Tag: ಫೋಟೋ

  • ವಾಟ್ಸಪ್‌ ಫೋಟೋ ಡೌನ್‌ಲೋಡ್‌ ಮಾಡೋ ಮುನ್ನ ಎಚ್ಚರವಾಗಿರಿ – ನಿಮ್ಮ ಫೋನ್‌ ಹ್ಯಾಕ್‌ ಆಗಬಹುದು!

    ವಾಟ್ಸಪ್‌ ಫೋಟೋ ಡೌನ್‌ಲೋಡ್‌ ಮಾಡೋ ಮುನ್ನ ಎಚ್ಚರವಾಗಿರಿ – ನಿಮ್ಮ ಫೋನ್‌ ಹ್ಯಾಕ್‌ ಆಗಬಹುದು!

    ನವದೆಹಲಿ: ವಾಟ್ಸಪ್‌ನಲ್ಲಿ (WhatsApp) ಬರುವ ಎಲ್ಲಾ ಚಿತ್ರಗಳನ್ನು (Photo) ಡೌನ್‌ಲೋಡ್‌ ಮಾಡುವ ಮುನ್ನ ಎಚ್ಚರವಾಗಿರಿ. ಡೌನ್‌ಲೋಡ್‌ ಆದ ಚಿತ್ರದಿಂದಲೇ ನಿಮ್ಮ ಫೋನ್‌ (Phone) ಹ್ಯಾಕ್‌ ಆಗುವ ಸಾಧ್ಯತೆಯಿದೆ.

    ಹೌದು. ಇಲ್ಲಿಯವರೆಗೆ ಲಿಂಕ್‌, ಇತ್ಯಾದಿಗಳನ್ನು ಕಳುಹಿಸಿ ಸೈಬರ್‌ ಕಳ್ಳರು ಫೋನ್‌ ಹ್ಯಾಕ್‌ (Hack) ಮಾಡುತ್ತಿದ್ದರು. ಆದರೆ ತಂತ್ರಜ್ಞಾನ ಮುಂದುವರಿದಂತೆ ಫೋಟೋವನ್ನು ಕಳುಹಿಸಿ ಹ್ಯಾಕ್‌ ಮಾಡುತ್ತಿರುವ ಪ್ರಕರಣ ಈಗ ಬೆಳಕಿಗೆ ಬಂದಿದೆ.

    ಹ್ಯಾಕರ್‌ಗಳು ಒಂದು ಫೋಟೋವನ್ನು ಸೃಷ್ಟಿಸಿ ಅದರಲ್ಲಿ ಮಾಲ್ವೇರ್‌ (ಕುತಂತ್ರಾಂಶ) ತುರುಕಿಸಿ ಕಳುಹಿಸುತ್ತಾರೆ. ಈ ಫೋಟೋವನ್ನು ವಾಟ್ಸಪ್‌ನಲ್ಲಿ ಯಾರೆಲ್ಲ ಡೌನ್‌ಲೋಡ್‌ ಮಾಡುತ್ತಾರೋ ಅವರ ಫೋನ್‌ ಹ್ಯಾಕ್‌ ಆಗುತ್ತದೆ. ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಭಾರೀ ಇಳಿಕೆಯಾಗಲಿದೆ ಟಿವಿ, ಫ್ರಿಡ್ಜ್‌, ಮೊಬೈಲ್‌ ಬೆಲೆ!

    ಈ ಮಾಲ್ವೇರ್‌ (Malware) ಪಾಸ್‌ವರ್ಡ್‌, ಒಟಿಪಿ ಮತ್ತು UPI ವಿವರಗಳು ಸೇರಿದಂತೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಕೆಲವೊಮ್ಮೆ ಸೈಬರ್‌ ಕ್ರಿಮಿನಲ್‌ಗಳು ಫೋನನ್ನೇ ಸಂಪೂರ್ಣವಾಗಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

    ಮಧ್ಯಪ್ರದೇಶದ ಜಬಲ್ಪುರದಲ್ಲಿ ವ್ಯಕ್ತಿಯೊಬ್ಬರು ಅಪರಿಚಿತ ಸಂಖ್ಯೆಯಿಂದ ವಾಟ್ಸಪ್‌ ಸಂದೇಶವನ್ನು ಸ್ವೀಕರಿಸಿದ ಮೇಲೆ ಸುಮಾರು 2 ಲಕ್ಷ ರೂ. ಹಣವನ್ನು ಕಳೆದುಕೊಂಡ ಬಳಿಕ ಈ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಏನಿದು ಘಿಬ್ಲಿ? ದಿಢೀರ್‌ ಫೇಮಸ್‌ ಆಗಿದ್ದು ಹೇಗೆ? ಮೂಲ ಮಾಲೀಕನ ಸಂಪತ್ತು ಎಷ್ಟಿದೆ?

    ವಾಟ್ಸಪ್‌ ಸಂದೇಶದಲ್ಲಿ ಫೋಟೋದಲ್ಲಿರುವ ಯಾರನ್ನಾದರೂ ಗುರುತಿಸಲು ಸಹಾಯ ಮಾಡುವಂತೆ ಕೋರಲಾಗಿತ್ತು. ಆ ಸಂಖ್ಯೆಯಿಂದ ಪದೇ ಪದೇ ಫಾಲೋ-ಅಪ್ ಕರೆಗಳ ನಂತರ, ಆ ವ್ಯಕ್ತಿ ಅಂತಿಮವಾಗಿ ಚಿತ್ರದ ಮೇಲೆ ಕ್ಲಿಕ್ ಮಾಡಿದ್ದಾರೆ. ಫೋಟೋ ಕ್ಲಿಕ್‌ ಮಾಡಿದ ಕೂಡಲೇ ಫೋನ್‌ ಹ್ಯಾಕ್‌ ಆಗಿದೆ. ಮಾಲ್ವೇರ್‌ ತಕ್ಷಣವೇ ಫೋನ್‌ ಪ್ರವೇಶಿಸಿ ವ್ಯಕ್ತಿಗೆ ತಿಳಿಯದೇ ಹಣಕಾಸಿನ ವಹಿವಾಟು ನಡೆಸಿದೆ.

    ಏನಿದು ಮಾಲ್ವೇರ್‌?
    ಮಾಲ್ವೇರ್‌ ಎಂಬುದು ಮ್ಯಾಲಿಶಿಯಸ್ ಸಾಫ್ಟ್‌ವೇರ್ ಎಂಬುದರ ಸಂಕ್ಷಿಪ್ತ ರೂಪ. ಇದು ಫೋನ್‌ ಮಾಲೀಕನ ಒಪ್ಪಿಗೆ ಇಲ್ಲದೇ ಆತನ ಫೋನ್‌ ಒಳಗೆ ಕದ್ದು ನುಸುಳುವಂತೆ ಅಥವಾ ಅದಕ್ಕೆ ಹಾನಿಯೆಸಗುವಂತೆ ವಿನ್ಯಾಸಗೊಳಿಸಲಾಗಿರುವ ಒಂದು ತಂತ್ರಾಂಶ.

    ಮಾಲ್ವೇರ್‌ನಿಂದ ಪಾರಾಗೋದು ಹೇಗೆ?
    – ಅಪರಿಚಿತ ಅಥವಾ ಪರಿಶೀಲಿಸದ ಸಂಖ್ಯೆಗಳಿಂದ ಬರುವ ಚಿತ್ರಗಳು, ವಿಡಿಯೋಗಳನ್ನು ಡೌನ್‌ಲೋಡ್ ಮಾಡಬೇಡಿ ಅಥವಾ ಲಿಂಕ್‌ಗಳನ್ನು ಕ್ಲಿಕ್ ಮಾಡಲು ಹೋಗಲೇಬೇಡಿ.
    – ವಾಟ್ಸಪ್‌ ಸೆಟ್ಟಿಂಗ್ಸ್‌ನಲ್ಲಿ ಮೀಡಿಯಾಗೆ ಹೋಗಿ auto-download ಅನ್ನು ಆಫ್‌ ಮಾಡಿ.
    – ಅನುಮಾನಾಸ್ಪದ ಸಂಖ್ಯೆಗಳನ್ನು ತಕ್ಷಣ ರಿಪೋರ್ಟ್‌  ಮಾಡಿ ಮತ್ತು ನಿರ್ಬಂಧಿಸಿ.
    – ಸ್ನೇಹಿತರು ಮತ್ತು ಕುಟುಂಬಕ್ಕೆ, ವಿಶೇಷವಾಗಿ ತಂತ್ರಜ್ಞಾನದ ಬಗ್ಗೆ ಕಡಿಮೆ ಜ್ಞಾನವಿರುವವರಿಗೆ ಈ ರೀತಿಯ ಅಪಾಯಗಳ ಬಗ್ಗೆ ಮಾಹಿತಿ ನೀಡಿ.
    – ನಿಮ್ಮನ್ನು ಗುರಿಯಾಗಿಸಿಕೊಂಡಿದ್ದರೆ, ಘಟನೆಯನ್ನು ಸೈಬರ್ ಕ್ರೈಮ್ ಪೋರ್ಟಲ್‌ನಲ್ಲಿ ವರದಿ ಮಾಡಿ: www.cybercrime.gov.in

  • ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

    ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

    ಬಾಗಲಕೋಟೆ: ಪ್ರಧಾನಿ ಮೋದಿ (Narendra Modi) ತಮ್ಮ ಭಾಷಣದ ವೇಳೆ ಫೋಟೋ (Photo) ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ ತರಿಸಿಕೊಂಡು, ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದೀಗ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಯುವತಿಗೆ ಪತ್ರ (Letter) ಬರೆದಿದ್ದಾರೆ.

    ಪ್ರಧಾನಿ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಅವರ ಚಿತ್ರ ಬಿಡಿಸಿ, ಸ್ಕೆಚ್ ನೀಡಿದ್ದ ಯುವತಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಬಾಗಲಕೋಟೆಯ (Bagalkote) ಯುವತಿ ನಾಗರತ್ನ ಮೇಟಿ ಎಂಬ ಯುವತಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಏ.29 ರಂದು ಪ್ರಧಾನಿ ಮೋದಿ ಲೋಕಸಭಾ ಚುನವಣಾ (Lok Sabha Election) ಪ್ರಚಾರಾರ್ಥವಾಗಿ ಬಾಗಲಕೋಟೆಗೆ ಆಗಮಿಸಿದ್ದರು. ಭಾಷಣ ಮಾಡುವ ವೇಳೆಗೆ ವೇದಿಕೆ ಎದುರಿಗೆ ತಮ್ಮ (ಮೋದಿ) ಹಾಗೂ ತಾಯಿಯ ಚಿತ್ರ ಬಿಡಿಸಿದ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಗಮನಿಸಿದ ಮೋದಿ, ಭಾಷಣದ ಮಧ್ಯೆಯೇ ಎಸ್‌ಪಿಜಿ ಸಿಬ್ಬಂದಿಗೆ ಹೇಳಿ ಆ ಫೋಟೋವನ್ನು ತರಿಸಿಕೊಂಡಿದ್ದರು. ಅಲ್ಲದೇ ಅದರಲ್ಲಿ ನಿನ್ನ ಹೆಸರು, ವಿಳಾಸ ಬರೆದು ಕಳುಹಿಸು ಮಗಳೇ, ನಾನು ನಿನಗೆ ಖಂಡಿತವಾಗಿಯೂ ಪತ್ರ ಕಳುಹಿಸುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ದೇವರಾಜೇಗೌಡ, ಪೀತಂ ಗೌಡ ಆಪ್ತರ ಮನೆ ಸೇರಿದಂತೆ ಹಾಸನದ 6 ಕಡೆ ಎಸ್‌ಐಟಿ ದಾಳಿ

    ಯುವತಿಗೆ ಕೊಟ್ಟ ಮಾತಿನಂತೆ ಮೇ 5 ರಂದು ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಯುವತಿಗೆ ಮೋದಿಯವರ ಪತ್ರ ಪೋಸ್ಟ್ ಮೂಲಕ ತಲುಪಿದೆ. ಮೋದಿಯವರ ಪತ್ರದಲ್ಲಿ ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದ್ದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ. ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳು. ಇಂತಿ, ನಿಮ್ಮ ನರೇಂದ್ರ ಮೋದಿ ಎಂದು ಉಲ್ಲೇಖ ಮಾಡಿ ಮೋದಿ ಪತ್ರ ಬರೆದಿದ್ದಾರೆ. ಸದ್ಯ ಈ ಯುವತಿಗೆ ಮೋದಿ ಬರೆದಿರುವ ಪತ್ರ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಇದನ್ನೂ ಓದಿ: ಪಿಒಕೆಯಲ್ಲಿ ಹಿಂಸಾಚಾರ, ಗುಂಡಿನ ದಾಳಿಗೆ ಮೂವರು ಬಲಿ – ಮದರಸಾದ ಒಳಗಡೆ ಟಿಯರ್‌ ಗ್ಯಾಸ್‌ ಸಿಡಿಸಿದ ಸೇನೆ

  • ಸಮಂತಾ ಬೆತ್ತಲೆ ಫೋಟೋ: ನಿಜವಾದ ಫೋಟೋ ಹಿಂದಿದ್ದಾರೆ ನೀಲಿತಾರೆ

    ಸಮಂತಾ ಬೆತ್ತಲೆ ಫೋಟೋ: ನಿಜವಾದ ಫೋಟೋ ಹಿಂದಿದ್ದಾರೆ ನೀಲಿತಾರೆ

    ಳೆದ ಎರಡ್ಮೂರು ದಿನಗಳಿಂದ ಸಮಂತಾ ಅವರದ್ದು ಎನ್ನಲಾದ ಬೆತ್ತಲೆ (nude) ಫೋಟೋ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಆಗುತ್ತಿದೆ. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ತಮ್ಮದೇ ಬೆತ್ತಲೆ ಫೋಟೋ ಹಾಕಿ, ಡಿಲಿಟ್ ಮಾಡಿದ್ದಾರೆ ಎಂದು ಸಮಂತಾ ಮೇಲೆ ಆರೋಪ ಮಾಡಲಾಗುತ್ತಿದೆ. ಸಮಂತಾ ಹೀಗೆಲ್ಲ ಹೇಗೆ ಮಾಡೋಕೆ ಸಾಧ್ಯವೆಂದು ಅವರ  ಅಭಿಮಾನಿಗಳು ತಲೆಕೆಡಿಸಿಕೊಂಡಿದ್ದರು. ಅದು ಯಾರ ಫೋಟೋ ಎಂದು ಬೆನ್ನುಕೂಡ ಬಿದ್ದಿದ್ದರು. ಈಗ ಸತ್ಯ ಬಯಲಾಗಿದೆ.

    ಸಮಂತಾರದ್ದು ಎನ್ನಲಾದ ಆ ಬೆತ್ತಲೇ ಫೋಟೋ ಅಮೆರಿಕಾದ ನೀಲಿ ತಾರೆ ವೇನಸ್ ವೇಲೆನ್ಸಿಯಾದ್ದು (Venus Valency) ಎಂದು ಅಭಿಮಾನಿಯೊಬ್ಬ ಪತ್ತೆ ಮಾಡಿದ್ದಾನೆ. ಆ ಫೋಟೋವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿ, ಸಮಂತಾ ಅಂಥವರು ಅಲ್ಲವೆಂದು ಸಾರಿದ್ದಾನೆ. ಅಭಿಮಾನಿಯ ಈ ಹುಡುಕಾಟಕ್ಕೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.

    ಒಂದಿಲ್ಲೊಂದು ಕಾರಣಕ್ಕಾಗಿ ಸಮಂತಾ ಸದಾ ಸುದ್ದಿಯಲ್ಲಿರುತ್ತಾರೆ. ತಾವು ಮಾಡಿದ ತಪ್ಪಿಗೆ ಸುದ್ದಿ ಆಗೋದು ಸಹಜ. ಮಾಡದೇ ಇರೋ ತಪ್ಪಿಗೂ ಬಲಿಯಾಗುತ್ತಾರೆ. ಅಂಥದ್ದೇ ಒಂದು ಬಲಿಪಶು ಸ್ಟೋರಿ ಬೆತ್ತಲೇ ಫೋಟೋದ್ದು. ಸಮಂತಾ (Samantha) ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬೆತ್ತಲೆ ಫೋಟೋ ಹಾಕಿದ್ದಾರೆ ಎನ್ನುವ ವಿಚಾರ ಮೊನ್ನೆಯಿಂದ ಭರ್ಜರಿ ಸೇಲ್ ಆಗಿತ್ತು.

    ಡಿವೋರ್ಸ್ ನಂತರ ಸಮಂತಾ ಯಾಕೆ ಹೀಗೆ ಆದರು ಎನ್ನುವ ಪ್ರಶ್ನೆಯನ್ನೂ ಹಲವರು ಮಾಡಿದ್ದರು. ಬೆತ್ತಲೇ ಫೋಟೋ ಹಾಕಿ, ಯಾಕೆ ಡಿಲಿಟ್ ಮಾಡಿದರು ಎನ್ನುವ ಕುತೂಹಲ ಕೂಡ ಹಲವರದ್ದಾಗಿತ್ತು. ಅದು ಅವರೇ ಮಾಡಿದ್ದಾರಾ? ಅಥವಾ ಬೇರೆ ಯಾರಾದರೂ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎನ್ನುವ ಚರ್ಚೆ ಕೂಡ ಮಾಡಲಾಯಿತು.

     

    ಈಗ ಸಮಂತಾ ಈ ಕುರಿತಂತೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮದಲ್ಲದ ತಪ್ಪಿಗೆ ಅಥವಾ ಪ್ರತಿಕ್ರಿಯೆ ನೀಡಲು ಯೋಗ್ಯವಲ್ಲದಕ್ಕೆ ಪ್ರತಿಕ್ರಿಯೆ ನೀಡಬಾರದು ಎಂದು ಬರೆದುಕೊಂಡಿದ್ದಾರೆ. ಅಂದರೆ, ಅದು ತಮ್ಮಿಂದ ಆಗಿರುವ ತಪ್ಪಲ್ಲ. ಹಾಗಾಗಿ ಪ್ರತಿಕ್ರಿಯೆ ಅನಗತ್ಯ ಎಂದಿದ್ದಾರೆ.

  • ಸಮಂತಾ ಬೆತ್ತಲೆ ಫೋಟೋ: ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ ನಟಿ ಸಮಂತಾ

    ಸಮಂತಾ ಬೆತ್ತಲೆ ಫೋಟೋ: ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ ನಟಿ ಸಮಂತಾ

    ಒಂದಿಲ್ಲೊಂದು ಕಾರಣಕ್ಕಾಗಿ ಸಮಂತಾ ಸದಾ ಸುದ್ದಿಯಲ್ಲಿರುತ್ತಾರೆ. ತಾವು ಮಾಡಿದ ತಪ್ಪಿಗೆ ಸುದ್ದಿ ಆಗೋದು ಸಹಜ. ಮಾಡದೇ ಇರೋ ತಪ್ಪಿಗೂ ಬಲಿಯಾಗುತ್ತಾರೆ. ಅಂಥದ್ದೇ ಒಂದು ಬಲಿಪಶು ಸ್ಟೋರಿ ಬೆತ್ತಲೇ ಫೋಟೋದ್ದು. ಸಮಂತಾ (Samantha) ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬೆತ್ತಲೆ ಫೋಟೋ ಹಾಕಿದ್ದಾರೆ ಎನ್ನುವ ವಿಚಾರ ನಿನ್ನೆಯಿಂದ ಭರ್ಜರಿ ಸೇಲ್ ಆಗಿತ್ತು.

    ಡಿವೋರ್ಸ್ ನಂತರ ಸಮಂತಾ ಯಾಕೆ ಹೀಗೆ ಆದರು ಎನ್ನುವ ಪ್ರಶ್ನೆಯನ್ನೂ ಹಲವರು ಮಾಡಿದ್ದರು. ಬೆತ್ತಲೇ ಫೋಟೋ ಹಾಕಿ, ಯಾಕೆ ಡಿಲಿಟ್ ಮಾಡಿದರು ಎನ್ನುವ ಕುತೂಹಲ ಕೂಡ ಹಲವರದ್ದಾಗಿತ್ತು. ಅದು ಅವರೇ ಮಾಡಿದ್ದಾರಾ? ಅಥವಾ ಬೇರೆ ಯಾರಾದರೂ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎನ್ನುವ ಚರ್ಚೆ ಕೂಡ ಮಾಡಲಾಯಿತು.

     

    ಈಗ ಸಮಂತಾ ಈ ಕುರಿತಂತೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮದಲ್ಲದ ತಪ್ಪಿಗೆ ಅಥವಾ ಪ್ರತಿಕ್ರಿಯೆ ನೀಡಲು ಯೋಗ್ಯವಲ್ಲದಕ್ಕೆ ಪ್ರತಿಕ್ರಿಯೆ ನೀಡಬಾರದು ಎಂದು ಬರೆದುಕೊಂಡಿದ್ದಾರೆ. ಅಂದರೆ, ಅದು ತಮ್ಮಿಂದ ಆಗಿರುವ ತಪ್ಪಲ್ಲ. ಹಾಗಾಗಿ ಪ್ರತಿಕ್ರಿಯೆ ಅನಗತ್ಯ ಎಂದಿದ್ದಾರೆ.

  • ನಟಿ ಶ್ರೀದೇವಿ ನೋಡೋಕೆ ಸ್ವರ್ಗಕ್ಕೆ ಹೋಗಿದ್ದೆ: ಫೋಟೋ ಹಂಚಿಕೊಂಡ ವರ್ಮಾ

    ನಟಿ ಶ್ರೀದೇವಿ ನೋಡೋಕೆ ಸ್ವರ್ಗಕ್ಕೆ ಹೋಗಿದ್ದೆ: ಫೋಟೋ ಹಂಚಿಕೊಂಡ ವರ್ಮಾ

    ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಬಾಲಿವುಡ್ ನಟಿ ಶ್ರೀದೇವಿ ಎಂದರೆ ಎಲ್ಲಿಲ್ಲದ ಅಭಿಮಾನ. ಆಗಾಗ್ಗೆ ಶ್ರೀದೇವಿ ಅವರನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ ವರ್ಮಾ. ಶ್ರೀದೇವಿಯ ಸೌಂದರ್ಯವನ್ನು ಸಾಕಷ್ಟು ಬಾರಿ ಹೊಗಳಿದ್ದಾರೆ. ಶ್ರೀದೇವಿ ಮರಣ ಹೊಂದಿದ್ದಾಗ ಕಣ್ಣೀರಿಟ್ಟಿದ್ದಾರೆ.

    ಶ್ರೀದೇವಿ ಅಗಲಿಕೆಯ ನಂತರವೂ ಅವರ ಜೊತೆಗಿನ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ ವರ್ಮಾ. ಕಾರಿನಲ್ಲಿ ಡ್ರೈವರ್ ಸೀಟ್ ನಲ್ಲಿ ಶ್ರೀದೇವಿ ಕುಳಿತಿದ್ದು, ಅದರ ಪಕ್ಕದ ಸೀಟಿನಲ್ಲಿ ಸೀಗರೇಟು ಹಿಡಿದುಕೊಂಡು ವರ್ಮಾ ಕೂತಿದ್ದಾರೆ. ಈ ಫೋಟೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

     

    ನಾನು ಶ್ರೀದೇವಿ ಅವರನ್ನು ಭೇಟಿ ಮಾಡೋಕೆ ಸ್ವರ್ಗಕ್ಕೆ ಹೋಗಿದ್ದೆ ಎಂದು ಬರೆದುಕೊಂಡಿದ್ದಾರೆ. ಅದು ನಿಜವಾದ ಫೋಟೋವನ್ನು ಎಡಿಟ್ ಮಾಡಿದ ಫೋಟೋ ಅದಾಗಿದೆ ಎಂಬುದು ಗೊತ್ತಾಗಿದೆ. ಆದರೂ, ಶ್ರೀದೇವಿ ಮೇಲಿನ ಅಭಿಮಾನವನ್ನು ಮತ್ತೆ ತೋರಿಸಿದ್ದಾರೆ ವರ್ಮಾ.

  • ಸ್ಟಿರಾಯ್ಡ್ ನಿಂದಾಗಿ ದೇಹದ ಚರ್ಮ ಹಾಳು ಮಾಡಿಕೊಂಡ ಸಮಂತಾ

    ಸ್ಟಿರಾಯ್ಡ್ ನಿಂದಾಗಿ ದೇಹದ ಚರ್ಮ ಹಾಳು ಮಾಡಿಕೊಂಡ ಸಮಂತಾ

    ಕ್ಷಿಣದ ಖ್ಯಾತ ನಟ ಸಮಂತಾ (Samantha) ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದ್ದಾರೆ. ತಮಗಿರುವ ಖಾಯಿಲೆಗಾಗಿ ಸ್ಟಿರಾಯ್ಡ್ (Steroid) ತೆಗೆದುಕೊಂಡಿದ್ದರಿಂದ ತಮ್ಮ ದೇಹದ ಚರ್ಮ ಹಾಳಾಗಿದೆ ಎಂದು ಅವರು ಹೇಳಿದ್ದಾರೆ. ತಾವು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಯಾವುದೇ ಫೋಟೋ ಹಾಕಲಿ, ಅದಕ್ಕೆ ಫಿಲ್ಟರ್ ಹಾಕುವುದಾಗಿ ತಿಳಿಸಿದ್ದಾರೆ.

    ವೈದ್ಯರ ಸಲಹೆ ಮೇರೆಗೆ ದೇಹದಲ್ಲಿ ಕಾಣಿಸಿಕೊಳ್ಳುತ್ತಿದ್ದ ನೋವಿಗಾಗಿ ಸ್ಟಿರಾಯ್ಡ್ ತೆಗೆದುಕೊಳ್ಳುತ್ತಿದ್ದೆ. ಅದು ಅತೀಯಾಗಿ ದೇಹ ಸೇರಿಕೊಂಡಿದ್ದರಿಂದ ಚರ್ಮಕ್ಕೆ ತೊಂದರೆ ಮಾಡಿದೆ. ವೈದ್ಯರಾದ ಚಿನ್ಮಯಿ ಶ್ರೀಪಾದ ಅವರು ಚರ್ಮವನ್ನು ಸರಿ ಮಾಡುವುದಾಗಿ ಹೇಳಿದ್ದಾರೆ. ಎಲ್ಲವೂ ಅವರ ಕೈಯಲ್ಲಿದೆ ಎಂದು ಸಮಂತಾ ಹೇಳಿಕೊಂಡಿದ್ದಾರೆ.

    ಪ್ರತಿ ದಿನವೂ ಸಮಂತಾ ಲಕಲಕ ಹೊಳೆಯುವಂತಹ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದರು. ಅಭಿಮಾನಿಯೊಬ್ಬ ನೀವು ಇಷ್ಟೊಂದು ಹೊಳೆಯಲು ಮತ್ತು ಸುಂದರವಾಗಿರಲು ಕಾರಣವೇನು? ಸೌಂದರ್ಯವನ್ನು ಹೇಗೆ ಕಾಪಾಡಿಕೊಳ್ಳುತ್ತಿದ್ದೀರಿ ಮತ್ತು ವೃದ್ಧಿಸಿಕೊಳ್ಳುತ್ತಿದ್ದೀರಿ ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಸಮಂತಾ ನಿಜ ಉತ್ತರವನ್ನೇ ಕೊಟ್ಟಿದ್ದಾರೆ. ಎಲ್ಲ ಫೋಟೋಗಳಿಗೆ ಫಿಲ್ಟರ್ ಹಾಕುವೆ ಎಂದು ಹೇಳುವ ಮೂಲಕ ಸ್ಟಿರಾಯ್ಡ್ ಕಥೆಯನ್ನು ಹಂಚಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕಲ್ಕಿ’ ಸಿನಿಮಾ ಫೋಟೋ ಲೀಕ್: ಗಂಭೀರ ಪ್ರಕರಣ ಎಂದ ನಿರ್ಮಾಪಕರು

    ‘ಕಲ್ಕಿ’ ಸಿನಿಮಾ ಫೋಟೋ ಲೀಕ್: ಗಂಭೀರ ಪ್ರಕರಣ ಎಂದ ನಿರ್ಮಾಪಕರು

    ತ್ತೀಚೆಗೆ ಪ್ರಭಾಸ್ ನಟನೆಯ ಕಲ್ಕಿ (Kalki) ಸಿನಿಮಾದ ಫೋಟೋವೊಂದು ಲೀಕ್ ಆಗಿತ್ತು. ಸಿನಿಮಾದ ಪ್ರಮುಖ ಗೆಟಪ್ ಒಳಗೊಂಡಿದ್ದ ಆ ಫೋಟೋವನ್ನು ಯಾರು ಲೀಕ್ ಮಾಡಿದ್ದಾರೆ ಎಂದು ನಿರ್ಮಾಣ ಸಂಸ್ಥೆ ತಲೆಕೆಡಿಸಿಕೊಂಡಿತ್ತು. ಸಿನಿಮಾ ರಿಲೀಸ್ ಗೂ ಮುನ್ನ ಹೀಗೆ ಪಾತ್ರಗಳ ಬಗ್ಗೆ ರಿವಿಲ್ ಮಾಡುತ್ತಿರುವುದು ಕೋಪ ತರಿಸಿತ್ತು. ಇದೀಗ ನಿರ್ಮಾಪಕರು ಈ ಕುರಿತು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ.

    ಕಲ್ಕಿ ಸಿನಿಮಾದ ವಿಎಫ್ಎಕ್ಷ್  ಮಾಡುತ್ತಿರುವ ಸಂಸ್ಥೆಯೇ ಫೋಟೋವನ್ನು ಲೀಕ್ ಮಾಡಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಂಸ್ಥೆಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ನಿರ್ಮಾಪಕರು ಪೊಲೀಸ್ ಮೊರೆ ಹೋಗಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

    ಭಾರೀ ಬಜೆಟ್ ನಲ್ಲಿ ರೆಡಿ ಆಗಿರುವ ಕಲ್ಕಿ ಚಿತ್ರಕ್ಕೆ ಈ ಹಿಂದೆ ಪ್ರಾಜೆಕ್ಟ್ ಕೆ (Project K) ಹೆಸರಿನಿಂದ ಕರೆಯಲಾಗುತ್ತಿತ್ತು. ಸಿನಿಮಾದ ಗ್ಲಿಂಪ್ಸ್  (Glimpse) ರಿಲೀಸ್ ದಿನ ಅಸಲಿ ಹೆಸರನ್ನು ಅನೌನ್ಸ್ ಮಾಡಲಾಯಿತು. ಈ ಗ್ಲಿಂಪ್ಸ್ ನಲ್ಲಿ ಸಾಕಷ್ಟು ಸಂಗತಿಗಳನ್ನು ನಿರ್ದೇಶಕರು ಹೇಳಿದ್ದರು. ಇದನ್ನೂ ಓದಿ:‘ಕುದ್ರು’ ಸಿನಿಮಾದಲ್ಲಿ ಕ್ಲಾಸ್ ಬಂಕ್ ಹಾಡು

    ಈ ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಪ್ರಭಾಸ್ ಜೊತೆ ಕಮಲ್ ಹಾಸನ್ (Kamal Haasan),  ರಾಣಾ ದಗ್ಗುಬಾಟಿ ಈಗಾಗಲೇ ಅಮೆರಿಕಾಗೆ ಪ್ರವಾಸ ಬೆಳೆಸಿದ್ದಾರೆ. ಸುಮಾರು 600 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದ್ದು, ಅನೇಕ ದಿಗ್ಗಜ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇಷ್ಟೊಂದು ನಿರೀಕ್ಷೆ ಇಟ್ಟುಕೊಂಡಿರುವ ಸಿನಿಮಾದ ಫಸ್ಟ್ ಲುಕ್ (First Look) ಬೇರೆ ಹಂತದಲ್ಲಿ ಇರಬೇಕಿತ್ತು ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

     

    `ಪಠಾಣ್’ (Pathaan) ಚಿತ್ರದ ಸೂಪರ್ ಸಕ್ಸಸ್‌ನಲ್ಲಿರುವ ದೀಪಿಕಾ ಪಡುಕೋಣೆ (Deepika Padukone) `ಪ್ರಾಜೆಕ್ಟ್ ಕೆ’ ಸಿನಿಮಾಗೆ ಭರ್ಜರಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. `ಪಠಾಣ್’ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಾಗಾಗಿ `ಪ್ರಾಜೆಕ್ಟ್ ಕೆ’ ಚಿತ್ರಕ್ಕೆ ದುಬಾರಿ ಸಂಭಾವನೆಯನ್ನೇ ನಟಿ ಪಡೆದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Photo Album:ಕಿಚ್ಚ@50: ಹುಟ್ಟುಹಬ್ಬದ ಫೋಟೋ ಆಲ್ಬಂ

    Photo Album:ಕಿಚ್ಚ@50: ಹುಟ್ಟುಹಬ್ಬದ ಫೋಟೋ ಆಲ್ಬಂ

    ನಿನ್ನೆ ಮಧ್ಯರಾತ್ರಿಯಿಂದಲೇ ಕಿಚ್ಚ ಸುದೀಪ್ ಹುಟ್ಟು ಹಬ್ಬವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು.

    ಕರ್ನಾಟಕದ ನಾನಾ ಜಿಲ್ಲೆಗಳಿಂದ ಕಿಚ್ಚನ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದರು. ನೆಚ್ಚಿನ ನಟನಿಗೆ ಶುಭಾಶಯ ಹೇಳುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಿದರು.

    ಶುಕ್ರವಾರ ರಾತ್ರಿ ನಂದಿ ಲಿಂಕ್ ಗ್ರೌಂಡ್‍ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಸಂಭ್ರಮದಲ್ಲಿ ಭಾಗಿಯಾಗಿದರು. ಸುದೀಪ್ ಪತ್ನಿ ಪ್ರಿಯಾ, ಪುತ್ರಿ ಸೇರಿದಂತೆ ಕುಟುಂಬಸ್ಥರು, ಸ್ನೇಹಿತರು ಭಾಗಿಯಾಗಿ ಕೇಕ್ ತಿನ್ನಿಸಿ, ಶುಭಕೋರಿದ್ರು.

    ಅಭಿಮಾನಿಗಳಿಗೆ ಸರ್ ಪ್ರೈಸ್ ಕಾದಿದೆ ಎಂದಿದ್ದ ಪತ್ನಿ ಡ್ರೋಣ್ ಲೈಟಿಂಗ್ ಮೂಲಕ ಪತಿಗೆ ಪ್ರಿಯಾ ಸ್ಪೆಷಲ್ ವಿಶ್ ಮಾಡಿದರು. ಇಂದು ಜೆಪಿ ನಗರದ ನಿವಾಸದಲ್ಲಿ ಅಭಿಮಾನಿಗಳ ಜೊತೆ ಕಿಚ್ಚ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

    ಸ್ಯಾಂಡಲ್‌ವುಡ್ (Sandalwood) ಹೀರೋ ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಿಚ್ಚನ ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ಅವರ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಸುದೀಪ್ ಮುಂದಿನ ಚಿತ್ರಕ್ಕೆ ಕೆಆರ್‌ಜಿ ನಿರ್ಮಾಣ ಸಂಸ್ಥೆ ಕೈಜೋಡಿಸಿದ್ದಾರೆ.

    ಹಲವು ದಿನಗಳಿಂದ ಕಿಚ್ಚನ ಅಭಿಮಾನಿಗಳು ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. ಸುದೀಪ್ ಅವರ 46ನೇ ಚಿತ್ರಕ್ಕೆ ಹೊಸ ಬಗೆಯ ಟೈಟಲ್ ಇಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಟೈಟಲ್ ಅನಾವರಣಕ್ಕಾಗಿಯೇ ಟೀಸರ್ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು. ಇದೀಗ ಆ ಕೆಲಸವನ್ನು ಚಿತ್ರತಂಡ ಮಾಡಿದೆ. ಕಿಚ್ಚ 46 ಚಿತ್ರಕ್ಕೆ ಮ್ಯಾಕ್ಸ್ ಎಂದು ಹೆಸರಿಡಲಾಗಿದೆ.

    ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

    ಸುದೀಪ್ ಅವರು ಬೆಸ್ಟ್ ನಟ ಮಾತ್ರವಲ್ಲ, ದಿ ಬೆಸ್ಟ್ ಡೈರೆಕ್ಟರ್ ಅನ್ನೋದನ್ನ ಈಗಾಗಲೇ ಪ್ರೂವ್ ಮಾಡಿದ್ದಾರೆ. ಕೆಂಪೇಗೌಡ, ಮಾಣಿಕ್ಯ, ಮೈ ಆಟೋಗ್ರಾಫ್ ಸೇರಿದಂತೆ ಹಲವು ಸಿನಿಮಾಗಳ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಒಂದು ದಿನ ಮುಂಚಿತವಾಗಿ ಸಿಹಿಸುದ್ದಿ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Chandrayaan-3: ‘ಸ್ಮೈಲ್ ಪ್ಲೀಸ್’ – ವಿಕ್ರಂನ ಫೋಟೋ ಕ್ಲಿಕ್ಕಿಸಿದ ಪ್ರಗ್ಯಾನ್

    Chandrayaan-3: ‘ಸ್ಮೈಲ್ ಪ್ಲೀಸ್’ – ವಿಕ್ರಂನ ಫೋಟೋ ಕ್ಲಿಕ್ಕಿಸಿದ ಪ್ರಗ್ಯಾನ್

    ನವದೆಹಲಿ: ಭಾರತದ ಹೆಮ್ಮೆಯ ಚಂದ್ರಯಾನ-3 (Chandrayaan-3) ಯಶಸ್ವಿಯಾಗಿ ಚಂದ್ರನ (Moon) ದಕ್ಷಿಣ ಧ್ರುವದಲ್ಲಿ ಇಳಿದು ತನ್ನ ಕಾರ್ಯಾಚರಣೆ ಪ್ರಾರಂಭಿಸಿದೆ. ಚಂದ್ರನ ಮೇಲ್ಮೈಯಲ್ಲಿ ಅನ್ವೇಷಣೆ ನಡೆಸುತ್ತಿರುವ ಚಂದ್ರಯಾನ-3 ಮಿಷನ್‌ನ ಪೋಟೋಗಳನ್ನು ಇಸ್ರೋ (ISRO) ನಿರಂತರವಾಗಿ ಹಂಚಿಕೊಳ್ಳುತ್ತಿದೆ.

    ಬುಧವಾರ ಬೆಳಗ್ಗೆ ಚಂದ್ರಯಾನ ಮಿಷನ್‌ನ ಪ್ರಗ್ಯಾನ್ ರೋವರ್ (Pragyan Rover) ವಿಕ್ರಂ ಲ್ಯಾಂಡರ್‌ನ (Vikram Lander) ಚಿತ್ರವನ್ನು ಕ್ಲಿಕ್ಕಿಸಿದೆ. ಈ ಚಿತ್ರವನ್ನು ಇಸ್ರೋ ತನ್ನ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಇಸ್ರೋ, ‘ಸ್ಮೈಲ್ ಪ್ಲೀಸ್!’ ಇಂದು ಬೆಳಗ್ಗೆ ರೋವರ್ ವಿಕ್ರಮ್ ಲ್ಯಾಂಡರ್‌ನ ಚಿತ್ರವನ್ನು ಕ್ಲಿಕ್ಕಿಸಿದೆ. ರೋವರ್‌ನಲ್ಲಿನ ನ್ಯಾವಿಗೇಷನ್ ಕ್ಯಾಮೆರಾದಿಂದ ಮಿಷನ್‌ನ ಚಿತ್ರವನ್ನು ತೆಗೆಯಲಾಗಿದೆ. ಚಂದ್ರಯಾನ-3 ಮಿಷನ್‌ಗಾಗಿ ನ್ಯಾವಿಗೇಷನ್ ಕ್ಯಾಮೆರಾಗಳನ್ನು ಲ್ಯಾಬೊರೇಟರಿ ಫಾರ್ ಎಲೆಕ್ಟ್ರೋ ಆಪ್ಟಿಕ್ಸ್ ಸಿಸ್ಟಮ್ಸ್ (LEOS) ಅಭಿವೃದ್ಧಿಪಡಿಸಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಚಂದ್ರನ ದಕ್ಷಿಣ ಧ್ರುವದಲ್ಲಿ ಗಂಧಕ ಪತ್ತೆ ಹಚ್ಚಿದ ಚಂದ್ರಯಾನ-3

    ಚಂದ್ರನ ಅಂಗಳದಲ್ಲಿ ಈಗಾಗಲೇ ಚಂದ್ರಯಾನ-3 ಮಿಷನ್ 5 ದಿನಗಳ ಕಾರ್ಯಾಚರಣೆಯನ್ನು ನಡೆಸಿದೆ. ಈ ಕಾರ್ಯಾಚರಣೆ 14 ದಿನಗಳೊಳಗೆ ಮುಕ್ತಾಯಗೊಳಿಸಬೇಕಿದೆ. ಮಂಗಳವಾರ ಚಂದ್ರನ ದಕ್ಷಿಣ ಧ್ರುವದಲ್ಲಿ ಗಂಧಕ ಇರುವುದು ದೃಢಪಟ್ಟಿದೆ ಎಂದು ಇಸ್ರೋ ತಿಳಿಸಿದೆ. ಇದನ್ನೂ ಓದಿ: ಹಲವು ವರ್ಷಗಳ ಹೆತ್ತವರ ಕನಸನ್ನು ಸಾಕಾರಗೊಳಿಸಿದ್ದೀರಿ- ಆನಂದ್ ಮಹೀಂದ್ರಾಗೆ ಪ್ರಜ್ಞಾನಂದ ಥ್ಯಾಂಕ್ಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾರ್ಟ್ ಹೇರ್ ಕಟ್ ಫೋಟೋ ಹಾಕಿ  ಕ್ಷಮೆ ಕೇಳಿದ ಖುಷ್ಬೂ

    ಶಾರ್ಟ್ ಹೇರ್ ಕಟ್ ಫೋಟೋ ಹಾಕಿ ಕ್ಷಮೆ ಕೇಳಿದ ಖುಷ್ಬೂ

    ಹೆಸರಾಂತ ನಟಿ, ರಾಜಕಾರಣಿ ಖುಷ್ಬೂ (Khushboo) ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಶೇರ್ ಮಾಡಿದ್ದರು. ಆ ಫೋಟೋದಲ್ಲಿ ಖುಷ್ಬೂ ಶಾರ್ಟ್ ಹೇರ್ ಕಟ್ (short hair) ಮಾಡಿಸಿಕೊಂಡಿದ್ದರು. ಈ ಫೋಟೋ (photo) ಬಗ್ಗೆ ಸಾಕಷ್ಟು ಚರ್ಚೆ ಕೂಡ ಮಾಡಲಾಗಿತ್ತು. ಉದ್ದನೆಯ ಜಡೆ ಹೊಂದಿದ್ದ ಖುಷ್ಭು ಯಾಕೆ ಹೀಗೆ ಮಾಡಿಕೊಂಡರು ಎಂದು ಕೇಳಲಾಗಿತ್ತು.

    ಜೊತೆಗೆ ಈ ರೀತಿಯ ಶಾರ್ಟ್ ಹೇರ್ ಕಟ್ ಈ ವಯಸ್ಸಿನಲ್ಲಿ ಯಾಕೆ ಎಂದು ತರ್ಲೆ ತಮಾಷೆಗಳನ್ನೂ ಮಾಡಲಾಗಿತ್ತು. ಅವರು ಶೇರ್ ಮಾಡಿದ್ದ ಫೋಟೋಗಳು ವೈರಲ್ ಕೂಡ ಆಗಿದ್ದು. ಅಭಿಮಾನಿಗಳು ಮುಗಿಬಿದ್ದು ಕಾಮೆಂಟ್ ಮಾಡಿದ್ದರು. ಆ ಕಾಮೆಂಟ್ ಓದಿರುವ ಖುಷ್ಬೂ ಕ್ಷಮೆ ಕೇಳಿದ್ದಾರೆ.

    ನಾನು ತಲೆಕೂದಲನ್ನು ಕಟ್ ಮಾಡಿಸಿಕೊಂಡಿಲ್ಲ. ಇದು ಹೊಸ ಸಿನಿಮಾವಾಗಿ ಮಾಡಿಸಿರುವ ಲುಕ್ ಟೆಸ್ಟ್. ಈ ಫೋಟೋ ನಿಮಗೆ ಮಿಸ್ ಗೈಡ್ ಮಾಡಿದ್ದರೆ ಕ್ಷಮೆ ಇರಲಿ ಎಂದು ಮತ್ತೊಂದು ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳು ಮಾಡಿರುವ ಕಾಮೆಂಟ್ ನನಗೆ ಅಚ್ಚರಿ ಮೂಡಿಸಿವೆ ಎಂದಿದ್ದಾರೆ.

     

    ಎಂಬತ್ತರ ದಶಕದಿಂದ ಈವರೆಗೂ ಬಹುಬೇಡಿಕೆಯ ನಟಿಯಾಗಿದ್ದಾರೆ ಖುಷ್ಬೂ. ಕನ್ನಡದಲ್ಲೂ ಹಲವಾರು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಸಿನಿಮಾಗಳಲ್ಲಿ ನಟಿಸುವುದರ ಜೊತೆ ಜೊತೆಗೆ ರಾಜಕಾರಣಿಯಾಗಿಯೂ ಅವರು ಗುರುತಿಸಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]