Tag: ಫೇಸ್ ಬುಕ್

  • ಬಿಜೆಪಿ ಸೋಲು: ನಿರ್ದೇಶಕ, ಚಿತ್ರಸಾಹಿತಿ ಕವಿರಾಜ್ ಬರೆದ ಪೋಸ್ಟ್ ವೈರಲ್

    ಬಿಜೆಪಿ ಸೋಲು: ನಿರ್ದೇಶಕ, ಚಿತ್ರಸಾಹಿತಿ ಕವಿರಾಜ್ ಬರೆದ ಪೋಸ್ಟ್ ವೈರಲ್

    ಸಿನಿಮಾ ನಿರ್ದೇಶಕ ಹಾಗೂ ಚಿತ್ರ ಸಾಹಿತಿ ಕವಿರಾಜ್ (Kaviraj) ಬಿಜೆಪಿಯ (BJP) ಸೋಲನ್ನು ವಿಭಿನ್ನವಾಗಿ ವಿಶ್ಲೇಷಿಸಿದ್ದಾರೆ. ಬಿಜೆಪಿ ಸೋಲಿಗೆ ಕಾರಣ ಏನು ಎನ್ನುವುದರ ಕುರಿತು ಅವರು ಫೇಸ್ ಬುಕ್ (Facebook) ನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಸಾಕಷ್ಟು ವೈರಲ್ (Viral) ಆಗಿದೆ ಮತ್ತು ನಾನಾ ರೀತಿಯ ಕಾಮೆಂಟ್ ಗಳು ಕೂಡ ಬಂದಿವೆ. ಬಿಜೆಪಿ ಸೋಲಿಗೆ ಕವಿರಾಜ್ ಕೊಟ್ಟ ಕಾರಣ ಇಲ್ಲಿದೆ.

    ಪದೇ ಪದೇ ನಾಡಿನ ಶಾಂತಿ ಕದಡಿದ್ದು, ಶಾಲೆ – ಪಠ್ಯಪುಸ್ತಕಗಳಲ್ಲೂ ರಾಜಕೀಯ  ತಂದು ಮಲೀನಗೊಳಿಸಿದ್ದು, ಕುವೆಂಪು , ಬಸವಣ್ಣ, ಅಂಬೇಡ್ಕರ್,  ಅವರಂತಹ ಮಹನೀಯರನ್ನು ಅವಮಾನಿಸಿದ್ದು. ಧರ್ಮ – ದೇವರು ಎಲ್ಲವನ್ನು ರಾಜಕೀಯ ಅಸ್ತ್ರವಾಗಿಸಿಕೊಂಡಿದ್ದು, ಕನ್ನಡತನ, ಕನ್ನಡದ ಆಸ್ಮಿತೆಗಳ ವಿರುದ್ಧ ನಿಂತಿದ್ದು , ಹಿಂದಿ ಹೇರಿಕೆ ಬೆಂಬಲಿಸಿದ್ದು, ಈ ಮಣ್ಣಿನ ಹೋರಾಟಗಾರರನ್ನು ಕಡೆಗಣಿಸಿ  , ಶಿವಾಜಿ, ಸಾವರ್ಕರ್ ಅಂತಹಾ ಉತ್ತರದ ಹೋರಾಟಗಾರರನ್ನು ಮೆರೆಸಿದ್ದು. ಇದನ್ನೂ ಓದಿ:ಬಂದೂಕಿನೊಂದಿಗೆ ಆಟವಾಡಿದ ‘ಬಿಗ್ ಬಾಸ್’ ಅಬ್ದು ರೋಜಿಕ್‌ ವಿರುದ್ಧ ಪ್ರಕರಣ ದಾಖಲು

    ಹಿಂದೆಂದು ಕಂಡಿರದ ಭ್ರಷ್ಟಾಚಾರ -ಅಹಂಕಾರದ ಅಡಳಿತ, ಬೆಲೆ ಏರಿಕೆಗಳಿಂದ ಬಡವರ ಬದುಕನ್ನು ಸಂಕಷ್ಟಕ್ಕೆ ದೂಡಿದ್ದು, ಪದೇ ಪದೇ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡು ಜನ ಉಗಿದ ನಂತರ ಯೂ ಟರ್ನ್ ಹೊಡೆದಿದ್ದು, ಕರೋನಾದಂತ ವಿಕೋಪದ ಸಮಯದಲ್ಲಿ ಜೀವಗಳನ್ನು ರಕ್ಷಿಸುವಲ್ಲಿ ಹೊಣೆಗೇಡಿತನ ತೋರಿದ್ದು, ಅಮಾಯಕ ಯುವಕರ ಹೆಣಗಳನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದು.


    ನಾಗಪುರ ನಿರ್ದೇಶಿತ ಮೂಲಭೂತವಾದದ ಪ್ರಯೋಗಗಳಿಗೆ ಕರ್ನಾಟಕವನ್ನು ಪ್ರಯೋಗಶಾಲೆಯಾಗಿಸಿದ್ದು, ಆಪರೇಷನ್ ಕಮಲ, ರೆಸಾರ್ಟ್ ರಾಜಕೀಯದಂತ ಅನೈತಿಕ ರಾಜಕಾರಣದಿಂದ ರಾಷ್ಟ್ರಮಟ್ಟದಲ್ಲಿ ನಾಡಿನ ಗೌರವ ಹಾಳುಮಾಡಿದ್ದು, ವಿರೋಧಿಸಿದವರನ್ನು ಹೆದರಿಸಲು ಆಡಳಿತ ವ್ಯವಸ್ಥೆಯನ್ನು ಬಳಸಿಕೊಂಡಿದ್ದು ಇವೆಲ್ಲವುಗಳ ವಿರುದ್ಧ ಕರ್ನಾಟಕದ ಮತದಾರರು ಜಾಗೃತನಾಗಿ ತೀರ್ಪು ನೀಡಿದ್ದಾರೆ.

    ಕೇಂದ್ರ ನಾಯಕರ ಅಬ್ಬರದ ರ್‍ಯಾಲಿಯಿಂದ ಅಲೆ ಸೃಷ್ಟಿಯಾಗಿಬಿಡುತ್ತೆ ಎಂಬ ಭ್ರಮೆ, ಹಣ ಬಲದ ಧಿಮಾಕು , ಜಾತಿ ರಾಜಕೀಯ , ದ್ವೇಷ ಭಾಷಣ ಇವಕ್ಕೆಲ್ಲಾ ಸೊಪ್ಪು ಹಾಕದ ಕರುನಾಡಿನ ಮತದಾರರ ಪ್ರಜ್ಞಾವಂತಿಕೆ ಬಗ್ಗೆ ಹೆಮ್ಮೆಯೆನಿಸುತ್ತದೆ. ಅತಂತ್ರ ಫಲಿತಾಂಶ ಕೊಟ್ಟರೇ ಅನೈತಿಕ ರಾಜಕಾರಣದ ರೂವಾರಿಗಳು ಅದನ್ನು ಹೇಗೆಲ್ಲಾ ದುರುಪಯೋಗ ಪಡಿಸಿಕೊಂಡು ಹಣಬಲ , ಅಧಿಕಾರ ಬಲದಿಂದ ರಾಜ್ಯದಲ್ಲಿ ಸರ್ಕಾರ ಸ್ಥಾಪಿಸುತ್ತಾರೆ ಎಂಬ ಸ್ಪಷ್ಟ ಅರಿವು ಮತದಾರ ಪ್ರಭುಗಳಿಗೆ ಇದೆ. ಹಾಗಾಗಿಯೇ ನಿರ್ಣಾಯಕ ಫಲಿತಾಂಶ ನೀಡಿ ಯಾರ್ಯಾರು ಎಲ್ಲಿರಬೇಕು ಎಂದು ಖಚಿತವಾಗಿ ತೋರಿಸಿರುವ ಮತದಾರರು ಅಭಿನಂದನಾರ್ಹರು. ಮತದಾರರ ಪ್ರಜ್ಞಾವಂತಿಕೆ ಮತ್ತು ಪ್ರಜಾಪ್ರಭುತ್ವ ಹೀಗೆ ಪ್ರಬುದ್ಧವಾಗುತ್ತ ಚಿರಾಯುವಾಗಲಿ.

  • ಸಾರಿಗೆ ಇಲಾಖೆ ಸಿಬ್ಬಂದಿ ಸಮಸ್ಯೆ ಆಲಿಸಿದ ಶ್ರೀರಾಮುಲು

    ಸಾರಿಗೆ ಇಲಾಖೆ ಸಿಬ್ಬಂದಿ ಸಮಸ್ಯೆ ಆಲಿಸಿದ ಶ್ರೀರಾಮುಲು

    ರಾಯಚೂರು: ಜಿಲ್ಲಾ ಪ್ರವಾಸದಲ್ಲಿರುವ ಸಾರಿಗೆ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಸಿಂಧನೂರಿನಲ್ಲಿ ಬೆಳಗ್ಗೆ ವಾಯುವಿಹಾರದ ವೇಳೆ ರಸ್ತೆಯಲ್ಲಿ ಸಾರಿಗೆ ಇಲಾಖೆ ಚಾಲಕ, ನಿರ್ವಾಹಕರ ಸಮಸ್ಯೆ ಆಲಿಸಿದರು.

    Sriramulu

    ಈ ಕುರಿತಂತೆ ಚಾಲಕ ಹಾಗೂ ನಿರ್ವಾಹಕರೊಂದಿಗೆ ಮಾತನಾಡಿದ್ದು ಖುಷಿಯಾಗಿದೆ ಅಂತ ಫೇಸ್ ಬುಕ್ ನಲ್ಲಿ ತಮ್ಮ ಅನುಭವವನ್ನು ಶ್ರೀರಾಮುಲು ಹಂಚಿಕೊಂಡಿದ್ದಾರೆ. ಶ್ರೀರಾಮುಲು ಪೋಸ್ಟ್​ಗೆ ಸಾರ್ವಜನಿಕರು ಹಾಗೂ ಸಾರಿಗೆ ಇಲಾಖೆ ಸಿಬ್ಬಂದಿ ಉತ್ತಮವಾಗಿ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಫೇಸ್ ಬುಕ್‍ನಲ್ಲೂ ಸಮಸ್ಯೆಗಳನ್ನು ತೋಡಿಕೊಂಡಿರುವ ಸಾರಿಗೆ ಇಲಾಖೆ ಸಿಬ್ಬಂದಿ ಶ್ರೀರಾಮುಲು ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಫ್ಯಾಬ್ರಿಕ್ ಗೋಡೌನ್‍ನಲ್ಲಿ ಬೆಂಕಿ – ಸ್ಥಳಕ್ಕೆ ಆಗಮಿಸಿದ 18 ಅಗ್ನಿ ಶಾಮಕ ವಾಹನ

    Sriramulu

    ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ವಸತಿಗಳ ಉದ್ಘಾಟನೆಗೆ ಆಗಮಿಸಿರುವ ಶ್ರೀ ರಾಮುಲು ಸಿಂಧನೂರು ಪಟ್ಟಣದಲ್ಲಿ ವಿದ್ಯಾರ್ಥಿನಿಯರ ಮೆಟ್ರಿಕ್ ನಂತರದ ವಸತಿ ನಿಲಯ ಉದ್ಘಾಟನೆ ಮಾಡಿದರು. ವಸತಿ ನಿಲಯ ಉದ್ಘಾಟನೆ ಬಳಿಕ ವಿದ್ಯಾರ್ಥಿನಿಯರ ಜೊತೆಗೆ ಸಂವಾದ ನಡೆಸಿದರು. ಬಸ್, ಕುಡಿಯುವ ನೀರು, ರಸ್ತೆ ಸಮಸ್ಯೆ ಸರಿಪಡಿಸಲು ವಿದ್ಯಾರ್ಥಿನಿಯರು ಮನವಿ ಮಾಡಿದರು. ಸಂವಾದ ಬಳಿಕ ವಿದ್ಯಾರ್ಥಿನಿಯರ ಜೊತೆಗೆ ಶ್ರೀರಾಮುಲು ಸೆಲ್ಫಿ ತೆಗೆದುಕೊಂಡರು. ಇದನ್ನೂ ಓದಿ: ಉಚಿತವಾಗಿ 120 ದಿನಗಳಲ್ಲಿ 25 ಸಾವಿರ ಮಂದಿಗೆ ಕೋವಿಡ್ ಲಸಿಕೆ- ಶ್ರೀರಾಮ ಸೇವಾ ಮಂಡಳಿ

  • WhatsApp, Facebook, Instagram ಬಂದ್ – 9 ಗಂಟೆಯಲ್ಲಿ ಜುಕರ್‌ಬರ್ಗ್‌ಗೆ 44 ಸಾವಿರ ಕೋಟಿ ನಷ್ಟ

    WhatsApp, Facebook, Instagram ಬಂದ್ – 9 ಗಂಟೆಯಲ್ಲಿ ಜುಕರ್‌ಬರ್ಗ್‌ಗೆ 44 ಸಾವಿರ ಕೋಟಿ ನಷ್ಟ

    – ಕ್ಷಮೆ ಕೋರಿದ ವಾಟ್ಸಪ್, ಎಫ್‍ಬಿ

    ಬೆಂಗಳೂರು: ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ (WhatsApp), ಫೇಸ್‍ಬುಕ್ (Facebook) ಮತ್ತು ಇನ್‍ಸ್ಟಾಗ್ರಾಂ (Instagram) ಜಗತ್ತಿನಾದ್ಯಂತ ರಾತ್ರಿ 9 ಗಂಟೆಯಿಂದ ಸ್ಥಗಿತಗೊಂಡಿದ್ದವು. ಮಧ್ಯರಾತ್ರಿ 3.30ರ ವೇಳೆಗೆ ವಾಟ್ಸಪ್, ಫೇಸ್‍ಬುಕ್, ಇನ್‍ಸ್ಟಾಗ್ರಾಂ ಮತ್ತೆ ಸಹಜ ಸ್ಥಿತಿಗೆ ಮರಳಿದೆ.

    ಜಗತ್ತಿನಲ್ಲಿ 200 ಕೋಟಿ ಫೇಸ್‍ಬುಕ್ ಬಳಕೆದಾರರಿದ್ದಾರೆ. ಭಾರತದಲ್ಲಿ 53 ಕೋಟಿ ವಾಟ್ಸಪ್ ಬಳಕೆದಾರರು, 41 ಕೋಟಿ ಫೇಸ್‍ಬುಕ್ ಬಳಕೆದಾರರು ಮತ್ತು 21 ಕೋಟಿ ಇನ್‍ಸ್ಟಾಗ್ರಾಂ ಬಳಕೆದಾರರು ಇದ್ದಾರೆ. ವಾಟ್ಸಪ್ ಮತ್ತು ಇನ್‍ಸ್ಟಾಗ್ರಾಂ ಕೂಡಾ ಫೇಸ್‍ಬುಕ್‍ನ ಸಹವರ್ತಿ ಕಂಪನಿಗಳಾಗಿವೆ. ಸ್ಥಗಿತ ಗೊಂಡಿರುವುದಕ್ಕೆ ಬಳಕೆದಾರರಲ್ಲಿ ವಾಟ್ಸಾಪ್, ಎಫ್‍ಬಿ ಕ್ಷಮೆಯಾಚಿಸಿದೆ. ಇದನ್ನೂ ಓದಿ: WhatsApp, Facebook, ಇನ್‌ಸ್ಟಾಗ್ರಾಮ್ ಸೇವೆಯಲ್ಲಿ ವ್ಯತ್ಯಯ – ಮೆಸೇಜ್‌ ಹೋಗ್ತಿಲ್ಲ, ಬರ್ತಿಲ್ಲ..!

    2014ರಲ್ಲಿ ವಾಟ್ಸಪ್‍ನ್ನು ಫೇಸ್‍ಬುಕ್ ಖರೀದಿಸಿತ್ತು. ಫೇಸ್‍ಬುಕ್ ಸೇವೆ ಸ್ಥಗಿತಗೊಂಡಿದ್ದರಿಂದ ಫೇಸ್‍ಬುಕ್‍ನ ಷೇರು ಮೌಲ್ಯ ಕೆಲವೇ ಗಂಟೆಗಳಲ್ಲಿ ಶೇಕಡಾ 4.9ರಷ್ಟು ಕುಸಿದಿದೆ. ಪರಿಣಾಮ ಮಾಲೀಕ ಮಾರ್ಕ್ ಝುಕರ್‍ಬರ್ಗ್‍ಗೆ ಕೆಲವೇ ಗಂಟೆಗಳಲ್ಲಿ 44,743 ಕೋಟಿ ರೂಪಾಯಿ ನಷ್ಟ ಆಗಿದೆ. ಸೆಪ್ಟೆಂಬರ್ 15ರಂದು ಫೇಸ್‍ಬುಕ್‍ನ ಷೇರು ಮೌಲ್ಯ ಶೇಕಡಾ 15ರಷ್ಟು ಕುಸಿತದ ಬಳಿಕ ನಿನ್ನೆ ಅತೀ ದೊಡ್ಡ ಕುಸಿತ ಆಗಿದೆ.

    ಇಂಟರ್ ನೆಟ್ ಡೊಮೈನ್‍ಗೆ ಇಂಟರ್ನಲ್ ರೂಟಿಂಗ್ ವೇಳೆ ಸಮಸ್ಯೆ ಕಂಡುಬಂದಿದ್ದು, ಫೇಸ್‍ಬುಕ್‍ನಲ್ಲಿರುವವರೇ Internet ಸೇವೆಗೆ ಅಡ್ಡಿಪಡಿಸಿರುವ ಅನುಮಾನ ಎದ್ದಿದೆ.

  • ವಿಳಾಸ ಕೇಳುವ ನೆಪದಲ್ಲಿ ಕಿರುಕುಳ – ಪುಂಡನ ಗಾಡಿ ಚರಂಡಿಗೆ ತಳ್ಳಿದ ಮಹಿಳೆ

    ವಿಳಾಸ ಕೇಳುವ ನೆಪದಲ್ಲಿ ಕಿರುಕುಳ – ಪುಂಡನ ಗಾಡಿ ಚರಂಡಿಗೆ ತಳ್ಳಿದ ಮಹಿಳೆ

    ಡಿಸ್ಪುರ್: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯನ್ನು ತಡೆದು ಪುಂಡನೊಬ್ಬ ಕಿರುಕುಳ ನೀಡಿದ್ದಾನೆ. ಈ ವೇಳೆ ಮಹಿಳೆ ವಿಚಲಿತರಾಗದೇ ಆತನ ಸ್ಕೂಟರ್ ಎಳೆದು ಚರಂಡಿಗೆ ತಳ್ಳಿ ಆತ ಎಲ್ಲೂ ತಪ್ಪಿಸಿಕೊಳ್ಳದಂತೆ ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ.

    ಭಾವನಾ ಕಶ್ಯಪ್ ಎಂಬವರು ಈ ವೀಡಿಯೋವನ್ನು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಅಡ್ರಸ್ ತಿಳಿದಿಲ್ಲ ಎಂದು ಎಷ್ಟು ಬಾರಿ ಹೇಳಿದರೂ ಪದೇ ಪದೇ ಆರೋಪಿ ಪೀಡಿಸುತ್ತಿದ್ದ, ಅಲ್ಲದೇ ನನ್ನ ಜೊತೆ ಅಸಭ್ಯವಾಗಿ ನಡೆದುಕೊಳ್ಳಲು ಆರಂಭಿಸಿದ, ಈ ವೇಳೆ ನಾನು ಒಂದು ಕ್ಷಣ ಏನಾಯಿತು ಎಂಬುದರ ಪ್ರಜ್ಞೆಯನ್ನು ಕಳೆದುಕೊಂಡೆ. ಆದರೆ ಯಾವಾಗ ನನ್ನ ಬಾಯಿಯಿಂದ ಮಾತುಗಳು ಬರಲಾರಂಭಿಸತೋ ಆಗ ಆತ ಭಯಭೀತಗೊಂಡ ಎಂದು ಭಾವನಾ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.

    ಮಹಿಳೆ ಸ್ಕೂಟರ್‍ನನ್ನು ಚರಂಡಿಗೆ ತಳ್ಳಿದ ನಂತರ ರೆಕಾರ್ಡ್ ಆಗಿರುವ ಈ ವೀಡಿಯೋದಲ್ಲಿ ಆರೋಪಿ ತನ್ನ ಸ್ಕೂಟರ್‍ನನ್ನು ಹಿಂದೆಗೆದುಕೊಳ್ಳಲು ಸ್ಥಳೀಯರಲ್ಲಿ ಸಹಾಯ ಕೇಳುತ್ತಿರುವುದನ್ನು ಕಾಣಬಹುದಾಗಿದೆ.

    ಘಟನೆ ವೇಳೆ ಆರೋಪಿ ವೇಗವಾಗಿ ಸ್ಕೂಟರನ್ನು ಚಲಾಯಿಸಲು ಪ್ರಯತ್ನಿಸಿದಾಗಲೂ ಮಹಿಳೆ ಅದನ್ನು ಹಿಡಿದು ಚರಂಡಿಗೆ ಎಳೆದು ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರು ಗಲಾಟೆ ಮಾಡುತ್ತಿದ್ದ ವೇಳೆ ಸ್ಥಳೀಯರು ಸೇರುತ್ತಿದ್ದಂತೆ, ಮಹಿಳೆ ಮಧುಶನ ರಾಜ್ ಕುಮಾರ್ ಎಂಬ ವ್ಯಕ್ತಿಗೆ ನಡೆದ ಎಲ್ಲಾ ವಿಚಾರವನ್ನು ವಿವರಿಸಿದ್ದಾರೆ. ಆತನಿಂದ ಮಹಿಳೆ ಹೊರ ಹೋಗಲು ಹೆದರಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ:2024ಕ್ಕೆ ಭಾರತದ ಪ್ರಧಾನಿ ಮಹಿಳೆಯಾಗಲಿ: ಜಯಾ ಬಚ್ಚನ್

  • ಸಾವಿನ ದವಡೆಗೆ ನೂಕುವ ಕ್ರಿಮಿಯು ಬದುಕಿನ ಮಹತ್ವ ತಿಳಿಸುತ್ತದೆ: ಚೈತ್ರಾ ಕೊಟ್ಟೂರು

    ಸಾವಿನ ದವಡೆಗೆ ನೂಕುವ ಕ್ರಿಮಿಯು ಬದುಕಿನ ಮಹತ್ವ ತಿಳಿಸುತ್ತದೆ: ಚೈತ್ರಾ ಕೊಟ್ಟೂರು

    ಬೆಂಗಳೂರು: ಕೆಲ ದಿನಗಳ ಹಿಂದೆಯಷ್ಟೇ ಆತ್ಮಹತ್ಯೆಗೆ ಯತ್ನಿಸುವ ಮೂಲಕ ಭಾರೀ ಸುದ್ದಿಯಾಗಿದ್ದ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ, ಚೈತ್ರಾ ಕೊಟ್ಟೂರು ಇದೀಗ ಫೇಸ್ ಬುಕ್ ನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

    ಹೌದು. ಫೇಸ್ ಬುಕ್ ನಲ್ಲಿ ಹೊಸ ಪ್ರೊಫೈಲ್ ಫೋಟೋ ಅಪ್ಲೋಡ್ ಮಾಡಿರುವ ಚೈತ್ರಾ, ‘ಬದುಕು ಮತ್ತೆ ಕೈಬೀಸಿ ಕರೆದಾಗ, ಎರಡೆರಡು ಸ್ಯಾನಿಟೈಸರ್ ಬಾಟಲಿಗಳನ್ನು ಹೆಚ್ಚಾಗಿ ಇರಿಸಿಕೊಂಡು ಮುಂದೆ ಸಾಗಿ. ದೇಹ ಸೇರಿ ಸಾವಿನ ದವಡೆಗೆ ನೂಕುವ ಕ್ರಿಮಿಯು, ಬದುಕಿನ ಮಹತ್ವವನ್ನೂ ತಿಳಿಸುವಲ್ಲಿ ಯಶಸ್ವಿಯಾಗುತ್ತದೆ. ನಿಮ್ಮೆಲ್ಲರ ಪ್ರೀತಿ ಕಾಳಜಿಗೆ ಆಭಾರಿ…’ ಎಂದು ಬರೆದುಕೊಂಡಿದ್ದಾರೆ. ಅವರ ಈ ಪೋಸ್ಟ್‍ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಬದುಕು ಮತ್ತೆ ಕೈಬೀಸಿ ಕರೆದಾಗ, ಎರಡೆರಡು ಸ್ಯಾನಿಟೈಸರ್ ಬಾಟಲಿಗಳನ್ನು ಹೆಚ್ಚಾಗಿ ಇರಿಸಿಕೊಂಡು ಮುಂದೆ ಸಾಗಿ. ದೇಹ ಸೇರಿ ಸಾವಿನ ದವಡೆಗೆ ನೂಕುವ…

    Posted by Chaithra Kotoor on Sunday, April 18, 2021

    ಒಟ್ಟಿನಲ್ಲಿ ಕೆಲ ದಿನಗಳ ಹಿಂದೆ ಮದುವೆಯಾಗಿ ಅದೇ ದಿನ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದಾದ ಬಳಿಕ ಚೈತ್ರಾ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದುಕೊಂಡರು. ಈ ಎಲ್ಲಾ ಕಾರಣಗಳಿಂದ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದಿದ್ದ ಚೈತ್ರಾ ಇದೀಗ ಮತ್ತೆ ಕಮ್ ಬ್ಯಾಕ್ ಆಗಿದ್ದಾರೆ.

    ಸೋಶಿಯಲ್ ಮಿಡಿಯಾಕ್ಕೆ ಎಂಟ್ರಿ ಕೊಟ್ಟು ಪೋಸ್ಟ್ ಹಾಕುತ್ತಿದ್ದಂತೆಯೇ ಮೆಚ್ಚುಗೆಯ ಕಾಮೆಂಟ್ ಗಳೇ ಬರಲಾರಂಭಿಸಿವೆ. ಫೇಸ್ ಬುಕ್ ಬಳಕೆದಾರರೊಬ್ಬರು ‘ಚೈತ್ರಾ ಅಂದ್ರೆ ಹೀಗಿರ್ಬೆಕು ಹೀಗೆ ಗಟ್ಟಿಯಾಗಿ ಖುಷಿಯನ್ನೇ ನಿರಂತರ ಹುಡುಕಿ… ಹೊಸ ಕನಸು ಮತ್ತು ಯೋಜನೆಗಳನ್ನು ಇಟ್ಟುಕೊಂಡು ಮುನ್ನೆಡೆಯಿರಿ. ನಿಮ್ಮಲ್ಲಿಯ ಅಪಾರ ಶಕ್ತಿಯ ಮೇಲೆ ನಂಬಿಕೆ ಇರಲಿ… ನೀವು ಆರೋಗ್ಯವಾಗಿರುವುದು ಕೇಳಿ ಸಂತೋಷವಾಯಿತು. ನಿಲುವು ಬೇರೆಯಾದರು ಬದುಕ ಒಲುಮೆ ಒಂದೆಯಲ್ಲವೇ.? ದೇವರ ಆಶೀರ್ವಾದವಿರಲಿ. ನೋವು ನಲಿವು ಯಾವುದು ಶಾಶ್ವತವಲ್ಲ ಅಂದುಕೊಂಡಂಗೆ ಒಂದೂ ನಡೆಯಲ್ಲ. ಆದ್ರೂ ನಗ್ ನಗ್ತಾ ಬಾಳಬೇಕು. ಒಳ್ಳೆ ಕಾಲಕ್ಕಾಗಿ ಕಾಯ್ಬೇಕು…’ ಎಂದು ಬರೆದುಕೊಂಡಿದ್ದಾರೆ. ಹೀಗೆ ಸಾಕಷ್ಟು ಕಾಂಮೆಂಟ್ ಗಳು ಬಂದಿವೆ.

  • ಕೊನೆಗೂ ಎಚ್ಚೆತ್ತು 2ನೇ ಹಂತದ ಲಸಿಕೆಯನ್ನ ಆಸ್ಪತ್ರೆಯಲ್ಲಿ ಹಾಕಿಸಿಕೊಂಡ್ರು ಬಿ.ಸಿ ಪಾಟೀಲ್

    ಕೊನೆಗೂ ಎಚ್ಚೆತ್ತು 2ನೇ ಹಂತದ ಲಸಿಕೆಯನ್ನ ಆಸ್ಪತ್ರೆಯಲ್ಲಿ ಹಾಕಿಸಿಕೊಂಡ್ರು ಬಿ.ಸಿ ಪಾಟೀಲ್

    ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಮೊದಲ ಹಂತದ ಕೊರೊನಾ ಲಸಿಕೆಯನ್ನು ಮನೆಯಲ್ಲಿಯೇ ಪಡೆದುಕೊಂಡಿದ್ದಾಗ ವಿವಾದ ಸೃಷ್ಟಿಯಾಗಿತ್ತು. ಇದೀಗ ಎಚ್ಚೆತ್ತು ಬಿ.ಸಿ.ಪಾಟೀಲ್ ಎರಡನೇ ಹಂತದ ಲಸಿಕೆಯನ್ನು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಪಡೆದುಕೊಂಡಿದ್ದಾರೆ.

    ಮಾರ್ಚ್ 2 ರಂದು ಮೊದಲನೇ ಹಂತದ ಲಸಿಕೆಯನ್ನು ಬಿ.ಸಿ.ಪಾಟೀಲ್ ಹಾಗೂ ಪತ್ನಿ ಮನೆಯಲ್ಲಿ ಲಸಿಕೆ ಹಾಕಿಸಿಕೊಂಡು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಮನೆಯಲ್ಲಿಯೇ ವ್ಯಾಕ್ಸಿನ್ ನೀಡಿದ ತಾಲೂಕು ಆರೋಗ್ಯಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ನೋಟೀಸ್ ನೀಡಿದ ಆರೋಗ್ಯ ಇಲಾಖೆ, ಈಗ ವೈದ್ಯಾಧಿಕಾರಿ ಡಾ.ಝಡ್. ಆರ್. ಮಕಾಂದಾರ್ ಅಮಾನತು ಮಾಡಿ ಆದೇಶ ನೀಡಿದೆ.

     

    ಇಂದು ಹಿರೇಕೆರೂರಿನ ಸರ್ಕಾರಿ ಆಸ್ಪತ್ರೆಯಲ್ಲಿ, ಎರಡನೇ ಹಂತದ ಕೋವಿಡ್ ಲಸಿಕೆಯನ್ನು ಪಡೆದೆನು.

    45 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಕೊರೊನಾ…

    Posted by B.C.Patil on Friday, April 2, 2021

    ವಿವಾದದ ನಂತರ ಆಸ್ಪತ್ರೆಗೆ ಹೋಗಿ ಆಸ್ಪತ್ರೆಯಲ್ಲಿ ಎರಡನೇ ಹಂತದ ಲಸಿಕೆಯನ್ನು ಸಚಿವ ಬಿ.ಸಿ. ಪಾಟೀಲ್ ಹಾಕಿಸಿಕೊಂಡಿದ್ದಾರೆ. ಎರಡನೇ ಹಂತದ ಲಸಿಕೆ ಹಾಕಿಸಿಕೊಂಡದ್ದನ್ನು ಫೇಸ್ ಬುಕ್‍ನಲ್ಲಿ ಪೋಸ್ಟ್ ಮಾಡಿಕೊಂಡಿದ್ದು, 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಸ್ವಯಂ ಪ್ರೇರಿತವಾಗಿ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳಿ, ಲಸಿಕೆ ಪಡೆದುಕೊಂಡು ಕೊರೊನಾ ಸೋಂಕಿನಿಂದ ದೂರವಿರಿ ಎಂದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

  • ಕಾರಿನ ಡ್ಯಾಶ್ ಬೋರ್ಡ್‍ನಲ್ಲಿ ಸಿಲುಕಿದ್ದ ಹಾವಿನ ರಕ್ಷಣೆ – ತೂಕ ಎಷ್ಟು ಗೊತ್ತಾ?

    ಕಾರಿನ ಡ್ಯಾಶ್ ಬೋರ್ಡ್‍ನಲ್ಲಿ ಸಿಲುಕಿದ್ದ ಹಾವಿನ ರಕ್ಷಣೆ – ತೂಕ ಎಷ್ಟು ಗೊತ್ತಾ?

    ವಾಷಿಂಗ್ಟನ್: ಯುಎಸ್‍ನ ಉತ್ತರ ಕರೊಲಿನಾದಲ್ಲಿ ಮಂಗಳವಾರ ಪಿಟ್ ಬೋವಾ ಕನ್ಸ್‍ಟ್ರಿಕ್ಟರ್ ಎಂಬ ಹಾವೊಂದು ಕಾರಿನ ಡ್ಯಾಶ್‍ಬೋರ್ಡ್‍ನಲ್ಲಿ ಸಿಲುಕಿಕೊಂಡಿದೆ.

    ಕಾರಿನ ಡ್ಯಾಶ್‍ಬೋರ್ಡ್‍ನಲ್ಲಿ ಸಿಲುಕಿದ್ದ ಹಾವನ್ನು ರಕ್ಷಣೆ ಮಾಡಲು ಸ್ಟಾನ್ಲಿ ಕೌಂಟಿ ಅನಿಮಲ್ ಪ್ರೊಟೆಕ್ಟಿವ್ ಸರ್ವೀಸಸ್ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಬಳಿಕ ಕಾರಿನ ಡ್ಯಾಶ್‍ಬೋರ್ಡ್‍ನನ್ನು ಕಿತ್ತು ಹಾಕಿ ಹಾವನ್ನು ರಕ್ಷಣೆ ಮಾಡಿದ್ದಾರೆ.

    ಇನ್ನೂ ಹಾವಿನ ಫೋಟೋವನ್ನು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿರುವ ಸ್ಟಾನ್ಲಿ ಕೌಂಟಿ ಅನಿಮಲ್ ಪ್ರೊಟೆಕ್ಟಿವ್ ಸರ್ವೀಸಸ್, ಕಾರಿನ ಡ್ಯಾಶ್ ಬೋರ್ಡ್‍ನಲ್ಲಿ ತಾನಾಗಿ ತಾನೇ ಸಿಲುಕಿಕೊಂಡಿದ್ದ ಬೋವಾ ಕನ್ಸ್‍ಟ್ರಕ್ಟರ್ ಹಾವನ್ನು ನಮ್ಮ ಅಧಿಕಾರಿಗಳು ಯಾವುದೇ ಹಾನಿಯಾಗದಂತೆ ಹೊರಗೆ ತೆಗೆದಿದ್ದಾರೆ. ಇದೀಗ ಹಾವು ಹಿಂದುರುಗಿದೆ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.

    It is never a dull moment at APS, and yesterday was not any different! Our officers were dispatched out to a situation…

    Posted by Stanly County Animal Protective Services on Tuesday, February 2, 2021

    ಇನ್ನೂ ಹಾವಿನ ಬಗ್ಗೆ ನೆಟ್ಟಿಗರು ಕೇಳಿದ ಪ್ರಶ್ನೆಗೆ 8.5 ಅಡಿ ಉದ್ದವಿದ್ದು, 18 ಕೆಜಿ ತೂಕವಿದೆ ಎಂದು ಸ್ಟಾನ್ಲಿ ಕೌಂಟಿ ಅನಿಮಲ್ ಪ್ರೊಟೆಕ್ಟಿವ್ ಸರ್ವೀಸಸ್ ಅಧಿಕಾರಿಗಳು ತಿಳಿಸಿದ್ದಾರೆ.

  • ಫೇಸ್‍ಬುಕ್ ಫ್ರೆಂಡ್ ರಿಕ್ವೆಸ್ಟ್ ನಿರ್ಲಕ್ಷಿಸಿದ ಮಾಜಿ ಬಾಸ್‍ಗೆ ಕೊಲೆ ಬೆದರಿಕೆ ಹಾಕಿದ..!

    ಫೇಸ್‍ಬುಕ್ ಫ್ರೆಂಡ್ ರಿಕ್ವೆಸ್ಟ್ ನಿರ್ಲಕ್ಷಿಸಿದ ಮಾಜಿ ಬಾಸ್‍ಗೆ ಕೊಲೆ ಬೆದರಿಕೆ ಹಾಕಿದ..!

    ವಾಷಿಂಗ್ಟನ್: ಕೆಲವೊಂದು ಬಾರಿ ನಮ್ಮ ಮೇಲೆ ಯಾರಿಗಾದರೂ ಬೇಜಾರಿದ್ದರೆ ಅಂಥವರು ನಮ್ಮ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಫೇಸ್‍ಬುಕ್ ಫ್ರೆಂಡ್ ರಿಕ್ವೆಸ್ಟ್ ನಿರ್ಲಕ್ಷಿಸಿದ ಮಾಜಿ ಬಾಸ್‍ಗೆ ಕೊಲೆ ಬೆದರಿಕೆ ಹಾಕಿದ್ದಾನೆ.

    ಈ ವಿಚಿತ್ರ ಘಟನೆ ಅಮೆರಿಕದ ಉತ್ತರ ಡಕೋಟಾದಲ್ಲಿ ನಡೆದಿದೆ. ಬೆದರಿಕೆ ಹಾಕಿದ ವ್ಯಕ್ತಿಯನ್ನು ಕ್ಯಾಲೆಬ್ ಬರ್ಸಿಕ್(29) ಎಂದು ಗುರುತಿಸಲಾಗಿದೆ. ಈತ 2 ದಿನಗಳಲ್ಲಿ ತನ್ನ ಫ್ರೆಂಡ್ ರಿಕ್ವೆಸ್ಟ್ ನಿರ್ಲಕ್ಷಿಸಿದ ಮಾಜಿ ಬಾಸ್ ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

    2020ರ ಡಿಸೆಂಬರ್ 24ರಮದು ಕ್ಯಾಲೆಬ್ ತನ್ನ ಮಾಜಿ ಬಾಸ್ ಗೆ ಫೇಸ್ ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾನೆ. ಆದರೆ ಅವರು ಯಾವುದೋ ಕೆಲಸದ ಒತ್ತಡದಿಂದ ಅಥವಾ ಇನ್ನೇನೋ ಕಾರಣದಿಂದ ಆತನ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಲಿಲ್ಲ. ಕೆಲ ಸಮಯ ಕಾದರೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗದಿದ್ದರಿಂದ ಸಿಟ್ಟುಗೊಂಡ ಕ್ಯಾಲೆಬ್, ಒಂದಾ ನನ್ನ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸು, ಇಲ್ಲವೆಂದಲ್ಲಿ ನಿನ್ನೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

    ಇಷೆಲ್ಲಾ ಆದ ನಂತರ ಮತ್ತೆ 2 ದಿನಗಳ ಕಾಲ ಕ್ಯಾಲೆಬ್ ಕಾದು ಕುಳಿತಿದ್ದಾನೆ. ಈ ವೇಳೆಯೂ ಮಾಜಿ ಬಾಸ್ ನಿಂದ ಯಾವುದೇ ಪ್ರತಿಕ್ರಿಯೆ ಕಂಡಿಲ್ಲ. ಇದರಿಂದ ಮತ್ತೆ ರೊಚ್ಚಿಗೆದ್ದ ಕ್ಯಾಲೆಬ್, ನೇರವಾಗಿ ಮಾಜಿ ಬಾಸ್ ಮನೆಗೆ ತೆರಳಿ ತನ್ನ ಕಾಲಿನಿಂದ ಬಾಗಿಲನ್ನು ಒದ್ದಿದ್ದಾನೆ. ಅಲ್ಲದೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಫೋಟೋದೊಂದಿಗೆ ಬೆದರಿಕೆ ಮೇಲೆ ಬೆದರಿಕೆ ಹಾಕಲು ಆರಂಭಿಸಿದ್ದಾನೆ.

    ಸದ್ಯ ಘಟನೆಗೆ ಸಂಬಂಧಿಸಿದಂತೆ ಕ್ಯಾಲೆಬ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶೀಘ್ರವೇ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

  • ಲಾಕ್‍ಡೌನ್ ಎಫೆಕ್ಟ್ – ಮೇಷ್ಟ್ರಾದ ಮಾಜಿ ಶಾಸಕ ವೈ.ಎಸ್.ವಿ. ದತ್ತ

    ಲಾಕ್‍ಡೌನ್ ಎಫೆಕ್ಟ್ – ಮೇಷ್ಟ್ರಾದ ಮಾಜಿ ಶಾಸಕ ವೈ.ಎಸ್.ವಿ. ದತ್ತ

    – ನನಗೆ ಶಿಕ್ಷಕ ಎಂದು ಹೇಳಿಕೊಳ್ಳಲು ಹೆಮ್ಮೆ

    ಚಿಕ್ಕಮಗಳೂರು: ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಲಾಕ್‍ಡೌನ್ ಹಿನ್ನೆಲೆ ಮೇಷ್ಟ್ರಾಗಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಫೇಸ್ ಬುಕ್ ಲೈವ್‍ನಲ್ಲಿ ಪ್ರತಿ ದಿನ ಸಂಜೆ 7.30 ರಿಂದ 8.30ರವೆಗೆ ಪಾಠ ಮಾಡುತ್ತಿದ್ದಾರೆ.

    ಒಂದು ವಾರ ಗಣಿತ, ಮತ್ತೊಂದು ವಾರ ಭೌತಶಾಸ್ತ್ರ ಪಾಠ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರದಲ್ಲಿ ಪರೀಕ್ಷೆ ನಡೆಯಬಹುದು ಎಂದು ಹೇಳಲಾಗುತ್ತಿದೆ. ಪರೀಕ್ಷೆ ನಡೆಸಲು ಸರ್ಕಾರ ಕೂಡ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹಾಗಾಗಿ ಶೀಘ್ರದಲ್ಲೇ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಪರೀಕ್ಷೆ ನಡೆಯುವ ಹಿನ್ನೆಲೆ, ದತ್ತ ಮೇಷ್ಟ್ರು ಫೇಸ್‍ಬುಕ್ ನಲ್ಲಿ ಈಗಾಗ್ಲೇ ಮಕ್ಕಳಿಗೆ ಗಣಿತ ಪಾಠವನ್ನು ಆರಂಭಿಸಿದ್ದಾರೆ.

    https://www.facebook.com/ysvDattaofficial/videos/1161467544194546/

    ಎರಡು ವಾರಗಳ ಕಾಲ ಮಕ್ಕಳಿಗೆ ಫೇಸ್‍ಬುಕ್ ಲೈವ್‍ನಲ್ಲಿ ಪಾಠ ಮಾಡಲಿದ್ದಾರೆ. ವೈ.ಎಸ್.ವಿ ದತ್ತ ಫೇಸ್‍ಬುಕ್ ಖಾತೆಯಿಂದ ದಿನ ಸಂಜೆ 7.30 ರಿಂದ 8.30ರವರಗೆ ಒಂದು ಗಂಟೆ ಮಕ್ಕಳಿಗೆ ಪಾಠ ಮಾಡಲಿದ್ದಾರೆ. ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ವೈ.ಎಸ್.ವಿ. ದತ್ತ ಮೂಲತಃ ಶಿಕ್ಷಕರು. ನಂತರ ಶಿಕ್ಷಕ ವೃತ್ತಿಯಿಂದ ರಾಜಕಾರಣಕ್ಕೆ ಬಂದಿದ್ದರು. ಈ ಹಿಂದೆ ಅವರು ಶಾಸಕರಾಗಿದ್ದಾಗಲೂ ಕೂಡ ಶಿಕ್ಷಕರ ದಿನಾಚರಣೆಯಂದು ಮಕ್ಕಳಿಗೆ ಪಾಠ ಮಾಡಿದ್ದರು.

    ಈಗ ಕೊರೊನಾ ಆತಂಕದಿಂದ ದೇಶವೇ ಲಾಕ್‍ಡೌನ್ ಆದ ಮೇಲೆ 10ನೇ ತರಗತಿಯ ಪರೀಕ್ಷೆ ಕೂಡ ಮುಂದೂಡಲಾಗಿತ್ತು. ಈಗ ಜೂನ್ ತಿಂಗಳಿನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇರುವ ಕಾರಣ ಮಕ್ಕಳಿಗೆ ಪುನರ್ ಮನನ ತರಗತಿ ಅಗತ್ಯವೆಂದು ವರ್ಷಗಳ ಬಳಿಕ ಕೈಯಲ್ಲಿ ಮತ್ತೆ ಚಾಕ್‍ಪೀಸ್ ಹಿಡಿದು ಬದಲಾದ ಜಗದಲ್ಲಿ ಫೇಸ್‍ಬುಕ್ ಮೂಲಕ ಮತ್ತೆ ಶಿಕ್ಷಕ ವೃತ್ತಿಗೆ ಕಾಲಿಟ್ಟಿದ್ದಾರೆ.

  • ನನ್ನ ಮೇಲಿನ ನಿಮ್ಮ ಪ್ರೀತಿ, ಹಾರೈಕೆಗಳು ಇನ್ನು ಮುಂದೆ ನಮ್ಮಿಬ್ಬರ ಮೇಲಿರಲಿ: ನಿಖಿಲ್

    ನನ್ನ ಮೇಲಿನ ನಿಮ್ಮ ಪ್ರೀತಿ, ಹಾರೈಕೆಗಳು ಇನ್ನು ಮುಂದೆ ನಮ್ಮಿಬ್ಬರ ಮೇಲಿರಲಿ: ನಿಖಿಲ್

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಅವರು, ತಾನು ಮದುವೆಯಾಗುತ್ತಿರುವ ಭಾವಿ ಪತ್ನಿಯ ಫೋಟೋವನ್ನು ಮೊದಲ ಬಾರಿಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ಮನೆಯ ಹಿರಿಯರು ನೋಡಿದ ವಿಜಯನಗರ ಶಾಸಕ ಎಂ ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳು ರೇವತಿಯವರ ಜೋತೆ ನಿಖಿಲ್ ಕುಮಾರಸ್ವಾಮಿ ಅವರ ಮದುವೆ ಫಿಕ್ಸ್ ಆಗಿದ್ದು, ಫೆ 10 ರಂದು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಲು ಸಖಲ ಸಿದ್ಧತೆಗಳು ನಡೆಯುತ್ತಿವೆ. ಈ ವೇಳೆ ತಮ್ಮ ಭಾವಿ ಮಡದಿ ಫೋಟೋವನ್ನು ತಮ್ಮ ಫೇಸ್ ಬುಕ್ ನಲ್ಲಿ ಹಾಕಿಕೊಂಡಿರುವ ನಿಖಿಲ್ ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ನಿಖಿಲ್ ಮತ್ತು ರೇವತಿಯವರು ನಿಂತಿರುವ ಫೋಟೋವನ್ನು ಹಾಕಿ,”ನನ್ನ ಸಂಗಾತಿಯಾಗುವವರ ಜೊತೆಗಿನ ಮೊದಲ ಫೋಟೋವನ್ನು ಶೇರ್ ಮಾಡಿಕೊಳ್ಳೋಕೆ ಖುಷಿ ಆಗುತ್ತಿದೆ. ಎಂದಿನಂತೆ ನನ್ನ ಮೇಲಿನ ನಿಮ್ಮ ಪ್ರೀತಿ ಹಾಗೂ ಹಾರೈಕೆಗಳು ಇನ್ನು ಮುಂದೆ ನಮ್ಮಿಬ್ಬರ ಮೇಲೂ ಇರಲಿ ಎಂದು ಕೇಳಿಕೊಳ್ಳುತ್ತೇನೆ” ಎಂದು ಬರೆದುಕೊಂಡಿದ್ದಾರೆ.

    ನಿಖಿಲ್ ವರಿಸುತ್ತಿರುವ ಹುಡುಗಿ ರೇವತಿ ಎಂಸಿಎ ಪದವೀಧರೆಯಾಗಿದ್ದಾರೆ. ಜ.26 ರಂದು ಬೆಂಗಳೂರಿನ ಮಲ್ಲತಳ್ಳಿಯಲ್ಲಿರುವ ವಧುವಿನ ಮನೆಗೆ ದೇವೇಗೌಡರ ಕುಟುಂಬದವರು ಭೇಟಿ ನೀಡಿ ಹುಡುಗಿ ನೋಡುವ ಶಾಸ್ತ್ರವನ್ನು ಮುಗಿಸಿದ್ದರು. ದೇವೇಗೌಡರು, ಪತ್ನಿ ಚೆನ್ನಮ್ಮ, ಕುಮಾರಸ್ವಾಮಿ, ಅನಿತಾಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ದೇವೇಗೌಡರ ಪುತ್ರಿಯರಾದ ಅನುಸೂಯ, ಶೈಲಜಾ ವಧುವಿನ ಮನೆಗೆ ಭೇಟಿ ನೀಡಿ ಮದುವೆ ಮಾತುಕತೆ ಮುಗಿಸಿದ್ದರು.

    https://www.facebook.com/iamNikhilGowda/photos/a.538978006208398/2480564392049740/

    ನಂತರ ತನ್ನ ಭಾವಿ ಪತ್ನಿಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ನಿಖಿಲ್, ನನಗೆ ರೇವತಿ ಅವರೇ ಪರ್ಫೆಕ್ಟ್ ಪಾರ್ಟ್ನರ್. ನಮ್ಮ ಮನೆಯವರಿಗೆ ನೀವು ನೋಡಿದ ಹುಡುಗಿಯನ್ನೇ ಮದುವೆಯಾಗುತ್ತೀನಿ ಎಂದು ಹೇಳಿದ್ದೆ. ಈಗ ರೇವತಿ ಅವರನ್ನು ಮನೆಯವರು ನೋಡಿ ಆಯ್ಕೆ ಮಾಡಿದ್ದರು. ನನ್ನ ಅಭಿಪ್ರಾಯವನ್ನು ಕೇಳಿದರು. ನಾನು ಒಪ್ಪಿದ ಮೇಲೆ ಮದುವೆ ಫಿಕ್ಸ್ ಮಾಡಿದ್ದಾರೆ. ಹೀಗಾಗಿ ಕುಟುಂಬದವರ ಮಾತು ಉಳಿಸಿಕೊಂಡಿರುವುದಕ್ಕೆ ಖುಷಿಯಾಗಿದೆ ಎಂದು ಹೇಳಿದ್ದರು.

    ಇದೇ ವೇಳೆ, ರೇವತಿ ಸಂಪ್ರದಾಯಸ್ಥ ಮನೆಯವರ ಮಗಳು. ಅವರು ವಿದ್ಯಾವಂತೆ ಜೊತೆಗೆ ಒಳ್ಳೆಯ ಆಚಾರವಿದೆ. ಅವರ ಜೊತೆ ನಾನು ಮಾತನಾಡಿದ್ದೇನೆ. ನನ್ನ ಎರಡು ಸಿನಿಮಾಗಳನ್ನು ಅವರು ಥಿಯೇಟರ್ ನಲ್ಲಿ ನೋಡಿರುವುದಾಗಿ ತಿಳಿಸಿದ್ದರು. ನನಗೆ ರೇವತಿ ಅವರೇ ಪರ್ಫೆಕ್ಟ್ ಪಾರ್ಟ್ನರ್ ಎಂದು ರೇವತಿ ಬಗ್ಗೆ ತಿಳಿಸಿದದ್ದರು.

    ಇದೇ ತಿಂಗಳು ಫೆಬ್ರವರಿ 10 ರಂದು ನಿಖಿಲ್ ಮತ್ತೆ ರೇವತಿ ನಿಶ್ಚಿತಾರ್ಥ ನಡೆಯಲಿದೆ. ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಅದ್ಧೂರಿಯಾಗಿ ಇವರಿಬ್ಬರ ನಿಶ್ಚಿತಾರ್ಥ ನಡೆಯಲಿದೆ. ಈ ಜೋಡಿಯ ಎಂಗೇಜ್‍ಮೆಂಟ್‍ನಲ್ಲಿ ನಿಖಿಲ್ ಮತ್ತು ರೇವತಿ ಕುಟುಂಬದವರು ಹಾಗೂ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. ಸುಮಾರು 5 ಸಾವಿರ ಜನರು ನಿಶ್ಚಿತಾರ್ಥದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

    ಮಗನ ಮದುವೆ ಬಗ್ಗೆ ರಾಮನಗರದಲ್ಲಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಎಲ್ಲ ನಾಯಕರು ಮದುವೆಯನ್ನು ಬೆಂಗಳೂರಿನಲ್ಲಿ ಮಾಡುತ್ತಾರೆ. ನಿಖಿಲ್‍ನ ನಿಶ್ಚಿತಾರ್ಥವನ್ನು ಬೆಂಗಳೂರಿನಲ್ಲಿ ಹಾಗೂ ಮದುವೆ ರಾಮನಗರದಲ್ಲಿ ನಡೆಸುವುದಾಗಿ ತಿಳಿಸಿದ್ದರು. ಜೊತೆಗೆ ಮದುವೆಗೆ ರಾಮನಗರ, ಮಂಡ್ಯ ಜಿಲ್ಲೆಯ ಪ್ರತೀ ಮನೆಯವರಿಗೂ ಆಹ್ವಾನ ನೀಡಲಾಗುವುದು ಎಂದು ಹೇಳಿದ್ದರು.

    ನನಗೆ ರಾಜಕೀಯವಾಗಿ ಜನ್ಮ ನೀಡಿದ ಎರಡು ಕ್ಷೇತ್ರಗಳ ರಾಮನಗರ, ಚನ್ನಪಟ್ಟಣ ಅಲ್ಲದೇ ಮಂಡ್ಯ, ಮಳವಳ್ಳಿ, ಕನಕಪುರ, ಮಾಗಡಿ ಜನರ ಋಣ ನನ್ನ ಮೇಲಿದೆ. ಆ ಜನರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲೆ ಇದೆ. ಸಮಾರಂಭ ಎಂದು ಮಾಡುವ ಅವಕಾಶವಿರುವುದು ಇದೊಂದೇ ಆಗಿದ್ದು, ಪ್ರತೀ ಮನೆಗೂ ಆಹ್ವಾನ ಪತ್ರಿಕೆ ನೀಡುವ ವ್ಯವಸ್ಥೆ ಮಾಡುತ್ತಿದ್ದಾನೆ. ಎರಡೂ ಜಿಲ್ಲೆಯ ಎಲ್ಲರಿಗೂ ಮದುವೆಗೆ ಆಹ್ವಾನವನ್ನು ನೀಡಲಾಗುವುದು ಎಂದು ತಿಳಿಸಿದ್ದರು.

    ರಾಮನಗರ, ಮಂಡ್ಯ ಜಿಲ್ಲೆಗಳ ಜನರಿಗೆ ಊಟ ಹಾಕಬೇಕೆಂಬ ಆಸೆ ಇತ್ತು. ಮಗನ ಮದುವೆ ಮೂಲಕ ಜನರಿಗೆ ಊಟ ಹಾಕಲಾಗುವುದು. ಜನರ ಜೊತೆಗೆ ಮಗನ ಮದುವೆಯ ಸಂಭ್ರಮ ಸಹ ಮಾಡುವುದಾಗಿ ಹೇಳಿದ್ದರು. ಚನ್ನಪಟ್ಟಣದ ಹತ್ತಿರ ನಿಖಿಲ್ ಮದುವೆಯನ್ನು 54 ಎಕರೆ ಜಾಗದಲ್ಲಿ ಸೆಟ್ ಹಾಕಿಸಿ ಮಾಡಲು ಎಚ್‍ಡಿಕೆ ಕುಟುಂಬ ನಿರ್ಧಾರ ಮಾಡಲು ಮುಂದಾಗಿದ್ದಾರೆ ಎನ್ನುವ ವಿಚಾರ ಈಗ ತಿಳಿದುಬಂದಿದೆ. ಆದರೆ ಇನ್ನು ಈ ವಿಚಾರದ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟವಾಗಿಲ್ಲ.