Tag: ಫೈನಾನ್ಸರ್

  • ತಂದೆ ಮಾಡಿದ ಸಾಲ ತೀರಿಸಿಲ್ಲವೆಂದು ಮಗನನ್ನು ಮರಕ್ಕೆ ಕಟ್ಟಿ ಥಳಿಸಿದ ಫೈನಾನ್ಸರ್

    ತಂದೆ ಮಾಡಿದ ಸಾಲ ತೀರಿಸಿಲ್ಲವೆಂದು ಮಗನನ್ನು ಮರಕ್ಕೆ ಕಟ್ಟಿ ಥಳಿಸಿದ ಫೈನಾನ್ಸರ್

    ಕೊಪ್ಪಳ: ತಂದೆ (Father) ಮಾಡಿದ ಸಾಲ ಸಕಾಲಕ್ಕೆ ತೀರಿಸಿಲ್ಲ ಎಂಬ ಕಾರಣಕ್ಕೆ ಸಾಲ ಕೊಟ್ಟವರು ಮಗನಿಗೆ (Son) ಶಿಕ್ಷೆ ಕೊಟ್ಟಿದ್ದಾರೆ. ಸಾಲ ಮರು ಪಾವತಿ ಮಾಡದಿರುವುದರಿಂದ ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನುಷ ಘಟನೆ ಕೊಪ್ಪಳ (Koppala) ಜಿಲ್ಲೆ ಕುಷ್ಟಗಿ ತಾಲೂಕಿನ ಕೆ.ಹೊಸೂರು ಗ್ರಾಮದಲ್ಲಿ ನಡೆದಿದೆ.

    ದೊಡ್ಡ ಬಸಪ್ಪ ಮಡಿವಾಳರ (14) ಎಂಬ ಬಾಲಕನಿಗೆ ಥಳಿಸಿದ ಆರೋಪ ಕೇಳಿ ಬಂದಿದೆ. 2022ರ ಡಿ.28 ರಂದು ಘಟನೆ ನಡೆದಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಲ್ಲ. ಇದರಿಂದ ಥಳಿತಕ್ಕೆ ಒಳಗಾದ ಬಾಲಕನ ತಾಯಿ ಮಂಜುಳಾ ಡಿ.31 ರಂದು ಎಸ್‍ಪಿಗೆ ದೂರು ನೀಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಂದೆ ಮರಿಯಪ್ಪ ಮಡಿವಾಳರ ಮಾಡಿದ ಸಾಲ ತೀರಿಸಿಲ್ಲ ಎಂದು ಸಾಲ ಕೊಟ್ಟವರು ನನ್ನ ಮಗನಿಗೆ ಥಳಿಸಿದ್ದಾರೆ ಎಂದು ಇದೀಗ ಈ ಬಗ್ಗೆ ಕನಕರಾಯ ಮಡಿವಾಳರ, ರಾಜೇಶ್ವರಿ ಮಡಿವಾಳರ, ವೀರಭದ್ರಪ್ಪ ಮಡಿವಾಳರ, ಗಂಗಮ್ಮ ಮಡಿವಾಳರ, ನಿರುಪಾದೆಪ್ಪ ಮಡಿವಾಳರ, ಬಸವರಾಜ ಮಡಿವಾಳರ ಎನ್ನುವವರ ವಿರುದ್ಧ ಬಾಲಕನ ತಾಯಿ ಮಂಜುಳಾ ದೂರು ನೀಡಿದ್ದಾರೆ.

    ಮರಿಯಪ್ಪ ಮಡಿವಾಳರ ಎಂಬಾತ 40 ಸಾವಿರ ರೂಪಾಯಿ ಸಾಲ ಪಡೆದಿದ್ದನಂತೆ. ನಂತರ 30 ಸಾವಿರ ಸಾಲ ತೀರಿಸಿದ್ದು, ಇನ್ನು 10 ಸಾವಿರ ರೂ. ಬಾಕಿ ಇದ್ದು, ಸಕಾಲಕ್ಕೆ ತೀರಿಸಿಲ್ಲ ಎಂದು ಸಾಲಕೊಟ್ಟವರು ಮಗನನ್ನು ಥಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಾಲ ತೀರಿಸದ್ದಕ್ಕೆ ಆಟೋ ಚಾಲಕನ ಪತ್ನಿಯನ್ನೇ ಪದೇ ಪದೇ ರೇಪ್‌ ಮಾಡಿದ ಫೈನಾನ್ಸರ್

    ಸಾಲ ತೀರಿಸದ್ದಕ್ಕೆ ಆಟೋ ಚಾಲಕನ ಪತ್ನಿಯನ್ನೇ ಪದೇ ಪದೇ ರೇಪ್‌ ಮಾಡಿದ ಫೈನಾನ್ಸರ್

    ಗಾಂಧಿನಗರ: ವ್ಯಕ್ತಿಯೊಬ್ಬ ಫೈನಾನ್ಸರ್ ನೀಡಿದ್ದ 50,000 ರೂ.ಗಳನ್ನು ಮರುಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ಆತನ ಪತ್ನಿ (Wife) ಮೇಲೆ ಅತ್ಯಾಚಾರವೆಸಗಿದ ಘಟನೆ ಗುಜರಾತ್‍ನ (Gujarat) ಅಹಮದಾಬಾದ್‍ನಲ್ಲಿ ನಡೆದಿದೆ.

    ಖಾಸಗಿ ಫೈನಾನ್ಸರಾದ ಅಜಿತ್ ಸಿನ್ಹ್ ಚಾವ್ಡಾ ಎಂಬಾತನಿಂದ ಆಟೋ ಚಾಲಕನೊಬ್ಬ (Auto Rickshaw Driver) ಸಾಲ ಪಡೆದಿದ್ದ. ಆದರೆ ಆ ಸಾಲವನ್ನು ತೀರಿಸಲು ವಿಫಲವಾಗಿದ್ದ. ಈ ಹಿನ್ನೆಲೆಯಲ್ಲಿ ಚಾವ್ಡಾ ಸಾಲ ಮಾಡಿದ್ದ ಆಟೋ ಚಾಲಕನ ಮನೆಗೆ ಬಂದು ಆತನ ಪತ್ನಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಜೊತೆಗೆ ಕೃತ್ಯವನ್ನು ಚಿತ್ರೀಕರಿಸಿದ್ದಾನೆ.

    ಅಷ್ಟೇ ಅಲ್ಲದೇ, ಚಾವ್ಡಾ ಆಟೋ ಚಾಲಕನ ಹೆಂಡತಿಯನ್ನು ಬಲವಂತವಾಗಿ ದೇವಸ್ಥಾನಕ್ಕೆ ಕರೆದೊಯ್ದು ಅವಳ ಹಣೆಗೆ ಸಿಂಧೂರ ಹಚ್ಚಿ ಅವಳನ್ನು ತನ್ನ ಹೆಂಡತಿ ಎಂದು ಘೋಷಿಸಿದ್ದಾನೆ. ಬಳಿಕ ಸಂತ್ರಸ್ತೆಯ ಮನೆಗೆ ಆಗಾಗ್ಗೆ ಭೇಟಿ ನೀಡಿ ಆಕೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಕಾಸ್ ಕೊಟ್ರೆ ಮಾತ್ರ ಚಿಕಿತ್ಸೆ – ಸಿಬ್ಬಂದಿ ಲಂಚವತಾರ ಬಯಲು

    ಘಟನೆಗೆ ಸಂಬಂಧಿಸಿ ಸಂತ್ರಸ್ತೆ ದೂರು ದಾಖಲಿಸಲು ರಾಜ್‍ಕೋಟ್ ತಾಲೂಕಾ ಪೊಲೀಸರನ್ನು ಸಂಪರ್ಕಿಸಿದ್ದಾಳೆ. ಆದರೆ ಅವರು ದೂರು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಅದಾದ ಬಳಿಕ ಆಕೆ ನ್ಯಾಯಾಲಯದ ಮೊರೆ ಹೋಗಿದ್ದು, ಅಲ್ಲಿ ಪೊಲೀಸರಿಗೆ ದೂರು ದಾಖಲಿಸಿಕೊಳ್ಳುವಂತೆ ತಿಳಿಸಿದೆ.

    BRIBE

    ತನ್ನ ವಿರುದ್ಧ ದೂರು ದಾಖಲಾದ ಬಗ್ಗೆ ತಿಳಿದ ಚಾವ್ಡಾ ಸಂತ್ರಸ್ತೆಯ ಪತಿ ಪಡೆದಿದ್ದ ಸಾಲದ ಮರುಪಾವತಿ ಮೊತ್ತದಲ್ಲಿ ವಿನಾಯತಿ ನೀಡುತ್ತೇನೆ ಎಂದು ಆಮಿಷವೊಡ್ಡಿದ್ದಾನೆ. ಅದಕ್ಕೆ ಒಪ್ಪದಿದ್ದಾಗ ಚಾವ್ಡಾ ತನ್ನ ಸಹಚರರಿಗೆ ಹೇಳಿ ಮಹಿಳೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಮಹಿಳೆಯ ಕೈಗೆ ಗಾಯವಾಗಿದೆ. ಘಟನೆಗೆ ಸಂಬಂಧಿಸಿ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಇದನ್ನೂ ಓದಿ: ಸಾರ್ವಜನಿಕರಿಗೆ ನಿತ್ಯವೂ ಕಿರುಕುಳ ಆರೋಪ – PSI ಗೀತಾಂಜಲಿ ಅಮಾನತು

    Live Tv
    [brid partner=56869869 player=32851 video=960834 autoplay=true]