿನಿಮಾ ರೀತಿಯಲ್ಲಿ ಸತೀಶ್ ಆರ್ಯ ಹಲ್ಲೆ ಮಾಡಿದ್ರು. ಗೋವಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬೆಂಗಳೂರಿಗೆ ವಾಪಾಸ್ಸಾದೆ ಇಲ್ಲಿ ಬಂದು ಮಣಿಪಾಲ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ತಗೊಂಡೆ. ರಥಾವರ ಮಂಜುನಾಥ್ ಗೆ ಗಂಭೀರ ಗಾಯ ಆಗಿದೆ ಅನ್ನುತ್ತಾರೆ ಗಣೇಶ್.

     

    ಸತೀಶ್ ಆರ್ಯ ಯಿಂದ ಕೆಟ್ಟ ಹೆಸರು ಬರ್ಬಾರ್ದು ಅಂತ ಕಂಪ್ಲೇಂಟ್ ಕೊಟ್ಟಿಲ್ಲ. ಹುಚ್ಚ ಸತೀಶ್ ತರದವ್ರು ಚೇಂಬರ್ ಅಲ್ಲಿ ಇದ್ರೆ ಬೆಲೆ ಇರಲ್ಲ. ಸತೀಶ್ ಹೊಡೆದ ತಕ್ಷಣ ಎಸ್ಕೇಪ್ ಆಗಿದ್ದಾರೆ. ಸತೀಶ್ ಗಲಾಟೆ ಮಾಡಿರುವ ಸಿಸಿಟಿವಿ ಫೂಟೆಜ್ ಇದೆ . ರಕ್ತ ಸುರಿತಿದೆ ಆದ್ರೂ ಡಾನ್ಸ್ ಮಾಡ್ತಿದ್ದಾನೆ. ಕುಡಿದ ಅಮಲಿನಲ್ಲಿ ಏನು ಮಾಡಿದ್ದನೋ ಆತನಿಗೆ ಗೊತ್ತಿಲ್ಲ. ಪೆಟ್ಟು ಬಿದ್ದಿರೋ ಕಾರಣ ಕಣ್ಣು ಮಂಜಾಗಿದೆ, ಕಣ್ಣು ಕಳೆದುಕೊಳ್ಳೋ ಸಂದರ್ಭ ಸಹ ಬರ್ತಿತ್ತು. ಎನ್ ಎಂ ಸುರೇಶ್ ದುಡ್ಡಲ್ಲಿ ಗೋವಾ ಹೋಗಿದ್ದು. ಚೇಂಬರ್ ದುಡ್ಡು ಒಂದು ಪೈಸೆ ಬಳಸಿಲ್. ನಾಳೆ 12ಗಂಟೆಗೆ ವಾಣಿಜ್ಯ ಮಂಡಳಿ ಸುದ್ಧಿಗೋಷ್ಠಿ ಆಯೋಜಿಸಿ ತೀರ್ಮಾನ ಕೊಡಲಿದೆ ಎನ್ನುತ್ತಾರೆ ಗಣೇಶ್.

  • ಗೋವಾದಲ್ಲಿ ಕನ್ನಡ ನಿರ್ಮಾಪಕರ ಗಲಾಟೆ

    ಗೋವಾದಲ್ಲಿ ಕನ್ನಡ ನಿರ್ಮಾಪಕರ ಗಲಾಟೆ

    ಚಿತ್ರರಂಗದ ಸಮಸ್ಯೆಯನ್ನು ಚರ್ಚೆ ಮಾಡುವುದಕ್ಕೆಂದು ಗೋವಾಗೆ (Goa)  ಹೋಗಿದ್ದ ನಿರ್ಮಾಪಕರು ಗಲಾಟೆ ಮಾಡಿಕೊಂಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber), ನಿರ್ಮಾಪಕರ ಸಂಘ ಹಾಗೂ ನಿರ್ದೇಶಕರ ಸಂಘದ ಪದಾಧಿಕಾರಿಗಳು ಗೋವಾ ಪ್ರವಾಸ ಬೆಳೆಸಿದ್ದರು. ಮಾತಿಗೆ ಮಾತು ಬೆಳೆದು ಅದು ಗಲಾಟೆ ಸ್ವರೂಪ ಪಡೆದುಕೊಂಡಿದೆ.

    ಗೋವಾದ ಹಿಬೀಸ್ ರೆಸಾರ್ಟ್ನಲ್ಲಿ ನಿನ್ನೆ ರಾತ್ರಿ (ಮೇ ೨೭) ಚರ್ಚೆ ನಡೆಯುವಾಗ ಮಾತಿಗೆ ಮಾತು ಬೆಳೆದು ಸಣ್ಣದಾಗಿ ಗಲಾಟೆ ಶುರುವಾಗಿದೆ. ಗಲಾಟೆ ಕೈ ಕೈ ಮಿಲಾಯಿಸುವ ಹಂತ ತಲುಪಿದೆ. ನಿರ್ಮಾಪಕರಾದ ರಥಾವರ ಮಂಜುನಾಥ್, .ಗಣೇಶ್ ಹಾಗೂ ಸತೀಶ್ ಆರ್ಯ ಮೂವರು ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಲ್ಲಿ ಮುಕ್ತಾವಾಗಿದೆ.

    ಗಲಾಟೆಯ ನಂತರ ಸತೀಶ್ ಆರ್ಯ, .ಗಣೇಶ್ ಹಾಗೂ ರಥಾವರ ಮಂಜುನಾಥ್ ಅವರನ್ನು ಬೆಂಗಳೂರಿಗೆ ವಾಪಸ್ಸು ಕಳುಹಿಸಲಾಗಿದೆಯಂತೆ. ಗೋವಾ ಟ್ರಿಪ್ಗೆ ಹೋದ ನಿಯೋಗದ ಸದಸ್ಯರು, ಪದಾಧಿಕಾರಿಗಳು ನಾಳೆ (ಮೇ ೨೯) ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಎನ್.ಎಂ.ಸುರೇಶ್, ಉಮೇಶ್ ಬಣಕಾರ್, ಆಸ್ಕರ್ ಕೃಷ್ಣ, ಭಾಮಾ ಹರೀಶ್, ಭಾಮಾ ಗಿರೀಶ್, ಟೇಸಿ ವೆಂಕಟೇಶ್, ಸತೀಶ್ ಆರ್ಯ, ರಥಾವರ ಮಂಜುನಾಥ್, .ಗಣೇಶ್ ಸೇರಿ ಮುಂತಾದವರು ಗೋವಾ ಪ್ರವಾಸಕ್ಕೆ ತೆರಳಿದ್ದರು.

    ಸದ್ಯ ಕನ್ನಡ ಚಿತ್ರರಂಗ ಚಿತ್ರರಂಗ ಸಂಕಷ್ಟವನ್ನ ಎದುರಿಸುತ್ತಿದೆ. ಸಂದರ್ಭದಲ್ಲಿ ವಾಣಿಜ್ಯ ಮಂಡಳಿಗೆ ಪಾರ್ಟಿ, ಜಾಲಿ ಮೂಡು ಬೇಕಿತ್ತಾ ಅನ್ನೋದು ಕೆಲವರ ಪ್ರಶ್ನೆಯಾಗಿದೆ. ಆದ್ರೆ ಅಲ್ಲಿ ನಡೆದ ಘಟನೆ ಯಾವುದಕ್ಕಾಗಿ..? ಏನೇನಾಯ್ತು ಅನ್ನೋದು ವಾಪಾಸ್ಸಾದ ಮೇಲೆ ತಿಳಿಯಲಿದೆ. ಅಲ್ಲಿಯವರೆಗೆ ಕಾದು ನೋಡಬೇಕು.

  • ದರ್ಶನ್ ವಿರುದ್ಧ ದೂರು ವಾಪಸ್: ಕ್ಷಮೆ ಕೇಳಿದ ಕನ್ನಡ ಶಫಿ

    ದರ್ಶನ್ ವಿರುದ್ಧ ದೂರು ವಾಪಸ್: ಕ್ಷಮೆ ಕೇಳಿದ ಕನ್ನಡ ಶಫಿ

    ನಿರ್ಮಾಪಕ ಉಮಾಪತಿ ಅವರಿಗೆ ನಟ ದರ್ಶನ್ (Darshan) ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಕನ್ನಡ ಪರ ಸಂಘಟನೆಯ ಕನ್ನಡ ಶಫಿ ಎನ್ನುವವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Film Chambe) ದೂರು ನೀಡಿದ್ದರು. ದರ್ಶನ್ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಇದೀಗ ಶಫಿ ಉಲ್ಟಾ ಹೊಡೆದಿದ್ದಾರೆ.

    ಮೊನ್ನೆಯಷ್ಟೇ ದೂರು (Complaint) ನೀಡಿದ್ದ ಕನ್ನಡ ಶಫಿ (Kannada Shafi), ಇದೀಗ ದರ್ಶನ್ ಮತ್ತು ಅವರ ಅಭಿಮಾನಿಗಳಿಗೆ ಕ್ಷಮೆ ಕೇಳಿ ದೂರು ವಾಪಸ್ಸು ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ. ದರ್ಶನ್ ಅವರನ್ನು ಶಫಿ ಬಾಯಿಗೆ ಬಂದಂತೆ ಬೈದಿದ್ದರು. ಆ ವಿಡಿಯೋ ವೈರಲ್ ಕೂಡ ಆಗಿತ್ತು. ಇದೀಗ ಆ ಕುರಿತಂತೆಯೂ ಶಫಿ ಕ್ಷಮೆ ಕೇಳಿದ್ದಾರೆ.

    ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ದೂರು ನೀಡಿದ ಬಗ್ಗೆ ಕ್ಷಮೆ ಕೇಳುವುದಷ್ಟೇ ಅಲ್ಲ, ದೂರು ಹಿಂಪಡೆಯುವುದಾಗಿಯೂ ಕನ್ನಡ ಪ್ರಜಾಪರ ವೇದಿಕೆ ಕನ್ನಡ ಶಫಿ ವಿಡಿಯೋ ಮೂಲಕ ಹೇಳಿದ್ದಾರೆ. ಬೇರೆ ಸಂಘಟನೆಯವರು ಹಾಗೂ ನಾವು ಸೇರಿ ಆತುರದಿಂದ ನಿರ್ಧಾರ ಕೈಗೊಂಡೆವು. ಇದರಿಂದ ಹಿರಿಯ ನಟರ ಮನಸ್ಸಿಗೆ ನೋವಾಗಿದೆ. ಎಲ್ಲಾ ಕನ್ನಡ ಮನಸ್ಸುಗಳಿಗೂ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ ಶಫಿ.

  • ನಟ ದರ್ಶನ್ ಹೇಳಿಕೆ ಖಂಡಿಸಿ ದೂರು: ಕ್ಷಮೆ ಕೇಳಲು ಆಗ್ರಹ

    ನಟ ದರ್ಶನ್ ಹೇಳಿಕೆ ಖಂಡಿಸಿ ದೂರು: ಕ್ಷಮೆ ಕೇಳಲು ಆಗ್ರಹ

    ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರಿಗೆ ಕಟು ನುಡಿಗಳಲ್ಲಿ ಟೀಕಿಸಿರುವ ನಟ ದರ್ಶನ್ (Darshan) ವಿರುದ್ಧ ಕರ್ನಾಟಕ ಪ್ರಜಾಪರ ವೇದಿಕೆಯು ಫಿಲ್ಮ್ ಛೇಂಬರ್ ಗೆ ದೂರು ನೀಡಿದೆ. ಸಾರ್ವಜನಿಕ ವೇದಿಕೆಯ ಮೇಲೆ ಉಮಾಪತಿಗೆ ತಗಡು, ಗುಮ್ಮಿಸ್ಕೋತೀಯಾ ರೀತಿಯ ಪದಗಳನ್ನು ಆಡಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಕಾಟೇರ ಸಿನಿಮಾದ ಕಥೆ ಬರೆಯಿಸಿದ್ದು ನಾನು, ಅದು ನನ್ನದೇ ಟೈಟಲ್ ಎಂದು ಉಮಾಪತಿ ಗೌಡ ಸಂದರ್ಶನವೊಂದರಲ್ಲಿ ಹೇಳಿದ್ದರು. ಇದಕ್ಕೆ ಉತ್ತರ ಎನ್ನುವಂತೆ ಕಾಟೇರ ಸಿನಿಮಾದ ಐವತ್ತನೇ ದಿನದ ಸಂಭ್ರಮದಲ್ಲಿ ದರ್ಶನ್ ತಿರುಗೇಟು ನೀಡಿದ್ದರು. ಅಲ್ಲದೇ, ತಗಡು ಮತ್ತು ‘ಪ್ರತಿ ಬಾರಿ ಯಾಕೆ ನಮ್ಮಿಂದ ಗುಮ್ಮಿಸ್ಕೋಳ್ತಿಯಾ’ ಎನ್ನುವ ಮಾತುಗಳನ್ನು ಆಡಿದ್ದರು.

    ಈ ಕುರಿತಂತೆ ಸಂಘಟನೆಯು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದು, ಈ ವಿಷಯದಲ್ಲಿ ದರ್ಶನ್ ಅವರು ಕ್ಷಮೆ ಕೇಳಬೇಕು. ಕ್ಷಮೆ ಕೇಳದೇ ಇದ್ದರೆ, ದರ್ಶನ್ ಮನೆಯ ಮುಂದೆ ನೂರಾರು ಕನ್ನಡ ಕಾರ್ಯಕರ್ತರು ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

     

    ಉಮಾಪತಿ ಮತ್ತು ದರ್ಶನ್ ವಿಚಾರ ದಿನದಿಂದ ದಿನಕ್ಕೆ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ನಿರ್ದೇಶಕರಾದ ತರುಣ್ ಸುಧೀರ್ ಮತ್ತು ಮಹೇಶ್ ಕುಮಾರ್ ಇಬ್ಬರೂ ದರ್ಶನ್ ಪರ ಬ್ಯಾಟ್ ಮಾಡುತ್ತಿದ್ದಾರೆ. ಇದಕ್ಕೆ ಕೌಂಟರ್ ಎನ್ನುವಂತೆ ಉಮಾಪತಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.