Tag: ಫುಡ್ ಡೆಲಿವರಿ

  • ಕೆಲಸದಿಂದ ತೆಗೆದಿದ್ದಕ್ಕೆ ಸಿಟ್ಟು; ಫುಡ್ ಡೆಲಿವರಿ ನೆಪದಲ್ಲಿ ವೃದ್ಧೆ ಕೈ-ಕಾಲು ಕಟ್ಟಿಹಾಕಿ 8 ಲಕ್ಷ ದರೋಡೆ

    ಕೆಲಸದಿಂದ ತೆಗೆದಿದ್ದಕ್ಕೆ ಸಿಟ್ಟು; ಫುಡ್ ಡೆಲಿವರಿ ನೆಪದಲ್ಲಿ ವೃದ್ಧೆ ಕೈ-ಕಾಲು ಕಟ್ಟಿಹಾಕಿ 8 ಲಕ್ಷ ದರೋಡೆ

    ಬೆಂಗಳೂರು: ಫುಡ್ ಡೆಲಿವರಿ ನೆಪದಲ್ಲಿ ಬಂದು ವೃದ್ಧೆ ಕೈ-ಕಾಲು ಕಟ್ಟಿಹಾಕಿ ಮನೆಯಲ್ಲಿ 8 ಲಕ್ಷ ರೂ. ಹಣ ದರೋಡೆ ಮಾಡಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ.

    ಆರೋಪಿಗಳು ಫುಡ್ ಡೆಲಿವರಿ ಇದೆ ಅಂತಾ ಬಾಗಿಲ ಬೆಲ್ ಮಾಡಿದ್ದಾರೆ. ಡೋರ್ ಓಪನ್ ಮಾಡುತ್ತಿದ್ದಂತೆ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯನ್ನು ತಳ್ಳಿಕೊಂಡು ಒಳಗಡೆ ನುಗ್ಗಿದ್ದಾರೆ. ವೃದ್ಧೆಗೆ ಚಾಕು ತೋರಿಸಿ, ಕೈ-ಕಾಲು ಕಟ್ಟಿ ಹಾಕಿ ಎಂಟು ಲಕ್ಷ ದರೋಡೆ ಮಾಡಿದ್ದಾರೆ.

    ಕೆಲಸದಿಂದ ತೆಗೆದಿದ್ದಕ್ಕೆ ಕೃತ್ಯ
    ಮನೆ ಡ್ರೈವರ್ ಕೆಲಸದಿಂದ ತೆಗೆದಿದ್ದಕ್ಕೆ ಈ ಕೃತ್ಯ ಎಸಗಿರೋದು ಬೆಳಕಿಗೆ ಬಂದಿದೆ. ವೃದ್ಧೆ ಕನಕಪುಷ್ಪ ಎಂಬವರ ಮಗ ರಾಹುಲ್ ಬಳಿ ಮಡಿವಾಳ ಎಂಬಾತ ನಾಲ್ಕು ತಿಂಗಳಿನಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಭಾನುವಾರ ಬೆಳಗ್ಗೆ ಆತನ ಸಂಬಳ ಕ್ಲಿಯರ್ ಮಾಡಿ ಡ್ರೈವರ್ ಕೆಲಸದಿಂದ ತೆಗೆದು ಕಳುಹಿಸಿದ್ದರು. ಇದರಿಂದ ಕೋಪಗೊಂಡ ಮಡಿವಾಳ, ವೃದ್ಧೆಯ ಮಗ ಹೊರಗೆ ಹೋಗೋದನ್ನೆ ಕಾದಿದ್ದ.

    ರಾಹುಲ್ ಹೊರಗೆ ಹೋಗ್ತಿದ್ದಂತೆ ತನ್ನ ಮೂವರು ಸ್ನೇಹಿತರೊಂದಿಗೆ ಮನೆ ಬಳಿ ಬಂದಿದ್ದ. ಡೆಲಿವರಿ ಬಾಯ್ ಅಂತಾ ಡೋರ್ ಬೆಲ್ ಮಾಡಿದ್ದಾರೆ. ಮೊದಲಿಗೆ ವೃದ್ಧೆ ಬಾಗಿಲು ತೆರೆಯುವುದಿಲ್ಲ. ನಾವು ಯಾವುದೇ ಆರ್ಡರ್ ಮಾಡಿಲ್ಲ ಅಂತ ಹೇಳುತ್ತಾರೆ. ಈ ವೇಳೆ ನಿಮ್ಮ ಮಗ ರಾಹುಲ್ ಅನ್ನೋರು ಆರ್ಡರ್ ಮಾಡಿದ್ದಾರೆ ಅಂತ ಹೇಳಿದ್ದಾರೆ. ಬಾಗಿಲು ತೆಗೆಯುತ್ತಿದ್ದಂತೆ ಮಡಿವಾಳ ಸೇರಿ ನಾಲ್ವರು ಮನೆ ಒಳಗೆ ನುಗ್ಗಿದ್ದಾರೆ. ವೃದ್ಧೆ ಕನಕಪುಷ್ಪ ಕೈ-ಕಾಲು ಕಟ್ಟಿ ಕುತ್ತಿಗೆಗೆ ಚಾಕು ಇರಿದಿದ್ದಾರೆ. ನಂತರ ಎಂಟು ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ.

    ಸದ್ಯ ವೃದ್ಧೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಆರ್ಡರ್‌ ಮಾಡಿದ 10 ನಿಮಿಷಕ್ಕೆ ನಿಮ್ಮ ಮನೆ ಬಾಗಿಲಿಗೆ ಫುಡ್‌ ಡೆಲಿವರಿ- ಝೊಮ್ಯಾಟೊ ಹೊಸ ಫೀಚರ್‌

    ಆರ್ಡರ್‌ ಮಾಡಿದ 10 ನಿಮಿಷಕ್ಕೆ ನಿಮ್ಮ ಮನೆ ಬಾಗಿಲಿಗೆ ಫುಡ್‌ ಡೆಲಿವರಿ- ಝೊಮ್ಯಾಟೊ ಹೊಸ ಫೀಚರ್‌

    ನವದೆಹಲಿ: ಆರ್ಡರ್‌ ಮಾಡಿದರೆ ತಡವಾಗಿ ಫುಡ್‌ ಡೆಲಿವರಿ ಮಾಡ್ತಾರೆ ಅಂತ ಡೆಲಿವರಿ ಬಾಯ್ಸ್‌ ಮೇಲೆ ಗ್ರಾಹಕರು ಜಗಳಕ್ಕೆ ಬೀಳುವುದು, ಹಣ ಕೊಡದೇ ಸತಾಯಿಸುವಂತಹ ಹಲವಾರು ಪ್ರಕರಣಗಳನ್ನು ಗಮನಿಸಿದ್ದೇವೆ. ಇಂತಹ ಸನ್ನಿವೇಶಗಳಿಗೆ ಅಂತ್ಯವಾಡಬೇಕು ಎಂಬ ದೃಷ್ಟಿಯಿಂದ ಝೊಮ್ಯಾಟೊ (ZOMATO) ಹೊಸ ಯೋಜನೆಯೊಂದನ್ನು ರೂಪಿಸಿದೆ.

    ಫುಡ್‌ ಡೆಲಿವರಿ ಆ್ಯಪ್‌ ಝೊಮ್ಯಾಟೊ, ಆರ್ಡರ್‌ ಮಾಡಿದ ಕ್ಷಣದಿಂದ ಕೇವಲ 10 ನಿಮಿಷದಲ್ಲಿ ಗ್ರಾಹಕರ ಮನೆಗೆ ಆರ್ಡರ್‌ ತಲುಪಿಸುವ ಹೊಸ ಫೀಚರ್‌ ಅನ್ನು ಪರಿಚಯಿಸುವುದಾಗಿ ಘೋಷಿಸಿದೆ. ಇದನ್ನೂ ಓದಿ: ಪದ್ಮ ಪ್ರಶಸ್ತಿ ಸ್ವೀಕಾರಕ್ಕೂ ಮುನ್ನ ಪ್ರಧಾನಿ ಕಾಲಿಗೆ ನಮಸ್ಕರಿಸಿದ 125 ವಯಸ್ಸಿನ ಯೋಗಿ

    ಝೊಮ್ಯಾಟೊ ಸಹ ಸಂಸ್ಥಾಪಕ ದೀಪಿಂದರ್ ಗೋಯಲ್ ಹೊಸ ಫೀಚರ್‌ ಕುರಿತು ಟ್ಟಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಝೊಮ್ಯಾಟೊದಿಂದ ಕೇವಲ 10 ನಿಮಿಷದಲ್ಲಿ ಫುಡ್‌ ಡೆಲಿವರಿ ಮಾಡುವ ಯೋಜನೆ ಶೀಘ್ರವೇ ಬರಲಿದೆ. ಇದು ಮೊದಲು ಮುಂದಿನ ತಿಂಗಳು ಗುರ್ಗಾಂವ್‌ನಲ್ಲಿ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ.

    ಆಹಾರ ತ್ವರಿತ ವಿತರಣೆಯಿಂದ, ನಿಮ್ಮ ಆಹಾರವು ತಾಜಾ, ಬಿಸಿಯಾಗಿರುತ್ತದೆ. ಇದು ನಿಜಕ್ಕೂ ಗ್ರಾಹಕ ಸ್ನೇಹಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಗೆ ಕ್ರಿಕೆಟಿಗ ಹರ್ಭಜನ್ ಸಿಂಗ್ ನಾಮನಿರ್ದೇಶನ – ಅವಿರೋಧವಾಗಿ ಆಯ್ಕೆಯಾಗಲಿರುವ ಬಜ್ಜಿ

    ಈವರೆಗೆ ಝೊಮ್ಯಾಟೊ ಮೂಲಕ ಫುಡ್‌ ಡೆಲಿವರಿ ಸಮಯವನ್ನು 30 ನಿಮಿಷಕ್ಕೆ ಸರಾಸರಿಗೊಳಿಸಲಾಗಿತ್ತು. ಆದರೆ ಅದು ತುಂಬಾ ನಿಧಾನ ಎಂಬುದು ಗ್ರಾಹಕರ ಆಕ್ಷೇಪವಾಗಿತ್ತು. ಹೊಸ ಫೀಚರ್‌ನಿಂದ ಹೆಚ್ಚು ಅನುಕೂಲ ಆಗಲಿದೆ ಎಂದು ಅವರು ಹೇಳಿದ್ದಾರೆ.

    ಕೇವಲ 10 ನಿಮಿಷದಲ್ಲಿ ಫುಡ್‌ ಡೆಲಿವರಿ ಏಕೆ ಮಾಡಬೇಕು, ಹೇಗೆ ಮಾಡವುದು ಎಂಬ ಬಗ್ಗೆ ದೀಪಿಂದರ್‌ ಗೋಯಲ್‌ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಯಾರಿಗೆ ಬೇಕು ʼದಿ ಕಾಶ್ಮೀರ್‌ ಫೈಲ್ಸ್‌ʼ: ತೆಲಂಗಾಣ ಸಿಎಂ ಪ್ರಶ್ನೆ

  • ಕೊರೊನಾ ಭೀತಿ- ಆನ್‍ಲೈನ್ ಫುಡ್ ಡೆಲಿವರಿ ಬಾಯ್‍ಗಳಿಗೂ ತಟ್ಟಿದ ಎಫೆಕ್ಟ್

    ಕೊರೊನಾ ಭೀತಿ- ಆನ್‍ಲೈನ್ ಫುಡ್ ಡೆಲಿವರಿ ಬಾಯ್‍ಗಳಿಗೂ ತಟ್ಟಿದ ಎಫೆಕ್ಟ್

    ಬೆಂಗಳೂರು: ಕೊರೊನಾ ಭೀತಿ ಆನ್‍ಲೈನ್ ಫುಡ್ ಡೆಲಿವರಿ ಬಾಯ್‍ಗಳಿಗೂ ತಟ್ಟಿದೆ. ನಿತ್ಯ ನೂರಾರು ಮನೆಗಳಿಗೆ ಹೋಗಿ ಆರ್ಡರ್ ಕೊಟ್ಟು ಬರುವ ಡೆಲಿವರಿ ಬಾಯ್‍ಗಳಲ್ಲಿ ಆತಂಕ ಶುರುವಾಗಿದ್ದು, ಬೆಂಗಳೂರು ಬಿಟ್ಟು ತಮ್ಮ ಊರುಗಳತ್ತ ತೆರಳಿದ್ದಾರೆ.

    ಮನೆ ಮನೆಗಳಿಗೆ ಫುಡ್ ಆರ್ಡರ್ ಕೊಟ್ಟು ಬರುವ ಸಮಯದಲ್ಲಿ ಎಲ್ಲಿ ಸೋಂಕು ನಮಗೆ ಹರಡುತ್ತೋ ಎನ್ನುವ ಭಯದಿಂದ ಬೆಂಗಳೂರು ತೊರೆದಿದ್ದಾರೆ. ನಿತ್ಯ ನೂರಾರು ಡೆಲಿವರಿ ಬಾಯ್‍ಗಳು ಅಪಾರ್ಟ್‌ಮೆಂಟ್‌, ಮನೆ ಇತರೆ ಜಣದಟ್ಟಣೆ ಸ್ಥಳಗಳಿಗೆ ಹೋಗಿ ಆರ್ಡರ್ ಕೊಟ್ಟು ಬರುತ್ತಾರೆ.

    ಈಗಾಗಲೇ ಹೋಟೆಲ್‍ಗಳಲ್ಲಿ ವ್ಯಾಪಾರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಆನ್‍ಲೈನ್‍ನಲ್ಲಿಯೂ ಫುಡ್ ಆರ್ಡರ್ ಮಾಡುತ್ತಿದ್ದಾರೆ. ಒಂದೆಡೆ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಗ್ರಾಹಕರಿಗೆ ಆರ್ಡರ್ ತಲುಪಿಸುವ ಫುಡ್ ಡೆಲವರಿ ಬಾಯ್‍ಗಳ ಸಂಖ್ಯೆ ಕಡಿಮೆಯಾಗುತ್ತಿದೆ.

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡಿದರೆ ಡೆಲಿವರಿ ಬಾಯ್‍ಗಳು ಬಾಕ್ಸ್ ಅನ್ನು ಗ್ರಾಹಕರ ಕೈಗೆ ಕೊಡುವ ಬದಲು ಮನೆಯ ಡೋರ್ ಬಳಿಯೇ ಇಟ್ಟು ಹೋಗುತ್ತಾರೆ. ಕೊರೊನಾ ಆತಂಕ ಹಿನ್ನೆಲೆಯಲ್ಲಿ ಗ್ರಾಹಕರ ಕೈಗೆ ಫುಡ್ ಬಾಕ್ಸ್ ನೀಡದಿರಲು ಡೆಲಿವರಿ ಬಾಯ್ಸ್ ನಿರ್ಧರಿಸಿದ್ದಾರೆ. ಈಗಾಗಲೇ ಸ್ವಿಗ್ಗಿ ಕಂಪನಿಯಿಂದ ಗ್ರಾಹಕರ ಕೈಗೆ ಪಾರ್ಸೆಲ್ ಬಾಕ್ಸ್ ನೀಡದಂತೆ ತನ್ನ ಸಿಬ್ಬಂದಿಗೆ ಸೂಚಿಸಿದೆ.

  • ಝೊಮೆಟೊದಲ್ಲಿ ಮತ್ತೆ ವಿವಾದ – ದನ, ಹಂದಿ ಮಾಂಸ ಡೆಲಿವರಿ ಮಾಡಲ್ಲ ಎಂದ ಸಿಬ್ಬಂದಿ

    ಝೊಮೆಟೊದಲ್ಲಿ ಮತ್ತೆ ವಿವಾದ – ದನ, ಹಂದಿ ಮಾಂಸ ಡೆಲಿವರಿ ಮಾಡಲ್ಲ ಎಂದ ಸಿಬ್ಬಂದಿ

    ಕೊಲ್ಕತ್ತಾ: ಝೊಮೆಟೊ ಆನ್‍ಲೈನ್ ಫುಡ್ ಡೆಲಿವರಿ ಸಂಸ್ಥೆ ಇತ್ತೀಚಿಗೆ ಒಂದಲ್ಲ ಒಂದು ವಿವಾದಕ್ಕೆ ಸಿಲುಕಿಕೊಳ್ಳುತ್ತಿದೆ. ಕಳೆದ ತಿಂಗಳಷ್ಟೇ ಹಿಂದೂ ಗ್ರಾಹಕರೊಬ್ಬರು ಮುಸ್ಲಿಂ ಯುವಕ ಆಹಾರ ತಂದಿದಕ್ಕೆ ಆರ್ಡರ್ ಕ್ಯಾನ್ಸಲ್ ಮಾಡಿದ್ದರು. ಇದು ಧಾರ್ಮಿಕ ವಿವಾದವಾಗಿ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿತ್ತು.

    ಈಗ ಮತ್ತೆ ಇದೇ ರೀತಿಯ ಧಾರ್ಮಿಕ ವಿಚಾರದಲ್ಲೇ ಝೊಮೆಟೊ ಸಂಕಷ್ಟಕ್ಕೆ ಸಿಲುಕಿದೆ. ಈ ಸಂಸ್ಥೆಯಲ್ಲಿ ಕೆಲಸ ಮಾಡುವ ಹಿಂದೂ ಮತ್ತು ಮುಸ್ಲಿಂ ಸಿಬ್ಬಂದಿ ನಾವು ನಮ್ಮ ಧರ್ಮಕ್ಕೆ ವಿರುದ್ಧವಾದ ಗೋಮಾಂಸ ಮತ್ತು ಹಂದಿ ಮಾಂಸವನ್ನು ಡೆಲಿವರಿ ಮಾಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

    ಸೋಮವಾರದಿಂದ ಆಚರಣೆ ಮಾಡುವ ಬಕ್ರಿದ್ ಹಬ್ಬಕ್ಕೆ ನಾವು ಗೋಮಾಂಸ ಮತ್ತು ಹಂದಿ ಮಾಂಸವನ್ನು ಡೆಲಿವರಿ ಮಾಡುವುದಿಲ್ಲ. ಇದು ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತಿದೆ. ಝೊಮೆಟೊ ಸಂಸ್ಥೆ ನಮ್ಮ ಉದ್ಯೋಗ ಮತ್ತು ಭಾವನೆಗಳ ಜೊತೆ ಆಟವಾಡುತ್ತಿದೆ ಎಂದು ಸೋಮವಾರ ಹಿಂದೂ ಮತ್ತು ಮುಸ್ಲಿಂ ಹುಡುಗರು ಝೊಮೆಟೊ ವಿರುದ್ಧ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಹಿಂದೂ ಆಹಾರ ವಿತರಣಾ ಸಿಬ್ಬಂದಿ ಬಜರಾಜ್ ನಾಥ್ ಬ್ರಹ್ಮ, ನಾನು ಹಿಂದೂ. ಇಲ್ಲಿ ಮುಸ್ಲಿಂ ಡೆಲಿವರಿ ಹುಡುಗರೂ ಇದ್ದಾರೆ. ಒಟ್ಟಿಗೆ ಕೆಲಸ ಮಾಡುವಲ್ಲಿ ನಮಗೆ ಯಾವುದೇ ಸಮಸ್ಯೆಗಳಿಲ್ಲ. ಝೊಮೆಟೊ ಪ್ರಸ್ತುತ ಕೆಲವು ಹೊಸ ರೆಸ್ಟೋರೆಂಟ್‍ಗಳೊಂದಿಗೆ ಸಂಬಂಧ ಹೊಂದಿದ್ದು, ಗೋಮಾಂಸ ಮತ್ತು ಹಂದಿ ಮಾಂಸವನ್ನು ವಿತರಣೆ ಮಾಡುತ್ತಿದೆ. ಇದರಿಂದ ಹಿಂದೂ ವಿತರಣಾ ಸಿಬ್ಬಂದಿ ಮತ್ತು ಮುಸ್ಲಿಂ ವಿತರಣಾ ಸಿಬ್ಬಂದಿ ಇಬ್ಬರಿಗೂ ಸಮಸ್ಯೆಯಾಗುತ್ತಿದೆ. ನಮ್ಮ ಧಾರ್ಮಿಕ ಭಾವನೆಗೆ ನೋವಾಗುತ್ತಿದೆ. ಇದ್ದರಿಂದ ತಕ್ಷಣವೇ ಈ ಯೋಜನೆಯನ್ನು ಸಂಸ್ಥೆ ನಿಲ್ಲಿಸಬೇಕು ಎಂದು ನಾವು ಕೇಳಿಕೊಳ್ಳುತ್ತೇವೆ. ಈ ವಿಚಾರವಾಗಿ ನಾವು ಸೋಮವಾರ ಕೆಲಸ ಮಾಡದೇ ಮುಷ್ಕರ ನಡೆಸುತ್ತೇವೆ ಎಂದು ಹೇಳಿದ್ದಾರೆ.

    ಮುಸ್ಲಿಂ ಆಹಾರ ವಿತರಣಾ ಸಿಬ್ಬಂದಿ ಮೌಸಿರ್ ಅಖ್ತರ್ “ನಾವು ಈ ಸಮಸ್ಯೆಯ ಬಗ್ಗೆ ಸಂಸ್ಥೆಯ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ, ಆದರೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚಿಗೆ ಕೆಲ ಮುಸ್ಲಿಂ ಹೋಟೆಲ್‍ಗಳನ್ನು ಝೊಮೆಟೊ ತನ್ನ ವಿತರಣಾ ಅಪ್ಲಿಕೇಶನ್‍ಗೆ ಸೇರಿಸಿಕೊಂಡಿದೆ. ಅಲ್ಲಿ ಮಾಡುವ ಗೋಮಾಂಸವನ್ನು ಕೆಲ ಹಿಂದೂ ಹುಡುಗರು ವಿತರಣೆ ಮಾಡುವುದಿಲ್ಲ ಎಂದು ನಿರಾಕರಿಸಿದ್ದಾರೆ. ಹಾಗೆಯೇ ನಾವು ಕೂಡ ಹಂದಿ ಮಾಂಸವನ್ನು ವಿತರಣೆ ಮಾಡುವುದಿಲ್ಲ. ಇದರಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುತ್ತಿದೆ. ಈ ವಿಚಾರದ ಬಗ್ಗೆ ಕಂಪನಿಗೆ ಎಲ್ಲ ತಿಳಿದಿದ್ದರು. ನಮಗೆ ಯಾವುದೇ ಸಹಾಯ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಈ ವಿಚಾರದಲ್ಲಿ ಝೊಮೆಟೊ ಹುಡುಗರ ಬೆಂಬಲಕ್ಕೆ ನಿಂತಿರುವ ಪಶ್ಚಿಮ ಬಂಗಾಳದ ಸಚಿವ ಮತ್ತು ಟಿಎಂಸಿ ಶಾಸಕರ ಹೌರಾ ರಾಜೀಬ್ ಬ್ಯಾನರ್ಜಿ, ಈ ರೀತಿಯ ಯೋಚನೆಗಳನ್ನು ಸಂಸ್ಥೆ ಜಾರಿಗೆ ತರುವಾಗ ಸ್ವಲ್ಪ ಯೋಚಿಸಬೇಕು. ಯಾವ ವ್ಯಕ್ತಿಯನ್ನು ಅವರ ಧಾರ್ಮಿಕ ಭಾವನೆಗಳ ವಿರುದ್ಧ ನಡೆಸಿಕೊಳ್ಳಬಾರದು. ಇದು ತಪ್ಪು. ಈ ವಿಚಾರದ ಬಗ್ಗೆ ನನಗೆ ತಿಳಿದಿರಲಿಲ್ಲ. ಈಗ ನನ್ನ ಗಮನಕ್ಕೆ ಬಂದಿದೆ ನಾನು ಇದರ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.