Tag: ಫೀಸ್

  • 10 ವರ್ಷದ ಫೀಸ್ ಕಟ್ಟೋಕೆ ಶಾಲೆಗಳಿಂದ ಆಫರ್ – ನಯಾ ಪ್ಲ್ಯಾನ್‍ಗೆ ಪೋಷಕರು ಕಂಗಾಲು

    10 ವರ್ಷದ ಫೀಸ್ ಕಟ್ಟೋಕೆ ಶಾಲೆಗಳಿಂದ ಆಫರ್ – ನಯಾ ಪ್ಲ್ಯಾನ್‍ಗೆ ಪೋಷಕರು ಕಂಗಾಲು

    ಬೆಂಗಳೂರು: ಒಂದು ವರ್ಷದ ಶಾಲಾ ಶುಲ್ಕ ಕಟ್ಟುವುದರಲ್ಲೇ ಪೋಷಕರು ಹೈರಾಣಾಗುತ್ತಾರೆ.  ಅಂತಹದರಲ್ಲಿ ಖಾಸಗಿ ಶಾಲೆಗಳು ಈಗಲೇ 10 ವರ್ಷದ ಮುಂಗಡ ಶುಲ್ಕ ಕಟ್ಟಲು ಆಫರ್ ನೀಡಿದೆ. ಆದರೆ ಬೆಂಗಳೂರಿನ ನಯಾ ಟ್ರೆಂಡ್‍ಗೆ ಪೋಷಕರು ಸುಸ್ತು ಹೊಡೆದಿದ್ದಾರೆ.

    ಹೌದು.. ಬೆಂಗಳೂರಿನ (Bengaluru) ಖಾಸಗಿ ಶಾಲೆಗಳಲ್ಲಿ (Private School) 10 ವರ್ಷದ ಶುಲ್ಕವನ್ನು ಮುಂಗಡವಾಗಿ ಕಟ್ಟಬಹುದು. ಇದು ಕಡ್ಡಾಯವಲ್ಲ. ಆದರೆ ಇಷ್ಟವಿದ್ದ ಪೋಷಕರು ಇದನ್ನು ಕಟ್ಟಬಹುದು. 10 ವರ್ಷಕ್ಕೆ 20 ಲಕ್ಷ ರೂ. ಕಟ್ಟಿ ಅಡ್ವಾನ್ಸ್ ಫೀಸ್ ಕಟ್ಟಬಹುದು. 1 ರಿಂದ 10ನೇ ತರಗತಿಯವರೆಗೆ ಮುಂಗಡವಾಗಿ ದಾಖಲಾತಿ ಮಾಡಿಸಬಹುದು. ಹಣ ಮುಂಗಡ ಪಾವತಿ ಮಾಡಿದ್ರೆ, ಫೀಸ್ ಹೆಚ್ಚಳದ ಬಿಸಿ ತಟ್ಟಲ್ಲ ಅಂತ ಶಾಲೆ ಸುತ್ತೋಲೆ ಹೊರಡಿಸಿದೆ.

    ಉದಾಹರಣೆಗೆ ಒಂದು ಮಗುವಿಗೆ ವರ್ಷಕ್ಕೆ 2 ಲಕ್ಷ ಫೀಸ್ ಅಂದ್ರೆ, 10 ವರ್ಷಕ್ಕೆ 20 ಲಕ್ಷದಲ್ಲಿ ಮಗುವಿನ ಶಿಕ್ಷಣ ಮುಗಿದು ಹೋಗುತ್ತದೆ. ಈ ಆಫರ್ ಸ್ವೀಕಾರ ಮಾಡಿಲ್ಲ ಅಂದ್ರೆ ಒನ್ ಟು ಡಬಲ್ ಹಣ ಪಾವತಿ ಮಾಡಬೇಕಾಗುತ್ತದೆ ಎಂದು ಹೇಳಿ ಪೋಷಕರ ಸೆಳೆಯುವ ಯತ್ನ ಮಾಡುತ್ತಿದೆ.

    ಈ ವಿಚಾರಕ್ಕೆ ಸಂಬಂಧ ಪೋಷಕರ ಧ್ವನಿಯಾಗಿ ವಾಯ್ಸ್ ಆಫ್ ಪೇರೆಂಟ್ಸ್ ಅಸೋಸಿಯೇಶನ್ ಆಕ್ರೋಶ ವ್ಯಕ್ತಪಡಿಸಿದೆ. 10 ವರ್ಷ ಒಂದೇ ಶಾಲೆಯಲ್ಲಿ ಮಕ್ಕಳನ್ನು ಕಟ್ಟಿ ಹಾಕಿದ ಹಾಗೇ ಆಗುತ್ತದೆ. ಶಿಕ್ಷಣದಲ್ಲಿ ವ್ಯಾಪಾರೀಕರಣವಾದರೆ ಮೌಲ್ಯಾಧಾರಿತ ಶಿಕ್ಷಣ ಹೇಗೆ ಕೊಡ್ತಾರೆ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಯುವತಿ ಪಾಕ್‌ಗೆ ಗಡೀಪಾರು

    ಸಂಸ್ಥೆ ಮುಂಗಡ ದುಡ್ಡು ಕಟ್ಟಿದ್ರು, ಮಗು ಶಾಲೆ ಬಿಟ್ರೆ ದುಡ್ಡು ವಾಪಸ್ ಕೊಡುವ ಭರವಸೆ ಸಂಸ್ಥೆ ಕೊಡುತ್ತಿದೆ. ಆದರೆ ಎಷ್ಟು ಹಣ ವಾಪಸ್ ಕೊಡ್ತಾರೆ ಅನ್ನೋ ಬಗ್ಗೆ ಸ್ಪಷ್ಟನೆ ಇಲ್ಲ ಅಂತ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ರೀತಿ ಫೀಸ್ ಕಲೆಕ್ಷನ್ ಮಾಡಬಹುದಾ ಏನು ಎನ್ನುವದರ ಬಗ್ಗೆ ಶಿಕ್ಷಣ ಇಲಾಖೆ ಸ್ಪಷ್ಟನೆಯನ್ನು ಕೂಡ ಕೊಟ್ಟಿಲ್ಲ. ಪೋಷಕರು ಮಾತ್ರ ಈ ಆಫರ್ ನೋಡಿ ಸುಸ್ತಾಗಿದ್ದಾರೆ. ಇದನ್ನೂ ಓದಿ: ಕುತೂಹಲಕ್ಕೆ ಕಾರಣವಾಯ್ತು ಕರಾವಳಿ ಸ್ವಾಮೀಜಿಗಳ ಜೊತೆಗಿನ ನಡ್ಡಾ ಸಭೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಫೀಸ್ ಕಟ್ಟಲು ಕಾಲೇಜಿನಿಂದ ಕಿರುಕುಳ- ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

    ಫೀಸ್ ಕಟ್ಟಲು ಕಾಲೇಜಿನಿಂದ ಕಿರುಕುಳ- ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

    – ಡೆತ್ ನೋಟ್ ಬರೆದಿಟ್ಟು, ಬಾತ್ ರೂಂನಲ್ಲಿ ಆತ್ಮಹತ್ಯೆಗೆ ಶರಣು

    ಮಂಗಳೂರು: ಕೊಲೊಸೊ ಆಸ್ಪತ್ರೆಯ ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾಳೆ. ಕಾಲೇಜಿನಿಂದ ಫೀಸ್ ಕಟ್ಟಲು ಒತ್ತಡ ಹಾಕುತ್ತಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೇಲ್ನೋಟಕ್ಕೆ ತಿಳಿದಿದೆ.

    ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿ ಮಂಗಳೂರಿನ ಕದ್ರಿ ಬಳಿಯ ಕೊಲಾಸೊ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದಳು. ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು, ಮಂಗಳವಾರ ಹಾಸ್ಟೆಲ್ ನ ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಳು. ಬಳಿಕ ವಿದ್ಯಾರ್ಥಿನಿಯನ್ನು ರಕ್ಷಿಸಿ, ಮಂಗಳೂರಿನ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಜಿಲೆಟಿನ್ ಇಟ್ಟುಕೊಂಡು ಹೆಂಡತಿಯನ್ನು ತಬ್ಬಿದ-ಬಾಂಬ್ ಸ್ಫೋಟವಾಗಿ ಇಬ್ಬರು ಸಾವು

    ಕಾಲೇಜಿನಲ್ಲಿ ಫೀಸ್ ಕಟ್ಟಲು ಒತ್ತಡ ಹೆಚ್ಚಾದ ಹಿನ್ನೆಲೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಫೀಸ್ ಕಟ್ಟುವ ವಿಚಾರದಲ್ಲಿ ಕಾಲೇಜಿನಿಂದ ಕಿರುಕುಳ ನೀಡಲಾಗುತ್ತಿತ್ತು ಎಂಬ ಶಂಕೆ ಸಹ ವ್ಯಕ್ತವಾಗಿದೆ. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

  • ಲಾಕ್ ಡೌನ್ ಬಿಟ್ಟು ಕೆಲವೇ ದಿನಗಳಲ್ಲಿ ಶುರುವಾಗಿದೆ ಖಾಸಗಿ ಶಾಲೆಗಳ ಫೀಸ್ ಕಿರುಕುಳ

    ಲಾಕ್ ಡೌನ್ ಬಿಟ್ಟು ಕೆಲವೇ ದಿನಗಳಲ್ಲಿ ಶುರುವಾಗಿದೆ ಖಾಸಗಿ ಶಾಲೆಗಳ ಫೀಸ್ ಕಿರುಕುಳ

    ಆನೇಕಲ್: ರಾಜ್ಯದಲ್ಲಿ ಸರ್ಕಾರ ಅನ್‍ಲಾಕ್ ಘೋಷಿಸುತ್ತಿದ್ದಂತೆಯೇ ಕೆಲವು ಖಾಸಗಿ ಶಾಲೆಗಳು ಶುರುವಾಗಿದ್ದು ಫೀಸ್ ಕಟ್ಟುವಂತೆ ಪೋಷಕರಿಗೆ ಕಿರುಕುಳ ನೀಡುತ್ತಿದ್ದಾರೆ.

    ಕೊರೊನಾ ಎರಡನೇ ಅಲೆಯಿಂದಾಗಿ ಜನಸಾಮಾನ್ಯರಿಗೆ ಎಲ್ಲಿಲ್ಲದ ಸಮಸ್ಯೆ ಎದುರಾಗಿದೆ. ಹೀಗಿರುವಾಗ ವಿದ್ಯಾರ್ಥಿಗಳ ಭವಿಷ್ಯದ ಸಲುವಾಗಿ ಶಿಕ್ಷಣ ತಜ್ಞರು ಶಾಲೆಗಳನ್ನು ತೆರೆಯ ಬೇಕೆಂದು ಸಲಹೆ ನೀಡಿದೆ. ಆದರೆ ಈ ಕುರಿತಂತೆ ಸರ್ಕಾರ ಯಾವುದೇ ಅಧಿಕೃತ ಆದೇಶವನ್ನು ನೀಡಿಲ್ಲ. ಹೀಗಿರುವಾಗ ಆನೇಕಲ್ ತಾಲೂಕಿನ ಸುತ್ತಮುತ್ತಲಿನ ಅನೇಕ ಖಾಸಗಿ ಶಾಲೆಗಳು ಲಾಕ್ ಡೌನ್ ತೆಗೆದು ಕೇವಲ ಮೂರು ದಿನಗಳಲ್ಲಿ ಆರಂಭವಾಗಿದೆ. ಸರಕಾರದ ಆದೇಶಕ್ಕಾಗಿ ಕಾಯದೇ ಈಗಾಗಲೇ ಶಾಲೆಗಳಲ್ಲಿ ದಾಖಲಾತಿ ಪ್ರಾರಂಭ ಮಾಡಿ ಪೋಷಕರಿಗೆ ಶಾಲಾ ಶುಲ್ಕ ಕಟ್ಟುವಂತೆ ಟಾರ್ಚರ್ ನೀಡಲು ಮುಂದಾಗಿವೆ.

    ಒಂದೆಡೆ ಆನ್‍ಲೈನ್ ಕ್ಲಾಸ್‍ಗಳನ್ನು ಶುರು ಮಾಡಿ ಫೀಸ್ ಕಟ್ಟದ ವಿದ್ಯಾರ್ಥಿಗಳಿಗೆ ಆನ್‍ಲೈನ್ ಕ್ಲಾಸ್ ನೀಡುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತುಂಬ ತೊಂದರೆಯಾಗುತ್ತಿದೆ. ಈ ಕೂಡಲೇ ಸಂಬಂಧಪಟ್ಟಂತಹ ಸಚಿವರು ಹಾಗೂ ಅಧಿಕಾರಿಗಳು ಇತ್ತ ಗಮನಹರಿಸಬೇಕೆಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಕ್ಯಾಂಡಿಡೇಟ್ ಎಂದು ಘೋಷಿಸಿದರೆ 150 ಸೀಟ್ ಫಿಕ್ಸ್: ಅಖಂಡ

    ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಮಾತನಾಡಿ, ಈಗಾಗಲೇ ಸರಕಾರ ಯಾವುದೇ ಮಾರ್ಗಸೂಚಿ ಪ್ರಕಟ ಮಾಡಿಲ್ಲ. ದಾಖಲಾತಿಯನ್ನು ಶಾಲೆಗಳು ಶುರು ಮಾಡಲಿ. ಆದರೆ ಫೀಸ್ ಕಟ್ಟುವಂತೆ ಸರಕಾರದ ಆದೇಶ ಬರುವವರೆಗೆ ಪೋಷಕರಿಗೆ ಒತ್ತಾಯಿಸಬಾರದು. ಜುಲೈ ಒಂದರಿಂದ ಶಾಲೆಗಳು ಶುರುವಾಗುವ ಸಾಧ್ಯತೆಗಳಿದ್ದು, ಈ ಕುರಿತಂತೆ ಶಾಲೆಗಳು ಫೀಸ್ ವಿಚಾರದಲ್ಲಿ ಕಾಲಾವಕಾಶ ನೀಡಬೇಕು. ಎಲ್‍ಕೆಜಿ, ಯುಕೆಜಿ ಮಕ್ಕಳನ್ನು ಕರೆಸಿ ಎಕ್ಸಾಮ್ ನಡೆಸಲು ಮುಂದಾಗಿದ್ದಾರೆ ಅಂತಹವರ ವಿರುದ್ದ ಕಾನೂನು ಕ್ರಮ ತೆಗೆದು ಕೊಳ್ಳುತ್ತೇವೆಂದು ಆನೇಕಲ್ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಡಿ.ಕೆ ಶಿವಕುಮಾರ್​ಗೆ ಇನ್ನೂ ವಯಸ್ಸಿದ್ದು, ಸಿದ್ದರಾಮಯ್ಯ ಸಿಎಂ ಆಗಲಿ: ರಾಮಪ್ಪ

  • ಪೋಷಕರು ಅನುಕೂಲಕರವಾಗಿದ್ರೆ ಶುಲ್ಕ ಪಾವತಿಸಿ: ಸುರೇಶ್ ಕುಮಾರ್

    ಪೋಷಕರು ಅನುಕೂಲಕರವಾಗಿದ್ರೆ ಶುಲ್ಕ ಪಾವತಿಸಿ: ಸುರೇಶ್ ಕುಮಾರ್

    – ಖಾಸಗಿ ಶಾಲಾ ಶಿಕ್ಷಕರು ತರಕಾರಿ ಮಾರೋ ದುಸ್ಥಿತಿ ಬಂದಿದೆ
    – ಎಲ್ಲಾ ಸಮಸ್ಯೆಗೂ ಸೂಕ್ತ ಪರಿಹಾರ ಒದಗಿಸ್ತೀನಿ
    – ಝೀರೋ ಬಡ್ಡಿದರದಲ್ಲಿ ಲೋನ್ ಬಗ್ಗೆ ಚರ್ಚೆ

    ಚಾಮರಾಜನಗರ: ಯಾವ ಪೋಷಕರು ಅನುಕೂಲಕರವಾಗಿದ್ದಾರೆ ಅಂತಹವರು ಶುಲ್ಕ ಪಾವತಿಸಿ. ಫೀಸ್ ಪಾವತಿ ಮಾಡಿದ್ರೆ ಶಿಕ್ಷಕರಿಗೆ ವೇತನ ಕೊಡಲೂ ಅನುಕೂಲವಾಗುತ್ತೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಷ್ಟೇ ಮಹತ್ವವನ್ನು ಖಾಸಗಿ ಶಾಲೆಗಳು ವಹಿಸಿವೆ. ಖಾಸಗಿ ಶಾಲೆ ಬೇಕು ಅಂತ ಇಷ್ಟಪಟ್ಟು, ಕಷ್ಟಪಟ್ಟು ಪೋಷಕರು ಶಾಲೆಗೆ ಸೇರಿಸಿದ್ದಾರೆ. ಶಾಲೆಗೆ, ಪೋಷಕರಿಗೆ ಆರೋಗ್ಯಕರ ಸಂಬಂಧವಿರಬೇಕು. ಖಾಸಗಿ ಶಾಲಾ ಸಂಘಟನೆ ಜೊತೆ ನಾನು ಮಾತುಕತೆ ನಡೆಸ್ತೇನೆ ಎಂದರು.

    ಯಾವ ಪೋಷಕರು ಅನುಕೂಲಕರವಾಗಿದ್ದಾರೆ ಅಂತಹವರು ಫೀಸ್ ಪಾವತಿಸಿ. ಹೀಗೆ ಮಾಡಿದ್ದಲ್ಲಿ ಶಿಕ್ಷಕರಿಗೆ ವೇತನ ಕೊಡಲು ಸಹಾಯವಾಗುತ್ತೆ. ಈಗಾಗಲೇ ಖಾಸಗಿ ಶಾಲಾ ಶಿಕ್ಷಕರು ತರಕಾರಿ ಮಾರುವ ದುಸ್ಥಿತಿ ಬಂದಿದೆ. ಪೋಷಕರು ಹಾಗೂ ಶಾಲೆಯ ನಡುವೆ ಸಂಘರ್ಷ ಉಂಟಾಗಬಾರದು. ಬೆಂಗಳೂರಿಗೆ ಹೋದ ನಂತರ ಸಭೆ ನಡೆಸಿ ಪರಿಹಾರ ಮಾಡ್ತೀನಿ ಎಂದು ಸ್ಪಷ್ಟಪಡಿಸಿದರು.

    ಖಾಸಗಿ ಶಾಲೆಗೆ ಲೋನ್ ಕೊಡಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಲೋನ್ ಕೊಡಿಸುವ ಪ್ರಸ್ತಾಪ ಬಂದಿತ್ತು. ಕೆಲವು ಖಾಸಗಿ ಶಾಲೆಗಳು ಝೀರೋ ಬಡ್ಡಿದರದಲ್ಲಿ ಲೋನ್ ಕೊಡಿಸಿ ಅಂತ ಕೇಳಿದ್ದವು. ಕೆಲವು ಬ್ಯಾಂಕರ್ಸ್ ಜೊತೆ ಮಾತನಾಡಿದಾಗ ಹಿಂದೇಟು ಹಾಕಿದ್ದಾರೆ. ನಮ್ಮ ಆರ್ಥಿಕ ಇಲಾಖೆ ಜೊತೆ ಚರ್ಚೆ ನಡೆಸಿ ಲೋನ್ ಕೊಡಿಸಬಹುದಾ ಅಂತ ಯೋಚಿಸ್ತೀನಿ ಎಂದು ಹೇಳಿದರು.

    ಕೆಲವು ಶಾಲೆಗಳ ಪ್ರಕಾರ ಲೋನ್ ಸಿಕ್ಕಿದ್ರೆ ಸದ್ಯದ ಪರಿಸ್ಥಿತಿಯಿಂದ ಪಾರಾಗಬಹುದು ಎಂಬ ಅನಿಸಿಕೆಯಿದೆ. ಗೇಟ್ ಆಚೆ ನಿಂತು ಪ್ರತಿಭಟನೆ ಮಾಡೋದು ಒಳ್ಳೆಯ ಬೆಳವಣಿಗೆಯಲ್ಲ. ಪೋಷಕರು, ಟೀಚರ್ಸ್ ಜೊತೆ ಕೂಡ ಮಾತನಾಡ್ತೀನಿ. ಕೋವಿಡ್ ನಿಂದ ಇಂತಹ ದೊಡ್ಡ ಸಮಸ್ಯೆ ಎದುರಾಗಿದೆ ಎಂದು ತಿಳಿಸಿದರು.

    ಕಳೆದ 8 ತಿಂಗಳಿಂದ ಖಾಸಗಿ ಶಾಲಾ ಶಿಕ್ಷಕರು, ಶಿಕ್ಷಕರೇತರ ಸಿಬ್ಬಂದಿಗೆ ಸಮಸ್ಯೆಯಾಗಿದೆ. ಅದಕ್ಕೆ ಒಂದು ಕಂತಿನ ಶುಲ್ಕ ಕಟ್ಟಿಸಿಕೊಳ್ಳುವಂತೆ ಸೂಚನೆ ನೀಡಿದ್ದೇವೆ. ಕೆಲವೆಡೆ ಶಿಕ್ಷಕರು ಕೆಲಸ ಕಳೆದುಕೊಂಡಿದ್ದಾರೆ. ಮತ್ತೆ ಕೆಲ ಶಾಲೆಗಳು ಅರ್ಧ ಸಂಬಳ ನೀಡ್ತಿವೆ. ಇದೆಲ್ಲ ಗಮನಕ್ಕೆ ಬಂದಿದೆ. ಎಲ್ಲಾ ಸಮಸ್ಯೆಗೂ ಸೂಕ್ತ ಪರಿಹಾರ ಒದಗಿಸ್ತೀನಿ. ಲೋನ್ ಕೊಡಿಸುವ ಕುರಿತು ಸಾಧಕ-ಬಾಧಕ ಚರ್ಚಿಸಿ ಕ್ರಮ ಕೈಗೊಳ್ತೀನಿ ಎಂದು ಸಚಿವರು ಭರವಸೆ ನೀಡಿದ್ದಾರೆ.

  • ಪೋಷಕರಿಗೆ ಆರ್ಥಿಕ ಸಂಕಷ್ಟ – 70 ಲಕ್ಷ ಫೀಸ್ ಮನ್ನಾ ಮಾಡಿದ ಶಾಸಕ ಸುಕುಮಾರ ಶೆಟ್ಟಿ

    ಪೋಷಕರಿಗೆ ಆರ್ಥಿಕ ಸಂಕಷ್ಟ – 70 ಲಕ್ಷ ಫೀಸ್ ಮನ್ನಾ ಮಾಡಿದ ಶಾಸಕ ಸುಕುಮಾರ ಶೆಟ್ಟಿ

    ಉಡುಪಿ: ದೇಶಾದ್ಯಂತ ಕೊರೊನಾ ಆವರಿಸಿದ್ದು, ಆರ್ಥಿಕವಾಗಿ ಸಮಸ್ಯೆಯಲ್ಲಿರುವ ಪೋಷಕರು ತಮ್ಮ ಮಕ್ಕಳ ಫೀಸ್ ಕಟ್ಟಲಾಗದೆ ಸಂಕಷ್ಟದಲ್ಲಿದ್ದಾರೆ. ಈ ನಡುವೆ ಉಡುಪಿ ಜಿಲ್ಲೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಈ ವರ್ಷ ತಮ್ಮ ಶಿಕ್ಷಣ ಸಂಸ್ಥೆಗಳ 70 ಲಕ್ಷ ಫೀಸ್ ಮನ್ನಾ ಮಾಡಲು ನಿರ್ಧಾರ ಮಾಡಿದ್ದಾರೆ.

    ಕಳೆದ ವರ್ಷದ ಒಂದೂವರೆ ಕೋಟಿ ಫೀಸ್ ಮಕ್ಕಳಿಂದ ಬಾಕಿಯಿದೆ. ಮಕ್ಕಳಿಗೆ ನಾವು ಶುಲ್ಕಕ್ಕಾಗಿ ಯಾವತ್ತೂ ಒತ್ತಡ ಹೇರಿಲ್ಲ. ಈ ಬಾರಿ ಫೀಸ್ ಶುಲ್ಕದ ಪೈಕಿ 70 ಲಕ್ಷ ರುಪಾಯಿ ಮನ್ನಾ ಮಾಡ್ತೇವೆ. ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿರುವ ಅವರು, ನಾಲ್ಕು ಶಿಕ್ಷಣ ಸಂಸ್ಥೆ ಹೊಂದಿದ್ದಾರೆ. ಪ್ರಾಥಮಿಕದಿಂದ ಪದವಿವರೆಗೆ ನಾಲ್ಕು ಸಂಸ್ಥೆಗಳನ್ನು ಟ್ರಸ್ಟ್ ಮೂಲಕ ನಡೆಸುತ್ತಿದ್ದಾರೆ.

    ಸಮಾಜದ ಕಟ್ಟ ಕಡೆಯ ಕುಟುಂಬದ ಮಕ್ಕಳಿಗೆ ಫೀಸ್ ತೆಗೆದುಕೊಳ್ಳಲ್ಲ. ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ಕೊಡುತ್ತೇವೆ. ಕೆಲ ಕುಟುಂಬಗಳಿಗೆ ಅರ್ಧ ಫೀಸ್ ತೆಗೆದುಕೊಳ್ಳುತ್ತೇವೆ. ಶ್ರೀಮಂತರ ಮಕ್ಕಳಿಗೆ ಫುಲ್ ಫೀಸ್ ಎಂದು ಬೈಂದೂರು ಬಿಜೆಪಿ ಶಾಸಕ ಸುಕುಮಾರ ಶೆಟ್ಟಿ ಹೇಳಿದ್ದಾರೆ. ಶಿಕ್ಷಣ ಗುಣಮಟ್ಟ ವಿಚಾರದಲ್ಲಿ ರಾಜಿ ಇಲ್ಲ. ಒತ್ತಡ ಹೇರಿ, ಬಲವಂತವಾಗಿ ಫೀಸ್ ಕಿತ್ತುಕೊಳ್ಳುವ ಪರಿಪಾಠ ಹಿಂದಿನಿಂದಲೇ ಇಲ್ಲ. ಮುಂದೆಯೂ ಮಾಡದಂತೆ ಸಿಬ್ಬಂದಿಗೆ ಸೂಚಿಸಿರುವುದಾಗಿ ಶಾಸಕರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದರು.

    ನಮ್ಮ ನಾಲ್ಕು ಶಾಲೆಗಳನ್ನು ಬೆಂಗಳೂರಿನ ಶಾಲೆಗಳ ಜೊತೆ ತುಲನೆ ಮಾಡಬೇಡಿ. ನಮ್ಮ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ 15-18 ಸಾವಿರ, ಪಿಯುಸಿ, ಪದವಿ ಮಕ್ಕಳಿಗೆ 20 ಸಾವಿರ ಫೀಸ್ ಇದೆ. ಮೂರು ಅಥವಾ ನಾಲ್ಕು ಕಂತಿನಲ್ಲಿ ಫೀಸ್ ತೆಗೆದುಕೊಳ್ಳುತ್ತೇವೆ. ಈ ಬಾರಿ ಕೊರೊನಾ ಎಲ್ಲರನ್ನು ಜರ್ಜರಿತ ಮಾಡಿದೆ. ಪೋಷಕರ ಕೈಯಲ್ಲಿ ಕಾಸಿಲ್ಲ, ಹಾಗಂತ ಮಕ್ಕಳಿಗೆ ಶಿಕ್ಷಣ ಕೊಡುವುದು ಅತ್ಯಾವಶ್ಯಕ ಎಂದು ಸುಕುಮಾರ್ ತಿಳಿಸಿದ್ದಾರೆ.

    ಶಿಕ್ಷಕರಿಗೆ ಸಂಬಳ, ಬಸ್ ನಿರ್ವಹಣೆ, ಸಿಬ್ಬಂದಿ ಸಂಬಳ 45 ಲಕ್ಷದಷ್ಟು ಪ್ರತೀ ತಿಂಗಳಿಗೆ ಖರ್ಚು ಬರುತ್ತದೆ. ಬೈಂದೂರು ಗ್ರಾಮೀಣ ಭಾಗದ ಶಾಲೆ, ಇಲ್ಲಿನ ಮಕ್ಕಳನ್ನು ಪ್ರತಿಭಾವಂತರನ್ನು ಮಾಡುವ ಗುರಿ ಇಟ್ಟುಕೊಂಡಿದ್ದೇವೆ. ಎಲ್ಲಾ ಮಕ್ಕಳಿಗೆ ಶಿಕ್ಷಣ ಕೊಡಿಸುವ ಅಗತ್ಯತೆ ಇದೆ. ಆರ್ಥಿಕವಾಗಿ ಸಬಲರಾಗಿರುವವರು ಫೀಸ್ ವಿಚಾರದಲ್ಲಿ ಚೌಕಾಶಿ ಮಾಡಬಾರದು ಎಂದು ಶಾಸಕ ಸುಕುಮಾರ ಶೆಟ್ಟಿ ವಿನಂತಿ ಮಾಡಿದರು.

  • ಶುಲ್ಕ ನೀಡದಿದ್ರೆ ರೋಗಿಯ ಕೈ ಸಹ ಮುಟ್ಟಲ್ಲ – ಸರ್ಕಾರಿ ವೈದ್ಯನ ಲಂಚಾವತಾರ

    ಶುಲ್ಕ ನೀಡದಿದ್ರೆ ರೋಗಿಯ ಕೈ ಸಹ ಮುಟ್ಟಲ್ಲ – ಸರ್ಕಾರಿ ವೈದ್ಯನ ಲಂಚಾವತಾರ

    ರಾಯಚೂರು: ಆರೋಗ್ಯ ಸಚಿವ ಶ್ರೀರಾಮುಲು ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿ ತಿಳಿಯಲು ರಾಯಚೂರಿನ ವೈದ್ಯಕೀಯ ಬೋಧಕ ಆಸ್ಪತ್ರೆ ರಿಮ್ಸ್ ನಲ್ಲಿ ಮಲಗಿಹೋಗಿದ್ದೇ ಬಂತು. ಆದರೆ ಜಿಲ್ಲೆಯ ಗ್ರಾಮೀಣ ಭಾಗದ ಆಸ್ಪತ್ರೆಗಳ ಸ್ಥಿತಿ ಮಾತ್ರ ಬದಲಾಗಿಲ್ಲ.

    ಡಾ. ವಿಶ್ವನಾಥ್ ಸಿಂಧನೂರಿನ ಬಾದರ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಡಾಕ್ಟರ್ ದುಡ್ಡು ಕೊಡದಿದ್ದರೆ ಯಾವ ರೋಗಿಗೂ ಚಿಕಿತ್ಸೆಯನ್ನೇ ನೀಡುವುದಿಲ್ಲ. ಸುಮಾರು 10 ವರ್ಷಗಳಿಂದ ಇಲ್ಲೇ ವೈದ್ಯರಾಗಿರುವ ಡಾ.ವಿಶ್ವನಾಥ್ ಈ ವಿಚಾರದಲ್ಲಿ ಗ್ರಾಮಸ್ಥರ ಆಕ್ರೋಶಕ್ಕೂ ಗುರಿಯಾಗಿದ್ದಾರೆ.

    ರೋಗಿಗಳು ಕಡಿಮೆ ಹಣ ಕೊಟ್ಟರೆ ಇಷ್ಟೇ ಕೊಡಬೇಕು ಎಂದು ಬೇಡಿಕೆ ಮಾಡಿ ರೋಗಿಗಳಿಂದ ಹಣ ಕೀಳುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. 200 ರೂಪಾಯಿಯಿಂದ ಒಂದೊಂದು ಚಿಕಿತ್ಸೆಗೆ ಒಂದೊಂದು ಫೀಸ್ ಅನ್ನು ಫಿಕ್ಸ್ ಮಾಡಿದ್ದಾರೆ. ಇದರ ಜೊತಗೆ ಒಮ್ಮೊಮ್ಮೆ ವಾರಗಟ್ಟಲೇ ಆಸ್ಪತ್ರೆಯ ಕಡೆ ಬಾರದೇ ಇದ್ದರೂ ಹಾಜರಾತಿಯಲ್ಲಿ ಮಾತ್ರ ಪ್ರತಿ ದಿನ ಹಾಜರಿ ಇರುತ್ತದೆ.

    ಬಾದರ್ಲಿ ಸೇರಿದಂತೆ ಸುತ್ತಮುತ್ತಲ ಗಿಣಿವಾರ, ಒಳಬಳ್ಳಾರಿ, ಯದ್ಲಡ್ಡಿ, ಆರ್ ಎಚ್ ಕ್ಯಾಂಪ್ 5, ಅಲಬನೂರು, ಅರೆಕನೂರು ಗ್ರಾಮಗಳ ಜನ ಈ ಆಸ್ಪತ್ರೆಯ ಮೇಲೆಯೇ ಅವಲಂಬಿತರಾಗಿದ್ದಾರೆ.

    ವೈದ್ಯನ ಹಣಬಾಕುತನಕ್ಕೆ ಬೇಸತ್ತು ಜನರೇ ತಮ್ಮ ಮೊಬೈಲ್ ನಲ್ಲಿ ಲಂಚಾವತಾರ ಸೆರೆ ಹಿಡಿದಿದ್ದಾರೆ. ಈ ಹಿಂದೆ ಹಿರಿಯ ಅಧಿಕಾರಿಗಳಿಗೆ ಮೌಖಿಕ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಖಾಸಗಿ ಆಸ್ಪತ್ರೆಗೆ ಹೋಗಲಾಗದೆ ಗ್ರಾಮೀಣ ಭಾಗದ ಬಡ ರೋಗಿಗಳು ಸರ್ಕಾರಿ ಆಸ್ಪತ್ರೆಗೆ ಹೋದರೆ ಇಲ್ಲೂ ಫೀಸ್ ಎಂದು ಈ ವೈದ್ಯ ಹಣ ಕೀಳುತ್ತಿದ್ದಾರೆ.

    ಒಂದೆಡೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ ಅನ್ನೋ ಕೊರಗಿದ್ದರೆ ಇದ್ದ ವೈದ್ಯರಲ್ಲಿ ಇಂತಹವರು ರೋಗಿಗಳಿಂದ ಹಣ ವಸೂಲಿ ನಡೆಸಿದ್ದಾರೆ. ಒಂದು ವೇಳೆ ಈ ವೈದ್ಯನನ್ನ ಅಮಾನತು ಮಾಡಿದರೆ ಬೇರೆ ವೈದ್ಯರನ್ನ ನಿಯೋಜನೆ ಮಾಡ್ತಾರೋ ಇಲ್ವೋ ಅನ್ನೋ ಭಯ ಗ್ರಾಮಸ್ಥರಲ್ಲಿದೆ. ಕನಿಷ್ಠ ಈಗಲಾದರೂ ಮೇಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತಿರುವ ಆರೋಗ್ಯ ಸಚಿವ ಶ್ರೀರಾಮುಲು ಇಂತಹ ವೈದ್ಯರ ಕಡೆ ಗಮನಹರಿಸಬೇಕು ಎಂದು ಸ್ಥಳಿಯರು ಒತ್ತಾಯ ಮಾಡಿದ್ದಾರೆ.

  • ಫೀಸ್ ಕೊಡಬೇಡ, ರೂಂಗೆ ಬಾ ಎಂದ ಪ್ರಿನ್ಸಿಪಾಲ್ ಮಗ!

    ಫೀಸ್ ಕೊಡಬೇಡ, ರೂಂಗೆ ಬಾ ಎಂದ ಪ್ರಿನ್ಸಿಪಾಲ್ ಮಗ!

    ಬೆಂಗಳೂರು: ಫೀಸ್ ಕಟ್ಟೋದು ಸ್ವಲ್ಪ ಲೇಟ್ ಆಗುತ್ತೆ ಎಂದ ವಿದ್ಯಾರ್ಥಿ ತಾಯಿಗೆ ಅಡ್ಜೆಸ್ಟ್ ಆಗು ಎಂದು ಪ್ರಿನ್ಸಿಪಾಲ್ ಮಗ ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನ ನಾಗವಾರ ಬಳಿ ಇರುವ ಇಮ್ಯಾನುಯಲ್ ಸ್ಕೂಲ್‍ನಲ್ಲಿ ನಡೆದಿದೆ.

    ರೂತ ಚೆಲುವರಾಜ್ ಅಸಭ್ಯವಾಗಿ ವರ್ತಿಸಿದ ಪ್ರಿನ್ಸಿಪಾಲ್ ಮಗ. ಫೀಸ್ ಕಟ್ಟುವುದು ತಡವಾಗಿದ್ದಕ್ಕೆ ವಿದ್ಯಾರ್ಥಿ ಮಹಮದ್ ಫರಾನ್ ಖಾನ್‍ನ ಆಡ್ಮೀಷನ್ ಮಾಡಿಕೊಳ್ಳದೆ ಲೇಡಿ ಪ್ರಿನ್ಸಿಪಾಲ್ ಸತಾಯಿಸುತ್ತಿದ್ದಳು. ಅಲ್ಲದೆ ಶಾಲೆಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಲು ಹೋದ ವಿದ್ಯಾರ್ಥಿಯ ತಾಯಿಯೊಂದಿಗೆ ಚೆಲುವರಾಜ್ ಅಸಭ್ಯವಾಗಿ ವರ್ತಿಸಿದ್ದಾನೆ.

    ಕಾಮುಕ ಚೆಲುವರಾಜ್ ಫೀಸ್ ಕೊಡಬೇಡ, ರೂಂಗೆ ಬಾ ಎಂದು ಕೊಠಡಿಯಲ್ಲೆ ವಿದ್ಯಾರ್ಥಿ ತಾಯಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ ಫೀಸ್ ಕಟ್ಟಲು ಆಗಿಲ್ಲ ಅಂದರೆ ನನ್ನ ಜೊತೆ ಅಡ್ಜಸ್ಟ್ ಮಾಡಿಕೊಳ್ಳುವಂತೆ ರೂತ ಚೆಲುವರಾಜ್ ವಿದ್ಯಾರ್ಥಿಯ ತಾಯಿಯ ಬಳಿ ಹೇಳಿದ್ದಾನೆ. ಕಾಮುಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿಯ ತಾಯಿ ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪ್ರಕರಣ ದಾಖಲಾಗಿದೆ.

    ದೂರಿನಲ್ಲಿ ಏನಿದೆ?
    ನನ್ನ ಮಗ ಇಮ್ಯಾನುಯಲ್ ಶಾಲೆಯಲ್ಲಿ ಓದುತ್ತಿದ್ದು, 8ನೇ ತರಗತಿ ಅಡ್ಮಿಷನ್ ಕೇಳಲು ಶಾಲೆಗೆ ಹೋದಾಗ ಚೆಲುವರಾಜ್ ಮತ್ತು ಸ್ಯಾಮ್ ಅವರು ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೆ ನನ್ನ ಮೈಕೈ ಮುಟ್ಟಿ ಹೊರತಳ್ಳಿದ್ದಾರೆ. ಫೀಸ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ ಫೀಸ್ ಕಟ್ಟಲು ತೊಂದರೆಯಾದರೆ ನನ್ನ ಜೊತೆ ಹೇಳು ಅಡ್ಮಿಷನ್ ಮತ್ತು ಫೀಸ್ ಕಡಿಮೆ ಮಾಡುತ್ತೇನೆ ಎಂದಾಗ ನಾನು ಒಪ್ಪದೇ ಪ್ರತಿಭಟಿಸಿದಕ್ಕೆ ಚೆಲುವರಾಜ್ ಕೋಪಿತವಾಗಿ ವರ್ತಿಸಿ ನನ್ನನ್ನು ಬಲವಂತವಾಗಿ ಕೈಮುಟ್ಟಿ ಹೊರ ಹಾಕಿದ್ದಾನೆ. ಇದು ಮೇ 28ರಂದು ಈ ಘಟನೆ ನಡೆದಿದ್ದು, ಅಲ್ಲಿಂದಾಚೆಗೆ ಸುಮಾರು 3-4 ಬಾರಿ ಶಾಲೆಗೆ ಹೋದಾಗ ಕೂಡ ಆಡ್ಮಿಷನ್ ಮಾಡಿಕೊಳ್ಳದೇ ಚೆಲುವರಾಜ್, ಸ್ಯಾಮ್ ದುವರ್ತನೆ ತೋರಿದ್ದಾರೆ. ಈಗ ನನ್ನ ಮಗ ಇದನ್ನೆಲ್ಲ ನೋಡಿ ಶಾಲೆಗೆ ಹೋಗುವುದಿಲ್ಲ ಎಂದು ಹೇಳುತ್ತಿದ್ದಾನೆ. ದಯವಿಟ್ಟು ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಿ ಎಂದು ಕೋರಿಕೊಳ್ಳುತ್ತೇನೆ.

  • ಪರೀಕ್ಷೆಯಲ್ಲಿ ಫೇಲ್ ಆಗಲು ಪ್ರೇಯಸಿ ಕಾರಣ – ಫೀಸ್ ಹಣ ಕೊಡುವಂತೆ ಪ್ರಿಯಕರ ಒತ್ತಾಯ

    ಪರೀಕ್ಷೆಯಲ್ಲಿ ಫೇಲ್ ಆಗಲು ಪ್ರೇಯಸಿ ಕಾರಣ – ಫೀಸ್ ಹಣ ಕೊಡುವಂತೆ ಪ್ರಿಯಕರ ಒತ್ತಾಯ

    ಮುಂಬೈ: ಮೆಡಿಕಲ್ ಪರೀಕ್ಷೆಯಲ್ಲಿ ನಾನು ಫೇಲ್ ಆಗಿದ್ದಕ್ಕೆ ನನ್ನ ಗೆಳತಿಯೇ ಕಾರಣ. ಈಗ ಆಕೆ ನನ್ನ ಫೀಸ್ ಭರಿಸಬೇಕು ಎಂದು ಹಠ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ ಘಟನೆ ಮಹಾರಾಷ್ಟ್ರದ ಔರಂಗಬಾದ್‍ನಲ್ಲಿ ನಡೆದಿದೆ.

    ಬೀಡ್ ಜಿಲ್ಲೆ ಮೂಲದ 21 ವರ್ಷದ ವಿದ್ಯಾರ್ಥಿ ಹೋಮಿಯೋಪಥಿ ಹಾಗೂ ಸರ್ಜರಿ ಓದುತ್ತಿದ್ದನು. ವಿದ್ಯಾರ್ಥಿ ಮೊದಲ ವರ್ಷದಲ್ಲಿ ಫೇಲ್ ಆಗಿದ್ದನು. ಅಲ್ಲದೆ ಮೊದಲ ವರ್ಷದಲ್ಲಿ ಖರ್ಚಾದ ಹಣವನ್ನು ಪಾವತಿಸಲು ಆತ ತನ್ನ ಪ್ರೇಯಸಿಗೆ ಒತ್ತಾಯಿಸಿದ್ದಾನೆ.

    ವಿದ್ಯಾರ್ಥಿ ಔರಂಗಾಬಾದ್‍ನ ಕಾಲೇಜ್‍ವೊಂದರಲ್ಲಿ ನಾಲ್ಕು ವರ್ಷದ ಬಿಎಚ್‍ಎಂಎಸ್(ಹೋಮಿಯೋಪಥಿ) ಕೋರ್ಸ್‍ಗೆ ಅಡ್ಮಿಶನ್ ಮಾಡಿಸಿದ್ದ. ಅದೇ ತರಗತಿಯಲ್ಲಿ ಆತನ ಪ್ರೇಯಸಿ ಕೂಡ ಓದುತ್ತಿದ್ದಳು. ಈ ವೇಳೆ ಇಬ್ಬರ ನಡುವೆ ಪ್ರೀತಿ ಆರಂಭವಾಗಿದೆ.

    ನನ್ನ ಪ್ರೇಯಸಿಯ ಕಾರಣ ನನಗೆ ಸರಿಯಾಗಿ ಓದಲು ಸಾಧ್ಯವಾಗಲಿಲ್ಲ. ಹಾಗಾಗಿ ನಾನು ಮೊದಲ ವರ್ಷದಲ್ಲಿ ಫೇಲ್ ಆಗಿದ್ದೇನೆ. ನಾನು ಫೇಲ್ ಆಗಿದ್ದರಿಂದ ನನಗೆ ಮುಂದಿನ ವರ್ಷಕ್ಕೆ ಆಡ್ಮಿಶನ್ ದೊರೆತಿಲ್ಲ. ನಾನು ಪರೀಕ್ಷೆಯಲ್ಲಿ ಫೇಲಾದ ಕಾರಣ ಆಕೆಯ ಫೋಷಕರು ಆಕೆಗೆ ನೀಡಿದ್ದ ಫೀಸ್ ನನಗೆ ಕಟ್ಟಬೇಕು ಎಂದು ಹಠ ಹಿಡಿದಿದ್ದಾನೆ.

    ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕನ ಪ್ರೇಯಸಿ ಆತನಿಂದ ದೂರ ಹೋಗಿದ್ದಾಳೆ. ಪ್ರೇಯಸಿ ದೂರ ಆಗುತ್ತಿರುವುದನ್ನು ನೋಡಿ ಯುವಕ ಆಕೆಗೆ ಮೆಸೇಜ್ ಮಾಡಲು ಶುರು ಮಾಡಿದ್ದಾನೆ. ಬಳಿಕ ತನ್ನ ಪ್ರೇಯಸಿ ಮೋಸ ಮಾಡಿದ್ದಾಳೆ ಎನ್ನುವ ವಿಚಾರ ಆತನಿಗೆ ಗೊತ್ತಾಗಿದೆ.

    ಪ್ರೇಯಸಿ ಮೋಸ ಮಾಡಿದ್ದಕ್ಕೆ ಕೋಪದಿಂದ ಯುವಕ ಆಕೆಯ ಬಗ್ಗೆ ಹಾಗೂ ಆಕೆಯ ಕುಟುಂಬದ ಬಗ್ಗೆ ಕೆಟ್ಟದಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಅಲ್ಲದೆ ಫೀಸ್ ಹಣ ನೀಡಲಿಲ್ಲ ಎಂದರೆ ಯುವತಿ ಜೊತೆಯಿರುವ ಅಶ್ಲೀಲ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

  • ಫೀಸ್ ಕಟ್ಟದ್ದಕ್ಕೆ 25 SSLC ವಿದ್ಯಾರ್ಥಿಗಳನ್ನ ಪರೀಕ್ಷೆಯಿಂದ ಹೊರ ಹಾಕಿದ್ರು!

    ಫೀಸ್ ಕಟ್ಟದ್ದಕ್ಕೆ 25 SSLC ವಿದ್ಯಾರ್ಥಿಗಳನ್ನ ಪರೀಕ್ಷೆಯಿಂದ ಹೊರ ಹಾಕಿದ್ರು!

    ಚಾಮರಾಜನಗರ: ಶೈಕ್ಷಣಿಕ ಶುಲ್ಕ ಪಾವತಿ ಮಾಡಿಲ್ಲವೆಂದು ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿದ್ದ 25 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕೂರಿಸದೇ ಕೊಠಡಿಯಿಂದ ಹೊರ ಹಾಕಿದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

    ಕೊಳ್ಳೇಗಾಲದ ಜಿ.ವಿ.ಗೌಡ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭವಾಗಿದ್ದವು. ಆದರೆ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶುಲ್ಕ ಪಾವತಿ ಮಾಡಿರಲಿಲ್ಲ. ಹೀಗಾಗಿ ಅವರನ್ನು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿ ಆಡಳಿತ ಮಂಡಳಿ ಅವಮಾನವೀಯತೆ ಮೆರೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಶಾಲೆಯ ಆಡಳಿತ ಮಂಡಳಿ ವರ್ತನೆಯಿಂದ ಕಂಗಾಲದ ವಿದ್ಯಾರ್ಥಿಗಳು ಶಾಲೆಯಿಂದ ಹೊರಗೆ ಕುಳಿತು ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಎಲ್ಲರಿಗೂ ಒಂದೇ ಮಾದರಿಯಲ್ಲಿ ಶಿಕ್ಷಣ ದೊರಕಬೇಕು ಅಂತಾ ಹೇಳುತ್ತಿದ್ದ ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಕ್ಷೇತ್ರದಲ್ಲಿ ಈ ರೀತಿಯ ಘಟನೆ ನಡೆದಿದೆ.

    ಇಂತಹದ್ದೇ ಪ್ರಕರಣವೊಂದು ಬೆಂಗಳೂರಿನ ಜ್ಞಾನಜ್ಯೋತಿ ಶಾಲೆಯಲ್ಲಿ ಇದೇ ಮಾರ್ಚ್ ತಿಂಗಳಿನಲ್ಲಿ ನಡೆದಿತ್ತು. 2018-19ನೇ ಶೈಕ್ಷಣಿಕ ಸಾಲಿನ ಪುಸ್ತಕಗಳ ಶುಲ್ಕ ಪಾವತಿಸದ ಕಾರಣ ನಾಲ್ವರು ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ, ಪರೀಕ್ಷಾ ಕೊಠಡಿಯಿಂದ ಹೊರಹಾಕಿದ್ದರು. ಶಾಲಾ ಆಡಳಿತ ಮಂಡಳಿಯ ಈ ನಡೆಯನ್ನು ವಿರೋಧಿಸಿ ಪರೀಕ್ಷೆಯಿಂದ ವಂಚಿತರಾದ ಮಕ್ಕಳ ಪೋಷಕರು, ಶಾಲೆಯ ಎದುರೇ ಪ್ರತಿಭಟನೆ ನಡೆಸಿ ಜೆಪಿ ನಗರ ಪೊಲೀಸ್ ಠಾಣೆಗೆ ಈ ಕುರಿತು ದೂರು ದಾಖಲಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅವರು ನನಗೆ ಪರೀಕ್ಷೆ ಬರೆಯಲು ಬಿಡಲಿಲ್ಲ, sorry ಅಮ್ಮಾ- ಡೆತ್‍ನೋಟ್ ಬರೆದು 9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ

    ಅವರು ನನಗೆ ಪರೀಕ್ಷೆ ಬರೆಯಲು ಬಿಡಲಿಲ್ಲ, sorry ಅಮ್ಮಾ- ಡೆತ್‍ನೋಟ್ ಬರೆದು 9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ

    ಹೈದರಾಬಾದ್: ಫೀಸ್ ಕಟ್ಟದ ಕಾರಣ ಪರೀಕ್ಷೆ ನಡೆಯುತ್ತಿದ್ದ ವೇಳೆಯೇ ಕ್ಲಾಸ್ ರೂಮಿನಿಂದ ಹೊರಹಾಕಿದ್ದಕ್ಕೆ ಮನನೊಂದು 14 ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ ನಲ್ಲಿ ನಡೆದಿದೆ.

    ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 9ನೇ ತರಗತಿ ಬಾಲಕಿಯನ್ನ ಕ್ಲಾಸ್‍ನಿಂದ ಹೊರಹಾಕಿ ಎಲ್ಲರ ಮುಂದೆ ಅವಮಾನಿಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಬಾಲಕಿಯ ಮೃತದೇಹದ ಬಳಿ ಡೆತ್‍ನೋಟ್ ಪತ್ತೆಯಾಗಿದ್ದು, “ಅವರು ನನಗೆ ಪರೀಕ್ಷೆ ಬರೆಯಲು ಬಿಡಲಿಲ್ಲ, sorry ಅಮ್ಮಾ” ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಾಲಕಿ 2 ಸಾವಿರ ರೂ. ಫೀಸ್ ಕಟ್ಟುವುದು ಬಾಕಿ ಇತ್ತು ಎಂದು ಪೊಲೀಸರು ಹೇಳಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

    ಶಾಲೆಯವರು ನನ್ನ ಹೆಸರು ಕರೆದು ಕ್ಲಾಸ್‍ನಿಂದ ಹೊರಹಾಕಿದಾಗ ನನಗೆ ಅವಮಾನವಾಯಿತು ಎಂದು ಬಾಲಕಿ ಮನೆಗೆ ಬಂದ ನಂತರ ತನ್ನ ಸಹೋದರಿಯೊಂದಿಗೆ ಹೇಳಿಕೊಂಡಿದ್ದಳು. ಆದ್ರೆ ಬಳಿಕ ಮಲ್ಕಜ್ಗಿರಿಯ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಕುಟುಂಬಸ್ಥರ ದೂರಿನನ್ವಯ ಪೊಲೀಸರು ಶಾಲೆಯವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.