Tag: ಫೈರ್ ಫ್ಲೈ

  • ‘ಫೈರ್‌ ಫ್ಲೈ’ ಶೂಟಿಂಗ್ ಮುಕ್ತಾಯ- ಮರೆಯಲಾಗದ ಪಯಣ ಎಂದ ನಿವೇದಿತಾ ಶಿವರಾಜ್‌ಕುಮಾರ್

    ‘ಫೈರ್‌ ಫ್ಲೈ’ ಶೂಟಿಂಗ್ ಮುಕ್ತಾಯ- ಮರೆಯಲಾಗದ ಪಯಣ ಎಂದ ನಿವೇದಿತಾ ಶಿವರಾಜ್‌ಕುಮಾರ್

    ಟ ಶಿವರಾಜ್‌ಕುಮಾರ್ ಅವರ ಪುತ್ರಿ ನಿವೇದಿತಾ ನಿರ್ಮಾಣ ಮಾಡುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಫೈರ್‌ ಫ್ಲೈ’ (Firefly Kannada) ಚಿತ್ರೀಕರಣ ಮುಕ್ತಾಯಗೊಂಡಿದೆ. ‘ಫೈರ್‌ ಫ್ಲೈ’ ಶೂಟಿಂಗ್ ಜರ್ನಿಯ ಝಲಕ್ ನ್ನು ಚಿತ್ರತಂಡ ಹಂಚಿಕೊಂಡು, ಕುತೂಹಲವನ್ನು ದುಪ್ಪಟ್ಟು ಮಾಡಿದೆ. ಇದನ್ನೂ ಓದಿ:‘ರೈಸ್ 4’ಗಾಗಿ ಸೈಫ್ ಅಲಿ ಖಾನ್ ಜೊತೆ ಕೈಜೋಡಿಸಿದ ಸಿದ್ಧಾರ್ಥ್ ಮಲ್ಹೋತ್ರಾ

    ‘ಫೈರ್‌ ಫ್ಲೈ’ ಪಯಣದ ಬಗ್ಗೆ ನಿವೇದಿತಾ ಶಿವರಾಜ್ ಕುಮಾರ್ (Niveditha Shivarajkumar) ಮನದ ಮಾತನ್ನು ಹಂಚಿಕೊಂಡಿದ್ದಾರೆ. ಚಿಕ್ಕವಳಿದ್ದಾಗಿನಿಂದಲೂ ಸಿನಿಮಾ ಮತ್ತು ಕಥೆಗಳೊಡನೆ ಬೆಳೆದವಳು ನಾನು ಅಂದಿನಿಂದಲೂ ನನಗಿಷ್ಟವಾದ ಕಥೆಗಳನ್ನು ಬೆಳ್ಳಿತೆರೆಯ ಮೇಲೆ ತರಬೇಕೆಂದು ಕಂಡ ಕನಸಿಗೆ ಕಟ್ಟಿದ ಮೊದಲ ರೆಕ್ಕೆ ‘ಫೈರ್‌ ಫ್ಲೈ’ ಸಿನಿಮಾ. ಇದರ ಚಿತ್ರೀಕರಣ ಇನ್ನೇನು ಮುಗಿಯುತ್ತಿರಲು, ಚಿತ್ರ ತಂಡದ ನಾವಿಕರಾದ ವಂಶಿ, ನಮ್ಮ ತಂತ್ರಜ್ಞರು, ಹಿರಿಯ ನಟ ನಟಿಯರು. ಅತ್ಯದ್ಭುತ ಪ್ರತಿಭೆಗಳು ಹಾಗೂ ನನ್ನ ಬೆನ್ನೆಲುಬಾಗಿ ನಿಂತ ತಂಡದ ಪ್ರತಿಯೊಬ್ಬರೂ ಹಾಗೂ ಅವರೊಡನೆ ಮೂಡಿದ ನೆನಪುಗಳು ನನ್ನಲ್ಲಿ ಶಾಶ್ವತವಾಗಿ ಉಳಿಯುವುದು.

    ಶುರುವಾದ ಪ್ರತಿಯೊಂದು ಪ್ರಯಾಣವು ಎಲ್ಲಾದರೂ ಅಂತ್ಯಗೊಳ್ಳಬೇಕೆನ್ನುತ್ತಾರೆ. ಆದರೆ ನನ್ನ ಈ ಕನಸಿನ ಪ್ರಯಾಣದ ಕೊನೆ ಹತ್ತಿರವಾಗುತ್ತಿದ್ದರೂ ಹೊಸತೊಂದು ಪ್ರಯಾಣದ ಆರಂಭವಾದಂತಿದೆ. ಅಂತರಾಳದ ಬೆಳಕಿನ ಹುಡುಕಾಟದ ಕಥೆಯಾಗಿರುವ ನಮ್ಮ ‘ಫೈರ್‌ ಫ್ಲೈ’ ಚಿತ್ರವನ್ನು ನಿಮ್ಮೊಂದಿಗೆ ತೆರೆಯ ಮೂಲಕ ಹಂಚಿಕೊಳ್ಳಲು ಕಾತುರದಿಂದ ಕಾಯುತ್ತಿರುವೆ ಎಂದು ಪತ್ರದ ಮೂಲಕ ಮನದ ಮಾತು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ – ರೇಣುಕಾಸ್ವಾಮಿ ತಂದೆ ಕಣ್ಣೀರು

    ಯುವ ಪ್ರತಿಭೆ ವಂಶಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ದೇಶಕನಾಗಿಯೂ ಬಣ್ಣ ಹಚ್ಚಿರುವ ‘ಫೈರ್ ಫ್ಲೈ’ ನಲ್ಲಿ ಸುಧಾರಾಣಿ, ಅಚ್ಯುತ್ ಕುಮಾರ್, ಹಿರಿಯ ಕಲಾವಿದ ಮೂಗು ಸುರೇಶ್ ಅಭಿನಯಿಸಿದ್ದಾರೆ. ವಂಶಿಗೆ ಜೋಡಿಯಾಗಿ ರಚನಾ ಇಂದರ್ ಸಾಥ್ ಕೊಟ್ಟಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಳತ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

    ನಾಯಕ- ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.

  • ದಾಖಲೆ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದ ಆಡಿಯೋ ಹಕ್ಕು

    ದಾಖಲೆ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದ ಆಡಿಯೋ ಹಕ್ಕು

    ನ್ನಡದ ಬಹುನಿರೀಕ್ಷಿತ ಸಿನಿಮಾ ‘ಫೈರ್ ಫ್ಲೈ’ (Fire Fly Kannada) ಬಹಳ ವಿಶೇಷವಾಗಿದೆ. ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬ ಕಾರಣದ ಜೊತೆಗೆ ಹೆಸರಾಂತ ತಾರೆಯರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನಾಯಕ ಮತ್ತು ನಿರ್ದೇಶಕ ವಂಶಿ (Vamsi) ಸಾರಥ್ಯದಲ್ಲಿ ಮೂಡಿ ಬರ್ತಿರುವ ‘ಫೈರ್ ಫ್ಲೈ’ ಸಿನಿಮಾದ ಆಡಿಯೋ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

    ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ‘ಫೈರ್ ಫ್ಲೈ’ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ‘ಫೈರ್ ಫ್ಲೈ’ ಆಡಿಯೋ ಹಕ್ಕನ್ನು (Audio Rights) ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಇದನ್ನೂ ಓದಿ:ಸೆನ್ಸಾರ್ ಮುಗಿಸಿದ ವಿನಯ್ ರಾಜ್ ಕುಮಾರ್ ನಟನೆಯ ‘ಪೆಪೆ’ ಚಿತ್ರ

    ‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಪುತ್ರಿ ನಿವೇದಿತಾ (Niveditha Shivarajkumar) ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರುತ್ತಿದ್ದಾರೆ. ವಂಶಿಗೆ ‌’ಲವ್ ಮಾಕ್ಟೈಲ್’ ನಟಿ ರಚನಾ ಇಂದರ್ (Rachana Inder) ನಾಯಕಿಯಾಗಿದ್ದಾರೆ.

    ಈ ಚಿತ್ರಕ್ಕೆ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ.

  • ‘ಫೈರ್ ಫ್ಲೈ’ ತಂಡದಿಂದ ಹೊಸ ಸುದ್ದಿ- ಶಿವಣ್ಣನ ಪುತ್ರಿ ಜೊತೆ ಕೈಜೋಡಿಸಿದ ಅಚ್ಯುತ್ ಕುಮಾರ್

    ‘ಫೈರ್ ಫ್ಲೈ’ ತಂಡದಿಂದ ಹೊಸ ಸುದ್ದಿ- ಶಿವಣ್ಣನ ಪುತ್ರಿ ಜೊತೆ ಕೈಜೋಡಿಸಿದ ಅಚ್ಯುತ್ ಕುಮಾರ್

    ‘ಫೈರ್ ಫ್ಲೈ’ (Fire Fly Kannada Film) ಸಿನಿಮಾ ತಾರಾಬಳಗದ ಮೂಲಕವೇ ಸದ್ದು ಸುದ್ದಿಯಾಗುತ್ತಿದೆ. ಕಳೆದ ವಾರವಷ್ಟೇ ಸುಧಾರಾಣಿ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಹಿರಿಯ ನಟ ಅಚ್ಯುತ್ ಕುಮಾರ್ (Achyuth Kumar) ‘ಫೈರ್ ಫ್ಲೈ’ನಲ್ಲಿ ಅಭಿನಯಿಸುತ್ತಿರುವ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಅಚ್ಯುತ್ ಕುಮಾರ್ ಇಲ್ಲಿ ನಾಯಕನ ತಂದೆ ಪಾತ್ರ ನಿಭಾಯಿಸಲಿದ್ದಾರೆ. ಅವರಿಗೆ ಜೋಡಿಯಾಗಿ ಸುಧಾರಾಣಿ ಸಾಥ್ ಕೊಡುತ್ತಿದ್ದಾರೆ. ಇದನ್ನೂ ಓದಿ:ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರದ ಟೀಸರ್ ಔಟ್

    ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅಚ್ಯುತ್ ಕುಮಾರ್, ನಾನು ಹೀರೋ ತಂದೆಯ ಪಾತ್ರ ಮಾಡುತ್ತಿದ್ದೇನೆ. ಪಾತ್ರ ತುಂಬಾ ಇಂಟ್ರೆಸ್ಟಿಂಗ್ ಆಗಿದೆ. ಒಬ್ಬ ತಂದೆ ಮಗನ ಬಾಂಧವ್ಯ ಮತ್ತು ಅವರಿಬ್ಬರು ಫ್ರೆಂಡ್ಸ್ ಆಗಿದ್ರೆ ಹೇಗೆ ಮಜವಾಗಿರುತ್ತೆ ಅಂತ ಈ ಸಿನೆಮಾದಲ್ಲಿ ನೋಡಬಹುದು. ನನ್ನ ಕೋಸ್ಟಾರ್ ಆಗಿ ಸುಧಾರಾಣಿಯವರು ನಟಿಸುತ್ತಿದ್ದಾರೆ. ಮುಂಚೆ ನಾವು ಬೇರೆ ಸಿನಿಮಾಗಳಲ್ಲಿ ನಮ್ಮ ಜೋಡಿಯನ್ನು ನೋಡಿ ಜನ ಮೆಚ್ಚಿದ್ದರು. ಆದರೆ ಈ ಸಿನಿಮಾದಲ್ಲಿ ನಮ್ಮಿಬ್ಬರ ಜೋಡಿ ಹಿಂದಿನ ಸಿನಿಮಾಗಳಿಗಿಂತ ವಿಭಿನ್ನವಾಗಿರುತ್ತದೆ. ಅದನ್ನು ನೀವು ಸ್ಕ್ರೀನ್ ಮೇಲೆ ನೋಡಬೇಕು. ‘ಫೈರ್ ಫ್ಲೈ’ ತುಂಬಾ ಕಲರ್ ಫುಲ್ ಆಗಿ ಮೂಡಿ ಬಂದಿದೆ ಮತ್ತು ತುಂಬಾ ಮನರಂಜನೆಯಿಂದ ಕೂಡಿದೆ ಎಂದಿದ್ದಾರೆ.

    ನಮ್ಮ ಶಿವಣ್ಣನ ಮಗಳು ನಿವೇದಿತಾ (Niveditha) ಸಿನಿಮಾ ಮಾಡುತ್ತಿರುವುದು ತುಂಬಾ ಖುಷಿಯಾಗುತ್ತಿದೆ. ಶ್ರೀಮುತ್ತು ಸಿನಿ ಸರ್ವಿಸ್ ನಡಿ ತುಂಬಾ ಪ್ರೊಪೆಷನಲ್ ಆಗಿ ಮುನ್ನೆಡೆಯುತ್ತಿರುವುದು ನೋಡಿದ್ರೆ ಇಂತಹದೊಂದು ನಿರ್ಮಾಣ ಸಂಸ್ಥೆ ಮತ್ತು ನಿರ್ಮಾಪಕಿ ನಮ್ಮ ಚಿತ್ರರಂಗಕ್ಕೆ ಬೇಕಿತ್ತು ಮತ್ತು ಹೊಸಬರಿಗೆ ಅವಕಾಶ ಕೊಡುತ್ತಿರುವುದರಿಂದ ಹೊಸ ತಲೆಮಾರಿನ ಫಿಲ್ಮಂಮೇಕರ್‌ಗೆ ಅನುಕೂಲವಾಗುತ್ತದೆ. ಇವರು ಆಯ್ಕೆ ಮಾಡಿಕೊಂಡಿರುವ ಕಥೆ ಕುಟುಂಬ ಕೂತು ನೋಡಬಹುದು. ಮತ್ತೆ ಮತ್ತೆ ಈ ತರ ಹೊಸಬರಿಗೆ ಅವಕಾಶ ಕೊಟ್ಟಿ ನಮ್ಮ ಇಂಡಸ್ಟಿç ಮುಂದಿನ ಹೆಜ್ಜೆಗಳಿಗೆ ಇವರ ನಿರ್ಮಾಣ ಸಂಸ್ಥೆ ಮೆಟ್ಟಿಲುಗಳಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

    ‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Actor Shivarajkumar) ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

    ‘ಫೈರ್ ಫ್ಲೈ’ ಸಿನಿಮಾಗೆ ಪಾತ್ರವರ್ಗದ ಮೂಲಕ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ನಟಿ ಶೀತಲ್ ಶೆಟ್ಟಿ, ನಟ ಮೂಗು ಸುರೇಶ್ , ಸುಧಾರಾಣಿ ಈ ಸಿನಿಮಾಗೆ ಸೇರ್ಪಡೆ ಆಗಿದ್ದರು. ಈಗ ಸುಧಾರಾಣಿ (Sudharani) ಅಚ್ಯುತ್ ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ.

  • ‘ಫೈರ್ ಫ್ಲೈ ‘ನಲ್ಲಿ ಪದ್ಮಳಾದ ಸುಧಾರಾಣಿ : ಶಿವಣ್ಣ ಪುತ್ರಿ ನಿರ್ಮಾಣದ ಚೊಚ್ಚಲ ಸಿನಿಮಾ

    ‘ಫೈರ್ ಫ್ಲೈ ‘ನಲ್ಲಿ ಪದ್ಮಳಾದ ಸುಧಾರಾಣಿ : ಶಿವಣ್ಣ ಪುತ್ರಿ ನಿರ್ಮಾಣದ ಚೊಚ್ಚಲ ಸಿನಿಮಾ

    ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ತಾರಾಬಳಗದ ಮೂಲಕ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ನಟಿ ಹಾಗೂ ನಿರ್ದೇಶಕಿಯಾಗಿರುವ ಶೀತಲ್ ಶೆಟ್ಟಿ, ಹಿರಿಯ ಕಲಾವಿದ ಮೂಗು ಸುರೇಶ್ ಅವರನ್ನು ಚಿತ್ರತಂಡ ಪರಿಚಯಿಸಿತ್ತು. ಫೈರ್ ಫ್ಲೈ ಸಿನಿಮಾ ಬಳಗಕ್ಕೀಗ ಹಿರಿಯ ನಟಿ ಸುಧಾರಾಣಿ ಸೇರಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಅದ್ಭುತ ಕಲಾವಿದೆಯಾಗಿರುವ ಸುಧಾರಾಣಿ ಈಗ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾದ ಭಾಗವಾಗಿದ್ದಾರೆ. ಅವರು ಪದ್ಮಾ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನ ತಾಯಿಯಾಗಿ ಸುಧಾರಾಣಿ ಒಂದೊಳ್ಳೆ ಪಾತ್ರವನ್ನು ನಿಭಾಯಿಸಿರುವ ಖುಷಿ ಅವರಲ್ಲಿದೆ. ಈಗಾಗಲೇ ಸುಧಾರಾಣಿ ತಮ್ಮ ಭಾಗದ ಚಿತ್ರೀಕರಣ ಮುಗಿಸಿ ಡಬ್ಬಿಂಗ್ ಕೂಡ ಕಂಪ್ಲೀಟ್ ಮಾಡಿದ್ದಾರೆ.

    ತಮ್ಮ ಪಾತ್ರದ ಬಗ್ಗೆ ಮಾತಾಡಿರುವ ಸುಧಾರಾಣಿ, ‘ಅಪ್ಪಾಜಿಯವರ ಮನೆಯಿಂದ ಯಾರು ಏನೇ ಮಾಡಿದರೂ ಅದು ನನ್ನ ತವರು ಮನೆ. ಹಾಗಾಗಿ ಇವತ್ತಿಗೂ ಅವರಲ್ಲಿ ಯಾರಾದ್ರೂ ಬಂದು ಹಿಂದೆ ಬಂದು ನಿಂತು ಹೋಗು ಅಂದ್ರೆ ನಾನು ತಯಾರಿದ್ದೇನೆ. ಏಕೆಂದರೆ ಇದು ನನ್ನ ಮನೆ. ನಿವಿ ನನ್ನ ಕಣ್ಣ ಮುಂದೆ ಹುಟ್ಟಿ ಬೆಳೆದಂತ ಮಗು, ಇವತ್ತು ಅವಳು ಒಂದು ನಿರ್ಮಾಣ ಸಂಸ್ಥೆ ಶುರು ಮಾಡುತ್ತಿದ್ದಾಳೆ, ಅವಳು ನಿರ್ಮಾಪಕಿಯಾಗಿದ್ದಾಳೆ. ನನಗೆ ತುಂಬಾ ಖುಷಿ ಇದೆ. ಕಥೆಯಿಂದ ಹಿಡಿದು ಪ್ರೊಡಕ್ಷನ್ ವರೆಗೂ ಸಿನೆಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ನಮ್ಮ ಕನ್ನಡದ ಕಲಾಭಿಮಾನಿಗಳು ಈ ಚಿತ್ರಕ್ಕೆ ಬೆಂಬಲ ನೀಡಬೇಕು. ನಿರ್ದೇಶಕರಿಗೆ ಸ್ವಲ್ಪ ಮುಜುಗರ ಇತ್ತು. ನನ್ನ ಇಷ್ಟು ಚಿಕ್ಕ ಪಾತ್ರ ಕೇಳಬೇಕು ಅಂತಾ ಆದ್ರೆ ಚೊಚ್ಚಲ ನಿರ್ದೇಶಕರಾಗಿ ಅವರಲ್ಲಿದ್ದ ಹುಮ್ಮಸ್ಸು. ಆಸಕ್ತಿ ನನಗೆ ಇಷ್ಟ ಆಯಿತು. ನಿರ್ದೇಶಕರಾಗಿ ನಟನೆಯೂ ಮಾಡುತ್ತಿರುವುದರಿಂದ ಎಲ್ಲರಿಗೂ ಅವರ ಮೊದಲ ಸಿನಿಮಾ ದೊಡ್ಡ ಬಜೆಟ್, ಮಲ್ಟಿಸ್ಟಾರ್ಸ್, ಆಕ್ಷನ್ ಸಿನಿಮಾ ಆಗಿರಬೇಕು ಅಂತಾ ಬಹುತೇಕರು ಯೋಚನೆ ಮಾಡುತ್ತಾರೆ. ಆದರೆ ಈ ವಿಚಾರದಲ್ಲಿ ಅವರು ವಿಭಿನ್ನ. ಸಂಬಂಧಗಳ ಬಗ್ಗೆ ಅವರು ಫೋಕಸ್ ಮಾಡಿದ್ದಾರೆ. ಇಡೀ ಕುಟುಂಬ ಕುಳಿತುಕೊಂಡು, ನೋಡಿ ಇಷ್ಟವಾಗುವಂತ ಚಿತ್ರವನ್ನು ಮಾಡಿದ್ದಾರೆ’ ಎಂದಿದ್ದಾರೆ.

    ‘ಫೈರ್ ಫ್ಲೈ’ ಚಿತ್ರದಲ್ಲಿ ವಂಶಿ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಈಗ ನಿವೇದಿತಾ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಶುರು ಮಾಡಿದ್ದಾರೆ.

     

    ಶಿವರಾಜಕುಮಾರ್ ಅವರು ಯಾವಾಗಲೂ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರ ರೀತಿಯೇ ನಿವೇದಿತಾ ಶಿವರಾಜಕುಮಾರ್ ಕೂಡ ಹೊಸಬರಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಈ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ. ‘ಫೈರ್ ಫ್ಲೈ’ ಚಿತ್ರಕ್ಕೆ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆಯ ಬರೆಯುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಒಂದು ಹಾಡಿನ ಶೂಟಿಂಗ್ ಬಾಕಿ ಉಳಿಸಿಕೊಂಡಿದೆ

  • ಬೆಳಕಿನ ಹಬ್ಬಕ್ಕೆ ‘ಫೈರ್ ಫ್ಲೈ’ ದರ್ಶನ- ಇದು ಶಿವಣ್ಣ ಪುತ್ರಿ ಹೊಸ ಪ್ರಯತ್ನ

    ಬೆಳಕಿನ ಹಬ್ಬಕ್ಕೆ ‘ಫೈರ್ ಫ್ಲೈ’ ದರ್ಶನ- ಇದು ಶಿವಣ್ಣ ಪುತ್ರಿ ಹೊಸ ಪ್ರಯತ್ನ

    ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ (Shivarajkumar) ಅವರ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್‌ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ಮೂಡಿಬಂದಿರುವ ‘ಫೈರ್ ಫ್ಲೈ’ (Fire Fly)  ಬೆಳಕಿನ ಹಬ್ಬ ದೀಪಾವಳಿಗೆ ದರ್ಶನ ಕೊಡಲಿದೆ. ಈ ಬಗ್ಗೆ ಶಿವಣ್ಣನ ನಾಗವಾರ ನಿವಾಸದಲ್ಲಿ ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ವೇಳೆ, ಮಗಳ ಹೊಸ ಪ್ರಯತ್ನಕ್ಕೆ ಜೊತೆಯಾಗಿ ಶಿವಣ್ಣ ದಂಪತಿ ಸಾಥ್ ಕೊಟ್ಟರು.

    ಬಳಿಕ ಮಾತನಾಡಿದ ನಿರ್ಮಾಪಕಿ ನಿವೇದಿತಾ ಶಿವರಾಜ್‌ಕುಮಾರ್ (Niveditha Shivarajkumar) ಮಾತನಾಡಿ, ವೆಬ್ ಸೀರಿಸ್ ಮಾಡಿದ ಮೇಲೆ ಸಿನಿಮಾ ಮಾಡಬೇಕು ಅಂತಾ ತುಂಬಾ ಆಸಕ್ತಿ ಇತ್ತು. ವಂಶಿ ಅವರು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಒಳ್ಳೆಯ ಟೆಕ್ನಿಕಲ್ ಟೀಂ ತೆಗೆದುಕೊಂಡು ಮಾಡಬೇಕು ಎಂದು ಚಿತ್ರ ಮಾಡಿದ್ದೆವೆ. ಕಥೆ ತುಂಬಾ ಸರಳವಾಗಿದ್ದರೂ, ಅವರು ಕಥೆ ಹೇಳಿದ ರೀತಿ ತುಂಬಾ ಇಷ್ಟವಾಯ್ತು. ಹೊಸ ಪ್ರಯೋಗ ಮಾಡಿದ್ದೇನೆ. ಕೊನೆಯ ಹಂತದ ಚಿತ್ರೀಕರಣ ಶುರು ಮಾಡುತ್ತಿದ್ದೇವೆ. ದೀಪಾವಳಿ ಸಿನಿಮಾ ಬಿಡುಗಡೆಯಾಗಲಿದೆ ಎಂದರು. ಇದನ್ನೂ ಓದಿ:ಉತ್ತರ ಕರ್ನಾಟಕದ ನಾನಾ ಸ್ಥಳಗಳಿಗೆ ಇಂದು ಶಿವರಾಜ್ ಕುಮಾರ್ ಭೇಟಿ

    ನಟ ಕಮ್ ನಿರ್ದೇಶಕ ವಂಶಿ ಮಾತನಾಡಿ, ಎಲ್ಲರ ಜೀವನದಲ್ಲಿಯೂ ಒಂದು ಪಾಯಿಂಟ್ ಇರುತ್ತದೆ. ನಾವು ಡೆಂಡ್ ಎಂಡ್ ಅಂದುಕೊಂಡಿರುತ್ತೇವೆ. ಒಂದು ಹೋಪ್ ಹಾಗೂ ಮೊಟಿವೇಷನ್‌ಗೆ ಕಾಯುತ್ತಾ ಇರುತ್ತೇವೆ. ಆ ಟೈಮ್‌ನಲ್ಲಿ ಹೋಪ್ ಎಂಬ ಬೆಳಕು ಎಲ್ಲಿಂದಲೋ ಬರಲ್ಲ ನಮ್ಮಿಂದಲೇ ಬರಬೇಕು ಎಂಬುದೇ ಫೈರ್ ಫ್ಲೈ. ಅದಕ್ಕೆ ಈ ಟೈಟಲ್ ಇಟ್ಟಿದ್ದೇವೆ. ನಿವೇದಿತಾ ಮೇಡಂಗೆ ಧನ್ಯವಾದ. ಇದಕ್ಕಿಂತ ಮೊದಲು ಎರಡು ಮೂರು ಕಥೆ ಚರ್ಚೆ ಮಾಡಿದ್ದೇವು. ಆದರೆ ಅವರು ರಿಜೆಕ್ಟ್ ಮಾಡಿದರು. ಈ ಕಥೆ ಒಪ್ಪಿಕೊಂಡಿದ್ದಕ್ಕೆ ನನಗೆ ಖುಷಿಯಾಯ್ತು. ಯಾಕೆಂದರೆ ನನ್ನಲ್ಲಿ ಕೆಲ ಬದಲಾವಣೆ ಆಯ್ತು. ಟೆಕ್ನಿಕಲ್ ಸ್ಟ್ರಾಂಗ್ ಹಾಗೂ ಸಿಂಪಲ್ ಸಿನಿಮಾದೊಂದಿಗೆ ಬರುತ್ತಿದ್ದೇವೆ. ಇದೇ ದೀಪಾವಳಿಗೆ ಚಿತ್ರ ಬರುತ್ತಿದೆ. ಇಡೀ ಸಿನಿಮಾದಲ್ಲಿ ನಾನು ಒಬ್ಬನೇ ಹೊಸಬ. ಆದರೆ ಆ ರೀತಿ ಫೀಲ್ ನನಗೆ ಬಂದೇ ಇಲ್ಲ. ಇಷ್ಟು ಜನ ಸಿಕ್ಕಿದ್ದು, ಶ್ರೀಮುತ್ತು ಸಿನಿ ಸರ್ವೀಸ್‌ನಿಂದ. ನಾನು ಬೇರೆ ನಿರ್ಮಾಪಕರ ಜೊತೆ ಕೈ ಜೋಡಿಸಿದ್ದರೇ ಡೇಟ್ಸ್ ಕೂಡ ಸಿಕ್ಕುತ್ತಿರಲಿಲ್ಲ ಎಂದರು.

    ಫೈರ್ ಫ್ಲೈ ಚಿತ್ರದಲ್ಲಿ ವಂಶಿ ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಪುನೀತ್ ರಾಜ್‌ಕುಮಾರ್ ಅವರ ‘ಪಿಆರ್‌ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ, ‘ಪೆಂಟಗನ್’ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ಅವರು ನಟಿಸಿದ್ದರು. ಈಗ ನಿವೇದಿತಾ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಶುರು ಮಾಡಿದ್ದಾರೆ.

    ಶಿವರಾಜ್‌ಕುಮಾರ್ ಅವರು ಯಾವಾಗಲೂ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರ ರೀತಿಯೇ ನಿವೇದಿತಾ ಶಿವರಾಜ್‌ಕುಮಾರ್ ಕೂಡ ಹೊಸಬರಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಈ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ. ಶಿವರಾಜ್‌ಕುಮಾರ್ ಚಿತ್ರಕ್ಕೆ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆಯ ಬರೆದಿದ್ದಾರೆ.

  • ಪುತ್ರಿ ನಿವೇದಿತಾ ನಿರ್ಮಾಣದ ಚಿತ್ರದಲ್ಲಿ ಶಿವಣ್ಣ ಅತಿಥಿ

    ಪುತ್ರಿ ನಿವೇದಿತಾ ನಿರ್ಮಾಣದ ಚಿತ್ರದಲ್ಲಿ ಶಿವಣ್ಣ ಅತಿಥಿ

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivarajkumar) ಪುತ್ರಿ ನಿವೇದಿತಾ (Niveditha) ಶಿವರಾಜ್‌ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಕೊಡುಗೆ ಫೈರ್ ಫ್ಲೈ. ಈ ಸಿನಿಮಾದಲ್ಲಿ ನಟ ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅತಿಥಿ ಪಾತ್ರ ಅದಾಗಿದ್ದರೂ, ಅದೊಂದು ಮಹತ್ವದ ಕ್ಯಾರೆಕ್ಟರ್ ಎಂದು ಹೇಳಲಾಗುತ್ತಿದೆ.

    ಈ ಹಿಂದೆ ಪೋಸ್ಟರ್ ಮೂಲಕ ಗಮನಸೆಳೆದಿದ್ದ ಈ ಚಿತ್ರದ ಮೊದಲ ಹಾಗೂ ದ್ವಿತೀಯ ಹಂತ ಚಿತ್ರೀಕರಣ ಮುಕ್ತಾಯಗೊಂಡಿದೆ. ಮೈಸೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಅಂದುಕೊಂಡಂತೆಯೇ ಶೂಟಿಂಗ್ ಕೆಲಸಗಳು ಮುಗಿಯುತ್ತಿವೆ ಎನ್ನುತ್ತಿದೆ ಚಿತ್ರತಂಡ.

    ಫೈರ್ ಫ್ಲೈ (Fire Fly)ಸಿನಿಮಾವನ್ನ ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಡ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

    ಚಿತ್ರದ ನಾಯಕ-ನಿರ್ದೇಶಕ ವಂಶಿ ಈ ಹಿಂದೆ ಪಿ.ಆರ್.ಕೆ ಸಂಸ್ಥೆಯ ಮಾಯಾಬಜಾರ್ (Mayabazar) ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿಯೇ ಕೆಲಸ ಮಾಡಿದ್ದರು. ಗುರು ದೇಶಪಾಂಡೆ ಅವರ ಪೆಂಟಗನ್ (Pentagan) ಸಿನಿಮಾದಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ರು.

     

    ನಾಯಕ-ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ ನಿರ್ದೇಶಕರಾಗಿಯೇ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.

  • ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ಏನಾಯ್ತು? ಇಲ್ಲಿದೆ ಅಪ್‌ಡೇಟ್

    ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ಏನಾಯ್ತು? ಇಲ್ಲಿದೆ ಅಪ್‌ಡೇಟ್

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivarajkumar) ಪುತ್ರಿ ನಿವೇದಿತಾ (Niveditha) ಶಿವರಾಜ್‌ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಕೊಡುಗೆ ಫೈರ್ ಫ್ಲೈ. ಪೋಸ್ಟರ್ ಮೂಲಕ ಗಮನಸೆಳೆದಿದ್ದ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಮೈಸೂರು,ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಅಕ್ಟೋಬರ್ ತಿಂಗಳ ಮೂರನೇ ವಾರದಿಂದ ದ್ವಿತೀಯ ಹಂತದ ಚಿತ್ರೀಕರಣ ಶುರುವಾಗಲಿದೆ.

    ಫೈರ್ ಫ್ಲೈ (Fire Fly)ಸಿನಿಮಾವನ್ನ ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಡ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಇದನ್ನೂ ಓದಿ:‘ಜವಾನ್’ ಸಕ್ಸಸ್ ಬಳಿಕ ಪ್ರಭಾಸ್ ಸಿನಿಮಾದಲ್ಲಿ ನಯನತಾರಾ

    ಚಿತ್ರದ ನಾಯಕ-ನಿರ್ದೇಶಕ ವಂಶಿ ಈ ಹಿಂದೆ ಪಿ.ಆರ್.ಕೆ ಸಂಸ್ಥೆಯ ಮಾಯಾಬಜಾರ್ (Mayabazar) ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿಯೇ ಕೆಲಸ ಮಾಡಿದ್ದರು. ಗುರು ದೇಶಪಾಂಡೆ ಅವರ ಪೆಂಟಗನ್ (Pentagan) ಸಿನಿಮಾದಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ರು.

    ನಾಯಕ-ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ ನಿರ್ದೇಶಕರಾಗಿಯೇ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚಿತ್ರಕ್ಕೆ ಟೈಟಲ್ ಫಿಕ್ಸ್

    ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚಿತ್ರಕ್ಕೆ ಟೈಟಲ್ ಫಿಕ್ಸ್

    ವಿರಾಗಿ ಶುರುವಾದ ಕಥೆಗೆ ಹೆಸರೊಂದು ಮೂಡಿದೆ. ಹೆಸರ ಜೊತೆಗೆ ಬರುವೆವು ಎಂದು ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡುವುದಾಗಿ ತಿಳಿಸಿತ್ತು. ಅದರಂತೆ ಇಂದು ಟೈಟಲ್ (Title) ರಿವೀಲ್ ಮಾಡಿದೆ. ನಿವೇದಿತಾ  (Nivedita) ಮೊದಲ ಹೆಜ್ಜೆಗೆ ‘ಫೈರ್ ಫ್ಲೈ’ (Fire fly) ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಅಂದಹಾಗೇ ಈ ಚಿತ್ರಕ್ಕೆ ವಂಶಿ (Vamshi) ಹೀರೋ. ನಿರ್ದೇಶನ ಕೂಡ ಅವರದ್ದೇ.

    ‘ಪಿ.ಆರ್.ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಅವರು,  ಇತ್ತೀಚೆಗೆ ಬಂದ ‘ಪೆಂಟಗನ್’ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು. ಇದನ್ನೂ ಓದಿ:ಸುದೀಪ್ ಮನೆಯಿಂದ ಮತ್ತೊಬ್ಬ ಸ್ಟಾರ್: ಸಂಚಿತ್ ಚಿತ್ರಕ್ಕೆ ಮುಹೂರ್ತ

    ನಿವೇದಿತಾ ಬಂಡವಾಳ ಹೂಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಜರ್ನಿ ಆರಂಭಿಸುತ್ತಿದ್ದಾರೆ. ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ ಹಾಗೂ ರಘು ನಿಡುವಳ್ಳಿ ಅವರು ಸಂಭಾಷಣೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

    ಶಿವರಾಜ್ ಕುಮಾರ್ (Shivaraj Kumar) ಯಾವಾಗಲೂ ಹೊಸಬರಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅದೇ ರೀತಿ ಅಪ್ಪನ ಹಾದಿಯಲ್ಲೇ ನಿವೇದಿತಾ ಕೂಡ ಹೊಸ ಪ್ರತಿಭೆಗಳಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಮತ್ತು ಹೊಸ ಆಲೋಚನೆಗಳಿಗೆ ಅವಕಾಶ ನೀಡಲು ಈ ಸಂಸ್ಥೆ ಮುಡಿಪಾಗಿದೆ.