Tag: ಫುಡ್ ಡೆಲವರಿ ಬಾಯ್

  • ಫುಡ್ ಡೆಲಿವರಿ ಬಾಯ್ ಜೊತೆ ರಾಹುಲ್ ಗಾಂಧಿ ಬೈಕ್‍ ರೈಡ್‌

    ಫುಡ್ ಡೆಲಿವರಿ ಬಾಯ್ ಜೊತೆ ರಾಹುಲ್ ಗಾಂಧಿ ಬೈಕ್‍ ರೈಡ್‌

    ಬೆಂಗಳೂರು: ಸೆಕ್ಯುರಿಟಿ ಬಿಟ್ಟು ಫುಡ್ ಡೆಲಿವರಿ ಬಾಯ್ ಜೊತೆ ಕಾಂಗ್ರೆಸ್ (Congress) ಮುಖಂಡ ರಾಹುಲ್ ಗಾಂಧಿ (Rahul Gandhi) ಬೈಕ್‍ನಲ್ಲಿ (Bike) ಸಂಚರಿಸಿದರು.

    ರಾಜ್ಯ ವಿಧಾನಸಭೆ ಚುನಾವಣೆಗೆ 3 ದಿನಗಳು ಬಾಕಿಯಿದೆ. ನಾಳೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ವಿವಿಧ ರಾಷ್ಟ್ರೀಯ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಂಚಾರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಹೌದು ದ್ವಿಚಕ್ರ ವಾಹನದಲ್ಲಿ ಡೆಲಿವರಿ ಬಾಯ್ ಜೊತೆ ಬೆಂಗಳೂರಿನಲ್ಲಿ ಸುತ್ತಾಟ ನಡೆಸಿದ್ದು, ಏರ್‌ಲೈನ್ಸ್ ಹೋಟೆಲ್ ಅಲ್ಲಿ ರಾಹುಲ್ ಗಾಂಧಿ ತಿಂಡಿ ಸವಿದರು. ಫುಡ್ ಡೆಲಿವರಿ ಬಾಯ್ ಜೊತೆ ಏರ್‌ಲೈನ್ಸ್ ಹೋಟೆಲ್, ಚಿನ್ನಸ್ವಾಮಿ, ರಾಜಭವನ ರಸ್ತೆಯಲ್ಲಿ ಸಂಚಾರ ನಡೆಸಿದರು. ಇದನ್ನೂ ಓದಿ: ರೇಟ್ ಕಾರ್ಡ್ ಕೊಟ್ಟಿದ್ದು ಬಿಜೆಪಿಯವರು, ನಾವು ಪ್ರಿಂಟ್‌ ಮಾಡಿದ್ದೇವೆ: ಡಿಕೆಶಿ

    ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನ ಎಸ್‍ಸಿಜೆ ಆಸ್ಪತ್ರೆಯಲ್ಲಿ ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮಾನ್ ಚಾಂಡಿ ಅವರನ್ನು ರಾಹುಲ್ ಗಾಂಧಿ ಭೇಟಿ ಮಾಡಿದರು. ಅನಾರೋಗ್ಯದಿಂದ ಬಳಲುತ್ತಿರುವ ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮಾನ್ ಚಾಂಡಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಉಮ್ಮಾನ್ ಚಾಂಡಿ ಅವರ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ಮನೆ ಮೇಲೆ IT ರೇಡ್ – ಕೋಟಿ ಕೋಟಿ ಹಣ ಸೀಜ್

  • ಪಾರ್ಸಲ್ ಕೊಡಲು ತಡ- ರೆಸ್ಟೋರೆಂಟ್ ಮಾಲೀಕನನ್ನ ಗುಂಡಿಕ್ಕಿ ಕೊಂದ ಫುಡ್ ಡೆಲಿವರಿ ಬಾಯ್

    ಪಾರ್ಸಲ್ ಕೊಡಲು ತಡ- ರೆಸ್ಟೋರೆಂಟ್ ಮಾಲೀಕನನ್ನ ಗುಂಡಿಕ್ಕಿ ಕೊಂದ ಫುಡ್ ಡೆಲಿವರಿ ಬಾಯ್

    ನವದೆಹಲಿ: ಫುಡ್ ಡೆಲಿವರಿ ಬಾಯ್ ಒಬ್ಬ ಪಾರ್ಸಲ್ ನೀಡುವುದು ತಡವಾಯಿತು ಎಂಬ ಕಾರಣಕ್ಕೆ ರೆಸ್ಟೋರೆಂಟ್ ಮಾಲೀಕನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

    ಸುನಿಲ್ ಅಗರ್‍ವಾಲ್ ಮೃತನಾಗಿದ್ದಾನೆ. ಮಿತ್ರ ಎಂಬ ಸ್ವಂತ ರೆಸ್ಟೋರೆಂಟ್ ಹೊಂದಿದ್ದರು. ರಾತ್ರಿ ಫುಡ್ ಡೆಲಿವರಿ ಬಾಯ್‍ನಿಂದ ಕೊಲೆಯಾಗಿದ್ದಾರೆ. ಫುಡ್ ತಡವಾಗುತ್ತದೆ ಎನ್ನುವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ. ಇದನ್ನೂ ಓದಿ: ಕೇಳದೇ ಪಾನಿಪುರಿ ತಂದ ಗಂಡ- ಪ್ರಾಣ ಬಿಟ್ಟ ಪತ್ನಿ

     

    ಮಿತ್ರ ರೆಸ್ಟೋರೆಂಟ್‍ಗೆ ಚಿಕನ್ ಬಿರಿಯಾನಿ ಹಾಗೂ ಪೂರಿ ಸಬ್ಜಿ ಆರ್ಡರ್ ಬಂದಿತ್ತು. ಆ ಆರ್ಡರ್ ಅನ್ನು ತೆಗೆದುಕೊಂಡು ಹೋಗಲು ಮಂಗಳವಾರ ರಾತ್ರಿ ಡೆಲಿವರಿ ಬಾಯ್ ಬಂದಿದ್ದ. ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿತ್ತು. ಆದರೆ ಪೂರಿ, ಸಬ್ಜಿ ಪಾರ್ಸಲ್ ರೆಡಿ ಮಾಡಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೋಟೆಲ್‍ನವರು ಹೇಳಿದ್ದರು. ಇದೇ ವಿಷಯಕ್ಕೆ ಡೆಲಿವರಿ ಬಾಯ್ ಮತ್ತು ರೆಸ್ಟೋರೆಂಟ್ ಸಿಬ್ಬಂದಿ ನಡುವೆ ಜಗಳವಾಗಿತ್ತು. ಇದನ್ನೂ ಓದಿ: ಕಾಂಗ್ರೆಸ್ 20 ವರ್ಷದಲ್ಲಿ ನಿರ್ನಾಮ ಆಗುತ್ತೆ: ಉಮೇಶ್ ಕತ್ತಿ

    ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಮನಬಂದಂತೆ ಬೈದಿದ್ದ. ಇದರಿಂದ ಕೋಪಗೊಂಡ ಆ ಸಿಬ್ಬಂದಿ ರೆಸ್ಟೋರೆಂಟ್ ಮಾಲೀಕರಿಗೆ ವಿಷಯ ತಿಳಿಸಿದ್ದ. ಜಗಳ ನಿಲ್ಲಿಸಲು ಅಲ್ಲಿಗೆ ಬಂದ ಸುನಿಲ್ ಹಣೆಗೆ ಈ ವೇಳೆ ಸ್ವಿಗ್ಗಿ ಡೆಲಿವರಿ ಏಜೆಂಟ್ ಗುಂಡು ಹಾರಿಸಿದ್ದಾನೆ. ತಕ್ಷಣ ರೆಸ್ಟೋರೆಂಟ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಡೆಲಿವರಿ ಬಾಯ್ ನಾಪತ್ತೆಯಾಗಿದ್ದು, ಆತನನ್ನು ಹಿಡಿಯಲು ಮೂರು ಪೊಲೀಸರ ತಂಡ ರಚಿಸಲಾಗಿದೆ.