Tag: ಫೋಟೋ ಶೂಟ್

  • ಪಡ್ಡೆಗಳ ನಿದ್ದೆಗೆಡಿಸಿದ ‘ನನ್ನರಿಸಿ ರಾಧೆ’ಯ ಕೌಸ್ತುಭ

    ಪಡ್ಡೆಗಳ ನಿದ್ದೆಗೆಡಿಸಿದ ‘ನನ್ನರಿಸಿ ರಾಧೆ’ಯ ಕೌಸ್ತುಭ

    ನ್ನರಸಿ ರಾಧೆ ಧಾರಾವಾಹಿಯ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ಕೌಸ್ತುಭ ಮಣಿ, ಇದೀಗ ಹೊಸ ಫೋಟೋ ಶೂಟ್ (Photo Shoot) ಮಾಡಿಸಿದ್ದಾರೆ. ಬ್ಲ್ಯಾಕ್ ಕಲರ್ ಕಾಸ್ಟ್ಯೂಮ್ ನಲ್ಲಿ ಸಖತ್ ಹಾಟ್ ಹಾಟ್ (Hot) ಆಗಿ ಕಾಣಿಸುತ್ತಾರೆ. ಅವರ ಈ ಬೋಲ್ಡ್ ಫೋಟೋ ಶೂಟ್ ಪಡ್ಡೆಗಳ ನಿದ್ದೆಗೆಡಿಸಿದೆ.

    ನನ್ನರಿಸಿ ರಾಧೆ ಧಾರಾವಾಹಿಯಲ್ಲಿ ಇವರದ್ದು ಇಂಚರಾ ಹೆಸರಿನ ಪಾತ್ರ. ಆ ಪಾತ್ರವನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ  ಉತ್ತಮ ನಟಿಯಾಗಿ ಕೌಸ್ತುಭ ಹೊರ ಹೊಮ್ಮಿದ್ದರು. ಅವರು ಪಾತ್ರ ಸಾಕಷ್ಟು ತೂಕದಿಂದ ಕೂಡಿತ್ತು.

    ಕೇವಲ ಧಾರಾವಾಹಿಗಳಲ್ಲಿ ಮಾತ್ರವಲ್ಲ ಸಿನಿಮಾದಲ್ಲೂ ಕೌಸ್ತುಭ ನಟಿಸುತ್ತಿದ್ದಾರೆ. ಹೆಸರಾಂತ ನಟರ ಜೊತೆ ತೆರೆ ಹಂಚಿಕೊಳ್ಳುವ ಮೂಲಕ ಮತ್ತೆ ಸುದ್ದಿಗೆ ಸಿಕ್ಕಿದ್ದಾರೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗಿನಲ್ಲೂ ಅವರು ನಾನಾ ಪ್ರಾಜೆಕ್ಟ್ ಗಳನ್ನು ಮಾಡುತ್ತಿದ್ದಾರೆ.

    ಸದಭಿರುಚಿ ಚಿತ್ರಗಳ ನಿರ್ಮಾಪಕರಾದ ರಮೇಶ್ ರೆಡ್ಡಿ ನಿರ್ಮಾಣದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಪ್ರಥಮ ನಿರ್ದೇಶನದಲ್ಲಿ ಮೂಡಿ ಬರಲಿರುವ ‘45’ ಸಿನಿಮಾಗೆ ನಾಯಕಿ ಯಾರಾಗಲಿದ್ದಾರೆ ಎನ್ನುವ ಕುತೂಹಲವಿತ್ತು. ಹಲವು ನಾಯಕಿಯರ ಹೆಸರೂ ಕೇಳಿ ಬಂದಿದ್ದವು. ಅದರಲ್ಲೂ ಸೀರಿಯಲ್ ನಟಿ ಕೌಸ್ತುಭ ಮಣಿ (Kaustubha Mani) ನಾಯಕಿ ಎಂದು ಹೇಳಲಾಗಿತ್ತು. ಇದೀಗ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಿದೆ.

    ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ಕೌಸ್ತುಭ ಮಣಿ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಚಿತ್ರತಂಡವೇ ಘೋಷಿಸಿದೆ. ಕಲರ್ಸ್ ಕನ್ನಡದ ‘ನನ್ನರಸಿ ರಾಧೆ’, ಜೀ ತೆಲುಗಿನ ಪ್ರಸಿದ್ದ ಧಾರಾವಾಹಿ ಹಾಗೂ ಕನ್ನಡದ ರಾಮಾಚಾರಿ 2.0 ಚಿತ್ರದಲ್ಲಿ ಕೌಸ್ತುಭ ಮಣಿ ನಟಿಸಿದ್ದಾರೆ.

    ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ (Arjun Janya) ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ಶಿವಣ್ಣ (Shivanna), ಉಪ್ಪಿ, ರಾಜ್ ಬಿ ಶೆಟ್ಟಿಗೆ(Raj B Shetty) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. `45′ ಚಿತ್ರದಲ್ಲಿ ಅನೇಕ ವಿಶೇಷತೆಗಳನ್ನು ಹೊಂದಿದೆ ಎಂದು ಈಗಾಗಲೇ ನಿರ್ದೇಶಕರು ಕೆಲ ಮಾಹಿತಿ ನೀಡಿದ್ದಾರೆ.

     

    ಶಿವರಾಜ್‌ಕುಮಾರ್ (Shivarajkumar) ನಟನೆಯ `45′ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ. ಈ ಸಿನಿಮಾಗೆ ರಮೇಶ್ ರೆಡ್ಡಿ ನಿರ್ಮಾಣ ಮಾಡ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭ ಆಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಕಾಣಿಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಖತ್ ಬೋಲ್ಡ್ & ಹಾಟ್ ಆಗಿ ಕಾಣಿಸಿಕೊಂಡ ನಮ್ರತಾ ಗೌಡ

    ಸಖತ್ ಬೋಲ್ಡ್ & ಹಾಟ್ ಆಗಿ ಕಾಣಿಸಿಕೊಂಡ ನಮ್ರತಾ ಗೌಡ

    ತ್ತೀಚೆಗಷ್ಟೇ ನಟಿ ನಮ್ರತಾ ಗೌಡ (Namratha Gowda) ತಮ್ಮ ಹುಟ್ಟು ಹಬ್ಬವನ್ನು ಕುಟುಂಬ ಮತ್ತು ಸ್ನೇಹಿತರೊಂದಿಗೆ ಅದ್ದೂರಿಯಾಗಿ ಆಚರಿಸಿಕೊಂಡರು. ಅಂದು ಬಿಳಿ ಬಣ್ಣದ ಸೀರೆಯಲ್ಲಿ ಅಪ್ಸರೆಯಂತೆ ಮಿಂಚಿದ್ದವರು ಇಂದು ಮತ್ತೊಂದು ಫೋಟೋ ಶೂಟ್ (Photo shoot) ನಲ್ಲಿ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

    ಮೈಗೊಂದು ತುಂಡು ಬಟ್ಟೆ, ಕರಿಬಣ್ಣದ ಪ್ಯಾಂಟ್ ನೊಂದಿಗೆ ಸಖತ್ ಹಾಟ್ ಹಾಟ್ (Hot)  ಆಗಿ ಕಾಣಿಸಿಕೊಂಡಿದ್ದಾರೆ ನಮ್ರತಾ. ಕಲರ್ ಕಾಂಬಿನೇಷನ್ ಮತ್ತು ಅವರು ಕೊಟ್ಟಿರುವ ಲುಕ್ ಪಡ್ಡೆಗಳ ನಿದ್ದೆಗೆಡಿಸುವುದು ಗ್ಯಾರಂಟಿ.

    ಕಿರುತೆರೆಯ ಈ ಬ್ಯೂಟಿ ಇತ್ತೀಚೆಗಷ್ಟೇ ಫಾರಿನ್‌ಗೆ ಹಾರಿದ್ದರು. ಇಂಡೋನೇಷ್ಯಾದಲ್ಲಿ ಬೀಡು ಬಿಟ್ಟಿದ್ದ ‘ನಾಗಿಣಿ 2’ (Nagini 2) ಖ್ಯಾತಿಯ ನಟಿ ಫಾರಿನ್ ಟ್ರಿಪ್‌ನ ಮಸ್ತ್ ಆಗಿ ಎಂಜಾಯ್ ಮಾಡಿದ್ದರು. ಟ್ರಿಪ್‌ನ ಸುಂದರ ಫೋಟೋಗಳನ್ನ ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಕೂಡ ಮಾಡಿದ್ದರು. ಬಾಲಿಯಲ್ಲಿ ನಮ್ರತಾ ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಟಿವಿ ಪರದೆಯಲ್ಲಿ ಸಾಂಪ್ರದಾಯಿಕ ಲುಕ್‌ನಲ್ಲಿ ಕಾಣಿಸಿಕೊಳ್ತಿದ್ದ ನಟಿ, ಈಗೀನ ಹಾಟ್ ಲುಕ್‌ ನೋಡಿ ಫ್ಯಾನ್ಸ್‌ ಸ್ಟನ್‌ ಆಗಿದ್ದಾರೆ.

    ‘ನಾಗಿಣಿ 2’ ಸೀರಿಯಲ್ ಮುಗಿದ ಬೆನ್ನಲ್ಲೇ ಫಾರಿನ್‌ಗೆ ನಟಿ ತೆರಳಿದ್ದರು. ನಮ್ರತಾ ಮತ್ತು ಗ್ಯಾಂಗ್ ಫಾರಿನ್‌ಲ್ಲಿ ಮಜಾ ಮಾಡಿದ್ದಾರೆ. ಬಾಲಿಯಲ್ಲಿ ಸುಂದರ ತಾಣಗಳಿಗೆ ನಮ್ರತಾ ಗೌಡ ಭೇಟಿ ನೀಡಿದ್ದರು. ಸ್ನೇಹಿತೆ ಐಶ್ವರ್ಯಾ ಸಿಂಧೋಗಿ (Aishwarya Sindhogi) ಜೊತೆ ನಮ್ರತಾ ಬಾಲಿಯಲ್ಲಿರುವ ಹಾಗೂ ಬಿಕಿನಿ ಧರಿಸಿರುವ ಫೋಟೋವನ್ನ ತಮ್ಮ ಖಾತೆಯಲ್ಲಿ ಶೇರ್ ಮಾಡಿಡಿದ್ದರು.

    ನಮ್ರತಾ ಗೌಡ ಅವರು ಬಾಲನಟಿಯಾಗಿ ಮೊದಲು ಬಣ್ಣ ಹಚ್ಚಿದ್ದರು. ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಆಕ್ಟೀವ್ ಆಗಿ ಕಾಣಿಸಿಕೊಂಡರು. ‘ಪುಟ್ಟಗೌರಿ ಮದುವೆ’ (Puttagowri Maduve) ಸೀರಿಯಲ್‌ನಲ್ಲಿ ರಕ್ಷ್, ರಂಜನಿ ರಾಘವನ್ ಜೊತೆ ನಮ್ರತಾ ಲೀಡ್ ರೋಲ್‌ನಲ್ಲಿ ಕಾಣಿಸಿಕೊಂಡರು. ಬಳಿಕ ‘ನಾಗಿಣಿ 2’ ಸೀರಿಯಲ್‌ನಲ್ಲಿ ನಮ್ರತಾ ಮಿಂಚಿದ್ದರು.

    ‘ನಾಗಿಣಿ 2’ ಸೀರಿಯಲ್ ನಮ್ರತಾ ಗೌಡ ಅವರ ಕೆರಿಯರ್‌ಗೆ ಬಿಗ್ ಬ್ರೇಕ್ ಕೊಡ್ತು. ಹೀರೋ ನಿನಾದ್- ನಮ್ರತಾ ಗೌಡ ಜೋಡಿಯನ್ನ ನೋಡಿ ಅನೇಕರು ಮೆಚ್ಚಿಕೊಂಡರು. ದೀಪಿಕಾ ದಾಸ್ (Deepika Das) ಬಳಿಕ ನಾಗಿಣಿ ಪಾತ್ರಕ್ಕೆ ನಮ್ರತಾ ಜೀವ ತುಂಬಿದ್ದರು. ಈ ಸೀರಿಯಲ್‌ನಿಂದ ನಮ್ರತಾಗೆ ಜನಪ್ರಿಯತೆ ಸಿಕ್ಕಿತು.

     

    ಸೀರಿಯಲ್ ನಂತರ ಸಿನಿಮಾದಲ್ಲಿ ನಟಿಸಲು ನಮ್ರತಾ ಗೌಡ ತಯಾರಿ ನಡೆಸುತ್ತಿದ್ದಾರೆ. ಜಿಮ್, ವರ್ಕೌಟ್, ಫಿಟ್‌ನೆಸ್ ಅಂತಾ ಬ್ಯುಸಿಯಾಗಿದ್ದಾರೆ. ಈ ನಡುವೆ ನಟಿ ಬಗ್ಗೆ ಹೊಸ ವಿಚಾರವೊಂದು ಸದ್ದು ಮಾಡ್ತಿದೆ. ನಮ್ರತಾ ಗೌಡ ಅವರು ಮುಂಬರುವ ಬಿಗ್ ಬಾಸ್ ಶೋಗೆ ಹೋಗುತ್ತಾರೆ ಎಂದು ಹೇಳಲಾಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ ಕಾದುನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಳಿ ಕಾಸ್ಟ್ಯೂಮ್ ನಲ್ಲಿ ಮೇಘಾ ಶೆಟ್ಟಿ ಹೊಸ ಹಾಟ್ ಫೋಟೋಶೂಟ್

    ಬಿಳಿ ಕಾಸ್ಟ್ಯೂಮ್ ನಲ್ಲಿ ಮೇಘಾ ಶೆಟ್ಟಿ ಹೊಸ ಹಾಟ್ ಫೋಟೋಶೂಟ್

    ಕಿರುತೆರೆಯ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿರುವ ಮೇಘಾ ಶೆಟ್ಟಿ (Megha Shetty) ಮತ್ತೊಂದು ಹೊಸ ಫೋಟೋಶೂಟ್ (photo shoot) ನಲ್ಲಿ ಕಂಗೊಳಿಸಿದ್ದಾರೆ. ಬಿಳಿ ಕಾಸ್ಟ್ಯೂಮ್ ನಲ್ಲಿ ಮಿರಿ ಮಿರಿ ಮಿಂಚಿರುವ ಅವರು ನೀರಿನ ಮಧ್ಯ ಬೆಡ್ ಹಾಕಿ, ಅದರ ಮೇಲೆ ಕೂತಿರುವ ಮೇಘಾ, ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

    ಕಿರುತೆರೆಯ ಜನಪ್ರಿಯ ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಅಂತ್ಯವಾಗಿದೆ. ಅನು ಸಿರಿಮನೆ ಪಾತ್ರದ ಮೂಲಕ ಮನೆ ಮಾತಾದ ಈ ನಟಿ (Megha Shetty) ಇದೀಗ ಹಲವಾರು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಹಾಗಾಗಿ ಕಿರುತೆರೆಗಿಂತಲೂ ಹೆಚ್ಚು ಸಿನಿಮಾ ರಂಗದಲ್ಲೇ ತೊಡಗಿಕೊಳ್ಳುವ ಮಾತುಗಳನ್ನು ಆಡಿದ್ದಾರೆ.

    ಆರೂರು ಜಗದೀಶ್ ನಿರ್ದೇಶನದ ‘ಜೊತೆ ಜೊತೆಯಲಿ’ ಸೀರಿಯಲ್ ಕಥೆ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಆರ್ಯ- ಅನು ಸಿರಿಮನೆ ಲವ್ ಸ್ಟೋರಿಗೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟಿದ್ದರು. ಮೊನ್ನೆಯಷ್ಟೇ  ಸೀರಿಯಲ್ ಅಂತ್ಯವಾಗಿದೆ. ಈ ಧಾರಾವಾಹಿಯು ಮೇಘಾಗೆ ಸಾಕಷ್ಟು ಜನಪ್ರಿಯತೆಯನ್ನು ತಂದುಕೊಟ್ಟಿತ್ತು. ಇದನ್ನೂ ಓದಿ:ಮಗಳ ವಯಸ್ಸಿನ ಫಾತಿಮಾ ಜೊತೆ ಮತ್ತೆ ಮದುವೆಗೆ ಸಜ್ಜಾದ ಆಮೀರ್‌ ಖಾನ್

    ಜೊತೆ ಜೊತೆಯಲಿ ಸೀರಿಯಲ್ ಮೊದಲ ಶಾಟ್ ಎದುರಿಸಿದ್ದು ಇದೇ ಮೇಘಾ ಮೇಘಾ ಶೆಟ್ಟಿ. ಕೊನೆಯ ದಿನದ ಚಿತ್ರೀಕರಣ ಕೂಡ ಇವರಿಂದನೇ ಮುಕ್ತಾಯ ಹಾಡಿದೆ. ಯಾರೂ ಪರಿಚಯವಿಲ್ಲದೇ ಈ ತಂಡಕ್ಕೆ ಕಾಲಿಟ್ಟ ನನಗೆ ಈಗ ಈ ತಂಡ ಎರಡನೇ ಕುಟುಂಬ. ಈ ಕುಟುಂಬದೊಂದಿಗಿನ ನಂಟನ್ನು ಮುಗಿಸುತ್ತಿದ್ದೇನೆ ಎಂದು ಮೊನ್ನೆಯಷ್ಟೇ ಭಾವುಕರಾಗಿ ಮೇಘಾ ಹೇಳಿಕೊಂಡಿದ್ದರು.

    ಅನು ಸಿರಿಮನೆ ನನಗೆ ಎಲ್ಲವನ್ನೂ ನೀಡಿದ್ದಾಳೆ. ನನಗೆ ಸಿಗುತ್ತಿರುವ ಸಿನಿಮಾಗಳು, ಜನರ ಪ್ರಿತಿ ಇವೆಲ್ಲದಕ್ಕೂ ಜೊತೆ ಜೊತೆಯಲಿ ಸೀರಿಯಲ್ ಮಾತ್ರ ಕಾರಣ. ಸಾವಿರ ಎಪಿಸೋಡ್‌ವರೆಗೂ ರೀಚ್ ಆಗಬೇಕು ಎಂದುಕೊಂಡಿದ್ದೆವು. ಅದರಂತೆ ಮುಗಿಸುತ್ತಿದ್ದೇವೆ ಎಂದು ಮೇಘಾ ಶೆಟ್ಟಿ ಮೊನ್ನೆ ಮಾತನಾಡಿದ್ದರು.

    ಮೇಘಾ ಶೆಟ್ಟಿ ಮುಂದಿನ ದಿನಗಳಲ್ಲಿ ಯಾವುದೇ ಸೀರಿಯಲ್ ನಟಿಸದಿರಲು ನಿರ್ಧರಿಸಿದ್ದಾರಂತೆ. ಇನ್ನೆನಿದ್ದರೂ ಸಿನಿಮಾಗಳತ್ತ ಮಾತ್ರ ನನ್ನ ಗಮನ. ಒಳ್ಳೊಳ್ಳೆ ಕಥೆಗಳನ್ನು ಕೇಳುತ್ತಿದ್ದೇನೆ. ಈಗ ನಟಿಸಿರುವ ‘ಕೈವ’ (Kaiva) ಮತ್ತು ‘ಆಪರೇಷನ್ ಲಂಡನ್ ಕೆಫೆ’ (Operation London Cafe) ಸಿನಿಮಾ ಚೆನ್ನಾಗಿದೆ. ಈ ಎರಡೂ ಸಿನಿಮಾಗಳು ರಿಲೀಸ್‌ಗೆ ಸಿದ್ಧವಾಗಿವೆ. ಮುಂದಿನ ದಿನಗಳಲ್ಲಿ ಒಳ್ಳೆಯ ಕಥೆಗಳ ನಿರೀಕ್ಷೆಯಲ್ಲಿದ್ದೇನೆ ಎಂದು ನಟಿ ಮೇಘಾ ಪ್ರತಿಕ್ರಿಯೆ ನೀಡಿದ್ದಾರೆ.

    ಮೊನ್ನೆಯಷ್ಟೇ ಮೇಘಾ ಶೆಟ್ಟಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ  ‘ಆಪರೇಷನ್ ಲಂಡನ್ ಕೆಫೆ’ ಚಿತ್ರತಂಡ ಮುಡಿ ತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ಕಾಣಿಸುವ ಮೇಘಾ ಶೆಟ್ಟಿಯ ಕಲರ್ಫುಲ್ ಪೋಸ್ಟರ್ ಬಿಡುಗಡೆ ಮಾಡಿ, ಶುಭ ಕೋರಿದ್ದರು.

  • ನಾನೇಕೆ ಡಿವೋರ್ಸ್ ಫೋಟೋಶೂಟ್ ಮಾಡಿಸಿದೆ?: ನಟಿ ಶಾಲಿನಿ ಬಿಚ್ಚಿಟ್ಟ ರಹಸ್ಯ

    ನಾನೇಕೆ ಡಿವೋರ್ಸ್ ಫೋಟೋಶೂಟ್ ಮಾಡಿಸಿದೆ?: ನಟಿ ಶಾಲಿನಿ ಬಿಚ್ಚಿಟ್ಟ ರಹಸ್ಯ

    ತಿಯಿಂದ ದೂರವಾದ ನಂತರ ಡಿವೋರ್ಸ್ (Divorce) ಫೋಟೋಶೂಟ್ ಮಾಡಿಸಿ ಸಾಕಷ್ಟು ಸುದ್ದಿಯಾಗಿದ್ದರು ನಟಿ ಶಾಲಿನಿ (Shalini). ಯಾಕೆ ಈ ರೀತಿಯಲ್ಲಿ ಅವರು ಫೋಟೋಶೂಟ್ ಮಾಡಿಸಿದರು ಎನ್ನುವ ಕುರಿತು ಈವರೆಗೂ ಅವರು ಹೇಳಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಫೋಟೋಶೂಟ್ ಕುರಿತು ಶಾಲಿನಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಮನದಾಳದ ಅನಿಸಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ‘ಡಿವೋರ್ಸ್ ನಂತರ ಸಾಕಷ್ಟು ಜನರು ಡಿಪ್ರೆಷನ್ ಗೆ ಒಳಗಾಗುತ್ತಾರೆ. ಮನೆಯಿಂದ ಆಚೆ ಬರುವುದೇ ಇಲ್ಲ. ಅನೇಕರು ಪ್ರಾಣ ಕಳೆದುಕೊಂಡಿರುವುದನ್ನೂ ಕಂಡಿದ್ದೇನೆ. ಅಂತಹ ಹೆಣ್ಣು ಮಕ್ಕಳಿಗೆ ಧೈರ್ಯ ಕೊಡುವ ಉದ್ದೇಶದಿಂದ ಫೋಟೋಶೂಟ್ (Photo Shoot) ಮಾಡಿಸಿಕೊಳ್ಳಬೇಕಾಯಿತು. ಧೈರ್ಯದಿಂದ ಪರಿಸ್ಥಿತಿ ಎದುರಿಸಿ ಖುಷಿಯಾಗಿರಿ ಎನ್ನುವ ಸಂದೇಶವನ್ನು ಆ ಮೂಲಕ ಸಾರಿದ್ದೇನೆ’ ಎನ್ನುವುದು ಶಾಲಿನಿ ಮಾತು. ಇದನ್ನೂ ಓದಿ:ಮಗಳ ಸಿನಿಮಾದಲ್ಲಿ ಮೊಹಿದ್ದೀನ್ ಭಾಯ್ ಆಗಿ ಬಂದ ತಲೈವಾ- ‌’ಲಾಲ್‌ ಸಲಾಂ’ ಪೋಸ್ಟರ್‌ ಔಟ್

    ಶಾಲಿನಿ ತಮಿಳಿನ (Tamil) ಪ್ರಸಿದ್ಧ ಕಿರುತೆರೆ ನಟಿ. ಮುಳ್ಳುಂ ಮಲರುಂ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಅವರು ಹೊಂದಿದ್ದಾರೆ. ಮಗಳೊಂದಿಗೆ ತಾನು ಒಂಟಿಯಾಗಿ ಇದ್ದೇನೆ ಎಂದು ಹಲವಾರು ಸಲ ಹೇಳಿಕೊಂಡಿದ್ದರು. ಡಿವೋರ್ಸ್ ವಿಚಾರವನ್ನು ಫೋಟೋಗಳ ಮೂಲಕ ಹಂಚಿಕೊಂಡು ಸುದ್ದಿಯಾದರು.

    ಜೀವನದಲ್ಲಿ 99 ತೊಂದರೆಗಳಿವೆ. ಅವುಗಳಲ್ಲಿ ಗಂಡ ಕೂಡ ಒಬ್ಬ ಎನ್ನುವಂತಹ ಬರಹವನ್ನೂ ಫೋಟೋಗಳೊಂದಿಗೆ ಪೋಸ್ಟ್ ಮಾಡಿದ್ದರು. ಪತಿಯೊಂದಿಗೆ ಇರುವ ಫೋಟೋಗಳನ್ನು ಹರಿದು ಹಾಕುವ ಹಾಗೂ ಗಂಡ ಫೋಟೋವನ್ನು ಕಾಲಿನಿಂದ ತುಳಿಯುವಂತೆ ಫೋಟೋಶೂಟ್ ಮಾಡಿಸಿಕೊಂಡಿದ್ದರು.

    ಡಿವೋರ್ಸ್ ನಂತರ ಮಗಳ ಸಂಪೂರ್ಣ ಜವಾಬ್ದಾರಿಯನ್ನು ನಾನೇ ತಗೆದುಕೊಂಡಿದ್ದೇನೆ ಎಂದು ಹೇಳಿರುವ ನಟಿ, ಮಗಳೊಂದಿಗೆ ಒಂಟಿಯಾಗಿ ಬದುಕುತ್ತಿರುವುದನ್ನೂ ಹೇಳಿಕೊಂಡಿದ್ದಾರೆ. ಅಲ್ಲದೇ, ಮಗಳನ್ನು ಹೇಗೆ ಬೆಳೆಸಬೇಕು ಎನ್ನುವುದು ನನಗೆ ಚೆನ್ನಾಗಿ ಗೊತ್ತಿದೆ. ಹಾಗಾಗಿ ನಾನು ಧೈರ್ಯದಲ್ಲಿದ್ದೇನೆ ಎಂದಿದ್ದಾರೆ.

    ಫೋಟೋಗಾಗಿ ನಾನಾ ಬಗೆಯಲ್ಲಿ ಪೋಸ್ ಕೊಟ್ಟಿರುವ ಶಾಲಿನಿ, ರೆಡ್ ಸ್ಲಿಟ್ ಡ್ರೆಸ್ ನಲ್ಲಿ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಡಿವೋರ್ಸ್ ಎಂಬ ಬೋರ್ಡ್ ಕೂಡ ಹಿಡಿದು ಫೋಟೋಗೆ ಪೋಸ್ ನೀಡಿದ್ದಾರೆ. ಜೀವಕ್ಕೆ ಅಂತ್ಯ ಹಾಡುವ ಬದಲು ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುವುದು ಒಳ್ಳೆದು ಎಂಬ ಸಲಹೆಯನ್ನೂ ನೀಡಿದ್ದಾರೆ. ನಮ್ಮ ಜೀವನದಲ್ಲಿ ನಾವು ಹೇಗಿರಬೇಕು ಎನ್ನುವುದನ್ನು ನಾವೇ ನಿರ್ಧಾರ ಮಾಡಬೇಕು. ಸಹ್ಯವಲ್ಲದ ದಾಂಪತ್ಯ ಮುರಿಯುವುದರಲ್ಲಿ ಯಾವುದೇ ತಪ್ಪಿಲ್ಲ. ಜೀವನದಲ್ಲಿ ಎಲ್ಲರೂ ಖುಷಿಯಾಗಿ ಇರಬೇಕು ಎಂದು ಹೇಳಿಕೊಂಡಿದ್ದಾರೆ.

    ಇದೇ ಮೊದಲ ಬಾರಿಗೆ ನಟಿಯೊಬ್ಬರು ಈ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡು ವಿಚ್ಚೇದನವನ್ನು ಸೆಲೆಬ್ರೇಟ್ ಮಾಡಿರುವುದಕ್ಕೆ ನಾನಾ ರೀತಿಯ ಕಾಮೆಂಟ್ ಗಳನ್ನು ಹಾಕಿದ್ದಾರೆ ಅಭಿಮಾನಿಗಳು. ಒಂದಷ್ಟು ಜನ ಶಾಲಿನಿ ಪರವಾಗಿ ಮಾತನಾಡಿದ್ದರೆ, ಮತ್ತಷ್ಟು ಜನ ಶಾಲಿನ ಈ ನಡೆಯನ್ನು ಪ್ರಶ್ನಿಸಿದ್ದಾರೆ.

  • ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಕ್ಯಾಮೆರಾದಲ್ಲಿ ಕಂಡಂತೆ ಸಾನ್ಯಾ ಅಯ್ಯರ್

    ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಕ್ಯಾಮೆರಾದಲ್ಲಿ ಕಂಡಂತೆ ಸಾನ್ಯಾ ಅಯ್ಯರ್

    ಕಿರುತೆರೆಯ ಮುದ್ದಾದ ಗೊಂಬೆ ಎಂದೇ ಖ್ಯಾತರಾಗಿರುವ ಸಾನ್ಯಾ ಅಯ್ಯರ್ (Sanya Iyer), ಇತ್ತೀಚೆಗಷ್ಟೇ ಬಾಲಿವುಡ್ ನಲ್ಲಿ ಪ್ರಾಜೆಕ್ಟ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಮುಂಬೈನಲ್ಲಿ ಅದರ ಶೂಟಿಂಗ್ ಇರಲಿದೆ ಎಂದೂ ಹಂಚಿಕೊಂಡಿದ್ದರು. ಈ ಖುಷಿಯಲ್ಲೇ ಅವರು ಬಾಲಿವುಡ್ (Bollywood) ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ (Daboo Ratnani) ಅವರಿಂದ ಫೋಟೋಶೂಟ್ (Photo Shoot) ಮಾಡಿಸಿಕೊಂಡಿದ್ದಾರೆ. ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಥೇಟ್ ರಾಣಿಯಂತೆ ಕಂಡಿದ್ದಾರೆ.

    ಬಾಲಿವುಡ್ ನ ಖ್ಯಾತ ನಟ ನಟಿಯರ ಫೋಟೋಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದ ಶ್ರೇಯಸ್ಸು ಡಬು ರತ್ನಾನಿಗೆ ಸಲ್ಲುತ್ತದೆ. ಅಮಿತಾಭ್ ಬಚ್ಚನ್ ರಿಂದ ಹಿಡಿದು ಈ ಹೊತ್ತಿನ ಯುವ ನಟರವರೆಗೂ ಡಬು ತಮ್ಮ ಕ್ಯಾಮೆರಾದಲ್ಲಿ ಅವರನ್ನು ಸೆರೆ ಹಿಡಿದಿದ್ದಾರೆ. ಈ ಹಿಂದೆ ಕನ್ನಡದ ಹೆಸರಾಂತ ನಟ ಯಶ್ ಕೂಡ ಇವರ ಬಳಿ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಇಂದು ಸಾನ್ಯಾ ಕೂಡ ಅವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾರೆ.

    ಕೆಲವು ಘಟನೆಗಳ ನಂತರ ಸಾನ್ಯಾ ತಮ್ಮ ಬದುಕನ್ನು ನಾಜೂಕಾಗಿ ಕಟ್ಟಿಕೊಳ್ಳುತ್ತಿದ್ದಾರೆ. ಅಲ್ಲದೇ ಗ್ಲಾಮರ್ ಬಗ್ಗೆಯೂ ಅವರು ಕಾಳಜಿ ತಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಅವರು ಮಾತನಾಡಿ, ‘ಕಂಬಳದಲ್ಲಿ ನಾನು ಕುಡಿದುಕೊಂಡು ಬಂದಿದ್ದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಅದು ಸುಳ್ಳು. ನಾನು ಜೀರೋ ಶುಗರ್ ಡಯೆಟ್ ಮಾಡುತ್ತಿದ್ದೇನೆ. ಮುಂಬೈನಲ್ಲಿ ಶೂಟಿಂಗ್ ಇರುವ ಕಾರಣಕ್ಕಾಗಿ ಇದೆಲ್ಲವನ್ನೂ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ಜೊತೆಗೆ ನಾನು ರುದ್ರಾಕ್ಷಿಯನ್ನು ಧರಿಸಿದ್ದೇನೆ. ಇದನ್ನು ಧರಿಸಿದಾಗ ಮದ್ಯಪಾನ, ಧೂಮಪಾನ ಮಾಡಲ್ಲ. ಸುಮ್ಮನೆ ನನ್ನ ಮೇಲೆ ಆಪಾದನೆ ಹೊರಿಸಲಾಗುತ್ತಿದೆ’ ಎಂದಿದ್ದರು.

    ಈಗಾಗಲೇ ಜೀವನಲ್ಲಿ ಒಂದು ಲವ್ ಫೆಲ್ಯೂವರ್ ಕಂಡಿರುವ ಪುಟ್ಟಗೌರಿ ಖ್ಯಾತಿಯ ಸಾನ್ಯಾ ಅಯ್ಯರ್ ಮತ್ತು ರೂಪೇಶ್ ಶೆಟ್ಟಿ (Rupesh Shetty) ನಡುವೆ ಏನೋ ನಡೀತಾ ಇದೆ ಎನ್ನುವುದು ಬಿಗ್ ಬಾಸ್ ಮನೆಯಲ್ಲಿದ್ದವರ ಗುಮಾನಿಯಾಗಿತ್ತು. ಅದಕ್ಕೆ ಪುಷ್ಠಿ ಎನ್ನುವಂತೆ ಈ ಜೋಡಿ ಸದಾ ಜೊತೆಯಾಗಿಯೇ ಕ್ಯಾಮೆರಾ ಮುಂದೆ ಕಾಣಿಸಿಕೊಳ್ಳುತ್ತಿತ್ತು. ಅದಕ್ಕೂ ಅವರು ಸ್ಪಷ್ಟನೆ ನೀಡಿದ್ದಾರೆ.

    ರೂಪೇಶ್ ಮತ್ತು ತಮ್ಮ ನಡುವೆ ಅಂಥದ್ದೂ ಏನೂ ಇಲ್ಲ, ನಾವು ಜಸ್ಟ್ ಫ್ರೆಂಡ್ಸ್ ಎಂದು ಹೇಳುವ ಮೂಲಕ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಏನೇ ಪ್ರಯತ್ನಿಸಿದರೂ, ಅವರುಗಳ ನಡೆ ಮಾತ್ರ ಹಲವು ಅನುಮಾನಗಳನ್ನು ಬಿತ್ತಿದೆ. ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೂ ಸಾನ್ಯಾ ಮತ್ತು ರೂಪೇಶ್ ಹಲವಾರು ಬಾರಿ ಭೇಟಿ ಮಾಡಿದ್ದಾರೆ. ಹಾಗಾಗಿ ಇಬ್ಬರೂ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರ ಹಾಗೆಯೇ ಜನರ ಮನಸ್ಸಿನಲ್ಲಿ ಉಳಿದಿದೆ.

    ತಮ್ಮ ತಾಯಿಯನ್ನು ಅಭಿಮಾನದಿಂದ ಕಾಣುವ ಸಾನ್ಯಾ. ಅವರ ತಾಯಿಯ ಬಗ್ಗೆ ಯಾರೇ ಕೆಟ್ಟ ಕಾಮೆಂಟ್ ಮಾಡಿದರೂ ಸಹಿಸುವುದಿಲ್ಲ. ಇತ್ತೀಚಿಗೆ ದೀಪಾ ಅಯ್ಯರ್ ಅವರ (Deepa Iyer) ಹುಟ್ಟುಹಬ್ಬವಿತ್ತು. ಹಾಗಾಗಿ ಸಾನ್ಯ ಅಮ್ಮನಿಗೆ ಸರ್ಪ್ರೈಸ್ ಉಡುಗೊರೆ ನೀಡಿದ್ದರು. ದೊಡ್ಡ ಹೊಟೇಲಿಗೆ ಕರೆದೊಯ್ದು ಕೇಕ್ ಆರ್ಡರ್ ಮಾಡಿ ಅಮ್ಮನಿಂದ ಕಟ್ ಮಾಡಿಸಿದ್ದರು. ಈ ಖುಷಿಯ ಸನ್ನಿವೇಶವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋ ಶೇರ್ ಆಗ್ತಿದಂತೆ ದೀಪಾ ಅವರ ಡ್ರೆಸ್‌ಗೆ ನೆಗೆಟಿವ್ ಕಾಮೆಂಟ್‌ ಹರಿದು ಬಂದಿತ್ತು.

    ಅಮ್ಮನ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದವರನ್ನು ಚಳಿಬಿಡಿಸಿದ್ದರು ಸಾನ್ಯಾ. ನನ್ನ ತಾಯಿ ನನಗೆ ಹೆಮ್ಮೆ. ಮಾತನಾಡಲು ನೀವ್ಯಾರು? ಒಂದು ಸಲ ನಿಮ್ಮ ತಾಯಿಯನ್ನು ಪ್ರೀತಿಸಿ ನೋಡಿ, ಆಗ ಇಂತಹ ಕಾಮೆಂಟ್ ಗಳು ಬರಲಾರವು ಎಂದಿದ್ದರು. ಈ ಮೂಲಕ ತಾಯಿಯ ಬಗೆಗಿನ ಅಭಿಮಾನವನ್ನು ಮೆರೆದಿದ್ದರು.

  • ರೆಡ್ ಬಸ್ ಜೊತೆ ಸಾರಾ ಅಲಿಖಾನ್ ಫೋಟೋ ಶೂಟ್ : ನಿನ್ನಂಥೋರು ಯಾರು ಇಲ್ಲ ಎಂದ ಫ್ಯಾನ್ಸ್

    ರೆಡ್ ಬಸ್ ಜೊತೆ ಸಾರಾ ಅಲಿಖಾನ್ ಫೋಟೋ ಶೂಟ್ : ನಿನ್ನಂಥೋರು ಯಾರು ಇಲ್ಲ ಎಂದ ಫ್ಯಾನ್ಸ್

    ಬಾಲಿವುಡ್ ಚೆಲುವೆ, ನಟ ಸೈಫ್ (Saif Ali Khan) ಪುತ್ರಿ ಸಾರಾ ಅಲಿಖಾನ್ (Sara Ali Khan) ಡಬಲ್ ಡೆಕ್ಕರ್ ಬಸ್ ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡಿದ್ದು ಆ ಹಾಟ್ ಫೋಟೋಗಳನ್ನು(Photo Shoot) ಹಂಚಿಕೊಳ್ಳುವ ಮೂಲಕ ಪಡ್ಡೆಹುಡುಗರ ನಿದ್ದೆಗೆ ಕೊಳ್ಳಿ ಇಟ್ಟಿದ್ದಾರೆ. ಕೆಂಪು ಬಸ್ಸು ಹಳದಿ ಬಣ್ಣದ ಕಾಸ್ಟ್ಯೂಮ್ ಒಂದು ರೀತಿಯಲ್ಲಿ ಸಖತ್ ಕಾಂಬಿನೇಷನ್ ಆಗಿದೆ. ಕೇವಲ ಫೋಟೋ ಶೂಟ್ ಮಾತ್ರವಲ್ಲ, ಎಲ್ಲ ವಿಚಾರದಲ್ಲೂ ಸಾರಾ ಬೋಲ್ಡ್ ಆಗಿದ್ದಾರೆ.

    ಈ ಹಿಂದೆ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ಸಾರಾ ಅಲಿಖಾನ್ ಶಾಕಿಂಗ್ ಸ್ಟೇಟ್ಮೆಂಟ್ ಕೊಟ್ಟಿದ್ದರು. ತಮಗೆ ಅವಕಾಶ ಸಿಕ್ಕರೆ ವಿಜಯ್ ದೇವರಕೊಂಡ ಜೊತೆ ಡೇಟ್ ಮಾಡುವುದಾಗಿ ಹೇಳಿಕೊಂಡಿದ್ದರು. ಅಂತಹ ಹುಡುಗನ ಜೊತೆಯೇ ಡೇಟಿಂಗ್ ಗೆ ಹೋಗಲು ಇಷ್ಟಪಡುತ್ತೇನೆ ಎಂದೂ ಶೋನಲ್ಲಿ ಹೇಳಿದ್ದರು. ವಿಜಯ್ ಈಗಾಗಲೇ ಬಾಲಿವುಡ್ ಸಿನಿಮಾದಲ್ಲೂ ಮಿಂಚುತ್ತಿರುವುದರಿಂದ, ಇದು ಸಾಧ್ಯವೂ ಆಗಬಹುದು ಎನ್ನುವ ಗಾಸಿಪ್ ಹರಡಿತ್ತು.

    ತಂದೆಯ ಕಾರಣದಿಂದ ತನಗೆ ಅವಕಾಶ ಸಿಗುವುದು ಬೇಡ, ನನ್ನ ಟ್ಯಾಲೆಂಟ್ ಮೇಲೆ ಸಿಗಲಿ ಎಂದೂ ಸಾರಾ ಹೇಳಿಕೊಂಡಿದ್ದರು. ಪ್ರತಿಭೆಯ ಕಾರಣದಿಂದಾಗಿ ಅಕ್ಷಯ್ ಕುಮಾರ್ ಹಾಗೂ ಕಾಲಿವುಡ್ ನಟ ಧನುಷ್ ಜೊತೆ ಅತ್ರಂಗಿ ರೇ ಸಿನಿಮಾದಲ್ಲಿ ನಟಿಸಿದರು. ರಣ್‍ವೀರ್ ಸಿಂಗ್ ಜೊತೆ ಸಿಂಬಾ, ನಟ ಕಾರ್ತಿಕ್ ಲವ್ ಆಜ್ ಕಲ್-2, ಸುಶಾಂತ್ ಸಿಂಗ್ ಜೊತೆ ಕೇದರನಾಥ್ ಸಿನಿಮಾದಲ್ಲೂ ನಟಿಸಿದ್ದಾರೆ.

    ತಂದೆಯ ವಿಚಾರದಲ್ಲೂ ಅಷ್ಟೇ ಖುಲ್ಲಂ ಖುಲ್ಲಾ ಆಗಿ ಸಾರಾ ಮಾತನಾಡಿದ್ದರು. ‘ನನ್ನ ತಂದೆ ಎರಡನೇ ಮದುವೆ ಆಗುವ ವಿಷಯ ನನಗೆ ತಿಳಿದಿತ್ತು. ನಾನು ಕರೀನಾ ಕಪೂರ್ ಅವರ ಅಭಿಮಾನಿ. ಅವರು ನನ್ನ ಜೀವನದಲ್ಲಿ ಇರಬೇಕೆಂದು ಬಯಸಿದ್ದೆ. ಆದರೆ ಅವರು ಈಗ ಮಲತಾಯಿ ಆಗಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ’ ಎಂದು ಸಾರಾ ಅಲಿ ಖಾನ್ ಉತ್ತರಿಸಿದ್ದರು. ನನ್ನ ತಂದೆ ಕರೀನಾ ಕಪೂರ್ ಅವರನ್ನು ಮದುವೆ ಆಗುತ್ತಿದ್ದೀನಿ ಎಂದು ಹೇಳಿದ್ದಾಗ ನಾನು ಯಾವ ಉಡುಪು ಧರಿಸಬೇಕು ಎಂದು ನನ್ನ ತಾಯಿಯ ಬಳಿ ಕೇಳಿದೆ. ಆಗ ನನ್ನ ತಾಯಿ ನೀನು ಯಾವ ಉಡುಪನ್ನು ಧರಿಸುತ್ತೀಯಾ? ಎಂದು ಕೇಳಿದ್ದರು. ನನ್ನ ತಾಯಿ ಕೂಡ ನನ್ನ ತಂದೆಯ ಎರಡನೇ ಮದುವೆಗೆ ಒಪ್ಪಿಗೆ ನೀಡಿದ್ದರು ಎಂದು ಸಾರಾ ತಿಳಿಸಿದ್ದರು.

    ಸಾರಾ ಡೇಟಿಂಗ್ ವಿಚಾರದಲ್ಲಿ ಕರಣ್ ಅಚ್ಚರಿ ಎನ್ನುವಂತೆ ಮಾತನಾಡಿದ್ದರು. ಸಾರಾ ಹಾಗೂ ಜಾಹ್ನವಿಗೆ ನೀವಿಬ್ಬರೂ ಒಂದೇ ಕುಟುಂಬದ ಹುಡುಗರ ಜೊತೆ ಡೇಟಿಂಗ್ ಮಾಡುತ್ತಿದ್ದೀರಿ ಅಲ್ಲವಾ ಎಂದು ಕರಣ್ ಕೇಳಿದ್ದರು. ಈ ಪ್ರಶ್ನೆಯನ್ನು ಕನಸು ಮನಸಲ್ಲೂ ಎಣಿಸಿರದ ಸಾರಾ ಮತ್ತು ಜಾಹ್ನವಿ ಒಂದು ಕ್ಷಣ ಕಕ್ಕಾಬಿಕ್ಕಿಯಾಗಿದ್ದರು. ಕೊನೆಗೆ ಆ ಹುಡುಗರು ಯಾರು ಎನ್ನುವುದನ್ನು ಕರಣ್ ಅವರೇ ಬಾಯ್ಬಿಟ್ಟರು. ಮಹಾರಾಷ್ಟ್ರದ ಮಾಜಿ ಸಿಎಂ. ಶಿಂಧೆ ಅವರ ಮಕ್ಕಳಾದ ವೀರ ಪಹಾರಿ, ಶಿಖರ್ ಪಹಾರಿ ಹೆಸರು ಹೇಳುವ ಮೂಲಕ ಮತ್ತೆ ಅಚ್ಚರಿಗೆ ದೂಡಿದ್ದರು ಕರಣ್.

  • ಮದುವೆಯಾಗಿ ಮೂರೇ ದಿನಕ್ಕೆ ಪರಾರಿ – ಇದು ಫೋಟೋಶೂಟ್ ಮದ್ವೆ ಎಂದ ಪತಿ

    ಮದುವೆಯಾಗಿ ಮೂರೇ ದಿನಕ್ಕೆ ಪರಾರಿ – ಇದು ಫೋಟೋಶೂಟ್ ಮದ್ವೆ ಎಂದ ಪತಿ

    ಬೆಂಗಳೂರು: ಮದುವೆಯಾಗಿ (Wedding) ಮೂರೇ ದಿನಕ್ಕೆ ಪತಿ ಪರಾರಿಯಾಗಿದ್ದು ಎಂದು ಆರೋಪಿಸಿ ಪತ್ನಿ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ (KR Puram Police Station) ದೂರು ನೀಡಿದ್ದಾರೆ.

    ಧರಣಿ ಹಾಗೂ ಸುರೇಶ್ ಇಬ್ಬರು ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು ಫೆ.15ರಂದು ಇಬ್ಬರು ಮದುವೆಯೂ ಆಗಿದ್ದರು. ಆದರೆ ಮದುವೆಯಾಗಿ ಮೂರೇ ದಿನಕ್ಕೆ ಪತಿ ಸುರೇಶ್ ಇದ್ದಕ್ಕಿದ್ದಂತೆ ಪರಾರಿಯಾಗಿದ್ದಾನೆ ಎಂದು ಆರೋಪಿಸಿ ಧರಣಿ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

    ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಸುರೇಶ್‍ನನ್ನು ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿ, ನಾನು ಧರಣಿಯನ್ನು ಮದುವೆಯಾಗಿಲ್ಲ. ನಾವಿಬ್ಬರು ಸ್ನೇಹಿತರಾಗಿದ್ದೆವು. ಅದು ಶಾರ್ಟ್ ಮೂವಿಗಾಗಿ ತೆಗೆದ ಫೋಟೋ ಆಗಿತ್ತು ಎಂದು ಪ್ರತಿಕ್ರಿಯೆ ನೀಡಿದ್ದಾನೆ. ಅಷ್ಟೇ ಅಲ್ಲದೇ 2016ರಲ್ಲಿ ಧರಣಿಗೆ ಮೊದಲ ವಿವಾಹ ಆಗಿತ್ತು. ನಂತರ ಪತಿಯನ್ನು ಬಿಟ್ಟು ದೂರವಾಗಿದ್ದರು ಎಂದು ಆರೋಪಿಸಿದ್ದಾನೆ. ಇದನ್ನೂ ಓದಿ: ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮದರಸಾ ಸಂಪೂರ್ಣ ಬಂದ್: ಯತ್ನಾಳ್

    ಸದ್ಯ ಈ ವಿಚಾರ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಇದನ್ನೂ ಓದಿ: ಬೇಸಿಗೆಯಲ್ಲಿ ಆಲಿಕಲ್ಲು ಮಳೆ – ಕಲಬುರಗಿಯಲ್ಲಿ ‘ಹಿಮಾಲಯದ ರಸ್ತೆ’!

  • ಬೆಳಕಿನ ಹಬ್ಬಕ್ಕೆ ‘ಕೆಜಿಎಫ್’ ಬೆಡಗಿಯ ಹೊಸ ಫೋಟೋ ಶೂಟ್

    ಬೆಳಕಿನ ಹಬ್ಬಕ್ಕೆ ‘ಕೆಜಿಎಫ್’ ಬೆಡಗಿಯ ಹೊಸ ಫೋಟೋ ಶೂಟ್

    ದುಕಿನ ಕತ್ತಲೆಯನ್ನು ಕಳೆದು ಬೆಳಕಿನ ಭರವಸೆ ನೀಡುವ ದೀಪಗಳ ಹಬ್ಬ ದೀಪಾವಳಿಯನ್ನು (Deepavali) ಎಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ. ಚಂದನವನದಲ್ಲೂ ದೀಪಾವಳಿಯ ಸಂಭ್ರಮ ಜೋರಾಗಿಯೇ ಮನೆ ಮಾಡಿದೆ. ಕೆಜಿಎಫ್ (KGF) ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಖ್ಯಾತಿ ಗಳಿಸಿರೋ ನಟಿ ಅರ್ಚನಾ ಜೋಯಿಸ್ ದೀಪಾವಳಿ ಸಂಭ್ರಮದಲ್ಲಿದ್ದು, ಹೊಸದೊಂದು ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

    ದೀಪಾವಳಿ ಪ್ರಯುಕ್ತ ಕಲರ್ ಫುಲ್ ಬೆಳಕಿನ ನಡುವೆ ಅರ್ಚನಾ ಜೋಯಿಸ್ (Archana Jois) ಫೋಟೋಶೂಟ್ ಮಾಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದು, ಕಲರ್ ಫುಲ್ ಆಗಿ ಮಿಂಚಿರೋ ನಟಿಯನ್ನು ಕಂಡು ಎಲ್ಲರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇದನ್ನೂ ಓದಿʻಹೆಡ್‌ ಬುಷ್‌ʼ ವಿವಾದ – ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಯ್ತು #WeStandWithDhananjaya ಹ್ಯಾಷ್‌ ಟ್ಯಾಗ್‌

    ಸೆಲೆಬ್ರೆಟಿ ಫೋಟೋಗ್ರಾಫರ್ ನಾಗರಾಜ್ ಸೋಮಯಾಜಿ ರೂಪಿಸಿದ್ದ ಕಾನ್ಸೆಪ್ಟ್ ನಡಿ ಫೋಟೋಗಳನ್ನು ಸೆರೆ ಹಿಡಿಯಲಾಗಿದೆ. ನಾಗರಾಜ್ ಸೋಮಯಾಜಿ ತಮ್ಮ ಫೋಕಸ್ ಫೋಟೋಗ್ರಫಿ ಸರ್ವಿಸ್ ನಡಿ ಈ ಕಲರ್ ಫುಲ್ ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ. ಅರ್ಚನಾ ಜೋಯಿಸ್ ಚೆಂದದ ಈ ಫೋಟೋಗಳಿಗೆ ಯೋಗಿತ ಕಾಸ್ಟ್ಯೂಮ್ ಡಿಸೈನ್, ರೇಣುಕ ಹೇರ್ ಸ್ಟೈಲ್ ಮತ್ತು ಮೇಕಪ್ ಮಾಡಿದ್ದಾರೆ.

    ಫೋಟೋಶೂಟ್ (Photo Shoot) ಬಗ್ಗೆ ಪ್ರತಿಕ್ರಿಯೆಸಿರುವ ನಟಿ ಅರ್ಚನಾ ಜೋಯಿಸ್ ದೀಪಾವಳಿ ಪ್ರಯುಕ್ತ ಫೋಟೋಶೂಟ್ ಮಾಡಲಾಗಿದೆ. ದೀಪಾವಳಿ ಅಂದ್ರೆ ಬೆಳಕು ಅದನ್ನೇ ಥೀಮ್ ಆಗಿಸಿಕೊಂಡು ನಾಗರಾಜ್ ಸೋಮಯಾಜಿ ಫೋಟೋಶೂಟ್ ಮಾಡಿದ್ದಾರೆ ಎಂದು ತಿಳಿಸಿದ್ರು. ಹಾಗೆ ದೀಪಾವಳಿ ಸಂಭ್ರಮದ ಬಗ್ಗೆಯೂ ಅನಿಸಿಕೆ ಹಂಚಿಕೊಂಡಿದ್ದು, ಪಟಾಕಿ ಹೊಡೆಯೋ ಅಭ್ಯಾಸ ಹೊರಟು ಹೋಗಿದೆ. ದೀಪಗಳ ಮೂಲಕವೇ ದೀಪಾವಳಿ ಸೆಲೆಬ್ರೇಟ್ ಮಾಡುತ್ತಿದ್ದೇವೆ. ನನಗೆ ಈ ಬಾರಿ ದೀಪಾವಳಿ ತುಂಬಾ ಸ್ಪೆಷಲ್. ಯಾಕಂದ್ರೆ ‘ಹೊಂದಿಸಿ ಬರೆಯಿರಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾ ಪ್ರಚಾರ ಕೂಡ ಜೋರಾಗಿ ನಡೆಯುತ್ತಿದೆ ಎಂದು ತಿಳಿಸಿದ್ರು.

    ಕೆಜಿಎಫ್ ಸಿನಿಮಾ ನಂತರ ಸ್ಯಾಂಡಲ್ ವುಡ್ ಅಂಗಳದಲ್ಲಿ ಅರ್ಚನಾ ಜೋಯಿಸ್ ಸಖತ್ ಬ್ಯುಸಿಯಾಗಿದ್ದಾರೆ. ಇವರು  ನಟಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ನವೆಂಬರ್ 18ರಂದು ಬಿಡುಗಡೆಯಾಗುತ್ತಿದ್ದು, ‘ಕ್ಷೇತ್ರಪಾಲ’ ಸಿನಿಮಾ ಕೂಡ ಬಿಡುಗಡೆಯ ಸನಿಹದಲ್ಲಿದೆ.

    Live Tv
    [brid partner=56869869 player=32851 video=960834 autoplay=true]

  • ‘ನಾನು ಗೋಲ್ಡನ್ ಗರ್ಲ್’ ಎಂದು ತನಗೆ ತಾನೇ ಹೊಗಳಿಕೊಂಡ ರಶ್ಮಿಕಾ ಮಂದಣ್ಣ

    ‘ನಾನು ಗೋಲ್ಡನ್ ಗರ್ಲ್’ ಎಂದು ತನಗೆ ತಾನೇ ಹೊಗಳಿಕೊಂಡ ರಶ್ಮಿಕಾ ಮಂದಣ್ಣ

    ಬಂಗಾರ ಬಣ್ಣದ ಕಾಸ್ಟ್ಯೂಮ್ ಧರಿಸಿರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna), ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ‘ನಾನು ಗೋಲ್ಡನ್ ಗರ್ಲ್’ (Golden Girl) ಎಂದು ತಮ್ಮನ್ನು ತಾವೇ ಕರೆದುಕೊಂಡಿದ್ದಾರೆ. ಆ ಕಾಸ್ಟ್ಯೂಮ್ ನಲ್ಲಿ ಸಖತ್ ಸೆಕ್ಸಿಯಾಗಿ ರಶ್ಮಿಕಾ ಕಾಣಿಸಿದ್ದು, ಟ್ರೋಲ್ ಕೂಡ ಆಗುತ್ತಿದ್ದಾರೆ. ಗುಡ್ ಬೈ ಸಿನಿಮಾದ ಪ್ರಚಾರಕ್ಕಾಗಿ ಈ ಕಾಸ್ಟ್ಯೂಮ್ ಅನ್ನು ಧರಿಸಿದ್ದು, ಆ ಸಿನಿಮಾದ ಕೆಲ ಅಪ್ ಡೇಟ್ ಕೂಡ ನೀಡಿದ್ದಾರೆ.

    ಮೊನ್ನೆಯಷ್ಟೇ ಅವರ ಹೊಸ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದೇನಿದು ಹಾಟ್ ಅವತಾರ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದರು. ಅಲ್ಲದೇ, ಆ ಫೋಟೋಗಳಿಗೆ ನಾನಾ ರೀತಿಯ ಸಂದೇಶಗಳನ್ನೂ ಕಳುಹಿಸಿದ್ದರು. ಇದನ್ನೂ ಓದಿ: 2024ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಮೋದಿ, ಹೇಮಾ ಮಾಲಿನಿಗೆ ರಾಖಿ ಸಾವಂತ್ ಥ್ಯಾಂಕ್ಸ್ ಹೇಳಿದ್ದೇಕೆ?

    ರಶ್ಮಿಕಾ ಮಂದಣ್ಣ ತಮಿಳು ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಯಾವುದಕ್ಕಾಗಿ ಈ ಫೋಟೋ ಶೂಟ್ ಮಾಡಿಸಿದ್ದಾರೆ ಎನ್ನುವ ವಿವರ ಸಿಕ್ಕಿಲ್ಲ. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ರಶ್ಮಿಕಾ, ತಾವೇ ಟ್ರೋಲ್ ಮಾಡಲು ಪ್ರೇರೇಪಿಸಿದ್ದಾರೆ. ನೀಲಿ ಬಣ್ಣದ ಡೆನಿಮ್ ನಲ್ಲಿ ಸಖತ್ ಆಗಿಯೇ ಕಂಡಿದ್ದಾರೆ. ಅವರ ಈ ಲುಕ್ ಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಕೆಲವರು ಅಚ್ಚರಿಯನ್ನೂ ವ್ಯಕ್ತ ಪಡಿಸಿದ್ದಾರೆ.

    ರಶ್ಮಿಕಾ ಇದೀಗ ಕೇವಲ ದಕ್ಷಿಣದ ನಟಿಯಾಗಿ ಉಳಿದುಕೊಂಡಿಲ್ಲ. ಬಾಲಿವುಡ್ ಗೂ ಹಾರಿದ್ದಾರೆ. ಗುಡ್ ಬೈ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಮೆಚ್ಚುಗೆಯ ಮಹಾಮಳೆಯೇ ಸುರಿದಿದೆ. ಹಾಗಾಗಿಯೇ ಸಹಜವಾಗಿಯೇ ರಶ್ಮಿಕಾ ಖುಷಿಯಲ್ಲಿದ್ದರು. ಈ ಸಿನಿಮಾ ತಮಗೊಂದು ಬ್ರೇಕ್ ನೀಡಬಹುದು ಎನ್ನುವ ನಂಬಿಕೆಯೂ ಅವರದ್ದು.

    ಗುಡ್ ಬೈ (Good Bye) ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಅಮಿತಾಭ್ ಬಚ್ಚನ್ (Amitabh Bachchan) ಜೊತೆ ರಶ್ಮಿಕಾ ನಟಿಸಿದ್ದಾರೆ. ಸ್ವತಃ ಅಮಿತಾಭ್ ಅವರೇ ರಶ್ಮಿಕಾ ಜೊತೆಗಿರುವ ಫೋಟೋವೊಂದನ್ನು ಈ ಹಿಂದೆ ಹಂಚಿಕೊಂಡಿದ್ದರು. ಈ ಸಿನಿಮಾದಲ್ಲಿ ಅಮಿತಾಭ್ ಗೆ ಮಗಳಾಗಿ ರಶ್ಮಿಕಾ ನಟಿಸಿದ್ದಾರೆ. ಇನ್ನಷ್ಟೇ ಸಿನಿಮಾ ರಿಲೀಸ್ ಆಗಲಿದ್ದು, ಆ ಸಿನಿಮಾದ ಪ್ರಚಾರದಲ್ಲೂ ರಶ್ಮಿಕಾ ತೊಡಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂಡಿ ನೋವು ನಡುವೆಯೂ ಹಾಟ್ ಅವತಾರದಲ್ಲಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

    ಮಂಡಿ ನೋವು ನಡುವೆಯೂ ಹಾಟ್ ಅವತಾರದಲ್ಲಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

    ಮೊನ್ನೆಯಷ್ಟೇ ಮಂಡಿನೋವು ಕಾರಣಕ್ಕಾಗಿ ಆಸ್ಪತ್ರೆಯ ಬಾಗಿಲು ತಟ್ಟಿದ್ದ ರಶ್ಮಿಕಾ ಮಂದಣ್ಣ (Rashmika Mandanna), ಈಗ ಆ ನೋವಿನ ನಡುವೆಯೂ ಫೋಟೋ ಶೂಟ್ ನಲ್ಲಿ ಭಾಗಿಯಾಗಿದ್ದರು. ಅವರ ಹೊಸ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದೇನಿದು ಹಾಟ್ ಅವತಾರ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಅಲ್ಲದೇ, ಆ ಫೋಟೋಗಳಿಗೆ ನಾನಾ ರೀತಿಯ ಸಂದೇಶಗಳನ್ನೂ ಕಳುಹಿಸುತ್ತಿದ್ದಾರೆ.

    ರಶ್ಮಿಕಾ ಮಂದಣ್ಣ ತಮಿಳು ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಯಾವುದಕ್ಕಾಗಿ ಈ ಫೋಟೋ ಶೂಟ್ (Photo Shoot)ಮಾಡಿಸಿದ್ದಾರೆ ಎನ್ನುವ ವಿವರ ಸಿಕ್ಕಿಲ್ಲ. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ರಶ್ಮಿಕಾ, ತಾವೇ ಟ್ರೋಲ್ ಮಾಡಲು ಪ್ರೇರೇಪಿಸಿದ್ದಾರೆ. ನೀಲಿ ಬಣ್ಣದ ಡೆನಿಮ್ ನಲ್ಲಿ ಸಖತ್ ಆಗಿಯೇ ಕಂಡಿದ್ದಾರೆ. ಅವರ ಈ ಲುಕ್ ಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಕೆಲವರು ಅಚ್ಚರಿಯನ್ನೂ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ:`ಕಮಲಿ’ ಖ್ಯಾತಿಯ ಅಮೂಲ್ಯಗೌಡರ ಹಾಟ್ ಫೋಟೋ ವೈರಲ್

    ರಶ್ಮಿಕಾ ಇದೀಗ ಕೇವಲ ದಕ್ಷಿಣದ ನಟಿಯಾಗಿ ಉಳಿದುಕೊಂಡಿಲ್ಲ. ಬಾಲಿವುಡ್ ಗೂ ಹಾರಿದ್ದಾರೆ. ಗುಡ್ ಬೈ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಮೆಚ್ಚುಗೆಯ ಮಹಾಮಳೆಯೇ ಸುರಿದಿದೆ. ಹಾಗಾಗಿಯೇ ಸಹಜವಾಗಿಯೇ ರಶ್ಮಿಕಾ ಖುಷಿಯಲ್ಲಿದ್ದರು. ಈ ಸಿನಿಮಾ ತಮಗೊಂದು ಬ್ರೇಕ್ ನೀಡಬಹುದು ಎನ್ನುವ ನಂಬಿಕೆಯೂ ಅವರದ್ದು.

    ಗುಡ್ ಬೈ (Good Bye) ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಅಮಿತಾಭ್ ಬಚ್ಚನ್ (Amitabh Bachchan) ಜೊತೆ ರಶ್ಮಿಕಾ ನಟಿಸಿದ್ದಾರೆ. ಸ್ವತಃ ಅಮಿತಾಭ್ ಅವರೇ ರಶ್ಮಿಕಾ ಜೊತೆಗಿರುವ ಫೋಟೋವೊಂದನ್ನು ಈ ಹಿಂದೆ ಹಂಚಿಕೊಂಡಿದ್ದರು. ಈ ಸಿನಿಮಾದಲ್ಲಿ ಅಮಿತಾಭ್ ಗೆ ಮಗಳಾಗಿ ರಶ್ಮಿಕಾ ನಟಿಸಿದ್ದಾರೆ. ಇನ್ನಷ್ಟೇ ಸಿನಿಮಾ ರಿಲೀಸ್ ಆಗಲಿದ್ದು, ಆ ಸಿನಿಮಾದ ಪ್ರಚಾರದಲ್ಲೂ ರಶ್ಮಿಕಾ ತೊಡಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]