Tag: ಫುಡ್ ಕಿಟ್

  • ಇನ್ನೊಂದು ವಾರದಲ್ಲಿ ಮುನಿರತ್ನ ಮಂತ್ರಿಯಾಗಲಿದ್ದಾರೆ: ಸೋಮಣ್ಣ ಭವಿಷ್ಯ

    ಇನ್ನೊಂದು ವಾರದಲ್ಲಿ ಮುನಿರತ್ನ ಮಂತ್ರಿಯಾಗಲಿದ್ದಾರೆ: ಸೋಮಣ್ಣ ಭವಿಷ್ಯ

    ಬೆಂಗಳೂರು: ಇನ್ನೊಂದು ವಾರದಲ್ಲಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರು ಮಂತ್ರಿಯಾಗಲಿದ್ದಾರೆ ಎಂದು ಸಚಿವ ವಿ. ಸೋಮಣ್ಣ ಭವಿಷ್ಯ ನುಡಿದಿದ್ದಾರೆ.

    ಆರ್ ಆರ್ ನಗರ ವ್ಯಾಪ್ತಿಯಲ್ಲಿ ಇಂದು ಕೂಡ ಫುಡ್ ಕಿಟ್ ವಿತರಣೆ ಕಾರ್ಯಕ್ರಮ ಮುಂದುವರಿದಿದೆ. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸೋಮಣ್ಣ, ಮುಂದಿನ ಎಂಟು ಹತ್ತು ದಿನಗಳಲ್ಲಿ ಮುನಿರತ್ನ ಸಚಿವರಾಗುತ್ತಾರೆ. ಪಕ್ಷತೀತವಾಗಿ ಜಾತ್ಯತೀತವಾಗಿ ಮುನಿರತ್ನ ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಸುಭೀಕ್ಷ ಸರ್ಕಾರ ಬರಬೇಕು ಒಳ್ಳೆಯ ಕೆಲಸ ಆಗಬೇಕಾದರೆ ಇಂತಹ ಶಾಸಕರು ಬರಬೇಕು. ಇನ್ನೊಂದು ವಾರದಲ್ಲಿ ಅವರು ಮಂತ್ರಿ ಆಗಲಿ. ಬಳಿಕ ರಾಜರಾಜೇಶ್ವರಿ ದೇವರ ದರ್ಶನವನ್ನ ನಾವಿಬ್ಬರು ಒಟ್ಟಿಗೆ ಮಾಡ್ತೇವೆ ಎಂದರು.

    ಒಟ್ಟಿನಲ್ಲಿ ಬೆಂಗಳೂರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ವಿಚಾರದ ಬೆನ್ನಲ್ಲೇ ಸಚಿವರು ಭವಿಷ್ಯ ನುಡಿದಿದ್ದು, ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ.  ಇದನ್ನೂ ಓದಿ: ಲಾಕ್‍ಡೌನ್ ಎಫೆಕ್ಟ್- ಕೆಲ ತರಕಾರಿ ಬೆಲೆ ದುಬಾರಿ

    ವಾರ್ಡ್ ನಂಬರ್ 160 ರ ಪಟ್ಟಣಗೆರೆ ಜಯಣ್ಣ ಸರ್ಕಲ್ ಲ್ಲಿ ಶಾಸಕ ಮುನಿರತ್ನ ಅವರು ಫುಡ್ ಕಿಟ್ ವಿರತಣೆ ಕಾರ್ಯಕ್ರಮ ನಡೆದಿದೆ. ಕಳೆದ ಹಲವು ದಿನದಿಂದ ಕ್ಷೇತ್ರದಾದ್ಯಂತ ಕೊರೊನಾ ಸಂಕಷ್ಟಕ್ಕೆ ಒಳಗಾಗದವರಿಗೆ ಶಾಸಕರು ಆಹಾರ ಕಿಟ್ ವಿತರಿಸುತ್ತಿದ್ದಾರೆ. ಸಾರ್ವಜನಿಕರು ಕೂಡ ಸಾಮಾಜಿಕ ಅಂತರದೊಂದಿಗೆ ಕಿಟ್ ಪಡೆದಿದ್ದಾರೆ. ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು, ಪಾಲಿಕೆ ಸದಸ್ಯರು ಭಾಗಿಯಾಗಿದ್ದಾರೆ.

  • ಸುಳ್ಯ ವೆಂಕಟರಮಣ ದೇವಸ್ಥಾನದಲ್ಲಿ ಸೇವಾಂಜಲಿ ಆಶ್ರಯಹಸ್ತ ಕಿಟ್ ವಿತರಣೆ

    ಸುಳ್ಯ ವೆಂಕಟರಮಣ ದೇವಸ್ಥಾನದಲ್ಲಿ ಸೇವಾಂಜಲಿ ಆಶ್ರಯಹಸ್ತ ಕಿಟ್ ವಿತರಣೆ

    ಮಂಗಳೂರು: ಅರ್ಹ ಫಲಾನುಭವಿಗಳಿಗೆ ಅಗತ್ಯವಸ್ತುಗಳನ್ನು ಒಳಗೊಂಡ ಸೇವಾಂಜಲಿ-ಆಶ್ರಯಹಸ್ತ ಕಿಟ್ ಅನ್ನು ವಿತರಿಸಲಾಗುತ್ತಿದ್ದು, ಸುಳ್ಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸುಮಾರು 300 ಕಿಟ್ ಗಳನ್ನು ವಿತರಿಸಲಾಯಿತು. ಇದನ್ನೂ ಓದಿ: ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ನೇಣಿಗೆ ಶರಣು

    ಸಮಾಜಸೇವಾ ಸಂಘಟನೆ ಆಶ್ರಯಹಸ್ತ ಟ್ರಸ್ಟ್ ಕೋವಿಡ್ ಲಾಕ್‍ಡೌನ್‍ನ ಅವಧಿಯಲ್ಲಿ ಬದುಕು ಸಾಗಿಸಲು ಹರಸಾಹಸ ಪಡುತ್ತಿರುವ ಕುಟುಂಬಗಳ ಸಹಾಯಕ್ಕೆ ಮುಂದೆ ಬಂದಿದೆ. ಸಮಾಜದ ಕಡುಬಡವರಿಗೆ ಸಹಾಯಹಸ್ತ ಚಾಚುವ ಸೇವೆಯನ್ನು ಕಳೆದ ಎರಡು ದಶಕಗಳಿಗಿಂತಲೂ ಮಾಡುತ್ತಾ ಬಂದಿದೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತ್ಯೋದಯ ಕಾರ್ಡ್ ಹೊಂದಿರುವ ಬಿಪಿಎಲ್ ರೇಖೆಗಿಂತಲೂ ಕೆಳಗಿರುವ 3,000 ಕಡುಬಡವರಿಗೆ ಕಿಟ್ ಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ. ಉತ್ತಮ ದರ್ಜೆಯ ಆಹಾರ ವಸ್ತುಗಳು, ದಿನನಿತ್ಯದ ಅಗತ್ಯ ವಸ್ತುಗಳನ್ನು ಹೊಂದಿರುವ ಕಿಟ್ ಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯದಲ್ಲಿ ಮಂಗಳೂರಿನ ಸಮಾಜಮುಖಿ ಸಂಘಟನೆ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಕೈಜೋಡಿಸಲಿದೆ.

    ಬೆಂಗಳೂರಿನಲ್ಲಿ ನೆಲೆಸಿರುವ ನಿವೃತ್ತ ಮೇಜರ್ ಎಸ್ ನಂಜುಂಡಯ್ಯ ಅವರು ಟ್ರಸ್ಟಿಗಳಾದ ದಿನೇಶ್ ಕೆ, ಆಶಾ ದಿನೇಶ್ ಅವರು ಜೊತೆ ಸೇರಿ ಆರಂಭಿಸಿರುವ ಆಶ್ರಯಹಸ್ತ ಟ್ರಸ್ಟ್ ಪ್ರಸ್ತುತ ಇವರ ಮಕ್ಕಳಾದ ದಿವ್ಯಾ ಹಾಗೂ ದೀಕ್ಷಾ ಅವರ ಸಮರ್ಥ ನೇತೃತ್ವದಲ್ಲಿ ಜನಸೇವಾ ಕಾರ್ಯ ಕೈಗೊಂಡಿದೆ.

  • ಮಂಗಳೂರಿನ ಮಂಗಳಮುಖಿಯರಿಗೆ ಸೇವಾಂಜಲಿ-ಆಶ್ರಯ ಹಸ್ತ ಕಿಟ್

    ಮಂಗಳೂರಿನ ಮಂಗಳಮುಖಿಯರಿಗೆ ಸೇವಾಂಜಲಿ-ಆಶ್ರಯ ಹಸ್ತ ಕಿಟ್

    ಮಂಗಳೂರು: ಆಶ್ರಯಹಸ್ತ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ 115 ಮಂಗಳಮುಖಿಯರಿಗೆ ಮಂಗಳೂರಿನ ವಿ.ಟಿ.ರಸ್ತೆಯಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಭಾನುವಾರ ಸೇವಾಂಜಲಿ-ಆಶ್ರಯಹಸ್ತ ಕಿಟ್ ವಿತರಿಸಲಾಯಿತು.

    ಉತ್ತಮ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಮತ್ತು ದಿನಬಳಕೆಯ ವಸ್ತುಗಳನ್ನು ಒಳಗೊಂಡ ಕಿಟ್ ಗಳನ್ನು ನೀಡಲಾಯಿತು. ಈ ಕುರಿತು ಮಂಗಳಮುಖಿಯರ ಪರವಾಗಿ ಮಾತನಾಡಿದ ಬಾಲಕೃಷ್ಣ, ಟ್ರಸ್ಟಿನ ಕೊಡುಗೆಗೆ ಕೃತಜ್ಞತೆ ಅರ್ಪಿಸಿದರು. ಲಾಕ್‍ಡೌನ್ ಅವಧಿಯಲ್ಲಿ ಬದುಕು ಸಾಗಿಸುವುದೇ ಸವಾಲಾಗಿತ್ತು. ಆದಾಯ ಇಲ್ಲದೆ ದಿನ ದೂಡುವುದು ಕಷ್ಟಮಯವಾಗಿತ್ತು. ಇಂತಹ ಸಮಯದಲ್ಲಿ ಮಾನವೀಯ ಹೃದಯವುಳ್ಳ ದಾನಿಗಳ ಸಹಕಾರವನ್ನು ಮರೆಯಲು ಸಾಧ್ಯವಿಲ್ಲ ಎಂದರು.

    ಬೆಂಗಳೂರಿನ ಆಶ್ರಯಹಸ್ತ ಚಾರಿಟೇಬಲ್ ಟ್ರಸ್ಟ್ ಹಾಗೂ ಮಂಗಳೂರಿನ ಸೇವಾಂಜಲಿ ಚಾರಿಟೇಬಲ್ ಟ್ರಸ್ಟಿನವರು ಗೌರವಪೂರ್ಣವಾಗಿ ಆಹ್ವಾನಿಸಿ ಸಹಾಯಹಸ್ತ ಚಾಚಿದ್ದಾರೆ. ಅವರಿಗೆ ಭಗವಂತ ಒಳ್ಳೆಯದು ಮಾಡಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಹನುಮಂತ ಕಾಮತ್, ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್ ಹಾಗೂ ಟ್ರಸ್ಟಿನ ಪದಾಧಿಕಾರಿಗಳು, ಹಿತೈಷಿಗಳು ಉಪಸ್ಥಿತರಿದ್ದರು.

  • ಪದ್ಮನಾಭನಗರ ಕ್ಷೇತ್ರದಲ್ಲಿ ಸಾವಿರಾರು ಜನರಿಗೆ ಪಡಿತರ ವಿತರಣೆ ಮಾಡಿದ ಸಚಿವ ಅಶೋಕ್

    ಪದ್ಮನಾಭನಗರ ಕ್ಷೇತ್ರದಲ್ಲಿ ಸಾವಿರಾರು ಜನರಿಗೆ ಪಡಿತರ ವಿತರಣೆ ಮಾಡಿದ ಸಚಿವ ಅಶೋಕ್

    ಬೆಂಗಳೂರು: ಕೋವಿಡ್‍ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ನೆರವಾಗುವುದರ ಜೊತೆಗೆ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಕಂದಾಯ ಸಚಿವ ಹಾಗೂ ಸ್ಥಳೀಯ ಶಾಸಕ ಆರ್ ಅಶೋಕ್ ರವರು ಸಾವಿರಾರು ಜನರಿಗೆ ಪಡಿತರ ಕಿಟ್ ವಿತರಿಸುವ ಕಾರ್ಯಕ್ರಮ ಆಯೋಜಿಸಿದ್ದಾರೆ.

    ಕಷ್ಟದ ಸಮಯದಲ್ಲಿ ಮಾನವೀಯತೆಯನ್ನ ಮೆರೆಯುವುದು ಆ ಕ್ಷಣದ ತುರ್ತು ಅಗತ್ಯ ಎಂಬುದನ್ನ ನಿರಂತರ ರುಜುವಾತು ಮಾಡುತ್ತಾ ಬರುತ್ತಿರುವ ಸಚಿವ ಅಶೋಕ್ ಅವರು ಪ್ರಸ್ತುತ ಬೃಹತ್ ಪ್ರಮಾಣದಲ್ಲಿ ಕ್ಷೇತ್ರದ ಜನತೆಯ ಸಹಾಯಕ್ಕೆ ಮುಂದಾಗಿದ್ದಾರೆ. ಆದಾಯವಿಲ್ಲದೇ ಕಂಗೆಟ್ಟ ಜನತೆಗೆ ವಿಶ್ವಾಸ ತುಂಬುವುದರ ಜೊತೆಗೆ ಒಂದು ದಿನವೂ ಯಾರೂ ಉಪವಾಸ ಇರಕೂಡದು ಎಂಬ ಬದ್ಧತೆಯಿಂದಲೇ ನಿತ್ಯ ಆರು ಸಾವಿರ ಜನರಿಗೆ ತಮ್ಮ ಕಚೇರಿಯ ಆವರಣದಲ್ಲಿಯೇ ಪೌಷ್ಠಿಕ ಆಹಾರ ತಯಾರಿಸಿ ಕಾರ್ಯಕರ್ತರ ಮೂಲಕ ವಿತರಿಸುವ ಕೆಲಸ ಮಾಡುತ್ತಿದ್ದಾರೆ. ಲಾಕ್ ಡೌನ್ ಘೋಷಣೆಯಾದಾಗಿನಿಂದಲೂ ನಿತ್ಯ ಜನತೆಯ ಹಸಿವು ನೀಗಿಸುವ ಕಾರ್ಯ ಅಬಾಧಿತವಾಗಿ ನಡೆಯುತ್ತಿದೆ.

    ಜನರ ನಡುವೆಯೇ ಬೆಳೆದ ನಾಯಕನಿಗೆ ಜನತೆಯ ಸಮಸ್ಯೆ, ನೋವುಗಳು ಬೇಗ ಹೃದಯ ಮುಟ್ಟುತ್ತವೆ ಎಂಬ ಮಾತಿನಂತೆ ಅಶೋಕ್ ಅವರು ಜನಸಾಮಾನ್ಯರ ಪ್ರತಿನಿಧಿಯಾಗಿಯೇ ರಾಜಕೀಯದಲ್ಲಿ ಬೆಳೆದವರು. ಹೀಗಾಗಿ ತನ್ನನ್ನ ನಂಬಿದವರಿಗೆ, ತನ್ನ ಮೇಲೆ ವಿಶ್ವಾಸವಿಟ್ಟವರ ಬೆಂಬಲಕ್ಕೆ ನಿಲ್ಲುವ ಮೂಲಕ ಜನಾನುರಾಗಿ ನಾಯಕರಾದವರು. ಸದ್ಯ ಕೋವಿಡ್ ಮಹಾಮಾರಿ ಹಲವರ ಬದುಕಿನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ನಿಟ್ಟಿನಲ್ಲಿ ಕಂಗೆಟ್ಟ ಜನರಿಗೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗಲು ಈಗ ಈ ಕಾರ್ಯಕ್ರಮ ರೂಪಿಸಲಾಗಿದೆ. ಇದನ್ನೂ ಓದಿ: ಭಾನುವಾರವೂ ಡಿಸಿಎಂ ಲಸಿಕೆ ರೌಂಡ್ಸ್ – ಡಾ.ಸಿ.ಎನ್.ಅಶ್ವತ್ಥನಾರಾಯಣ್ ಫೌಂಡೇಶನ್‍ನಿಂದ 1,400 ಜನರಿಗೆ ಉಚಿತ ಲಸಿಕೆ

    ಈ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸೇರಿದಂತೆ ಹಲವು ಸಚಿವರು ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆ ನಂತರದಲ್ಲಿ ಸಚಿವ ಆರ್ ಅಶೋಕ್ ಅವರು ಕ್ಷೇತ್ರದಲ್ಲಿ ಕೋವಿಡ್ ಗೆ ಸೋಂಕಿಗೆ ತುತ್ತಾಗಿ ಪ್ರಾಣ ಕಳೆದುಕೊಂಡವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಹಾಗೂ ಅಗತ್ಯವಿರುವವರಿಗೆ ಆರ್ಥಿಕ ನೆರವು ನೀಡಲಿದ್ದಾರೆ.

    ಒಬ್ಬ ಜನಪ್ರತಿನಿಧಿಗೆ ಕರ್ತವ್ಯ ನಿಭಾವಣೆ ಅತೀ ಅಗತ್ಯ. ಆ ನಿಟ್ಟಿನಲ್ಲಿ ಅಶೋಕ ಅವರು ಸೂಕ್ತ ಸಮಯದಲ್ಲಿ ಅಗತ್ಯ ಕಾರ್ಯಕ್ಕೆ ಮುಂದಾಗಿದ್ದಾರೆ. ಈಗಾಗಲೇ ಸೋಂಕಿನಿಂದ ಸಾವನ್ನಪ್ಪಿದವರ ಅಸ್ಥಿಯನ್ನ ಕುಟುಂಬಸ್ಥರು ಕೊಂಡಯ್ಯದೆ ಇದ್ದ ಕಾರಣಕ್ಕೆ ತಾವೇ ಖುದ್ದು ಕಾವೇರಿಯಲ್ಲಿ ಅಸ್ಥಿ ವಿಸರ್ಜನೆ ಮಾಡುವ ಮೂಲಕ ಸಾವಿರಾರು ಜನರ ಪಾಲಿಗೆ ಬಂಧುವಾದರು. ಎಲ್ಲಾ ಅಂತಿಮ ಕಾರ್ಯಗಳನ್ನ ವಿಧಿವತ್ತಾಗಿ ನೆರವೇರಿಸುವ ಮೂಲಕ ಸತ್ತವರ ಆತ್ಮಕ್ಕೆ ಶಾಂತಿ ದೊರೆಯುವಂತೆ ಮಾಡಿದರು. ಈಗ ಸಾವಿರಾರು ಜನರಿಗೆ ಪಡಿತರ ವಿತರಣೆ ಮೂಲಕ ಭರವಸೆ ಕಳೆದುಕೊಂಡವರಲ್ಲಿ ಆತ್ಮವಿಶ್ವಾಸ ತುಂಬಿ ಅವರ ಬೆಂಬಲಕ್ಕೆ ನಿಲ್ಲುವ ಮಹತ್ಕಾರ್ಯಕ್ಕೆ ಅಣಿಯಾಗಿದ್ದಾರೆ.

  • ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲದಕ್ಕೂ ಕ್ಯೂ: ಡಿ.ಕೆ.ಶಿವಕುಮಾರ್ ತರಾಟೆ

    ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲದಕ್ಕೂ ಕ್ಯೂ: ಡಿ.ಕೆ.ಶಿವಕುಮಾರ್ ತರಾಟೆ

    ಬೆಂಗಳೂರು:ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಆಸ್ಪತೆಯಲ್ಲಿ ಹಾಸಿಗೆ, ಚಿಕಿತ್ಸೆ, ಆಕ್ಸಿಜನ್, ಔಷಧಿ, ಕೊನೆಗೆ ಶವ ಸಂಸ್ಕಾರ ಸೇರಿ ಎಲ್ಲದಕ್ಕೂ ಜನ ಕ್ಯೂ ನಿಲ್ಲುವಂತೆ ಮಾಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

    ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಬಡವರಿಗೆ ಆಹಾರ ಕಿಟ್ ಹಾಗೂ ಆರ್ಥಿಕ ನೆರವು ವಿತರಣೆ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು:

    ದೇಶದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಪ್ರತಿಯೊಂದು ವಿಚಾರಕ್ಕೂ ನಿಮ್ಮನ್ನೆಲ್ಲ ಕ್ಯೂ ನಿಲ್ಲಿಸಿದರಲ್ಲಾ ಅಂತಾ ಸಂಕಟವಾಗುತ್ತಿದೆ. ನೋಟು ರದ್ದು ಮಾಡಿ, ನಿಮ್ಮ ದುಡ್ಡು ನೀವು ತೆಗೆದುಕೊಳ್ಳಲು ಕ್ಯೂ ನಿಲ್ಲಿಸಿ ಸಾಯಿಸಿದರು. ನಂತರ ಆಧಾರ್ ಜೋಡಣೆ ವಿಚಾರವಾಗಿ ಮತ್ತೆ ಬ್ಯಾಂಕ್ ಮುಂದೆ ಕ್ಯೂ ನಿಲ್ಲಿಸಿದರು. ದೇಶಕ್ಕೆ ಮಹಾಮಾರಿ ಕರೆತಂದು, ಆಸ್ಪತ್ರೆ ಮುಂದೆ ಕ್ಯೂ, ಆಂಬುಲೆನ್ಸ್ ಗೂ ಕ್ಯೂ, ಔಷಧಿಗೂ ಕ್ಯೂ, ಆಕ್ಸಿಜನ್ ಗೂ ಕ್ಯೂ, ಕೊನೆಗೆ ಶವ ಸಂಸ್ಕಾರಕ್ಕೂ ಕ್ಯೂ ನಿಲ್ಲಿಸಿದರು.

    ಈಗ ಆಹಾರ ಕಿಟ್ ಕೊಡಲು ನಾವು ನಿಮ್ಮನ್ನು ಕ್ಯೂ ನಿಲ್ಲಿಸಿದ್ದೇವೆ. ಇದು ಸರ್ಕಾರದ ಆಹಾರ ಕಿಟ್ ಅಲ್ಲ, ಕಾಂಗ್ರೆಸ್ ನಾಯಕರು ತಮ್ಮ ಶ್ರಮದಿಂದ ಸಂಪಾದಿಸಿದ ಸ್ವಂತ ಹಣದಲ್ಲಿ ನೀಡುತ್ತಿರುವ ಕಿಟ್. ಬೆಂಗಳೂರಿನಿಂದ ದಿಲ್ಲಿವರೆಗೆ ದೇಶದಲ್ಲಿ ನೀವು ಬದಲಾವಣೆ ತರಬೇಕು. ಇದನ್ನೂ ಓದಿ: ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಸಿಎಂ ಬಿ.ಎಸ್.ಯಡಿಯೂರಪ್ಪ

    ಚುನಾವಣೆ ಕಾರಣಕ್ಕೆ ನಾವು ಇಲ್ಲಿಗೆ ಬಂದು ಈ ಕಾರ್ಯಕ್ರಮ ಮಾಡುತ್ತಿಲ್ಲ. ದೇಶದೆಲ್ಲೆಡೆ ಜನ ಸಂಕಟದಲ್ಲಿದ್ದು, ಅವರಿಗೆ ಸಹಾಯ ಮಾಡಲು ನಾವು ಈ ಇಲ್ಲಿಗೆ ಬಂದಿದ್ದೇವೆ. ನಾವು ಮಾಡುವ ಸಹಾಯದಿಂದ ನಿಮ್ಮ ಜೀವನ ಉದ್ಧಾರವಾಗುತ್ತದೆ ಎಂದು ಹೇಳುತ್ತಿಲ್ಲ. ಆದರೆ ಕಷ್ಟದಲ್ಲಿರುವ ಜನರ ಭಾರವನ್ನು ಸ್ವಲ್ಪ ಮಟ್ಟಿಗಾದರೂ ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ.

    ಬಡವರು, ಮಧ್ಯಮ ವರ್ಗದವರು ತಮ್ಮ ಬಳಿ ಇದ್ದ ಅಲ್ಪಸ್ವಲ್ಪ ಚಿನ್ನ ಅಡವಿಟ್ಟು ಜೀವನ ಮಾಡಲು ಮುಂದಾಗಿದ್ದಾರೆ. ಅನೇಕರು ಉದ್ಯೋಗ ಕಳೆದುಕೊಂಡರು. ಉದ್ಯೋಗ ಕೊಡುತ್ತೇವೆ ಎಂದವರು ವಿದ್ಯಾವಂತರಿಗೆ ಪಕೋಡಾ ಮಾರಲು ಹೇಳಿದರು. ಪಕೋಡಾ ಮಾಡುವ ಅಡುಗೆ ಎಣ್ಣೆ ಬೆಲೆಯನ್ನು ರೂ.200ಕ್ಕೆ ಹೆಚ್ಚಿಸಿದ್ದಾರೆ. ಇಡೀ ದೇಶದ ಜನರನ್ನು ಬಡತನಕ್ಕೆ ನೂಕಿದ್ದಾರೆ.

    ದೇಶದಲ್ಲಿ ಪೆಟ್ರೋಲ್ ಮೂಲಬೆಲೆ 35 ರೂ., ಅದಕ್ಕೆ ತೆರಿಗೆ 65 ರೂ. ನೆರೆ ರಾಷ್ಟ್ರಗಳಲ್ಲಿ ಅರ್ಧದಷ್ಟಿದ್ದರೂ ನಮ್ಮಲ್ಲಿ ಮಾತ್ರ ಬೆಲೆ ಹೆಚ್ಚುತ್ತಲೇ ಇದೆ. ಈ ಸರ್ಕಾರ ದಿನಾ ಜನರ ಜೇಬು ಪಿಕ್ ಪಾಕೆಟ್ ಮಾಡುತ್ತಿದೆ. ಇದನ್ನೂ ಓದಿ: ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು: ಜೋಶಿ

    ಆರ್ಥಿಕ ನೆರವು:
    ನಮ್ಮ ನಾಯಕರು ತಮ್ಮ ಸ್ವಂತ ಹಣದಲ್ಲಿ ನಿಮಗೆ ಸಹಾಯ ಮಾಡಲು ಮುಂದಾಗಿದ್ದಾರೆ. ನಮ್ಮ ನಾಯಕರೆಲ್ಲರೂ ಹಣ ಸೇರಿಸಿ ಈ ಕ್ಷೇತ್ರದ ಬಡ ಕುಟುಂಬಗಳಿಗೆ ತಲಾ 1 ಸಾವಿರ ರೂ. ನೀಡುತ್ತಿದ್ದಾರೆ. ಅವರಿಗೆ ಶಕ್ತಿ ತುಂಬಲು ನಾನಿಲ್ಲಿಗೆ ಬಂದಿದ್ದೇನೆ. ಈ ಹಣ ನಿಮ್ಮ ಎಲ್ಲಾ ಸಮಸ್ಯೆ ಬಗೆಹರಿಸದೆ ಇರಬಹುದು. ಆದರೆ ಕಷ್ಟಕಾಲದಲ್ಲಿ ನಿಮ್ಮ ಜತೆ ನಿಲ್ಲಲು ನಮ್ಮ ನಾಯಕರು ಮುಂದೆ ಬಂದಿದ್ದಾರೆ. ಅನೇಕರಿಗೆ ಊಟಕ್ಕೆ, ಔಷಧಿಗೆ ಹಣವಿರುವುದಿಲ್ಲ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸಲು ಈ ಹೆಜ್ಜೆ ಇಟ್ಟಿದ್ದಾರೆ. ಆ ಮೂಲಕ ನಿಮ್ಮ ಋಣ ತೀರಿಸುವ ಸಣ್ಣ ಪ್ರಯತ್ನ ಮಾಡುತ್ತಿದ್ದಾರೆ.

    ಕಳೆದ ಬಾರಿ ಹಾಲು ಕೇಳಿದವರಿಗೆ ಐಪಿಸಿ ಸೆಕ್ಷನ್ 307 ರ ಅಡಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿನ ಬಿಜೆಪಿ ನಾಯಕರು ಪೊಲೀಸರನ್ನು ಬಳಸಿಕೊಂಡು ಮೂರ್ನಾಲ್ಕು ಕೇಸ್ ಹಾಕಿಸಿದ್ದಾರೆ ಎಂದು ಒಬ್ಬರು ಹೆಣ್ಣು ಮಗಳು ಹೇಳುತ್ತಿದ್ದರು. ಆ ರೀತಿ ನಿಮಗೆ ಯಾರಾದರೂ ಯಾವುದೇ ತೊಂದರೆ ಕೊಟ್ಟರೆ ನಮ್ಮನ್ನು ಭೇಟಿ ಮಾಡಿ. ನಿಮ್ಮ ರಕ್ಷಣೆಗೆ ಕಾಂಗ್ರೆಸ್ ಸದಾ ನಿಲ್ಲಲಿದೆ. ಮುಂದಿನ ದಿನಗಳಲ್ಲಿ ಕಾರ್ಪೊರೇಷನ್ ಚುನಾವಣೆ ಬರುತ್ತಿದೆ, ವಿಧಾನಸಭೆ ಚುನಾವಣೆಯೂ ಬರಲಿದೆ. ನೀವು ಬಿಜೆಪಿಯವರಿಗೆ ಬುದ್ದಿ ಕಲಿಸಬೇಕು. ನಾವು ನಿಮ್ಮ ಜತೆ ಇರುತ್ತೇವೆ.

  • ಪಕ್ಷ ಹೇಳಿದ್ದಕ್ಕಿಂತ ಹೆಚ್ಚು ಸೇವೆ ಮಾಡುತ್ತಿದ್ದಾರೆ- ಜಮೀರ್ ಗೆ ಸಿದ್ದರಾಮಯ್ಯ ಬಹುಪರಾಕ್

    ಪಕ್ಷ ಹೇಳಿದ್ದಕ್ಕಿಂತ ಹೆಚ್ಚು ಸೇವೆ ಮಾಡುತ್ತಿದ್ದಾರೆ- ಜಮೀರ್ ಗೆ ಸಿದ್ದರಾಮಯ್ಯ ಬಹುಪರಾಕ್

    ಬೆಂಗಳೂರು: ಶಾಸಕ ಜಮೀರ್ ಅಹಮದ್ ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಹುಪರಾಕ್ ಹೇಳಿದ್ದು, ಪಕ್ಷ ಹೇಳಿದ್ದಕ್ಕಿಂತ ಹೆಚ್ಚು ಜನರ ಸೇವೆ ಮಾಡುತ್ತಿದ್ದಾರೆ. ಜಮೀರ್ ಆಡಳಿತ ಪಕ್ಷದವರಿಗಿಂತ ಹೆಚ್ಚು ಕೆಲಸ ಮಾಡುತ್ತಿದ್ದಾರೆ ಎಂದು ಕೊಂಡಾಡಿದ್ದಾರೆ.

    ರಾಯಪುರ ವಾರ್ಡ್ ನಲ್ಲಿ ಜಮೀರ್ ಅಹಮದ್ ಆಯೋಜಿಸಿದ್ದ ದಿನಸಿ ಕಿಟ್ ಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಮೀರ್ ಮನುಷ್ಯತ್ವ ಇರುವ ಶಾಸಕ. ಯಾರೇ ಬಂದರೂ, ಸಾಲ ಮಾಡಿಯಾದರೂ ಜನರಿಗೆ ಸಹಾಯ ಮಾಡುತ್ತಾರೆ. ಇಂಥ ಶಾಸಕರನ್ನು ಪಡೆದ ಚಾಮರಾಜಪೇಟೆ ಜನರು ಧನ್ಯರು. ಜಮೀರ್ ಇಲ್ಲೇ ಗೆದ್ದು ಮುಂದೆ ಸಚಿವರಾಗಲಿ ಎಂದು ಹಾಡಿ ಹೊಗಳಿದ್ದಾರೆ.

    ಇದೇ ವೇಳೆ ಚಾಮರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿದ ಅವರು, ಚಾಮರಾಜಪೇಟೆ ಕ್ಷೇತ್ರಕ್ಕೆ ಸಿದ್ದರಾಮಯ್ಯ ಯಾಕೆ ಪದೇ ಪದೇ ಹೋಗುತ್ತಾರೆ ಎಂದು ಬಹಳ ಜನ ಪ್ರಶ್ನಿಸುತ್ತಾರೆ. ತಮ್ಮ ಕ್ಷೇತ್ರಕ್ಕೆ ಜಮೀರ್ ಪದೇ ಪದೇ ಕರೆಯುತ್ತಾರೆ, ಅದಕ್ಕೆ ಬರುತ್ತಿರುತ್ತೇನೆ. ಬಾದಾಮಿ ಬಿಟ್ಟು ಚಾಮರಾಜಪೇಟೆಯಲ್ಲೇ ಸ್ಪರ್ಧಿಸಲು ಜಮೀರ್ ಹೇಳುತ್ತಾರೆ. ಅದು ಜಮೀರ್ ಖಾನ್ ಔದಾರ್ಯ, ಈ ಕ್ಷೇತ್ರಕ್ಕೆ ಬನ್ನಿ ಎಂದು ಔದಾರ್ಯ ತೋರಿಸುತ್ತಿದ್ದಾರೆ. ಆದರೆ ನಾನು ಬಾದಾಮಿಯಲ್ಲೇ ಸ್ಪರ್ಧಿಸುತ್ತೇನೆ ಎಂದರು. ಈ ವೇಳೆ ಸಿದ್ದರಾಮಯ್ಯನವರಿಗೆ ಚಾಮರಾಜಪೇಟೆಯಲ್ಲೇ ಸ್ಪರ್ಧಿಸಿ ಎಂದು ಜಮೀರ್ ಒತ್ತಾಯಿಸಿದ್ದು, ಜಮೀರ್ ಬೆಂಬಲಿಗರು ಸಹ ಇದಕ್ಕೆ ದನಿಗೂಡಿಸಿದರು. ಬಳಿಕ ಅದೇನೇ ಇರಲಿ, ಅದರ ಬಗ್ಗೆ ಆಮೇಲೆ ಯೋಚನೆ ಮಾಡೋಣ ಎಂದು ಸಿದ್ದರಾಮಯ್ಯ ತಿಳಿಸಿದರು.

    ರಾಯಪುರ ವಾರ್ಡ್ ನಲ್ಲಿ ಶಾಸಕ ಜಮೀರ್ ಅಹಮದ್ ರಿಂದ ದಿನಸಿ ಕಿಟ್ ಗಳ ವಿತರಣೆ ಕಾರ್ಯಕ್ರಮ ನಡೆಸಲಾಯಿತು. 300 ಜನ ಪೌರ ಕಾರ್ಮಿಕರಿಗೆ ಉಚಿತ ಕಿಟ್ ಗಳ ವಿತರಣೆ ಮಾಡಲಾಯಿತು.

  • ಕೊರೊನಾದಿಂದ ನಿಧನವಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಜನ್ಮದಿನಾಚರಣೆಯಲ್ಲಿ ಡಿಕೆಶಿ ಭಾಗಿ

    ಕೊರೊನಾದಿಂದ ನಿಧನವಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಜನ್ಮದಿನಾಚರಣೆಯಲ್ಲಿ ಡಿಕೆಶಿ ಭಾಗಿ

    – ಆಹಾರ, ತರಕಾರಿ ಕಿಟ್ ವಿತರಣೆ

    ಬೆಂಗಳೂರು: ಕೊರೊನಾದಿಂದ ನಿಧನವಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಹುಟ್ಟುಹಬ್ಬದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗವಹಿಸಿ, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಫುಡ್ ಕಿಟ್ ವಿತರಿಸಿದ್ದಾರೆ.

    ಕಳೆದ ತಿಂಗಳು ಕೊರೊನಾದಿಂದ ನಿಧನರಾದ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಕಾಂತರಾಜು ಅವರ ಜನ್ಮದಿನದ ಅಂಗವಾಗಿ ಮಾಗಡಿ ವಿಧಾನಸಭೆ ಕ್ಷೇತ್ರದ ಬಿಡದಿಯ ಹೆಜ್ಜಾಲದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದನ್ನೂ ಓದಿ: 10 ಸಾವಿರ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆಗೆ ನಿಖಿಲ್ ಕುಮಾರಸ್ವಾಮಿ ಚಾಲನೆ

    ಬಳಿಕ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಡವರಿಗೆ ಆಹಾರ ಮತ್ತು ತರಕಾರಿ ಕಿಟ್ ಗಳನ್ನು ವಿತರಿಸಿದರು. ಸಂಸದ ಡಿ.ಕೆ.ಸುರೇಶ್, ಮಾಜಿ ಶಾಸಕ ಬಾಲಕೃಷ್ಣ ಮತ್ತಿತರ ಮುಖಂಡರು ಭಾಗವಹಿಸಿದ್ದರು.

  • ಯಡಿಯೂರಪ್ಪನವರು ಸಿಎಂ ಆದಾಗೆಲ್ಲಾ ಕಷ್ಟ ಬರುತ್ತವೆ: ಗೂಳಿಹಟ್ಟಿ ಶೇಖರ್

    ಯಡಿಯೂರಪ್ಪನವರು ಸಿಎಂ ಆದಾಗೆಲ್ಲಾ ಕಷ್ಟ ಬರುತ್ತವೆ: ಗೂಳಿಹಟ್ಟಿ ಶೇಖರ್

    ಚಿತ್ರದುರ್ಗ: ರಾಜ್ಯದ ಚುಕ್ಕಾಣಿ ಹಿಡಿದರೆ ಸಾಕು ನಮ್ಮ ಹಣೆ ಬರಹವೇ ಬದಲಾಗುತ್ತದೆ ಅಂತ ಕೆಲ ರಾಜಕಾರಣಿಗಳು ಕನಸು ಕಾಣುತ್ತಾರೆ. ಆದರೆ ನಮ್ಮ ಬಿ.ಎಸ್. ಯಡಿಯೂರಪ್ಪನವರ ಗ್ರಹಚಾರವೋ ಏನೋ ಗೊತ್ತಿಲ್ಲ. ಅವರು ಸಿಎಂ ಆದಾಗೆಲ್ಲಾ ಕಷ್ಟಗಳು ಬಂದೇ ಬರುತ್ತಿವೆ ಎಂದು ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅನುಕಂಪ ವ್ಯಕ್ತಪಡಿಸಿದ್ದಾರೆ.

    ಹೊಸದುರ್ಗ ನಗರದ ಸ್ಲಂ ನಿವಾಸಿಗಳು ಹಾಗೂ ಕಡು ಬಡವರಿಗೆ ಉಚಿತವಾಗಿ 6,500 ಆಹಾರ ಕಿಟ್ ವಿತರಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬಿಎಸ್ ವೈ ಬದಲಾವಣೆ ವಿಚಾರದ ಚರ್ಚೆ ನಡೆಯುತ್ತಿದೆ. ಆದರೆ ರಾಜ್ಯದ ಸಿಎಂ ಆಗಿ ಬಿಎಸ್‍ವೈ ಅವರು ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಆದರೆ ಅವರ ಗ್ರಹಚಾರವೋ, ಏನೋ ಗೊತ್ತಿಲ್ಲ ಅವರು ಕಳೆದ ಬಾರಿ ಮುಖ್ಯಮಂತ್ರಿಯಾದಾಗ ಎಲ್ಲೆಡೆ ನೆರೆ ಹಾವಳಿಯ ಸಂಕಷ್ಟ ಎದುರಾಗಿತ್ತು. ಆಗ ಎದೆಗುಂದದೇ ನೆರೆಹಾವಳಿಯನ್ನು ಸಿಎಂ ಎದುರಿಸಿದರು. ಈ ಬಾರಿಯು ಸಹ ನೆರೆ ಹಾವಳಿ ಜೊತೆಗೆ ಕೋವಿಡ್ ಸಂಕಷ್ಟ ಎದುರಾಗಿದೆ ಎಂದರು.ಇದನ್ನು ಓದಿ: 8 ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ – ಏನು ಚರ್ಚೆ ನಡೆಯಿತು?

    ಹೀಗಾಗಿ ಪ್ರತಿದಿನ ತೀವ್ರ ಒತ್ತಡದಲ್ಲಿ ಸಿಎಂ ಕೆಲಸ ಮಾಡುವಂತಾಗಿದೆ. ಇಂತಹ ಸಮಯದಲ್ಲಿ ಮುಖ್ಯಮಂತ್ರಿಯಾಗಿ ನೆಮ್ಮದಿಯಿಂದ ಎಲ್ಲಾ ಪೂರೈಸುವುದು ಕಷ್ಟ ಎನಿಸುತ್ತಿದೆ. ಆದರೆ ಸಿಎಂ ಸ್ಥಾನದ ಬಗ್ಗೆ ಪಕ್ಷದ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ. ಸಿಎಂ ಬದಲಾವಣೆ ಬಗ್ಗೆ ನಾನೇನು ಹೇಳಿಕೆ ನೀಡಲ್ಲ, ನಮ್ಮ ಪಕ್ಷದ ತೀರ್ಮಾನವೇ ಅಂತಿಮ ಎಂದು ಶಾಸಕ ಗೂಳಿಹಟ್ಟಿ ಶೇಖರ್ ಸ್ಪಷ್ಟಪಡಿಸಿದ್ದಾರೆ. ಇದನ್ನು ಓದಿ: ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಎಂಟ್ರಿ..!

  • ಉಡುಪಿ ಮಲಬಾರ್  ಗೋಲ್ಡ್‌ನಿಂದ 18 ಲಕ್ಷ ರೂ. ಫುಡ್ ಕಿಟ್ ವಿತರಣೆ

    ಉಡುಪಿ ಮಲಬಾರ್  ಗೋಲ್ಡ್‌ನಿಂದ 18 ಲಕ್ಷ ರೂ. ಫುಡ್ ಕಿಟ್ ವಿತರಣೆ

    ಉಡುಪಿ: ಕೊರೊನಾ ಎರಡನೇ ಅಲೆಯ ಸಂದರ್ಭ ಉಡುಪಿಯ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಸಂಸ್ಥೆ 18 ಲಕ್ಷ ರೂಪಾಯಿ ವೆಚ್ಚದ ಕಿಟ್ ಗಳನ್ನು ಸಾರ್ವಜನಿಕರಿಗೆ ಹಂಚಿ ಮಾನವೀಯತೆ ಮೆರೆದಿದೆ.

    ಉಡುಪಿಯ ಜ್ಯುವೆಲ್ಲರಿ ಮಳಿಗೆ ಮಲಬಾರ್ ಗೋಲ್ಡ್ ಚಾರಿಟೇಬಲ್ ಟ್ರಸ್ಟ್ ನ ಸಾಮಾಜಿಕ ಸೇವೆ ಮುಂದುವರಿದಿದೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 25 ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾನುಗಳನ್ನು ವಿತರಣೆ ಮಾಡಲಾಯಿತು. ಮಲಬಾರ್ ಗೋಲ್ಡ್ ಸಿಬ್ಬಂದಿಗಳು, ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರು ಕಿಟ್ ಗಳನ್ನು ವಿತರಣೆ ಮಾಡಿದರು.

    ಉಪ್ಪೂರು ಪಂಚಾಯತ್ ವ್ಯಾಪ್ತಿಯ ಆರ್ಥಿಕವಾಗಿ ಸಂಕಷ್ಟದಲ್ಲಿರುವ, ಕೂಲಿಕಾರ್ಮಿಕ ಕುಟುಂಬಗಳಿಗೆ ಫುಡ್ ಕಿಟ್ ವಿತರಿಸಲಾಯ್ತು. ಈ ಸಂದರ್ಭದಲ್ಲಿ, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ಇರ್ಷಾದ್, ನಿತಿನ್ ಶೇಟ್, ತಸ್ಲೀಮ್, ಫಯಾಜ್ ಉಪಸ್ಥಿತರಿದ್ದರು. ಕಳೆದ ಒಂದು ತಿಂಗಳಲ್ಲಿ ಮಲಬಾರ್ ಗೋಲ್ಡ್ 18 ಲಕ್ಷ ರುಪಾಯಿ ವೆಚ್ಚದ, 3000 ಫುಡ್ ಕಿಟ್ ವಿತರಣೆ ಮಾಡಿದೆ. ಜಿಲ್ಲೆಯ 80 ಕ್ಕೂ ಹೆಚ್ಚು ಗ್ರಾಮಗಳಿಗೆ ಟ್ರಸ್ಟ್ ದಿನಸಿಯನ್ನು ಒದಗಿಸಿದೆ.

    ಮಲಬಾರ್ ಗೋಲ್ಡ್ ಉಡುಪಿ ಇದರ ಸ್ಟೋರ್ ಹೆಡ್ ಹಫೀಜ್ ರೆಹಮಾನ್ ಮಾತನಾಡಿ, ನಮ್ಮ ಸಂಸ್ಥೆ ಆರಂಭದ ದಿನಗಳಿಂದಲೂ ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದೆ. ಕೊರೊನಾ ಸಂದರ್ಭದಲ್ಲಿ ಬಹಳಷ್ಟು ಜನ ಇಕ್ಕಟ್ಟಿಗೆ ಸಿಲುಕಿದ್ದಾರೆ. ಆರ್ಥಿಕವಾಗಿ ಬಹಳ ಹಿಂದುಳಿದ ಜನಗಳನ್ನು ಗುರುತಿಸಿ ಅವರ ದೈನಂದಿನ ಜೀವನಕ್ಕೆ ಬಳಕೆಯಾಗುವ ವಸ್ತುಗಳನ್ನು ಕೊಡುತ್ತಿದ್ದೇವೆ. ಸಂಕಷ್ಟದ ಕಾಲದಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲದಿದ್ದರೆ ದೇವರು ಮೆಚ್ಚುವುದಿಲ್ಲ. ದಿನಸಿ ಕಿಟ್ ಗಳ ಜೊತೆ ಅನಾರೋಗ್ಯ ಪೀಡಿತರಿಗೆ ಹೆಲ್ತ್ ಕಿಟ್ ಗಳನ್ನು ಕೂಡ ಕೊಟ್ಟಿದ್ದೇವೆ ಎಂದರು.

  • ಏಳೆಂಟು ಕಿ.ಮೀ. ಹೆಗಲ ಮೇಲೆ ಫುಡ್ ಕಿಟ್ ಹೊತ್ತು ಬಡವರಿಗೆ ನೀಡಿದ ಹೃದಯವಂತರು

    ಏಳೆಂಟು ಕಿ.ಮೀ. ಹೆಗಲ ಮೇಲೆ ಫುಡ್ ಕಿಟ್ ಹೊತ್ತು ಬಡವರಿಗೆ ನೀಡಿದ ಹೃದಯವಂತರು

    – ಆಶಾ ಕಾರ್ಯಕರ್ತೆಯರಿಗೆ ಬಾಗಿನ ನೀಡಿ ಗೌರವ ಸಮರ್ಪಣೆ

    ಚಿಕ್ಕಮಗಳೂರು: ನಕ್ಸಲ್ ಪೀಡಿತ ಪ್ರದೇಶ ಹಾಗೂ ಕುಗ್ರಾಮಗಳಲ್ಲಿರುವ ಬಡವರು, ನಿರ್ಗತಿಕರು, ವಿಕಲಚೇತನರನ್ನ ಗುರುತಿಸಿ ಅವರ ಮನೆ ಬಾಗಿಲಿಗೆ ಹೋಗಿ ಕಿಟ್ ವಿತರಿಸಿರುವಂತಹ ಹೃದಯ ವೈಶಾಲ್ಯತೆಯ ಘಟನೆಗೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಹೋಬಳಿ ಸಾಕ್ಷಿಯಾಗಿದೆ.

    ಜಯಪುರದಲ್ಲಿರುವ ಸ್ಪಂದನಾ ಟ್ರಸ್ಟ್‍ನ ಸದಸ್ಯರು ತಮ್ಮ ಹೋಬಳಿ ವ್ಯಾಪ್ತಿಯಲ್ಲಿ ಬರುವ ನಿರ್ಗತಿಕರು, ನಿರಾಶ್ರಿತರು, ಅಂಗವಿಕಲರು, ವೃದ್ಧರಿಗೆ ಕಿಟ್ ನೀಡಿ ಧೈರ್ಯ ತುಂಬಿದ್ದಾರೆ. ಜೊತೆಗೆ ಮೆಣಸಿನ ಹಾಡ್ಯ, ಇಡಗುಂದ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿರುವ ವಿವಿಧ ನಕ್ಸಲ್ ಪೀಡಿತ ಪ್ರದೇಶಗಳ ಬಡವರಿಗೂ ಕಿಟ್ ನೀಡಿದ್ದಾರೆ. ಇದೇ ವೇಳೆ, ಜೀವದ ಹಂಗನ್ನ ತೊರೆದು ಕುಗ್ರಾಮಗಳ ಜನರ ಜೀವವನ್ನು ಉಳಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೂ ಬಾಗಿನ ನೀಡಿ ಗೌರವಿಸಿದ್ದಾರೆ.

    ಹೆಮ್ಮಾರಿ ಕೊರೊನಾ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಎರಡನೇ ಅಲೆಯ ಅಬ್ಬರ ಗ್ರಾಮೀಣ ಭಾಗದ ಜನರ ಕಷ್ಟವನ್ನು ಹೇಳುವಂತಿಲ್ಲ. ಅದರಲ್ಲೂ ಮಲೆನಾಡ ಕುಗ್ರಾಮಗಳು, ನಕ್ಸಲ್ ಪೀಡಿತ ಪ್ರದೇಶದ ಜನರ ಪರಿಸ್ಥಿತಿ ಮತ್ತಷ್ಟು ಶೋಚನೀಯವಾಗಿದೆ. ಮಲೆನಾಡ ಬಹುತೇಕ ಭಾಗದಲ್ಲಿ ಜನ ಅಂದೇ ದುಡಿದು ಅಂದೇ ಊಟ ಮಾಡುವವರೇ ಹೆಚ್ಚು. ಕೊರೊನಾ ಕಾಲದಲ್ಲಂತೂ ಕೈಯಲ್ಲಿ ಹಣವಿಲ್ಲ, ಕೂಲಿಯೂ ಇಲ್ಲ. ಸಾರಿಗೆ ಸಂಪರ್ಕವೂ ಇಲ್ಲ. ನಗರ ಪ್ರದೇಶಕ್ಕೂ ಬರುವಂತಿಲ್ಲ. ಹೀಗಾಗಿ ಜನರ ಕಷ್ಟವನ್ನು ಕಣ್ಣಲ್ಲಿ ನೋಡದಿದ್ದರೂ ಸಹ ಸ್ಪಂದನ ಟ್ರಸ್ಟ್‍ನ ಸದಸ್ಯರು ಅವರ ಸಂಕಟವನ್ನ ಮನಗಂಡು ಕಿಟ್ ನೀಡಿ ಅವರ ನೆರವಿಗೆ ನಿಂತಿದ್ದಾರೆ. ದಟ್ಟ ಕಾನನ, ರಸ್ತೆ ಸಂಪರ್ಕವೂ ಇರಲ್ಲ. ಸಾರಿಗೆ ವ್ಯವಸ್ಥೆಯಂತೂ ಮೊದಲೇ ಇಲ್ಲ. ಅಂತಹ ಹಲವು ಗ್ರಾಮಗಳಿವೆ. ಗ್ರಾಮಗಳ ಬಡಕುಟುಂಬಗಳನ್ನು ಗುರುತಿಸಿ ಕಿಟ್ ನೀಡಲು ಕಾಡು-ಮೇಡು ಸುತ್ತಿ ಹಸಿದವರ ಹೊಟ್ಟೆ ತುಂಬಿಸುತ್ತಿದ್ದಾರೆ.

    ಕೊರೊನಾ ಲಾಕ್‍ಡೌನ್‍ನಲ್ಲಿ ನಗರಕ್ಕೆ ಬರಲು ಸಾಧ್ಯವಾಗದೆ ಹಸಿವಿನ ಸಂಕಟದಲ್ಲಿರುವ ಜನರ ನೆರವಿಗೆ ನಿಂತಿದ್ದಾರೆ. ಗುಡ್ಡಗಾಡಿನ ಸ್ಥಳಗಳಿಗೆ ಹೋಗಿ ಅಲ್ಲಿರುವ ಬಡ ಕುಟುಂಬಗಳಿಗೆ ಕಿಟ್ ವಿತರಿಸಿ ಅವರಿಗೆ ಸಹಾಯದ ಹಸ್ತ ತೋರಿದ್ದಾರೆ. ಸ್ಪಂದನ ಟ್ರಸ್ಟ್‍ನ ಈ ಸೇವಾ ಕಾರ್ಯಕ್ಕೆ ರಾಷ್ಟ್ರೀಯ ಸ್ವಯಂ ಸೇವಕರ ತಂಡ ಕೂಡ ಸಹಕಾರ ನೀಡಿದೆ.

    ಸ್ಪಂದನ ಟ್ರಸ್ಟಿಗಳ ಕೆಲಸಕ್ಕೆ ಅಲ್ಲಿನ ಜನ ಕೂಡ ಅಭಿನಂದನೆ ಸಲ್ಲಿಸಿದ್ದಾರೆ. ಇದರ ಜೊತೆ, ಜೀವದ ಹಂಗು ತೊರೆದು ಕೊರೋನಾ ವಿರುದ್ಧ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೂ ಸೀರೆ ಸೇರಿದಂತೆ ಬಾಗಿನ ನೀಡಿ ಗೌರವಿಸಿ ಅವರ ಸೇವೆಯನ್ನ ಶ್ಲಾಘಿಸಿದರು.