Tag: ಫುಡ್ ಡೆಲಿವರಿ ಬಾಯ್

  • ರಾಜಧಾನಿಯಲ್ಲಿ ಮತ್ತೆ ಶುರುವಾಯ್ತು ದುಷ್ಕರ್ಮಿಗಳ ಪುಂಡಾಟ!

    ರಾಜಧಾನಿಯಲ್ಲಿ ಮತ್ತೆ ಶುರುವಾಯ್ತು ದುಷ್ಕರ್ಮಿಗಳ ಪುಂಡಾಟ!

    ಬೆಂಗಳೂರು: ದುಷ್ಕರ್ಮಿಗಳು ಫುಡ್ ಡೆಲಿವರಿ ಕೊಡಲು ಹೋಗುತ್ತಿದ್ದ ಯುವಕನಿಗೆ ಲಾಂಗ್ ಮಚ್ಚು ತೋರಿಸಿ ದರೋಡೆ ಮಾಡಿದ ಘಟನೆ ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ 12 ಗಂಟೆಗೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಬೈಕ್‍ನಲ್ಲಿ ಫುಡ್ ಡೆಲಿವರಿ ಕೊಡಲು ಹೋಗುತ್ತಿದ್ದ ರಾಜು ಎಂಬ ಯುವಕನ ಮೇಲೆ ದಾಳಿ ನಡೆದಿದೆ. ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ್ದು, ಮಧ್ಯರಾತ್ರಿ ದರೋಡೆ ಮಾಡಿದ್ದಾರೆ. ಪುಂಡರು ಯುವಕನ ಬಳಿ ಇದ್ದ ಮೊಬೈಲ್, ಹಣ ಸೇರಿ ಬೈಕ್ ಸಮೇತ ಕಿತ್ತುಕೊಂಡು ಪರಾರಿಯಾಗಿದ್ದಾರೆ. ದಮ್ಮಯ್ಯ ಅಂತ ಬೇಡಿದರೂ ಬಿಡದೇ ಲಾಂಗ್ ಬೀಸಿ ಬೆದರಿಕೆ ಹಾಕಿದ್ದಾರೆ.  ಇದನ್ನೂ ಓದಿ: ಆಫ್‍ಲೈನ್ ಕ್ಲಾಸ್‍ಗೆ ಹೋಗು ಅಂದಿದ್ದಕ್ಕೆ ಹುಡುಗಿ ಆತ್ಮಹತ್ಯೆ

    5 ಮಂದಿ ದುಷ್ಕರ್ಮಿಗಳ ಕೃತ್ಯ ಸ್ಥಳೀಯರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಫುಡ್ ಡೆಲಿವರಿ ಬಾಯ್‍ಗೆ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗ ಥಳಿಸಿದ ಪೊಲೀಸ್

    ಫುಡ್ ಡೆಲಿವರಿ ಬಾಯ್‍ಗೆ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗ ಥಳಿಸಿದ ಪೊಲೀಸ್

    ಚೆನ್ನೈ: ಫುಡ್ ಡೆಲಿವರಿ ಬಾಯ್‍ಗೆ ನಡು ರಸ್ತೆಯಲ್ಲಿ ಪೊಲೀಸ್‍ವೊಬ್ಬರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ಶ್ರೀವಿಲ್ಲಿಪುತ್ತೂರಿನಲ್ಲಿ ಈ ಘಟನೆ ನಡೆದಿದೆ.

    ಫುಡ್ ಡೆಲಿವರಿಬಾಯ್ ವೆಂಕಟೇಶ್‍ಗೆ ಟ್ರಾಫಿಕ್ ಸಬ್ ಇನ್ಸ್‌ಪೆಕ್ಟರ್‌ ಧರ್ಮರಾಜ್ ಅಮಾನುಷವಾಗಿ ಥಳಿಸಿರುವುದರ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ದೃಶ್ಯವನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು

    ವೀಡಿಯೋದಲ್ಲಿ ವೆಂಕಟೇಶ್ ಕಾಲರ್ ಹಿಡಿದು ಧರ್ಮರಾಜ್ ಎಳೆದಾಡುತ್ತಾ ಕ್ರೂರವಾಗಿ ಹೊಡೆಯಲು ಆರಂಭಿಸಿದ್ದಾರೆ. ನಂತರ ವೆಂಕಟೇಶ್ ಚಾಕು ಹೊರತೆಗೆದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್‍ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

    ವೆಂಕಟೇಶ್ ಮತ್ತು ಪೊಲೀಸ್ ಅಧಿಕಾರಿ ಧರ್ಮರಾಜ್ ನಡುವೆ 600 ರೂಪಾಯಿ ದಂಡದ ವಿಚಾರವಾಗಿ ವಾಗ್ವಾದ ನಡೆದಿದ್ದು, ವೆಂಕಟೇಶ್ ಬಳಿ ವಾಹನದ ದಾಖಲೆಗಳಿಲ್ಲದ ಕಾರಣ ದಂಡ ವಿಧಿಸಲಾಗಿದೆ. ಈ ವೇಳೆ ಹಣ ಕಟ್ಟಲು ನಿರಾಕರಿಸಿದ್ದಕ್ಕೆ ವೆಂಕಟೇಶ್ ಮೇಲೆ ಪೊಲೀಸ್ ಹಲ್ಲೆ ನಡೆಸಿದ್ದಾರೆ. ಘಟನೆ ವೇಳೆ ದಾರಿಹೋಕರು ವೆಂಕಟೇಶ್‍ಗೆ ಹೊಡೆಯುವುದನ್ನು ನಿಲ್ಲಿಸುವಂತೆ ಧರ್ಮರಾಜ್‍ಗೆ ಮನವಿ ಮಾಡಿದರೂ ಅವರು ನಿಲ್ಲಿಸಲಿಲ್ಲ. ಅಂತಿಮವಾಗಿ ಇತರ ಕೆಲವು ಪೊಲೀಸರು ಮಧ್ಯ ಪ್ರವೇಶಿಸಿ ವೆಂಕಟೇಶನನ್ನು ಕರೆದೊಯ್ದಿದ್ದಾರೆ.

    ವೆಂಕಟೇಶ್, ಧರ್ಮರಾಜ್ ಅವರಿಗೆ ಚಾಕುವಿನಿಂದ ಬೆದರಿಕೆ ಹಾಕಿರುವುದಾಗಿ ಶ್ರೀವಿಲ್ಲಿಪುತ್ತೂರು ಪೊಲೀಸರು ಸೆಕ್ಷನ್ 294 (ಬಿ), 353, 307, ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ ಇದೀಗ ಧರ್ಮರಾಜ್ ವೆಂಕಟೇಶ್ ಅವರನ್ನು ಅಮಾನುಷವಾಗಿ ಥಳಿಸಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪೊಲೀಸರ ದೌರ್ಜನ್ಯವನ್ನು ಹಲವರು ಖಂಡಿಸಿದ್ದಾರೆ. ಇದನ್ನೂ ಓದಿ: ಸೂರತ್‍ನಲ್ಲಿ ಟ್ಯಾಂಕರ್‌ನಿಂದ ವಿಷಕಾರಿ ಅನಿಲ ಸೋರಿಕೆ – 5 ಮಂದಿ ಸಾವು, 20 ಮಂದಿ ಅಸ್ವಸ್ಥ