Tag: ಫೋನಿ

  • ಫೋನಿ ಅಬ್ಬರ: ಧರೆಗುರುಳಿದ ಪವರ್ ಗ್ರಿಡ್ – ಸಾವಿನ ಸಂಖ್ಯೆ 37ಕ್ಕೆ ಏರಿಕೆ

    ಫೋನಿ ಅಬ್ಬರ: ಧರೆಗುರುಳಿದ ಪವರ್ ಗ್ರಿಡ್ – ಸಾವಿನ ಸಂಖ್ಯೆ 37ಕ್ಕೆ ಏರಿಕೆ

    ಭುವನೇಶ್ವರ: ಫೋನಿ ಚಂಡಮಾರುತಕ್ಕೆ ಒಡಿಶಾ ನಲುಗಿ ಹೋಗಿದ್ದು, ಇದುವರೆಗೂ ಚಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

    ಒಡಿಶಾದಾದ್ಯಂತ ವಿದ್ಯುತ್, ಕುಡಿಯುವ ನೀರು, ದೂರವಾಣಿ ಸಂಪರ್ಕ ಜಾಲ ಭಾಗಶಃ ನಾಶವಾಗಿದ್ದು, ಭುವನೇಶ್ವರದ ಚಂದಕಾದಲ್ಲಿ ಫೋನಿ ಹಬ್ಬರಕ್ಕೆ ಬೃಹತ್ ಪವರ್ ಗ್ರಿಡ್ ಧರೆಗೆ ಅಪ್ಪಳಿಸಿದೆ. ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಈ ವ್ಯವಸ್ಥೆಯನ್ನು ಸರಿಪಡಿಸಲು 72 ಗಂಟೆಗಳ ಅವಧಿಯನ್ನು ಸರ್ಕಾರ ಕೇಳಿದೆ.

    ರಾಜ್ಯ ಸರ್ಕಾರ ಚಂಡಮಾರುತದಿಂದ ಉಂಟಾಗಿರುವ ಹಾನಿಯನ್ನು ಪರಿಹರಿಸಲು ಕೇಂದ್ರಕ್ಕೆ ಮನವಿ ಮಾಡಿದ್ದು, ರಾಜ್ಯ ಸರ್ಕಾರದ ಮನವಿ ಮೇರೆಗೆ ಸಚಿವ ಧರ್ಮೇಂದ್ರ ಪ್ರಧಾನ್ ಪರಿಶೀಲನೆ ಮುಂದಾಗಿದ್ದಾರೆ. ಚಂಡಮಾರುತದಿಂದ ಸುಮಾರು 1.56 ಲಕ್ಷ ವಿದ್ಯುತ್ ಕಂಬಗಳು ಹಾನಿಗೊಳಗಾಗಿದೆ ಎಂಬ ಮಾಹಿತಿಯನ್ನು ರಾಜ್ಯ ಸರ್ಕಾರ ನೀಡಿದೆ.

    ಬರೋಬ್ಬರಿ 200 ಕಿಮೀ ವೇಗದಲ್ಲಿ ಒಡಿಶಾಗೆ ಅಪ್ಪಳಿದ ಫೋನಿ ಸಾಕಷ್ಟು ಅವಾಂತವನ್ನೇ ಸೃಷ್ಟಿಸಿದೆ. ಒಂದು ವರದಿಯ ಅನ್ವಯ ಚಂಡಮಾರುತದಿಂದ ಉಂಟಾಗಿರುವ ಹಾನಿಯನ್ನು ಸಹಜ ಸ್ಥಿತಿಗೆ ತರಲು ಸುಮಾರು 1 ವಾರದ ಅವಧಿ ಅಗತ್ಯವಿದೆ ಎಂಬ ಮಾಹಿತಿ ಲಭಿಸಿದೆ. ಪ್ರಮುಖವಾಗಿ ಒಡಿಶಾದ ಪುರಿ, ಖುರ್ದಾ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿಯಾಗಿದೆ. ಈ ವ್ಯವಸ್ಥೆಯನ್ನ ಸರಿಪಡಿಸಲು ಸಿಬ್ಬಂದಿ ಕೊರತೆಯನ್ನು ಕೂಡ ರಾಜ್ಯ ಸರ್ಕಾರ ಎದುರಿಸುತ್ತಿದೆ. ಕೇಂದ್ರ ಸರ್ಕಾರಕ್ಕೆ ಸುಮಾರು 5 ಸಾವಿರ ಮಂದಿ ಕೌಶಲ್ಯ ಹೊಂದಿರುವ ಸಿಬ್ಬಂದಿಗೆ ರಾಜ್ಯ ಸರ್ಕಾರ ಬೇಡಿಕೆ ಇಟ್ಟಿದೆ. ಇತ್ತ ಶೇ.80 ರಷ್ಟು ಸರ್ಕಾರಿ ಸಾರಿಗೆ ಸೇವೆ ಆರಂಭವಾಗಿದ್ದು, ಜನರ ನೆರವಿಗೆ ಧಾವಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಒಡಿಶಾ ನೆರವಿಗೆ ಆಗಮಿಸಿ 15 ಕೋಟಿ ರೂ. ನೆರವು ನೀಡಿದ್ದಾರೆ.

  • ಒಡಿಶಾಗೆ 1 ಕೋಟಿ ದೇಣಿಗೆ ನೀಡಿದ ನಟ ಅಕ್ಷಯ್ ಕುಮಾರ್

    ಒಡಿಶಾಗೆ 1 ಕೋಟಿ ದೇಣಿಗೆ ನೀಡಿದ ನಟ ಅಕ್ಷಯ್ ಕುಮಾರ್

    ನವದೆಹಲಿ: ಬಾಲಿವುಡ್ ನಟ ಕಿಲಾಡಿ ಅಕ್ಷಯ್ ಕುಮಾರ್ ಅವರು ಫೋನಿ ಚಂಡಮಾರುತದಿಂದ ತತ್ತರಿಸಿದ ಒಡಿಶಾ ರಾಜ್ಯಕ್ಕೆ 1 ಕೋಟಿಯನ್ನು ದೇಣಿಗೆಯಾಗಿ ನೀಡಿದ್ದಾರೆ.

    ಒಡಿಶಾ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ನಿಧಿಗೆ ಈ 1 ಕೋಟಿಯನ್ನು ನೀಡಿದ್ದಾರೆ. ಈ ಮೂಲಕ ಫೋನಿ ಚಂಡಮಾರುತಕ್ಕೆ ಬಲಿಯಾದ ಒಡಿಶಾ ರಾಜ್ಯಕ್ಕೆ ಹಣ ಸಹಾಯ ಮಾಡಿದ ಮೊದಲ ನಟ ಎಂಬ ಹೆಗ್ಗಳಿಗೆ ಪಾತ್ರವಾಗಿದ್ದಾರೆ. ಇದನ್ನು ಓದಿ: ಹುತಾತ್ಮ ಯೋಧರ ಕುಟುಂಬಕ್ಕೆ ಅಕ್ಷಯ್ ಕುಮಾರ್ 5 ಕೋಟಿ ರೂ. ದಾನ

    ಅಕ್ಷಯ್ ಕುಮಾರ್ ಅವರು ಮುಂಚಿನಿಂದಲೂ ದೇಶದ ಸಮಸ್ಯೆಗಳಿಗೆ ಬೇಗ ಸ್ಪಂದಿಸುತ್ತಾರೆ. ಹಿಂದೆ ಕೇರಳದಲ್ಲಾದ ಪ್ರವಾಹ ಮತ್ತು ಚೆನ್ನೈ ಪ್ರವಾಹಗಳಿಗೂ ಧನ ಸಹಾಯ ಮಾಡಿದ್ದರು. ಭಾರತೀಯ ಸೇನೆಯ ಬಗ್ಗೆ ವಿಶೇಷ ಅಸಕ್ತಿಯನ್ನು ಹೊಂದಿರುವ ಅವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೂ ಧನ ಸಹಾಯ ಮಾಡಿದ್ದರು. ಇದನ್ನು ಓದಿ: ಅಕ್ಷಯ್ ಕುಮಾರ್ ಆರ್ಮಿಗೆ ಸೇರ್ತಾರಂತೆ!  

    ಅಕ್ಷಯ್ ಕುಮಾರ್ ಅವರು ಸದ್ಯ ರಾಜ್ ಮೆಹ್ತಾ ನಿರ್ದೇಶನದ ಗೂಡ್ ನ್ಯೂಸ್ ಚಿತ್ರದಲ್ಲಿ ಅಭಿನಯ ಮಾಡುತ್ತಿದ್ದು, 9 ವರ್ಷಗಳ ನಂತರ ಬಾಲಿವುಡ್ ಬೆಬೊ ಕರೀನಾ ಕಪೂರ್ ಅವರ ಜೊತೆ ನಟಿಸಲಿದ್ದಾರೆ.

  • ಸಿಎಫ್‌ಟಿಆರ್‌ಐ ನಿಂದ ಒಡಿಶಾದ ಜನರಿಗೆ 2.5 ಟನ್ ಆಹಾರ ರವಾನೆ

    ಸಿಎಫ್‌ಟಿಆರ್‌ಐ ನಿಂದ ಒಡಿಶಾದ ಜನರಿಗೆ 2.5 ಟನ್ ಆಹಾರ ರವಾನೆ

    ಮೈಸೂರು: ಪೂರ್ವ ಕರಾವಳಿ ರಾಜ್ಯಗಳಲ್ಲಿ ಫೋನಿ ಚಂಡಮಾರುತ ಎಫೆಕ್ಟ್ ಹಿನ್ನಲೆಯಲ್ಲಿ ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ(ಸಿಎಫ್‌ಟಿಆರ್‌ಐ) ತುರ್ತು ಆಹಾರವನ್ನು ರವಾನಿಸಿದೆ.

    ಒಡಿಶಾದ 1 ಲಕ್ಷ ಮಂದಿಗೆ ಆಗುವಷ್ಟು ಆಹಾರ ಪೂರೈಕೆ ಮಾಡಲಾಗಿದ್ದು, ತಕ್ಷಣ ತಿನ್ನುವ ಹಾಗೂ ಬೇಯಿಸಿ ತಿನ್ನುವ ಆಹಾರ ಪೊಟ್ಟಣಗಳನ್ನು ಕಳುಹಿಸಲಾಗಿದೆ. ಕಳೆದ ಎರಡು ದಿನಗಳಿಂದ ಹಗಲಿರುಳು ದುಡಿದ ಸಿಎಫ್‌ಟಿಆರ್‌ಐ ಸಿಬ್ಬಂದಿ ಭಾನುವಾರ ರಾತ್ರಿ ಒಂದು ಕಂಟೈನರ್, ಇಂದು ಮತ್ತೊಂದು ಕಂಟೈನರ್ ನಲ್ಲಿ ಒಟ್ಟು 2.5 ಟನ್ ತೂಕದ ಆಹಾರವನ್ನು ಸಾಗಿಸಿದ್ದಾರೆ.

    ಏರ್ ಇಂಡಿಯಾದ ಮೂಲಕ ಸಿಎಫ್‌ಟಿಆರ್‌ಐ ಆಹಾರವನ್ನು ಒಡಿಶಾಕ್ಕೆ ತಲುಪಿಸಲಾಗಿದೆ. ತಕ್ಷಣ ತಯಾರಿಸಿ ತಿನ್ನುವ ಅವಲಕ್ಕಿ, ಉಪ್ಪಿಟ್ಟು, ರೇಡಿ ಟು ಈಟ್ ಉಪ್ಮ, ದೀರ್ಘಕಾಲ ಇಡಬಹುದಾದ ಚಪಾತಿ, ಟೋಮ್ಯಾಟೋ ಚಟ್ನಿ ಹಾಗೂ ಹೈಪ್ರೋಟಿನ್ ಒಂದು ಹೊತ್ತಿನ ಆಹಾರ ಸಮಾನದ ಬಿಸ್ಕೆಟ್ ಪ್ಯಾಕ್‍ಗಳನ್ನು ರವಾನಿಸಲಾಗಿದೆ.

  • ನವೀನ್ ಪಟ್ನಾಯಕ್ ಅದ್ಭುತ ಕೆಲಸ ಮಾಡಿದ್ದಾರೆ: ಮೋದಿ ಪ್ರಶಂಸೆ

    ನವೀನ್ ಪಟ್ನಾಯಕ್ ಅದ್ಭುತ ಕೆಲಸ ಮಾಡಿದ್ದಾರೆ: ಮೋದಿ ಪ್ರಶಂಸೆ

    – ಒಡಿಶಾದಲ್ಲಿ ಪ್ರಧಾನಿಯಿಂದ ವೈಮಾನಿಕನ ವೀಕ್ಷಣೆ

    ಭುವನೇಶ್ವರ್: ಫೋನಿ ಚಂಡಮಾರುತದ ಉಂಟಾಗಬಹುದಾಗಿದ್ದ ಭಾರೀ ಹಾನಿಯನ್ನು ತಡೆಗಟ್ಟುವಲ್ಲಿ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅದ್ಭುತ ಕೆಲಸ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ವೈಮಾನಿಕ ವೀಕ್ಷಣೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಧಾನಿ ಅವರು, ಒಡಿಶಾದ ಜನತೆ, ಅದರಲ್ಲೂ ಮೀನುಗಾರರು ಸರ್ಕಾರದ ಮುನ್ಸೂಚನೆಯನ್ನು ಪಾಲಿಸಿದ್ದಾರೆ. ಹೀಗಾಗಿ ಪ್ರಾಣಹಾನಿ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರದ ಸೂಚನೆಯನ್ನು ಪಾಲಿಸಿದ ಜನತೆಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು.

    ಸಂತ್ರಸ್ತರಿಗೆ ಆಹಾರ, ವಸತಿ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸುವ ಕೆಲಸ ನಡೆಯುತ್ತಿದೆ. ಒಡಿಶಾ ಸರ್ಕಾರಕ್ಕೆ ಕೇಂದ್ರದಿಂದ ಈಗಾಗಲೇ 1 ಸಾವಿರ ಕೋಟಿ ರೂ. ಸಹಾಯ ನೀಡಲಾಗಿದೆ. ಹೆಚ್ಚುವರಿಯಾಗಿ 1 ಸಾವಿರ ಕೋಟಿ ರೂ. ನೀಡಲಾಗುತ್ತದೆ. ರಕ್ಷಣಾ ಪಡೆ ಸೇರಿದಂತೆ ಎಲ್ಲ ರೀತಿಯ ಸಹಾಯವನ್ನು ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದರು.

    ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು, ಒಡಿಶಾ ರಾಜ್ಯಪಾಲ ಗಣೇಶಿ ಲಾಲ್, ಸಿಎಂ ನವೀನ್ ಪಟ್ನಾಯಕ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ರಾಜ್ಯ ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.

    ಫೋನಿ ಚಂಡಮಾರುತದ ಅಬ್ಬರಕ್ಕೆ ಒಡಿಶಾ ಕರಾವಳಿ ಪ್ರದೇಶದಲ್ಲಿ ಭಾರೀ ಹಾನಿಯಾಯಾಗಿದ್ದು, 30 ಜನರು ಮೃತಪಟ್ಟಿದ್ದಾರೆ. ಪುರಿ ಜಿಲ್ಲೆಯೊಂದರಲ್ಲಿಯೇ 21 ಮಂದಿ ಸಾವನ್ನಪ್ಪಿದ್ದಾರೆ.

    ಫೋನಿ ಚಂಡಮಾರುತವು ಪ್ರತಿ ಗಂಟೆಗೆ 175 ಕಿ.ಮೀ ವೇಗ ಬೀಸಿತ್ತು. ಈ ಮೂಲಕ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಕೂಡ ಆಗಿದೆ. ಕಳೆದ 20 ವರ್ಷಗಳಲ್ಲಿ ಭಾರತಕ್ಕೆ ಅಪ್ಪಳಿಸಿದ ಅತ್ಯಂತ ಪ್ರಬಲ ಚಂಡಮಾರುತ ಇದಾಗಿದೆ.

    ಒಡಿಶಾದ ಸಂತ್ರಸ್ತರಿಗೆ ಪುನರ್ವಸತಿ ಹಾಗೂ ಪರಿಹಾರ ಕಾರ್ಯಕ್ಕೆ ಅನೇಕರು ಸಹಾಯ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಉತ್ತರ ಪ್ರದೇಶ ಹಾಗೂ ತಮಿಳುನಾಡು ಸರ್ಕಾರವು ತಲಾ 10 ಕೋಟಿ ರೂ. ಪರಿಹಾರ ಘೋಷಣೆ ಮಾಡಿದೆ.

  • ಫೋನಿ ಚಂಡಮಾರುತ ಅಬ್ಬರ ಅಂಡಮಾನ್-ನಿಕೋಬಾರ್‌ನಲ್ಲಿ ಕನ್ನಡಿಗರ ಪರದಾಟ

    ಫೋನಿ ಚಂಡಮಾರುತ ಅಬ್ಬರ ಅಂಡಮಾನ್-ನಿಕೋಬಾರ್‌ನಲ್ಲಿ ಕನ್ನಡಿಗರ ಪರದಾಟ

    ಚಿಕ್ಕಬಳ್ಳಾಪುರ: ಫೋನಿ ಚಂಡಮಾರುತದ ಅಬ್ಬರಕ್ಕೆ ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ 70 ಮಂದಿ ಕನ್ನಡಿಗರು ಪರದಾಡುವಂತಾಗಿದೆ.

    ಏಪ್ರಿಲ್ 29ರಂದು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಮೂಲೆಗಳಿಂದ ಅಂಡಮಾನ್- ನಿಕೋಬಾರ್ ದ್ವೀಪಕ್ಕೆ ಪ್ರವಾಸ ಕೈಗೊಂಡಿದ್ದರು. ಆದರೆ ಪ್ರವಾಸ ಮುಗಿಸಿ ಇಂದು ವಾಪಾಸ್ಸಾಗಲು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯಲ್ಲಿ ಟಿಕೆಟ್ ಸಹ ಬುಕ್ ಮಾಡಿದ್ದರು.

    ಫೋನಿ ಸೈಕ್ಲೋನ್ ಭೀತಿಯಿಂದ ಅಂಡಮಾನ್ – ನಿಕೋಬಾರ್ ನ ಪೋರ್ಟ್ ಬ್ಲೇರ್ ನ ವೀರ ಸಾವರ್ಕರ್ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ರದ್ದುಪಡಿಸಲಾಗಿದೆ. ಹೀಗಾಗಿ ಕರ್ನಾಟಕಕ್ಕೆ ವಾಪಾಸ್ಸಾಗಲು ಬೇರೆ ದಾರಿ ಕಾಣದ ಕನ್ನಡಿಗರು ಪರದಾಡುತ್ತಿದ್ದಾರೆ.

    ಸದ್ಯ ಪೋರ್ಟ್ ಬ್ಲೇರ್ ಏರ್ ಪೋರ್ಟ್ ನಲ್ಲಿ ಕಾಲ ಕಳೆಯುತ್ತಿರುವ ಕನ್ನಡಿಗರಿಗೆ ಉಳಿದುಕೊಳ್ಳಲು ಸಹ ಬೇರೆ ದಾರಿ ಇಲ್ಲವಾಗಿದೆ. 70 ಮಂದಿಯಲ್ಲಿ ವೃದ್ಧರು ಮಕ್ಕಳು ಸಹ ಇದ್ದು ಊಟ ತಿಂಡಿಗೂ ಕಷ್ಟಪಡುವಂತಾಗ್ತಿದೆ. ರಾಜ್ಯ ಸರ್ಕಾರ ಸಹಾಯಕ್ಕೆ ಧಾವಿಸುವಂತೆ ಪಬ್ಲಿಕ್ ಟಿವಿಗೆ ಕರೆ ಮಾಡಿ ಕನ್ನಡಿಗರು ಮನವಿ ಮಾಡಿಕೊಂಡಿದ್ದಾರೆ.

  • ಮಗುವಿಗೆ `ಫೋನಿ’ ಎಂದು ಹೆಸರಿಟ್ಟ ದಂಪತಿ

    ಮಗುವಿಗೆ `ಫೋನಿ’ ಎಂದು ಹೆಸರಿಟ್ಟ ದಂಪತಿ

    ಭುವನೇಶ್ವರ್: ಚಂಡಮಾರುತ ಸಮಯದಲ್ಲಿ ಹುಟ್ಟಿದ್ದ ಹೆಣ್ಣು ಮಗುವಿಗೆ ದಂಪತಿ `ಫೋನಿ’ ಎಂದು ಹೆಸರಿಟ್ಟಿದ್ದಾರೆ.

    ಒಡಿಶಾದ ಭುವನೇಶ್ವರ್ ನಲ್ಲಿ ಶುಕ್ರವಾರ 11.03ರ ಸುಮಾರಿಗೆ ರೈಲ್ವೇ ಆಸ್ಪತ್ರೆಯಲ್ಲಿ ಹೆಣ್ಣು ಮಗು ಜನಿಸಿದೆ. ಮಹಿಳೆ ರೈಲ್ವೆ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಚಂಡಮಾರುತಕ್ಕೆ ಫೋನಿ ಹೆಸರು ಬಂದಿದ್ದು ಹೇಗೆ?

    ಮಾಧ್ಯಮ ಸಂಸ್ಥೆಯೊಂದು ವೈದ್ಯರ ಜೊತೆ ಇರುವ ಮಗುವಿನ ಫೋಟೋ ಹಾಕಿ ಟ್ವೀಟ್ ಮಾಡಿದೆ. “32 ವರ್ಷದ ಮಹಿಳೆ ಸುಮಾರು 11.03ಕ್ಕೆ ರೈಲ್ವೆ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ `ಫೋನಿ’ ಎಂದು ಹೆಸರಿಟ್ಟಿದ್ದಾರೆ. ಮಹಿಳೆ ರೈಲ್ವೆ ಸಿಬ್ಬಂದಿಯಾಗಿದ್ದು, ಸದ್ಯ ತಾಯಿ ಹಾಗೂ ಮಗು ಕ್ಷೇಮವಾಗಿದ್ದಾರೆ” ಎಂದು ಬರೆದುಕೊಂಡಿದೆ.

    ಈ ಟ್ವೀಟ್‍ಗೆ ರೀ-ಟ್ವೀಟ್ ಮಾಡುವ ಮೂಲಕ ಹಲವು ಜನ ಮಗುವನ್ನು ಸ್ವಾಗತಿಸಿದ್ದಾರೆ. ಅಲ್ಲದೆ ಕೆಲವರು ಮಗುವಿಗೆ ಫೋನಿ ಎಂದು ಹೆಸರು ಇಡಬಾರದಿತ್ತು. ಏಕೆಂದರೆ ಫೋನಿ ಎಂದರೆ ಹಾವು ಎಂದರ್ಥ ಎಂದು ಹೇಳಿ ರೀ-ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪ್ರಚಂಡ ಮಾರುತಕ್ಕೆ ಒಡಿಶಾ ತತ್ತರ – 8 ಸಾವು, ಆಸ್ತಿ-ಪಾಸ್ತಿ ನಷ್ಟ ಲೆಕ್ಕಕ್ಕೇ ಸಿಗ್ತಿಲ್ಲ

    ಪಶ್ಚಿಮ ಬಂಗಾಳದಲ್ಲೂ 100ರಿಂದ 110 ಕಿ.ಮೀ ವೇಗದಲ್ಲಿ ಫೋನಿ ಚಂಡಮಾರುತ ಅಪ್ಪಳಿಸಿದೆ. ಪೂರ್ವ ಮತ್ತು ಪಶ್ಚಿಮ ಮಿಡ್ನಾಪುರ್, ದಕ್ಷಿಣ ಮತ್ತು ಉತ್ತರ 24 ಪರಗಣ, ಹೌರಾ, ಹೂಗ್ಲಿ, ಜಾಗ್ರಾಂ, ಕೋಲ್ಕತ್ತಾದಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ. ಕೋಲ್ಕತ್ತಾ ಏರ್ ಪೋರ್ಟ್ ನಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಬೆಳಗ್ಗೆ 11.30ರವರೆಗೆ ಅತ್ಯಂತ ಭೀಕರ ಸ್ಥಿತಿಯಲ್ಲಿರುವ ಫೋನಿ ಚಂಡಮಾರುತ, ರಾತ್ರಿ 11.30ರ ವೇಳೆಗೆ ತೀವ್ರ ಸ್ಥಿತಿಗೆ ತನ್ನ ಅಬ್ಬರವನ್ನ ತಗ್ಗಿಸಲಿದೆ ಎಂಬುದಾಗಿ ತಿಳಿದುಬಂದಿದೆ.

  • ಚಂಡಮಾರುತಕ್ಕೆ ಫೋನಿ ಹೆಸರು ಬಂದಿದ್ದು ಹೇಗೆ?

    ಚಂಡಮಾರುತಕ್ಕೆ ಫೋನಿ ಹೆಸರು ಬಂದಿದ್ದು ಹೇಗೆ?

    ನವದೆಹಲಿ: ಒಡಿಶಾ ತೀರಕ್ಕೆ ಫೋನಿ ಚಂಡಮಾರುತ ಶುಕ್ರವಾರ ಬೆಳಗ್ಗೆ ಅಪ್ಪಳಿಸಿದೆ. ಗಂಟೆಗೆ 200 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುತ್ತಿದ್ದು ಜನ ತತ್ತರಿಸಿ ಹೋಗಿದ್ದಾರೆ. ಈ ಚಂಡಮಾರುತಕ್ಕೆ ಫೋನಿ ಎಂದು ಹೆಸರನ್ನು ನೀಡಿದ್ದು ಬಾಂಗ್ಲಾದೇಶ. ಸಂಸ್ಕøತದಲ್ಲಿ ಫಣಿ ಎಂದರೆ ಹಾವಿನ ಹೆಡೆ ಎಂದು ಕರೆಯಲಾಗುತ್ತದೆ. ಬಂಗಾಳಿ ಭಾಷಿಯಲ್ಲಿ ಫಣಿಯನ್ನು ಫೋನಿ ಎಂದು ಉಚ್ಛಾರ ಮಾಡಲಾಗುತ್ತದೆ. ಈ ಕಾರಣಕ್ಕೆ ಈ ಚಂಡಮಾರುತಕ್ಕೆ ಫೋನಿ ಹೆಸರನ್ನು ಇಡಲಾಗಿದೆ.

    ಈ ಚಂಡ ಮಾರುತಕ್ಕೆ ಬಾಂಗ್ಲಾ ನೀಡಿದ ಹೆಸರನ್ನು ಯಾಕೆ ಇಡಬೇಕು? ಭಾರತಕ್ಕೆ ಅಪ್ಪಳಿಸಿದ ಈ ಚಂಡಮಾರುತಕ್ಕೆ ಭಾರತದ ಹೆಸರು ನೀಡಬಹುದಲ್ಲವೇ ಎನ್ನುವ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಸಿಗಬೇಕಾದರೆ ಜಾಗತಿಕ ಹವಾಮಾನ ಸಂಸ್ಥೆ ರೂಪಿಸಿ ವ್ಯವಸ್ಥೆಯನ್ನು ತಿಳಿದುಕೊಂಡರೆ ಚಂಡಮಾರುತಕ್ಕೆ ಯಾಕೆ ಈ ಹೆಸರು ಬಂದಿದೆ ಎನ್ನುವುದನ್ನು ತಿಳಿದುಕೊಳ್ಳಬಹುದು.

    ಹೆಸರು ಹೇಗೆ ನೀಡಲಾಗುತ್ತದೆ?
    ಜಾಗತಿಕ ಹವಾಮಾನ ಸಂಸ್ಥೆ ಒಂದು ವ್ಯವಸ್ಥೆ ರೂಪಿಸಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಳ್ಳುವ ಉಷ್ಣ ವಲಯದ ಚಂಡಮಾರುತಕ್ಕೆ ಈ ಪ್ರದೇಶದಲ್ಲಿರುವ ಭಾರತ, ಶ್ರೀಲಂಕಾ, ಮಾಲ್ದೀವ್ಸ್, ಮ್ಯಾನ್ಮಾರ್, ಓಮನ್, ಪಾಕಿಸ್ತಾನ ಬಾಂಗ್ಲಾದೇಶ ಮತ್ತು ಥಾಯ್ಲೆಂಡ್ ದೇಶಗಳು ಹೆಸರನ್ನು ಆಯ್ಕೆ ಮಾಡಿ ಉಷ್ಣ ವಲಯದ ಪ್ರಾದೇಶಿಕ ಚಂಡಮಾರುತ ಸಮಿತಿಗೆ ಕಳುಹಿಸುತ್ತವೆ. ಈ ದೇಶಗಳು ಕಾಲ ಕಾಲಕ್ಕೆ ಒಂದೊಂದು ಹೆಸರನ್ನು ಶಿಫಾರಸು ಮಾಡಬೇಕಾಗುತ್ತದೆ. ಈ ಹೆಸರುಗಳ ಪಟ್ಟಿಯಿಂದ ಚಂಡಮಾರುತದ ಹೆಸರನ್ನು ಆಯ್ಕೆ ಮಾಡಲಾಗುತ್ತದೆ. ಈ ಎಂಟು ರಾಷ್ಟ್ರಗಳು ತಲಾ ಎಂಟು ಹೆಸರುಗಳನ್ನು ಕಳುಹಿಸಿದ್ದು, ಈ 64 ಹೆಸರುಗಳ ಪಟ್ಟಿಯಿಂದ ಈ ಬಾರಿ ಫೋನಿ ಹೆಸರನ್ನು ಆಯ್ಕೆ ಮಾಡಲಾಗಿದೆ.

    2018ರಲ್ಲಿ ತಿತ್ಲಿ ಚಂಡಮಾರುತ ಆಂಧ್ರ ಮತ್ತು ಒಡಿಶಾಕ್ಕೆ ಅಪ್ಪಳಿಸಿತ್ತು. ಈ ಹೆಸರನ್ನು ಪಾಕಿಸ್ತಾನ ನೀಡಿತ್ತು. 2017ರಲ್ಲಿ ಓಖಿ ಚಂಡಮಾರುತವು ಕೇರಳ ಮತ್ತು ತಮಿಳುನಾಡಿನಲ್ಲಿ ಹಾನಿ ಮಾಡಿತ್ತು. ಓಖಿ ಹೆಸರನ್ನು ಬಾಂಗ್ಲಾದೇಶ ನೀಡಿತ್ತು.

    ಭಾರತ ಅಗ್ನಿ, ಆಕಾಶ, ಬಿಜ್ಲಿ, ಜಲ, ಲೆಹರ್, ಮೇಘ, ಸಾಗರ್ ಹೆಸರನ್ನು ಶಿಫಾರಸು ಮಾಡಿದೆ. ಮುಂದಿನ ಚಂಡಮಾರುತಕ್ಕೆ ಭಾರತ ಶಿಫಾರಸು ಮಾಡಿರುವ ‘ವಾಯು’ ಹೆಸರನ್ನು ಇಡಲಾಗುತ್ತದೆ.


    ಹೆಸರು ಇಡೋದು ಯಾಕೆ?
    ಚಂಡಮಾರುತ ಪ್ರತಿ ವರ್ಷ ಬರುತ್ತಲೇ ಇರುತ್ತದೆ. ಆದರೆ ಯಾವ ಚಂಡಮಾರುತ ಎಂದು ಸುಲಭವಾಗಿ ನೆನಪಿನಲ್ಲಿರಲು ಇವುಗಳಿಗೆ ಹೆಸರನ್ನು ನೀಡಲಾಗುತ್ತದೆ. ಅಷ್ಟೇ ಅಲ್ಲದೇ ಈ ಹಿಂದಿನ ಚಂಡಮಾರುತಕ್ಕೂ ಹೋಲಿಕೆ ಮಾಡಿ ಹಾನಿಯನ್ನು ಅಂದಾಜು ಮಾಡಲು ಆಗುತ್ತದೆ.

  • ಪ್ರಚಂಡ ಫೋನಿಗೆ ಐವರು ಬಲಿ, ತರಗೆಲೆಯಂತಾದ ಮರಗಳು – ವಿಡಿಯೋ ನೋಡಿ

    ಪ್ರಚಂಡ ಫೋನಿಗೆ ಐವರು ಬಲಿ, ತರಗೆಲೆಯಂತಾದ ಮರಗಳು – ವಿಡಿಯೋ ನೋಡಿ

    – 15 ಜಿಲ್ಲೆಗಳ 12 ಲಕ್ಷ ಮಂದಿ ಸ್ಥಳಾಂತರ
    – 10 ಸಾವಿರ ಗ್ರಾಮದ ಮೇಲೆ ಪರಿಣಾಮ

    ಭುವನೇಶ್ವರ: ನಿರೀಕ್ಷೆಯಂತೆ ಫೋನಿ ಚಂಡ ಮಾರುತ ಇಂದು ಬೆಳಗ್ಗೆ 9 ಗಂಟೆಯ ವೇಳೆ ಪುರಿ ಸಮುದ್ರ ತೀರಕ್ಕೆ ಅಪ್ಪಳಿಸಿದೆ. ಗಂಟೆಗೆ 170ರಿಂದ 180 ಕಿಲೋ ಮೀಟರ್, ಗರಿಷ್ಠ 200 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುತ್ತಿದೆ. ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಹೈ ಅಲರ್ಟ್ ಘೋಷಣೆಯಾಗಿದ್ದು, 5 ಮಂದಿ ಮೊದಲ ದಿನವೇ ಬಲಿಯಾಗಿದ್ದಾರೆ.

    ಪ್ರಚಂಡ ಬಿರುಗಾಳಿಗೆ ತರಗೆಲೆಯಂತಾದ ಮರಗಳು, ಕರೆಂಟ್ ಕಂಬಗಳು ಪುರಿ ರಸ್ತೆಗೆ ಉರುಳಿ ಬಿದ್ದಿವೆ. ಇನ್ನೂ ಸಣ್ಣ ಪುಟ್ಟ ವಸ್ತುಗಳೆಲ್ಲಾ ಆಗಸದಲ್ಲಿ ಹಾರುತ್ತಿವೆ. ಸುಮಾರು 10 ಸಾವಿರ ಗ್ರಾಮಗಳಲ್ಲಿ ಫೋನಿ ಎಫೆಕ್ಟ್ ಆಗುತ್ತಿದೆ. ಸಮುದ್ರದಲ್ಲಿ ರಕ್ಕಸ ಗಾತ್ರದ ಅಲೆಗಳು ಏಳುತ್ತಿದೆ.

    ಮುನ್ನೆಚ್ಚರಿಕಾ ಕ್ರಮವಾಗಿ ಸಮುದ್ರ ತೀರದಲ್ಲಿರುವ 15 ಜಿಲ್ಲೆಗಳ ಸುಮಾರು 12 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದೆ. ಜನರು ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದೇ ಒಬ್ಬೊಬ್ಬರ ಕೈಯನ್ನು ಹಿಡಿದುಕೊಂಡು ತಮ್ಮ ಮನೆಗೆ ಸೇರಿಕೊಳ್ಳುತ್ತಿದ್ದಾರೆ.

    ರಣಭೀಕರ ಬಿರುಗಾಳಿಗೆ ಧಾರಾಕಾರ ಮಳೆಯಾಗುತ್ತಿದ್ದು, ಕಬ್ಬಿಣದ ವಸ್ತುಗಳು, ಮರಗಳು ಸುಲಭವಾಗಿ ತೇಲಿಕೊಂಡು ಹೋಗುತ್ತಿದೆ. 1999ರ ನಂತರ ಒಡಿಶಾದಲ್ಲಿ ಇಷ್ಟೊಂದು ಪ್ರಮಾಣದ ಗಾಳಿಯೊಂದಿಗೆ ಮಳೆಯಾಗುತ್ತಿದೆ ಎಂದು ಅಲ್ಲಿನ ಜನತೆ ಪ್ರತಿಕ್ರಿಯೆ ನೀಡಿದ್ದಾರೆ.

    ಒಡಿಶಾ-ಆಂಧ್ರ ಕರಾವಳಿ ತೀರದಲ್ಲಿ ಸಂಚರಿಸುವ 103 ರೈಲು ಸೇವೆಯನ್ನು ರದ್ದು ಮಾಡಲಾಗಿದೆ. ಜೊತೆಗೆ ವಿಮಾನ ಹಾರಾಟವನ್ನು ಬಂದ್ ಮಾಡಲಾಗಿದೆ. ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 18 ಗಂಟೆಗಳ ಕಾಲ ಎಲ್ಲ ವಿಮಾನಗಳ ಹಾರಾಟವನ್ನು ಬಂದ್ ಮಾಡಲಾಗಿದೆ. ನೌಕಾದಳ, ವಾಯುಸೇನೆ, ಕರಾವಳಿ ಭದ್ರತಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳಿಂದ ಜನರ ರಕ್ಷಣಾ ಕಾರ್ಯ ನಡೆಸುತ್ತಿದೆ.