Tag: ಫುಡ್ ಕಿಟ್

  • Bengaluru | ಫುಡ್ ಕಿಟ್‌ನಲ್ಲಿ ಸಾಗಿಸುತ್ತಿದ್ದ 8.5 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

    Bengaluru | ಫುಡ್ ಕಿಟ್‌ನಲ್ಲಿ ಸಾಗಿಸುತ್ತಿದ್ದ 8.5 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

    ಬೆಂಗಳೂರು: ಫುಡ್ ಕಿಟ್‌ನಲ್ಲಿಟ್ಟು (Food Kit) ಸಾಗಿಸುತ್ತಿದ್ದ 8.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಡಿಆರ್‌ಐ ಅಧಿಕಾರಿಗಳು (DRI Officials) ವಶಪಡಿಸಿಕೊಂಡ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ನೈಜೀರಿಯಾ ಯುವತಿ ಮಕ್ಕಳ ಆಹಾರದ ಕಿಟ್‌ನಲ್ಲಿ ಡ್ರಗ್ಸ್ ಮಾರಾಟ ಮಾಡಲು ಯತ್ನಿಸಿದ್ದಳು. ಯುವತಿಯಿಂದ 4.5 ಕೆಜಿಯ 8.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಡಿಆರ್‌ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್‌ ನಡುವಿನ ಉದ್ವಿಗ್ನತೆಯಿಂದ ಯುದ್ಧದ ಭೀತಿ – ಗಡಿಯಲ್ಲಿ ಬಂಕರ್‌ ಶುಚಿಗೊಳಿಸುವ ಕಾರ್ಯ ಚುರುಕು

    ಸದ್ಯ ನೈಜೀರಿಯಾ ಯುವತಿಯನ್ನು ಬಂಧಿಸಿದ ಡಿಆರ್‌ಐ 14 ದಿನ ಕಸ್ಟಡಿಗೆ ಪಡೆದಿದೆ. ಇದನ್ನೂ ಓದಿ: Pahalgam Terror Attack | ಮರದಿಂದ ಕೆಳಗಿಳಿದು ಉಗ್ರರ ದಾಳಿ

  • ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ FIR ದಾಖಲು

    ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ FIR ದಾಖಲು

    ಬೆಂಗಳೂರು: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ (Krishnaiah Shetty) ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ (Malleswaram Police Station) ಎಫ್‍ಐಆರ್ ದಾಖಲಾಗಿದೆ.

    ಗಾಂಧಿನಗರ ಕ್ಷೇತ್ರದ ಹೆಸರು ಮತ್ತು ಕೃಷ್ಣಯ್ಯ ಶೆಟ್ಟಿ ಹೆಸರಲ್ಲಿ ಫುಡ್ ಕಿಟ್ (Food Kit) ತಯಾರಿ ಮಾಡಲಾಗುತ್ತಿತ್ತು. ಈ ವೇಳೆ ಖಚಿತ ಮಾಹಿತಿ ಆಧರಿಸಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅಕ್ಕಿ, ಬೆಳೆ, ಬೆಲ್ಲ, ಡ್ರೈಫ್ರೂಟ್ಸ್, ಅಡುಗೆ ಎಣ್ಣೆ ಸೇರಿದಂತೆ ಗೃಹ ಬಳಕೆ ದಿನಸಿ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಸುಮಾರು ಏಳೆಂಟು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಪತ್ತೆಯಾಗಿತ್ತು. ಇದನ್ನೂ ಓದಿ: ಸೆಖೆ ಅಂತಾ ಮನೆ ಮಹಡಿ ಮೇಲೆ ಹೋಗಿ ಮಲಗುವ ಮುನ್ನ ಎಚ್ಚರ!

    ಕೃಷ್ಣಯ್ಯ ಶೆಟ್ಟಿ ಅವರು ಗಾಂಧಿನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚುನಾವಣಾ ಅಧಿಕಾರಿ ಲಕ್ಷ್ಮಣ್ ನೀಡಿದ ದೂರಿನನ್ವಯ FIR ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಕೃಷ್ಣಯ್ಯ ಶೆಟ್ಟಿಗೆ ನೊಟೀಸ್ ನೀಡಲು ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ಬಿಸಿಲ ಬೇಗೆಗೆ ಕಂಗೆಟ್ಟ ಕರುನಾಡಿಗರು- ರಾಜ್ಯಕ್ಕೆ ಮತ್ತೆ ಹೀಟ್ ವೇವ್ ಆತಂಕ

  • ಫುಡ್ ಕಿಟ್‍ಗಾಗಿ ಕಾರ್ಮಿಕರ ನೂಕುನುಗ್ಗಲು – ವಿವಿಧ ಗ್ರಾಮಗಳಿಂದ ಬಂದ ಸಾವಿರಾರು ಜನ

    ಫುಡ್ ಕಿಟ್‍ಗಾಗಿ ಕಾರ್ಮಿಕರ ನೂಕುನುಗ್ಗಲು – ವಿವಿಧ ಗ್ರಾಮಗಳಿಂದ ಬಂದ ಸಾವಿರಾರು ಜನ

    – ಮಧ್ಯಾಹ್ನದ ಕಾರ್ಯಕ್ರಮಕ್ಕೆ ಬೆಳಗ್ಗೆಯೇ ಬಂದ ಕಾರ್ಮಿಕರು

    ರಾಯಚೂರು: ನಗರದಲ್ಲಿ ಕಾರ್ಮಿಕ ಇಲಾಖೆ ಫುಡ್ ಕಿಟ್ ಗಾಗಿ ಬೆಳಗ್ಗೆ ನಾಲ್ಕು ಗಂಟೆಯಿಂದ ಜನ ಮುಗಿಬಿದ್ದಿದ್ದಾರೆ. ನಗರದ ಬಾಲಕಿಯರ ವಸತಿ ನಿಲಯದ ಮುಂದೆ ಸಾವಿರಾರು ಕಾರ್ಮಿಕರು ಗುಂಪು ಸೇರಿದ್ದಾರೆ. ಕೋವಿಡ್ ನಿಯಮ ಮರೆತು ಕಿಟ್ ಗಾಗಿ ಚಿಕ್ಕ ಮಕ್ಕಳು, ವೃದ್ಧರೊಂದಿಗೆ ಕಾರ್ಮಿಕರು ಕಾಯುತ್ತಿದ್ದಾರೆ.

    ಕಾರ್ಮಿಕ ಇಲಾಖೆಯಿಂದ ಮಧ್ಯಾಹ್ನ 3-30 ರ ಬಳಿಕ ಕಿಟ್ ವಿತರಿಸುವುದಾಗಿ ಸೂಚನೆ ನೀಡಲಾಗಿದೆ. ಆದ್ರೆ ಮಾಹಿತಿಯಿಲ್ಲದೆ ಕಿಟ್ ಪಡೆಯಲು 12 ಗಂಟೆಗಳ ಮುಂಚೆಯೇ ಬಂದು ಕಾರ್ಮಿಕರು ಕಾದು ಕುಳಿತಿದ್ದಾರೆ. ರಾಯಚೂರು ತಾಲೂಕಿನಲ್ಲಿ ಒಟ್ಟು 25 ಸಾವಿರ ನೋಂದಾಯಿತ ಕಾರ್ಮಿಕರಿದ್ದು ಎಲ್ಲರಿಗೂ ಒಂದೇ ಕಡೆ ಕಿಟ್ ವಿತರಿಸಲಾಗುತ್ತಿದೆ. ಹೀಗಾಗಿ ವಿವಿಧ ಗ್ರಾಮಗಳಿಂದ ಬಂದಿರೋ ಕಟ್ಟಡ ಕಾರ್ಮಿಕರು ಕಿಟ್ ಗಾಗಿ ಕಾಯುತ್ತಿದ್ದಾರೆ.

    ವಸತಿನಿಲಯದ ಮುಂದೆ ಜನಜಾತ್ರೆಯೇ ಆಗಿದ್ದರೂ ಕಾರ್ಮಿಕ ಇಲಾಖೆ ಅಧಿಕಾರಿಗಳಾಗಲಿ, ಪೊಲೀಸ್ ಅಧಿಕಾರಿಗಳಾಗಲಿ ಇತ್ತ ಸುಳಿದಿಲ್ಲ. ಹೀಗಾಗಿ ಕಾರ್ಮಿಕರು ಹೆಚ್ಚಾಗುತ್ತಿದ್ದಂತೆ ನೂಕುನುಗ್ಗಲು ಶುರುವಾಗಿದೆ. ಕಿಟ್ ವಿತರಣೆ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಹಿನ್ನೆಲೆ ಗೊಂದಲ ಉಂಟಾಗಿದೆ. ಇತ್ತ ಕಿಟ್ಟು ಇಲ್ಲದೇ, ಅತ್ತ ದಿನ ಕೆಲಸವೂ ಇಲ್ಲದೇ ಕಾರ್ಮಿಕರು ಕಾದು ಕುಳಿತಿದ್ದಾರೆ. ಗ್ರಾಮ ಪಂಚಾಯತಿ, ವಾರ್ಡ್ ಗಳ ಮಟ್ಟದಲ್ಲೇ ಕಿಟ್ ಗಳನ್ನ ವಿತರಿಸಿದರೆ ಎಲ್ಲರಿಗೂ ಅನುಕೂಲವಾಗುತ್ತದೆ ಅಂತ ಕಾರ್ಮಿಕರು ಮನವಿ ಮಾಡಿದ್ದಾರೆ.

  • ರಾಯಚೂರಿನಲ್ಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ: ಅಧಿಕಾರಿಗಳೊಂದಿಗೆ ವಾಗ್ವಾದ

    ರಾಯಚೂರಿನಲ್ಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ: ಅಧಿಕಾರಿಗಳೊಂದಿಗೆ ವಾಗ್ವಾದ

    ರಾಯಚೂರು: ನಗರದಲ್ಲಿ ಇಂದು ಜಿಲ್ಲಾಡಳಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಮಾಡಿತು. ಆದ್ರೆ ನೂರಾರು ಸಂಖ್ಯೆಯಲ್ಲಿ ಬಂದ ಕಾರ್ಮಿಕರು ಸಾಮಾಜಿಕ ಅಂತರ, ಮಾಸ್ಕ್ ಮರೆತು ಮುಗಿಬಿದ್ದು ಆಹಾರ ಕಿಟ್‍ಗಳನ್ನ ಪಡೆದರು. ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಇರಿಸಲಾಗಿದ್ದ, ಆಹಾರ ಕಿಟ್‍ಗಳನ್ನ ವಿತರಿಸಲಾಯಿತು.

    ಜಿಲ್ಲಾ ಕಾರ್ಮಿಕ ಅಧಿಕಾರಿ ಸೂಚನೆ ನೀಡಿದ್ರೂ ಕೇರ್ ಮಾಡದೇ ಕಾರ್ಮಿಕರು ನೂಕುನುಗ್ಗಲು ಮಾಡಿದರು. ಪೊಲೀಸರ ಸೂಚನೆಗೂ ಕಿಮ್ಮತ್ತುಕೊಂಡದೇ ನೂರಾರು ಜನ ಆಹಾರ ಧಾನ್ಯ ಕಿಟ್ ಗಾಗಿ ವಾಗ್ವಾದ ನಡೆಸಿದರು. ಕ್ಯೂ ನಿಂತ ಸ್ಥಳದಲ್ಲೇ ಮಹಿಳಾ ಕಾರ್ಮಿಕರು ಸಹ ವಾಗ್ವಾದ ನಡೆಸಿದರು.

    ಜಿಲ್ಲೆಯಾದ್ಯಂತ 45 ಸಾವಿರ ಕಾರ್ಮಿಕರು ನೋಂದಣಿಯಾಗಿದೆ. ರಾಯಚೂರು ತಾಲೂಕಿನಲ್ಲಿ 25 ಸಾವಿರ ಕಾರ್ಮಿಕರು ನೋಂದಣಿಯಾಗಿದ್ದಾರೆ. ಪ್ರತಿದಿನ ಕ್ಷೇತ್ರವಾರು 600 ರಿಂದ 800 ಜನರಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ವತಿಯಿಂದ ಆಹಾರ ಕಿಟ್ ವಿತರಿಸಲಾಗುತ್ತಿದೆ. ಆದ್ರೆ ಕೋವಿಡ್ ನಿಯಮಪಾಲನೆ ಮಾತ್ರ ಮಾಯವಾಗಿದೆ.

  • ಸುಳ್ಯದ ಅಟ್ಲೂರಿನಲ್ಲಿ 200 ಕುಟುಂಬಗಳಿಗೆ ಫುಡ್ ಕಿಟ್ ವಿತರಿಸಿದ ಅಂಗಾರ

    ಸುಳ್ಯದ ಅಟ್ಲೂರಿನಲ್ಲಿ 200 ಕುಟುಂಬಗಳಿಗೆ ಫುಡ್ ಕಿಟ್ ವಿತರಿಸಿದ ಅಂಗಾರ

    ಮಂಗಳೂರು: ಕೊರೊನಾ ಸಂಕಷ್ಟದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮುಳ್ಯ ಅಟ್ಲೂರ್ ಮತ್ತು ಪ್ರಣವ್ ಫೌಂಡೇಶನ್ ಇವರ ಸಹಭಾಗಿತ್ವದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮುಳ್ಯ 6ನೇ ವಾರ್ಡ್‍ನ ಬಿಪಿಎಲ್ ಕಾರ್ಡ್‍ದಾರರಿಗೆ ಮೀನುಗಾರಿಕೆ ಬಂದರು ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ ಫುಡ್ ಕಿಟ್ ವಿತರಣೆ ಮಾಡಿದರು.

    ಮುಳ್ಯ ಭಜನಾ ಮಂದಿರ ಆವರಣದಲ್ಲಿ ಫುಡ್ ಕಿಟ್ ವಿತರಣೆಗೆ ಅಂಗಾರ ಅವರು ಚಾಲನೆ ನೀಡಿದರು. ಸಚಿವರಿಗೆ ಗ್ರಾಮಸ್ಥರಿಂದ ಸನ್ಮಾನ ನಡೆದ ನಂತರ ಸಾಂಕೇತಿಕವಾಗಿ 10 ಜನರಿಗೆ ಕಿಟ್ ನೀಡಲಾಯಿತು. ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಅಜ್ಜಾವರ ಗ್ರಾ.ಪಂ ಅಧ್ಯಕ್ಷೆ ಸತ್ಯವತಿ ಬಸವನಪಾದೆ, ಸದಸ್ಯೆ ರತ್ನಾವತಿ, ದೇವಪ್ಪಗೌಡ ಮುಳ್ಯ, ರುದ್ರಪ್ಪ ಗೌಡ, ಮನ್ಮಥ ಗೌಡ ಮುಳ್ಯ, ತಾರನಾಥ ಅತ್ಯಡ್ಕ, ಸುಳ್ಯ ಸಿ ಎ ಬ್ಯಾಂಕ್ ನಿರ್ದೇಶಕ ವಾಸುದೇವ ನಾಯಕ್, ಗುರುದತ್ ನಾಯಕ್, ಕಿಟ್ಟಣ್ಣ ರೈ ಮೇನಾಲ, ಪ್ರಭೋದ್ ಶೆಟ್ಟಿ ಮೇನಾಲ, ಸುನೀಲ್ ರೈ ಮೇನಾಲ, ಊರವರು ಭಾಗವಸಿದ್ದರು. ಇದನ್ನೂ ಓದಿ: ಅಂಗಾರ ವಿರುದ್ಧ ಭೋಜೇಗೌಡ ಕಿಡಿ – ಡಿಸಿ ಕಚೇರಿ ಬಳಿ ಏಕಾಂಗಿ ಪ್ರತಿಭಟನೆ

    ಸುಳ್ಯ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ ಸ್ವಾಗತಿಸಿ, ನಾಗರಾಜ್ ಮುಳ್ಯ ವಂದಿಸಿದರು. ವಾರ್ಡ್ ವ್ಯಾಪ್ತಿಯ 200 ಕುಟುಂಬಗಳಿಗೆ ತಲಾ ಸಾವಿರದ ನೂರು ರೂ. ಮೌಲ್ಯದ ಆಹಾರದ ಕಿಟ್‍ನ್ನು ವಿತರಿಸಲಾಯಿತು.

     

  • ವಲಸೆ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದ ಸಚಿವ ಹೆಬ್ಬಾರ್

    ವಲಸೆ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದ ಸಚಿವ ಹೆಬ್ಬಾರ್

    ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಡೈರಿ ಸರ್ಕಲ್ ಬಳಿಯಲ್ಲಿ ಮೆಟ್ರೋ ಹಾಗೂ ಇತರೆ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಲಸೆ ಕಾರ್ಮಿಕರಿಗೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ರಾಜ್ಯ ಕಟ್ಟಡದ ಕಾರ್ಮಿಕ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೀಡುತ್ತಿರುವ ದಿನಸಿ ಸಾಮಗ್ರಿಗಳ ಕಿಟ್ ಹಾಗೂ ಸುರಕ್ಷತಾ ಕಿಟ್ ಗಳನ್ನು ವಿತರಿಸಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು.

    ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಲಸೆ ಕಾರ್ಮಿಕರ ಸುರಕ್ಷತೆಗಾಗಿ ಕೈಗೊಂಡ ಕ್ರಮಗಳ ಕುರಿತು ಕುರಿತು ಕಾರ್ಮಿಕರಿಗೆ ಮಾಹಿತಿ ನೀಡಿ, ಪ್ರತಿಯೊಬ್ಬ ಕಾರ್ಮಿಕರೊಂದಿಗೆ ಮಾತನಾಡಿ ಅವರ ಸಮಸ್ಯೆಗಳನ್ನು ಆಲಿಸಿದರು. ಮಾನ್ಯ ಸಚಿವರು ಆಗಮಿಸಿ ಕಿಟ್ ನೀಡಿ ತಮ್ಮ ಸಮಸ್ಯೆಗಳನ್ನು ಆಲಿಸಿದಕ್ಕೆ ವಲಸೆ ಕಾರ್ಮಿಕರು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ವಿವಾದ, ಶೀಘ್ರ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ: ಹೆಬ್ಬಾರ್

    ಈ ಕಾರ್ಯಕ್ರಮದಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಜಿ.ಕಲ್ಪನಾ ಹಾಗೂ ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷಾ ಕಾರ್ಮಿಕ ಕಲ್ಯಾಣ ಮಂಡಳಿ ನಿರ್ದೇಶಕರಾದ ನಾಗನಾಥ್, ಪ್ರಕಾಶ್ ಎಂ, ನಾಡಗೇರ್ ಹಾಗೂ ಶಿವಾನಿ ಭಟ್ಕಳ ಮತ್ತು ಸ್ಥಳೀಯ ಕಾರ್ಮಿಕ ಸಂಘಟನೆಗಳ ಪ್ರಮುಖರು ಹಾಜರಿದ್ದರು.

  • ಸೋಮಣ್ಣ ಪ್ರತಿಷ್ಠಾನದಿಂದ ಕಲಾವಿದರಿಗೆ ದಿನಸಿ ಕಿಟ್ ವಿತರಣೆ

    ಸೋಮಣ್ಣ ಪ್ರತಿಷ್ಠಾನದಿಂದ ಕಲಾವಿದರಿಗೆ ದಿನಸಿ ಕಿಟ್ ವಿತರಣೆ

    ಬೆಂಗಳೂರು: ನಾಡಪ್ರಭು ಕೆಂಪೇಗೌಡ 512ನೇ ಜಯಂತಿ ಪ್ರಯುಕ್ತ, ಚಲನಚಿತ್ರ ಕಲಾವಿದರು ಮತ್ತು ರಂಗಭೂಮಿ ಕಲಾವಿದರುಗಳಿಗೆ ಸೋಮಣ್ಣ ಪ್ರತಿಷ್ಠಾನ ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಲಾಯಿತು.

    ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ, ಗೋವಿಂದರಾಜನಗರ ವಾರ್ಡ್ ಪಾಲಿಕೆ ಸೌಧ ಅವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸೋಮಣ್ಣ, ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಚಿಂತನೆಯಿಂದ ಬೆಂಗಳೂರು ನಗರ ನಿರ್ಮಾಣ ಮಾಡಿದರು. ಜಾತ್ಯಾತೀತ ನಿಲುವು ಹೊಂದಿದ್ದು, ಎಲ್ಲ ಕಾಯಕ ಸಮಾಜಗಳಾದ ನೇಕಾರ, ಮಂಡಿ ವ್ಯಾಪಾರಿ, ಕುಂಬಾರಿಕೆ ವಿವಿಧ ಕುಶಲಕರ್ಮಿ ಕೆಲಸಗಾರರಿಗೆ ಪೇಟೆಗಳ ನಿರ್ಮಾಣ ಮಾಡಿ, ಉದ್ಯಮಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದರು. ಕಾಯಕಯೋಗಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರು ಜಾತ್ಯಾತೀತ ನಿಲುವಿನ ಪ್ರತಿಪಾದಕರು ಎಂದರು.

    ನಿವೇಶನ ಇಲ್ಲದಿರುವ ಚಲನಚಿತ್ರ ಕಲಾವಿದರು ಮತ್ತು ರಂಗಭೂಮಿ ಕಲಾವಿದರುಗಳು ಪಟ್ಟಿ ಮಾಡಿ ಅರ್ಜಿ ಕೊಟ್ಟರೆ ಕೂಡಲೇ ಮುಖ್ಯಮಂತ್ರಿಗಳ ಹತ್ತಿರ ಚರ್ಚಿಸಿ ಒಂದೂವರೆ ತಿಂಗಳಲ್ಲಿ ವಸತಿ ಅಥವಾ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

    ನಂತರ ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಮಾತನಾಡಿ, ಬೆಂಗಳೂರು ನಗರ ವಿಶ್ವವಿಖ್ಯಾತಿ ಪಡೆಯಲು ಮೂಲ ಕಾರಣ ನಾಡಪ್ರಭು ಕೆಂಪೇಗೌಡರು. ಅವರ ಅಭಿವೃದ್ಧಿ ಪರ ಚಿಂತನೆ, ಯೋಜನೆಗಳು ಜಾರಿಗೆ ಬಂದರೆ ಬೆಂಗಳೂರು ನಗರ ಇನ್ನಷ್ಟು ಅಭಿವೃದ್ಧಿಯತ್ತ ಸಾಗುತ್ತದೆ ಎಂದು ನುಡಿದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್‍ನಿಂದ ಮುಕ್ತರಾದ್ರೆ ಸಚಿವರಾಗ್ತಾರೆ: ಜೆ.ಸಿ.ಮಾಧುಸ್ವಾಮಿ

  • ಕಾವೇರಿಪುರ ವಾರ್ಡಿನಲ್ಲಿ ಫುಡ್ ಕಿಟ್ ವಿತರಿಸಿದ ಸೋಮಣ್ಣ

    ಕಾವೇರಿಪುರ ವಾರ್ಡಿನಲ್ಲಿ ಫುಡ್ ಕಿಟ್ ವಿತರಿಸಿದ ಸೋಮಣ್ಣ

    ಬೆಂಗಳೂರು: ಕೋವಿಡ್ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಕಾವೇರಿಪುರ ವಾರ್ಡಿನ ಕುಟುಂಬಗಳಿಗೆ ವಸತಿ ಸಚಿವ ವಿ.ಸೋಮಣ್ಣ ಫುಡ್ ಕಿಟ್ ವಿತರಿಸುವ ಮೂಲಕ ನೆರವಾಗಿದ್ದಾರೆ.

    ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾವೇರಿಪುರ ವಾರ್ಡಿನಲ್ಲಿ ಕೋವಿಡ್ ಸಂಕಷ್ಟಕ್ಕೆ ಒಳಗಾದ ಆರ್ಥಿಕವಾಗಿ ಹಿಂದುಳಿದವರು, ಬಡವರು, ಕಾರ್ಮಿಕರು ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಆಹಾರಧಾನ್ಯ ಕಿಟ್ ಗಳನ್ನು ವಿತರಿಸಿದರು.

    ಬಳಿಕ ಮಾತನಾಡಿದ ಅವರು, ಕೋವಿಡ್ ಸಂಕಷ್ಟಕ್ಕೆ ಒಳಗಾಗಿರುವ ದೇಶದ 80 ಕೋಟಿ ಜನರಿಗೆ ವರ್ಷಾಂತ್ಯದವರೆಗೆ ಉಚಿತ ಆಹಾರಧಾನ್ಯಗಳನ್ನು ವಿತರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಬಡವರಿಗೆ ನಗದು ಪರಿಹಾರ ಸೇರಿದಂತೆ ಉಪಯುಕ್ತ ಹಲವು ಪ್ಯಾಕೇಜ್ ಗಳನ್ನು ಘೋಷಿಸಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸಹ ಬಡ ಜನರು ಹೆಚ್ಚಾಗಿದ್ದು, ಕ್ಷೇತ್ರದ ಜನರಿಗೆ ಉತ್ತಮ ಗುಣಮಟ್ಟದ ಆಹಾರಧಾನ್ಯ ವಿತರಣೆ ಮಾಡಲಾಗುತ್ತಿದೆ. ಜನತೆ ಭಯಭೀತರಾಗಬಾರದು ಎಂದು ಧೈರ್ಯ ತುಂಬಿದರು.

    ಈ ಸಂದರ್ಭದಲ್ಲಿ ಯುವ ಮುಖಂಡ ಡಾ.ಅರುಣ್ ಸೋಮಣ್ಣ, ಮಂಡಲಾಧ್ಯಕ್ಷ ವಿಶ್ವನಾಥಗೌಡ, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ದಾಸೇಗೌಡ, ವಾಗೀಶ್, ಮೋಹನ್ ಕುಮಾರ್, ಉಮಾಶಂಕರ್ ಹಾಗೂ ಕಾರ್ಯಕರ್ತರು ಸಚಿವರ ಜೊತೆ ಇದ್ದರು.

  • ವಿಕಲಚೇತನರಿಗೆ ಫುಡ್‍ಕಿಟ್ ನೀಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‍ಐಆರ್

    ವಿಕಲಚೇತನರಿಗೆ ಫುಡ್‍ಕಿಟ್ ನೀಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‍ಐಆರ್

    – ಪಾಂಡವಪುರದಲ್ಲಿ ಕೆಟ್ಟ ಪಾಲಿಟಿಕ್ಸ್ ನಡೆಯುತ್ತಿದೆ ಎಂದು ಆರೋಪ

    ಮಂಡ್ಯ: ಕಾಂಗ್ರೆಸ್ ಮುಖಂಡನಿಗೆ ಫುಡ್‍ಕಿಟ್ ಹಂಚಲು ಅಧಿಕಾರಿಗಳೇ ಅನುಮತಿ ನೀಡಿ ಕೊನೆಗೆ ಅಧಿಕಾರಿಗಳೇ ಪೊಲೀಸರಿಗೆ ದೂರು ನೀಡಿ ಎಫ್‍ಐಆರ್ ಹಾಕಿಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಜರುಗಿದೆ.

    ಮೇಲುಕೋಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡ ಬಿ.ರೇವಣ್ಣ ವಿಕಲಚೇತನರಿಗೆ ಫುಡ್‍ಕಿಟ್ ನೀಡಲು ಪಾಂಡವಪುರದ ಪುರಸಭೆಯ ಅಧಿಕಾರಿಗಳ ಬಳಿ ಮೌಕಿಕವಾಗಿ ಅನುಮತಿ ಕೇಳಿದ್ದಾರೆ. ಅಧಿಕಾರಿಗಳು ಅನುಮತಿ ನೀಡಿದ ಬಳಿಕ ನಿನ್ನೆ ಪುರಸಭೆ ಎದುರು ಕೋವಿಡ್ ನಿಯಮಗಳನ್ನು ಅನುಸರಿಕೊಂಡು ವಿಕಲಚೇತನರಿಗೆ ಫುಡ್‍ಕಿಟ್‍ನ್ನು ರೇವಣ್ಣ ಹಾಗೂ ಅಭಿಮಾನಿಗಳು ಅಧಿಕಾರಿಗಳ ಮುಂದೆ ನೀಡಿದ್ದಾರೆ. ಇದನ್ನೂ ಓದಿ: ಬಾಲಕಿಗೆ ವಿಚಿತ್ರ ಪೂಜೆ ಮಾಡಿ ವಾಮಾಚಾರ ಮಾಂತ್ರಿಕ ನಾಪತ್ತೆ – ಬಾಲಕಿಯ ರಕ್ಷಣೆ

    ಇದಾದ ಬಳಿಕ ರಾತ್ರಿ 8 ಗಂಟೆಯ ವೇಳೆಗೆ ಫುಡ್‍ಕಿಟ್ ಹಂಚಿಕೆಯ ವೇಳೆ ಕೋವಿಡ್ ನಿಯಮಗಳು ಉಲ್ಲಂಘನೆ ಆಗಿದೆ ಎಂದು ಅನುಮತಿಕೊಟ್ಟ ಅಧಿಕಾರಿಗಳೇ ಪಾಂಡವಪುರ ಪೊಲೀಸ್ ಠಾಣೆಗೆ ದೂರು ನೀಡಿರುವ ಕಾರಣ ಪೊಲೀಸರು ಎಫ್‍ಐಆರ್ ದಾಖಲು ಮಾಡಿದ್ದಾರೆ. ಅನುಮತಿ ಕೊಟ್ಟ ಅಧಿಕಾರಿಗಳು ಫುಡ್‍ಕಿಟ್ ಕೊಡುವಾಗ ಸ್ಥಳದಲ್ಲೇ ಇದ್ದರು. ಆಗ ಏನು ಮಾಡದ ಅಧಿಕಾರಿಗಳು ಈಗ ದೂರು ನೀಡಿದ್ದಾರೆ ಎಂದು ರೇವಣ್ಣ ಆರೋಪಿಸಿದ್ದಾರೆ.

    ಎಫ್‍ಐಆರ್ ಹಾಕಲು ಶಾಸಕ ಪುಟ್ಟರಾಜು ಅವರೇ ಕಾರಣ. ಅಧಿಕಾರಿಗಳಿಗೆ ಒತ್ತಡ ಹಾಕಿ ಈ ರೀತಿಯ ಕೆಲಸಗಳನ್ನು ಮಾಡುತ್ತಿದ್ದಾರೆ. ಈ ಹಿಂದೆ ಜನರಿಗೆ ಸಹಾಯ ಆಗಲಿ ಎಂದು ಮೇಲುಕೋಟೆ ಕ್ಷೇತ್ರಕ್ಕೆ ನೀಡಿದ್ದ ಅಂಬುಲೆನ್ಸ್ ಗಳನ್ನು ಸೀಜ್ ಮಾಡಿದ್ದರು. ಇದೀಗ ಕಷ್ಟದಲ್ಲಿರುವ ಜನರಿಗೆ ಫುಡ್‍ಕಿಟ್ ನೀಡಿದ್ರೆ ಕೇಸ್ ಹಾಕುತ್ತಿದ್ದಾರೆ. ವಿಕಲಚೇತನರಿಗೆ ಫುಡ್‍ಕಿಟ್ ನೀಡುವ ವೇಳೆ ಕೋವಿಡ್ ನಿಯಮಗಳನ್ನು ಪಾಲಿಸಲಾಗಿದೆ. ಹೀಗಿದ್ದರೂ ಸಹ ಪುಟ್ಟರಾಜು ಅವರು ನಮ್ಮ ಮೇಲೆ ಕೇಸ್ ಹಾಕಿಸುವ ಮೂಲಕ ಕ್ಷೇತ್ರದಲ್ಲಿ ಕೆಟ್ಟ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎಂದು ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸ ಇದೆ – ಡ್ರಗ್ಸ್ ಕೇಸ್ ಬಗ್ಗೆ ರಾಗಿಣಿ ಮಾತು

    ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸ ಇದೆ – ಡ್ರಗ್ಸ್ ಕೇಸ್ ಬಗ್ಗೆ ರಾಗಿಣಿ ಮಾತು

    ವಿಜಯಪುರ: ಚಿತ್ರ ನಟಿ ರಾಗಿಣಿ ದ್ವಿವೇದಿ ವಿಜಯಪುರದಲ್ಲಿ ಬಡ ಜನರಿಗೆ ಆಹಾರ ಕಿಟ್ ವಿತರಣೆ ಮಾಡಿದರು. ಇದೇ ವೇಳೆ ಮಾತನಾಡಿದ ರಾಗಿಣಿ ಡ್ರಗ್ಸ್ ಕೇಸ್ ವಿಚಾರದ ಬಗ್ಗೆ ಹೆಚ್ಚಿಗೆ ಮಾತಾಡೋದಿಲ್ಲ. ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸವಿದೆ. ನಾವು ತಪ್ಪು ಮಾಡಿಲ್ಲ ಅಂದ್ರೆ ನಾವು ಟೆನ್ಷನ್ ಮಾಡ್ಕೋಬಾರ್ದು ಎಂದರು.

    ಡ್ರಗ್ಸ್ ವಿಚಾರದಲ್ಲಿ ಶೇ.100 ಟಾರ್ಗೆಟ್ ಮಾಡಲಾಗಿದೆ. ಬರೀ ಒಂದು ಕೇಸ್ ವಿಚಾರವಾಗಿ ಮಾತ್ರವಲ್ಲ. ಹೆಣ್ಮಕ್ಕಳು ಅಂದ್ರೆ ಸಾಕು ಪ್ರತಿಯೊಂದು ವಿಚಾರದಲ್ಲೂ ಸಮಾಜದಲ್ಲಿ ಟಾರ್ಗೆಟ್ ಮಾಡಲಾಗುತ್ತಿದೆ. ಹೆಣ್ಮಕ್ಕಳನ್ನು ತುಂಬಾ ಈಜಿಯಾಗಿ ಟಾರ್ಗೆಟ್ ಮಾಡೋದು ಹವ್ಯಾಸವಾಗಿದೆ ಎಂದು ಕಿಡಿಕಾರಿದರು.

    ಬ್ಲೇಮ್ ಮಾಡೋ ಬದಲು ಎಲ್ಲರೂ ನಿಮ್ಮ ನಿಮ್ಮ ಕೆಲಸದಲ್ಲಿ ಕರೆಕ್ಟ್ ಆಗಿದ್ರೆ ಸಾಕು. ಪ್ರಶಾಂತ್ ಸಂಬರಗಿ ಅವರು ನಿಜವಾಗಿಯೂ ನನಗೆ ಪರಿಚಯವಿಲ್ಲ, ಅವರೊಂದಿಗೆ ನಾನು ಮಾತಾಡಿಯೂ ಇಲ್ಲ. ಅವರು ಏನು ಮಾತಾಡ್ತಾರೋ ಮಾತಾಡಲಿ, ನನಗೆ ಅವರ ಪರಿಚಯವಿಲ್ಲ. ಅವರವರ ಓಪಿನೀಯನ್ ಮಾತಾಡ್ತಾರೆ, ಅದನ್ನು ನಾನು ಕಂಟ್ರೋಲ್ ಮಾಡಲು ಆಗಲ್ಲಾ ಎಂದರು. ಇದನ್ನೂ ಓದಿ: ಲಸಿಕೆ ಕೊರತೆ ಮುಚ್ಚಿ ಹಾಕಲು ಸರ್ಕಾರ ಸುಳ್ಳು ಹೇಳುತ್ತಿದೆ: ರಾಹುಲ್ ಗಾಂಧಿ

    ನಾನು ಏನು ಮಾಡ್ತೀನಿ, ಏನು ಮಾತಾಡ್ತೀನಿ ಅನ್ನೋದನ್ನು ಮಾತ್ರ ಕಂಟ್ರೋಲ್ ಮಾಡ್ತೀನಿ. ನನ್ನನ್ನು ಎಲ್ಲರೂ ಇಷ್ಟಪಡ್ತಾರೆ, ನನಗೆ ಫ್ಯಾನ್ಸ್ ಇದ್ದಾರೆ, ಅವರಿಗೆಲ್ಲ ಧನ್ಯವಾದ ಹೇಳ್ತೆನೆ. ನನ್ನನ್ನು ಇಷ್ಟಪಟ್ಟವರಿಗೂ, ಇಷ್ಟ ಪಡದವರಿಗೂ ಥ್ಯಾಂಕ್ಯೂ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.