Tag: ಫ್ಯಾನ್ಸ್ ವಾರ್

  • ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

    ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

    ಕೆಜಿಎಫ್ 2 ಸಿನಿಮಾ ವಿಶ್ವದಾದ್ಯಂತ ಭಾರೀ ಯಶಸ್ಸು ಗಳಿಸುತ್ತಿದ್ದಂತೆಯೇ ಸಿನಿಮಾ ರಂಗದಲ್ಲಿ ಇದೀಗ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಯಶ್ ನಟನೆಯ ಕೆಜಿಎಫ್ 2 ಸಿನಿಮಾ ಹಲವು ದಾಖಲೆಗಳನ್ನು ಬರೆದಿದೆ. ಅವುಗಳನ್ನು ಸ್ವತಃ ನಿರ್ಮಾಣ ಸಂಸ್ಥೆಯೇ ಹೇಳಿಕೊಂಡಿದೆ. ಹೀಗಾಗಿ ಕನ್ನಡ ಸಿನಿಮಾ ರಂಗವನ್ನು ರಾಷ್ಟ್ರ ಮಟ್ಟಕ್ಕೆ ತಗೆದುಕೊಂಡು ಹೋದ ಶ್ರೇಯಸ್ಸು ಕೆಜಿಎಫ್ 2 ಸಿನಿಮಾಗೆ ಸೇರುತ್ತದೆ ಎಂದೇ ಬಣ್ಣಿಸಲಾಗುತ್ತಿದೆ. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

    ಈ ನಡುವೆ ಜಗ್ಗೇಶ್ ಕನ್ನಡ ಸಿನಿಮಾ ರಂಗವನ್ನು ರಾಷ್ಟ್ರಮಟ್ಟಕ್ಕೆ ಮೊದಲ ಬಾರಿಗೆ ತಗೆದುಕೊಂಡು ಹೋದ ನಟನ ಬಗ್ಗೆ ಮಾತಾಡಿದ್ದಾರೆ. ಈ ಮಾತು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಜಗ್ಗೇಶ್ ಆ ರೀತಿ ಮಾತನಾಡಿರುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಮಾತನಾಡಿದ ಗಳಿಗೆ ಸರಿಯಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

    ಕೆಜಿಎಫ್ 2 ಸಿನಿಮಾವನ್ನು ಕೇವಲ ದಕ್ಷಿಣದವರು ಮಾತ್ರವಲ್ಲ, ಬಾಲಿವುಡ್ ನಟ ನಟಿಯರೇ ಹಾಡಿಹೊಗಳುತ್ತಿದ್ದಾರೆ. ಹೀಗಾಗಿ ಕನ್ನಡ ಸಿನಿಮಾವನ್ನು ಯಶ್ ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದರು ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಮೊದಲ ಬಾರಿಗೆ ಸಿನಿಮಾ ರಂಗವನ್ನು ರಾಷ್ಟ್ರಮಟ್ಟಕ್ಕೆ ಪರಿಚಯಿಸಿದವರು ಮತ್ತು ಹಲವಾರು ದಾಖಲೆಗಳನ್ನು ಮಾಡಿದವರು ಡಾ.ವಿಷ್ಣುವರ್ಧನ್ ಎಂದು ಹಲವರು ಸಾಕ್ಷಿ ಸಮೇತ ಬರೆದುಕೊಂಡಿದ್ದಾರೆ. ಅಲ್ಲದೇ, ಕನ್ನಡದಲ್ಲಿ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದು ಡಾ.ರಾಜ್ ಕುಮಾರ್ ಎಂದೂ ದಾಖಲಾಗಿದೆ. ಇದನ್ನೂ ಓದಿ : ಗಮನ ಸೆಳೆದ ‘ಒಂದಂಕೆ ಕಾಡು’ ಮೋಷನ್ ಪೋಸ್ಟರ್

    ಇಷ್ಟೊಂದು ಚರ್ಚೆ ಆಗುತ್ತಿರುವ ಈ ಹೊತ್ತಿನಲ್ಲ, ಮೊದಲ ಬಾರಿಗೆ ಕನ್ನಡ ಸಿನಿಮಾ ರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು  ಹೋಗಿದ್ದು ಕಿಚ್ಚ ಸುದೀಪ್ ಎಂದು ಹೇಳುವ ಮೂಲಕ ಜಗ್ಗೇಶ್ ತಮ್ಮ ಪ್ರೀತಿಯನ್ನು ಸುದೀಪ್ ಮೇಲೆ ತೋರಿದ್ದಾರೆ. ಆದರೆ, ಈ ಮಾತೇ ಈಗ ಮತ್ತೊಂದು ಚರ್ಚೆಗೆ ನಾಂದಿ ಹಾಡಿದೆ. ತೋತಾಪುರಿ ಸಿನಿಮಾದ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಜಗ್ಗೇಶ್ ಇಂಥದ್ದೊಂದು ಮಾತು ಹೇಳುವ ನಡೆಯುತ್ತಿರುವ ಚರ್ಚೆಗೆ ಮತ್ತಷ್ಟು ವೇಗ ಕೊಟ್ಟಿದ್ದಾರೆ. ಇದನ್ನೂ ಓದಿ : Love…ಲಿ ಅಂತಿದ್ದಾರೆ ಆಂಗ್ರಿ ಯಂಗ್ ಮ್ಯಾನ್ ವಸಿಷ್ಠ ಸಿಂಹ: ಚಿಟ್ಟೆ ನ್ಯೂ ಲುಕ್‌ ಹೇಗಿದೆ ಗೊತ್ತಾ?

    ಈಗಾಗಲೇ ಸುದೀಪ್ ಅವರು ಕೆಜಿಎಫ್ 2 ಸಿನಿಮಾಗೆ ವಿಶ್ ಮಾಡಲಿಲ್ಲ ಎನ್ನುವ ಕಾರಣ ಇಟ್ಟುಕೊಂಡು ವಿವಾದ ಮಾಡಲಾಗಿದೆ. ನಾನು ಮಾತಾಡಿದರೂ ಸುದ್ದಿ ಆಗ್ತೀನಿ, ಡೈಲಾಗ್ ಹೊಡೆದರೂ ಸುದ್ದಿ ಆಗುತ್ತೇನೆ ಎಂದು ಹೇಳುವ ಮೂಲಕ ಕಿಚ್ಚ ಸುದೀಪ್ ವಿವಾದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ನಡುವೆ ಜಗ್ಗೇಶ್ ಆಡಿದ ಈ ಮಾತು ಇನ್ನ್ಯಾವ ದಿಕ್ಕಿನತ್ತ ಕರೆದುಕೊಂಡು ಹೋಗಲಿದೆಯೋ ಕಾದು ನೋಡಬೇಕು.

  • ಕೆಜಿಎಫ್ 2 ವಿವಾದ:  ನಾಯಿ, ನರಿಗೆಲ್ಲ ಉತ್ತರ ಕೊಡಲ್ಲ ಎಂದ ನಿರ್ಮಾಪಕ ಜಾಕ್ ಮಂಜು

    ಕೆಜಿಎಫ್ 2 ವಿವಾದ: ನಾಯಿ, ನರಿಗೆಲ್ಲ ಉತ್ತರ ಕೊಡಲ್ಲ ಎಂದ ನಿರ್ಮಾಪಕ ಜಾಕ್ ಮಂಜು

    ಕೆಜಿಎಫ್ 2 ಸಿನಿಮಾಗೆ ಕಿಚ್ಚ ಸುದೀಪ್ ವಿಶ್ ಮಾಡಿಲ್ಲ ಎನ್ನುವ ವಿಚಾರ ಮತ್ತು ಕೆಜಿಎಫ್ ಸಿನಿಮಾದ ಪ್ರಶ್ನೆಗೆ ಸುದೀಪ್ ಕೊಟ್ಟಿರುವ ಉತ್ತರದ ವಿಡಿಯೋ ಸ್ಯಾಂಡಲ್ ವುಡ್ ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಯಾರೋ ಕಿಡಿಗೇಡಿಗಳು ಮಾಡಿದ ತಪ್ಪಿನಿಂದಾಗಿ ಇಬ್ಬರು ಸ್ಟಾರ್ ನಟರ ಅಭಿಮಾನಿಗಳು ಕಿತ್ತಾಡುವಂತಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜತೆ ಮಾತನಾಡಿರುವ ನಿರ್ಮಾಪಕ ಮತ್ತು ಸುದೀಪ್ ಆಪ್ತರಾರ ಜಾಕ್ ಮಂಜು ಗರಂ ಆಗಿಯೇ ಉತ್ತರ ಕೊಟ್ಟಿದ್ದಾರೆ. ‘ಯಾರೋ ನಾಯಿ ನರಿಗೆಲ್ಲ ಉತ್ತರ ಕೊಡಲಿಕ್ಕೆ ಆಗದು’ ಎಂದು ಖಡಕ್ಕಾಗಿಯೇ ಅವರು ಉತ್ತರಿಸಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 : ಕಿಚ್ಚ ಸುದೀಪ್ ಮತ್ತು ಯಶ್ ಮಧ್ಯೆ ತಂದಿಡುತ್ತಿದೆ ವೈರಲ್ ವಿಡಿಯೋ

    KGF 2 Yash (4)

    ಯಶ್ ನಟನೆಯ ಕೆಜಿಎಫ್ 2 ಸಿನಿಮಾ ವಿಶ್ವದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ದಕ್ಷಿಣದ ಬಹುತೇಕ ತಾರೆಯರು ಮತ್ತು ಬಾಲಿವುಡ್ ಸಿನಿ ರಂಗ ಕೆಲವು ನಟ ನಟಿಯರು ಸಿನಿಮಾದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಿನಿಮಾದ ಬಗ್ಗೆ ಅಭಿಮಾನದಿಂದ ಬರೆದುಕೊಂಡಿದ್ದಾರೆ. ಆದರೆ, ಕನ್ನಡದ ಕೆಲ  ನಟರು ಕೆಜಿಎಫ್ 2 ಸಿನಿಮಾದ ಬಗ್ಗೆ ಒಂದು ಪೋಸ್ಟ್ ಕೂಡ ಮಾಡಿಲ್ಲ ಎನ್ನುವುದು ಹಲವು ಅಭಿಮಾನಿಗಳ ತಕರಾರು. ಅದಕ್ಕೆ ಗುರಿಯಾಗಿದ್ದು ಕಿಚ್ಚು ಸುದೀಪ್. ಇದನ್ನೂ ಓದಿ : ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಹಾರಿದ ಗುಂಡು- ಯುವಕನ ಹೊಟ್ಟೆಗೆ ಗಾಯ

    ನೆನ್ನೆಯಷ್ಟೇ ಸುದೀಪ್ ಅವರು ಎಂದೋ ಆಡಿದ  ಐದತ್ತು ಸೆಕೆಂಡುಗಳು ವಿಡಿಯೋ ಕ್ಲಿಪ್ ಅನ್ನು ಇಟ್ಟುಕೊಂಡು ಕಿಚ್ಚನ ಬಗ್ಗೆ ಸಲ್ಲದ ಕಾಮೆಂಟ್ ಮಾಡಲಾಗುತ್ತಿದೆ. ಅದಕ್ಕೆ ಪ್ರತಿಯಾಗಿ ಸುದೀಪ್ ಅವರ ಅಭಿಮಾನಿಗಳು ಕೂಡ ಕೌಂಟರ್ ಕಾಮೆಂಟ್ ನೀಡುತ್ತಿದ್ದಾರೆ. ನಿನ್ನೆಯಿಂದ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಫ್ಯಾನ್ಸ್ ವಾರ್ ಶುರು ಮಾಡಿದೆ. ಇದನ್ನೂ ಓದಿ: ತಾಯಿಯಾಗುತ್ತಿದ್ದಾರೆ ಚಂದ್ರನ ರಾಣಿ ಶ್ರಿಯಾ ಸರನ್ 

    ಸದ್ಯ ಹರಿದಾಡುತ್ತಿರುವ ವಿಡಿಯೋ ಕ್ಲಿಪ್ ನಲ್ಲಿ ಪತ್ರಕರ್ತರೊಬ್ಬರು ‘ಕೆಜಿಎಫ್’ ಬಗ್ಗೆ ಹೇಳಿ ಎಂದು ಕೇಳುತ್ತಾರೆ. ‘ನಾನು ಆ ಸಿನಿಮಾದಲ್ಲಿ ಇಲ್ಲ’ ಎಂದಷ್ಟೇ ಚುಟುಕಾಗಿ ಸುದೀಪ್ ಉತ್ತರ ಕೊಟ್ಟಿದ್ದಾರೆ. ಅದನ್ನೇ ಹಿಡಿದುಕೊಂಡು ಕೆಲವರು ಕಿಚ್ಚನ ತೇಜೋವಧೆ ಮಾಡುತ್ತಿದ್ದಾರೆ. ಅದಕ್ಕೆ ಉತ್ತರವಾಗಿ ಸುದೀಪ್ ಅಭಿಮಾನಿಗಳು ಕೂಡ ಅಷ್ಟೇ ಖಡಕ್ಕಾಗಿಯೇ ಉತ್ತರ ನೀಡಿದ್ದು, ಈ ಹಿಂದೆ ಸುದೀಪ್ ಅವರು ಕೆಜಿಎಫ್ 1 ಸಿನಿಮಾ ರಿಲೀಸ್ ಆದಾಗ ಟ್ವಿಟ್ ಮಾಡಿರುವ ಸ್ಕ್ರೀನ್ ಶಾಟ್ ಹಾಕಿದ್ದಾರೆ ಅಲ್ಲದೇ ಈ ಹಿಂದೆ ಮತ್ತೊಬ್ಬ ಕನ್ನಡದ ಸ್ಟಾರ್ ನಟನ ಚಿತ್ರಕ್ಕೆ ಸುದೀಪ್ ಶುಭ ಹಾರೈಸಿದಾಗ, ಆ ನಟ ನಡೆದುಕೊಂಡ ರೀತಿಯ ಕುರಿತು ಅಭಿಮಾನಿಗಳು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

    ಸುದೀಪ್ ಕೂಡ ಭಾರತೀಯ ಸಿನಿಮಾ ರಂಗದ ನಟ. ಅವರಿಗೂ ಅಸಂಖ್ಯಾತ ಅಭಿಮಾನಿಗಳು ಇದ್ದಾರೆ. ಅಲ್ಲದೇ, ಗೌರವ ಇಲ್ಲದೇ ಇರುವ ಕಡೆ ಸುದೀಪ್ ಇರುವುದಿಲ್ಲ. ಅದು ಅವರ ಗುಣ. ಪ್ರೀತಿಯಿಂದಲೇ ಎಲ್ಲರನ್ನೂ ಅವರು ಕಾಣುತ್ತಾರೆ. ಸುಮ್ಮನೆ ಕಲಾವಿದರ ಮಧ್ಯೆ ತಂದಿಡುವ ಕೆಲಸ ನಡೆಯುತ್ತಿದೆ ಎಂದು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ ಡಾ.ವಿಷ್ಣು ಸೇನಾಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್. ಅಲ್ಲದೇ ಅನೇಕರು ಈ ಕುರಿತು ಬೇಸರ ವ್ಯಕ್ತ ಪಡಿಸಿದ್ದಾರೆ. ಫ್ಯಾನ್ಸ್ ನಿಂದಾಗಿ ಕಲಾವಿದರಿಗೆ ಮುಜಗರ ಆಗಬಾರದು ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

  • ಕೆಜಿಎಫ್ 2 : ಕಿಚ್ಚ ಸುದೀಪ್ ಮತ್ತು ಯಶ್ ಮಧ್ಯೆ ತಂದಿಡುತ್ತಿದೆ ವೈರಲ್ ವಿಡಿಯೋ

    ಕೆಜಿಎಫ್ 2 : ಕಿಚ್ಚ ಸುದೀಪ್ ಮತ್ತು ಯಶ್ ಮಧ್ಯೆ ತಂದಿಡುತ್ತಿದೆ ವೈರಲ್ ವಿಡಿಯೋ

    ಪುನೀತ್ ರಾಜ್ ಕುಮಾರ್ ನಿಧನದ ನಂತರ ಬಹುತೇಕ ಕಲಾವಿದರ ಅಭಿಮಾನಿಗಳು ಒಂದಾಗಿ ‘ನಾವು ಫ್ಯಾನ್ಸ್ ವಾರ್ ಮಾಡಲ್ಲ’ ಎಂದು ಘೋಷಣೆ ಮಾಡಿದ್ದರು. ಈ ಕುರಿತು ಎಲ್ಲ ಸ್ಟಾರ್ ನಟರ ಫೋಟೋ ಒಳಗೊಂಡ ಪೋಸ್ಟರ್ ಕೂಡ ರಿಲೀಸ್ ಮಾಡಿದ್ದರು. ಈ ಪೋಸ್ಟರ್ ಹಂಚಿಕೊಂಡು ಇನ್ನೂ ಆರು ತಿಂಗಳು ಕಳೆದಿಲ್ಲ ಆಗಲೇ ಮತ್ತೆ ಫ್ಯಾನ್ಸ್ ವಾರ್ ಶುರು ಮಾಡಿಕೊಂಡಿದ್ದಾರೆ. ಕಾರಣ ಸುದೀಪ್ ಅವರು ಕೆಜಿಎಫ್ 2 ಚಿತ್ರಕ್ಕೆ ಶುಭ ಹಾರೈಸಿಲ್ಲ ಎನ್ನುವುದು. ಇದನ್ನೂ ಓದಿ : ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಹಾರಿದ ಗುಂಡು- ಯುವಕನ ಹೊಟ್ಟೆಗೆ ಗಾಯ

    ಯಶ್ ನಟನೆಯ ಕೆಜಿಎಫ್ 2 ಸಿನಿಮಾ ವಿಶ್ವದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ದಕ್ಷಿಣದ ಬಹುತೇಕ ತಾರೆಯರು ಮತ್ತು ಬಾಲಿವುಡ್ ಸಿನಿ ರಂಗ ಕೆಲವು ನಟ ನಟಿಯರು ಸಿನಿಮಾದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಿನಿಮಾದ ಬಗ್ಗೆ ಅಭಿಮಾನದಿಂದ ಬರೆದುಕೊಂಡಿದ್ದಾರೆ. ಆದರೆ, ಕನ್ನಡದ ಕೆಲ  ನಟರು ಕೆಜಿಎಫ್ 2 ಸಿನಿಮಾದ ಬಗ್ಗೆ ಒಂದು ಪೋಸ್ಟ್ ಕೂಡ ಮಾಡಿಲ್ಲ ಎನ್ನುವುದು ಹಲವು ಅಭಿಮಾನಿಗಳ ತಕರಾರು. ಅದಕ್ಕೆ ಗುರಿಯಾಗಿದ್ದು ಕಿಚ್ಚು ಸುದೀಪ್. ಇದನ್ನೂ ಓದಿ: ತಾಯಿಯಾಗುತ್ತಿದ್ದಾರೆ ಚಂದ್ರನ ರಾಣಿ ಶ್ರಿಯಾ ಸರನ್ 

    ನೆನ್ನೆಯಷ್ಟೇ ಸುದೀಪ್ ಅವರು ಎಂದೋ ಆಡಿದ  ಐದತ್ತು ಸೆಕೆಂಡುಗಳು ವಿಡಿಯೋ ಕ್ಲಿಪ್ ಅನ್ನು ಇಟ್ಟುಕೊಂಡು ಕಿಚ್ಚನ ಬಗ್ಗೆ ಸಲ್ಲದ ಕಾಮೆಂಟ್ ಮಾಡಲಾಗುತ್ತಿದೆ. ಅದಕ್ಕೆ ಪ್ರತಿಯಾಗಿ ಸುದೀಪ್ ಅವರ ಅಭಿಮಾನಿಗಳು ಕೂಡ ಕೌಂಟರ್ ಕಾಮೆಂಟ್ ನೀಡುತ್ತಿದ್ದಾರೆ. ನಿನ್ನೆಯಿಂದ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಫ್ಯಾನ್ಸ್ ವಾರ್ ಶುರು ಮಾಡಿದೆ. ಇದನ್ನೂ ಓದಿ: ಮಗಳ ಮದುವೆಯ ಫೋಟೋ ಶೇರ್ ಮಾಡಿ ಭಾವುಕರಾದ ಆಲಿಯಾ ತಾಯಿ

    ಸದ್ಯ ಹರಿದಾಡುತ್ತಿರುವ ವಿಡಿಯೋ ಕ್ಲಿಪ್ ನಲ್ಲಿ ಪತ್ರಕರ್ತರೊಬ್ಬರು ‘ಕೆಜಿಎಫ್’ ಬಗ್ಗೆ ಹೇಳಿ ಎಂದು ಕೇಳುತ್ತಾರೆ. ‘ನಾನು ಆ ಸಿನಿಮಾದಲ್ಲಿ ಇಲ್ಲ’ ಎಂದಷ್ಟೇ ಚುಟುಕಾಗಿ ಸುದೀಪ್ ಉತ್ತರ ಕೊಟ್ಟಿದ್ದಾರೆ. ಅದನ್ನೇ ಹಿಡಿದುಕೊಂಡು ಕೆಲವರು ಕಿಚ್ಚನ ತೇಜೋವಧೆ ಮಾಡುತ್ತಿದ್ದಾರೆ. ಅದಕ್ಕೆ ಉತ್ತರವಾಗಿ ಸುದೀಪ್ ಅಭಿಮಾನಿಗಳು ಕೂಡ ಅಷ್ಟೇ ಖಡಕ್ಕಾಗಿಯೇ ಉತ್ತರ ನೀಡಿದ್ದು, ಈ ಹಿಂದೆ ಸುದೀಪ್ ಅವರು ಕೆಜಿಎಫ್ 1 ಸಿನಿಮಾ ರಿಲೀಸ್ ಆದಾಗ ಟ್ವಿಟ್ ಮಾಡಿರುವ ಸ್ಕ್ರೀನ್ ಶಾಟ್ ಹಾಕಿದ್ದಾರೆ ಅಲ್ಲದೇ ಈ ಹಿಂದೆ ಮತ್ತೊಬ್ಬ ಕನ್ನಡದ ಸ್ಟಾರ್ ನಟನ ಚಿತ್ರಕ್ಕೆ ಸುದೀಪ್ ಶುಭ ಹಾರೈಸಿದಾಗ, ಆ ನಟ ನಡೆದುಕೊಂಡ ರೀತಿಯ ಕುರಿತು ಅಭಿಮಾನಿಗಳು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.  ಇದನ್ನೂ ಓದಿ : ಮಾಜಿ ಮಂತ್ರಿ ಜನಾರ್ದನ ರೆಡ್ಡಿ ಪುತ್ರನ ಸಾಹಸವಿದು

    ಸುದೀಪ್ ಕೂಡ ಭಾರತೀಯ ಸಿನಿಮಾ ರಂಗದ ನಟ. ಅವರಿಗೂ ಅಸಂಖ್ಯಾತ ಅಭಿಮಾನಿಗಳು ಇದ್ದಾರೆ. ಅಲ್ಲದೇ, ಗೌರವ ಇಲ್ಲದೇ ಇರುವ ಕಡೆ ಸುದೀಪ್ ಇರುವುದಿಲ್ಲ. ಅದು ಅವರ ಗುಣ. ಪ್ರೀತಿಯಿಂದಲೇ ಎಲ್ಲರನ್ನೂ ಅವರು ಕಾಣುತ್ತಾರೆ. ಸುಮ್ಮನೆ ಕಲಾವಿದರ ಮಧ್ಯೆ ತಂದಿಡುವ ಕೆಲಸ ನಡೆಯುತ್ತಿದೆ ಎಂದು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ ಡಾ.ವಿಷ್ಣು ಸೇನಾಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್. ಅಲ್ಲದೇ ಅನೇಕರು ಈ ಕುರಿತು ಬೇಸರ ವ್ಯಕ್ತ ಪಡಿಸಿದ್ದಾರೆ. ಫ್ಯಾನ್ಸ್ ನಿಂದಾಗಿ ಕಲಾವಿದರಿಗೆ ಮುಜಗರ ಆಗಬಾರದು ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.